Tag: lucknow

  • ದೇವಸ್ಥಾನದಲ್ಲಿ ಮದ್ಯ ಹಂಚಿದ ಬಿಜೆಪಿ ನಾಯಕ!

    ದೇವಸ್ಥಾನದಲ್ಲಿ ಮದ್ಯ ಹಂಚಿದ ಬಿಜೆಪಿ ನಾಯಕ!

    ಲಕ್ನೋ: ಉತ್ತರ ಪ್ರದೇಶದ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ನರೇಶ್ ಅಗರ್ವಾಲ್ ಹಾಗೂ ಅವರ ಪುತ್ರ ದೇವಸ್ಥಾನದಲ್ಲಿ ಜನರಿಗೆ ಊಟದ ಜೊತೆ ಮದ್ಯ ಹಂಚಿ ವಿವಾಧದ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ.

    ಭಾನುವಾರದಂದು ಬಿಜೆಪಿ ನಾಯಕ ನರೇಶ್ ಅವರ ಪುತ್ರ ನಿತೀನ್, ಪಾಸಿ ಸಮುದಾಯದವರಿಗೆ ಸಮ್ಮೇಳನವನ್ನು ಹಾರ್ಡೊಯ್‍ನ ಶ್ರವಣ ದೇವಿ ದೇವಸ್ಥಾನದಲ್ಲಿ ಆಯೋಜಿಸಿದ್ದರು. ಈ ವೇಳೆ ಸಮ್ಮೇಳನಕ್ಕೆ ಬಂದ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನು ಕೂಡ ಮಾಡಲಾಗಿತ್ತು. ಪ್ರತಿಯೊಬ್ಬ ವ್ಯಕ್ತಿಗೂ ಊಟದ ಜೊತೆ 200 ಎಂಎಲ್ ಮದ್ಯದ ಬಾಟಲಿಯನ್ನು ಪ್ಯಾಕ್ ಮಾಡಿ ವಿತರಿಸಲಾಗಿತ್ತು. ಸಮ್ಮೇಳನಕ್ಕೆ ಬಂದಿದ್ದ ಮಕ್ಕಳಿಗೂ ಕೂಡ ಅದೇ ಊಟದ ಪ್ಯಾಕ್‍ಗಳನ್ನು ನೀಡಲಾಗಿತ್ತು. ಈ ವೇಳೆ ಸ್ಥಳಿಯರೊಬ್ಬರು ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

    ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ವಿರೋಧ ಪಕ್ಷದ ನಾಯಕರು ಹಾಗೂ ಜನರು ನರೇಶ್ ಅಗರ್ವಾಲ್ ಹಾಗೂ ಅವರ ಪುತ್ರನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬರುವ ಲೋಕಸಭೆ ಚುನಾವಣೆಯಲ್ಲಿ ಹಾರ್ಡೊಯ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನರೇಶ್ ಅಗರ್ವಾಲ್ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು, ಜನರ ಬೆಂಬಲ ಪಡೆಯಲು ಬಿಜೆಪಿ ನಾಯಕ ಈ ರೀತಿ ಮದ್ಯವನ್ನು ಹಂಚಿದ್ದಕ್ಕೆ ಭಾರೀ ಆಕ್ರೋಶ ಕೇಳಿ ಬಂದಿದೆ.

    ಈ ವಿಡಿಯೋ ಎಲ್ಲೆಡೆ ಸದ್ದು ಮಾಡುತ್ತಿದ್ದಂತೆ ಕೆಲವು ಬಿಜೆಪಿ ನಾಯಕರು ಕೂಡ ನರೇಶ್ ಅಗರ್ವಾಲ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹಾರ್ಡೊಯ್ ಕ್ರೇತ್ರದಿಂದ ಗೆದ್ದ ಬಿಜೆಪಿ ಎಂಪಿ ಅಂಶುಲ್ ವರ್ಮಾ ಪ್ರತಿಕ್ರಿಯಿಸಿ, ಉನ್ನತ ಸ್ಥಾನದಲ್ಲಿರುವ ನಾಯಕನಾಗಿ ನರೇಶ್ ಅವರು ಈ ರೀತಿ ತಪ್ಪು ಕೆಲಸ ಮಾಡಿದ್ದಾರೆ. ಈ ಕುರಿತು ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚೆ ಮಾಡುತ್ತೇವೆ. ಇತ್ತಿಚಿಗಷ್ಟೆ ನರೇಶ್ ಅವರು ಬಿಜೆಪಿಗೆ ಸೇರಿದ್ದರು. ಈಗ ಈ ರೀತಿ ಕೆಲಸ ಮಾಡಿ ಪಕ್ಷದ ಹೆಸರನ್ನು ಹಾಳು ಮಾಡುತ್ತಿದ್ದಾರೆ. ಓದುವ ಮಕ್ಕಳ ಕೈಗೆ ಪುಸ್ತಕ-ಪೆನ್ನು ನೀಡುವ ಬದಲು ಮದ್ಯವನ್ನು ನೀಡಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ತಂದೆ ಮಗ ಇಬ್ಬರ ವಿರುದ್ಧವು ಪ್ರತಿಭಟನೆ ಮಾಡುತ್ತೇವೆ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದೇನೆ ಎಂದು ಕಿಡಿಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಐಪಿಎಸ್ ಅಧಿಕಾರಿ ಡಿ. ರೂಪಾ ಹೆಸರಿನಲ್ಲಿ ಲಕ್ನೋ ಹೋಟೆಲ್ ನಲ್ಲಿ ರೂಂ ಬುಕ್!

    ಐಪಿಎಸ್ ಅಧಿಕಾರಿ ಡಿ. ರೂಪಾ ಹೆಸರಿನಲ್ಲಿ ಲಕ್ನೋ ಹೋಟೆಲ್ ನಲ್ಲಿ ರೂಂ ಬುಕ್!

    – ರೂಪಾ ಹೆಸರನ್ನು ಹೇಳಿ ಮಹಿಳೆಯಿಂದ ರೂಮ್ ಬುಕ್
    – ಮಂಗಳೂರು ಮೂಲದ ಮಹಿಳೆಯ ಫೋನ್ ನಂಬರ್ ನಿಂದ ಕರೆ

    ಬೆಂಗಳೂರು: ಕೆಲ ದಿನಗಳ ಹಿಂದೆ ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಇನ್‍ಸ್ಟಾಗ್ರಾಮ್ ನಲ್ಲಿ ತಮ್ಮ ಹೆಸರಿನಲ್ಲಿ ನಕಲಿ ಖಾತೆ ತೆಗೆದು ಬಡ ಹೆಣ್ಣು ಮಕ್ಕಳಿಗಾಗಿ ಎಂದು ಚಂದಾ ವಸೂಲಿ ಮಾಡುತ್ತಿದ್ದ ಬಗ್ಗೆ ಸೈಬರ್ ಕ್ರೈಂಗೆ ದೂರು ಕೊಟ್ಟಿದ್ದರು. ಈಗ ನಾಲ್ಕು ದಿನಗಳಲ್ಲಿ 2ನೇ ಸಲ ರೂಪಾ ಅವರು ತನ್ನ ಹೆಸರನ್ನು ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಮಹಿಳೆಯೊಬ್ಬರು ತಮ್ಮ ಹೆಸರು ದುರ್ಬಳಕೆ ಮಾಡಿಕೊಂಡು ಉತ್ತರ ಪ್ರದೇಶದ ಲಕ್ನೋ ಪೊಲೀಸರಿಗೆ ಕರೆ ಮಾಡಿದ್ದಾರೆ. ನಾನು ಗೃಹ ರಕ್ಷಕ ದಳದ ಐಜಿಪಿ ಡಿ.ರೂಪಾ ಮಾತನಾಡುತ್ತಿದ್ದೇನೆ. ಕೆಲಸದ ನಿಮಿತ್ತ ಲಕ್ನೋಗೆ ಬರುತ್ತಿದ್ದೇನೆ. ಡಿಸೆಂಬರ್ 29 ರಿಂದ ಜನವರಿ 3ರವರೆಗೆ ಒಳ್ಳೆಯ ಹೋಟೆಲ್‍ನಲ್ಲಿ ರೂಂ ಬುಕ್ ಮಾಡಿ ಎಂದು ಹೇಳಿದ್ದಾರೆ. ಅವರ ಮಾತನ್ನು ನಂಬಿದ್ದ ಅಧಿಕಾರಿ, ರೂಂ ಕೂಡ ಬುಕ್ ಮಾಡಿದ್ದರು. ಈ ಬಗ್ಗೆ ಪರಿಚಯದ ಅಧಿಕಾರಿ ವಿಕಾಸ್ ಚಂದ್ರ ತ್ರಿಪಾಠಿ ರೂಪಾಗೆ ಕರೆ ಮಾಡಿ ವಿಚಾರಿಸಿದಾಗ ಈ ಕೃತ್ಯ ಬಯಲಾಗಿದೆ. ಇದನ್ನೂ ಓದಿ: ಐಪಿಎಸ್ ಅಧಿಕಾರಿ ಹೆಸರಲ್ಲಿ ಹಣ ವಸೂಲಿ!

    ಯಾರೋ ನಿಮ್ಮ ಹೆಸರು ಹೇಳಿಕೊಂಡು ಈ ನಂಬರ್ ನಿಂದ ಕರೆ ಮಾಡಿದ್ದರು ಎಂದು ತ್ರಿಪಾಠಿ ಅವರು ರೂಪಾ ಅವರಿಗೆ ಕರೆ ಬಂದಿದ್ದ ನಂಬರ್ ನೀಡಿದ್ದಾರೆ. ರೂಪಾ ಅವರು ಆ ನಂಬರ್ ಗೆ ಕರೆ ಮಾಡಿದಾಗ ಮಹಿಳೆ ಸರಿಯಾಗಿ ಮಾತನಾಡದ ಕಾರಣ ಈಗ ಪೊಲೀಸರಿಗೆ ದೂರು ನೀಡಿದ್ದಾರೆ.

    ತಮ್ಮ ಹೆಸರನ್ನು ದುರುಪಯೋಗ ಮಾಡಿಕೊಂಡ ಮಹಿಳೆಯನ್ನು ಪತ್ತೆ ಮಾಡುವಂತೆ ಬನಶಂಕರಿ ಪೊಲೀಸ್ ಠಾಣೆಗೆ ರೂಪಾ ಅವರು ದೂರು ಕೊಟ್ಟಿದ್ದಾರೆ. ಈ ಕುರಿತು ಪೊಲೀಸರು ವಂಚನೆ ಹಾಗೂ ಅಪರಾಧ ಕೃತ್ಯಕ್ಕೆ ಯತ್ನಿಸಿದ ಆರೋಪದಡಿ ಐಪಿಸಿ 417, 420(ವಂಚನೆ) 511 (ಅಪರಾಧ ಕೃತ್ಯ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ.

    ಮೊಬೈಲ್ ಸಂಖ್ಯೆ ಪತ್ತೆ?
    ಪೊಲೀಸರು ಕರೆ ಮಾಡಿದ್ದ ಮೊಬೈಲ್ ನಂಬರ್ ನ ಮೂಲವನ್ನು ಪತ್ತೆ ಹಚ್ಚಿದ್ದಾರೆ. ಮಂಗಳೂರಿನ ಬಲ್ಮಠದಲ್ಲಿರುವ ಚಿರಾಗ್ ಅಪಾರ್ಟ್‍ಮೆಂಟ್ ನಿವಾಸಿಯ ಮಹಿಳೆಯ ನಂಬರ್ ಇದಾಗಿದೆ. ಆದರೆ ತಿಂಗಳ ಹಿಂದೆಯೇ ನನ್ನ ಮೊಬೈಲ್ ಕಳೆದುಹೋಗಿತ್ತು. ಈ ಸಂಬಂಧ ಪಾಂಡೇಶ್ವರ ಠಾಣೆಗೆ ದೂರು ಕೊಟ್ಟಿದ್ದೇನೆ. ಎಫ್‍ಐಆರ್ ಹಾಗೂ ದೂರು ಸ್ವೀಕೃತಿ ಅರ್ಜಿಯನ್ನು ಬಿಎಸ್‍ಎನ್‍ಎಲ್ ಕಚೇರಿಗೆ ಸಲ್ಲಿಸಿ, ಅದೇ ಸಂಖ್ಯೆಯ ಹೊಸ ಸಿಮ್ ಖರೀದಿಸಿದ್ದೇನೆ ಎಂದು ಮಹಿಳೆ ಹೇಳಿದ್ದಾರೆ.

    ಮಹಿಳೆಯ ಹೇಳಿಕೆಯಿಂದ ಪೊಲೀಸರು ಗೊಂದಲಕ್ಕೆ ಸಿಲುಕಿಕೊಂಡಿದ್ದು, ಕರೆ ಹೋದ ದಿನ ಆ ಮೊಬೈಲ್ ಸಂಖ್ಯೆಯನ್ನು ಅದೇ ಮಹಿಳೆ ಬಳಸುತ್ತಿದ್ದರೋ? ಇಲ್ಲವೋ ಗೊತ್ತಿಲ್ಲ. ಆದ್ದರಿಂದ ಪೊಲೀಸರು ಈ ಬಗ್ಗೆ ಎಲ್ಲ ಆಯಾಮಗಳಿಂದಲೂ ತನಿಖೆಗೆ ಇಳಿದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 6 ವರ್ಷ ಪ್ರೀತಿಸಿ ಗಂಡಂದಿರಿಗೆ ವಿಚ್ಛೇದನ ನೀಡಿ ಕೊನೆಗೂ ಒಂದಾದ ಲೆಸ್ಬಿಯನ್‍ಗಳು!

    6 ವರ್ಷ ಪ್ರೀತಿಸಿ ಗಂಡಂದಿರಿಗೆ ವಿಚ್ಛೇದನ ನೀಡಿ ಕೊನೆಗೂ ಒಂದಾದ ಲೆಸ್ಬಿಯನ್‍ಗಳು!

    ಲಕ್ನೋ: 6 ವರ್ಷಗಳಿಂದ ಪ್ರೀತಿಸುತ್ತಿದ್ದ ಇಬ್ಬರು ಲೆಸ್ಬಿಯನ್ ಮಹಿಳೆಯರು ಕೊನೆಗೂ ತಮ್ಮ ಗಂಡಂದಿರಿಗೆ ವಿಚ್ಛೇದನ ನೀಡಿ ಶನಿವಾರ ದೇವಾಲಯವೊಂದರಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.

    ಉತ್ತರಪ್ರದೇಶದ ಹಮೀರ್‌ಪುರದ 24 ಮತ್ತು 26 ವರ್ಷದ ಮಹಿಳೆಯರು ಬುಂದೇಲ್‍ಖಂಡ್ ಪ್ರದೇಶದಲ್ಲಿರುವ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಕಳೆದ ಆರು ವರ್ಷಗಳಿಂದ ಉತ್ತರ ಪ್ರದೇಶದ ಇಬ್ಬರು ಮಹಿಳೆಯರು ಪ್ರೀತಿಸುತ್ತಿದ್ದರು. ಆದರೆ ಮನೆಯವರ ಒತ್ತಾಯಕ್ಕೆ ಇಬ್ಬರು ದೂರವಾಗಿದ್ದರು. ಪ್ರೀತಿಯಿಂದ ದೂರವಿರಲು ಆಗದೇ ಕೊನೆಗೂ ಇಬ್ಬರು ಮದುವೆಯಾಗಿದ್ದಾರೆ. ಆದ್ರೆ ಅವರ ಮದುವೆ ನೋಂದಣಿ ಮಾಡಿಕೊಳ್ಳಲು ಅಧಿಕಾರಿಗಳು ನಿರಾಕರಿಸಿದ್ದಾರೆ.

    ಆರು ವರ್ಷಗಳ ಹಿಂದೆ ಕಾಲೇಜಿನಲ್ಲಿ ಓದುತ್ತಿದ್ದ ವೇಳೆ ಇಬ್ಬರಿಗೂ ಪ್ರೇಮಾಂಕುರವಾಗಿತ್ತು. ಆಗಿನಿಂದಲೂ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ ಪಾಲಕರಿಗೆ ಈ ವಿಷಯ ತಿಳಿದಾಗ ಇಬ್ಬರ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿ ಯುವಕರ ಜೊತೆ ಮದುವೆ ಮಾಡಿಸಿದ್ದರು.

    ಕಾಲೇಜು ಬಿಟ್ಟ ಆರು ತಿಂಗಳಿಗೆ ನಮಗೆ ಬೇರೆಯವರ ಜೊತೆ ವಿವಾಹವಾಗಿತ್ತು. ಆದರೂ ಒಬ್ಬರನ್ನೊಬ್ಬರು ಮರೆತಿರಲಿಲ್ಲ. ಹೀಗಾಗಿ ಇಬ್ಬರೂ ಕೂಡ ಪತಿಗೆ ವಿಚ್ಛೇದನ ನೀಡಿ ಒಂದಾಗಿದ್ದೇವೆ ಎಂದು ನವ ವಿವಾಹಿತ ಸಲಿಂಗಿ ಜೋಡಿ ಹೇಳಿಕೊಂಡಿದೆ. ವಿಚ್ಛೇದನ ನೀಡಿದ ದಾಖಲೆಗಳನ್ನು ಸಲ್ಲಿಸದ ಕಾರಣ ವಿವಾಹ ನೋಂದಣಿ ಆಗಿಲ್ಲ.

    ಸಲಿಂಗಿ ಜೋಡಿ ಪರ ಇರುವ ವಕೀಲ ದಯಾ ಶಂಕರ್ ತಿವಾರಿ ಮಾತನಾಡಿ, ಒಂದೇ ಲಿಂಗದವರ ವಿವಾಹ ನೋಂದಣಿಗೆ ಯಾವುದೇ ಸರ್ಕಾರಿ ಆದೇಶ ಇಲ್ಲವೆಂದು ವಿವಾಹ ನೋಂದಣಿ ಮಾಡಲು ನಿರಾಕರಿಸಿದ್ದಾರೆ. ಇದು ತಪ್ಪು ಈ ಕುರಿತು ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ.

    ಸುಪ್ರೀಂ ಹೇಳಿದ್ದು ಏನು?
    ಐಪಿಸಿ ಸೆಕ್ಷನ್ 377ರ ಪ್ರಕಾರ ಯಾವುದೇ ವ್ಯಕ್ತಿ, ಮಹಿಳೆ ಅಥವಾ ಪ್ರಾಣಿಗಳೊಂದಿಗೆ ನಿಸರ್ಗಕ್ಕೆ ವಿರುದ್ಧವಾಗಿ ಲೈಂಗಿಕ ಕ್ರಿಯೆ ನಡೆಸಿದರೆ, ಅದು ಅಪರಾಧವಾಗಿತ್ತು. ಇಂತಹ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಅಥವಾ 10 ವರ್ಷ ಜೈಲು ಹಾಗೂ ದಂಡ ವಿಧಿಸಬಹುದಾಗಿತ್ತು. 2018ರ ಸೆಪ್ಟೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ಭಾರತದಲ್ಲಿ ಸಲಿಂಗಕಾಮ ಅಪರಾಧ ಎಂದು ಪರಿಗಣಿಸುವ ಐಪಿಸಿ ಸೆಕ್ಷನ್ 377 ಅನ್ನು ರದ್ದುಗೊಳಿಸಿತ್ತು.

    ಸಲಿಂಗಕಾಮ ಅಪರಾಧ ಎಂದು ಪರಿಗಣಿಸುವ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 377ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಕೋರ್ಟ್ ಈ ತೀರ್ಪು ಪ್ರಕಟಿಸಿತ್ತು. ಕಾಲದ ಜೊತೆ ಕಾನೂನು ಕೂಡ ಬದಲಾಗಬೇಕು ಎಂದು ಹೇಳಿ ಐಪಿಸಿ 377 ಅನ್ನು ಅಸಿಂಧುಗೊಳಿಸಿತ್ತು. ಈ ಮೂಲಕ 156 ವರ್ಷದ ಹಿಂದಿನ ಬ್ರಿಟಿಷ್ ಕಾನೂನು ರದ್ದಾಗಿತ್ತು.

    ಕೇಂದ್ರ ಸರ್ಕಾರ ಸೆಕ್ಷನ್ 377ರ ರದ್ದತಿ ವಿಚಾರವನ್ನು ನ್ಯಾಯಾಲಯದ ವಿವೇಚನೆಗೆ ಬಿಡುವುದಾಗಿ ಹೇಳಿತ್ತು. ಆದರೆ ಸಲಿಂಗ ವಿವಾಹ ಮತ್ತು ಕೆಲವು ಹಕ್ಕುಗಳ ವಿಚಾರದಲ್ಲಿ ಗೊಂದಲ ಉಂಟಾಗಬಹುದು ಎಂಬ ಕಳವಳವನ್ನು ವ್ಯಕ್ತಪಡಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಹಿಳೆಯನ್ನು ಅರೆಬೆತ್ತಲೆ ಮಾಡಿ ಗ್ರಾಮದಲ್ಲಿ ಓಡಿಸಿದ ನೀಚರು

    ಮಹಿಳೆಯನ್ನು ಅರೆಬೆತ್ತಲೆ ಮಾಡಿ ಗ್ರಾಮದಲ್ಲಿ ಓಡಿಸಿದ ನೀಚರು

    ಲಕ್ನೋ: ಚುಡಾಯಿಸಿದಾಗ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಹಿಳೆಯ ಮೇಲೆ ನಾಲ್ವರು ನೀಚರು ಹಲ್ಲೆ ಮಾಡಿ ಗ್ರಾಮದಲ್ಲಿ ಅರೆಬೆತ್ತಲೆಗೊಳಿಸಿ ಓಡಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಭದೋಯ್ ನಲ್ಲಿ ನಡೆದಿದೆ.

    ಈ ಘಟನೆ ರಾಪ್ರಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ. ಈ ಘಟನೆ ಸಂಬಂಧ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದು, ಇತರರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಯನ್ನು ದಬಂಗ್ ಲಾಲ್ ಚಂದ್ ಎಂದು ಗುರುತಿಸಲಾಗಿದೆ.

    ಏನಿದು ಪ್ರಕರಣ?
    ಸಂತ್ರಸ್ತೆ ತಮ್ಮ ಗ್ರಾಮದಿಂದ ಹೊರಗಡೆ ಹೋಗಿದ್ದಾಗ ಆರೋಪಿ ಚಂದ್ ತನ್ನ ಮೂವರು ಸ್ನೇಹಿತರ ಜೊತೆ ಸೇರಿಕೊಂಡು ಮಹಿಳೆಯನ್ನು ಚುಡಾಯಿಸಿ ಹಿಂಸಿಸಿದ್ದಾನೆ. ಇದಕ್ಕೆ ಮಹಿಳೆ ಮತ್ತು ಆಕೆಯ ಪತಿಯ ವಿರೋಧ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ಕೋಪಗೊಂಡ ಆರೋಪಿ ತನ್ನ ಮೂವರು ಸ್ನೇಹಿತರೊಂದಿಗೆ ಮಹಿಳೆ ಮನೆಗೆ ಏಕಾಏಕಿ ನುಗ್ಗಿ ಹಲ್ಲೆ ಮಾಡಿದ್ದಾನೆ.

    ಅಷ್ಟೇ ಅಲ್ಲದೇ ಮಹಿಳೆಯ ಸೀರೆ ಬಿಚ್ಚಿ ಅರೆಬೆತ್ತಲೆಗೊಳಿಸಿ ಗ್ರಾಮದಲ್ಲಿ ಓಡುವಂತೆ ಮಾಡಿದ್ದಾನೆ. ಈ ಕೃತ್ಯವನ್ನು ಕೆಲವರು ತಮ್ಮ ಮೊಬೈಲಿನಲ್ಲಿ ಸೆರೆ ಹಿಡಿದಿದ್ದು, ಅದು ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಸಂತ್ರಸ್ತೆ ಮಹಿಳೆ ನೀಚರಿಂದ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಿದ್ದು, ಅವರ ಬಟ್ಟೆ ಮನೆಯ ಮುಂದೆ ಬಿದ್ದಿರುವುದನ್ನು ಕಾಣಬಹುದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಹೋಗಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

    ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿ ಇತರರಿಗಾಗಿ ಶೋಧ ಮಾಡುತ್ತಿದ್ದೇವೆ. ವೈರಲ್ ಆಗಿರುವ ವಿಡಿಯೋಗಳನ್ನು ಆಧಾರಿಸಿ ತನಿಖೆ ಮುಂದುವರಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಮಾನಯಾನದ ವೇಳೆ ಬೆತ್ತಲಾದ ಪ್ರಯಾಣಿಕ..!- ನೋಡಿ ದಂಗಾದ್ರು ಸಹಪ್ರಯಾಣಿಕರು

    ವಿಮಾನಯಾನದ ವೇಳೆ ಬೆತ್ತಲಾದ ಪ್ರಯಾಣಿಕ..!- ನೋಡಿ ದಂಗಾದ್ರು ಸಹಪ್ರಯಾಣಿಕರು

    ಲಕ್ನೋ: ವಿಮಾನದಲ್ಲಿ ದುಬೈನಿಂದ ಲಕ್ನೋಗೆ ತೆರಳುತ್ತಿದ್ದ ಪ್ರಯಾಣಿಕನೊಬ್ಬ ಇದ್ದಕ್ಕಿದ್ದಂತೆ ತನ್ನ ಬಟ್ಟೆ ಬಿಚ್ಚಿ ವಿಮಾನದಲ್ಲಿ ಓಡಾಡಿರುವ ವಿಚಿತ್ರ ಘಟನೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಶನಿವಾರದಂದು ನಡೆದಿದೆ.

    ದುಬೈನಿಂದ ಲಕ್ನೋಗೆ ತೆರಳುತ್ತಿದ್ದ ಐಎಕ್ಸ್-194 ವಿಮಾನದಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕನೊಬ್ಬ ವಿಮಾನಯಾನದ ವೇಳೆ ಇದ್ದಕ್ಕಿದ್ದ ಹಾಗೆ ಬಟ್ಟೆ ಬಿಚ್ಚಿ ಬೆತ್ತಲಾಗಿ ವಿಮಾನದ ಉದ್ದಕ್ಕೂ ಓಡಾಡಿದ್ದಾನೆ. ಆತನ ವಿಚಿತ್ರ ವರ್ತನೆಯನ್ನು ಕಂಡ ಇತರೇ ಪ್ರಯಾಣಿಕರು ಒಂದು ಕ್ಷಣ ದಂಗಾಗಿದ್ದಾರೆ. ತಕ್ಷಣ ವಿಮಾನದಲ್ಲಿದ್ದ ಸಿಬ್ಬಂದಿ ಆತನಿಗೆ ಕಂಬಳಿ ಹೊದಿಸಿದ್ದಾರೆ. ಈ ಒಬ್ಬ ಪ್ರಯಾಣಿಕನಿಂದ ವಿಮಾನದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

    ಒಟ್ಟು 150 ಮಂದಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಲಕ್ನೋದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದಂತೆ ದುರ್ವರ್ತನೆ ತೋರಿದ್ದ ವ್ಯಕ್ತಿಯನ್ನು ಏರ್‌ಲೈನ್‌ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಆದ್ರೆ ಆತ ಯಾಕೆ ಹಾಗೆ ವರ್ತಿಸಿದ ಎಂಬ ಕಾರಣ ತಿಳಿದು ಬಂದಿಲ್ಲ.

    ವಿಮಾನದ ಕ್ಯಾಪ್ಟನ್‍ನ ಮಾಹಿತಿ ಮೇರೆಗೆ ಪ್ರಯಾಣಿಕನನ್ನು ವಶಕ್ಕೆ ಪಡೆದ ಏರ್‌ಲೈನ್‌ ಭದ್ರತಾ ಸಿಬ್ಬಂದಿ ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಕ್ತಾರರು ಮಾಹಿತಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇನ್ಸ್ ಪೆಕ್ಟರ್ ಮಗ್ಳ ಮೇಲೆ ಗ್ಯಾಂಗ್‍ರೇಪ್

    ಇನ್ಸ್ ಪೆಕ್ಟರ್ ಮಗ್ಳ ಮೇಲೆ ಗ್ಯಾಂಗ್‍ರೇಪ್

    – ಸಂತ್ರಸ್ತೆಯನ್ನು ಪೊಲೀಸ್ ಠಾಣೆ ಮುಂದೆ ಎಸೆದ ಎಂಜಿನಿಯರಿಂಗ್ ವಿದ್ಯಾರ್ಥಿಗಳು

    ಲಕ್ನೋ: ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು 11ನೇ ತರಗತಿಯ ವಿದ್ಯಾರ್ಥಿನಿಯನ್ನು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದು, ಬಳಿಕ ಪೊಲೀಸ್ ಠಾಣೆಯ ಮುಂದೆಯೇ ಸಂತ್ರಸ್ತೆಯನ್ನು ಎಸೆದು ಹೋಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ್ ನಲ್ಲಿ ನಡೆದಿದೆ.

    ಆರೋಪಿಗಳು ಕಾನ್ಪುರದ ಬಾಬುಪುರ್ವಾ ಪೊಲೀಸ್ ಠಾಣೆಯ ಬಳಿ ಸಂತ್ರಸ್ತೆಯನ್ನು ಎಸೆದು ಎಸ್ಕೇಪ್ ಆಗಿದ್ದಾರೆ. ಸಂತ್ರಸ್ತೆಯ ತಂದೆ ಪೊಲೀಸ್ ಇನ್ಸ್ ಪೆಕ್ಟರ್ ಆಗಿದ್ದು, ಆರೋಪಿಗಳನ್ನು ಅನುರಾಗ್ ಯಾದವ್ ಮತ್ತು ಆತನ ಸ್ನೇಹಿತರಾದ ಜಾಕಿ, ಶುಭಮ್ ಮತ್ತು ಅಭಿಷೇಕ್ ಎಂದು ಗುರುತಿಸಿದ್ದು, ಅವರ ವಿರುದ್ಧ ದೂರು ದಾಖಲಾಗಿದೆ.

    ನಾಲ್ವರು ಆರೋಪಿಗಳು ಬೇರೆ ಬೇರೆ ಕಾಲೇಜಿನಲ್ಲಿ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ನಮ್ಮ ಕಸ್ಟಡಿಗೆ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ. ಸಂತ್ರಸ್ತೆ ನಾಲ್ವರು ಆರೋಪಿಗಳಲ್ಲಿ ಒಬ್ಬನನ್ನು ಗುರುತಿಸಿದ್ದು, ಆತ ಮಂಗಳವಾರ ಸಂಜೆ ಕಕಡಿಯೋ ಪಟ್ಟಣದಲ್ಲಿರುವ ತನ್ನ ಫ್ಲಾಟ್‍ ಗೆ ಕರೆದುಕೊಂಡು ಹೋಗಿ ಸ್ನೇಹಿತರ ಜೊತೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎಂದು ಎಸ್‍ಪಿ ಸಂಜೀವ್ ಹೇಳಿದ್ದಾರೆ.

    ಆರೋಪಿಗಳು ಅತ್ಯಾಚಾರ ಮಾಡಿದ ಬಳಿಕ ಕಾರಿನಲ್ಲಿ ಕರೆದುಕೊಂಡು ಬಂದು ಬಾಬುಪುರ್ವಾ ಪೊಲೀಸ್ ಠಾಣೆಯ ಮುಂದೆಯೇ ಎಸೆದು ಹೋಗಿದ್ದರು. ನಂತರ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಸಂತ್ರಸ್ತೆಗೆ ಪ್ರಜ್ಞೆ ಬಂದಾಗ ನಡೆದ ಘಟನೆಯ ಬಗ್ಗೆ ವಿವರಿಸಿದ್ದಾಳೆ.

    ಸದ್ಯಕ್ಕೆ ನಾವು ವಿಚಾರಣೆಗಾಗಿ ನಾಲ್ವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ವಿಚಾರಣೆ ಮುಗಿದ ಬಳಿಕ ಅವರನ್ನು ಬಂಧಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿ ಅನಂತ್ ಡಿಯೋ ಅವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸ್ಟಾರ್ಟ್ ಆಯ್ತು ಮದ್ಯವನ್ನು ಬಳಸಿ ಆಲೂಗಡ್ಡೆ ಬೆಳೆಸುವ ಟ್ರೆಂಡ್!

    ಸ್ಟಾರ್ಟ್ ಆಯ್ತು ಮದ್ಯವನ್ನು ಬಳಸಿ ಆಲೂಗಡ್ಡೆ ಬೆಳೆಸುವ ಟ್ರೆಂಡ್!

    ಲಕ್ನೋ: ಉತ್ತರ ಪ್ರದೇಶದ ಬುಲಂದರ್‌ಶಹರ್‌ನ ರೈತರು ಆಲೂಗೆಡ್ಡೆ ಕೃಷಿಯಲ್ಲಿ ಮದ್ಯವನ್ನು ಬಳಸಿ ಸುದ್ದಿಯಾಗಿದ್ದಾರೆ.

    ಹೌದು, ಸಾಮಾನ್ಯವಾಗಿ ರೈತರು ಬೆಳೆಗಳನ್ನು ಬೆಳೆಯಲು ನೀರು, ಗೊಬ್ಬರ ಬಳಸುತ್ತಾರೆ. ಆದರೆ ಬುಲಂದರ್‌ಶಹರ್‌ನ ರೈತರು ಮಾತ್ರ ಹೊಸ ವಿಧಾನವನ್ನು ಅಳವಡಿಸಿಕೊಂಡಿದ್ದಾರೆ. ಈ ಭಾಗದಲ್ಲಿ ರೈತರು ತಮ್ಮ ಬೆಳೆಗಳು ಹಾನಿಯಾಗಬಾರದೆಂದು ಮದ್ಯವನ್ನು ಔಷಧಿ ರೀತಿ ಬಳಸುತ್ತಿದ್ದಾರೆ.

    ಇದನ್ನು ನೋಡಿದ ಕೃಷಿ ತಜ್ಞರು, ಮದ್ಯವನ್ನು ಬೆಳೆಗಳಿಗೆ ಹಾಕುವ ಬದಲು ಸರಿಯಾದ ಔಷಧಿಗಳನ್ನು ಬಳಸಬೇಕು. ಇದರಿಂದ ಬೆಳೆಗೂ ಒಳ್ಳೆಯದು ಮತ್ತು ಅದನ್ನು ಸೇವಿಸುವವರಿಗೂ ಒಳ್ಳೆಯದು ಎಂದು ಹೇಳಿ ಈ ಹೊಸ ವಿಧಾನವನ್ನು ತಿರಸ್ಕರಿಸಿದ್ದಾರೆ. ಹೀಗೆ ಮದ್ಯವನ್ನು ಬಳಸುವುದರ ಹಿಂದೆ ಯಾವುದೇ ವೈಜ್ಞಾನಿಕ ಕಾರಣಗಳಿಲ್ಲ. ಇದು ಹಣವನ್ನು ಹಾಳುಮಾಡುವ ವಿಧಾನ. ಇದರಿಂದ ಏನೂ ಉಪಯೋಗವಿಲ್ಲ ಎಂದು ಅವರು ಅಭಿಪ್ರಾಯ ತಿಳಿಸಿದ್ದಾರೆ.

    ಕೃಷಿ ತಜ್ಞರು ಇದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ತಿಳಿಸಿದರೂ, ನಾವು ಮಾತ್ರ ಮದ್ಯವನ್ನೇ ಬಳಸಿ ಆಲೂಗಡ್ಡೆ ಬೆಳೆಸುತ್ತೇವೆ ಅದರಿಂದ ನಮಗೆ ಹೆಚ್ಚು ಇಳುವರಿ ಸಿಗುತ್ತದೆ ಅಂತ ರೈತರು ಹೇಳುತ್ತಿದ್ದಾರೆ.

    ಅದರಲ್ಲೂ ರೈತರೊಬ್ಬರು ತಮ್ಮ ಜಮೀನಿನಲ್ಲಿ ಆಲೂಗಡ್ಡೆ ಬೆಳೆಗೆ ಮದ್ಯವನ್ನು ಸಿಂಪಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಾವು ಒಮ್ಮೆ ಈ ವಿಧಾನ ಅನುಸರಿಸೋಣ ಎಂದು ಜನರು ಚರ್ಚಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿಯಿಂದ ಮಾತ್ರವೇ ರಾಮಮಂದಿರ ನಿರ್ಮಾಣ ಸಾಧ್ಯ: ಯೋಗಿ ಆದಿತ್ಯನಾಥ್

    ಬಿಜೆಪಿಯಿಂದ ಮಾತ್ರವೇ ರಾಮಮಂದಿರ ನಿರ್ಮಾಣ ಸಾಧ್ಯ: ಯೋಗಿ ಆದಿತ್ಯನಾಥ್

    ಲಕ್ನೋ: ಬಿಜೆಪಿಯಿಂದ ಮಾತ್ರವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಾಧ್ಯವೇ ಹೊರತು, ಬೇರೆ ಯಾವುದೇ ಪಕ್ಷಗಳಿಂದ ನಿರ್ಮಾಣ ಅಸಾಧ್ಯವೆಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

    ಭಾನುವಾರ ಲಕ್ನೋ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ಯುವ ಕುಂಭ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಬಿಜೆಪಿಯಿಂದ ಮಾತ್ರವೇ ಸಾಧ್ಯ. ಇದರಲ್ಲಿ ಯಾವುದೇ ಅನುಮಾನ ಬೇಡ. ಇದನ್ನು ಹೊರತುಪಡಿಸಿ ಇತರೆ ಯಾವುದೇ ಪಕ್ಷಗಳಿಂದ ಮಂದಿರದ ನಿರ್ಮಾಣ ಅಸಾಧ್ಯವೆಂದು ತಿಳಿಸಿದ್ದಾರೆ.

    ಈ ವೇಳೆ ಸಭೆಯಲ್ಲಿ ಪಾಲ್ಗೊಂಡಿದ್ದವರು “ಯಾರು ರಾಮಮಂದಿರ ನಿರ್ಮಿಸುತ್ತಾರೋ, ಅವರಿಗೆ ನಮ್ಮ ಮತ” ಎಂದು ಘೋಷಣೆ ಕೂಗಿದ್ದಾರೆ.

    ಇದೇ ವೇಳೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಮಾಯಣದ ಭಗವಾನ್ ಶ್ರೀರಾಮ ಹಾಗೂ ಮಹಾಭಾರತದ ಶ್ರೀಕೃಷ್ಣನ ಅಸ್ತಿತ್ವವನ್ನು ಪ್ರಶ್ನಿಸಿದವರು, ಇಂದು ಮತಕ್ಕಾಗಿ ಜನಿವಾರವನ್ನು ಪ್ರದರ್ಶಿಸುತ್ತಿದ್ದಾರೆ. ಅಂತಹವರಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಾಧ್ಯವೆಂಬ ಯಾವುದೇ ನಿರೀಕ್ಷೆಗಳೂ ಬೇಡ ಎಂದು ಹೇಳಿದರು.

    ಇತಿಹಾಸಕಾರರು ನಮಗೆ ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ. ಅದನ್ನು ತಿದ್ದಿ ಸರಿಯಾದ ಇತಿಹಾಸ ಬರೆಯುವ ಹೊಣೆಗಾರಿಕೆ ನಮ್ಮ ಮೇಲಿದೆ. ರಾಮಾಯಣದ ಪುಷ್ಪಕ ವಿಮಾನ ಸತ್ಯವಾಗಿದೆ. ಹಾಗೆಯೇ ಮಹರ್ಷಿ ಭಾರಧ್ವಾಜರು ವೈಮಾನಿಕ ಶಾಸ್ತ್ರವನ್ನು ರಚಿಸಿದ್ದು, ಈ ಶಾಸ್ತ್ರದಲ್ಲಿ ಪುಷ್ಪಕ ವಿಮಾನದ ಸಿದ್ಧಾಂತವಿದೆಯೆಂದು ತಿಳಿಸಿದರು.

    ಪ್ರಯಾಗ್ ರಾಜ್ ನ ಮಹಾಕುಂಭಮೇಳವನ್ನು ಯುವ ವಿರೋಧ, ಮಹಿಳಾ ವಿರೋಧಿ ಹಾಗೂ ದಲಿತ ವಿರೋಧಿಯಂದು ಬಿಂಬಿಸಲಾಗುತ್ತಿದೆ. ಈ ಕುಂಭಮೇಳವು ಭಾರತೀಯ ಸಂಸ್ಕೃತಿಯನ್ನು ವಿಶ್ವ ಮಟ್ಟದಲ್ಲಿ ಪ್ರತಿಬಿಂಬಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಮ್ಮ ಶಾಲೆಗೆ ಕಳುಹಿಸುತ್ತಿಲ್ಲ- 3ರ ಪೋರಿಯಿಂದ ಪೊಲೀಸ್ ಠಾಣೆಯಲ್ಲಿ ದೂರು!

    ಅಮ್ಮ ಶಾಲೆಗೆ ಕಳುಹಿಸುತ್ತಿಲ್ಲ- 3ರ ಪೋರಿಯಿಂದ ಪೊಲೀಸ್ ಠಾಣೆಯಲ್ಲಿ ದೂರು!

    ಲಕ್ನೋ: ಉತ್ತರಪ್ರದೇಶದ ಗೋರಖ್‍ಪುರ ಜಿಲ್ಲೆಯ ಮೂರು ವರ್ಷದ ಪೋರಿಯೊಬ್ಬಳು ತನ್ನ ತಾಯಿ ಶಾಲೆಗೆ ಕಳುಹಿಸುತ್ತಿಲ್ಲವೆಂದು ಪೊಲೀಸರ ಬಳಿಯೇ ದೂರನ್ನು ನೀಡಿದ್ದಾಳೆ.

    ಸಂತ ಕಬೀರ್ ನಗರದ ಮಕ್ಸೂದ್ ಖಾನ್ ಹಾಗೂ ಅಸ್ಮಾ ಖಾನ್ ದಂಪತಿಯ ಪುತ್ರಿ ಫಾಲಕ್ ತನ್ನ ತಾಯಿಯ ವಿರುದ್ಧವೇ ದೂರನ್ನು ನೀಡಿದ್ದಾಳೆ. ಫಾಲಕ್ ತನ್ನ ತಾಯಿಯ ವಿರುದ್ಧವೇ ದೂರನ್ನ ನೀಡಿದ್ದನ್ನು ಕಂಡ ಪೊಲೀಸರು ಬಾಲಕಿಯ ತೊದಲು ಮಾತಿಗೆ ಮರುಳಾಗಿದ್ದಾರೆ. ಅಲ್ಲದೇ ಆಕೆಯನ್ನು ಖುದ್ದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರವರು ಅವರ ಮನೆಗೆ ಕರೆದುಕೊಂಡು ಹೋಗಿ, ಬಾಲಕಿಯ ಸಮಸ್ಯೆಯನ್ನು ಬಗೆಹರಿಸಿದ್ದಾರೆ.

    ಬಾಲಕಿಯ ತಂದೆ ಮುಂಬಯಿಯಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ತನ್ನ ತಾಯಿಯೊಂದಿಗೆ ಕಬೀರ್‍ನಗರದಲ್ಲಿ ವಾಸವಾಗಿದ್ದಳು. ತಾಯಿ ಯಾವಾಗಲೂ ತನ್ನ 7 ತಿಂಗಳ ತಮ್ಮನ್ನನ್ನು ನೋಡಿಕೊಳ್ಳುತ್ತಾ, ತನ್ನನ್ನು ಶಾಲೆಗೆ ಕಳುಹಿಸುತ್ತಿಲ್ಲವೆಂದು ಕೋಪಗೊಂಡು ಮನೆಯ ಹತ್ತಿರವಿರುವ ಪೊಲೀಸ್ ಠಾಣೆಗೆ ಒಬ್ಬಳೇ ಹೋಗಿದ್ದಾಳೆ. ಅಲ್ಲದೇ ದಾರಿಯಲ್ಲಿ ಪೊಲೀಸ್ ಠಾಣೆ ಎಲ್ಲಿದೆ ಎಂದು ಕೇಳುತ್ತಾ, ಸರಿಯಾಗಿ ಪಂಚಪೋಖ್ರಿ ಪೊಲೀಸ್ ಠಾಣೆಗೆ ಹೋಗಿ ದೂರುನ್ನು ನೀಡಿದ್ದಾಳೆ.

    ಈ ಕುರಿತು ಮಾತನಾಡಿದ ಸಬ್ ಇನ್ಸ್‌ಪೆಕ್ಟರ್ ಜಿತೇಂದ್ರ ಯಾದವ್, ಮಕ್ಕಳು ಸಾಮಾನ್ಯವಾಗಿ ಪೊಲೀಸರೆಂದರೆ ಭಯಗೊಳ್ಳುತ್ತಾರೆ. ಆದರೆ ನನ್ನಲ್ಲಿಗೆ ಬಂದ ಬಾಲಕಿ, ನೀವು ನಮ್ಮ ಮನೆಗೆ ಬಂದು ಅಮ್ಮನಿಗೆ ಗದರಿಸಬೇಕು. ಆಕೆ ನನ್ನನ್ನು ಶಾಲೆಗೆ ಕಳುಹಿಸುತ್ತಿಲ್ಲ. ಒಣ ಹುಲ್ಲಿನ ಹಾಸಿಗೆ ಮೇಲೆ ಮಲಗಿಸುತ್ತಾಳೆ. ಅಷ್ಟೇ ಅಲ್ಲ ನನ್ನ ಬಗ್ಗೆ ಗಮನವನ್ನೇ ಕೊಡುವುದಿಲ್ಲ. ಸದಾ 7 ತಿಂಗಳ ತಮ್ಮನ ಕಡೆಗೆ ಕಾಳಜಿ ವಹಿಸುತ್ತಾಳೆ ಎಂದು ದೂರಿದ್ದಳು. ನನ್ನ ಜೀವನದ ಅತಿ ಚಿಕ್ಕ ದೂರುದಾರಳನ್ನು ಕಂಡು ನನಗೆ ರೋಮಾಂಚನವಾಯಿತು ಎಂದು ಹೇಳಿದ್ದಾರೆ.

    ಬಾಲಕಿಯೊಂದಿಗೆ ಆಕೆಯ ಮನೆಗೆ ಹೋಗಿ, ಆಕೆಯನ್ನು ಪ್ರತಿದಿನ ಶಾಲೆಗೆ ಕಳುಹಿಸಿ ಮತ್ತು ಮಗನಂತೆ ಆಕೆಯ ಬಗ್ಗೆ ಕೂಡ ಗಮನಹರಿಸುವಂತೆ ತಾಯಿಯ ಬಳಿ ಹೇಳಿದ್ದೇನೆ. ತಾಯಿಯೂ ಸಹ ಮಗಳನ್ನು ಪ್ರತಿದಿನ ಶಾಲೆಗೆ ಕಳುಹಿಸಲು ಒಪ್ಪಿಕೊಂಡಿದ್ದಾರೆ. ಅಲ್ಲದೇ ಪುಟ್ಟ ಮಗುವಿರುವುದರಿಂದ ಫಾಲಕ್ ಕಡೆ ಹೆಚ್ಚಿನ ಗಮನ ನೀಡಲಾಗದೇ ಇರುವುದನ್ನು ಆಕೆಯ ತಾಯಿ ಒಪ್ಪಿಕೊಂಡಿದ್ದಾರೆಂದು ತಿಳಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಫಾಲಕ್, ಪೊಲೀಸ್ ಅಂಕಲ್ ತುಂಬ ಒಳ್ಳೆಯವರು. ನಾನು ಇವತ್ತು ಶಾಲೆಗೆ ಹೋಗಿದ್ದೆ. ನಾನು ಒಂದು ದಿನ ಕೂಡ ಶಾಲೆ ತಪ್ಪಿಸಲು ಬಯಸುವುದಿಲ್ಲ. ನಾನು ಚೆನ್ನಾಗಿ ಓದಿ ಡಾಕ್ಟರ್ ಆಗಬೇಕೆಂದು ಹೇಳಿಕೊಂಡಿದ್ದಾಳೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 85 ರ ವೃದ್ಧೆ ಮೇಲೆ 18 ಯುವಕನಿಂದ ರೇಪ್

    85 ರ ವೃದ್ಧೆ ಮೇಲೆ 18 ಯುವಕನಿಂದ ರೇಪ್

    ಲಕ್ನೋ: 18 ವರ್ಷದ ಯುವಕನೊಬ್ಬ ಸಂಬಂಧದಲ್ಲಿ ಅಜ್ಜಿಯಾಗಬೇಕಾದ 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮುಜಪ್ಫರ್ ನಗರದಲ್ಲಿ ನಡೆದಿದೆ.

    ಬುಧಾನಾ ಪ್ರದೇಶದ ಗ್ರಾಮವೊಂದರಲ್ಲಿ ಗುರುವಾರ ವೃದ್ಧೆ ಮನೆಯಲ್ಲಿ ಇದ್ದಾಗ ಆರೋಪಿ ಈ ರೀತಿ ಹೀನ ಕೃತ್ಯ ಎಸಗಿದ್ದಾನೆ. ಸದ್ಯಕ್ಕೆ ಪೊಲೀಸರು ಆರೋಪಿಯನ್ನು ಗುರುವಾರ ಸಂಜೆ ಬಂಧಿಸಿದ್ದು, ಕೃತ್ಯವೆಸಗಿದಾಗ ಆತ ಕುಡಿದ ಮತ್ತಿನಲ್ಲಿದ್ದ ಎಂದು ತಿಳಿದುಬಂದಿದೆ.

    ಅರೋಪಿ ಯುವಕ ಅತ್ಯಾಚಾರ ಎಸಗಿದ ಬಳಿಕ ಮನೆಯಿಂದ ಪರಾರಿಯಾಗಿದ್ದಾನೆ. ನಾವು ಹೊರಗೆ ಹೋಗಿದ್ದೆವು. ಮನೆಗೆ ವಾಪಸ್ ಬಂದಾಗ ಅಜ್ಜಿ ನಡೆದ ಘಟನೆಯ ಬಗ್ಗೆ ವಿವರಿಸಿದರು. ನಂತರ ನಾನು ಪೊಲೀಸ್ ಠಾಣೆಗೆ ಬಂದು ದೂರು ಕೊಟ್ಟಿದ್ದೇವೆ ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ.

    ವೃದ್ಧೆಯ ಕುಟುಂಬದವರು ದೂರು ನೀಡಿದ ಬಳಿಕ ನಾವು ಆರೋಪಿ ಯುವಕನ ಮೇಲೆ ಎಫ್‍ಐಆರ್ ದಾಖಲಿಸಿಕೊಂಡಿದ್ದು, ಆತನನ್ನು ಬಂಧಿಸಿದ್ದೇನೆ. ಸದ್ಯಕ್ಕೆ ವೃದ್ಧೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

    ಈ ಪ್ರಕರಣವನ್ನು ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ದಾಖಲಿಸಲಾಗಿದೆ. ಆರೋಪಿಯನ್ನು ವಿಚಾರಣೆ ಮಾಡುತ್ತಿದ್ದೇವೆ. ವೈದ್ಯಕೀಯ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv