Tag: lucknow

  • ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ: ಯೋಗಿ

    ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ: ಯೋಗಿ

    ಲಕ್ನೋ: ಪದ್ಮಾವತಿ ಚಿತ್ರದ ನಿರ್ದೇಶಕ ಸಜಯ್ ಲೀಲಾ ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

    ಪದ್ಮಾವತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಬನ್ಸಾಲಿ ತಲೆಗೆ ಬಹುಮಾನ ಘೋಷಿಸಿದ ವ್ಯಕ್ತಿಗಳ ಮೇಲೆ ಕ್ರಮ ಕೈಗೊಳ್ಳುವುದರ ಜೊತೆಗೆ ಜನರ ಭಾವನೆಗಳ ಜೊತೆ ಆಟವಾಡಿರುವ ನಿರ್ದೇಶಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

    ಈಗಾಗಲೇ ಚಿತ್ರದಲ್ಲಿ ಇರುವ ಆಕ್ಷೇಪಗಳ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದ್ದು, ಸಲಹೆ ನೀಡುವಂತೆ ಕೇಳಿಕೊಂಡಿದ್ದೇವೆ. ಜನರ ಭಾವನೆಗಳ ಜೊತೆ ಆಟವಾಡಲು ಯಾರನ್ನು ಬಿಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ಬಿಡುಗಡೆಗೂ ಮುನ್ನ ಭಾರೀ ವಿವಾದಗಳನ್ನು ಸೃಷ್ಟಿಸಿರುವ ಪದ್ಮಾವತಿ ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಹಾಗೂ ರಾಣಿ ಪದ್ಮಾವತಿ ನಡುವೆ ರೊಮ್ಯಾಂಟಿಕ್ ಸೀನ್‍ಗಳಿವೆ ಎಂದು ಆರೋಪಿಸಿ ಚಿತ್ರದ ಬಿಡುಗಡೆಗೆ ರಾಜಪುತ ಸಂಘಟನೆಗಳು ಪ್ರತಿಭಟಿಸಿದ್ದವು.

    ರಾಜಪೂತ ಕರ್ನಿಸೇನಾ ಸಂಘಟನೆಯ ನಾಯಕರು ಸಹ ಚಿತ್ರ ಬಿಡುಗಡೆ ಕುರಿತು ನಿರ್ದೇಶಕರಿಗೆ ಬೆದರಿಕೆ ಹಾಕಿದ್ದರು. ಆರಂಭದಲ್ಲಿ ಚಿತ್ರೀಕರಣದ ವೇಳೆ ರಜಪೂತ್ ಕರ್ಣಿ ಸೇನಾದ ಸದಸ್ಯನೋರ್ವ ಬನ್ಸಾಲಿ ಅವರ ಕಪಾಳಕ್ಕೆ ಹೊಡೆದಿದ್ದನು. ಇನ್ನೂ ಮಹಾರಾಷ್ಟ್ರದ ಕೋಲಾಪುರದಲ್ಲಿ ಚಿತ್ರೀಕರಣದ ಸೆಟ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಘಟನೆ ವೇಳೆ ಯಾರಿಗೂ ಯಾವುದೇ ಅಪಾಯವಾಗಿರಲಿಲ್ಲ.

     

    ಹರ್ಯಾಣದ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಸೂರಜ್ ಪಾಲ್ ಅಮು, ಪದ್ಮಾವತಿ ಚಿತ್ರದ ನಟಿ ದೀಪಿಕಾ ಅವರ ಹಾಗೂ ನಿರ್ದೇಶಕ ಬನ್ಸಾಲಿ ಅವರ ಶಿರಚ್ಛೇದ ಮಾಡಿವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದರು. ಅಲ್ಲದೇ ಚಿತ್ರದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಪಾತ್ರವನ್ನು ಮಾಡಿರುವ ರಣವೀರ್ ಸಿಂಗ್ ರ ಕಾಲು ಮುರಿಯುತ್ತೇವೆ ಎಂದು ಬೆದರಿಕೆ ಹಾಕಿದ್ದರು.

    ಬಿಜೆಪಿ ಆಡಳಿತ ಇರುವ ರಾಜಸ್ಥಾನ, ಮಧ್ಯಪ್ರದೇಶ ಜೊತೆ ಕಾಂಗ್ರೆಸ್ ಆಡಳಿತ ಇರುವ ಪಂಜಾಬ್ ಸರ್ಕಾರ ಪದ್ಮಾವತಿಯನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿವೆ.

     

     

     

     

    https://twitter.com/deepikapadukone/status/910668862336544768

    https://twitter.com/deepikapadukone/status/910673498376364033

  • ಮದುವೆ ಮಂಟಪಕ್ಕೆ ಹೆಲಿಕಾಪ್ಟರ್ ಏರಿ ಬಂದ ಮದುಮಗ!

    ಮದುವೆ ಮಂಟಪಕ್ಕೆ ಹೆಲಿಕಾಪ್ಟರ್ ಏರಿ ಬಂದ ಮದುಮಗ!

    ಲಕ್ನೋ: ಮದುವೆಯಾಗುವ ವೇಳೆ ವರ ಕುದುರೆ, ಬೈಕ್ ಅಥವಾ ಐಶಾರಾಮಿ ಕಾರುಗಳಲ್ಲಿ ಬರುವುನ್ನು ನೋಡಿರುತ್ತಿರಿ ಆದರೆ ಇಲ್ಲೊಬ್ಬ ವರ ತನ್ನ ಮದುವೆ ನಡೆಯುವ ಕಲ್ಯಾಣ ಮಂಟಪಕ್ಕೆ ಹೆಲಿಕಾಪ್ಟರ್ ಏರಿ ಬಂದಿದ್ದಾರೆ.

    ಮೂಲತಃ ರಾಜಸ್ಥಾನದ ಜೈಪುರದ ನಿವಾಸಿಯಾಗಿರುವ ಶಾರೂಖ್ ಖಾನ್ ಎಂಬ ಮದುಮಗನನೇ ತನ್ನ ಮದುವೆಗೆ ಹೆಲಿಪಾಪ್ಟರ್ ಏರಿ ಬಂದಿದ್ದು, ಉತ್ತರಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ.

    ಇದನ್ನೂ ಓದಿ: ಮದುವೆ ದಿನ ಲೆಹೆಂಗಾ ಬದಲು ಶಾರ್ಟ್ಸ್ ತೊಟ್ಟ ವಧು- ಫೋಟೋ ವೈರಲ್

    ಈ ಕುರಿತು ಮಾತನಾಡಿರುವ ಶಾರುಕ್ ಖಾನ್ ತನಗೇ ಚಿಕ್ಕವನಿಂದಾಗಿನಿಂದಲೂ ಮದುವೆಯಾಗುವಾಗ ಹೆಲಿಕಾಪ್ಟರ್‍ನಲ್ಲಿ ಬರಬೇಕು ಎಂದು ಕನಸು ಕಂಡಿದ್ದೆ. ಆದರಂತೆ ಇಂದು ಹೆಲಿಪಾಪ್ಟರ್‍ನಲ್ಲಿ ಬಂದಿದ್ದೇನೆ, ನನ್ನ ಕನಸು ನನಸಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ವರ ಶಾರುಕ್ ಖಾನ್ ಹಿರಿಯ ಸಹೋದರನ ಮದುವೆ ಸಮಾರಂಭದಲ್ಲಿ ಇದೇ ರೀತಿ ಬರಲು ಪ್ಲಾನ್ ಮಾಡಿದರಂತೆ, ಆದರೆ ಅಧಿಕಾರಿಗಳಿಂದ ಅನುಮತಿ ಪಡೆಯಲು ಸಾಧ್ಯವಾಗದೆ ಅದನ್ನು ಕೈಬಿಟ್ಟಿದ್ದೇವು ಎಂದು ಹೇಳಿದ್ದಾರೆ.

    ಭಾವಿ ಪತಿ ಕನಸು ಕುರಿತು ಮಾತನಾಡಿದ ವಧು, ಗಂಡನ ಕನಸು ನನಸಾಗಿದ್ದು, ತುಂಬಾ ಖುಷಿಯಾಗುತ್ತಿದೆ ಎಂದು ಹೇಳಿದ್ದಾರೆ.

     

    https://www.youtube.com/watch?v=E6REmaOxs30

  • ಶಂಕಿತ ಐಸಿಸ್ ಉಗ್ರನ ಬಂಧನ-ಸಹಚರರ ಮೊಬೈಲ್ ರೆಕಾರ್ಡ್ ನಿಂದಾಗಿ ಸಿಕ್ಕಿಬಿದ್ದ!

    ಶಂಕಿತ ಐಸಿಸ್ ಉಗ್ರನ ಬಂಧನ-ಸಹಚರರ ಮೊಬೈಲ್ ರೆಕಾರ್ಡ್ ನಿಂದಾಗಿ ಸಿಕ್ಕಿಬಿದ್ದ!

    ಮುಂಬೈ: ಶಂಕಿತ ಐಸಿಸ್ ಉಗ್ರನೊಬ್ಬನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಭಯತ್ಪೋದನಾ ನಿಗ್ರಹ ದಳ (ಎಟಿಎಸ್)ದ ಅಧಿಕಾರಿಗಳು ಶನಿವಾರ ಬಂಧಿಸಿದ್ದು, ಇಂದು ಅಧಿಕಾರಿಗಳು ಈ ವಿಷಯವನ್ನು ತಿಳಿಸಿದ್ದಾರೆ.

    ಅಬು ಜಯೀದ್ ಬಂಧಿತ ಶಂಕಿಯ ಐಸಿಸ್ ಉಗ್ರ. ಜಯೀಸ್ ಮೂಲತಃ ಉತ್ತರ ಪ್ರದೇಶ ರಾಜ್ಯದ ಅಜಮ್‍ಘಡ್ ನಿವಾಸಿಯಾಗಿದ್ದಾನೆ. ಸೌದಿ ಅರೇಬಿಯಾದಿಂದ ಶನಿವಾರ ಮುಂಬೈಗೆ ಬಂದಿಳಿದ ಜಯೀದ್ ನನ್ನು ಮುಂಬೈನ ಎಟಿಎಸ್ ಅಧಿಕಾರಿಗಳು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ಆನಂದ್ ಕುಮಾರ್ ಇಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಸೋಶಿಯಲ್ ನೆಟ್‍ವರ್ಕ್: ಅಬು ಜಯೀದ್ ರಿಯಾದ್ ನಲ್ಲಿ ವಾಸವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಗ್ರೂಪ್ ಕ್ರಿಯೇಟ್ ಮಾಡಿ, ಅದರ ಮೂಲಕ ಭಾರತದಲ್ಲಿರುವ ಯುವಕರನ್ನು ಉಗ್ರ ಚಟುವಟಿಕೆಗಳಲ್ಲಿ ಭಾಗಿಯುವಂತೆ ಪ್ರಚೋದನೆ ನೀಡುತ್ತಿದ್ದನು. ಈ ಸಂಬಂಧ ಅಬು ಜಯೀದ್ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಕೆಲವು ಶಂಕಿತರಾದ ಉಮರ್ ಅಲಿಯಾಸ್ ನಜೀಮ್, ಘಾಜೀ ಬಾಬಾ ಅಲಿಯಾಸ್ ಮುಜುಮ್ಮಿ, ಮುಫ್ತಿ ಅಲಿಯಾಸ್ ಫಯಾಜ್ ಮತ್ತು ಜ್ಯಾಕ್‍ವಾನ್ ಅಲಿಯಾಸ್ ಈಥಿಶೆಮ್ ಎಂಬವರು ಮೊಬೈಲ್ ರೆಕಾರ್ಡ್ ಗಳಿಂದ ಅಬು ಜಯೀದ್ ಕುರಿತು ಮಾಹಿತಿಗಳು ಲಭ್ಯವಾಗಿದ್ದವು. ಇವರೆಲ್ಲರೂ ಒಂದು ಆನ್‍ಲೈನ್ ನೆಟ್‍ವರ್ಕ್ ಒಂದು ಒಂದು ನಿರ್ಧಿಷ್ಟ ಗ್ರೂಪ್ ಒಂದರ ಮೂಲಕ ಮಾತುಕತೆಯನ್ನು ನಡೆಸುತ್ತಿದ್ದರು. ಈ ಎಲ್ಲರು ದೇಶದ ಕೆಲವು ನಗರಗಳ ಮೇಲೆ ಭಯತ್ಪೋದಾಯಕ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

    ಸದ್ಯ ಅಬು ಜಯೀದ್ ನನ್ನು ಮುಂಬೈನಿಂದ ಲಕ್ನೋ ನಗರಕ್ಕೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತದೆ ಎಂದು ಆನಂದ್ ಕುಮಾರ್ ತಿಳಿಸಿದ್ದಾರೆ.

     

  • 100 ವರ್ಷದ ಅಜ್ಜಿಯನ್ನ ಅತ್ಯಾಚಾರಗೈದ ಯುವಕ-ಶಾಕ್ ನಿಂದ ಅಜ್ಜಿ ಸಾವು

    100 ವರ್ಷದ ಅಜ್ಜಿಯನ್ನ ಅತ್ಯಾಚಾರಗೈದ ಯುವಕ-ಶಾಕ್ ನಿಂದ ಅಜ್ಜಿ ಸಾವು

    ಲಕ್ನೋ: 100 ವರ್ಷದ ಅಜ್ಜಿಯ ಮೇಲೆ ಯುವಕನೊಬ್ಬ ಅತ್ಯಾಚಾರಗೈದಿರುವ ಘಟನೆ ಉತ್ತರ ಪ್ರದೇಶ ರಾಜ್ಯದ ಮೀರತ್ ಜಿಲ್ಲೆಯ ಜಾನಿ ಗ್ರಾಮದಲ್ಲಿ ಇಂದು ನಡೆದಿದೆ.

    23 ವರ್ಷದ ಅಂಕಿತ್ ಪುನಿಯಾ ಎಂಬಾತನೇ ಕಾಮುಕ ಯುವಕ. ಅಜ್ಜಿ ಮನೆಯಲ್ಲಿದ್ದಾಗ ಕುಡಿದ ಮತ್ತಿನಲ್ಲಿ ಬಂದ ಅಂಕಿತ್ ಅತ್ಯಾಚಾರಗೈದಿದ್ದಾನೆ. ಈ ವೇಳೆ ಅಜ್ಜಿಯ ಕಿರುಚಾಟ ಮತ್ತು ಅಳುತ್ತಿರುವುದನ್ನು ಕೇಳಿದ ಸ್ಥಳೀಯರು ಪರಾರಿಯಾಗುತ್ತಿದ್ದ ಯುವಕನನ್ನು ಹಿಡಿದಿದ್ದಾರೆ.

    ಅಜ್ಜಿ ಜಾನಿ ಗ್ರಾಮದಲ್ಲಿ ತಮ್ಮ ಸೋದರನೊಂದಿಗೆ ವಾಸವಾಗಿದ್ದರು. ಸ್ಥಳೀಯರು ಆರೋಪಿ ಅಂಕಿತ್ ನನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ. ಆದರೆ ಆರೋಪಿ ಅಂಕಿತ್ ತಾನು ಮುಗ್ಧ ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾನೆ.

    ಘಟನೆ ಬಳಿಕ ಅಜ್ಜಿ ಆಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

  • MP, MLA ಗಳು ಬಂದಾಗ ಅಧಿಕಾರಿಗಳು ಎದ್ದುನಿಂತು ಕೈಮುಗಿಯಬೇಕು- ಯೋಗಿ ಸರ್ಕಾರದ ಹೊಸ ಆದೇಶ

    MP, MLA ಗಳು ಬಂದಾಗ ಅಧಿಕಾರಿಗಳು ಎದ್ದುನಿಂತು ಕೈಮುಗಿಯಬೇಕು- ಯೋಗಿ ಸರ್ಕಾರದ ಹೊಸ ಆದೇಶ

    ಲಕ್ನೋ: ಶಾಸಕರು, ಸಂಸದರು ಬಂದಾಗ ಅಧಿಕಾರಿಗಳು ಎದ್ದು ನಿಂತು ಕೈ ಮುಗಿಯಬೇಕು ಅಂತ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಹೊಸ ಆದೇಶ ಹೊರಡಿಸಿದೆ.

    ಸಂಸದರು ಹಾಗೂ ಶಾಸಕರನ್ನು ಭೇಟಿಯಾಗುವಾಗ ಅಥವಾ ಸ್ವಾಗತಿಸುವಾಗ ಅಧಿಕಾರಿಗಳು ಎದ್ದುನಿಂತು ಕೈಮುಗಿದು ನಮಸ್ಕರಿಸಬೇಕು. ಅವರು ಹೊರಡುವಾಗಲೂ ಮತ್ತೊಮ್ಮೆ ಕೈ ಮುಗಿಯಬೇಕು ಎಂಬ ಆದೇಶ ಹೊರಡಿಸಲಾಗಿದೆ. ಉತ್ತರಪ್ರದೇಶದ ಮುಖ್ಯ ಕಾರ್ಯದರ್ಶಿ ರಾಜೀವ್ ಕುಮಾರ್ ಈ ನಿರ್ದೇಶನವನ್ನು ನೀಡಿದ್ದು, ಯಾರಾದ್ರೂ ಈ ನಿಯಮವನ್ನ ಉಲ್ಲಂಘಿಸಿದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.

    ಸ್ಥಳೀಯ ಮುಖಂಡರು, ಜಿಲ್ಲಾಧಿಕಾರಿಗಳು, ಪೊಲೀಸರು ಸೇರಿದಂತೆ ಉತ್ತರಪ್ರದೇಶದ ಎಲ್ಲಾ ಅಧಿಕಾರಿಗಳಿಗೆ ಈ ನಿಯಮ ಅನ್ವಯಿಸುತ್ತದೆ ಎಂದು ವರದಿಯಾಗಿದೆ. ಅಧಿಕಾರಿಗಳು ನಮ್ಮ ಮಾತನ್ನು ಆಲಿಸದೆ, ನೀಡಿದ ಆದೇಶಗಳನ್ನು ಕೆಲವೊಮ್ಮೆ ವಜಾ ಮಾಡುತ್ತಾರೆ ಎಂದು ಸಂಸದರು ಮತ್ತು ಶಾಸಕರು ಹೇಳಿರುವ ಹಿನ್ನೆಲೆಯಲ್ಲಿ ಆದಿತ್ಯನಾಥ್ ಸರ್ಕಾರ ಈ ನಿಮಯವನ್ನ ಜಾರಿಗೆ ತಂದಿದೆ.

    ಅಲ್ಲದೆ ಸಂಸದರು ಮತ್ತು ಶಾಸಕರು ಹೇಳಿದಂತೆ ಕೆಲಸ ಮಾಡಲು ಸಾಧ್ಯವಾಗದಿದ್ದಾಗ ಅಧಿಕಾರಿಗಳು ನಯವಾಗಿ ತಮ್ಮ ಸಮಸ್ಯೆಗಳ ಬಗ್ಗೆ ಹೇಳಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ. ಸರ್ಕಾರಿ ಅನುದಾನಿತ ಕಾರ್ಯಕ್ರಮಗಳಿಗೆ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಹೋಗುವುದನ್ನು ಕೂಡ ನಿಷೇಧಿಸಲಾಗಿದೆ.

    ಈ ಹೊಸ ಆದೇಶಕ್ಕೆ ವಿರೋಧ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ.

  • ಆರುಷಿ ಕೊಲೆ ಮಾಡಿದವರು ಯಾರು: ದೇಶಾದ್ಯಂತ ಕೇಳೋ ಪ್ರಶ್ನೆಗೆ ಉತ್ತರ ಸಿಗುತ್ತಾ?

    ಆರುಷಿ ಕೊಲೆ ಮಾಡಿದವರು ಯಾರು: ದೇಶಾದ್ಯಂತ ಕೇಳೋ ಪ್ರಶ್ನೆಗೆ ಉತ್ತರ ಸಿಗುತ್ತಾ?

    ನವದೆಹಲಿ: ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಆರುಷಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪೋಷಕರಾದ ರಾಜೇಶ್ ಮತ್ತು ನೂಪುರ್ ತಲ್ವಾರ್ ಅವರನ್ನು ಅಲಹಾಬಾದ್ ಹೈಕೋರ್ಟ್ ಆರೋಪ ಮುಕ್ತಗೊಳಿಸಿತ್ತು. ಆದರೆ ಈಗ ಪ್ರಕರಣದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದ್ದು ಕೊಲೆ ಮಾಡಿದವರು ಯಾರು ಎನ್ನುವ ಪ್ರಶ್ನೆ ಎದ್ದಿದೆ.

    ಏನಿದು ಪ್ರಕರಣ? 9 ವರ್ಷಗಳ ಹಿಂದೆ ಉತ್ತರ ಪ್ರದೇಶದ ನೊಯಿಡಾದಲ್ಲಿ ಆರಿಷಿ ಕೊಲೆಯಾಗಿತ್ತು. ಈ ಕೊಲೆಗೆ ಸಂಬಂಧಿಸಿದಂತೆ ಮೃತ ಯುವತಿಯ ಪೋಷಕರಾದ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ಅವರು ಈ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರು ಬಂಧಿಸಿದ್ದರು. ಅಲ್ಲದೇ ವಿಚಾರಣೆ ನಡೆಸಿದ್ದ ಸಿಬಿಐ ನ್ಯಾಯಾಲಯ ಪೋಷಕರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು.

    ಆದರೆ ಈ ಕುರಿತು ಮೇಲ್ಮನವಿ ಸಲ್ಲಿಸಿದ್ದ ತಲ್ವಾರ್ ದಂಪತಿಯನ್ನು ಗುರುವಾರ ಅಲಹಾಬಾದ್ ಹೈಕೋರ್ಟ್ ಆರೋಪ ಮುಕ್ತಗೊಳಿಸಿದೆ. ಅಲ್ಲದೇ ಸಿಬಿಐ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ರದ್ದುಗೊಳಿಸಿ, ಗಾಜಿಯಾಬಾದ್‍ನ ದಾಸ್ನಾ ಕಾರಾಗೃಹದಲ್ಲಿರುವ ತಲ್ವಾರ್ ದಂಪತಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದೆ.

    ಪ್ರಕರಣದ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ಆರೋಪಿಗಳನ್ನು ಕೇವಲ ಅನುಮಾನದ ಆಧಾರದಲ್ಲಿ ಅಪರಾಧಿಗಳು ಎಂದು ಘೋಷಿಸಲು ಸಾಧ್ಯವಿಲ್ಲ. ಮೃತ ಆರುಷಿ ಪೋಷಕರ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ಇಲ್ಲ, ಲಭ್ಯವಿರುವ ಸಾಕ್ಷ್ಯಗಳು ಆರೋಪವನ್ನು ಸಾಬೀತು ಮಾಡುವಲ್ಲಿ ವಿಫಲವಾಗಿವೆ ಎಂದು ಅಭಿಪ್ರಾಯ ಪಟ್ಟಿತ್ತು.

    ಪ್ರಸ್ತುತ ನ್ಯಾಯಾಲಯ ತೀರ್ಪಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ಬುಲ್ಲಾ, ನನಗೆ ಆರುಷಿ ಕೊಲೆ ಮಾಡಿದ್ದ ಯಾರು ಎಂದು ತಿಳಿದಿಲ್ಲ, ಆದರೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

    ಬಾಲಿವುಡ್ ನಟ ಕಬೀರ್ ಬೇಡಿ, ಮೃತ ಅರುಷಿ ಪೋಷಕರು ಬಿಡುಗಡೆಯಾಗಿದ್ದು, ನ್ಯಾಯ ದೊರೆತಿದೆ. ದುಸ್ವಪ್ನ ದೂರವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

    ಪೋಷಕರು ತಮ್ಮ ಮಗಳನ್ನು ಕಳೆದುಕೊಂಡಿದ್ದಾರೆ. ಅಲ್ಲದೇ ಹಲವು ವರ್ಷಗಳು ಜೈಲುಶಿಕ್ಷೆಯನ್ನು ಅನುಭವಿಸಿದ್ದಾರೆ. ಆದರೆ ನಮಗೇ ಆಕೆಯನ್ನು ಕೊಲೆ ಮಾಡಿದ್ದು ಯಾರು ಎಂಬುವುದು ತಿಳಿದಿಲ್ಲ. ಎಲ್ಲಿದೆ ನ್ಯಾಯ? ಎಂದು ಕೀರ್ತನ ಕರ್ಮ ಎಂಬವರು ಟ್ವೀಟ್ ಮಾಡಿದ್ದಾರೆ.

    ಹೈಕೋರ್ಟ್‍ನ ತೀರ್ಪಿನ ಅನ್ವಯ ಶುಕ್ರವಾರ ಪೊಲೀಸರು ಅರುಷಿ ಪೋಷಕರನ್ನು ಜೈಲಿನಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಆದರೆ ಸಿಬಿಐ ವಕೀಲರು ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

  • ಗ್ರಾಮೀಣ ಭಾಗದ ಜನರಿಗೆ ಕೇಸರಿ ಬಣ್ಣದ ಬಸ್ ಸೇವೆ ಆರಂಭಿಸಿದ ಯೋಗಿ ಸರ್ಕಾರ

    ಗ್ರಾಮೀಣ ಭಾಗದ ಜನರಿಗೆ ಕೇಸರಿ ಬಣ್ಣದ ಬಸ್ ಸೇವೆ ಆರಂಭಿಸಿದ ಯೋಗಿ ಸರ್ಕಾರ

    ಲಕ್ನೋ: ಉತ್ತರ ಪ್ರದೇಶದ ಯೋಗಿ ಸರ್ಕಾರ ಬುಧವಾರ ರಾಜ್ಯ ಗ್ರಾಮೀಣ ಸಾರಿಗೆ ವ್ಯವಸ್ಥೆಗೆ ಹೊಸ ಕೇಸರಿ ಬಣ್ಣದ ಸಾರಿಗೆ ಬಸ್‍ಗಳ ಸೇವೆಯನ್ನು ಆರಂಭಿಸಿದ್ದು, ಸಿಎಂ ಯೋಗಿ ಅದಿತ್ಯನಾಥ್ ಬುಧವಾರ 50 ಬಸ್‍ಗಳಿಗೆ ಚಾಲನೆ ನೀಡಿದರು.

    ಬಸ್ ಸೇವೆಗೆ ಸರ್ಕಾರಿ ಸಾರಿಗೆ ಇಲಾಖೆಯು `ಸಂಕಲ್ಪ್’ ಎಂದು ಹೆಸರಿಟ್ಟಿದ್ದು, ಸುಮಾರು 40 ಸಾವಿರ ಹಳ್ಳಿಗಳಿಗೆ ಮುಂದಿನ ನಾಲ್ಕು ವರ್ಷಗಳಲ್ಲಿ ಸೇವೆಯನ್ನು ನೀಡುವ ಗುರಿಯನ್ನು ಹೊಂದಿದೆ.

    ಪ್ರಸ್ತುತ ಈ ಯೋಜನೆಯು ರಾಜ್ಯದ ವಾರಣಾಸಿ, ಗೋರಖ್‍ಪುರ, ಕಾನ್‍ಪುರ, ಅಲಹಾಬಾದ್, ಬರೇಲಿ ಮತ್ತು ಮೊರಾದಾಬಾದ್ ಜಿಲ್ಲೆಗಳ ಗ್ರಾಮಗಳಿಗೆ ಸೇವೆಯನ್ನು ನೀಡಲಿದೆ. 16 ಸಾವಿರ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಒದಗಿಸಲು 1,500 ಬಸ್‍ಗಳು ಸಿದ್ಧವಾಗಿವೆ.

    `ಗೌರವ್ ಪಥ್’ ರಸ್ತೆ ನಿರ್ಮಾಣ ಯೋಜನೆಯನ್ನು ಆರಂಭಿಸುವ ಮೂಲಕ ಯೋಗಿ ಅದಿತ್ಯನಾಥ್ ಸರ್ಕಾರವು ರಾಜ್ಯದ ಕುಗ್ರಾಮಗಳಿಗೂ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ನಿರ್ಮಾಣ ಮಾಡುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಸೇವೆಯನ್ನು ನೀರುವ ಉದ್ದೇಶವನ್ನು ಹೊಂದಿದೆ. ಹುತಾತ್ಮ ಯೋಧರ ಗ್ರಾಮಗಳಿಗೆ ಗೌರವ್ ಪಥ್/ಸಂಪರ್ಕ ರಸ್ತೆಗಳನ್ನ ನಿರ್ಮಿಸಲು ಬಿಜೆಪಿ ಸರ್ಕಾರ ಯೋಜನೆ ರೂಪಿಸಿದ್ದು, ಈ ಗ್ರಾಮಗಳಿಗೆ ಬಸ್ ವ್ಯವಸ್ಥೆ ಸಂಪರ್ಕ ಕಲ್ಪಿಸಲಿದೆ.

    ಈ ಹಿಂದೆ ಉತ್ತರ ಪ್ರದೇಶದಲ್ಲಿ ಆಡಳಿತ ವಹಿಸಿದ್ದ ಸಮಾಜವಾದಿ ಪಕ್ಷವು ಲೋಹಿಯಾ ಬಸ್ ಸೇವಾ ಯೋಜನೆಯನ್ನು ಜಾರಿಗೆ ತಂದು ಶೇ.25 ರಷ್ಟು ರಿಯಾಯಿತಿ ದರದಲ್ಲಿ ಸೇವೆಯನ್ನು ನೀಡುತ್ತಿದೆ. ಆದರೆ ಸಂಕಲ್ಪ್ ಬಸ್‍ಗಳಲ್ಲಿ ಸಾಮಾನ್ಯ ಟಿಕೆಟ್ ದರವೇ ಇದೆ. ಏಕೆಂದರೆ ಸಂಕಲ್ಪ್ ಯೋಜನೆಗೆ ಧನಸಹಾಯದ ಕೊರತೆ ಇದ್ದು, ಮುಂದಿನ ದಿನಗಳಲ್ಲಿ ಧನಸಹಾಯ ಸಿಕ್ಕರೆ ರಿಯಾಯಿತಿನ್ನು ನೀಡಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸುಮಾರು 38,254 ಗ್ರಾಮಗಳನ್ನು ಈ ಯೋಜನೆ ಅಡಿಯಲ್ಲಿ ಗುರುತಿಸಲಾಗಿದೆ ಎಂದು ಉತ್ತರ ಪ್ರದೇಶ ಕಿರಿಯ ಸಾರಿಗೆ ಸಚಿವ ಸ್ವಾತಂತ್ ದೇವ್ ಸಿಂಗ್ ಮಾಹಿತಿ ನೀಡಿದ್ದಾರೆ.

    ಪ್ರಯಾಣಿಕರಿಗೆ ಅನುಕೂಲಕಾರ ಹಾಗೂ ಸುರಕ್ಷಿತ ಸೇವೆ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಪ್ರಮುಖವಾಗಿ ಜಿಲ್ಲಾ ಕೇಂದ್ರಗಳಿಂದ ಗ್ರಾಮಗಳಿಗೆ ಹೆಚ್ಚು ಪ್ರಯಾಣ ಸೇವೆಯನ್ನು ನೀಡಲಿದ್ದು, ಖಾಸಗಿ ಸೇವಾ ಸಂಸ್ಥೆಗೆ ಮುಂದಿನ ದಿನಗಳಲ್ಲಿ ಬಸ್‍ಗಳ ನಿರ್ವಹಣೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

    ಸಂಕಲ್ಪ್ ಯೋಜನೆಯಿಂದ ಪ್ರತಿವರ್ಷ 9,563 ಹಳ್ಳಿಗಳಿಗೆ ಸೇವೆಯನ್ನು ವಿಸ್ತರಿಸುವ ಚಿಂತನೆಯನ್ನು ನಡೆಸಿದ್ದು, ನಾಲ್ಕು ವರ್ಷಗಳಲ್ಲಿ ರಾಜ್ಯದ ಎಲ್ಲಾ ಗ್ರಾಮಗಳು ಬಸ್ ವ್ಯವಸ್ಥೆಯನ್ನು ಹೊಂದಿರಲಿವೆ. ಉತ್ತರ ಪ್ರದೇಶ ಸಾರಿಗೆ ಸಂಸ್ಥೆಯು ಇದುವರೆಗೂ ಸುಮಾರು 5 ಸಾವಿರ ಹಳ್ಳಿಗಳಿಗೆ ತನ್ನ ಸೇವೆಯನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.

  • ದೋಣಿ ದುರಂತ- ಮಕ್ಕಳು ಸೇರಿ 6 ಜನ ನೀರುಪಾಲು

    ದೋಣಿ ದುರಂತ- ಮಕ್ಕಳು ಸೇರಿ 6 ಜನ ನೀರುಪಾಲು

    ಲಕ್ನೋ: ದೋಣಿ ಮುಗುಚಿ ಮಕ್ಕಳು ಸೇರಿದಂತೆ ಆರು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಹ್ರಾಯ್ಚ್‍ನಲ್ಲಿ ನಡೆದಿದೆ.

    ಉತ್ತರ ಪ್ರದೇಶದ ಬಹ್ರಾಯ್ಚ್ ಸಮೀಪವಿರುವ ಸರಯು ನದಿಯಲ್ಲಿ ಇಂದು ಬೆಳಗ್ಗೆ ಈ ದುರಂತ ಸಂಭವಿಸಿದೆ. ಮೃತರನ್ನು ರಾಜೇಶ್ (25), ಬ್ರಿಜೇಶ್ (20), ಮಗನ್ (17), ವಿಜಯ್ (16), ತಿರಿತ್ (12) ಮತ್ತು ಶಕಿಲ್(12) ಎಂದು ಗುರುತಿಸಲಾಗಿದೆ.

    ಮೃತ ದುರ್ದೈವಿಗಳು ಬಹ್ರಾಯ್ಚ್ ಹತ್ತಿರದ ಗೋಪಾಲ್‍ಪುರ್ ಮತ್ತು ಬೆಹ್ತಾ ಗ್ರಾಮದವರೆಂದು ತಿಳಿದುಬಂದಿದೆ. ಪಕ್ಕದ ರಾಮ್ಗೊನ್ ಹಳ್ಳಿಯಲ್ಲಿ ಜಾತ್ರೆ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದರು.

    ದೋಣಿಯಲ್ಲಿ ಒಟ್ಟು ಒಂಬತ್ತು ಜನರಿದ್ದರು. ಅದರಲ್ಲಿ ಮೂವರು ಈಜಿಕೊಂಡು ದಡ ಸೇರಿದ್ದಾರೆ. ಮೃತದೇಹಗಳನ್ನ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಬಹ್ರಾಯ್ಚ್ ಪೊಲೀಸ್ ಅಧಿಕಾರಿ ಅಜಯ್ ದೀಪ್ ಸಿಂಗ್ ಹೇಳಿದ್ದಾರೆ.

  • ವಾಜಪೇಯಿ ಹೆಸರನ್ನು ಮತದಾನ ಪಟ್ಟಿಯಿಂದ ತೆಗೆದ ಲಕ್ನೋ ಕಾರ್ಪೋರೇಷನ್

    ವಾಜಪೇಯಿ ಹೆಸರನ್ನು ಮತದಾನ ಪಟ್ಟಿಯಿಂದ ತೆಗೆದ ಲಕ್ನೋ ಕಾರ್ಪೋರೇಷನ್

    ಲಕ್ನೋ: ಮಾಜಿ ಪ್ರಧಾನಿ ಹಾಗೂ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ದೇಶ ಕಂಡ ಮೇರು ನಾಯಕ. ಬಿಜೆಪಿಯ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಯೂ ಕೂಡ ವಾಜಪೇಯಿ ಅವರಿಗೆ ಇದೆ. ಆದರೆ ಲಕ್ನೋದ ಮಹಾನಗರ ಪಾಲಿಕೆ ಮಾತ್ರ ಅವರ ಹೆಸರನ್ನು ಮತದಾನದ ಪಟ್ಟಿಯಿಂದ ತೆಗೆಯಲಾಗಿದೆ.

    ಹೌದು. ಉತ್ತರ ಪ್ರದೇಶದ ಲಕ್ನೋ ಕಾರ್ಪೋರೇಷನ್ ವಾಜಪೇಯಿ ಅವರ ಮತದಾನದ ಪಟ್ಟಿಯಿಂದ ತೆಗೆದಿದೆ. ಈ ಬಗ್ಗೆ ಮಾತನಾಡಿದ ಕ್ಷೇತ್ರ ಚುನಾವಣೆ ಅಧಿಕಾರಿ, ದೇಶ ಕಂಡ ಅತ್ಯಂತ ಮೇರು ನಾಯಕ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ವಾಜಪೇಯಿ ಅವರು ಕಳೆದ ವಿಧಾನ ಸಭಾ ಹಾಗೂ ಲೋಕಸಭಾ ಸೇರಿದಂತೆ ಕಾರ್ಪೋರೇಷನ್ ಚುನಾವಣೆಗೆ ಮತದಾನ ಮಾಡಿಲ್ಲದ ಕಾರಣ ಮತದಾರರ ಪಟ್ಟಿಯಿಂದ ಅವರ ಹೆಸರು ತೆಗೆಯಲಾಗಿದೆ ಎಂದು ಹೇಳಿದ್ದಾರೆ.

    ಅಲ್ಲದೇ 10 ವರ್ಷಗಳಿಂದ ಲಕ್ನೋದಲ್ಲಿ ಅವರು ವಾಸ ಮಾಡುತ್ತಿಲ್ಲ. ಹೀಗಾಗಿ ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಂಡಿದ್ದೇವೆ. 1054 ಮತದಾನದ ಸಂಖ್ಯೆಯು ಲಕ್ನೋದ ಬಾಬು ಬನ್ಸಾರಿ ದಾಸ್ ವಾರ್ಡ್‍ಬಲ್ಲಿ ವಾಸಿಸುತ್ತಿರುವಾಗಲೇ ಮಾಡಿಸಿದ್ದು. ಅವರು ಸದ್ಯ ದೆಹಲಿ 6-ಎ ಲುಟೆನ್ಸ್ ನಲ್ಲಿರುವ ನಿವಾಸದಲ್ಲಿ ವಾಸ ಮಾಡುತ್ತಿದ್ದು, ಕಳೆದ 2000ರಲ್ಲಿ ಮತದಾನ ಮಾಡಿದ್ದರು. ಇದಾದ ಬಳಿಕ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸಿಲ್ಲ. 2006ರಲ್ಲಿ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ದಿನೇಶ್ ಶರ್ಮಾ ಅವರ ಪರವಾಗಿ ಪ್ರಚಾರ ನಡೆಸಿದ್ದರು.

    ಸದ್ಯ ಲಕ್ನೋದಲ್ಲಿರುವ ವಾಜಪೇಯಿ 92/98-1 ಬಸ್ಮಂಡಿಯಲ್ಲಿರುವ ನಿವಾಸವು ಕಿಸಾನ್ ಸಂಘ ಕಚೇರಿಯನ್ನಾಗಿ ಬಳಸಿಕೊಳ್ಳಲಾಗುತ್ತಿದೆ. 10 ವರ್ಷವಾದರೂ ಲಕ್ನೋದಲ್ಲಿನ ನಿವಾಸಕ್ಕೆ ಭೇಟಿ ನೀಡಿಲ್ಲ. ಹೀಗಾಗಿ ಅವರ ಹೆಸರು ಮತದಾನದ ಪಟ್ಟಿಯಿಂದ ತೆಗೆಯಲಾಗಿದೆ ಎಂದು ಕ್ಷೇತ್ರ ಚುನಾವಣಾ ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

  • ನವರಾತ್ರಿ, ಮೊಹರಂ ಆಚರಣೆಗೆ ಷರತ್ತುಗಳನ್ನು ಹಾಕಿದ ಉತ್ತರಪ್ರದೇಶ ಸಿಎಂ

    ನವರಾತ್ರಿ, ಮೊಹರಂ ಆಚರಣೆಗೆ ಷರತ್ತುಗಳನ್ನು ಹಾಕಿದ ಉತ್ತರಪ್ರದೇಶ ಸಿಎಂ

    ಲಕ್ನೌ: ಸೆಪ್ಟೆಂಬರ್ 21 ಇದೇ ಗುರುವಾರದಿಂದ ನವರಾತ್ರಿ ಹಬ್ಬ ಆರಂಭವಾಗಲಿದೆ. ಇದೇ ಹೊತ್ತಲ್ಲಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ದುರ್ಗಾ ಪೂಜೆ, ದಸರಾ ಹಾಗೂ ಮೊಹರಂ ಆಚರಣೆಗೆ ಹಲವು ಷರತ್ತುಗಳನ್ನ ವಿಧಿಸಿದೆ.

    ದುರ್ಗಾ ಪೂಜೆ ಮೆರವಣಿಗೆ ವೇಳೆ ದುರ್ಗಾ ಮಾತೆಯ ಮೂರ್ತಿ ಹಾಗೂ ಮೊಹರಂನ ಮೆರವಣಿಗೆ ವೇಳೆ ಹೊತ್ತೊಯ್ಯಲಾಗುವ ತಝಿಯಾಗಳು ಇಷ್ಟೇ ಎತ್ತರ ಇರಬೇಕೆಂದು ನಿರ್ಬಂಧ ಹೇರಲಾಗಿದೆ. ಹಾಗೂ ಡಿಜೆ(ಹಾಡು-ನೃತ್ಯಕ್ಕೂ) ನಿಷೇಧ ಹೇರಿದ್ದಾರೆ. ಧ್ವನಿವರ್ಧಕಗಳ ಬಳಕೆಗೆ ಸರ್ಕಾರದ ಅನುಮತಿ ಕಡ್ಡಾಯವಾಗಿ ಪಡೆಯಬೇಕು. ಮೊದಲೇ ನಿಗದಿಪಡಿಸಿದ ಮಾರ್ಗ ಹೊರತುಪಡಿಸಿ ಬೇರೆ ಮಾರ್ಗದಲ್ಲಿ ಮೆರವಣಿಗೆ ಸಾಗುವಂತಿಲ್ಲ ಎಂದು ಷರತ್ತು ವಿಧಿಸಲಾಗಿದೆ.

    ಸೆಪ್ಟೆಂಬರ್ 26 ರಂದು 4 ದಿನಗಳ ಕಾಲ ದುರ್ಗಾ ಪೂಜೆ ನಡೆಯಲಿದೆ. ಸೆಪ್ಟೆಂಬರ್ 30 ರಂದು ವಿಜಯದಶಮಿ ಆಚರಿಸಲಾಗುತ್ತದೆ. ಹಾಗೇ ಆಕ್ಟೋಬರ್ 1ರಂದು ಮೊಹರಂ ಇದೆ. ಧ್ವನಿ ವರ್ಧಕಗಳ ಬಳಕೆ ಹಾಗೂ ಮೆರವಣಿಗೆ ಹೋಗುವ ಮಾರ್ಗದ ವಿಚಾರವಾಗಿ ಈ ಹಿಂದೆ ಹಿಂದೂ ಹಾಗೂ ಮುಸ್ಲಿಮರ ನಡುವೆ ಗಲಾಟೆ ಆದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಆ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ದುರ್ಗಾ ಮಾತೆಯ ಮೆರವಣಿಗೆ ಹಾಗೂ ಮೊಹರಂ ಮೆರವಣಿಗೆ ಸಾಗುವ ಮಾರ್ಗವನ್ನು ರಾಜ್ಯ ಸರ್ಕಾರವೇ ನಿರ್ಧರಿಸಲಿದೆ.

    ದಸರಾ ಹಬ್ಬ ಕೊನೆಯಾದ ಮಾರನೇ ದಿನವೇ ಮೊಹರಂ ಇರೋದು ವಿಶೇಷ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡೋ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ.