Tag: Love Jihad Case

  • ಪ್ರೀತಿ ನಿರಾಕರಿಸಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಯುವತಿಗೆ ಟಾರ್ಚರ್, ಕೊಲೆ ಯತ್ನ

    ಪ್ರೀತಿ ನಿರಾಕರಿಸಿದ್ದಕ್ಕೆ ಅನ್ಯಕೋಮಿನ ಯುವಕನಿಂದ ಯುವತಿಗೆ ಟಾರ್ಚರ್, ಕೊಲೆ ಯತ್ನ

    – ನೇಹಾ ಹಿರೇಮಠ ಪ್ರಕರಣಕ್ಕೆ ವರ್ಷ ತುಂಬುತ್ತಲೇ ಅದೇ ರೀತಿಯ ಮತ್ತೊಂದು ಘಟನೆ

    ಹುಬ್ಬಳ್ಳಿ: ನೇಹಾ ಹಿರೇಮಠ (Neha Hiremath) ಪ್ರಕರಣಕ್ಕೆ ವರ್ಷ ತುಂಬುತ್ತಲೇ ಅದೇ ರೀತಿಯ ಘಟನೆಯೊಂದು ಹುಬ್ಬಳ್ಳಿಯ (Hubballi) ವಿದ್ಯಾನಗರದಲ್ಲಿ (Vidya Nagar) ನಡೆದಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ ಅನ್ಯಧರ್ಮೀಯ ಯುವಕನೊಬ್ಬ ಯುವತಿಗೆ ಟಾರ್ಚರ್ ನೀಡಿ, ಕೊಲೆಗೆ ಯತ್ನಿಸಿದ್ದಾನೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

    ಸಂತ್ರಸ್ತೆ ಹಾಗೂ ಸಿರಾಜ್ ಒಂದೇ ಪಟ್ಟಣದ ನಿವಾಸಿಗಳು. ಸದ್ಯ ಸಂತ್ರಸ್ತೆ ಪ್ಯಾರಾ ಮೆಡಿಕಲ್ ಕೋರ್ಸ್ನಲ್ಲಿ ಓದುತ್ತಿದ್ದಾಳೆ. ಮೊದಲಿನಿಂದಲೂ ಸಂತ್ರಸ್ತೆಗೆ ಸಿರಾಜ್‌ನ ಪರಿಚಯವಿತ್ತು. ಪ್ರೀತಿಸುವಂತೆ ಸಂತ್ರಸ್ತೆಗೆ ಒತ್ತಾಯ ಮಾಡಿದ್ದು, ಬಳಿಕ ಟಾರ್ಚರ್ ಕೂಡ ನೀಡಿದ್ದ. ಅಲ್ಲದೇ ಸಂತ್ರಸ್ತೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.ಇದನ್ನೂ ಓದಿ:ಪ್ರತಿದಿನ ಕಿರುಕುಳ ಕೊಡ್ತಿದ್ಲು, ನಾನೇ ದೌರ್ಜನ್ಯಕ್ಕೆ ಒಳಗಾಗಿದ್ದೇನೆ – ಪತ್ನಿಯ ಕೊಲೆ ರಹಸ್ಯ ಬಿಚ್ಚಿಟ್ಟ ಟೆಕ್ಕಿ ಪತಿ!

    ರಂಜಾನ್ ಹಬ್ಬದಂದು ಸಿರಾಜ್ ಹುಬ್ಬಳ್ಳಿಯಲ್ಲಿ ಸಂತ್ರಸ್ತೆ ಓದುತ್ತಿದ್ದ ಕಾಲೇಜಿಗೆ ತೆರಳಿ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಇದೆಲ್ಲದರಿಂದ ತ್ರೀವವಾಗಿ ಮನನೊಂದ ಸಂತ್ರಸ್ತೆ ಕಾಲೇಜಿನ ಹಾಸ್ಟೆಲ್‌ನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಕೆಎಂಸಿ ಆಸ್ಪತ್ರೆಯಲ್ಲಿ ಸಂತ್ರಸ್ತೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಗಳ ಈ ಪರಿಸ್ಥಿತಿಯನ್ನು ನೆನೆದು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದು, ಸಿರಾಜ್ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇನ್ನೂ ಇದು ಅನ್ಯಧರ್ಮೀಯ ಯುವಕನಿಂದ ಲವ್ ಜಿಹಾದ್, ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ.

    ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಕಿಮ್ಸ್ ಆಸ್ಪತ್ರೆಗೆ ಭೇಟಿ ಸಂತ್ರಸ್ತೆಯ ಆರೋಗ್ಯ ವಿಚಾರಿಸಿ, ಪ್ರಕರಣದ ಕುರಿತು ಮಾಹಿತಿ ಪಡೆದಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾತ್ರಿಯೇ ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ (Vidya Nagar Police Station) ಪ್ರಕರಣ ದಾಖಲಾಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು, ನೇಹಾ ಹಿರೇಮಠ ಪ್ರಕರಣದ ನಂತರ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ, ಪಾಲಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಹೀಗಾಗಿ ಜನರು ಪೊಲೀಸ್ ಇಲಾಖೆಯ ಜೊತೆ ಸಹಕಾರ ನೀಡದರೆ ಮುಂದೆ ಈ ರೀತಿ ಘಟನೆ ನಡೆಯದಂತೆ ಸಕಾಲದಲ್ಲಿ ತಡೆಗಟ್ಟಲು ಸಹಾಯವಾಗುತ್ತದೆ ಎಂದು ಮನವಿ ಮಾಡಿದ್ದಾರೆ.ಇದನ್ನೂ ಓದಿ:ಉಕ್ರೇನ್‌ ಮಹಿಳೆಯರನ್ನ ರೇಪ್‌ ಮಾಡುವಂತೆ ಒತ್ತಾಯಿಸುತ್ತಿದ್ದ ರಷ್ಯಾ ಸೈನಿಕನ ಪತ್ನಿಗೆ ಕಠಿಣ ಜೈಲು ಶಿಕ್ಷೆ

  • ನೇಹಾ ಹತ್ಯೆ ನಿಜವಾಗಿಯೂ ಲವ್‌ ಜಿಹಾದ್‌ ಕೇಸ್‌, ನಾವು ಬಣ್ಣ ಕಟ್ಟಿಲ್ಲ: ಅಮಿತ್‌ ಶಾ

    ನೇಹಾ ಹತ್ಯೆ ನಿಜವಾಗಿಯೂ ಲವ್‌ ಜಿಹಾದ್‌ ಕೇಸ್‌, ನಾವು ಬಣ್ಣ ಕಟ್ಟಿಲ್ಲ: ಅಮಿತ್‌ ಶಾ

    – ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ಕಾಂಗ್ರೆಸ್‌ ಕರ್ನಾಟಕದ ಭದ್ರತೆಯನ್ನೇ ಕಡೆಗಣಿಸಿದೆ
    – ಸಿಎಂ, ಡಿಸಿಎಂ ಕೆಳಮಟ್ಟದ ರಾಜಕೀಯ ಎಂದು ಶಾ ವಾಗ್ದಾಳಿ

    ನವದೆಹಲಿ: ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ್‌ ಪ್ರಕರಣ (Neha Hiremath Case) ನಿಜವಾಗಿಯೂ ಲವ್‌ ಜಿಹಾದ್‌ ಪ್ರಕರಣ ಆಗಿದೆ. ನಾವು ಅದಕ್ಕೆ ಲವ್‌ ಜಿಹಾದ್‌ ಬಣ್ಣ ಕಟ್ಟುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಕಿಡಿ ಕಾರಿದ್ದಾರೆ.

    ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ನೇಹಾ ಹಿರೇಮಠ್‌ ಪ್ರಕರಣಕ್ಕೆ ನಾವು ಲವ್‌ ಜಿಹಾದ್‌ ಬಣ್ಣ ಕಟ್ಟುತ್ತಿಲ್ಲ. ಇದು ಖಂಡಿತವಾಗಿಯೂ ಲವ್‌ ಜಿಹಾದ್‌ ಪ್ರಕರಣವೇ (Love Jihad Case) ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಪೆನ್‌ಡ್ರೈವ್‌ ಪ್ರಕರಣ ಸದ್ದು ಮಾಡ್ತಿದ್ದಂತೇ ಅಭಿಮಾನಿಯಿಂದ ಪ್ರಜ್ವಲ್‌ಗೆ ಗೆಲುವಿನ ಶುಭಾಶಯ!

    ʻನೇಹಾ ಹೀರೇಮಠ್‌ ಪ್ರಕರಣವನ್ನು ಸಿಎಂ, ಡಿಸಿಎಂ (Karnataka CM and DCM) ವೈಯಕ್ತಿಕ ಕಾರಣಗಳಿಗೆ ನಡೆದಿದೆʼ ಎಂದಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಕರ್ನಾಟಕ ಸಿಎಂ, ಡಿಸಿಎಂ ಅಲ್ಪ ಸಂಖ್ಯಾತರ ಮತಬ್ಯಾಂಕ್‌ಗಾಗಿ ಆ ರೀತಿ ಹೇಳಿದ್ದಾರೆ. ನಾನು ಅವರಿಗೆ ಒಂದು‌ ಪ್ರಶ್ನೆ ಕೇಳ್ತೀನಿ, ಕಾಲೇಜು ಕ್ಯಾಂಪಸ್‌ನಲ್ಲಿ ಈ ರೀತಿ ಕೊಲೆ ನಡೆಯುತ್ತದೆ ಎಂದರೆ ಅದು ವೈಯಕ್ತಿಕ ವಿಷಯ ಹೇಗಾಗುತ್ತದೆ? ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿನಿಯರಿಗೆ ಭದ್ರತೆ ಸಿಗಬೇಕೋ ಬೇಡವೋ? ಎಂದು ಪ್ರಶ್ನಿಸಿದರಲ್ಲದೇ ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ಈ ರೀತಿ ಸತ್ಯ ಮುಚ್ಚಿಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದಿದ್ದ ಬಾಂಬ್‌ ಸ್ಫೋಟವನ್ನೂ ಸಹ ಸಿಲಿಂಡರ್‌ ಸ್ಫೋಟ ಎಂದು ತಪ್ಪಾಗಿ ಬಿಂಬಿಸಲು ಹೊರಟಿದ್ದರು. ಆದ್ರೆ ಎನ್‌ಐಎ ತನಿಖೆಯಿಂದಾಗಿ ಸತ್ಯ ಬಯಲಾಯಿತು. ಬೆಂಗಳೂರಿನಲ್ಲಿ ಕಳೆದ 10 ವರ್ಷಗಳಿಂದ ಬಾಂಬ್‌ ಸ್ಫೋಟ ನಡೆದಿರಲಿಲ್ಲ. ಆದ್ರೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ ಬಾಂಬ್ ಸ್ಫೋಟಗಳು ನಡೆಯಲಾರಂಭಿಸಿವೆ ಎಂದು ಕಿಡಿ ಕಾರಿದ್ದಾರೆ.

    ತಮ್ಮ ವೋಟ್ ಬ್ಯಾಂಕ್ ರಾಜಕಾರಣದಿಂದ ಅವರು ಎಷ್ಟು ಕೆಳಮಟ್ಟಕ್ಕೆ ಹೋಗುತ್ತಿದ್ದಾರೆ ಅಂದ್ರೆ, ಈ ದೇಶದ ಭದ್ರತೆ, ಬೆಂಗಳೂರಿನ ಭದ್ರತೆ ಮಾತ್ರವಲ್ಲ ಇಡೀ ಕರ್ನಾಟಕದ ಭದ್ರತೆಯನ್ನೂ ಕಾಂಗ್ರೆಸ್‌ ಕಡೆಗಣಿಸಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಇದೇ ವೇಳೆ ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ಅವರು, ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯಬೇಕಿದೆ. ಹೆಚ್ಚು-ಕಡಿಮೆ ನಾವು ನಮ್ಮ ಸ್ಥಾನಗಳನ್ನು ಉಳಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಲವ್‌ ಮಾಡಿ ಯುವತಿಯನ್ನು ಕರೆದೊಯ್ದನೆಂದು ಯುವಕನ ತಾಯಿಯನ್ನೇ ಕಂಬಕ್ಕೆ ಕಟ್ಟಿ ಥಳಿತ!