Tag: love you racchu

  • ನಾನು ಫುಲ್ ಥ್ರಿಲ್ ಆಗಿದ್ದೇನೆ ಅಂದ್ರು ಡಿಂಪಲ್ ಕ್ವೀನ್ ರಚಿತಾ

    ನಾನು ಫುಲ್ ಥ್ರಿಲ್ ಆಗಿದ್ದೇನೆ ಅಂದ್ರು ಡಿಂಪಲ್ ಕ್ವೀನ್ ರಚಿತಾ

    ಬೆಂಗಳೂರು: ನಾನು ಫುಲ್ ಥ್ರಿಲ್ ಆಗಿದ್ದೇನೆ ಎಂದು ಚಂದನವನದ ಡಿಂಪಲ್ ಕ್ವೀನ್ ರಚಿತಾ ರಾಮ್ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಆ ವೀಡಿಯೋ ನೋಡಿದ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ.

    ಆ ಪೋಸ್ಟ್‍ನಲ್ಲಿ ಏನಿದೆ?
    ರಚಿತಾ ರಾಮ್ ಅವರ ಸಹೋದರಿ ನಿತ್ಯ ರಾಮ್ ಮದುವೆಯಾಗಿ ವಿದೇಶಕ್ಕೆ ಹೋಗಿದ್ದರು. ಇದರಿಂದ ರಚಿತಾ ತನ್ನ ಸಹೋದರಿಯನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಮತ್ತೆ ಇವರಿಬ್ಬರು ಒಂದಾಗಿದ್ದಾರೆ. ರಚಿತಾ ತಮ್ಮ ಇನ್‍ಸ್ಟಾಗ್ರಾಮ್ ನಲ್ಲಿ, ನಾನು ಎಷ್ಟು ಥ್ರಿಲ್ ಆಗಿದ್ದೇನೆ ಎಂದು ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ. ಮತ್ತೆ ನಾವಿಬ್ಬರು ಒಂದಾಗಿದ್ದೇವೆ. ಈ ಖುಷಿಯಿಂದ ನನ್ನ ಹೃದಯ ಕರಗಿದೆ ಎಂದು ಬರೆದು ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಮಾದಕ ನೋಟದಿಂದ ನಿದ್ದೆಗೆಡಿಸಿದ ನಟಿ ಶುಭ್ರ ಅಯ್ಯಪ್ಪ

     

    View this post on Instagram

     

    A post shared by Rachita Ram (@rachita_instaofficial)

    ಈ ವೀಡಿಯೋದಲ್ಲಿ ರಚಿತಾ ಮತ್ತು ನಿತ್ಯ ತುಂಬಾ ಕ್ಯೂಟ್ ಆಗಿ ಕಾಣುತ್ತಿದ್ದು, ವೈ ದಿಸ್ ಕೊಲವೆರಿ ಡಿ ಸಾಂಗ್ ಗೆ ಇಬ್ಬರು ಕ್ಯೂಟ್ ಆಗಿ ಎಕ್ಸ್ ಪ್ರೆಶನ್ ಕೊಟ್ಟಿದ್ದಾರೆ. ಇದನ್ನೂ ಓದಿ:   ಹಾಗಲಕಾಯಿಂದ ಮಾಡಿ ರುಚಿಯಾದ ಪಲ್ಯ

     

    View this post on Instagram

     

    A post shared by Rachita Ram (@rachita_instaofficial)

    ಇತ್ತೀಚೆಗೆ ರಚಿತಾ ನಟನೆಯ ‘ಲವ್ ಯೂ ರಚ್ಚು’ ಸಿನಿಮಾದ ಚಿತ್ರೀಕರಣದ ವೇಳೆ ಫೈಟರ್ ವಿವೇಕ್ ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ್ದರು. ಈ ದುರಂತಕ್ಕೆ ಚಿತ್ರತಂಡದ ನಿರ್ಲಕ್ಷ್ಯವೇ ಕಾರಣ ಎಂದು ರಚಿತಾ ಮತ್ತು ಚಿತ್ರತಂಡವನ್ನು ಬಿಡದಿ ಪೊಲೀಸರು ವಿಚಾರಣೆಯನ್ನು ಸಹ ಮಾಡಿದ್ದರು. ಪ್ರಸ್ತುತ ಚಿತ್ರತಂಡಕ್ಕೆ ನ್ಯಾಯಾಲಯ ಜಾಮೀನು ನೀಡಿದೆ.

  • ಶೂಟಿಂಗ್ ವೇಳೆ ಫೈಟರ್ ವಿವೇಕ್ ದುರಂತ ಸಾವು – ರಚಿತಾ ರಾಮ್ ಸಂತಾಪ

    ಶೂಟಿಂಗ್ ವೇಳೆ ಫೈಟರ್ ವಿವೇಕ್ ದುರಂತ ಸಾವು – ರಚಿತಾ ರಾಮ್ ಸಂತಾಪ

    ಬೆಂಗಳೂರು: ಸಿನಿಮಾದ ಶೂಟಿಂಗ್ ಸಮಯದಲ್ಲಿ ಫೈಟರ್ ವಿವೇಕ್ ದುರಂತ ಸಾವಿಗೆ ನಟಿ ರಚಿತಾ ರಾಮ್ ಸಂತಾಪ ಸೂಚಿಸಿದ್ದಾರೆ.

    ಈ ಸಂಬಂಧ ಇನ್‍ಸ್ಟಾದಲ್ಲಿ ಪೋಸ್ಟ್ ಹಾಕಿರುವ ನಟಿ, ವಿವೇಕ್ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಅಮ್ಮ ನಿನ್ನ ಚೆನ್ನಾಗಿ ನೋಡ್ಕೋತ್ತೀನಿ ಅಂದ್ಬಿಟ್ಟು ರಸ್ತೆಯಲ್ಲೇ ಬಿಟ್ಟೋದ: ವಿವೇಕ್ ತಾಯಿ ಕಣ್ಣೀರು

    ”ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ ಫೈಟರ್ ವಿವೇಕ್ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಹಾಗೆಯೇ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ನಟಿ ತಿಳಿಸಿದ್ದಾರೆ.

     

    View this post on Instagram

     

    A post shared by Rachita Ram (@rachita_instaofficial)

    ನಿನ್ನೆ ಬಿಡದಿ ಬಳಿಯ ತೋಟದಲ್ಲಿ ನಟ ಅಜಯ್ ರಾವ್ ಹಾಗೂ ರಚಿತಾ ರಾಮ್ ಅಭಿನಯದ ‘ಲವ್ ಯೂ ರಚ್ಚು’ ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ವಿದ್ಯುದಾಘಾತದಿಂದ ಫೈಟರ್ ವಿವೇಕ್ ಸಾವನ್ನಪ್ಪಿದ್ದರು. ಇನ್ನೊಬ್ಬ ಫೈಟರ್ ರಂಜಿತ್ ಸ್ಥಿತಿ ಗಂಭೀರವಾಗಿದ್ದು, ಸಾವು- ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು: ನಟ ಅಜಯ್ ರಾವ್

    ಶೂಟಿಂಗ್ ವೇಳೆ 35 ವರ್ಷದ ಫೈಟರ್ ವಿವೇಕ್ ಧರಿಸಿದ್ದ ಲೋಹದ ಹಗ್ಗ, ಹೈಟೆನ್ಶನ್ ವೈರ್ ತಗುಲಿ ಈ ದುರಂತ ಸಂಭವಿಸಿದೆ. ಗುರು ದೇಶಪಾಂಡೆ ನಿರ್ಮಾಣದ ಈ ಸಿನಿಮಾಗೆ ಫೈಟ್ ಮಾಸ್ಟರ್ ವಿನೋದ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದರು. ಇದನ್ನೂ ಓದಿ: ಲವ್ ಯೂ ರಚ್ಚು ದುರಂತ – ಜೆಸಿಬಿ ಡ್ರೈವರ್ ಸೇರಿ ಐವರ ಮೇಲೆ FIR

  • ಶೀಘ್ರವೇ ಸಿನಿಮಾ ಶೂಟಿಂಗ್ ನಿಯಮಗಳಲ್ಲಿ ಬದಲಾವಣೆ: ಬೊಮ್ಮಾಯಿ

    ಶೀಘ್ರವೇ ಸಿನಿಮಾ ಶೂಟಿಂಗ್ ನಿಯಮಗಳಲ್ಲಿ ಬದಲಾವಣೆ: ಬೊಮ್ಮಾಯಿ

    ಬೆಂಗಳೂರು: ಶೀಘ್ರವೇ ಸಿನಿಮಾ ಶೂಟಿಂಗ್ ನಿಯಮಗಳಲ್ಲಿ ಬದಲಾವಣೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ‘ಲವ್ ಯೂ ರಚ್ಚು’ ದುರಂತ ಸಂಬಂಧ ಸಿಎಂ ಪ್ರತಿಕ್ರಿಯಿಸಿದರು. ಈ ರೀತಿಯ ಹಲವಾರು ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಕೆಲವರು ನಿಯಮಗಳನ್ನು ಫಾಲೋ ಮಾಡುತ್ತಿಲ್ಲ. ಹೀಗಾಗಿ ಸಿನಿಮಾ ಶೂಟಿಂಗ್ ನಿಯಮಗಳಲ್ಲಿ ಬದಲಾವಣೆಗಳನ್ನು ತರುತ್ತೇವೆ ಎಂದರು.

    ನಾಳೆ ಅಥವಾ ನಾಡಿದ್ದು ಕೆಲವು ಆದೇಶಗಳನ್ನು ಹೊರಡಿಸುತ್ತೇವೆ. ಅನುಮತಿ ತೆಗೆದುಕೊಳ್ಳಲು ಅನುಕೂಲನೂ ಆಗಬೇಕು. ಹಾಗೆಯೇ ಅನುಮತಿ ಇಲ್ಲದೆ ಶೂಟಿಂಗ್ ನಡೆಯಲು ಬಾರದು ಇಂತಹ ಆದೇಶ ಜಾರಿಗೆ ತರುವುದಾಗಿ ಸಿಎಂ ತಿಳಿಸಿದರು. ಇದನ್ನೂ ಓದಿ: ಅಮ್ಮ ನಿನ್ನ ಚೆನ್ನಾಗಿ ನೋಡ್ಕೋತ್ತೀನಿ ಅಂದ್ಬಿಟ್ಟು ರಸ್ತೆಯಲ್ಲೇ ಬಿಟ್ಟೋದ: ವಿವೇಕ್ ತಾಯಿ ಕಣ್ಣೀರು

    ನಿನ್ನೆ ಬಿಡದಿ ಬಳಿಯ ತೋಟದಲ್ಲಿ ‘ಲವ್ ಯೂ ರಚ್ಚು’ ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣ ನಡೆಸುವ ಸಂದರ್ಭದಲ್ಲಿ ವಿದ್ಯುದಾಘಾತದಿಂದ ಫೈಟರ್ ವಿವೇಕ್ ಸಾವನ್ನಪ್ಪಿದ್ದರು. ಇನ್ನೊಬ್ಬ ಫೈಟರ್ ರಂಜಿತ್ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಶೂಟಿಂಗ್ ವೇಳೆ 35 ವರ್ಷದ ಫೈಟರ್ ವಿವೇಕ್ ಧರಿಸಿದ್ದ ಲೋಹದ ಹಗ್ಗ, ಹೈಟೆನ್ಶನ್ ವೈರ್ ತಗುಲಿ ಈ ದುರಂತ ಸಂಭವಿಸಿದೆ. ಗುರು ದೇಶಪಾಂಡೆ ನಿರ್ಮಾಣದ ಈ ಸಿನಿಮಾಗೆ ಫೈಟ್ ಮಾಸ್ಟರ್ ವಿನೋದ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದರು.

    ಈ ಹಿಂದೆ ಅಂದರೆ 2016ರಲ್ಲಿ `ಮಾಸ್ತಿ ಗುಡಿ’ ಸಿನಿಮಾದ ವೇಳೆ ಫೈಟರ್ ಅನಿಲ್, ಉದಯ್ ಸಾವನ್ನಪ್ಪಿದ್ದರು. ಇದನ್ನೂ ಓದಿ: ಲವ್ ಯೂ ರಚ್ಚು ದುರಂತ – ಜೆಸಿಬಿ ಡ್ರೈವರ್ ಸೇರಿ ಐವರ ಮೇಲೆ FIR

  • ಅಮ್ಮ ನಿನ್ನ ಚೆನ್ನಾಗಿ ನೋಡ್ಕೋತ್ತೀನಿ ಅಂದ್ಬಿಟ್ಟು ರಸ್ತೆಯಲ್ಲೇ ಬಿಟ್ಟೋದ: ವಿವೇಕ್ ತಾಯಿ ಕಣ್ಣೀರು

    ಅಮ್ಮ ನಿನ್ನ ಚೆನ್ನಾಗಿ ನೋಡ್ಕೋತ್ತೀನಿ ಅಂದ್ಬಿಟ್ಟು ರಸ್ತೆಯಲ್ಲೇ ಬಿಟ್ಟೋದ: ವಿವೇಕ್ ತಾಯಿ ಕಣ್ಣೀರು

    – ಬೇಡ ಹೋಗ್ಬೇಡ ಅಂತ ಹೇಳುತ್ತಿದ್ದೆ

    ಬೆಂಗಳೂರು: ಅಮ್ಮ ನಿನ್ನ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಯಾವಾಗಲೂ ಹೇಳುತ್ತಿದ್ದ. ಆದರೆ ಇಂದು ನನ್ನ ನಡುರಸ್ತೆಯಲ್ಲಿಯೇ ಬಿಟ್ಟು ಹೋದ ಎಂದು ಫೈಟರ್ ವಿವೇಕ್ ತಾಯಿ ಕಣ್ಣೀರು ಹಾಕಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗನಿಗೆ ಏನಾಯಿತು ಅಂತ ಗೊತ್ತಿಲ್ಲ. ನಾನು ಯಾರನ್ನೂ ಕೇಳಿಲ್ಲ. ಮಗ ಸತ್ತೋದ ಅಂತ ಬಂದು ಹೇಳಿದಾಗ ಅಳುತ್ತಾ ಕೂತಿದ್ದೀನಿ. ಶೂಟಿಂಗ್ ಹೋಗುವಾಗ ಚೆನ್ನಾಗಿಯೇ ಇದ್ದ. ಹೋದ ವಾರದಲ್ಲಿ ಎರಡು ದಿವಸ ಶೂಟಿಂಗ್ ಹೋಗಿದ್ದ. ಈ ವಾರದಲ್ಲಿ ಒಂದು ದಿವಸ ಇದೆ ಅಂತ ಹೇಳಿ ಹೋಗಿದ್ದ. ನಾನು ಬೇಡ ಹೋಗ್ಬೇಡ, ಹೋಗ್ಬೇಡ ಅಂತ ಹೇಳ್ತಿದ್ದೆ. ಅನ್ನ ನೀರು ತಿಂದು ಮನೆಯಲ್ಲಿ ಸಂತೋಷವಾಗಿ ಇರೋಣ ಅಂತ ಹೇಳುತ್ತಿದ್ದೆ ಎಂದರು.

    ನಾನು ಪ್ರತಿ ಬಾರಿ ಈ ರೀತಿ ಹೇಳಿದಾಗಲೂ ಅವನು, ಅಮ್ಮ ನಾನು ನಿಮ್ಮನ್ನ ಚೆನ್ನಾಗಿ ನೋಡಿಕೊಳ್ಳಬೇಕು. ನಮಗೆ ಕಷ್ಟಗಳೇ ಬೆಳೆಯುತ್ತಿದೆ. ನಾನು ಚೆನ್ನಾಗಿ ನೋಡಿಕೊಳ್ತೀನಿ ಅಮ್ಮ. ಅದಕ್ಕಾಗಿ 10 ರೂ ಸಂಪಾನೆ ಮಾಡ್ತೀನಿ ಅಂತ ಹೇಳುತ್ತಿದ್ದ. ಹೀಗಾಗಿ ಶೂಟಿಂಗ್ ತೆರಳುತ್ತಿದ್ದ. ಆದರೆ ಈಗ ನನ್ನ ಮಗ ನನ್ನನ್ನು ಬಿಟ್ಟು ಹೊರಟು ಹೋದ. ಈಗ ನನ್ನ ಚೆನ್ನಾಗಿ ನೋಡ್ಕೊಂಡು ಬಿಟ್ಬಿಟ್ಟ ಎಂದು ಕಣ್ಣೀರಾದ್ರು. ಇದನ್ನೂ ಓದಿ: ಲವ್ ಯೂ ರಚ್ಚು ದುರಂತ – ಜೆಸಿಬಿ ಡ್ರೈವರ್ ಸೇರಿ ಐವರ ಮೇಲೆ FIR

