Tag: LR Shivarame Gowda

  • ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ಎಸೆತ- ಪೊಲೀಸರಿಂದ ಬಿಗಿಭದ್ರತೆ

    ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ಎಸೆತ- ಪೊಲೀಸರಿಂದ ಬಿಗಿಭದ್ರತೆ

    ಬೆಂಗಳೂರು: ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ (L R Shivarame Gowda) ಮನೆ ಮೇಲೆ ಮೊಟ್ಟೆ ದಾಳಿಗೆ ಯತ್ನ ನಡೆದಿದೆ.

    ಪೆನ್ ಡ್ರೈವ್ ವಿಚಾರ ಮಾತನಾಡುವಾಗ ಮಾಜಿ ಸಂಸದರು ಜೆಡಿಎಸ್ ವರಿಷ್ಠರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಮೊಟ್ಟೆ ದಾಳಿಗೆ ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ.

    ತಡರಾತ್ರಿ ಕಾರಿನಲ್ಲಿ ಬಂದ ಐದಾರು ಮಂದಿಯಿಂದ ಈ ಯತ್ನ ನಡೆದಿದೆ. ಪೊಲೀಸರು ಕಂಡು ಮನೆ ಮುಂದೆ ಮೊಟ್ಟೆ ಎಸೆದು ಪರಾರಿಯಾಗಿದ್ದಾರೆ. ಈ ನಡುವೆ ಪೊಲೀಸರ ಕಣ್ತಪ್ಪಿಸಿ ಅದಾಗಲೇ ಐದಾರು ಮೊಟ್ಟೆ ಎಸೆದಿದ್ದಾರೆ. ಇದನ್ನೂ ಓದಿ: ಮುಂಗಾರು ಪೂರ್ವದಲ್ಲೇ ಕಾವೇರಿಗೆ ಜೀವಕಳೆ; KRS ಒಳಹರಿವು ಹೆಚ್ಚಳ

    ಸದ್ಯ ಮೊಟ್ಟೆ ಎಸೆಯಲು ಯತ್ನಿಸಿ ಪರಾರಿಯಾದವರಿಗಾಗಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಮೊಟ್ಟೆ ಎಸೆಯಲು ಯತ್ನಿಸಿದವರಿಗೆ ಬಲೆ ಬೀಸಲಾಗಿದೆ.

    ಮೊಟ್ಟೆ ಎಸೆದು ಹೋದ ಬಳಿಕ ಪೊಲೀಸರು ಎಲ್ ಆರ್ ಎಸ್ ಮನೆ ರಸ್ತೆ ಎರಡೂ ಕಡೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದಾರೆ.

  • ಪೆನ್‍ಡ್ರೈವ್ ಕೇಸ್‍ನಲ್ಲಿ ಹೊಸ ಆಡಿಯೋ ಔಟ್- ಕೇಸ್‍ಗೆ ಸಿಗುತ್ತಾ ಟ್ವಿಸ್ಟ್?

    ಪೆನ್‍ಡ್ರೈವ್ ಕೇಸ್‍ನಲ್ಲಿ ಹೊಸ ಆಡಿಯೋ ಔಟ್- ಕೇಸ್‍ಗೆ ಸಿಗುತ್ತಾ ಟ್ವಿಸ್ಟ್?

    – ದೇವರಾಜೇಗೌಡ ಮೇಲೆ ಶಿವರಾಮೇಗೌಡ ಒತ್ತಡ ಹಾಕಿದ್ರಾ..?

    ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ (Prajwal Revanna Pendrive Case) ಪ್ರಕರಣವು ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಇದೀಗ ವಕೀಲ ದೇವರಾಜೇಗೌಡ ಮತ್ತು ಶಿವರಾಮೇಗೌಡ ಮಾತಾಡಿದ್ದಾರೆ ಎನ್ನಲಾದ ಮತ್ತೊಂದು ಆಡಿಯೋ ರಿಲೀಸ್ ಆಗಿದೆ.

    ಕುಮಾರಸ್ವಾಮಿ ಹೆಸರೇಳುವಂತೆ ಶಿವರಾಮೇಗೌಡ (Shivarame Gowda) ಹೇಳಿದ್ದಾರೆನ್ನಲಾದ ಆಡಿಯೋ ಸ್ಫೋಟಗೊಂಡಿದ್ದು, ಇದೀಗ ಈ ಆಡಿಯೋ ಮತ್ತೆ ರಾಜಕೀಯ ಸಂಚಲನ ಸೃಷ್ಟಿಸಿದೆ. ಶಿವರಾಮೇಗೌಡ-ದೇವರಾಜೇಗೌಡ ನಡುವಿನ ಸಂಭಾಷಣೆಯ ಆಡಿಯೋ ವೈರಲ್ ಆಗಿದ್ದು, ಇದರಲ್ಲಿ ದೇವೇಗೌಡರ ಬಗ್ಗೆಯೂ ಶಿವರಾಮೇಗೌಡ ಲಘು ಮಾತುಗಳನ್ನಾಡಿದ್ದಾರೆ.

    ದೇವರಾಜೇಗೌಡ ಆರೋಪ ಸಂಬಂಧ ಇಂದು ಶಿವರಾಮೇಗೌಡ ಸುದ್ದಿಗೋಷ್ಠಿ ನಡೆಸಿದ್ದರು. ಈ ಬೆನ್ನಲ್ಲೇ ಆಡಿಯೋ ವೈರಲ್ ಆಗಿದೆ. ಆಡಿಯೊದಲ್ಲಿ ಅಶ್ಲೀಲ ಪೆನ್ ಡ್ರೈವ್ ಹಂಚಿಕೆಗೆ ಎಲ್‍ಆರ್ ಶಿವರಾಮೇಗೌಡ ಅವರೇ ಒತ್ತಡ ಹಾಕಿರುವುದು ಬಯಲಾಗಿದೆ. ಇದಲ್ಲದೇ ಆಡಿಯೊದಲ್ಲಿ ಹೆಚ್‍ಡಿಕೆ, ದೇವೇಗೌಡ ಹಾಗೂ ಅಮಿತ್ ಶಾ ಹೆಸರು ಉಲ್ಲೇಖ ಮಾಡಿದ್ದಾರೆ. ಇದನ್ನೂ ಓದಿ: ಪೆನ್‌ಡ್ರೈವ್‌ ಮಾರಾಟಕ್ಕಿಟ್ಟಿದ್ದೇ ದೇವರಾಜೇಗೌಡ – ಡಿಕೆಶಿ ಜೊತೆಗೆ ಮಾತನಾಡಿಸಿ ತಪ್ಪು ಮಾಡಿದೆ: ಶಿವರಾಮೇಗೌಡ

    ಆಡಿಯೋದಲ್ಲೇನಿದೆ..?: ದೇವರಾಜೇಗೌಡರ ಜೊತೆ ಮಾತನಾಡಿರುವ ಶಿವರಾಮೇಗೌಡ, ಕುಮಾರಸ್ವಾಮಿನೇ ಬಿಟ್ಟಿದ್ದಾನೆ ಅಂತಾನೇ ಹೇಳಿ. ಕುಮಾರಸ್ವಾಮಿಗೆ ಅವರ ಮಗ ಮುಂದಕ್ಕೆ ಬರಬೇಕೆಂಬ ಆಸೆ ಇದೆ, ಇವನು ಮುಂದಕ್ಕೆ ಬಂದುಬಟ್ಟನ್ನಲ್ಲ ಅಂತಾ, ಅದಕ್ಕೆ ಮಾಡಿದ್ದಾನೆ ಅಂತಾ ಹೇಳಿ. ದೇವೇಗೌಡ ಹಾಗೂ ದೇವೇಗೌಡ ಮಕ್ಕಳು ಏನು ಕಡಿಮೆ ಅಂದುಕೊಳ್ಳಬೇಡಿ. ಇನ್ನು ದೇವೇಗೌಡ ಆತ್ಮಹತ್ಯೆ ಮಾಡಿಕೊಳ್ಳಲ್ಲಿಲ್ವಲಾ..?.ಇನ್ನೇನು ವಿಡಿಯೋ ಇದೆ. ಡಿಕೆ ಮಾತನಾಡಿದ್ರು ಬೆಳಗ್ಗೆ, ನಿಮ್ಮ ಹತ್ತಿರ ಏನೇನಿದೆ ನಮಗೆ ಕೊಡಿ ನಿವು ತಲೆನೆ ಕೆಡಿಸಿಕೊಳ್ಳಬೇಡಿ. ಅವರನ್ನ ಬಲಿ ಹಾಕೋಕೆ ಸರ್ಕಾರದಿಂದಲೇ ತೀರ್ಮಾನವಾಗಿದೆ ಎಂದಿದ್ದಾರೆ.

    ನೀನೇನು ಪೆನ್ಡ್ರೈವ್‍ನ ನಾಗಮಂಗದಲ್ಲೋ, ಹಾಸನದಲ್ಲಿ ಹಂಚಿಲ್ಲ.. ಹಂಚಿದ್ರೂ ತಪ್ಪೇನಿದೆ ಹೇಳಿ. ನೀವ್ ಲಾಯರ್ ಅಲ್ವೇನಲ್ವೆನ್ರಿ..ಅದು ಏನು..? ಏನು ಆಗಲ್ಲ ಎಂದು ಶಿವರಾಮೇಗೌಡ ಹೇಳಿದಾಗ, ಅಣ್ಣ ಕಾನೂನು ಪ್ರಕಾರ ಶಿಕ್ಷೆ ಅಲ್ವೇನಣ್ಣ. ಹೆಣ್ಮಕ್ಕಳ ಮಾಣ ಮರ್ಯಾದೆ ಅಣ್ಣ. ಶೀಲದ ಬಗ್ಗೆ ನಾವೂ ಯೋಚನೆ ಮಾಡಬೇಕಲ್ವ ಎಂದು ದೇವರಾಜೇಗೌಡ ಹೇಳುತ್ತಾರೆ. ಈ ವೇಳೆ ಶಿವರಾಮೇಗೌಡ, ಅದರ ಬಗ್ಗೆ ನೀವೇಕೆ ತಲೆಕೆಡಿಸಿಕೊಳ್ತೀರಿ. ಅಮಿತ್ ಶಾ ಚನ್ನೈನಲ್ಲಿ ಹೇಳಿದ್ದಾರಲ್ಲ, ಹೆಣ್ಮಕ್ಕಳಿಗೆ ಸುರಕ್ಷಿತ ತಾಣವಲ್ಲ ಕರ್ನಾಟಕ ಅಂತಾ ಎಂದಿದ್ದಾರೆ.

    ಈ ಹಿಂದೆಯೋ ಆಡಿಯೋವೊಂದು ವೈರಲ್ ಆಗಿತ್ತು. ಅದರಲ್ಲಿ ಎಸ್‍ಐಟಿಯವರು ಮಾಹಿತಿ ಕೇಳಿದ್ರೆ, ಡಿಕೆ ಶಿವಕುಮಾರ್ ಬಗ್ಗೆ ಏನು ಹೇಳಬೇಡ ಎಂದು ಎಲ್ ಆರ್ ಶಿವರಾಮೇಗೌಡ, ದೇವರಾಜೆಗೌಡ ಗೌಡಗೆ ಹೇಳುತ್ತಾರೆ. ಈ ಆಡಿಯೋ ಇದೀಗ ಭಾರೀ ಸದ್ದು ಮಾಡಿತ್ತು.

  • ದೇವರಾಜೇಗೌಡಗೆ ತಾಕತ್ತಿದ್ದರೆ ಆಡಿಯೋ ಬಿಡುಗಡೆ ಮಾಡಲಿ: ಶಿವರಾಮೇಗೌಡ

    ದೇವರಾಜೇಗೌಡಗೆ ತಾಕತ್ತಿದ್ದರೆ ಆಡಿಯೋ ಬಿಡುಗಡೆ ಮಾಡಲಿ: ಶಿವರಾಮೇಗೌಡ

    ಬೆಂಗಳೂರು: ಯಾವುದೆ ಆಮೀಷ ಒಡ್ಡಿಲ್ಲ‌. ಅವನಿಗೆ ತಾಕತ್ತಿದ್ದರೆ ಗಂಡಸು ಆಗಿದ್ದರೆ ಅವನು ಆಡಿಯೋ ಬಿಡುಗಡೆ ಮಾಡಲಿ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇ ಗೌಡಗೆ ಮಾಜಿ ಸಂಸದ ಎಲ್.‌ ಆರ್‌ ಶಿವರಾಮೇ ಗೌಡ (L.R Shivarame Gowda) ಸವಾಲೆಸೆದಿದ್ದಾರೆ.

    ದೇವರಾಜೇ ಗೌಡ (Devaraje Gowda) ತುರ್ತು ಸುದ್ದಿಗೋಷ್ಠಿ ನಡೆಸಿ ಆರೋಪಗಳ ಸುರಿಮಳೆಗೈದರು. ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಎಸ್ ಐಟಿ ರಚನೆ ಆದ ದಿನ ದೇವರಾಜೇ ಗೌಡ ಬಂದು ನನ್ನ ಭೇಟಿ ಮಾಡಿದ. ಡಿ.ಕೆ ಅವರನ್ನ ಭೇಟಿ‌ ಮಾಡಿಸಿ ಅಂದ. ನಾನು ಡಿಕೆಯವರಿಗೆ ಹೇಳಿದಾಗ ಅವನು ಭೇಟಿ‌ ಮಾಡೋದು ಬೇಡ ಅಂದ್ರು‌. ಆಗ ಫೋನಲ್ಲಾದರು ಮಾತಾಡಿ ಅಂತ ನಾನೇ ಫೋನ್ ಮಾಡಿ ಕೊಟ್ಟೆ ಎರಡು ನಿಮಿಷ ಮಾತಾಡಿದರು‌ ಎಂದರು.

    ಅವನೇ ನನ್ನ ಹತ್ತಿರ ಹೇಳಿದ ಬಿಜೆಪಿ ನಾಯಕರ ಹತ್ತಿರ ಮಾತನಾಡಿದ್ದೇನೆ. ಅವರು ವೀಡಿಯೋ ಬಿಡಿ ಎಂದಿದ್ದಾರೆ. ಕುಮಾರಸ್ವಾಮಿ ಅವರ ಗಮನಕ್ಕೆ ತಂದಿದ್ದೆ ಅವರು ಬಿಡಿ ಅಂದ್ರು ಅದಕ್ಕೆ ಬಿಟ್ಟೆ ಅಂತ ಹೇಳಿದ್ದಾನೆ. ಸಿಬಿಐ ಬಿಟ್ಟು ಯಾವ ತನಿಖೆ ಬೇಕಾದರು ಮಾಡಲಿ. ಯಾವುದೇ ಭಯವಿಲ್ಲ. ಇದರ ಹಿಂದೆ ನನ್ನ ಪಾತ್ರವಾಗಲಿ ಡಿಕೆಶಿ ಪಾತ್ರವಾಗಲಿ ಇಲ್ಲಾ ಎಂದು ಮಾಜಿ ಸಂಸದರು ಸ್ಪಷ್ಟಪಡಿಸಿದರು.

    ಹಣಕ್ಕಾಗಿ ಹೀಗೆಲ್ಲಾ ಮಾಡುತ್ತಿದ್ದಾನೆ ಅಂತ ನನ್ನ ಅಭಿಪ್ರಾಯ. ನನ್ನ ಹತ್ತಿರ ನಿನ್ನೆ ಬಂದು ಇದಕ್ಕಾಗಿ ಸಾಕಷ್ಟು ಹಣ ಖರ್ಚು ಮಾಡಿದ್ದೇನೆ ಎಂದ ಊಟ ಮಾಡಿಕೊಂಡು ಹೋಗು ಅಂತ ಊಟ ಮಾಡಿಸಿ ಕಳುಹಿಸಿದೆ ಎಂದರು. ಇದನ್ನೂ ಓದಿ: ಬೆದರಿಕೆಗಳಿಗೆಲ್ಲಾ ನಾವು ತಲೆಕೆಡಿಸಿಕೊಳ್ಳಲ್ಲ- ದೇವರಾಜೇಗೌಡ ಆರೋಪಕ್ಕೆ ಡಿಕೆಶಿ ತಿರುಗೇಟು

  • ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಎಫ್‍ಐಆರ್

    ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಎಫ್‍ಐಆರ್

    ಬೆಂಗಳೂರು: ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ (L.R Shivarame Gowda) ವಿರುದ್ಧ ಕೇಂದ್ರೀಯ ತನಿಖಾ ದಳ (CBI) ಎಫ್‍ಐಆರ್ ದಾಖಲಿಸಿದೆ.

    ನಕಲಿ ದಾಖಲೆ ಸೃಷ್ಟಿಸಿ 12.48 ಕೋಟಿ ಲೋನ್ (Loan Cheating) ಪಡೆದು ವಂಚನೆ ಮಾಡಿರುವ ಆರೋಪದ ಎಲ್ ಆರ್ ಶಿವರಾಮೇಗೌಡ ಸೇರಿ ಏಳು ಮಂದಿ ವಿರುದ್ಧ ಕೇಸ್ ಹಾಕಲಾಗಿದೆ. ಇದನ್ನೂ ಓದಿ: ಬಿಗ್‍ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್‍ಗೆ ಸಂಕಷ್ಟ..!

    ಎಂಜಿ ರಸ್ತೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಶಿವರಾಮೇ ಗೌಡರು ಲೋನ್ ಪಡೆದಿದ್ದರು. ಇದೀಗ ಈ ಸಾಲದ ಹಣ ಬೇರೆಡೆ ವರ್ಗಾಯಿಸಿ ಅನ್ಯ ಉದ್ದೇಶಕ್ಕೆ ಬಳಕೆ ಮಾಡಿರುವ ಕುರಿತು ಬ್ಯಾಂಕ್ ನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ದೂರು ಸಲ್ಲಿಸಿದ್ದರು. ಈ ದೂರಿನ ಮೇರೆಗೆ ಶಿವರಾಮೇಗೌಡ, ಪತ್ನಿ ಸುಧಾ, ಮಗ ಚೇತನ್ ಗೌಡ, ಶಿವರಾಮೇಗೌಡ ಸೊಸೆ ಹಾಗೂ ರಾಯಲ್ ಕಂಕರ್ಡ್ ಎಜುಕೇಷನಲ್ ಟ್ರಸ್ಟ್ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿದೆ.

    ಐಪಿಸಿ ಸೆಕ್ಷನ್ 120b (ಕ್ರಿಮಿನಲ್‌ ಪಿತೂರಿ), 420 (ವಂಚನೆ), 468 (ಮೋಸ ಮಾಡುವ ಉದ್ದೇಶದಿಂದ ಫೋರ್ಜರಿ) ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಸಿಬಿಐ ಇನ್ಸ್ ಪೆಕ್ಟರ್ ಸಿದ್ದಪ್ಪ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

  • ದೆಹಲಿಯಲ್ಲೂ ಬಹಿರಂಗವಾಯ್ತು ಮೈತ್ರಿ ಸರ್ಕಾರದ ಮನಸ್ತಾಪ

    ದೆಹಲಿಯಲ್ಲೂ ಬಹಿರಂಗವಾಯ್ತು ಮೈತ್ರಿ ಸರ್ಕಾರದ ಮನಸ್ತಾಪ

    ನವದೆಹಲಿ: ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಮನಸ್ತಾಪ, ವಾಗ್ದಾಳಿಯು ದೆಹಲಿಯಲ್ಲಿಯೂ ಬಹಿರಂಗವಾಗಿದೆ.

    ದೆಹಲಿಯಲ್ಲಿ ಕಾಂಗ್ರೆಸ್ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಂಡ್ಯ ಸಂಸದ ಎಲ್.ಆರ್.ಶಿವರಾಮೇಗೌಡ ಅವರು, ಮೈತ್ರಿ ಧರ್ಮ ಪಾಲಿಸುವಂತೆ ರಾಜ್ಯ ಕೈ ಶಾಸಕರಿಗೆ ತಾಕೀತು ಮಾಡಿದ್ದಾರೆ. ಜೊತೆಗೆ ರಾಜ್ಯ ನಾಯಕರನ್ನು ನಿಯಂತ್ರಿಸುವಂತೆ ಕೈ ಹೈಕಮಾಂಡ್‍ಗೂ ತಿಳಿಸಿದ್ದಾರೆ.

    ರಾಜ್ಯ ಕಾಂಗ್ರೆಸ್ ನಾಯಕರು ತಮ್ಮ ಶಾಸಕರನ್ನು ನಿಯಂತ್ರಿಸಬೇಕು. ಜೊತೆಗೆ ಮೈತ್ರಿಗೆ ಧಕ್ಕೆ ಆಗುವಂತಹ ಹೇಳಿಕೆ ನೀಡಬಾರದು. ಈ ಮೂಲಕ ಸಿಎಂ ಕುಮಾರಸ್ವಾಮಿ ಅವರಿಗೆ ಅಭಿವೃದ್ಧಿ ಕೆಲಸ ಮಾಡಲು ಬಿಡಬೇಕು ಎಂದ ಸಂಸದರು, ಕಾಂಗ್ರೆಸ್ ಶಾಸಕರ ಹೇಳಿಕೆ ನೀಡಿದ ನಂತರವೇ ನಮ್ಮ ಶಾಸಕರು ಪ್ರತಿಕ್ರಿಯೆ ನೀಡಿದ್ದು ಎಂದು ಹೇಳಿ ತಮ್ಮ ಶಾಸಕರನ್ನು ಸಮರ್ಥಿಸಿಕೊಂಡರು.

    ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಮೆಚ್ಚುಗೆಯ ಮಾತನಾಡಲಿ. ಆದರೆ ಅದರಿಂದ ಮೈತ್ರಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಬಣದ ಕಾಂಗ್ರೆಸ್ ಶಾಸಕರು, ನಾಯಕರ ವಿರುದ್ಧ ಸಂಸದರು ಕಿಡಿಕಾರಿದರು.

    https://www.youtube.com/watch?v=-cppbuB8d_U

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ ಬಿಜೆಪಿಯಿಂದ ಸ್ಪರ್ಧೆ – ಕರಪತ್ರದಲ್ಲಿ ಎಡವಟ್ಟು

    ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ ಬಿಜೆಪಿಯಿಂದ ಸ್ಪರ್ಧೆ – ಕರಪತ್ರದಲ್ಲಿ ಎಡವಟ್ಟು

    ಮಂಡ್ಯ: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಿಂದ ಮಂಡ್ಯ ಉಪಚುನಾವಣೆ ಕಣಕ್ಕೆ ಇಳಿದ ಎಲ್.ಆರ್.ಶಿವರಾಮೇಗೌಡ ಅವರನ್ನು ಬಿಜೆಪಿಯ ಅಭ್ಯರ್ಥಿ ಅಂತಾ ಕರಪತ್ರದಲ್ಲಿ ತಪ್ಪಾಗಿ ಮುದ್ರಿಸಲಾಗಿದೆ.

    ಮಂಡ್ಯ ಲೋಕಸಭೆ ಉಪಚುನಾವಣೆ ಪ್ರಚಾರದ ಕರ ಪತ್ರದಲ್ಲಿ ಎಡವಟ್ಟು ಮಾಡಲಾಗಿದ್ದು, ಇದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೀಗಾಗಿ ಕರಪತ್ರ ಮುದ್ರಿಸಿದ ಸಾಮಾಜಿಕ ನ್ಯಾಯ ಪರಿಷತ್ ರಾಜ್ಯಾಧ್ಯಕ್ಷ ಅನಂತರಾಯಪ್ಪ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪತ್ರದಲ್ಲಿ ಏನಿದೆ?:
    ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ದಲಿತರ ಹಾಗೂ ರೈತರ ಪರ ಕಾಳಜಿಯನ್ನು ಬೆಂಬಲಿಸುವುದಕ್ಕಾಗಿ ಬಿಜೆಪಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರಿಗೆ ಮತ ನೀಡಲು ಮನವಿ ಎಂದು ಅನಂತರಾಯಪ್ಪ ಅವರು ಮುದ್ರಿಸಿದ್ದಾರೆ. ಇದನ್ನು ನೋಡಿದ, ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದ್ದಾರೆ. ಇದೇ ಕರಪತ್ರದಲ್ಲಿ ಬಿಜೆಪಿ ಅನೈತಿಕ ರಾಜಕಾರಣ ಮಾಡುತ್ತಿದೆ ಹಾಗೂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ಮುಖಭಂಗ ಅನುಭವಿಸಿದ್ದಾರೆ ಎಂದು ಲೇವಡಿ ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv