Tag: luknow

  • ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್‍ಗೆ ಏರ್ ಇಂಡಿಯಾ ಸಿಬ್ಬಂದಿಯಿಂದ ಅಂತಿಮ ನಮನ

    ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್‍ಗೆ ಏರ್ ಇಂಡಿಯಾ ಸಿಬ್ಬಂದಿಯಿಂದ ಅಂತಿಮ ನಮನ

    – ಹುಟ್ಟೂರು ತಲುಪಿದ ಅಖಿಲೇಶ್ ಮೃತದೇಹ

    ದೆಹಲಿ/ಲಕ್ನೋ: ಕೇರಳದ ಕೋಯಿಕ್ಕೋಡ್ ಕರಿಪುರ ವಿಮಾನ ದುರಂತದಲ್ಲಿ ಮಡಿದ ಪೈಲಟ್‍ಗೆ ಏರ್ ಇಂಡಿಯಾ ಎಕ್ಸ್‍ ಪ್ರೆಸ್ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿದರು.

    ಶುಕ್ರವಾರ ರಾತ್ರಿ ನಡೆದ ದುರಂತದಲ್ಲಿ ಪೈಲಟ್ ಅಖಿಲೇಶ್ ಕುಮಾರ್ ಮೃತಪಟ್ಟಿದ್ದರು. ಶನಿವಾರ ರಾತ್ರಿ ಏರ್ ಇಂಡಿಯಾ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿ, ಮೃತದೇಹ ಇಂದು ಬೆಳಗ್ಗೆ ಹುಟ್ಟೂರು ಉತ್ತರ ಪ್ರದೇಶದ ಮಥುರಾಗೆ ತಲುಪಿದೆ. ಇದನ್ನೂ ಓದಿ: ಅಜ್ಜಿ ಮನೆ ನೋಡುವ ಮುನ್ನವೇ ಕಣ್ಣು ಮುಚ್ಚಿದ 1 ವರ್ಷದ ಕಂದಮ್ಮ

    ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ದುಬೈನಲ್ಲಿ ಸಿಲುಕಿದ್ದ ಭಾರತೀಯರನ್ನು ಶುಕ್ರವಾರ ಏರ್ ಇಂಡಿಯಾ ವಿಮಾನ ಮೂಲಕ ಕೇರಳದ ಕೋಯಿಕ್ಕೋಡ್ ನಲ್ಲಿರುವ ಕರಿಪುರ ವಿಮಾನ ನಿಲ್ದಾಣಕ್ಕೆ ಕರೆತರಲಾಗುತ್ತಿತ್ತು. ಆದರೆ ದುರಾದೃಷ್ಟವಶಾತ್ ವಿಮಾನ ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಜಾರಿ ದುರಂತಕ್ಕೀಡಾಗಿತ್ತು.  ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಇಬ್ಭಾಗವಾದ್ರೂ ಬದುಕುಳಿದ ಪುಟ್ಟ ಕಂದಮ್ಮ

    ದುಬೈಯಿಂದ 190 ಪ್ರಯಾಣಿಕರನ್ನು ಕರೆತರುತ್ತಿದ್ದ ಏರ್‍ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ಪೈಲಟ್ ದೀಪಕ್ ವಸಂತ ಸಾಠೆ ಎರಡು ಬಾರಿ ವಿಮಾನ ನಿಲ್ದಾಣಕ್ಕೆ ಸುತ್ತು ಹೊಡೆಸಿದ್ದರು. ಆದರೆ ಪ್ರತಿಕೂಲ ಹವಾಮಾನದ ಸಮಸ್ಯೆಯ ಮಧ್ಯೆಯೂ ವಿಮಾನವನ್ನು ಟೇಬಲ್ ಟಾಪ್ ರನ್‍ವೇಯಲ್ಲಿ ಇಳಿಸಿದರೂ ಅದು 35 ಅಡಿ ಕಂದಕಕ್ಕೆ ಜಾರಿ ಬಿದ್ದು ಗೋಡೆಗೆ ಡಿಕ್ಕಿ ಹೊಡೆದು ಇಬ್ಭಾಗವಾಗಿತ್ತು. ಘಟನೆಯಲ್ಲಿ ಇಬ್ಬರು ಪೈಲಟ್ ಗಳು ಸೇರಿ 19 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಯುದ್ಧವಿಮಾನವನ್ನು ಹಾರಿಸಿದ್ದ ಪೈಲಟ್‌ ಸಾಠೆ 2 ಬಾರಿ ಲ್ಯಾಂಡಿಗ್‌ಗೆ ಪ್ರಯತ್ನಿಸಿದ್ರು

  • ರಾಮಮಂದಿರ ನಿರ್ಮಾಣದೊಂದಿಗೆ ದೇಶದಲ್ಲಿ ರಾಮರಾಜ್ಯ ಸ್ಥಾಪನೆಯಾಗಲಿದೆ: ಬಾಬಾ ರಾಮ್‍ದೇವ್

    ರಾಮಮಂದಿರ ನಿರ್ಮಾಣದೊಂದಿಗೆ ದೇಶದಲ್ಲಿ ರಾಮರಾಜ್ಯ ಸ್ಥಾಪನೆಯಾಗಲಿದೆ: ಬಾಬಾ ರಾಮ್‍ದೇವ್

    ಲಕ್ನೋ: ಶತಕೋಟಿ ಭಾರತೀಯರ ಶತಮಾನಗಳ ಹೋರಾಟದ ಫಲವಾಗಿ ಇಂದು ಅಯೋಧ್ಯೆಯಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಲಿದೆ. ರಾಮಂದಿರ ನಿರ್ಮಾಣದೊಂದಿಗೆ ಭಾರತದಲ್ಲಿ ರಾಮರಾಜ್ಯ ಸ್ಥಾಪನೆಯಾಗಲಿದೆ ಎಂದು ಯೋಗಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ.

