Tag: lucknow

  • ಮಿಗ್ 21 ಯುದ್ಧ ವಿಮಾನದಲ್ಲಿ ಮಿಂಚಿದ ಅಭಿನಂದನ್

    ಮಿಗ್ 21 ಯುದ್ಧ ವಿಮಾನದಲ್ಲಿ ಮಿಂಚಿದ ಅಭಿನಂದನ್

    ಲಕ್ನೋ: ಇಂದು ಭಾತರತೀಯ ವಾಯು ಪಡೆ(ಐಎಎಫ್) 87ನೇ ದಿನಾಚರಣೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗಾಜಿಯಾಬಾದ್‍ನ ಹಿಂಡನ್ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಕಲರವ ಜೋರಾಗಿದ್ದು, ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರು ಮಿಗ್-21 ಬೈಸನ್ ಯುದ್ಧ ವಿಮಾನ ಹಾರಾಟ ನಡೆಸಿ ಎಲ್ಲರ ಗಮನ ಸೆಳೆದರು.

    87ನೇ ಐಎಎಫ್ ದಿನಾಚರಣೆ ಅಂಗವಾಗಿ ಹಿಂಡನ್ ಏರ್‌ಬೇಸ್‌ನಲ್ಲಿ ಯುದ್ಧ ವಿಮಾನ ಮತ್ತು ಹೆಲಿಕಾಪ್ಟರ್ ಗಳ ಪ್ರದರ್ಶನ ನಡೆಯಿತು. ಈ ಕಾರ್ಯಕ್ರಮದಲ್ಲಿ ವಾಯುಸೇನೆ ಮುಖ್ಯಸ್ಥ ಆರ್. ಕೆ ಎಸ್ ಬದೌರಿಯಾ, ಭೂಸೇನೆ ಮುಖ್ಯಸ್ಥ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಕರಂಬಬೀರ್ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವವನ್ನು ವೀಕ್ಷಿಸಲು ಸಾವಿರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದು, ಕಾರ್ಯಕ್ರಮದಲ್ಲಿ ಅಭಿನಂದನ್ ಅವರ ಉಪಸ್ಥತಿ ಜನರ ಉತ್ಸಾಹ ಹೆಚ್ಚಿಸಿತು. ಇದನ್ನೂ ಓದಿ:87ನೇ ವಾಯಪಡೆಯ ದಿನಾಚರಣೆಯಲ್ಲಿ ಭಾಗವಹಿಸಿದ ಕ್ಯಾಪ್ಟನ್ ಸಚಿನ್ ತೆಂಡೂಲ್ಕರ್

    ಏರ್ ಶೋಗೆ ಅಭಿನಂದನ್ ಪ್ರವೇಶಿಸುತ್ತಿದ್ದಂತೆ ಏರ್‌ಬೇಸ್‌ನಲ್ಲಿ ಸಾರ್ವಜನಿಕರು ಚಪ್ಪಾಳೆಗಳ ಸುರಿಮಳೆಗೈದರು. ಈ ಮಧ್ಯೆ ಅಭಿನಂದನ್ ಅವರು ಮಿಗ್-21 ಯುದ್ಧ ವಿಮಾನ ಹಾರಾಟ ನಡೆಸುವ ಮೂಲಕ ಎಲ್ಲರ ಗಮನ ಸೆಳೆದರು. ಅಲ್ಲದೆ ಇದೇ ಮೊದಲ ಬಾರಿಗೆ ವಿಶ್ವದ ಅತ್ಯಂತ ಅಪಾಯಕಾರಿ ಯುದ್ಧ ಹೆಲಿಕಾಪ್ಟರ್ ಅಪಾಚೆ ತನ್ನ ಶಕ್ತಿ ಪ್ರದರ್ಶನ ತೋರಿದ್ದು ವಿಶೇಷವಾಗಿತ್ತು. ಚಿನೂಕ್ ಹೆಲಿಕಾಪ್ಟರ್‌ಗಳು ಕೂಡ ಆಗಸದಲ್ಲಿ ಶಕ್ತಿ ಪ್ರದರ್ಶಿಸಿದವು. ಜೊತೆಗೆ ಸ್ವದೇಶಿ ನಿರ್ಮಿತ ತೇಜಸ್ ಯುದ್ಧ ವಿಮಾನದ ಆರ್ಭಟವನ್ನು ಕಾರ್ಯಕ್ರಮದಲ್ಲಿ ನೆರೆದವರು ಕಣ್ತುಂಬಿಕೊಂಡರು. ಇದನ್ನೂ ಓದಿ:ಐಎಎಫ್‍ನ ಮೊದಲ ‘ರಫೇಲ್’ಗೆ ರಾಜನಾಥ್ ಸಿಂಗ್ ಆಯುಧ ಪೂಜೆ

    ಫೆ. 14ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರಿದ್ದ ಬಸ್ಸಿನ ಮೇಲೆ ಜೈಷ್ ಉಗ್ರನೊಬ್ಬ ಆತ್ಮಾಹುತಿ ದಾಳಿ ನಡೆಸಿ 40ಕ್ಕೂ ಹೆಚ್ಚು ಮಂದಿ ಯೋಧರನ್ನು ಬಲಿಪಡೆದಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ವಾಯು ಪಡೆ ಪಾಕಿಸ್ತಾನದ ಬಾಲಕೋಟ್‍ನಲ್ಲಿ ಜೈಷ್ ಉಗ್ರರ ನೆಲೆಗಳ ಮೇಲೆ ಏರ್ ಸ್ಟ್ರೈಕ್ ನಡೆಸಿ ಉಗ್ರರನ್ನು ಸದೆಬಡೆದಿತ್ತು.

    ಫೆ. 27ರಂದು ಪಾಕಿಸ್ತಾನ ಎಫ್-16 ಯುದ್ಧ ವಿಮಾನವನ್ನು ತನ್ನ ಮಿಗ್-21 ಯುದ್ಧ ವಿಮಾನದ ಮೂಲಕ ಹೊಡೆದುರುಳಿಸಿದ ನಂತರ ಅಭಿನಂದನ್ ಅವರು ನ್ಯಾಷನಲ್ ಹೀರೋ ಆಗಿ ಹೊರಹೊಮ್ಮಿದ್ದರು. ಬಾಲಾಕೋಟ್ ಏರ್ ಸ್ಟ್ರೈಕ್ ನಂತರ ಪಾಕಿಸ್ತಾನ ತನ್ನ ಎಫ್-16 ಯುದ್ಧ ವಿಮಾನದ ಮೂಲಕ ಭಾರತವನ್ನು ಗುರಿಯಾಗಿಸಿಕೊಂಡು ವಾಯು ದಾಳಿ ನಡೆಸಿದ ಸಂದರ್ಭದಲ್ಲಿ ಅಭಿನಂದನ್ ಮಿಗ್-21 ವಿಮಾನದ ಮೂಲಕ ಪಾಕ್ ವಿಮಾನವನ್ನು ಹೊಡೆದುರುಳಿಸಿದ್ದರು. ಈ ವೇಳೆ ಅಭಿನಂದನ್ ಅವರ ಮಿಗ್-21 ವಿಮಾನ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪತನಗೊಂಡಿತ್ತು. ಆಗ ಸುಮಾರು 58 ಗಂಟೆಗಳ ಕಾಲ ಅಭಿನಂದನ್ ಪಾಕಿಸ್ತಾನದ ಕಸ್ಟಡಿಯಲ್ಲೇ ಇದ್ದರು. ನಂತರ ಕೇಂದ್ರ ಸರ್ಕಾರ ಪಾಕ್ ಮೇಲೆ ಒತ್ತಡ ಹೇರಿ ಅಭಿನಂದನ್ ಅವರನ್ನು ಬಿಡಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿತ್ತು.

  • ಕೋತಿ ಕೊಂದಿದ್ದಕ್ಕೆ ಸಿಡಿದೆದ್ದ ಭಜರಂಗದಳ- ಶುರುವಾಯ್ತು ಕೋಮು ಗಲಭೆ

    ಕೋತಿ ಕೊಂದಿದ್ದಕ್ಕೆ ಸಿಡಿದೆದ್ದ ಭಜರಂಗದಳ- ಶುರುವಾಯ್ತು ಕೋಮು ಗಲಭೆ

    ಲಕ್ನೋ: ಅನ್ಯ ಕೋಮಿನ ಯುವಕರು ಕೋತಿಯನ್ನು ಗುಂಡಿಕ್ಕಿ ಕೊಂದಿದ್ದಕ್ಕೆ ಉತ್ತರ ಪ್ರದೇಶದ ಶಾಮ್ಲಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಕೋತಿಯನ್ನ ಹತ್ಯೆಗೈದಿರುವುದೇ ಕೋಮು ಗಲಭೆಗೆ ಕಾರಣವಾಗಿದೆ.

    ಶಾಮ್ಲಿ ಗ್ರಾಮದ ನಿವಾಸಿಗಳಾದ ಆಸೀಫ್, ಹಫೀಜ್ ಮತ್ತು ಅನೀಸ್ ಮೂವರು ಸಹೋದರರು ಕೋತಿಯೊಂದನ್ನ ಗುಂಡಿಕ್ಕಿ ಕೊಂದಿದ್ದರು. ಯುವಕರ ಈ ಕೃತ್ಯ ಭಜರಂಗದಳ ಹಾಗೂ ಸ್ಥಳೀಯರ ಕೆಂಗಣ್ಣಿಗೆ ಕಾರಣವಾಗಿದೆ. ಹಿಂದೂ ಧರ್ಮದಲ್ಲಿ ಕೋತಿಯನ್ನು ಆಂಜನೇಯ ದೇವರೆಂದು ಪೂಜಿಸಲಾಗುತ್ತದೆ. ಹೀಗಾಗಿ ಕೋತಿಗಳನ್ನು ಹಿಂಸಿಸಲು ಹಾಗೂ ಕೊಲ್ಲಲು ನಮ್ಮ ಅವಕಾಶವಿಲ್ಲ. ಹೀಗಿರುವಾಗ ಈ ಮೂವರು ಅನ್ಯ ಕೋಮಿನ ಯುವಕರು ಬೇಕು ಬೇಕಂತಲೇ ಕೋತಿಯನ್ನು ಕೊಂದು ಕ್ರೌರ್ಯ ಮೆರೆದಿದ್ದಾರೆ ಎಂದು ಭಜರಂಗದಳ ಕಾರ್ಯಕರ್ತರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಆಸೀಫ್, ಹಫೀಜ್ ಮತ್ತು ಅನೀಸ್ ಮೂವರು ಕೋತಿಯೊಂದನ್ನು ಸುತ್ತುವರಿದು ನಿಂತಿದ್ದರು. ಅವರಲ್ಲಿ ಓರ್ವ ಯುವಕ ಬಂದೂಕಿನಿಂದ ಕೋತಿಗೆ ಗುಂಡು ಹೊಡೆದಿದ್ದು, ಕೋತಿಯ ಸೊಂಟದ ಭಾಗದಲ್ಲಿ ಗುಂಡು ತಗುಲಿ ಗಾಯಗೊಂಡು ಮೂಕ ಪ್ರಾಣಿ ಪ್ರಾಣ ಬಿಟ್ಟಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ಬಂದ ಸಿಬ್ಬಂದಿ ಕೋತಿಯ ಮರಣೋತ್ತರ ಪರೀಕ್ಷೆ ಮಾಡಿಸಿ, ಅದರ ಅಂತ್ಯಸಂಸ್ಕಾರ ಮಾಡಿದ್ದಾರೆ. ಅಲ್ಲದೆ ಮೂವರು ಆರೋಪಿಗಳ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿದೆ.

    ಇದರ ಜೊತೆಗೆ ಭಜರಂಗದಳದ ಕಾರ್ಯಕರ್ತರು ಸಹ ಯುವಕರ ಕೃತ್ಯವನ್ನು ತೀವ್ರವಾಗಿ ಖಂಡಿಸಿ, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಶಿಕ್ಷೆ ನೀಡಿ. ಇಲ್ಲವಾದರೆ ಕೋತಿ ಸಾವಿಗೆ ನ್ಯಾಯ ಸಿಗುವವರೆಗೂ ಹೋರಾಡುತ್ತೇವೆ ಎಂದು ಹರಿಹಾಯ್ದಿದ್ದಾರೆ.

  • ಸೈಕಲ್ ನೀಡಲು ನಿರಾಕರಿಸಿದ ಬಾಲಕನ ಗುಪ್ತಾಂಗ ಕತ್ತರಿಸಲು ಯತ್ನಿಸಿದ ಸಾಧು

    ಸೈಕಲ್ ನೀಡಲು ನಿರಾಕರಿಸಿದ ಬಾಲಕನ ಗುಪ್ತಾಂಗ ಕತ್ತರಿಸಲು ಯತ್ನಿಸಿದ ಸಾಧು

    ಲಕ್ನೋ: ಸೈಕಲ್ ಕೇಳಿದಾಗ ನೀಡಲು ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಸಾಧುವೊಬ್ಬ ಕತ್ತಿಯಿಂದ ಬಾಲಕನ ಗುಪ್ತಾಂಗ ಕತ್ತರಿಸಲು ಯತ್ನಿಸಿ, ಹಲ್ಲೆ ಮಾಡಿ ಕ್ರೌರ್ಯ ಮೆರೆದ ಘಟನೆ ಉತ್ತರ ಪ್ರದೇಶದ ಫರುಖಾಬಾದ್‍ನಲ್ಲಿ ನಡೆದಿದೆ.

    ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಚೋನಪುರ ನಿವಾಸಿಯಾಗಿರುವ 12 ವರ್ಷದ ಬಾಲಕ ಮೇಲೆ ಅದೇ ಗ್ರಾಮದ ಸಾಧು ಹಲ್ಲೆ ಮಾಡಿದ್ದಾನೆ. ಬುಧವಾರ ರಾತ್ರಿ ಬಾಲಕ ರಸ್ತೆಯಲ್ಲಿ ಸೈಕಲ್ ಮೇಲೆ ಹೋಗುತ್ತಿದ್ದನು. ಈ ವೇಳೆ ಆತನಿಗೆ ಅಡ್ಡಗಟ್ಟಿದ ಸಾಧು ಬಾಲಕನ ಸೈಕಲ್ ತನಗೆ ಕೊಡುವಂತೆ ಕೇಳಿದ್ದಾನೆ. ಆಗ ಬಾಲಕ ಸೈಕಲ್ ನೀಡಲು ನಿರಾಕರಿಸಿದ್ದಾನೆ. ಇಷ್ಟಕ್ಕೆ ಕೋಪಗೊಂಡ ಸಾಧು ತನ್ನ ಬಳಿ ಇದ್ದ ಕತ್ತಿಯಿಂದ ಬಾಲಕನ ಗುಪ್ತಾಂಗ ಕತ್ತರಿಸಲು ಯತ್ನಿಸಿ ಹಲ್ಲೆ ಮಾಡಿದ್ದಾನೆ.

    ಸಾಧುವಿನ ಕೃರ್ತಕ್ಕೆ ಬಾಲಕ ಗಂಭಿರ ಗಾಯಗೊಂಡಿದ್ದು, ನೋವಿನಿಂದ ಕೂಗಿಕೊಳ್ಳುತ್ತಿದ್ದಂತೆ ಸಾಧು ಸ್ಥಳದಿಂದ ಪರಾರಿಯಾಗಿದ್ದಾನೆ. ಬಾಲಕನ ಕಿರುಚಾಟ ಕೇಳಿ ಗ್ರಾಮಸ್ಥರು ಸ್ಥಳಕ್ಕೆ ಬಂದು ಆತನನ್ನು ಕರೆದುಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

    ಬಾಲಕನ ಪೋಷಕರು ಹಾಗೂ ಗ್ರಾಮಸ್ಥರು ಸೇರಿ ಸಾಧು ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಸಾಧುವನ್ನು ಆದಷ್ಟು ಬೇಗ ಪತ್ತೆಹಚ್ಚಿ ಬಂಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಸೆಕ್ಸ್‌‌ನಲ್ಲಿ ತೊಡಗಿದ್ದಾಗ ಪತಿ ಕೈಗೆ ಸಿಕ್ಕಿಬಿದ್ಳು- ತಪ್ಪಿತಸ್ಥ ಮನೋಭಾವನೆಯಿಂದ ಪತ್ನಿ ಆತ್ಮಹತ್ಯೆ

    ಸೆಕ್ಸ್‌‌ನಲ್ಲಿ ತೊಡಗಿದ್ದಾಗ ಪತಿ ಕೈಗೆ ಸಿಕ್ಕಿಬಿದ್ಳು- ತಪ್ಪಿತಸ್ಥ ಮನೋಭಾವನೆಯಿಂದ ಪತ್ನಿ ಆತ್ಮಹತ್ಯೆ

    ಲಕ್ನೋ: ಪ್ರಿಯಕರನ ಜೊತೆ ದೈಹಿಕ ಸಂಬಂಧದಲ್ಲಿ ತೊಡಗಿದ್ದ ಪತ್ನಿ  ಪತಿ ಕೈಗೆ ಸಿಕ್ಕಿಬಿದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

    ಬಾರ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಪಕ್ಕದ ಮನೆಯ ಮಹೇಶ್ ಎಂಬವನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಪತಿ ಇಲ್ಲಿದಿದ್ದಾಗ ಮಹೇಶ್ ಮಹಿಳೆಯ ಮನೆಗೆ ಬರುತ್ತಿದ್ದನು. ಹೀಗೆ ಮಹೇಶ್ ಮಹಿಳೆಯ ಮನೆಗೆ ಭೇಟಿ ನೀಡಿದ್ದು, ಇಬ್ಬರು ದೈಹಿಕ ಸಂಬಂಧ ಬೆಳೆಸುತ್ತಿದ್ದರು.

    ಇಬ್ಬರು ಸಂಬಂಧ ಬೆಳೆಸುತ್ತಿದ್ದ ವೇಳೆ ಮಹಿಳೆಯ ಪತಿ ಮನೆಗೆ ಬಂದಿದ್ದಾನೆ. ಅಲ್ಲದೆ ಪತ್ನಿ ಪ್ರಿಯಕರನ ಜೊತೆ ದೈಹಿಕ ಸಂಬಂಧ ಬೆಳೆಸುತ್ತಿರುವುದ್ದನ್ನು ನೋಡಿದ್ದಾನೆ. ಇದಾದ ಬಳಿಕ ಪತಿ ಹಾಗೂ ಪತ್ನಿ ನಡುವೆ ಜಗಳವಾಗಿದ್ದು, ಮಹಿಳೆ ತಪ್ಪಿತಸ್ಥ ಮನೋಭಾವನೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಜನರು ಸಾಕಷ್ಟು ಚರ್ಚೆ ಮಾಡಲು ಶುರು ಮಾಡಿದ್ದಾರೆ. ಸದ್ಯ ಘಟನೆ ಬಗ್ಗೆ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಲ್ಲದೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  • ಗಾಂಧಿ ಪುತ್ಥಳಿ ಮುಂದೆ ಗಳಗಳನೆ ಅತ್ತ ಎಸ್‍ಪಿ ನಾಯಕ ಟ್ರೋಲ್- ವಿಡಿಯೋ ವೈರಲ್

    ಗಾಂಧಿ ಪುತ್ಥಳಿ ಮುಂದೆ ಗಳಗಳನೆ ಅತ್ತ ಎಸ್‍ಪಿ ನಾಯಕ ಟ್ರೋಲ್- ವಿಡಿಯೋ ವೈರಲ್

    ಲಕ್ನೋ: ಬುಧವಾರ ಸಮಾಜವಾದಿ ಪಕ್ಷದ ನಾಯಕ ಫಿರೋಜ್ ಖಾನ್ ಮಹಾತ್ಮ ಗಾಂಧೀಜಿಯನ್ನು ನೆನೆದು ಅವರ ಪುತ್ಥಳಿ ಮುಂದೆ ಗಳಗಳನೆ ಅತ್ತ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದ್ಭುತ ನಟನೆ ಅವರಿಗೆ ಆಸ್ಕರ್ ಕೊಡಿ ಎಂದು  ನೆಟ್ಟಿಗರು ಫಿರೋಜ್ ಖಾನ್ ಕಾಲೆಳೆದಿದ್ದಾರೆ.

    ಉತ್ತರಪ್ರದೇಶದ ಸಂಬಲ್ ನಗರದ ಫವಾರ ಚೌಕದಲ್ಲಿರುವ ಗಾಂಧೀಜಿ ಪ್ರತಿಮೆ ಬಳಿ ಫಿರೋಜ್ ಖಾನ್ ಕಣ್ಣೀರು ಹಾಕಿದ್ದಾರೆ. ಇತರೆ ಎಸ್‍ಪಿ ನಾಯಕರು ಅಲ್ಲಿ ಕ್ಯಾಮೆರಾ ಕಂಡ ಕೂಡಲೇ ಅಳಲು ಆರಂಭಿಸಿ ನಾಯಕನಿಗೆ ಸಾಥ್ ಕೊಟ್ಟರು. ಮಹಾತ್ಮ ಗಾಂಧೀಜಿಯ ಪುತ್ಥಳಿಗೆ ಪುಷ್ಪಾರ್ಚನೆ ಮಾಡಲು ಫಿರೋಜ್ ಖಾನ್ ಅವರನ್ನು ಆಹ್ವಾನಿಸಲಾಗಿತ್ತು. ಈ ವೇಳೆ ಫಿರೋಜ್ ಖಾನ್ ನಮ್ಮ ಸಮಾಜದ ವಾಸ್ತವ ಸ್ಥಿತಿಯನ್ನು ಗಾಂಧೀಜಿ ಪುತ್ಥಳಿ ಮುಂದೆ ಹೇಳುತ್ತ ಗಳಗಳನೆ ಕಣ್ಣೀರು ಹಾಕಿದ್ದರು. ಫಿರೋಜ್ ಖಾನ್ ಕಣ್ಣೀರು ಹಾಕುತ್ತಿದ್ದಂತೆ ಅವರ ಜೊತೆಗಿದ್ದ ಬೆಂಬಲಿಗರು ಕೂಡ ಅತ್ತು, ಗೋಗರಿದಿದ್ದಾರೆ.

    ಈ ದೇಶಕ್ಕೆ ನೀವು ಸ್ವಾತಂತ್ರ ತಂದುಕೊಟ್ಟು ನಮ್ಮನ್ನೆಲ್ಲ ಬಿಟ್ಟು ಬಾಪು ನಿವೇಕೆ ದೂರ ಹೋದಿರಿ? ನಮ್ಮನ್ನೆಲ್ಲಾ ಅನಾಥರಾಗಿ ಬಿಟ್ಟು ಹೋದಿರಿ. ನಿಮ್ಮ ಎಲ್ಲ ಆದರ್ಶಗಳು ಸಮಯ ಕಳೆದಂತೆ ಮರೆಯಾಗುತ್ತಿದೆ. ಇದನ್ನೆಲ್ಲ ನೋಡಲು ನಾವು ಇನ್ನೂ ಇರಬೇಕಾ ಎಂದು ಹೇಳಿದ ಫಿರೋಜ್ ಖಾನ್ ಜೋರಾಗಿ ಅಳಲು ಆರಂಭಿಸಿದರು. ಈ ವೇಳೆ ಅವರನ್ನು ನೋಡಿದ ಬೆಂಬಲಿಗರು ಕೂಡ ಬಿಕ್ಕಿ ಬಿಕ್ಕಿ ಅತ್ತರು.

    https://twitter.com/AsYouNtWish/status/1179437716221509632

    ಈ ದೃಶ್ಯವನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ವಿಡಿಯೋ ನೋಡಿದ ನೆಟ್ಟಿಗರು ಫಿರೋಜ್ ಖಾನ್ ಅವರನ್ನು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಿದ್ದಾರೆ. ಎಂಥ ಅಭಿನಯ, ಇವರಿಗೆ ಆಸ್ಕರ್ ಪ್ರಶಸ್ತಿ ಕೊಡಿ ಎಂದು ಕಮೆಂಟ್ ಮಾಡಿ ಟೀಕಿಸುತ್ತಿದ್ದಾರೆ.

    ಈ ಬಾರಿಯ ಆಸ್ಕರ್ ಪ್ರಶಸ್ತಿ ಫಿರೋಜ್ ಖಾನ್ ಅವರ ಕೈಸೇರುವುದರಲ್ಲಿ ಅನುಮಾನವೇ ಇಲ್ಲ. ಯಾವ ಸೀರಿಯಲ್ ನೋಡಿ ಬಂದು ಫಿರೋಜ್ ಖಾನ್ ಕಣ್ಣೀರು ಹಾಕಿದರೋ ಗೊತ್ತಿಲ್ಲ ಎಂದು ನೆಟ್ಟಿಗರು ಟೀಕಿಸಿದ್ದಾರೆ. ಕೆಲವರು ಈ ಬಾರಿ ಬಿಗ್ ಬಾಸ್ ಮನೆಗೆ ಹೋಗೋ ಪ್ಲಾನ್ ಇದ್ರೆ ಹೇಳಿ, ಸುಮ್ಮನೆ ನಾಟಕ ಯಾಕೆ ಮಾಡುತ್ತೀರಾ? ಎಂದು ಕಿಡಿಕಾರಿದ್ದರೆ, ಇನ್ನೂ ಕೆಲವರು ಕೊನೆಗೂ ನಮ್ಮ ದೇಶಕ್ಕೆ ಒಂದೊಳ್ಳೆ ಪ್ರತಿಭಾವಂತ ನಟ ಸಿಕ್ಕಿದನಲ್ಲ ಅಂತ ಖುಷಿಯಾಯ್ತು ಎಂದೆಲ್ಲ ಸಖತ್ ಟ್ರೋಲ್ ಮಾಡಿ ಗೇಲಿ ಮಾಡುತ್ತಿದ್ದಾರೆ.

  • ಕ್ಷಮಿಸು ಅಮ್ಮ, ನಾನು ಲವ್ ಮಾಡಿಲ್ಲ ಎಂದು ನೇಣಿಗೆ ಶರಣಾದ ಯುವಕ

    ಕ್ಷಮಿಸು ಅಮ್ಮ, ನಾನು ಲವ್ ಮಾಡಿಲ್ಲ ಎಂದು ನೇಣಿಗೆ ಶರಣಾದ ಯುವಕ

    ಲಕ್ನೋ: ಕ್ಷಮಿಸು ಅಮ್ಮ, ನಾನು ಹೋಗುತ್ತಿದ್ದೇನೆ. ನಾನು ಯಾವುದೇ ಯುವತಿಯನ್ನು ಲವ್ ಮಾಡಿಲ್ಲ ಎಂದು ಯುವಕನೊಬ್ಬ ಡೆತ್ ನೋಟ್ ಬರೆದು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಲಕ್ನೋದ ಜನಕಿಪುರಂನಲ್ಲಿ ಈ ಘಟನೆ ನಡೆದಿದ್ದು, ಭಾನು ಪ್ರತಾಪ್ ಸಿಂಗ್(19) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾನು ಯಾವುದೇ ಯುವತಿಯನ್ನು ಪ್ರೀತಿಸಿಲ್ಲ. ನನ್ನನ್ನು ಕ್ಷಮಿಸು ಅಮ್ಮ, ನಾನು ಹೋಗುತ್ತಿದ್ದೇನೆ ಎಂದು ಡೆಡ್ ನೋಟ್ ಬರೆದಿಟ್ಟು ಪ್ರತಾಪ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ:ಡೇಟಿಂಗ್ ಆ್ಯಪ್ ಮೂಲಕ ಗೆಳೆಯನ ಹುಡುಕಾಟದಲ್ಲಿದ್ದಾರೆ 83ರ ವೃದ್ಧೆ

    ಪ್ರತಾಪ್ ಸೀತಾಪುರ ರಸ್ತೆಯ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದನು. ಆದರೆ ಕೆಲದಿನಗಳಿಂದ ಪ್ರತಾಪ್ ಯಾವಾಗಲೂ ಮಂಕಾಗಿ ಇರುತ್ತಿದ್ದನು. ಇದನ್ನು ಗಮನಿಸಿದ ಮನೆಯವರು ಏನಾಯಿತು ಎಂದು ಪ್ರಶ್ನಿಸಿದರು ಆತ ಏನು ಉತ್ತರ ನೀಡುತ್ತಿರಲಿಲ್ಲ. ಹೀಗಾಗಿ ಮನೆಯವರು ಹೆಚ್ಚು ಒತ್ತಾಯ ಮಾಡಿ ಕೇಳಿ ತೊಂದರೆ ಕೋಡೋದು ಬೇಡ ಎಂದು ಸುಮ್ಮನಾಗಿದ್ದರು.

    ಶುಕ್ರವಾರ ಪ್ರತಾಪ್ ಕಾಲೇಜಿಗೆ ಹೋಗದೆ ಮನೆಯಲ್ಲಿಯೇ ಇದ್ದ. ಮಧ್ಯಾಹ್ನವಾದರೂ ತನ್ನ ಕೊಠಡಿಯಿಂದ ಹೊರಬಾರದ ಕಾರಣ ಕುಟುಂಬಸ್ಥರು ಆತಂಕಕ್ಕೀಡಾದರು. ಎಷ್ಟೇ ಬಾಗಿಲು ಬಡಿದರೂ ಪ್ರತಾಪ್ ತೆರೆಯದಿದ್ದಾಗ ಚಿಂತೆಗೀಡಾದರು. ಮೊಬೈಲ್‍ಗೆ ಕರೆ ಮಾಡಿದರೂ ಫೋನ್ ಎತ್ತುತ್ತಿರಲಿಲ್ಲ. ಆಗ ಮನೆಯವರು ಬಾಗಿಲನ್ನು ಮುರಿದು ಕೊಠಡಿಯೊಳಗೆ ಹೋದಾಗ ಪ್ರತಾಪ್ ಮೃತದೇಹ ಕಂಡು ಆಘಾತಗೊಂಡಿದ್ದಾರೆ.

    ಮನನೊಂದಿದ್ದ ಪ್ರತಾಪ್ ಕೊಠಡಿಯಲ್ಲಿದ್ದ ಫ್ಯಾನಿಗೆ ನೇಣು ಹಾಕಿಕೊಂಡು ಜೀವ ಬಿಟ್ಟಿದ್ದನು. ಮರಣೋತ್ತರ ಪರೀಕ್ಷೆಯಲ್ಲೂ ಸಹ ಯುವಕ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಪೊಲೀಸರಿಗೆ ಡೆತ್ ನೋಟ್ ಪತ್ತೆಯಾಗಿದ್ದು, ನನ್ನನ್ನು ಕ್ಷಮಿಸು ಅಮ್ಮ, ನಾನು ಹೋಗುತ್ತಿದ್ದೇನೆ, ನಾನು ಯಾವ ಹುಡುಗಿಯನ್ನು ಪ್ರೀತಿ ಮಾಡಿಲ್ಲ ಎಂದು ಬರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರತಾಪ್ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

  • 18 ಸಾವಿರ ದಂಡ ಕಟ್ಟುವ ಚಿಂತೆಯಲ್ಲಿ ಪ್ರಾಣಬಿಟ್ಟ ಆಟೋ ಚಾಲಕ

    18 ಸಾವಿರ ದಂಡ ಕಟ್ಟುವ ಚಿಂತೆಯಲ್ಲಿ ಪ್ರಾಣಬಿಟ್ಟ ಆಟೋ ಚಾಲಕ

    ಲಕ್ನೋ: ಸಂಚಾರಿ ನಿಯಮ ಉಲ್ಲಂಘನೆಗೆ ಪೊಲೀಸರು ಹಾಕಿದ್ದ 18 ಸಾವಿರ ದಂಡವನ್ನು ಕಟ್ಟುವ ಚಿಂತೆಯಿಂದ ಅನಾರೋಗ್ಯಕ್ಕೀಡಾಗಿ ಆಟೋ ಚಾಲಕರೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ ನಡೆದಿದೆ.

    ಕಲಿಚಾಬಾದಿನ ನಿವಾಸಿ ಗಣೇಶ್ ಅಗರ್ವಾಲ್ ಮೃತ ದುರ್ದೈವಿ. ಗಣೇಶ್ ಆಟೋ ಓಡಿಸಿಕೊಂದು ಜೀವನ ನಡೆಸುತ್ತಿದ್ದರು. ಕಳೆದ ಆಗಸ್ಟ್ 31ರಂದು ಜೌನ್ಪುರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದಕ್ಕೆ ಪೊಲೀಸರು ಗಣೇಶ್ ಅವರಿಗೆ 18 ಸಾವಿರ ರೂಪಾಯಿ ದಂಡ ಹಾಕಿದ್ದರು. ಈ ಭಾರೀ ಮೊತ್ತದ ದಂಡವನ್ನು ಹೇಗೆ ಕಟ್ಟುವುದು ಎಂಬ ಚಿಂತೆಯಲ್ಲಿಯೇ ಗಣೇಶ್ ಅವರು ಅನಾರೋಗ್ಯಕ್ಕಿಡಾಗಿದ್ದರು.

    ಕೆಲದಿನಗಳಿಂದ ಗಣೇಶ್ ಅವರ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಬಳಿಕ ಅವರ ಸ್ಥಿತಿ ಗಂಭೀರವಾದ ಬಳಿಕ ವಾರಣಾಸಿಯ ಖಾಸಗಿ ಆಸ್ಪತ್ರೆಗೆ ಅವರನ್ನು ಸೇರಿಸಲಾಯಿತು. ಆದರೆ ಚಿಕಿತ್ಸೆಗೆ ಗಣೇಶ್ ಅವರು ಸ್ಪಂದಿಸದ ಕಾರಣಕ್ಕೆ ಸೆಪ್ಟೆಂಬರ್ 23ರಂದು ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ. ಗಣೇಶ್ ಅವರ ಸಾವಿಗೆ ಸಂಚಾರಿ ಪೊಲೀಸರು ವಿಧಿಸಿದ ಭಾರೀ ದಂಡವೇ ಕಾರಣ. ಹೇಗೆ ಇಷ್ಟು ಮೆತ್ತದ ದಂಡ ಕಟ್ಟಬೇಕು ಎಂದು ತಿಳಿಯದೆ ಗಣೇಶ್ ಯಾವಾಗಲೂ ಚಿಂತೆಯಲ್ಲಿಯೇ ಇರುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಈ ವಿಚಾರ ಜಿಲ್ಲಾಧಿಕಾರಿವರೆಗೂ ತಲುಪಿದಾಗ, ಡಿಸಿ ಅರವಿಂದ್ ಮಲ್ಲಪ್ಪ ಅವರು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ(ಎಆರ್‌ಟಿಒ) ಉದಯ್‍ವೀರ್ ಸಿಂಗ್ ಬಳಿ ಈ ಬಗ್ಗೆ ಮಾಹಿತಿ ಕೇಳಿದರು. ಅವರು ಜೌನ್ಪುರದ ಸಂಚಾರಿ ಪೊಲೀಸರನ್ನು ವಿಚಾರಿಸಿದರು. ಆಗ ಪೊಲೀಸರು, ಆಗಸ್ಟ್ 31ರಂದು ಗಣೇಶ್ ಅವರನ್ನು ತಡೆದು ಪರಿಶೀಲನೆ ನಡೆಸಿದ್ದೆವು. ಆಗ ಅವರು ಆಟೋ ಪರ್ಮಿಟ್ ಹೊಂದಿರಲಿಲ್ಲ. ಹಾಗೆ ಮಾಲಿನ್ಯ ಪ್ರಮಾಣ ಪತ್ರ ಹಾಗೂ ಚಾಲನಾ ಪ್ರಮಾಣಪತ್ರ ಕೂಡ ಅವರ ಬಳಿಯಿರಲಿಲ್ಲ. ಇದಲ್ಲದೆ ಇನ್ನೂ ಮೂರು ತಪ್ಪುಗಳನ್ನು ಮಾಡಿ ಸಂಚಾರಿ ನಿಯಮ ಉಲ್ಲಂಘಿಸಿದಕ್ಕೆ ಎಲ್ಲಾ ಸೇರಿ ಅವರಿಗೆ 18 ಸಾವಿರ ರೂಪಾಯಿ ದಂಡ ವಿಧಿಸಲಾಗಿತ್ತು ಎಂದು ತಿಳಿಸಿದ್ದಾರೆ.

    ಹಿರಿಯ ಅಧಿಕಾರಿಗಳು ಈ ಬಗ್ಗೆ ಮಾತನಾಡಿ, ಇದರಲ್ಲಿ ಪೊಲೀಸರ ತಪ್ಪಿಲ್ಲ. ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದಮೇಲೆ ದಂಡದ ಪ್ರಮಾಣ ಹೆಚ್ಚಾಗಿದೆ. ಪೊಲೀಸರು ತಮ್ಮ ಕೆಲಸ ಮಾಡಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

  • ಜೂಜಾಟದಲ್ಲಿ ಸೋತ ಪತಿ – ಪತ್ನಿಯ ಬಟ್ಟೆ ಹರಿದ ಸ್ನೇಹಿತರು

    ಜೂಜಾಟದಲ್ಲಿ ಸೋತ ಪತಿ – ಪತ್ನಿಯ ಬಟ್ಟೆ ಹರಿದ ಸ್ನೇಹಿತರು

    ಲಕ್ನೋ: ವ್ಯಕ್ತಿಯೋರ್ವ ಜೂಜಾಟದಲ್ಲಿ ತನ್ನ ಪತ್ನಿಯನ್ನೇ ಪಣಕ್ಕಿಟ್ಟು ಸೋತಿದಕ್ಕೆ ಆತನ ಸ್ನೇಹಿತರು ಆಕೆಯ ಬಟ್ಟೆ ಹರಿದು, ಅತ್ಯಾಚಾರಕ್ಕೆ ಯತ್ನಿಸಿ ದುಷ್ಟತನ ಮರೆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಸೆ. 15ರಂದು ಕಾನ್ಪುರದಲ್ಲಿ ಈ ಘಟನೆ ನಡೆದಿದೆ. ನಶೆಯಲ್ಲಿದ್ದ ಪತಿ ಮನೆಯಲ್ಲೇ ನಾಲ್ವರು ಸ್ನೇಹಿತರ ಜೊತೆ ಜೂಜಾಟ ಆಡುತ್ತಿದ್ದನು. ಈ ವೇಳೆ ಹಣ ಖಾಲಿಯಾದ ಮೇಲೆ ಪತ್ನಿಯನ್ನು ಆಟದಲ್ಲಿ ಪಣಕಿಟ್ಟಿದ್ದನು. ಆದರೆ ಆಟದಲ್ಲಿ ಸೋತ ಮೇಲೆ ಪತ್ನಿಯನ್ನು ಸ್ನೇಹಿತರಿಗೆ ಬಿಟ್ಟುಕೊಟ್ಟಿದ್ದನು. ಆಗ ಆತನ ಸ್ನೇಹಿತರು ಪತಿಯ ಮುಂದೆಯೇ ಮಹಿಳೆಯ ಬಟ್ಟೆ ಹರಿದು, ಅತ್ಯಾಚಾರ ಎಸಗಲು ಯತ್ನಿಸಿದಾಗ ಅವರಿಂದ ಮಹಿಳೆ ತಪ್ಪಿಸಿಕೊಂಡು ಅಡಿಗೆ ಕೋಣೆಗೆ ಹೋಗಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ.

    ಮಾಹಿತಿ ತಿಳಿದ ಬಳಿಕ ಮನೆಗೆ ಬಂದ ಪೊಲೀಸರು ಪತಿಯ ಜೊತೆಗೆ ನಾಲ್ವರು ಸ್ನೇಹಿತರನ್ನು ಹಾಗೂ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಆದರೆ ಠಾಣೆಯಲ್ಲಿ ಆರೋಪಿಗಳಿಂದ ಹಣ ಪಡೆದು ಅವರನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಅಲ್ಲದೆ ಇದು ಪತಿ-ಪತ್ನಿ ಜಗಳವೆಂದು ಎಫ್‍ಐಆರ್ ದಾಖಲಿಸಿಕೊಂಡು ಆರೋಪಿಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪ ಮಾಡಿದ್ದಾಳೆ.

    ಈ ಬಗ್ಗೆ ಮಹಿಳೆ ಹಿರಿಯ ಅಧಿಕಾರಿಗಳ ಬಳಿ ದೂರು ನೀಡಿದಾಗ ಎಚ್ಚೆತ್ತುಕೊಂಡ ಪೊಲೀಸರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಲಾಗುತ್ತದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

  • ವಿಕ್ರಂ ಲ್ಯಾಂಡರ್ ಸಂಪರ್ಕ ಸಿಗೋವರೆಗೂ ಸೇತುವೆಯಿಂದ ಇಳಿಯಲ್ಲ- ವ್ಯಕ್ತಿ ಹಠ

    ವಿಕ್ರಂ ಲ್ಯಾಂಡರ್ ಸಂಪರ್ಕ ಸಿಗೋವರೆಗೂ ಸೇತುವೆಯಿಂದ ಇಳಿಯಲ್ಲ- ವ್ಯಕ್ತಿ ಹಠ

    ಲಕ್ನೋ: ಇಸ್ರೋ ವಿಕ್ರಂ ಲ್ಯಾಂಡರ್ ಸಂಪರ್ಕಿಸುವರೆಗೂ ಸೇತುವೆಯಿಂದ ಇಳಿಯಲು ವ್ಯಕ್ತಿ ನಿರಾಕರಿಸುತ್ತಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನ ಮಾಂದದಲ್ಲಿ ನಡೆದಿದೆ.

    ರಜನಿಕಾಂತ್ ಸೇತುವೆ ಹತ್ತಿದ ವ್ಯಕ್ತಿ. ಸೋಮವಾರ ರಜನಿಕಾಂತ್ ಭಾರತದ ರಾಷ್ಟ್ರಧ್ವಜ ಹಿಡಿದು ಪ್ರಯಾಗ್‍ರಾಜ್‍ನಲ್ಲಿ ಇರುವ ನ್ಯೂ ಯಮುನಾ ಸೇತುವೆಯ ಕಂಬ ಹತ್ತಿದ್ದಾನೆ. ಬಳಿಕ ಇಸ್ರೋ ವಿಕ್ರಂ ಲ್ಯಾಂಡರ್ ಸಂಪರ್ಕಿಸುವರೆಗೂ ಕೆಳಗೆ ಇಳಿಯಲ್ಲ ಎಂದು ಹಠ ಹಿಡಿದು ಕುಳಿತಿದ್ದಾನೆ.

    ಸೆಪ್ಟೆಂಬರ್ 7ರಂದು ಚಂದ್ರನ ಮೇಲ್ಮೈ ಸ್ಪರ್ಶಿಸಬೇಕಿದ್ದ ವಿಕ್ರಂ ಲ್ಯಾಂಡರ್ ಅಂತಿಮ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿತ್ತು. ಇಸ್ರೋ ವಿಜ್ಞಾನಿಗಳು ಆರ್ಬಿಟರ್ ಮೂಲಕ ವಿಕ್ರಂ ಸಂಪರ್ಕಿಸುವ ಪ್ರಯತ್ನವನ್ನು ಮುಂದುವರಿಸಿದ್ದಾರೆ. ವಿಕ್ರಂ ಲ್ಯಾಂಡರ್ ಅಂತಿಮ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ಕಾರಣ ರಜನಿಕಾಂತ್ ಮನನೊಂದಿದ್ದನು. ಹಾಗಾಗಿ ಆತ ಸೋಮವಾರ ರಾತ್ರಿ ಸೇತುವೆಯ ಕಂಬ ಹತ್ತಿದ್ದಾನೆ. ಇದನ್ನು ನೋಡಿದ ಸಾರ್ವಜನಿಕರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.

    ಸೇತುವೆ ಮೇಲೆ ಗಂಟೆಗಟ್ಟಲೆ ಕಾದ ನಂತರ ರಜನಿಕಾಂತ್ ಕಬ್ಬಿಣದ ತಟ್ಟೆ ಮೂಲಕ ಒಂದು ಪತ್ರವನ್ನು ಜನರಿಗೆ ನೀಡಿದ್ದನು. ಪತ್ರದಲ್ಲಿ, ಇಸ್ರೋ ಸಂಪರ್ಕಕ್ಕೆ ಚಂದ್ರಯಾನ-2 ವಿಕ್ರಂ ಲ್ಯಾಂಡರ್ ಸಿಗುವರೆಗೂ ನಾನು ಇಲ್ಲಿಯೇ ಇದ್ದು ಚಂದ್ರದೇವನಿಗೆ ಪ್ರಾರ್ಥನೆ ಮಾಡುತ್ತೇನೆ ಎಂದು ಬರೆದಿದ್ದಾನೆ.

  • ನಮೋ ಹುಟ್ಟುಹಬ್ಬಕ್ಕೆ ಹನುಮನಿಗೆ 1.25 ಕೆಜಿ ತೂಕದ ಚಿನ್ನದ ಕಿರೀಟ ನೀಡಿದ ಅಭಿಮಾನಿ

    ನಮೋ ಹುಟ್ಟುಹಬ್ಬಕ್ಕೆ ಹನುಮನಿಗೆ 1.25 ಕೆಜಿ ತೂಕದ ಚಿನ್ನದ ಕಿರೀಟ ನೀಡಿದ ಅಭಿಮಾನಿ

    ಲಕ್ನೋ: ಪ್ರಧಾನಿ ನರೇಂದ್ರ ಮೋದಿ 69ನೇ ಹುಟ್ಟುಹಬ್ಬ ಆಚರಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿಮಾನಿಯೊಬ್ಬರು ವಾರಣಾಸಿಯ ಸಂಕಟ ಮೋಚನ ದೇಗುಲದ ಹನುಮನಿಗೆ ಬರೋಬ್ಬರಿ 1.25 ಕೆಜಿ ತೂಕದ ಚಿನ್ನದ ಕಿರೀಟ ಕೊಟ್ಟು ಮೋದಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದಾರೆ.

    ವಾರಣಾಸಿ ನಿವಾಸಿ ಅರವಿಂದ್ ಸಿಂಗ್ ಅವರು ಮೋದಿ ಅವರ ಕಟ್ಟಾ ಅಭಿಮಾನಿ. ಆದ್ದರಿಂದ ಮೋದಿ ಅವರು ವಾರಣಾಸಿಯಿಂದ ಲೋಕಸಭಾ ಚುನಾವಣೆಗೆ ನಿಂತಾಗ ಗೆಲ್ಲಲಿ ಎಂದು ದೇವರಲ್ಲಿ ಹರಕೆ ಹೊತ್ತಿದ್ದರು. ಅಲ್ಲದೆ ಮೋದಿ ಅವರ ಜೊತೆ ಬಿಜೆಪಿ ಕೂಡ ಗೆದ್ದು, ಎರಡನೇ ಬಾರಿ ಅವರು ಪ್ರಧಾನಿ ಆಗಬೇಕು ಎಂದು ದೇವರಲ್ಲಿ ಬೇಡಿಕೊಂಡಿದ್ದರು. ಅಲ್ಲದೆ ಮೋದಿ ಅವರು ಎರಡನೇ ಬಾರಿ ಗೆದ್ದು, ಪ್ರಧಾನಿ ಪಟ್ಟ ಏರಿದರೆ ಬರೋಬ್ಬರಿ 1.25 ಕೆಜಿ ತೂಕದ ಚಿನ್ನದ ಕಿರೀಟ ಮಾಡಿಸಿ ಹನುಮನಿಗೆ ಅರ್ಪಿಸುವುದಾಗಿ ಹರಕೆ ಹೊತ್ತಿದ್ದರು. ಇದನ್ನೂ ಓದಿ:ಸ್ಪಚ್ಛತಾ ಅಭಿಯಾನ ನಡೆಸಿ ‘ನಮೋ’ಗೆ ಶುಭಕೋರಿದ ಈಶ್ವರಪ್ಪ

    ಅಭಿಮಾನಿ ಆಸೆಯಂತೆ ಮೋದಿ ಅವರು ಚುನಾವಣೆಯಲ್ಲಿ ಜಯಭೇರಿ ಭಾರಿಸಿ, ಎರಡನೇ ಬಾರಿ ಪ್ರಧಾನಿ ಆಗಿ ಅಧಿಕಾರ ಸ್ವೀಕರಿಸಿದರು. ಆದ್ದರಿಂದ ಮೋದಿ ಅವರ ಹುಟ್ಟುಹಬ್ಬದ ಹಿಂದಿನ ದಿನ ತಮ್ಮ ಹರಕೆ ತೀರಿಸಲು ಅರವಿಂದ್ ನಿರ್ಧರಿಸಿದ್ದರು. ಅದರಂತೆ ಸೋಮವಾರ ಸಂಕಟ ಮೋಚನ ದೇಗುಲಕ್ಕೆ ಬಂದು ಹನುಮನಿಗೆ ಚಿನ್ನದ ಕಿರೀಟ ಸಮರ್ಪಿಸಿದ್ದಾರೆ. ಈ ಮೂಲಕ ಮೋದಿ ಅವರಿಗೆ ಶುಭವಾಗಲಿ, ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ಅಭಿಮಾನ ಮೆರೆದಿದ್ದಾರೆ. ಇದನ್ನೂ ಓದಿ:ಚಾಮುಂಡಿ ಬೆಟ್ಟದಲ್ಲಿ ಮೋದಿ, ಯಡಿಯೂರಪ್ಪ, ಬಿಜೆಪಿ ಹೆಸರಿನಲ್ಲಿ ಜಿಟಿಡಿ ಅರ್ಚನೆ

    ಈ ಬಗ್ಗೆ ಮಾತನಾಡಿ ಖುಷಿಯನ್ನು ಹಂಚಿಕೊಂಡ ಅರವಿಂದ್ ಅವರು, ಮೋದಿ ಅವರಿಗಾಗಿ ಹರಕೆ ಕಟ್ಟಿಕೊಂಡಿದ್ದೆ. ಅದನ್ನು ದೇವರು ನೆರವೇರಿಸಿದ್ದಾನೆ. ಆದ್ದರಿಂದ ದೇವರಿಗೆ ಚಿನ್ನದ ಕಿರೀಟ ಕೊಟ್ಟಿದ್ದೇನೆ ಎಂದರು. ಕಳೆದ 75 ವರ್ಷದಲ್ಲಿ ಭಾರತ ಕಾಣದ ಅಭಿವೃದ್ಧಿಯನ್ನು ಮೋದಿ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮಾಡಿದ್ದಾರೆ, ಮಾಡುತ್ತಿದ್ದಾರೆ. ಆದ್ದರಿಂದ ಮೋದಿ ಅವರ ಹುಟ್ಟುಹಬ್ಬದ ಹಿಂದಿನ ದಿನ ದೇವರಿಗೆ ಚಿನ್ನದ ಕಿರೀಟ ನೀಡಲು ನಿರ್ಧರಿಸಿದೆ. ಚಿನ್ನದಂತೆ ಮೋದಿ ಹಾಗೂ ಭಾರತದ ಭವಿಷ್ಯ ಹೊಳೆಯಲಿ. ಇದು ಕಾಶಿ ಜನತೆಯ ಪರವಾಗಿ ನಾನು ಮೋದಿ ಅವರಿಗೆ ನೀಡುತ್ತಿರುವ ಉಡುಗೊರೆ ಎಂದು ಹೇಳಿದ್ದಾರೆ.

    ಸೋಮವಾರ ತಡರಾತ್ರಿಯೇ ಮೋದಿ ಅವರು ಅಹಮದಾಬಾದ್‍ಗೆ ಆಗಮಿಸಿದ್ದರು. ಗುಜರಾತ್ ರಾಜ್ಯಪಾಲ ಆಚಾರ್ಯ ದೇವರಾತ್ ಹಾಗೂ ಅಲ್ಲಿನ ಸಿಎಂ ವಿಜಯ್ ರೂಪಾನಿ ಅವರು ಪ್ರಧಾನಿ ಅವರನ್ನು ವಿಮಾನ ನಿಲ್ದಾಣದಲ್ಲಿ ಭರಮಾಡಿಕೊಂಡರು. ಮೋದಿ ಅವರು ಇಂದು ಹುಟ್ಟುಹಬ್ಬದ ಪ್ರಯುಕ್ತ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಜೊತೆಗೆ ನರ್ಮದಾ ನದಿಯ ಯೋಜನೆ ಕಾರ್ಯಕ್ರಮಗಳನ್ನು ಪರಿಶೀಲಿಸಲಿದ್ದಾರೆ.

    ನಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಬಿಜೆಪಿ ನಾಯಕರು ಹಾಗೂ ಅಭಿಮಾನಿಗಳು ಸಡಗರ ಸಂಭ್ರಮದಿಂದ ದೇಶದೆಲ್ಲೆಡೆ ಆಚರಿಸುತ್ತಿದ್ದಾರೆ. ನಮೋ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ‘ಸೇವಾ ಸಂಪ್ತಾಹ’ ಕಾರ್ಯಕ್ರಮವನ್ನು ಸೆ. 14 ರಿಂದ 20ರವರೆಗೆ ಆಯೋಜಿಸಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಹಲವು ಸಾಮಾಜಮುಖಿ ಕೆಲಸವನ್ನು ಮಾಡುತ್ತಿದ್ದಾರೆ.