Tag: lucknow

  • 45 ಲಕ್ಷದ ಗಿಫ್ಟ್ ಆಸೆಗೆ ಬಿದ್ದು, 32 ಲಕ್ಷ ರೂ. ಕಳೆದುಕೊಂಡ ಯುವತಿ

    45 ಲಕ್ಷದ ಗಿಫ್ಟ್ ಆಸೆಗೆ ಬಿದ್ದು, 32 ಲಕ್ಷ ರೂ. ಕಳೆದುಕೊಂಡ ಯುವತಿ

    ಲಕ್ನೋ: ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಸ್ನೇಹಿತನ ಮಾತು ನಂಬಿ 32 ಲಕ್ಷ ರೂ. ಕಳೆದುಕೊಂಡ ಘಟನೆ ಉತ್ತರಪ್ರದೇಶದ ರಾಯ್ ಬರೇಲಿ ಜಿಲ್ಲೆಯ ನಡೆದಿದೆ.

    ಯುವತಿಗೆ ಇನ್‍ಸ್ಟಾಗ್ರಾಮ್ ನಲ್ಲಿ ಯುವಕನೊಬ್ಬ ನಾನು ಯುಕೆ ನಿವಾಸಿ ಎಂದು ಪರಿಚಯ ಮಾಡಿಕೊಂಡಿದ್ದಾನೆ. ಇದನ್ನು ನಂಬಿ ಯುವತಿಯು ಅವನ ಜೊತೆ ಸ್ನೇಹ ಬೆಳೆಸಿದ್ದಾಳೆ. ಪರಿಣಾಮ ಯುವಕ ನಿಮಗೆ 45 ಲಕ್ಷದ ಉಡುಗೊರೆಯನ್ನು ಕಳುಹಿಸುತ್ತಿದ್ದೇನೆ ಅದಕ್ಕೆ ನೀವು 32 ಲಕ್ಷ ಟ್ಯಾಕ್ಸ್ ಕಟ್ಟಬೇಕು ಎಂದು ಹೇಳಿದ್ದಾನೆ. ಉಡುಗೊರೆಗೆ ಆಸೆ ಬಿದ್ದು, ಯುವತಿ ಆತನಿಗೆ 32 ಲಕ್ಷ ರೂ. ಆನ್‍ಲೈನ್ ಮೂಲಕ ಕಳುಹಿಸಿದ್ದು, ಹಣ ಕಳುಹಿಸಿದ ನಂತರ ಯುವಕ ಈಕೆಯ ಸಂಪರ್ಕಕ್ಕೆ ಸಿಕ್ಕಿಲ್ಲ. ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡಿಲ್ಲ. ಇದನ್ನೂ ಓದಿ: ಥ್ರೋಬ್ಯಾಕ್ ವೀಡಿಯೋ ಎಂದು ವೈರಲ್ ವೀಡಿಯೋ ಶೇರ್ ಮಾಡಿದ ಡಿಡಬ್ಲ್ಯೂಆರ್

    ಈ ಪರಿಣಾಮ ಯುವತಿಗೆ ತಾನು ಮೋಸ ಹೋಗಿರುವುದು ತಿಳಿದು, ರಾಯ್ ಬರೇಲಿ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಕುರಿತು ರಾಯ್ ಬರೇಲಿ ಪೊಲೀಸ್ ಎಸ್‍ಪಿ ಶ್ಲೋಕ್ ಕುಮಾರ್ ಮಾತನಾಡಿದ್ದು, ಯುವತಿ ಕಂತುಗಳ ಮೂಲಕ ಆನ್‍ಲೈನ್ ನಲ್ಲಿ ಹಣ ಕಳುಹಿಸಲು ಯುವಕ ಹೇಳಿದ್ದಾನೆ. ಇದನ್ನೂ ಓದಿ: ಸಿದ್ದರಾಮಯ್ಯ, ಹೆಚ್‍ಡಿಕೆ ಗೆ RSS ಸಂಸ್ಕಾರ ಗೊತ್ತಿಲ್ಲ: ಶ್ರೀರಾಮುಲು

    ಯುವಕನ ಮಾತಿಗೆ ಮರುಳಾದ ಯುವತಿ ಹಣ ಕಳುಹಿಸಿದ್ದು, ಕೊನೆಯದಾಗಿ ಹಣ ಕಳುಹಿಸಿದ ನಂತರ ಈಕೆಯ ಜೊತೆ ಸಂಪರ್ಕವನ್ನು ಯುವಕ ಬಿಟ್ಟಿದ್ದಾನೆ. ಈ ಕುರಿತು ನಾವು ಮಾಹಿತಿ ತಿಳಿದುಕೊಂಡಿದ್ದು, ಸೈಬರ್ ಸೆಲ್ ಪ್ರಕರಣದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಯುವತಿ ಸೆಪ್ಟೆಂಬರ್ ನಲ್ಲಿ ಇನ್‍ಸ್ಟಾಗ್ರಾಮ್ ಮೂಲಕ ವ್ಯಕ್ತಿಯ ಪರಿಚಯವಾಗಿತ್ತು.

  • ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

    ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

    – ಪ್ರಿಯಾಂಕ ಬಂಧನ, ರಾಹುಲ್ ಭೇಟಿಗೆ ತಡೆ

    ಲಕ್ನೋ: ಉತ್ತರಪ್ರದೇಶದಲ್ಲಿ ಕೇಂದ್ರ ಸಚಿವನ ಮಗ ಕಾರು ಹತ್ತಿಸಿ ನಾಲ್ವರು ಹತ್ಯೆಗೈದಿದ್ದ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾನ ಮಗ ಆಶಿಶ್ ಮಿಶ್ರಾ ವಿರುದ್ಧ ಎಫ್‍ಐಆರ್ ದಾಖಲಾಗಿದೆಯಾದರೂ ಇನ್ನೂ ಆತನನ್ನು ಪೊಲೀಸರು ಬಂಧಿಸಿಲ್ಲ. ಆ ಜೀಪ್ ನನ್ನದೇ ಎಂದಿರುವ ಸಚಿವ, ಆದರೆ ಮಗ ಕಾರಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ.

    ಇತ್ತ ಲಖೀಂಪುರ್ ಖೇರಿಗೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ನಿಯೋಗ ಭೇಟಿ ನೀಡುತ್ತಿದೆ. ಆದರೆ ರಾಹುಲ್ ನಿಯೋಗಕ್ಕೆ ಉತ್ತರಪ್ರದೇಶ ಸರ್ಕಾರ ಅನುಮತಿ ನಿರಾಕರಿಸಿದೆ. ಇದನ್ನೂ ಓದಿ: ರೈತರ ಮೇಲೆ ವಾಹನ ಹತ್ತಿಸಿದ ವೀಡಿಯೋ ಲಭ್ಯ- ಅಜಯ್ ಮಿಶ್ರಾ ಪುತ್ರನ ವಿರುದ್ಧ ಕೊನೆಗೂ FIR

    ಈ ನಡುವೆ ಲಖೀಂಪುರ್ ಖೇರಿ ಭೇಟಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು 2 ದಿನ ಗೃಹ ಬಂಧನದಲ್ಲಿಟ್ಟಿದ್ದ ಯೋಗಿ ಆದಿತ್ಯನಾಥ್ ಸರ್ಕಾರ ಈಗ ಬಂಧನಕ್ಕೆ ಒಳಪಡಿಸಿದ್ದು, ಪ್ರಿಯಾಂಕ ವಿರುದ್ಧ ಎಫ್‍ಐಆರ್ ದಾಖಲಿಸಿದೆ. ಆದರೆ ಪ್ರಿಯಾಂಕಾ ಗೃಹ ಬಂಧನದಲ್ಲಿಟ್ಟಿರುವ ಪೊಲೀಸರ ಕ್ರಮದ ಬಗ್ಗೆ ಖಂಡನೆ ವ್ಯಕ್ತವಾಗಿದೆ. ಇದನ್ನೂ ಓದಿ: ರೈತರ ಮೇಲೆ ಕಾರು ಹತ್ತಿಸಿದ ಕೇಂದ್ರ ಸಚಿವನ ಮಗ – ನಾಲ್ವರು ರೈತರು ಸೇರಿ 8 ಮಂದಿ ಸಾವು

    ಗೃಹ ಬಂಧನದಿಂದಲೇ ಪ್ರಿಯಾಂಕಾ ಉತ್ತರಪ್ರದೇಶದಲ್ಲಿರುವ ತಮ್ಮ ಕಾರ್ಯಕರ್ತರಿಗೆ ಆಡಿಯೋ ಸಂದೇಶ ರವಾನಿಸಿದ್ದಾರೆ. ನಿನ್ನೆ ಲಖೀಂಪುರ್‍ಖೇರಿಗೆ ಭೇಟಿ ನೀಡಲು ಬಂದಿದ್ದ ಛತ್ತೀಸ್‍ಗಢ ಸಿಎಂ ಭೂಪೇಂದ್ರ ಸಿಂಗ್ ಬಘೇಲ್‍ಗೂ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಬಘೇಲ್ ವಿಮಾನ ನಿಲ್ದಾಣದಲ್ಲಿಯೇ ಧರಣಿ ಕೂತಿದ್ದರು. ಆದರೆ ಟಿಎಂಸಿ ಸಂಸದರ ನಿಯೋಗಕ್ಕೆ ಭೇಟಿಗೆ ಅನುಮತಿ ನೀಡಲಾಗಿದೆ. ಇದನ್ನೂ ಓದಿ:  ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್

  • ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಆನಂದ್ ಸ್ವರೂಪ್ ಶುಕ್ಲಾ

    ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಆನಂದ್ ಸ್ವರೂಪ್ ಶುಕ್ಲಾ

    – ಮುಸ್ಲಿಮರು ಭಾರತೀಯ ಸಂಸ್ಕೃತಿಗೆ ತಲೆಬಾಗಬೇಕು

    ಲಕ್ನೋ: ರಾಮ, ಕೃಷ್ಣ, ಶಿವ ಭಾರತೀಯ ಮುಸ್ಲಿಮರ ಪೂರ್ವಜರಾಗಿದ್ದು, ಈ ಸಮುದಾಯದವರು ಭಾರತೀಯ ಸಂಸ್ಕೃತಿಗೆ ತಲೆಬಾಗಬೇಕು ಎಂದು ಉತ್ತರ ಪ್ರದೇಶ ಸರ್ಕಾರದ ಸಂಸದೀಯ ವ್ಯವಹಾರಗಳ ಸಚಿವ ಆನಂದ್ ಸ್ವರೂಪ್ ಶುಕ್ಲಾ ಹೇಳಿದ್ದಾರೆ

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ನಾಲ್ಕೂವರೆ ವರ್ಷಗಳ ಮಾಡಿದ ಸಾಧನೆಗಳ ಕುರಿತು ಮಾಹಿತಿ ನೀಡುವುದಕ್ಕಾಗಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಅವರು ಭಾರತೀಯ ಸಂಸ್ಕೃತಿ ಮತ್ತು ಹಿಂದುತ್ವದ ಧ್ವಜವನ್ನು ಹಾರಿಸುವ ಮೂಲಕ ದೇಶದಲ್ಲಿ ಇಸ್ಲಾಮಿಕ್ ರಾಜ್ಯ ರಚಿಸಬೇಕೆಂಬ ಉದ್ದೇಶದ ಮನೋಭಾವದವರನ್ನು ಹಿಮ್ಮೆಟ್ಟಿಸಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ:  ಈ ಸಲ ಕಪ್ ನಮ್ದೆ – ಆರ್‌ಸಿಬಿಗೆ ಶಮಂತ್, ರಘು ಸಪೋರ್ಟ್

    ಶ್ರೀರಾಮ, ಕೃಷ್ಣ ಮತ್ತು ಶಂಕರ(ಶಿವ) ಭಾರತದಲ್ಲಿರುವ ಮುಸ್ಲಿಮರ ಪೂರ್ವಜರು. ಆದ್ದರಿಂದ ಮುಸ್ಲಿಮರು ಭಾರತೀಯ ಸಂಸ್ಕೃತಿಗೆ ತಲೆಬಾಗಬೇಕು. ಸಿರಿಯಾ ಮತ್ತು ಅಫ್ಗಾನಿಸ್ತಾನ ನಂತರ, ಜಗತ್ತಿನ ಬೇರೆ ಬೇರೆ ರಾಷ್ಟ್ರಗಳು, ವಿಶ್ವವನ್ನೇ ಇಸ್ಲಾಮಿಕ್ ರಾಷ್ಟ್ರವನ್ನಾಗಿಸಬೇಕು ಎಂದು ಬಯಸಿವೆ. ಭಾರತದಲ್ಲೂ ಇಂಥ ಮನಸ್ಥಿತಿಯವರಿದ್ದಾರೆ. ಆದರೆ ಮೋದಿ ಮತ್ತು ಆದಿತ್ಯನಾಥ್ ನೇತೃತ್ವದ ಸರ್ಕಾರಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹಿಂದುತ್ವ ಮತ್ತು ಭಾರತೀಯ ಸಂಸ್ಕೃತಿಯ ಧ್ವಜವನ್ನು ಹಾರಿಸುವ ಮೂಲಕ, ಇಸ್ಲಾಂ ರಾಷ್ಟ್ರವಾಗಿಸುವ ಮನಸ್ಥಿತಿಯನ್ನೇ ಸೋಲಿಸಿದ್ದಾರೆ ಎಂದು ಶುಕ್ಲಾ ಹೇಳಿದರು. ಇದನ್ನೂ ಓದಿ: ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ- ಓಂ ಬಿರ್ಲಾರಿಂದ ಪ್ರಶಸ್ತಿ ಪ್ರದಾನ

    ಇತ್ತೀಚೆಗೆ ಸಂಭಾಲ್‍ನಲ್ಲಿ ಹಾಕಲಾಗಿದ್ದ ವಿವಾದಾತ್ಮಕ ಭಿತ್ತಿಪತ್ರವೊಂದರ ಕುರಿತು ಉಲ್ಲೇಖಿಸಿದ ಶುಕ್ಲಾ, ಇದು ಸಮಾಜವಾದಿ ಪಕ್ಷದವರು ಇಸ್ಲಾಮಿಕ್ ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಹಾಗೂ ಆ ಪಕ್ಷದ ಸಂಸದ ಶೈಫುರ್ ರಹಮಾನ್ ಅವರು ತಾಲಿಬಾನ್ ಬೆಂಬಲಿಸುವ ಹೇಳಿಕೆಗಳನ್ನು ನೀಡುತ್ತಿರುವುದರ ಪರಿಣಾಮ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ:  LOVE YOU MY SON: ನಿಖಿಲ್ ಕುಮಾರಸ್ವಾಮಿ

    ಸಂಭಾಲ್‍ನಲ್ಲಿ ಹಾಕಿದ್ದ  ಪೋಸ್ಟರ್‌ನಲ್ಲಿ ಸಂಭಾಲ್ ಘಾಜಿಗಳ ನೆಲ ಎಂದು ಬರೆಯಲಾಗಿತ್ತು. ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ ನಂತರ ಅಖಿಲ ಭಾರತ ಮಜ್ಲಿಸ್ ಇತ್ತೇಹಾದುಲ್ ಮುಸ್ಲಿಮೀನ್(ಎಐಎಂಎಐಎಂ) ಕಾರ್ಯಕರ್ತರು ಅವುಗಳನ್ನು ತೆಗೆದು ಹಾಕಿದರು. ಈ ವಾರದ ಆರಂಭದಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಭೇಟಿಗೂ ಮುನ್ನ ಸಂಭಾಲ್‍ನಲ್ಲಿ ಈ ಪೋಸ್ಟರ್ ಹಾಕಲಾಗಿತ್ತು. ಉತ್ತರ ಪ್ರದೇಶದಿಂದ ಈಗಾಗಲೇ ಘಾಜಿಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗಿದೆ. ಭವಿಷ್ಯದಲ್ಲಿ ಅಂತಹ ಶಕ್ತಿಗಳು ತಲೆ ಎತ್ತಲು ಸಾಧ್ಯವಾಗುವುದಿಲ್ಲ. ಎಐಎಂಎಐಎಂ ನಾಯಕ ಒವೈಸಿ ವಿರುದ್ಧ ವಾಗ್ದಾಳಿ ನಡೆಸಿದ ಶುಕ್ಲಾ, ಇವರ ಪೂರ್ವಿಕರು ದೇಶದಿಂದ ಹೈದರಾಬಾದ್ ಅನ್ನು ಪ್ರತ್ಯೇಕಿಸಲು ಪ್ರಯತ್ನಿಸಿದ್ದರು. ಆದರೆ ಅದು ಯಶಸ್ವಿಯಾಗಲಿಲ್ಲ ಎಂದು ಹೇಳಿದರು.

  • ಮಗನ ಪ್ರಾಣ ಉಳಿಸಿಕೊಳ್ಳಲು ವೈದ್ಯರ ಕಾಲು ಹಿಡಿದ ತಾಯಿ

    ಮಗನ ಪ್ರಾಣ ಉಳಿಸಿಕೊಳ್ಳಲು ವೈದ್ಯರ ಕಾಲು ಹಿಡಿದ ತಾಯಿ

    ಲಕ್ನೋ: ತನ್ನ ಮಗನ ಪ್ರಾಣ ಉಳಿಸಿಕೊಳ್ಳಲು ವೈದ್ಯರ ಕಾಲಿಗೆ ತಾಯಿ ಬಿದ್ದ ಮನಕಲಕುವಂತಹ ಘಟನೆ ಪಶ್ಚಿಮ ಉತ್ತರಪ್ರದೇಶದ ಫಿರೋಜಾಬಾದ್ ನಲ್ಲಿ ನಡೆದಿದೆ.

    ಪಶ್ಚಿಮ ಉತ್ತರಪ್ರದೇಶದ ಫಿರೋಜಾಬಾದ್‍ನಲ್ಲಿ 12 ವರ್ಷದ ಬಾಲಕನಿಗೆ ಡೆಂಗ್ಯೂ ಬಂದ ಕಾರಣ ಆತನ ತಾಯಿ ಮತ್ತು ಕುಟುಂಬದವರು ಚಿಕಿತ್ಸೆ ಕೊಡಿಸಲು ಸರ್ಕಾರಿ ಆಸ್ಪತ್ರೆಯ ಹೊರಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾದಿದ್ದಾರೆ. ತಾಯಿಗೆ ತನ್ನ ಮಗನ ಪರಿಸ್ಥಿತಿ ಮಿತಿಮೀರುತ್ತಿರುವುದನ್ನು ಕಂಡು ಸಾಯಿಸಲಾಗದೆ ಡಾ.ಅನೀಜಾ ಕನ್ಸೋಲ್ ಅವರ ಕಾಲಿಗೆ ಬಿದ್ದು, ದಯವಿಟ್ಟು ನನ್ನ ಮಗನನ್ನು ನೋಡಿ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ:ಆತ್ಮಹತ್ಯೆಗೆ ಮುಂದಾಗಿದ್ದ ವೃದ್ಧೆಯನ್ನು ರಕ್ಷಿಸಿದ ಯುವಕರು

    ಈ ಕಾರಣ ವೈದ್ಯರಿಗೆ ಅವರ ಮೇಲೆ ಅನುಕಂಪ ಹುಟ್ಟಿ ಬಾಲಕನಿಗೆ ಚಿಕಿತ್ಸೆ ಕೊಟ್ಟಿದ್ದಾರೆ. ಸದ್ಯ ಬಾಲಕನಿಗೆ ಯಾವುದೇ ರೀತಿಯ ಪ್ರಾಣಪಾಯವಿಲ್ಲ ಎಂದು ಪೋಷಕರಿಗೆ ತಿಳಿಸಿದ್ದಾರೆ. ಇದನ್ನೂ ಓದಿ:ಬಿಜೆಪಿ ಈ ದೇಶದ ಬಗ್ಗೆ ಚಿಂತನೆ ಮಾಡುವ ಏಕೈಕ ಪಕ್ಷ: ಎ.ನಾರಾಯಣಸ್ವಾಮಿ

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅನೀಜಾ, ಆಸ್ಪತ್ರೆಯಲ್ಲಿ 540ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಈ ಪರಿಣಾಮ ಒಂದೇ ಹಾಸಿಗೆಯಲ್ಲಿ ಇಬ್ಬರನ್ನು ಮಲಗಿಸಿದ್ದೇವೆ. ಈ ಬಾಲಕನ ತಾಯಿ ಬಂದು ತಮ್ಮ ಪರಿಸ್ಥಿತಿಯನ್ನು ಹೇಳಿದ ತಕ್ಷಣ ನಾವು ಬಾಲಕನಿಗೆ ಚಿಕಿತ್ಸೆಯನ್ನು ಕೊಟ್ಟಿದ್ದೇವೆ. ನಾವು ಯಾರಿಗೂ ಏನು ಆಗಬಾರದೆಂದು ಎಲ್ಲಿಯೂ ಹೋಗದೆ ಇಲ್ಲೇ ಇದ್ದೇವೆ. ಯಾವ ರೋಗಿಗಳಿಗೂ ತೊಂದರೆಯಾಗದಂತೆ ನಾವು ನೋಡಿಕೊಳ್ಳತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಕೃತಿ ಶೆಟ್ಟಿ ಜೊತೆ ರೊಮ್ಯಾನ್ಸ್ ಗೆ ನೋ ಅಂದ್ರು ವಿಜಯ್ ಸೇತುಪತಿ

    ದಿನೇ ದಿನೇ ಹೆಚ್ಚುತ್ತಿರುವ ಮಕ್ಕಳ ಸಾವು!
    ಜಿಲ್ಲೆಯಲ್ಲಿ ಡೆಂಗ್ಯೂ ತೀವ್ರ ಸ್ವರೂಪಕ್ಕೆ ತಿರುಗಿದ್ದು, ಮಕ್ಕಳನ್ನು ತುಂಬಾ ಬಾಧಿಸುತ್ತಿದೆ. ಫಿರೋಜಾಬಾದ್ ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಡೆಂಗ್ಯೂನಿಂದ 40 ಮಕ್ಕಳು ಸೇರಿದಂತೆ ಕನಿಷ್ಠ 53 ಜನರು ಸಾವನ್ನಪ್ಪಿದ್ದಾರೆ. ‘ಡೆಂಗ್ಯೂ ಹೆಮರಾಜಿಕ್ ಫೀವರ್’ದಿಂದಾಗಿ ಈ ಹೆಚ್ಚಿನ ಸಾವು ಸಂಭವಿಸುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದ್ದು, ಇದು ರೋಗ ತೀವ್ರ ಸ್ವರೂಪವನ್ನು ದಿನೇ ದಿನೇ ಪಡೆಯುತ್ತಿದೆ.

  • ಬಾಲಕಿ ಹೊಟ್ಟೆಯಲ್ಲಿ 2ಕೆಜಿ ಕೂದಲ ಉಂಡೆ ಪತ್ತೆ- ವೈದ್ಯರು ಶಾಕ್

    ಬಾಲಕಿ ಹೊಟ್ಟೆಯಲ್ಲಿ 2ಕೆಜಿ ಕೂದಲ ಉಂಡೆ ಪತ್ತೆ- ವೈದ್ಯರು ಶಾಕ್

    ಲಕ್ನೋ: 17 ವರ್ಷದ ಬಾಲಕಿಯೊಬ್ಬಳ ಹೊಟ್ಟೆಯಿಂದ 2ಕೆಜಿ ಕೂದಲನ್ನು ಶಸ್ತ್ರ ಚಿಕಿತ್ಸೆ ಮೂಲಕ ವೈದ್ಯರು ಹೊರ ತೆಗೆದು ಶಾಕ್ ಆಗಿರುವ ಘಟನೆ ಲಕ್ನೋದ ಬಲರಾಂಪುರ್ ಆಸ್ಪತ್ರೆಯಲ್ಲಿ ನಡೆದಿದೆ.

    ಕಳೆದೆರಡು ವರ್ಷದಿಂದ ಬಾಲಕಿಯ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಕೂದಲು ಉದುರುವಿಕೆ ಸಮಸ್ಯೆಯಿಂದ ಬಳಲುತ್ತಿದ್ದಳು. ಕೊನೆಗೆ ವಾಂತಿ ಹಾಗೂ ಹೊಟ್ಟೆ ನೋವಿನ ಸಮಸ್ಯೆಯಿಂದ ಒದ್ದಾಡಲು ಶುರು ಮಾಡಿದಾಗ ಆಕೆಯ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

    ಈ ವೇಳೆ ವೈದ್ಯರು ಅಲ್ಟ್ರಾಸೌಂಡ್ ಪರೀಕ್ಷೆ ನಡೆಸಿದ ನಂತರ ಬಾಲಕಿ ಹೊಟ್ಟೆಯಲ್ಲಿ ಗಡ್ಡೆ ಕಾಣಿಸಿಕೊಂಡಿದೆ. ನಂತರ ವೈದ್ಯರು ಸಿಟಿ ಸ್ಕ್ಯಾನ್ ಮಾಡಿದಾಗಲೂ ಮತ್ತೆ ಬಾಲಕಿ ಹೊಟ್ಟೆಯಲ್ಲಿ ಗಡ್ಡೆ ಪತ್ತೆಯಾಗಿದೆ. ಕೊನೆಗೆ ಎಂಡೊಸ್ಕೋಪ್ ಮಾಡಿದ ನಂತರ ಆಕೆಯ ಹೊಟ್ಟೆಯಲ್ಲಿ ಕೂದಲಿನ ಉಂಡೆ ಪತ್ತೆಯಾಗಿದ್ದು, ಅದು ಎರಡು ಕೆಜಿ ತೂಕ ಇರುವ ಹಾಗೂ 20 ಸೆಂ.ಮೀ. ಅಗಲದ ಗಡ್ಡೆ ಇರುವುದನ್ನು ಕಂಡು ವೈದ್ಯರು ಕೂಡ ಆಶ್ಚರ್ಯಗೊಂಡಿದ್ದಾರೆ. ಇದನ್ನೂ ಓದಿ: ಲಾಕ್‍ಡೌನ್ ನಡುವೆಯೂ ನಂಜುಂಡೇಶ್ವರನಿಗೆ ಬಂತು ಕೋಟಿ ಕಾಣಿಕೆ!

    ಒಟ್ಟಾರೆ ಕೂಲಂಕುಷವಾಗಿ ತಪಾಸಣೆ ನಡೆಸಿದ ನಂತರ ವೈದ್ಯರು ಹುಟ್ಟಿನಿಂದಲೇ ಬಾಲಕಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವುದಾಗಿ ತಿಳಿಸಿದ್ದಾರೆ. ಕೊನೆಗೆ ಒಂದೂವರೆ ಗಂಟೆಗಳ ಶಸ್ತ್ರ ಚಿಕಿತ್ಸೆ ನಡೆಸಿ ಬಳಿಕ ಬಾಲಕಿ ಹೊಟ್ಟೆಯಿಂದ ಕೂದಲನ್ನು ಹೊರತೆಗೆದಿದ್ದು, ಇದೀಗ ಹೊಟ್ಟೆ ನೋವಿನ ಯಾವುದೇ ಸಮಸ್ಯೆಗಳಿಲ್ಲದೇ ಬಾಲಕಿ ಚೇತರಿಸಿಕೊಳ್ಳುತ್ತಿದ್ದಾಳೆ. ನಂತರ ವೈದ್ಯರು ಕೂದಲು ಹೊಟ್ಟೆಯಲ್ಲಿರುವ ಸಣ್ಣ ಕರುಳನ್ನು ಸಂಪೂರ್ಣವಾಗಿ ಮುಚ್ಚಿದ್ದರಿಂದ ಆಹಾರ ಹಾದುಹೋಗಲು ಸಾಧ್ಯವಾಗಲಿಲ್ಲ. ಅಲ್ಲದೇ ಇದರಿಂದ ಬಾಲಕಿ 32ಕೆಜಿ ತೂಕವನ್ನು ಕಳೆದುಕೊಂಡಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    ಕೊನೆಗೆ ಬಾಲಕಿ ಅಪರೂಪದ ಟ್ರೈಕೋಬೆಜೋವರ್ ಕಾಯಿಲೆಯಿಂದ ಬಳಲುತ್ತಿದ್ದಾಳೆ ಎಂದು ತಿಳಿದುಬಂದಿದ್ದು, ಈ ರೋಗಿಗಳು ತಮ್ಮ ಕೂದಲನ್ನು ಕಿತ್ತು ಸೇವಿಸುತ್ತಾರೆ ಎಂದು ಸತ್ಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಹತ್ತಾರು ಎಕರೆ, ಮಾವಿನ ತೋಪು, ನಿರ್ಜನ ಪ್ರದೇಶ – ನೂರಾರು ಜನ… ಕೋಟಿ ಕೋಟಿ ವ್ಯವಹಾರ!

  • ದರೋಡೆ ಮಾಡಿ ಮನೆ ಮಾಲೀಕರಿಗೆ ಖರ್ಚಿಗೆ ಹಣ ಕೊಟ್ರು

    ದರೋಡೆ ಮಾಡಿ ಮನೆ ಮಾಲೀಕರಿಗೆ ಖರ್ಚಿಗೆ ಹಣ ಕೊಟ್ರು

    – ದರೋಡೆ ಬಳಿಕ ಮನೆಯವರ ಕಾಲಿಗೆ ಬಿದ್ರು

    ಲಕ್ನೋ: ದರೋಡೆ ಮಾಡಲು ಹೋದ ಮನೆಯಿಂದ ಹೊರಡುವ ಮುನ್ನ ಆ ಮನೆಯ ಹಿರಿಯರ ಕಾಲಿಗೆ ನಮಸ್ಕಾರ ಮಾಡಿ, ಇನ್ನು 6 ತಿಂಗಳೊಳಗೆ ನಿಮ್ಮ ಹಣವನ್ನು ವಾಪಾಸ್ ನೀಡುತ್ತೇವೆ ಎಂದು ಭರವಸೆ ನೀಡಿ ಹೋಗಿರುವ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನಲ್ಲಿ ನಡೆದಿದೆ.

    ದರೋಡೆ ಮಾಡಲೆಂದು  ಆ ಮನೆಗೆ ಬಂದಿದ್ದರು. ಆ ಮನೆಯಲ್ಲಿ ವಾಸವಾಗಿದ್ದ ಅಜ್ಜ-ಅಜ್ಜಿಯ ಎದುರು ಮಚ್ಚು, ಪಿಸ್ತೂಲ್ ಹಿಡಿದು ಮನೆಯಲ್ಲಿದ್ದ ವಸ್ತುವನ್ನೆಲ್ಲ ದೋಚಿಕೊಂಡ ಅವರು ಮನೆಯಿಂದ ಹೊರಡುವ ಮುನ್ನ ಅವರಿಬ್ಬರ ಕಾಲಿಗೂ ಬಿದ್ದು ಆಶೀರ್ವಾದ ಮಾಡುವಂತೆ ಕೇಳಿಕೊಂಡಿದ್ದಾರೆ. ಅಲ್ಲದೆ ಇನ್ನು 6 ತಿಂಗಳೊಳಗೆ ದೋಚಿದ ಹಣ, ಆಭರಣವನ್ನು ವಾಪಾಸ್ ತಂದುಕೊಡುವುದಾಗಿಯೂ ಹೇಳಿ ಹೋಗಿದ್ದಾರೆ. ಹಾಗೆ ಹೋಗುವ ಮುನ್ನ ಅಜ್ಜ-ಅಜ್ಜಿಗೆ ಖರ್ಚಿಗೆಂದು 500 ರೂ. ಕೂಡ ನೀಡಿ ಹೋಗಿದ್ದಾರೆ.

    ಹಿರಿಯ ಉದ್ಯಮಿಗಳಾದ ಸುರೇಂದ್ರ ವರ್ಮ ಮತ್ತು ಅವರ ಪತ್ನಿ ಇಬ್ಬರೇ ಮನೆಯಲ್ಲಿದ್ದಾಗ ದರೋಡೆಕೋರರು ಮನೆಯೊಳಗೆ ನುಗ್ಗಿದ್ದಾರೆ. ಸೋಮವಾರ ರಾತ್ರಿ ಗಾಢ ನಿದ್ರೆಯಲ್ಲಿದ್ದ ಸುರೇಂದ್ರ ವರ್ಮ ದಂಪತಿ ಮನೆಗೆ ದರೋಡೆಕೋರರು ಬಂದಿದ್ದರು. ಬೆಳಗಿನ ಜಾವ 3.30ಕ್ಕೆ ಬಂದ ದರೋಡೆಕೋರರು ಮಾಸ್ಕ್ ಧರಿಸಿದ್ದರು. ಮನೆಯ ಕಿಟಕಿಯನ್ನು ಕಟ್ ಮಾಡಿ ಒಳಗೆ ಬಂದ ಅವರು ಸುರೇಂದ್ರ ವರ್ಮ ಅವರನ್ನು ಹೆದರಿಸಿ, ರೂಮಿನಲ್ಲಿ ಕೂಡಿ ಹಾಕಿದರು. ಅವರಲ್ಲೊಬ್ಬ ಪಿಸ್ತೂಲ್, ಮಚ್ಚು ಹಿಡಿದು ವರ್ಮ ಅವರನ್ನು ಹೆದರಿಸಿದ. ಬಳಿಕ ಉಳಿದವರು ಆ ಮನೆಯಲ್ಲಿದ್ದ 1.5 ಲಕ್ಷ ರೂ. ಹಣ, 4 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿಕೊಂಡರು.

    ದರೋಡೆಕೋರರು ಮನೆಯಿಂದ ವಾಪಾಸ್ ಹೋಗುವಾಗ ಸುರೇಂದ್ರ ವರ್ಮ ದಂಪತಿಯ ಕಾಲಿಗೆ ನಮಸ್ಕಾರ ಮಾಡಿ, ನಾವು ಅನಿವಾರ್ಯವಾಗಿ ಈ ದರೋಡೆ ಮಾಡಬೇಕಾಯಿತು. ಬಲವಂತವಾಗಿ ನಮ್ಮಿಂದ ಈ ಕೆಲಸ ಮಾಡಿಸಲಾಗುತ್ತಿದೆ. 6 ತಿಂಗಳೊಳಗೆ ನಿಮ್ಮ ಹಣ, ಚಿನ್ನಾಭರಣವನ್ನು ವಾಪಾಸ್ ತಲುಪಿಸುತ್ತೇವೆ ಎಂದು ಹೇಳಿ ಸುರೇಂದ್ರ ವರ್ಮ ಅವರ ಖರ್ಚಿಗೆ 500 ರೂ. ನೀಡಿದರು. ಇದನ್ನು ನೋಡಿದ ಸುರೇಂದ್ರ ವರ್ಮ ದಂಪತಿಗೆ ಅಚ್ಚರಿಯಾಯಿತು.

    ದರೋಡೆಕೋರರು ಮನೆಯಿಂದ ಹೋದ ಬಳಿಕ ಆ ದಂಪತಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಮನೆಗೆ ಬಂದ ಪೊಲೀಸರು ಏನಾದರೂ ಸುಳಿವು ಸಿಗುತ್ತದಾ ಎಂದು ಹುಡುಕಾಡಿದ್ದಾರೆ. ಆದರೆ, ಯಾವ ಸುಳಿವೂ ಸಿಕ್ಕಿಲ್ಲ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ತನಿಖೆ ನಡೆಸುತ್ತಿದ್ದಾರೆ.

  • ರಸ್ತೆಬದಿ ತರಕಾರಿ ಮಾರಿದ ಐಎಎಸ್ ಆಫೀಸರ್

    ರಸ್ತೆಬದಿ ತರಕಾರಿ ಮಾರಿದ ಐಎಎಸ್ ಆಫೀಸರ್

    ಲಕ್ನೋ: ಉತ್ತರ ಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ರಸ್ತೆಬದಿಯ ಸ್ಟಾಲ್‍ನಲ್ಲಿ ತರಕಾರಿ ಮಾರುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    IAS officer

    ಫೋಟೋದಲ್ಲಿರುವ ಐಎಎಸ್ ಅಧಿಕಾರಿಯನ್ನು ಅಖಿಲೇಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಪ್ರಸ್ತುತ ಅವರು ಉತ್ತರ ಪ್ರದೇಶದ ಸಾರಿಗೆ ಇಲಾಖೆಯ ವಿಶೇಷ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಇದೀಗ ಫೇಸ್‍ಬುಕ್‍ನಲ್ಲಿ ವೈರಲ್ ಆಗುತ್ತಿರುವ ಈ ಫೋಟೋದಲ್ಲಿ ಅಖಿಲೇಶ್ ಮಿಶ್ರಾರವರು ತರಕಾರಿ ಅಂಗಡಿ ಕೆಳಗೆ ಗೋಣಿಚೀಲದ ಮೇಲೆ ಕುಳಿತುಕೊಂಡು ತರಕಾರಿ ಮಾರುತ್ತಿದ್ದು, ಗ್ರಾಹಕರುಗಳು ಸಹ ಅಂಗಡಿ ಬಳಿ ಖರೀದಿ ಮಾಡಲು ನಿಂತಿರುವುದನ್ನು ಕಾಣಬಹುದಾಗಿದೆ. ಈ ಫೋಟೋ ನೋಡಿ ಕೆಲವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಇನ್ನೂ ಕೆಲವರು ಸರ್ಕಾರವನ್ನು ಮುಜುಗರಕ್ಕಿಡು ಮಾಡಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ:ಬೈಕ್, ಡಬಲ್ ಬ್ಯಾರಲ್ ಕೋವಿ ಕದ್ದಿದ್ದ ಆರೋಪಿ ಅಂದರ್

    IAS officer

    ಈ ಬಗ್ಗೆ ಮಾತನಾಡಿದ ಅಖಿಲೇಶ್ ಮಿಶ್ರಾರವರು, ನಾನು ಕೆಲವು ಅಧಿಕೃತ ಕೆಲಸದ ಮೇಲೆ ಪ್ರಯಾಗರಾಜ್‍ಗೆ ಭೇಟಿ ನೀಡಿದ್ದೆ. ನಂತರ ಅಲ್ಲಿಂದ ಹಿಂತಿರುವಾಗ ತರಕಾರಿ ಖರೀದಿಸಲೆಂದು ಬಂದೆ. ಆಗ ತರಕಾರಿ ಮಾರಾಟಗಾರ ಮತ್ತು ವೃದ್ಧೆಯೊಬ್ಬರು ತಮ್ಮ ಮಗು ಇಲ್ಲಿ ಎಲ್ಲೋ ಹೋಗಿದೆ. ಮಗುವನ್ನು ಹುಡುಕಿ ಬರುವವರೆಗೂ ಸ್ವಲ್ಪ ಅಂಗಡಿಯನ್ನು ನೋಡಿಕೊಳ್ಳುವಂತೆ ಮನವಿ ಮಾಡಿದರು. ಹಾಗಾಗಿ ನಾನು ಅವರ ಅಂಗಡಿಯಲ್ಲಿ ಕುಳಿತುಕೊಂಡಿದ್ದೆ. ಈ ವೇಳೆ ಗ್ರಾಹಕರೊಬ್ಬರು ಬಂದರು. ಆಗ ನನ್ನ ಸ್ನೇಹಿತ ಫೋಟೋ ಕ್ಲಿಕ್ಕಿಸಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಅರ್ಧ ಗಂಟೆ ಥರ್ಮಾಕೋಲ್ ಸಹಾಯದಿಂದ ಈಜು – ಬದುಕುಳಿದ ಮೀನುಗಾರ

  • ಊಟ ನೀಡುವುದಾಗಿ ಮನೆಗೆ ಕರೆದು 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ

    ಊಟ ನೀಡುವುದಾಗಿ ಮನೆಗೆ ಕರೆದು 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ

    ಲಕ್ನೋ: 80 ವರ್ಷದ ವೃದ್ಧೆ ಮೇಲೆ ಸಂಬಧಿಕನೇ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದಲ್ಲಿ ಬುದೌನ್‍ನಲ್ಲಿ ನಡೆದಿದೆ.

    ಅಗಷ್ಟ್ 1ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಕೆಲವೇ ಘಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ ವೃದ್ಧೆಯನ್ನು ತಮ್ಮ ಮನೆಗೆ ಊಟಕ್ಕೆ ಬರುವಂತೆ ಹೇಳಿ ಕರೆದುಕೊಂಡು ಹೋಗಿದ್ದನು. ಈ ವೇಳೆ ಕಂಠಪೂರ್ತಿಯಾಗಿ ಮದ್ಯ ಸೇವಿಸಿ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದನ್ನೂ ಓದಿ:  ಮಂತ್ರಿಸ್ಥಾನ ನೀಡದಿದ್ರೆ ಮತ್ತೊಂದು ಆಪರೇಷನ್ ನಡೆಸುವ ಎಚ್ಚರಿಕೆ ನೀಡಿದರಂತೆ ಎಂಟಿಬಿ ನಾಗರಾಜ್!

    ವೃದ್ಧೆ ತೀವ್ರ ಅಸ್ವಸ್ಥಳಾಗಿ ಅಲ್ಲೇ ಬಿದ್ದಿದ್ದು, ಸಂಬಂಧಿಕರು ಬಂದ ತಕ್ಷಣ ನಡೆದಿರುವ ಘಟನೆಯನ್ನು ವೃದ್ಧೆ ಹೇಳಿದ್ದಾರೆ. ಈ ಬಗ್ಗೆ ವಾಜಿರ್‌ಗಂಜ್ ಪೊಲೀಸ್ ಠಾಣೆಯಲ್ಲಿ ತಕ್ಷಣ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • ಕ್ಯಾಬ್ ಚಾಲಕನಿಗೆ ಥಳಿಸಿದ್ದ ಮಹಿಳೆ ವಿರುದ್ಧ ಎಫ್‍ಐಆರ್

    ಕ್ಯಾಬ್ ಚಾಲಕನಿಗೆ ಥಳಿಸಿದ್ದ ಮಹಿಳೆ ವಿರುದ್ಧ ಎಫ್‍ಐಆರ್

    ಲಕ್ನೋ: ನಡು ರಸ್ತೆಯಲ್ಲಿಯೇ ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಮಹಿಳೆ ವಿರುದ್ಧ ಇದೀಗ ಎಫ್‍ಐಆರ್ ದಾಖಲಾಗಿದೆ.

    ಲಕ್ನೋ ಟ್ರಾಫಿಕ್ ಸಿಗ್ನಲ್‍ನಲ್ಲಿ ಕ್ಯಾಬ್ ಚಾಲಕನಿಗೆ ಹಿಂದೆ-ಮುಂದೆ ನೋಡದೇ ಮಹಿಳೆ ಹಿಗ್ಗಾಮುಗ್ಗ ಥಳಿಸಿದ್ದ ವೀಡಿಯೋ ಸಿಸಿಟಿವಿ ಫೋಟೇಜ್‍ನಲ್ಲಿ ಸೆರೆಯಾಗಿತ್ತು. ಅಲ್ಲದೇ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

    ಇದೀಗ ರಸ್ತೆಯಲ್ಲಿ ಕ್ಯಾಬ್ ಡ್ರೈವರ್ ಗೆ ಕಪಾಳಮೋಕ್ಷ ಮಾಡಿದ ಮಹಿಳೆ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತರಾದ (ಡಿಸಿಪಿ) ಚಿರಂಜೀವ್ ನಾಥ್ ಸಿನ್ಹಾ ತಿಳಿಸಿದ್ದಾರೆ. ವೀಡಿಯೋದಲ್ಲಿ ಹಲ್ಲೆಗೊಳಗಾದ ವ್ಯಕ್ತಿಯಿಂದ ನಾವು ದೂರು ಸ್ವೀಕರಿಸುತ್ತಿದ್ದು, ಕೃಷ್ಣ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್‍ಗಳ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.

    ವೀಡಿಯೋದಲ್ಲಿ ಬಿಳಿ ಶರ್ಟ್ ಧರಿಸಿದ್ದ ಮಹಿಳೆ ಜೀಬ್ರಾ ಕ್ರಾಸಿಂಗ್ ಮಧ್ಯೆ ನಿಂತು ಕ್ಯಾಬ್ ಚಾಲಕನಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಇದರಿಂದ ಇತರ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿ ಟ್ರಾಫಿಕ್ ಜಾಮ್ ಆಗಿದೆ. ಈ ವಿಚಾರವಾಗಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮಧ್ಯೆ ಪ್ರವೇಶಿಸಿ ಜಗಳವನ್ನು ತಪ್ಪಿಸಲು ಪ್ರಯತ್ನಿಸುತ್ತಿರುತ್ತಾರೆ. ಆದರೂ ಮಹಿಳೆ ಬಿಡದೇ ಚಾಲಕನನ್ನು ಎಳೆದಾಡಿಕೊಂಡು ಕಪಾಳಕ್ಕೆ ಹೊಡೆಯುತ್ತಲೇ ಇರುತ್ತಾರೆ. ಈ ವೇಳೆ ಚಾಲಕನ ಮೊಬೈಲ್‍ನನ್ನು ಮಹಿಳೆ ಒಡೆದು ಹಾಕಿದ್ದಾರೆ. ಆಗ ಮಹಿಳಾ ಪೊಲೀಸ್ ಠಾಣೆಗೆ ಕರೆ ಮಾಡುವಂತೆ ಕ್ಯಾಬ್ ಚಾಲಕ ಸ್ಥಳೀಯರಿಗೆ ಹೇಳುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ:ನಡು ರಸ್ತೆಯಲ್ಲಿ ಕ್ಯಾಬ್ ಡ್ರೈವರ್​​​ಗೆ ಹಿಗ್ಗಾಮುಗ್ಗ ಥಳಿಸಿದ ಯುವತಿ

  • ಕಾಲಿನಲ್ಲಿ ಪರೀಕ್ಷೆ ಬರೆದು ಶೇ.70 ಅಂಕ ಪಡೆದ ಯುವಕ

    ಕಾಲಿನಲ್ಲಿ ಪರೀಕ್ಷೆ ಬರೆದು ಶೇ.70 ಅಂಕ ಪಡೆದ ಯುವಕ

    ಲಕ್ನೋ: ಹುಟ್ಟುತ್ತಲೇ ಅಂಗವಿಕಲನಾಗಿ ಬೆಳೆದ ಲಕ್ನೋ ಯುವಕ ಕಾಲಿನ ಮೂಲಕ ಪರೀಕ್ಷೆ ಬರೆದು ಶೇ.70 ಪಡೆದು ಪಾಸ್ ಆಗಿದ್ದಾರೆ.

    ತುಷಾರ್ ವಿಶ್ವಕರ್ಮ ಎಂಬವರು ಪೆನ್ನನ್ನು ಕಾಲಿನಲ್ಲಿ ಹಿಡಿದು ಬರೆಯುವುದಕ್ಕೆ ಅಭ್ಯಾಸ ಮಾಡಿಕೊಂಡಿದ್ದರು. ಇದೀಗ 12ನೇ ತರಗತಿ ಪರೀಕ್ಷೆಯನ್ನು ತಮ್ಮ ಕಾಲಿನ ಬೆರಳುಗಳ ಮೂಲಕ ಬರೆದು ಶೇ.70 ಪಡೆದು ಉತ್ತೀರ್ಣರಾಗಿದ್ದಾರೆ.

    ಸೃಜನಶೀಲ ಕಾನ್ವೆಂಟ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ತಾನು ಹುಟ್ಟಿನಿಂದಲೂ ಕೈಗಳನ್ನು ಕಳೆದುಕೊಂಡಿದ್ದೇನೆ. ಆದರೆ ಅದನ್ನು ನನ್ನ ಅಸಹಾಯಕತನ ಎಂದು ಭಾವಿಸಲಿಲ್ಲ. ನನ್ನ ಇಬ್ಬರು ಅಣ್ಣಂದಿರು ಶಾಲೆಗೆ ಹೋಗುವಾಗ, ನಾನು ಕೂಡ ಶಾಲೆಗೆ ಹೋಗಬೇಕೆಂದು ನಿರ್ಧರಿಸಿ ಪೋಷಕರಿಗೆ ಕೇಳಿಕೊಂಡೆ. ನಂತರ ನನ್ನ ಕೈಯಲ್ಲಿ ಬರೆಯಲು ಅಸಾಧ್ಯ ಎಂದು ನನ್ನ ಸಹೋದರರಿಗೆ ನನ್ನ ಬದಲಾಗಿ ಬರೆಯುವಂತೆ ಪೋಷಕರು ಹೇಳುತ್ತಿದ್ದರು. ಆಗ ನಾನು ನನ್ನ ಪಾದಗಳನ್ನು ನನ್ನ ಕೈಗಳಾಗಿ ಮಾಡಿಕೊಂಡು ಬರೆಯಲು ಆರಂಭಿಸಿದೆ ಎಂದು ಹೇಳಿದ್ದಾರೆ.

    ಪರೀಕ್ಷೆ ವೇಳೆ ತುಷಾರ್ ಬರೆಯಲು ಯಾರ ಸಹಾಯವನ್ನು ಪಡೆಯದೇ ಪರೀಕ್ಷೆಯನ್ನು ಪೂರ್ಣಗೊಳಿಸಲು ಕೊಂಚ ಹೆಚ್ಚು ಸಮಯ ನೀಡುವಂತೆ ಶಿಕ್ಷಕಗೆ ಮನವಿ ಮಾಡಿದ್ದಾರೆ. ಅಲ್ಲದೇ ಪರೀಕ್ಷೆ ಬರೆಯಲು ನಾನು ಕಪ್ಪು ಹಾಗೂ ನೀಲಿ ಬಣ್ಣದ ಪೆನ್ನುಗಳನ್ನು ಬಳಸಿರುವುದಾಗಿ ತಿಳಿಸಿದ್ದಾರೆ. ಸದ್ಯ ತುಷಾರ್ ತಂದೆ ಸಣ್ಣ ವ್ಯಾಪಾರವೊಂದನ್ನು ಮಾಡುತ್ತಿದ್ದು ಮಗನ ಸಾಧನೆಗೆ ಬೆಂಬಲವಾಗಿ ನಿಂತಿದ್ದಾರೆ ಹಾಗೂ ತುಷಾರ್ ಮುಂದೆ ಇಂಜಿನಿಯರ್ ಆಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

    ಸಾಧನೆ ಮಾಡಲು ಅಂಗವೈಕಲ್ಯತೆ ಅಡ್ಡಬರುವುದಿಲ್ಲ. ಕಲಿಕೆಯಲ್ಲಿ ಆಸಕ್ತಿವೊಂದಿದ್ದರೆ ಸಾಕು ಏನನ್ನು ಬೇಕಾದರೂ ಸಾಧಿಸಬಹುದು ಎಂಬುವುದಕ್ಕೆ ಇದೊಂದು ಸ್ಫೂರ್ತಿದಾಯಕ ಕಥೆ ಎಂದೇ ಹೇಳಬಹುದು. ಇದನ್ನೂ ಓದಿ:ಮೊದಲ ಬಾರಿಗೆ ಒಲಿಂಪಿಕ್ಸ್ ಸೆಮಿಫೈನಲ್ ಪ್ರವೇಶಿಸಿದ ಭಾರತೀಯ ಮಹಿಳಾ ಹಾಕಿ ತಂಡ