Tag: Love 360

  • ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗಲಿದೆ ಶಶಾಂಕ್ ನಿರ್ದೇಶನದ ‘ಲವ್ 360’ ಸಿನಿಮಾ

    ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗಲಿದೆ ಶಶಾಂಕ್ ನಿರ್ದೇಶನದ ‘ಲವ್ 360’ ಸಿನಿಮಾ

    ನ್ನಡ ಸಿನಿಮಾ ರಂಗದ ಪ್ರತಿಭಾವಂತ ನಿರ್ದೇಶಕ ಶಶಾಂಕ್ ಮತ್ತೆ ಹೊಸಬರನ್ನು ಹಾಕಿಕೊಂಡು ಮಾಡಿರುವ ‘ಲವ್ 360’ ಸಿನಿಮಾಗೆ ಸಖತ್ ಡಿಮಾಂಡ್ ಕ್ರಿಯೇಟ್ ಆಗಿದೆ. ರಿಮೇಕ್ ರೈಟ್ಸ್ ಗಾಗಿ ತಮಿಳು ಮತ್ತು ತೆಲುಗು ಸಿನಿಮಾ ರಂಗದಿಂದ ಆಫರ್ ಬಂದಿದ್ದು, ದೊಡ್ಡ ನಿರ್ಮಾಣ ಸಂಸ್ಥೆಯೇ ಹಕ್ಕುಗಳನ್ನು ಕೇಳಿದೆಯಂತೆ. ಈ ಕುರಿತು ಸ್ವತಃ ಶಶಾಂಕ್ ಅವರೇ ಬರೆದುಕೊಂಡಿದ್ದಾರೆ.

    ಲವ್ 360 ಡಿಗ್ರಿ ಸಿನಿಮಾ ರಿಲೀಸ್ ಆದಾಗ ಮೊದಲೆರಡು ದಿನ ಹೇಳಿಕೊಳ್ಳುವಂತಹ ರೆಸ್ಪಾನ್ಸ್ ಸಿಗಲಿಲ್ಲ. ಆದರೆ, ನೋಡಿದವರೆಲ್ಲ ಶಶಾಂಕ್ ಅದ್ಭುತವಾಗಿ ಸಿನಿಮಾ ಮಾಡಿದ್ದಾರೆ ಎಂದು ಪ್ರತಿಕ್ರಿಯಿಸಿದರು. ಇಂತಹ ಸಿನಿಮಾಗಳು ಗೆಲ್ಲಬೇಕು ಎಂದು ಹಲವು ಕಲಾವಿದರು ಮತ್ತು ನಿರ್ದೇಶಕರು ಮಾತನಾಡಿದರು. ಆನಂತರ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿತು. ಇದೀಗ ರಿಮೇಕ್ ರೈಟ್ಸ್ ಗೂ ಕೂಡ ಭಾರೀ ಬೇಡಿಕೆ ಕ್ರಿಯೆಟ್ ಆಗಿದೆ. ಇದನ್ನೂ ಓದಿ:ತಮ್ಮ ಸಂಭಾವನೆಯಲ್ಲಿ ʼಜವಾನ್‌ʼ ಚಿತ್ರಕ್ಕಾಗಿ 5 ಕೋಟಿ ಹೆಚ್ಚಿಸಿಕೊಂಡ ವಿಜಯ್ ಸೇತುಪತಿ!

    ಈ ಸಿನಿಮಾದ ಮೂಲಕ ಪ್ರವೀಣ್ ಎನ್ನುವ ಹೊಸ ಹುಡುಗ ಸಿನಿಮಾ ರಂಗಕ್ಕೆ ಪ್ರವೇಶವಾಗಿದ್ದು, ರಚನಾ ನಾಯಕಿಯಾಗಿ ನಟಿಸಿದ್ದಾರೆ. ಒಂದೊಳ್ಳೆ ಪ್ರೇಮಕಥೆಗೆ ಸಸ್ಪೆನ್ಸ್ ಅಂಶಗಳನ್ನು ಬಳಸಿಕೊಂಡು ಮಾಡಿರುವ ಲವ್ 360 ಸಿನಿಮಾ ಮುಂದಿನ ದಿನಗಳಲ್ಲಿ ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಮೇಕ್ ಆಗಲಿದ್ದು, ಯಾರೆಲ್ಲ ಈ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

    Live Tv
    [brid partner=56869869 player=32851 video=960834 autoplay=true]

  • ಶಶಾಂಕ್ ನಿರ್ದೇಶನದ ‘ಲವ್ 360’ ಚಿತ್ರದ ಮತ್ತೊಂದು ಹಾಡು ರಿಲೀಸ್

    ಶಶಾಂಕ್ ನಿರ್ದೇಶನದ ‘ಲವ್ 360’ ಚಿತ್ರದ ಮತ್ತೊಂದು ಹಾಡು ರಿಲೀಸ್

    ನಿರ್ದೇಶಕ ಶಶಾಂಕ್ ನಿರ್ದೇನದಲ್ಲಿ ಮೂಡಿಬಂದಿದ್ದ “ಮೊಗ್ಗಿನ ಮನಸ್ಸು” ಚಿತ್ರ‌ ಬಿಡುಗಡೆಯಾಗಿ ಹದಿನಾಲ್ಕು ವರ್ಷಗಳಾಗಿದೆ. ಈ ಸುಂದರ ನೆನಪಿನೊಂದಿಗೆ ಪ್ರಸ್ತುತ ಅವರು ನಿರ್ದೇಶಿಸಿರುವ  “ಲವ್ 360” ಚಿತ್ರದ “ಭೋರ್ಗರೆದು” ಎಂಬ ಹಾಡು ಬಿಡುಗಡೆಯಾಗಿದೆ. ಶಶಾಂಕ್ ಅವರೆ ಬರೆದಿರುವ ಈ ಹಾಡನ್ನು ಕೀರ್ತನ್ ಹೊಳ್ಳ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

    ನಾನು “ಲವ್ 360” ಸಿನಿಮಾದ ಈ  ಹಾಡನ್ನು ಇಂದು ಬಿಡುಗಡೆ ಮಾಡಲು ಪ್ರಮುಖ ಕಾರಣವಿದೆ. ಅದೇನೆಂದರೆ, ನನ್ನ ನಿರ್ದೇಶನದ “ಮೊಗ್ಗಿನ ಮನಸ್ಸು” ಚಿತ್ರ ತೆರೆಕಂಡು ಇಂದಿಗೆ(ಜಲೈ 18)ಹದಿನಾಲ್ಕು ವರ್ಷಗಳಾಗಿದೆ. ಹಾಗಾಗಿ ಇಂದು ಆ ಚಿತ್ರದ ನೆನಪುಗಳೊಂದಿಗೆ “ಲವ್ 360” ಚಿತ್ರದ ಮೂರನೇ ಹಾಡನ್ನು ಬಿಡುಗಡೆ ಮಾಡಿದ್ದೇವೆ. “ಮೊಗ್ಗಿನ ಮನಸ್ಸು” ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿದ್ದ ಗಂಗಾಧರ್ ಅವರಿಂದ  ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಆ ಚಿತ್ರದ ನಿರ್ಮಾಪಕ ಇ.ಕೃಷ್ಣಪ್ಪ ಅವರನ್ನು ಆಹ್ವಾನಿಸಿದ್ದೆ. ಕಾರ್ಯದೊತ್ತಡದಿಂದ ಅವರಿಗೆ ಬರಲಾಗಲಿಲ್ಲ . ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್, ಶುಭಾ ಪುಂಜಾ ಮುಂತಾದವರು ಅಭಿನಯಿಸಿದ್ದ ಸಿನಿಮಾವದು. ಚಿತ್ರ ಹಾಗೂ ಹಾಡುಗಳು ಈಗಲೂ ಜನಪ್ರಿಯ. ಮುಂದೊಂದು ದಿನ “ಮೊಗ್ಗಿನ ಮನಸ್ಸು ಭಾಗ 2”  ಮಾಡುವ ಆಸೆಯಿದೆ. ಆ ಚಿತ್ರವನ್ನೂ ಹೊಸ ಕಲಾವಿದರೊಂದಿಗೆ ಮಾಡುತ್ತೇನೆ. ಇನ್ನು ಇಂದು ಬಿಡುಗಡೆಯಾಗಿರುವ “ಲವ್ 360”   ಚಿತ್ರದ “ಭೋರ್ಗರೆದು” ಹಾಡನ್ನು ನಾನೇ ಬರೆದಿದ್ದೇನೆ. ಕೀರ್ತನ್ ಹೊಳ್ಳ ಹಾಡಿದ್ದಾರೆ. ಇನ್ನೊಂದು ಹಾಡಿದೆ. ಅದನ್ನು ಸದ್ಯದಲ್ಲೇ ಬಿಡುಗಡೆ ಮಾಡುತ್ತೇವೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇವೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಜನಪ್ರಿಯವಾಗಿದೆ. ಅದರಲ್ಲೂ ಸಿದ್ ಶ್ರೀರಾಮ್ ಹಾಡಿರುವ “ಜಗವೇ ನೀನು ಗೆಳತಿಯೆ” ಹಾಡಂತೂ ನಾವು ಅಂದುಕೊಂಡದಕ್ಕಿಂತ ದೊಡ್ಡ ಯಶಸ್ಸು ಕಂಡಿದೆ. ರೀಲ್ಸ್ ನಲ್ಲೂ ಈ ಹಾಡಿಗೆ ಹೆಜ್ಜೆ ಹಾಕುತ್ತಿರುವವರು ಹೆಚ್ಚಾಗಿದ್ದಾರೆ ಎಂದು ನಿರ್ದೇಶಕ ಶಶಾಂಕ್ ಮಾಹಿತಿ ನೀಡಿದರು.

    ನಮ್ಮ ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದೇನೆ.  “ಜಗವೇ ನೀನು” ಹಾಡಿನಿಂದ ಈಗಾಗಲೇ ಜನ ನನ್ನನ್ನು ಹೋದ ಕಡೆ ಎಲ್ಲಾ ಗುರುತಿಸುತ್ತಿದ್ದಾರೆ. ಚಿತ್ರದ ಗೆಲುವಿನ ಖುಷಿಯನ್ನು ಈ ಹಾಡು ನನಗೆ ಈಗಾಗಲೇ ನೀಡಿದೆ. ಇಂತಹ ಅದ್ಭುತ ಹಾಡು ಕೊಟ್ಟಿರುವ ನಿರ್ದೇಶಕರಿಗೆ ಹಾಗೂ ಮೆಚ್ಚಿಕೊಂಡಿರುವ ಕಲಾರಸಿಕರಿಗೆ ಧನ್ಯವಾದ. ಇಂದು ಬಿಡುಗಡೆಯಾಗಿರುವ ಹಾಡು ಕೂಡ ಜನರ ಮನಸ್ಸಿಗೆ ಹತ್ತಿರವಾಗಲಿದೆ ಎಂದರು ನಾಯಕ ಪ್ರವೀಣ್. ಇದನ್ನೂ ಓದಿ:ಕೆ.ಎಲ್ ರಾಹುಲ್ -ಅಥಿಯಾ ಶೆಟ್ಟಿ ಮದುವೆ ಡೇಟ್ ಫೈನಲ್

    ಬಿಡುಗಡೆಯಾಗಿರುವ ಎರಡು ಹಾಡುಗಳು ಗೆದ್ದಿದೆ. ಹಿರಿಯರು, ಕಿರಿಯರು ಎಲ್ಲಾ ವಯಸ್ಸಿನವರಿಗೂ “ಜಗವೇ ನೀನು ಗೆಳತಿಯೆ” ಹಾಡು ಇಷ್ಟವಾಗಿದೆ. ಚಿತ್ರ ಕೂಡ ಎಲ್ಲರ ಮನ ಗೆಲ್ಲುತ್ತದೆ ಎಂದರು ನಾಯಕಿ ರಚನಾ ಇಂದರ್.

    Live Tv
    [brid partner=56869869 player=32851 video=960834 autoplay=true]

  • ಶಶಾಂಕ್ ನಿರ್ದೇಶನದ ಚಿತ್ರಕ್ಕೆ ಡಾಕ್ಟರ್ ಹೀರೋ

    ಶಶಾಂಕ್ ನಿರ್ದೇಶನದ ಚಿತ್ರಕ್ಕೆ ಡಾಕ್ಟರ್ ಹೀರೋ

    “ಮೊಗ್ಗಿನ ಮನಸ್ಸು”, ” ಕೃಷ್ಣನ್ ಲವ್ ಸ್ಟೋರಿ ” ಯಂತಹ ಅದ್ಭುತ ಲವ್ ಸ್ಟೋರಿ ಚಿತ್ರಗಳ ನಿರ್ದೇಶಕ ಶಶಾಂಕ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ “ಲವ್ 360”. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸಾಕಷ್ಟು ಮೆಚ್ಚುಗೆ ದೊರಕಿದೆ. ಈ ಸಂತಸ ಹಂಚಿಕೊಳ್ಳಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಇದನ್ನೂ ಓದಿ : Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು

    ಬಹಳ ದಿನಗಳ ನಂತರ ನಿಮ್ಮನೆಲ್ಲಾ ನೋಡುತ್ತಿರುವುದು ಖುಷಿಯಾಗಿದೆ. ಮೂರುವರ್ಷಗಳ ನಂತರ “ತಾಯಿಗೆ ತಕ್ಕ ಮಗ” ಚಿತ್ರದ ನಂತರ ನಾನು ನಿರ್ದೇಶಿಸಿರುವ ಚಿತ್ರವಿದು. ಲಾಕ್ ಡೌನ್ ಸಮಯದಲ್ಲಿ ಸಿದ್ದವಾದ ಕಥೆಯಿದು. ನಾನು ಉಪೇಂದ್ರ ಅವರ ಚಿತ್ರ ನಿರ್ದೇಶಿಸಬೇಕಿತ್ತು.‌ ಅದು ದೊಡ್ಡಮಟ್ಟದ ಚಿತ್ರ. ಚಿತ್ರೀಕರಣಕ್ಕೆ ಕೊರೋನ ನಿಯಮಾವಳಿಗಳು ಸಹಕಾರಿಯಾಗುವಂತೆ ಕಾಣಲಿಲ್ಲ. ಹಾಗಾಗಿ ಆ ಚಿತ್ರ ಮುಂದೂಡಿ, ಈ ಚಿತ್ರ ಆರಂಭ ಮಾಡಿದೆ. ಅದರಲ್ಲೂ ಹೊಸಬರೊಂದಿಗೆ ನಾನು ಕೆಲಸ ಮಾಡಿ ಸುಮಾರು ವರ್ಷಗಳೇ ಆಗಿತ್ತು. ಈ ಚಿತ್ರದ ಮೂಲಕ ಪ್ರವೀಣ್ ಎಂಬ ನೂತನ ಪ್ರತಿಭೆಯನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದೇನೆ. ಪ್ರವೀಣ್ ಸೇರಿದಂತೆ ಅವರ ಕುಟುಂಬದರೆಲ್ಲಾ ವೈದ್ಯರು. ಹೊಸಪೇಟೆ ಬಳಿಯ ಮಾರಮ್ಮನಹಳ್ಳಿಯಲ್ಲಿ ಇವರ ಆಸ್ಪತ್ರೆ ಇದೆ. ಸಾವಿರಾರು ಜನಕ್ಕೆ ಉಚಿತ ಚಿಕಿತ್ಸೆ ನೀಡಿ‌ ಪ್ರವೀಣ್ ತಂದೆ ಆ ಊರಿನ ಸುತ್ತ ಹೆಸರುವಾಸಿಯಾಗಿದ್ದರು. ಎಂ.ಬಿ.ಬಿ.ಎಸ್ ಓದಿರುವ ಪ್ರವೀಣ್  ಗೆ ನಟನೆಯಲ್ಲಿ ಆಸಕ್ತಿ. ಈ ಕುರಿತು ಅವರ ತಾಯಿ ನನ್ನ ಬಳಿ ಹೇಳಿದರು. ನಿರ್ಮಾಣವನ್ನೂ ಮಾಡುವುದಾಗಿ ಹೇಳಿದ್ದರು. ಆದರೆ ಅವರ ಬಳಿ ಈ ಚಿತ್ರಕ್ಕೆ ಬೇಕಾದಷ್ಟು ಹಣವಿಲ್ಲದ ಕಾರಣ,  ನಮ್ಮ ಶಶಾಂಕ್ ಸಿನಿಮಾಸ್ ಸಂಸ್ಥೆ

    ಸಹ ನಿರ್ಮಾಣಕ್ಕೆ ಕೈ ಜೋಡಿಸಿತ್ತು. ಪ್ರವೀಣ್ ಗೆ ನಟನೆಗೆ ಬೇಕಾದ ಎಲ್ಲಾ ತಯಾರಿ ನೀಡಿ, ಚಿತ್ರ ಆರಂಭಿಸಲಾಯಿತು. ರಚನಾ ಇಂದರ್ ಈ ಚಿತ್ರದ ನಾಯಕಿ. ಗೋಪಾಲ್ ದೇಶಪಾಂಡೆ, ಡ್ಯಾನಿ ಕುಟ್ಟಪ್ಪ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಭಿಷೇಕ್ ಕಲ್ಲತ್ತಿ ಛಾಯಾಗ್ರಹಣ ಹಾಗೂ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಸಿದ್ ಶ್ರೀರಾಮ್ ಹಾಗೂ ಸಂಚಿತ್ ಹೆಗಡೆ ಹಾಡಿರುವ ಹಾಡುಗಳು ಕೇಳುಗರ ಮನ ಗೆದ್ದಿದೆ‌. ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದ್ದು, ಸೆನ್ಸಾರ್ ಮಂಡಳಿ ವೀಕ್ಷಿಸಿದ ನಂತರ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ನಿರ್ದೇಶಕ ಶಶಾಂಕ್ ತಿಳಿಸಿದರು. ಇದನ್ನೂ ಓದಿ : ಪತಿ ಉಪ್ಪಿಗಿಂತಲೂ ಪತ್ನಿ ಪ್ರಿಯಾಂಕಾ ಉಪೇಂದ್ರ ಫಾಸ್ಟ್ : ಡಿಟೆಕ್ಟೀವ್ ತೀಕ್ಷ್ಣ @ 50

    ನಾನು ಎಂ.ಬಿ.ಬಿ.ಎಸ್ ವಿದ್ಯಾರ್ಥಿಯಾಗಿದಾಗಿನಿಂದಲೂ ನಟನೆಯಲ್ಲಿ ಆಸಕ್ತಿ. ತಿಂಗಳಲ್ಲಿ ಮೂರು ದಿನ ಆದರ್ಶ ಫಿಲಂ ಇನ್ಸ್ಟಿಟ್ಯೂಟ್ ಗೆ ಬಂದು ಅಭಿನಯ ಕಲಿಯುತ್ತಿದೆ. ಅಪ್ಪನಿಗೆ ವಿಷಯ ತಿಳಿದು ಬಯ್ಯುತ್ತಿದ್ದರು. ಈಗ ಅಪ್ಪ ಇಲ್ಲ. ಅಮ್ಮನ ಮುಂದೆ ನನ್ನ ಆಸೆ ಹೇಳಿಕೊಂಡೆ. ಅಮ್ಮ ನನ್ನ‌ ಆಸೆಗೆ ಆಸರೆಯಾದರು. ಆನಂತರ ಶಶಾಂಕ್ ಸರ್ ಪರಿಚಯವಾಯಿತು. ಶಶಾಂಕ್ ಅವರು ಸಾಕಷ್ಟು ವರ್ಕ್ ಶಾಪ್ ನಡೆಸಿ ನನಗೆ ಅಭಿನಯ ಕಲಿಸಿದರು. ಸಾಕಷ್ಟು ತಯಾರಿ ಮಾಡಿಕೊಂಡು ಚಿತ್ರರಂಗಕ್ಕೆ ಬಂದಿದ್ದೀನಿ. ಈ ಚಿತ್ರದಲ್ಲಿ ಬೋಟ್ ಮ್ಯಕಾನಿಕ್ ಪಾತ್ರ ಮಾಡಿದ್ದೀನಿ. ಡಾಕ್ಟರ್ ಆಗಬೇಕಿತ್ತು. ಈಗ ಆಕ್ಟರ್ ಆಗಿದ್ದೀನಿ ಅಂದರು ಪ್ರವೀಣ್. ಇದನ್ನೂ ಓದಿ : ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ

    ನಾನು “ಲವ್ ಮಾಕ್ಟೇಲ್” ಚಿತ್ರದಲ್ಲಿ ಅಭಿನಯಿಸಿದ್ದೆ. ಆದರೆ ಪೂರ್ಣಪ್ರಮಾಣದ ನಾಯಕಿಯಾಗಿ ಅಭಿನಯಿಸಿರುವ ಮೊದಲ ಚಿತ್ರವಿದು. ಈ ಚಿತ್ರದ ಆಡಿಷನ್ ಇದಾಗ ಅಮ್ಮ ಜಡೆ ಹಾಕಿ, ಜುಮಕಿ ಹಾಕಿಸಿಕೊಂಡು ಕರೆದುಕೊಂಡು ಹೋಗಿದ್ದರು. ನಾನು ಬೇಡ ಅಂದೆ. ಅಮ್ಮ ಇರಲಿ ಅಂದರು. ಶಶಾಂಕ್ ಅವರಿಗೆ ನಾನು ಹೋಗಿದ್ದ ರೀತಿ ಇಷ್ಟವಾಯಿತಂತೆ. ಆನಂತರ ನಾನು ಸೆಲೆಕ್ಟ್ ಆದೆ. ನಂತರ ನಿರ್ದೇಶಕರು ವರ್ಕ್ ಶಾಪ್ ಮೂಲಕ ಅಭಿನಯ ಹೇಳಿಕೊಟ್ಟರು. ಪಾತ್ರ ತುಂಬಾ ಚೆನ್ನಾಗಿದೆ ಅಂದರು ರಚನಾ ಇಂದರ್.