Tag: lucknow

  • ಏರ್ ಶೋ ಲಕ್ನೋಗೆ ಶಿಫ್ಟ್ ಆಗುತ್ತಾ? ಯಾರು ಏನು ಹೇಳಿದ್ರು?

    ಏರ್ ಶೋ ಲಕ್ನೋಗೆ ಶಿಫ್ಟ್ ಆಗುತ್ತಾ? ಯಾರು ಏನು ಹೇಳಿದ್ರು?

    ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿದ್ದ ಏರ್ ಶೋ ಉತ್ತರಪ್ರದೇಶದ ಲಕ್ನೋಗೆ ಶಿಫ್ಟ್ ಆಗಿದೆ. ಅಧಿಕೃತವಾಗಿ ರಕ್ಷಣಾ ಸಚಿವಾಲಯದಿಂದ ಘೋಷಣೆಯಾಗದೇ ಇದ್ದರೂ ಶೋ ಲಕ್ನೋಗೆ ಶಿಫ್ಟ್ ಆಗುವುದು ಬಹುತೇಕ ಖಚಿತವಾಗಿದೆ.

    1996ರಿಂದ ಪ್ರತಿ ಎರಡು ವರ್ಷಕ್ಕೊಮ್ಮೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಯುತಿತ್ತು. 2019ರ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಏರ್ ಶೋ ನಡೆಸಲು ಈಗಾಗಲೇ ಸಮಯ ನಿಗದಿಯಾಗಿದೆ. ಆದರೆ ಈಗ ಬಂದಿರುವ ಮಾಹಿತಿ ಪ್ರಕಾರ ಲಕ್ನೋದಲ್ಲಿರುವ ಭಕ್ಷಿ ಕಾ ತಲಾಬ್ ವಾಯುನೆಲೆಯಲ್ಲಿ ಅಕ್ಟೋಬರ್ 27 ನವೆಂಬರ್ 4ರ ಮಧ್ಯೆ ನಡೆಸಲು ಸಿದ್ಧತೆ ನಡೆಸುತ್ತಿದೆ.

    ಸ್ಥಳಾಂತರಕ್ಕೆ ಕಾರಣವೇನು?
    ಈ ವರ್ಷದ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಎರಡು ರಕ್ಷಣಾ ಕಾರಿಡರ್ ಸ್ಥಾಪನೆ ಮಾಡುವುದಾಗಿ ಘೋಷಿಸಿತ್ತು. ಒಂದು ತಮಿಳುನಾಡಿನಲ್ಲಿ ನಿರ್ಮಾಣವಾಗಲಿದ್ದರೆ ಇನ್ನೊಂದು ಉತ್ತರ ಪ್ರದೇಶದಲ್ಲಿ ಆಲಿಘರ್ ನಲ್ಲಿ ನಿರ್ಮಾಣವಾಗುತ್ತಿದೆ. ಮೇಕ್ ಇನ್ ಇಂಡಿಯಾದ ಅಡಿಯಲ್ಲಿ ಜಾಗತಿಕ ಮಟ್ಟದ ಮಿಲಿಟರಿ ಉಪಕರಣಗಳನ್ನು ತಯಾರಿಸಲು ರಕ್ಷಣಾ ಕಾರಿಡರ್ ಸ್ಥಾಪಿಸಲಾಗುತ್ತಿದೆ. ಶನಿವಾರ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಲಿಘರ್ ಕಾರಿಡರ್ ಅನ್ನು ಉದ್ಘಾಟಿಸಿದ್ದರು. ಈ ರಕ್ಷಣಾ ಕಾರಿಡರ್ ಜನಪ್ರಿಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ವೈಮಾನಿಕ ಪ್ರದರ್ಶನವನ್ನು ಲಕ್ನೋಗೆ ಸ್ಥಳಾಂತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ವಿಶೇಷ ಏನೆಂದರೆ ಈ ಕಾರ್ಯಕ್ರಮದಲ್ಲೇ ಯೋಗಿ ಆದಿತ್ಯನಾಥ್ ಅವರು ಏರೋ ಇಂಡಿಯಾವನ್ನು ಉತ್ತರ ಪ್ರದೇಶದಲ್ಲಿ ನಡೆಸುವಂತೆ ರಕ್ಷಣಾ ಸಚಿವರಿಗೆ ಮನವಿ ಮಾಡಿದ್ದರು. ಉತ್ತರ ಪ್ರದೇಶ ರಕ್ಷಣಾ ಕಾರಿಡರ್ ನಲ್ಲಿ ಎಚ್‍ಎಎಲ್ 1,200 ಕೋಟಿ ರೂ. ಹೂಡಿಕೆ ಮಾಡುವುದಾಗಿ ಈಗಾಗಲೇ ಘೋಷಿಸಿದೆ.

    ಅಧಿಕೃತ ಘೋಷಣೆಯಾಗಿಲ್ಲ:
    ಬೆಂಗಳೂರು ನಗರದಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ರಕ್ಷಣಾ ಇಲಾಖೆಯ ಭೂಮಿಯನ್ನು ವರ್ಗಾಯಿಸುವ ಕುರಿತು ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಆಗಸ್ಟ್ 4 ರಂದು ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಏರ್ ಶೋ ನಡೆಸಲು ವಿವಿಧ ರಾಜ್ಯಗಳಿಂದ ಪ್ರಸ್ತಾಪ ಬಂದಿದೆ. ಆದರೆ ಅಂತಿಮವಾಗಿಲ್ಲ ಎಂದು ಪ್ರತಿಕ್ರಿಯಿಸಿದ್ದರು.

    ಈ ಹಿಂದೆ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್ ಅವರು ಏರ್ ಶೋವನ್ನು ಗೋವಾದಲ್ಲಿ ನಡೆಸಲು ಉತ್ಸುಕರಾಗಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾದ ಬಳಿಕ ಕನ್ನಡಿಗರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ಮನೋಹರ್ ಪರಿಕ್ಕರ್ ಅವರೇ ಗೋವಾದಲ್ಲಿ ಏರ್ ಶೋ ನಡೆಯುವ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿ ವಿಚಾರವನ್ನು ತಣ್ಣಗೆ ಮಾಡಿದ್ದರು.

