Tag: loksabha elections2019

  • ಮೈತ್ರಿ ಸರ್ಕಾರದ ವಿರುದ್ಧ ನಟಿ ಶೃತಿ ವಾಗ್ದಾಳಿ

    ಮೈತ್ರಿ ಸರ್ಕಾರದ ವಿರುದ್ಧ ನಟಿ ಶೃತಿ ವಾಗ್ದಾಳಿ

    ತುಮಕೂರು: ಮೈತ್ರಿ ಸರ್ಕಾರ ಹಾಗೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನಟಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೃತಿ ವಾಗ್ದಾಳಿ ನಡೆಸಿದ್ದಾರೆ.

    ನಗರದ ಖಾಸಗಿ ಹೋಟೆಲ್ ನಲ್ಲಿ ನಾನು ಚೌಕಿದಾರ್ ಅಭಿಯಾನಕ್ಕೆ ಚಾಲನೆ ಕೊಟ್ಟ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕುರ್ಚಿಗಾಗಿ ಒದ್ದಾಡುತ್ತಿದ್ದಾರೆ. ಅವರು ಮಗನ ಗೆಲುವಿಗಾಗಿ ಮಂಡ್ಯಕ್ಕೆ ಹೋಗುತ್ತಿದ್ದಾರೆ. ರಾಜ್ಯದಲ್ಲಿ ಅತಂತ್ರ ಸ್ಥಿತಿ ಇದೆ ಅಂದ್ರು.

    ತುಮಕೂರಲ್ಲಿ ಮುದ್ದಹನುಮೇಗೌಡ ನಾಮಪತ್ರ ಹಿಂಪಡೆದಿದ್ದಾರೆ. ಯಾವುದೇ ಕಾರಣಕ್ಕೆ ನಾಮಪತ್ರ ಹಿಂಪಡೆಯಲ್ಲ ಎಂದು ಕಣ್ಣೀರು ಹಾಕಿದ್ದರು. ಇಷ್ಟೆಲ್ಲಾ ಆದ ಮೇಲೂ ಇದೀಗ ಅವರು ನಾಮಪತ್ರ ಯಾಕೆ ವಾಪಸ್ ಪಡೆದ್ರು ಎಂದು ಪ್ರಶ್ನಿಸಿದ ಅವರು, ಈ ಹಿಂದೆ ಯಾರದ್ದೋ ದೊಡ್ಡ ಪ್ರಭಾವವಿದೆ ಎಂದು ವಾಗ್ದಾಳಿ ನಡೆಸಿದರು. ಮೈತ್ರಿ ಸರ್ಕಾರ ಬಂದಾಗಿನಿಂದಲೂ ನಾಯಕರು ಅಧಿಕಾರಕ್ಕಾಗಿ ಕಚ್ಚಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ತುಮಕೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸಿ ಎಂದು ಶೃತಿ ಮನವಿ ಮಾಡಿಕೊಂಡರು.

    ಮೋದಿಯಿಂದ ಹೆಮ್ಮೆ:
    ಇಲ್ಲಿ ಪ್ರತಿಯೊಬ್ಬರೂ ಕಾವಲುದಾರರು. ಮೋದಿಯವರು ನಿಜವಾದ ಚೌಕಿದಾರ. ದೇಶವನ್ನ ಚೌಕಿದಾರ ಕಾಯುತ್ತಿರುವಾಗ ದೇಶದ ಜನರು ಕೂಡಾ ಚೌಕಿದಾರ್ ಅನ್ನುತ್ತಿದ್ದಾರೆ. ನಾನು ಭಾರತೀಯಳು ಅನ್ನುವ ಹೆಮ್ಮೆ ಹಾಗೆ ನಾನು ಬಿಜೆಪಿ ಕಾರ್ಯಕರ್ತೆ ಅನ್ನೋದಕ್ಕೂ ಹೆಮ್ಮೆ ಇದೆ. ಆ ಹೆಮ್ಮೆ ಬಂದಿರೋದೇ ಮೋದಿಯವರಿಂದಾಗಿ ಎಂದು ಹೇಳಿದ್ರು.

    ಇಡೀ ವಿಶ್ವದಲ್ಲೇ ಮೋದಿ ಅವರಿಗೆ ಗೌರವ ಸಿಗುತ್ತಿದೆ. ಮಹಿಳಾ ಪರವಾದ ಹಲವು ಕಾರ್ಯಕ್ರಮಗಳನ್ನು ಮೋದಿ ನೀಡಿದ್ದಾರೆ. ನಿರ್ಮಲಾ ಸೀತಾರಾಮನ್‍ಗೆ ದೇಶದ ರಕ್ಷಣಾ ಖಾತೆ ಕೊಟ್ಟು ಮಹಿಳೆಯರ ಪ್ರಾಮುಖ್ಯತೆ ಹೆಚ್ಚಿಸಿದ್ದಾರೆ. ರಾಜ್ಯದಲ್ಲಿ ಬಂದಿರುವ ಅತಂತ್ರ ಸ್ಥಿತಿ ಕೇಂದ್ರದಲ್ಲಿ ಬರಬಾರದು. ಯಾಕಂದ್ರೆ ಇದೀಗ ದೋಸ್ತಿಗಳಲ್ಲಿ ಕುರ್ಚಿಗಾಗಿ ಕಾದಾಟ ನಡೆಯುವುದನ್ನು ನೋಡುತ್ತಿದ್ದೇವೆ. ಕಾಂಗ್ರೆಸ್ ನವರ ಬಳಿ ಕಪ್ಪು ಹಣ ಇರಬಹುದು. ಅದನ್ನೇ ಈಗ ತಿಂಗಳಿಗೆ ವರ್ಷಕ್ಕೆ 72 ಸಾವಿರ ಪ್ರಣಾಳಿಕೆ ಮಾಡಿದ್ದಾರೆ. ಅದೊಂದು ಸುಳ್ಳಿನ ಕಂತೆಯಾಗಿದೆ ಎಂದು ಟಾಂಗ್ ನೀಡಿದ್ರು.

  • ಬಳ್ಳಾರಿಯತ್ತ ತಿರುಗಿ ನೋಡದ ಟ್ರಬಲ್ ಶೂಟರ್- ಕಾಂಗ್ರೆಸ್ ಕಚ್ಚಾಟದಲ್ಲಿ ಏಕಾಂಗಿಯಾದ್ರಾ ಉಗ್ರಪ್ಪ?

    ಬಳ್ಳಾರಿಯತ್ತ ತಿರುಗಿ ನೋಡದ ಟ್ರಬಲ್ ಶೂಟರ್- ಕಾಂಗ್ರೆಸ್ ಕಚ್ಚಾಟದಲ್ಲಿ ಏಕಾಂಗಿಯಾದ್ರಾ ಉಗ್ರಪ್ಪ?

    ಬಳ್ಳಾರಿ: ಕಾಂಗ್ರೆಸ್‍ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಡಿ.ಕೆ.ಶಿವಕುಮಾರ ಎಲ್ಲಿದ್ದಾರೆ ಎಂಬ ಪ್ರಶ್ನೆ ಬಳ್ಳಾರಿ ಕಾಂಗ್ರೆಸ್ಸಿಗರಲ್ಲಿ ಮೂಡಿದೆ. ಚುನಾವಣಾ ದಿನಾಂಕ ಘೋಷಣೆಯಾದ ನಂತರವೂ ಉಸ್ತುವಾರಿ ಸಚಿವರಾಗಿರುವ ಡಿಕೆಶಿ ಬಳ್ಳಾರಿಯತ್ತ ಇನ್ನೂ ತಿರುಗಿ ನೋಡದಿರೋದು ಕೈ ಕಾರ್ಯಕರ್ತರನ್ನ ಕಂಗೆಡಿಸಿದೆ.

    ಇತ್ತೀಚೆಗೆ ನಡೆದ ಉಪಚುನಾವಣೆಯ ಸಂದರ್ಭದಲ್ಲಿ ಬಳ್ಳಾರಿ ಗೆಲುವಿಗಾಗಿ ಕ್ಷೇತ್ರದಲ್ಲೇ ಬೀಡು ಬಿಟ್ಟಿದ್ದ  ಡಿಕೆಶಿವಕುಮಾರ್ ಅಬ್ಬರದ ಪ್ರಚಾರ ನಡೆಸಿದ್ದರು. ಮಾತ್ರವಲ್ಲದೆ ಜಿಲ್ಲೆಯ ಶಾಸಕರೂ ಕೂಡಾ ಅಷ್ಟೇ ಬೆಂಬಲ ಕೊಟ್ಟು ಉಗ್ರಪ್ಪರನ್ನು ಗೆಲ್ಲಿಸಿದ್ದರು. ಆ ಮೂಲಕ ಕಾಂಗ್ರೆಸ್ ಪ್ರತಿಷ್ಠೆ ಉಳಿಸಿದ್ದರು. ಆದ್ರೆ ಈ ಬಾರಿ ಮಾತ್ರ ದೋಸ್ತಿಗಳ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಆಗ್ಲಿ, ಬೇರಾವುದೇ ಕಾಂಗ್ರೆಸ್ ನಾಯಕರಾಗಲಿ ಬಳ್ಳಾರಿಯತ್ತ ತಲೆ ಹಾಕಿಲ್ಲ ಎನ್ನಲಾಗಿದೆ.

    ಕಂಪ್ಲಿಯ ಶಾಸಕ ಗಣೇಶ ಜೈಲಿನಲ್ಲಿದ್ರೆ, ಅತೃಪ್ತರ ಗುಂಪಿನಲ್ಲಿರೋ ಶಾಸಕ ನಾಗೇಂದ್ರ ತಟಸ್ಥರಾಗಿ ಮನೆಯಲ್ಲಿದ್ದಾರೆ. ಅತಂತ್ರ ಸ್ಥಿತಿಯಲ್ಲಿ ಆನಂದ್ ಸಿಂಗ್ ಸಿಲುಕಿದ್ರೆ, ಕೊಪ್ಪಳದಲ್ಲಿ ಸಚಿವ ತುಕಾರಾಂ, ಗದಗದಲ್ಲಿ ಪರಮೇಶ್ವರ ನಾಯ್ಕ್ ಬ್ಯುಸಿಯಾಗಿದ್ದಾರೆ. ಇದ್ರಿಂದ ರಣರಂಗದಲ್ಲಿ ವಿಎಸ್ ಉಗ್ರಪ್ಪ ಫುಲ್ ಏಕಾಂಗಿಯಾಗ್ಬಿಟ್ಟಿದ್ದಾರೆ ಎಂದು ಸ್ಥಳೀಯ ನಿವಾಸಿ ಕುಂದಾಪುರ ನಾಗರಾಜ್ ತಿಳಿಸಿದ್ದಾರೆ.

    ಮತ್ತೊಂದೆಡೆ ಈ ಬಾರಿ ಬಿಜೆಪಿ ಹೊಸ ಅಭ್ಯರ್ಥಿಯನ್ನ ಕಣಕ್ಕೆ ಇಳಿಸಿ ಕಾಂಗ್ರೆಸ್‍ಗೆ ಟಕ್ಕರ್ ಕೊಡಲು ಸಜ್ಜಾಗಿದೆ. ಅಲ್ಲದೆ ಕ್ಷೇತ್ರಕ್ಕೆ ಕಾಂಗ್ರೆಸ್ ಕೊಡುಗೆ ಏನು ಇಲ್ಲ ಎಂದು ಮನೆಮನೆಗೆ ಹೋಗಿ ಬಿರುಸಿನ ಪ್ರಚಾರ ನಡೆಸ್ತಿದ್ದಾರೆಎಂದು ಸ್ಥಳೀಯ ಮುದ್ದನಗೌಡ ಹೇಳುತ್ತಾರೆ.

    ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬಳ್ಳಾರಿಯಲ್ಲಿ ಪಕ್ಷ ಈವರೆಗೆ 14 ಸಲ ಗೆದ್ದಿದೆ. ಈ ಬಾರಿ ಕಾಂಗ್ರೆಸ್ ಆಂತರಿಕ ಕಚ್ಚಾಟಕ್ಕೆ ಬಳ್ಳಾರಿ ರಣಕಣದಲ್ಲಿ ಉಗ್ರಪ್ಪ ಸೋತು ಹೋಗ್ತಾರಾ ಅನ್ನೋ ಅನುಮಾನ ಶುರುವಾಗಿದೆ.