Tag: lover

  • ಅಕ್ರಮ ಸಂಬಂಧಕ್ಕೆ ಅಡ್ಡಿ – ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೆರೆಗೆ ತಳ್ಳಿ ಕೊಂದ ಪತ್ನಿ

    ಅಕ್ರಮ ಸಂಬಂಧಕ್ಕೆ ಅಡ್ಡಿ – ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೆರೆಗೆ ತಳ್ಳಿ ಕೊಂದ ಪತ್ನಿ

    ಹಾವೇರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಹಿನ್ನೆಲೆ ಪ್ರಿಯಕರ ಜೊತೆ ಸೇರಿ ಪತಿಯನ್ನೇ ಪತ್ನಿ ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ಹಾವೇರಿಯ ರಟ್ಟಿಹಳ್ಳಿ ತಾಲೂಕಿನಲ್ಲಿ ನಡೆದಿದೆ.

    ಹರಿಹರ ಮೂಲದ ಶಫಿವುಲ್ಲಾ ಅಬ್ದುಲ್ ಮಹೀಬ್ (38) ಕೊಲೆಯಾದ ಪತಿ ಎಂದು ಗುರುತಿಸಲಾಗಿದೆ. ಆರೋಪಿಗಳಾದ ಪತ್ನಿ ಶಹೀನಾಬಾನು ಹಾಗೂ ಆಕೆಯ ಪ್ರಿಯಕರ ಮುಬಾರಕ್ ಖಲಂದರಸಾಬ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ತಾಯಿಯನ್ನು ಕೊಂದ ಪಾಪಿಯಿಂದ ತಂದೆಯ ಮೇಲೂ ಮೃಗೀಯ ವರ್ತನೆ – ಚರ್ಮ ಸುಲಿಯುವಂತೆ ಹಲ್ಲೆ

    ಮುಬಾರಕ್ ಖಲಂದರಸಾಬ್ ಮತ್ತು ಶಹೀನಾಬಾನು ಮಧ್ಯೆ ಅನೈತಿಕ ಸಂಬಂಧ ಇತ್ತು. ಮುಬಾರಕ್ ಖಲಂದರಸಾಬ್‌ನನ್ನು ಮದುವೆ ಆಗುವಂತೆ ಶಹೀನಾಬಾನು ಪೀಡಿಸುತ್ತಿದ್ದಳು. ನಮ್ಮಿಬ್ಬರ ಮದುವೆಗೆ ನಿನ್ನ ಪತಿ ಅಡ್ಡಿಯಾಗ್ತಾನೆ ಎಂದು ಹೇಳಿದ್ದ. ಇದನ್ನೂ ಓದಿ: 10,000 ಕೊಡ್ತೀನಿ ಬಾ – ಯುವತಿಯನ್ನು ಮಂಚಕ್ಕೆ ಕರೆದ ಕಾಮುಕ ಪ್ರಿನ್ಸಿಪಾಲ್ ಅರೆಸ್ಟ್

    ಹೀಗಾಗಿ ಇಬ್ಬರೂ ಸೇರಿ ಶಫೀವುಲ್ಲಾ ಕೊಲೆಗೆ ಸಂಚು ರೂಪಿಸಿದ್ದರು. ಬಳಿಕ ಮುಬಾರಕ್ ಖಲಂದರಸಾಬ್, ಶಫೀವುಲ್ಲಾ ಜೊತೆ ಗೆಳೆತನ ಬೆಳಸಿ ಮನೆಗೆ ಬಂದು ಹೋಗಿ ಮಾಡುತ್ತಿದ್ದ. ಜು. 27ರಂದು ಕೆರೆ ನೋಡಲು ಹೋಗೋಣ ಎಂದು ಪುಸಲಾಯಿಸಿ ಶಫೀವುಲ್ಲಾನನ್ನು ಕೆರೆ ಕಡೆ ಕರೆದುಕೊಂಡು ಹೋಗಿದ್ದ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರಳಿದ ಸಾರಿಗೆ ಬಸ್ – ಪ್ರಯಾಣಿಕರು ಸೇಫ್

    ಮದಗಮಾಸೂರು ಕೆರೆ ಬಳಿ ಎಣ್ಣೆ ಪಾರ್ಟಿ ಮಾಡಿ, ಬಳಿಕ ಶಫೀವುಲ್ಲಾನನ್ನು ಕೆರೆಗೆ ತಳ್ಳಿದರು. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಂಬಿಸಿದ್ದರು. ಮೃತದೇಹ ಪತ್ತೆಯಾದ ಬಳಿಕ, ದೇಹದಲ್ಲಿ ಗಾಯಗಳಿರುವುದು ಕಂಡು ಅನುಮಾನ ಮೂಡಿತ್ತು. ಪೊಲೀಸರು ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಆರೋಪಿಗಳು ಕೊಲೆ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಇದೀಗ ಹಿರೇಕೆರೂರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಕರೆಂಟ್ ಶಾಕ್ ನೀಡಿ ಮಾವನ ಕೊಲೆ – ಗಾಯ ಮರೆಮಾಚಲು ರೋಸ್ ವಾಟರ್, ಅರಶಿಣ ಪುಡಿ ಹಚ್ಚಿದ ಸೊಸೆ

    ಕರೆಂಟ್ ಶಾಕ್ ನೀಡಿ ಮಾವನ ಕೊಲೆ – ಗಾಯ ಮರೆಮಾಚಲು ರೋಸ್ ವಾಟರ್, ಅರಶಿಣ ಪುಡಿ ಹಚ್ಚಿದ ಸೊಸೆ

    – ಅಪಘಾತದಿಂದ ಸಾವು ಎಂದು ಬಿಂಬಿಸಿದ್ದ ಹಂತಕಿ, ಪ್ರಿಯಕರ ಅರೆಸ್ಟ್

    ರಾಯ್ಪುರ: ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಕರೆಂಟ್ ಶಾಕ್ ನೀಡಿ ಮಾವನನ್ನು (Father-in-law) ಹತ್ಯೆ ಮಾಡಿ, ಬಳಿಕ ಗಾಯವನ್ನು ಮರೆಮಾಚಲು ಅರಶಿಣ ಪುಡಿ ಹಚ್ಚಿರುವ ಘಟನೆ ಛತ್ತೀಸ್‌ಗಢದಲ್ಲಿ (Chhattisgarh) ನಡೆದಿದೆ.

    ಮನೋಹರ್ ನಿರ್ಮಲ್ಕರ್ (60) ಕೊಲೆಯಾದ ಮಾವ. ಸೊಸೆ ಗೀತಾ ನಿರ್ಮಲ್ಕರ್ ಮತ್ತು ಆಕೆಯ ಪ್ರಿಯಕರ (Lover) ಲೇಖ್ರಾಮ್ ನಿಶಾದ್ ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇದನ್ನೂ ಓದಿ: ಜಲಂಧರ್‌ನಲ್ಲಿ ನೆರವೇರಿತು ವಿಶ್ವದ ಹಿರಿಯ ಮ್ಯಾರಥಾನ್ ಓಟಗಾರನ ಅಂತ್ಯಕ್ರಿಯೆ


    ಆರೋಪಿ ಗೀತಾಳಿಗೆ ಹಾಗೂ ಮಾವ ಮನೋಹರ್ ನಡುವೆ ಪ್ರತಿನಿತ್ಯವೂ ಜಗಳವಾಡುತ್ತಿದ್ದರು. ಇಬ್ಬರಿಗೂ ಸರಿ ಹೊಂದುತಿರಲಿಲ್ಲ. ಹೀಗಾಗಿ ಗೀತಾ, ಪ್ರಿಯಕರನೊಂದಿಗೆ ಸೇರಿ ಮಾವನ ಕೊಲೆಗೆ ಮಾಸ್ಟರ್ ಪ್ಯಾನ್ ಮಾಡಿದ್ದಳು. ಇದನ್ನೂ ಓದಿ: ಕಾರವಾರ | ಕಾರಿನ ಮೇಲೆ ಉರುಳಿ ಬಿದ್ದ ಮರ – ಮಹಿಳೆ ಸಾವು

    ಮನೋಹರ್ ರಾತ್ರಿ ನಿದ್ರೆಗೆ ಜಾರಿದ್ದ ವೇಳೆ ಗೀತಾ ಹಾಗೂ ಪ್ರಿಯಕರ ಸೇರಿ ಕರೆಂಟ್ ಶಾಕ್ ನೀಡಿ ಕೊಲೆ ಮಾಡಿದ್ದರು. ಈ ವೇಳೆ ಕೊಲೆ ಮಾಡಿದ್ದು ತಾನೇ ಎಂದು ತಿಳಿಯಬಾರೆಂದು ತಲೆ ಉಪಯೋಗಿಸಿದ್ದ ಗೀತಾ, ಕೈಗೆ ಎಲೆಕ್ಟಿçಷಿಯನ್‌ಗಳು ಧರಿಸುವ ಗ್ಲೌಸ್ ಅನ್ನು ಧರಿಸಿ ಕರೆಂಟ್ ಶಾಕ್ ನೀಡಿದ್ದಳು.

    ಬಳಿಕ ಕುಟುಂಬಸ್ಥರ ಬಳಿ ಕುಡಿದ ಮತ್ತಿನಲ್ಲಿ ಬೈಕ್‌ನಿಂದ ಬಿದ್ದು ಮಾವ ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿದ್ದಳು. ಅಂತ್ಯಕ್ರಿಯೆಯ ವೇಳೆ ಮನೋಹರ್ ಮೈ ಮೇಲಿನ ಗಾಯಗಳನ್ನು ಕುಟುಂಬಸ್ಥರು ಗಮನಿಸಿದ್ದರು. ಇದರಿಂದ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: ವೆಜ್ ಬದಲು ಚಿಕನ್ ಪಿಜ್ಜಾ ಕಳಿಸಿದ ಡಾಮಿನೋಸ್ – 50,000 ರೂ. ದಂಡ

    ಸ್ಥಳಕ್ಕಾಗಮಿಸಿದ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ಮಾಡಿದ್ದರು. ಈ ವೇಳೆ ಇದು ಸಹಜ ಸಾವಲ್ಲ, ಕೊಲೆ ಎಂದು ದೃಢಪಡಿಸಿದರು. ಬಳಿಕ ಪೊಲೀಸರು ಸೊಸೆಯನ್ನು ವಿಚಾರಣೆಗೊಳಪಡಿಸಿದಾಗ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಅಲ್ಲದೇ ಕೊಲೆಯ ಕುರುಹು ಸಿಗಬಾರದೆಂದು ಗಾಯವಾದ ಭಾಗಗಳಿಗೆ ಅರಶಿಣ ಹಾಗೂ ರೋಸ್ ವಾಟರ್ ಹಾಕಿರುವುದಾಗಿ ಬಾಯ್ಬಿಟ್ಟಿದ್ದಾಳೆ.

    ಸದ್ಯ ಪೊಲೀಸರು ಕೊಲೆ ಆರೋಪಿಗಳಾದ ಗೀತಾ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ.

  • ತಾಯಿಯ ಪ್ರಿಯಕರನಿಂದ್ಲೇ 10 ವರ್ಷದ ಮಗನ ಕೊಲೆ – ಸೂಟ್‌ಕೇಸ್‌ನಲ್ಲಿ ಶವ ಪತ್ತೆ

    ತಾಯಿಯ ಪ್ರಿಯಕರನಿಂದ್ಲೇ 10 ವರ್ಷದ ಮಗನ ಕೊಲೆ – ಸೂಟ್‌ಕೇಸ್‌ನಲ್ಲಿ ಶವ ಪತ್ತೆ

    ದಿಸ್ಪುರ್: ತಾಯಿಯ ಪ್ರಿಯತಮನಿಂದ 10 ವರ್ಷದ ಮಗ ಕೊಲೆಯಾಗಿರುವ ಘಟನೆ ಆಸ್ಸಾಂನ (Assam) ಗುವಾಹಟಿಯಲ್ಲಿ (Guwahati) ನಡೆದಿದೆ.

    ಆರೋಪಿಯನ್ನು ಜಿತುಮೋನಿ ಹಲೋಯ್ ಎಂದು ತಿಳಿಯಲಾಗಿದ್ದು, ಮೃತ ಬಾಲಕನ ದೇಹ ಸೂಟ್‌ಕೇಸ್‌ವೊಂದರಲ್ಲಿ ಪತ್ತೆಯಾಗಿದೆ.ಇದನ್ನೂ ಓದಿ: ಭಾರತ ಮತ್ತಷ್ಟು ಸೇಡು ತೀರಿಸಿಕೊಳ್ಳಬೇಕು, ಕೇಂದ್ರಕ್ಕೆ ನಮ್ಮ ಬೆಂಬಲ ಇದೆ: ಆರ್‌.ವಿ ದೇಶಪಾಂಡೆ

    ಕಳೆದ ಶನಿವಾರ ತನ್ನ ಮಗ ಟ್ಯೂಷನ್‌ನಿಂದ ಮನೆಗೆ ಬಂದಿಲ್ಲ ಎಂದು ತಾಯಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರಿಗೆ ಗುವಾಹಟಿಯ ಪೊದೆಯೊಂದರ ಬಳಿ ಬಿದ್ದಿದ್ದ ಸೂಟ್‌ಕೇಸ್‌ನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿತ್ತು. ಬಳಿಕ ಮೃತ ಬಾಲಕನ ತಾಯಿಯನ್ನು ವಿಚಾರಣೆಗೊಳಪಡಿಸಿದಾಗ ತನ್ನ ಪತಿಯಿಂದ ಬೇರ್ಪಟ್ಟು ಆರೋಪಿ ಜಿತುಮೋನಿ ಹಲೋಯ್ ಎಂಬಾತನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ತಿಳಿದುಬಂದಿದೆ.

    ಬಳಿಕ ಆರೋಪಿಯನ್ನು ವಿಚಾರಣೆ ನಡೆಸಿ, ಸೂಟ್‌ಕೇಸ್ ಪತ್ತೆಯಾದ ಸ್ಥಳಕ್ಕೆ ಕರೆದುಕೊಂಡು ಹೋದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸದ್ಯ ಮೃತ ಬಾಲಕನ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೊಲೆಯಲ್ಲಿ ಆಕೆಯ ಪಾತ್ರವಿದೆಯಾ ಎಂದು ತನಿಖೆ ನಡೆಸುತ್ತಿದ್ದಾರೆ. ಜೊತೆಗೆ ಮಹಿಳೆಯಿಂದ ಬೇರ್ಪಟ್ಟಿರುವ ಪತಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ: ಭಾರತ-ಪಾಕ್‌ ಉದ್ವಿಗ್ನತೆಯಿಂದ ಬಂದ್‌ ಆಗಿದ್ದ 32 ಏರ್‌ಪೋರ್ಟ್‌ಗಳು ಮತ್ತೆ ಕಾರ್ಯಾರಂಭ

  • ಲವ್ವರ್ ಜೊತೆ ಸಿಕ್ಕಿಬಿದ್ದ ಪತ್ನಿ – ಸಿಟ್ಟಿಗೆದ್ದ ಪತಿಯಿಂದ ಡಬಲ್ ಮರ್ಡರ್

    ಲವ್ವರ್ ಜೊತೆ ಸಿಕ್ಕಿಬಿದ್ದ ಪತ್ನಿ – ಸಿಟ್ಟಿಗೆದ್ದ ಪತಿಯಿಂದ ಡಬಲ್ ಮರ್ಡರ್

    ಕಲಬುರಗಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿಯು ಪರ ಪುರುಷನೊಂದಿಗೆ ಒಟ್ಟಿಗೆ ಇದ್ದುದನ್ನು ಕಣ್ಣಾರೆ ಕಂಡ ಪತಿ ಮಾರಕಾಸ್ತ್ರಗಳಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಚ್ಚಿ ಕೊಂದಿರುವ ಘಟನೆ ಕಲಬುರಗಿಯ (Kalaburagi) ಆಳಂದ ತಾಲೂಕಿನ ಮಾದನಹಿಪ್ಪರಗಾ (Madanahipparaga) ಗ್ರಾಮದಲ್ಲಿ ನಡೆದಿದೆ.

    ಸೃಷ್ಟಿ(22), ಖಾಜಪ್ಪ(23) ಮೃತರು. ಆರೋಪಿ ಶ್ರೀಮಂತ ಕೊಲೆ ಮಾಡಿ, ಮಾದನಹಿಪ್ಪರಗಾ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತನ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮೂವರಿಗೆ ಚಾಕು ಇರಿತ

    2 ವರ್ಷಗಳ ಹಿಂದೆ ಸೃಷ್ಟಿಯು ಶ್ರೀಮಂತನನ್ನು ಮದುವೆಯಾಗಿದ್ದಳು. ಗುರುವಾರ ಊರಿಗೆ ತೆರಳಿದ್ದ ಶ್ರೀಮಂತ, ರಾತ್ರಿ ಮನೆಗೆ ಹಿಂದಿರುಗಿದ್ದ. ಮನೆಯಲ್ಲಿ ಪತ್ನಿಯು ಅದೇ ಗ್ರಾಮದ ಖಾಜಪ್ಪನ ಜೊತೆ ಇರುವುದನ್ನು ಕಣ್ಣಾರೆ ಕಂಡು ಕೋಪಗೊಂಡ ಶ್ರೀಮಂತ ತಕ್ಷಣ ಮಾರಕಾಸ್ತ್ರಗಳಿಂದ ಇಬ್ಬರನ್ನೂ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಫಾಜಿಲ್ ಫೋಟೊ ಜೊತೆಗೆ ಸುಹಾಸ್ ಫೋಟೊ ಹಾಕಿ ಟಾರ್ಗೆಟ್ ಫಿಕ್ಸ್ ಮಾಡಿದ್ದ ಹಂತಕರು!

    ಘಟನಾ ಸ್ಥಳಕ್ಕೆ ಮಾದನ ಹಿಪ್ಪರಗಾ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಶ್ರೀಮಂತನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಲವ್ವರ್ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಹಸೆಮಣೆ ಏರಬೇಕಿದ್ದ ಶಿಕ್ಷಕಿ ಆತ್ಮಹತ್ಯೆ

    ಲವ್ವರ್ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಹಸೆಮಣೆ ಏರಬೇಕಿದ್ದ ಶಿಕ್ಷಕಿ ಆತ್ಮಹತ್ಯೆ

    ಗದಗ: ಲವ್ವರ್ (Lover) ಬ್ಲ್ಯಾಕ್‌ಮೇಲ್‌ನಿಂದ ಹಸೆಮಣೆ ಏರಬೇಕಿದ್ದ ದೈಹಿಕ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಸುಂಡಿ (Asundi) ಗ್ರಾಮದಲ್ಲಿ ನಡೆದಿದೆ.

    ಸೈರಾಬಾನು ನದಾಫ್(29) ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿ. ಮದುವೆಗೆ ಇನ್ನೂ ಕೇವಲ 8 ದಿನ ಬಾಕಿ ಇರುವಾಗಲೇ ಸೈರಾಬಾನು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ಕೃಷ್ಣದೇವರಾಯನ ಸಮಾಧಿ ಮೇಲೆ ಮಾಂಸ ಮಾರಾಟ: ಯತ್ನಾಳ್‌ ಆಕ್ರೋಶ

    ಭಾನುವಾರ ಸೈರಾಬಾನು ಪೋಷಕರು ಮದುವೆ (Marriage) ಸಾಮಗ್ರಿಗಳನ್ನು ತರಲು ಪೇಟೆಗೆ ಹೋಗಿದ್ದರು. ಪೋಷಕರು ಮರಳಿ ಬರುವಷ್ಟರಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಚಿನ್ನದ ಬೆಲೆ ಗಗನಕ್ಕೆ – ಮಾರುಕಟ್ಟೆ ಏರಿಳಿತದ ನಡುವೆಯೂ ನೆಚ್ಚಿನ ಹೂಡಿಕೆಯಾಗಲು ಕಾರಣವೇನು?

    ಕಳೆದ 5 ವರ್ಷಗಳಿಂದ ಸೈರಾಬಾನು, ಮೈಲೇರಿ ಎಂಬಾತನನ್ನು ಪ್ರೀತಿ ಮಾಡುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ಲವ್ ಬ್ರೇಕಪ್ ಆಗಿತ್ತು. ಬ್ರೇಕಪ್ ಬಳಿಕ ಪೋಷಕರ ಒತ್ತಾಯದ ಮೇರೆಗೆ ಸೈರಾಬಾನು ಬೇರೆ ಮದುವೆಗೆ ಒಪ್ಪಿಕೊಂಡಿದ್ದರು. ಆದರೆ ಸೈರಾಬಾನು ಮದುವೆ ತಯಾರಿ ನೋಡಿ ಲವರ್ ಮೈಲಾರಿ ಟಾರ್ಚರ್ ಶುರುವಾಗಿತ್ತು. ಬೇರೆ ಮದುವೆ ಆದರೆ ಇಬ್ಬರ ಫೋಟೋ ಹಾಗೂ ವೀಡಿಯೋಗಳನ್ನು ವೈರಲ್ ಮಾಡುತ್ತೇನೆ ಎಂದು ಆತ ಬೆದರಿಕೆ ಹಾಕ್ತಿದ್ದ ಎಂಬ ಆರೋಪವಿದೆ. ಸೈರಾಬಾನು ಮರ್ಯಾದೆಗೆ ಅಂಜಿ ಆತ್ಮಹತ್ಯೆ ಶರಣಾಗಿದ್ದಾರೆ ಎಂಬ ಶಂಕ ವ್ಯಕ್ತವಾಗಿದೆ. ಇದನ್ನೂ ಓದಿ: 2 ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಝೊಮ್ಯಾಟೋ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವು

    ಕೊನೆಯ ಮಗಳು ಎಂದು ಹೆತ್ತವರು ಭರ್ಜರಿಯಾಗಿ ಮದುವೆ ಮಾಡಿಕೊಡಲು ಸಿದ್ಧತೆ ಮಾಡಿಕೊಂಡಿದ್ದರು. ಮದುವೆಯ ಸಂಭ್ರಮದಲ್ಲಿದ್ದ ಮನೆಗೆ ಈಗ ಸೂತಕದ ಛಾಯೆ ಆವರಿಸಿದೆ.

    ಸೈರಾಬಾನು, ಖಾಸಗಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿದ್ದರು. ರಾಷ್ಟ್ರಮಟ್ಟದ ಕುಸ್ತಿಪಟು ಆಗಿ ಸಾಕಷ್ಟು ಹೆಸರು ಮಾಡಿದ್ದ ಇವರು ಹತ್ತಾರು ಮೆಡಲ್, ಕಪ್ ಗೆದ್ದುಕೊಂಡಿದ್ದರು. ಗಂಡು ಮಕ್ಕಳಿಲ್ಲದ ಕಾರಣ ಸೈರಾಬಾನು ಇಡೀ ಮನೆ ಜವಾಬ್ದಾರಿಯನ್ನು ಹೊತ್ತಿದ್ದರು. ಇದನ್ನೂ ಓದಿ: PBKS vs RCB – ಕೊಹ್ಲಿ ರನೌಟ್‌ ಥ್ರೋ, ಸಂಭ್ರಮಾಚರಣೆ ವಿಡಿಯೋ ವೈರಲ್‌

    ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಟಾರ್ಚರ್ ನೀಡಿರುವ ಯುವಕನಿಗೆ ತಕ್ಕ ಶಿಕ್ಷೆಯಾಗಬೇಕೆಂದು ಕುಟುಂಬಸ್ಥರು ಒತ್ತಾಯಿಸಿದರು. ಇದನ್ನೂ ಓದಿ: ಚಿತ್ರದುರ್ಗ | ಬೆಲೆ ಕುಸಿತ – ಕಟಾವು ಮಾಡದೇ ಹೊಲದಲ್ಲೇ ಟೊಮೆಟೊ ಬಿಟ್ಟ ರೈತರು

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಘಟನೆಯ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ (Gadag Rural Police Station) ಪ್ರಕರಣ ದಾಖಲಾಗಿದೆ.

  • ಯುವಕನೊಂದಿಗೆ ಆಂಟಿ ಲವ್ವಿಡವ್ವಿ – ರೀಲ್ಸ್‌ ಪ್ರಿಯನಿಗಾಗಿ ಗಂಡನಿಗೇ ಚಟ್ಟ ಕಟ್ಟಿದ ಪತ್ನಿ

    ಯುವಕನೊಂದಿಗೆ ಆಂಟಿ ಲವ್ವಿಡವ್ವಿ – ರೀಲ್ಸ್‌ ಪ್ರಿಯನಿಗಾಗಿ ಗಂಡನಿಗೇ ಚಟ್ಟ ಕಟ್ಟಿದ ಪತ್ನಿ

    – ದುಪ್ಪಟ್ಟಾದಿಂದ ಪತಿಯ ಕತ್ತು ಹಿಸುಕಿ ಕೊಲೆ

    ನವದೆಹಲಿ: ಕೆಲ ದಿನಗಳ ಹಿಂದೆಯಷ್ಟೇ ಮೀರತ್‌ನಲ್ಲಿ ಮಹಿಳೆಯೊಬ್ಬಳು ತನ್ನ ಪ್ರಿಯಕರನಿಗಾಗಿ ಪತಿಯನ್ನ ಕೊಂದು, ತುಂಡು ತುಂಡಾಗಿ ಕತ್ತರಿಸಿ ಸಿಮೆಂಟ್‌ ತುಂಬಿದ ಡ್ರಮ್‌ನಲ್ಲಿ ಮುಚ್ಚಿಟ್ಟಿದ್ದ ಘಟನೆ ಬೆಳಕಿಗೆ ಬಂದಿತ್ತು. ಅದೇ ರೀತಿ ಮತ್ತೊಂದು ಪ್ರಕರಣ ಈಗ ಹರಿಯಾಣದ ಹಿಸಾರ್‌ (Haryana’s Hisar) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

    ರೀಲ್ಸ್‌ ಪ್ರಿಯನಿಗಾಗಿ (Reels Lover) ಮಹಿಳೆಯೊಬ್ಬಳು ದುಪ್ಪಟ್ಟಾದಿಂದ ತನ್ನ ಪತಿಯ ಕತ್ತುಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಇಬ್ಬರ ಕಳ್ಳಸಂಬಂಧ ಪತ್ತೆಹಚ್ಚಿದ ಬಳಿಕ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಮುಗಿಸಿದ್ದಾಳೆ ಪತ್ನಿ. ರವೀನಾ (32) ಮತ್ತು ಸುರೇಶ್ ಕೊಲೆ ಆರೋಪಿಗಳಾಗಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿದ್ದಾಗ ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯ!

    ಆಂಟಿಗೆ ಲವ್‌ ಹುಟ್ಟಿದ್ದು ಹೇಗೆ?
    32 ವರ್ಷದ ರವೀನಾ ಮತ್ತು ರೀಲ್ಸ್‌ ಸ್ಟಾರ್‌ ಸುರೇಶ್‌ ಸೋಷಿಯಲ್‌ ಮೀಡಿಯಾ ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಪರಿಚಯವಾಗಿದ್ದರು. ಹರಿಯಾಣದ ಪ್ರೇಮ್‌ನಗರಲ್ಲಿ ಇಬ್ಬರು ಒಟ್ಟಿಗೇ ವಿಡಿಯೋ ಮಾಡಲು ಪ್ರಾರಂಭಿಸಿದ್ದರು. ಇದಕ್ಕೆ ರವೀನಾಳ ಪತಿ ಪ್ರವೀಣ್‌ ಮತ್ತು ಕುಟುಂಬಸ್ಥರು ಆಕ್ಷೇಪ ವ್ಯಕ್ತಪಡಿಸಿದ್ರು. ಆದಾಗ್ಯೂ ಸುಮಾರು ಒಂದೂವರೆ ವರ್ಷಗಳ ಕಾಲ ಇಬ್ಬರು ಕಂಟೆಂಟ್‌ ಕ್ರಿಯೇಟ್‌ ಮಾಡುತ್ತಿದ್ದರು. ಇದರಿಂದ ಫಾಲೋವರ್ಸ್‌ಗಳ ಸಂಖ್ಯೆ 34,000ಕ್ಕೆ ತಲುಪಿತ್ತು. ಇದನ್ನೂ ಓದಿ: ತಾಲಿಬಾನ್‌ ಜೊತೆ ಪಾಕಿಸ್ತಾನ ಡಬಲ್‌ ಗೇಮ್‌ ಆಡುತ್ತಿದೆ: ಜೈಶಂಕರ್‌

    ಬಳಿಕ ಇತರ ಕಲಾವಿದರನ್ನೂ ಸೇರಿಸಿಕೊಂಡು ರೀಲ್ಸ್‌ ಮಾಡುತ್ತಿದ್ದರು. ಇದೇ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ ನಡೆಯುತ್ತಿತ್ತು. ರೀಲ್ಸ್‌ ಮಾಡುತ್ತಲೇ ರವೀನಾ ಮತ್ತು ಸುರೇಶ್‌ ಚಕ್ಕಂದ ಆಡಲು ಶುರು ಮಾಡಿದ್ದರು. ಕಳೆದ ಮಾರ್ಚ್‌ 25ರಂದು ರವೀನಾಳ ಪತಿ ಪ್ರವೀಣ್‌ (35), ಇವರಿಬ್ಬರೂ ಅಕ್ರಮ ಸಂಬಂಧ ಇರುವುದನ್ನು ಪತ್ತೆಹಚ್ಚಿದ್ದ. ಹೀಗಾಗಿ ರವೀನಾ ತನ್ನ ಪ್ರಿಯಕರ ಸುರೇಶ್‌ ಜೊತೆ ಸೇರಿ ದುಪ್ಪಟ್ಟಾದಿಂದ ಪತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಇದನ್ನೂ ಓದಿ: ಟ್ರಂಪ್‌ ಬೆದರಿಕೆ ನಡುವೆ ಭಾರತದ ಪ್ರಜೆಗಳಿಗೆ 85,000 ವೀಸಾ ನೀಡಿದ ಚೀನಾ

    ಪ್ರವೀಣ್‌ ಎಲ್ಲಿದ್ದಾನೆ ಅಂತ ಮನೆಯವರು ಕೇಳಿದಾಗ ತನಗೇನು ಗೊತ್ತೇ ಇಲ್ಲವೆಂಬಂತೆ ರವೀನಾ ನಟಿಸಿದ್ದಾಳೆ. ಅದೇ ದಿನ ರಾತ್ರಿ 2:30ರ ಸುಮಾರಿಗೆ ಪ್ರಿಯಕರನ ಬೈಕ್‌ನಲ್ಲಿ (Lover Bike) ಪ್ರವೀಣ್‌ ಶವ ಸಾಗಿಸಿದ್ದಾಳೆ. ಹಿಸಾರ್‌ನರುವ ತನ್ನ ಮನೆಯಿಂದ 6 ಕಿಮೀ ದೂರದಲ್ಲಿರುವ ದಿನೊಡ್‌ ರಸ್ತೆ ಬಳಿಯ ಚರಂಡಿಗೆ ಶವ ಎಸೆದುಬಂದಿದ್ದಾಳೆ. ಕಳೆದ ಮಾರ್ಚ್‌ 28ರಂದು ಪೊಲೀಸರಿಗೆ ಪ್ರವೀಣ್‌ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದನ್ನೂ ಓದಿ: ಬೆಂಗ್ಳೂರಿಗೆ ಸೆಡ್ಡು ಹೊಡೆಯಲು ಆಂಧ್ರ ಸರ್ಕಾರದಿಂದ ಭಾರೀ ಆಫರ್ – ಟಿಸಿಎಸ್‌ಗೆ 99 ಪೈಸೆಗೆ 21 ಎಕ್ರೆ ಭೂಮಿ

    ಬಳಿಕ ಆಕೆಯ ಮನೆಯ ರಸ್ತೆಯಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ರವೀನಾ ಹೆಲ್ಮೆಟ್‌ ಧರಿಸಿ ಬೈಕ್‌ನಲ್ಲಿ ಬಂದ ವ್ಯಕ್ತಿಯೊಂದಿಗೆ ತನ್ನ ಮುಖಮುಚ್ಚಿಕೊಂಡು ಶವ ಸಾಗಿದ್ದಾಳೆ. 2 ಗಂಟೆ ಸುಮಾರಿಗೆ ಮನೆಗೆ ವಾಪಸ್ಸಾಗುವಾಗ ಬೈಕ್‌ನಲ್ಲಿ ಇಬ್ಬರೇ ಬಂದಿದ್ದಾರೆ. ಈ ವೇಳೆ ಮಧ್ಯದಲ್ಲಿದ್ದ ಮೃತದೇಹ ನಾಪತ್ತೆಯಾಗಿತ್ತು. ಬಳಿಕ ಮಾಹಿತಿ ಖಚಿತಪಡಿಸಿಕೊಂಡ ಪೊಲೀಸರು ಇಬ್ಬರನ್ನೂ ಬಂಧಿಸಿ ಜೈಲಿಗಟ್ಟಿದ್ದಾರೆ. ರವೀನಾ ಮತ್ತು ಪ್ರವೀಣ್‌ಗೆ 6 ವರ್ಷದ ಮಗ ಇದ್ದು, ತನ್ನ ಅಜ್ಜನೊಂದಿಗೆ ವಾಸಿಸುತ್ತಿದ್ದಾನೆ.

  • ಪತಿಯನ್ನು ಕೊಂದು ಪೀಸ್ ಪೀಸ್ ಮಾಡಿ ಡ್ರಮ್‌ನಲ್ಲಿ ಮುಚ್ಚಿಟ್ಟ ಪತ್ನಿ

    ಪತಿಯನ್ನು ಕೊಂದು ಪೀಸ್ ಪೀಸ್ ಮಾಡಿ ಡ್ರಮ್‌ನಲ್ಲಿ ಮುಚ್ಚಿಟ್ಟ ಪತ್ನಿ

    – ಪತ್ನಿ, ಪ್ರಿಯಕರ ಅರೆಸ್ಟ್

    ಲಕ್ನೋ: ಪತ್ನಿ ಆಕೆಯ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದು, ದೇಹವನ್ನು ಪೀಸ್ ಪೀಸ್ ಮಾಡಿ, ಡ್ರಮ್‌ನಲ್ಲಿ ತುಂಬಿ ಸಿಮೆಂಟ್ ಹಾಕಿ ಮುಚ್ಚಿಟ್ಟಿರುವ ಘಟನೆ ಉತ್ತರಪ್ರದೇಶದ (Uttar Pradesh) ಬ್ರಹ್ಮಪುರಿಯ ಇಂದಿರಾ ನಗರದಲ್ಲಿ ನಡೆದಿದೆ.

    ಖಾಸಗಿ ಹಡಗು ಕಂಪನಿಯ ಉದ್ಯೋಗಿ ಸೌರಭ್ ರಜಪೂತ್(29) ಕೊಲೆಯಾದ ಪತಿ. ಮೃತ ಸೌರಭ್ ಮಾ. 4ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಪೊಲೀಸರು ಅನುಮಾನದಿಂದ ಪತ್ನಿ ಮುಸ್ಕಾನ್(27)ನನ್ನ ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ಪ್ರಿಯಕರ ಸಾಹಿಲ್(25) ಜೊತೆ ಸೇರಿ ಸೌರಭ್‌ನನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ರಂಜಾನ್‌ ಹಬ್ಬದ ಸಮಯದಲ್ಲಿ 1 ತಿಂಗಳು ಉಪವಾಸ ಮಾಡುವುದೇಕೆ? ಖರ್ಜೂರ ತಿಂದು ಉಪವಾಸ ಮುರಿಯುವುದರ ಹಿಂದಿನ ಕಾರಣವೇನು?

    ಮಾ. 4ರಂದು ಸೌರಭ್‌ನನ್ನ ಮುಸ್ಕಾನ್ ಹಾಗೂ ಸಾಹಿಲ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ನಂತರ ಆತನ ದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿ, ಡ್ರಮ್‌ನೊಳಗೆ ಹಾಕಿ ಸಿಮೆಂಟ್‌ನಿಂದ ಮುಚ್ಚಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.

    ಕೊಲೆ ಮಾಡಿದ ಬಳಿಕ ಮುಸ್ಕಾನ್, ಸೌರಭ್‌ನ ಫೋನ್‌ನಿಂದ ಕುಟುಂಬಸ್ಥರಿಗೆ ಮೆಸೇಜ್ ಕಳುಹಿಸುವ ಮೂಲಕ ಪ್ರಕರಣದ ದಾರಿ ತಪ್ಪಿಸಲು ಪ್ರಯತ್ನಿದ್ದಳು. ಬಳಿಕ ಆಕೆ ಪ್ರಿಯಕರ ಸಾಹಿಲ್ ಜೊತೆ ಸುತ್ತಾಡಲು ತೆರಳಿದ್ದಳು. ಸದ್ಯ ಆರೋಪಿಗಳಾದ ಮುಸ್ಕಾನ್ ಹಾಗೂ ಸಾಹಿಲ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಭೂಮಿಗೆ ಮರಳಿದ ಸುನಿತಾ ವಿಲಿಯಮ್ಸ್- 286 ದಿನಗಳ ಅಂತರಿಕ್ಷ ವಾಸ ಅಂತ್ಯ

    ಸೌರಭ್ 2016ರಲ್ಲಿ ಗೌರಿಪುರದ ಮುಸ್ಕಾನ್ ರಸ್ತೋಗಿಯನ್ನು ಪ್ರೇಮ ವಿವಾಹವಾಗಿದ್ದರು. ಕುಟುಂಬಸ್ಥರು ಇವರಿಬ್ಬರ ವಿವಾಹದಿಂದ ಅಸಮಾಧಾನಗೊಂಡಿದ್ದರಿಂದ ಸೌರಭ್ ಹಾಗೂ ಮುಸ್ಕಾನ್, 3 ವರ್ಷದ ಪುತ್ರಿಯೊಂದಿಗೆ ಇಂದಿರಾನಗರದ ಬಾಡಿಗೆ ಮನೆಯಲ್ಲಿ ಪ್ರತ್ಯೇಕವಾಗಿ ವಾಸವಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

  • ಜಗತ್ತಿನ ವಿವಿಧ ದೇಶಗಳಲ್ಲಿ ಪ್ರೇಮಿಗಳ ದಿನದ ಆಚರಣೆ ವಿಭಿನ್ನ! ಹೇಗೆ?

    ಜಗತ್ತಿನ ವಿವಿಧ ದೇಶಗಳಲ್ಲಿ ಪ್ರೇಮಿಗಳ ದಿನದ ಆಚರಣೆ ವಿಭಿನ್ನ! ಹೇಗೆ?

    ಪ್ರೇಮಿಗಳು ಕಾತುರದಿಂದ ಕಾಯುತ್ತಿರುವ ʻವ್ಯಾಲೆಂಟೆನ್ಸ್‌ ಡೇʼ ಇನ್ನೇನು ತುದಿಗಾಲಿನಲ್ಲಿದೆ. ಪ್ರೇಮಿಗಳ ದಿನಕ್ಕೆ ಸಾಂಕೇತಿಕವಾಗಿ ಈಗಾಗಲೇ ರೋಸ್‌ ಡೇ, ಪ್ರಪೋಸ್‌ ಡೇ, ಚಾಕೊಲೇಟ್‌ ಡೇ ನಡೆದು ಇದೀಗ ಪ್ರೇಮಿಗಳ ದಿನ ಬಂದೇ ಬಿಟ್ಟಿದೆ.

    ಪ್ರಪಂಚದಾದ್ಯಂತ ಪ್ರೇಮಿಗಳು ಈ ದಿನದಂದು ಹೂವು, ಉಡುಗೊರೆ, ಗ್ರೀಟಿಂಗ್ ಕಾರ್ಡ್‌ಗಳನ್ನು ನೀಡುವ ಮೂಲಕ ತಮ್ಮ ಭಾವನೆಗಳನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಭಾವನೆಯೊಂದಿಗೆ, ಒಬ್ಬರಿಗೊಬ್ಬರಲ್ಲಿರುವ ಕಾಳಜಿ, ಮಮಕಾರ, ನಂಬಿಕೆಯನ್ನು ಭಾವಿಸುತ್ತಾರೆ. ಇದು ಭಾರತ ಸೇರಿದಂತೆ ಎಲ್ಲಾ ದೇಶಗಳಲ್ಲಿಯೂ ನಡೆಯುವ ಪ್ರೀತಿ ಹಂಚಿಕೊಳ್ಳುವ ಹಬ್ಬವಾಗಿದೆ.

    ಪ್ರತಿಯೊಂದು ದೇಶದಲ್ಲಿಯೂ ವಿಭಿನ್ನವಾಗಿ ಆಚರಿಸಲಾಗುವ ಈ ಪ್ರೇಮಿಗಳ ಹೇಗಿರುತ್ತದೆ? ವಿಭಿನ್ನ ಸಂಪ್ರದಾಯ, ಸಡಗರದಿಂದ ಕೂಡಿದ್ದು, ಆಶ್ಚರ್ಯಕರವೂ ಆಗಿರುತ್ತದೆ.

    ಫಿನ್‌ಲ್ಯಾಂಡ್
    ಫಿನ್‌ಲ್ಯಾಂಡ್‌ನಲ್ಲಿ ಪ್ರೇಮಿಗಳ ದಿನ ಎಂದರೆ ಸ್ನೇಹಿತರ ದಿನ. ಸ್ನೇಹಿತರನ್ನು ಮೆಚ್ಚಿಸುವುದೇ ಈ ದಿನದ ಮೂಲ ಉದ್ದೇಶ. ಸ್ನೇಹಿತರು, ಪ್ರೀತಿ–ಪಾತ್ರರಿಗೆ ನಮ್ಮ ಪ್ರೀತಿ ಹೇಗಿರುತ್ತದೆ ಎಂದು ಸಣ್ಣ ಉಡುಗೊರೆಗಳು, ಇನ್ನಿತರ ಆಕರ್ಷಣೀಯ ವಸ್ತುಗಳನ್ನು ನೀಡುವ ಮೂಲಕ ಪರಸ್ಪರ ತೋರ್ಪಡಿಸುತ್ತಾರೆ.

    ಜಪಾನ್
    ಪ್ರೇಮಿಗಳ ದಿನದಂದು ಜಪಾನ್‌ನಲ್ಲಿ ಮಹಿಳೆಯರು ತಮ್ಮ ಸಂಗಾತಿಗೆ ಚಾಕೊಲೇಟ್ ಮತ್ತು ಆಭರಣಗಳನ್ನು ನೀಡಿ ಸತ್ಕಾರ ಮಾಡುತ್ತಾರೆ. ಆದರೆ ಜಪಾನ್‌ನಲ್ಲಿ ಪ್ರೇಮಿಗಳ ದಿನ ಫೆಬ್ರುವರಿ 14ಕ್ಕೆ ಮುಗಿಯುವುದಿಲ್ಲ. ಮುಂದುವರಿದು ಮಾರ್ಚ್ 14 ರಂದು ಶ್ವೇತ ದಿನವನ್ನು ಆಚರಿಸಲಾಗುತ್ತದೆ. ಆಗ ಪ್ರೇಮಿಗಳ ದಿನದಂದು ಉಡುಗೊರೆ ಪಡೆದ ಪುರುಷರು ಅದಕ್ಕೆ ಪ್ರತಿಯಾಗಿ ಈ ದಿನದಂದು ವಿಶೇಷ ಉಡುಗೊರೆಯನ್ನು ನೀಡುತ್ತಾರೆ.

    ಡೆನ್ಮಾರ್ಕ್, ನಾರ್ವೆ
    ಡೆನ್ಮಾರ್ಕ್ ಮತ್ತು ನಾರ್ವೆಯಲ್ಲಿ, ಪ್ರೇಮಿಗಳ ದಿನವು ಕೇವಲ ಸಂಗಾತಿಗಳಿಗೆ ಮಾತ್ರವಲ್ಲ ಈ ದಿನದಂದು ಕುಟುಂಬದವರು, ಸ್ನೇಹಿತರು ಕೂಡ ಲವ್‌ ಕಾರ್ಡ್‌ಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಇದರಲ್ಲಿ ತಮಾಷೆಯ ಕವನಗಳಿಂದ ಹೃದಯ ತಟ್ಟುವ ಸಂಭಾಷಣೆಗಳವರೆಗೆ ಬರೆಯಲಾಗುತ್ತದೆ. ಕೆಲವರು ಕಾಗದದ ಕಟ್-ಔಟ್‌ಗಳು ಮತ್ತು ಕವಿತೆಗಳನ್ನು ಒಳಗೊಂಡ ಅನಾಮಧೇಯ ಪತ್ರಗಳನ್ನೂ ಕಳುಹಿಸುತ್ತಾರೆ. ಅಲ್ಲಿನ ಭಾಷೆಯಲ್ಲಿ ಇದಕ್ಕೆ ಗೇಕೆಬ್ರೆವ್ ಅಥವಾ ಸ್ನೋಡ್ರಾಪ್ ಲೆಟರ್‌ ಎಂದು ಕರೆಯಲಾಗುತ್ತದೆ. ಈ ಪತ್ರವನ್ನು ಸ್ವೀಕರಿಸುವವರು ಯಾರು ಕಳುಹಿಸಿದ್ದು ಎಂದು ಸರಿಯಾಗಿ ಊಹಿಸಿದರೆ ಅವರು ಈಸ್ಟರ್ ಎಗ್ ಅನ್ನು ಗೆಲ್ಲುತ್ತಾರೆ.(ಒಂದು ರೀತಿಯ ಆಟ)

    ಫಿಲಿಫೈನ್ಸ್‌
    ಫಿಲಿಫೈನ್ಸ್‌ನಲ್ಲಿ ಪ್ರೇಮಿಗಳ ದಿನಾಚರಣೆ ಬಹಳ ವಿಶೇಷ. ಸಾಮೂಹಿಕ ವಿವಾಹಗಳ ಮೂಲಕ ಇಲ್ಲಿ ಅದ್ಧೂರಿಯಾಗಿ ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತದೆ. ಇಲ್ಲಿನ ಸರ್ಕಾರವು ದೊಡ್ಡ ಪ್ರಮಾಣದ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ‘ನನ್ನ ಒಪ್ಪಿಗೆ ಇದೆ‘ ಎಂದು ಹೇಳುವ ಮೂಲಕ ನೂರಾರು ದಂಪತಿ ಒಟ್ಟಿಗೆ ಪ್ರೇಮ ಅಥವಾ ಮದುವೆ ಮೂಲಕ ತಮ್ಮ ಪ್ರೀತಿಯನ್ನು ಮುಂದುವರಿಸುತ್ತಾರೆ.

    ದಕ್ಷಿಣ ಆಫ್ರಿಕಾ
    ದಕ್ಷಿಣ ಆಫ್ರಿಕಾದಲ್ಲಿ ಫೆಬ್ರವರಿ 15 ರಂದು ರೋಮನ್ ಹಬ್ಬ ʻಲುಪರ್ಕಾಲಿಯಾʼ ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತದೆ. ತಮ್ಮ ಪ್ರೇಮವನ್ನು ರಹಸ್ಯವಾಗಿ ಇಟ್ಟುಕೊಳ್ಳುವ ಬದಲು ಈ ದಿನದಂದು ಮಹಿಳೆಯರು ಧೈರ್ಯವಾಗಿ ತಾವು ಇಷ್ಟಪಟ್ಟ ಹುಡುಗನ ಹೆಸರನ್ನು ತೋಳುಗಳ ಮೇಲೆ ಅಂಟಿಸಿಕೊಳ್ಳುತ್ತಾರೆ. ಈ ರೀತಿ ಮಾಡುವುದು ಇಷ್ಟವಿಲ್ಲ ಎಂದವರು ಹೂಗಳು ಹಾಗೂ ಸಣ್ಣ ಉಡುಗೊರೆಗಳ ಮೂಲಕವೂ ಮನದ ಭಾವನೆಗಳನ್ನು ಹಂಚಿಕೊಳ್ಳಬಹುದು.

    ತೈವಾನ್‌
    ಪ್ರೀತಿ ವ್ಯಕ್ತಪಡಿಸುವ ವಿಚಾರದಲ್ಲಿ ತೈವಾನ್‌ನಲ್ಲಿ ಹೂಗಳು ಪ್ರಮುಖ ಪಾತ್ರ ವಹಿಸುತ್ತವೆ. ಪುರುಷರು ಪ್ರೇಮಿಗಳ ದಿನದಂದು ಮತ್ತು ಜುಲೈ 7 ರಂದು ದೊಡ್ಡ ಹೂಗುಚ್ಛಗಳನ್ನು ನೀಡುತ್ತಾರೆ. ಯಾರಾದರೂ 108 ಗುಲಾಬಿಗಳ ಹೂಗುಚ್ಛವನ್ನು ಪಡೆದರೆ ನಿಮಗೆ ಯಾರೋ ಪ್ರಪೋಸ್ ಮಾಡಲು ಸಿದ್ಧವಿದ್ದಾರೆ ಎಂಬ ಅರ್ಥ.

    ದಕ್ಷಿಣ ಕೊರಿಯಾ
    ದಕ್ಷಿಣ ಕೊರಿಯಾದಲ್ಲಿ ಪ್ರೇಮಿಗಳ ದಿನವು ಒಂದು ತಿಂಗಳ ಕಾಲ ನಡೆಯುವ ಆಚರಣೆಯಾಗಿದೆ. ಫೆಬ್ರವರಿ 14 ರಂದು, ಸಂಗಾತಿಗಳು ಚಾಕೊಲೇಟ್‌ಗಳು ಮತ್ತು ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ನಂತರ, ಮಾರ್ಚ್ 14 ರಂದು, ಜಪಾನ್‌ನ ಸಂಪ್ರದಾಯದಂತೆ ಅವರು ಶ್ವೇತ ದಿನವನ್ನು ಆಚರಿಸುತ್ತಾರೆ. ಅಂತಿಮವಾಗಿ ಏಪ್ರಿಲ್ 14 ರಂದು ಒಂಟಿ ಇರುವವರು ಕಪ್ಪು ದಿನ ಅಥವಾ ಬ್ಲ್ಯಾಕ್‌ ಡೇಯನ್ನು ಆಚರಿಸುತ್ತಾರೆ.

    ಬ್ರೆಜಿಲ್‌
    ಬ್ರೆಜಿಲ್‌ನಲ್ಲಿ, ಜೂನ್ 12 ರಂದು ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತದೆ. ದಿಯಾ ದೋಸ್ ನಮೋರಡೋಸ್ ಎಂದು ಈ ದಿನವನ್ನು ಕರೆಯಲಾಗುತ್ತದೆ. ಅಮೆರಿಕದಲ್ಲಿರುವಂತೆ ಬ್ರೆಜಿಲಿಯನ್ನರು ಲಂಚ್‌, ಡಿನ್ನರ್‌ಗೆ ಹೊರಗೆ ಹೋಗುವುದು, ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುವುದು ಅಥವಾ ತಮ್ಮ ಸಂಗಾತಿಯೊಂದಿಗೆ ವಿಶೇಷ ಡೇಟ್ ನೈಟ್ ಅನ್ನು ಆನಂದಿಸುವ ಮೂಲಕ ಪ್ರೇಮಿಗಳ ದಿನವನ್ನು ಆಚರಿಸುತ್ತಾರೆ.

    ಈ ರೀತಿ ಪ್ರತಿ ದೇಶದಲ್ಲಿಯೂ ವಿಭಿನ್ನವಾಗಿ ತಮ್ಮ ಪ್ರೀತಿಯ್ನನ್ನು ಹಂಚಿಕೊಳ್ಳುವ ಮೂಲಕ ಪ್ರೇಮಿಗಳ ದಿನ ಆಚರಿಸುತ್ತಾರೆ.

  • Hassan | ಮದುವೆಯಾಗಲು ಪ್ರಿಯತಮೆ ನಿರಾಕರಣೆ – ವಿಷ ಸೇವಿಸಿ ಯುವಕ ಆತ್ಮಹತ್ಯೆ

    Hassan | ಮದುವೆಯಾಗಲು ಪ್ರಿಯತಮೆ ನಿರಾಕರಣೆ – ವಿಷ ಸೇವಿಸಿ ಯುವಕ ಆತ್ಮಹತ್ಯೆ

    ಹಾಸನ: ಮದುವೆಯಾಗಲು ಪ್ರಿಯತಮೆ ನಿರಾಕರಿಸಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆ ಅರಸೀಕೆರೆ (Arasikere) ತಾಲೂಕಿನ ಬೈರಾಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ದರ್ಶನ್ (22) ಆತ್ಮಹತ್ಯೆಗೆ ಶರಣಾದ ಯುವಕ. ದರ್ಶನ್ ಗಂಡಸಿ ಹೋಬಳಿ ಬೇವಿನಹಳ್ಳಿಯಲ್ಲಿರುವ ಅಜ್ಜಿ ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬೇವಿನಹಳ್ಳಿ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಐದಾರು ವರ್ಷಗಳಿಂದ ಪರಸ್ಪರ ಪ್ರೀತಿಸಿ ಜೊತೆಯಲ್ಲಿ ಓಡಾಡಿದ್ದರು. ಬಿಎ ಮುಗಿಸಿ ವ್ಯವಸಾಯ ಮಾಡುತ್ತಿದ್ದ ದರ್ಶನ್ ಯುವತಿಗೆ ಮದುವೆಯಾಗೋಣ ಎಂದಿದ್ದ. ಆದರೆ ಯುವತಿ ಮದುವೆಗೆ ನಿರಾಕರಿಸಿದ್ದಾಳೆ. ಇದನ್ನೂ ಓದಿ: ಕಾರು-ಇನ್ನೋವಾ ನಡುವೆ ಭೀಕರ ಅಪಘಾತ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

    ಇದರಿಂದ ಮನನೊಂದ ದರ್ಶನ್ ಫೆ.5ರಂದು ಮನೆಯಲ್ಲಿಯೇ ವಿಷ ಸೇವಿಸಿದ್ದಾನೆ. ವಿಷ ಸೇವನೆ ಬಳಿಕ ದರ್ಶನ್ ವಾಂತಿ ಮಾಡುತ್ತಿದ್ದನ್ನು ಕಂಡು ಸ್ನೇಹಿತರಾದ ರವಿ ಮತ್ತು ಯಶ್ವಂತ್ ಪ್ರಶ್ನಿಸಿದಾಗ, ಯುವತಿ ನನ್ನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ. ನನ್ನ ಮನಸ್ಸಿಗೆ ಬೇಜಾರಾಗಿದೆ. ಹಾಗಾಗಿ ವಿಷ ಸೇವನೆ ಮಾಡಿರುವುದಾಗಿ ಹೇಳಿ ದರ್ಶನ್ ಕುಸಿದು ಬಿದ್ದಿದ್ದಾನೆ. ಇದನ್ನೂ ಓದಿ: ಚಾಮರಾಜನಗರ| ಚಾಲಕನಿಗೆ ಮೂರ್ಛೆ; ಮರಕ್ಕೆ ಡಿಕ್ಕಿಯಾದ ಬಸ್

    ತಕ್ಷಣವೇ ಸ್ನೇಹಿತರು ಅರಸೀಕೆರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ದರ್ಶನ್ ಮೈಸೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ಫೆ.11ರಂದು ‘ಇನ್ವೆಸ್ಟ್‌ ಕರ್ನಾಟಕ 2025’ಕ್ಕೆ ಚಾಲನೆ – ಹೂಡಿಕೆ ಉತ್ಸವಕ್ಕೆ ಮುನ್ನುಡಿ: ಎಂ.ಬಿ.ಪಾಟೀಲ್‌

    ಇನ್ನು ಘಟನೆ ಸಂಬಂಧ ಯುವತಿ ವಿರುದ್ಧ ದರ್ಶನ್ ಬಾವ ಶಂಕರ್ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮೆಟ್ರೋ ಟಿಕೆಟ್ ದರ ಏರಿಕೆ | ಸರ್ಕಾರದಿಂದ ಬೆಲೆ ಏರಿಕೆ, ದರ ಹೆಚ್ಚಳದ ಅಭಿಯಾನ: ರವಿಕುಮಾರ್ ವ್ಯಂಗ್ಯ

  • ಅಮ್ಮನ ಅಕ್ರಮ ಸಂಬಂಧದಿಂದ ರೊಚ್ಚಿಗೆದ್ದು ಪ್ರಿಯಕರನ ಕೊಂದು, ಕರುಳನ್ನು ಕೊಚ್ಚಿ ಎಸೆದ ಮಕ್ಕಳು!

    ಅಮ್ಮನ ಅಕ್ರಮ ಸಂಬಂಧದಿಂದ ರೊಚ್ಚಿಗೆದ್ದು ಪ್ರಿಯಕರನ ಕೊಂದು, ಕರುಳನ್ನು ಕೊಚ್ಚಿ ಎಸೆದ ಮಕ್ಕಳು!

    ಗಾಂಧಿನಗರ: ಗುಜರಾತ್‌ನ (Gujarat) ಗಾಂಧಿನಗರದಲ್ಲಿ (Gandhinagar) ತಮ್ಮ ತಾಯಿಯ ಪ್ರಿಯಕರನನ್ನು (Lover) ಇಬ್ಬರು ಸಹೋದರರು ಅಮಾನುಷವಾಗಿ ಹತ್ಯೆಗೈದ ಘಟನೆ ನಡೆದಿದೆ.

    ಸಂಜಯ್ ಠಾಕೂರ್ (27) ಮತ್ತು ಜಯೇಶ್ ಠಾಕೂರ್ (23) ಎಂಬವರು ತಮ್ಮ ತಾಯಿಯ ಪ್ರಿಯಕರ ರತಂಜಿ ಠಾಕೂರ್ (53) ಎಂಬಾತನನ್ನು ಜ.26ರಂದು ಹತ್ಯೆಗೈದಿದ್ದರು. ಆತ ಕೆಲಸ ಮಾಡುತ್ತಿದ್ದ ಜಾಗದಲ್ಲೇ ಆತನ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ, ಚುಚ್ಚಿದ್ದರು. ಕರಳು ಹೊರ ಬಂದ ಬಳಿಕ, ಅದನ್ನು ಕತ್ತರಿಸಿ ಮೇಲೆ ಏಸೆದು ವಿಕೃತಿ ಮೆರೆದಿದ್ದರು.

    ಆರೋಪಿಗಳು, ಹತ್ಯೆಗೀಡಾದ ವ್ಯಕ್ತಿ ತಮ್ಮ ತಾಯಿಯೊಂದಿಗೆ ಸಂಬಂಧ ಹೊಂದಿರುವುದು ಅವರ ಮೃತ ತಂದೆಗೆ ಅವಮಾನ ಎಂದು ಈ ಕೃತ್ಯ ಎಸಗಿದ್ದಾಗಿ ಪೊಲೀಸರ ಬಳಿ ಹೇಳಿಕೊಂಡಿದ್ದಾರೆ.

    ಈ ಸಂಬಂಧ ರತಂಜಿ ಠಾಕೂರ್ ಮಗ ಅಜಯ್ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಈ ಸಂಬಂಧ ಮಾಧ್ಯಮಗಳ ಜೊತೆ ಮಾತಾಡಿರುವ ಅಜಯ್, ಇಬ್ಬರು ಸಹೋದರರು ಈ ಹಿಂದೆ ತನ್ನ ತಂದೆಗೆ, ಅವರ ತಾಯಿಯಿಂದ ದೂರವಿರಲು ಎಚ್ಚರಿಕೆ ನೀಡಿದ್ದರು. ಈ ವಿಚಾರವಾಗಿ ಹಲವಾರು ಬಾರಿ ಜಗಳ ಸಹ ನಡೆದಿತ್ತು. ವಿವಾದದ ನಂತರ ಗ್ರಾಮಸ್ಥರು ಈ ವಿಷಯದ ಬಗ್ಗೆ ಪಂಚಾಯತ್ ಕೂಡ ನಡೆಸಿದ್ದರು, ಆದರೆ ಯಾವುದೇ ಪರಿಹಾರ ಸಿಕ್ಕಿರಲಿಲ್ಲ. ಕೊಲೆಯ ನಂತರ ಆರೋಪಿಗಳು ಬೈಕ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದರು. ಪೊಲೀಸರು ಅವರ ಮೊಬೈಲ್ ಲೊಕೇಶನ್‌ ಆಧಾರದ ಮೇಲೆ ಪತ್ತೆಹಚ್ಚಿ, ಘಟನೆ ನಡೆದ ಕೆಲವೇ ಗಂಟೆಗಳ ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.