    ಕೈ ನಾಯಕರ ವಿರೋಧ:
    ಏರ್ ಶೋ ಬೆಂಗಳೂರಿನಿಂದ ಲಕ್ನೋಗೆ ಶಿಫ್ಟ್ ಆಗುತ್ತಿರುವ ಬಗ್ಗೆ ಕಾಂಗ್ರೆಸ್ ನಾಯಕರು ಈಗಾಗಲೇ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಟ್ವೀಟ್ ಮಾಡಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

    ಸಿದ್ದರಾಮಯ್ಯನವರು ಟ್ವೀಟ್ ಮಾಡಿ, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತಾಸಕ್ತಿಯನ್ನು ತೋರಿಸಬೇಕಿತ್ತು. ಆದರೆ ಅವರು ರಾಜ್ಯದ ಹಿತಾಸಕ್ತಿಯನ್ನು ಬಿಟ್ಟಿದ್ದಾರೆ. ಬಿಜೆಪಿ ಆಳ್ವಿಕೆ ಅವಧಿಯಲ್ಲಿ ಹಲವಾರು ರಕ್ಷಣಾ ಯೋಜನೆಗಳು ಬೆಂಗಳೂರಿನಿಂದ ಕೈ ತಪ್ಪುತ್ತಿದೆ ಎಂದು ಬರೆದು ಕಿಡಿಕಾರಿದ್ದಾರೆ.

    ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, 21 ವರ್ಷಗಳಿಂದ ನಡೆಯುತ್ತಿದ್ದ ವೈಮಾನಿಕ ಪ್ರದರ್ಶನವನ್ನು ಕೇಂದ್ರ ಸರ್ಕಾರ ಏಕಾಏಕಿ ಉತ್ತರಪ್ರದೇಶದ ಲಕ್ನೋಗೆ ಸ್ಥಳಾಂತರಿಸುವುದಕ್ಕೆ ನಮಗೆ ತೀವ್ರ ಅಸಮಾಧಾನವಾಗಿದೆ. ಅಲ್ಲದೇ ಈ ಮೊದಲು ಖುದ್ದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ರವರ ಜೊತೆ ವೈಮಾನಿಕ ಪ್ರದರ್ಶನ ಸ್ಥಳಾಂತರಗೊಳ್ಳದಂತೆ ಮಾತುಕತೆ ನಡೆಸಿದ್ದರು ಎಂದು ತಿಳಿಸಿದರು.

    ಬಿಜೆಪಿ ಮಾಜಿ ಸಿಎಂಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ಸಚಿವರಾದ ಅನಂತಕುಮಾರ್ ರವರು ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಕೂಡಲೇ ಗಮನಹರಿಸಬೇಕು. ಕೇಂದ್ರ ಸಚಿವರು ಹಾಗೂ ಬಿಜೆಪಿ ಮುಖಂಡರು ಏರ್ ಶೋ ಕರ್ನಾಟಕಕ್ಕೆ ಮರಳಿ ಬರುವಂತೆ ಆಗ್ರಹಿಸಬೇಕು. ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಏರ್ ಶೋ ನಡೆಯುತ್ತ ಬಂದಿತ್ತು, 2019ರ ಫೆಬ್ರವರಿಯಲ್ಲಿ ನಡೆಯಬೇಕಿದ್ದ ವೈಮಾನಿಕ ಪ್ರದರ್ಶನಕ್ಕೆ ಬೆಂಗಳೂರಿನಲ್ಲಿ ವ್ಯಾಪಕ ವ್ಯವಸ್ಥೆಯನ್ನು ಸಹ ಈಗಾಗಲೇ ಕಲ್ಪಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ದಿಢೀರ್ ನಿರ್ಧಾರದಿಂದ ತೀವ್ರ ಬೇಸರವಾಗಿದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಆರೋಗ್ಯವಂತ ಮಗುವಿಗಾಗಿ ಸ್ವಂತ ಮಗಳನ್ನೇ ಕೊಂದು ಮನೆಯಲ್ಲೇ ಹೂತಿಟ್ರು!

    ಆರೋಗ್ಯವಂತ ಮಗುವಿಗಾಗಿ ಸ್ವಂತ ಮಗಳನ್ನೇ ಕೊಂದು ಮನೆಯಲ್ಲೇ ಹೂತಿಟ್ರು!

    ಲಕ್ನೋ: ಆರೋಗ್ಯವಂತ ಮಗುವನ್ನು ಪಡೆಯಲು ಮಂತ್ರವಾದಿಯ ಮಾತು ಕೇಳಿ ದಂಪತಿಯು ತಮ್ಮ 6 ವರ್ಷದ ಮಗಳನ್ನು ಕೊಂದು ಮನೆಯಲ್ಲಿ ಹೂತು ಹಾಕಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮೊರದಬಾದ್ ನಲ್ಲಿ ನಡೆದಿದೆ.

    6 ವರ್ಷದ ಬಾಲಕಿ ತಾರಾ ತನ್ನ ಪೋಷಕರಿಂದಲೇ ಹತ್ಯೆಗೀಡಾದ ದುರ್ದೈವಿ. ತಾರಾ ಹುಟ್ಟಿನಿಂದಲೂ ಅಪೌಷ್ಟಿಕತೆ ಹಾಗೂ ರಿಕೆಟ್ಸ್ ಕಾಯಿಲೆಯಿಂದ ಬಳಲುತ್ತಿದ್ದಳು. ಹೀಗಾಗಿ ಬಾಲಕಿಗೆ ಹಲವು ವರ್ಷಗಳಿಂದಲೂ ಚಿಕಿತ್ಸೆ ಕೊಡಿಸಿದರೂ ಗುಣಮುಖವಾಗಿರಲಿಲ್ಲ. ಇದರಿಂದ ರೋಸಿಹೋದ ಪೋಷಕರು ಕೊನೆಗೆ ಮಂತ್ರವಾದಿಯ ಮೊರೆ ಹೋಗಿದ್ದರು.

    ಮಂತ್ರವಾದಿಯು ದಂಪತಿಗೆ ನಿಮ್ಮ ಬದುಕಿರುವ ಮಗಳನ್ನು ಕೊಂದು ಮನೆಯಲ್ಲಿಯೇ ಹೂತು ಹಾಕಿದರೆ, ಮುಂದೆ ನಿಮಗೆ ಆರೋಗ್ಯವಂತ ಮಗು ಹುಟ್ಟುತ್ತದೆ ಎಂದು ಸಲಹೆ ನೀಡಿದ್ದಾನೆ. ಈತನ ಸಲಹೆಯಿಂದ ಪ್ರಭಾವಿತರಾದ ದಂಪತಿ ತಮ್ಮ 6 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದಿದ್ದಾರೆ. ಅಲ್ಲದೇ ಬಾಲಕಿಯನ್ನು ಹೂತುಹಾಕುವ ವೇಳೆ ನೆರೆಮನೆಯ ಸದಸ್ಯರು ನೋಡಿ ಪೊಲೀಸರಿಗೆ ವಿಷಯ ಮುಟ್ಟಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿಯ ಮೃತದೇಹವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬಾಲಕಿಯು ಮೃತಪಟ್ಟಾಗ ಆಕೆ ಯಾವುದೇ ಆಹಾರವನ್ನು ಸೇವಿಸಿರಲಿಲ್ಲ ಹಾಗೂ ತುಂಬಾ ಒದ್ದಾಡಿ ಮೃತಪಟ್ಟಿದ್ದಾಳೆಂದು ವರದಿ ಬಂದಿದೆ.

    ಘಟನೆ ಕುರಿತು ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿ ರವೀಂದ್ರ ಗೌರ್, ಬಾಲಕಿಯು ಅಪೌಷ್ಠಿಕ ಖಾಯಿಲೆಯಿಂದ ಬಳಲುತ್ತಿದ್ದರಿಂದ ಮಂತ್ರವಾದಿಯ ಮಾತನ್ನು ಕೇಳಿ, ಪೋಷಕರೆ ತಮ್ಮ ಮಗಳನ್ನು ಹತ್ಯೆ ಮಾಡಿದ್ದಾರೆ. ಘಟನೆ ಸಂಬಂಧ ಪೋಷಕರನ್ನು ಬಂಧಿಸಿದ್ದು, ಕೃತ್ಯಕ್ಕೆ ಸಹಕರಿಸಿದ ಆಕೆಯ ಅಜ್ಜಿಯನ್ನು ಸಹ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಫಸ್ಟ್ ನೈಟ್‍ನಲ್ಲಿ ಪತ್ನಿಯ ಅಶ್ಲೀಲ ಫೋಟೋ ತೆಗೆದು ಫೇಸ್‍ಬುಕ್‍ನಲ್ಲಿ ಪೋಸ್ಟ್!

    ಫಸ್ಟ್ ನೈಟ್‍ನಲ್ಲಿ ಪತ್ನಿಯ ಅಶ್ಲೀಲ ಫೋಟೋ ತೆಗೆದು ಫೇಸ್‍ಬುಕ್‍ನಲ್ಲಿ ಪೋಸ್ಟ್!

    ಲಕ್ನೋ: ತನ್ನ ಪತ್ನಿಯನ್ನು ಬ್ಲಾಕ್ ಮೇಲ್ ಮಾಡಲು ಪತಿಯೊಬ್ಬ ಫಸ್ಟ್ ನೈಟ್‍ನಲ್ಲಿ ಪತ್ನಿಯ ಅಶ್ಲೀಲ ಫೋಟೋ ತೆಗೆದು ಅದನ್ನು ಫೇಸ್‍ಬುಕ್‍ನಲ್ಲಿ ಹಾಕಿದ ಘಟನೆ ಉತ್ತರ ಪ್ರದೇಶದ ಮೀರತ್‍ನಲ್ಲಿ ನಡೆದಿದೆ.

    ವರದಿಗಳ ಪ್ರಕಾರ ಮಹಿಳೆ 2 ತಿಂಗಳ ಹಿಂದೆ ಮದುವೆಯಾಗಿದ್ದಳು. ಆದರೆ ಪತಿ ಹಾಗೂ ಆತನ ಕುಟುಂಬದವರು ವರದಕ್ಷಿಣೆಯಿಂದ ತೃಪ್ತಿಯಾಗಿರಲಿಲ್ಲ. ಹಾಗಾಗಿ ಪತಿ ಬ್ಲಾಕ್‍ಮೇಲ್ ಮಾಡಲು ತನ್ನ ಫಸ್ಟ್ ನೈಟ್‍ನಲ್ಲಿ ಪತ್ನಿಯ ಅಶ್ಲೀಲ ಫೋಟೋಗಳನ್ನು ತೆಗೆದಿದ್ದಾನೆ.

    ಪತಿ ತನ್ನ ಫಸ್ಟ್ ನೈಟ್‍ನಲ್ಲಿ ಕಿಟಕಿಯಲ್ಲಿ ಮೊಬೈಲ್ ಬಚ್ಚಿಟ್ಟು ಪತ್ನಿಯ ಅಶ್ಲೀಲ ಫೋಟೋ ತೆಗೆದಿದ್ದಾನೆ. ನಂತರ ಆ ಫೋಟೋಗಳನ್ನು ಪತ್ನಿಗೆ ತೋರಿಸಿ ಆಕೆಯನ್ನು ಬ್ಲಾಕ್‍ಮೇಲ್ ಮಾಡಿ ಆಕೆಯನ್ನು ಮನೆಯಿಂದ ಹೊರ ಹಾಕಲು ಪ್ಲಾನ್ ಮಾಡಿದ್ದನು.

    ಫಸ್ಟ್ ನೈಟ್ ಮರುದಿನ ಪತಿ ಮತ್ತಷ್ಟು ವರದಕ್ಷಿಣೆ ತರಲು ಪತ್ನಿಗೆ ಹೇಳಿದ್ದನು. ಅಲ್ಲದೇ ತಮ್ಮ ವಿರುದ್ಧ ಪೊಲೀಸರ ಹತ್ತಿರ ದೂರು ನೀಡಿದ್ದರೆ, ಈ ಅಶ್ಲೀಲ ಫೋಟೋಗಳನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡುವುದ್ದಾಗಿ ಬೆದರಿಕೆ ಹಾಕಿದ್ದನು.

    ತನ್ನ ಪತಿ ಬ್ಲಾಕ್‍ಮೇಲ್ ಮಾಡುತ್ತಿರುವ ವಿಷಯವನ್ನು ಮಹಿಳೆ ತನ್ನ ತಂದೆಯ ಬಳಿ ಹಂಚಿಕೊಂಡಿದ್ದಳು. ಇದನ್ನು ಕೇಳಿ ಮಹಿಳೆ ತಂದೆ ಕೂಡ ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ಸದ್ಯ ಮಹಿಳೆ ಈಗ ತನ್ನ ತವರು ಮನೆಯಲ್ಲಿ ವಾಸಿಸುತ್ತಿದ್ದಾಳೆ.

    ಮಹಿಳೆ ತನ್ನ ಗಂಡನ ಮನೆಯವರಿಗಾಗಿ ಒಂದೂವರೆ ತಿಂಗಳು ಕಾಯುತ್ತಿದ್ದಳು. ಆದರೆ ಅವರು ಯಾವುದೇ ಪ್ರತಿಕ್ರಿಯೇ ನೀಡದೇ ಇದ್ದಾಗ ಪರಿವಾರ ಕೇಂದ್ರಕ್ಕೆ ಹೋಗಿ ತನ್ನ ನೋವನ್ನು ಹೇಳಿಕೊಂಡಿದ್ದಾಳೆ. ಇದರಿಂದ ಕೋಪಗೊಂಡ ಪತಿ ಫೇಸ್‍ಬುಕ್‍ನಲ್ಲಿ ತನ್ನ ಪತ್ನಿಯ ಅಶ್ಲೀಲ ಫೋಟೋ ಹಾಕಿ, ನಿಂದಿಸಿ ಪೋಸ್ಟ್ ಮಾಡಿದ್ದಾನೆ.

    ಸದ್ಯ ಮಹಿಳೆ ತನ್ನ ಪತಿ ವಿರುದ್ಧ ದೂರು ದಾಖಲಿಸಿದ್ದು, ಅವರು ಪ್ರಕರಣದ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ಆಶ್ವಾಸನೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಬೆಂಗ್ಳೂರಿನಲ್ಲಿ ನಡೆಯುತ್ತಿದ್ದ ಏರ್ ಶೋ ಲಕ್ನೋಗೆ ಶಿಫ್ಟ್!

    ಬೆಂಗ್ಳೂರಿನಲ್ಲಿ ನಡೆಯುತ್ತಿದ್ದ ಏರ್ ಶೋ ಲಕ್ನೋಗೆ ಶಿಫ್ಟ್!

    ಬೆಂಗಳೂರು: ಪ್ರತಿ ಎರಡು ವರ್ಷಕೊಮ್ಮೆ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಏರ್ ಶೋ ಉತ್ತರ ಪ್ರದೇಶ ಲಕ್ನೋಗೆ ಸ್ಥಳಾಂತರವಾಗುವ ಸಾಧ್ಯತೆಯಿದೆ. ಈ ಬಗ್ಗೆ ಅಧಿಕೃತವಾಗಿ ನಿರ್ಧಾರ ಪ್ರಕಟವಾಗದೇ ಇದ್ದರೂ ಲಕ್ನೋಗೆ ಸ್ಥಳಾಂತರ ಮಾಡಲು ಸಿದ್ಧತೆ ನಡೆಯುತ್ತಿದೆ ಎಂದು ಮಾಧ್ಯಮವೊಂದು ವರದಿ ಪ್ರಕಟಿಸಿದೆ.

    1996ರಿಂದ ಪ್ರತಿ ಎರಡು ವರ್ಷಕ್ಕೊಮ್ಮೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಯುತಿತ್ತು. ಆದರೆ 2019ರಲ್ಲಿ ನಡೆಯಲಿರುವ ಏರ್ ಶೋವನ್ನು ಲಕ್ನೋದಲ್ಲಿ ನಡೆಸಲು ಕೇಂದ್ರ ಸರ್ಕಾರ ಮತ್ತು ರಕ್ಷಣಾ ಇಲಾಖೆ ಸಿದ್ಧತೆ ನಡೆಸುತ್ತಿದೆ.

    ಸ್ಥಳಾಂತರಗೊಳ್ಳುತ್ತಿರುವ ವಿಚಾರ ವಾಯುಸೇನೆ ಆಧಿಕಾರಿಗಳಿಗೆ ಆಶ್ಚರ್ಯ ಮೂಡಿಸಿದೆ. ಲಕ್ನೋದಲ್ಲಿರುವ ಭಕ್ಷಿ ಕ ತಲಾಬ್ ವಾಯುನೆಲೆ ಸಣ್ಣದಾಗಿದ್ದು, ಇಷ್ಟು ದೊಡ್ಡ ಮಟ್ಟದ ಶೋವನ್ನು ಹೇಗೆ ಆಯೋಜನೆ ಮಾಡಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎಂದು ವರದಿಯಾಗಿದೆ.

    ಯಾವ ಕಾರಣಕ್ಕಾಗಿ ಏರ್ ಶೋ ಸ್ಥಳಾಂತರವಾಗುತ್ತದೆ ಎನ್ನುವುದು ತಿಳಿದು ಬಂದಿಲ್ಲ. ಏರ್ ಶೋ ಸ್ಥಳಾಂತರವಾಗುತ್ತಿರುವ ವಿಚಾರ ತಿಳಿದು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರದ ವಿರುದ್ಧ ಕನ್ನಡಿಗರು ಟೀಕೆ ವ್ಯಕ್ತಪಡಿಸುತ್ತಿದ್ದಾರೆ.

    ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಮಾಡಿದ್ದು ಸರಿಯೇ? ಬೆಂಗಳೂರಿನಿಂದ ಲಕ್ನೋಗೆ ಏರ್ ಶೋ ಸ್ಥಳಾಂತರ ಮಾಡುತ್ತಿರೋದು ನ್ಯಾಯಯುತವೇ? ನಾಡು-ನುಡಿ ರಕ್ಷಣೆಗೆ ನಿಲ್ಲಬೇಕಾದ ನಿರ್ಮಲಾ ಸೀತಾರಾಮನ್ ಒತ್ತಡಕ್ಕೆ ಮಣಿದ್ರಾ? ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಒತ್ತಡಕ್ಕೆ ಕೇಂದ್ರ ತಲೆ ಬಾಗುತ್ತಿದ್ಯಾ? ರಾಜ್ಯದ ಸಂಸದರು, ಕೇಂದ್ರ ಸಚಿವರುಗಳ ಮೌನ ಸರಿಯೇ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

    ಈ ಹಿಂದೆ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್ ಅವರು ಏರ್ ಶೋವನ್ನು ಗೋವಾದಲ್ಲಿ ನಡೆಸಲು ಉತ್ಸುಕರಾಗಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗದ ಬಳಿಕ ಕನ್ನಡಿಗರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ಈ ಮನೋಹರ್ ಪರಿಕ್ಕರ್ ಅವರೇ ಗೋವಾದಲ್ಲಿ ಏರ್ ಶೋ ನಡೆಯುವ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿ ವಿಚಾರವನ್ನು ತಣ್ಣಗೆ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಅಳುತ್ತಿದ್ದ ಮಗುವಿಗೆ ಹಸೆಮಣೆಯಿಂದ ಎದ್ದು ಬಂದು ಎದೆ ಹಾಲುಣಿಸಿದ ವಧು!

    ಅಳುತ್ತಿದ್ದ ಮಗುವಿಗೆ ಹಸೆಮಣೆಯಿಂದ ಎದ್ದು ಬಂದು ಎದೆ ಹಾಲುಣಿಸಿದ ವಧು!

    ಲಕ್ನೋ: ಸಾಮೂಹಿಕ ವಿವಾಹವೊಂದರಲ್ಲಿ ಹಸೆಮಣೆ ಮೇಲೆ ಕುಳಿತ್ತಿದ್ದ ಮಧು ಮಗಳು ಅಳುತ್ತಿರುವ ಮಗುವಿಗೆ ಎದ್ದು ಬಂದು ಎದೆಹಾಲು ಉಣಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಬುಧವಾರದಂದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಮ್ಮುಖದಲ್ಲಿ ಸಾಮೂಹಿಕ ವಿವಾಹ ಯೋಜನೆಯನ್ನು ಕುಶೀನಗರದಲ್ಲಿ ಆಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಹಸೆಮಣೆ ಮೇಲೆ ಕುಳಿತ ವಧು ತನ್ನ ಅಳುತ್ತಿದ್ದ ಮಗುವಿಗೆ ಎದೆಹಾಲುಣಿಸಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.

    ಈ ದಂಪತಿ ದೇವತಾಹಾದ ನಿವಾಸಿಯಾದ ಮಮ್ತಾ, ಖುನು ಚಪ್ರಾ ಪ್ರದೇಶದ ನಿವಾಸಿಯಾದ ಪ್ರದೀಪ್ ಎಂದು ಗುರುತಿಸಲಾಗಿದ್ದು, ಇವರಿಬ್ಬರಿಗೂ ಮದುವೆಯಾಗಿ 2 ವರ್ಷಗಳಾಗಿತ್ತು. ಮಂಟಪದಲ್ಲಿ ವಧುವರ ಹಸೆಮಣೆ ಮೇಲೆ ಕುಳಿತುಕೊಂಡಿದ್ದಾರೆ ಆ ವೇಳೆ ಮಂಟಪದ ಬಳಿ ವ್ಯಕ್ತಿ ಬಳಿ ಇದ್ದ ಮಗುವೊಂದು ಜೋರಾಗಿ ಅಳಲು ಪ್ರಾರಂಭಿಸುತ್ತದೆ. ಆಗ ವಧು ಕರುಳಿನ ಕುಡಿಯ ಅಳಲನ್ನು ನೋಡಲಾರದೇ ಎದ್ದು ಹೋಗಿ ಮಗುವಿಗೆ ಎದೆಹಾಲು ಉಣಿಸುತ್ತಾಳೆ ಅದನ್ನು ಕಂಡ ಜನರಿಗೆ ಈ ದಂಪತಿಗೆ ಮದುವೆಯಾಗಿ ಮಗುವಿದೆ ಎಂಬ ವಿಚಾರ ತಿಳಿಯುತ್ತದೆ.

    ಕುಶೀನಗರದ ಸಮಾಜಕಲ್ಯಾಣ ಅಧಿಕಾರಿ ಟಿ.ಕೆ.ಸಿಂಗ್ ಈ ವಿಚಾರ ಕುರಿತು ತನಿಖೆ ನಡೆಸಿದಾಗ ದಂಪತಿಗಳು ಹಣ ಪಡೆಯಲು ಹೀಗೆ ಮಾಡಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ. ನಂತರ ಅವರ ಮೇಲೆ ಎಫ್‍ಐಆರ್ ದಾಖಲು ಮಾಡಲಾಗುತ್ತದೆ.

    ಸಾಮೂಹಿಕ ವಿವಾಹದಲ್ಲಿ ಮದುವೆಯಾದರೆ 20 ಸಾವಿರ ರೂ. ಹಣವನ್ನು ವಧುವಿನ ಖಾತೆಗೆ ಜಮೆಮಾಡಲಾಗುತ್ತದೆ. ಮತ್ತು ದಂಪತಿಗೆ 10 ಸಾವಿರ ರೂ. ಮೌಲ್ಯದ ಉಡುಗೊರೆ ನೀಡಲಾಗುತ್ತದೆ. ವಿವಾಹ ಕಾರ್ಯಕ್ರಮವನ್ನು ಆಯೋಜಿಸಿದವರಿಗೆ 6 ಸಾವಿರ ರೂ. ಹಣವನ್ನು ನೀಡಲಾಗುತ್ತದೆ.

  • ಪತ್ನಿ ನೇಣು ಹಾಕಿಕೊಳ್ಳುವಾಗ ಲೈವ್ ವಿಡಿಯೋ ಮಾಡಿದ ಪತಿ!

    ಪತ್ನಿ ನೇಣು ಹಾಕಿಕೊಳ್ಳುವಾಗ ಲೈವ್ ವಿಡಿಯೋ ಮಾಡಿದ ಪತಿ!

    ಲಕ್ನೋ: ಗಂಡನ ಮನೆಯವರ ಕಿರುಕುಳ ತಾಳಲಾರದೇ ಪತ್ನಿ ನೇಣಿಗೆ ಶರಣಾಗುತ್ತಿದ್ದಾಗ ಪತಿ ವಿಡಿಯೋ ಮಾಡಿದ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ.

    ಗೀತಾ ಆತ್ಮಹತ್ಯೆಗೆ ಶರಣಾದ ಮಹಿಳೆ. ಗೀತಾ 2015ರ ಏಪ್ರಿಲ್ 22ರಂದು ರಾಜ್‍ಕುಮಾರ್ ಜೊತೆ ಮದುವೆಯಾಗಿದ್ದಳು. ಮದುವೆ ಆಗಿ ಕೆಲವು ದಿನಗಳಲ್ಲಿ ಗೀತಾಗೆ ಆಕೆಯ ಪತಿ ಹಾಗೂ ಆತನ ಮನೆಯವರು ಒಂದು ಕಾರನ್ನು ವರದಕ್ಷಿಣೆ ಆಗಿ ನೀಡಬೇಕೆಂದು ಕಿರುಕುಳ ನೀಡುತ್ತಿದ್ದರು. ಅಲ್ಲದೇ ಈ ವಿಷಯಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಗೀತಾ ಹಾಗೂ ಪತಿ ಮನೆಯವರ ನಡುವೆ ಜಗಳ ಕೂಡ ನಡೆಯುತ್ತಿತ್ತು.

    ಪತಿ ಹಾಗೂ ಆತನ ಮನೆಯವರ ವರದಕ್ಷಿಣೆಯ ಕಿರುಕುಳ ತಾಳಲಾರದೇ ಗೀತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗೀತಾ ಆತ್ಮಹತ್ಯೆಗೆ ಶರಣಾಗುವಾಗ ರಾಜ್‍ಕುಮಾರ್ ಆಕೆಯ ರೂಂ ಹೊರಗೆ ನಿಂತು ಕಿಟಕಿಯಿಂದ ಲೈವ್ ವಿಡಿಯೋ ಮಾಡಿದ್ದಾನೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಗೀತಾ ಆತ್ಮಹತ್ಯೆ ಮಾಡಿಕೊಳ್ಳುವಾಗ ಆಕೆಯ ಗಂಡನ ಮನೆಯವರು ಹೊರಗೆ ನಿಂತು ಕಿರುಚಾಡುತ್ತಿದ್ದರೇ ಹೊರತು ಬಾಗಿಲು ಒಡೆಯಲು ಪ್ರಯತ್ನಿಸಲಿಲ್ಲ ಎಂದು ವರದಿಯಾಗಿದೆ.

    ಗೀತಾ ನೇಣಿಗೆ ಶರಣಾಗಿರುವ ವಿಡಿಯೋ 12 ನಿಮಿಷ 14 ಸೆಕೆಂಡ್‍ಗಳಿದೆ. ಈ ವಿಡಿಯೋದಲ್ಲಿ ಆಕೆಯ ಅತ್ತೆ ಹಾಗೂ ನಾದಿನಿ ಪ್ರಮಾಣ ಮಾಡಿ ಆಕೆ ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆಯಲು ಪ್ರಯತ್ನಿಸಿದ್ದರು. ಆದರೆ ಬಾಗಿಲು ಒಡೆದು ಆಕೆಯನ್ನು ರಕ್ಷಿಸಲು ಯಾರೂ ಮುಂದಾಗಲಿಲ್ಲ. ಪತಿ ವಿಡಿಯೋ ಮಾಡುತ್ತಿರುವುದು ಗಮನಿಸಿದ ಗೀತಾಗೆ ಆತ್ಮಹತ್ಯೆ ಮಾಡಿಕೊಳ್ಳುವುದ್ದಕ್ಕೆ ಪ್ರೇರೆಪಿಸುತ್ತಿತ್ತು.

    ಈ ಘಟನೆ ನಡೆದ ಮೇಲೆ ಪೊಲೀಸರು ಹಾಗೂ ಗೀತಾ ಪೋಷಕರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಗೀತಾ ಪೋಷಕರು ಆಕೆಯ ಪತಿ ಹಾಗೂ ಆತನ ಮನೆಯವರ ಮೇಲೆ ವರದಕ್ಷಿಣೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಕೇಸ್ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಪತಿ ರಾಜ್‍ಕುಮಾರ್ ಹಾಗೂ ಅತ್ತೆ ವಿಮಲಾರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಈ ವಿಡಿಯೋ ವೈರಲ್ ಆದ ಮೇಲೆ ಪೊಲೀಸರು ಮತ್ತೊಮ್ಮೆ ಈ ಕೇಸ್ ಬಗ್ಗೆ ವಿಚಾರಣೆ ನಡೆಸಲಿದ್ದಾರೆ.

  • 4 ವರ್ಷದ ಬಳಿಕ ತನ್ನ ಕೊನೆಯ ನಿಲ್ದಾಣ ತಲುಪಿದ ಗೂಡ್ಸ್ ರೈಲ್ವೆಯ ಬೋಗಿ

    4 ವರ್ಷದ ಬಳಿಕ ತನ್ನ ಕೊನೆಯ ನಿಲ್ದಾಣ ತಲುಪಿದ ಗೂಡ್ಸ್ ರೈಲ್ವೆಯ ಬೋಗಿ

    ಲಕ್ನೋ: 10 ಲಕ್ಷ ಮೌಲ್ಯದ ಗೊಬ್ಬರ ಸಾಗಿಸುತ್ತಿದ್ದ ವ್ಯಾಗನ್ (ರೈಲು ಬೋಗಿ) ನಾಲ್ಕು ವರ್ಷಗಳ ನಂತರ ಸುಮಾರು 1,400 ಕಿಮೀ ವ್ಯಾಪ್ತಿಯಲ್ಲಿ ಉತ್ತರ ಪ್ರದೇಶದ ಬಸ್ತಿಯನ್ನು ತಲುಪಿದೆ.

    2014 ರಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ಹೊರಟ ಸರಕು ಸಾಗಿಸುವ ರೈಲು, 2018ರಲ್ಲಿ ಉತ್ತರ ಪ್ರದೇಶದ ಬಸ್ತಿಗೆ ಬಂದು ತಲುಪಿದೆ.

    ಇಂಡಿಯನ್ ಪೊಟಾಶ್ ಕಂಪೆನಿಯು #107462 ನಂಬರಿನ ಬೋಗಿಯನ್ನು ಬುಕ್ ಮಾಡಿಕೊಂಡಿತ್ತು. ಬೋಗಿಯಲ್ಲಿ 10 ಲಕ್ಷ ರೂ. ಮೌಲ್ಯದ ರಸಗೊಬ್ಬರವನ್ನು ವಿಶಾಖಪಟ್ಟಣಂ ಬಂದರನಿಂದ ಉತ್ತರ ಪ್ರದೇಶದ ಬಸ್ತಿಯಲ್ಲಿರುವ ರಾಮಚಂದ್ರ ಗುಪ್ತ ಎಂಬವರಿಗೆ ಲೋಡ್ ಮಾಡಿ ಸಾಗಿಸಲಾಗಿತ್ತು. ಆದರೆ ಎಷ್ಟೋ ತಿಂಗಳಾದರೂ ವ್ಯಾಗನ್ ತನ್ನ ಗಮ್ಯಸ್ಥಾನವನ್ನು ತಲುಪದ ಕಾರಣ ಗುಪ್ತಾರವರು ರೈಲ್ವೇ ಇಲಾಖೆಯಲ್ಲಿ ದೂರು ನೀಡಿದರು.

    ಗುಪ್ತ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಆದ್ರೆ ಬುಧವಾರ ನಾಲ್ಕು ವರ್ಷಗಳ ಹಿಂದೆ ಬುಕ್ ಮಾಡಿದ್ದ ವ್ಯಾಗನ್ ತನ್ನ ಕೊನೆಯ ನಿಲ್ದಾಣವನ್ನು ತಲುಪಿದೆ. ಆದರೆ ವ್ಯಾಗನ್ ನಲ್ಲಿದ್ದ ಸರಕನ್ನು ಗುಪ್ತಾ ಪಡೆಯಲು ಹಿಂದೇಟು ಹಾಕಿದ್ದಾರೆ. ಸರಕುಗಳೆಲ್ಲಾ ಹಾನಿಗೊಳಗಾಗಿದ್ದು, ನನಗೆ ಲಕ್ಷಾಂತರ ರೂ. ನಷ್ಟವಾಗಿದೆ. ಈ ಸಂಬಂಧ ಗುಪ್ತಾರಿಗೆ ಆದ ನಷ್ವವನ್ನು ರೈಲ್ವೆ ಇಲಾಖೆ ಭರಿಸಲಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

    ದೂರು ದಾಖಲಿಸಿಕೊಂಡ ರೈಲ್ವೇ ಅಧಿಕಾರಿಗಳು ವ್ಯಾಗನ್ ಅನ್ನು ಹುಡುಕಲು ಪ್ರಯತ್ನಿಸಿದರೂ ಸಿಕ್ಕಿರಲಿಲ್ಲ. ವ್ಯಾಗನ್ ಕೆಲವು ಸರಿ ತಾಂತ್ರಿಕ ಸಮಸ್ಯೆಯಿಂದ ಬೇರ್ಪಡುತ್ತವೆ. ಅದೇ ರೀತಿ ಇದು ಆಗಿರಬಹುದು, ಯಾರು ಇದಕ್ಕೆ ಹೊಣೆಗಾರರಾಗಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಂದು ರೈಲ್ವೆ ಅಧಿಕಾರಿ ಸಂಜಯ್ ಯಾದವ್ ತಿಳಿಸಿದ್ದಾರೆ.

  • ಸಹೋದರಿಯೆಂದು ತಿಳಿಯದೇ 6 ವರ್ಷ ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿದ ಸಹೋದರ!

    ಸಹೋದರಿಯೆಂದು ತಿಳಿಯದೇ 6 ವರ್ಷ ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿದ ಸಹೋದರ!

    ಲಕ್ನೋ: ಯುವಕನೊರ್ವ ತನ್ನ ಸಹೋದರಿಯೆಂದು ತಿಳಿಯದೇ 6 ವರ್ಷ ಪ್ರೀತಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿದ ಘಟನೆಯೊಂದು ಉತ್ತರ ಪ್ರದೇಶದ ಬಿಲಾರಿಯಲ್ಲಿ ನಡೆದಿದೆ.

    6 ವರ್ಷಗಳಿಂದ ಆಕೆ ತನ್ನ ಸಹೋದರಿ ಎಂಬುದು ತಿಳಿಯದೇ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ತನ್ನ ಸಹೋದರಿಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯಿಂದ ಬೇಸರಗೊಂಡು ಮತ್ತೊಂದು ಯುವತಿಯ ಜೊತೆ ಮದುವೆಯಾಗಲು ಯುವಕ ನಿರ್ಧರಿಸಿದ್ದನು. ಈ ವಿಷಯ ತಿಳಿಯುತ್ತಿದ್ದಂತೆ ಯುವತಿ ಪೊಲೀಸ್ ಠಾಣೆಗೆ ಹೋಗಿ ಆ ಯುವಕನೊಂದಿಗೆ ಮದುವೆ ಮಾಡಿಸುವುದ್ದಾಗಿ ಹಠ ಹಿಡಿದ್ದಳು.

    ಯುವತಿ ಮಾತನ್ನು ಕೇಳಿ ಪೊಲೀಸರು ಯುವಕನ ಬಗ್ಗೆ ವಿಚಾರಿಸಿದ್ದಾಗ ಆ ಯುವತಿ ಯುವಕನಿಗೆ ಚಿಕ್ಕಮ್ಮನ ಮಗಳು ಆಗಬೇಕು ಎಂಬ ವಿಷಯ ಗೊತ್ತಾಗುತ್ತದೆ. ಇಬ್ಬರು 6 ವರ್ಷದಿಂದ ಪ್ರೀತಿಸಿ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದರು ಎಂಬ ವಿಷಯ ಕೂಡ ತಿಳಿದು ಪೊಲೀಸರು ದಂಗಾದರು. ಅಲ್ಲದೇ ಆ ಯುವಕ ಪ್ರೀತಿ ಹೆಸರಲ್ಲಿ ಯುವತಿ ಜೊತೆ ನಾಟಕವಾಡುತ್ತಿದ್ದನು ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ.

    ಯುವಕ ತನ್ನ ಚಿಕ್ಕಮ್ಮನ ಮಗಳನ್ನು 6 ವರ್ಷಗಳಿಂದ ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ಪದೇ ಪದೇ ದೈಹಿಕ ಸಂಪರ್ಕ ಬೆಳೆಸುತ್ತಿದ್ದನು. ಈ ವಿಷಯ ತಿಳಿದ ಯುವಕನ ಕುಟುಂಬದವರು ಆತನ ಮದುವೆಯನ್ನು ಬೇರೆ ಯುವತಿಯ ಜೊತೆ ಮಾಡಲು ನಿರ್ಧರಿಸಿದ್ದರು. ತನ್ನ ಪ್ರಿಯಕರ ಬೇರೆ ಯುವತಿಯ ಜೊತೆ ಮದುವೆಯಾಗುತ್ತಿರುವುದ್ದನ್ನು ತಿಳಿದು ಯುವತಿ ಪೊಲೀಸ್ ಠಾಣೆ ಮಟ್ಟಿಲೇರಿದ್ದಾಳೆ.

    ಯುವಕ 3 ದಿನ ಹಿಂದೆಯೇ ತನ್ನ ಮನೆಯನ್ನು ಬಿಟ್ಟು ಓಡಿ ಹೋಗಿದ್ದನು. ಆಗ ಯುವತಿ ಆತನ ಮನೆ ತಲುಪಿದ್ದಾಳೆ. ಅಲ್ಲದೇ ಯುವತಿ ತನ್ನ ಪ್ರಿಯಕರ ಕಾಣೆಯಾಗಿದ್ದಾನೆ ಎಂದು ದೂರನ್ನು ಕೂಡ ನೀಡಿದ್ದಾಳೆ. ಯುವತಿಯ ದೂರು ದಾಖಲಿಸಿಕೊಂಡ ಪೊಲೀಸರು ಆ ಯುವಕನನ್ನು ಹುಡುಕಿದ್ದಾರೆ. ಬಳಿಕ ಇಬ್ಬರ ಕುಟುಂಬದವರು ಇಬ್ಬರಿಗೂ ಮದುವೆ ಮಾಡಿಸುವುದಾಗಿ ಹೇಳಿ ಆ ಯುವತಿಯನ್ನು ಆಕೆಯ ಮನೆಗೆ ಕಳುಹಿಸಿಕೊಟ್ಟರು.

    ಯುವತಿ ಮರುದಿನ ತನ್ನ ಮದುವೆಗೆಂದು ಕೋರ್ಟ್ ತಲುಪಿದ್ದಾಗ ಯುವಕ ಹಾಗೂ ಆತನ ಕುಟುಂಬದವರು ಬರಲಿಲ್ಲ. ನಂತರ ಯುವತಿ ಕೋಪಗೊಂಡು ಯುವಕನ ಮನೆ ತಲುಪಿದ್ದಾಗ ಆತನ ಮನೆಯಲ್ಲಿ ಮದುವೆಯ ಎಲ್ಲ ತಯಾರಿ ನಡೆದಿದ್ದು, ಯುವಕ ಬೇರೆ ಯುವತಿಯ ಜೊತೆ ಮದುವೆಯಾಗಲು ಸಿದ್ಧನಿದ್ದನು. ತಕ್ಷಣ ಯುವತಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ.

    ಪೊಲೀಸರು ಸ್ಥಳಕ್ಕೆ ತಲುಪುವ ಮೊದಲೇ ಯುವಕನ ಕುಟುಂಬದವರು ಆತನ ಮದುವೆಯನ್ನು ನಿಲ್ಲಿಸಿ ಮನೆಯಿಂದ ಓಡಿ ಹೋಗಲು ಸಹಾಯ ಮಾಡಿದ್ದಾರೆ. ಆ ಯುವಕನನ್ನು ಹುಡುಕಿ ಕೊಡುವುದಾಗಿ ಯುವತಿ ಪೊಲೀಸರ ಹತ್ತಿರ ಹಠ ಮಾಡುತ್ತಿದ್ದಾಳೆ. ತನ್ನ ಮದುವೆ ಆ ಯುವಕನ ಜೊತೆ ಆಗಲಿಲ್ಲವೆಂದರೆ ಆತ್ಮಹತ್ಯೆ ಮಾಡಿಕೊಳ್ಳುವುದ್ದಾಗಿ ಯುವತಿ ಪೊಲೀಸರ ಹತ್ತಿರ ಹೇಳಿದ್ದಾಳೆ.

  • ವೈರಲ್ ಆಯ್ತು ಜಾಕಿ ಶ್ರಾಫ್ ಟ್ರಾಫಿಕ್ ಕ್ಲಿಯರ್: ವಿಡಿಯೋ ನೋಡಿ

    ವೈರಲ್ ಆಯ್ತು ಜಾಕಿ ಶ್ರಾಫ್ ಟ್ರಾಫಿಕ್ ಕ್ಲಿಯರ್: ವಿಡಿಯೋ ನೋಡಿ

    ಲಕ್ನೋ: ಬಾಲಿವುಡ್‍ನ ಹಿರಿಯ ನಟ ಜಾಕಿ ಶ್ರಾಫ್ ರವರು ಸ್ವತಃ ರಸ್ತೆಗಿಳಿದು ಟ್ರಾಫಿಕ್ ಕ್ಲಿಯರ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

    ಬಾಲಿವುಡ್ ನ ಹಿರಿಯ ನಟರಾದ 61 ವರ್ಷದ ಜಾಕಿ ಶ್ರಾಫ್ ರವರು ಲಕ್ನೋ ದ ಜನದಟ್ಟಣೆ ಪ್ರದೇಶದಲ್ಲಿ ಸಂಚಾರ ಪೊಲೀಸರ ರೀತಿ ರಸ್ತೆಗಿಳಿದು ವಾಹನ ದಟ್ಟಣೆಯಿಂದ ಕೂಡಿದ್ದ ರಸ್ತೆಯನ್ನು ಸಂಚಾರಕ್ಕೆ ಮುಕ್ತ ಮಾಡಿ ಅಲ್ಲಿಂದ ತಮ್ಮ ಕಾರನ್ನು ಏರಿ ತೆರಳಿದ್ದಾರೆ.

    ಈ ವಿಡಿಯೋವನ್ನು ಜಾಕಿ ಶ್ರಾಫ್ ಕಾರಿನಲ್ಲಿದ್ದವರು ಸೆರೆ ಹಿಡಿದಿದ್ದು, ನಂತರ ಜಾಕಿಶ್ರಾಫ್ ರವರು ತಮ್ಮ ಟ್ವಿಟ್ಟರ್ ನಲ್ಲಿ ಲಕ್ನೋ ಟ್ರಾಫಿಕ್ ಕಂಟ್ರೋಲ್ ಎಂದು ಬರೆದು ತಮ್ಮ ವಿಡಿಯೋ ಅಪ್ಲೋಡ್ ಮಾಡಿಕೊಂಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದು, ನಟ ಜಾಕಿ ಶ್ರಾಫ್ ರವರ ಸಾಮಾಜಿಕ ಕಳಕಳಿಗೆ ಲಕ್ಷಾಂತರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

     

  • ರೈಲ್ವೆ ನಿಲ್ದಾಣದಲ್ಲಿ ಬರೋಬ್ಬರಿ 2 ಕೋಟಿ ರೂ. ಪತ್ತೆ

    ರೈಲ್ವೆ ನಿಲ್ದಾಣದಲ್ಲಿ ಬರೋಬ್ಬರಿ 2 ಕೋಟಿ ರೂ. ಪತ್ತೆ

    ಲಕ್ನೋ: ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ತಂಡವು ಮುಘಲ್ಸಾರೈ ರೈಲ್ವೆ ನಿಲ್ದಾಣದಲ್ಲಿ ಕಾರ್ಯಚರಣೆ ಮಾಡುವ ವೇಳೆ ಬರೋಬ್ಬರಿ 2 ಕೋಟಿ ರೂ. ಪತ್ತೆಯಾಗಿದೆ.

    ಸಿಕ್ಕ ಹಣದ ಜೊತೆ ಇಬ್ಬರು ಆರೋಪಿಗಳನ್ನು ಸಹ ಬಂಧಿಸಲಾಗಿದೆ. ಈ ಬಗ್ಗೆ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ತೆರಿಗೆ ಇಲಾಖೆಯ ಅಧಿಕಾರಿಗಳು ಹಣವನ್ನು ವಶಪಡಿಸಿಕೊಂಡಿದ್ದಾರೆ.

    ಉತ್ತರ ಪ್ರದೇಶದ ಮುಘಲ್ಸಾರೈ ರೈಲ್ವೆ ನಿಲ್ದಾಣದ ದುರೊಂಟೋ ಎಕ್ಸ್ ಪ್ರೆಸ್ ಮೂಲಕ ದೆಹಲಿಗೆ ಪ್ರಯಾಣಿಸುತ್ತಿದ್ದ ವೇಳೆ ಮುಘಲ್ಸಾರೈ ರೈಲ್ವೆ ನಿಲ್ದಾಣದಿಂದ ಇಬ್ಬರನ್ನು ಬಂಧಿಸಲಾಗಿದೆ. ಜೊತೆಗೆ 2,000 ಮತ್ತು 500 ರೂ. ಮುಖಬೆಲೆಯ ಸುಮಾರು 2 ಕೋಟಿ ರೂ. ಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಸದ್ಯಕ್ಕೆ ಆದಾಯ ತೆರಿಗೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರೀಶಿಲನೆ ನಡೆಸಿದ್ದು, ತನಿಖೆ ಮುಂದುವರಿದಿದೆ ಎಂದು ಜಿಆರ್ ಪಿ ಇನ್ಸ್ ಪೆಕ್ಟರ್ ಆರ್.ಕೆ. ಸಿಂಗ್ ತಿಳಿಸಿದ್ದಾರೆ.