Tag: Madarsa

  • ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ

    ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ

    ಲಕ್ನೋ: ಅಂತಾರಾಷ್ಟ್ರೀಯ ಯೋಗ ದಿನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಉತ್ತರ ಪ್ರದೇಶದ ಮದರಸಾ ಮಂಡಳಿಯೂ ರಾಜ್ಯದಲ್ಲಿ ಅನುದಾನಿತ, ಅನುದಾನ ರಹಿತ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲಾ ಮದರಸಾಗಳಲ್ಲಿ ಕಡ್ಡಾಯವಾಗಿ ಯೋಗ ನಡೆಸಬೇಕು ಆದೇಶ ಪ್ರಕಟಿಸಿತ್ತು.

    ಈ ಆದೇಶವನ್ನು ಸೋಮವಾರ ಹೊರಡಿಸಲಾಗಿತ್ತು. ಆದೇಶದ ಪ್ರಕಾರ, ಮದರಸಾಗಳಲ್ಲಿ ಓದುತ್ತಿರುವ ಮಕ್ಕಳಿಗೆ ಯೋಗದ ಜ್ಞಾನವನ್ನು ನೀಡಲು ಜೂನ್ 21 ರಂದು ರಾಜ್ಯದ ಎಲ್ಲ ಮದರಸಾಗಳಲ್ಲಿ ಯೋಗ ಆಚರಿಸಬೇಕು. ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲು ಅಗತ್ಯವಿರುವ ವ್ಯವಸ್ಥೆಗಳನ್ನು ನೋಡಿ ಸಹಕರಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ತಂದೆಯೊಂದಿಗಿನ ಸಂಬಂಧ ಕಡಿದುಕೊಳ್ಳಲು ಸಿದ್ಧವಾದ ಮಸ್ಕ್ ತೃತೀಯ ಲಿಂಗಿ ಮಗಳು

    Yogi wants madrasas in UP to record August 15 celebrations on camera -  India News

    ಯೋಗ ದಿನವನ್ನು ಗ್ರಾಮ ಪಂಚಾಯತ್‍ಗಳಿಂದ ಹಿಡಿದು ಜಿಲ್ಲಾ ಕೇಂದ್ರಗಳವರೆಗೆ ಎಲ್ಲ ಹಂತಗಳಲ್ಲಿ ಆಚರಿಸಲು ವ್ಯವಸ್ಥೆ ಮಾಡಲು ಯುಪಿ ಸರ್ಕಾರವು ಆಡಳಿತಕ್ಕೆ ಆದೇಶ ನೀಡಿತ್ತು.

    ಪ್ರಾರಂಭವಾಗಿದ್ದು ಹೇಗೆ?
    ಯೋಗದ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ‘ಅಂತರರಾಷ್ಟ್ರೀಯ ಯೋಗ ದಿನ’ವನ್ನು ಆಚರಿಸಲಾಗುತ್ತಿದೆ. ಸೆಪ್ಟೆಂಬರ್ 2014 ರಲ್ಲಿ, ವಿಶ್ವಸಂಸ್ಥೆಯ 69ನೇ ಅಧಿವೇಶನದಲ್ಲಿ ಯೋಗ ದಿನವನ್ನು ಆಚರಿಸುವ ಪ್ರಸ್ತಾಪವನ್ನು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಡಿಸಿದರು. ನಂತರ 2014ರ ಡಿಸೆಂಬರ್ 11 ರಂದು, ಯುಎಸ್‍ಜಿಎ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲು ಘೋಷಿಸಿತು. ಇದನ್ನೂ ಓದಿ: ಅಂತರಾಷ್ಟ್ರೀಯ ಯೋಗ ದಿನ: ನಾಡಿನ ಜನತೆಗೆ ಯೋಗದ ಪ್ರಾಮುಖ್ಯತೆ ಸಾರಿದ ಗಣ್ಯರು 

    ಈ ವರ್ಷದ ಅಂತರಾಷ್ಟ್ರೀಯ ಯೋಗ ದಿನದ ಧ್ಯೇಯವಾಕ್ಯ ‘ಯೋಗ ಫಾರ್ ಹ್ಯುಮಾನಿಟಿ’.

    Live Tv

  • ಮದರಸಾದಲ್ಲಿ ಓದಿದ ಬಳಿಕ ಡಾಕ್ಟರ್, ಇಂಜಿನಿಯರ್ ಆಗಲು ಸಾಧ್ಯವಿಲ್ಲ: ಹಿಮಂತ್ ಬಿಸ್ವಾ ಶರ್ಮಾ

    ಮದರಸಾದಲ್ಲಿ ಓದಿದ ಬಳಿಕ ಡಾಕ್ಟರ್, ಇಂಜಿನಿಯರ್ ಆಗಲು ಸಾಧ್ಯವಿಲ್ಲ: ಹಿಮಂತ್ ಬಿಸ್ವಾ ಶರ್ಮಾ

    ಡಿಸ್ಪುರ್: ಶಾಲೆಗಳು ಆಧುನಿಕ ಶಿಕ್ಷಣವನ್ನು ನೀಡಬೇಕು ಇದರಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಏನು ಬೇಕಾದರೂ ಮಾಡುವ ಆಯ್ಕೆಯನ್ನು ಹೊಂದಿರುತ್ತಾರೆ. ಆದರೆ ಧಾರ್ಮಿಕ ಶಿಕ್ಷಣವನ್ನು ಮನೆಯಲ್ಲಿಯೇ ನೀಡಬಹುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.

    ASSAM MADARASA MADRASA

    ಮಕ್ಕಳಿಗೆ ಮದರಸಾಗಳಲ್ಲಿ ನೀಡುತ್ತಿರುವ ಶಿಕ್ಷಣವನ್ನು ವಿರೋಧಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಕ್ಕಳಿಗೆ ನೀವು ಮದರಸಾದಲ್ಲಿ ಓದಿದ ಬಳಿಕ ಡಾಕ್ಟರ್ ಅಥವಾ ಇಂಜಿನಿಯರ್ ಆಗಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರೆ ಅವರು ಮದರಸಾಗೆ ಹೋಗಲು ಸಿದ್ಧರಿರುವುದಿಲ್ಲ. ಅಂತಹ ಧಾರ್ಮಿಕ ಶಾಲೆಗಳಿಗೆ ಅವರನ್ನು ಸೇರಿಸುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದಿದ್ದಾರೆ.  ಇದನ್ನೂ ಓದಿ: ಜನರಲ್ ಟಿಕೆಟ್‍ಗಾಗಿ ರೈಲು ಪ್ರಯಾಣಿಕರ ನೂಕಾಟ

    ಮದರಸಾ ಎಂಬ ಪದ ಮನಸ್ಸಿನಲ್ಲಿ ಇರುವವರೆಗೂ ಮಕ್ಕಳು ಎಂದಿಗೂ ಡಾಕ್ಟರ್ ಅಥವಾ ಇಂಜಿನಿಯರ್ ಆಗಲು ಸಾಧ್ಯವಿಲ್ಲ. ಮದರಸಾಗಳಲ್ಲಿನ ಶಿಕ್ಷಣ ವ್ಯವಸ್ಥೆಯು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಏನನ್ನಾದರೂ ಮಾಡಲು ಆಯ್ಕೆಗಳಿರುವುದಿಲ್ಲ. ಯಾವುದೇ ಧಾರ್ಮಿಕ ಸಂಸ್ಥೆಗೆ ಪ್ರವೇಶಸುವ ವ್ಯಕ್ತಿ ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ವಯಸ್ಸಿನಲ್ಲಿರಬೇಕು. ಇದನ್ನೂ ಓದಿ:  ಮದುವೆಯಲ್ಲಿ ಕಳ್ಳರ ಕೈಚಳಕ- ಕಣ್ಣಾಮುಚ್ಚಾಲೆ ಆಡುವ ನೆಪದಲ್ಲಿ ಚಿನ್ನಾಭರಣ ಕಳ್ಳತನ

    ಔಪಚಾರಿಕ ಶಿಕ್ಷಣಕ್ಕಿಂತ ಧಾರ್ಮಿಕ ಶಿಕ್ಷಣಕ್ಕೆ ಆದ್ಯತೆ ನೀಡುವ ಮದರಸಾಗಳು ಅಸ್ತಿತ್ವದಲ್ಲಿಲ್ಲ ಎಂದು ನಾನು ಯಾವಾಗಲೂ ಪ್ರತಿಪಾದಿಸುತ್ತೇನೆ. ಪ್ರತಿ ಮಗುವೂ ವಿಜ್ಞಾನ, ಗಣಿತ ಮತ್ತು ಆಧುನಿಕ ಶಿಕ್ಷಣದ ಜ್ಞಾನವನ್ನು ಹೊಂದಿರಬೇಕು ಎಂದು ತಿಳಿಸಿದ್ದಾರೆ.