Tag: lucknow

  • ಪತ್ನಿಯ ನಾಲಗೆ ಕತ್ತರಿಸಿ 10 ದಿನ ಕೂಡಿಟ್ಟು ಚಿತ್ರಹಿಂಸೆ ಕೊಟ್ಟ!

    ಪತ್ನಿಯ ನಾಲಗೆ ಕತ್ತರಿಸಿ 10 ದಿನ ಕೂಡಿಟ್ಟು ಚಿತ್ರಹಿಂಸೆ ಕೊಟ್ಟ!

    ಲಕ್ನೋ: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಬರ್ರಾ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ವರದಕ್ಷಿಣೆಗಾಗಿ ಪತ್ನಿಯ ನಾಲಗೆ ಕತ್ತರಿಸಿ ಆಕೆಯನ್ನು 10 ದಿನಗಳ ಕಾಲ ಮನೆಯಲ್ಲೇ ಕೂಡಿ ಹಾಕಿದ ವಿಲಕ್ಷಣೀಯ ಘಟನೆ ಭಾನುವಾರದಂದು ಬೆಳಕಿಗೆ ಬಂದಿದೆ.

    ಬರ್ರಾ ಪ್ರದೇಶದ ನಿವಾಸಿ ಆಕಾಶ್ ಎಂಬಾತ ಪತ್ನಿಯ ನಾಲಗೆ ಕತ್ತರಿಸಿದ ಪತಿ. ನವೆಂಬರ್ 06 ರಂದು ಆಕಾಶ್ ಹಾಗೂ ಆತನ ಪತ್ನಿ ನಡುವೆ ವರದಕ್ಷಿಣೆ ವಿಚಾರವಾಗಿ ಜಗಳವಾಗಿತ್ತು. ಜಗಳದಿಂದ ಕೋಪಗೊಂಡ ಆಕಾಶ್ ಪತ್ನಿಯ ನಾಲಗೆಯನ್ನು ಕತ್ತರಿಸಿದ್ದಾನೆ. ಬಳಿಕ ಆಕೆಗೆ ಚಿಕಿತ್ಸೆಯನ್ನು ಕೊಡಿಸದೆ ಸುಮಾರು 10 ದಿನಗಳ ಕಾಲ ಮನೆಯಲ್ಲಿಯೇ ಕೂಡಿ ಹಾಕಿ ಚಿತ್ರಹಿಂಸೆ ಕೊಟ್ಟಿದ್ದಾನೆ. ನಂತರ ಪಾಪಿ ಪತಿ ಕೈಯಿಂದ ತಪ್ಪಿಸಿಕೊಂಡು ಪತ್ನಿ ತನ್ನ ತಂದೆಗೆ ನಡೆದ ಘಟನೆಯನ್ನು ತಿಳಿಸಿದ್ದಾಳೆ.

    ಘಟನೆ ತಿಳಿದ ಮೇಲೆ ನನ್ನ ತಂದೆ ಆಕಾಶ್ ಹಾಗೂ ಆತನ ಕುಟುಂಬದವರ ಮೇಲೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಆಕಾಶ್ ತಂದೆ ವೃತ್ತಿಯಲ್ಲಿ ಪೊಲೀಸ್ ಅಧಿಕಾರಿ. ಅದಕ್ಕಾಗಿ ನಾವು ನೀಡಿದ ದೂರನ್ನು ಸ್ಥಳಿಯ ಪೊಲೀಸರು ಕಡೆಗಣಿಸಿದ್ದಾರೆ. ನಮಗೆ ನ್ಯಾಯ ಕೊಡಿಸಿ ಎಂದು ಪತಿಯ ವಿರುದ್ಧ ಪತ್ನಿ ಕಾನ್ಪುರ ಹಿರಿಯ ಪೊಲೀಸ್ ಅಧಿಕಾರಿಗೆ ದೂರು ನೀಡಿದ್ದಾಳೆ.

    ಸದ್ಯ ಆರೋಪಿಯ ಮೇಲೆ ಕಾನ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಅದಷ್ಟು ಬೇಗ ಬಂಧಿಸಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿ ಆದೇಶಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪೋರ್ನ್ ವೆಬ್‍ಸೈಟಿಗೆ ಪ್ರೀತಿಸಿ ಮದ್ವೆಯಾಗಿದ್ದ ಪತ್ನಿಯ ಫೋಟೋ, ನಂಬರ್ ಹಾಕ್ದ!

    ಪೋರ್ನ್ ವೆಬ್‍ಸೈಟಿಗೆ ಪ್ರೀತಿಸಿ ಮದ್ವೆಯಾಗಿದ್ದ ಪತ್ನಿಯ ಫೋಟೋ, ನಂಬರ್ ಹಾಕ್ದ!

    ಲಕ್ನೋ: 38 ವರ್ಷದ ವ್ಯಕ್ತಿಯೊಬ್ಬ ಪತ್ನಿಯ ಅಶ್ಲೀಲ ಫೋಟೋ, ಸಂದೇಶ ಮತ್ತು ಫೋನ್ ನಂಬರನ್ನು ಪೋರ್ನ್ ವೆಬ್ ಸೈಟಿಗೆ ಪೋಸ್ಟ್ ಮಾಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡದಲ್ಲಿ ನಡೆದಿದೆ.

    ಆರೋಪಿ ಪತಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿ ಖಾಸಗಿ ಸಂಸ್ಥೆಯಲ್ಲಿ ಒಬ್ಬ ಸಹಾಯಕ ಸಲಹೆಗಾರನಾಗಿ ಕೆಲಸ ಮಾಡುತ್ತಿದ್ದನು. ಆರೋಪಿ ಪತ್ನಿ ಪೊಲೀಸರಿಗೆ ದೂರ ಕೊಟ್ಟ ಬಳಿಕ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    ಆರೋಪಿ ಮತ್ತು ಸಂತ್ರಸ್ತೆ 2011ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಕಳೆದ 10 ತಿಂಗಳಿನಿಂದ ಇಬ್ಬರು ಪ್ರತ್ಯೇಕವಾಗಿ ವಾಸವಾಗಿದ್ದಾರೆ. ಈ ಕಾರಣಕ್ಕಾಗಿ ಪತಿ ಆಕೆಯ ಫೋಟೋ ಮತ್ತು ನಂಬರ್ ಪೋಸ್ಟ್ ಮಾಡಿರಬಹುದು. ನಾವು ಪತ್ನಿ ಫೋನಿನಲ್ಲಿ ಫೋಟೋಗಳನ್ನು ಸಂಗ್ರಹಸಿ ಬಳಿಕ ಪ್ರಕರಣದ ತನಿಖೆಯನ್ನು ಪ್ರಾಂರಭಿಸಿದೆವು ಎಂದು ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ಪಂತ್ ಹೇಳಿದ್ದಾರೆ.

    ಆರೋಪಿಯ ಮೇಲೆ ನವೆಂಬರ್ 13 ರಂದು ದೂರು ದಾಖಲಾಗಿತ್ತು. ಆದರೆ ಆರೋಪಿ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದನು. ಬಳಿಕ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಆತನ ಇರುವಿಕೆಯ ಬಗ್ಗೆ ಮಾಹಿತಿ ತಿಳಿದು ಬಂಧಿಸಿದ್ದಾರೆ.

    ಬಂಧಿತ ಆರೋಪಿಯ ಎರಡು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದೇವೆ. ಬಳಿಕ ತನಿಖೆಯ ಸಮಯದಲ್ಲಿ ಆರೋಪಿ ಎರಡು ಸಿಮ್ ಗಳನ್ನು ಹೊಂದಿದ್ದು, ಒಂದನ್ನು ಪತ್ನಿಯ ಫೋನ್ ನಂಬರ್, ಫೋಟೋಗಳನ್ನು ಪೋರ್ನ್ ವೆಬ್ ಸೈಟಿಗೆ ಕಳುಹಿಸುತ್ತಿದ್ದನು. ಅಷ್ಟೇ ಅಲ್ಲದೇ ಆ ಸಿಮ್ ಕಾರ್ಡ್ ನಿಂದ ಪತ್ನಿಗೂ ಕೂಡ ಅಸಭ್ಯವಾಗಿ ಮೆಸೇಜ್ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

    ಸದ್ಯಕ್ಕೆ ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 504 ಮತ್ತು 509ರ ಅಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಭಾರತದ ಮೊದಲ ಆನೆ ಆಸ್ಪತ್ರೆ ಉದ್ಘಾಟನೆ – ವಿಶೇಷತೆಗಳೇನು?

    ಭಾರತದ ಮೊದಲ ಆನೆ ಆಸ್ಪತ್ರೆ ಉದ್ಘಾಟನೆ – ವಿಶೇಷತೆಗಳೇನು?

    ಲಕ್ನೋ: ದೇಶದಲ್ಲಿ ಆನೆಗಳಿಗಾಗಿಯೇ ಮೊದಲ ಬಾರಿಗೆ ಪ್ರತ್ಯೇಕ ಆಸ್ಪತ್ರೆಯನ್ನು ಉದ್ಘಾಟನೆ ಮಾಡಲಾಗಿದ್ದು, ಆನೆಗಳ ಚಿಕಿತ್ಸೆಗೆ ಬೇಕಾದ ಆಧುನಿಕ ಸೌಲಭ್ಯಗಳನ್ನು ಆಸ್ಪತ್ರೆ ಹೊಂದಿದೆ.

    ಉತ್ತರಪ್ರದೇಶದ ಆಗ್ರಾದ ಬಳಿಯ ಚುರ್ಮುರಾ ಗ್ರಾಮದಲ್ಲಿ ಆಸ್ಪತ್ರೆ ಉದ್ಘಾಟನೆಯಾಗಿದೆ. ಗಾಯಗೊಂಡ, ಅನಾರೋಗ್ಯ ಪೀಡಿತ ಆನೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಚುರ್ಮುರಾ ಗ್ರಾಮದ ಬಳಿ ಇರುವ ಆನೆ ಸಂರಕ್ಷಣಾ ಕೇಂದ್ರದ ಹತ್ತಿರದಲ್ಲೇ ಈ ವಿಶೇಷ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ.

    ಯಾವ ಸೌಲಭ್ಯ ಸಿಗಲಿದೆ?
    ಆನೆಗಳಿಗಾಗಿಯೇ ಪ್ರತ್ಯೇಕವಾಗಿ ನಿರ್ಮಿಸಿರುವ ದೇಶದ ಮೊದಲ ಆಸ್ಪತ್ರೆ ಎಂಬ ಹೆಗ್ಗಳಿಕೆ ಪಡೆದಿರುವ ಈ ಕೇಂದ್ರದಲ್ಲಿ ವೈರ್ ಲೆಸ್ ಡಿಜಿಟಲ್ ಎಕ್ಸ್ ರೇ, ಲೇಸರ್ ಚಿಕಿತ್ಸೆ, ಡೆಂಟಲ್ ಎಕ್ಸ್ ರೇ, ಥರ್ಮಲ್ ಇಮೇಜಿಂಗ್, ಅಲ್ಟ್ರಾಸೋನೋಗ್ರಫಿ, ಹೈಡ್ರೋಥೆರಪಿ ಸೇವೆಗಳು ಲಭ್ಯವಿದ್ದು, ಪ್ರತೇಕ ವಾರ್ಡ್ ಗಳನ್ನು ನಿರ್ಮಾಣ ಮಾಡಲಾಗಿದೆ. ಅಲ್ಲದೇ ಗಾಯವಾಗಿ ಮೇಲೆಳದ ಸ್ಥಿತಿ ನಿರ್ಮಾಣವಾಗುವ ವೇಳೆ ಮೇಲೆತ್ತುವ ವೈದ್ಯಕೀಯ ಉಪಕರಣಗಳನ್ನು ಕೂಡ ಈ ಆಸ್ಪತ್ರೆ ಒಳಗೊಂಡಿದೆ.

    ಕೇವಲ ಆನೆಗಳ ಚಿಕಿತ್ಸೆ ಮಾತ್ರವಲ್ಲದೇ ಆನೆಗಳ ಚಟುವಟಿಕೆ, ಅವುಗಳ ಚಿಕಿತ್ಸಾ ವಿಧಾನ ಬಗ್ಗೆ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆನೆಗಳ ಆರೋಗ್ಯ ಹಾಗೂ ಸಂರಕ್ಷಣಾ ದೃಷ್ಟಿಯಿಂದ ಸ್ಥಾಪನೆ ಮಾಡಲಾಗಿರುವ ಆಸ್ಪತ್ರೆ ಹೊಸ ಮೈಲುಗಲ್ಲಾಗಿದ್ದು, ಆಸ್ಪತ್ರೆಗಳಲ್ಲಿ ನೀಡಲಾಗಿರುವ ಸೌಲಭ್ಯಗಳು ಆನೆಗಳ ಬಗ್ಗೆ ಉತ್ತಮ ಕಾಳಜಿ ವಹಿಸಲು ಸಹಕಾರಿ ಆಗಲಿದೆ ಎಂದು ಎಸ್‍ಒಎಸ್ ಎನ್‍ಜಿಒ ಸಂಸ್ಥೆ ಸಿಇಒ ಕಾರ್ತಿಕ್ ಸತ್ಯನಾರಾಯಣ್ ಹೇಳಿದ್ದಾರೆ. ಅಂದಹಾಗೇ ಎಸ್‍ಒಎಸ್ ಸಂಸ್ಥೆ 2010 ರಲ್ಲಿ ಅನೆಗಳ ಸಂರಕ್ಷಣಾ ಕೇಂದ್ರವನ್ನು ಆರಂಭಸಿದ್ದು, ಈ ಕೇಂದ್ರದಲ್ಲಿ ವಿಶೇಷ ಚಿಕಿತ್ಸೆ ಅಗತ್ಯಿರುವ 20 ಆನೆಗಳು ಚಿಕಿತ್ಸೆ ಪಡೆಯುತ್ತಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • 12 ದಿನದ ಹಸುಗೂಸನ್ನ ತಾಯಿಯ ಕೈಯಿಂದ ಕಿತ್ತುಕೊಂಡು ಕೊಂದ ಕೋತಿ

    12 ದಿನದ ಹಸುಗೂಸನ್ನ ತಾಯಿಯ ಕೈಯಿಂದ ಕಿತ್ತುಕೊಂಡು ಕೊಂದ ಕೋತಿ

    ಲಕ್ನೋ: 12 ದಿನದ ಹಸುಗೂಸನ್ನ ಕೋತಿಯೊಂದು ತಾಯಿಯಿಂದ ಕಿತ್ತುಕೊಂಡು ಕೊಂದಿರುವ ಘಟನೆ ಆಗ್ರಾದ ಕಚ್ಚಾರಾ ಥೋಕ್ ಕಾಲೋನಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

    ಸೋಮವಾರ ಸಂಜೆ ತಾಯಿ ನೇಹಾ ಮಗುವಿಗೆ ಹಾಲುಣಿಸುತ್ತಿದ್ದರು. ಮನೆಯ ಮುಖ್ಯ ದ್ವಾರದಿಂದ ಕೋತಿ ಮನೆಗೆ ನುಗ್ಗಿದೆ, ಮಗುವಿಗೆ ಹಾಲು ಕುಡಿಸುತ್ತಿದ್ದ ತಾಯಿಯ ಬಳಿ ಹೋಗಿ ಮಗುವಿನ ಕತ್ತನ್ನ ಹಿಡಿದುಕೊಂಡು ಅಲ್ಲಿಂದ ಪರಾರಿಯಾಗಿದೆ ಎಂದು ಮೃತ ಮಗುವಿನ ತಂದೆ ಯೋಗೇಶ್ ಹೇಳಿದ್ದಾರೆ.

    “ತಾಯಿ ನೇಹಾಳಿಗೆ ಏನಾಗುತ್ತಿದೆ ಎಂದು ಅರಿವಾಗುತ್ತಿದ್ದಂತೆ ಕೋತಿ ನಮ್ಮ ಮಗನನ್ನು ಕಿತ್ತುಕೊಂಡು ಹೋಗಿದೆ. ನೆರೆ ಮನೆಯವರೆಲ್ಲರು ಮಂಗವನ್ನ ಬೆನ್ನಟ್ಟಿ ಹೋದಾಗ ನಮ್ಮ ಮಗನನನ್ನು ನೆರೆ ಮನೆಯ ಟೆರೆಸ್ ಮೇಲೆ ಬಿಟ್ಟು ಹೋಗಿದೆ. ಮಗ ಆರುಶ್ ದೇಹದಿಂದ ರಕ್ತ ಹರಿಯುತ್ತಿತ್ತು. ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದರೂ ವೈದ್ಯರು ತೀವ್ರ ಗಾಯವಾದ ಹಿನ್ನಲೆಯಲ್ಲಿ ಮಗು ಮೃತ ಪಟ್ಟಿದೆ ಎಂಬುದಾಗಿ ತಿಳಿಸಿದರು” ಎಂದು ಯೋಗೇಶ್ ಹೇಳಿದ್ದಾರೆ.

    ಸ್ಥಳಿಯರ ಪ್ರಕಾರ, ಈ ಕೋತಿಯೂ ನೇಹಾ ಮತ್ತು ಯೋಗೇಶ್ ಅವರ ಮಗುವನ್ನ ಕಿತ್ತುಕೊಳ್ಳುವ 15 ನಿಮಿಷಗಳ ಹಿಂದೆ 14 ವರ್ಷದ ಬಾಲಕಿಯ ಮೇಲೆಯೂ ಆಕ್ರಮಣ ಮಾಡಿದೆ. ಬಾಲಕಿಯು ಸಣ್ಣ-ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಹೇಳಿದ್ದಾರೆ. ವೃತ್ತಿಯಲ್ಲಿ ಆಟೋ ಡ್ರೈವರ್ ಆಗಿದ್ದ ಯೋಗೇಶ್ ಅವರಿಗೆ 12 ದಿನದ ಆರುಶ್ ಒಬ್ಬನೇ ಮಗನಾಗಿದ್ದು, ಮದುವೆಯಾಗಿ 2 ವರ್ಷದ ನಂತರ ಆರುಶ್ ಜನಿಸಿದ್ದ.

    ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ರಂಕಾಟ ಪೊಲೀಸ್ ಠಾಣೆಯ ಎಸ್‍ಐ ಅಟ್ಬಿರ್ ಸಿಂಗ್, ಮೃತ ಮಗುವಿನ ದೇಹವನ್ನು ಮರಣೋತ್ತರ ಪರೀಕ್ಷೆಗ ಕಳಿಸಿದ್ದು, ಅವರ ಕುಂಟುಬಕ್ಕೆ ಆದಷ್ಟು ಬೇಗ ಮೃತ ದೇಹವನ್ನು ಹಸ್ತಾಂತರ ಮಾಡಲಾಗುವುದು. ಮಗುವಿನ ತಲೆಗೆ ತೀವ್ರ ಗಾಯವಾಗಿರುವುದನ್ನ ನಾವು ನೋಡಿದ್ದೇವೆ ಎಂದು ಹೇಳಿದ್ದಾರೆ.

    ಎರಡು ತಿಂಗಳ ಹಿಂದೆ, ಕೋತಿ ಇದೇ ರೀತಿಯ ಇನ್ನೊಂದು ಮಗುವಿನ ಮೇಲೆ ಆಕ್ರಮಣ ಮಾಡಿತ್ತು. ಘಟನೆಯಲ್ಲಿ ಸಣ್ಣ-ಪುಟ್ಟ ಗಾಯಗಳಿಂದ ಮಗು ಪ್ರಾಣಾಪಾಯದಿಂದ ಪಾರಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಹಳ್ಳಿಯ ಜನರಿಗೆ ತೀವ್ರ ತಲೆ ನೋವಾಗಿರುವ ಈ ಮಂಗಳ ಕಾಟವೂ ಅತಿರೇಕಕ್ಕೇರಿದ್ದು, ರಸ್ತೆಯಲ್ಲಿ ಬೈಕ್ ಓಡಿಸುತ್ತಿದ್ದ ಯುವಕನ ಮೇಲೆ ಮಂಗಗಳ ಗುಂಪೊಂದು ದಾಳಿ ಮಾಡಿದೆ. ಯುವಕ ತನ್ನ ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಹೊಡೆದು ಸಾವನ್ನಪ್ಪಿದ್ದಾನೆ. ಈ ಮಂಗಗಳ ಕಾಟದಿಂದ ಪರಿಹಾರ ನೀಡಿ ಎಂದು ಸ್ಥಳೀಯರು ಪೊಲೀಸರಲ್ಲಿ ಬೇಡಿಕೆ ಇಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸೆಕ್ಸ್ ಮಾಡುವಾಗ ಸಿಕ್ಕಿಬಿದ್ದ ಜೋಡಿ- ದೇವಾಲಯದಲ್ಲಿ ಮದ್ವೆ ಮಾಡಿಸಿದ ಗ್ರಾಮಸ್ಥರು

    ಸೆಕ್ಸ್ ಮಾಡುವಾಗ ಸಿಕ್ಕಿಬಿದ್ದ ಜೋಡಿ- ದೇವಾಲಯದಲ್ಲಿ ಮದ್ವೆ ಮಾಡಿಸಿದ ಗ್ರಾಮಸ್ಥರು

    ಲಕ್ನೋ: ಜೋಡಿಯೊಂದು ಸೆಕ್ಸ್ ಮಾಡುವಾಗ ಸಿಕ್ಕಿಬಿದ್ದ ಕಾರಣ ಗ್ರಾಮಸ್ಥರು ಅವರನ್ನು ಮದುವೆ ಮಾಡಿಸಿದ ಪ್ರಕರಣವೊಂದು ಉತ್ತರ ಪ್ರದೇಶದ ಜೌನ್‍ಪುರ ಜಿಲ್ಲೆಯ ಕೇರಾಕತ್ ಠಾಣೆಯಲ್ಲಿ ನಡೆದಿದೆ.

    ರಾಜು ಯುವತಿ ಜೊತೆ ಸೆಕ್ಸ್ ಮಾಡುವಾಗ ಸಿಕ್ಕಿಬಿದ್ದಿದ್ದಾನೆ. ರಾಜು ಹಾಗೂ ಯುವತಿ ಇಬ್ಬರು ಸಲುಗೆಯಿಂದ ಇದ್ದರು. ಅಲ್ಲದೇ ಫೋನಿನಲ್ಲಿ ಇಬ್ಬರು ಮಾತನಾಡುತ್ತಿದ್ದರು. ಯುವತಿ ಪರಿಚಯವಾದ 5 ದಿನದಲ್ಲೇ ರಾಜು ಯುವತಿಯ ಗ್ರಾಮಕ್ಕೆ ಆಕೆಯನ್ನು ಭೇಟಿಯಾಗಲು ತೆರಳಿದನು. ಭೇಟಿಯಾದ ನಂತರ ಇಬ್ಬರು ಸೆಕ್ಸ್ ನಲ್ಲಿ ತೊಡಗಿದ್ದಾರೆ. ಇವರಿಬ್ಬರು ಸೆಕ್ಸ್ ಮಾಡುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾರೆ.

    ಗ್ರಾಮಸ್ಥರು ರಾಜುನನ್ನು ಹಿಡಿದು ಪೊಲೀಸರ ಕೈಗೆ ಒಪ್ಪಿಸಿದರು. ಅಲ್ಲದೇ ಗ್ರಾಮಸ್ಥರು ಈ ವಿಷಯದ ಬಗ್ಗೆ ಯುವತಿಯ ಮನೆಯವರಿಗೂ ತಿಳಿಸಿದರು. ಈ ಘಟನೆ ನಡೆದ ನಂತರ ಯುವತಿ ಮನೆಯವರು ಮದುವೆಯ ಪ್ರಸ್ತಾಪ ಮಾಡಿದ್ದಾಗ ರಾಜು ಹಾಗೂ ಆತನ ಕುಟುಂಬದವರು ಮದುವೆಗೆ ನಿರಾಕರಿಸಿದ್ದರು. ನಂತರ ಪೊಲೀಸರು ಇಬ್ಬರ ಕುಟುಂಬದವರನ್ನು ಮಧ್ಯೆ ಪೊಲೀಸ್ ಠಾಣೆಯಲ್ಲೇ ರಾಜಿ ಪಂಚಾಯ್ತಿ ಮಾಡಿದರು.

    ಪೊಲೀಸರು ಇಬ್ಬರು ಕುಟುಂಬದವರನ್ನು ಮದುವೆಗೆ ಒಪ್ಪಿಸಿ ಹತ್ತಿರದಲ್ಲಿದ್ದ ಹನುಮಂತ ದೇವಸ್ಥಾನದಲ್ಲಿ ಸಂಬಂಧಿಕರ ಸಮ್ಮುಖದಲ್ಲಿ ಎಲ್ಲ ಶಾಸ್ತ್ರ- ಸಂಪ್ರದಾಯದಂತೆ ಮದುವೆ ಮಾಡಿಸಿದ್ದರು. ಇವರಿಬ್ಬರ ಮದುವೆಗೆ ಆಗಮಿಸಿದ ಸಂಬಂಧಿಕರು ನವಜೋಡಿಗೆ ಆಶೀರ್ವಾದ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮರುನಾಮಕರಣ ಬೆನ್ನಲ್ಲೇ ಅಯೋಧ್ಯಾದಲ್ಲಿ ಮದ್ಯ, ಮಾಂಸಹಾರ ನಿಷೇಧಕ್ಕೆ ಯೋಗಿ ಸರ್ಕಾರ ಚಿಂತನೆ

    ಮರುನಾಮಕರಣ ಬೆನ್ನಲ್ಲೇ ಅಯೋಧ್ಯಾದಲ್ಲಿ ಮದ್ಯ, ಮಾಂಸಹಾರ ನಿಷೇಧಕ್ಕೆ ಯೋಗಿ ಸರ್ಕಾರ ಚಿಂತನೆ

    ಲಕ್ನೋ: ಫೈಜಾಬಾದ್ ನಗರವನ್ನು ಅಯೋಧ್ಯಾ ಎಂದು ಮರುನಾಮಕರಣ ಮಾಡಿದ ಬೆನ್ನಲ್ಲೇ ಜಿಲ್ಲೆಯಲ್ಲಿ ಮದ್ಯ ಹಾಗೂ ಮಾಂಸಹಾರ ಮಾರಾಟವನ್ನು ನಿಷೇಧ ಮಾಡಲು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಚಿಂತನೆ ನಡೆಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಸ್ಥಳೀಯ ಶ್ರೀಗಳಿಂದ ಜಿಲ್ಲೆಯಲ್ಲಿ ಮದ್ಯ ಹಾಗೂ ಮಾಂಸಹಾರ ನಿಷೇಧ ಮಾಡುವಂತೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಸರ್ಕಾರದ ಈ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉತ್ತರ ಪ್ರದೇಶ ಸರ್ಕಾರದ ವಕ್ತಾರ ಶ್ರೀಕಾಂತ್ ಶರ್ಮಾ, ಸ್ಥಳೀಯ ಶ್ರೀಗಳು ಸರ್ಕಾರ ಮುಂದಿಟ್ಟಿರುವ ಬೇಡಿಕೆ ಬಗ್ಗೆ ನಮಗೆ ಅರಿವಿದೆ. ಸರ್ಕಾರ ಕಾನೂನಾತ್ಮಕವಾಗಿ ಮದ್ಯ ಹಾಗೂ ಮಾಂಸಮಾರಾಟ ನಿಷೇಧ ಮಾಡಲಿದೆ ಎಂದು ತಿಳಿಸಿದ್ದಾರೆ.

    ಅಯೋಧ್ಯಾ ನಗರ ಧಾರ್ಮಿಕ ಕೇಂದ್ರವಾಗಿದ್ದು, ಇಂತಹ ನಗರದಲ್ಲಿ ಮದ್ಯ ಹಾಗೂ ಮಾಂಸ ಮಾರಾಟ ಮಾಡಬಾರದು. ಇವುಗಳನ್ನು ನಿಷೇಧ ಮಾಡುವುದು ನಗರದ ಜನತೆಗೆ ಆರೋಗ್ಯಕರ ಜೀವನ ಶೈಲಿ ಮಾಡಲು ಕಾರಣವಾಗಲಿದೆ. ಇದರಿಂದ ನಗರದ ಸ್ವಚ್ಛತೆ ಹೆಚ್ಚಾಗಲಿದ್ದು, ಮಾಲಿನ್ಯ ಕಡಿಮೆ ಮಾಡಿ ಶುದ್ಧತೆಯ ಭಾವನೆ ಮೂಡಿಸುತ್ತದೆ ಎಂದು ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.

    ಸತ್ಯೇಂದ್ರ ದಾಸ್ ಅವರ ಹೇಳಿಕೆಗೆ ಹಲವು ಶ್ರೀಗಳು ತಮ್ಮ ಸಹಮತಿಯನ್ನು ವ್ಯಕ್ತಪಡಿಸಿದ್ದು, ಇಡೀ ಜಿಲ್ಲೆಗೆ ಅನ್ವಯ ಆಗುವಂತೆ ಇದನ್ನು ನಿಷೇಧ ಮಾಡಬೇಕು ಎಂದಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಾಬ್ರಿ ಮಸೀದಿ ಪ್ರಕರಣದ ಅರ್ಜಿದಾರರಲ್ಲಿ ಒಬ್ಬರಾದ ಮೊಹಮ್ಮದ್ ಇಕ್ಭಾಲ್ ಅನ್ಸಾರಿ ಅವರು ಈ ಕುರಿತು ರಾಜ್ಯ ಸರ್ಕಾರವೇ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

    ಆಯೋಧ್ಯಾನಗರದಲ್ಲಿ ಮದ್ಯ ಮತ್ತು ಮಾಂಸಹಾರ ಮಾರಾಟ ನಿಷೇಧ ಕ್ರಮದ ಕುರಿತು ಸಾರ್ವಜನಿಕರ ವಲಯದಿಂದ ಮಿಶ್ರಾ ಪ್ರತಿಕ್ರಿಯೆ ಕೇಳಿಬಂದಿದ್ದು, ಎರಡು ಉದ್ಯಮಗಳಲ್ಲಿ ತೊಡಗಿರುವವರು ಸರ್ಕಾರ ಚಿಂತನೆ ತಪ್ಪು. ಈಗಾಗಲೇ ನಗರದಲ್ಲಿ 200 ರಿಂದ 250 ಮಾಂಸ ಮಾರಾಟ ಮಳಿಗೆಗಳಿದ್ದು, ಕೇವಲ ಹೆಸರು ಬದಲಿಸಿದ ಮಾತ್ರಕ್ಕೆ ಇಂತಹ ನಿರ್ಧಾರ ಮಾಡುವುದು ಉತ್ತಮವಲ್ಲ. ಇದರಿಂದ ನಮ್ಮಂತಹ ಕುಟುಂಬಗಳು ಆದಾಯವನ್ನು ಕಳೆದುಕೊಳ್ಳಲಿದೆ. ಸರ್ಕಾರ ಈ ನಿರ್ಧಾರ ಕೈಗೊಂಡರೆ ನಮಗೇ ಸೂಕ್ತ ಉದ್ಯೋಗ ನೀಡಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಚಿಕಿತ್ಸೆಯ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕೂಡಿಹಾಕಿ ವೈದ್ಯನಿಂದಲೇ ರೇಪ್!

    ಚಿಕಿತ್ಸೆಯ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕೂಡಿಹಾಕಿ ವೈದ್ಯನಿಂದಲೇ ರೇಪ್!

    ಲಕ್ನೋ: ಉತ್ತರ ಪ್ರದೇಶದ ಶಹಜಹಾನ್‍ಪುರದ ವೈದ್ಯನೊಬ್ಬ ಅಪ್ರಾಪ್ತ ಬಾಲಕಿಯನ್ನು ಕೂಡಿಹಾಕಿ ಆಕೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.

    ಆರೋಪಿಯನ್ನು ವಿನೋದ್ ಕುಮಾರ್ ಎಂದು ಗುರುತಿಸಲಾಗಿದ್ದು, ವೃತ್ತಿಯಲ್ಲಿ ಆತ ವೈದ್ಯನಾಗಿದ್ದಾನೆ. ಆರೋಪಿಯು ಬಾಲಕಿಗೆ ಚಿಕಿತ್ಸೆ ಹಾಗೂ ಕೆಲಸ ಕೊಡಿಸುವುದಾಗಿ ನಂಬಿಸಿ ಕರೆದೊಯ್ದು, ಸಣ್ಣ ಕೋಣೆಯೊಂದರಲ್ಲಿ ಕೂಡಿಹಾಕಿದ್ದ. ಅಲ್ಲದೇ ಹಲವು ದಿನಗಳಿಂದ ನಿರಂತರವಾಗಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಈ ಘಟನೆಯ ಕುರಿತು ಬಾಲಕಿ ವೈದ್ಯನಿಂದ ತಪ್ಪಿಸಿಕೊಂಡು ಬಂದ ಮೇಲೆ ಪೋಷಕರಿಗೆ ತಿಳಿಸಿದ್ದಾಳೆ.

    ವಿಷಯ ತಿಳಿದ ಬಳಿಕ ಬಾಲಕಿಯ ಹೆತ್ತವರು ಆರೋಪಿ ಮೇಲೆ ದೂರು ದಾಖಲಿಸಲು ಸ್ಥಳೀಯ ಪೊಲೀಸ್ ಠಾಣೆಗೆ ಹೋದಾಗ, ಪೊಲೀಸರು ದೂರು ಪಡೆಯಲು ನಿರಾಕರಿಸಿ ಆರೋಪವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ.

    ನಂತರ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ತೆರಳಿ, ವಿನೋದ್ ಕುಮಾರ್ ಬಳಿ ನಮ್ಮ ಮಗಳಿಗೆ ಚಿಕಿತ್ಸೆ ಕೊಡಿಸುತ್ತಿದ್ದೆವು. ಚಿಕಿತ್ಸೆ ನೆಪದಲ್ಲಿ ಅವಳನ್ನು ಫಾರುಖಾಬಾದ್‍ಗೆ ಕರೆದೊಯ್ದು ಆಕೆಯ ಮೇಲೆ ವೈದ್ಯ ಅತ್ಯಾಚಾರ ಎಸಗಿದ್ದಾನೆ ಬಾಲಕಿಯ ಪೋಷಕರು ದೂರು ನೀಡಿದ್ದಾರೆ.

    ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು ಬಾಲಕಿಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮೊದಲು ಅಮಿತ್ ಶಾ ಹೆಸರನ್ನ ಬದಲಿಸಿ: ಯೋಗಿ ಆದಿತ್ಯನಾಥ್ ಗೆ ಸವಾಲ್

    ಮೊದಲು ಅಮಿತ್ ಶಾ ಹೆಸರನ್ನ ಬದಲಿಸಿ: ಯೋಗಿ ಆದಿತ್ಯನಾಥ್ ಗೆ ಸವಾಲ್

    ಲಕ್ನೋ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನಗರಗಳ ಹೆಸರನ್ನು ಬದಲಾಯಿಸುತ್ತಿರುವುದಕ್ಕೆ ಖ್ಯಾತ ಇತಿಹಾಸಕಾರ ಹಾಗೂ ಆಲೀಗಢ ಮುಸ್ಲಿಂ ವಿವಿಯ ಗೌರವ ಪ್ರೊಫೆಸರ್ ಇರ್ಫಾನ್ ಹಬೀಬ್ ವ್ಯಂಗ್ಯವಾಡಿದ್ದಾರೆ.

    ಆಗ್ರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ ಶಾ ಹೆಸರಿನಲ್ಲಿರುವ ಶಾ ಎನ್ನುವ ಅಕ್ಷರ ಪರ್ಶಿಯನ್ ಮೂಲದ್ದು, ಅದು ಗುಜರಾತಿಗೆ ಸೇರಿದ್ದಲ್ಲ. ಹೀಗಾಗಿ ಅವರ ಹೆಸರನ್ನು ಮೊದಲು ಬದಲಾಯಿಸುವ ಕುರಿತು ಬಿಜೆಪಿ ಚಿಂತಿಸಲಿ. ಅಲ್ಲದೇ ಗುಜರಾತ್ ಹೆಸರು ಕೂಡ ಪರ್ಶಿಯನ್ ಮೂಲದ್ದು, ಇದನ್ನು ಗುಜರಾತ್ರ ಎಂದು ಕರೆಯಲಾಗುತ್ತಿತ್ತು. ಇದನ್ನೂ ಬಿಜೆಪಿಯವರು ಬದಲಿಸಬೇಕೆಂದು ಲೇವಡಿ ಮಾಡಿದ್ರು.

    ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಮಹಾನಗರಗಳ ಹೆಸರುಗಳನ್ನು ಬದಲಾವಣೆಯ ಮಾಡುವ ಹುಚ್ಚನ್ನು ಬೆಳೆಸಿಕೊಂಡಿದ್ದಾರೆ. ಇದು ಆರ್‍ಎಸ್‍ಎಸ್‍ನ ಹಿಂದುತ್ವ ನೀತಿಗೆ ಅನುಗುಣವಾಗಿದೆ. ಅಲ್ಲದೇ ನೆರೆಯ ಪಾಕಿಸ್ತಾನದಲ್ಲಿ ಇಸ್ಲಾಮಿಕ್‍ಗೆ ಸೇರಿಲ್ಲದವನ್ನೆಲ್ಲಾ ತೆಗೆದು ಹಾಕಿದ್ದರು. ಇಲ್ಲಿಯೂ ಸಹ ಅದೇರೀತಿ ಬಿಜೆಪಿ ಹಾಗೂ ಬಲಪಂಥೀಯ ಬೆಂಬಲಿಗರು ಹಿಂದೂಯೇತರ ಹೆಸರುಗಳನ್ನು, ಅದರಲ್ಲು ಪ್ರಮುಖವಾಗಿ ಇಸ್ಲಾಮಿಕ್ ಮೂಲದ ಹೆಸರುಗಳನ್ನು ಬದಲಿಸುತ್ತಿದ್ದಾರೆ ಎಂದು ಟೀಕಿಸಿದರು.

    ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿರುವ ತಾಜ್ ಮಹಲ್ ಇರುವ ಆಗ್ರಾ ನಗರವನ್ನು ಅಗ್ರವನ ಎಂದು ಮರುನಾಮಕರಣ ಮಾಡುವಂತೆ ಬಿಜೆಪಿ ಶಾಸಕ ಜಗನ್ ಪ್ರಸಾದ್ ಗರ್ಗ್ ಆಗ್ರಹಿಸಿದ್ದರು. ಇದಲ್ಲದೇ ಯೋಗಿ ಆದಿತ್ಯನಾಥ್ ರಾಜ್ಯದ ಮಹಾನಗರಗಳ ಹೆಸರನ್ನು ಬದಲಾವಣೆ ಮಾಡಿದ್ದರು. ಹೀಗಾಗಿ ಹಬೀಬ್ ಮಾತಿನಲ್ಲೇ ತಿರುಗೇಟು ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪೋಲಾರ್ಡ್ ಆನ್‍ಫೀಲ್ಡ್ ವರ್ತನೆಗೆ ಕೋಪಗೊಂಡ ಬೂಮ್ರಾ – ವಿಡಿಯೋ

    ಪೋಲಾರ್ಡ್ ಆನ್‍ಫೀಲ್ಡ್ ವರ್ತನೆಗೆ ಕೋಪಗೊಂಡ ಬೂಮ್ರಾ – ವಿಡಿಯೋ

    ಲಕ್ನೋ: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಪೋಲಾರ್ಡ್ ಉದ್ದೇಶ ಪೂರ್ವಕವಾಗಿಯೇ ಬೂಮ್ರಾಗೆ ಅಡ್ಡಪಡಿಸಿದ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

    ಪಂದ್ಯದ 11ನೇ ಓವರ್ ಬೌಲ್ ಮಾಡಿದ್ದ ಜಸ್‍ಪ್ರೀತ್ ಬೂಮ್ರಾ ಬೌಲಿಂಗ್ ನಲ್ಲಿ ಪೋಲಾರ್ಡ್ ಕ್ಯಾಚ್ ನೀಡಿ ಔಟಾದರು. ಆದರೆ  ಬೂಮ್ರಾ ಕ್ಯಾಚ್ ಪಡೆಯುವ ವೇಳೆ ಪೋಲಾರ್ಡ್ ಉದ್ದೇಶ ಪೂರ್ವಕವಾಗಿ ಬೂಮ್ರಾಗೆ ಅಡ್ಡ ಬಂದಿದ್ದರು. ಓವರಿನ ನಾಲ್ಕನೇ ಎಸೆತ ಎದುರಿಸಿದ ಪೋಲಾರ್ಡ್ ಬ್ಯಾಟ್‍ಗೆ ತಾಗಿದ ಚೆಂಡು ನೇರ ಮೇಲಕ್ಕೆ ಚಿಮ್ಮಿತ್ತು.

    https://twitter.com/NaaginDance/status/1059844978665381888

    ಚೆಂಡು ಕೆಳಗಡೆ ಬೀಳುತ್ತಿರುವುದನ್ನು ನೋಡಿ ತಾನು ಔಟಾಗುವುದು ಖಾತ್ರಿ ಎಂದು ತಿಳಿದ ಪೋಲಾರ್ಡ್, ಕ್ಯಾಚ್ ಪಡೆಯಲು ಆಗಮಿಸುತ್ತಿದ್ದ ಬೂಮ್ರಾಗೆ ಎದುರು ಬಂದು ಅಡ್ಡಿಪಡಿಸಿದ್ದರು. ಆದರೆ ಇದರಿಂದ ವಿಚಲಿತರಾಗದ ಬೂಮ್ರಾ ಕ್ಯಾಚ್ ಪಡೆದು ಬಳಿಕ ಪೋಲಾರ್ಡ್ ವರ್ತನೆಗೆ ಗರಂ ಆದರು. ಈ ವೇಳೆ ಮಧ್ಯ ಪ್ರವೇಶಿಸಿದ ನಾಯಕ ರೋಹಿತ್ ಶಮಾ ಆನ್‍ಫೀಲ್ಡ್ ಅಂಪೈರ್ ಬಳಿಯೂ ತಮ್ಮ ಈ ಕುರಿತು ಚರ್ಚೆ ನಡೆಸಿದ್ದರು.

    ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನಡೆಸಿದ ರೋಹಿತ್ ಶರ್ಮಾ 61 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದರು. ಪಂದ್ಯದಲ್ಲಿ 11 ರನ್ ಗಳಿಸಿದ ರೋಹಿತ್ ಟಿ20 ಕ್ರಿಕೆಟ್‍ನಲ್ಲಿ ಭಾರತದ ಪರ ಹೆಚ್ಚು ರನ್ ಗಳಿಸಿದ ಆಟಗಾರ ಹಾಗೂ ವಿಶ್ವ ಟಿ20 ಕ್ರಿಕೆಟ್‍ನಲ್ಲಿ ಹೆಚ್ಚು ಶತಕ ಸಿಡಿಸಿದ ಸಾಧನೆ ಮಾಡಿದರು. 2ನೇ ಪಂದ್ಯವನ್ನು ಗೆಲ್ಲುವ ಮೂಲಕ 2-0 ಅಂತರದಲ್ಲಿ ಮುನ್ನಡೆ ಪಡೆದು ಇಂಡಿಯಾ ಸರಣಿಯನ್ನು ಗೆದ್ದುಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಪ್ರೇಮಿ ಜೊತೆ ಸಿಕ್ಕಿಬಿದ್ದ ಪತಿಗೆ ಪತ್ನಿಯಿಂದ ಚಪ್ಪಲಿ ಏಟು

    ಪ್ರೇಮಿ ಜೊತೆ ಸಿಕ್ಕಿಬಿದ್ದ ಪತಿಗೆ ಪತ್ನಿಯಿಂದ ಚಪ್ಪಲಿ ಏಟು

    ಲಕ್ನೋ: ಪತಿಯೊಬ್ಬ ತನ್ನ ಪ್ರೇಮಿ ಜೊತೆ ಏಕಾಂತದಲ್ಲಿದ್ದಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಪತ್ನಿಯಿಂದ ಚಪ್ಪಲಿ ಏಟು ತಿಂದಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರ್ ಜಿಲ್ಲೆಯಲ್ಲಿ ನಡೆದಿದೆ.

    ಆರೋಪಿ ಪತಿ ಜಿಲ್ಲೆಯ ಶಾಹಗಂಜ್ ಪಟ್ಟಣದ ಗಡಿಯ ನಿವಾಸಿಯಾಗಿದ್ದು, ಈತ ಗ್ರಾಮದ ಮುಖ್ಯಸ್ಥನಾಗಿ ಮಹಿಳೆ ಜೊತೆ ಸಂಬಂಧ ಇಟ್ಟುಕೊಂಡಿದ್ದನು. ಅನೇಕ ದಿನಗಳಿಂದ ಇಬ್ಬರ ಮಧ್ಯೆ ಸಂಬಂಧವಿತ್ತು. ಅಷ್ಟೇ ಅಲ್ಲದೇ ಪತಿ ತನ್ನ ಪ್ರೇಮಿಗಾಗಿ ಒಂದು ಮನೆಯನ್ನು ಕೂಡ ನೀಡಿದ್ದನು. ಆದರೆ ಪತಿಯ ಇನ್ನೊಂದು ಸಂಬಂಧದ ಬಗ್ಗೆ ಪತ್ನಿಗೆ ಅನುಮಾನ ಬಂದಿದೆ.

    ಶುಕ್ರವಾರ ರಾತ್ರಿ ಪತಿ ಆಕೆಯ ಮನೆಗೆ ಹೋಗಿದ್ದಾನೆ. ಇದನ್ನು ಗಮಿಸಿದ ಪತ್ನಿ ಕುಟುಂಬಸ್ಥರ ಜೊತೆ ಪತಿಯನ್ನು ಹಿಂಬಾಲಿಸಿದ್ದು, ಏಕಾಏಕಿ ಮನೆಗೆ ನುಗ್ಗಿದ್ದಾರೆ. ಈ ವೇಳೆ ಪತಿ ತನ್ನ ಲವ್ವರ್ ಜೊತೆ ಇದ್ದದ್ದನ್ನು ಕಂಡು ಆಕ್ರೋಶಗೊಂಡ ಪತ್ನಿ ತನ್ನ ಚಪ್ಪಲಿ ತೆಗೆದುಕೊಂಡು ಹಿಗ್ಗಮುಗ್ಗಾ ಥಳಿಸಿದ್ದಾರೆ.

    ಕುಟುಂಬಸ್ಥರು ಕೂಡ ಇಬ್ಬರನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಗಾಯಗೊಂಡ ಪತಿ ಅವರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಇತ್ತ ಪತ್ನಿ ಮತ್ತು ಕುಟುಂಬಸ್ಥರ ಕೈಗೆ ಸಿಕ್ಕಿಬಿದ್ದ ಪ್ರಿಯತಮೆಗೆ ಥಳಿಸಿ ಅವಾಚ್ಯ ಪದಗಳಿಂದ ಬೈದು ಸಾಮಾನುಗಳ ಜೊತೆ ಆಕೆಯನ್ನು ಮನೆಯಿಂದ ಹೊರ ಹಾಕಿ ಮನೆಗೆ ಬೀಗ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv