Tag: Ludhiana

  • ರಾಜ್ಯಸಭಾ ಸಂಸದನಿಗೆ ವಿಧಾನಸಭೆ ಉಪ ಚುನಾವಣೆಗೆ ಟಿಕೆಟ್ – ಪಂಜಾಬ್‌ನಿಂದ ಸಂಸತ್‌ಗೆ ಕೇಜ್ರಿವಾಲ್?

    ರಾಜ್ಯಸಭಾ ಸಂಸದನಿಗೆ ವಿಧಾನಸಭೆ ಉಪ ಚುನಾವಣೆಗೆ ಟಿಕೆಟ್ – ಪಂಜಾಬ್‌ನಿಂದ ಸಂಸತ್‌ಗೆ ಕೇಜ್ರಿವಾಲ್?

    ಲುಧಿಯಾನ: ಆಮ್ ಆದ್ಮಿ ಪಕ್ಷ ಪಂಜಾಬ್‌ನ ಲುಧಿಯಾನ ಪಶ್ಚಿಮ ವಿಧಾನಸಭಾ ಉಪಚುನಾವಣೆಗೆ ತನ್ನ ರಾಜ್ಯಸಭಾ ಸಂಸದ ಸಂಜೀವ್ ಅರೋರಾ (Sanjeev Arora) ಅವರನ್ನು ಕಣಕ್ಕಿಳಿಸಿದೆ. ಈ ಬೆಳವಣಿಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ರಾಜ್ಯಸಭೆ ಪ್ರವೇಶದ ವದಂತಿಗೆ ಇನ್ನಷ್ಟು ಪುಷ್ಠಿ ನೀಡಿದೆ.

    ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಅರವಿಂದ್ ಕೇಜ್ರಿವಾಲ್ ರಾಜ್ಯಸಭೆ ಪ್ರವೇಶ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಈ ವದಂತಿಯನ್ನು ಪಕ್ಷ ತಳ್ಳಿ ಹಾಕಿತ್ತು. ಆದರೀಗ ರಾಜ್ಯಸಭಾ ಸಂಸದ ಸಂಜೀವ್ ಅರೋರಾ ಅವರನ್ನು ಉಪ ಚುನಾವಣೆಗೆ ಕಣಕ್ಕಿಳಿಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ನುಸುಳುಕೋರನನ್ನು ಹೊಡೆದುರುಳಿಸಿದ ಬಿಎಸ್‌ಎಫ್

    ಚುನಾವಣಾ ಆಯೋಗವು ಲುಧಿಯಾನ ಪಶ್ಚಿಮ (Ludhiana West) ಉಪಚುನಾವಣೆಯ ದಿನಾಂಕಗಳನ್ನು ಇನ್ನೂ ಘೋಷಿಸಿಲ್ಲ. ನವೆಂಬರ್‌ನಲ್ಲಿ ನಡೆಯುವ ಬಿಹಾರ ವಿಧಾನಸಭಾ ಚುನಾವಣೆಯ ಜೊತೆಗೆ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ – ಸಚಿವ ಜಮೀರ್ ಬ್ಯಾಟಿಂಗ್‌

    ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಎಪಿ ನಾಯಕ ನೀಲ್ ಗರ್ಗ್, ಸಂಜೀವ್ ಅರೋರಾ ಅವರ ಉತ್ತಮ ಕೆಲಸಗಳನ್ನು ಪರಿಗಣಿಸಿ ಲುಧಿಯಾನ ಪಶ್ಚಿಮ ಉಪಚುನಾವಣೆಗೆ ಟಿಕೆಟ್ ನೀಡಲಾಗಿದೆ. ಕೇಜ್ರಿವಾಲ್ ರಾಜ್ಯಸಭೆಗೆ ಹೋಗುತ್ತಾರೆ ಎಂಬ ಊಹಾಪೋಹಗಳು ಸುಳ್ಳು ಮತ್ತು ಬಿಜೆಪಿ ಕಾರ್ಖಾನೆಯಿಂದ ಬಂದಿವೆ.

    ನಾವು ಮೊದಲು ಉಪಚುನಾವಣೆ ಗಮನ ಹರಿಸುತ್ತೇವೆ. ಬಳಿಕ ಮತ್ತು ನಂತರ ರಾಜ್ಯಸಭೆಯತ್ತ ಕೇಂದ್ರೀಕರಿಸುತ್ತೇವೆ ಎಂದಿದ್ದಾರೆ. ಅಲ್ಲದೇ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಇಂತಹ ವದಂತಿಗಳನ್ನು ಹರಡುತ್ತಿವೆ. ಇಂತಹ ವದಂತಿಗಳಾಗಿ ನಾನು ತಿರಸ್ಕರಿಸುತ್ತೇನೆ ಎಂದು ನೀಲ್ ಗರ್ಗ್ ಹೇಳಿದರು. ಇದನ್ನೂ ಓದಿ: ಪತ್ನಿ ಕೊಲೆ ಮಾಡಿ ಅಂತ್ಯಕ್ರಿಯೆ – ಕೊನೆ ಕ್ಷಣದಲ್ಲಿ ಎಂಟ್ರಿ ಕೊಟ್ಟ ಪೊಲೀಸರು, ಅರೆಸ್ಟ್ ಆದ ಗಂಡ

  • ಆಕಸ್ಮಿಕವಾಗಿ ಗುಂಡು ತಗುಲಿ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾವು

    ಆಕಸ್ಮಿಕವಾಗಿ ಗುಂಡು ತಗುಲಿ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾವು

    ಚಂಡೀಗಢ: ಪಂಜಾಬ್‌ನ (Punjab) ಲುಧಿಯಾನ (Ludhiana) ಕ್ಷೇತ್ರದ ಆಪ್ ಶಾಸಕ ಗುರುಪ್ರೀತ್ ಗೋಗಿ (Gurpreet Gogi) ಆಕಸ್ಮಿಕವಾಗಿ ಗುಂಡು ತಗುಲಿ ಶುಕ್ರವಾರ ತಡರಾತ್ರಿ ಸಾವನ್ನಪ್ಪಿದ್ದಾರೆ.

    ಗುರುಪ್ರೀತ್ ಗೋಗಿ (58) ಅವರ ತಲೆಗೆ ಗುಂಡು ತಗುಲಿದ ನಂತರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟು ಹೊತ್ತಿಗಾಗಲೇ ಶಾಸಕರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಜಸ್ಕರ್ ಸಿಂಗ್ ತೇಜ ತಿಳಿಸಿದ್ದಾರೆ. ಇದನ್ನೂ ಓದಿ: ಕೆನಡಾ ಪ್ರಧಾನಿ ಸ್ಥಾನಕ್ಕೆ ಟ್ರುಡೊ ರಾಜೀನಾಮೆ – ಭಾರತದ ಇಂಪ್ಯಾಕ್ಟ್ ಏನು?

    ಗೋಗಿ ಅವರ ಮೃತದೇಹವನ್ನು ಡಿಎಂಸಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ತಲೆಗೆ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಅಸಲಿ ಸತ್ಯ ಗೊತ್ತಾಗಲಿದೆ ಎಂದು ತೇಜ ಹೇಳಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯ ಶ್ರೀರಾಮನ ಮೂರ್ತಿಗೆ `ರಾಮಲಲ್ಲಾʼ ಅಂತ ಕರೆಯುವುದೇಕೆ?

  • ಕುಡಿದ ನಶೆಯಲ್ಲಿ ಟ್ರಕ್‌ನ ರೈಲ್ವೆ ಹಳಿಯಲ್ಲಿ ಬಿಟ್ಟ ಚಾಲಕ – ತಪ್ಪಿದ ಭಾರೀ ದುರಂತ

    ಕುಡಿದ ನಶೆಯಲ್ಲಿ ಟ್ರಕ್‌ನ ರೈಲ್ವೆ ಹಳಿಯಲ್ಲಿ ಬಿಟ್ಟ ಚಾಲಕ – ತಪ್ಪಿದ ಭಾರೀ ದುರಂತ

    ಚಂಡೀಗಢ: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಟ್ರಕ್ (Truck) ಅನ್ನು ರೈಲ್ವೇ ಹಳಿ (Railway Track) ಮೇಲೆ ಬಿಟ್ಟಿದ್ದು, ಅದೇ ಮಾರ್ಗವಾಗಿ ಆಗಮಿಸುತ್ತಿದ್ದ ರೈಲಿನ ಲೋಕೋ ಪೈಲಟ್ ಸಮಯಪ್ರಜ್ಞೆಯಿಂದಾಗಿ ಭಾರೀ ದುರಂತವೊಂದು ತಪ್ಪಿರುವ ಘಟನೆ ಪಂಜಾಬ್‌ನ (Punjab) ಲೂಧಿಯಾನಾದಲ್ಲಿ (Ludhiana) ನಡೆದಿದೆ.

    ಶುಕ್ರವಾರ ರಾತ್ರಿ ಟ್ರಕ್ ಚಾಲಕನೊಬ್ಬ ಕುಡಿದ ನಶೆಯಲ್ಲಿ ಟ್ರಕ್ ಅನ್ನು ಲೂಧಿಯಾನಾ-ದೆಹಲಿ ರೈಲ್ವೆ ಹಳಿಯಲ್ಲಿ ಓಡಿಸಿದ್ದಾನೆ. ಆತ ಶೇರ್ಪುರದಿಂದ ಲೂಧಿಯಾನ ರೈಲ್ವೆ ನಿಲ್ದಾಣದ ಕಡೆಗೆ ಹೋಗಿದ್ದು, ಈ ವೇಳೆ ಟ್ರಕ್ ಹಳಿಯ ಮೇಲೆ ಸಿಲುಕಿಕೊಂಡಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (GRP) ತನಿಖಾಧಿಕಾರಿ ಜಸ್ವಿರ್ ಸಿಂಗ್ ಹೇಳಿದ್ದಾರೆ.

    train

    ಟ್ರಕ್ ರೇಲ್ವೆ ಹಳಿಯಲ್ಲಿ ಸಿಲುಕಿಕೊಂಡ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಕೆಲವೇ ನಿಮಿಷಗಳಲ್ಲಿ ಅದೇ ಮಾರ್ಗವಾಗಿ ರೈಲೊಂದು ಆಗಮಿಸಿದ್ದು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ. ಈ ವೇಳೆ ಹಳಿಯ ಮೇಲೆ ಟ್ರಕ್ ನಿಂತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನು ತಿಳಿದ ಲೋಕೋ ಪೈಲಟ್ ಟ್ರಕ್ ನಿಂತಿದ್ದ ಸ್ಥಳದಿಂದ ಕೆಲವೇ ಮೀಟರ್‌ಗಳಷ್ಟು ದೂರದಲ್ಲಿ ರೈಲನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ – ನೆನೆಪಿದೆಯಾ ಆ ಕರಾಳ ದಿನಗಳು..?

    ಇದಾದ ಬಳಿಕ ಟ್ರಕ್ ಅನ್ನು ರೈಲ್ವೆ ಹಳಿಯಿಂದ ತೆರವುಗೊಳಿಸಿ, ಚಾಲಕನನ್ನು ಬಂಧಿಸಲಾಗಿದೆ. ಘಟನೆಯಿಂದಾಗಿ ಕೆಲಕಾಲ ರೈಲು ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸುಮಾರು 1 ಗಂಟೆಯ ನಂತರ ರೈಲು ಸಂಚಾರವನ್ನು ಪುನರಾರಂಭಿಸಲಾಗಿದೆ. ಚಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಮದ್ಯದ ಅಮಲಿನಲ್ಲಿದ್ದುದು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಬೆಂಗಳೂರಲ್ಲಿ 2ನೇ ದಿನದ ಕಂಬಳ – ಏನೇನಿದೆ ಕಾರ್ಯಕ್ರಮ?

  • 8 ಕೋಟಿ ರೂ. ಕದ್ದ ಕಳ್ಳರನ್ನು ಪತ್ತೆಹಚ್ಚಲು ಸಹಕಾರಿಯಾಯ್ತು 10 ರೂ. ಜ್ಯೂಸ್

    8 ಕೋಟಿ ರೂ. ಕದ್ದ ಕಳ್ಳರನ್ನು ಪತ್ತೆಹಚ್ಚಲು ಸಹಕಾರಿಯಾಯ್ತು 10 ರೂ. ಜ್ಯೂಸ್

    ಚಂಡೀಗಢ: ಕಳ್ಳರನ್ನು (Theif) ಪತ್ತೆಹಚ್ಚುವ ಸಲುವಾಗಿ ಪೊಲಿಸರು ಹಲವಾರು ಬಗೆಯ ಟ್ರಿಕ್ಸ್‌ಗಳನ್ನು ಬಳಸುವುದು ನೀವು ನೋಡಿರಬಹುದು. ಆದರೆ ಪಂಜಾಬ್‌ನಲ್ಲಿ (Punjab) 8 ಕೋಟಿ 49 ಲಕ್ಷ ರೂ. ಕದ್ದ ಕಳ್ಳರನ್ನು ಪತ್ತೆಹಚ್ಚುವಲ್ಲಿ ಪೊಲೀಸರಿಗೆ 10 ರೂ. ಜ್ಯೂಸ್ (Juice) ಸಹಾಯ ಮಾಡಿದೆ.

    ಜೂನ್ 10ರಂದು ಪಂಜಾಬ್‌ನ ಲೂಧಿಯಾನದಲ್ಲಿ (Ludhiana) 8 ಕೋಟಿ 49 ಲಕ್ಷ ರೂ. ದರೋಡೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೂಸ್‌ನ ಸಹಾಯದಿಂದ ಪೊಲೀಸರು ‘ಡಾಕು ಹಸೀನ’ ಎಂದು ಕರೆಯಲ್ಪಡುವ ಮನ್ದೀಪ್ ಕೌರ್ ಎಂಬಾಕೆ ಮತ್ತು ಆಕೆಯ ಪತಿ ಜಸ್ವಿಂದರ್ ಸಿಂಗ್‌ನನ್ನು ಉತ್ತರಾಖಂಡದ ಚಮೋಲಿಯ ಹೇಮಕುಂಡ್ ಸಾಹಿಬ್‌ನಲ್ಲಿ ಬಂಧಿಸಿದ್ದಾರೆ. ದಂಪತಿಯ ಹೊರತಾಗಿ ಪಂಜಾಬ್‌ನ ಗಿಡ್ಡರ್ ಬಾಹಾದಿಂದ ಗೌರವ್ ಎಂಬ ಆರೋಪಿಯನ್ನು ಸಹಾ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದ ಕುರಿತು ಇದುವರೆಗೆ 12 ಮಂದಿ ಆರೋಪಿಗಳ ಪೈಕಿ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಿದ ಆರೋಪಿ ದಂಪತಿ ತಮ್ಮ ಕೆಲಸ ಯಶಸ್ವಿಯಾಗಿ ನಡೆದುದ್ದಕ್ಕಾಗಿ ದೇವರಿಗೆ ಕೈಮುಗಿಯಲು ಸಿಖ್ ದೇಗುಲಕ್ಕೆ ತೆರಳಿದ್ದ ಸಂದರ್ಭ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಇದನ್ನೂ ಓದಿ: ಎಣ್ಣೆ ಏಟಲ್ಲಿ ಭಂಡ ಧೈರ್ಯದಿಂದ ಮೂರು ದಶಕದ ಹಿಂದಿನ ಕೊಲೆ ರಹಸ್ಯ ಬಾಯ್ಬಿಟ್ಟ!

    ಆರೋಪಿ ದಂಪತಿ ಕಳ್ಳತನ ಮಾಡಿದ ಬಳಿಕ ನೇಪಾಳಕ್ಕೆ (Nepal) ಹೋಗಲು ನಿರ್ಧರಿಸಿದ್ದು, ಅದಕ್ಕೂ ಮೊದಲು ಹರಿದ್ವಾರ, ಕೇದಾರನಾಥ ಮತ್ತು ಹೇಮಕುಂಡ್ ಸಾಹಿಬ್ ಸೇರಿದಂತೆ ವಿವಿಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲು ಯೋಚಿಸಿದ್ದಾರೆ. ಈ ಮಾಹಿತಿ ಪೊಲೀಸರಿಗೆ ದೊರತಿದ್ದು, ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭ ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಜನರನ್ನು ಲೆಕ್ಕಿಸದೇ ಗುಂಡು ಹಾರಿಸಿದ ದುಷ್ಕರ್ಮಿಗಳು – ಸಹೋದರನನ್ನು ಕಾಪಾಡಲು ಹೋಗಿ ಸಹೋದರಿಯರಿಬ್ಬರು ಬಲಿ

    ಉತ್ತರಾಖಂಡದ (Uttarakhand) ಸಿಖ್ ದೇಗುಲಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಬರುತ್ತಿದ್ದರು. ಅದರಲ್ಲಿ ಆರೋಪಿ ದಂಪತಿಯನ್ನು ಪತ್ತೆಹಚ್ಚುವುದು ಕಷ್ಟಕರವಾಗಿತ್ತು. ಹೀಗಾಗಿ ಪೊಲೀಸರು ಭಕ್ತಾದಿಗಳಿಗೆ ಪಾನೀಯ ವ್ಯವಸ್ಥೆಯನ್ನು ಮಾಡಿದ್ದರು. ಈ ಸಂದರ್ಭ ಎಲ್ಲರಂತೆ ಆರೋಪಿ ದಂಪತಿ ಮುಖ ಮುಚ್ಚಿಕೊಂಡು ಅಲ್ಲಿಗೆ ಬಂದಿದ್ದರು. ಆದರೆ ಪಾನೀಯ ಸೇವಿಸುವ ವೇಳೆ ತಮ್ಮ ಮುಖಕ್ಕೆ ಹಾಕಿಕೊಂಡಿದ್ದ ಬಟ್ಟೆಯನ್ನು ತೆಗೆಯಲೇ ಬೇಕಾಯಿತು. ಈ ಸಂದರ್ಭ ಪೊಲೀಸರು ಅವರನ್ನು ಗುರುತಿಸಿದ್ದಾರೆ. ಇದನ್ನೂ ಓದಿ: ತರಕಾರಿ ತರ್ತೀನಿ ಅಂತಾ ಮಾರ್ಕೆಟ್‌ಗೆ ಹೋದ ಮಹಿಳೆ ಪ್ರಿಯಕರನೊಂದಿಗೆ ಪರಾರಿ – ಗಂಡನ ಪಾಡು ಕೇಳೋರಿಲ್ಲ

    ಕೂತೂಹಲಕಾರಿ ವಿಷಯವೆಂದರೆ ಗುರುತಿಸಿದ ತಕ್ಷಣ ಪೊಲೀಸರು ಅವರನ್ನು ಬಂಧಿಸದೇ ಅವರಿಗೆ ಸಿಖ್ ದೇಗುಲದಲ್ಲಿ ದರ್ಶನ ಮಾಡಲು ಅವಕಾಶ ಮಾಡಿಕೊಟ್ಟರು. ಬಳಿಕ ದಂಪತಿಯನ್ನು ಹಿಂಬಾಲಿಸಿದ ಪೊಲೀಸರು ಅವರನ್ನು ಬೆನ್ನಟ್ಟಿ ಬಂಧಿಸಿದ್ದಾರೆ. ಆರೋಪಿಗಳ ಸೆರೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದ ತಂಡಕ್ಕೆ ‘ರಾಣಿ ಜೇನುನೊಣ ಹಿಡಿಯೋಣ’ ಎಂಬ ಹೆಸರನ್ನು ಇಡಲಾಗಿತ್ತು. ಮನ್ದೀಪ್ ಕೌರ್ ದಂಪತಿ ದ್ವಿಚಕ್ರ ವಾಹನದಲ್ಲಿದ್ದ 12 ಲಕ್ಷ ರೂ. ಮತ್ತು ಮನೆಯಲ್ಲಿದ್ದ 9 ಲಕ್ಷ ರೂ ಸೇರಿ ಒಟ್ಟು 21 ಲಕ್ಷ ರೂ.ಗಳನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಲೂಧಿಯಾನ ಪೊಲೀಸ್ ಕಮೀಷನರ್ ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ಅಪ್ರಾಪ್ತ ಸಹೋದರರಿಂದ ಸಾಮೂಹಿಕ ಅತ್ಯಾಚಾರ- ಇಬ್ಬರು ಅರೆಸ್ಟ್

  • ಶಾಲೆಯ ಬಳಿ ಗ್ಯಾಸ್ ಲೀಕ್ – ಹಲವು ಮಕ್ಕಳು ಅಸ್ವಸ್ಥ

    ಶಾಲೆಯ ಬಳಿ ಗ್ಯಾಸ್ ಲೀಕ್ – ಹಲವು ಮಕ್ಕಳು ಅಸ್ವಸ್ಥ

    ಚಂಡೀಗಢ: ಶಾಲೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ (Gas leak) ಹಲವಾರು ವಿದ್ಯಾರ್ಥಿಗಳು (Students) ಮತ್ತು ಶಿಕ್ಷಕರು (Teachers) ಪ್ರಜ್ಞಾಹೀನರಾದ (Unconscious) ಘಟನೆ ಪಂಜಾಬ್‍ನಲ್ಲಿ (Punjab) ಗುರುವಾರ ನಡೆದಿದೆ.

    ಅಸ್ವಸ್ಥಗೊಂಡ ಮಕ್ಕಳು ಹಾಗೂ ಶಿಕ್ಷಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಯನ್ನು ಮುಚ್ಚಲಾಗಿದ್ದು, ಉಳಿದ ಮಕ್ಕಳು ಹಾಗೂ ಸಿಬ್ಬಂದಿಯನ್ನು ಪೊಲೀಸರು ಬೇರೆಡೆಗೆ ಸ್ಥಳಾಂತರಿಸಿದ್ದಾರೆ. ಘಟನೆಗೆ ಕಾರಣವೇನೆಂದು ಪರಿಶೀಲನೆ ನಡೆಸಲಾಗುತ್ತಿದೆ. ಶಾಲೆಯ ಸಮೀಪದಲ್ಲಿರುವ ಎರಡು ದೊಡ್ಡ ಕೈಗಾರಿಕಾ ಘಟಕಗಳು ಅನಿಲ ಸೋರಿಕೆಯ ಮೂಲಗಳೆಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ಸ್ಫೋಟ ಪ್ರಕರಣ – ಐವರು ಆರೋಪಿಗಳ ಬಂಧನ

    ಸ್ಥಳದಲ್ಲಿ ಯಾವುದೇ ಅನಾಹುತಗಳು ನಡೆಯದಂತೆ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಅಂಬುಲೆನ್ಸ್‌ಗಳನ್ನು ಘಟನಾ ಸ್ಥಳದಲ್ಲಿ ಇರಿಸಲಾಗಿದೆ ಎಂದು ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

    ಇತ್ತೀಚೆಗೆ ಪಂಜಾಬ್‍ನ ಲುಧಿಯಾನಾದ (Ludhiana) ಗಿಯಾಸ್‍ಪುರ ಪ್ರದೇಶದಲ್ಲಿ ಅನಿಲ ಸೋರಿಕೆ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 11 ಜನ ಸಾವನ್ನಪ್ಪಿದ್ದರು. ಇದನ್ನೂ ಓದಿ: ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

  • ಲೂಧಿಯಾನ ಫ್ಯಾಕ್ಟರಿಯಲ್ಲಿ ಗ್ಯಾಸ್ ಲೀಕ್ – 9 ಮಂದಿ ಸಾವು

    ಲೂಧಿಯಾನ ಫ್ಯಾಕ್ಟರಿಯಲ್ಲಿ ಗ್ಯಾಸ್ ಲೀಕ್ – 9 ಮಂದಿ ಸಾವು

    ಚಂಡೀಗಢ: ಕಾರ್ಖಾನೆಯೊಂದರಲ್ಲಿ (Factory)  ವಿಷ ಅನಿಲ ಸೋರಿಕೆಯಾದ (Gas Leak) ಪರಿಣಾಮ 9 ಜನರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಪಂಜಾಬ್‌ನ (Punjab) ಲೂಧಿಯಾನದಲ್ಲಿ (Ludhiana) ಭಾನುವಾರ ನಡೆದಿದೆ.

    ಲೂಧಿಯಾನದ ಶೇರ್‌ಪುರ್ ಚೌಕ್ ಬಳಿಯ ಸುವಾ ರಸ್ತೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾಗಿದೆ. ಭಾನುವಾರ ಬೆಳಗ್ಗೆ 7:15ರ ವೇಳೆಗೆ ಅನಿಲ ಸೋರಿಕೆಯಾಗಿರುವುದು ಗಮನಕ್ಕೆ ಬಂದಿದೆ. ಘಟನೆಯಲ್ಲಿ 9 ಜನರು ಸಾವನ್ನಪ್ಪಿದ್ದು ಹತ್ತಾರು ಜನರು ವಿಷ ಅನಿಲ ಸೇವಿಸಿ ಅಸ್ವಸ್ಥರಾಗಿದ್ದಾರೆ. ಕಾರ್ಖಾನೆಯಲ್ಲಿ ಇನ್ನೂ ಅನೇಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ವರದಿಗಳ ಪ್ರಕಾರ ಡೈರಿ ಉತ್ಪನ್ನಗಳನ್ನು ಉತ್ಪಾದಿಸುವ ಕಾರ್ಖಾನೆಯಾದ ಗೋಯಲ್ ಮಿಲ್ಕ್ ಪ್ಲಾಂಟ್‌ನ ಕೂಲಿಂಗ್ ಸಿಸ್ಟಮ್‌ನಿಂದ ಅನಿಲ ಸೋರಿಕೆಯಾಗಿದೆ. ಇದರಿಂದ ಸಮೀಪದ ನಿವಾಸಿಗಳು ತಮ್ಮ ಮನೆಗಳಲ್ಲಿಯೇ ಮೂರ್ಛೆ ಹೋಗಿದ್ದಾರೆ. ಅನಿಲ ಸೋರಿಕೆ ವಿಚಾರ ಬೆಳಕಿಗೆ ಬರುತ್ತಲೇ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಸ್ಮಾರ್ಟ್ ಕ್ಲಾಸ್‍ನಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ಶೋ- ಶಿಕ್ಷಕ ಅರೆಸ್ಟ್

    ಭಟಿಂಡಾದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು (NDRF) ರಕ್ಷಣಾ ಕಾರ್ಯಾಚರಣೆಗೆ ಕರೆಸಲಾಗಿದ್ದು, ರಕ್ಷಣಾ ತಂಡ ಇಡೀ ಪ್ರದೇಶವನ್ನು ಸುತ್ತುವರಿದಿದೆ. ಗ್ಯಾಸ್ ಲೀಕ್ ಆಗಿರುವ ಪ್ರದೇಶದೆಡೆಗೆ ಯಾರೂ ಪ್ರವೇಶಿಸದಂತೆ ತಡೆಯಲಾಗಿದೆ. ಇದನ್ನೂ ಓದಿ: ಅಲ್‍ಖೈದಾ ಜೊತೆ ನಂಟು ಶಂಕೆ – ಶಂಕಿತ ಭಯೋತ್ಪಾದಕನ ಸೆರೆ

  • ಮರಕ್ಕೆ ಡಿಕ್ಕಿ ಹೊಡೆದ ಕಾರು – ಸ್ಥಳದಲ್ಲೇ 6 ಮಂದಿ ಸಾವು

    ಮರಕ್ಕೆ ಡಿಕ್ಕಿ ಹೊಡೆದ ಕಾರು – ಸ್ಥಳದಲ್ಲೇ 6 ಮಂದಿ ಸಾವು

    ಲಕ್ನೋ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಜನ ಮೃತಪಟ್ಟ ಘಟನೆ ಉತ್ತರ ಪ್ರದೇಶದ (Uttar Pradesh) ಶ್ರಾವಸ್ತಿ (Shravasti) ಜಿಲ್ಲೆಯ ಇಕೌನಾದ (Ikauna) ರಾಷ್ಟ್ರೀಯ ಹೆದ್ದಾರಿ 730 (NH 730)ರಲ್ಲಿ ಶನಿವಾರ ನಡೆದಿದೆ.

    ಘಟನೆಯಲ್ಲಿ ಕಾರಿನಲ್ಲಿದ್ದ ಉಳಿದ ಎಂಟು ಮಂದಿ ತೀವ್ರ ಗಾಯಗೊಂಡಿದ್ದು, ಅವರನ್ನು ಬಹ್ರೈಚ್ (Bahraich) ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂ ಆಗಿದ್ದು, ಸ್ಥಳದಿಂದ ಜೆಸಿಬಿ ಬಳಸಿ ತೆಗೆಯಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಾಚಿ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಂಬೈ-ಪುಣೆ ಹೆದ್ದಾರಿಯಲ್ಲಿ ಪ್ರಪಾತಕ್ಕೆ ಉರುಳಿದ ಬಸ್; 12 ಸಾವು

    ವಾಹನದಲ್ಲಿದ್ದ ಪ್ರಯಾಣಿಕರು ಸಭೆಯಲ್ಲಿ ಭಾಗವಹಿಸಲು ಲುಧಿಯಾನದಿಂದ (Ludhiana) ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ ಎಂದು ತಿಳಿದು ಬಂದಿದೆ.

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  (Yogi Adityanath) ಅವರು ಅಪಘಾತದಲ್ಲಿ ಪ್ರಾಣಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಪ್ರೇಯಸಿಯ ಬರ್ತ್‌ಡೇ ಕೇಕ್ ಕತ್ತರಿಸಿ ಬಳಿಕ ಕತ್ತನ್ನೂ ಕೊಯ್ದ ಪಾಗಲ್ ಪ್ರೇಮಿ

  • ಪ್ರೀತಿಸಿದವಳಿಂದ ಕಪಾಳಮೋಕ್ಷ – ಅವಮಾನ ಸಹಿಸಲಾರದೇ ಪ್ರಿಯಕರ ಆತ್ಮಹತ್ಯೆ

    ಪ್ರೀತಿಸಿದವಳಿಂದ ಕಪಾಳಮೋಕ್ಷ – ಅವಮಾನ ಸಹಿಸಲಾರದೇ ಪ್ರಿಯಕರ ಆತ್ಮಹತ್ಯೆ

    ಚಂಡೀಗಢ: ಪ್ರೀತಿಸಿದ ಯುವತಿ ಕಪಾಳಮೋಕ್ಷ ಮಾಡಿದ್ದರಿಂದ ಮನನೊಂದು ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಲೂಧಿಯಾನದಲ್ಲಿ (Ludhiana) ನಡೆದಿದೆ.

    ಗುರುದೀಪ್ ಸಿಂಗ್ (30) ಮೃತ ಪ್ರಿಯಕರನಾಗಿದ್ದು, ಆರೋಪಿಯನ್ನು ರಣವಾನ್ ಗ್ರಾಮದ ರಾಜ್ವಿಂದರ್ ಕೌರ್ ಎಂದು ಗುರುತಿಸಲಾಗಿದೆ. ದುಬೈನಲ್ಲಿ (Dubbai) ಕೆಲಸಮಾಡುತ್ತಿದ್ದ ನನ್ನ ಮಗ ಸುಮಾರು ಎರಡೂವರೆ ವರ್ಷಗಳ ಹಿಂದೆ ಮನೆಗೆ ಮರಳಿದ್ದನು. ಗುರ್ದೀಪ್ ಸಿಂಗ್ ವಿದೇಶದಲ್ಲಿದ್ದಾಗ ಗ್ರಾಮದಲ್ಲಿ ವಾಸಿಸುತ್ತಿದ್ದ ರಾಜ್ವಿಂದರ್ ಕೌರ್ ಜೊತೆ ರಿಲೇಷನ್‍ಶಿಪ್‍ನಲ್ಲಿದ್ದನು (Relationship). ಅಲ್ಲದೇ ಆಕೆಗೆ ಹಣವನ್ನು ಕಳುಹಿಸುತ್ತಿದ್ದನು.  ಇದನ್ನೂ ಓದಿ: 68ನೇ ಸಾಲಿನ ಚಲನಚಿತ್ರ ರಾಷ್ಟ್ರ ಪ್ರಶಸ್ತಿ ಪಡೆದ ಸ್ಟಾರ್‌ಗಳು ಇವರೇ

    ಯುವತಿ ತನ್ನ ಮಗನ ಕತ್ತು ಹಿಡಿದು ಮುಖಕ್ಕೆ ಕಪಾಳಮೋಕ್ಷ ಮಾಡುತ್ತಾ, ನನಗೆ ಯಾವುದೇ ಸಾಲವನ್ನು ನೀಡಿಲ್ಲ ಎಂದು ನಿಂದಿಸಿದ್ದಾಳೆ. ಘಟನೆ ಬಳಿಕ ನನ್ನ ಮಗ ಅಳುತ್ತಿದ್ದನು ಮತ್ತು ನನಗೆ ತುಂಬಾ ಅವಮಾನವಾಗಿದೆ, ನಾನು ಸಾಯುತ್ತೇನೆ ಎಂದು ಹೇಳಿದ್ದನು. ಅದೇ ರೀತಿ ಸಂಜೆ ವೇಳೆಗೆ ನನ್ನ ಮಗ ವಿಷ ಸೇವಿಸಿದ್ದಾನೆ. ಆತನ ಸ್ಥಿತಿ ಗಂಭೀರವಾಗಿದ್ದರಿಂದ ಕೂಡಲೇ ಲುಧಿಯಾನ ಸಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಗುರುದೀಪ್ ಸಿಂಗ್ ಅವರ ತಂದೆ ನಛತಾರ್ ಸಿಂಗ್ ಪೊಲೀಸರಿಗೆ ತಿಳಿಸಿದ್ದಾರೆ.

    ಇದೀಗ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಈ ಸಂಬಂಧ ತನಿಖೆ ನಡೆಸಲು ಆರಂಭಿಸಿದ್ದಾರೆ. ಇದನ್ನೂ ಓದಿ: ಹಿಂದೂ ಕುಟುಂಬಕ್ಕೋಸ್ಕರ ಏರಿಯಾದಲ್ಲಿ ಮುಸ್ಲಿಮರಿಂದ ದುರ್ಗಾ ಪೂಜೆ ಆಯೋಜನೆ

    Live Tv
    [brid partner=56869869 player=32851 video=960834 autoplay=true]

  • ಸಿಧು ಮೂಸೆವಾಲಾ ಹತ್ಯಾ ಪ್ರಕರಣ- ಕಾರಾಗೃಹದಲ್ಲಿ ಆರೋಪಿಗೆ ಕೈದಿಗಳಿಂದ ಹಲ್ಲೆ

    ಸಿಧು ಮೂಸೆವಾಲಾ ಹತ್ಯಾ ಪ್ರಕರಣ- ಕಾರಾಗೃಹದಲ್ಲಿ ಆರೋಪಿಗೆ ಕೈದಿಗಳಿಂದ ಹಲ್ಲೆ

    ಚಂಡೀಗಢ: ಪಂಜಾಬ್‌ನ ಖ್ಯಾತ ಗಾಯಕ ಹಾಗೂ ರಾಜಕಾರಣಿ ಸಿಧು ಮೂಸೆವಾಲಾ ಹತ್ಯಾ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗೆ ಕಾರಾಗೃಹದಲ್ಲಿ ಸಹ ಕೈದಿಗಳು ಹಲ್ಲೆ ನಡೆಸಿದ್ದಾರೆ.

    ಪಂಜಾಬ್‌ನ ಲೂಧಿಯಾನಾ ಕಾರಾಗೃಹ ಸೇರಿದ್ದ ಆರೋಪಿ ಸತ್ಬೀರ್ ಸಿಂಗ್‌ಗೆ ಇತರ ಕೈದಿಗಳು ದೈಹಿಕವಾಗಿ ಹಲ್ಲೆ ನಡೆಸಿದ್ದು, ಆತನ ತಲೆಗೆ ಗಾಯಗಳಾಗಿವೆ. ಆತನನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಗಾಯಗಳಿಗೆ ಹೊಲಿಗೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಾಯಿಯಿಂದ ನೀರು ಉಗುಳಿ ಬಟ್ಟೆ ಇಸ್ತ್ರಿ – ವೃದ್ಧನ ವೀಡಿಯೋ ವೈರಲ್

    ತಲ್ವಾಡಿಯ ಕುದುರೆ ವ್ಯಾಪಾರಿಯಾಗಿದ್ದ ಆರೋಪಿ ಸತ್ಬೀರ್, ಸಿಧು ಮೂಸೆವಾಲಾ ಹಂತಕರಿಗೆ ಶಸ್ತ್ರಾಸ್ತ್ರ ಸರಬರಾಜು ಮಾಡುವಲ್ಲಿ ಭಾಗಿಯಾಗಿದ್ದ. ಬಳಿಕ ಲೂಧಿಯಾನಾ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಭಾರೀ ಜನಪ್ರಿಯತೆ ಹೊಂದಿದ್ದ ಮೂಸೆವಾಲಾ ಹತ್ಯೆಯಿಂದ ಆಕ್ರೋಶಿತರಾಗಿದ್ದ ಕೈದಿಗಳು ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂಬ ಕಾರಣಕ್ಕೆ ಸತ್ಬೀರ್ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಭಾರತ ಸೇರಿದಂತೆ 4 ದೇಶಗಳ ರಾಯಭಾರಿಗಳನ್ನು ವಜಾಗೊಳಿಸಿದ ಝೆಲೆನ್ಸ್ಕಿ

    ಮೇ 29ರಂದು ಸಿಧು ಮೂಸೆವಾಲಾ ಅವರನ್ನು ಕಿಡಿಗೇಡಿ ಗುಂಪೊಂದು ಗುಂಡಿಕ್ಕಿ ಹತ್ಯೆ ನಡೆಸಿತ್ತು. ಹತ್ಯೆಗೂ 1 ದಿನ ಮುನ್ನ ಸಿಧು ಅವರ ಭದ್ರತೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊAಡಿತ್ತು. ಈ ಕಾರಣಕ್ಕೆ ಹಂತಕರು ಯೋಜಿತ ಕಾರ್ಯಾಚರಣೆ ಮೂಲಕ ಹತ್ಯೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 5 ಮಕ್ಕಳು ಸೇರಿ ಒಂದೇ ಕುಟುಂಬದ 7 ಮಂದಿ ಸಜೀವ ದಹನ

    5 ಮಕ್ಕಳು ಸೇರಿ ಒಂದೇ ಕುಟುಂಬದ 7 ಮಂದಿ ಸಜೀವ ದಹನ

    ಚಂಡೀಗಢ: ಗುಡಿಸಲಿನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ 5 ಮಕ್ಕಳು ಸೇರಿ ಒಂದೇ ಕುಟುಂಬದ 7 ಮಂದಿ ಸಜೀವದಹನಗೊಂಡಿರುವ ಘಟನೆ ಪಂಜಾಬ್‌ನ ಲೂದಿಯಾನದಲ್ಲಿ ನಡೆದಿದೆ.

    POLICE

    ಘಟನೆಯ ಕುರಿತು ಮಾಹಿತಿ ನೀಡಿರುವ ಟಿಬ್ಬಾ ಪೊಲೀಸ್ ಠಾಣೆಯ ಸಬ್‌ಇನ್ಸ್ಪೆಕ್ಟರ್ ಬಲದೇವ್ ರಾಜ್, ರಾತ್ರಿ 2 ಗಂಟೆ ಸುಮಾರಿಗೆ ಕುಟುಂಬ ಸದಸ್ಯರೆಲ್ಲರೂ ಗುಡಿಸಲಿನಲ್ಲಿ ಮಲಗಿದ್ದ ವೇಳೆ ಘಟನೆ ಸಂಭವಿಸಿದೆ. ಮೃತರನ್ನು ವಲಸೆ ಕಾರ್ಮಿಕರು ಎಂದು ಗುರುತಿಸಲಾಗಿದ್ದು, ಇವರು ಟಿಬ್ಬಾ ಪುರಸಭೆ ವ್ಯಾಪ್ತಿಯ ಕಸ ವಿಲೇವಾರಿ ಮಾಡುವ ರಸ್ತೆಯಲ್ಲಿ ಮಾರ್ಗದಲ್ಲಿರುವ ಗುಡಿಸಲುಗಳಲ್ಲಿ ವಾಸಿಸುತ್ತಿದ್ದರು ಎಂದು ಹೇಳಿದ್ದಾರೆ.

    ಮೃತಪಟ್ಟವರ ವೈಯಕ್ತಿಕ ವಿವರ ಪತ್ತೆಯಾಗಿಲ್ಲ. ಅಲ್ಲದೆ ಬೆಂಕಿ ಬಿದ್ದಿರುವುಕ್ಕೆ ನಿಖರ ಕಾರಣ ಏನೇಂಬುದೂ ತಿಳಿದಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಟಿಬ್ಬಾ ಠಾಣೆಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.