    ಶೂಟಿಂಗ್ ನಲ್ಲಿ ಫೈಟ್ ಮಾಡುವುದು ಬಿಟ್ಟು 4 ವರ್ಷ ಆಗಿತ್ತು. ಇತ್ತೀಚೆಗೆ ಮಾಸ್ಟರ್ ಪೋನ್ ಮಾಡಿ ಕರೀತಾ ಇದ್ದಾರೆ ಅಂತ ಹೇಳುತ್ತಿದ್ದ. ನಾನು ಆವಗಾನೂ ಬೇಡ ಅಂದಿದ್ದೆ. ನಾವು ಅಂಬಲಿ ಅನ್ನನೇ ಕುಡಿದುಕೊಂಡು ಜೀವನ ಸಾಗಿಸೋಣ, ನಾವೇನು ಸಾಹುಕಾರರಾಗುವ ಅವಶ್ಯಕತೆ ಇಲ್ಲ. ನೆಮ್ಮದಿಯಾಗಿರೋಣ ಅಮತಿದ್ದೆ. ಆಗ ಅವನು ಇಲ್ಲ ಹೋಗ್ತೀನಿ 10 ರೂ. ಸಂಪಾದನೆ ಮಾಡಿಕೊಂಡು ಬರುತ್ತೇನೆ. ನಾವು ಹಿಂಗೆ ಇದ್ದರೆ ಮೇಲಕ್ಕೆ ಹೋಗಲು ಹೇಗೆ ಸಾಧ್ಯ ಅಂತ ಹೇಳಿ ಶೂಟಿಂಗ್ ಹೋಗುತ್ತಿದ್ದ ಎಂದರು. ಇದನ್ನೂ ಓದಿ: ಫೈಟ್ ಮಾಸ್ಟರ್ ದು ಯಾವುದೇ ತಪ್ಪಿಲ್ಲ: ಗಾಯಾಳು ರಂಜಿತ್

    ನಾನು ಊರಿಗೆ ಹೋಗಿ ಬಂದಿದ್ದೆ. ಮಲಗಿದ್ದರಿಂದ ಅವನು ನನ್ನ ಜೊತೆ ಏನೂ ಹೇಳದೆ ಶೂಟಿಂಗ್ ತೆರಳಿದ್ದ. ನನ್ನ ಮಗನ ಜೊತೆ ಮಾತಾಡಿ 5 ದಿನ ಆಗಿತ್ತು ಎಂದು ಗದ್ಗದಿತರಾದರು. ಇದನ್ನೂ ಓದಿ: ಲವ್ ಯು ರಚ್ಚು ಶೂಟಿಂಗ್ ದುರಂತ – ನಿರ್ದೇಶಕ ಸೇರಿ ನಾಲ್ವರು ಪೊಲೀಸ್ ವಶಕ್ಕೆ

    ಬಿಡದಿ ಬಳಿಯ ತೋಟದಲ್ಲಿ ನಟ ಅಜಯ್ ರಾವ್ ಹಾಗೂ ನಟಿ ರಚಿತಾ ರಾಮ್ ಅಭಿನಯದ ‘ಲವ್ ಯೂ ರಚ್ಚು’ ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣ ನಡೆಸುವ ಸಂದರ್ಭದಲ್ಲಿ ವಿದ್ಯುದಾಘಾತದಿಂದ ಫೈಟರ್ ವಿವೇಕ್ ಸಾವನ್ನಪ್ಪಿದ್ದರು. ಇನ್ನೊಬ್ಬ ಫೈಟರ್ ರಂಜಿತ್ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಶೂಟಿಂಗ್ ವೇಳೆ 35 ವರ್ಷದ ಫೈಟರ್ ವಿವೇಕ್ ಧರಿಸಿದ್ದ ಲೋಹದ ಹಗ್ಗ, ಹೈಟೆನ್ಶನ್ ವೈರ್ ತಗುಲಿ ಈ ದುರಂತ ಸಂಭವಿಸಿದೆ. ಗುರು ದೇಶಪಾಂಡೆ ನಿರ್ಮಾಣದ ಈ ಸಿನಿಮಾಗೆ ಫೈಟ್ ಮಾಸ್ಟರ್ ವಿನೋದ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದರು.

  • ಲವ್ ಯೂ ರಚ್ಚು ದುರಂತ – ಜೆಸಿಬಿ ಡ್ರೈವರ್ ಸೇರಿ ಐವರ ಮೇಲೆ FIR

    ಲವ್ ಯೂ ರಚ್ಚು ದುರಂತ – ಜೆಸಿಬಿ ಡ್ರೈವರ್ ಸೇರಿ ಐವರ ಮೇಲೆ FIR

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಮತ್ತೊಂದು ದೊಡ್ಡ ಅವಘಡ ಸಂಭವಿಸಿದೆ. 2016ರಲ್ಲಿ ‘ಮಾಸ್ತಿ ಗುಡಿ’ ಸಿನಿಮಾದ ವೇಳೆ ಫೈಟರ್ ಅನಿಲ್, ಉದಯ್ ಸಾವನ್ನಪ್ಪಿದ್ದರು. ಇದೀಗ ಅಂತದ್ದೇ ಇನ್ನೊಂದು ದುರ್ಘಟನೆ ಸಂಭವಿಸಿದೆ. ಘಟನೆ ಸಂಬಂಧ ಇದೀಗ ಐವರ ವಿರುದ್ಧ ಎಫ್‍ಐಆರ್ ದಾಖಲು ಮಾಡಲಾಗಿದೆ.

    ನಿರ್ದೇಶಕ ಶಂಕರ್ ರಾಜ್, ಫೈಟ್ ಮಾಸ್ಟರ್ ವಿನೋದ್ ಹಾಗೂ ಜೆಸಿಬಿ ಡ್ರೈವರ್ ಸೇರಿ ಐವರ ಮೇಲೆ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ‘ಲವ್ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್ ವಿವೇಕ್ ಹೈ ಟೆನ್ಷನ್ ವೈಯರ್ ತಗುಲಿ ಮೃತಪಟ್ಟಿದ್ದರು. ಈ ಸಂಬಂಧ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಸ್ವೀಕರಿಸಿರುವ ಪೊಲೀಸರು ಇದೀಗ ಐವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಫೈಟ್ ಮಾಸ್ಟರ್ ದು ಯಾವುದೇ ತಪ್ಪಿಲ್ಲ: ಗಾಯಾಳು ರಂಜಿತ್

    ಘಟನೆ ಸಂಬಂಧಿಸಿದಂತೆ ಸಾಹಸ ನಿರ್ದೇಶಕ ವಿನೋದ್, ಸಹ ನಿರ್ದೇಶಕ ಶಂಕರ್‍ರಾಜ್, ಜಮೀನು ಮಾಲೀಕ ಪುಟ್ಟರಾಜು, ಕ್ರೇನ್ ಚಾಲಕ ಮುನಿಯಪ್ಪ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನಿರ್ಮಾಪಕ ಗುರುದೇಶಪಾಂಡೆಗಾಗಿ ಶೋಧ ಮುಂದುವರಿದಿದೆ. ಈ ಮಧ್ಯೆ ಚಿತ್ರೀಕರಣ ನಡೆಸಲು ಪೊಲೀಸರ ಅನುಮತಿ ಪಡೆದಿರಲಿಲ್ಲ ಅಂತ ರಾಮನಗರ ಎಸ್‍ಪಿ ಗಿರೀಶ್ ಹೇಳಿದ್ದಾರೆ. ಇದನ್ನೂ ಓದಿ: ಲವ್ ಯು ರಚ್ಚು ಶೂಟಿಂಗ್ ದುರಂತ – ನಿರ್ದೇಶಕ ಸೇರಿ ನಾಲ್ವರು ಪೊಲೀಸ್ ವಶಕ್ಕೆ

    ಅವಘಡದಲ್ಲಿ ಇನ್ನೊಬ್ಬ ಫೈಟರ್ ರಂಜಿತ್ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಶೂಟಿಂಗ್ ವೇಳೆ ಫೈಟರ್ ವಿವೇಕ್ ಧರಿಸಿದ್ದ ಲೋಹದ ಹಗ್ಗ, ಹೈಟೆನ್ಶನ್ ವೈರ್ ತಗುಲಿ ಈ ದುರಂತ ಸಂಭವಿಸಿದೆ. ಗುರು ದೇಶಪಾಂಡೆ ನಿರ್ಮಾಣದ ಈ ಸಿನಿಮಾಗೆ ಫೈಟ್ ಮಾಸ್ಟರ್ ವಿನೋದ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದರು. ರಾಜರಾಜೇಶ್ವರಿ ಆಸ್ಪತ್ರೆ ಬಳಿ ಮೃತ ವಿವೇಕ್ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.  ಇದನ್ನೂ ಓದಿ: ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು: ನಟ ಅಜಯ್ ರಾವ್