Tag: love

  • Bengaluru | ಪ್ರೇಯಸಿಯ ಹೊಸ ಲವ್ವರ್‌ಗೆ ಚಾಕು ಇರಿದ ಮಾಜಿ ಬಾಯ್‌ಫ್ರೆಂಡ್

    Bengaluru | ಪ್ರೇಯಸಿಯ ಹೊಸ ಲವ್ವರ್‌ಗೆ ಚಾಕು ಇರಿದ ಮಾಜಿ ಬಾಯ್‌ಫ್ರೆಂಡ್

    ಬೆಂಗಳೂರು: ಮಾಜಿ ಬಾಯ್‌ಫ್ರೆಂಡ್ (Ex Boyfriend) ಪ್ರೇಯಸಿಯ ಹೊಸ ಲವ್ವರ್‌ಗೆ ಚಾಕು ಇರಿದ (Stab) ಘಟನೆ ಬೆಂಗಳೂರಿನ (Bengaluru) ವೈಯಾಲಿ ಕಾವಲ್ (Vyalikaval) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಚಂದನ್, ಹಳೆ ಬಾಯ್ ಫ್ರೆಂಡ್‌ನಿಂದ ಚಾಕು ಇರಿತಕ್ಕೆ ಒಳಗಾದ ಯುವಕ. ಯತೀಶ್ ಎಂಬಾತ ಚಂದನ್‌ಗೆ ಚಾಕು ಇರಿದಿದ್ದಾನೆ. ವೈಯಾಲಿ ಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯ ಜಟಕಾ ಸ್ಟ್ಯಾಂಡ್ ಬಳಿ ಶುಕ್ರವಾರ ರಾತ್ರಿ ಘಟನೆ ನಡೆದಿದೆ. ಚಂದನ್ ಅದೇ ಏರಿಯಾದ ಯುವತಿಯೊಬ್ಬಳನ್ನ ಪ್ರೀತಿಸುತ್ತಿದ್ದ. ಯುವತಿ ಕೂಡ ಚಂದನ್‌ನನ್ನು ಪ್ರೀತಿಸುತ್ತಿದ್ದಳು. ಈ ಹಿಂದೆ ಯುವತಿ ಯತೀಶ್ ಎಂಬಾತನ್ನ ಪ್ರೀತಿಸುತ್ತಿದ್ದಳಂತೆ. ಯುವತಿ ಮತ್ತೊಬ್ಬ ಯುವಕನನ್ನ ಪ್ರೀತಿಸುತ್ತಿದ್ದ ವಿಚಾರ ಯತೀಶ್‌ಗೆ ತಿಳಿದು ಚಂದನ್‌ನನ್ನು ಮಾತುಕತೆಗೆ ಅಂತಾ ಕರೆಸಿ ಯತೀಶ್ ಅಂಡ್ ಗ್ಯಾಂಗ್ ಚಾಕು ಇರಿದಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ ಹಣ – ಹೇಳಿಕೆ ಖಂಡಿಸಿ ಯತ್ನಾಳ್ ಕಾರ್‌ಗೆ ಘೇರಾವ್ ಹಾಕಲು ಯತ್ನ

    ಘಟನೆ ಬಳಿಕ ರಕ್ತ ಸಿಕ್ತ ಮೈಯಲ್ಲೇ ನಿತ್ರಾಣನಾಗಿದ್ದ ಚಂದನ್, ಸ್ನೇಹಿತರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾನೆ. ಘಟನಾ ಸ್ಥಳಕ್ಕೆ ತೆರಳಿದ ಚಂದನ್ ಸ್ನೇಹಿತರು ರಕ್ಷಣೆ ಮಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಐಸಿಯುನಲ್ಲಿ ಚಂದನ್ ಚಿಕಿತ್ಸೆ ಪಡೆಯುತ್ತಿದ್ದು ಗಂಭೀರ ಸ್ಥಿತಿಯಲ್ಲಿದ್ದಾನೆ. ಘಟನೆ ಸಂಬಂಧ ವೈಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: Ramanagara | ರಸ್ತೆಯಲ್ಲಿ ವೀಲ್ಹಿಂಗ್ ಮಾಡಿ ವಾಹನ ಸವಾರರಿಗೆ ತೊಂದರೆ – ನಾಲ್ವರ ಬಂಧನ

  • ವಿದ್ಯಾರ್ಥಿನಿಯೊಂದಿಗೆ ಶಿಕ್ಷಕನ ಲವ್ವಿ-ಡವ್ವಿ; NCC ಪಾಠ ಹೇಳಿಕೊಟ್ಟ ಗುರುವಿನ ಜೊತೆಯೇ ಜೂಟ್

    ವಿದ್ಯಾರ್ಥಿನಿಯೊಂದಿಗೆ ಶಿಕ್ಷಕನ ಲವ್ವಿ-ಡವ್ವಿ; NCC ಪಾಠ ಹೇಳಿಕೊಟ್ಟ ಗುರುವಿನ ಜೊತೆಯೇ ಜೂಟ್

    – ಮದುವೆ ಆಗಿ ಇಬ್ರು ಮಕ್ಕಳಿದ್ರೂ ವಿದ್ಯಾರ್ಥಿನಿ ಜೊತೆಯಲ್ಲಿ ಶಿಕ್ಷಕನ ಚಕ್ಕಂದ

    ಚಿಕ್ಕಬಳ್ಳಾಪುರ: ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ. ಗುರು ಸಾಕ್ಷಾತ್ ಪರಬ್ರಹ್ಮ ಅಂತಾರೆ. ಗುರು ಅಂದ್ರೆ ದೇವರ ಸಮಾನ. ಆದ್ರೆ ಅಂತಹ ಗುರುವೇ ತಾನೇ ಪಾಠ ಹೇಳಿಕೊಟ್ಟ ವಿದ್ಯಾರ್ಥಿನಿ ಜೊತೆ ಓಡಿ ಹೋಗಿ ಪೊಲೀಸರ ಅತಿಥಿಯಾಗಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ (Doddaballapura) ನಡೆದಿದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಕನ್ನಡ ಮೇಷ್ಟ್ರಾಗಿರುವ ಪ್ರವೀಣ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು, ಎನ್‌ಸಿಸಿ ತರಬೇತಿಯ ಜೊತೆ ಕನ್ನಡ ಪಾಠ ಮಾಡ್ತಾ ಶಿಸ್ತಿನ ಪಾಠ ಹೇಳಿಕೊಡಬೇಕಿದ್ದ ಶಿಕ್ಷಕ, ತನ್ನ ಶಾಲೆಯ ವಿದ್ಯಾರ್ಥಿನಿಯ ಜೊತೆಯಲ್ಲೇ ಹಲವು ವರ್ಷಗಳಿಂದ ಪ್ರೀತಿ ಪ್ರೇಮ ಅಂತ ಕದ್ದು ಮುಚ್ಚಿ ಪ್ರಣಯದಾಟ ಆಡಿಕೊಂಡು ಬಂದಿದ್ದ. ಇದನ್ನೂ ಓದಿ: ಗದಗ | ಬಿರಿಯಾನಿ ತಿನ್ನಲು ಹೋಟೆಲ್‌ಗೆ ಬಂದಾತನ ಭೀಕರ ಕೊಲೆ

    ಇನ್ನೂ ಇದನ್ನ ಅರಿಯದ ವಿದ್ಯಾರ್ಥಿನಿಯ ಮನೆಯವರು ವಿದ್ಯಾರ್ಥಿನಿಗೆ ವರನನ್ನ ನೋಡಿ ಆಗಸ್ಟ್ 11ಕ್ಕೆ ಮದುವೆ ನಿಶ್ಚಯ ಮಾಡಿದ್ದರು. ಹೀಗಾಗಿ ಮದುವೆ ಢೇಟ್ ಫಿಕ್ಸ್ ಆಗ್ತಿದ್ದಂತೆ ಶಿಕ್ಷಕ ಪ್ರವೀಣ್, ವಿದ್ಯಾರ್ಥಿನಿಯನ್ನ ಕರೆದುಕೊಂಡು ಎಸ್ಕೇಪ್ ಆಗಿದ್ದ. ಬಳಿಕ ದೆಹಲಿಗೆ ಹೋಗಿ ಕಾಲ ಕಳೆದು ಬೆಂಗಳೂರಿಗೆ ವಾಪಾಸ್ ಬಂದಿದ್ದರು. ಇದನ್ನೂ ಓದಿ: DRDO ವಿಜ್ಞಾನಿಗಳ ಮಾಹಿತಿ ಪಾಕ್‌ಗೆ ಹಂಚಿಕೆ – ಅತಿಥಿ ಗೃಹದ ಸಿಬ್ಬಂದಿ ಅರೆಸ್ಟ್‌

    ಇತ್ತ ವಿದ್ಯಾರ್ಥಿನಿ ಮನೆಯವರು ಮದುವೆ ಇಷ್ಟ ಅಲ್ಲ ಎಂದು ಯಾರೋ ಯುವಕನ ಜೊತೆಯಲ್ಲಿ ಓಡಿ ಹೋಗಿರಬೇಕು ಅಂದುಕೊಂಡಿದ್ದರು. ಆದರೆ ಪೊಲೀಸರು ಇಬ್ಬರನ್ನೂ ಹುಡುಕಿ ಕರೆತಂದಾಗಲೇ ತಮ್ಮ ಮಗಳು ಶಿಕ್ಷಕನ ಜೊತೆಯೇ ಓಡಿಹೋಗಿದ್ದು ಎಂದು ತಿಳಿದು ವಿದ್ಯಾರ್ಥಿನಿಯ ಪೋಷಕರು ಶಾಕ್ ಆಗಿದ್ದಾರೆ.

    ಶಿಕ್ಷಕ ಪ್ರವೀಣ್‌ಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆದ್ರೂ ವಿದ್ಯಾರ್ಥಿನಿ ಜೊತೆ ಪ್ರಣಯದಾಟ ಆಡಿ ಅಕೆಯ ಬಾಳಲ್ಲಿ ಚೆಲ್ಲಾಟವಾಡಿದ್ದಾನೆ. ಇತ್ತ ಪ್ರವೀಣ್ ಪತ್ನಿ ಸಹ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ಪತಿಯ ವಿರುದ್ಧವೇ ದೂರು ನೀಡಿದ್ದಾರೆ. ಇದೀಗ ಪೊಲೀಸರು ಶಿಕ್ಷಕ ಪ್ರವೀಣ್‌ನನ್ನು ಬಂಧಿಸಿದ್ದಾರೆ.

  • ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?

    ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?

    ಕಾಲಿವುಡ್ ನಟ ಧನುಷ್ (Dhanush) ಹಾಗೂ ಮೃಣಾಲ್ ಠಾಕೂರ್ (Mrunal Thakur) ಡೇಟಿಂಗ್ ವಿಚಾರ ಜಗಜ್ಜಾಹೀರಾಗುತ್ತಿದೆ. ಇಬ್ಬರೂ ಒಟ್ಟೊಟ್ಟಿಗೆ ಇರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗ್ತಿವೆ. ಹೀಗೆ ವೈರಲ್ ಆಗ್ತಿರುವ ಇವರು ಮದುವೆ ಕೂಡಾ ಆಗಲಿದ್ದಾರೆ ಅನ್ನೋ ಗಾಳಿ ಸುದ್ದಿ ಸಿನಿದುನಿಯಾದಲ್ಲಿ ಗಿರ್ಕಿ ಹೊಡೆಯುತ್ತಿದೆ. ಮದುವೆ ಅಂತಾದರೆ ಈ ಇಬ್ಬರ ನಡುವೆ ವಯಸ್ಸಿನ ಅಂತರ ಎಷ್ಟಿದೆ ಅಂತನ್ನೋ ಚರ್ಚೆಗಳು ಕೂಡಾ ಶುರುವಾಗಿವೆ.

    `ಸೀತಾ ರಾಮಂ’ ಬೆಡಗಿ ಮೃಣಾಲ್ ಠಾಕೂರ್ ಆಗಸ್ಟ್ 1, 1992ರಲ್ಲಿ ಜನಿಸಿದ್ದಾರೆ, ಅಲ್ಲಿಗೆ ಮೃಣಾಲ್‌ಗೆ 33 ವರ್ಷ. ಇನ್ನು ನಟ ಧನುಷ್ ಜುಲೈ 28, 1983ರಲ್ಲಿ ಜನಿಸಿದ್ದಾರೆ, ಅಲ್ಲಿಗೆ ನಟ ಧನುಷ್‌ಗೆ 42 ವರ್ಷ. ನಟ ಧನುಷ್ ಹಾಗೂ ನಟಿ ಮೃಣಾಲ್ ನಡುವೆ 9 ವರ್ಷಗಳ ಅಂತರವಿದೆ. ಈಗಾಗಲೇ ನಟ ಧನುಷ್ ನಟ ರಜನಿಕಾಂತ್ ಅವರ ಪುತ್ರಿ ಐಶ್ವರ್ಯ ಜೊತೆ ಮದುವೆಯಾಗಿ 18 ವರ್ಷಗಳ ಬಳಿಕ ವಿಚ್ಚೇಧನವನ್ನ ಕೂಡಾ ನೀಡಿದ್ದಾರೆ.

    2022ರಲ್ಲಿ ರಜನಿಕಾಂತ್ ಪುತ್ರಿ ಐಶ್ವರ್ಯ ಜೊತೆ ಸಪರೇಷನ್ ಬಗ್ಗೆ ಘೋಷಣೆ ಮಾಡಿದ್ದರು ನಟ ಧನುಷ್. ನಂತರ 2024ರಲ್ಲಿ ವಿಚ್ಚೇಧನ ಪಡೆದುಕೊಂಡಿದ್ದಾರೆ. ಇದೀಗ ನಟ ಧನುಷ್ ಹಾಗೂ ಮೃಣಾಲ್ ನಡುವೆ ಇಲ್ಲ ಸಲ್ಲದ ಸುದ್ದಿಗಳು ಮುನ್ನೆಲೆಗೆ ಬರುತ್ತಿವೆ. ಸನ್ ಆಫ್ ಸರ್ಧಾರ್-2 ಸಿನಿಮಾದ ಪ್ರೀಮಿಯರ್‌ನಲ್ಲಿ ನಟ ಧನುಷ್ ಭಾಗಿಯಾಗಿದ್ದಾರೆ. ಅಲ್ಲದೇ ಆಗಸ್ಟ್ 1ರಂದು ಮೃಣಾಲ್ ಬರ್ತ್ಡೇ ಪಾರ್ಟಿಯಲ್ಲೂ ಧನುಷ್ ಪ್ರತ್ಯಕ್ಷರಾಗಿದ್ದಾರೆ ಎನ್ನಲಾಗ್ತಿದೆ. ಈ ಜೋಡಿ ಒಂದಾದರೆ ಚೆಂದ ಎಂದು ಜಾಲತಾಣದಲ್ಲಿ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ.

  • ಕೊಪ್ಪಳ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್ – ಟ್ರಯಾಂಗಲ್ ಲವ್ ಸ್ಟೋರಿಗೆ ಹೆಣವಾದ್ನಾ?

    ಕೊಪ್ಪಳ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್ – ಟ್ರಯಾಂಗಲ್ ಲವ್ ಸ್ಟೋರಿಗೆ ಹೆಣವಾದ್ನಾ?

    ಕೊಪ್ಪಳ: ಕಳೆದ ಎರಡು ದಿನಗಳ ಹಿಂದೆ ಕೊಪ್ಪಳದಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಟ್ರಯಾಂಗಲ್ ಲವ್‌ಗೆ (Triangle Love) ಯುವಕ ಕೊಲೆ ಮಾಡಲಾಗಿದೆ ಎಂಬ ವಿಚಾರ ತನಿಖೆಯಲ್ಲಿ ಬಯಲಾಗಿದ್ದು, ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಆ. 3ರಂದು ನಡುರಸ್ತೆಯಲ್ಲಿ 27 ವರ್ಷದ ಯುವಕನನ್ನ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಟ್ರಯಾಂಗಲ್ ಲವ್ ಸ್ಟೋರಿ ವಿಚಾರವಾಗಿ ನಡೆದ ಕೊಲೆ ಇದೀಗ ಸದ್ದು ಮಾಡುತ್ತಿದೆ. ಕೊಲೆ ಮಾಡಿದ ಓರ್ವ ಆರೋಪಿ ಠಾಣೆಗೆ ಶರಣಾಗಿದ್ದು, ಇದೀಗ ಪೊಲೀಸರು ಕೊಲೆಗೆ ಸಹಾಯ ಮಾಡಿದ ಮೂವರನ್ನು ಬಂಧಿಸಿದ್ದಾರೆ. ಕೊಲೆಗೆ ಪೊಲೀಸ್ ವರಿಷ್ಠಾಧಿಕಾರಿ ಹೊಸ ಟ್ವಿಸ್ಟ್ ಕೊಟ್ಟರೆ, ಹತ್ಯೆಯಾದ ಯುವಕನ ತಂದೆ ಮತ್ತೊಂದು ತಿರುವು ಟ್ವಿಸ್ಟ್ ಕೊಟ್ಟಿದ್ದಾರೆ. ಇನ್ನು ಇದೇ ಕೊಲೆಯನ್ನ ರಾಜಕೀಯವಾಗಿ ಬಳಸಿಕೊಳ್ಳಲು ರಾಜಕೀಯ ನಾಯಕರು ಮುಂದಾಗಿದ್ದಾರೆ. ಇದನ್ನೂ ಓದಿ: ಉತ್ತರಕಾಶಿ ಮೇಘಸ್ಫೋಟ | ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

    ಹಿಂದೂ ಯುವಕ ಗವಿಸಿದ್ದಪ್ಪನನ್ನು ಸಾಧಿಕ್ ಎಂಬ ಅನ್ಯಕೋಮಿನ ಯುವಕ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದ. ಬಳಿಕ ತಾನೇ ಪೊಲೀಸರಿಗೆ ಶರಣಾಗಿದ್ದ. ಹತ್ಯೆಯಾದ ಗವಿಸಿದ್ದಪ್ಪ, ಸಾಧಿಕ್ ಪ್ರೀತಿಸುತ್ತಿದ್ದ ಹುಡುಗಿಗೆ ತೊಂದರೆ ಕೊಟ್ಟಿದ್ದ. ಅದಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅಸಲಿಗೆ ಇದು ಟ್ರಯಾಂಗಲ್ ಲವ್ ಸ್ಟೋರಿಗಾಗಿ ನಡೆದ ಕೊಲೆ ಎಂಬುದು ಗೊತ್ತಾಗಿದೆ. ಸಾಧಿಕ್ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದ. ಆದ್ರೆ ಆಕೆ ಸಾಧಿಕ್‌ನೊಂದಿಗೆ ಬ್ರೇಕಪ್ ಮಾಡಿಕೊಂಡು, ಗವಿಸಿದ್ದಪ್ಪನನ್ನು ಪ್ರೀತಿಸುತ್ತಿದ್ದಳು. ಗವಿಸಿದ್ದಪ್ಪನನ್ನೇ ಮದುವೆಯಾಗುವುದಾಗಿ ಓಡಿ ಹೋಗಿದ್ದಳು. ಅಪ್ರಾಪ್ತೆಯಾಗಿದ್ದ ಕಾರಣ ಗವಿಸಿದ್ದಪ್ಪನಿಗೆ ಹಿರಿಯರು ಬುದ್ಧಿವಾದ ಹೇಳಿ ಸುಮ್ಮನಿರಿಸಿದ್ದರು. ಇದಾದ ಮೇಲೆ ಆತನೂ ಕೂಡ ಸೈಲೆಂಟ್ ಆಗಿ ಬಿಟ್ಟಿದ್ದ. ಆದರೆ ಭಾನುವಾರ ರಾತ್ರಿ ಸಾಧಿಕ್ ಮಾರಕಾಸ್ತçಗಳಿಂದ ಗವಿಸಿದ್ದಪ್ಪನನ್ನು ಕೊಚ್ಚಿ ಕೊಲೆಗೈದಿದ್ದ. ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ಇಂದು ಕೊನೆಯ ಪಾಯಿಂಟ್‌ನಲ್ಲಿ ಶೋಧ

    ಇನ್ನು ಗವಿಸಿದ್ದಪ್ಪ ಕೊಲೆಯನ್ನೇ ಇದೀಗ ರಾಜಕೀಯ ಅಸ್ತ್ರ ಮಾಡಿಕೊಳ್ಳಲು ರಾಜಕೀಯ ನಾಯಕರು ರೆಡಿಯಾಗಿದ್ದಾರೆ. ಕೊಲೆಯಾದ ಗವಿಸಿದ್ದಪ್ಪ ವಾಲ್ಮೀಕಿ ಸಮುದಾಯಕ್ಕೆ ಸೇರಿದ ಯುವಕನಾದ್ದರಿಂದ ಕೊಲೆಯನ್ನು ಈ ಸಮುದಾಯ ಗಂಭೀರವಾಗಿ ಪರಿಗಣಿಸಿದೆ. ಅಮಾಯಕ ಯುವಕನ ಕೊಲೆ ಖಂಡಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡೋಕೆ ವಾಲ್ಮೀಕಿ ಸಮುದಾಯದವರು ಚಿಂತನೆ ಮಾಡಿದ್ದಾರೆ. ಇದನ್ನೂ ಓದಿ: ಹವಾಮಾನ ವೈಪರೀತ್ಯ – ಸಿಎಂ ರಾಯಚೂರು ಪ್ರವಾಸ ರದ್ದು

    ಗವಿಸಿದ್ದಪ್ಪನ ಮನೆಗೆ ಶ್ರೀರಾಮುಲು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಈ ವೇಳೆ ಗವಿಸಿದ್ದಪ್ಪನ ತಾಯಿ ರಾಮುಲು ಕಾಲಿಗೆ ಬಿದ್ದು ಗೋಳಾಡಿದ್ದರು. ಅಲ್ಲದೇ ಸಹೋದರಿಯರು ಸಹ ನ್ಯಾಯಕ್ಕಾಗಿ ಕಣ್ಣೀರು ಹಾಕಿದ್ದರು. ಮನೆಗೆ ಭೇಟಿ ನೀಡಿದ ಬಳಿಕ ರಾಮುಲು ಇಡೀ ಪ್ರಕರಣಕ್ಕೆ ಹೊಸ ತಿರುವು ಕೊಟ್ಟಿದ್ದಾರೆ. ಹಂತಕ ಪಿಎಫ್‌ಐ ಸಂಘಟನೆಯುಲ್ಲಿದ್ದ ಎಂದು ಆರೋಪಿಸಿದ್ದಾರೆ. ತನ್ನ ಮಗನ ಸಾವಿಗೆ ಕಾರಣಳಾದ ಯುವತಿ ವಿರುದ್ಧವೂ ದೂರು ನೀಡೋದಾಗಿ ಗವಿಸಿದ್ದಪ್ಪನ ತಂದೆ ಹೇಳಿದ್ದಾರೆ.

    ಒಟ್ಟಾರೆ, ಇಡೀ ಪ್ರಕರಣವನ್ನ ಪೊಲೀಸರು ದಿಕ್ಕು ತಪ್ಪಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮುಂದಿನ ದಿನಗಳಲ್ಲಿ ಇದು ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

  • ಶ್ರೀದೇವಿಗೆ ಪ್ರಪೋಸ್ ಮಾಡಬೇಕಿದ್ದ ರಜನಿಕಾಂತ್ – ತಡೆದಿದ್ದು ಯಾವ ಪವರ್?

    ಶ್ರೀದೇವಿಗೆ ಪ್ರಪೋಸ್ ಮಾಡಬೇಕಿದ್ದ ರಜನಿಕಾಂತ್ – ತಡೆದಿದ್ದು ಯಾವ ಪವರ್?

    ಭಾರತೀಯ ಚಿತ್ರರಂಗ ಕಂಡ ಸ್ಟಾರ್ ನಟಿ ಶ್ರೀದೇವಿ. ಅವರ ಸೌಂದರ್ಯ, ಅಭಿನಯ ಚಾತುರ್ಯ ಅದೆಷ್ಟೇ ವರ್ಷಗಳು ಉರುಳಿದರೂ ಮಾಸದ ಸಾಧನೆ. ಶ್ರೀದೇವಿ (Sridevi) ಮರೆಯಾಗಿ ಅನೇಕ ವರ್ಷಗಳೇ ಉರುಳಿಹೋಗಿದೆ. ಹಿಂದಿ ಚಿತ್ರ ನಿರ್ಮಾಪಕ ಬೋನಿ ಕಪೂರ್‌ರನ್ನ (Boney Kapoor) ವಿವಾಹವಾಗಿ ಇಬ್ಬರು ಹೆಣ್ಣುಮಕ್ಕಳ ತಾಯಿಯಾಗಿದ್ದ ಶ್ರೀದೇವಿ ಮಕ್ಕಳನ್ನು ಸಿನಿಮಾರಂಗದಲ್ಲಿ ನೋಡುವ ಮುನ್ನವೇ ಕಣ್ಮುಚ್ಚಿದವರು. ಶ್ರೀದೇವಿ ಇದೀಗ ನೆನಪಷ್ಟೇ. ಆದರೆ ಅವರ ಅಂದ ಚೆಂದ ಸಾಧನೆಗೆ ಕ್ಲೀನ್‌ಬೌಲ್ಡ್‌ ಆಗಿದ್ದವರು ಒಬ್ಬರಿಬ್ಬರಲ್ಲ.

    ಅಪಾರ ಅಭಿಮಾನಿಗಳ ಕನಸಿನ ರಾಣಿಯಾಗಿದ್ದ ಶ್ರೀದೇವಿ ಸೂಪರ್‌ಸ್ಟಾರ್‌ಗಳ ಕನಸಿನ ರಾಣಿಯೂ ಆಗಿದ್ದರು. ಈ ವಿಚಾರವಾಗಿ ಶ್ರೀದೇವಿ ನಿಧನದ ಬಳಿಕ ಹಲವರು ವಿಷಯ ಹೇಳಿಕೊಂಡಿದ್ದುಂಟು. ಇದೀಗ ಇಂಥಹ ಶ್ರೀದೇವಿಗೆ ಖ್ಯಾತ ನಟ ರಜನಿಕಾಂತ್ (Rajinikanth) ಫಿದಾ ಆಗಿದ್ದರು, ಪ್ರಪೋಸ್ ಮಾಡಲು ಇಚ್ಚಿಸಿದ್ದರು ಎಂಬ ಸುದ್ದಿ ವರದಿಯಾಗಿದೆ.

    `ಮುಂಡ್ರು ಮುಡಿಚ್ಚು’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದ ಶ್ರೀದೇವಿಯ ಸದ್ಗುಣ ಅಂದ ಚೆಂದ ನಟನೆಗೆ ಮೆಚ್ಚಿ ರಜನಿಕಾಂತ್ ಮನಸ್ಸಿನಲ್ಲೇ ಪ್ರೀತಿ ಬೆಳೆಸಿಕೊಂಡಿದ್ದರಂತೆ. ಪ್ರಪೋಸ್ ಮಾಡಲು ಒಂದೊಳ್ಳೆ ಸಮಯಕ್ಕಾಗಿ ಕಾದಿದ್ದರಂತೆ. ಹೀಗಿದ್ದಾಗ ಶ್ರೀದೇವಿ ಮನೆ ಗೃಹಪ್ರವೇಶದ ಕಾರ್ಯಕ್ರಮಕ್ಕೆ ರಜನಿಕಾಂತ್‌ರನ್ನ ಆಹ್ವಾನಿಸಿದ್ದರು.

    ಆ ದಿನವೇ ಪ್ರಪೋಸ್ ಮಾಡಿದರೆ ಒಳ್ಳೆಯದು ಎಂದು ರಜನಿಕಾಂತ್ ಸಂಕಲ್ಪ ಮಾಡಿಕೊಂಡು ಹೋಗಿದ್ದರು. ಆದರೆ ರಜನಿಕಾಂತ್ ಮನೆಗೆ ಎಂಟ್ರಿ ಆಗುತ್ತಿದ್ದಂತೆ ವಿದ್ಯುತ್ ಕಟ್ ಆಗಿ ಮನೆಯಲ್ಲಾ ಕತ್ತಲು ಆವರಿಸಿಬಿಟ್ಟಿಡುತ್ತೆ ಆಗ ರಜನಿಕಾಂತ್ ಇದು ಶುಭ ಸೂಚಕವಲ್ಲ ಎಂದುಕೊಂಡು ತಮ್ಮ ಭಾವನೆಯನ್ನ ಅಲ್ಲಿಗೇ ನಿಲ್ಲಿಸಿ ಪ್ರಪೋಸ್ ಮಾಡದೆ ತಮ್ಮ ಮನೆಗೆ ಮರಳಿದ್ದರು. ಇದನ್ನೂ ಓದಿ: ತಮಿಳಿನ ಜನಪ್ರಿಯ ಹಾಸ್ಯನಟ ಮಧನ್ ಬಾಬ್ ನಿಧನ

    ಈ ಘಟನೆಯ ಬಳಿಕ ರಜನಿಕಾಂತ್ ತಮ್ಮ ಸಹನಟಿ ಶ್ರೀದೇವಿ ಕುರಿತು ಯಾವುದೇ ಭಾವನೆಯನ್ನೂ ಮುಂದುವರೆಸದೆ ಪರಿಶುದ್ಧ ಸ್ನೇಹವನ್ನ ಮಾತ್ರ ಇಟ್ಟುಕೊಂಡು ಬಂದಿದ್ದರು. ಹೀಗೆಂದು ಕೆ. ಬಾಲಚಂದರ್ ಸಂದರ್ಶನವೊಂದರಲ್ಲಿ ಹೇಳಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಶ್ರೀದೇವಿ ವಿಚಾರವಾಗಿ ರಜನಿಕಾಂತ್ ಈ ವಿಚಾರವನ್ನ ಎಲ್ಲಿಯೂ ಪ್ರಸ್ತಾಪಿಸಿರಲಿಲ್ಲ. ಅಂದಹಾಗೆ ದಿವಂಗತ ಕೆ ಬಾಲಚಂದರ್ ರಜನಿಕಾಂತ್‌ಗೆ ಸಿನಿಮಾ ಗುರುವಾಗಿದ್ದವರು. ಇದೀಗ ಶ್ರೀದೇವಿ ಕೂಡ ಇಲ್ಲ, ಕೆ ಬಾಲಚಂದರ್ ಕೂಡ ಇಲ್ಲ. ಕಾಲ ಎಲ್ಲವನ್ನೂ ಮರೆಸಿದೆ.

  • ಅಂಗಡಿ ಬಳಿ ಕುಳಿತವನ ಮೇಲೆ ಡೆಡ್ಲಿ ಅಟ್ಯಾಕ್ – ಚಿಕಿತ್ಸೆ ಫಲಿಸದೇ ಯುವಕ ಸಾವು

    ಅಂಗಡಿ ಬಳಿ ಕುಳಿತವನ ಮೇಲೆ ಡೆಡ್ಲಿ ಅಟ್ಯಾಕ್ – ಚಿಕಿತ್ಸೆ ಫಲಿಸದೇ ಯುವಕ ಸಾವು

    – ದಾಳಿಗೆ ಕಾರಣವಾಯ್ತಾ ಲವ್ ಬ್ರೇಕಪ್?

    ಆನೇಕಲ್: ಸ್ನೇಹಿತರ ಜೊತೆ ಮಾತನಾಡುತ್ತಾ ಅಂಗಡಿ ಬಳಿ ಕುಳಿತ್ತಿದ್ದ ಯುವಕನ ಮೇಲೆ ಅಪರಿಚಿತ ಗ್ಯಾಂಗೊಂದು ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಿಸದೇ ಯುವಕ ಮೃತಪಟ್ಟಿರುವ ಘಟನೆ ಆನೇಕಲ್‌ನಲ್ಲಿ (Anekal) ನಡೆದಿದೆ.

    ಆನೇಕಲ್ ಪಟ್ಟಣದ ವಾರ್ಡ್ 9ರ ನಿವಾಸಿ ರವಿಕುಮಾರ್ ಮೃತ ಯುವಕ. ರವಿಕುಮಾರ್ ರಾತ್ರಿ 9:30ರ ಸುಮಾರಿಗೆ ಸ್ನೇಹಿತರ ಜೊತೆ ವಿನಾಯಕ ನಗರ ಸುಂದರ್ ರಾಜ್ ಬಡಾವಣೆಯ ಅಂಗಡಿ ಬಳಿ ಕುಳಿತಿದ್ದ. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ದೊಣ್ಣೆಯಿಂದ ರವಿಕುಮಾರ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಇನ್ಸ್ಟಾದಲ್ಲಿ ಬೆಂಗಳೂರಿಗರ ಬಗ್ಗೆ ನಾಲಗೆ ಹರಿಬಿಟ್ಟ ಒಡಿಶಾ ಯುವತಿ

    ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ರವಿಕುಮಾರ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ರವಿಕುಮಾರ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: Mysuru | ಸಿಡಿಮದ್ದು ಸ್ಫೋಟ – ಮಹಿಳೆಗೆ ಗಾಯ

    ಅಮೆಜಾನ್‌ನಲ್ಲಿ ಕೆಲಸ ಮಾಡುತ್ತಿದ್ದ ರವಿಕುಮಾರ್ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇತ್ತೀಚೆಗೆ ಅವರಿಬ್ಬರಿಗೂ ಬ್ರೇಕಪ್ (Breakup) ಆಗಿತ್ತು. ಇದೇ ವಿಚಾರಕ್ಕೆ ರವಿಕುಮಾರ್ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ತಮ್ಮ ಮತ್ತು ಗ್ಯಾಂಗ್ ದಾಳಿ ನಡೆಸಿ ಸೇಡು ತೀರಿಸಿಕೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ: Bengaluru | ಬಾಗಿಲು ಮುಚ್ಚುವ ವೇಳೆ ಗನ್ ಹಿಡಿದು ಬಂದು ಚಿನ್ನದಂಗಡಿ ದರೋಡೆ

    ಈಗಾಗಲೇ ಘಟನಾ ಸ್ಥಳದಿಂದ ಎಫ್‌ಎಸ್‌ಎಲ್ ತಂಡ ಸಾಕ್ಷ್ಯಾಧಾರಗಳನ್ಮು ಸಂಗ್ರಹಿಸಿದ್ದು, ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರ ತಂಡ ರಚನೆ ಮಾಡಲಾಗಿದೆ. ಶೀಘ್ರ ಆರೋಪಿಗಳ ಬಂಧನ ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ವೆಂಕಟೇಶ್ ಪ್ರಸನ್ನ ಹೇಳಿಕೆ ನೀಡಿದ್ದಾರೆ.

  • 2 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ನೇಣಿಗೆ ಶರಣು

    2 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ನೇಣಿಗೆ ಶರಣು

    ಮಂಡ್ಯ: ಎರಡು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ (Love Marriage) ಗೃಹಿಣಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಪಾಂಡವಪುರ (Pandavapura) ತಾಲೂಕಿನ ಕೆನ್ನಾಳುನಲ್ಲಿ ನಡೆದಿದೆ.

    ಪೂಜಾ (25) ಸಾವಿಗೀಡಾದ ಗೃಹಿಣಿ. ಪೋಷಕರ ವಿರೋಧದ ನಡುವೆಯೂ ಕೆನ್ನಾಳು ಗ್ರಾಮದ ಅಭಿನಂದನ್ ಜೊತೆ ಪೂಜಾ ಮದುವೆಯಾಗಿದ್ದಳು. ಮದುವೆ ಬಳಿಕ ಗಂಡನ ಮನೆಯವರಿಂದ ಕಿರುಕುಳ ನೀಡಿದ್ದಾರೆ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಸೌಮ್ಯ ರೇಪ್ & ಮರ್ಡರ್ ಕೇಸ್ | ಕಣ್ಣೂರು ಸೆಂಟ್ರಲ್ ಜೈಲ್‌ನಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್

    ಗುರುವಾರ ರಾತ್ರಿ ಕೊಲೆ ಮಾಡಿ ನೇಣು ಬಿಗಿದಿದ್ದಾರೆ. ಗಂಡನೇ ಕೊಲೆ ಮಾಡಿ ಈ ಕೃತ್ಯ ಎಸಗಿದ್ದಾನೆ ಎಂದು ಪೂಜಾ ಕುಟುಂಬಸ್ಥರು ದೂರಿದ್ದಾರೆ. ಇದನ್ನೂ ಓದಿ: ಅಂದು ಇಂಡಿಯಾ ಔಟ್ ಇಂದು ಸೇನಾ ಕಚೇರಿಯಲ್ಲೇ ದೊಡ್ಡ ಕಟೌಟ್| ಇದು ಮೋದಿ ಮ್ಯಾಜಿಕ್

    ಪೂಜಾ ಮತಪಟ್ಟ ಬಳಿಕವೂ ಪೊಲೀಸರು ಎಫ್‌ಐಆರ್‌ ದಾಖಲಿಸಿಲ್ಲ. ತಡ ಯಾಕೆ ಮಾಡುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಪೋಷಕರ ಪ್ರತಿಭಟನೆಯ ಬಳಿಕ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

  • ಅವಳ ಮೂಗಿನ ತುದಿ ಕೋಪ ನಂಗಿಷ್ಟ!

    ಅವಳ ಮೂಗಿನ ತುದಿ ಕೋಪ ನಂಗಿಷ್ಟ!

    ದೆಂತ ವಿಚಿತ್ರ! ಎಲ್ಲ್ರೂ ಪ್ರೀತ್ಸೋ ಹುಡುಗಿಯ ನಗು ಇಷ್ಟ.. ಅವಳ ಮುಂಗುರುಳು ಸರಿಸುವಾಗ ಆ ಕುಡಿ ನೋಟ ಇಷ್ಟ ಅಂತ ಬರೆದ್ರೆ ಇವನೇನು ಅವಳ ಕೋಪ ಇಷ್ಟ ಅಂತಾನೇ ಅಂತ ಆಶ್ಚರ್ಯನಾ?! ನಿಜ ನನಗೆ ಅವಳ ಕೋಪ ತುಂಬಾ ಇಷ್ಟ..! ಅದಕ್ಕೆ ಅವಳಿಗೆ ಆಗಾಗ ಬೇಕು ಅಂತಾನೇ ರೇಗಿಸಿ ಬೇಜಾರು ಮಾಡಿ ಸಿಟ್ಟು ಬರೋ ಹಾಗೇ ಮಾಡ್ತೀನಿ! ಆದ್ರೆ ನನಗೆ ಈ ಥರ ಕೋಪ ಬರಿಸೋ ಚಾನ್ಸ್‌ ತುಂಬಾ ಕಡಿಮೆನೇ ಸಿಕ್ಕಿದ್ದು.. ಯಾಕಂದ್ರೆ ಅವಳಿಗೆ ಕೋಪ ಮೂಗಿನ ಮೇಲೆ ಇರ್ತಿತ್ತು..!

    ಹೌದು ಕಣ್ರೀ..! ಎಲ್ಲಾ ಹುಡುಗಿಯರು ತಮ್ಮ ಮೂಗಿಗೆ ಮೂಗು ಬೊಟ್ಟಿಂದ ಅಲಂಕಾರ ಮಾಡ್ಕೊಂಡಿದ್ರೆ.. ಇವಳು ಕೋಪಾನೇ ಮೂಗಿನ ತುದಿಯಲ್ಲಿಟ್ಟುಕೊಂಡು ಅಲಂಕಾರ ಮಾಡ್ಕೊಂಡಿರ್ತಿದ್ಲು! ಅಷ್ಟು ಕೋಪಿಷ್ಟೇ.. ಕೋಪ ಮಾಡ್ಕೊಂಡಾಗೆಲ್ಲ ಅವಳು ಅಷ್ಟೇ ಮುದ್ದಾಗಿ ಸಹ ಕಾಣ್ತಿದ್ಲು… ಆಗೆಲ್ಲ ಅವಳು ರೇಡಿಯೋ ಆಗಿರೋಳು.. ನಾನು ಕೇಳುಗನಾಗಿ ಇರ್ತಿದ್ದೆ..! ಹೇಳಿದ್ದನ್ನೇ ನೂರು ಸಲ ಹೇಳಿ, ಕೊನೆಗೆ ಯಾಕೆ ಸಿಟ್ಟು ಮಾಡ್ಕೊಂಡಿದ್ದೆ ಅಂತ ಕೇಳಿದ್ರೆ ನನಗೆ ಗೊತ್ತಿಲ್ಲ.. ಮರೆತು ಹೋಯ್ತು ಅಂತ ನಗಾಡೋ ಅಷ್ಟು ಹೊತ್ತಿಗೆ ಈ ಕೋಪ ಕರಗಿದೆ ಅನ್ನೋದು ತಿಳಿತಾ ಇತ್ತು. ಇದನ್ನೂ ಓದಿ: ನೀ ʻಅಮೃತʼಧಾರೆ – ಬಾಡಿದ ಹೃದಯಕುಂಡದಲ್ಲಿ ಒಲವರಳಿಸಿದ ಮಳೆ!

    ಆದ್ರೆ ಮತ್ತೆ ಒಂದು ಮಾತು ಹೇಳೋಳು.. ಏನಂಥ ಗೊತ್ತಾ? ನನಗೆ ಯಾಕೆ ಕೋಪ ಬಂತು ಹೇಳು? ನಿನಗೆ ಗೊತ್ತಿಲ್ವಾ? ಆಹಾ.. ನನಗೆ ಸಿಟ್ಟು ಬಂದಿದ್ದು ಯಾಕೆ ಅಂತಯ ನೆನಪಿರಲ್ಲ ಅಲ್ವಾ? ಅಷ್ಟೊಂದು ಮರೆವಾ ನಿನಗೆ? ನನ್ನನ್ನೂ ಮರೆತು ಬಿಡ್ತೀಯ ಬಿಟ್ರೆ ಅಲ್ವಾ? ಹೀಗೆ ಪುಂಡ ಬೆಕ್ಕಿನ ಥರ ಪುಟ್ಟ ಪುಟ್ಟ ಜಗಳ ಅವಳದ್ದು..!

    ಹಾಗಂತ ಅದೆಲ್ಲ ತುಂಬಾ ಸೀರಿಯಸ್‌ ಆದ ವಿಚಾರಗಳೇನೂ ಅಲ್ಲ.. ಆ ಕೋಪಕ್ಕೆ ಕಾರಣಗಳು ಬೇಕಿರಲಿಲ್ಲ,,! ಯಾಕೆ ಸಿಟ್ಟು ಅಂತ ಕೇಳಿದ್ರೆ… ನನಗೆ ನಿನ್ನ ಹತ್ರ ಮಾತ್ರ ಕೋಪ ಮಾಡ್ಬೇಕು, ಸಣ್ಣ ಸಣ್ಣ ವಿಚಾರಕ್ಕೂ ಗಲಾಟೆ ಮಾಡ್ಬೇಕು ಅನ್ಸುತ್ತೆ ಕಣೋ..! ನನ್ನ ಸಿಟ್ಟು.. ನನ್ನ ಇಷ್ಟ..! ಸಿಟ್ಟು ಮಾಡ್ಕಳ್ಳೋಕು ನಾನು ನಿನ್ನ ಕೇಳ್ಬೇಕಾ..? ನಿನ್‌ ಹತ್ರ ಮಾತ್ರ ನಾನು ಚಿಕ್ಕವಳ ಥರ ಆಡ್ಬೇಕು.. ಹಠ ಮಾಡ್ಬೇಕು.. ಸಿಟ್ಟು ಮಾಡ್ಬೇಕು ಅನ್ಸುತ್ತೆ ಗೋಪಾಲ… ಯಾಕೆ ಅಂತ ನೀನೇ ಹೇಳು? ಅವಳ ಪ್ರಶ್ನೆಗೆ ನನಗೂ ಉತ್ತರ ಇರಲಿಲ್ಲ.. ಅದಕ್ಕೆ.. ಅಷ್ಟೇ ತಾನೇ, ನಿನಗೆ ಏನು ಅನ್ಸತ್ತೋ ಹಾಗೆ ಇರು ಪುಟ್ಟ ಅಂತ ಹೇಳ್ಬಿಡ್ತಿದ್ದೆ..! ಇದನ್ನೂ ಓದಿ: ಎದೆಯ ರೇಡಿಯೋದಲ್ಲಿ ಅವಳ ಹಾಡು ಇನ್ನೂ ಮುಗಿದಿಲ್ಲ!

    ಒಮ್ಮೊಮ್ಮೆ ಅನ್ಸೋದು.. ಹೌದಲ್ವಾ ಅವಳು ಪ್ರೀತಿ ಆದ್ರೂ, ಕೋಪ ಆದ್ರೂ ಯಾರನ್ನ ಮಾಡ್ತಾಳೆ.. ನನ್ನ ಬಿಟ್ರೆ ಯಾರಿದಾರೆ ಅವಳಿಗೆ ಅಂತ ತುಂಬಾ ಸಲುಗೆ ಕೊಟ್ಟೆ.. ಅವಳು ಅಷ್ಟೇ ಮಗು ಅಮ್ಮನ ಹತ್ರ ಹಠ ಮಾಡಿದ ಹಾಗೆ ಹಠ ಮಾಡ್ಕೊಂಡು.. ನನ್ನನ್ನೇ ಪ್ರಪಂಚ ಅಂದ್ಕೊಂಡಿದ್ಲು… ಇದೆಲ್ಲ ಸುಮಾರು ಆರೇಳು ವರ್ಷಗಳ ಹಿಂದಿನ ಕತೆ.. ಮೊನ್ನೆ ಮೊನ್ನೆ ಮತ್ತೆ ಸಿಕ್ಕಿದ್ಲು. ದೂರಾಗಿ ಇಷ್ಟು ವರ್ಷ ಆದ್ಮೇಲೂ, ಅದೇ ಕೋಪ.. ಅದೇ ಕಣ್ಣು ಹಾಗೇ..! ಮತ್ತೆ ನಿನ್ನ ಹತ್ರ ಸಿಟ್ಟು ಮಾಡ್ಬೇಕು ಅನ್ನಿಸ್ತಿದೆ ಮಾಡ್ಲಾ? ಹ್ಞೂಂ ಅಂದೆ.. ಅವಳಿಗೆ ಅಳುನೇ ಬಂದು ಹೋಯ್ತು..!

    ಅವಳಿಗೆ ಅವತ್ತು ಯಾಕೆ ಅಳು ಬಂತೋ ಗೊತ್ತಿಲ್ಲ.. ಆದ್ರೆ.. ಇವತ್ತಿಗೂ ಅದೇ ಪ್ರೀತಿ ಅವಳ ಮನಸ್ಸಲ್ಲಿ ಇದೆ.. ಈ ‘ಸುರಗಿ’ ಮರದಿಂದ ಉದುರಿದ ಮೇಲೂ ವರ್ಷಾನೂಗಟ್ಟಲೇ ಅದರ ಘಮ ಉಳಿಯುವ ಹಾಗೆ..! ಹೌದು.. ಅದ್ಯಾವ ಕಾರಣಕ್ಕೆ ನಾವು ದೂರ ಆದ್ವಿ ಅಂತ ಗೊತ್ತಿಲ್ಲ. ಇಬ್ಬರ ಹೃದಯದಲ್ಲೂ ಇವತ್ತಿಗೂ ಅದೇ ಪ್ರೇಮದ ಘಮ ಇದೆ. ನನಗೆ ಅವಳ ಕೋಪದಲ್ಲಿ ಕಂಡಿದ್ದು ಪ್ರೇಮದ ಘಮ.. ಆ ಕೋಪ ಮತ್ತೆ ನನ್ನ ಮೇಲೆ ಪ್ರಯೋಗ ಮಾಡ್ಬೇಕು ಅವಳು. ಪುಟ್ಟ ಮಗು ತನ್ನ ಸಿಟ್ಟನ್ನ ತನ್ನ ಅಮ್ಮನ ಮೇಲೆ ತೋರಿಸೋ ಹಾಗೆ, ಅದನ್ನ ನಾನು ತಾಯಿಯಾಗಿ ಸಂಭ್ರಮಿಸಬೇಕು..!

    ಪ್ರೀತಿ ಅಂದ್ರೆ ಹೀಗೆ ಅಲ್ವಾ..? ನನಗೆ ಏನು ಬೇಕೋ ಅದನ್ನ ಹುಡುಕಿ ಸಂಭ್ರಮಿಸೋದಲ್ಲ. ನಮಗೆ ಸಿಕ್ಕ ಪ್ರೀತಿಯಲ್ಲಿ ಏನಿದಿಯೋ ಅದನ್ನೇ ಹೃದಯಕ್ಕೆ ಇಳಿಸಿಕೊಳ್ಳೋದು.. ಅದ್ಕೆ ಇರಬೇಕು ನನಗೆ ಅವಳ ಮುದ್ದು ಕೋಪ ಇಷ್ಟ ಆಗಿದ್ದು. ಇದನ್ನೂ ಓದಿ: ನಾನು ಹೋಗು ಅಂದ ತಕ್ಷಣ ನನ್ನ ಬಿಟ್ಟು ಹೋಗ್ಬಿಟ್ಟೆ ಅಲ್ವಾ.. ನಿನಗೆ ಅದೇ ಬೇಕಿತ್ತೇನೋ..?

    ಅವಳ ಕೋಪಕ್ಕೊಂದು ಮಾಧುರ್ಯ ಇತ್ತು. ಆ ಕೋಪದಲ್ಲಿ ಅವಳ ನಾಚಿಕೆ ಇತ್ತು. ಮಲ್ಲಿಗೆ ಕನಕಾಂಬರದ ಮಿಶ್ರಣದ ಬಣ್ಣ.. ಸುಗಂಧ ರಾಜನ ಘಮ ಎಲ್ಲವೂ ಇತ್ತು. ಅದೆಲ್ಲ ಮೀರಿದ ವಾತ್ಸಲ್ಯ ಇತ್ತು. ಒಮ್ಮೊಮ್ಮೆ ಅವಳು ಹೇಳ್ತಿದ್ಲು, ನಾನು ಕೋಪ ಮಾಡ್ಕೋತಿನಿ.. ನೀನು ನನ್ನ ಮುದ್ದು ಮುದ್ದು ಮಾತಾಡಿ ಸಮಾಧಾನ ಮಾಡ್ಬೇಕು ಅಂತ. ನಾನು ಸಮಾಧಾನ ಮಾಡ್ಬೇಕು ಅಂತಾನೇ ಕೋಪ ಮಾಡ್ಕೊಳ್ಳೋಳು..! ಅದೊಂಥರ ಕೋಪದ ಚೆಂದದ ಆಟ ಅವಳಿಗೆ..! ಆ ಕೋಪದ ಕೆಂಪು ಮೂಗಿಗೆ ಇಂದು ಹುಟ್ಟುಹಬ್ಬದ ಸಂಭ್ರಮ.. ಇದನ್ನ ಓದಿ, ಆ ಸಂಭ್ರಮದಲ್ಲಿ ಚೂರಾದ್ರೂ ಅಳ್ಬೇಕು ಅಂತ ಇಷ್ಟೆಲ್ಲ ನೆನಪನ್ನ ಬರೆದೆ..!!

    – ಗೋಪಾಲಕೃಷ್ಣ

  • ಬಾಲಕಿಗೆ ಪಾಗಲ್‌ ಪ್ರೇಮಿ ಲವ್‌ ಟಾರ್ಚರ್‌ – ಜನರ ಎದುರೇ ಹುಡುಗಿ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ

    ಬಾಲಕಿಗೆ ಪಾಗಲ್‌ ಪ್ರೇಮಿ ಲವ್‌ ಟಾರ್ಚರ್‌ – ಜನರ ಎದುರೇ ಹುಡುಗಿ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ

    ಮುಂಬೈ: ಇಲ್ಲೊಬ್ಬ ಪಾಗಲ್ ಪ್ರೇಮಿ (Jilted Lover) ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿ ಪ್ರೀತಿಸುವಂತೆ ಬೆದರಿಕೆ ಹಾಕಿ, ಹಲ್ಲೆ ಮಾಡಿರುವ ಘಟನೆ ನಡೆದಿದೆ.

    ಮಹಾರಾಷ್ಟ್ರದ (Maharashtra) ಸತಾರಾ (Satara) ನಗರದ ಕರಂಜೆ ಪ್ರದೇಶದ ಶಾಲೆಯಲ್ಲಿ ಅಪ್ರಾಪ್ತ ಬಾಲಕಿ 10ನೇ ತರಗತಿ ಓದುತ್ತಿದ್ದಳು. ಆಕೆಯ ಹಿಂದೆ ಬಿದ್ದಿದ್ದ ಈ ಯುವಕ ಪ್ರೀತಿಸುವಂತೆ ಪೀಡಿಸುತ್ತಿದ್ದ. ಬಾಲಕಿ ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ಆಕೆಯನ್ನು ತಡೆದು ಪ್ರೀತಿಸುವಂತೆ ಕೇಳಿದ್ದಾನೆ. ಆಕೆ ನಿರಾಕರಿಸಿದ ನಂತರ ಚಾಕು ತೋರಿಸಿ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ಪಾಟ್ನಾ | ಐಸಿಯುಗೆ ನುಗ್ಗಿ ಗ್ಯಾಂಗ್‌ಸ್ಟರ್ ಹತ್ಯೆ – ಇಬ್ಬರು ಆರೋಪಿಗಳ ಮೇಲೆ ಫೈರಿಂಗ್

    ಬಾಲಕಿ ಬೇಡಿಕೊಂಡರೂ ಬಿಡದೆ, ಚಾಕು ತೋರಿಸುವ ವಿಡಿಯೋ ವೈರಲ್ ಆಗಿದೆ. ಬಾಲಕಿ ಪೋಷಕರು ಕೂಡ ಯುವಕನಿಗೆ ಬುದ್ಧಿ ಹೇಳಲು ಯತ್ನಿಸಿದ್ದಾರೆ. ನನ್ನ ಮಗಳನ್ನು ಬಿಡು ಎಂದು ಬೇಡಿಕೊಳ್ಳುತ್ತಿದ್ದರೂ ಯುವಕ ಚಾಕು ಕೈಯಲ್ಲಿ ಹಿಡಿದು ಕೊಲ್ಲುವ ಬೆದರಿಕೆ ಹಾಕಿದ್ದಾನೆ.

    ಇದೇ ವೇಳೆ ಅಲ್ಲೇ ಇದ್ದ ಸ್ಥಳೀಯರೂ ಕೂಡ ಯುವಕನನ್ನು ತಡೆಯಲು ಸಾಕಷ್ಟು ಯತ್ನಿಸಿದ್ದಾರೆ. ಹಿಂದಿನಿಂದ ಬಂದ ಸ್ಥಳೀಯರೊಬ್ಬರೂ ಕೊನೆಗೂ ಆ ಯುವಕನ ಕೈಯಿಂದ ಚಾಕು ಕಸಿದು ಬಾಲಕಿಯನ್ನು ರಕ್ಷಿಸಿದ್ದಾರೆ. ಸ್ಥಳೀಯರ ಚಾಕಚಕ್ಯತೆಯಿಂದ ಬಾಲಕಿ ಪ್ರಾಣ ಉಳಿದಿದೆ. ಇದನ್ನೂ ಓದಿ: ಬಾಂಗ್ಲಾದೇಶದ ವಾಯುಪಡೆ ವಿಮಾನ ದುರಂತ – ಸಾವಿನ ಸಂಖ್ಯೆ 27ಕ್ಕೆ ಏರಿಕೆ

    ಹುಡುಗಿಯನ್ನು ರಕ್ಷಿಸಿದ ನಂತರ ಕೋಪಗೊಂಡ ಜನರ ಗುಂಪು ಪಾಗಲ್‌ ಪ್ರೇಮಿ ಮೇಲೆ ಹಲ್ಲೆ ನಡೆಸಿತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಜನರಿಂದ ಯುವಕನನ್ನು ರಕ್ಷಿಸಿದರು. ನಂತರ ಆತನನ್ನು ಶಾಹುಪುರಿ ಪೊಲೀಸ್‌ ಠಾಣೆಗೆ ಕರೆದೊಯ್ಯಲಾಯಿತು.

  • ಇನ್ಸ್ಟಾದಲ್ಲಿ ಆಂಟಿಗೆ ಪ್ರೀತಿಸುವಂತೆ ಟಾರ್ಚರ್ – ಬುದ್ಧಿ ಹೇಳೋಕೆ ಬಂದವನ ಕತ್ತು ಕೊಯ್ದ ಪಾಗಲ್ ಪ್ರೇಮಿ!

    ಇನ್ಸ್ಟಾದಲ್ಲಿ ಆಂಟಿಗೆ ಪ್ರೀತಿಸುವಂತೆ ಟಾರ್ಚರ್ – ಬುದ್ಧಿ ಹೇಳೋಕೆ ಬಂದವನ ಕತ್ತು ಕೊಯ್ದ ಪಾಗಲ್ ಪ್ರೇಮಿ!

    – ಚಲಿಸುತ್ತಿದ್ದ ಬೈಕ್‌ನಲ್ಲೇ ಹತ್ಯೆಗೆ ಯತ್ನ

    ಬೆಂಗಳೂರು: ಇನ್ಸ್ಟಾಗ್ರಾಮ್‍ನಲ್ಲಿ ಪರಿಚಯವಾಗಿದ್ದ ವಿವಾಹಿತ ಮಹಿಳೆಗೆ ಪ್ರೀತಿಸುವಂತೆ (Love) ಟಾರ್ಚರ್ ಕೊಡುತ್ತಿದ್ದ ಯುವಕನಿಗೆ ಬುದ್ಧಿ ಹೇಳಲು ಬಂದಿದ್ದಕ್ಕೆ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಘಟನೆ ಹೆಚ್‍ಎಎಲ್‍ನಲ್ಲಿ ನಡೆದಿದೆ.

    ಇನ್ಸ್ಟಾದಲ್ಲಿ ಪರಿಚಯವಾಗಿದ್ದ ಮಹಿಳೆಗೆ ತಮಿಳುನಾಡು ತಿರಪ್ಪತ್ತೂರು ಮೂಲದ ಯುವಕ ಸೆಲ್ವ ಕಾರ್ತಿಕ್ ಪ್ರೀತಿಸುವಂತೆ ಪೀಡಿಸುತ್ತಿದ್ದ. ಇದೇ ವಿಚಾರಕ್ಕೆ ಯುವಕನನ್ನು ಮಾತನಾಡಲು ಹೆಚ್‍ಎಎಲ್ (HAL) ಬಳಿ ಬರಲು ಮಹಿಳೆಯ ತಂದೆ ಹಾಗೂ ಸಂಬಂಧಿಯೊಬ್ಬರು ಹೇಳಿದ್ದರು. ಈ ವೇಳೆ ಆರೋಪಿ ಕೊಲೆಗೆ ಯತ್ನಿಸಿದ್ದಾನೆ. ಇದನ್ನೂ ಓದಿ: ಕೋಲ್ಕತ್ತಾ | ಬಾಯ್ಸ್ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್ ಕೇಸ್ – ಆರೋಪಿಗೆ ಜಾಮೀನು

    ಮಾತುಕತೆಗೆ ಕರೆಸಿದ್ದ ಮಹಿಳೆ ತಂದೆ ಹಾಗೂ ಸಂಬಂಧಿ, ಕಾರ್ತಿಕ್‍ನನ್ನು ಬೈಕ್‍ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದರು. ಈ ವೇಳೆ, ಚಲಿಸುತ್ತಿದ್ದ ಬೈಕ್‍ನಲ್ಲಿಯೇ ಆರೋಪಿ, ಸತೀಶ್ ಎಂಬವರ ಕುತ್ತಿಗೆ ಕೊಯ್ದು ಹತ್ಯೆಗೆ ಯತ್ನಿಸಿದ್ದಾನೆ.

    ಗಾಯಾಳುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ 17ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಬಂಧಿಸಿರುವ ಹೆಚ್‍ಎಎಲ್ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಒಂದೇ ವಧುವನ್ನು ಮದುವೆಯಾದ ಸಹೋದರರು!