Tag: lose

  • ನಿಖಿಲ್ ಸೋತಿದ್ದಕ್ಕೆ ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ?

    ನಿಖಿಲ್ ಸೋತಿದ್ದಕ್ಕೆ ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ?

    ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಅಭಿಮಾನಿಯೊಬ್ಬ ತನ್ನ ಬೆರಳನ್ನು ಕತ್ತರಿಸಿಕೊಂಡಿದ್ದಾನೆ.

    ಜಿಲ್ಲೆಯ ಮದ್ದೂರು ತಾಲೂಕಿನ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ನಿಖಿಲ್ ಸೋತಿದ್ದಕ್ಕೆ ಅಭಿಮಾನಿ ಮತದಾನ ಮಾಡಿದ ನಂತರ ಕೈಗೆ ಶಾಯಿ ಹಾಕಿಸಿಕೊಂಡಿದ್ದ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ ಎಂದು ಹೇಳಲಾಗುತ್ತದೆ.

    ಸಾಮಾಜಿಕ ಜಾಲತಾಣದಲ್ಲಿ ಬೆರಳು ಕತ್ತರಿಸಿಕೊಂಡಿದ್ದ ಫೋಟೋ ಹರಿದಾಡುತ್ತಿದೆ. ನಿಖಿಲ್ ಸೋತ ಮೇಲೆ ಅವರಿಗೆ ಮತ ಹಾಕಿ ಶಾಹಿ ಹಾಕಿಸಿಕೊಂಡ ಬೆರಳು ಇರಬಾರದೆಂದು ಕತ್ತರಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

    ಚುನಾವಣೆಯಲ್ಲಿ ನಿಖಿಲ್ ಅವರಿಗೆ 5,71,777 ಮತ ಲಭಿಸಿದ್ದರೆ, ಸುಮಲತಾ ಅವರಿಗೆ 6,98,213 ಮತ ಲಭಿಸಿದೆ. ಆ ಮೂಲಕ ಸುಮಲತಾ ಅವರು ಬರೋಬ್ಬರಿ 1,26,436 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ.

  • ನೆಲಮಂಗಲದಲ್ಲಿ ಬೆಂಕಿ ಅವಘಡ – ಧಗಧಗ ಹೊತ್ತಿ ಉರಿದ ಗೋದಾಮು

    ನೆಲಮಂಗಲದಲ್ಲಿ ಬೆಂಕಿ ಅವಘಡ – ಧಗಧಗ ಹೊತ್ತಿ ಉರಿದ ಗೋದಾಮು

    – ಯುನೈಟೆಡ್ ಪೇಂಟ್ಸ್ ಗೋದಾಮಿನಲ್ಲಿ ಅಗ್ನಿ ಅನಾಹುತ
    – 20 ಅಗ್ನಿಶಾಮಕ ತಂಡದಿಂದ ಕಾರ್ಯಾಚರಣೆ

    ಬೆಂಗಳೂರು: ಪೇಂಟ್ ಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನೆಲಮಂಗಲ ಸಮೀಪದ ಕುದರಗೆರೆಯಲ್ಲಿ ನಡೆದಿದೆ.

    ಯುನೈಟೆಡ್ ಪೇಂಟ್ಸ್ ಗೆ ಸೇರಿದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟದ ರೀತಿಯಲ್ಲಿ ಶಬ್ದ ಕೇಳಿಬಂದ ಬಳಿಕ ಗೋದಾಮಿಗೆ ಬೆಂಕಿ ಹೊತ್ತಿಕೊಂಡಿದೆ.

    ಬೆಂಕಿ ಅವಘಡದಿಂದ ಬಾರಿ ಅನಾಹುತ ಸಂಭವಿಸುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಗೋದಾಮಿನ ಸುತ್ತಮುತ್ತಲಿನ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಪೊಲೀಸರು ಖಾಲಿ ಮಾಡಿಸುತ್ತಿದ್ದಾರೆ. ಗಾಳಿಯಿಂದಾಗಿ ಬೆಂಕಿ ರಭಸ ಮತ್ತಷ್ಟು ಹೆಚ್ಚಾಗುತ್ತಿದ್ದು, ಆಕಾಶದೆತ್ತರಕ್ಕೆ ಅಗ್ನಿಯ ಕೆನ್ನಾಲಿಗೆ ಆವರಿಸಿದೆ. ಅಲ್ಲದೆ ಎಲ್ಲೆಲ್ಲೂ ದಟ್ಟ ಹೊಗೆ ತುಂಬಿಕೊಂಡಿದೆ.

    ಗೋದಾಮಿನಲ್ಲಿದ್ದ ಕೋಟ್ಯಂತರ ರೂ. ಬೆಲೆಬಾಳುವ ವಸ್ತುಗಳು ಸುಟ್ಟು ಕರಕಲಾಗಿದೆ. ಗೋದಾಮಿನ ಸುತ್ತಮುತ್ತಲು ಬೆಂಕಿ ಹಾಗೂ ಹೊಗೆಯ ರಭಸಕ್ಕೆ ಪ್ರಾಣಿ ಪಕ್ಷಿಗಳ ತತ್ತರಿಸಿ ಹೋಗಿವೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಈ ಬೆಂಕಿಯನ್ನು ಆರಿಸಲು ಸುಮಾರು 20 ಅಗ್ನಿಶಾಮಕ ತಂಡ ಆಗಮಿಸಿದ್ದು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

    ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಹಿಂದೆ ಈ ಅಗ್ನಿ ದುರಂತ ಸಂಭವಿಸಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಪ್ತಿಗೆ ಈ ಪ್ರದೇಶ ಸೇರುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಕ್ಕರೆ ಕಾರ್ಖಾನೆಯ ಫ್ರೀಜರ್ ಬಾಯ್ಲರ್ ಬ್ಲಾಸ್ಟ್- ಗದ್ದೆಗೆ ಕೆಮಿಕಲ್ ನೀರು ನುಗ್ಗಿ ಲಕ್ಷಾಂತರ ರೂ. ನಷ್ಟ

    ಸಕ್ಕರೆ ಕಾರ್ಖಾನೆಯ ಫ್ರೀಜರ್ ಬಾಯ್ಲರ್ ಬ್ಲಾಸ್ಟ್- ಗದ್ದೆಗೆ ಕೆಮಿಕಲ್ ನೀರು ನುಗ್ಗಿ ಲಕ್ಷಾಂತರ ರೂ. ನಷ್ಟ

    ಮಂಡ್ಯ: ಸಕ್ಕರೆ ಕಾರ್ಖಾನೆಯಲ್ಲಿ ಫ್ರೀಜರ್ ಬಾಯ್ಲರ್ ಬ್ಲಾಸ್ಟ್ ಆದ ಪರಿಣಾಮ ಗದ್ದೆಗೆ ರಾಸಾಯನಿಕ ನೀರು ನುಗ್ಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

    ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿರುವ ಎನ್‍ಎಸ್‍ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಸುಮಾರು ಆರು ಲಕ್ಷ ಲೀಟರ್ ಸಾಮಥ್ರ್ಯದ ಬಾಯ್ಲರ್ ಬ್ಲಾಸ್ಟ್ ಆಗಿದೆ. ಸ್ಫೋಟದ ರಭಸಕ್ಕೆ ಪಕ್ಕದಲ್ಲಿ ಇದ್ದು ಕಾಂಪೌಂಡ್ ಗೋಡೆ ಛಿದ್ರವಾಗಿದೆ. ಬಾಯ್ಲರ್ ಅಕ್ಕಪಕ್ಕ ಸುಮಾರು 20 ಮೀಟರ್ ವ್ಯಾಪ್ತಿಯಲ್ಲಿ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ವೇಳೆ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲದ ಪರಿಣಾಮ ಓರ್ವನಿಗಷ್ಟೇ ಗಾಯವಾಗಿದ್ದು ಭಾರೀ ದುರಂತ ತಪ್ಪಿದೆ.

    ಬಾಯ್ಲರ್ ಸ್ಪೋಟಗೊಂಡ ಪರಿಣಾಮ ಅದರೊಳಗಿದ್ದ ಡಿಸ್ಟಿಲರಿ ವಾಟರ್ ಕಾರ್ಖಾನೆ ಸುತ್ತಮುತ್ತಲ ಗದ್ದೆಗಳಿಗೆ ನುಗ್ಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ಬೆಳೆ ನಾಶವಾಗಿದೆ ಎಂದು ರೈತ ಉಮೇಶ್ ಪ್ರತಿಕ್ರಿಯಿಸಿದ್ದಾರೆ.

    ಗದ್ದೆಗೆ ಮಾತ್ರ ಅಲ್ಲದೇ ಕೆಮಿಕಲ್ ನೀರು ಶಿಂಷಾ ನದಿಗೆ ಹರಿದು ಹೋಗುತ್ತಿದ್ದು ಜಲಚರಗಳಿಗೂ ಕಂಟಕವಾಗುವ ಸಾಧ್ಯತೆಯಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv