Tag: Madhu

  • ವಿದ್ಯಾರ್ಥಿನಿ ಅತ್ಯಾಚಾರ ಕೇಸ್ – ಬೆಂಗ್ಳೂರಿನಿಂದ ಬಂತು ಮತ್ತೊಂದು ಎಫ್‍ಎಸ್‍ಎಲ್ ತಂಡ

    ವಿದ್ಯಾರ್ಥಿನಿ ಅತ್ಯಾಚಾರ ಕೇಸ್ – ಬೆಂಗ್ಳೂರಿನಿಂದ ಬಂತು ಮತ್ತೊಂದು ಎಫ್‍ಎಸ್‍ಎಲ್ ತಂಡ

    ರಾಯಚೂರು: ನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

    ಇಂದು ರಾಯಚೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಸಿಐಡಿ ಎಸ್.ಪಿ ಶರಣಪ್ಪ, ಮೃತಳ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕುತ್ತೇವೆ. ಪ್ರಕರಣದ ಬಗ್ಗೆ ಯಾರಿಗಾದರೂ ಮಾಹಿತಿಯಿದ್ದರೆ ತಿಳಿಸಬಹುದು ಅಂತ ಹೇಳಿದ್ದರು. ಇದನ್ನೂ ಓದಿ: ಡೆತ್ ನೋಟ್ ನಂಬಿದ್ದ ಪೊಲೀಸರಿಗೆ ಶಾಕ್: ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್!

    ಈಗ ಬೆಂಗಳೂರಿನಿಂದ ಮತ್ತೊಂದು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‍ಎಸ್‍ಎಲ್) ತಂಡ ಬಂದಿದ್ದು ಘಟನೆ ಬಗ್ಗೆ ಸ್ವತಂತ್ರ ಪರೀಕ್ಷೆ ನಡೆಸಲಾಗುತ್ತದೆ. ಎಲ್ಲಾ ಆಯಾಮಗಳಿಂದಲೂ ಕೂಲಂಕುಶವಾಗಿ ತನಿಖೆ ನಡೆಸುತ್ತೇವೆ. ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎನ್ನುವುದು ತನಿಖೆಯಲ್ಲಿ ತಿಳಿದು ಬರುತ್ತದೆ ಎಂದು ಶರಣಪ್ಪ ಹೇಳಿದ್ದಾರೆ. ಇದನ್ನೂ ಓದಿ: ಮಧು ಪತ್ತಾರ್ ಪ್ರಕರಣ ಸಿಐಡಿಗೆ – ರಾಜ್ಯಾದ್ಯಂತ ಹೋರಾಟಕ್ಕೆ ತೀವ್ರಗೊಂಡ ತನಿಖೆ

    ಮೃತಳ ಶವ ಪತ್ತೆಯಾದ ಸ್ಥಳ ಪರಿಶೀಲನೆ ನಡೆಸಿದ ಶರಣಪ್ಪ ನಮ್ಮ ತಂಡ ರಾಯಚೂರಿನಲ್ಲೇ ಬೀಡು ಬಿಡಲಿದೆ ಅಂತ ಹೇಳಿದ್ದಾರೆ. ಸಿಐಡಿ ಡಿವೈಎಸ್‍ಪಿ ರವಿಶಂಕರ್, ಸಿಪಿಐ ದಿಲೀಪ್ ಕುಮಾರ್ ಸೇರಿದಂತೆ ನಾಲ್ಕು ಜನ ಅಧಿಕಾರಿಗಳ ತಂಡ ಭಾನುವಾರದಿಂದ ನಗರದಲ್ಲಿ ತನಿಖೆ ಆರಂಭಿಸಿದೆ. ಇಂದು ನಗರಕ್ಕೆ ಭೇಟಿ ನೀಡಿರುವ ಸಿಐಡಿ ಶರಣಪ್ಪ ರಾಯಚೂರು ಡಿವೈಎಸ್ಪಿ ಶೀಲವಂತರಿಂದ ಮಾಹಿತಿ ಪಡೆದು ತನಿಖೆ ಮುಂದುವರಿಸಿದ್ದಾರೆ.

  • ಸಾರ್ವಜನಿಕರ ಹೊಡೆತಕ್ಕೆ ಬಲಿಯಾದ ಆದಿವಾಸಿ ಮಧು ಕುಟುಂಬದ ಕಷ್ಟಕ್ಕೆ ಮಿಡಿದ ಸೆಹ್ವಾಗ್

    ಸಾರ್ವಜನಿಕರ ಹೊಡೆತಕ್ಕೆ ಬಲಿಯಾದ ಆದಿವಾಸಿ ಮಧು ಕುಟುಂಬದ ಕಷ್ಟಕ್ಕೆ ಮಿಡಿದ ಸೆಹ್ವಾಗ್

    ನವದೆಹಲಿ: ಕಳೆದ ಕೆಲ ದಿನಗಳ ಹಿಂದೆ ಕಳ್ಳತನ ಆರೋಪದಲ್ಲಿ ಸಾರ್ವಜನಿಕರಿಂದ ಹೊಡೆತ ತಿಂದು ಮೃತಪಟ್ಟ ಕೇರಳ ಆದಿವಾಸಿ ಮಧು ಕುಟುಂಬಕ್ಕೆ ಸೆಹ್ವಾಗ್ ಆರ್ಥಿಕ ಸಹಾಯ ನೀಡಿದ್ದಾರೆ.

    ಸೆಹ್ವಾಗ್ ಫೌಂಡೇಶನ್ ಮೂಲಕ ಈಗಾಗಲೇ ಸಾಕಷ್ಟು ಸಹಾಯ ಕಾರ್ಯಗಳನ್ನು ಮಾಡುತ್ತಿರುವ ಸೆಹ್ವಾಗ್ ಈ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಸದ್ಯ ಸೆಹ್ವಾಗ್, ಮಧು ಅವರ ತಾಯಿಗೆ ಸಹಾಯ ಹಸ್ತ ನೀಡಲು ಮುಂದಾಗಿದ್ದಾರೆ. ಏಪ್ರಿಲ್ 11 ರಂದು ಕೇರಳದ ಅಟ್ಟಾಪಾಡಿಯಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದ ವೇಳೆ ಮೃತ ಮಧು ಅವರ ತಾಯಿಗೆ ಸೆಹ್ವಾಗ್ ಫೌಂಡೇಶನ್ ನಿಂದ 1.50 ಲ್ಷ ರೂ. ಚೆಕ್ ವಿತರಣೆಯಾಗಲಿದೆ ಎಂದು ವರದಿಯಾಗಿದೆ.

    ಸೆಹ್ವಾಗ್ ಚೆಕ್ ನೊಂದಿಗೆ ಮೃತ ಕುಟುಂಬದವರಿಗೆ ಸಂತಾಪ ಪತ್ರವನ್ನು ಬರೆದು ಧೈರ್ಯ ತುಂಬಿದ್ದಾರೆ. ಸದ್ಯ ಸೆಹ್ವಾಗ್ ಅವರ ಈ ಕಾರ್ಯಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತಪಡಿವಾಗುತ್ತಿದೆ.

    ಏನಿದು ಘಟನೆ: ಕೇರಳದ ಅಟ್ಟಪ್ಪಾಡಿಯಲ್ಲಿ ಹಸಿವಿನಿಂದ ಮಧು ಎಂಬ ಆದಿವಾಸಿ ಯುವಕ ಸ್ಥಳೀಯ ಅಂಗಡಿಯಿಂದ ಆಹಾರ ಕಳ್ಳತನ ಮಾಡಿದ್ದ. ಈ ವೇಳೆ ಮಾನಸಿಕ ಸಮಸ್ಯೆ ಎದುರಿಸುತ್ತಿದ್ದ ಆತನನ್ನು ಸ್ಥಳೀಯರು ಕಟ್ಟಿ ಹಾಕಿ ಥಳಿಸಿ ಸೆಲ್ಫಿ ತೆಗೆದುಕೊಂಡಿದ್ದರು. ಬಳಿಕ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗವ ವೇಳೆ ಆತ ಮೃತಪಟ್ಟಿದ್ದ.ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.