Tag: lucknow

  • 10ನೇ ತರಗತಿಯಿಂದ ಹೊರಹಾಕಿದ್ದಕ್ಕೆ ವಿದ್ಯಾರ್ಥಿಯಿಂದ ಪ್ರಾಂಶುಪಾಲರ ಮೇಲೆ ಗುಂಡೇಟು

    10ನೇ ತರಗತಿಯಿಂದ ಹೊರಹಾಕಿದ್ದಕ್ಕೆ ವಿದ್ಯಾರ್ಥಿಯಿಂದ ಪ್ರಾಂಶುಪಾಲರ ಮೇಲೆ ಗುಂಡೇಟು

    ಲಕ್ನೋ: ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯೊಬ್ಬ ತರಗತಿಯಿಂದ ಹೊರಹಾಕಿದ್ದಕ್ಕೆ ಪ್ರಿನ್ಸಿಪಾಲ್ ಮೇಲೆ ಶೂಟ್ ಮಾಡಿ ನಾಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದೆ.

    ವಿದ್ಯಾರ್ಥಿಯ ವರ್ತನೆಯನ್ನು ತಾಳಲಾರದೇ ಪ್ರಿನ್ಸಿಪಾಲ್ ಆತನನ್ನು ಶಾಲೆಯಿಂದ ಹೊರಹಾಕಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿ ಪ್ರಿನ್ಸಿಪಾಲ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲು ಮುಂದಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಬುಧವಾರ ಬೆಳಗ್ಗೆ ಘಟನೆ ನಡೆದಿದ್ದು, ಆರೋಪಿ 17 ವರ್ಷದ ಬಾಲಕನಾಗಿದ್ದು, 15 ದಿನಗಳ ಹಿಂದೆ ಈ ಖಾಸಗಿ ಶಾಲೆಗೆ ಸೇರಿಕೊಂಡಿದ್ದ.

    ಈ ಘಟನೆಯನ್ನು ಕಂಡ ಪ್ರತ್ಯಕ್ಷದರ್ಶಿಯೊಬ್ಬರು, ಆ ಬಾಲಕ ಬುಧವಾರ ಬೆಳಿಗ್ಗೆ ತನ್ನ ತಾಯಿಯೊಂದಿಗೆ ಶಾಲೆಗೆ ಬಂದು ಮರಳಿ ಶಾಲೆಗೆ ಬರಲು ಪ್ರಿನ್ಸಿಪಾಲರ ಬಳಿ ಮನವಿ ಮಾಡಿಕೊಂಡಿದ್ದಾನೆ. ಆದರೆ ಅವರು ಒಪ್ಪದಿದ್ದಾಗ ಮನೆಗೆ ತೆರಳುತ್ತಾನೆ. ಬಳಿಕ ಮಧ್ಯಾಹ್ನ 12ಕ್ಕೆ ಮರಳಿ ಪಿಸ್ತೂಲ್ ನೊಂದಿಗೆ ಶಾಲೆಗೆ ಬಂದು ಶೂಟ್ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.

    ಪ್ರಾಂಶುಪಾಲರನ್ನು ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿಯ ಮೇಲೆ ಐಪಿಸಿ ಸೆಕ್ಷನ್ 307 (ಕೊಲೆ) ಅಡಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತಂಗಿಗೆ ರಾಖಿ ಗಿಫ್ಟ್ ಕೊಟ್ಟ ಅಣ್ಣ – ಪತ್ನಿಯಿಂದ ಆತ್ಮಹತ್ಯೆ ಯತ್ನ

    ತಂಗಿಗೆ ರಾಖಿ ಗಿಫ್ಟ್ ಕೊಟ್ಟ ಅಣ್ಣ – ಪತ್ನಿಯಿಂದ ಆತ್ಮಹತ್ಯೆ ಯತ್ನ

    ಲಕ್ನೋ: ಸಹೋದರನೊಬ್ಬ ರಕ್ಷಾಬಂಧನದ ಪ್ರಯುಕ್ತ ತಂಗಿಗಾಗಿ ಉಡುಗೊರೆ ನೀಡಿದ್ದಕ್ಕಾಗಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

    ಆಶಿಶ್ ಸಹೋದರಿಗೆ ಗಿಫ್ಟ್ ಕೊಟ್ಟ ಅಣ್ಣ. ತಂಗಿಗೆ ಗಿಫ್ಟ್ ಕೊಟ್ಟಿದ್ದಕ್ಕೆ ಪತ್ನಿ ಕವಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಶಿಶ್ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದು, ಪತ್ನಿ ಹಾಗೂ ಪೋಷಕರ ಜತೆ ಕಾನ್ಪುರದ ಗೋವಿಂದ ನಗರದಲ್ಲಿ ವಾಸವಾಗಿದ್ದಾರೆ.

    ಭಾನುವಾರ ರಕ್ಷಾ ಬಂಧನ ಇದ್ದ ಕಾರಣ ಆಶಿಶ್ ಸಹೋದರಿ ಮನೆಗೆ ಬಂದಿದ್ದಾರೆ. ನಂತರ ಅಣ್ಣನ ಕೈಗೆ ರಾಖಿ ಕಟ್ಟಿದ್ದಾರೆ. ರಾಖಿ ಕಟ್ಟಿದ ಸಹೋದರಿಗೆ ಉಡಗೊರೆಯಾಗಿ ಆಶಿಶ್ 2,000 ರೂ. ನೀಡಿದ್ದಾರೆ. ಇದರಿಂದ ಕೋಪಗೊಂಡ ಪತ್ನಿ ರೂಮಿಗೆ ಹೋಗಿ ಲಾಕ್ ಮಾಡಿಕೊಂಡು ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾಳೆ. ತಕ್ಷಣ ಪತಿ ಆಶಿಶ್ ನೋಡಿ ಆಕೆಯನ್ನು ರಕ್ಷಿಸಿ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಪತ್ನಿ ಕವಿತಾ ತನ್ನ ಪತಿ ಸಹೋದರಿಗೆ 2 ಸಾವಿರ ರೂ. ಹಣ ನೀಡಿದ್ದಕ್ಕೆ ಬೇಸರಗೊಂಡು ಪತಿ ಆಶಿಶ್ ಜೊತೆ ಜಗಳವಾಡಿಕೊಂಡು ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಳು. ಬಳಿಕ ರೂಮಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಇದನ್ನು ನೋಡಿದ ಆಶಿಶ್ ಬಾಗಿಲು ಮುಗಿದು ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ನೆರೆ ಹೊರೆಯವರು ಮಾಹಿತಿ ನೀಡಿದ್ದಾರೆ.

    ಸದ್ಯಕ್ಕೆ ವೈದ್ಯರು ಕವಿತಾ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ. ಆದರೆ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಯಾವುದೇ ರೀತಿಯ ದೂರು ದಾಖಲಾಗಿಲ್ಲ ಎಂದು ಗೋವಿಂದನಗರದ ಸ್ಟೇಷನ್ ಹೌಸ್ ಆಫೀಸರ್ ಸಂಜೀವ್ ಕಾಂತ್ ಮಿಶ್ರಾ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಾಲಕಿಯನ್ನ ಕಿಡ್ನಾಪ್ ಮಾಡಿ ಚಲಿಸ್ತಿದ್ದ ಕಾರಿನಲ್ಲೇ ಗ್ಯಾಂಗ್‍ರೇಪ್ ಎಸಗಿ ರಸ್ತೆಗೆ ದೂಡಿದ್ರು!

    ಬಾಲಕಿಯನ್ನ ಕಿಡ್ನಾಪ್ ಮಾಡಿ ಚಲಿಸ್ತಿದ್ದ ಕಾರಿನಲ್ಲೇ ಗ್ಯಾಂಗ್‍ರೇಪ್ ಎಸಗಿ ರಸ್ತೆಗೆ ದೂಡಿದ್ರು!

    ಲಕ್ನೋ: 14 ವರ್ಷದ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಮೂವರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.

    ಈ ಘಟನೆ ಸೋಮವಾರ ಬೆಳಗ್ಗೆ ದಂಕೌರ್ ಗ್ರಾಮದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಅಜಯ್(18) ಮತ್ತು ಸುರೇಂದರ್(19) ಇಬ್ಬರನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಅರುಣ್(21)ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    ನಡೆದಿದ್ದೇನು?
    ಸಂತ್ರಸ್ತ ಬಾಲಕಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಸೋಮವಾರ ಬೆಳಗ್ಗೆ ಸುಮಾರು 7.30 ಸಮಯದಲ್ಲಿ ದಂಕೌರ್ ಗ್ರಾಮದಿಂದ ಶಾಲೆಗೆ ಹೋಗುತ್ತಿದ್ದಳು. ಈ ವೇಳೆ ಮೂವರು ಆರೋಪಿಗಳು ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬಂದು ಬಾಲಕಿಯನ್ನು ಅಪಹರಿಸಿದ್ದಾರೆ. ಮೂವರಲ್ಲಿ ಅರುಣ್ ದಂಕೌರ್ ಗ್ರಾಮದಿಂದ ಬುಲಂದ್ ಶಹರ್ ಕಡೆ ಕಾರು ಚಲಾಯಿಸುತ್ತಿದ್ದನು. ಕಾರು ಚಲಿಸುತ್ತಿದ್ದಂತೆ ಆರೋಪಿಗಳಾದ ಅಜಯ್ ಮತ್ತು ಸುರೇಂದರ್ ಇಬ್ಬರೂ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕಾರಿನಲ್ಲಿ ಬಾಲಕಿ ಕಿರುಚಾಡುತ್ತಿದ್ದಳು. ಈ ಶಬ್ಧ ಕೇಳಿದ ಬಳಿಕ ಗ್ರಾಮಸ್ಥರು ಕಾರನ್ನು ನೋಡಿ ಅನುಮಾನಗೊಂಡು ಹಿಂಬಾಲಿಸಿದ್ದಾರೆ. ಅಷ್ಟೇ ಅಲ್ಲದೇ ಕಾರಿನ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ. ಆಗ ಆರೋಪಿಗಳು ಬಾಲಕಿಯನ್ನು ಕಾರಿನಿಂದ ರಸ್ತೆಗೆ ದೂಡಿ ಪರಾರಿಯಾಗಿದ್ದಾರೆ. ಅಲ್ಲದೇ ತಮ್ಮ ಗುರುತು ಪತ್ತೆಯಾಗಬಾರದೆಂದು ಕಾರಿನ ನಂಬರನ್ನು ಅಳಿಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಸಂತ್ರಸ್ತ ಬಾಲಕಿ ಮನೆಗೆ ಹೋಗಿ ನಡೆದ ಘಟನೆಯ ಬಗ್ಗೆ ಪೋಷಕರ ಬಳಿ ಹೇಳಿದ್ದಾಳೆ. ಬಳಿಕ ಪೋಷಕರು ದಂಕೌರ್ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ಬಾಲಕಿ ಹೇಳಿಕೆ ನೀಡಿದ ಬಳಿಕ ಆರೋಪಿಗಳು ಝಾಲ್ಡಾ ಗ್ರಾಮದವರು ಎಂದು ತಿಳಿದುಬಂದಿದೆ.

    ಮಾಹಿತಿ ತಿಳಿದ ತಕ್ಷಣ ಪೊಲೀಸರು ಅಜಯ್ ಮತ್ತು ಸುರೇಂದರ್ ಇಬ್ಬರನ್ನು ಬಂಧಿಸಿದ್ದಾರೆ. ಸದ್ಯಕ್ಕೆ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪೊಲೀಸರಿಗೆ ರಾಖಿ ಕಟ್ಟಿ ಮದುವೆಗೆ ಬೇಡಿಕೆಯಿಟ್ಟ ಯುವತಿ!

    ಪೊಲೀಸರಿಗೆ ರಾಖಿ ಕಟ್ಟಿ ಮದುವೆಗೆ ಬೇಡಿಕೆಯಿಟ್ಟ ಯುವತಿ!

    ಲಕ್ನೋ: ರಕ್ಷಾಬಂಧನ ಹಬ್ಬದಂದು ಪೊಲೀಸರಿಗೆ ರಾಖಿ ಕಟ್ಟಿ ಉತ್ತರ ಪ್ರದೇಶದ ಯುವತಿಯೊಬ್ಬಳು ತನ್ನ ಮದುವೆಗೆ ಬೇಡಿಕೆಯಿಟ್ಟು ಸುದ್ದಿಯಾಗಿದ್ದಾಳೆ.

    ನರ್ಗೀಸ್ ಶಹಾಜಪುರ್ ನಿವಾಸಿ ರಾಜುನನ್ನು ಪ್ರೀತಿಸುತ್ತಿದ್ದಳು. ರಾಜು ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದನು. ಅಲ್ಲದೇ ಇಬ್ಬರ ಕುಟುಂಬದವರು ಸಂಬಂಧಿಕರಾಗಿದ್ದು, ಇಬ್ಬರು ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು.

    ನಾಲ್ಕು ತಿಂಗಳ ಹಿಂದೆ ಇಬ್ಬರ ಕುಟುಂಬದವರು ಒಪ್ಪಿ ಮದುವೆಯನ್ನು ನಿಶ್ಚಯಿಸಿದ್ದರು. ದೀಪಾವಳಿ ಮೊದಲು ಇಬ್ಬರ ಮದುವೆಯಾಗಬೇಕಿತ್ತು. ಆದರೆ ಮದುವೆ ಮೊದಲು ಇಬ್ಬರು ಓಡಾಡುವುದು ನೋಡಿ ನರ್ಗೀಸ್ ಪೋಷಕರು ಮದುವೆಯನ್ನು ಕ್ಯಾನ್ಸಲ್ ಮಾಡಿದ್ದರು. ಅಲ್ಲದೇ ಆಕೆಯ ಮೇಲೆ ಹಲ್ಲೆ ಮಾಡಲು ಶುರು ಮಾಡಿದ್ದರು. ಶನಿವಾರ ಒತ್ತಾಯಪೂರ್ವಕವಾಗಿ ಬೇರೆ ಯುವಕನೊಂದಿಗೆ ನರ್ಗೀಸ್ ಮದುವೆ ಮಾಡಲು ಮುಂದಾಗಿದ್ದರು.

    ಮದುವೆ ನಿಶ್ಚಯ ಆಗುವ ಮೊದಲು ನರ್ಗೀಸ್ ತಂದೆ ರಾಜುವಿಗೆ ನೋಯ್ಡಾದಲ್ಲಿ ಒಂದು ಮನೆಯನ್ನು ಕಟ್ಟಿಸಬೇಕೆಂದು ಷರತ್ತು ಹಾಕಿದ್ದರು. ಈ ಮನೆ ಕಟ್ಟಲು ಒಂದು ವರ್ಷ ಅವಧಿಯನ್ನು ಕೂಡ ನೀಡಿದ್ದರು. ಆದರೆ ರಾಜುಗೆ ಸೈಟ್ ಖರೀದಿಸಿ ಮನೆ ಕಟ್ಟಲು ಹಣವಿರಲಿಲ್ಲ. ಇದ್ದರಿಂದ ನರ್ಗೀಸ್ ತಂದೆ ಬೇಸರಗೊಂಡು ಮದುವೆ ಮುರಿದ್ದರು. ಅಲ್ಲದೇ ತನ್ನ ಮಗಳನ್ನು ಬೇರೆ ಯುವಕನ ಜೊತೆ ಮದುವೆ ಮಾಡಿಸಲು ಮುಂದಾಗಿದ್ದರು.

    ಈ ವಿಚಾರ ತಿಳಿಯುತ್ತಿದ್ದಂತೆ ರಾಜುವನ್ನೇ ಮದುವೆಯಾಗಬೇಕೆಂದು ನರ್ಗೀಸ್ ಹಠ ಹಿಡಿದು ರಾತ್ರೋರಾತ್ರಿ ಮನೆಯಿಂದ ಓಡಿ ಹೋಗಿ ಪರಿಚಿತರ ಮನೆಯಲ್ಲಿ ರಾತ್ರಿ ಕಳೆದಿದ್ದಾಳೆ. ನಂತರ ಬೆಳಗ್ಗೆ ರಾಜುವನ್ನು ಕರೆದುಕೊಂಡು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ನರ್ಗೀಸ್, ರಾಜು ಜೊತೆ ಸೆಕ್ಟರ್ 49 ಪೊಲೀಸ್ ಠಾಣೆಗೆ ಹೋಗಿ ಕ್ಷೇತ್ರಾಧಿಕಾರಿ ಶ್ವೇತಾಬ್ ಪಾಂಡೆ ಹಾಗೂ ಅಲ್ಲಿದ್ದ ಎಲ್ಲ ಪೊಲೀಸರಿಗೆ ರಾಖಿ ಕಟ್ಟಿದ್ದಾಳೆ. ಪೊಲೀಸರಿಗೆ ರಾಖಿ ಕಟ್ಟಿ ನರ್ಗೀಸ್ ತನ್ನ ಪೋಷಕರು ಇಷ್ಟವಿಲ್ಲದ ಮದುವೆ ಮಾಡಿಸುತ್ತಿದ್ದಾರೆ. ಹೀಗಾಗಿ ನಮಗೆ ರಕ್ಷಣೆ ನೀಡಿ ಎಂದು ಕೇಳಿಕೊಂಡಿದ್ದಾಳೆ.

    ನಂತರ ಪೊಲೀಸರು ಇಬ್ಬರ ಕುಟುಂಬದವರನ್ನು ಠಾಣೆಗೆ ಕರೆಸಿ ಬುದ್ಧಿ ಹೇಳಿದ್ದಾರೆ. ಎರಡು ಕುಟುಂಬದವರು ಈ ಮದುವೆಗೆ ಒಪ್ಪಿದ ಬಳಿಕ ರಾಜು ಮತ್ತು ನರ್ಗೀಸ್ ಮನೆಗೆ ತೆರಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವೈದ್ಯಕೀಯ ಪರೀಕ್ಷೆಯ ವರದಿ ನೋಡಿ 14ರ ಗ್ಯಾಂಗ್‍ರೇಪ್ ಸಂತ್ರಸ್ತೆ ಆತ್ಮಹತ್ಯೆ

    ವೈದ್ಯಕೀಯ ಪರೀಕ್ಷೆಯ ವರದಿ ನೋಡಿ 14ರ ಗ್ಯಾಂಗ್‍ರೇಪ್ ಸಂತ್ರಸ್ತೆ ಆತ್ಮಹತ್ಯೆ

    ಲಕ್ನೋ: ತನ್ನ ಮೇಲೆ ಗ್ಯಾಂಗ್ ರೇಪ್ ಆಗಿಲ್ಲ ಎನ್ನುವ ವೈದ್ಯಕೀಯ ವರದಿಯನ್ನು ನೋಡಿ 14 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಬಾದಾನ್ ನಲ್ಲಿ ನಡೆದಿದೆ.

    ಸೋಮವಾರ ರಾತ್ರಿ ಗನ್ ತೋರಿಸಿ ಹತ್ತಿರದ ಸರ್ಕಾರಿ ಶಾಲೆಗೆ ಕರೆದೊಯ್ದು ನನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಬಾಲಕಿ ದೂರು ನೀಡಿದ್ದಳು. ಈ ದೂರಿನ ಹಿನ್ನೆಲೆಯಲ್ಲಿ ಪ್ರಕರಣದ ಮುಖ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.

    ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿಲ್ಲ ಎನ್ನುವ ವರದಿ ಬಂದಿತ್ತು. ಈ ವರದಿಯನ್ನು ನೋಡಿ ಶಾಕ್ ಆಗಿ ಬುಧವಾರ ರಾತ್ರಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪೊಲೀಸ್ ತನಿಖೆಯ ವೇಳೆ ನೇಣಿಗೆ ಶರಣಾದ ಬಾಲಕಿ ಆರೋಪಿಯ ಜೊತೆ 122 ಬಾರಿ ಫೋನಿನಲ್ಲಿ ಮಾತನಾಡಿರುವ ವಿಚಾರ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ 2 ತಿಂಗಳ ಕಾಲ ಆಕೆ ನಿರಂತರ ಸಂಪರ್ಕಲ್ಲಿದ್ದ ವಿಚಾರ ತಿಳಿದುಬಂದಿದೆ.

    ಈಗ ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಮುಂದಿನ ತನಿಖೆಗೆ ಪೊಲೀಸರು ಈ ವರದಿಯನ್ನು ಕಾಯುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಷ್ಟ್ರಗೀತೆಗೆ ಅಡ್ಡಿ- ಮದರಸದ ಮಾನ್ಯತೆ ರದ್ದುಗೊಳಿಸಿದ ಯೋಗಿ ಸರ್ಕಾರ!

    ರಾಷ್ಟ್ರಗೀತೆಗೆ ಅಡ್ಡಿ- ಮದರಸದ ಮಾನ್ಯತೆ ರದ್ದುಗೊಳಿಸಿದ ಯೋಗಿ ಸರ್ಕಾರ!

    ಲಕ್ನೋ: ಸ್ವಾತಂತ್ರ್ಯ ದಿನಾಚರಣೆಯ ವೇಳೆ ಮಕ್ಕಳು ರಾಷ್ಟ್ರಗೀತೆ ಹಾಡುತ್ತಿರುವಾಗ ಅಡ್ಡಿಪಡಿಸಿದ ಕ್ರಮಕ್ಕೆ ಮದರಸದ ಮಾನ್ಯತೆಯನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.

    ಆಗಸ್ಟ್ 15ರಂದು ಉತ್ತರಪ್ರದೇಶದ ಮಹಾರಾಜಗಂಜ್ ಜಿಲ್ಲೆಯ ಮದರಸದಲ್ಲಿ ಪ್ರಾಂಶುಪಾಲರು ಹಾಗೂ ಮುಸ್ಲಿಂ ಧರ್ಮಗುರು ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣದ ನಂತರ ಮಕ್ಕಳು ಹಾಡುತ್ತಿದ್ದ ರಾಷ್ಟ್ರಗೀತೆಯನ್ನು ತಡೆದು, ಇದು ಇಸ್ಲಾಂಗೆ ವಿರೋಧವೆಂದು ಅಡ್ಡಿಪಡಿಸಿದ್ದರು. ಈ ಸುದ್ದಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.

    ಈ ಹಿನ್ನೆಲೆಯಲ್ಲಿ ಮದರಸದ ಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ ಕೂಡಲೇ ಮದರಸದ ಮಾನ್ಯತೆಯನ್ನು ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದನ್ನೂ ಓದಿ: ಮಕ್ಕಳಿಗೆ ರಾಷ್ಟ್ರಗೀತೆ ಹಾಡದಂತೆ ತಡೆದಿದ್ದ ಧರ್ಮಗುರು ಬಂಧನ

    ಈ ಕುರಿತು ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿಯಾದ ಪ್ರಭತ್ ಕುಮಾರ್ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆ ವೇಳೆ ಮಕ್ಕಳಿಂದ ರಾಷ್ಟ್ರಗೀತೆಯನ್ನು ತಡೆದಿದ್ದು, ತನಿಖೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಮದರಸದ ಮಾನ್ಯತೆಯನ್ನು ರದ್ದುಗೊಳಿಸಿದ್ದೇವೆ. ಅಲ್ಲದೇ ಸರ್ಕಾರದಿಂದ ಮದರಸಕ್ಕೆ ನೀಡುತ್ತಿದ್ದ ಎಲ್ಲಾ ಹಣಕಾಸು ಹಾಗೂ ಇತರೆ ನೆರವುಗಳನ್ನು ತಕ್ಷಣದಿಂದ ನಿಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

    ರಾಷ್ಟ್ರಗೀತೆ ಹಾಡುವ ವೇಳೆ ಮದರಸಾದ ಪ್ರಾಂಶುಪಾಲ ಫೈಯಾಸ್ ರೆಹ್ಮಾನ್ ಹಾಗೂ ಧರ್ಮಗುರು ಜುನೈದ್ ಅನ್ಸಾರಿ ಅಡ್ಡಿಪಡಿಸಿದ್ದು ತನಿಖೆಯಲ್ಲಿ ದೃಢಪಟ್ಟಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪತ್ನಿ ಶವ ಫ್ರಿಡ್ಜ್, ಮಕ್ಕಳ ಶವ ಕಪಾಟು, ಸೂಟ್‍ಕೇಸ್, ನೆಲದ ಮೇಲೆ – ಪತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

    ಪತ್ನಿ ಶವ ಫ್ರಿಡ್ಜ್, ಮಕ್ಕಳ ಶವ ಕಪಾಟು, ಸೂಟ್‍ಕೇಸ್, ನೆಲದ ಮೇಲೆ – ಪತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

    ಲಕ್ನೋ: ಮೂವರು ಮಕ್ಕಳು, ಪತ್ನಿಯನ್ನು ವ್ಯಕ್ತಿಯೊಬ್ಬ ಹತ್ಯೆ ಮಾಡಿ ಬಳಿಕ ತಾನೂ ನೇಣಿಗೆ ಶರಣಾಗಿದ್ದಾನೆ ಎನ್ನಲಾದ ಆಘಾತಕಾರಿ ಘಟನೆಯೊಂದು ಉತ್ತರಪ್ರದೇಶದ ಅಲಹಾಬಾದಿನಲ್ಲಿ ಬೆಳಕಿಗೆ ಬಂದಿದೆ.

    ಮನೋಜ್ ಕುಶ್ವಾಹ (35) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ. ಪತ್ನಿ ಶ್ವೇತಾ (30) ಮೂವರು ಪುತ್ರಿಯರಾದ ಪ್ರೀತಿ (8), ಶಿವಾನಿ (6) ಮತ್ತು ಶ್ರೇಯಾ (3) ಮೃತ ದುರ್ದೈವಿಗಳು. ಈ ಘಟನೆ ಧೂಮಂಗಂಜ್ ಪೊಲೀಸ್ ಠಾಣೆ ಪ್ರದೇಶದ ಪೀಪಲ್ ಗಯಾನ್ ನಲ್ಲಿ ಮೃತ ಕುಟುಂಬದ ಮನೆಯಲ್ಲಿಯೇ ಶವ ಪತ್ತೆಯಾಗಿದೆ.

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
    ಮೃತ ಮನೋಜ್ ಕುಟುಂಬದವರು ಸೋಮವಾರ ಮನೆಯ ಬಾಗಿಲು ಹಾಕಿಕೊಂಡಿದ್ದು, ಸಂಜೆಯಾದರೂ ಬಾಗಿಲು ತೆಗೆದಿರಲಿಲ್ಲ. ಆದರೆ ಮನೆಯಲ್ಲಿ ಜೋರಾಗಿ ಟಿವಿ ಮತ್ತು ರೇಡಿಯೋ ಶಬ್ದ ಕೇಳಿ ಬರುತ್ತಿತ್ತು. ಬಳಿಕ ಸ್ಥಳೀಯರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಮನೋಜ್ ಮನೆ ಬಾಗಿಲು ಬಡಿದಿದ್ದಾರೆ. ಆದರೆ ಮನೆಯ ಒಳಗಡೆಯಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಕೊನೆಗೆ ಬಾಗಿಲು ಮುರಿದು ಪೊಲೀಸರು ಒಳಹೋಗಿದ್ದು, ಬಾಗಿಲು ತೆರೆಯುತ್ತಿದ್ದಂತೆ ಮನೋಜ್ ಸೀಲಿಂಗ್ ಫ್ಯಾನಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬಳಿಕ ಉಳಿದವರನ್ನು ಹುಡುಕಾಡಿದಾಗ ಪತ್ನಿ ಶ್ವೇತಾ ಶವ ಫ್ರಿಡ್ಜ್ ನಲ್ಲಿ, ಒಬ್ಬ ಮಗಳ ಶವ ಕಪಾಟಿನಲ್ಲಿ, 2ನೇ ಮಗಳ ಶವ ಸೂಟ್ ಕೇಸ್ ನಲ್ಲಿ ಮತ್ತು ಕೊನೆಯ ಮಗಳ ಶವ ನೆಲದ ಮೇಲೆ ಬಿದ್ದಿದ್ದ ಸ್ಥಿತಿಯಲ್ಲಿ ಒಟ್ಟು ಐದು ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿ ನಿತಿನ್ ತಿವಾರಿ ಹೇಳಿದ್ದಾರೆ.

    ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ. ಸೋಮವಾರ ರಾತ್ರಿ ಮನೆಯಲ್ಲಿ ಟಿವಿ ಮತ್ತು ರೇಡಿಯೋ ಶಬ್ದ ಕೇಳಿ ಬರುತ್ತಿತ್ತು. ಜೊತೆಗೆ ಮಕ್ಕಳು ಜೋರಾಗಿ ಅಳುತ್ತಿದ್ದ ಶಬ್ದವು ಕೇಳಿಸುತ್ತಿತ್ತು ಎಂದು ಸಹೋದರನ ಪತ್ನಿ ಹೇಳಿದ್ದಾರೆ. ಮೃತ ಮನೋಜ್ ಪತ್ನಿ ಹಾಗೂ ಮೂವರು ಮಕ್ಕಳನ್ನು ಹತ್ಯೆ ಮಾಡಿ ನಂತರ ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

    ಮನೋಜ್ ಮತ್ತು ಪತ್ನಿ ಮಧ್ಯೆ ಇತ್ತೀಚೆಗೆ ಜಗಳ ನಡೆಯುತ್ತಿತ್ತು ಎಂದು ಸ್ಥಳೀಯರು ಹೇಳಿಕೆ ನೀಡಿದ್ದಾರೆ. ಸದ್ಯಕ್ಕೆ ಈ ಪ್ರಕರಣದ ಬಗ್ಗೆ ಗಂಭೀರವಾಗಿ ತನಿಖೆ ಮಾಡಲಾಗುತ್ತಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ವರದಿ ಬಂದ ನಂತರ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ತಿಳಿದು ಬರುತ್ತದೆ. ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದೇವೆ. ಈ ಕುರಿತು ಎಲ್ಲ ರೀತಿಯಲ್ಲೂ ತನಿಖೆ ಮಾಡಲಾಗುತ್ತಿದೆ. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಶವ ಪತ್ತೆಯಾದ ಸ್ಥಳದಲ್ಲಿ ಯಾವ ರೀತಿಯ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ನಿತಿನ್ ತಿವಾರಿ ಅವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತಂದೆಯಿಂದಲೇ ಅಪ್ರಾಪ್ತೆಯ ಮೇಲೆ ರೇಪ್: 13 ವಾರಗಳ ಭ್ರೂಣ ತೆಗೆಯಲು ಅನುಮತಿ

    ತಂದೆಯಿಂದಲೇ ಅಪ್ರಾಪ್ತೆಯ ಮೇಲೆ ರೇಪ್: 13 ವಾರಗಳ ಭ್ರೂಣ ತೆಗೆಯಲು ಅನುಮತಿ

    ಲಕ್ನೋ: ತಂದೆಯಿಂದಲೇ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ಹೊಟ್ಟೆಯಲ್ಲಿ ಬೆಳೆಯುತ್ತಿರುವ 13 ವಾರಗಳ ಭ್ರೂಣವನ್ನು ತೆಗೆಸಲು ಪೋಕ್ಸೋ ಕೋರ್ಟ್ ಶನಿವಾರ ಅನುಮತಿ ನೀಡಿದೆ.

    ಆಕೆ ಹಲವು ಬಾರಿ ತಂದೆಯಿಂದ ಅತ್ಯಾಚಾರಕ್ಕೆ ಒಳಗಾಗಿದ್ದಳು. ಬಾಲಕಿಯ ತಾಯಿ ದೂರು ನೀಡಿದ ಆಧಾರದ ಮೇಲೆ ಆಗಸ್ಟ್ 8 ರಂದು ತಂದೆಯ ವಿರುದ್ಧ ಎಫ್‍ಐ ಆರ್ ದಾಖಲಿಸಿಕೊಂಡು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಮಧ್ಯಂತರ ತೀರ್ಪಿನಲ್ಲಿ ನ್ಯಾಯಾಧೀಶರಾದ ವಿವೇಕಾನಂದ್ ಸರನ್ ತ್ರಿಪಾಠಿ ಈ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕೆಂದು ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದ್ದು ಹಾಗೂ ಡಿಎನ್‍ಎ ಮಾದರಿಯನ್ನು ಮತ್ತು ಭ್ರೂಣವನ್ನು ಸಂರಕ್ಷಿಸಬೇಕೆಂದು ಆದೇಶಿಸಿದ್ದಾರೆ.

    ಅಷ್ಟೇ ಅಲ್ಲದೇ ಮಥುರಾ ಜಿಲ್ಲಾ ನ್ಯಾಯಾಲಯ 1 ತಿಂಗಳೊಳಗೆ ನೊಂದ ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ 2 ಲಕ್ಷ ರೂ. ಹಣ ನೀಡಬೇಕೆಂದು ತನ್ನ ಮಧ್ಯಂತರ ಆದೇಶದಲ್ಲಿ ಕೋರ್ಟ್ ಸೂಚಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪತ್ನಿಯ ಮೂಗನ್ನೇ ಕಚ್ಚಿ ಗಾಯಗೊಳಿಸಿದ ಪತಿ ಮಹಾಶಯ!

    ಪತ್ನಿಯ ಮೂಗನ್ನೇ ಕಚ್ಚಿ ಗಾಯಗೊಳಿಸಿದ ಪತಿ ಮಹಾಶಯ!

    ಲಕ್ನೋ: ಬೇರೊಬ್ಬ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿರಬಹುದು ಎಂಬ ಅನುಮಾನದಿಂದ ಪತಿ ಮಹಾಶಯನೊಬ್ಬ ಪತ್ನಿಯ ಮೂಗನ್ನೇ ಕಚ್ಚಿರುವ ಘಟನೆ ಉತ್ತರ ಪ್ರದೇಶದ ಶಹಜಾಹನ್ಪುರದಲ್ಲಿ ನಡೆದಿದೆ.

    ಪಾಲ್ಹೋರಾ ಗ್ರಾಮದ ನಿವಾಸಿ ಅರ್ಜುನ್, ತನ್ನ ಪತ್ನಿ ಗೀತಾಳಿಗೆ ಭಾನುವಾರ ಮನೆಯಿಂದ ಹೊರಗೆ ಹೋಗಬೇಡವೆಂದು ತಡೆದಿದ್ದನು. ಆದ್ರೆ ಆಕೆ ಪತಿಯ ಮಾತನ್ನು ಲೆಕ್ಕಿಸದೇ ಹೊರ ಹೋಗಲು ಮುಂದಾಗಿದ್ದಾಳೆ. ಆ ವೇಳೆ ಅರ್ಜುನ್ ಕೋಪದಿಂದ ಆಕೆಯ ಮೂಗನ್ನು ಹಿಡಿದು ಕಚ್ಚಿದ್ದಾನೆ ಎಂದು ನಗರದ ಪೊಲೀಸ್ ಅಧಿಕಾರಿ ದಿನೇಶ್ ತ್ರಿಪಾಠಿ ಹೇಳಿದ್ದಾರೆ.

    ಐದು ದಿನಗಳ ಹಿಂದೆ ಗೀತಾ ಅರ್ಜುನ್ ಗೆ ಹೇಳದೆ ಕೇಳದೆ ಬರೇಲಿಗೆ ಹೋಗಿದ್ದರು. ಇದರಿಂದಾಗಿ ಕೋಪಗೊಂಡ ಅರ್ಜುನ ಆಕೆ ವಾಪಸ್ಸಾದ ಬಳಿಕ ಅನೈತಿಕ ಸಂಬಂಧ ಹೊಂದಿರಬಹುದು ಎಂದು ಅವ್ಯಾಚಪದಗಳಿಂದ ಆಕೆಗೆ ಬೈದಿದ್ದಾನೆ ಈ ಘಟನೆಯೇ ಅರ್ಜುನ್ ಗೆ ಗೀತಾಳ ಮೇಲೆ ಅನುಮಾನ ಪಡಲು ಕಾರಣವಾಗಿದೆ. ಈ ಘಟನೆ ಪೊಲೀಸರವರೆಗೂ ತಲುಪಿದ್ದು, ಹಾಗಾಗಿ ಮಧ್ಯಪ್ರವೇಶಿಸಬೇಕಾಯಿತು ಎಂದು ತ್ರಿಪಾಠಿ ಹೇಳಿದ್ದಾರೆ.

    ಸದ್ಯ ಘಟನೆ ಬಳಿಕ ಗೀತಾಳನ್ನು ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಪತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಡ್ಡಾಯವಾಗಿ ಭಾರತ್ ಮಾತಾ ಕೀ ಜೈ ಎನ್ನಬೇಕು: ಶಿಯಾ ವಕ್ಫ್ ಮಂಡಳಿ ಆದೇಶ

    ಕಡ್ಡಾಯವಾಗಿ ಭಾರತ್ ಮಾತಾ ಕೀ ಜೈ ಎನ್ನಬೇಕು: ಶಿಯಾ ವಕ್ಫ್ ಮಂಡಳಿ ಆದೇಶ

    ಲಕ್ನೋ: ಅಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಕಡ್ಡಾಯವಾಗಿ ಭಾರತ್ ಮಾತಾ ಕೀ ಜೈ ಎನ್ನುವ ಘೋಷಣೆಯನ್ನು ಹೇಳಲೇಬೇಕು ಎಂದು ಉತ್ತರಪ್ರದೇಶದ ಶಿಯಾ ವಕ್ಫ್ ಮಂಡಳಿ ತನ್ನೆಲ್ಲಾ ಸಂಸ್ಥೆಗಳಿಗೆ ಆದೇಶ ನೀಡಿದೆ.

    ಶಿಯಾ ವಕ್ಫ್ ಮಂಡಳಿ ಶನಿವಾರ ಖುದ್ದು ಆದೇಶವನ್ನು ಹೊರಡಿಸಿದ್ದು, ಒಂದು ವೇಳೆ ತನ್ನ ಆದೇಶವನ್ನು ಯಾರಾದರೂ ಪಾಲಿಸದೇ ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿಯಾ ವಕ್ಫ್ ಮಂಡಳಿಯ ಅಧ್ಯಕ್ಷ ವಾಸೀಮ್ ರಿಜ್ವಿಯವರು, ಶಿಯಾ ವಕ್ಫ್ ಮಂಡಳಿಯ ವ್ಯಾಪ್ತಿಗೆ ಬರುವ ಎಲ್ಲಾ ಸಂಸ್ಥೆಗಳಲ್ಲಿ ಆಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ಮಾಡಿ, ರಾಷ್ಟ್ರಗೀತೆಯನ್ನು ಹಾಡಬೇಕು. ರಾಷ್ಟ್ರಗೀತೆ ಮುಗಿದ ನಂತರ ಕಡ್ಡಾಯವಾಗಿ ಭಾರತ್ ಮಾತಾ ಕೀ ಜೈ ಎನ್ನುವ ಘೋಷಣೆಯನ್ನು ಹೇಳಬೇಕು. ಒಂದು ವೇಳೆ ಆದೇಶವನ್ನು ಪಾಲಿಸದೇ ಇರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews