Tag: Lyrical Song

  • ಫ್ಯಾನ್ಸ್‌ಗೆ ಕಿಚ್ಚ ಸುದೀಪ್ ಗುಡ್‌ನ್ಯೂಸ್

    ಫ್ಯಾನ್ಸ್‌ಗೆ ಕಿಚ್ಚ ಸುದೀಪ್ ಗುಡ್‌ನ್ಯೂಸ್

    ಶೂಟಿಂಗ್ ಹಂತದಲ್ಲಿರುವಾಗಲೇ ಫ್ಯಾನ್ಸ್‌ಗೆ ಹಬ್ಬದೂಟ ಬಡಿಸಲು ಕಿಚ್ಚ ಸುದೀಪ್ (Kichcha Sudeep) ಸಜ್ಜಾಗಿದ್ದಾರೆ. ಮಾರ್ಕ್ ಚಿತ್ರದ ಫಸ್ಟ್ ಲಿರಿಕಲ್ ಸಾಂಗ್ ಶೀಘ್ರದಲ್ಲೇ ರಿಲೀಸ್ ಆಗಲಿದೆ ಎಂಬ ಸುದ್ದಿಯನ್ನ ಎಕ್ಸ್ ಖಾತೆಯಲ್ಲಿ ಸುದೀಪ್ ಹಂಚಿಕೊಂಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಕಿಚ್ಚ ಗುಡ್‌ನ್ಯೂಸ್ ಕೊಟ್ಟಿದ್ದಾರೆ.

    ಕಳೆದ ಸೆ.2ರಂದು ಕಿಚ್ಚನ ಮುಂದಿನ ಚಿತ್ರದ ಟೈಟಲ್ ರಿವೀಲ್ ಆಗಿತ್ತು. ಇದರ ಬೆನ್ನಲ್ಲೇ ಸುದೀಪ್ ಫಸ್ಟ್ ಸಾಂಗ್ ಎಂಟ್ರಿಯ ಸುದ್ದಿ ಘೋಷಿಸಿರುವುದು ಫ್ಯಾನ್ಸ್ ಖುಷಿಯನ್ನ ಹೆಚ್ಚಿಸಿದೆ. ಡಿಸೆಂಬರ್ 25ಕ್ಕೆ ಮಾರ್ಕ್ ಸಿನಿಮಾ (Mark Cinema) ರಿಲೀಸ್ ಆಗಲಿದ್ದು, ಸೆಟ್ಟೇರಿದ ದಿನವೇ ಸಿನಿಮಾ ಬಿಡುಗಡೆ ದಿನಾಂಕವೂ ಘೋಷಣೆಯಾಗಿತ್ತು. ಇಟ್ಟ ಹೆಜ್ಜೆ ಹಿಂದಕ್ಕಿಡದ ಸುದೀಪ್ ಯಾವುದೇ ಸಿನಿಮಾ ಎದುರು ನಿಂತರೂ ಅದೇ ದಿನ ತೆರೆಗೆ ತರೋದಾಗಿ ಮತ್ತೊಮ್ಮೆ ಖಚಿತಪಡಿಸಿದ್ದರು. ಇದೀಗ ಮೊದಲ ಹಾಡನ್ನ ರಿಲೀಸ್ ಮಾಡುವ ಮೂಲಕ ಮಗದೊಮ್ಮೆ ಸಿನಿಮಾ ರೆಡಿ ಎಂಬ ಸಿಗ್ನಲ್ ಕೊಡಲು ಹೊರಟಿದ್ದಾರೆ ಸುದೀಪ್.

    ಮಾರ್ಕ್ ಚಿತ್ರದ ಈ ಹಾಡು ಕೆಲವೇ ದಿನಗಳಲ್ಲಿ ಎಂಟ್ರಿ ಕೊಡಲಿದೆ. ಅಜನೀಶ್ ಲೋಕನಾಥ್ ಸಂಗೀತದ ಜೊತೆ ಶೋಭಿನ್ ಮಾಸ್ಟರ್ ಕೋರಿಯೋಗ್ರಫಿಯಲ್ಲಿ ಕಿಚ್ಚನ ಮಾಸ್ ಹೆಜ್ಜೆ ನೋಡಬಹುದು. ಮ್ಯಾಕ್ಸ್ ಚಿತ್ರದ ಸಕ್ಸಸ್ ಜರ್ನಿ ಬಳಿಕ ಅದೇ ರೂಪದಲ್ಲಿ ಬರ್ತಿರುವ ಮಾರ್ಕ್ ಚಿತ್ರದ ಮೇಲೆ ಭಾರೀ ನಿರೀಕ್ಷೆ ಇದೆ. ಕಳೆದ ಬಾರಿ ಡಿಸೆಂಬರ್‌ನಲ್ಲೇ ಮ್ಯಾಕ್ಸ್ ರಿಲೀಸ್ ಆಗಿತ್ತು. ಅದೇ ವೇಳೆಗೆ ಅಂಥದ್ದೇ ಮಾಸ್ ಜಬರ್ದಸ್ತ್ ಸಿನಿಮಾ ಅದೇ ಟೀಮ್ ಜೊತೆಗಿನ ಸಿನಿಮಾ ಮಾರ್ಕ್ ತೆರೆ ಕಾಣಲು ಸಿದ್ಧವಾಗಿದೆ. ಅಧಿಕೃತ ಪ್ರಚಾರವೂ ಶುರುವಾಗಿರೋದ್ರಿಂದ ಕಿಚ್ಚ ಫ್ಯಾನ್ಸ್‌ಗೆ ಇದು ಹಬ್ಬ ಮಾಡುವ ಸುದ್ದಿ.

  • ಮೇ 1ಕ್ಕೆ ‘ಪುಷ್ಪ 2’ ಲಿರಿಕಲ್ ವಿಡಿಯೋ ರಿಲೀಸ್

    ಮೇ 1ಕ್ಕೆ ‘ಪುಷ್ಪ 2’ ಲಿರಿಕಲ್ ವಿಡಿಯೋ ರಿಲೀಸ್

    ಪುಷ್ಪ 2 ಸಿನಿಮಾ ಬಿಡುಗಡೆಯ ದಿನಾಂಕ ಸಮೀಪಕ್ಕೆ ಬರುತ್ತಿದ್ದಂತೆಯೇ ಸಿನಿಮಾ ತಲುಪಿಸಲು ನಾನಾ ರೀತಿಯ ಸಿದ್ದತೆಗಳನ್ನು ಮಾಡುತ್ತಿದೆ ಚಿತ್ರತಂಡ. ಈಗಾಗಲೇ ಫಸ್ಟ್  ಲುಕ್, ಟೀಸರ್ ರಿಲೀಸ್ ಮಾಡಿರುವ ನಿರ್ದೇಶಕರು, ಈಗ ಮೇ 1 ರಂದು ಚಿತ್ರದ ಮೊದಲ ಲಿರಿಕಲ್ ಸಾಂಗ್ (Lyrical Song) ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ.

    ಭಾರತೀಯ ಸಿನಿಮಾ ರಂಗದಲ್ಲಿ ಪುಷ್ಪ 2 ದಾಖಲೆಗೆ ಕಾರಣವಾಗುತ್ತಿದೆ. ಈ ಸಿನಿಮಾದ ಡಿಜಿಟೆಲ್ ರೈಟ್ಸ್ (Digital Rights) ಬರೋಬ್ಬರಿ 275 ಕೋಟಿ ರೂಪಾಯಿ ಸೇಲ್ ಆಗಿದೆ ಎನ್ನುವ ಮಾಹಿತಿ ಸಿಗುತ್ತಿದೆ. ಈ ಹಣ ಸಿನಿಮಾ ರಿಲೀಸ್ ಆದ ನಂತರ ಮತ್ತಷ್ಟು ಏರಿಕೆಯೂ ಆಗಲಿದೆಯಂತೆ. ಇಷ್ಟೊಂದು ಮೊತ್ತದ ಹಣವನ್ನು ಕೊಟ್ಟು ಇದೇ ಮೊದಲ ಬಾರಿಗೆ ಡಿಜಿಟೆಲ್ ಹಕ್ಕುಗಳನ್ನು ಖರೀದಿಸಲಾಗಿದೆಯಂತೆ.

    ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 (Pushpa 2) ಸಿನಿಮಾ ಇದೇ ಆಗಸ್ಟ್ 15ರಂದು ಬಿಡುಗಡೆ ಮಾಡುವುದಾಗಿ ಈಗಾಗಲೇ ಚಿತ್ರತಂಡ ಘೋಷಣೆ ಮಾಡಿದೆ. ಅದೇ ರೀತಿಯ ಬಾಲಿವುಡ್ ನ ಹೆಸರಾಂತ ನಟ ಅಜಯ್ ದೇವಗನ್ (Ajay Devgan) ನಟನೆಯ ಸಿಂಗಂ ಅಗೇನ್ ಚಿತ್ರ ಕೂಡ ಅದೇ ದಿನಾಂಕದಂದು ರಿಲೀಸ್ ಆಗಬೇಕಿತ್ತು. ಆದರೆ, ಸಿಂಗಂ (Singam Again) ಸೈಡ್ ಗೆ ಹೋಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

     

    ಪುಷ್ಪ 2 ಸಿನಿಮಾ ಸಾಕಷ್ಟು ಸದ್ದು ಮಾಡುತ್ತಿದೆ. ಸಿನಿ ಪಂಡಿತರ ಲೆಕ್ಕಾಚಾರದಂತೆ ಸಾವಿರಾರು ಕೋಟಿ ರೂಪಾಯಿ ವ್ಯಾಪಾರ ಮಾಡುವ ಶಕ್ತಿ ಈ ಚಿತ್ರಕ್ಕಿದೆಯಂತೆ. ಅಲ್ಲದೇ, ದೊಡ್ಡ ಮಟ್ಟದಲ್ಲಿ ಮತ್ತು ಹಲವು ಭಾಷೆಗಳಲ್ಲಿ ಈ ಚಿತ್ರವನ್ನು ತೆರೆಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಾಗಾಗಿ ಸಿಂಗಂ ಅಗೇನ್ ಚಿತ್ರದ ರಿಲೀಸ್ ಅನ್ನು ಮುಂದೂಡಿಕೆ ಮಾಡುವ ಯೋಚನೆ ಮಾಡಲಾಗಿದೆಯಂತೆ.

  • ‘ಅಡವಿ’ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್ ಮಾಡಿದ ಪಾ.ರಂಜಿತ್

    ‘ಅಡವಿ’ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್ ಮಾಡಿದ ಪಾ.ರಂಜಿತ್

    ಸಂವಿಧಾನ ಹಾಗೂ ಅದರ ಮಹತ್ವದ ಬಗ್ಗೆ ಅರಿವು ಮೂಡಿಸುವ, ಕಾಡಿನ ಸಂರಕ್ಷಣೆ,ಕಾಡಿನ ಮೂಲ ನಿವಾಸಿಗಳ ಬದುಕು ಮತ್ತು ಸಂಘರ್ಷದ ಕಥೆಯನ್ನು ತೆರೆದಿಡುವ ಚಿತ್ರ ಅಡವಿ (Adavi). ಈ ‌ಚಿತ್ರದ ಸಿಂಗಾರ ಸಿಂಗಾರ ತ್ವಾಟ ಹಾಡಿನ ಲಿರಿಕಲ್ ವೀಡಿಯೋವನ್ನು  ಕೆಜಿಎಫ್ ಮುನಿಸಿಪಲ್ ಗ್ರೌಂಡ್ ನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲ, ಕಬಾಲಿ, ತಂಗಲಾನ್ ಚಿತ್ರಗಳ ನಿರ್ದೇಶಕ ಪ.ರಂಜಿತ್ (Pa. Ranjith) ಅವರು ಬಿಡುಗಡೆ ಮಾಡಿದರು. ಹಿರಿಯ ಸಂಗೀತ ನಿರ್ದೇಶಕ  ವಿ.ಮನೋಹರ್ ಅವರ ಸಾಹಿತ್ಯದ 2500ನೇ ಗೀತೆ ಇದಾಗಿದ್ದು, ನವೀನ್ ಸಜ್ಜು ಈ ಹಾಡಿಗೆ ದನಿಯಾಗಿದ್ದಾರೆ. ಸಂವಿಧಾನ ಸಿನಿ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಟೈಗರ್ ನಾಗ್ ಅವರು ಚಿತ್ರಕಥೆ ಬರೆದ ನಿರ್ಮಿಸಿ, ನಿರ್ದೇಶಿಸಿರುವ  ಕಾದಂಬರಿ ಆಧಾರಿತ ಚಿತ್ರ ಇದಾಗಿದೆ.

    ವೇದಿಕೆಯಲ್ಲಿ  ಪಾ.ರಂಜೀತ್ ಮಾತನಾಡಿ  ಅಡವಿ ಚಿತ್ರದಲ್ಲಿ ನೆಲದ ಮಣ್ಣಿನ ಮಕ್ಕಳ ಕಥೆಯೊಂದಿಗೆ ಸಂವಿಧಾನ ಮತ್ತು ಅಂಬೇಡ್ಕರ್ ಅವರ ವಿಚಾರಗಳನ್ನು ಬಹಳ‌ ಚೆನ್ನಾಗಿ ತಂದಿದ್ದಾರೆ.‌  ನಿರ್ದೇಶಕ ಟೈಗರ್ ನಾಗ್ ಅವರು ಚಿತ್ರದ ಟೈಟಲ್ ಮತ್ತು ಹಾಡಿನಲ್ಲಿ ಕುತೂಹಲ ಮೂಡಿಸಿದ್ದಾರೆ, ಚಿತ್ರತಂಡಕ್ಕೆ ಯಶ ಸಿಗಲಿ ಎಂದು  ಹಾರೈಸಿದರು. ಈ ಸಂದರ್ಭದಲ್ಲಿ  ಪ್ರಗತಿಪರ ಚಿಂತಕ ಸಂಪತ್ ಸುಬ್ಬಯ್ಯ, ಬೌದ್ಧ ಮಹಾಸಭಾದ ರಾಜ್ಯಾದ್ಯಕ್ಷ ಹ.ರ.ಮಹೇಶ್ ಬೌದ್ಧ, ಜೀವಾ ನವೀನ್, ಮೋಹನ್ ಮೌರ್ಯ, ಮಾಸ್ಟರ್ ಚಿರುಶ್ರೀನಾಗ್, ಶಿಲ್ಪ, ಆರುಂಧತಿ ಲಾಲ್, ಅರ್ಜುನ್ ಪಾಳ್ಳೇಗಾರ್, ಸಹನಿರ್ದೇಶಕ ಕೆ. ಮಂಜು ಕೋಟೆಕೆರೆ ಹಾಜರಿದ್ದರು.

    ಚಿತ್ರರಂಗದಲ್ಲಿ  ಸಾಕಷ್ಟು ಕುತೂಹಲ, ನಿರೀಕ್ಷೆಗಳನ್ನು ಹುಟ್ಟುಹಾಕಿರುವ ಅಡವಿ ಚಿತ್ರದ ನಿರ್ಮಾಪಕ ಟೈಗರ್ ನಾಗ್ ಅವರು ಸೆನ್ಸಾರ್ ಮಂಡಳಿ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ಧ ಸಿಬಿಐಗೆ ದೂರು ನೀಡಿದ್ದರು. ಬಳಿಕ ಸಿಬಿಐ ಬಲೆಗೆ ಪ್ರಾದೇಶಿಕ ಸೆನ್ಸಾರ್ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಅರಣ್ಯವೇ ಸರ್ವಸ್ವ ಎಂದು ನಂಬಿರುವ ಕಾಡಿನ ಮೂಲ ನಿವಾಸಿಗಳ ಜೀವನ, ತಮ್ಮ ಸ್ವಚ್ಛಂದ ಬದುಕಿಗಾಗಿ ಅವರು ನಡೆಸುವ ಹೋರಾಟ,  ಬುಡಕಟ್ಟು ಜನರು ಮತ್ತು ಪ್ರಸ್ತುತ ವ್ಯವಸ್ಥೆಯ ನಡುವಿನ ಸಂಘರ್ಷವನ್ನು ತೆರೆಯುವ ಪ್ರಯತ್ನ ಕಥೆಯಲ್ಲಿದೆ. ಈಗಾಗಲೇ ಅಡವಿ ಚಿತ್ರದ ಚಿತ್ರೀಕರಣ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದಿದ್ದು, ಚಿತ್ರತಂಡವೀಗ ಬಿಡುಗಡೆಯ ಸಿದ್ಧತೆ ನಡೆಸಿದೆ. ಅಡವಿ ಚಿತ್ರವನ್ನು ಐತಿಹಾಸಿಕ ಸಿದ್ದರಬೆಟ್ಟ,  ಸಂಜೀವಿನಿ ಕ್ಷೇತ್ರ, ಸೂರ್ಯ ಗವಿ, ತಿಮ್ಮಲಾಪುರ ಅಭಯಾರಣ್ಯ, ಚಿಕ್ಕಮಗಳೂರು, ಸಕಲೇಶಪುರ, ತುಮಕೂರು ಮತ್ತು ಕೊರಟಗೆರೆ ಅಲ್ಲದೆ  ಆದಿವಾಸಿಗಳು ವಾಸಿಸುವ ಗುಡಿಸಲುಗಳಲ್ಲಿ ಚಿತ್ರೀಕರಿಸಲಾಗಿದೆ.

     

    ಅಡವಿ ಚಿತ್ರಕ್ಕೆ ಮಂಜು ಮಹಾದೇವ್ ಅವರ ಸಂಗೀತ ಸಂಯೋಜನೆ, ವಿಪಿನ್ ವಿ ರಾಜ್ ಅವರ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ, ಕೆ ಮಂಜು ಕೋಟೆಕೆರೆ ಟೈಗರ್ ನಾಗ್ ಸಂಭಾಷಣೆ, ಕೆ.ಮಂಜು ಕೋಟೆಕೆರೆ, ನಿರ್ಮಾಣ ನಿರ್ವಹಣೆ ವಿಜಯಕುಮಾರ್ ಎವಿ, ಸಹ ನಿರ್ದೇಶನ, ಬಾಬು ಖಾನ್ ಕಲಾ ನಿರ್ದೇಶನವಿದೆ. ರಾಮಾನಾಯಕ್, ಉಗ್ರಂ ದೇವು, ರವಿಕುಮಾರ್ ಸನ, ಅನಂತರಾಜು, ವಕೀಲ ಜಗದೀಶ್ ಮಹಾದೇವ್, ಹ.ರ.ಮಹೇಶ್, ವಾಲೆ ಚಂದ್ರಣ್ಣ, ಮಂಜೀವ, ವೃಶ್ಚಿಕ ಶಿಲ್ಪಾ, ಟೈಗರ್ ನಾಗ್, ಆನಂದ್, ಶಿವಾನಂದ್ , ನವೀನ್, ಅರುಣ್, ಸಿದ್ದರಾಜು, ಕೆ.ಆರ್. ಓಬಳರಾಜು, ಕುಣಿಗಲ್ ರಮೇಶ್, ಮಂಜುಳಾ ರಾಜಕುಮಾರ್, ನಾಗಮಣಿ, ಬೇಬಿ ಸಿಂಚನಾ ಪ್ರಮುಖ ಪಾತ್ರಗಳಲ್ಲಿದ್ದಾರೆ.

  • ಕ್ಯಾರಾವ್ಯಾನ್ ಡ್ರೈವರ್ ಇದೀಗ ಹೀರೋ : ‘ಲಕ್’ ಮೇಲೆ ಲಕ್

    ಕ್ಯಾರಾವ್ಯಾನ್ ಡ್ರೈವರ್ ಇದೀಗ ಹೀರೋ : ‘ಲಕ್’ ಮೇಲೆ ಲಕ್

    ಜೀವನದಲ್ಲಿ ಯಾರಿಗೆ ಯಾವಾಗ ‘ಲಕ್’ (Luck)  ಬರತ್ತೆ ಹೇಳಲಿಕ್ಕೆ ಆಗಲ್ಲ. ಕಳೆದ ಒಂಭತ್ತು ವರ್ಷಗಳಿಂದ ಕ್ಯಾರಾವ್ಯಾನ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿರುವ ಕ್ಯಾರಾವ್ಯಾನ್ ಸ್ಟಾರ್ ಸ್ಮೈಲ್ ಮಂಜು (Smile Manju) ‘ಲಕ್’ ಚಿತ್ರದ ನಾಯಕನಾಗಿ ಅಭಿನಯಿಸಿದ್ದಾರೆ ಜೊತೆಗೆ ನಿರ್ಮಾಣವನ್ನು ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ‘90 ಕುಡಿ ಮಗ ಪಲ್ಟಿ ಹೊಡಿ’ ಎಂಬ ಹಾಡಿನ ಲಿರಿಕಲ್ ವಿಡಿಯೋ (Lyrical Song) ಬಿಡುಗಡೆಯಾಯಿತು. ಅಪ್ಪಿ ಹಾಗೂ ಹರೀಶ್ ಬರೆದಿರುವ ಈ ಹಾಡನ್ನು ನವೀನ್ ಸಜ್ಜು ಹಾಡಿದ್ದಾರೆ. ವಿಜಯ್ ಹರಿತ್ಸ (Vijay Haritsa) ಸಂಗೀತ ನೀಡಿದ್ದಾರೆ. ಈ ಚಿತ್ರದ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

    ಚಿತ್ರಕ್ಕೆ ಮೊದಲೊಬ್ಬ ನಿರ್ದೇಶಕರಿದ್ದರು. ಹಾಗೆ ನಾಯಕರೂ ಬೇರೆಯೇ ಇದ್ದರು. ಅನಿವಾರ್ಯ ಕಾರಣದಿಂದ ಅವರು ಚಿತ್ರದಿಂದ ದೂರವಾದಾಗ ಈ ಚಿತ್ರಕ್ಕೆ ನಾನು ನಿರ್ದೇಶಕನಾದೆ. ಮಂಜು ನಾಯಕನಾದರು. ನನ್ನ ಜೀವದಲ್ಲೇ ನಡೆದಿರುವ  ಘಟನೆಯನ್ನು ಸಿನಿಮಾ ರೂಪದಲ್ಲಿ ಆಚೆ ತರುತ್ತಿದ್ದೇನೆ‌. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಡಾಲಿ ಧನಂಜಯ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದೆ. ಇದು ಒಂದು ದಿನ, ಅದರಲ್ಲೂ ಕೆಲವೇ ಗಂಟೆಗಳಲ್ಲಿ ನಡೆಯುವ ಕಥೆಯಾಗಿದೆ. ಪದ್ಮಜಾರಾವ್, ಕಡ್ಡಿಪುಡಿ ಚಂದ್ರು ಮುಂತಾದವರು ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ:ಛತ್ರಪತಿ ಶಿವಾಜಿಯ ಸೊಸೆ ಪಾತ್ರಕ್ಕೆ ರಶ್ಮಿಕಾ ಮಂದಣ್ಣ ಫೈನಲ್?‌

    ನಾನು ಒಂಭತ್ತು ವರ್ಷಗಳಿಂದ ಕ್ಯಾರಾವ್ಯಾನ್ ಓಡಿಸುತ್ತಿದ್ದೇನೆ. ಗೋಲ್ಡನ್ ಸ್ಟಾರ್ ಗಣೇಶ್, ಡಾಲಿ ಅವರ ಕ್ಯಾರಾವ್ಯಾನ್ ಗೆ ನಾನೇ ಚಾಲಕ. ಸಿನಿಮಾ ಮಾಡುವ ಆಸೆಯಿತ್ತು. ದುಡಿದ ಹಣ ಹಾಗೂ ಜಮೀನು ಮಾರಿದ ಹಣ ಎರಡೂ ಸೇರಿಸಿ ಈ ಚಿತ್ರ ನಿರ್ಮಾಣ ಮಾಡಿದ್ದೇನೆ ಜೊತೆಗೆ ನಾಯಕನಾಗೂ ಅಭಿನಯಿಸಿದ್ದೇನೆ. ನನ್ನ ಮೇಲೆ ಪ್ರೀತಿಯಿಟ್ಟು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರು ಸೇರಿದಂತೆ ಚಿತ್ರರಂಗದ ಅನೇಕ ನಾಯಕರು ಪೋಸ್ಟರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ‌. ಚಿತ್ರತಂಡದ ಸಹಕಾರಕ್ಕೆ ಧನ್ಯವಾದ ಎಂದರು ನಾಯಕ ಹಾಗೂ ನಿರ್ಮಾಪಕ ಕ್ಯಾರಾವ್ಯಾನ್ ಸ್ಟಾರ್ ಸ್ಮೈಲ್ ಮಂಜು.

    ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿರುವ ರೇಣು ಹಾಡು ಬರೆದಿರುವ ಅಪ್ಪಿ ಹಾಗೂ ಸಂಗೀತ ನಿರ್ದೇಶಕ ವಿಜಯ್ ಹರಿತ್ಸ ಚಿತ್ರದ ಕುರಿತು ಮಾತನಾಡಿದರು.

  • ವಿಂಡೋಸೀಟ್ ಚಿತ್ರದ `ಖಾಲಿ ಆಕಾಶ’ ಲಿರಿಕಲ್ ವಿಡಿಯೋ ಸಾಂಗ್ ರಿಲೀಸ್..!!

    ವಿಂಡೋಸೀಟ್ ಚಿತ್ರದ `ಖಾಲಿ ಆಕಾಶ’ ಲಿರಿಕಲ್ ವಿಡಿಯೋ ಸಾಂಗ್ ರಿಲೀಸ್..!!

    ಬೆಂಗಳೂರು: ರೋಮ್ಯಾಂಟಿಕ್ ಥ್ರಿಲ್ಲರ್ ಕಥಾ ಹಂದರ ಒಳಗೊಂಡಿರುವ `ವಿಂಡೋಸೀಟ್’ ಚಿತ್ರದ ಎರಡನೇ ಲಿರಿಕಲ್ ವಿಡಿಯೋ ಸಾಂಗ್ ಬಿಡುಗೆಯಾಗಿದೆ. ಅತಿ ಚೆಂದದ ಹೂ ಗೊಂಚಲು ಹಾಡಿನ ಸೂಪರ್ ಸಕ್ಸಸ್ ನಂತರ `ಖಾಲಿ ಆಕಾಶ ನನ್ನೇ ನೋಡಿದೆ’ ಹಾಡಿನ ಲಿರಿಕಲ್ ವಿಡಿಯೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

    ಕವಿರಾಜ್ ಸಾಹಿತ್ಯ ಕೃಷಿಯಲ್ಲಿ ಅರಳಿದ ಪ್ಯಾಥೋ ಸಾಂಗ್‍ಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ, ಸ್ವರ ಮಾಂತ್ರಿಕ ವಿಜಯ್ ಪ್ರಕಾಶ್ ದನಿ ಹೊಸದೊಂದು ಸ್ಪರ್ಶ ನೀಡಿದೆ. ಹೊಸತನದಿಂದ ಕೂಡಿದ ಈ ಹಾಡಿಗೆ ಗಾನಪ್ರಿಯರು ತಲೆದೂಗಿದ್ದಾರೆ.

    ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗಾಯಕ ವಿಜಯ್ ಪ್ರಕಾಶ್ ಇಬ್ಬರ ತಲ್ಲೀನತೆ ಲಿರಿಕಲ್ ವಿಡಿಯೋದಲ್ಲಿ ನೋಡುಗರನ್ನು ಸೆಳೆಯದೇ ಇರದು. ವಿಶೇಷ ಅಂದ್ರೆ `ಖಾಲಿ ಆಕಾಶ’ `ವಿಂಡೋಸೀಟ್’ ಚಿತ್ರ ತಂಡಕ್ಕೂ ಬಲು ಅಚ್ಚುಮೆಚ್ಚಿನ ಸಾಂಗ್ ಆಗಿದೆ. ಈ ಬಗ್ಗೆ ಸ್ವತಃ ಚಿತ್ರದ ನಿರ್ದೇಶಕಿ ಶೀತಲ್ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

    ರಂಗಿತರಂಗ ಖ್ಯಾತಿಯ ನಿರೂಪ್ ಭಂಡಾರಿ ನಟನೆಯ ಬಹುನಿರೀಕ್ಷಿತ ಚಿತ್ರಕ್ಕೆ ಶೀತಲ್ ಶೆಟ್ಟಿ ಮೊದಲ ಬಾರಿ ಆ್ಯಕ್ಷನ್ ಕಟ್ ಹೇಳಿದ್ದು, ನಿರೂಪ್ ಭಂಡಾರಿಗೆ ಜೋಡಿಯಾಗಿ ಸಂಜನಾ ಆನಂದ್, ಅಮೃತ ಐಯ್ಯಂಗಾರ್ ನಾಯಕ ನಟಿಯರಾಗಿ ತೆರೆಹಂಚಿಕೊಂಡಿದ್ದಾರೆ. ಚಿತ್ರಕ್ಕೆ ಜಾಕ್ ಮಂಜು ಬಂಡವಾಳ ಹಾಕಿದ್ದು, ವಿಘ್ನೇಶ್ ರಾಜ್ ಕ್ಯಾಮೆರಾ ಕಣ್ಣಲ್ಲಿ ವಿಂಡೋಸೀಟ್ ಸಿನಿಮಾ ಸೆರೆಯಾಗಿದೆ. ಲೇಖಾ ನಾಯ್ಡು, ಮಧುಸೂದನ್ ರಾವ್, ರವಿಶಂಕರ್, ಸೂರಜ್ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ.

  • ದರ್ಶನ್ ರಶ್ಮಿಕಾ ಜೋಡಿಯ ಡ್ಯುಯೆಟ್ ಹಾಡು ರಿಲೀಸ್

    ದರ್ಶನ್ ರಶ್ಮಿಕಾ ಜೋಡಿಯ ಡ್ಯುಯೆಟ್ ಹಾಡು ರಿಲೀಸ್

    – ದಾಸಾ ಇನ್ಮುಂದೆ ರಶ್ಮಿಕಾಗೆ ಖಾಸ!

    ಬೆಂಗಳೂರು: ಇತ್ತೀಚೆಗಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾದ ಶಿವನಂದಿ ಲಿರಿಕಲ್ ಹಾಡು ರಿಲೀಸ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತನ್ನದೇ ಆದ ಹವಾ ಸೃಷ್ಟಿ ಮಾಡಿತ್ತು. ಈಗ ಇದೇ ಸಿನಿಮಾದ ಇನ್ನೊಂದು ‘ಒಂದು ಮುಂಜಾನೆ’ ಲಿರಿಕಲ್ ಹಾಡು ರಿಲೀಸ್ ಆಗಿದೆ.

    ನಟ ದರ್ಶನ್ ಮತ್ತು ನಟಿ ರಶ್ಮಿಕಾ ಜೋಡಿಯ ಡ್ಯುಯೆಟ್ ಹಾಡು ಇದಾಗಿದ್ದು, ಇದನ್ನು ಸ್ವೀಡನ್ ನಲ್ಲಿ ಚಿತ್ರೀಕರಿಸಲಾಗಿದೆ. ಮೊದಲಿಗೆ ಬರುವ ಮ್ಯೂಸಿಕ್ ಸಂಗೀತ ಪ್ರಿಯರನ್ನು ಮನಸೂರೆ ಮಾಡುವಂತೆ ಮಾಡುತ್ತದೆ. ‘ಒಂದು ಮುಂಜಾನೆ, ಹಂಗೆ ಸುಮ್ಮನೆ’ ಎಂಬ ಸಾಲುಗಳ ಮೂಲಕ ಹಾಡು ಪ್ರಾರಂಭವಾಗುತ್ತದೆ. ಸಂಪೂರ್ಣ ಹಾಡಿನಲ್ಲಿ ದರ್ಶನ್ ಮತ್ತು ರಶ್ಮಿಕಾ ಇಬ್ಬರ ರೋಮ್ಯಾಂಟಿಕ್ ಫೋಟೋಗಳನ್ನು ಕಾಣಬಹುದಾಗಿದೆ. ಈ ಹಾಡಿನ ಮೂಲಕ ಇಬ್ಬರ ಪ್ರೀತಿ ಎಷ್ಟರ ಮಟ್ಟಿಗೆ ಇದೆ ಎಂಬುದನ್ನು ತಿಳಿಸಲಾಗಿದೆ.

    ಲಿರಿಕಲ್ ವಿಡಿಯೋದಲ್ಲಿ ಕೆಲವು ದೃಶ್ಯದ ತುಣುಕುಗಳು ಸೇರಿದ್ದು, ಸುಂದರ ಸ್ಥಳದಲ್ಲಿ ದರ್ಶನ್ ಮತ್ತು ರಶ್ಮಿಕಾ ರೊಮ್ಯಾಂಟಿಕ್ ಜೋಡಿಯಾಗಿ ಮಿಂಚಿದ್ರೆ, ಹಾಡಿನ ಸಾಹಿತ್ಯದೊಂದಿಗೆ ಹಿತವಾದ ಸಂಗೀತ ಕೇಳುಗರನ್ನು ಬೇರೊಂದು ಲೋಕಕ್ಕೆ ಕರೆದುಕೊಂಡು ಹೋಗುವುದು ಬಹುತೇಕ ನಿಶ್ಚಿತ. ಮುಂದಿನ ದಿನಗಳಲ್ಲಿ ಪ್ರೇಮಿಗಳ ಫೇವರೇಟ್ ಹಾಡು ಇದಾಗಲಿದೆ ಎಂಬುದನ್ನು ಸಾಬೀತು ಮಾಡಲು ಹೊರಟಿದೆ ಒಂದು ಮುಂಜಾನೆಯ ಕಥೆ.

    ಈ ರಿಲಿಕಲ್ ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿ ಒಂದು ಗಂಟೆಯಲ್ಲಿಯೇ 3.95 ಲಕ್ಷ ವೀವ್ಸ್ ಕಂಡಿದ್ದು, 53 ಸಾವಿರ ಲೈಕ್ಸ್ ಕಂಡಿದೆ. ನಟ ದರ್ಶನ್ ಈ ಬಗ್ಗೆ, “ಶಿವನಂದಿ ಹಾಡಿಗೆ ನೀವು ತೋರಿಸಿರುವ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಈಗ ಯಜಮಾನ ಚಿತ್ರದ 2ನೇ ಹಾಡು – ‘ಒಂದು ಮುಂಜಾನೆ’ ಮೆಲೋಡಿ ನಿಮಗಾಗಿ ಕೇಳಿ” ಎಂದು ಟ್ವೀಟ್ ಮಾಡಿದ್ದಾರೆ.

    ವಿ. ಹರಿಕೃಷ್ಣ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದಿರುವ ಒಂದು ಮುಂಜಾನೆ ಹಾಡಿಗೆ ಸೋನು ನಿಗಮ್ ಹಾಗೂ ಶ್ರೇಯಾ ಘೋಷಾಲ್ ಧ್ವನಿ ನೀಡಿದ್ದಾರೆ. ಕವಿರಾಜ್ ವಿರಚಿತ ಹಾಡು ಇದಾಗಿದ್ದು, ಯಜಮಾನ ಸಿನಿಮಾ ಶೀಘ್ರದಲ್ಲೇ ಬಿಡುಗಡೆಗೆ ಸಿದ್ಧವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯೂಟ್ಯೂಬ್ ಟ್ರೆಂಡಿಂಗ್‍ನಲ್ಲಿ ‘ಶಿವನಂದಿ’ ನಂ.1

    ಯೂಟ್ಯೂಬ್ ಟ್ರೆಂಡಿಂಗ್‍ನಲ್ಲಿ ‘ಶಿವನಂದಿ’ ನಂ.1

    ಬೆಂಗಳೂರು: ಸಂಕ್ರಾಂತಿ ಹಬ್ಬದಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾದ ‘ಶಿವನಂದಿ’ ಲಿರಿಕಲ್ ಸಾಂಗ್ ರಿಲೀಸ್ ಆಗಿದೆ. ಯೂಟ್ಯೂಬ್ ನಲ್ಲಿ ‘ಶಿವನಂದಿ’ ಲಿರಿಕಲ್ ಸಾಂಗ್ ನಂಬರ್ 1 ಟ್ರೆಂಡಿಂಗ್‍ನಲ್ಲಿ ಇದೆ.

    ಮಂಗಳವಾರ ಬೆಳಗ್ಗೆ 11.05ಕ್ಕೆ ‘ಯಜಮಾನ’ ಸಿನಿಮಾದ ‘ಶಿವನಂದಿ’ ಯ ಲಿರಿಕಲ್ ಹಾಡು ಯೂಟ್ಯೂಬ್ ನಲ್ಲಿ ಬಿಡಿಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಲ್ಲಿ ತನ್ನದೇ ಆದ ಚಾಪು ಮೂಡಿಸಿದೆ. ಈಗಗಾಲೇ ಬಿಡುಗಡೆಯಾದ 21 ಗಂಟೆಯಲ್ಲಿಯೇ 21 ಲಕ್ಷಕ್ಕೂ ಅಧಿಕ ವೀವ್ಸ್ ಕಂಡಿದ್ದು, 1.86 ಲಕ್ಷ ಲೈಕ್ಸ್ ಪಡೆದುಕೊಂಡಿದೆ. ಅಷ್ಟೇ ಅಲ್ಲದೇ ಯೂಟ್ಯೂಬ್ ನಲ್ಲಿ ನಂಬರ್ 1 ಟ್ರೆಂಡಿಂಗ್‍ನಲ್ಲಿ ಇದೆ.

    ‘ಶಿವನಂದಿ’ ಯ ಲಿರಿಕಲ್ ಹಾಡಿಗೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದು, ಸಂಕ್ರಾಂತಿ ಹಬ್ಬಕ್ಕೆ ಸಿಹಿಯ ಜೊತೆ ಉಡುಗೊರೆ ಸಿಕ್ಕಂತಾಗಿದೆ. ಹಾಡಿನಲ್ಲಿ ಚಿತ್ರದ ನಾಯಕನ ವರ್ಣನೆಯನ್ನು ಹೇಳಲಾಗಿದೆ. ಶಿವನಂದಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ದರ್ಶನ್ ಇಂಟ್ರುಡೆಕ್ಷನ್ ಹಾಡು ಇದಾಗಿದೆ. ಸಿನಿಮಾ ಟೈಟಲ್ ಗೆ ತಕ್ಕಂತೆ ಯಜಮಾನನ ಗುಣಗಳನ್ನು ಹಾಡಿನ ರೂಪದಲ್ಲಿ ತೋರಿಸಲಾಗಿದೆ.

    ಯಾಜಮಾನ ಚಿತ್ರದಲ್ಲಿ ನಾಯಕ ನಟನಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸಿದ್ದಾರೆ. ಹಾಗೆಯೇ ಅವರಿಗೆ ಜೋಡಿಯಾಗಿ ಕರ್ನಾಟಕ ಕ್ರಶ್ ರಶ್ಮಿಕಾ ಮಂದಣ್ಣ ಬಣ್ಣ ಹಚ್ಚಿದ್ದಾರೆ. ಬಿ.ಸುರೇಶ್ ಹಾಗೂ ಶೈಲಜಾ ನಾಗ್ ಅವರ ಮಿಡಿಯಾ ಹೌಸ್ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರುತ್ತಿದ್ದು, ನಿರ್ದೇಶಕ ಪೊನ್ನುಕುಮಾರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಅಲ್ಲದೆ ದರ್ಶನ್ ಅವರ 51 ನೇ ಚಿತ್ರ ಇದಾಗಿದ್ದು. ಚಿತ್ರವನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಾಖಲೆ ನಿರ್ಮಿಸಿದ ಕೆಜಿಎಫ್ ಗಲಿ ಗಲಿ ಹಾಡು- ಈಗ ಕನ್ನಡದ ಜೋಕೆ ಹಾಡು ರಿಲೀಸ್

    ದಾಖಲೆ ನಿರ್ಮಿಸಿದ ಕೆಜಿಎಫ್ ಗಲಿ ಗಲಿ ಹಾಡು- ಈಗ ಕನ್ನಡದ ಜೋಕೆ ಹಾಡು ರಿಲೀಸ್

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾದ ಮತ್ತೊಂದು ಲಿರಿಕಲ್ ಹಾಡು ರಿಲೀಸ್ ಆಗಿದೆ.

    ನಟಿ ತಮನ್ನಾ ಭಾಟಿಯಾ ಈ ಚಿತ್ರದ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಹಾಡಿನ ಮಧ್ಯೆ ಯಶ್ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಾರೆ. `ಪರೋಪಕಾರಿ’ ಕನ್ನಡ ಚಿತ್ರದ ಜೋಕೆ ನಾನು ಬಳ್ಳಿಯ ಮಿಂಚು’ ಐಟಂ ಸಾಂಗನ್ನು ರಿಮಿಕ್ಸ್ ಮಾಡಲಾಗಿರುವ ಹಾಡು ಇದಾಗಿದ್ದು ಇದೀಗ `ಕೆಜಿಎಫ್’ ಚಿತ್ರಕ್ಕಾಗಿ ರವಿ ಬಸ್ರೂರ್ ರೀ-ಕ್ರಿಯೇಟ್ ಮಾಡಿದ್ದಾರೆ.

    ಹಿಂದಿನ ಹಾಡಿಗೆ ಎಲ್.ಆರ್ ಈಶ್ವರಿ ಧ್ವನಿಯಾಗಿದ್ದರು. ಇದೀಗ ಐರಾ ಉಡುಪಿ ಹಿನ್ನೆಲೆ ಗಾಯನದಲ್ಲಿ ಹೊಸ ಜೋಕೆ ರಿಮಿಕ್ಸ್ ಹಾಡು ಮೂಡಿ ಬಂದಿದೆ. ಪ್ರತಿಷ್ಠಿತ ಲಹರಿ ಸಂಸ್ಥೆ ಈ ಹಾಡನ್ನು ರಿಲೀಸ್ ಮಾಡಿದೆ. ಕೆಜಿಎಫ್ ಚಿತ್ರ ಒಟ್ಟು 5 ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಇದನ್ನೂ ಓದಿ: ಕೆಜಿಎಫ್ ಚಿತ್ರದ ‘ಗಲಿ ಗಲಿ’ ಸಾಂಗ್ ರಿಲೀಸ್- ಯಶ್, ಮೌನಿ ಡ್ಯಾನ್ಸ್ ಗೆ ಎಲ್ಲರೂ ಫಿದಾ

    ಇತ್ತೀಚೆಗೆ ಹಿಂದಿ ಕೆಜಿಎಫ್ ಚಿತ್ರದ ಸ್ಪೆಷಲ್ ಹಾಡೊಂದನ್ನು ರಿಲೀಸ್ ಮಾಡಿತ್ತು. ಮೌನಿ ರಾಯ್ ಹಾಗೂ ಯಶ್ ಹೆಜ್ಜೆ ಹಾಕಿದ ‘ಗಲಿ ಗಲಿ’ ಹಾಡು ಈಗಾಗಲೇ ರಿಲೀಸ್ ಆಗಿದ್ದು, ಈಗ ಈ ಹಾಡು ಹೊಸ ದಾಖಲೆಯನ್ನು ಮಾಡಿದೆ. ಕಳೆದ ಬುಧವಾರ ಕೆಜಿಎಫ್ ಸಿನಿಮಾದ ‘ಗಲಿ ಗಲಿ’ ಹಾಡು ಬಿಡುಗಡೆಯಾಗಿತ್ತು. ಬಿಡುಗಡೆಯಾದ ಮೊದಲ ದಿನವೇ ಈ ಹಾಡು 13 ಮಿಲಿಯನ್ ವ್ಯೂ ಪಡೆದುಕೊಂಡಿದೆ. ವಿಶ್ವದ ಯಾವ ಸಿನಿಮಾ ಹಾಡು ಕೂಡ ಒಂದು ದಿನಕ್ಕೆ ಈ ಮಟ್ಟಿನ ಹಿಟ್ ಪಡೆದುಕೊಂಡಿಲ್ಲ. ಈಗ ಕೆಜಿಎಫ್ ಚಿತ್ರದ ಈ ಹಾಡು ಬಿಡುಗಡೆಯಾಗಿ ಹೊಸ ದಾಖಲೆ ಸೃಷ್ಟಿಸಿದೆ.

    ಕೆಜಿಎಫ್ ಚಿತ್ರದಲ್ಲಿ ಮೌನಿ ರಾಯ್ ಐಟಂ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಹಾಡಿಗಾಗಿ ಬಾರ್ ಸೆಟ್ ನಿರ್ಮಿಸಲಾಗಿದ್ದು, 1989ರಲ್ಲಿ ಬಿಡುಗಡೆಯಾಗಿದ್ದ `ತ್ರಿದೇವ್’ ಚಿತ್ರದ `ಗಲಿ ಗಲಿ ಮೈ’ ರಿಮಿಕ್ಸ್ ಹಾಡಿಗೆ ಮೌನಿ ರಾಯ್ ಸೊಂಟ ಬಳುಕಿಸಿದ್ದಾರೆ. 1989ರಲ್ಲಿ ಬಿಡುಗಡೆಯಾಗಿದ್ದ ಈ ಹಾಡನ್ನು ಅಲ್ಕಾ ಯಾಗ್ನಿಕ್ ಹಾಡಿದ್ದರು. ನಟ ಜಾಕಿ ಶ್ರಾಫ್ ಹಾಗೂ ನಟಿ ಸಂಗೀತಾ ಬಿಜಲಾನಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಈಗ ಈ ರಿಮಿಕ್ಸ್ ಹಾಡಿಗೆ ಗಾಯಕಿ ನೇಹಾ ಕಕ್ಕರ್ ಧ್ವನಿ ನೀಡಿದ್ದಾರೆ. ಈ ಹಾಡನ್ನು ತನಿಷ್ಕ್ ಬಗ್ಚಿ ರೀ-ಕಂಪೋಸ್ ಮಾಡಿದ್ದಾರೆ.

    ಕೆಜಿಎಫ್ ಚಿತ್ರವನ್ನು ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಒಟ್ಟು 5 ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಕೆಜಿಎಫ್ ಚಿತ್ರ ಡಿ. 21ರಂದು ದೇಶಾದ್ಯಂತ ಬಿಡುಗಡೆ ಆಗಲಿದೆ. ಇದೇ ದಿನ ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ನಟನೆಯ `ಝೀರೋ’ ಚಿತ್ರ ಬಿಡುಗಡೆಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv