Tag: lucknow

  • ಯುಪಿ ಪೊಲೀಸರ ಗುಂಡೇಟಿಗೆ ಬಲಿಯಾದ ಆಪಲ್ ಉದ್ಯೋಗಿಯ ಪತ್ನಿಗೆ ಸರ್ಕಾರಿ ಉದ್ಯೋಗ!

    ಯುಪಿ ಪೊಲೀಸರ ಗುಂಡೇಟಿಗೆ ಬಲಿಯಾದ ಆಪಲ್ ಉದ್ಯೋಗಿಯ ಪತ್ನಿಗೆ ಸರ್ಕಾರಿ ಉದ್ಯೋಗ!

    ಲಕ್ನೋ: ಪೊಲೀಸ್ ಪೇದೆಯ ಗುಂಡಿನ ದಾಳಿಗೆ ಬಲಿಯಾದ ಆಪಲ್ ಕಂಪನಿಯ ಸೇಲ್ಸ್ ಮಾನೇಜರ್ ವಿವೇಕ್ ತಿವಾರಿ ಪತ್ನಿ ಕಲ್ಪನಾ ಅವರನ್ನು ಲಕ್ನೋ ಮಹಾನಗರ ಪಾಲಿಕೆಯ ವಿಶೇಷ ಅಧಿಕಾರಿಯನ್ನಾಗಿ ಉತ್ತರ ಪ್ರದೇಶ ಸರ್ಕಾರ ನೇಮಕ ಮಾಡಿದೆ.

    ಉತ್ತರ ಪ್ರದೇಶದ ಡಿಸಿಎಂ ದಿನೇಶ್ ಶರ್ಮಾ ಅವರು ಸರ್ಕಾರಿ ಕೆಲಸದ ನೇಮಕ ಪತ್ರವನ್ನು ಕಲ್ಪನಾ ತಿವಾರಿ ಅವರಿಗೆ ನೀಡಿದ್ದಾರೆ.

    ಈ ವಿಚಾರವಾಗಿ ಮಾತನಾಡಿದ ದಿನೇಶ್ ಶರ್ಮಾ, ಈ ದುರಂತ ಘಟನೆಯ ನಂತರ ತಿವಾರಿ ಅವರ ಕುಟುಂಬದೊಂದಿಗೆ ನಾನು ಸತತವಾಗಿ ಸಂಪರ್ಕದಲ್ಲಿ ಇದ್ದೇನೆ. ವಿವೇಕ್ ಅವರು ಶ್ರಮಜೀವಿ. ಈಗಾಗಲೇ ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಿದ್ದು, ಇಬ್ಬರು ಮಕ್ಕಳು ಸೇರಿದಂತೆ ತಿವಾರಿ ಅವರ ತಾಯಿಗೆ ತಲಾ 5 ಲಕ್ಷ ರೂ ಕೊಟ್ಟಿದ್ದೇವೆ. ತಿವಾರಿ ಪತ್ನಿ ಕಲ್ಪನಾ ಅವರನ್ನು ಮಹಾನಗರ ಪಾಲಿಕೆಯ ವಿಶೇಷ ಅಧಿಕಾರಿಯಾಗಿ ನೇಮಕ ಮಾಡಿಕೊಂಡಿದ್ದೇವೆ” ಎಂದು ಹೇಳಿದರು. ಇದನ್ನು ಓದಿ: `ನನ್ನ ಎಲ್ಲ ಬೇಡಿಕೆಯನ್ನು ಆದಿತ್ಯನಾಥ್ ಒಪ್ಪಿಕೊಂಡಿದ್ದಾರೆ’- ಖಾಕಿಗಳ ಗುಂಡೇಟಿಗೆ ಬಲಿಯಾದ ಆಪಲ್ ಸಿಬ್ಬಂದಿಯ ಪತ್ನಿ

    ನೇಮಕಾತಿ ಪತ್ರವನ್ನ ಪಡೆದ ಕಲ್ವನಾ ತಿವಾರಿ ಮಾಧ್ಯಮಗಳೊಂದಿಗೆ ಮಾತನಾಡಿ, “ಡಿಸಿಎಂ ಅವರು ನನಗೆ ನೇಮಕಾತಿ ಪತ್ರವನ್ನ ಕೊಟ್ಟಿದ್ದಾರೆ. ಸರ್ಕಾರ ಮಾಡಿದ ಎಲ್ಲಾ ಭರವಸೆಗಳನ್ನ ಪೂರೈಸುವುದಾಗಿ ಮಾತುಕೊಟ್ಟಿದೆ. ತಮ್ಮ ನ್ಯಾಯಕ್ಕಾಗಿ ಎಲ್ಲಾ ರೀತಿಯ ತನಿಖೆಗಳನ್ನ ಸೂಕ್ತವಾಗಿ ನಡೆಸಲಾಗುತ್ತಿದೆ. ಇದರಲ್ಲಿ ನನಗೆ ಯಾವುದೇ ಅನುಮಾನವಿಲ್ಲ” ಎಂದು ಹೇಳಿದರು.

    ಆಪಲ್ ಕಂಪೆನಿಯ ಸೇಲ್ಸ್ ಮ್ಯಾನೇಜರ್ ವಿವೇಕ್ ತಿವಾರಿ ಮೇಲೆ ಪೊಲೀಸರು ಗುಂಡೇಟಿಗೆ ಬಲಿಯಾಗಿದ್ದರು. ಈ ಶೂಟೌಟ್ ಪ್ರಕರಣ ದೇಶಾದ್ಯಂತ ಸುದ್ದಿ ಮಾಡಿತ್ತು. ಈ ಘಟನೆ ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕಲ್ಪನಾ ಭೇಟಿ ಮಾಡಿದ್ದರು. ಈ ಸಂದರ್ಭಲ್ಲಿ ಯೋಗಿ ಆದಿತ್ಯನಾಥ್ ಮಕ್ಕಳ ಶಿಕ್ಷಣ, ಕುಟುಂಬ ನಿರ್ವಹಣೆಗೆ ಉದ್ಯೋಗ, ವಿವೇಕ್ ತಾಯಿಗೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮತ್ತು ಬರುವ ಪಾನೀಯ ಕುಡಿಸಿ ಅಪ್ರಾಪ್ತೆಯ ಮೇಲೆರಗಿದ ಕಾಮುಕರು – ವಿಡಿಯೋ ಮಾಡಿ ಅಪ್ಲೋಡ್

    ಮತ್ತು ಬರುವ ಪಾನೀಯ ಕುಡಿಸಿ ಅಪ್ರಾಪ್ತೆಯ ಮೇಲೆರಗಿದ ಕಾಮುಕರು – ವಿಡಿಯೋ ಮಾಡಿ ಅಪ್ಲೋಡ್

    ಲಕ್ನೋ: ಅಪ್ರಾಪ್ತ ಹುಡುಗಿಯನ್ನು ಐದು ಮಂದಿ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಗಾಜೀಯಾಬಾದ್ ನಲ್ಲಿ ನಡೆದಿದೆ.

    ಈ ಘಟನೆ ಸೆಪ್ಟೆಂಬರ್ 25 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 16 ವರ್ಷದ ಸಂತ್ರಸ್ತೆ ತನ್ನ ಫ್ರೆಂಡ್ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧೀಕ್ಷಕ ಶ್ಲೋಕ್ ಕುಮಾರ್ ಹೇಳಿದ್ದಾರೆ.

    ಏನಿದು ಪ್ರಕರಣ?
    ಸೆಪ್ಟೆಂಬರ್ 25 ಸಂತ್ರಸ್ತೆ ತನ್ನ ಫ್ರೆಂಡ್ ಹುಟ್ಟುಹಬ್ಬದ ಪಾರ್ಟಿಗೆಂದು ಹೋಗಿದ್ದಾಳೆ. ಅಲ್ಲಿ ಐದು ಮಂದಿ ಕಾಮುಕರು ಸಂತ್ರಸ್ತೆಗೆ ಮತ್ತು ಬರುವ ಔಷಧಿ ಮಿಕ್ಸ್ ಮಾಡಿದ ಪಾನೀಯವನ್ನು ಕುಡಿಸಿದ್ದಾರೆ. ಇದರಿಂದ ಆಕೆ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಆಕೆ ಈ ಸ್ಥಿತಿಯಲ್ಲಿ ಇದ್ದಾಗ ಕಾಮುಕರು ಬಜರಿಯಾ ಮಾರುಕಟ್ಟೆ ರೈಲ್ವೆ ರಸ್ತೆಯಲ್ಲಿರುವ ಹೋಟೆಲಿಗೆ ಕರೆದುಕೊಂಡು ಹೋಗಿದ್ದಾರೆ. ನಂತರ ಅಲ್ಲಿ ಐದು ಮಂದಿಯೂ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ.

    ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ದೃಶ್ಯವನ್ನು ವಿಡಿಯೋ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿದ್ದಾರೆ. ಅತ್ಯಾಚಾರದ ಬಳಿಕ ಈ ವಿಚಾರವನ್ನು ಪೋಷಕರು ಅಥವಾ ಪೊಲೀಸರಿಗೆ ಹೇಳಿದರೆ ಮುಂದೆ ಉಂಟಾಗುವ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆಯನ್ನು ಕೂಡ ಹಾಕಿದ್ದಾರೆ ಎಂದು ಎಸ್‍ಪಿ ಹೇಳಿದ್ದಾರೆ.

    ಸಂತ್ರಸ್ತೆ ನಡೆದ ಘಟನೆಯ ಬಗ್ಗೆ ಪೋಷಕರಿಗೆ ವಿವರಿಸಿದ್ದಾಳೆ. ಬಳಿಕ ಪೋಷಕರು ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರೂಖ್, ಚಂದ್, ಶದಾಬ್, ರಹೀಸ್ ಮತ್ತು ಶಹೀದ್ ವಿರುದ್ಧ ಐಪಿಸಿ ಸೆಕ್ಷನ್ 375 (ಅತ್ಯಾಚಾರ) ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಆರೋಪಿಗಳಲ್ಲಿ ಒಬ್ಬನಾದ ಶಾರೂಖ್ ನನ್ನು ಬಂಧಿಸಲಾಗಿದೆ ಎಂದು ಶ್ಲೋಕ್ ಕುಮಾರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಳಿ ತಪ್ಪಿದ ರೈಲು – 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

    ಹಳಿ ತಪ್ಪಿದ ರೈಲು – 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

    ಲಕ್ನೋ: ಉತ್ತರಪ್ರದೇಶದ ರಾಯ್ ಬರೇಲಿ ಬಳಿ ರೈಲ್ವೇ ನಿಲ್ದಾಣದ ಬಳಿ ಫರಕ್ಕಾ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ 7 ಮಂದಿ ಮೃತಪಟ್ಟಿದ್ದು, ಸುಮಾರು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

    ಇಂದು ಬೆಳಗ್ಗೆ 8 ಬೋಗಿ ಇದ್ದ ಫರಕ್ಕಾ ಎಕ್ಸ್ ಪ್ರೆಸ್ ರೈಲು ರಾಯ್ ಬರೇಲಿ ಹರ್ಚದ್ಪುರ್ ರೈಲ್ವೇ ನಿಲ್ದಾಣದ ಬಳಿ ಬಂದಿತ್ತು. ಆದರೆ ಈ ವೇಳೆ ರೈಲು ಹಳಿ ತಪ್ಪಿ ಅನಾಹುತ ಸಂಭವಿಸಿದೆ. ಈ ರೈಲು ಪಶ್ಚಿಮ ಬಂಗಾಳದ ಮಾಲ್ಡಾ ಪಟ್ಟಣದಿಂದ ದೆಹಲಿಗೆ ತೆರಳುತ್ತಿತ್ತು ಎಂದು ರೈಲ್ವೆ ವ್ಯವಸ್ಥಾಪಕ ಸತೀಶ್ ಕುಮಾರ್ ಹೇಳಿದರು.

    ಘಟನೆಯಲ್ಲಿ 7 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇತ್ತ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಲಕ್ನೋ ಹಾಗೂ ವಾರಣಾಸಿ ಅಧಿಕಾರಿಗಳು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು, ಈ ಘಟನೆಯ ಬಗ್ಗೆ ತನಿಖೆ ಮಾಡುವಂತೆ ಆದೇಶಿಸಿದ್ದಾರೆ. ಈ ರೈಲು ಅಪಘಾತದಿಂದ ಆ ಮಾರ್ಗದ ಎಲ್ಲ ರೈಲುಗಳನ್ನು ನಿರ್ಬಂಧಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

    ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು ಈ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಆರೋಗ್ಯ ಇಲಾಖೆ, ಎನ್‍ಡಿಆರ್‍ಎಫ್ ಪಡೆ ಹಾಗೂ ಪೊಲೀಸ್ ಇಲಾಖೆಯವರಿಗೆ ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಾದ ನೆರವು ನೀಡುವಂತೆ ಸೂಚಿಸಿದ್ದಾರೆ.

    ಯೋಗಿ ಆದಿತ್ಯಾನಾಥ್ ಅವರು ಈ ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ, ಅವರ ಕುಟುಂಬದವರಿಗೆ 2 ಲಕ್ಷ ರೂ. ಪರಿಹಾರ ಧನ ಮತ್ತು ಗಂಭೀರವಾಗಿ ಗಾಯಗೊಂಡವರ ಚಿಕಿತ್ಸೆಗಾಗಿ 50,000 ರೂ. ಗಳನ್ನು ಫೋಷಣೆ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬ್ಲೂ ಫಿಲ್ಮ್ ನೋಡಿ 12ರ ಬಾಲಕನಿಂದ ಹೀನ ಕೃತ್ಯ

    ಬ್ಲೂ ಫಿಲ್ಮ್ ನೋಡಿ 12ರ ಬಾಲಕನಿಂದ ಹೀನ ಕೃತ್ಯ

    ಲಕ್ನೋ: 12 ವರ್ಷದ ಬಾಲಕ ನೆರೆಮನೆಯಲ್ಲಿ ವಾಸಿಸುತ್ತಿದ್ದ 5 ವರ್ಷದ ಬಾಲಕಿಯ ಮೇಲೆ ಆತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಪ್ರದೇಶದಲ್ಲಿ ನಡೆದಿದೆ.

    ಬರೇಲಿ ದೇವರಾನಿಯಾ ಪ್ರದೇಶದ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಾಲಕಿಗೆ ಚಾಕೋಲೆಟ್ ನೀಡುವ ಆಸೆ ತೋರಿ ತನ್ನ ಮನೆಗೆ ಕರೆದೊಯ್ದ ಅತ್ಯಾಚಾರ ಎಸಗಿದ್ದು, ಇಬ್ಬರ ಮನೆಯಲ್ಲಿ ಪೋಷಕರು ಕೆಲಸಕ್ಕೆ ತೆರಳಿದ ವೇಳೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಆರೋಪಿ ಕೃತ್ಯದ ಬಗ್ಗೆ ಬಾಲಕಿ ಶುಕ್ರವಾರ ತನ್ನ ತಾಯಿಗೆ ಹೇಳಿದ್ದು, ಬಳಿಕ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಆರೋಪಿಯ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದು, ಆರೋಪಿ ಬಾಲಕನನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಿದ್ದಾರೆ.

    ಘಟನೆ ಕುರಿತು ಹೆಚ್ಚಿನ ಮಾಹಿತಿ ನೀಡಿರುವ ಎಸ್‍ಪಿ ಸತೀಶ್ ಕುಮಾರ್, ಘಟನೆ ಗುರುವಾರ ಸಂಜೆ ವೇಳೆ ನಡೆದಿದ್ದು, ಆರೋಪಿ ಬಾಲಕ ಚಾಕೋಲೇಟ್ ನೀಡುತ್ತೇನೆ ಎಂದು ಮನೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲದೇ ಬಾಲಕನ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದು, ಸ್ನೇಹಿತರ ಮೊಬೈಲ್‍ನಲ್ಲಿ ಇಂತಹ ದೃಶ್ಯಗಳನ್ನು ನೋಡಿ ಕೃತ್ಯ ಎಸಗಿದ್ದಾಗಿ ತಿಳಿಸಿದ್ದಾನೆ ಎಂದು ಎಸ್‍ಪಿ ವಿವರಿಸಿದ್ದಾರೆ.

    ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ವೈದ್ಯಕೀಯ ಪರೀಕ್ಷೆ ವರದಿ ಲಭ್ಯವಾದ ಬಳಿಕ ಮತ್ತಷ್ಟು ಮಾಹಿತಿ ಲಭಿಸಲಿದೆ. ಸದ್ಯ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದೇವೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಾಯಾವತಿ ಬೆನ್ನಲ್ಲೇ ಕಾಂಗ್ರೆಸ್ ಜೊತೆ ಮೈತ್ರಿಯಿಂದ ಹಿಂದೆ ಸರಿಯುವ ಸೂಚನೆ ನೀಡಿದ ಅಖಿಲೇಶ್ ಯಾದವ್

    ಮಾಯಾವತಿ ಬೆನ್ನಲ್ಲೇ ಕಾಂಗ್ರೆಸ್ ಜೊತೆ ಮೈತ್ರಿಯಿಂದ ಹಿಂದೆ ಸರಿಯುವ ಸೂಚನೆ ನೀಡಿದ ಅಖಿಲೇಶ್ ಯಾದವ್

    ಲಕ್ನೋ: ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ನಿರಾಕರಿಸಿ ಏಕಾಂಗಿ ಸ್ಪರ್ಧಿಸಲಿದ್ದೇವೆ ಎಂದು ಹೇಳಿದ ಬೆನ್ನಲ್ಲೇ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಕೂಡ ಕಾಂಗ್ರೆಸ್ ನೊಂದಿಗೆ ಮೈತ್ರಿ ರಚಿಸುವ ಬಗ್ಗೆ ಹಿಂದೆ ಸರಿದಿದ್ದಾರೆ.

    ಈ ಕುರಿತು ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅಖಿಲೇಶ್ ಯಾದವ್, ಕಾಂಗ್ರೆಸ್ ಪಕ್ಷ ನಮ್ಮನ್ನು ಈಗಾಗಲೇ ಹೆಚ್ಚು ಸಮಯ ಕಾಯುವಂತೆ ಮಾಡಿದೆ. ಅದ್ದರಿಂದ ಮುಂಬರುವ ಮಧ್ಯಪ್ರದೇಶ ಚುನಾವಣೆಗೆ ನಾವು ಬಿಎಸ್‍ಪಿ ಜೊತೆಗೆ ಮಾತುಕತೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

    ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಖಿಲೇಶ್ ಯಾದವ್ ಅವರ ಈ ತೀರ್ಮಾನ ಮಹಾಮೈತ್ರಿ ರಚಿಸಲು ಸಿದ್ಧತೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಭಾರೀ ಹಿನ್ನಡೆ ಉಂಟು ಮಾಡಲಿದೆ ಎಂದು ರಾಜಕೀಯ ವಿಶ್ಲೇಷಕರು ತಿಳಿಸಿದ್ದಾರೆ.

    ಯಾದವ್ ಅವರ ಈ ನಿರ್ಧಾರದ ಹಿಂದೆ ಪ್ರಮುಖ ಕಾರಣವೂ ಇದ್ದು ಮಾಯಾವತಿ ನೇತೃತ್ವದ ಬಿಎಸ್‍ಪಿ ಪಕ್ಷದೊಂದಿಗೆ ಮೈತ್ರಿ ರಾಜಕಾರಣಕ್ಕೆ ಮುಂದಾದರೆ ಜಾತಿ ರಾಜಕೀಯ ಲೆಕ್ಕಚಾರದಲ್ಲಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಲಭಿಸುವ ಸಾಧ್ಯತೆ ಇದೆ. ಇದರೊಂದಿಗೆ ಕಳೆದ 15 ವರ್ಷಗಳಿಂದ ಮುಂದಾಳತ್ವದಲ್ಲಿರುವ ಬಿಜೆಪಿ ವಿರುದ್ಧ ಗೆಲುವು ನಿಶ್ಚಿತವಾಗಲಿದೆ ಎಂಬ ಲೆಕ್ಕಾಚಾರ ನಡೆಸಿದ್ದಾರೆ ಎನ್ನಲಾಗಿದೆ.

    ಕಳೆದ ಕೆಲ ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಮಾಯಾವತಿ ಅವರು, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಯಾವುದೇ ಕಾರಣಕ್ಕೂ ಬಿಎಸ್‍ಪಿ ಪಕ್ಷ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ರಾಜಕೀಯವಾಗಿ ಬಿಎಸ್‍ಪಿ ಪಕ್ಷವನ್ನು ಮುಗಿಸಲು ಪ್ರಯತ್ನ ನಡೆಸಿದೆ. ಪಕ್ಷದ ಬೆಳವಣಿಗೆ ಉದ್ದೇಶದಿಂದ ಮಧ್ಯಪ್ರದೇಶ, ರಾಜಸ್ಥಾನ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 2 ರೂ. ಬಿಸ್ಕೆಟ್ ಕೊಡಿಸದ್ದಕ್ಕೆ 11ರ ಬಾಲಕ ಆತ್ಮಹತ್ಯೆಗೆ ಶರಣು!

    2 ರೂ. ಬಿಸ್ಕೆಟ್ ಕೊಡಿಸದ್ದಕ್ಕೆ 11ರ ಬಾಲಕ ಆತ್ಮಹತ್ಯೆಗೆ ಶರಣು!

    ಲಕ್ನೋ: ಕೇವಲ ಎರಡು ರೂಪಾಯಿಯ ಬಿಸ್ಕೆಟ್ಟನ್ನ ತಾಯಿ ಕೊಡಿಸಲು ನಿರಾಕರಿಸಿದ್ದಕ್ಕೆ ಆಕೆಯ 11 ವರ್ಷದ ಮಗನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೇಶದ ಷಹಜಹಾನ್‍ಪುರ್ ದ ಹರಿಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಜಹಾರ್ಹರ್ ಹರಿಪುರ ಗ್ರಾಮದ ಚಂದ್ರಬಾನ್ (11) ಆತ್ಮಹತ್ಯೆಗೆ ಶರಣಾದ ಬಾಲಕ. ಚಂದ್ರಬಾನ್ ರಾಜೇಂದ್ರ ಕುಮಾರ್ ಹಾಗೂ ಸುಖಿ ದಂಪತಿಯ ಮೂರು ಮಕ್ಕಳ ಪೈಕಿ ಹಿರಿಯ ಮಗನಾಗಿದ್ದ. ಕಳೆದ ಮಂಗಳವಾರ ಶಾಲೆಗೆ ಹೋಗುವ ಮುನ್ನ ತನ್ನ ತಾಯಿಯ ಬಳಿ ಒಂದು ಕಪ್ ಟೀ ಹಾಗೂ ಬಿಸ್ಕೆಟ್ ಕೊಡುವಂತೆ ಕೇಳಿಕೊಂಡಿದ್ದನು. ಆದರೆ ತಾಯಿ ಟೀ ಮಾತ್ರ ಕೊಟ್ಟು, ಮನೆಯಲ್ಲಿ ಬಿಸ್ಕೆಟ್ ಇಲ್ಲ ಎಂದು ಹೇಳಿದ್ದರು. ನನಗೆ ಬಿಸ್ಕೆಟ್ ಬೇಕೇ ಬೇಕು. ಬಿಸ್ಕೆಟ್ ತರಲು 2 ರೂಪಾಯಿ ಕೊಡುವಂತೆ ತಾಯಿ ಬಳಿ ಬಾಲಕ ಹಠ ಹಿಡಿದಿದ್ದ. ಆದರೆ ತಾಯಿ ಮಾತ್ರ ಅವನ ಮಾತನ್ನು ನಿರಾಕರಿಸಿದ್ದರು.

    ತಾಯಿಯ ಮಾತಿನಿಂದ ಕುಪಿತಗೊಂಡಿದ್ದ ಚಂದ್ರಬಾನ್ ತನ್ನ ತಾಯಿ ಹಾಗೂ ಸಹೋದರಿ ಜೊತೆ ಜಗಳವಾಡಿದ್ದನು. ಅಲ್ಲದೇ ತಾಯಿಯ ವೇಲ್ ಅನ್ನು ತೆಗೆದುಕೊಂಡು ಮನೆಯಿಂದ ಹೊರಟು ಹೋಗಿದ್ದ. ಮನೆಯಿಂದ ಹೋದ ಬಳಿಕ ಎಷ್ಟೇ ಸಮಯವಾದರೂ ಬಾಲಕ ಮನೆಗೆ ಹಿಂದಿರುಗಿರಲಿಲ್ಲ. ಆದರೆ ಮಧ್ಯಾಹ್ನದ ಹೊತ್ತಿಗೆ ಜಮೀನಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರು ಹಾಗೂ ಬಾಲಕನ ಪೋಷಕರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಮದ್ನಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ನಂತರ ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

    ಈ ಬಗ್ಗೆ ಮದ್ನಾಪುರ್ ಪೊಲೀಸ್ ಠಾಣೆಯ ಅಧಿಕಾರಿ ಇಶ್ತಿಯಾಕ್ ಅಹಮದ್ ಮಾತನಾಡಿ, ಕೇವಲ ತನ್ನ ತಾಯಿ ಬಿಸ್ಕೆಟ್ ತಿನ್ನಲು 2 ರೂಪಾಯಿ ಹಣವನ್ನು ನೀಡದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಸಂಗತಿಯನ್ನು ಪೋಷಕರು ಹೇಳಿದ್ದರು. ಆದರೆ ನಾವು ಅದನ್ನು ನಂಬುವ ಸ್ಥಿತಿಯಲ್ಲಿರಲಿಲ್ಲ. ಆದರೆ ಬಾಲಕನ ಮರಣೋತ್ತರ ಪರೀಕ್ಷೆಯಲ್ಲಿ ಬಾಲಕ ಸ್ವತಃ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನುವ ವರದಿ ಬಂದಿದೆ ಎಂದು ಹೇಳಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಬಾಲಕನ ತಂದೆ, ನನ್ನ ಮಗ ತುಂಬಾ ಮುಂಗೋಪಿಯ ಸ್ವಭಾವ ಹೊಂದಿದ್ದ. ಆದರೆ ಅವನು ಈ ರೀತಿ ದುಡುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ ಎಂದು ನಿರೀಕ್ಷಿಸಿರಲಿಲ್ಲ. ಮಗನ ಸಾವಿನಿಂದ ನಾವು ಆಘಾತಕ್ಕೊಳಗಾಗಿದ್ದೇವೆ ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್ಸಿನ ಜೊತೆ ಚುನಾವಣಾ ಮೈತ್ರಿ ಇಲ್ಲ: ಮಾಯಾವತಿ

    ಕಾಂಗ್ರೆಸ್ಸಿನ ಜೊತೆ ಚುನಾವಣಾ ಮೈತ್ರಿ ಇಲ್ಲ: ಮಾಯಾವತಿ

    ಲಕ್ನೋ: ಮುಂಬರುವ ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ನಡೆಸದೇ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ಬಹುಜನ ಸಮಾಜ ಪಕ್ಷ(ಬಿಎಸ್‍ಪಿ) ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಸ್ಥಾನ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ಬಿಎಸ್‍ಪಿ ಏಕಾಂಗಿಯಾಗಿ ಸ್ಪರ್ಧಿಸುತ್ತದೆ. ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜೊತೆ ಮಾತ್ರ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ.

    ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದ ಅತ್ಯಂತ ಹಳೆಯ ಪಕ್ಷವಾಗಿರುವ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯುವ ಬದಲು, ಕಾಂಗ್ರೆಸ್ ಬಿಎಸ್‍ಪಿಯನ್ನೇ ಮುಗಿಸುವ ಯತ್ನ ಮಾಡುತ್ತಿದೆ. ಹೀಗಾಗಿ ನಾವು ಈ ಮೊದಲು ಕರ್ನಾಟಕ ಮತ್ತು ಛತ್ತೀಸ್‍ಗಢ್‍ದಲ್ಲಿನ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡ ರೀತಿಯಲ್ಲೇ, ಮಧ್ಯಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

    ಮಾಯಾವತಿಯವರ ಹೇಳಿಕೆಯಿಂದಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿ ಕೂಟಕ್ಕೆ ಭಾರೀ ಹಿನ್ನಡೆಯಾಗಲಿದೆ. ಕಾಂಗ್ರೆಸ್ ಬಿಎಸ್‍ಪಿ ನಾಯಕಿಯ ವಾದವನ್ನು ಹೇಗೆ ಗಣನೆಗೆ ತೆಗೆದುಕೊಂಡು ಚುನಾವಣೆ ಎದುರಿಸುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಗನ ಸಾವಿಗೆ ನ್ಯಾಯ ಸಿಗಲು ಮುಸ್ಲಿಂ ಕುಟುಂಬ ಹಿಂದೂ ಧರ್ಮಕ್ಕೆ ಮತಾಂತರ!

    ಮಗನ ಸಾವಿಗೆ ನ್ಯಾಯ ಸಿಗಲು ಮುಸ್ಲಿಂ ಕುಟುಂಬ ಹಿಂದೂ ಧರ್ಮಕ್ಕೆ ಮತಾಂತರ!

    ಲಕ್ನೋ: ಕುಟುಂಬದ ಸದಸ್ಯನ ಅಸಹಜ ಸಾವನ್ನು ಆತ್ಮಹತ್ಯೆ ಎಂದು ಪೊಲೀಸರು ಬಿಂಬಿಸಿದ್ದಕ್ಕೆ, ಮನನೊಂದ ಮುಸ್ಲಿಂ ಕುಟುಂಬವೊಂದು ಶಾಸ್ತ್ರೋಕ್ತವಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಘಟನೆ ಉತ್ತರ ಪ್ರದೇಶದ ಭಾಗ್‍ಪತ್ ನಲ್ಲಿ ನಡೆದಿದೆ.

    ಭಾಗ್‍ಪತ್ ಜಿಲ್ಲೆಯ ಭದ್ರಾರ್ಕಾ ಗ್ರಾಮದ ನಿವಾಸಿಯಾಗಿರುವ ಅಖ್ತರ್ ಹಾಗೂ ಅವರ 12 ಮಂದಿ ಕುಟುಂಬ ಸದಸ್ಯರು ಕೇಸರಿ ಪಟ್ಟಿಗಳನ್ನು ಹಣೆಗೆ ಕಟ್ಟಿಕೊಂಡು, ಜೈಶ್ರೀರಾಮ್ ಎಂಬ ಘೋಷಣೆಗಳನ್ನು ಕೂಗುತ್ತಾ ಶಾಸ್ತ್ರೋಕ್ತವಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಇವರನ್ನು ಸ್ಥಳೀಯ ಹಿಂದೂ ಪರ ಸಂಘಟನೆಯ ಸದಸ್ಯರು ತಿಲಕವಿಡುವ ಮೂಲಕ ಬರಮಾಡಿಕೊಂಡಿದ್ದಲ್ಲದೇ, ಅವರಿಂದ ಹೋಮ-ಹವನ ಹಾಗೂ ಹನುಮಾನ್ ಚಾಲೀಸಾವನ್ನು ಪಠಣಮಾಡಿಸಿದ್ದಾರೆ.

    ಹಿಂದೂ ಧರ್ಮಕ್ಕೆ ಮತಾಂತರಗೊಂಡ ಬಳಿಕ ತಮ್ಮ ಹೆಸರನ್ನು ಧರ್ಮಸಿಂಗ್ ಎಂದು ಅಖ್ತರ್ ನಾಮಕರಣ ಮಾಡಿಕೊಂಡಿದ್ದಾರೆ. ಅಲ್ಲದೇ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೂ ಸಹ ತಮ್ಮ ಧರ್ಮವನ್ನು ಬದಲಾಯಿಸುವಂತೆ ಅರ್ಜಿ ಸಲ್ಲಿಸಿದ್ದಾರೆ.

    ಮತಾಂತರಗೊಳ್ಳಲು ಕಾರಣವೇನು?
    ನನ್ನ ಮಗನಾಗಿದ್ದ 28 ವರ್ಷದ ಗುಲ್‍ಹಸನ್‍ರನ್ನು 2018 ರ ಜುಲೈ 28 ರಂದು ನವಡಾ ಗ್ರಾಮದಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಕೊಲೆ ಮಾಡಿದ್ದನ್ನು ಮರೆಮಾಚಿ ಆತ್ಮಹತ್ಯೆ ಎಂದು ಬಿಂಬಿಸಲು ಆತನ ಶವವನ್ನು ನೇಣಿಗೆ ಹಾಕಿದ್ದರು. ಶಂಕೆ ಹಿನ್ನೆಲೆಯಲ್ಲಿ ನಾನು ನಮ್ಮ ಸಮುದಾಯದ ನಾಲ್ವರ ವಿರುದ್ಧ ದೂರು ನೀಡಿದ್ದೆ. ಅಷ್ಟೇ ಅಲ್ಲದೇ ಪೊಲೀಸರು ಹಾಗೂ ನಮ್ಮ ಸಮುದಾಯದ ಮುಖ್ಯಸ್ಥರಿಗೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ ಮಾಡಿಕೊಂಡಿದ್ದೆ.

    ಪೊಲೀಸರು ಹಾಗೂ ನಮ್ಮ ಸಮುದಾಯದವರು ಸಹ ಗುಲ್‍ಹಸನ್ ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಿದ್ದರು. ಇದಲ್ಲದೇ ಮುಸ್ಲಿಂ ಸಮುದಾಯದ ಯಾವೊಬ್ಬ ಮುಖಂಡರು ಸಹ ನನ್ನ ಮಾತನ್ನು ಕೇಳಿಸಿಕೊಳ್ಳುವ ಸ್ಥಿತಿಯಲ್ಲಿರಲಿಲ್ಲ. ಇದರಿಂದ ಮನನೊಂದು ಮಗನ ಸಾವಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದೇನೆ ಎಂದು ಅಖ್ತರ್ ಹೇಳಿಕೊಂಡಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಭಾಗ್‍ಪತ್ ಜಿಲ್ಲಾ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ, ಕುಟುಂಬಸ್ಥರು ಪೊಲೀಸರ ಮೇಲೆ ಆರೋಪಿಸುತ್ತಿರುವ ಆಪಾದನೆ ನಂಬಿಕಾರ್ಹವಾಗಿದ್ದು, ಅಲ್ಲದೇ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಐವರ ವಿರುದ್ಧ ದೂರು ದಾಖಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯ ವರದಿಯನ್ನು ಬಿಟ್ಟು, ಐಪಿಸಿ ಸೆಕ್ಷನ್ 302 (ಕೊಲೆ) ಪ್ರಕರಣದ ಅಡಿ ದೂರು ದಾಖಲಿಸಿಕೊಳ್ಳಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಪ್ರಕರಣದ ಸ್ಪಷ್ಟತೆ ನಿಖರವಾಗಿ ತಿಳಿಯುತ್ತದೆ ಎಂದು ಹೇಳಿದ್ದಾರೆ.

    ಅಲ್ಲದೇ ಈ ಬಗ್ಗೆ ಮಾತನಾಡಿದ ಭಾಗ್‍ಪತ್ ಮ್ಯಾಜಿಸ್ಟ್ರೇಟ್ ರಿಶಿರೇಂದ್ರ ಕುಮಾರ್ ಮಾತನಾಡಿ, ಅಖ್ತರ್ ಕುಟುಂಬ ಕೇವಲ ಪೊಲೀಸರ ಮೇಲೆ ಒತ್ತಡ ಹೇರಿ, ಪ್ರಕರಣವನ್ನು ವಿಚಾರಣೆ ಮಾಡಲು ಈ ರೀತಿ ಮುಂದಾಗಿದ್ದಾರೆ. ಸೋಮವಾರ 20 ಸದಸ್ಯರ ಕುಟಂಬದಲ್ಲಿನ ಐವರು ಮಾತ್ರ ಧರ್ಮ ಬದಲಾಯಿಸುವಂತೆ ಭಾರತ್ ತೆಹಲ್ಸಿಗೆ ಬಂದಿದ್ದರು ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • `ನನ್ನ ಎಲ್ಲ ಬೇಡಿಕೆಯನ್ನು ಆದಿತ್ಯನಾಥ್ ಒಪ್ಪಿಕೊಂಡಿದ್ದಾರೆ’- ಖಾಕಿಗಳ ಗುಂಡೇಟಿಗೆ ಬಲಿಯಾದ ಆಪಲ್ ಸಿಬ್ಬಂದಿಯ ಪತ್ನಿ

    `ನನ್ನ ಎಲ್ಲ ಬೇಡಿಕೆಯನ್ನು ಆದಿತ್ಯನಾಥ್ ಒಪ್ಪಿಕೊಂಡಿದ್ದಾರೆ’- ಖಾಕಿಗಳ ಗುಂಡೇಟಿಗೆ ಬಲಿಯಾದ ಆಪಲ್ ಸಿಬ್ಬಂದಿಯ ಪತ್ನಿ

    ಲಕ್ನೋ: ಪೊಲೀಸರ ಗುಂಡಿಗೆ ಬಲಿಯಾಗಿದ್ದ ಆ್ಯಪಲ್ ಕಂಪನಿ ಸೇಲ್ಸ್ ಮಾನೇಜರ್ ವಿವೇಕ್ ತಿವಾರಿ ಕುಟುಂಬಕ್ಕೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು 35 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸಕ್ಕೆ ಇಂದು ವಿವೇಕ್ ತಿವಾರಿ ಪತ್ನಿ ಕಲ್ಪನಾ ತಿವಾರಿ ಭೇಟಿ ನೀಡಿದ್ದರು. ಅವರ ಜೊತೆಗೆ 25 ನಿಮಿಷಗಳ ಕಾಲ ಮಾತುಕತೆ ನಡೆಸಿ, ಅಳಲು ಕೇಳಿದ ಸಿಎಂ ಆದಿತ್ಯನಾಥ್ ಅವರು, ಮಕ್ಕಳ ಶಿಕ್ಷಣ, ಕುಟುಂಬ ನಿರ್ವಹಣೆಗೆ ಉದ್ಯೋಗ, ವಿವೇಕ್ ತಾಯಿಗೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

    ಎಷ್ಟು ಪರಿಹಾರ?
    ಮೃತ ವಿವೇಕ್ ತಿವಾರಿ ಕುಟುಂಬಕ್ಕೆ ಒಟ್ಟು 35 ಲಕ್ಷ ರೂ. ಪರಿಹಾರ ನೀಡಲು ಸಿಎಂ ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಅದರಲ್ಲಿ 25 ಲಕ್ಷ ರೂ. ಕುಟುಂಬ ನಿರ್ವಹಣೆಗೆ, 5 ಲಕ್ಷ ರೂ. ಮಕ್ಕಳ ಶಿಕ್ಷಣಕ್ಕೆ ಹಾಗೂ 5 ಲಕ್ಷ ರೂ. ವಯಸ್ಸಾಗಿರುವ ವಿವೇಕ್ ತಾಯಿಗೆ ನೀಡಲು ಮುಂದಾಗಿದ್ದಾರೆ.

    ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಕಲ್ಪನಾ ತಿವಾರಿ ಅವರು, ಯೋಗಿ ಆದಿತ್ಯವಾಥ್ ಅವರು ನನ್ನ ಸಮಸ್ಯೆಯನ್ನು ಆಲಿಸಿದರು. ಮುಂದಿನ ಜೀವನ ನಡೆಸಲು ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಅವರ ಮೇಲೆ ನನಗೆ ವಿಶ್ವಾಸವಿದೆ. ನನ್ನ ಎಲ್ಲ ಬೇಡಿಕೆಯನ್ನು ಈಡೇರಿಸುವುದಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.

    ಮಾಯಾವತಿ ಕಿಡಿ: ಉತ್ತರ ಪ್ರದೇಶದಲ್ಲಿ ಕಾನೂನು ವ್ಯವಸ್ಥೆ ಹಾಳಾಗಿದೆ. ರಾಜ್ಯದ ಜನತೆ ಆತಂಕದ ವಾತಾವರಣದಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಆರೋಪಿಸಿದ್ದಾರೆ. ವಿವೇಕ್ ತಿವಾರಿ ಕೊಲೆಯ ಆರೋಪಿ ಪೊಲೀಸ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ನಂತರ ಮೃತರ ಕುಟುಂಬ ಭೇಟಿ ಆಗಬೇಕಿತ್ತು ಎಂದು ವಾಗ್ದಾಳಿ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪೊಲೀಸರ ಗುಂಡಿಗೆ ಆ್ಯಪಲ್ ಸೇಲ್ಸ್ ಮ್ಯಾನೇಜರ್ ಬಲಿ: ತನಿಖೆಗೆ ಆದೇಶಿಸಿದ ಯುಪಿ ಸರ್ಕಾರ!

    ಪೊಲೀಸರ ಗುಂಡಿಗೆ ಆ್ಯಪಲ್ ಸೇಲ್ಸ್ ಮ್ಯಾನೇಜರ್ ಬಲಿ: ತನಿಖೆಗೆ ಆದೇಶಿಸಿದ ಯುಪಿ ಸರ್ಕಾರ!

    ಲಕ್ನೋ: ಆ್ಯಪಲ್ ಕಂಪೆನಿಯ ಸೇಲ್ಸ್ ಮ್ಯಾನೇಜರ್ ಒಬ್ಬ ಪೊಲೀಸರ ಗುಂಡಿಗೆ ಬಲಿಯಾಗಿರುವ ಘಟನೆ ಉತ್ತರ ಪ್ರದೇಶದ ಗೋಮತಿ ನಗರ್ ಪ್ರದೇಶದಲ್ಲಿ ನಡೆದಿದೆ.

    ವಿವೇಕ್ ತಿವಾರಿ ಪೊಲೀಸರ ಗುಂಡಿಗೆ ಬಲಿಯಾದ ಆ್ಯಪಲ್ ಕಂಪನಿಯ ಸೇಲ್ಸ್ ಮ್ಯಾನೇಜರ್. ಶುಕ್ರವಾರ ಪೊಲೀಸರು ಕೊಲೆ ಪ್ರಕರಣ ಸಂಬಂಧ ತಿವಾರಿಯನ್ನು ಬಂಧಿಸಲು ಮುಂದಾದಾಗ, ಏಕಾಏಕಿ ಪೊಲೀಸರ ಮೇಲೆಯೇ ತನ್ನ ಕಾರನ್ನು ನುಗ್ಗಿಸಲು ಯತ್ನಿಸಿದ್ದಾನೆ. ಈ ವೇಳೆ ಪ್ರಶಾಂತ್ ಚೌಧರಿ ಎಂಬ ಪೊಲೀಸ್ ಅಧಿಕಾರಿಯು ತಿವಾರಿ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಆಗ ಗುಂಡು ಕಾರಿನ ಮುಂಭಾಗದ ಗ್ಲಾಸನ್ನು ಸೀಳಿ ತಿವಾರಿಗೆ ತಗುಲಿದೆ.

    ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ವಿವೇಕ್ ತಿವಾರಿಯನ್ನು ಗೋಮತಿ ನಗರದದ ಡಾ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗಿದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಗೋಮತಿ ಪೊಲೀಸ್ ಠಾಣೆ ಅಧಿಕಾರಿಗಳು, ಪೊಲೀಸರ ದಾಳಿಗೆ ಮೃತಪಟ್ಟ ತಿವಾರಿಯ ವಿರುದ್ಧ ಆತನ ಸಂಬಂಧಿಕರು ಕೊಲೆ ಪ್ರಕರಣದ ದೂರನ್ನು ದಾಖಲಿಸಿದ್ದರು. ಹೀಗಾಗಿ ವಿವೇಕ್ ತಿವಾರಿಯನ್ನು ಬಂಧಿಸಲು ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

    ಘಟನೆ ಬಗ್ಗೆ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಹೋದರ ವಿಷ್ಣು ಶುಕ್ಲ, ಪ್ರಕರಣವನ್ನು ಸಿಬಿಐ ವಹಿಸುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಪೊಲೀಸರು ಗುಂಡು ಹಾರಿಸಲು ತಿವಾರಿ ಏನು ಉಗ್ರಗಾಮಿಯೇ ಎಂದು ಪ್ರಶ್ನಿಸಿದ ಅವರು, ಕೂಡಲೇ ನಮ್ಮೆಲ್ಲರ ಮುಖಂಡರಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಬೇಕು ಎಂದು ಕೇಳಿಕೊಂಡಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಘಟನೆ ಸಂಬಂಧ ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದು, ಇದರಲ್ಲಿ ಯಾರಾದರೂ ತಪ್ಪು ಎಂದು ತಿಳಿದುಬಂದರೆ ಅವರ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳುತ್ತೇನೆ. ಅಮಾಯಕ ವ್ಯಕ್ತಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ ಎನ್ನುವ ಬಗ್ಗೆ ವಿಚಾರಣೆ ನಡೆಯುತ್ತಿದೆ. ಶೀಘ್ರವೇ ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಘಟನೆ ಸಂಬಂಧ ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿ, ಕೊಲೆ ಆರೋಪದ ಮೇಲೆ ವಿವೇಕ್ ತಿವಾರಿಯನ್ನು ಬಂಧಿಸಲು ಹೋದಾಗ, ಪೊಲೀಸರ ಮೇಲೆಯೇ ಕಾರನ್ನು ನುಗ್ಗಿಸಲು ಯತ್ನಿಸಿದ್ದಾನೆ. ಅಲ್ಲದೇ ತಿವಾರಿಯು ಅನುಮಾನಾಸ್ಪದ ಚಟುವಟಿಕೆಯಲ್ಲಿ ತೊಡಗಿರುವುದು ಸಹ ತಿಳಿದುಬಂದಿದೆ ಎಂದು ಹೇಳಿದ್ದಾರೆ.

    ಮರಣೋತ್ತರ ವರದಿಯ ಪ್ರಕಾರ ಮೃತ ವಿವೇಕ್ ದೇಹದ ಹಲವು ಭಾಗಗಳಲ್ಲಿ ಗಂಭೀರವಾಗಿ ಗಾಯಗೊಂಡು, ತೀವ್ರ ರಕ್ತಸ್ರಾವದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv