Tag: Lunar eclipse

  • ಖಗೋಳ ಕೌತುಕಕ್ಕೆ ನಭೋ ಮಂಡಲ ಸಾಕ್ಷಿ – ಸುದೀರ್ಘ ಚಂದ್ರಗ್ರಹಣ ಮುಕ್ತಾಯ

    ಖಗೋಳ ಕೌತುಕಕ್ಕೆ ನಭೋ ಮಂಡಲ ಸಾಕ್ಷಿ – ಸುದೀರ್ಘ ಚಂದ್ರಗ್ರಹಣ ಮುಕ್ತಾಯ

    ನವದೆಹಲಿ: ಖಗೋಳ ಕೌತುಕಕ್ಕೆ ನಭೋ ಮಂಡಲ ಸಾಕ್ಷಿ ಆಗಿದ್ದು, ಸುದೀರ್ಘ ಚಂದ್ರಗ್ರಹಣ (Lunar Eclipse)  ಮುಕ್ತಾಯವಾಗಿದೆ.

    ಆಗಸದಲ್ಲಿ ಹಾಲ್ಬೆಳದಿಂಗಳಂತೆ ಕಾಣುತ್ತಿದ್ದ ಚಂದಿರನಿಗೆ ಭಾನುವಾರ (ಸೆ.7) ರಾತ್ರಿ ಗ್ರಹಣ ಹಿಡಿದಿತ್ತು. ಬಾನಂಗಳದಲ್ಲಿ ಚಂದಿರ ಗ್ರಹಣದಿಂದ ಬಂಧಿ ಆಗಿದ್ದ. ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಅದೇ ರೀತಿ ಚಂದ್ರನ ಹೆಚ್ಚಿನ ಭಾಗ ಭೂಮಿಯ ನೆರಳು ಆವರಿಸಿದಾಗ ಚಂದ್ರ ಕೆಂಪು ಬಣ್ಣದಲ್ಲಿ ಕಾಣಿಸಿದ. ಈ ಮೂಲಕ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ಸಂಭವಿಸಿದೆ.ಇದನ್ನೂ ಓದಿ: ಚಂದ್ರ ಗ್ರಹಣ ವೇಳೆ ದೇವರಿಗೆ ಜಲಾಭಿಷೇಕ – ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಹೋಮ

    ರಾತ್ರಿ 9:57 ನಿಮಿಷಕ್ಕೆ ಸರಿಯಾಗಿ ಆರಂಭವಾದ ಚಂದ್ರಗ್ರಹಣ ಮೊದಲು ಸೈಪ್ರಸ್‌ನಲ್ಲಿ ಗೋಚರಿಸಿತು. ಇನ್ನೂ ಭಾರತದಲ್ಲಿ ಮೊದಲು ಲಡಾಖ್‌ನಲ್ಲಿ ಗೋಚರಿಸಿತು. ಟರ್ಕಿ, ಸೈಪ್ರಸ್, ಇಂಡೋನೇಷ್ಯಾದ ಜಕಾರ್ತಾ, ಆಸ್ಟ್ರೇಲಿಯಾದ ಸಿಡ್ನಿ, ಚೀನಾದ ಬೀಜಿಂಗ್, ದುಬೈನಲ್ಲಿ ಶ್ವೇತ ವರ್ಣದ ಚಂದಿರ ಕೆಂಬಣ್ಣದಲ್ಲಿ ಗೋಚರಿಸಿತು.

    ಆಕಾಶದಲ್ಲಿ ಹುಣ್ಣಿಮೆ ಚಂದಿರನೊಡನೆ ನೆರಳು ಬೆಳಕಿನ ಆಟ ನಡೆದಿತ್ತು. ಬಾನಂಗಳ ಬೆಳಗುವ ಚಂದ್ರನನ್ನು ಭೂಮಿಯ ನೆರಳು ಆವರಿಸಿತ್ತು. ರಾತ್ರಿ 11 ಗಂಟೆ ಸುಮಾರಿಗೆ ಚಂದ್ರಗ್ರಹಣ ಉತ್ತುಂಗ ಸ್ಥಿತಿ ತಲುಪಿತ್ತು. ಆಗಸದಲ್ಲಿ ಚಂದ್ರ ರಕ್ತರೂಪಿಯಾಗಿ ಕಂಗೊಳಿಸಿದ. ಭಾರತ ಸೇರಿದಂತೆ ವಿಶ್ವದ ಹಲವೆಡೆ ಚಂದ್ರಗ್ರಹಣವನ್ನು ಜನರು ಕಣ್ತುಂಬಿಕೊಂಡರು.

    ಇನ್ನೂ ಕರ್ನಾಟಕದಲ್ಲಿಯೂ ಹಲವೆಡೆ ರಕ್ತರೂಪಿ ಚಂದ್ರನ ಗೋಚರವಾಯಿತು. ಬೆಂಗಳೂರಿನ ಹಲವೆಡೆ ಮೋಡ ಕವಿದ ವಾತಾವರಣ ಇತ್ತು. ಹೀಗಾಗಿ ಚಂದ್ರಗ್ರಹಣ ಆರಂಭ ವೇಳೆ ಕೆಲಕಾಲ ಗ್ರಹಣ ಗೋಚರಿಸಲಿಲ್ಲ. ಸಮಯ ಕಳೆದಂತೆ ಮೋಡ ಸರಿದಾಗ ಚಂದ್ರಗ್ರಹಣ ಸ್ಪಷ್ಟವಾಗಿ ಗೋಚರಿಸಿತು.ಇದನ್ನೂ ಓದಿ: ನಭೋ ಮಂಡಲದಲ್ಲಿ ಖಗೋಳ ಕೌತುಕ – ಆಗಸದಲ್ಲಿ ರಕ್ತರೂಪಿ ಚಂದ್ರನ ದರ್ಶನ

    ಬೆಂಗಳೂರು:
    ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಚಂದ್ರಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳು, ವಯೋವೃದ್ಧರು. ಕುಟುಂಬ ಸಮೇತ ಆಗಮಿಸಿ ತಾರಾಲಯದಲ್ಲಿ ಕಣ್ತುಂಬಿಕೊಂಡರು. 4 ಟೆಲಿಸ್ಕೋಪ್, 1 ಎಲ್‌ಸಿಡಿ ವ್ಯವಸ್ಥೆ ಮಾಡಲಾಗಿತ್ತು. ಮತ್ತೊಂದ್ಕಡೆ ಕೋರಮಂಗಲದ ಭಾರತೀಯ ಖಗೋಳ ಭೌತ ವಿಜ್ಞಾನ ಸಂಸ್ಥೆಯಲ್ಲೂ ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ನೂರಾರು ಜನರು ಗ್ರಹಣ ವೀಕ್ಷಣೆ ಮಾಡಿ ಖಗೋಳ ಕೌತುಕ ಕಣ್ತುಂಬಿಕೊಂಡರು.

    ದಾವಣಗೆರೆ:
    ಬೆಂಗಳೂರು ಜೊತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಚಂದ್ರಗ್ರಹಣವನ್ನು ಜನರು ಕಣ್ತುಂಬಿಕೊಂಡಿದ್ದಾರೆ. ಬಾನಂಗಳದ ವಿಸ್ಮಯವನ್ನು ಬರಿಗಣ್ಣಿನಲ್ಲಿ ಕಂಡು ಸಂತಸಗೊಂಡಿದ್ದಾರೆ. ದಾವಣಗೆರೆಯಲ್ಲಿ ಮನೆ ಮನೆ ವಿಜ್ಞಾನ ದಾಸೋಹ ಹಾಗೂ ಬ್ರೇಕ್ ಥ್ರೂ ಸೈನ್ಸ್ ಸೊಸೈಟಿಯಿಂದ ಚಂದ್ರಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಇನ್ನೂ ದಾವಣಗೆರೆಯ ಶ್ರೀರಾಘವೇಂದ್ರ ಮಠದಲ್ಲಿ ಗ್ರಹಣ ಕಾಲದಲ್ಲಿ ಗ್ರಹಣ ಶಾಂತಿ ಹೋಮ ನೆರವೇರಿಸಲಾಯ್ತು. ದಾವಣಗೆರೆ ನಗರದ ದೀಕ್ಷಿತ್ ರಸ್ತೆಯಲ್ಲಿನ ರಾಘವೇಂದ್ರ ಮಠದಲ್ಲಿ ರಾಯರ ಬೃಂದಾವನಕ್ಕೆ ನಿರಂತರ ಜಲಾಭಿಷೇಕ ಮಾಡಲಾಯ್ತು. ನೂರಾರು ಭಕ್ತರು ಪೂಜೆಯಲ್ಲಿ ಭಾಗಿ ಆಗಿದ್ದರು.

    ಧಾರವಾಡ:
    ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಇರುವ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಚಂದ್ರ ವೀಕ್ಷಣೆಗೆ ಅವಕಾಶ ಮಾಡಲಾಗಿತ್ತು. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದ ಕಾರಣ ಚಂದ್ರಗ್ರಹಣ ಗೋಚರವಾಗಿಲ್ಲ. ಗ್ರಹಣ ವೀಕ್ಷಣೆಗೆ ಕಾಯ್ದಿದ್ದ ಜನರು ನಿರಾಸೆ ಉಂಟಾಯ್ತು.ಇದನ್ನೂ ಓದಿ: Video | ಸೂರ್ಯ-ಭೂಮಿ-ಚಂದ್ರ ಒಂದೇ ಸಾಲಿನಲ್ಲಿ ಬರಲು ಕಾರಣವೇನು?

    ಚಿಕ್ಕಮಗಳೂರು:
    ಇನ್ನು ಚಂದ್ರಗ್ರಹಣ ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದೇವಾಲಯಗಳಿಗೆ ದಿಗ್ಬಂಧನ ಹಾಕಲಾಗಿತ್ತು. ಆದರೆ ಚಿಕ್ಕಮಗಳೂರಿನ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ನಿರಂತರ ಜಲಾಭಿಷೇಕ ಮಾಡಲಾಗಿತ್ತು. ಗ್ರಹಣದ ಆರಂಭದಿಂದ ಅಂತ್ಯದವರೆಗೂ ಅನ್ನಪೂಣೇಶ್ವರಿಗೆ ವಿಶೇಷ ಪೂಜೆ ಮತ್ತು ಜಲಾಭಿಷೇಕ ಮಾಡಲಾಯಿತು.

    ಉತ್ತರ ಕನ್ನಡ:
    ಗ್ರಹಣ ಕಾಲದಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮಹಾಬಲೇಶ್ವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು. ಗ್ರಹಣ ಕಾಲದಲ್ಲಿ ಮಹಾಬಲೇಶ್ವರನ ಆತ್ಮಲಿಂಗ ದರ್ಶನಕ್ಕೆ ಭಕ್ತ ಸಾಗರ ಹರಿದು ಬಂದಿತ್ತು. ಗ್ರಹಣ ಮೋಕ್ಷ ಕಾಲದವರೆಗೂ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು,.

    ರಾಯಚೂರು:
    ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ ರಾಯಚೂರಿನ ದೇವದುರ್ಗ ತಾಲ್ಲೂಕಿನ ಕೋಣಚಪ್ಪಳಿ ಗ್ರಾಮದಲ್ಲಿ ಗ್ರಾಮಸ್ಥರು ಭಜನೆ ಮೊರೆ ಹೋಗಿದ್ದರು. ಆಂಜನೇಯ ದೇವಾಲಯದಲ್ಲಿ ಕೊಣಚಪ್ಪಳಿ ಗ್ರಾಮಸ್ಥರು ಲೋಕದ ಒಳಿತಿಗಾಗಿ ಭಜನೆ ಕೈಗೊಂಡರು.ಇದನ್ನೂ ಓದಿ: Blood Moon Photo Gallery | ವಿದೇಶಗಳಲ್ಲೂ ರಕ್ತಚಂದ್ರನ ಚಮತ್ಕಾರ – ನೀವೂ ಕಣ್ತುಂಬಿಕೊಳ್ಳಿ

    ಬಾಗಲಕೋಟೆ:
    ಬಾಗಲಕೋಟೆಯ ಬಾದಾಮಿಯ ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮಹಾಕೂಟದಲ್ಲಿ ಚಂದ್ರಗ್ರಹಣ ಪ್ರಯುಕ್ತ ನೀರಿನಲ್ಲಿ ಧ್ಯಾನ ಮಾಡಲಾಯಿತು. ಪುಷ್ಕರಣಿಯಲ್ಲಿ ಸಾವಿರಾರು ಜನರು, ಸಾಧು ಸಂತರು ಧ್ಯಾನ ಮಾಡಿದರು.

    ಇನ್ನುಳಿದಂತೆ ದೆಹಲಿ, ಮುಂಬೈ, ಕೋಲ್ಕತ್ತಾ, ಯುಪಿಯಲ್ಲೂ ಚಂದ್ರಗ್ರಹಣ ಗೋಚರಿಸಿತು. ಕೆಂಪು ವರ್ಣಕ್ಕೆ ತಿರುಗಿದ ಹುಣ್ಣಿಮೆ ಚಂದಿರನನ್ನು ಜನರು ಕಣ್ತುಂಬಿಕೊಂಡರು. ಒಟ್ಟಾರೆ ವರ್ಷದ 2ನೇ ಮತ್ತು ಕೊನೆಯ ಚಂದ್ರಗ್ರಹಣ ಮುಕ್ತಾಯವಾಗಿದೆ. ರಾತ್ರಿ 9:57ಕ್ಕೆ ಆರಂಭವಾದ ಗ್ರಹಣ ಮಧ್ಯರಾತ್ರಿ 1:26ಕ್ಕೆ ಅಂತ್ಯವಾಯಿತು. ಬರೋಬ್ಬರಿ ಮೂರೂವರೆ ಗಂಟೆಗಳ ಕಾಲ ಗ್ರಹಣ ಸಂಭವಿಸಿತು. ಗ್ರಹಣ ಮೋಕ್ಷ ಬಳಿಕ ದೇವಾಲಯಗಳಲ್ಲಿ ಶುದ್ಧಿ ಕಾರ್ಯ ನಡೆಸಲಾಗುತ್ತಿದೆ.ಇದನ್ನೂ ಓದಿ: Blood Moon Photo Gallery | ಬಾನಂಗಳದಲ್ಲಿ ಖಗೋಳ ಕೌತುಕ – ರಾಜ್ಯದಲ್ಲಿ ಎಲ್ಲೆಲ್ಲಿ ರಕ್ತಚಂದ್ರನ ದರ್ಶನ?

  • ಚಂದ್ರ ಗ್ರಹಣ ವೇಳೆ ದೇವರಿಗೆ ಜಲಾಭಿಷೇಕ – ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಹೋಮ

    ಚಂದ್ರ ಗ್ರಹಣ ವೇಳೆ ದೇವರಿಗೆ ಜಲಾಭಿಷೇಕ – ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಹೋಮ

    ಬೆಂಗಳೂರು: ಖಗ್ರಾಸ ರಕ್ತಚಂದ್ರಗ್ರಹಣ (Lunar Eclipse) ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದೇವಾಲಯಗಳಿಗೆ ದಿಗ್ಬಂಧನ ಹಾಕಲಾಗಿತ್ತು. ಆದ್ರೆ ಚಿಕ್ಕಮಗಳೂರಿನ (Chikkamagaluru) ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ನಿರಂತರ ಜಲಾಭಿಷೇಕ ಮಾಡಲಾಗಿತ್ತು. ಗ್ರಹಣದ ಆರಂಭದಿಂದ ಅಂತ್ಯದವರೆಗೂ ಅನ್ನಪೂಣೇಶ್ವರಿಗೆ ವಿಶೇಷ ಪೂಜೆ ಮತ್ತು ಜಲಾಭಿಷೇಕ ಮಾಡಲಾಯ್ತು.

    ಗ್ರಹಣ ಕಾಲದಲ್ಲಿ ಉತ್ತರ ಕನ್ನಡ (Uttarakannada) ಜಿಲ್ಲೆ ಗೋಕರ್ಣ ಮಹಾಬಲೇಶ್ವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿತ್ತು. ಗ್ರಹಣ ಕಾಲದಲ್ಲಿ ಮಹಾಬಲೇಶ್ವರನ ಆತ್ಮಲಿಂಗ ದರ್ಶನಕ್ಕೆ ಭಕ್ತ ಸಾಗರ ಹರಿದು ಬಂದಿತ್ತು. ಗ್ರಹಣ ಮೋಕ್ಷ ಕಾಲದವರೆಗೂ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದನ್ನೂ ಓದಿ: ನಭೋ ಮಂಡಲದಲ್ಲಿ ಖಗೋಳ ಕೌತುಕ – ಆಗಸದಲ್ಲಿ ರಕ್ತರೂಪಿ ಚಂದ್ರನ ದರ್ಶನ

    ರಾಯಚೂರಿನ (Raichur) ದೇವದುರ್ಗ ತಾಲ್ಲೂಕಿನ ಕೋಣಚಪ್ಪಳಿ ಗ್ರಾಮದಲ್ಲಿ ಗ್ರಾಮಸ್ಥರು ಭಜನೆ ಮೊರೆ ಹೋಗಿದ್ದರು. ಆಂಜನೇಯ ದೇವಾಲಯದಲ್ಲಿ ಕೊಣಚಪ್ಪಳಿ ಗ್ರಾಮಸ್ಥರು ಲೋಕದ ಒಳಿತಿಗಾಗಿ ಭಜನೆ ಕೈಗೊಂಡರು. ನಗರದ ಜವಾಹರನಗರದಲ್ಲಿನ ಗುರು ರಾಘವೇಂದ್ರ ಸ್ವಾಮಿಗಳ ಶಾಖಾ ಮಠದಲ್ಲಿ ಗ್ರಹ ದೋಷಗಳ ಪರಿಹಾರಕ್ಕೆ ಭಕ್ತರಿಂದ ಜಪ ತಪ ನೆರವೇರಿಸಲಾಯಿತು. ನೂರಾರು ಭಕ್ತರು ತುಪ್ಪ, ಎಳ್ಳನ್ನ ಬಳಸಿ ಗ್ರಹಣ ಮುಕ್ತಾಯದವರೆಗೂ ಶಾಂತಿ ಹೋಮ ನೆರವೇರಿಸಿದರು.

    ಬಾಗಲಕೋಟೆಯ ಬಾದಾಮಿಯ ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮಹಾಕೂಟದಲ್ಲಿ ಚಂದ್ರಗ್ರಹಣ ಪ್ರಯುಕ್ತ ನೀರಿನಲ್ಲಿ ಧ್ಯಾನ ಮಾಡಲಾಯ್ತು. ಪುಷ್ಕರಣಿಯಲ್ಲಿ ಸಾವಿರಾರು ಜನರು, ಸಾಧು ಸಂತರು ಧ್ಯಾನ ಮಾಡಿದ್ರು. ಇದನ್ನೂ ಓದಿ: Blood Moon Photo Gallery | ಬಾನಂಗಳದಲ್ಲಿ ಖಗೋಳ ಕೌತುಕ – ರಾಜ್ಯದಲ್ಲಿ ಎಲ್ಲೆಲ್ಲಿ ರಕ್ತಚಂದ್ರನ ದರ್ಶನ?

    ದಾವಣಗೆರೆ ಶ್ರೀರಾಘವೇಂದ್ರ ಮಠದಲ್ಲಿ ಗ್ರಹಣ ಶಾಂತಿ ಹೋಮ ನೆರವೇರಿಸಲಾಯಿತು. ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ನಿರಂತರ ಜಲಾಭಿಷಕದೊಂದಿಗೆ ಮುಖ್ಯ ಅರ್ಚಕರಿಂದ ಪೂಜಾ ಕೈಂಕರ್ಯ ಮಾಡಲಾಯಿತು. ಪೂಜೆಗೂ ಮುನ್ನ ಗುರು ರಾಘವೇಂದ್ರ ನಾಮ ಜಪ ಮೂಲಕ ನವಗ್ರಹ ದೇವತೆಗಳ ಆಹ್ವಾನ ನಡೆಯಿತು. ಹೋಮದಲ್ಲಿ ನೂರಾರು ಜನರು ಭಾಗಿಯಾಗಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೋಡಗಳ ಮರೆಯಲ್ಲಿ ಮರೆಯಾಗಿರೋ ಚಂದ್ರ – ‌ನೆಲಮಂಗಲದಲ್ಲಿ ಹುಣ್ಣಿಮೆ ಚಂದ್ರನ ದರ್ಶನ

  • ನಭೋ ಮಂಡಲದಲ್ಲಿ ಖಗೋಳ ಕೌತುಕ – ಆಗಸದಲ್ಲಿ ರಕ್ತರೂಪಿ ಚಂದ್ರನ ದರ್ಶನ

    ನಭೋ ಮಂಡಲದಲ್ಲಿ ಖಗೋಳ ಕೌತುಕ – ಆಗಸದಲ್ಲಿ ರಕ್ತರೂಪಿ ಚಂದ್ರನ ದರ್ಶನ

    – ಬೆಂಗಳೂರಿನಲ್ಲಿ ನೆರಳು-ಬೆಳಕಿನ ಆಟದ ಬಳಿಕ ರಕ್ತಚಂದ್ರನ ಚಮತ್ಕಾರ

    ಬೆಂಗಳೂರು: ಖಗೋಳ ಕೌತುಕಕ್ಕೆ ನಭೋ ಮಂಡಲ ಸಾಕ್ಷಿ ಆಗಿದೆ. ಆಗಸದಲ್ಲಿ ಹಾಲ್ಬೆಳದಿಂಗಳಂತೆ ಕಾಣುತ್ತಿದ್ದ ಚಂದಿರನಿಗೆ ರಾತ್ರಿ ಗ್ರಹಣ ಹಿಡಿದಿತ್ತು.

    ಸರಿಯಾಗಿ 9 ಗಂಟೆ 57 ನಿಮಿಷಕ್ಕೆ ಗ್ರಹಣ ಶುರುವಾಯಿತು. ಬಾನಂಗಳದಲ್ಲಿ ಚಂದಿರ ಗ್ರಹಣದಿಂದ ಬಂಧಿ ಆಗಿದ್ದ. ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಅದೇ ರೀತಿ ಚಂದ್ರನ ಹೆಚ್ಚಿನ ಭಾಗ ಭೂಮಿಯ ನೆರಳು ಆವರಿಸಿದಾಗ ಚಂದ್ರ ಕೆಂಪು ಬಣ್ಣದಲ್ಲಿ ಕಾಣಿಸಿದ. ವರ್ಷದ 2ನೇ ಮತ್ತು ಕೊನೆಯ ಚಂದ್ರಗ್ರಹಣಕ್ಕೆ ಇಡೀ ವಿಶ್ವ ಸಾಕ್ಷಿಯಾಗಿತು. ಇದನ್ನೂ ಓದಿ: Blood Moon Photo Gallery | ಬಾನಂಗಳದಲ್ಲಿ ಖಗೋಳ ಕೌತುಕ – ರಾಜ್ಯದಲ್ಲಿ ಎಲ್ಲೆಲ್ಲಿ ರಕ್ತಚಂದ್ರನ ದರ್ಶನ?

    ರಾತ್ರಿ 9 ಗಂಟೆ 57 ನಿಮಿಷಕ್ಕೆ ಸರಿಯಾಗಿ ಆರಂಭವಾದ ಚಂದ್ರಗ್ರಹಣ ಮೊದಲು ಗೋಚರಿಸಿದ್ದು ಸೈಪ್ರಸ್‌ನಲ್ಲಿ. ಭಾರತದಲ್ಲಿ ಮೊದಲ ಗೋಚರಿಸಿದ್ದು ಲಡಾಖ್‌ನಲ್ಲಿ. ಟರ್ಕಿ, ಸೈಪ್ರಸ್, ಇಂಡೋನೇಷ್ಯಾದ ಜಕಾರ್ತ, ಆಸ್ಟ್ರೇಲಿಯಾ ಸಿಡ್ನಿ, ಚೀನಾದ ಬೀಜಿಂಗ್, ದುಬೈನಲ್ಲಿ ಶ್ವೇತ ವರ್ಣದ ಚಂದಿರ ಕೆಂಬಣ್ಣದಲ್ಲಿ ಗೋಚರಿಸಿತು. ಇದನ್ನೂ ಓದಿ: Video | ಸೂರ್ಯ-ಭೂಮಿ-ಚಂದ್ರ ಒಂದೇ ಸಾಲಿನಲ್ಲಿ ಬರಲು ಕಾರಣವೇನು?

    ಬೆಂಗ್ಳೂರಲ್ಲಿ ಗ್ರಹಣ ಗೋಚರ
    ಇನ್ನೂ ಬೆಂಗಳೂರಿನಲ್ಲಿ ಆರಂಭದ ಒಂದು ಗಂಟೆ ಕಳೆದರೂ ಮೋಡದ ಮರೆಯಲ್ಲಿ ಆಟವಾಡುತ್ತಿದ್ದ ಚಂದಿರ ಬಳಿಕ ಕಿತ್ತಳೆ ಬಣ್ಣ, ನಂತರ ರಕ್ತ ರೂಪಕ್ಕೆ ತಿರುಗಿದ. ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಚಂದ್ರಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳು, ವಯೋವೃದ್ಧರು, ಕುಟುಂಬ ಸಮೇತ ಆಗಮಿಸಿ ತಾರಾಲಯದಲ್ಲಿ ಕಣ್ತುಂಬಿಕೊಂಡರು. 4 ಟೆಲಿಸ್ಕೋಪ್, 1 ಎಲ್‌ಸಿಡಿ ವ್ಯವಸ್ಥೆ ಮಾಡಲಾಗಿತ್ತು. ಮತ್ತೊಂದ್ಕಡೆ ಕೋರಮಂಗಲದ ಭಾರತೀಯ ಖಗೋಳ ಭೌತ ವಿಜ್ಞಾನ ಸಂಸ್ಥೆಯಲ್ಲೂ ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ನೂರಾರು ಜನರು ಗ್ರಹಣ ವೀಕ್ಷಣೆ ಮಾಡಿ ಖಗೋಳ ಕೌತುಕ ಕಣ್ತುಂಬಿಕೊಂಡರು.

    ಅಲ್ಲದೇ ರಾಜ್ಯದ ವಿವಿಧೆಡೆ ಆಕಾಶದಲ್ಲಿ ಹುಣ್ಣಿಮೆ ಚಂದಿರನೊಡನೆ ನೆರಳು ಬೆಳಕಿನ ಆಟ ನಡೆದಿತ್ತು. ಬಾನಂಗಳ ಬೆಳಗುವ ಚಂದ್ರನನ್ನು ಭೂಮಿಯ ನೆರಳು ಆವರಿಸಿತ್ತು. ರಾತ್ರಿ 11 ಗಂಟೆ ಸುಮಾರಿಗೆ ಚಂದ್ರಗ್ರಹಣ ಉತ್ತುಂಗ ಸ್ಥಿತಿ ತಲುಪಿತ್ತು. ಆಗಸದಲ್ಲಿ ಚಂದ್ರ ರಕ್ತರೂಪಿಯಾಗಿ ಕಂಗೊಳಿಸಿದ. ಭಾರತ ಸೇರಿದಂತೆ ವಿಶ್ವದ ಹಲವೆಡೆ ಚಂದ್ರ ಗ್ರಹಣವನ್ನು ಜನರು ಕಣ್ತುಂಬಿಕೊಂಡರು. ಇದನ್ನೂ ಓದಿ: ಬಾನಂಗಳದಲ್ಲಿ ರಕ್ತ ಚಂದ್ರಗ್ರಹಣ ಗೋಚರ – ವಿಸ್ಮಯ ಕಣ್ತುಂಬಿಕೊಂಡ ಜನ

    ರಾಜ್ಯದ ವಿವಿಧೆಡೆ ರಕ್ತ ಚಂದ್ರನ ದರ್ಶನ
    ಬೆಂಗಳೂರು ಜೊತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಚಂದ್ರಗ್ರಹಣವನ್ನು ಜನರು ಕಣ್ತುಂಬಿಕೊಂಡಿದ್ದಾರೆ. ಬಾನಂಗಳದ ವಿಸ್ಮಯವನ್ನು ಬರಿಗಣ್ಣಿನಲ್ಲಿ ಕಂಡು ಸಂತಸಗೊಂಡಿದ್ದಾರೆ. ದಾವಣಗೆರೆಯಲ್ಲಿ ಮನೆ ಮನೆ ವಿಜ್ಞಾನ ದಾಸೋಹ ಹಾಗೂ ಬ್ರೇಕ್ ಥ್ರೂ ಸೈನ್ಸ್ ಸೊಸೈಟಿಯಿಂದ ಚಂದ್ರಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಇರುವ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಚಂದ್ರ ವೀಕ್ಷಣೆಗೆ ಅವಕಾಶ ಮಾಡಲಾಗಿತ್ತು. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದ ಕಾರಣ ಚಂದ್ರಗ್ರಹಣ ಗೋಚರವಾಗಿಲ್ಲ.. ಗ್ರಹಣ ವೀಕ್ಷಣೆಗೆ ಕಾಯ್ದಿದ್ದ ಜನರು ನಿರಾಸೆ ಉಂಟಾಯ್ತು. ಇದನ್ನೂ ಓದಿ: Blood Moon Photo Gallery | ವಿದೇಶಗಳಲ್ಲೂ ರಕ್ತಚಂದ್ರನ ಚಮತ್ಕಾರ – ನೀವೂ ಕಣ್ತುಂಬಿಕೊಳ್ಳಿ

  • Blood Moon Photo Gallery | ವಿದೇಶಗಳಲ್ಲೂ ರಕ್ತಚಂದ್ರನ ಚಮತ್ಕಾರ – ನೀವೂ ಕಣ್ತುಂಬಿಕೊಳ್ಳಿ

    Blood Moon Photo Gallery | ವಿದೇಶಗಳಲ್ಲೂ ರಕ್ತಚಂದ್ರನ ಚಮತ್ಕಾರ – ನೀವೂ ಕಣ್ತುಂಬಿಕೊಳ್ಳಿ

    ಬೆಂಗಳೂರು: ಭಾರತ ಸೇರಿದಂತೆ ವಿಶ್ವದ ಕೋಟ್ಯಂತರ ಜನ ನಭೋಮಂಡಲದ ಕೌತುಕ ಕಣ್ತುಂಬಿಕೊಂಡಿದ್ದಾರೆ. ಈ ವರ್ಷದ ಕೊನೆಯ ಚಂದ್ರಗ್ರಹಣ ಹಾಗೂ 2ನೇ ರಕ್ತಚಂದ್ರ ಗ್ರಹಣ ಕಣ್ತುಂಬಿಕೊಂಡು ಖುಷಿಪಟ್ಟಿದ್ದಾರೆ. ರಾತ್ರಿ 9:57ರಿಂದ ಗ್ರಹಣ ಪ್ರಕ್ರಿಯೆ ಶುರುವಾಗಿದೆ. ಮೊದಲು ಬಿಳಿ ಬಣ್ಣದಲ್ಲಿ ಪೂರ್ಣಚಂದ್ರ ಗೋಚರವಾದ ಬಳಿಕ ಕಿತ್ತಳೆ, ಬಳಿಕ ಕೆಂಪು ವರ್ಣಕ್ಕೆ ತಿರುಗಿದ್ದಾನೆ. ಇಸ್ರೇಲ್‌, ಜಪಾನ್‌, ಕೀನ್ಯಾ, ನಮೀಬಿಯಾ, ದಕ್ಷಿಣ ಆಫ್ರಿಕಾ ಸೇರಿದಂತೆ ವಿವಿಧ ದೇಶಗಳಲ್ಲಿ ರಕ್ತಚಂದ್ರನ ದರ್ಶನವಾಗಿದೆ. ಈ ಕುರಿತ ಚಿತ್ರಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಹೀಗೆ…

    ಟೊಕಿಯೊ
    ಜಪಾನ್
    ಇಸ್ರೇಲ್‌
    ಗ್ರೀಸ್‌ನ ಅಥೆನ್ಸ್‌
    ಕೀನ್ಯಾ
    ದಕ್ಷಿಣ ಆಫ್ರಿಕಾ
    ನಮೀಬಿಯಾ
  • ಬೆಂಗಳೂರಿನಲ್ಲಿ ಮೋಡಗಳ ಮರೆಯಲ್ಲಿ ಮರೆಯಾಗಿರೋ ಚಂದ್ರ – ‌ನೆಲಮಂಗಲದಲ್ಲಿ ಹುಣ್ಣಿಮೆ ಚಂದ್ರನ ದರ್ಶನ

    ಬೆಂಗಳೂರಿನಲ್ಲಿ ಮೋಡಗಳ ಮರೆಯಲ್ಲಿ ಮರೆಯಾಗಿರೋ ಚಂದ್ರ – ‌ನೆಲಮಂಗಲದಲ್ಲಿ ಹುಣ್ಣಿಮೆ ಚಂದ್ರನ ದರ್ಶನ

    – ಈಗ ಲಡಾಖ್‌ನಲ್ಲಷ್ಟೇ ಗ್ರಹಣ ಗೋಚರ

    ಬೆಂಗಳೂರು: ನಭೋಮಂಡಲದ ವಿಸ್ಮಯದ ಅದ್ಭುತ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ. ಈಗಷ್ಟೇ ಚಂದ್ರಗ್ರಹಣದ (Lunar Eclipse) ಪ್ರಕ್ರಿಯೆ ಆರಂಭವಾಗಿಬಿಟ್ಟಿದೆ. ರಾತ್ರಿ 9:57ರಿಂದ ಮಧ್ಯರಾತ್ರಿ 1:26ರ ವರೆಗೆ ಒಟ್ಟು ಮೂರೂವರೆ ಗಂಟೆಗಳ ಕಾಲ ನಿಧಾನವಾಗಿ ಗ್ರಹಣ ಸಂಭವಿಸಲಿದೆ.

    ಸದ್ಯ ದೇಶದಲ್ಲಿ ಲಡಾಖ್‌ನಲ್ಲಷ್ಟೇ ಗ್ರಹಣ ಗೋಚರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು (Bengaluru), ತಮಿಳುನಾಡು ಸೇರಿ ನಾಲ್ಕು ಕಡೆಗಳಲ್ಲಿ ಮೋಡ ಕವಿದ ಹಿನ್ನೆಲೆಯಲ್ಲಿ ಚಂದ್ರ ಕಣ್ಮರೆಯಾಗಿದ್ದಾನೆ. ಆಗಾಗ್ಗೆ ಭುವಿಯತ್ತ ಇಣುಕಿ ಮತ್ತೆ ಮೋಡದಲ್ಲಿ ಮರೆಯಾಗುತ್ತಿದ್ದಾನೆ. ಇದನ್ನೂ ಓದಿ: ಗ್ರಹಣದ ವೇಳೆ ಶುಭಕಾರ್ಯಗಳು ನಿಷಿದ್ಧ – ಸೂತಕದ ಸಮಯದಲ್ಲಿ ಏನು ಮಾಡಬೇಕು? ಏನು ಮಾಡಬಾರ್ದು?

    ಇನ್ನೂ ನೆಲಮಂಗಲದಿಂದ ಆಕಾಶದಲ್ಲಿ ಹುಣ್ಣಿಮೆ ಚಂದ್ರನ ದರ್ಶನವಾಗಿದೆ. ನೆಲಮಂಗಲ ತಾಲೂಕಿನ ಭಟ್ಟರಹಳ್ಳಿ ಗ್ರಾಮದಲ್ಲಿ ಉಂಗುರ ಆಕಾರದಲ್ಲಿ ಪೂರ್ಣ ಚಂದ್ರ ಕಾಣಿಸಿಕೊಂಡಿದ್ದಾನೆ. ಇದನ್ನೂ ಓದಿ: Lunar Eclipse | ರಕ್ತ ಚಂದ್ರಗ್ರಹಣಕ್ಕೆ ಕೌಂಟ್‌ಡೌನ್ – ಖಗ್ರಾಸ ಖಗೋಳ ಕೌತುಕ ಕಣ್ತುಂಬಿಕೊಳ್ಳಲು ಕಾತರ

    ನೆಹರೂ ತಾರಾಲಯದಲ್ಲಿ ಸಕಲ ಸಿದ್ಧತೆ
    ಚಂದ್ರಗ್ರಹಣ ವೀಕ್ಷಣೆಗೆ ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗ್ರಹಣ ವೀಕ್ಷಣೆಗೂ ಮುನ್ನ ತಾರಾಲಯದ ನಿರ್ದೇಶಕ ಗುರುಪ್ರಸಾದ್ ರಿಂದ ಉಪನ್ಯಾಸ ನೀಡಲಾಗುತ್ತಿದೆ. ಇದರ ನಡುವೆ ಮಕ್ಕಳು, ಹಿರಿಯರು ಸೇರಿದಂತೆ ಕುಟುಂಬ ಸಮೇತ ಚಂದ್ರನ ವೀಕ್ಷಣೆ ಮಾಡಲಾಗುತ್ತಿದೆ. ಇದನ್ನೂ ಓದಿ: Lunar Eclipse: ಚಂದ್ರನೇಕೆ ಕೆಂಪು ಕೆಂಪಾಗಲಿದ್ದಾನೆ?; ಗ್ರಹಣ ವೀಕ್ಷಣೆಗೆ ಎಲ್ಲೆಲ್ಲಿ ವ್ಯವಸ್ಥೆ?

  • Lunar Eclipse | ರಕ್ತ ಚಂದ್ರಗ್ರಹಣಕ್ಕೆ ಕೌಂಟ್‌ಡೌನ್ – ಖಗ್ರಾಸ ಖಗೋಳ ಕೌತುಕ ಕಣ್ತುಂಬಿಕೊಳ್ಳಲು ಕಾತರ

    Lunar Eclipse | ರಕ್ತ ಚಂದ್ರಗ್ರಹಣಕ್ಕೆ ಕೌಂಟ್‌ಡೌನ್ – ಖಗ್ರಾಸ ಖಗೋಳ ಕೌತುಕ ಕಣ್ತುಂಬಿಕೊಳ್ಳಲು ಕಾತರ

    ಬೆಂಗಳೂರು: ಚಂದ್ರಗ್ರಹಣ (Lunar Eclipse) ಪ್ರಕ್ರಿಯೆ ಶುರುವಾಗಿದೆ. ಬಾಹ್ಯಾಕಾಶದಲ್ಲಿ ಚಂದ್ರಚೋದ್ಯ ಅಂತೀರೋ…? ಚಂದ್ರನ ಚಮತ್ಕಾರ ಅಂತೀರೋ..? ಪೌರಾಣಿಕ, ವೈಜ್ಞಾನಿಕ, ಐತಿಹಾಸಿಕ, ಧಾರ್ಮಿಕವಾಗಿಯೂ ಚಂದ್ರ ನಮ್ಮೆಲ್ಲರ ಜೊತೆ ಬೆಸೆದು ಹೋಗಿದ್ದಾನೆ. ಆದ್ರೆ, ಈಗ ರಕ್ತವರ್ಣದಲ್ಲಿ (Blood Moon) ಚಂದ್ರಗ್ರಹಣ ಸಂಭವಿಸ್ತಿರೋದ್ರಿಂದ ಎಲ್ಲರಲ್ಲೂ ಆತಂಕ.

    ಈಗಷ್ಟೇ ಚಂದ್ರಗ್ರಹಣದ ಪ್ರಕ್ರಿಯೆ ಆರಂಭವಾಗಿಬಿಟ್ಟಿದೆ. ರಾತ್ರಿ 9:57ರಿಂದ ಮಧ್ಯರಾತ್ರಿ 1:26ರ ವರೆಗೆ ಒಟ್ಟು ಮೂರೂವರೆ ಗಂಟೆಗಳ ಕಾಲ ನಿಧಾನವಾಗಿ ಗ್ರಹಣ ಸಂಭವಿಸಲಿದೆ. ಇದನ್ನು ರಕ್ತಚಂದ್ರಗ್ರಹಣ, ರಾಹುಗ್ರಸ್ಥ, ಖಗ್ರಾಸ ಚಂದ್ರಗ್ರಹಣ ಅಂತಲೂ ಕರೀತಾರೆ. ಉತ್ತರ & ದಕ್ಷಿಣ ಅಮೆರಿಕ ಹೊರತು ಪಡಿಸಿ ಜಗತ್ತಿನಾದ್ಯಂತ ಅದರಲ್ಲೂ ಭಾರತದಲ್ಲಿ ಸಂಪೂರ್ಣವಾಗಿ ಗ್ರಹಣ ಗೋಚರ ಆಗುತ್ತೆ. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೂರ್ಣ ಚಂದ್ರ ಗೋಚರ ಆಗಿದೆ.

    ಸುದೀರ್ಘ ಅವಧಿಯ ಅಪರೂಪದ ಚಂದ್ರಗ್ರಹಣ ಇದಾಗಿದೆ. ರಾಜ್ಯದ ಬಹುತೇಕ ದೇಗುಲಗಳು ಬಂದ್ ಆಗಿದ್ರೆ. ಕೆಲ ಈಶ್ವರ ದೇಗುಲಗಳಲ್ಲಿ ಅಭಿಷೇಕಗಳು ನಡೀತಿವೆ. ಇದೊಂದು ಖಗೋಳ ಕೌತುಕವಾಗಿದ್ದು ಬರಿಗಣ್ಣಿನಲ್ಲೇ ವೀಕ್ಷಿಸಬಹುದಾಗಿದೆ. ಇನ್ನು, ವಿಜ್ಞಾನಿಗಳ ಪಾಲಿಗೆ ಇದು ಖಗೋಳ ವಿಸ್ಮಯವಾದರೆ. ಭಾದ್ರಪದ ಪೂರ್ಣಿಮೆಯ ದಿನವಾದ ಇಂದು ಜ್ಯೋತಿಷ್ಯದ ಪಾಲಿಗೆ ಗ್ರಹಣ ಶುಭ- ಅಶುಭಗಳ ಲೆಕ್ಕಾಚಾರವಾಗಿದೆ.

    ಚಂದ್ರಗ್ರಹಣ ಯಾವಾಗ..?
    – ರಾತ್ರಿ 9:57ರಿಂದ ಮಧ್ಯರಾತ್ರಿ 01:26ರ ವರೆಗೆ
    – ಒಟ್ಟು ಅವಧಿ 3 ಗಂಟೆ 28 ನಿಮಿಷ 2 ಸೆಕೆಂಡು

    ಯಾವ ಸಮಯದಲ್ಲಿ ಉತ್ತುಂಗದಲ್ಲಿರುತ್ತದೆ..?
    – ರಾತ್ರಿ 11 ರಿಂದ 12:22 ರವರೆಗೆ ಉತ್ತುಂಗ

    ಚಂದಿರನ್ಯಾಕೆ ರಕ್ತವರ್ಣದಲ್ಲಿ ಕಂಗೊಳಿಸಲಿದ್ದಾನೆ..?
    – ಸೂರ್ಯ & ಚಂದ್ರರ ನಡುವೆ ಭೂಮಿ ನೇರವಾಗಿ ಒಂದೇ ಗೆರೆಯಂತೆ ಬಂದಾಗ ಚಂದ್ರಗ್ರಹಣ.
    – ಭೂಮಿಯ ನೆರಳು ಕೆಲ ಕಾಲ ಚಂದಿರನ ಮೇಲೆ ಬೀಳುವುದರಿಂದ ಚಂದ್ರ ಮರೆಯಾಗುತ್ತದೆ.
    – ಭೂಮಿಯ ನೆರಳಿನಲ್ಲಿ ಎರಡು ಭಾಗ ಇದೆ.
    – ಅಂಬ್ರಾ – ಇದು ಗಾಢ ಕತ್ತಲೆಯ ಭಾಗ.
    – ಪೆನಾಂಬ್ರಾ – ಹೊರಗಿನ ಮಬ್ಬಾದ ಭಾಗ.
    – ಚಂದ್ರ ಸಂಪೂರ್ಣವಾಗಿ ಅಂಬ್ರಾ ಪ್ರವೇಶಿಸಿದಾದ ತಾಮ್ರವರ್ಣ ಅಥವಾ ಗಾಢ ಕೆಂಪುಬಣ್ಣದಲ್ಲಿ ಕಾಣಿಸುತ್ತಾನೆ.

  • ಗ್ರಹಣದ ವೇಳೆ ಶುಭಕಾರ್ಯಗಳು ನಿಷಿದ್ಧ – ಸೂತಕದ ಸಮಯದಲ್ಲಿ ಏನು ಮಾಡಬೇಕು? ಏನು ಮಾಡಬಾರ್ದು?

    ಗ್ರಹಣದ ವೇಳೆ ಶುಭಕಾರ್ಯಗಳು ನಿಷಿದ್ಧ – ಸೂತಕದ ಸಮಯದಲ್ಲಿ ಏನು ಮಾಡಬೇಕು? ಏನು ಮಾಡಬಾರ್ದು?

    ಬೆಂಗಳೂರು: ನಭೋಮಂಡಲದ ವಿಸ್ಮಯದ ಅದ್ಭುತ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ. ಹುಣ್ಣಿಮೆ ಬೆಳಂದಿಗಳಲ್ಲಿ ಕೆಂಪು ಕೆಂಪಾಗಿ ಚಂದ್ರ ಬದಲಾಗಲಿದ್ದಾನೆ. ಹಾಗಿದ್ರೇ ಚಂದ್ರಗ್ರಹಣ (Lunar Eclipse) ಅವಧಿಯಲ್ಲಿ ಏನು ಮಾಡಬೇಕು? ಏನು ಮಾಡಬಾರದು? ಗ್ರಹಣ ಯಾಕೆ ಸೂತಕ ಕಾಲ ಅಂತಾ ಕರೆಯುತ್ತಾರೆ? ಎಂಬೆಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ…

    ಇಂದು ರಾತ್ರಿ 09:57 ರಿಂದ ಶುರುವಾಗಿ ಮಧ್ಯರಾತ್ರಿ 01:26ರ ವರೆಗೆ ಚಂದ್ರ ಗ್ರಹಣ ಇರಲಿದೆ. ಧಾರ್ಮಿಕ ನಂಬಿಕೆಯ ಪ್ರಕಾರ ಗ್ರಹಣ ಅಂದ್ರೆ ಅದು ಅಶುಭ. ದೇವರಿಗೆ ಸಂಕಷ್ಟದ ಸಮಯ. ಹೀಗಾಗಿ ಅದು ಸೂತಕದ ಸಮಯವೆಂದೇ ಕರೆಯಲಾಗುತ್ತದೆ. ಈ ವೇಳೆ ಶುಭಕಾರ್ಯಗಳು ನಿಷಿದ್ಧವಾಗಿದೆ. ಚಂದ್ರಗ್ರಹಣದ ಸೂತಕ ಅವಧಿ ಇಂದು ಮಧ್ಯಾಹ್ನ 12:57ಕ್ಕೆ ಪ್ರಾರಂಭವಾಗಿ ಗ್ರಹಣ ಮುಗಿದ ತಕ್ಷಣ ಸೂತಕ ಅವಧಿಯು ಕೊನೆಗೊಳ್ಳುತ್ತದೆ.

    ಗ್ರಹಣದ ಅವಧಿಯಲ್ಲಿ ಏನು ಮಾಡಬೇಕು?
    * ದುರ್ಗಾ ಸ್ತುತಿ, ಈಶ್ವರನ ಜಪ, ಮಂತ್ರಪಠಣೆ ಮಾಡಬೇಕು
    * ಗ್ರಹಣ ಸ್ಪರ್ಶವಾದ ಕೂಡಲೇ ಸ್ನಾನ ಮಾಡಿ
    * ದೇವತಾ ಮೂರ್ತಿಗಳನ್ನು & ವಿಗ್ರಹಗಳನ್ನು ನೀರಿನಲ್ಲಿ ಮುಳುಗಿಸಿ
    * ಮಂತ್ರ ಜಪ, ಪಾರಾಯಣಗಳನ್ನು ಮಾಡಬೇಕು

    ಇನ್ನು ಗ್ರಹಣದ ಸೂತಕ ಪ್ರಾರಂಭವಾಗುವ ಮೊದಲು, ಆಹಾರ ಮತ್ತು ನೀರಿನಲ್ಲಿ ತುಳಸಿ ಎಲೆಗಳನ್ನು, ದರ್ಬೆಗಳನ್ನು ಹಾಕಿ, ಇದ್ರಿಂದ ಗ್ರಹಣದ ಪ್ರಭಾವ ಭಾದಿಸುವುದಿಲ್ಲ. ಗ್ರಹಣದ ಸಮಯದಲ್ಲಿ ದೇವರನ್ನು ಸ್ಮರಿಸಿ, ಮಂತ್ರಗಳನ್ನು ಪಠಿಸಿ. ಗ್ರಹಣದ ನಂತರ ಸ್ನಾನ ಮಾಡಿ ಬಡವರಿಗೆ ದಾನ ಮಾಡಿ. ಚಂದ್ರಗ್ರಹಣದ ದಿನದಂದು ಅಕ್ಕಿ, ಉದ್ದಿನ ಬೇಳೆ, ಹಾಲು, ತುಪ್ಪ, ಬಿಳಿ ಬಟ್ಟೆ ಮತ್ತು ಬೆಳ್ಳಿಯನ್ನು ದಾನ ಮಾಡುವುದರಿಂದ ಚಂದ್ರ ದೋಷ ನಿವಾರಣೆಯಾಗುತ್ತದೆ. ಗ್ರಹಣ ಮುಗಿದ ನಂತರ, ಸ್ನಾನ ಮಾಡಿ ಇಡೀ ಮನೆಯ ಮೇಲೆ ಗಂಗಾಜಲವನ್ನು ಸಿಂಪಡಿಸಿದ್ರೇ ಉತ್ತಮ.

    ಗ್ರಹಣದ ಸಮಯದಲ್ಲಿ ಏನು ಮಾಡಬಾರದು?
    * ಚಂದ್ರಗ್ರಹಣದ ಸಮಯದಲ್ಲಿ ಆಹಾರ ಸೇವಿಸಬಾರದು
    * ವಯಸ್ಸಾದವರು, ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ವಿನಾಯ್ತಿ
    * ಗ್ರಹಣದ ಸಮಯದಲ್ಲಿ ನಕಾರಾತ್ಮಕ ಶಕ್ತಿಗಳು ಸಕ್ರಿಯವಾಗುತ್ತವೆ
    * ಇದರಿಂದಾಗಿ ಪರಿಸರದಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ
    * ಈ ಸಮಯದಲ್ಲಿ ಕೆಲವು ಕೆಲಸಗಳನ್ನು ಮಾಡುವುದು ನಿಷೇಧ
    * ಮದುವೆ, ಗೃಹ ಪ್ರವೇಶ ಆಚರಿಸುವುದು ಬೇಡ
    * ಹೊಸ ಕಾರು ಖರೀದಿ, ಹೊಸ ವೃತ್ತಿಜೀವನ ಪ್ರಾರಂಭ ತಪ್ಪಿಸಿ
    * ಗ್ರಹಣ ಸಮಯದಲ್ಲಿ, ದೇವರ ವಿಗ್ರಹಗಳನ್ನು ಮುಟ್ಟುವುದು ಸರಿಯಲ್ಲ
    * ತುಳಸಿ ಗಿಡವನ್ನು ಮುಟ್ಟಬಾರದು.

  • Lunar Eclipse: ಚಂದ್ರನೇಕೆ ಕೆಂಪು ಕೆಂಪಾಗಲಿದ್ದಾನೆ?; ಗ್ರಹಣ ವೀಕ್ಷಣೆಗೆ ಎಲ್ಲೆಲ್ಲಿ ವ್ಯವಸ್ಥೆ?

    Lunar Eclipse: ಚಂದ್ರನೇಕೆ ಕೆಂಪು ಕೆಂಪಾಗಲಿದ್ದಾನೆ?; ಗ್ರಹಣ ವೀಕ್ಷಣೆಗೆ ಎಲ್ಲೆಲ್ಲಿ ವ್ಯವಸ್ಥೆ?

    – ರಕ್ತಚಂದ್ರ ಗ್ರಹಣ ವೀಕ್ಷಣೆ ಹೇಗೆ?

    ಬೆಂಗಳೂರು: ಇಂದು ಸಂಪೂರ್ಣ ರಕ್ತಚಂದ್ರಗ್ರಹಣ (Chandra Grahan) ಸಂಭವಿಸಲಿದೆ. ನಭೋಮಂಡಲದ ಈ ವಿಸ್ಮಯದ ಅದ್ಭುತ ಕಣ್ತುಂಬಿಕೊಳ್ಳಲು ಜನರು ಕಾತರರಾಗಿದ್ದಾರೆ. ಬೆಳದಿಂಗಳ ಚಂದಿರ ಅದ್ಯಾಕೆ ಇಂದು ಗ್ರಹಣದ ದಿನ ರಕ್ತ ವರ್ಣದಲ್ಲಿ ಕಾಣಿಸಲಿದ್ದಾನೆ? ಇದರ ವೈಜ್ಞಾನಿಕ ಕಾರಣಗಳೇನು?

    ಚಂದಿರನೇಕೆ ರಕ್ತವರ್ಣದಲ್ಲಿ ಕಂಗೊಳಿಸಲಿದ್ದಾನೆ?
    ಚಂದ್ರಗ್ರಹಣ ಸೂರ್ಯ ಮತ್ತು ಚಂದ್ರರ ನಡುವೆ ಭೂಮಿ ನಿಖರವಾಗಿ ಬಂದಾಗ ಸಂಭವಿಸುತ್ತದೆ. ಭೂಮಿಯ ನೆರಳು ಕೆಲ ಕಾಲ ಚಂದಿರನ ಮೇಲೆ ಬೀಳುವುದರಿಂದ ಅದು ಮರೆಯಾಗುತ್ತದೆ. ಭೂಮಿಯ ನೆರಳಿನಲ್ಲಿ ಎರಡು ಭಾಗ ಇದೆ. ಒಂದು ಗಾಢ ಕತ್ತಲೆಯ ಭಾಗ, ಇದನ್ನು ಅಂಬ್ರಾ ಎನ್ನಲಾಗುತ್ತದೆ. ಹೊರಗಿನ ಮಬ್ಬಾದ ಭಾಗವನ್ನು ಪೆನಾಂಬ್ರಾ ಎನ್ನಲಾಗುತ್ತದೆ. ಚಂದ್ರನು ಸಂಪೂರ್ಣವಾಗಿ ಅಂಬ್ರಾ ನೆರಳಿನೊಳಗೆ ಪ್ರವೇಶಿಸುವಾಗ ಸಂಪೂರ್ಣವಾಗಿ ಚಂದ್ರ ತಾಮ್ರವರ್ಣದ ಅಥವಾ ಗಾಢ ಕೆಂಪುಬಣ್ಣದಲ್ಲಿ ಕಾಣಿಸುತ್ತಾನೆ. ಇದನ್ನೂ ಓದಿ: ಚಂದ್ರಗ್ರಹಣ ಕಣ್ತುಂಬ ನೋಡಿ ಸಂಭ್ರಮಿಸಿ: ಭೌತವಿಜ್ಞಾನಿ ಎ.ಪಿ.ಭಟ್‌

    ಬಣ್ಣ ಬದಲಾವಣೆ ಪ್ರಕ್ರಿಯೆ ಯಾವಾಗ ಆರಂಭ?
    ಸೆಪ್ಟೆಂಬರ್ 7 ರಂದು ರಾತ್ರಿ 9:57ಕ್ಕೆ ಚಂದ್ರ ಭೂಮಿಯ ಗಾಢ ನೆರಳಾದ ಅಂಬ್ರಾ ಒಳಗೆ ಪ್ರವೇಶಿಸಲು ಆರಂಭಿಸುತ್ತಾನೆ. ನಂತರ ಚಂದ್ರ ಹೆಚ್ಚಿನ ಭಾಗ ಭೂಮಿಯ ನೆರಳಿನಿಂದ ಅವರಿಸಲ್ಪಡಿಸುತ್ತ 11:01ಕ್ಕೆ ಸಂಪೂರ್ಣವಾಗಿ ಅಂಬ್ರಾದೊಳಗೆ ಸೇರುತ್ತದೆ.

    ರಕ್ತಚಂದ್ರ ಗ್ರಹಣ ವೀಕ್ಷಣೆ ಹೇಗೆ?
    ಚಂದ್ರಗ್ರಹಣ ವೀಕ್ಷಣೆಗೆ ಯಾವ ಸಾಧನ ಬೇಕಾಗಿಲ್ಲ. ಬರಿಗಣ್ಣಿನಲ್ಲಿ ನೋಡಬಹುದು. ಆದರೆ, ದೂರದರ್ಶಕ, ದುರ್ಬಿನು ಬಳಸಿದರೆ ವೀಕ್ಷಣೆಯ ಅನುಭವ ಇನ್ನಷ್ಟು ಸುಂದರವಾಗುತ್ತದೆ. ಇದನ್ನೂ ಓದಿ: ರಕ್ತಚಂದ್ರಗ್ರಹಣ – ಬೀದರ್‌ನ ಐತಿಹಾಸಿಕ 9 ದೇವಸ್ಥಾನಗಳ ಬಾಗಿಲು ಬಂದ್

    ವೀಕ್ಷಣೆಗೆ ಸ್ಥಳದ ಆಯ್ಕೆ ಹೇಗಿರಬೇಕು?
    ಗ್ರಹಣದ ಸಮಯ ತಡರಾತ್ರಿಯಾಗಿರುವುದರಿಂದ ತಮ್ಮ ಮನೆಗಳ ಹೊರಾಂಗಣ ಅಥವಾ ತಾರಸಿಗಳಲ್ಲಿ ವೀಕ್ಷಣೆ ಮಾಡಬಹುದು. ಮೋಡವಿದ್ದರೂ ಕೆಲಕಾಲ ಸ್ಪಷ್ಟವಾಗಿ ಕಾಣಿಸುವ ಸಾಧ್ಯತೆ ಇದೆ.

    ಎಲ್ಲಿಲ್ಲಿ ವ್ಯವಸ್ಥೆ?
    ಬೆಂಗಳೂರಿನ ನೆಹರೂ ತಾರಾಲಾಯ, ಲಾಲ್‌ಬಾಗ್ ಸೇರಿದಂತೆ ರಾಜ್ಯದ ಹಲವೆಡೆ ಅನೇಕ ಸಂಸ್ಥೆಗಳಿಂದ ಗ್ರಹಣ ವೀಕ್ಷಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

  • ಚಂದ್ರಗ್ರಹಣ ಕಣ್ತುಂಬ ನೋಡಿ ಸಂಭ್ರಮಿಸಿ: ಭೌತವಿಜ್ಞಾನಿ ಎ.ಪಿ.ಭಟ್‌

    ಚಂದ್ರಗ್ರಹಣ ಕಣ್ತುಂಬ ನೋಡಿ ಸಂಭ್ರಮಿಸಿ: ಭೌತವಿಜ್ಞಾನಿ ಎ.ಪಿ.ಭಟ್‌

    ಉಡುಪಿ: ಚಂದ್ರಗ್ರಹಣವನ್ನು ಕಣ್ತುಂಬ ನೋಡಿ ಸಂಭ್ರಮಿಸಿ. ನಸುಗೆಂಪು ಚಂದ್ರ ಕಣ್ಣು, ಮನಸ್ಸಿಗೆ ಹಿತ ಕೊಡುತ್ತಾನೆ. ಬರಿಯ ಕಣ್ಣಿನಲ್ಲಿ ನೋಡಿ ಎಂಜಾಯ್ ಮಾಡಿ ಎಂದು ಹಿರಿಯ ಭೌತಶಾಸ್ತ್ರಜ್ಞ ಡಾ. ಎಪಿ ಭಟ್ ಹೇಳಿದ್ದಾರೆ.

    ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಚಂದ್ರನಿಗೂ ಸಮುದ್ರದ ಅಲೆಗಳಿಗೂ ಸಂಬಂಧವಿದೆ. ಹೀಗಾಗಿ, ಕೊಂಚ ವ್ಯತ್ಯಾಸಗಳು ಸಂಭವಿಸಬಹುದು ಎಂದಿದ್ದಾರೆ. ಇದನ್ನೂ ಓದಿ: 800 ವರ್ಷ ಹಳೆಯ ಸೂಗೂರೇಶ್ವರ ದೇವಸ್ಥಾನಕ್ಕೆ ತಟ್ಟದ ಗ್ರಹಣ ದೋಷ – ವಿಶಿಷ್ಟ ವಾಸ್ತುಶಿಲ್ಪವೇ ಇಲ್ಲಿ ಶ್ರೀರಕ್ಷೆ

    ಇದು ಪ್ರಕೃತಿಯ ಸುಂದರ ವಿದ್ಯಮಾನ, ನೋಡಿ ಆನಂದಿಸಬೇಕು. ಜನರು ಭಯಭೀತರಾಗುವುದು ಬೇಡ. ಪ್ರಕೃತಿಯಲ್ಲಿ ಹಲವಾರು ಏರಿಳಿತ ಇದ್ದೇ ಇರುತ್ತದೆ. ಹುಣ್ಣಿಮೆ ಅಮಾವಾಸ್ಯೆ ವೇಳೆ ಸಮುದ್ರದ ಅಲೆಯಲ್ಲಿ ವ್ಯತ್ಯಾಸ ಕಾಣುತ್ತದೆ. ಹುಣ್ಣಿಮೆಯನ್ನು ನಮ್ಮಲ್ಲಿ ಪವಿತ್ರ ದಿವಸ ಎನ್ನುತ್ತೇವೆ. ಹಾಲು ಬೆಳದಿಂಗಳಲ್ಲಿ ಕುಳಿತಾಗ ಮನಸ್ಸಿಗೆ ರಿಲ್ಯಾಕ್ಸ್‌ ಸಿಗುತ್ತದೆ. ಮನಸ್ಸಿಗೆ ಮುದ ಕೊಡುವಂತಹ ಕಾಲ. ಅದೇ ಪವಿತ್ರವಾದ ದಿವಸ ಎಂದು ತಿಳಿಸಿದ್ದಾರೆ.

    ಭೂಮಿಯವರಿಗೆ ನಾಳೆ ಚಂದ್ರ ಖುಷಿ ಕೊಡುತ್ತಿದ್ದಾನೆ. ಇದರಿಂದ ಅವರಿಗೆ ಇವರಿಗೆ ತೊಂದರೆ ಅಂತ ಹೆದರ ಬೇಕಾಗಿಲ್ಲ. ಗ್ರಹಣ ಕಾಲದಲ್ಲಿ ಹೊಸದೇನು ಆಗುವುದಿಲ್ಲ. ಇದು ನೆರಳು ಬೆಳಕಿನ ಆಟ ಅಂತ ಹಿಂದಿನಿಂದಲೂ ಹೇಳಿಕೊಂಡು ಬಂದಿದ್ದಾರೆ. ಇದರಲ್ಲಿ ಹೊಸದೇನು ಆಗುವುದಿಲ್ಲ. ಎಲ್ಲರೂ ನೋಡಿ ಆನಂದಿಸಿ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ರಕ್ತಚಂದ್ರಗ್ರಹಣ – ಬೀದರ್‌ನ ಐತಿಹಾಸಿಕ 9 ದೇವಸ್ಥಾನಗಳ ಬಾಗಿಲು ಬಂದ್

    ಪೂಜೆ, ಜಪ-ತಪ ಮಾಡುವವರು ಮಾಡಿ. ಮನಸ್ಸಿನ ಏಕಾಗ್ರತೆಗೆ ಒಳ್ಳೆಯ ಸಮಯ. ನಮಗೆ ಬೇಕು ಅಂದಾಗ ಸಿಗಲ್ಲ. ಪ್ರಕೃತಿ ವಿದ್ಯಮಾನವನ್ನು ಸಂಭ್ರಮಿಸಿ ಎಂದು ಕರೆ ಕೊಟ್ಟಿದ್ದಾರೆ.