    ಇಂದು ಬೆಳಗ್ಗೆ ಆಂಜನೇಯನ ದೇವಾಲಯಕ್ಕೆ ಭೇಟಿ ನೀಡಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇಂದು ಐತಿಹಾಸಿಕ ದಿನವಾಗಿದೆ. ಈ ದಿನವನ್ನು ನಾವೆಲ್ಲರೂ ದೀರ್ಘಕಾಲ ನೆನಪಿನಟ್ಟಿಕೊಳ್ಳಬಹುದು. ರಾಮದೇವಾಲಯದ ನಿರ್ಮಾಣದೊಂದಿಗೆ ಭಾರತದಲ್ಲಿ ‘ರಾಮರಾಜ್ಯ’ ಸ್ಥಾಪನೆಯಾಗಲಿದೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು. ಇದನ್ನೂ ಓದಿ:  ನಾಗರ ಶೈಲಿಯಲ್ಲಿ ರಾಮಮಂದಿರ- ಮೂರು ಅಂತಸ್ತಿನಲ್ಲಿ ಐದು ಗೋಪುರ ನಿರ್ಮಾಣ

    ಪ್ರಧಾನಿ ಮೋದಿಯವರು ಭೂಮಿ ಪೂಜೆ ಕಾರ್ಯವನ್ನು ನರವೇರಿಸಲಿದ್ದು, ಇದಕ್ಕೂ ಮೊದಲು ಅವರು ಕೂಡ ಆಂಜನೇಯನ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಾಲಯವನ್ನು ಈಗಾಗಲೇ ಸ್ಯಾನಿಟೈಸ್ ಮಾಡಲಾಗಿದೆ. ಇದನ್ನೂ ಓದಿ: ಭೂಕಂಪಕ್ಕೂ ಜಗ್ಗದಂತೆ ನಿರ್ಮಾಣವಾಗಲಿದೆ ರಾಮ ಮಂದಿರ

    ಹನುಮಂತ ಇಲ್ಲದೇ ರಾಮನ ಯಾವುದೇ ಕೆಲಸ ಆರಂಭಗೊಳ್ಳುವುದಿಲ್ಲ. ಈ ಕಾರಣಕ್ಕೆ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್ ಅವರು ಮೊದಲು ಹನುಮಂತನ ಪೂಜೆ ಮಾಡಿ ಆಶೀರ್ವಾದ ಪಡೆದ ಬಳಿಕ ರಾಮ ದೇವಸ್ಥಾನದ ಭೂಮಿ ಪೂಜೆಗೆ ತೆರಳುತ್ತಿದ್ದಾರೆ ಎಂದು ಹನುಮಂತ ದೇವಾಲಯ ಅರ್ಚಕ ಮಾಧವನ್ ದಾಸ್ ತಿಳಿಸಿದರು. ಇದನ್ನೂ ಓದಿ: ಸುತ್ತ 4 ಚಿಕ್ಕ ಮಂದಿರ – ರಾಮಮಂದಿರದ ಹೊರಗಡೆ ಏನೇನು ಇರಲಿದೆ?

  • ವಿಡಿಯೋ: ಹೆತ್ತವರ ಜೊತೆ ಮಲಗಿದ್ದ ಗಂಡು ಮಗು ಕಿಡ್ನಾಪ್

    ವಿಡಿಯೋ: ಹೆತ್ತವರ ಜೊತೆ ಮಲಗಿದ್ದ ಗಂಡು ಮಗು ಕಿಡ್ನಾಪ್

    ಲಕ್ನೋ: ಇತ್ತೀಚೆಗೆ ದೇಶದ ಕೆಲವೆಡೆ ಮಕ್ಕಳ ಕಳ್ಳರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ದಿನಕ್ಕೊಂದು ಘಟನೆಗಳು ಕೂಡ ನಡೆಯುತ್ತಲೇ ಇರುತ್ತವೆ. ಇದೀಗ ಉತ್ತರ ಪ್ರದಶದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಮಕ್ಕಳ ಹೆತ್ತವರು ಆತಂಕಕ್ಕೀಡಾಗಿದ್ದಾರೆ.

    ಹೌದು. ಗಲ್ಶಹೀದ್ ಪ್ರದೇಶದಲ್ಲಿರುವ ಬಸ್ ನಿಲ್ದಾಣದಲ್ಲಿ 8 ತಿಂಗಳ ಪುಟ್ಟ ಕಂದಮ್ಮವೊಂದು ತನ್ನ ತಂದೆ-ತಾಯಿ ಜೊತೆ ಮಲಗಿತ್ತು. ಈ ವೇಳೆ ಅಲ್ಲಿಗೆ ಬಂದ ಮಹಿಳೆ ಹಾಗೂ ಪುರುಷ ಮಗುವನ್ನು ಕದ್ದು ಅಲ್ಲಿಂದ ಕಾಲ್ಕಿತ್ತಿರುವುದು ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಈ ಘಟನೆ ಸೋಮವಾರ ನಡೆದಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    ಕಳ್ಳತನಕ್ಕೂ ಮೊದಲು ಆರೋಪಿ ಮಹಿಳೆ, ಮಗುವಿನ ತಾಯಿ ರಾಣಿ ಜೊತೆ ಮಾತನಾಡಿ ಸ್ನೇಹ ಬೆಳೆಸಿಕೊಳ್ಳುವ ಮೂಲಕ ಆಕೆಯ ಬಗ್ಗೆ ಮಾಹಿತಿ ಕಲೆಹಾಕಿಕೊಂಡಿದ್ದಳು. ಆ ನಂತರ ರಸ್ತೆ ಬದಿಯಲ್ಲಿ ರಾಣಿ ತನ್ನ ಪತಿ ಹಾಗೂ ಮಗುವಿನೊಂದಿಗೆ ರಸ್ತೆ ಬದಿಯ ಬಸ್ ನಿಲ್ದಾಣದಲ್ಲಿ ಮಲಗಿದ್ದ ಸಂದರ್ಭದಲ್ಲಿ ಮಗುವನ್ನು ಅಪಹರಿಸಿದ್ದಾರೆ. ರಾಣಿಗೆ ಎಚ್ಚರಗೊಂಡಾಗ ತನ್ನ ಮಗುವನ್ನು ಕದ್ದೊಯ್ಯುತ್ತಿರುವುದನ್ನು ನೋಡನೋಡುತ್ತಿದ್ದಂತೆಯೇ ಆರೋಪಿ ಅಲ್ಲಿಂದ ಎಸ್ಕೇಪ್ ಆಗಿದ್ದಾಳೆ. ಇದರಿಂದ ಗಾಬರಿಗೊಂಡ ಆಕೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸ್ ಅಧಿಕ್ಷಕ ಅಂಕಿತ್ ಮಿತ್ತಲ್ ತಿಳಿಸಿದ್ದಾರೆ.

    ವ್ಯಕ್ತಿ ಹಾಗೂ ಮಹಿಳೆ ನನ್ನ ಜೊತೆ ಮಾತುಕತೆ ನಡೆಸಿದ್ದರು. ಈ ವೇಳೆ ನಾನು ಅವರೊಂದಿಗೆ ಚೆನ್ನಾಗಿಯೇ ಮಾತನಾಡಿದ್ದೇನೆ. ಇದನ್ನೇ ಬಂಡವಾಳ ಮಾಡಿಕೊಂಡ ಅವರು ಕಂಬಳಿ ಹಾಗೂ ಮಗುವಿಗೆ ಬೇಕಾದ ಔಷಧಿಗಳನ್ನು ನೀಡುವ ಮೂಲಕ ಸಹಾಯ ಮಾಡಿದವರಂತೆ ನಟಿಸಿ ಮಗುವನ್ನೇ ಅಪಹರಿಸಿದ್ದಾರೆ ಎಂದು ರಾಣಿ ಪೊಲೀಸರ ಜೊತೆ ಅಳಲು ತೋಡಿಕೊಂಡಿದ್ದಾರೆ.

    ನನ್ನ ಜೊತೆ ಮಾತನಾಡಿದ ಬಳಿಕ ಅವರೇ ನಮ್ಮನ್ನು ಬಸ್ ನಿಲ್ದಾಣಕ್ಕೆ ಬಿಟ್ಟರು. ಅಲ್ಲದೆ ಅದೇ ದಿನ ರಾತ್ರಿ ಅವರು ಕೂಡ ಅದೇ ಬಸ್ ನಿಲ್ದಾಣದಲ್ಲಿ ಉಳಿದುಕೊಂಡರು. ಆದರೆ 12 ಗಂಟೆ ಸುಮಾರಿಗೆ ನಾನು ನಿದ್ದೆಗೆ ಜಾರಿದೆ. ಈ ವೇಳೆ ಅವರು ನನ್ನ ಮಗನನ್ನು ಕದ್ದೊಯ್ದರು. ಮಧ್ಯ ಎಚ್ಚರವಾದಾಗ ಮಗ ನನ್ನ ಹತ್ತಿರ ಇರಲಿಲ್ಲ. ಅಲ್ಲದೆ ನನ್ನ ಜೊತೆ ಮಾತನಾಡಿದ್ದ ಇಬ್ಬರು ಕೂಡ ಅಲ್ಲಿರಲಿಲ್ಲ. ಹೀಗಾಗಿ ಕೂಡಲೇ ನಾನು ಗಲ್ಶಹೀದ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುವುದಾಗಿ ರಾಣಿ ತಿಳಿಸಿದ್ದಾರೆ.

  • ‘Wait & See’ ಹೇಳುತ್ತಲೇ ಮೂವರ ಕೊಲೆಗೈದ ಟಿಕ್‍ಟಾಕ್ ಸ್ಟಾರ್ ಆತ್ಮಹತ್ಯೆ

    ‘Wait & See’ ಹೇಳುತ್ತಲೇ ಮೂವರ ಕೊಲೆಗೈದ ಟಿಕ್‍ಟಾಕ್ ಸ್ಟಾರ್ ಆತ್ಮಹತ್ಯೆ

    ಲಕ್ನೋ: ‘ವೈಟ್ ಆ್ಯಂಡ್ ಸೀ’ ಎನ್ನುತ್ತಲೇ ತನ್ನ ಮನದರಿಸಿ ಸೇರಿ ಮೂವರನ್ನು ಕೊಲೆಗೈದು ತಲೆಮರೆಸಿಕೊಂಡಿದ್ದ ಟಿಕ್ ಟಾಕ್ ಸ್ಟಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    33 ವರ್ಷದ ಅಶ್ವನಿ ಕುಮಾರ್ ಅಲಿಯಾಸ್ ಜಾನಿ ದಾದ ಮೂವರನ್ನು ಕೊಲೆಗೈದು ಪರಾರಿಯಾಗಿದ್ದು, ಇದೀಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಈತ ಟಿಕ್ ಟಾಕ್ ವಿಡಿಯೋ ಹಾಗೂ ಕೆಲವೊಂದು ಫೋಟೋಗಳನ್ನು ತನ್ನ ಫೇಸ್ ಬುಕ್ ನಲ್ಲಿ ಹಾಕಿ ಪೋಸ್ಟ್ ಮಾಡಿಕೊಂಡಿದ್ದನು. ಅಲ್ಲದೆ ನನ್ನ ಹಾನಿ ನೋಡಿ, ಎಲ್ಲವನ್ನೂ ನಾಶ ಮಾಡುತ್ತೇನೆ. ನಾನು ನಂಬಿದವರೇ ನನಗೆ ನೋವುಂಟು ಮಾಡಿ ಅವಮಾನ ಮಾಡಿದ್ದಾರೆ. ಹೀಗಾಗಿ ನಾನು ಅವರನ್ನು ಸುಮ್ಮನೆ ಬಿಡಲ್ಲ ಎಂದೆಲ್ಲ ಬರೆದುಕೊಂಡಿದ್ದನು.

    ಸೆಪ್ಟೆಂಬರ್ 26ರಂದು ಬಧಪುರ್ ನ ಬಿಜ್ನೋರ್ ಗೆ ಮದ್ಯಪಾನ ಮಾಡಲೆಂದು ಸ್ಥಳೀಯ ಬಿಜೆಪಿ ನಾಯಕ ಭೀಮ್ ಸಿಂಗ್ ಕಶ್ಯಪ್ ಮಗ 24 ವರ್ಷದ ಚಂದ್ರ ಭೂಷಣ್ ಅಲಿಯಾಸ್ ರಾಹುಲ್ ಹಾಗೂ ಆತನ ಸಹೋದರ 25 ವರ್ಷದ ಕೃಷ್ಣ ಅಲಿಯಾಸ್ ಲಾಲ ಎಂಬಿಬ್ಬರನ್ನು ಕರೆದು ಕೊಲೆ ಮಾಡಿರುವ ಆರೋಪ ಅಶ್ವನಿ ಕುಮಾರ್ ಮೇಲಿತ್ತು.

    ಇಷ್ಟು ಮಾತ್ರವಲ್ಲದೆ ಅಶ್ವನಿ, ಮಾಜಿ ಗಗನಸಖಿ 27 ವರ್ಷದ ನಿಖಿತಾ ಶರ್ಮಾಳನ್ನು ಸೆ.30ರಂದು ಆಕೆಯ ಮನೆಯಲ್ಲಿಯೇ ಹತ್ಯೆ ಮಾಡಿದ್ದನು. ಈ ಕೊಲೆಯ ಬಳಿಕ ಅಶ್ವನಿ ದೌಲತಾಬಾದ್ ಅರಣ್ಯ ಪ್ರದೇಶದ ಮೂಲಕ ತಲೆಮರೆಸಿಕೊಂಡಿದ್ದನು. ಈತನ ಪತ್ತೆಗೆ ಪೊಲೀಸರು ಹರಸಾಹಸಪಟ್ಟರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಪೊಲೀಸರೊಂದಿಗೆ ಕ್ಷಿಪ್ರ ಕಾರ್ಯಪಡೆ(ಆರ್‍ಎಎಫ್) ಅಧಿಕಾರಿಗಳು ಕೈ ಜೋಡಿಸಿದ್ದರು. ಹೀಗೆ ಪೊಲೀಸರು ಹಾಗೂ ಅಧಿಕಾರಿಗಳು ಅರಣ್ಯದಲ್ಲಿ ಕೊಂಬಿಂಗ್ ಕಾರ್ಯಾಚರಣೆ ನಡೆಸಿದರೂ ಆರೋಪಿಯ ಸುಳಿವು ಮಾತ್ರ ಸಿಕ್ಕಿರಲಿಲ್ಲ. ಇದನ್ನೂ ಓದಿ: ‘Wait And See’ ಹೇಳುತ್ತಲೇ 5 ದಿನದಲ್ಲಿ ಕ್ರಶ್ ಸೇರಿ ಮೂವರ ಕೊಲೆಗೈದ ಟಿಕ್‍ಟಾಕ್ ಸ್ಟಾರ್

    ಸದ್ಯ ಅಶ್ವನಿ ಮೃತಪಟ್ಟಿದ್ದಾನೆ ಎಂದು ಬಿಜ್ನೋರ್ ಪೊಲೀಸ್ ಅಧಿಕ್ಷಕ ಸಂಜೀವ್ ತ್ಯಾಗಿ ಸ್ಪಷ್ಟಪಡಿಸಿದ್ದಾರೆ. ಬಿಜ್ನೋರ್ ನಿಂದ ಪರಾರಿಯಾಗುವ ಸಲುವಾಗಿ ಉತ್ತರಾಖಂಡದ ಡೆಹ್ರಾಡೂನ್ ಗೆ ತೆರಳುತ್ತಿರುವ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಈತ ತನ್ನ ಕೈಯಲ್ಲಿ ರಿವಾಲ್ವರ್ ಹಿಡಿದುಕೊಂಡಿದ್ದನು. ಇದೀಗ ಅದರಲ್ಲಿ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

    ಪೊಲೀಸರ ತಂಡ ಬಧಾಪುರ್ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದರು. ಶನಿವಾರ ನಸುಕಿನ ಜಾವ 12.45 ರ ಸುಮಾರಿಗೆ ಬಸ್ಸಿನ ಚಾಲಕನ ಪಕ್ಕದಲ್ಲಿರುವ ಮುಂಭಾಗದ ಸೀಟಿನಲ್ಲಿ ಶಂಕಿತ ವ್ಯಕ್ತಿಯೊಬ್ಬ ಕುಳೀತಿದ್ದನು. ಈತ ತನ್ನ ಮುಖವನ್ನು ಕರ್ಚಿಪಿನಿಂದ ಮುಚ್ಚಿಕೊಂಡಿದ್ದನು. ಇದೇ ವೇಳೆ ಪೊಲೀಸರು ಮುಖದ ಮೇಲಿದ್ದ ಬಟ್ಟೆ ತೆಗೆಯುವಂತೆ ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ವ್ಯಕ್ತಿ ಪೊಲೀಸರಿಗೆ ತನ್ನ ಕೈಯಲಿದ್ದ ರಿವಾಲ್ವರ್ ನಿಂದ ಹೊಡೆದಿದ್ದಾನೆ. ಅಲ್ಲದೆ ಪೊಲೀಸರು ಆತನ ವಿರುದ್ಧ ಕ್ರಮಕೈಗೊಳ್ಳುವ ಮೊದಲೇ ಆತ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿದ್ದಾನೆ ಎಂದು ತ್ಯಾಗಿ ವಿವರಿಸಿದ್ದಾರೆ.

    ಆ ಬಳಿಕ ಶಂಕಿತನನ್ನು ಜಾನಿ ದಾದ ಎಂದು ಗುರುತಿಸಲಾಯಿತು. ಅಲ್ಲದೆ ಮೂರು ಜನರ ಹತ್ಯೆ ಪ್ರಕರಣದಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದವನೇ ಆಗಿದ್ದನು ಎಂದು ಹೇಳಿದರು.

  • ಮಾರಾಟ, ಗ್ಯಾಂಗ್‍ರೇಪ್- 20 ವರ್ಷದ ವಿಧವೆ ಬೆಂಕಿ ಹಚ್ಚಿಕೊಂಡಳು!

    ಮಾರಾಟ, ಗ್ಯಾಂಗ್‍ರೇಪ್- 20 ವರ್ಷದ ವಿಧವೆ ಬೆಂಕಿ ಹಚ್ಚಿಕೊಂಡಳು!

    – ಪ್ರಕರಣ ದಾಖಲಿಸಿಕೊಳ್ಳಲು ನಿರಾಕರಿಸಿದ ಪೊಲೀಸರು

    ಲಕ್ನೋ: 20 ವರ್ಷದ ಆಸುಪಾಸಿನ ವಿಧವೆಯನ್ನು ಆಕೆಯ ತಂದೆ ಹಾಗೂ ಅತ್ತೆ ಹಣದ ಆಸೆಗಾಗಿ ಮಾರಾಟ ಮಾಡಿದ್ದು, ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ. ಇದರಿಂದ ನೊಂದ ಸಂತ್ರಸ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ.

    ಹೌದು. ಹಣದ ಆಸೆಗಾಗಿ ಮಗಳನ್ನು ತಂದೆ 10,000 ರೂಗೆ ಮಾರಾಟ ಮಾಡಿದ್ದಾನೆ. ನಂತರ ಆಕೆಯನ್ನು ಇಟ್ಟುಕೊಂಡಿದ್ದ ವ್ಯಕ್ತಿ ಹಾಗೂ ಆತನ ಸ್ನೇಹಿತರು ಸೇರಿ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ. ಈ ಬಗ್ಗೆ ಸಂತ್ರಸ್ತೆ ದೂರು ನೀಡಲು ಹೋದಾಗ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ. ಇದರಿಂದ ನೊಂದ ಸಂತ್ರಸ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪರಿಣಾಮ ಆಕೆಯ ದೇಹ ಶೇ. 80ರಷ್ಟು ಸುಟ್ಟು ಹೋಗಿದೆ. ಸದ್ಯ ಸಂತ್ರಸ್ತೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ.

    ಮಹಿಳೆ ಮೂಲತಃ ಉತ್ತರಪ್ರದೇಶದ ಹಾಪೂರ್ ನವರಾಗಿದ್ದು, ಪತಿ ತೀರಿಕೊಂಡ ಬಳಿಕ ಆಕೆಯನ್ನು ಮಾರಾಟ ಮಾಡಲಾಗಿತ್ತು. ಈಕೆಯನ್ನು ಕೊಂಡ ವ್ಯಕ್ತಿ ಹಲವು ಮಂದಿಯಿಂದ ಸಾಲ ಪಡೆದುಕೊಂಡು ನಂತರ ಅವರ ಮನೆಗೆ ಕೆಲಸಕ್ಕಾಗಿ ಈಕೆಯನ್ನು ಕಳುಹಿಸುತ್ತಿದ್ದನು. ಅಲ್ಲಿ ಈಕೆ ಪ್ರತಿ ಬಾರಿಯೂ ದೌರ್ಜನ್ಯ ಹಾಗೂ ಅತ್ಯಾಚಾರಕ್ಕೊಳಗಾಗುತ್ತಿದ್ದಳು.

    ಘಟನೆ ಸಂಬಂಧಿಸಿದಂತೆ ತಿಂಗಳ ಬಳಿಕ ಇತ್ತೀಚೆಗೆ ಅಂದರೆ ಭಾನುವಾರ ಹಾಪೂರ್ ಎಸ್‍ಪಿ ಯಶ್ವೀರ್ ಸಿಂಗ್ 14 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಅತ್ಯಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇತ್ತ ದೆಹಲಿಯ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಳಿವಾಲ್ ಪ್ರಕರಣ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಪತ್ರ ಬರೆದಿದ್ದು, ಅದರಲ್ಲಿ ಸಂತ್ರಸ್ತೆಗೆ ನ್ಯಾಯ ಒದಗಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.

    ಸಂತ್ರಸ್ತೆ ಅತ್ಯಾಚಾರಿಗಳಿಂದ ಮಾತ್ರವಲ್ಲ, ಅತ್ಯಾಚಾರ ಮಾಡಿದವರ ವಿರುದ್ಧ ಎಫ್‍ಐಆರ್ ದಾಖಲಿಸಲು ನಿರಾಕರಿಸಿದ ಉತ್ತರ ಪ್ರದೇಶದ ಪೊಲೀಸರಿಂದ ಕೂಡ ಕಿರುಕುಳ ಅನುಭವಿಸಿದ್ದಾರೆ. ಇದು ಅತ್ಯಂತ ಸೂಕ್ಷ್ಮ ವಿಷಯವಾಗಿದೆ. ಅಲ್ಲದೆ ಸಂತ್ರಸ್ತೆ ದೂರು ನೀಡಲು ಹೋದಾಗ ಅದನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ ಪೊಲೀಸರಿಗೆ ನಾಚಿಕೆಯಾಗಬೇಕು. ಆಕೆ ದಹನ ಮಾಡಿಕೊಳ್ಳಲು ಯತ್ನಿಸಲು ಉತ್ತರ ಪ್ರದೇಶದ ಪೊಲೀಸರೂ ಕಾರಣರಾಗಿದ್ದಾರೆ ಎಂದು ಸ್ವಾತಿ ಅವರು ಪತ್ರದಲ್ಲಿ ದೂರಿದ್ದಾರೆ.

    ಪ್ರಕರಣ ಸಂಬಂಧ ನಿಖರವಾಗಿ ತನಿಖೆ ನಡೆಸಬೇಕು. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ವಾತಿ ಅವರು ಹಾಪೂರ್ ಪೊಲೀಸರನ್ನು ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿ, ಪ್ರಕರಣ ಸಂಬಂಧ 14 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

    ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ಸಂತ್ರಸ್ತೆ ಪೊಲೀಸರ ಬಳಿ ಹೇಳಿಕೊಂಡರೂ, ಪೊಲೀಸರು ಮಾತ್ರ ಹಣ ಪಡೆದುಕೊಂಡು ಪ್ರಕರಣವನ್ನು ಗಾಳಿಗೆ ತೂರಿದ್ದಾರೆ.

  • ವಿಡಿಯೋ: ನೀನು ನನ್ನ ಹಿಟ್ ಲಿಸ್ಟ್‌ನಲ್ಲಿದ್ದಿ- ಅಧಿಕಾರಿಗೆ ಬಿಜೆಪಿ ಮುಖಂಡ ಬೆದರಿಕೆ

    ವಿಡಿಯೋ: ನೀನು ನನ್ನ ಹಿಟ್ ಲಿಸ್ಟ್‌ನಲ್ಲಿದ್ದಿ- ಅಧಿಕಾರಿಗೆ ಬಿಜೆಪಿ ಮುಖಂಡ ಬೆದರಿಕೆ

    ಲಕ್ನೋ: ಮತದಾನದ ವೇಳೆ ಬಿಜೆಪಿ ಮುಖಂಡ ಹಾಗೂ ಪೊಲೀಸ್ ಅಧಿಕಾರಿ ಮಧ್ಯೆ ವಾಗ್ವಾದ ನಡೆದಿದ್ದು, ಈ ವೇಳೆ ಬಿಜೆಪಿ ಮುಖಂಡ ಅಧಿಕಾರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

    ಈ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿಗೆ ಬಿಜೆಪಿ ಮುಖಂಡ ಬೆದರಿಕೆ ಹಾಕುತ್ತಿರುವುದನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

    ವಿಡಿಯೋದಲ್ಲೇನಿದೆ?:
    ಬಿಜೆಪಿ ಮುಖಂಡ ಸುರೇಶ್ ಅವಾಸ್ಥಿ, ನೀನು ನನ್ನ ಹಿಟ್ ಲಿಸ್ಟ್ ನಲ್ಲಿದ್ದಿ. ನಿನ್ನನ್ನು ನಾಳೆ ನೋಡಿಕೊಳ್ಳುತ್ತೇನೆ ಎಂದು ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು. ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿ, ಅವನೇನು ಮಾಡಿಕೊಳ್ಳುತ್ತಾನೋ ಮಾಡಲಿ ಎಂದು ಖಾರವಾಗಿಯೇ ಉತ್ತರಿಸಿದ್ದಾರೆ.

    ಘಟನೆಯ ವೇಳೆ ಮೇಯರ್ ಪ್ರಮಿಳಾ ಪಾಂಡೆ ಹಾಗೂ ಇತರ ಬಿಜೆಪಿ ನಾಯಕರು ಸ್ಥಳದಲ್ಲಿದ್ದರು. ಆದರೆ ಅವರು ಬೆದರಿಕೆ ಹಾಕುವ ಬಿಜೆಪಿ ನಾಯಕನ್ನು ತಡೆಯುವ ಪ್ರಯತ್ನ ಮಾಡದಿರುವುದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

  • ಐಸಿಯುನಲ್ಲಿದ್ದ ಮಹಿಳಾ ರೋಗಿಯ ಮೇಲೆ ಸಿಬ್ಬಂದಿಯಿಂದ್ಲೇ ಗ್ಯಾಂಗ್ ರೇಪ್!

    ಐಸಿಯುನಲ್ಲಿದ್ದ ಮಹಿಳಾ ರೋಗಿಯ ಮೇಲೆ ಸಿಬ್ಬಂದಿಯಿಂದ್ಲೇ ಗ್ಯಾಂಗ್ ರೇಪ್!

    ಲಕ್ನೋ: ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಮೇಲೆ ಸಿಬ್ಬಂದಿಯೇ ಸಾಮೂಹಿಕ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ನಡೆದಿದೆ.

    ಈ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ಭಾನುವಾರ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಹಿಳೆ ಸೇರಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

    ಮಹಿಳೆ ಉಸಿರಾಟದ ತೊಂದರೆಯಿಂದ ಬಳುತ್ತಿದ್ದರು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಭಾನುವಾರ ಆಸ್ಪತ್ರೆಯ ನಾಲ್ವರು ಸಿಬ್ಬಂದಿ ಸೇರಿಕೊಂಡು ಮಹಿಳೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹರಿಮೋಹನ್ ಸಿಂಗ್ ತಿಳಿಸಿದ್ದಾರೆ.

    ಪತ್ನಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಅಲ್ಲಿ ಆಕೆಗೆ ಇಂಜೆಕ್ಷನ್ ಕೊಟ್ಟು ಸ್ಪಲ್ಪ ಮಲಗುವಂತೆ ವೈದ್ಯರು ಹೇಳಿದ್ದರು. ಹೀಗಾಗಿ ಆಕೆ ನಿದ್ದೆ ಮಾಡುತ್ತಿದ್ದಳು. ಈ ವೇಳೆ ಅಲ್ಲಿಯೇ ಆಕೆಯ ಮೇಲೆ ಮೂವರು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಮಹಿಳೆಯ ಪತಿ ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲು ಹೋದಾಗ, ಘಟನೆ ನಡೆದ ಸಂದರ್ಭದಲ್ಲಿ ಸಿಸಿಟಿವಿ ಆಫ್ ಮಾಡಲಾಗಿದೆ. ಹೀಗಾಗಿ ಸದ್ಯ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿರುವುದಾಗಿ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

  • ಮೂವರು ಅಪ್ರಾಪ್ತ ಹೆಣ್ಣುಮಕ್ಕಳ ತಲೆಗೆ ಸುತ್ತಿಗೆಯಿಂದ ಹೊಡೆದು ಬೆಂಕಿ ಕೊಟ್ಟ ಪಾಪಿ ತಂದೆ!

    ಮೂವರು ಅಪ್ರಾಪ್ತ ಹೆಣ್ಣುಮಕ್ಕಳ ತಲೆಗೆ ಸುತ್ತಿಗೆಯಿಂದ ಹೊಡೆದು ಬೆಂಕಿ ಕೊಟ್ಟ ಪಾಪಿ ತಂದೆ!

    ಲಕ್ನೋ: ತಂದೆಯೇ ತನ್ನ ಮೂವರು ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದ ಲಲಿತ್ ಪುರ್ ಜಿಲ್ಲೆಯ ವೀರ್ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

    ಮೂವರು ಹೆಣ್ಣು ಮಕ್ಕಳು 4 ಮತ್ತು 10 ವರ್ಷದ ಒಳಗಿನರಾಗಿದ್ದು, ಅವರಿಗೆ ಸುತ್ತಿಗೆಯಿಂದ ಹೊಡೆದು, ತಲೆಯನ್ನು ಜಜ್ಜಿ ಬಳಿಕ ಸುಡುವ ಮೂಲಕ ವಿಕೃತಿ ಮೆರೆದಿದ್ದಾನೆ.

    ಮಕ್ಕಳ ತಲೆಗೆ ಕಬ್ಬಿಣದ ಸುತ್ತಿಗೆಯಿಂದ ಹೊಡೆದ ಬಳಿಕ ಗ್ಯಾಸ್ ಸಿಲಿಂಡರ್ ಮೂಲಕ ಅವರಿಗೆ ಬೆಂಕಿಯಿಟ್ಟಿದ್ದಾನೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಕೃತ್ಯ ಎಸಗುವಾಗ ಮಕ್ಕಳ ತಂದೆ ಪದ್ಯಪಾನ ಮಾಡಿದ್ದನು ಅಂತ ಪೊಲೀಸರು ತಿಳಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆಯನ್ನು ಬಂಧಿಸಲಾಗಿದೆ ಅಂತ ಪೊಲೀಸ್ ಅಧೀಕ್ಷಕ ಒಪಿ ಸಿಂಗ್ ತಿಳಿಸಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ತನ್ನ ಮಕ್ಕಳನ್ನು ಗಂಡನ ಬಳಿಯೇ ಬಿಟ್ಟು ಪತ್ನಿ ತವರು ಮನೆಗೆ ಹೋಗಿರುವ ಹತಾಶೆಯಿಂದ ಈ ಕೃತ್ಯ ಎಸಗಿರಬಹುದು ಅಂತ ಪೊಲೀಸರು ಶಂಕಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅಯೋಧ್ಯೆಯಲ್ಲಿ ಅದ್ಧೂರಿಯಾಗಿ ದೀಪಾವಳಿ ಆಚರಣೆ- ವಿಶೇಷ ಸಂಭ್ರಮ ಯಾಕೆ..?

    ಅಯೋಧ್ಯೆಯಲ್ಲಿ ಅದ್ಧೂರಿಯಾಗಿ ದೀಪಾವಳಿ ಆಚರಣೆ- ವಿಶೇಷ ಸಂಭ್ರಮ ಯಾಕೆ..?

    ಲಕ್ನೋ: ದೇಶಾದ್ಯಂತ ಮನೆ ಮನೆಗಳಲ್ಲೂ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಅದ್ರಲ್ಲೂ ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ದೀಪಾವಳಿ ಸ್ವಲ್ಪ ಸ್ಪೆಷಲ್ ಹಬ್ಬವಾಗಿದೆ. ಅಯೋಧ್ಯೆಯಲ್ಲಿ ಅದ್ಧೂರಿಯಾಗಿ ದೀಪಾವಳಿ ಹಬ್ಬ ಆಚರಿಸಲಾಯ್ತು.

    ಇದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ದೀಪಾವಳಿ ದೀಪೋತ್ಸವದ ಸಂಭ್ರಮ ಮನೆಮಾಡಿತ್ತು. ವೇದಿಕೆ ಮೇಲೆ ರಂಗುರಂಗಿನ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ಹಾಗೆಯೇ ಕತ್ತಲಾದ ಮೇಲೆ ಎಲ್ಲೆಲ್ಲೂ ದೀಪಗಳ ಚಿತ್ತಾರ ಆಕರ್ಷಣೀಯವಾಗಿತ್ತು.

    ವಿಶೇಷ ಸಂಭ್ರಮ ಯಾಕೆ..?: ದೀಪಾವಳಿ ಅಯೋಧ್ಯೆ ಜನರಿಗೆ ವಿಶೇಷವಾದ ಹಬ್ಬವಾಗಿದೆ. ಯಾಕಂದ್ರೆ 14 ವರ್ಷಗಳ ವನವಾಸ ಮುಗಿಸಿ ಶ್ರೀರಾಮು ಅಯೋಧ್ಯೆಗೆ ವಾಪಸ್ ಆಗಿದ್ದ ದಿನವಾಗಿದೆ. ಅಯೋಧ್ಯೆಯ ರಾಮಮಂದಿರ ವಿವಾದದ ಬಿಸಿಯ ನಡುವೆಯೇ ಬುಧವಾರ ದೀಪಾವಳಿ ಹಬ್ಬವನ್ನು ವೈಭವೋಪಿತವಾಗಿ ಆಚರಿಸಲಾಯ್ತು. ಇದೇ ವೇಳೆ ಫೈಜಾಬಾದ್ ನಗರಕ್ಕೆ ಶ್ರೀ ಅಯೋಧ್ಯೆ ಅಂತ ಮರುನಾಮಕರಣ ಮಾಡಲಾಯ್ತು. ಇತ್ತೀಚೆಗಷ್ಟೇ ಅಲಹಬಾದ್ ಹೆಸರನ್ನು ಪ್ರಯೋಗ್‍ರಾಜ್ ಅಂತ ಹೆಸರು ಬದಲಿಸಲಾಗಿತ್ತು ಅಂತ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

    ಈ ಬಾರಿಯ ದೀಪೋತ್ಸವದಲ್ಲಿ ಕೊರಿಯಾ ಅಧ್ಯಕ್ಷೆ ಕಿಮ್ ಜುಂಗ್ ಸೂಕ್, ಕೊರಿಯಾದ ಪ್ರಥಮ ಪ್ರಜೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನನ್ನ ಅದೃಷ್ಟ ಅಂದ್ರು. ಅಲ್ಲದೇ ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್‍ಗೆ ಕೃತಜ್ಞತೆ ಸಲ್ಲಿಸಿದ್ರು.

    ದೀಪೋತ್ಸವದಲ್ಲಿ ಕಿಮ್ ಜುಂಗ್ ಸೂಕ್ ಭಾಗಿಯಾಗಲು ಕಾರಣವಿದೆ. ಅಯೋಧ್ಯೆಗೂ, ಕೊರಿಯಾಗೂ ಪ್ರಾಚೀನ ಕಾಲದಿಂದಲೂ ಸಂಬಂಧ ಇದೆ. ಕ್ರಿ.ಶ 48 ರ ಸುಮಾರಿಗೆ ಅಯೋಧ್ಯೆ ರಾಜಮನೆತನದ ಸುರೋ ಎಂಬವರನ್ನು ಕೊರಿಯಾದ ರಾಜ ಮದ್ವೆಯಾಗಿದ್ದರಂತೆ. ರಾಮಜನ್ಮಭೂಮಿಯಿಂದ ಬಂದವರು ಅಂತ ಅಲ್ಲಿನ ಜನ ತಾಯಿಯಂತೆ ನೋಡಿಕೊಂಡ್ರಂತೆ. ಅಂದಿನಿಂದ ಇಂದಿನವರೆಗೂ ಅಯೋಧ್ಯೆ ಜೊತೆ ಬಾಂಧವ್ಯ ಇಟ್ಟುಕೊಂಡಿದ್ದಾರೆ ಅನ್ನೋ ಪ್ರತೀತಿ ಇದೆ. ಒಟ್ಟಿನಲ್ಲಿ ರಾಮಜನ್ಮಭೂಮಿ ವಿವಾದ ದೇಶದ ಗಮನ ಸೆಳೆಯುತ್ತಿರುವ ಹೊತ್ತಲ್ಲೇ ಅಯೋಧ್ಯೆಯ ಅದ್ಧೂರಿ ದೀಪಾವಳಿ ವಿಶೇಷವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಕ್ಷಣಾ ಸಚಿವಾಲಯಕ್ಕೆ ವಂದನೆ ಸಲ್ಲಿಸಿದ್ರು ಸಿಎಂ ಎಚ್‍ಡಿಕೆ

    ರಕ್ಷಣಾ ಸಚಿವಾಲಯಕ್ಕೆ ವಂದನೆ ಸಲ್ಲಿಸಿದ್ರು ಸಿಎಂ ಎಚ್‍ಡಿಕೆ

    ಬೆಂಗಳೂರು: ಏರೋ ಇಂಡಿಯಾ ಪ್ರದರ್ಶನ ಈ ಬಾರಿ ಬೆಂಗಳೂರಿನಲ್ಲೇ ನಡೆಯುವುದು ಅಧಿಕೃತವಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಕ್ಷಣಾ ಸಚಿವಾಲಯಕ್ಕೆ ವಂದನೆಗಳನ್ನು ಸಲ್ಲಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಏರೋ ಇಂಡಿಯಾ ಪ್ರದರ್ಶನ ಈ ಬಾರಿಯೂ ಬೆಂಗಳೂರಿನಲ್ಲಿಯೇ ಜರುಗಲಿದೆ. ಇದು ನನಗೆ ತುಂಬಾ ಸಂತೋಷ ತಂದಿದೆ. ಬೆಂಗಳೂರಿನಿಂದ ಬೇರೆಡೆಗೆ ಸ್ಥಳಾಂತರಿಸಲಾಗುವುದು ಎನ್ನುವ ವಿಷಯ ಆತಂಕ ತಂದಿತ್ತು. ಪ್ರತಿಷ್ಠಿತ ಏರ್ ಶೋ ಇಲ್ಲಿಯೇ ಮುಂದುವರಿಸುತ್ತಿರುವುದಕ್ಕಾಗಿ ರಕ್ಷಣಾ ಸಚಿವಾಲಯಕ್ಕೆ ವಂದನೆ ಸಲ್ಲಿಸುತ್ತೇನೆ ಅಂತ ಹೇಳಿದ್ದಾರೆ.

    2019ರ ಏರೋ ಇಂಡಿಯಾ ಏರ್ ಶೋ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಸಲು ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಲಕ್ನೋದಲ್ಲಿ ಏರ್ ಶೋ ನಡೆಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೇಂದ್ರದ ಮೇಲೆ ಒತ್ತಡ ಹಾಕಿದ್ದರು. ಹೀಗಾಗಿ ಕೇಂದ್ರ ಸರ್ಕಾರ ಲಕ್ನೋದಲ್ಲಿ ನಡೆಸಲು ಸಿದ್ಧತೆ ನಡೆಸಿದೆ ಎನ್ನುವ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಈ ಸುದ್ದಿ ಪ್ರಕಟವಾಗುತ್ತಿದ್ದಂತೆ ಕನ್ನಡಿಗರು ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಬೆಂಗಳೂರಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಿದ್ದ ವೇಳೆ ಈ ಪ್ರಶ್ನೆ ಕೇಳಿದ್ದಕ್ಕೆ ವಿವಿಧ ರಾಜ್ಯಗಳು ಏರ್ ಶೋ ನಡೆಸುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿಸಿದರೇ ಹೊರತು ಬೆಂಗಳೂರಿನಲ್ಲೇ ನಡೆಯಲಿದೆ ಎನ್ನುವುದನ್ನು ತಿಳಿಸಿರಲಿಲ್ಲ. ಈ ಎಲ್ಲ ಕಾರಣದಿಂದ ಏರ್ ಶೋ ಬೆಂಗಳೂರಿನಲ್ಲಿ ನಡೆಯುತ್ತಾ ಎನ್ನುವ ಅನುಮಾನ ಎದ್ದಿತ್ತು.

    2019ರ ಫೆಬ್ರವರಿ 20-24ರ ವರೆಗೆ ಮೆಗಾ ಏರ್ ಶೋ ನಡೆಸಲು ಸಿದ್ಧತೆ ನಡೆದಿದೆ. 1996ರಿಂದ ಪ್ರತಿ ಎರಡು ವರ್ಷಕ್ಕೊಮ್ಮೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ಆಯೋಜನೆಯಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv