ಲಕ್ನೋ: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ (Agra-Lucknow Expressway) ನಡೆದ ರಸ್ತೆ ಅಪಘಾತದಲ್ಲಿ ಉತ್ತರ ಪ್ರದೇಶದ ಮಹಿಳಾ ಕಲ್ಯಾಣ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಬೇಬಿ ರಾಣಿ ಮೌರ್ಯ (Baby Rani Maurya) ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಶುಕ್ರವಾರ ರಾತ್ರಿ ಲಕ್ನೋಗೆ (Lucknow) ತೆರಳುತ್ತಿದ್ದಾಗ ಸಚಿವೆಯ ಕಾರಿನ ಮುಂದೆ ಸಾಗುತ್ತಿದ್ದ ಟ್ರಕ್ನ ಒಂದು ಟೈರ್ ಇದ್ದಕ್ಕಿದ್ದಂತೆ ಸಿಡಿದಿದೆ. ಬಳಿಕ ನಿಯಂತ್ರಣ ತಪ್ಪಿ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ. ಚಾಲಕ ಚಾಣಾಕ್ಷ್ಯತನದಿಂದ ಕಾರನ್ನು ಬದಿಗೆ ತಂದಿದ್ದು ಭಾರೀ ಅಪಘಾತ ತಪ್ಪಿದಂತಾಗಿದೆ. ಅಪಘಾತಲ್ಲಿ ಕಾರಿಗೆ ಭಾರೀ ಹಾನಿಯಾಗಿದ್ದು, ಸಚಿವೆ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.
ಹತ್ರಾಸ್ ಜಿಲ್ಲೆಯ ಹಲವೆಡೆ ಆಯೋಜಿಸಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರು ಲಕ್ನೋಗೆ ವಾಪಸ್ ಆಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯ ನಂತರ ಪೊಲೀಸರು ಟ್ರಕ್ನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಬೇಬಿ ರಾಣಿ ಮೌರ್ಯ ಅವರನ್ನು ಮತ್ತೊಂದು ವಾಹನದಲ್ಲಿ ಲಕ್ನೋಗೆ ಕಳುಹಿಸಿದ್ದಾರೆ.
ಎಕ್ಸ್ಪ್ರೆಸ್ವೇಯಲ್ಲಿ ಅಪಘಾತಗಳನ್ನು ತಡೆಗಟ್ಟಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನೂ ಅಪಘಾತದಿಂದಾಗಿ ಅಧಿಕಾರಿಗಳು ಎಕ್ಸ್ಪ್ರೆಸ್ವೇ ಸುರಕ್ಷತಾ ಪ್ರೋಟೋಕಾಲ್ ಪರಿಶೀಲಿಸುವ ಸಾಧ್ಯತೆ ಇದೆ.
ಲಕ್ನೋ: ಪಾಕಿಸ್ತಾನದ ಪ್ರತಿಯೊಂದು ಭೂಪ್ರದೇಶವೂ ಈಗ ನಮ್ಮ ಬ್ರಹ್ಮೋಸ್ನ ವ್ಯಾಪ್ತಿಯಲ್ಲಿದೆ. `ಆಪರೇಷನ್ ಸಿಂಧೂರ’ (Operation Sindoor) ಸಮಯದಲ್ಲಿ ಬ್ರಹ್ಮೋಸ್ ಕ್ಷಿಪಣಿ ವ್ಯವಸ್ಥೆಯ ಮೂಲಕ ಭಾರತ ತನ್ನ ಶತ್ರುಗಳನ್ನು ಬಿಡುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿದರು.
ಉತ್ತರ ಪ್ರದೇಶದ (Uttara Pradesh) ಲಕ್ನೋದಲ್ಲಿರುವ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್ಗೆ ಹಸಿರು ನಿಶಾನೆ ನೀಡಿದರು. ಬಳಿಕ ಮಾತನಾಡಿದ ಅವರು, `ಆಪರೇಷನ್ ಸಿಂಧೂರ’ ಇದು ಕೇವಲ `ಟ್ರೇಲರ್’ ಮಾತ್ರ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದರು.ಇದನ್ನೂ ಓದಿ: ಪಾಕ್ನಲ್ಲಿರುವ ಆಫ್ಘನ್ನರಿಗೆ ದೇಶ ತೊರೆಯುವಂತೆ ರಕ್ಷಣಾ ಸಚಿವ ಖವಾಜಾ ವಾರ್ನಿಂಗ್
ಆಪರೇಷನ್ ಸಿಂಧೂರ ಗೆಲುವು ಒಂದು ಸಣ್ಣ ಘಟನೆಯಲ್ಲ. ಗೆಲುವು ನಮಗೆ ಅಭ್ಯಾಸವಾಗಿದೆ, ನಮ್ಮ ವಿರೋಧಿಗಳು ಬ್ರಹ್ಮೋಸ್ನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಬ್ರಹ್ಮೋಸ್ ಕೇವಲ ಕ್ಷಿಪಣಿಯಲ್ಲ, ಬದಲಾಗಿ ಭಾರತದ ಬೆಳೆಯುತ್ತಿರುವ ಸ್ಥಳೀಯ ಸಾಮರ್ಥ್ಯಗಳ ಸಂಕೇತವಾಗಿದೆ. ವೇಗ, ನಿಖರತೆ ಮತ್ತು ಶಕ್ತಿಯ ಈ ಸಂಯೋಜನೆಯು ಬ್ರಹ್ಮೋಸ್ ಅನ್ನು ವಿಶ್ವದ ಅತ್ಯುತ್ತಮ ಕ್ಷಿಪಣಿಗಳಲ್ಲಿ ಒಂದನ್ನಾಗಿ ಮಾಡುತ್ತಿದೆ. ಬ್ರಹ್ಮೋಸ್ ಭಾರತೀಯ ಸಶಸ್ತ್ರ ಪಡೆಗಳ ಬೆನ್ನೆಲುಬಾಗಿ ಮಾರ್ಪಟ್ಟಿದೆ. ಭಾರತ ತನ್ನ ಭದ್ರತಾ ಅಗತ್ಯಗಳನ್ನು ಪೂರೈಸುವ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಿದರು.
अब भारत ब्रह्मोस जैसी मिसाइल के माध्यम से न केवल अपनी सुरक्षा को बल्कि अपने मित्र देशों की सुरक्षा की आवश्यकताओं की पूर्ति करने में सक्षम है।
माननीय रक्षा मंत्री श्री @rajnathsingh जी के साथ आज ब्रह्मोस एयरोस्पेस लखनऊ इकाई में उत्पादित ब्रह्मोस मिसाइलों के प्रथम बैच के फ्लैग-ऑफ… pic.twitter.com/H0pBwsRKzq
ನಂತರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ಭಾರತವು ಈಗ ತನ್ನ ಭದ್ರತಾ ಅಗತ್ಯಗಳನ್ನು ಮಾತ್ರವಲ್ಲದೆ ಪ್ರಪಂಚದಾದ್ಯಂತದ ತನ್ನ ಸ್ನೇಹಪರ ರಾಷ್ಟ್ರಗಳ ಭದ್ರತಾ ಅಗತ್ಯಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ. ಲಕ್ನೋದ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳ ಮೊದಲ ಬ್ಯಾಚ್ಗೆ ಚಾಲನೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ‘ಮೇಕ್ ಇನ್ ಇಂಡಿಯಾ’ ಪ್ರತಿಜ್ಞೆಯನ್ನು ಈಡೇರಿಸುವ ಅದೃಷ್ಟಶಾಲಿ ನಾನು. ಇದು ಆತ್ಮನಿರ್ಭರದ ಅಡಿಪಾಯ ಎಂದರು.ಇದನ್ನೂ ಓದಿ: ಪಂಜಾಬ್ | ಗರೀಬ್ ರಥ ಎಕ್ಸ್ಪ್ರೆಸ್ ರೈಲು ಬೋಗಿಗೆ ಬೆಂಕಿ – ಧಗಧಗಿಸಿದ ಜ್ವಾಲೆ; ಪ್ರಯಾಣಿಕರು ಸೇಫ್
ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) `ಐ ಲವ್ ಮುಹಮ್ಮದ್’ (I Love Muhammad) ಅಭಿಯಾನ ಉಲ್ಬಣಗೊಂಡ ಬೆನ್ನಲ್ಲೇ ಬಿಜೆಪಿ ಯುವ ಮೋರ್ಚಾ (BJP Yuva Morcha) ಟಕ್ಕರ್ ಕೊಡಲು `ಐ ಲವ್ ಯೋಗಿ ಆದಿತ್ಯನಾಥ್’ ಅಭಿಯಾನ ಪ್ರಾರಂಭಿಸಿದೆ.
`ಐ ಲವ್ ಯೋಗಿ ಆದಿತ್ಯನಾಥ್’ (I Love Yogi Adityanath), ‘ಐ ಲವ್ ಬುಲ್ಡೋಜರ್’ (I Love Bulldozer) ಹೆಸರಿನಲ್ಲಿ ಬಿಜೆಪಿ ಯುವ ಮೋರ್ಚಾ ಅಭಿಯಾನ ಆರಂಭಿಸಿದ್ದು, ಲಕ್ನೋದ (Lucknow) ಪ್ರಮುಖ ರಸ್ತೆಗಳಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಸಿಎಂ ಮತ್ತು ಬುಲ್ಡೋಜರ್ ಕ್ರಮವನ್ನು ಸಮರ್ಥಿಸಿಕೊಂಡು ಬಿಜೆಪಿ ಯುವ ಮೋರ್ಚಾ ನಾಯಕರು ಫ್ಲೆಕ್ಸ್ ಅಳವಡಿಸಿದ್ದಾರೆ. ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಮಿತ್ ತ್ರಿಪಾಠಿ ನೇತೃತ್ವದಲ್ಲಿ ಫ್ಲೆಕ್ಸ್ ಅಳವಡಿಸಲಾಗಿದೆ. ಇದನ್ನೂ ಓದಿ: ಯುಪಿಯಲ್ಲಿ ‘ಐ ಲವ್ ಮುಹಮ್ಮದ್’ ವಿವಾದ ಉಲ್ಬಣ – ಪ್ರತಿಭಟನೆ ವೇಳೆ ಕಲ್ಲೆಸೆತ, ಪೊಲೀಸರಿಂದ ಲಾಠಿಚಾರ್ಜ್
#WATCH | Uttar Pradesh: BJP Yuva Morcha Lucknow general secretary Amit Tripathi puts up flex boards reading ‘I love Shri Yogi Adityanath ji’ and ‘I love bulldozer’ in parts of the city. pic.twitter.com/quZR9qzUTV
ಬರೇಲಿಯಲ್ಲಿ ಹಿಂಸಾತ್ಮಕ ಪ್ರತಿಭಟನೆ; ಲಾಠಿಚಾರ್ಜ್
`ಐ ಲವ್ ಮುಹಮ್ಮದ್’ ಫ್ಲೆಕ್ಸ್ ವಿಚಾರವಾಗಿ ಕಾನ್ಪುರದಲ್ಲಿ ಮೊದಲು ವಿವಾದ ಆರಂಭವಾಗಿತ್ತು. ಶುಕ್ರವಾರ ಬರೇಲಿಯಲ್ಲಿ ನಡೆದ ಪ್ರತಿಭಟನೆ ಹಿಂಸತ್ಮಾಕ ಸ್ವರೂಪ ಪಡೆದುಕೊಂಡಿತ್ತು. ಶುಕ್ರವಾರದ ಪ್ರಾರ್ಥನೆ ಬಳಿಕ ಪ್ರತಿಭಟನೆ ಶುರುವಾಗಿದೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದಾಗ ಲಾಠಿಚಾರ್ಜ್ ಮಾಡಲಾಗಿದೆ. ಪರಿಸ್ಥಿತಿ ಉದ್ವಿಗ್ನವಾದ ಹಿನ್ನೆಲೆ ಭದ್ರತೆ ಆರ್ಎಎಫ್ ಮತ್ತು ಪಿಎಸಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಮನೆಯಲ್ಲಿ ಹಣ ಕದಿಯುತ್ತಿದ್ದಳೆಂದು 13 ವರ್ಷದ ಮಗಳನ್ನೇ ಕತ್ತು ಹಿಸುಕಿಕೊಂದ ಕಟುಕ ತಂದೆ
ಸೆ.4 ರಂದು ‘ಐ ಲವ್ ಮುಹಮ್ಮದ್’ ಪೋಸ್ಟರ್ ಹೊಂದಿರುವ ಟೆಂಟ್ ಅನ್ನು ಪೊಲೀಸರು ತೆಗೆಸಿದ್ದರು. ನಂತರ ಕಾನ್ಪುರದಲ್ಲಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಧ್ವನಿ ಎತ್ತಲು ಮತ್ತು ಜ್ಞಾಪಕ ಪತ್ರವನ್ನು ಸಲ್ಲಿಸಲು ಧರ್ಮಗುರುವೊಬ್ಬರು ಕರೆ ನೀಡಿದ್ದರು. ಶುಕ್ರವಾರದ ಪ್ರಾರ್ಥನೆಯ ನಂತರ ಬರೇಲಿಯ ಇಸ್ಲಾಮಿಯಾ ಮೈದಾನದ ಬಳಿ ಭಾರಿ ಜನಸಮೂಹ ಜಮಾಯಿಸಿತ್ತು. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್ ದಾಖಲಾಗುತ್ತಿದ್ದಂತೆ ಬ್ಯಾಂಕ್ನಿಂದ 55 ಲಕ್ಷ ವಿತ್ಡ್ರಾ ಮಾಡಿದ ಸ್ವಾಮಿ ಚೈತನ್ಯಾನಂದ
ಸೆ.4 ರಂದು ಕಾನ್ಪುರದಲ್ಲಿ ಈದ್-ಎ-ಮಿಲಾದ್-ಉನ್-ನಬಿ ಮೆರವಣಿಗೆಯ ಸಂದರ್ಭದಲ್ಲಿ, ಮಾರ್ಗದುದ್ದಕ್ಕೂ ಟೆಂಟ್ನಲ್ಲಿ ‘ಐ ಲವ್ ಮುಹಮ್ಮದ್’ ಪೋಸ್ಟರ್ ಹಾಕಲಾಗಿತ್ತು. ಇದು ಗಲಾಟೆಗೆ ಕಾರಣವಾಗಿದೆ.
ಲಕ್ನೋ: ಉತ್ತರ ಪ್ರದೇಶದ (Uttar Pradesh) ವಜೀರ್ಗಂಜ್ನಲ್ಲಿ ಪೊಲೀಸರು (Police) ವಾಹನ ತಪಾಸಣೆ ನಡೆಸುವ ವೇಳೆ ನಕಲಿ ಐಎಎಸ್ ಅಧಿಕಾರಿಯೊಬ್ಬ (Fake IAS Officer) ಸಿಕ್ಕಿಬಿದ್ದಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸೌರಭ್ ತ್ರಿಪಾಠಿ (36) ಎಂದು ಗುರುತಿಸಲಾಗಿದೆ. ಈತ ಬಿ.ಟೆಕ್ ಪದವೀಧರನಾಗಿದ್ದು, ಐಎಎಸ್ ಅಧಿಕಾರಿಯ ಸೋಗಿನಲ್ಲಿ ಓಡಾಡುತ್ತಿದ್ದ. ಕಾರ್ಗಿಲ್ ಪಾರ್ಕ್ ಬಳಿ ಈತನ ಕಾರನ್ನು ಪೊಲೀಸರು ತಡೆದು ಪರಿಶೀಲನೆ ನಡೆಸಿದ್ದರು. ಈ ವೇಳೆ ಈತನ ನಡೆಯ ಮೇಲೆ ಪೊಲೀಸರಿಗೆ ಅನುಮಾನ ಮೂಡಿತ್ತು. ಈ ವೇಳೆ ವಿಚಾರಣೆ ನಡೆಸಿದಾಗ ಈತ ನಕಲಿ ಐಎಎಸ್ ಅಧಿಕಾರಿ ಎಂದು ತಿಳಿದು ಬಂದಿದೆ. ಇದನ್ನೂ ಓದಿ: 162 ಬಾರಿ ಫಾರಿನ್ ಟ್ರಿಪ್, 300 ಕೋಟಿ ಹಗರಣ – ನಕಲಿ ರಾಯಭಾರ ಕಚೇರಿ ರಹಸ್ಯ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು
ಆರೋಪಿಯು ಹಲವು ವರ್ಷಗಳಿಂದ ನಕಲಿ ಐಎಎಸ್ ಅಧಿಕಾರಿಯಂತೆ ನಟಿಸುತ್ತಿದ್ದ. ಈ ಮೂಲಕ ಕೆಲವು ಸವಲತ್ತುಗಳನ್ನು ಪಡೆದುಕೊಂಡಿದ್ದ. ಬಂಧನದ ಬಳಿಕ ಆತನ ಬಳಿಯಿದ್ದ ಹಲವಾರು ಐಷಾರಾಮಿ ಕಾರುಗಳು, ನಕಲಿ ಸರ್ಕಾರಿ ದಾಖಲೆಗಳು, ಅಧಿಕೃತ ಕಾರು ಪಾಸ್ಗಳನ್ನು, ಸೈರನ್ ಹೊಂದಿದ್ದ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯ ಐಷಾರಾಮಿ ಕಾರುಗಳಲ್ಲಿ ರೇಂಜ್ ರೋವರ್ ಮತ್ತು ಮರ್ಸಿಡಿಸ್-ಬೆನ್ಜ್ ಸಿ 220 ಸಹ ಸೇರಿದೆ. ಆತನ ವಾಹನಗಳ ಮೇಲೆ ‘ಭಾರತ ಸರ್ಕಾರ’ ಎಂಬ ಲೇಬಲ್ ಸಹ ಅಂಟಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಲಕ್ನೋ: ಇಲ್ಲಿನ ಗುಡಂಬಾ (Gudamba) ಪ್ರದೇಶದ ಮನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ (Firecracker Factory) ಸ್ಫೋಟ (Blast) ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.
ಗುಡಂಬಾದ ಬೆಹ್ತಾ (Behta) ಪ್ರದೇಶದಲ್ಲಿ ಭಾನುವಾರಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಪಟಾಕಿ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅನಿಂದ್ಯ ವಿಕರಂ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತ – ವ್ಯಕ್ತಿ ಸಾವು
ಸ್ಫೋಟದ ನಂತರ ಛಾವಣಿಯ ಒಂದು ಭಾಗ ಕುಸಿದಿದ್ದು, ಐವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಶಾಕ್ ಜಿ, ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದ ಮೂವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚೀನಾ ಕಮ್ಯುನಿಸ್ಟ್ ಪಕ್ಷದ ಪ್ರಬಲ ನಾಯಕ, ಜಿನ್ಪಿಂಗ್ ಆಪ್ತಮಿತ್ರನನ್ನ ಭೇಟಿಯಾದ ಮೋದಿ
ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸಲು ತಕ್ಷಣವೇ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಮಸೀದಿಯಲ್ಲಿ ಗಣೇಶನ ಪ್ರತಿಷ್ಠಾಪನೆ; ಭಾವೈಕ್ಯತೆ ಮೆರೆದ ಗ್ರಾಮಸ್ಥರು
ಲಕ್ನೋ: ಯಶಸ್ವಿ ಬಾಹ್ಯಾಕಾಶ ಯಾತ್ರೆಯ ನಂತರ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ (Shubanshu Shukla) ಅವರು ಮೊದಲ ಬಾರಿಗೆ ತಮ್ಮ ತವರೂರು ಲಕ್ನೋಗೆ (Lucknow) ಬಂದಿಳಿದಿದ್ದು, ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಮಾಡಿಕೊಳ್ಳಲಾಯಿತು.
ಸೋಮವಾರ ಬೆಳಿಗ್ಗೆ (ಆ.25) ಲಕ್ನೋ ವಿಮಾನ ನಿಲ್ದಾಣದಲ್ಲಿ (Lucknow Airport) ಶುಭಾಂಶು ಶುಕ್ಲಾ ಅವರು ಕಲಿತ ಹಳೆಯ ಶಾಲೆ ಸಿಟಿ ಮಾಂಟೆಸ್ಸರಿಯ (City Montessori) ವಿದ್ಯಾರ್ಥಿಗಳು ಸ್ವಾಗತಿಸಿದರು. ಇದೇ ವೇಳೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬ್ರಜೇಶ್ ಪಾಠಕ್ (Brajesh Pathak) ಗೌರಪೂರ್ವಕವಾಗಿ ಸ್ವಾಗತಿಸಿದರು. ನಿಲ್ದಾಣದಲ್ಲಿ ಶುಭಾಂಶು ಕುಟುಂಬಸ್ಥರು ಸೇರಿದಂತೆ ಲಕ್ನೋದ ಜನರು ಸಂಭ್ರಮದಲ್ಲಿ ವಿಜಯ ಘೋಷಣೆಗಳನ್ನು ಕೂಗಿದರು.ಇದನ್ನೂ ಓದಿ: ಒಡಿಶಾ | ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಕೊಚ್ಚಿಹೋದ ಯೂಟ್ಯೂಬರ್
ಬಳಿಕ ಸಿಟಿ ಮಾಂಟೆಸ್ಸರಿ ಶಾಲೆಯ 63,000 ವಿದ್ಯಾರ್ಥಿಗಳು ವಿಮಾನ ನಿಲ್ದಾಣದಿಂದ ಜಿ20 ಚೌಕ್ವರೆಗೆ ವಿಜಯಯಾತ್ರೆ ನಡೆಸಿದರು. ಇದೇ ವೇಳೆ ಪತ್ರಿಕಾಗೋಷ್ಠಿಯಲ್ಲಿ ಯುಪಿ ಡಿಸಿಎಂ ಪಾಠಕ್ ಮಾತನಾಡಿ, ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತವು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಎತ್ತರಕ್ಕೆ ತಲುಪಿದೆ. ನಮ್ಮೂರಿನ ಹೆಮ್ಮೆಯ ಪುತ್ರನನ್ನು ಸ್ವಾಗತಿಸಲು ನಮಗೆ ನಿಜಕ್ಕೂ ತುಂಬಾ ಹೆಮ್ಮೆ ಎನಿಸುತ್ತದೆ. ಶುಭಾಂಶು ಶುಕ್ಲಾ ಇಡೀ ಜಗತ್ತಿಗೆ ಹೊಸ ಮಾರ್ಗವನ್ನು ತೋರಿಸಿದ್ದಾರೆ. ಈ ಹಿನ್ನೆಲೆ ರಾಜ್ಯ ಸರ್ಕಾರವು ಅವರ ಗೌರವಾರ್ಥವಾಗಿ ರಾಜ್ಯಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈ ಮೂಲಕ ಶುಭಾಂಶು ಯುವಕರಿಗೆ ಸ್ಫೂರ್ತಿಯಾಗಲಿದ್ದಾರೆ ಎಂದರು.
ಲಕ್ನೋ: ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನ ಟೋಲ್ ಪ್ಲಾಜಾ ಸಿಬ್ಬಂದಿ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿದ್ದ ಘಟನೆಗೆ ಸಂಬಂಧಿಸಿದಂತೆ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿ (NHAI) ಮೀರತ್ನ ಟೋಲ್ ಸಂಸ್ಥೆಗೆ 20 ಲಕ್ಷ ರೂ. ದಂಡ ವಿಧಿಸಿದೆ.
ಉತ್ತರ ಪ್ರದೇಶದ ಮೀರತ್ನಲ್ಲಿ ಯೋಧ ಕಪಿಲ್ ಕವಾಡ್ ಎನ್ನುವವರ ಮೇಲೆ ಟೋಲ್ ಸಿಬ್ಬಂದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಅಮಾನವೀಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಈಗಾಗಲೇ ಆರು ಜನರನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಅತ್ಯಾಚಾರ ಆರೋಪ ಕೇಸ್ – ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನಿಗೆ ಮಧ್ಯಂತರ ಜಾಮೀನು ಮಂಜೂರು
ಏನಿದು ಘಟನೆ?
ಭಾರತೀಯ ಸೇನೆಯ ರಜಪೂತ ರೆಜಿಮೆಂಟ್ನಲ್ಲಿದ್ದ ಕಪಿಲ್ ಕವಾಡ್, ರಜೆಯ ನಿಮಿತ್ತ ಮನೆಗೆ ತೆರಳಿದ್ದರು. ಶ್ರೀನಗರದಲ್ಲಿರುವ ತಮ್ಮ ಕರ್ತವ್ಯದ ಸ್ಥಳಕ್ಕೆ ಮರಳಲು ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಟೋಲ್ ಬೂತ್ನಲ್ಲಿ ಸಿಲುಕಿಕೊಂಡಿದ್ದಾರೆ. ತನ್ನ ವಿಮಾನಕ್ಕೆ ತಡವಾಗುತ್ತಿದೆ ಎಂಬ ಆತಂಕದಿಂದ ಕಪಿಲ್ ಕಾರಿನಿಂದ ಇಳಿದು ಟೋಲ್ ಬೂತ್ ಸಿಬ್ಬಂದಿಯೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ ವಾಗ್ವಾದ ಉಂಟಾಗಿದೆ.
ಟೋಲ್ ಪ್ಲಾಜಾದ ಐವರು ಸಿಬ್ಬಂದಿ ಕಪಿಲ್ ಮತ್ತು ಅವರ ಸೋದರ ಸಂಬಂಧಿಯನ್ನ ಥಳಿಸಿದ್ದಾರೆ. ಕಪಿಲ್ಗೆ ದೊಣ್ಣೆಯಿಂದ ಹೊಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲವು ದಾಳಿಕೋರರು ಕಪಿಲ್ ಅವರನ್ನು ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ. ವಿಡಿಯೋ ವೈರಲ್ ಆಗ್ತಿದ್ದಂತೆ ಕೇಸ್ ದಾಖಲಿಸಿಕೊಂಡ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಭಾರೀ ಮಳೆಗೆ ವಿದ್ಯುತ್ ಸಮಸ್ಯೆ – ಮಾರ್ಗ ಮಧ್ಯದಲ್ಲೇ ನಿಂತ ಮೋನೋ ರೈಲು
ನವದೆಹಲಿ: ಆಕ್ಸಿಯಂ ಸ್ಪೇಸ್ ಮಿಷನ್ ಬಳಿಕ ಮೊದಲ ಬಾರಿಗೆ ತವರು ನೆಲ ಭಾರತಕ್ಕೆ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಅವರು ಭಾನುವಾರ ಮರಳಲಿದ್ದಾರೆ.
ಈ ವೇಳೆ ಪ್ರಧಾನಿ ಮೋದಿಯನ್ನು (Narendra Modi) ಭೇಟಿಯಾಗಲಿದ್ದಾರೆ. ನಂತರ ತಮ್ಮ ತವರೂರಾದ ಉತ್ತರ ಪ್ರದೇಶದ ಲಖನೌಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 2027ರಲ್ಲಿ ಇಸ್ರೋ ತನ್ನ ಮೊದಲ ಮಾನವ ಸಹಿತ ಬಾಹ್ಯಾಕಾಶ ಗಗನಯಾನವನ್ನು ಎದುರು ನೋಡುತ್ತಿರುವುದರಿಂದ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ್ದ ಶುಕ್ಲಾ ಅವರು ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ. ಇದನ್ನೂ ಓದಿ: ಉಪ ರಾಷ್ಟ್ರಪತಿ ಚುನಾವಣೆ – ಬಿಜೆಪಿ ಪಟ್ಟಿಯಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರು
ಇದೀಗ ಶುಭಾಂಶು ಶುಕ್ಲಾ ಅವರು ವಿಮಾನದಲ್ಲಿ ಕುಳಿತಿರುವ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಈ ಪೋಸ್ಟ್ನಲ್ಲಿ ಅವರು, ನಾನು ಭಾರತಕ್ಕೆ (India) ಹಿಂತಿರುಗಲು ವಿಮಾನದಲ್ಲಿ ಕುಳಿತಾಗ, ನನ್ನ ಹೃದಯದಲ್ಲಿ ಮಿಶ್ರ ಭಾವನೆ ಉಂಟಾಗಿದೆ. ಕಳೆದ ಒಂದು ವರ್ಷದಿಂದ ಈ ಕಾರ್ಯಾಚರಣೆಯ ಸಮಯದಲ್ಲಿ ನನ್ನ ಸ್ನೇಹಿತರು ಮತ್ತು ಕುಟುಂಬವಾಗಿದ್ದ ಅದ್ಭುತ ಜನರನ್ನು ಬಿಟ್ಟು ಹೋಗುವುದು ನನಗೆ ದುಃಖ ತಂದಿದೆ. ಹಾಗೆಯೇ ಕಾರ್ಯಾಚರಣೆಯ ನಂತರ ಮೊದಲ ಬಾರಿಗೆ ನನ್ನ ಎಲ್ಲಾ ಸ್ನೇಹಿತರು, ಕುಟುಂಬ ಮತ್ತು ದೇಶದ ಪ್ರತಿಯೊಬ್ಬರನ್ನು ಭೇಟಿಯಾಗಲು ತುಂಬಾ ಉತ್ಸುಕನಾಗಿದ್ದೇನೆ. ಜೀವನ ಎಂದರೆ ಇದೇ ಎಂದು ನಾನು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಂಧನ ಬಳಿಕ ದರ್ಶನ್, ಪವಿತ್ರಾ ಗೌಡ ಮೊದಲ ಫೋಟೋ ವೈರಲ್
ಆಗಸ್ಟ್ 22-23 ರಂದು ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಭಾಗವಹಿಸಲು ಶುಕ್ಲಾ ಅವರು ರಾಜಧಾನಿಗೆ ಹಿಂತಿರುಗುವ ನಿರೀಕ್ಷೆಯಿದೆ ಎನ್ನಲಾಗಿದೆ.
ಲಕ್ನೋ: ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೇ ಪೊಲೀಸ್ ಕಾನ್ಸ್ಟೇಬಲ್ ಪತ್ನಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಲಕ್ನೋದಲ್ಲಿ (Lucknow) ನಡೆದಿದೆ.
ಮೂಲಗಳ ಪ್ರಕಾರ, ಬಕ್ಷಿ ಕಾ ತಲಾಬ್ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ವೊಬ್ಬರು ಇನ್ಸ್ಟಾದಲ್ಲಿ ವಿಡಿಯೋ ರೀಲ್ಸ್ ನೋಡುವಾಗ ಮೃತ ಪೊಲೀಸ್ ಕಾನ್ಸ್ಟೇಬಲ್ ಪತ್ನಿ ಹರಿಬಿಟ್ಟ ವಿಡಿಯೋ ಗಮನಿಸಿದ್ದಾರೆ. ನಂತರ ಪ್ರಕರಣ ಬೆಳಕಿಗೆ ಬಂದಿದೆ.
ವಿಡಿಯೋದಲ್ಲಿ, ಅತ್ತೆ, ಮಾವ ಹಾಗೂ ಮೈದುನ ಮೂವರು ಸೇರಿ ನನಗೆ ಕಿರುಕುಳ ನೀಡುತ್ತಿದ್ದಾರೆ. ನನ್ನ ಗಂಡನನ್ನು ನನ್ನಿಂದ ಬೇರ್ಪಡಿಸಿ, ಅವರಿಗೆ ಬೇರೆ ಮದುವೆ ಮಾಡಲು ಬಯಸುತ್ತಿದ್ದಾರೆ. ಅದೇ ಕಾರಣಕ್ಕೆ ನನಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ. ಜೊತೆಗೆ ಮೈದುನ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಜಗದೀಪ್ ಸಿಂಗ್ ಕೊಲೆ ಮಾಡಿದ ಆರೋಪಿ. ಆತನ ಪತ್ನಿ ಪೂನಂ ಆತನೊಂದಿಗೆ ಹೋಗಲು ನಿರಾಕರಿಸಿದ್ದಾಳೆ. ಪರಿಣಾಮವಾಗಿ ಆರೋಪಿಯು ತನ್ನ ಮಾವ ಅನಂತರಾಮ್ (80) ಮತ್ತು ಅತ್ತೆ (75) ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.