Tag: lovely star prem

  • ಬರ್ತ್‌ಡೇ ಖುಷಿಯಲ್ಲಿದ್ದ ಲವ್ಲಿ ಸ್ಟಾರ್ ಪ್ರೇಮ್‌ಗೆ ಶಾಕ್ ಕೊಟ್ಟ ನಿರ್ಮಾಪಕಿ

    ಬರ್ತ್‌ಡೇ ಖುಷಿಯಲ್ಲಿದ್ದ ಲವ್ಲಿ ಸ್ಟಾರ್ ಪ್ರೇಮ್‌ಗೆ ಶಾಕ್ ಕೊಟ್ಟ ನಿರ್ಮಾಪಕಿ

    ವ್ಲಿ ಸ್ಟಾರ್ ಪ್ರೇಮ್‌ಗೆ (Lovely Star Prem) ಇಂದು (ಏ.18) ಹುಟ್ಟುಹಬ್ಬದ ಸಂಭ್ರಮ. ಆದರೆ ಬರ್ತ್‌ಡೇ ಖುಷಿಯಲ್ಲಿದ್ದ ನಟನ ವಿರುದ್ಧ ನಿರ್ಮಾಪಕಿ ಶ್ರುತಿ ನಾಯ್ಡು (Shruti Naidu) ಗರಂ ಆಗಿದ್ದಾರೆ. ಪ್ರೇಮ್ ವಿರುದ್ಧ ಕಾನೂನು ಸಮರಕ್ಕೆ ನಿಂತಿದ್ದಾರೆ. ಇದನ್ನೂ ಓದಿ:ಉಪ್ಪಿ ಅಣ್ಣನ ಮಗನ ಸಿನಿಮಾದಲ್ಲಿ ಲವ್ಲಿ ಸ್ಟಾರ್‌- ‘ಸ್ಪಾರ್ಕ್‌’ನಲ್ಲಿ ನೆನಪಿರಲಿ ಪ್ರೇಮ್

    ನಟನ ಹುಟ್ಟುಹಬ್ಬದ ಹಿನ್ನೆಲೆ ಇಂದು ‘ಸ್ಪಾರ್ಕ್’ (Spark Film) ಚಿತ್ರತಂಡ ವಿಶೇಷವಾಗಿ ಪ್ರೇಮ್ ಪಾತ್ರದ ಪೋಸ್ಟರ್ ಅನ್ನು ರಿವೀಲ್ ಮಾಡಿತ್ತು. ಆ ಪೋಸ್ಟರ್‌ನಲ್ಲಿ ರಮೇಶ್ ಇಂದಿರಾ ಅವರ ಫೋಟೋವನ್ನು ಸಿಗಾರ್‌ನಿಂದ ಪ್ರೇಮ್ ಸುಡುತ್ತಿರುವಂತೆ ಡಿಸೈನ್ ಮಾಡಲಾಗಿತ್ತು. ಆದರೆ ಆ ರಮೇಶ್ ಇಂದಿರಾ ನಟಿಸಿದ್ದ ‘ಭೀಮ’ ಸಿನಿಮಾದಾಗಿತ್ತು. ಅನುಮತಿ ಪಡೆಯದೇ ರಮೇಶ್ ಇಂದಿರಾ ಅವರ ಫೋಟೋ ಬಳಸಿದ್ದಕ್ಕೆ ಪ್ರೇಮ್ ಮತ್ತು ಚಿತ್ರತಂದ ವಿರುದ್ಧ ಶ್ರುತಿ ನಾಯ್ಡು ಗರಂ ಆಗಿದ್ದಾರೆ. ಇದನ್ನೂ ಓದಿ:‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರಕ್ಕಾಗಿ ಒಂದಾದ ‘ಬ್ಲಿಂಕ್’ ಮತ್ತು ‘ಶಾಖಾಹಾರಿ’ ನಿರ್ಮಾಪಕರು

    ಆ ಪೋಸ್ಟರ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಶ್ರುತಿ ನಾಯ್ಡು, ಈ ಚಿತ್ರತಂಡದವರು ಅನೈತಿಕವಾಗಿ ನಡೆದುಕೊಂಡಿದ್ದಾರೆ. ಪೋಸ್ಟರ್‌ನಲ್ಲಿರುವ ಈ ಚಿತ್ರವನ್ನು ನಟನ ಅನುಮತಿ ಪಡೆಯದೇ ಪೋಸ್ಟ್ ಮಾಡಿದ್ದಾರೆ. ನಟ ಹಿಡಿದುಕೊಂಡ ಪೋಸ್ಟರ್‌ನಲ್ಲಿ ಬಳಸಲಾದ ಈ ಚಿತ್ರವು ರಮೇಶ್ ಇಂದಿರಾ ಅವರು ರಾಜಕಾರಣಿಯ ಪಾತ್ರವನ್ನು ನಿರ್ವಹಿಸಿದ ‘ಭೀಮ’ ಚಿತ್ರದ್ದು. ಅದರಲ್ಲಿರೋ ಫೋಟೋವನ್ನು ಭೀಮ ಚಿತ್ರಕ್ಕಾಗಿ ತೆಗೆದುಕೊಳ್ಳಲಾಗಿತ್ತು. ಆದರೆ ಈ ಫೋಟೋವನ್ನು ಅನುಮತಿ ಇಲ್ಲದೇ ಬಳಸಿಕೊಂಡಿದ್ದಾರೆ. ರಮೇಶ್ ಇಂದಿರಾ ಪರವಾಗಿ ಈ ಚಿತ್ರ ತಂಡ ಮತ್ತು ನಟನಿಗೆ ಕಾನೂನು ನೋಟಿಸ್ ಕಳುಹಿಸುತ್ತೇನೆ ಬರೆದುಕೊಂಡಿದ್ದಾರೆ. ಚಿತ್ರತಂಡ ಈ ನಡೆ ಶ್ರುತಿ ನಾಯ್ಡು ಮುನಿಸಿಗೆ ಕಾರಣವಾಗಿದೆ.

    ಶ್ರುತಿ ನಾಯ್ಡು ಹಂಚಿಕೊಂಡಿರುವ ಪೋಸ್ಟ್‌ಗೆ ಚಿತ್ರತಂಡದವರಾಗಲಿ ಅಥವಾ ನಟನಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ವಿಚಾರಕ್ಕೆ ಯಾವ ರೀತಿಯ ಪ್ರತಿಕ್ರಿಯೆ ನೀಡ್ತಾರೆ ಎಂಬುದುನ್ನು ಕಾದುನೋಡಬೇಕಿದೆ.

  • ಉಪ್ಪಿ ಅಣ್ಣನ ಮಗನ ಸಿನಿಮಾದಲ್ಲಿ ಲವ್ಲಿ ಸ್ಟಾರ್‌- ‘ಸ್ಪಾರ್ಕ್‌’ನಲ್ಲಿ ನೆನಪಿರಲಿ ಪ್ರೇಮ್

    ಉಪ್ಪಿ ಅಣ್ಣನ ಮಗನ ಸಿನಿಮಾದಲ್ಲಿ ಲವ್ಲಿ ಸ್ಟಾರ್‌- ‘ಸ್ಪಾರ್ಕ್‌’ನಲ್ಲಿ ನೆನಪಿರಲಿ ಪ್ರೇಮ್

    ನೆನಪಿರಲಿ ಪ್ರೇಮ್‌ (Nenapirali Prem) ಪಾತ್ರಗಳ ಆಯ್ಕೆಯಲ್ಲಿ ವಿಭಿನ್ನವಾಗಿ ಕಾಣಿಸ್ತಾರೆ. ಬರೋ ಎಲ್ಲಾ ಪಾತ್ರಗಳನ್ನೂ ಅವರು ಒಪ್ಪಿಕೊಳ್ಳುವುದಿಲ್ಲ. ಅಳೆದು ತೂಗಿ ಪ್ರೇಕ್ಷಕರಿಗೆ ಇಷ್ಟವಾಗುವ ಸಿನಿಮಾಗಳನ್ನೇ ಮಾಡುತ್ತಾ ಬಂದಿದ್ದಾರೆ. ಈಗ ಪ್ರೇಮ್‌ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ರಿಯಲ್‌ ಸ್ಟಾರ್‌ ಉಪೇಂದ್ರ (Upendra) ಅಣ್ಣನ ಮಗನ ನಿರಂಜನ್‌ ಸುಧೀಂದ್ರ (Niranjan Sudhindra) ನಾಯಕನಾಗಿ ನಟಿಸುತ್ತಿರುವ ‘ಸ್ಪಾರ್ಕ್‌ ಚಿತ್ರಕ್ಕೆ ಅವರು ಎಂಟ್ರಿ ಕೊಟ್ಟಿದ್ದಾರೆ. ಇಂದು (ಏ.18) ಪ್ರೇಮ್‌ ಬರ್ತ್‌ಡೇ ಹಿನ್ನೆಲೆ ಅವರ ಪಾತ್ರದ ಲುಕ್‌ ಅನ್ನು ಚಿತ್ರತಂಡ ರಿವೀಲ್ ಮಾಡಿದೆ.

    ‘ಸ್ಪಾರ್ಕ್‌’ (Spark) ಚಿತ್ರದಲ್ಲಿ ನಿರಂಜನ್‌ ಹೀರೋ ಆಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಒಂದು ವಿಶಿಷ್ಟ ಪಾತ್ರದಲ್ಲಿ ನೆನಪಿರಲಿ ಪ್ರೇಮ್ ಕಾಣಿಸಿಕೊಳ್ಳುತ್ತಿದ್ದಾರೆ. ನಿರ್ದೇಶಕ ಮಹಾಂತೇಶ್ ಹಂದ್ರಾಳ್ ಲವ್ಲಿ ಸ್ಟಾರ್‌ ಗೊಂದು ಸ್ಪೆಷಲ್‌ ಪಾತ್ರ ಡಿಸೈನ್‌ ಮಾಡಿದ್ದಾರೆ. ಹಿಂದೆಂದೂ ಕಾಣದ ಲುಕ್‌ ನಲ್ಲಿ ಪ್ರೇಮ್‌ ನಿಮಗೆ ಕಾಣಿಸ್ತಾರೆ. ಸ್ಪೆಷಲ್‌ ಪಾತ್ರವನ್ನು ಅವರಿಗಾಗಿ ಮಹಾಂತೇಶ್‌ ಎಣೆದಿದ್ದು, ಹೀಗಾಗಿ ಪ್ರೇಮ್‌ ಕೂಡ ಇಷ್ಟಪಟ್ಟು ಚಿತ್ರ ಮಾಡಲು ಮುಂದಾಗಿದ್ದಾರೆ. ತಮ್ಮ ಇಷ್ಟುವರ್ಷದ ಪಯಣದ ಅನುಭವಗಳನ್ನು ಇಟ್ಟುಕೊಂಡು ನಿರ್ದೇಶಕ ಮಹಾಂತೇಶ್ ಹಂದ್ರಾಳ್ ಎಲ್ಲರ ಪಾತ್ರಗಳನ್ನು ವಿಶೇಷವಾಗಿ ರೂಪಿಸಿದ್ದಾರೆ. ಇದನ್ನೂ ಓದಿ:‘ಜಾಟ್’ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ – ಸನ್ನಿ ಡಿಯೋಲ್ ಸೇರಿ 7 ಮಂದಿ ವಿರುದ್ಧ FIR

    ಜೇಮ್ಸ್, ಭರಾಟೆ, ಕನಕ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೋ ಡೈರೆಕ್ಟರ್ ಆಗಿ ದುಡಿದಿರುವ ಡಿ.ಮಹಾಂತೇಶ್ ಹಂದ್ರಾಳ್ ‘ಸ್ಪಾರ್ಕ್‌’ ಮೂಲಕ ಡೈರೆಕ್ಟರ್‌ ಕ್ಯಾಪ್‌ ತೊಟ್ಟಿದ್ದಾರೆ. ಚಿತ್ರದಲ್ಲಿ ನಿರಂಜನ್ ಸುಧೀಂದ್ರ ಪತ್ರಕರ್ತನಾಗಿ ನಟಿಸುತ್ತಿದ್ದಾರೆ. ನಾಯಕಿಯಾಗಿ ರಚನಾ ಇಂದರ್ (Rachana Inder) ಅಭಿನಯಿಸುತ್ತಿದ್ದಾರೆ. ಇದನ್ನೂ ಓದಿ: ರಾಕೇಶ್ ಅಡಿಗ ನಟನೆಯ ‘ನಾನು ಮತ್ತು ಗುಂಡ 2’ ಟೀಸರ್ ಔಟ್

    ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸ್ಪಾರ್ಕ್‌ ಚಿತ್ರ ಡಾ.ಗರಿಮಾ ಅವಿನಾಶ್ ವಸಿಷ್ಠ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅಶ್ವಿನ್ ಕೆನಡಿ ಛಾಯಾಗ್ರಹಣ, ಸಚಿನ್ ಬಸ್ರೂರ್ ಸಂಗೀತ‌ ನಿರ್ದೇಶನ, ಮಧು ಸಂಕಲನ ಈ ಚಿತ್ರಕ್ಕಿದೆ. ಸದ್ಯ ‘ಸ್ಪಾರ್ಕ್‌’ ಶೂಟಿಂಗ್‌ ಭರದಿಂದ ಸಾಗುತ್ತಿದೆ.

  • ಲವ್ಲಿ ಸ್ಟಾರ್ ಪ್ರೇಮ್‌ಗೆ ಶರಣ್ಯಾ ಶೆಟ್ಟಿ ನಾಯಕಿ

    ಲವ್ಲಿ ಸ್ಟಾರ್ ಪ್ರೇಮ್‌ಗೆ ಶರಣ್ಯಾ ಶೆಟ್ಟಿ ನಾಯಕಿ

    ‘ಕೃಷ್ಣಂ ಪ್ರಣಯ ಸಖಿ’ (Krishnam Pranaya Sakhi) ಸಿನಿಮಾದ ಸಕ್ಸಸ್ ಬಳಿಕ ಕನ್ನಡದ ಮತ್ತೊಂದು ಬಿಗ್ ಪ್ರಾಜೆಕ್ಟ್‌ಗೆ ಕುಡ್ಲದ ಬೆಡಗಿ ಶರಣ್ಯಾ ಶೆಟ್ಟಿ ಆಯ್ಕೆಯಾಗಿದ್ದಾರೆ. ಲವ್ಲಿ ಸ್ಟಾರ್ ಪ್ರೇಮ್‌ಗೆ (Lovely Star Prem) ಹೊಸ ಸಿನಿಮಾಗೆ ಶರಣ್ಯಾ ಹೀರೋಯಿನ್ ಆಗಿದ್ದಾರೆ. ಇದನ್ನೂ ಓದಿ:‘ದೋಸ್ತಾ ನೀ ಮಸ್ತಾ’: ಗೆಳೆಯನ ಗೆಲುವುವನ್ನು ಸಂಭ್ರಮಿಸಿದ ಧನರಾಜ್ ಆಚಾರ್

    ನೆನಪಿರಲಿ ಪ್ರೇಮ್ ನಟಿಸುತ್ತಿರುವ ಹೊಸ ಚಿತ್ರಕ್ಕೆ ಶರಣ್ಯಾ (Sharanya Shetty) ಸೆಲೆಕ್ಟ್ ಆಗಿದ್ದು, ಅವರು ಲೀಡ್‌ ರೋಲ್‌ನಲ್ಲಿ ನಟಿಸುತ್ತಿದ್ದಾರೆ. ಪವರ್‌ಫುಲ್ ಪಾತ್ರದಲ್ಲಿ ನಟಿ ಕಾಣಿಸಿಕೊಳ್ತಿದ್ದಾರೆ.

    ಇನ್ನೂ ಈ ಸಿನಿಮಾದ ಜೊತೆಗೆ ತೆಲುಗಿನಲ್ಲಿ ಚಿತ್ರವೊಂದಕ್ಕೆ ಶರಣ್ಯಾ ಆಯ್ಕೆಯಾಗಿದ್ದಾರೆ. ಇಬ್ಬರೂ ಸ್ಟಾರ್ ನಟರಿರುವ ಸಿನಿಮಾ ಅವರು ನಾಯಕಿಯಾಗಿದ್ದು, ಈ ಚಿತ್ರದ ಕುರಿತು ಮತ್ತಷ್ಟು ವಿವರ ಇನ್ನೂ ರಿವೀಲ್ ಆಗಬೇಕಿದೆ.

    ಇನ್ನೂ ‘ಗಟ್ಟಿಮೇಳ’ (Gattimela) ಸೀರಿಯಲ್ ಮೂಲಕ ಕಿರುತೆರೆಯಲ್ಲಿ ಹೆಸರು ಮಾಡಿದ್ದ ಚೆಲುವೆ ಆ ನಂತರ 1980, ನಗುವಿನ ಹೂಗಳೇ, ಫಾರೆಸ್ಟ್ ಸಿನಿಮಾಗಳಲ್ಲಿ ನಟಿಸಿದ್ದರು. ಆದರೆ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೊತೆಯಾಗಿ ನಟಿಸಿ ಸೈ ಎನಿಸಿಕೊಂಡರು. ಈ ಚಿತ್ರ ಅವರಿಗೆ ಬಿಗ್ ಬ್ರೇಕ್ ಕೊಟ್ಟಿದೆ.

  • ಇಂಡಸ್ಟ್ರಿಗೆ ದರ್ಶನ್ ಕಾಂಟ್ರಿಬ್ಯೂಷನ್ ತುಂಬಾ ಇದೆ: ನಟ ಪ್ರೇಮ್

    ಇಂಡಸ್ಟ್ರಿಗೆ ದರ್ಶನ್ ಕಾಂಟ್ರಿಬ್ಯೂಷನ್ ತುಂಬಾ ಇದೆ: ನಟ ಪ್ರೇಮ್

    ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿರುವ ದರ್ಶನ್ ಬಗ್ಗೆ ನಟ ಪ್ರೇಮ್ (Nenapirali Prem) ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರರಂಗಕ್ಕೆ ದರ್ಶನ್ (Darshan) ಕಾಂಟ್ರಿಬ್ಯೂಷನ್ ತುಂಬಾ ಇದೆ ಎಂದು ನೆನಪಿರಲಿ ಪ್ರೇಮ್ ಮಾತನಾಡಿದ್ದಾರೆ. ಇದನ್ನೂ ಓದಿ:ದರ್ಶನ್‌ ನೋಡಲು ಬಳ್ಳಾರಿ ಜೈಲಿಗೆ ಬಂದ ವಿಜಯಲಕ್ಷ್ಮಿ

    ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಈ ಪ್ರಕರಣದಿಂದ ದರ್ಶನ್ ಬೇಗ ಆಚೆ ಬರಲಿ ಎಂದಿದ್ದಾರೆ. ಇಂಡಸ್ಟ್ರಿಗೆ ದರ್ಶನ್ ಅವರ ಕಾಂಟ್ರಿಬ್ಯೂಷನ್ ತುಂಬಾ ಇದೆ. ಅವರ ಮೇಲೆ ನಿರ್ಮಾಪಕರು ಕೋಟ್ಯಂತರ ರೂಪಾಯಿ ಅವರ ಬಂಡವಾಳ ಹೂಡಿದ್ದಾರೆ. ಅವರಿಂದ ಇನ್ನೂ ಚಿತ್ರರಂಗಕ್ಕೆ ಕೊಡುಗೆ ಬೇಕಿದೆ. ಸಿನಿಮಾಗೆ ದರ್ಶನ್ ಬೇಕು. ಈ ಕೇಸ್ ಏನಾಗಿದೆ ಅಂತ ಗೊತ್ತಿಲ್ಲ. ಅದು ಏನೇ ಆಗಿರಲಿ ಅವರು ನಿರಪರಾಧಿಯಾಗಿ ಆಚೆ ಬರಲಿ. ಅವರಿಗೆ ಬೇಲ್ ಬೇಗ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

    ನಮಗೂ ಆ ಫೋಟೋಗಳ ಬಗ್ಗೆ ಗೊತ್ತಿಲ್ಲ. ಸದ್ಯ ಈ ಕೇಸ್ ಕಾನೂನಿನ ಚೌಕಟ್ಟಿನಲ್ಲಿದೆ. ರೇಣುಕಾಸ್ವಾಮಿ ಕುಟುಂಬದ ಬಗ್ಗೆ ನಮಗೂ ನೋವಿದೆ. ಆದರೆ ರೇಣುಕಾಸ್ವಾಮಿ (Renukaswamy) ಮಾಡಿದ್ದು ಒಳ್ಳೆಯ ಕೆಲಸ ಅಲ್ಲ. ಅವರು ಮಾಡಿರುವ ಮೆಸೇಜ್‌ಗಳು ಸರಿ ಇದೆಯಾ ಎಂದು ಪ್ರೇಮ್ ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ದರ್ಶನ್ ಪರ ಪ್ರೇಮ್ ಬ್ಯಾಟಿಂಗ್ ಮಾಡಿದ್ದಾರೆ.

    ಈ ವೇಳೆ, ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿ, ಬೇರೆ ಇಂಡಸ್ಟ್ರಿ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ಕನ್ನಡ ಚಿತ್ರರಂಗ ತುಂಬಾ ಮಡಿವಂತಿಕೆ ಇರುವ ಇಂಡಸ್ಟ್ರಿ. ಎಲ್ಲಾ ಹೆಣ್ಣುಮಕ್ಕಳಿಗೆ ಒಳ್ಳೆದಾಗುತ್ತದೆ ಅಂದರೆ ನಮ್ಮ ಸಪೋರ್ಟ್ ಇದ್ದೇ ಇರುತ್ತದೆ. ಅವತ್ತಿಂದ ಇವತ್ತಿನವರೆಗೂ ಎಲ್ಲಾ ನಾಯಕಿಯರು ಆತ್ಮೀಯರಾಗಿದ್ದಾರೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದಿದ್ದಾರೆ.

  • ಸೆಟ್ಟೇರಿತು ‘ಅರಸು’ ಡೈರೆಕ್ಟರ್ ಹೊಸ ಸಿನಿಮಾ- ಸ್ಮೈಲ್ ಗುರು ರಕ್ಷಿತ್ ಚಿತ್ರಕ್ಕೆ ಲವ್ಲಿ ಸ್ಟಾರ್ ಪ್ರೇಮ್ ಸಾಥ್

    ಸೆಟ್ಟೇರಿತು ‘ಅರಸು’ ಡೈರೆಕ್ಟರ್ ಹೊಸ ಸಿನಿಮಾ- ಸ್ಮೈಲ್ ಗುರು ರಕ್ಷಿತ್ ಚಿತ್ರಕ್ಕೆ ಲವ್ಲಿ ಸ್ಟಾರ್ ಪ್ರೇಮ್ ಸಾಥ್

    ಕಾಶ್, ಅರಸು (Arasu), ಮೆರವಣಿಗೆಯಂತಹ ಹಿಟ್ ಸಿನಿಮಾಗಳ ನಿರ್ದೇಶಕ ಮಹೇಶ್ ಬಾಬು (Mahesh Babu) ಹೊಸ ಸಿನಿಮಾ ಕೈಗೆತ್ತಿಕೊಂಡಿರುವುದು ಗೊತ್ತಿರುವ ಸಂಗತಿ. ಪ್ರತಿ ಸಿನಿಮಾದಲ್ಲಿಯೂ ಹೊಸ ಪ್ರತಿಭೆಗಳನ್ನು ಪರಿಚಯಿಸುವ ಅವರೀಗ, ಈ ಚಿತ್ರದ ಮೂಲಕ ಕಿರುತೆರೆಯ ಪ್ರತಿಭಾನ್ವಿತ ನಟರಲ್ಲಿ ಒಬ್ಬರಾದ ಸ್ಮೈಲ್ ಗುರು ರಕ್ಷಿತ್ (Smile Guru Rakshit) ಅವರನ್ನು ನಾಯಕನಾಗಿ ಕನ್ನಡ ಬೆಳ್ಳಿಪರದೆಗೆ ಕರೆದುಕೊಂಡು ಬರುತ್ತಿದ್ದಾರೆ. ಮಹೇಶ್ ಬಾಬು ಮತ್ತು ರಕ್ಷಿತ್ ಹೊಸ ಸಿನಿಮಾ ಜು.14ರಂದು ಸೆಟ್ಟೇರಿದೆ. ಬೆಂಗಳೂರಿನ ಅಭಯ ಹಸ್ತ ಬಲಮುರಿ ದೇಗುಲದಲ್ಲಿ ಮುಹೂರ್ತ ನೆರವೇರಿದೆ. ಇದನ್ನೂ ಓದಿ:ಮಗನ ಮದುವೆ ಬೆನ್ನಲ್ಲೇ ಕ್ಷಮೆಯಾಚಿಸಿದ ನೀತಾ ಅಂಬಾನಿ

    ಮಹೇಶ್ ಬಾಬು ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯಕ್ಕೆ ಇದನ್ನು ‘ಪ್ರೊಡಕ್ಷನ್ ನಂ 2’ ಎಂದು ಕರೆಯಲಾಗುತ್ತಿದೆ. ನೆನಪಿರಲಿ ಪ್ರೇಮ್ (Nenapirali Prem) ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ್ದರು. ಸಿನಿಮಾದ ಮೊದಲ ದೃಶ್ಯಕ್ಕೆ ಅವರು ಆರಂಭ ಫಲಕ ತೋರಿದರು. ಬಳಿಕ ಚಿತ್ರತಂಡಕ್ಕೆ ಅವರು ಶುಭ ಹಾರೈಸಿದರು. ಎ ಕ್ಲಾಸ್ ಸಿನಿ ಫಿಲ್ಮ್ಸ್ ಪ್ರೊಡಕ್ಷನ್ ಸಂಸ್ಥಾಪಕ ಅನುರಾಗ್ ಆರ್ ಅವರ ತಾಯಿ ಕ್ಯಾಮೆರಾ ಚಾಲನೆ ಮಾಡುವ ಮೂಲಕ ಶುಭ ಕೋರಿದರು. ಈ ಸಿನಿಮಾದಲ್ಲಿ ಸ್ಮೈಲ್ ಗುರು ರಕ್ಷಿತ್‌ಗೆ ಜೋಡಿಯಾಗಿ ‘ವೀರ ಮದಕರಿ’ಯಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದ ಜೆರುಶಾ (Jerusha) ಅವರು ಅಭಿನಯಿಸುತ್ತಿದ್ದಾರೆ. ಮತ್ತೊಬ್ಬ ನಾಯಕಿಯನ್ನು ಚಿತ್ರತಂಡ ಶೀಘ್ರದಲ್ಲಿಯೇ ರಿವೀಲ್ ಮಾಡಲಿದೆ.

    ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಸಿನಿಮಾ ಕೊಡಬೇಕೆಂಬ ಉದ್ದೇಶದಿಂದ ಎಂಎಂಎಂ ಪಿಕ್ಚರ್ಸ್ ಮತ್ತು ಎ ಕ್ಲಾಸ್ ಸಿನಿ ಫಿಲ್ಮಂಸ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದೆ. ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್ ಹಾಗೂ ಮಿಥುನ್ ಕೆಎಸ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಸತ್ಯ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ ಚಿತ್ರಕ್ಕಿದೆ.

    ನಾಯಕ ಸ್ಮೈಲ್ ಗುರು ರಕ್ಷಿತ್ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆ ಒದಗಿಸಲಿದ್ದಾರೆ. ಶೀಘ್ರದಲ್ಲಿಯೇ ಚಿತ್ರತಂಡ ಅದ್ಧೂರಿಯಾಗಿ ಟೈಟಲ್ ರಿವೀಲ್ ಮಾಡುವ ಯೋಜನೆ ಹಾಕಿಕೊಂಡಿದೆ. ಮೊದಲ ಹಂತದ ಚಿತ್ರೀಕರಣವನ್ನು ಬೆಂಗಳೂರಿನಲ್ಲಿ ಮುಗಿಸಲಿರುವ ಚಿತ್ರತಂಡ ಎರಡನೇ ಹಂತದ ಶೂಟಿಂಗ್‌ಗಾಗಿ ಮಲೆನಾಡಿನತ್ತ ಹೆಜ್ಜೆ ಹಾಕಲಿದೆ.

  • ಕರವೇ ಪ್ರತಿಭಟನೆ- ಲವ್ಲಿ ಸ್ಟಾರ್ ಪ್ರೇಮ್, ಪೂಜಾ ಗಾಂಧಿ ಬೆಂಬಲ

    ಕರವೇ ಪ್ರತಿಭಟನೆ- ಲವ್ಲಿ ಸ್ಟಾರ್ ಪ್ರೇಮ್, ಪೂಜಾ ಗಾಂಧಿ ಬೆಂಬಲ

    ರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗದ ಸಮಗ್ರ ಕಾಯ್ದೆ ರೂಪಿಸಲು ಜುಲೈ 1ರಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ  ಸತ್ಯಾಗ್ರಹಕ್ಕೆ ಕರೆ ಕೊಟ್ಟಿದ್ದಾರೆ. ಈ ಪ್ರತಿಭಟನೆಗೆ ನಟಿ ಪೂಜಾ ಗಾಂಧಿ ಮತ್ತು ಲವ್ಲಿ ಸ್ಟಾರ್ ಪ್ರೇಮ್ (Lovely Star Prem) ಬೆಂಬಲಿಸಿದ್ದಾರೆ. ಇದನ್ನೂ ಓದಿ:ವಿಶ್ವಕಪ್ ಗೆದ್ದ ಭಾರತ- ಸಂಭ್ರಮಿಸಿದ ಸಿನಿತಾರೆಯರು

    ಒಂದು ಭಾಷೆ ಉಳಿಯಬೇಕಾದರೆ ಎರಡು ಕಾರಣ ಇರುತ್ತದೆ. ಒಂದು ಭಾಷೆಯ ಮೇಲೆ ಪ್ರೀತಿ ಇರಬೇಕು. ಆ ಭಾಷೆಯ ಬಗ್ಗೆ ಹೆಮ್ಮೆ ಇರಬೇಕು. 2ನೇ ಕಾರಣ, ಕನ್ನಡ ಅನ್ನದ ಭಾಷೆಯಾಗಿರಬೇಕು ಎಂದು ‘ಮುಂಗಾರು ಮಳೆ’ ನಟಿ ಪೂಜಾ ಗಾಂಧಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಕೆಲಸದಲ್ಲಿ ಶೇಕಡ 100ರಷ್ಟು ಮೀಸಲಾತಿ ಸಿಗಬೇಕು. ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆಧ್ಯತೆ ಸಿಗಬೇಕು. ಇದು ಕನ್ನಡ ಬೆಳವಣಿಗೆಗೆ ಮುಖ್ಯ ಕಾರಣವಾಗುತ್ತದೆ ಎಂದಿದ್ದಾರೆ.

    ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಜುಲೈ 1ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ಆಯೋಜನೆ ಆಗುತ್ತಿದೆ. ಈ ಹೋರಾಟಕ್ಕೆ ನಾನು ಇರುತ್ತೇನೆ. ನೀವು ಬನ್ನಿ ಎಂದು ಪೂಜಾ ಗಾಂಧಿ (Pooja Gandhi) ಬೆಂಬಲ ಸೂಚಿಸಿದ್ದಾರೆ.

    ಕರ್ನಾಟಕದಲ್ಲಿ ಕನ್ನಡಿಗರಿಗೆ ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಸಿಗಬೇಕು. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಅಂತ ಬೃಹತ್ ಪ್ರತಿಭಟನೆ ಸತ್ಯಾಗ್ರಹವನ್ನು ಜುಲೈ 1ರಂದು ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದಾರೆ. ಒಬ್ಬ ಕನ್ನಡಿಗನಾಗಿ ಈ ಪ್ರತಿಭಟನೆಗೆ ನನ್ನ ಬೆಂಬಲವು ಇದೆ ಎಂದು ಲವ್ಲಿ ಸ್ಟಾರ್ ಪ್ರೇಮ್ ಕೂಡ ಮಾತನಾಡಿದ್ದಾರೆ.

  • 11 ವರ್ಷಗಳ ನಂತರ ಮತ್ತೆ ಖಾಕಿ ತೊಟ್ಟ ನೆನಪಿರಲಿ ಪ್ರೇಮ್- ಪೋಸ್ಟರ್ ಔಟ್

    11 ವರ್ಷಗಳ ನಂತರ ಮತ್ತೆ ಖಾಕಿ ತೊಟ್ಟ ನೆನಪಿರಲಿ ಪ್ರೇಮ್- ಪೋಸ್ಟರ್ ಔಟ್

    ವ್ಲಿ ಸ್ಟಾರ್ ಪ್ರೇಮ್ ಹುಟ್ಟುಹಬ್ಬದ (ಏ.18) ಸಂಭ್ರಮದಲ್ಲಿದ್ದಾರೆ. ಬರ್ತ್‌ಡೇಯಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. 11 ವರ್ಷಗಳ ನಂತರ ಮತ್ತೆ ಖಾಕಿ ತೊಟ್ಟು ಖದರ್ ತೋರಿಸೋಕೆ ನಟ ಪ್ರೇಮ್ ಸಜ್ಜಾಗಿದ್ದಾರೆ. ಸದಾ ಲವರ್‌ ಬಾಯ್‌ ಆಗಿ ಕಾಣಿಸಿಕೊಳ್ಳುತ್ತಿದ್ದ ನಟ ಈಗ ಖಾಕಿ ತೊಟ್ಟು ಪುಂಡರಿಗೆ ಪಾಠ ಮಾಡೋಕೆ ರೆಡಿಯಾಗಿದ್ದಾರೆ.

    ಇಂದು (ಏ.18) ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿ ನೆನಪಿರಲಿ ಪ್ರೇಮ್ ನಟಿಸಲಿರುವ ಹೊಸ ಸಿನಿಮಾದ ಮುಹೂರ್ತ ಕಾರ್ಯಕ್ರಮ ನೆರವೇರಿದೆ. ಚಿತ್ರದ ಪೋಸ್ಟರ್ ಲುಕ್ ಕೂಡ ರಿವೀಲ್ ಆಗಿದೆ. ಇದನ್ನೂ ಓದಿ:‘ಉತ್ತರಕಾಂಡ’ ಚಿತ್ರದಲ್ಲಿ ಲಚ್ಚಿ ಪಾತ್ರ ಬಣ್ಣಿಸಿದ ಚೈತ್ರಾ ಆಚಾರ್

    ಪ್ರೇಮ್ ಈ ಸಲ ಬೇರೆ ರೀತಿಯ ಪೊಲೀಸ್ ಪಾತ್ರ ಮಾಡಿದ್ದಾರೆ. ರಫ್ ಆ್ಯಂಡ್ ಟಫ್ ಅಲ್ಲದೇ, ರಗಡ್ ಲುಕ್ ಇರೋ ಪೊಲೀಸ್ ರೀತಿನೂ ಕಾಣಿಸುತ್ತಿದ್ದಾರೆ. ಕೈಯಲ್ಲಿ ಸಿಂಗಲ್ ಬ್ಯಾರಲ್ ಗನ್ ಕೂಡ ಇದೆ. ಅದನ್ನ ಸ್ಟೈಲ್ ಆಗಿ ಪ್ರೇಮ್ ಹಿಡಿದು ಕೊಂಡು, ಗಲಾಟೆ ಮಾಡೋರ ಕಡೆಗೆ ಮುಖ ಮಾಡಿ ನಿಂತಿದ್ದಾರೆ. ಚಿತ್ರದ ಬಗ್ಗೆ ಇಷ್ಟೆಲ್ಲ ವಿಚಾರವನ್ನ ಮೊದಲ ಪೋಸ್ಟರ್ ತೋರಿಸಲಾಗಿದೆ. ಇದನ್ನೂ ಓದಿ:ಶ್ರೀಲೀಲಾ ಕೈಬಿಟ್ಟ ಚಿತ್ರಕ್ಕೆ ರಾಶಿ ಖನ್ನಾ ಎಂಟ್ರಿ

     

    View this post on Instagram

     

    A post shared by Prem Nenapirali (@premnenapirali)

    ಪ್ರೇಮ್ ಹೊಸ ಸಿನಿಮಾಗೆ ತೇಜಸ್ ಬಿ.ಕೆ ಇದ್ದಾರೆ. ಇವರೇ ಚಿತ್ರದ ಕಥೆ ಬರೆದಿದ್ದಾರೆ. ಸಿನಿಮಾಗೆ ಡೈರೆಕ್ಷನ್ ಸಹ ಇವರೇ ಮಾಡುತ್ತಿದ್ದಾರೆ. ಹೆಸರಿಡದ ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಕೊಟ್ಟಿದ್ದಾರೆ. ಗೀತಾಂಜಲಿ ಬಿ.ಎಸ್ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸದ್ಯದಲ್ಲೇ ಶೂಟಿಂಗ್ ಕೂಡ ಶುರುವಾಗಲಿದೆ.

    2013ರಲ್ಲಿ ‘ಶತ್ರು’ (Shatru Film) ಎಂಬ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈಗ 11 ವರ್ಷಗಳ ಬಳಿಕ ಮತ್ತೆ ಪೊಲೀಸ್ ಪಾತ್ರಕ್ಕೆ ಪ್ರೇಮ್ ಬಣ್ಣ ಹಚ್ಚುತ್ತಿದ್ದಾರೆ.

  • ಸೀರೆಯುಟ್ಟು ಯುವರಾಣಿಯಂತೆ ಮಿಂಚಿದ ‘ನೆನಪಿರಲಿ’ ಪ್ರೇಮ್ ಪುತ್ರಿ

    ಸೀರೆಯುಟ್ಟು ಯುವರಾಣಿಯಂತೆ ಮಿಂಚಿದ ‘ನೆನಪಿರಲಿ’ ಪ್ರೇಮ್ ಪುತ್ರಿ

    ನ್ನಡ ಚಿತ್ರರಂಗದ ಯಂಗ್ ಹೀರೋ ನೆನಪಿರಲಿ ಪ್ರೇಮ್ (Nenapirali Prem) ಪುತ್ರಿ ಅಮೃತಾ (Amrutha Prem) ಅವರು ನಟನಾ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟ ಮೇಲೆ ಸದಾ ಒಂದಲ್ಲಾ ಒಂದು ಸುದ್ದಿಯ ಮೂಲಕ ಹೈಲೆಟ್ ಆಗುತ್ತಲೇ ಇರುತ್ತಾರೆ. ಈಗ ಚೆಂದದೊಂದು ಫೋಟೋಶೂಟ್ ಮಾಡಿಸುವ ಮೂಲಕ ಇಂಟರ್‌ನೆಟ್‌ನಲ್ಲಿ ನಟಿ ಹೈಪ್ ಕ್ರಿಯೇಟ್ ಮಾಡಿದ್ದಾರೆ. ಇದನ್ನೂ ಓದಿ:ಯಶ್‌ಗೂ ಮುನ್ನ ಹೊಸ ಸಿನಿಮಾ ಅನೌನ್ಸ್ ಮಾಡಿದ ಶ್ರೀನಿಧಿ ಶೆಟ್ಟಿ

    ನವರಾತ್ರಿ ಹಬ್ಬದ (Navaratri Festival) ಅಂಗವಾಗಿ ಮುದ್ದಾದ ಫೋಟೋಶೂಟ್‌ವೊಂದನ್ನ ಅಮೃತಾ ಪ್ರೇಮ್ ಮಾಡಿಸಿದ್ದಾರೆ. ಲೈಟ್ ಬಣ್ಣ ಸೀರೆಯುಟ್ಟು ಯುವರಾಣಿಯಂತೆ ಅಮೃತಾ ಮಿಂಚಿದ್ದಾರೆ. ಕ್ಯಾಮೆರಾ ಕಣ್ಣಿಗೆ ಮುದ್ದಾದ ನಗೆ ಬೀರುತ್ತ ಮಸ್ತ್ ಆಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.

    ಅಮೃತಾ ಅವರ ನಯಾ ಲುಕ್ ನೋಡಿ ಸೀರೆಯಲ್ಲಿ ಹುಡುಗಿರ ನೋಡಲೇಬಾರದು, ನಿಲ್ಲೋಲ್ಲ ಟೆಂಪ್ರೆಚರೂ ಎಂದು ಹಾಡಲು ಶುರು ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟಿಯ ಫೋಟೋಗೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.

    ಲವ್ಲಿ ಸ್ಟಾರ್ ಪ್ರೇಮ್ ಅವರು ‘ನೆನಪಿರಲಿ’ (Nenapirali) ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಿತರಾದರು. ಬಣ್ಣದ ಲೋಕಕ್ಕೆ ಬಂದು 26 ವರ್ಷಗಳು ಕಳೆದರೂ ಪ್ರೇಮ್ ಅವರು ಚಾರ್ಮ್ ಕಳೆದುಕೊಂಡಿಲ್ಲ. ಇಂದಿಗೂ ಅವರ ಸಿನಿಮಾ ನೋಡಲು ಫ್ಯಾನ್ಸ್ ಎದುರು ನೋಡ್ತಾರೆ. ಈಗ ಅವರ ಪುತ್ರಿ ಅಮೃತಾ ಕೂಡ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

    ‘ಟಗರು ಪಲ್ಯ’ ಚಿತ್ರದ ಮೂಲಕ ನಾಗಭೂಷಣ್‌ಗೆ ಅಮೃತಾ ಹೀರೋಯಿನ್ ಆಗಿದ್ದಾರೆ. ಸದ್ಯದಲ್ಲೇ ಚಿತ್ರ ರಿಲೀಸ್ ಆಗಲಿದೆ. ಮೊದಲ ಚಿತ್ರದಲ್ಲೇ ಗಮನ ಸೆಳೆಯೋದ್ರಲ್ಲಿ ಯಶಸ್ವಿಯಾಗುತ್ತಾರಾ? ಕಾದುನೋಡಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲವ್ಲಿ ಸ್ಟಾರ್ ಪ್ರೇಮ್- ಜ್ಯೋತಿ ದಾಂಪತ್ಯಕ್ಕೆ 25ರ ಸಂಭ್ರಮ

    ಲವ್ಲಿ ಸ್ಟಾರ್ ಪ್ರೇಮ್- ಜ್ಯೋತಿ ದಾಂಪತ್ಯಕ್ಕೆ 25ರ ಸಂಭ್ರಮ

    ಸ್ಯಾಂಡಲ್‌ವುಡ್‌ನ (Sandalwood) ಬೆಸ್ಟ್ ಜೋಡಿಗಳಲ್ಲಿ ಒಂದಾಗಿರುವ ನಟ ಪ್ರೇಮ್- ಜ್ಯೋತಿ ಅವರ ದಾಂಪತ್ಯಕ್ಕೆ 25 ವರ್ಷಗಳು ಪೂರೈಸಿದೆ. ಇದೇ ಖುಷಿಯಲ್ಲಿ ಪ್ರೇಮ್ ದಂಪತಿ ಬಾಲಿಗೆ ಹಾರಿದ್ದಾರೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

    ಪ್ರೇಮ್- ಜ್ಯೋತಿ (Jyothi) ಜೋಡಿ ಒಬ್ಬರನೊಬ್ಬರು ಪ್ರೀತಿಸಿ ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದರು. 2000ರಲ್ಲಿ ಪ್ರೇಮ್ (Lovely Star Prem), ಜ್ಯೋತಿ ಜೊತೆ ಸರಳವಾಗಿ ಮದುವೆಯಾದರು. ಸಾಕಷ್ಟು ಸಂಕಷ್ಟಗಳ ನಡುವೆ ನಟ ಪ್ರೇಮ್ ಚಿತ್ರರಂಗದಲ್ಲಿ ಗಟ್ಟಿ ನಟನಾಗಿ ಸ್ಥಾನ ಗಿಟ್ಟಿಸಿಕೊಂಡರು. ಪ್ರೇಮ್ ಶ್ರಮಕ್ಕೆ ಪತ್ನಿ ಜ್ಯೋತಿ ಅವರ ಕೊಡುಗೆ ಅಪಾರ. ಇದನ್ನೂ ಓದಿ:ಹಾಟ್ ಅವತಾರ ತಾಳಿದ ದಿಶಾ ಪಟಾನಿ

    ಪ್ರೀತಿಸಿ ಮದುವೆಯಾಗಿ 25 ವರ್ಷಗಳು ಕಳೆದರೂ ಇಬ್ಬರ ನಡುವೆ ಪ್ರೀತಿ ಮಾಸಿಲ್ಲ. ನವಜೋಡಿಗಳಿಗೆ ನಾಚುವಂತೆ ಇಂದಿಗೂ ಇಬ್ಬರು ಜೊತೆಯಾಗಿ ಪ್ರೇಮ್- ಜ್ಯೋತಿ ಜೀವನ ಸಾಗಿಸುತ್ತಿದ್ದಾರೆ. ಸದ್ಯ ಪತ್ನಿ ಜೊತೆಗಿನ ಬಾಲಿ ಫೋಟೋ ಹಂಚಿಕೊಂಡು ನಟ ಪ್ರೇಮ್ ವಿಶ್ ಮಾಡಿದ್ದಾರೆ. ಬಾಲಿಯಲ್ಲಿ 25ನೇ ವರ್ಷ ವಿವಾಹ ಮಹೋತ್ಸವ ಕಾರ್ಯಕ್ರಮವನ್ನ ರೊಮ್ಯಾಂಟಿಕ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ.

     

    View this post on Instagram

     

    A post shared by Prem Nenapirali (@premnenapirali)

    25ರ ನಮ್ಮ ಪ್ರೀತಿಗೆ ಅದರ ರೀತಿಗೆ ಶುಭಾಶಯಗಳು ಜೀವದ ಗೆಳತಿ ಎಂದು ಪ್ರೇಮ್ ಪತ್ನಿಗೆ ಶುಭಹಾರೈಸಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

  • ಮಕ್ಕಳು ಜನಿಸಿದಾಗ ಪ್ರೇಮ್ ಪರಿಸ್ಥಿತಿ ಹೇಗಿತ್ತು? ಕಷ್ಟದ ದಿನಗಳ ಬಗ್ಗೆ ನಟನ ಮಾತು

    ಮಕ್ಕಳು ಜನಿಸಿದಾಗ ಪ್ರೇಮ್ ಪರಿಸ್ಥಿತಿ ಹೇಗಿತ್ತು? ಕಷ್ಟದ ದಿನಗಳ ಬಗ್ಗೆ ನಟನ ಮಾತು

    ಕಿರುತೆರೆಯ ಜನಪ್ರಿಯ ಶೋ Weekend With Ramesh ಕಾರ್ಯಕ್ರಮದಲ್ಲಿ ಸಾಧಕರ ಸೀಟ್‌ನ ಲವ್ಲಿ ಸ್ಟಾರ್ ಪ್ರೇಮ್ (Lovely Star Prem) ಅಲಂಕರಿಸಿದ್ದಾರೆ. ಇಬ್ಬರು ಮಕ್ಕಳು ಜನಿಸಿದಾಗ ತಮ್ಮ ಕೈಯಲ್ಲಿದ್ದ ಹಣವೆಷ್ಟು? ಸಿನಿಮಾ ರಂಗಕ್ಕೆ ಕಾಲಿಟ್ಟಾಗ ಪ್ರೇಮ್ ಪರಿಸ್ಥಿತಿ ಹೇಗಿತ್ತು. ಹೀಗೆ ಅವರು ಎದುರಿಸಿದ ಸಂಕಷ್ಟದ ಬಗ್ಗೆ ಪ್ರೇಮ್ ಹಂಚಿಕೊಡಿದ್ದಾರೆ.

    Weekend With Ramesh-5 ಕಾರ್ಯಕ್ರಮದಲ್ಲಿ ನಟ ಪ್ರೇಮ್ ಅವರು, ರಮೇಶ್ ಅರವಿಂದ್ ಜೊತೆ ಸಾಕಷ್ಟು ವಿಚಾರಗಳನ್ನ ಹಂಚಿಕೊಂಡಿದ್ದಾರೆ. ತಮ್ಮ ಏಳು -ಬೀಳಿನ ದಿನಗಳ ಬಗ್ಗೆ ಪ್ರೆಮ್ ಭಾವುಕರಾಗಿದ್ದಾರೆ. ನಟನಾಗಬೇಕು ಎಂದು ಕನಸು ಕಂಡಿದ್ದ ಪ್ರೇಮ್‌ಗೆ ಅವಕಾಶ ಸಿಕ್ಕಿದ್ದು ಟಿಎನ್ ಸೀತಾರಾಂ ಅವರ ಸೀರಿಯಲ್ ‘ಮನ್ವಂತರ’ದಲ್ಲಿ ನಾಯಕ ಸುನೀಲ್ ರಾವ್ ಗೆಳೆಯನಾಗಿ ಪ್ರೇಮ್ ನಟಿಸುತ್ತಿದ್ದರು. ಅದೇ ವೇಳೆಗೆ ಜಾಹಿರಾತೊಂದರ ನೆರವಿನ ಮೂಲಕ ‘ಪ್ರಾಣ’ (Prana Film) ಸಿನಿಮಾಕ್ಕೆ ಆಯ್ಕೆ ಆಗಿ ಮೊತ್ತ ಮೊದಲ ಬಾರಿಗೆ ಪ್ರೇಮ್ ನಾಯಕ ನಟನಾಗಿ ನಟಿಸಿದರು. ಆಗ ಪ್ರೇಮ್ ಜೀವನದ ಮೊದಲ ಸಿನಿಮಾ ‘ಪ್ರಾಣ’ ಮುಹೂರ್ತ ನಡೆದಾಗ ಅವರ ಮಗಳು ಅಮೃತಾ ಇನ್ನೂ ಆರು ದಿನದ ಕೂಸು. ನನ್ನ ಮಗಳು ಜನಿಸಿದಾಗ ನನ್ನ ಹತ್ತಿರ ಮುನ್ನೂರು ರುಪಾಯಿಗಳಿದ್ದವು. ಆದರೆ ನನಗೆ ಮೊತ್ತ ಮೊದಲ ಸಿನಿಮಾ ಅವಕಾಶ ದೊರಕಿತ್ತು. ಆಕೆ ನನಗೆ ಅದೃಷ್ಟ ತಂದುಕೊಟ್ಟಳು. ಆದರೆ ನನ್ನ ಮಗ ಹುಟ್ಟಿದಾಗ ನನ್ನ ಬಳಿ ಭರಪೂರವಾಗಿ ಹಣ ಇತ್ತು. ನನ್ನ ಮಗ ಹುಟ್ಟಿದ ಸಂದರ್ಭದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಜೊತೆ-ಜೊತೆಯಲಿ ಸಿನಿಮಾಕ್ಕಾಗಿ ಅಡ್ವಾನ್ಸ್ ಆಗಿ ದೊಡ್ಡ ಮೊತ್ತದ ಹಣ ಕೊಟ್ಟಿದ್ದರು. ಅದು ನನ್ನ ಜೇಬಿನಲ್ಲಿತ್ತು ಎಂದು ನಟ ಪ್ರೇಮ್ ಸ್ಮರಿಸಿದ್ದಾರೆ.

    ಪ್ರೇಮ್‌ಳ ಮಗಳ ಹೆಸರು ಅಮೃತಾ ಮಗನ ಹೆಸರು ಏಕಾಂತ್. ಡಾಲಿ ಧನಂಜಯ್ (Daali Dhananjay) ಅವರ ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿರುವ ‘ಟಗರು ಪಲ್ಯ’ (Tagaru Palya) ಸಿನಿಮಾದಲ್ಲಿ ಅಮೃತಾ ಪ್ರೇಮ್ (Amrutha Prem) ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ನಾಗಭೂಷಣ್ ನಾಯಕ. ಇನ್ನು ಪ್ರೇಮ್‌ರ ಪುತ್ರ ಏಕಾಂತ್, ಕಾಲೇಜು ಶಿಕ್ಷಣದಲ್ಲಿದ್ದು ಒಳ್ಳೆಯ ವಿದ್ಯಾರ್ಥಿಯಂತೆ. ಅವರಿಗೂ ಸಿನಿಮಾ ಕ್ಷೇತ್ರಕ್ಕೆ ಬರುವ ಆಸಕ್ತಿ ಇದೆಯಂತೆ. ಈಗಾಗಲೇ ಶರಣ್‌ ನಟನೆಯ ‘ಗುರು ಶಿಷ್ಯರು’ ಸಿನಿಮಾದಲ್ಲಿ ಏಕಾಂತ್‌ ನಟಿಸಿದ್ದಾರೆ. ಇದನ್ನೂ ಓದಿ:ಮಗಳ ಸಿನಿಮಾದಲ್ಲಿ ಮೊಹಿದ್ದೀನ್ ಭಾಯ್ ಆಗಿ ಬಂದ ತಲೈವಾ- ‌’ಲಾಲ್‌ ಸಲಾಂ’ ಪೋಸ್ಟರ್‌ ಔಟ್

    ಇನ್ನು ಪ್ರೇಮ್‌ರ ಪುತ್ರಿ ಅಮೃತಾ (Amrutha) ಬಯೋ ಮೆಡಿಕಲ್ ಓದುತ್ತಿದ್ದರಂತೆ ಅವರಿಗೆ ಡಾಕ್ಟರ್ ಆಗುವ ಕನಸಿತ್ತಂತೆ ಆದರೆ ವಿಧಿ ಅವರನ್ನು ಸಿನಿಮಾದತ್ತ ಕರೆದುಕೊಂಡು ಬಂದಿದೆ ಎಂದ ಪ್ರೇಮ್, ಇಂಥಹಾ ಮಕ್ಕಳನ್ನು ಪಡೆಯಲು ನಾನು ಪುಣ್ಯ ಮಾಡಿದ್ದೇನೆ. ಇಬ್ಬರೂ ಸಹ ಎಂದೂ ಯಾವುದಕ್ಕೂ ಡಿಮ್ಯಾಂಡ್ ಮಾಡಿದವರಲ್ಲ. ನಾವೇ ಏನಾದರೂ ಕೊಡಿಸುವವರೆಗೆ ಏನನ್ನೂ ಕೇಳುವವರಲ್ಲ. ಇಬ್ಬರೂ ಸಹ ಈಗಲೂ ಬಿಎಂಟಿಸಿ ಬಸ್‌ನಲ್ಲೇ ಓಡಾಡುತ್ತಾರೆ. ಮಗ ಬಹಳ ಚೆನ್ನಾಗಿ ಓದುತ್ತಿದ್ದಾನೆ. ಮಗಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾಳೆ ಇಂತಹ ಮಕ್ಕಳನ್ನು ಪಡೆದ ನಾನು ಪುಣ್ಯ ಮಾಡಿದ್ದೆ ಎಂದು ಪ್ರೇಮ್ ಭಾವುಕರಾಗಿದ್ದಾರೆ.