Tag: maanikya

  • ಬಾಲ್ಯದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ: ‘ಮಾಣಿಕ್ಯ’ ನಟಿ ವರಲಕ್ಷ್ಮೀ ಕಣ್ಣೀರು

    ಬಾಲ್ಯದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ: ‘ಮಾಣಿಕ್ಯ’ ನಟಿ ವರಲಕ್ಷ್ಮೀ ಕಣ್ಣೀರು

    ನ್ನಡದ ‘ಮಾಣಿಕ್ಯ’ (Maanikya) ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ತಮಗಾದ ಲೈಂಗಿಕ ಕಿರುಕುಳ ನೆನೆದು ಕಾರ್ಯಕ್ರಮವೊಂದರಲ್ಲಿ ಕಣ್ಣೀರಿಟ್ಟಿದ್ದಾರೆ. ನಿಮ್ಮ ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ಅರಿವು ಮೂಡಿಸಿ ಎಂದು ಪೋಷಕರಿಗೆ ನಟಿ ಮನವಿ ಮಾಡಿದ್ದಾರೆ. ಇದನ್ನೂ ಓದಿ:‘ನಿನ್ನ ಪ್ರತಿಯೊಂದು ಹೆಜ್ಜೆಯಲ್ಲೂ ನನ್ನ ಪಾಲಿರಲಿ’ ಎನ್ನುತ್ತಿದ್ದಾರೆ ಸಪ್ತಮಿ ಗೌಡ

    ವರಲಕ್ಷ್ಮಿ ಬಹುಭಾಷೆಗಳಲ್ಲಿ ನಟಿಸುತ್ತಾ ಬ್ಯುಸಿಯಾಗಿದ್ದಾರೆ. ಕಿರುತೆರೆಯಲ್ಲೂ ಅವರು ಸಕ್ರಿಯರಾಗಿದ್ದಾರೆ. ಇದೀಗ ಅವರು ‘ಡ್ಯಾನ್ಸ್ ಜೋಡಿ ಡ್ಯಾನ್ಸ್’ ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿದ್ದಾರೆ. ಇದರ ಪ್ರೋಮೋ ಇದೀಗ ರಿಲೀಸ್ ಆಗಿದೆ. ಆ ಪ್ರೋಮೋದಲ್ಲಿ ಮಹಿಳಾ ಸ್ಪರ್ಧಿಯೊಬ್ಬರು ತಾವು ಎದುರಿಸಿದ ಕಹಿ ಅನುಭವಗಳ ಬಗ್ಗೆ ಡ್ಯಾನ್ಸ್ ಮೂಲಕ ತೋರಿಸಿದ್ದಾರೆ. ಇದನ್ನು ನೋಡಿ ವರಲಕ್ಷ್ಮಿ ಭಾವುಕರಾಗಿದ್ದಾರೆ.

    ಬಾಲ್ಯದಲ್ಲಿ ನಾನು ಕೂಡ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ, ನನ್ನ ಕಥೆಯೂ ನಿನ್ನ ಕಥೆಯೂ ಒಂದೇ ಎಂದಿದ್ದಾರೆ ನಟಿ. ಪೋಷಕರು ಅವರ ಕೆಲಸದಲ್ಲಿ ನಿರತರಾಗಿದ್ದರು. ಹಾಗಾಗಿ ನಾನು ಚಿಕ್ಕವಳಿದ್ದಾಗ ನನ್ನನ್ನು ಬೇರೆಯವರ ಮನೆಯಲ್ಲಿ ಬಿಟ್ಟು ಹೋಗುತ್ತಿದ್ದರು. ಆಗ 5ರಿಂದ 6 ಜನ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು. ನಿನ್ನ ಸ್ಟೋರಿ ನನ್ನ ಸ್ಟೋರಿ ಎರಡು ಒಂದೆ. ನನಗೆ ಮಕ್ಕಳಿಲ್ಲ ಆದರೆ ನಾನು ಪೋಷಕರಿಗೆ ಹೇಳುವುದಿಷ್ಟೇ, ನಿಮ್ಮ ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ಅರಿವು ಮೂಡಿಸಿ ಎಂದು ವೇದಿಕೆಯಲ್ಲಿ ವರಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ.

    ಅಂದಹಾಗೆ, ಇನ್ನೂ ಕಳೆದ ವರ್ಷ ಜುಲೈನಲ್ಲಿ ಉದ್ಯಮಿ ನಿಕೋಲಾಯ್ ಜೊತೆ ನಟಿ ವರಲಕ್ಷ್ಮಿ ಹೊಸ ಬಾಳಿಗೆ ಕಾಲಿಟ್ಟರು. ವಿದೇಶದಲ್ಲಿ ಇಬ್ಬರ ಮದುವೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.

  • ಭಾವಿ ಪತಿಯನ್ನು ಟ್ರೋಲ್ ಮಾಡಿದ್ದಕ್ಕೆ ‘ಮಾಣಿಕ್ಯ’ ನಟಿ ತಿರುಗೇಟು

    ಭಾವಿ ಪತಿಯನ್ನು ಟ್ರೋಲ್ ಮಾಡಿದ್ದಕ್ಕೆ ‘ಮಾಣಿಕ್ಯ’ ನಟಿ ತಿರುಗೇಟು

    ‘ಮಾಣಿಕ್ಯ’ ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar)  ಅವರು ಸಿನಿಮಾಗಿಂತ ವೈಯಕ್ತಿಕ ಕಾರಣಗಳಿಂದ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಇತ್ತೀಚೆಗೆ ಅದ್ಧೂರಿಯಾಗಿ ನಿಕೋಲಾಯ್ ಜೊತೆ ಎಂಗೇಜ್‌ಮೆಂಟ್ ಆಗಿತ್ತು. ಈ ಬೆನ್ನಲ್ಲೇ ನಟಿಯ ಭಾವಿ ಪತಿ ನೆಗೆಟಿವ್ ಆಗಿ ಟ್ರೋಲ್ ಕೂಡ ಆಗಿತ್ತು. ಈ ವಿಚಾರವಾಗಿ ನಟಿ ಪ್ರತಿಕ್ರಿಯೆ ನೀಡಿದ್ದಾರೆ.

    ಡಿವೋರ್ಸ್ ಆಗಿರುವ ನಿಕೋಲಾಯ್ ಸಚ್‌ದೇವ್ (Nicholai Sachdev) ಜೊತೆ ವರಲಕ್ಷ್ಮಿ 2ನೇ ಮದುವೆ ಆಗಲು ಸಜ್ಜಾಗಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ನಟಿ ಮಾತನಾಡಿದ್ದಾರೆ. ನನ್ನ ತಂದೆ (Sarathkumar) ಕೂಡ 2ನೇ ಮದುವೆ ಆದರು. ಅದರಲ್ಲಿ ಯಾವ ತಪ್ಪು ಇಲ್ಲ. ನನ್ನ ಕಣ್ಣಿಗೆ ನಿಕ್ ಅವರು ಹ್ಯಾಂಡ್ಸಮ್ ಆಗಿದ್ದಾರೆ. ನಮ್ಮ ಸಂಬಂಧದ ಬಗ್ಗೆ ನೆಗೆಟಿವ್ ಆಗಿ ಮಾತನಾಡುವವರ ಬಗ್ಗೆ ನಾನು ಎಂದೂ ಕೇರ್ ಮಾಡುವುದಿಲ್ಲ ಹೇಳಿದ್ದಾರೆ.‌ ಇದನ್ನೂ ಓದಿ:ಕಾಮಾಕ್ಯ ದೇವಿಯ ದರ್ಶನ ಪಡೆದ ‘ಗಾಳಿಪಟ 2’ ನಟಿ

    ಬೇರೆಯವರಿಗೆ ನಾನು ಯಾಕೆ ಉತ್ತರ ಕೊಡಬೇಕು. ನಿಕ್ ತಂದೆ-ತಾಯಿ ಒಂದು ಆರ್ಟ್ ಗ್ಯಾಲರಿ ನಡೆಸುತ್ತಾರೆ. ನಿಕ್ ಮತ್ತು ಅವರ ಪುತ್ರಿ ಪವರ್ ಲಿಫ್ಟಿಂಗ್‌ನಲ್ಲಿ ಬಂಗಾರದ ಪದಕ ಗೆದ್ದಿದ್ದಾರೆ. ಅವರ ಮಾಜಿ ಪತ್ನಿ ಜೊತೆಗೂ ನಾನು ಉತ್ತಮ ಬಾಂಧವ್ಯ ಹೊಂದಿದ್ದೇನೆ. ನಮ್ಮ ನಡುವೆ ಎಲ್ಲವೂ ಚೆನ್ನಾಗಿದೆ ಎಂದಿದ್ದಾರೆ.

    ಅಂದಹಾಗೆ, ‘ಮಾಣಿಕ್ಯ’ ಸಿನಿಮಾದ ಬಳಿಕ ಮತ್ತೆ ವರಲಕ್ಷ್ಮಿ ಸುದೀಪ್ ಜೊತೆ ಕೈಜೋಡಿಸಿದ್ದಾರೆ. ಮಾಕ್ಸ್ ಸಿನಿಮಾದಲ್ಲಿ ಅವರು ನಟಿಸಿದ್ದಾರೆ.

  • ವರಲಕ್ಷ್ಮಿ ಭಾವಿ ಪತಿಗೆ ಇದು 2ನೇ ಮದುವೆ- ಮೊದಲ ಪತ್ನಿ ಯಾರು?

    ವರಲಕ್ಷ್ಮಿ ಭಾವಿ ಪತಿಗೆ ಇದು 2ನೇ ಮದುವೆ- ಮೊದಲ ಪತ್ನಿ ಯಾರು?

    ಹುಭಾಷಾ ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ಮದುವೆ ನಿಶ್ಚಿತಾರ್ಥವಾಗಿದೆ. ನಿಕೋಲಾಯ್ ಸಚ್‌ದೇವ್ (Nicholai Sachdev) ಎಂಬುವರ ಜೊತೆ ಮದುವೆ ನಿಶ್ಚಯವಾಗಿದೆ. ಇವರು ಅಥ್ಲೆಟ್ ಆಗಿದ್ದು ವೇಟ್‌ಲಿಫ್ಟಿಂಗ್‌ನಲ್ಲಿ ಹೆಸರು ಮಾಡಿದ್ದಾರೆ. ಈಗಾಗಲೇ ಅವರಿಗೆ ಮದುವೆಯಾಗಿದ್ದು, 15 ವರ್ಷದ ಮಗಳಿದ್ದಾಳೆ ಎನ್ನಲಾಗ್ತಿದೆ. ಇವರ ಜೊತೆ ವರಲಕ್ಷ್ಮಿ ನಿಶ್ಚಿತಾರ್ಥ ಹಲವು ಚರ್ಚೆಗೆ ಕಾರಣವಾಗಿದೆ.

    ನಿಕೋಲಾಯ್ ಅವರು ಖ್ಯಾತ ಮಾಡೆಲ್ ಕವಿತಾ (Kavitha) ಅವರನ್ನು ಮದುವೆಯಾಗಿದ್ದರು. ಅವರಿಗೆ 15 ವರ್ಷದ ಮಗಳೂ ಸಹ ಇದ್ದಾರೆ ಎನ್ನಲಾಗಿದೆ. ಈ ಜೋಡಿಗೆ ಮದುವೆ ಬಳಿಕ ಹೊಂದಾಣಿಕೆ ಸಮಸ್ಯೆ ಎದುರಾಗಿತ್ತು. ಹೀಗಾಗಿ ಇಬ್ಬರು ಬೇರೆಯಾಗುವ ನಿರ್ಧಾರಕ್ಕೆ ಬಂದಿದ್ದರು. ಆ ಬಳಿಕ ವರಲಕ್ಷ್ಮಿ ಜೊತೆ ಎಂಗೇಜ್ ಆದರು. ನಿಕೋಲಾಯ್ ಹಾಗೂ ಕವಿತಾ ಡಿವೋರ್ಸ್ ಬಳಿಕವಷ್ಟೇ ವರಲಕ್ಷ್ಮಿ ಜೊತೆ ಡೇಟಿಂಗ್ ಶುರುವಾಗಿತ್ತು ಎಂದು ವರದಿಯಾಗಿವೆ. ಇದನ್ನೂ ಓದಿ:ನಟಿ ವೈಜಯಂತಿ ಮಾಲಾರನ್ನು ಭೇಟಿಯಾಗಿ ನಮಿಸಿದ ನರೇಂದ್ರ ಮೋದಿ

    ವರಲಕ್ಷ್ಮಿ ಶರತ್‌ಕುಮಾರ್ ತಮ್ಮ ಅಭಿಮಾನಿಗಳಿಗೆ ಮಾರ್ಚ್ 1ರಂದು ಗುಡ್ ನ್ಯೂಸ್ ಕೊಟ್ಟಿದ್ದರು. ಆಪ್ತರ ಸಮ್ಮುಖದಲ್ಲಿ ನಟಿ ಬಹುಕಾಲದ ಗೆಳೆಯನ ಜೊತೆ ಎಂಗೇಜ್ ಆದರು. ಎಂಗೇಜ್‌ಮೆಂಟ್‌ನ ಸುಂದರ ಫೋಟೋಗಳನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ವರಲಕ್ಷ್ಮಿ ಅವರು ಆರ್ಟ್ ಗ್ಯಾಲರಿ ಮಾಲೀಕ ನಿಕೋಲಾಯ್ ಸಚ್‌ದೇವ್ ಜೊತೆ ಎಂಗೇಜ್ ಆಗಿದ್ದಾರೆ. ಅಂದಹಾಗೆ, ಕಳೆದ 14 ವರ್ಷದಿಂದ ನಿಕೋಲಾಯ್ ಪರಿಚಯವಿತ್ತು. ಮುಂಬೈನ ಖಾಸಗಿ ರೆಸಾರ್ಟ್‌ವೊಂದರಲ್ಲಿ ವರಲಕ್ಷ್ಮಿ ನಿಶ್ಚಿತಾರ್ಥ ಸಮಾರಂಭ ಜರುಗಿದೆ.

    ಈ ವರ್ಷದ ಅಂತ್ಯದಲ್ಲಿ ವರಲಕ್ಷ್ಮಿ ಮದುವೆ ಸಮಾರಂಭ ನಡೆಯಲಿದೆ. ತಮಿಳಿನ ಹಿರಿಯ ನಟ ಶರತ್ ಕುಮಾರ್ ಅವರ ಪುತ್ರಿಯಾಗಿದ್ದು, ತಮಿಳು, ತೆಲುಗು ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.

    ಸದ್ಯ ಧನುಷ್ ನಟನೆಯ ‘ರಾಯನ್’ (Raayan) ಚಿತ್ರದಲ್ಲಿ ವರಲಕ್ಷ್ಮಿ ಬಹುಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಕೂಡ ಭರದಿಂದ ಸಾಗುತ್ತಿದೆ.

    ಸುದೀಪ್ ಜೊತೆ ‘ಮಾಣಿಕ್ಯ’ ಮಾತ್ರವಲ್ಲ, ರನ್ನ ಸಿನಿಮಾದಲ್ಲೂ ವರಲಕ್ಷ್ಮಿ ಶರತ್‌ಕುಮಾರ್ ಕಾಣಿಸಿಕೊಂಡಿದ್ದಾರೆ. ಇವಿಷ್ಟು ಮಾತ್ರವಲ್ಲದೆ ಕನ್ನಡದ ವಿಸ್ಮಯ, ರಣಂ ಚಿತ್ರದಲ್ಲಿ ನಟಿಸಿದ್ದಾರೆ.

  • ಮುಂಬೈನಲ್ಲಿ ಅದ್ಧೂರಿಯಾಗಿ ನಡೆಯಿತು ‘ಮಾಣಿಕ್ಯ’ ನಟಿ ಎಂಗೇಜ್‌ಮೆಂಟ್

    ಮುಂಬೈನಲ್ಲಿ ಅದ್ಧೂರಿಯಾಗಿ ನಡೆಯಿತು ‘ಮಾಣಿಕ್ಯ’ ನಟಿ ಎಂಗೇಜ್‌ಮೆಂಟ್

    ನ್ನಡದ ‘ಮಾಣಿಕ್ಯ’ (Maanikya) ಚಿತ್ರ ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalakshmi Sarathkumar) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಆಪ್ತರ ಸಮ್ಮುಖದಲ್ಲಿ ನಟಿ ಬಹುಕಾಲದ ಗೆಳೆಯನ ಜೊತೆ ಎಂಗೇಜ್ ಆಗಿದ್ದಾರೆ. ಎಂಗೇಜ್‌ಮೆಂಟ್‌ನ ಸುಂದರ ಫೋಟೋಗಳನ್ನ ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ನಟಿ ವರಲಕ್ಷ್ಮಿ ಅವರು ಆರ್ಟ್ ಗ್ಯಾಲರಿ ಮಾಲೀಕ ನಿಕೋಲಾಯ್ ಸಚ್‌ದೇವ್ (Nicholai Sachdev) ಜೊತೆ ಎಂಗೇಜ್ ಆಗಿದ್ದಾರೆ. ಅಂದಹಾಗೆ, ಕಳೆದ 14 ವರ್ಷದಿಂದ ನಿಕೋಲಾಯ್ ಪರಿಚಯವಿತ್ತು. ಮಾರ್ಚ್ 1ರಂದು ಮುಂಬೈನ ಖಾಸಗಿ ರೆಸಾರ್ಟ್‌ವೊಂದರಲ್ಲಿ ವರಲಕ್ಷ್ಮಿ ನಿಶ್ಚಿತಾರ್ಥ ಸಮಾರಂಭ ಜರುಗಿದೆ.

    ಈ ವರ್ಷದ ಅಂತ್ಯದಲ್ಲಿ ವರಲಕ್ಷ್ಮಿ ಮದುವೆ ಸಮಾರಂಭ ನಡೆಯಲಿದೆ. ತಮಿಳಿನ ಹಿರಿಯ ನಟ ಶರತ್ ಕುಮಾರ್ ಅವರ ಪುತ್ರಿಯಾಗಿದ್ದು, ತಮಿಳು, ತೆಲುಗು ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.

    ಸದ್ಯ ಧನುಷ್ ನಟನೆಯ ‘ರಾಯನ್’ ಚಿತ್ರದಲ್ಲಿ ವರಲಕ್ಷ್ಮಿ ಬಹುಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಕೂಡ ಭರದಿಂದ ಸಾಗುತ್ತಿದೆ. ಇದನ್ನೂ ಓದಿ:ಕರಿಮಣಿ ಮಾಲೀಕನನ್ನು ಪರಿಚಯಿಸಿದ ದೀಪಿಕಾ ದಾಸ್

    ಸುದೀಪ್ (Sudeep) ಜೊತೆ ‘ಮಾಣಿಕ್ಯ’ ಮಾತ್ರವಲ್ಲ, ರನ್ನ ಸಿನಿಮಾದಲ್ಲೂ ವರಲಕ್ಷ್ಮಿ ಶರತ್‌ಕುಮಾರ್ ಕಾಣಿಸಿಕೊಂಡಿದ್ದಾರೆ. ಇವಿಷ್ಟು ಮಾತ್ರವಲ್ಲದೆ ಕನ್ನಡದ ವಿಸ್ಮಯ, ರಣಂ ಚಿತ್ರದಲ್ಲಿ ನಟಿಸಿದ್ದಾರೆ.