Tag: madhukar shetty

  • ಮಧುಕರ್‌ ಶೆಟ್ಟಿ ಹೆಸರು ಇಡಲು ಸರ್ಕಾರದಿಂದ ರೆಡ್‌ ಸಿಗ್ನಲ್‌

    ಮಧುಕರ್‌ ಶೆಟ್ಟಿ ಹೆಸರು ಇಡಲು ಸರ್ಕಾರದಿಂದ ರೆಡ್‌ ಸಿಗ್ನಲ್‌

    ಬೆಂಗಳೂರು: ಹಗದೂರು ವಾರ್ಡ್‌ ವ್ಯಾಪ್ತಿಯಲ್ಲಿ ಬರುವ ವರ್ತೂರು ಕೋಡಿ ವೃತ್ತಕ್ಕೆ ಮಧುಕರ್‌ ಶೆಟ್ಟಿ ಹೆಸರನ್ನು ಇಡಲು ರಾಜ್ಯ ಸರ್ಕಾರ ರೆಡ್‌ ಸಿಗ್ನಲ್‌ ತೋರಿದೆ.

    ಬಿಬಿಎಂಪಿ ಕೌನ್ಸಿಲ್ ಸಭೆ 2020 ಮಾರ್ಚ್ 7 ರಂದು ಮಧುಕರ್‌ ಶೆಟ್ಟಿ ಹೆಸರನ್ನು ಇಡುವಂತೆ ಅಂಗೀಕಾರ ಮಾಡಿತ್ತು. ಈ ನಿರ್ಣಯವನ್ನು ಅಂಗೀಕರಿಸುವಂತೆ ಸೆ.22 ರಂದು ಸರ್ಕಾರಕ್ಕೆ ಬಿಬಿಎಂಪಿ ಆಯುಕ್ತರ ಮೂಲಕ ರವಾನೆ ಮಾಡಿತ್ತು. ಆದರೆ ಈಗ ಈ ಪ್ರಸ್ತಾಪವನ್ನು ಸರ್ಕಾರ ಒಪ್ಪಿಲ್ಲ ಎಂದು ಹೇಳಿ ನಗರಾಭಿವೃದ್ಧಿ ಇಲಾಖೆ ಬಿಬಿಎಂಪಿ ಆಯುಕ್ತರಿಗೆ ಡಿ. 15 ರಂದು ಪತ್ರ ಬರೆದು ತಿಳಿಸಿದೆ.

    ಬೆಂಗಳೂರಿನ ಯಾವುದೋ ವೃತ್ತಕ್ಕೆ ಏನೇನೋ ಹೆಸರುಗಳನ್ನು ಇಡುವಾಗ ನಿಷ್ಠಾವಂತ ಅಧಿಕಾರಿ ಹೆಸರನ್ನು ತಿರಸ್ಕರಿಸಿದ್ದು ಯಾಕೆ ಎಂದು ಪ್ರಶ್ನಿಸಿ ಬಿಬಿಎಂಪಿ ಕಾಂಗ್ರೆಸ್ ಮುಖಂಡ ಶಿವರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಖಾಕಿಯೊಳಗಿನ ಮಿನುಗುತಾರೆ ನೆನಪು ಮಾತ್ರ- ಮಧುಕರ್ ದಕ್ಷತೆ ಹಾದಿಯ ಬಗ್ಗೆ ಓದಿ

    ಮಧುಕರ್‌ ಶೆಟ್ಟಿ ಯಾರು?
    ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಗಣಿ ಸಂಬಂಧಿತ ಸಲ್ಲಿಸಿದ ವರದಿ ನೀಡಿದ್ದ ತಂಡದಲ್ಲಿ ಕೆಲಸ ಮಾಡಿದ್ದ ಮಧುಕರ್‌ ಶೆಟ್ಟಿ ಭ್ರಷ್ಟರನ್ನು ಜೈಲಿಗಟ್ಟಿ ಲೋಕಾಯುಕ್ತಕ್ಕೆ ಖದರ್‌ ತಂದು ಕೊಟ್ಟಿದ್ದರು. ಹೆಚ್1ಎನ್1 ಜ್ವರದಿಂದ ಬಳಲುತ್ತಿದ್ದ ಮಧುಕರ್ ಶೆಟ್ಟಿ 2018ರ ಡಿಸೆಂಬರ್‌ 28 ರಂದು ಚಿಕಿತ್ಸೆ ಫಲಕಾರಿಯಾಗದೇ ಹೈದ್ರಾಬಾದ್‍ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

  • ಕರುನಾಡ ಸಿಂಗಂ ಮಧುಕರ್ ಶೆಟ್ಟಿಗೆ ನುಡಿ ನಮನ

    ಕರುನಾಡ ಸಿಂಗಂ ಮಧುಕರ್ ಶೆಟ್ಟಿಗೆ ನುಡಿ ನಮನ

    ಬೆಂಗಳೂರು: ದಿವಂಗತ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರಿಗೆ ಇಂದು ನಗರದಲ್ಲಿ ನುಡಿ ನಮನ ಸಲ್ಲಿಸಲಾಯಿತು. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಕುಟುಂಬ ಸಮೇತರಾಗಿ ಬಂದು ಪುಷ್ಪ ನಮನ ಸಲ್ಲಿಸಿದರು.

    ನಗರದ ವಿಜಯನಗರ ಬಂಟರ ಸಂಘದ ಆವರಣದಲ್ಲಿ ಡಾ. ಮಧುಕರ್ ಶೆಟ್ಟಿ ನುಡಿ ನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು, ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮಾತನಾಡಿ, ನಿಷ್ಟಾವಂತ, ದಕ್ಷ ಅಧಿಕಾರಿಗೆ ವರ್ಗಾವಣೆ ಶಿಕ್ಷೆ ನೀಡಲಾಯಿತು. ಇದು ಪೊಲೀಸ್ ವ್ಯವಸ್ಥೆಯ ದೌರ್ಭಾಗ್ಯ ಎಂದು ಬೇಸರ ವ್ಯಕ್ತಪಡಿಸಿದರು.

    ಇದೇ ವೇಳೆ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಮಾತನಾಡಿ, ಮಧುಕರ್ ಶೆಟ್ಟಿ ಅವರು ಮಾಡಿದ ಒಳ್ಳೆಯ ಕೆಲಸ ಮುಂದೆಯೂ ಇರುತ್ತದೆ. ನಾನು ಮಾಡಿದ ಆಸ್ತಿ ಹೆಂಡತಿ ಮಕ್ಕಳು ಪಾಲು ಮಾಡುತ್ತಾರೆ. ಆದರೆ ಒಳ್ಳೆಯ ಕೆಲಸ ಮಾಡಿ ಜಗತ್ತು ಬಿಟ್ಟು ಹೋದರೆ, ಅದನ್ನು ಪಾಲು ಮಾಡಲು ಜಗಳ ಇರುವುದಿಲ್ಲ. ಅದನ್ನು ಸಮಾಜ ನಿರಂತರವಾಗಿ ನೆನಪಿಸಿಕೊಂಡು ಹೋಗುತ್ತದೆ. ಸಮಾಜಕ್ಕಾಗಿ ತ್ಯಾಗ ಮಾಡಿದವರನ್ನು ಸದಾ ನೆನಪಿಸುತ್ತದೆ. ಅದಕ್ಕೆ ನಮ್ಮ ಮಧುಕರ್ ಶೆಟ್ಟಿ ನಿದರ್ಶನರಾಗಿದ್ದಾರೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಗ್ನಿಸ್ಪರ್ಶದ ವೇಳೆ ಬಿಕ್ಕಿಬಿಕ್ಕಿ ಅತ್ತ ಮಧುಕರ್ ಪತ್ನಿ- ಅಪ್ಪ ಬೇಕು ಅಂತ ಮಗಳು ಕಣ್ಣೀರು

    ಅಗ್ನಿಸ್ಪರ್ಶದ ವೇಳೆ ಬಿಕ್ಕಿಬಿಕ್ಕಿ ಅತ್ತ ಮಧುಕರ್ ಪತ್ನಿ- ಅಪ್ಪ ಬೇಕು ಅಂತ ಮಗಳು ಕಣ್ಣೀರು

    ಉಡುಪಿ: ಐಪಿಎಸ್ ದಕ್ಷ ಅಧಿಕಾರಿ ಮಧುಕರ್ ಶೆಟ್ಟಿ ಅವರು ಇಂದು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಪತಿಗೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆಯೇ ಪತ್ನಿ ಹಾಗೂ ಮಗಳು ಬಿಕ್ಕಿಬಿಕ್ಕಿ ಅತ್ತಿದ್ದಾರೆ.

    ಪತಿಯ ಚಿತೆಯ ಮುಂದೆ ನಿಂತಿದ್ದ ಪತ್ನಿ ಸ್ವರ್ಣ ದುಃಖಿತರಾದ್ರೆ, ಮಗಳು ಸಮ್ಯಾ ನನಗೆ ಅಪ್ಪ ಬೇಕು ಅಂತ ಕಣ್ಣೀರು ಹಾಕಿರುವುದು ನೆರೆದವರಲ್ಲಿ ಮತ್ತಷ್ಟು ಕಣ್ಣೀರಿಗೆ ಕಾರಣವಾಯಿತು. ಈ ವೇಳೆ ಕುಟುಂಬದವರು ಹಾಗೂ ಸಮಾಧಾನ ಮಾಡಿ ಸಾಂತ್ವಾನ ಹೇಳಿದ್ದಾರೆ.

    ಶೆಟ್ಟಿಯವರಿಗೆ ಒಬ್ಬಳೇ ಹೆಣ್ಣು ಮಗಳಿದ್ದು, ಹೀಗಾಗಿ ಅವರ ಚಿತೆಗೆ ನಾಲ್ವರಿಂದ ಅಗ್ನಿ ಸ್ಪರ್ಶ ಮಾಡಲಾಯಿತು. ಮಗಳು ಸಮ್ಯಾ, ಅಣ್ಣನ ಮಗ ಸಾರಂಗ್, ಸಹೋದರ ಮುರುಳಿಧರ್ ಶೆಟ್ಟಿ, ಸುಧಾಕರ್ ಶೆಟ್ಟಿಯಿಂದ ಬೆಂಕಿ ಕೊಡಲಾಯಿತು. ಈ ಮೂಲಕ ಮಧುಕರ್ ಶೆಟ್ಟಿಯವರು ತಮ್ಮ ಹುಟ್ಟೂರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಯಡಾಡಿಯಲ್ಲಿಯೇ ಪಂಚಭೂತಗಳಲ್ಲಿ ಲೀನರಾದರು.

    ಮಧುಕರ್ ಶೆಟ್ಟಿಯವರ ತೋಟದಲ್ಲಿ ಧಾರ್ಮಿಕ ವಿಧಿವಿಧಾನ ಮೂಲಕ ಬಂಟ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಯಿತು. ತಂದೆ-ತಾಯಿಯ ಸಮಾಧಿ ಬಳಿಯೇ ಇವರ ಅಂತ್ಯಕ್ರಿಯೆ ನಡೆದಿದೆ. ಈ ವೇಳೆ ಕುಟುಂಬಸ್ಥರು, ಹಿರಿಯ ಪೊಲಿಸ್ ಅಧಿಕಾರಿಗಳು, ಸಾರ್ವಜನಿಕರು, ಅಭಿಮಾನಿಗಳು ಸೇರಿದಂತೆ ಗಣ್ಯಾತೀಗಣ್ಯರು ಭಾಗಿಯಾಗಿದ್ದರು.

    ಎಚ್ 1 ಎನ್ 1 ಜ್ವರ ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಐಪಿಎಸ್ ಖಡಕ್ ಅಧಿಕಾರಿ ಮಧುಕರ್ ಶೆಟ್ಟಿ(47)ಯವರು ಶುಕ್ರವಾರ ರಾತ್ರಿ ಹೈದರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ಅಂದು ಮನೆಯಲ್ಲಿಯೇ ಅವರ ಮೃತದೇಹವನ್ನು ಅಂತಿಮ ದರ್ಶನಕ್ಕೆ ಇಡಲಾಯಿತು. ಸಹೋದ್ಯೋಗಿಗಳು ಹಾಗೂ ಇತರ ಗಣ್ಯರು ಅಂತಿಮ ದರ್ಶನ ಪಡೆದಿದ್ದರು. ವಿಶೇಷವೆಂದರೆ ಸಹೋದ್ಯೋಗಿಯೊಬ್ಬರು ಮಧುಕರ್ ಅವರ ಇಷ್ಟದ ಹಾಡನ್ನು ಹಾಡಿ ಕಣ್ಣೀರ ವಿದಾಯ ಹೇಳಿದ್ದರು. ಈ ವೇಳೆ ನೆರೆದಿದ್ದ ಮಂದಿ ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಬಳಿಕ ಅಲ್ಲಿಂದ ಶನಿವಾರ ಮೃತದೇಹವನ್ನು ಬೆಂಗಳೂರಿಗೆ ರವಾನೆ ಮಾಡಲಾಯಿತು. ಯಲಹಂಕದಲ್ಲಿರುವ ಪೊಲೀಸ್ ತರಬೇತಿ ಕೇಂದ್ರದಲ್ಲಿಯೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಲಿಸಲಾಗಿದ್ದು ರಾಜಕಾರಣಿಗಳು, ಗಣ್ಯರು ಸೇರಿದಂತೆ ಸಾವಿರಾರು ಮಂದಿ ಕರುನಾಡ ಸಿಂಗಂಗೆ ಅಂತಿಮ ವಿದಾಯ ತಿಳಿಸಿದ್ರು. ಅಲ್ಲಿಂದ ನೇರವಾಗಿ ಮಧುಕರ್ ಹುಟ್ಟೂರು ಕುಂದಾಪುರದ ಯಡಾಡಿಗೆ ಮೃತದೇಹವನ್ನು ಸಾಗಿಸಲಾಗಿದ್ದು, ಇಂದು ಅವರು ಪಂಚಭೂತಗಳಲ್ಲಿ ಲೀನವಾದ್ರು.

    https://www.youtube.com/watch?v=umjUL4BMlBc

    https://www.youtube.com/watch?v=_uRFFyi3Qic

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 2018ರಲ್ಲಿ ನಮ್ಮನ್ನ ಅಗಲಿದ ಗಣ್ಯರು

    2018ರಲ್ಲಿ ನಮ್ಮನ್ನ ಅಗಲಿದ ಗಣ್ಯರು

    ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ, ತಮಿಳುನಾಡಿನ ಡಿಎಂಕೆ ನಾಯಕ ಕರುಣಾನಿಧಿ, ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ, ಸಚಿವ ಅನಂತ್ ಕುಮಾರ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಈ ವರ್ಷ ವಿಧವಶರಾಗಿದ್ದಾರೆ. ಅಷ್ಟೇ ಅಲ್ಲದೆ ವರ್ಷ ಆರಂಭವಾದ ಕೆಲ ದಿನಗಳಲ್ಲಿಯೇ ಕಾಶಿನಾಥ್ ಅವರನ್ನು ಕಳೆದುಕೊಂಡಿದ್ದ ಸ್ಯಾಂಡ್‍ವುಲ್ ವರ್ಷಾಂತ್ಯದಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಅವರನ್ನು ಕಳೆದುಕೊಂಡಿತು.

    ರಾಧಾ ವಿಶ್ವನಾಥ್:
    ಎಂ.ಎಸ್. ಸುಬ್ಬಲಕ್ಷ್ಮಿ ಅವರ ಪುತ್ರಿ ಹಾಗೂ ಖ್ಯಾತ ಗಾಯಕಿಯಾಗಿದ್ದ ರಾಧಾ ವಿಶ್ವನಾಥ್ ಅವರು ಜನವರಿ 2ರಂದು ನಿಧನರಾದರು.

    ಕಾಶಿನಾಥ್:
    ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ, ಸಂಭಾಷಣೆಕಾರ ಕಾಶಿನಾಥ್(67) ಅವರು ಜನವರಿ 18ರಂದು ನಿಧನರಾದರು. ಅಂದು ಚಾಮರಾಜಪೇಟೆಯ ಟಿಆರ್ ಮಿಲ್‍ನ ರುದ್ರಭೂಮಿಯಲ್ಲಿ ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.

    ಶ್ರೀದೇವಿ:
    ಬಾಲಿವುಡ್‍ನ ಹಿರಿಯ ನಟಿ ಶ್ರೀದೇವಿ (54) ಹೃದಯಾಘಾತದಿಂದ ದುಬೈಯಲ್ಲಿ ಫೆಬ್ರವರಿ 24ರಂದು ರಾತ್ರಿ ಮೃತಪಟ್ಟಿದ್ದರು. ನಟಿ ಶ್ರೀದೇವಿ ಸಾವು ಭಾರೀ ಚರ್ಚೆಗೆ ಕಾರಣವಾಗಿತ್ತು. ದುಬೈನಿಂದ ಮೃತದೇಹವನ್ನು ಮುಂಬೈಗೆ ತಂದು ಫೆಬ್ರವರಿ 27ರಂದು ವಿಲೆ ಪಾರ್ಲೆ ಸೇವಾ ಸಮಾಜದ ಶವಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು. ತಮಿಳುನಾಡಿನ ಶಿವಕಾಶಿಯಲ್ಲಿ 1963ರ ಆಗಸ್ಟ್ 13ರಂದು ಜನಿಸಿದ್ದ ಶ್ರೀದೇವಿ 4ನೇ ವಯಸ್ಸಿನಲ್ಲಿಯೇ ತಮಿಳಿನ `ತುನೈವಾನ್’ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ್ದರು.

    ಕರುಣಾನಿಧಿ:
    ತಮಿಳುನಾಡಿನ ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕಲೈನರ್ ಕರುಣಾನಿಧಿ(94) ಆಗಸ್ಟ್ 7ರಂದು ವಿಧಿವಶರಾದರು. ಮರಿನಾ ಬೀಚ್‍ನಲ್ಲಿ ಅಂತ್ಯಸಂಸ್ಕಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ ಜಾಗದ ಸಮಸ್ಯೆಯನ್ನು ಆಲಿಸಿದ ಕೋರ್ಟ್ ಆಗಸ್ಟ್ 8ರಂದು ರಾತ್ರಿಯೇ ವಿಚಾರಣೆ ನಡೆಸಿ, ಮರಿನಾ ಬೀಚ್‍ನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ಕಲ್ಪಿಸಿತು. ಇದರಿಂದಾಗಿ ಎಐಎಡಿಎಂಕೆ ಸಂಸ್ಥಾಪಕ ಎಂ.ಜಿ.ರಾಮಚಂದ್ರನ್, ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಮತ್ತು ಡಿಎಂಕೆ ಸ್ಥಾಪಕ ಅಣ್ಣಾದೊರೈ ಅವರ ಅಂತ್ಯಸಂಸ್ಕಾರ ನೆರವೇರಿದ ಮರಿನಾ ಬೀಚ್‍ನಲ್ಲಿಯೇ ಕರುಣಾನಿಧಿ ಅವರಿಗೂ ಜಾಗ ಸಿಕ್ಕಂತಾಯಿತು.

    ಸೋಮನಾಥ ಚಟರ್ಜಿ:
    ಮಾಜಿ ಲೋಕಸಭಾ ಸ್ಪೀಕರ್ ಸೋಮನಾಥ್ ಚಟರ್ಜಿ(89) ಆಗಸ್ಟ್ 13ರಂದು ಕೋಲ್ಕತಾದ ಆಸ್ಪತ್ರೆಯಲ್ಲಿ ನಿಧನರಾದರು. ಚಟರ್ಜಿ ಅವರು 10 ಬಾರಿ ಲೋಕಸಭಾ ಸದಸ್ಯರಾಗಿದ್ದರು ಮತ್ತು ಸಿಪಿಐ(ಎಂ) ನ ಕೇಂದ್ರ ಸಮಿತಿ ಸದಸ್ಯರಾಗಿದ್ದರು. 2004 ರಿಂದ 2009ರವರೆಗೆ ಲೋಕಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.

    ಅಟಲ್ ಬಿಹಾರಿ ವಾಜಪೇಯಿ:
    ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ(93) ಅವರು ಆಗಸ್ಟ್ 16ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾದರು. ಅನೇಕ ರಾಜಕೀಯ ನಾಯಕರು ಪಕ್ಷಭೇದ ಮರೆತು ದೇಶದ ಮೂಲೆ ಮೂಲೆಯಿಂದ ಬಂದು ಅಟಲ್ ಜೀ ಅವರ ಅಂತಿಮ ದರ್ಶನ ಪಡೆದರು. ಬ್ರಾಹ್ಮಣ ಸಂಪ್ರದಾಯದಂತೆ ವಾಜಪೇಯಿ ಅವರ ಅಂತ್ಯಸಂಸ್ಕಾರವು ಆಗಸ್ಟ್ 17ರಂದು ದೆಹಲಿಯ ಸ್ಮೃತಿ ಸ್ಥಳದಲ್ಲಿ ನೆರವೇರಿತು.

    ಅನಂತ್ ಕುಮಾರ್:
    ದೆಹಲಿಯ ಕನ್ನಡ ಧ್ವನಿ ಎಂದೇ ಗುರುತಿಸಿಕೊಂಡಿದ್ದ ರಾಸಾಯನಿಕ ಮತ್ತು ರಸಗೊಬ್ಬರ, ಸಂಸದೀಯ ಸಚಿವ ಅನಂತ್ ಕುಮಾರ್ (59) ಅವರು ನವೆಂಬರ್ 12ರಂದು ನಿಧನರಾದರು. ಬೆಂಗಳೂರಿನ ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ಅನಂತ್ ಕುಮಾರ್ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.

    ರೆಬಲ್ ಸ್ಟಾರ್ ಅಂಬರೀಶ್:
    ಮಾಜಿ ಸಚಿವ, ಸ್ಯಾಂಡಲ್‍ವುಡ್ ಟ್ರಬಲ್ ಶೂಟರ್, ರೆಬೆಲ್ ಸ್ಟಾರ್ ಅಂಬರೀಶ್ ಅವರು ನವೆಂಬರ್ 24ರಂದು ರಾತ್ರಿ ವಿಧಿವಶರಾದರು. ಕಂಠೀರವ ಸ್ಟೇಡಿಯಂನಲ್ಲಿ ಅಂಬರೀಶ್ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಬಳಿಕ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ಹೆಲಿಕಾಪ್ಟರ್ ಮೂಲಕ ಸಾಗಿಸಿ ಅಲ್ಲಿನ ಜನತೆಗೆ ದರ್ಶನ ಕಲ್ಪಿಸುವ ಕೆಲಸವನ್ನು ಸರ್ಕಾರ ಮಾಡಿತು. ಅಂಬರೀಶ್ ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಪುತ್ರ ಅಭಿಷೇಕ್ ಅಗ್ನಿ ಸ್ಪರ್ಶ ನೆರವೇರಿಸಿದರು.

    ಜಾಫರ್ ಶರೀಫ್:
    ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಜಾಫರ್ ಷರೀಫ್(85) ಅವರು ನವೆಂಬರ್ 25ರಂದು ನಿಧನರಾದರು. ನವೆಂಬರ್ 3, 1933 ರಂದು ಜನಿಸಿದ್ದ ಷರೀಫ್ 1991-95ರ ಅವಧಿಯಲ್ಲಿ ಕೇಂದ್ರ ರೈಲ್ವೇ ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಆಪ್ತರಾಗಿದ್ದ ಜಾಫರ್ ಪಿ.ವಿ.ನರಸಿಂಹರಾವ್ ಸರ್ಕಾರದಲ್ಲಿ ರೈಲ್ವೇ ಸಚಿವರಾಗಿದ್ದರು. ಬೆಂಗಳೂರಿನ ಖಬರಸ್ತಾನ ಸ್ಮಶಾನದಲ್ಲಿ ನವೆಂಬರ್ 26ರಂದು ಅಂತ್ಯಕ್ರಿಯೆ ನೆರವೇರಿಸಲಾಯಿತು.

    ಮಧುಕರ್ ಶೆಟ್ಟಿ:
    ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ(47) ಅವರು ಹೈದ್ರಬಾದ್‍ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಡಿಸೆಂಬರ್ 28ರಂದು ವಿಧಿವಶರಾದರು. ಉಡುಪಿ ಮೂಲದ ಮಧುಕರ್ ಶೆಟ್ಟಿ ಅವರು, ಖ್ಯಾತ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿಯವರ ಪುತ್ರ. 1999ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ ಮಧುಕರ್ ಶೆಟ್ಟಿ, ರಾಮನಗರ ಚನ್ನಪಟ್ಟಣದಿಂದ ವೃತ್ತಿ ಜೀವನ ಆರಂಭಿಸಿದ್ದರು. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಯಡಾಡಿಯ ಮನೆಯ ಅಡಿಕೆ ತೋಟದಲ್ಲಿ ಡಿಸೆಂಬರ್ 30ರಂದು ಅಂತ್ಯಕ್ರಿಯೆ ನೆರವೇರಿತು.

    ಸೂಲಗಿತ್ತಿ ನರಸಮ್ಮ:
    ದೇಶದ ಉನ್ನತ ನಾಗರಿಕ ಪದ್ಮ ಪ್ರಶಸ್ತಿ ಪುರಸ್ಕೃತ ಕನ್ನಡತಿ ಸೂಲಗಿತ್ತಿ(98) ನರಸಮ್ಮ ಅವರು ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಡಿಸೆಂಬರ್ 25ರಂದು ನಿಧನರಾದರು. ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಕೃಷ್ಣಾಪುರದ ಮೂಲದವರಾದ ಸೂಲಗಿತ್ತಿ ನರಸಮ್ಮ ಆಸ್ಪತ್ರೆ, ವೈದ್ಯರಿಲ್ಲದ ಕಾಲದಲ್ಲಿ ಆಧುನಿಕ ಕಾಲದ ಹೆರಿಗೆ ತಜ್ಞೆಯಂತೆ 15 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ್ದರು. ಸೂಲಗಿತ್ತಿ ನರಸಮ್ಮ ಅವರ ಅಂತ್ಯ ಸಂಸ್ಕಾರ ಡಿಸೆಂಬರ್ 26ರಂದು ನಗರದ ಗಂಗಸಂದ್ರ ಸರ್ಕಾರಿ ಜಮೀನಿನಲ್ಲಿ ನೆರವೇರಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಂಚಭೂತಗಳಲ್ಲಿ ಕರುನಾಡ ಸಿಂಗಂ ಮಧುಕರ್ ಶೆಟ್ಟಿ ಲೀನ

    ಪಂಚಭೂತಗಳಲ್ಲಿ ಕರುನಾಡ ಸಿಂಗಂ ಮಧುಕರ್ ಶೆಟ್ಟಿ ಲೀನ

    ಉಡುಪಿ: ಅನಾರೋಗ್ಯದಿಂದ ನಿಧನರಾದ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಇಂದು ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

    ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಯಡಾಡಿಯ ಮನೆಯ ಅಡಿಕೆ ತೋಟದಲ್ಲೇ ಮಧುಕರ್ ಅಂತ್ಯಕ್ರಿಯೆಗೆ ನಡೆದಿದ್ದು, ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಚಿತೆ ಸಿದ್ಧಪಡಿಸಲಾಗಿತ್ತು. ತುಳುನಾಡಿನ ಬಂಟ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆದಿದೆ. ಇದನ್ನೂ ಓದಿ: ಬೊಂಬೆನಾಡಿನಿಂದ ವೃತ್ತಿ ಆರಂಭಿಸಿದ್ದರು ಮಧುಕರ್ ಶೆಟ್ಟಿ

    ಮೃತ ಮಧುಕರ್ ಶೆಟ್ಟಿಗೆ ಗಂಡು ಮಕ್ಕಳಿಲ್ಲ. ಹೀಗಾಗಿ ಮಗಳು, ಅಣ್ಣನ ಮಗ ಸಾರಂಗ್, ಸಹೋದರ ಮುರುಳಿಧರ್ ಶೆಟ್ಟಿ ಮತ್ತು ಸುಧಾಕರ್ ಶೆಟ್ಟಿಯಿಂದ ನಾಲ್ವರಿಂದ ಮಧುಕರ ಶೆಟ್ಟಿಗೆ ಮಧ್ಯಾಹ್ನ 12.15ಕ್ಕೆ ಅಗ್ನಿಸ್ಪರ್ಶ ಮಾಡಲಾಯಿತು. ಅದಕ್ಕೂ ಮುನ್ನ ಮರದ ಹಲಗೆ ಮೇಲೆ ಮಧುಕರ್ ಮೃತ ದೇಹವನ್ನು ಇಟ್ಟು, ಅರಶಿಣ ಹಚ್ಚಿ ಸಾಂಪ್ರದಾಯಿಕವಾಗಿ ಬಿಸಿನೀರಿನಲ್ಲಿ ಸ್ನಾನ ಮಾಡಿಸಿ ಹೊಸ ಉಡುಗೆಯನ್ನು ಕುಟುಂಬಸ್ಥರು ತೊಡಿಸಿದ್ದರು. ಇದನ್ನೂ ಓದಿ: ಖಾಕಿಯೊಳಗಿನ ಮಿನುಗುತಾರೆ ನೆನಪು ಮಾತ್ರ- ಮಧುಕರ್ ದಕ್ಷತೆ ಹಾದಿಯ ಬಗ್ಗೆ ಓದಿ

    ದಕ್ಷ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿಯವರ ಅಂತ್ಯಕ್ರಿಯೆಗೂ ಮುನ್ನ ಅಂತಿಮ ದರ್ಶನಕ್ಕಾಗಿ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದರು. ಅಮ್ಮನ ಮನೆಯಂಗಳದಲ್ಲಿ ಈ ಪ್ರಕ್ರಿಯೆ ನಡೆದಿದ್ದು, ಭಾರೀ ಜನಸ್ತೋಮ ಸೇರುವ ಉದ್ದೇಶದಿಂದ ಮುಂಜಾಗೃತ ಕ್ರಮವಾಗಿ ಬ್ಯಾರಿ ಗೇಟ್, ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಅಂತ್ಯಕ್ರಿಯೆಯಲ್ಲಿ ಡಿಜಿಪಿ ನೀಲಮಣಿ ರಾಜು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗಿಯಾಗಿದ್ದರು.

    https://www.youtube.com/watch?v=SE3lzMfihqA

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಧುಕರ್ ಅಂತ್ಯಕ್ರಿಯೆಗೆ ಸಿದ್ಧತೆ- ಪಾರ್ಥಿವ ಶರೀರ ದರ್ಶನ ಪಡೆಯದ ಬಿಜೆಪಿಗರು..!

    ಮಧುಕರ್ ಅಂತ್ಯಕ್ರಿಯೆಗೆ ಸಿದ್ಧತೆ- ಪಾರ್ಥಿವ ಶರೀರ ದರ್ಶನ ಪಡೆಯದ ಬಿಜೆಪಿಗರು..!

    ಮಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಯಲಹಂಕ ಟ್ರೈನಿಂಗ್ ಸೆಂಟರ್‍ಗೆ ಮಧುಕರ್ ಶೆಟ್ಟಿ ಹೆಸರು ಇಡಬೇಕು ಅಂತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆದ್ರೆ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ 13 ಶಾಸಕರು ಮತ್ತು ಇಬ್ಬರು ಸಂಸದರಿದ್ರೂ ಮಧುಕರ್ ಶೆಟ್ಟಿ ಪಾರ್ಥಿವ ಶರೀರ ನೋಡಲು ಯಾರೂ ಹೋಗಿಲ್ಲ.

    ಶನಿವಾರ ರಾತ್ರಿ ಮಂಗಳೂರಿಗೆ ಪಾರ್ಥಿವ ಶರೀರ ತಲುಪುತ್ತಿದ್ದಂತೆಯೇ 1 ಗಂಟೆ ಕಾಲ ಸಾರ್ವಜನಿಕ ದರ್ಶನಕ್ಕೆ ಇಡಲಾಯ್ತು. ಈ ವೇಳೆ ಸಚಿವ ಯು.ಟಿ.ಖಾದರ್, ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕರಾದ ಜೆ.ಆರ್ ಲೋಬೊ, ಅಭಯಚಂದ್ರ ಜೈನ್ ಮತ್ತಿತರ ಕಾಂಗ್ರೆಸ್ ನಾಯಕರು ಆಗಮಿಸಿ ಅಂತಿಮ ದರ್ಶನ ಪಡೆದ್ರು. ಆದ್ರೆ ಬಿಜೆಪಿಯವ್ರು ಮಾತ್ರ ಒಬ್ಬರೂ ಅತ್ತ ಸುಳಿಯಲೇ ಇಲ್ಲ. ಇದನ್ನೂ ಓದಿ:  ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಂತ್ಯಕ್ರಿಯೆಗೆ ಕುಂದಾಪುರದಲ್ಲಿ ಸಿದ್ಧತೆ

    ಅನಾರೋಗ್ಯದಿಂದ ನಿಧನರಾದ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಪಾರ್ಥಿವ ಶರೀರ ರಾತ್ರಿ ಮಂಗಳೂರಿನಿಂದ ಉಡುಪಿಗೆ ಶಿಫ್ಟ್ ಆಗಿದೆ. ಇಂದು ಬೆಳಗ್ಗೆಯಿಂದಲೇ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, 10 ಗಂಟೆಗೆ ಯಡಾಡಿ ಮನೆಯ ಅಡಿಕೆ ತೋಟದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ ನಡೆಯಲಿದೆ. ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಚಿತೆ ಸಿದ್ಧಪಡಿಸಲಾಗುತ್ತಿದ್ದು, ಅಂತ್ಯಕ್ರಿಯೆಯಲ್ಲಿ ಡಿಜಿಪಿ ನೀಲಮಣಿ ರಾಜು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

    https://www.youtube.com/watch?v=umjUL4BMlBc

    https://www.youtube.com/watch?v=N0HUyHwmEMk

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಂತ್ಯಕ್ರಿಯೆಗೆ ಕುಂದಾಪುರದಲ್ಲಿ ಸಿದ್ಧತೆ

    ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಂತ್ಯಕ್ರಿಯೆಗೆ ಕುಂದಾಪುರದಲ್ಲಿ ಸಿದ್ಧತೆ

    ಉಡುಪಿ: ಖಡಕ್ ಐಪಿಎಸ್ ಅಧಿಕಾರಿ- ಕರ್ನಾಟಕದ ಸಿಂಗಂ ಖ್ಯಾತಿಯ ಮಧುಕರ್ ಶೆಟ್ಟಿ ಶುಕ್ರವಾರದಂದು ಇಹಲೋಕ ತ್ಯಜಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಕರ್ನಾಟಕದ ಜನರ ಹೃದಯ ಗೆದ್ದ ದಕ್ಷ ಪೊಲೀಸ್ ಅಧಿಕಾರಿಯ ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಕಣ್ಣೀರಿಡುತ್ತಾ ಸಿದ್ಧತೆ ಮಾಡುತ್ತಿದ್ದಾರೆ.

    ಅಧಿಕಾರದಲ್ಲಿದ್ದುಕೊಂಡು ಉನ್ನತ ಸ್ಥಾನದಲ್ಲಿದ್ದು ಜನ ಮೆಚ್ಚುವ ಕೆಲಸ ಮಾಡೋದು ಕಷ್ಟ. ಆದ್ರೆ ರಿಯಲ್ ಹೀರೋ ಕರ್ನಾಟಕ ಸಿಂಗಂ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ತನ್ನ ಪೊಲೀಸ್ ಸೇವೆಯಲ್ಲಿ ನಿಷ್ಟುರ ಮತ್ತು ಅಷ್ಟೇ ಜನಪರ. ಮುಖ್ಯಮಂತ್ರಿಯಿಂದ ಹಿಡಿದು ಸಾಮಾನ್ಯ ಭ್ರಷ್ಟ ವ್ಯಕ್ತಿಗೂ ಕನಸಲ್ಲೂ ಕಾಡಿದ ಮಧುಕರ್ ಶೆಟ್ಟಿ ಅವರು ಎಚ್ 1 ಎನ್ 1ಗೆ ಬಲಿಯಾಗಿದ್ದಾರೆ. ಭಾನುವಾರದಂದು ಹಿರಿಯ ಪೊಲೀಸ್ ಅಧಿಕಾರಿಯ ಅಂತ್ಯ ಸಂಸ್ಕಾರ ಉಡುಪಿ ಜಿಲ್ಲೆಯ ಕುಂದಾಪುರದ ಯಡಾಡಿಯಲ್ಲಿ ನಡೆಯಲಿದೆ.

    ಮಧುಕರ್ ಶೆಟ್ಟಿ ಅವರು ಹಿರಿಯ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ ಶೆಟ್ಟಿಯವರ ಸುಪುತ್ರ. ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿದ್ದ ಶೆಟ್ಟಿ ಕೆಲಸದ ವಿಚಾರಕ್ಕೆ ಬಂದ್ರೆ ತಂದೆಯಷ್ಟೆ ನಿಷ್ಟುರವಾದಿ. ಮಧುಕರ್ ಶೆಟ್ಟಿ ಅವರು 1999ರ ಬ್ಯಾಚ್‍ನ ಐಪಿಎಸ್ ಅಧಿಕಾರಿ. ಹುಟ್ಟಿದ್ದು ಬೆಂಗಳೂರು, ಬೆಳೆದದ್ದು ಮಂಗಳೂರು, ಪಿಜಿ(ಸ್ನಾತಕೋತ್ತರ ಪದವಿ) ಮಾಡಿದ್ದು ದೆಹಲಿಯಲ್ಲಿ. ಆದ್ರೆ ಹುಟ್ಟೂರಿನ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದ ಯಡಾಡಿಯ ರೈ ಫಾರ್ಮ್‍ನಲ್ಲಿ ಈಗ ನೀರವ ಮೌನ ಬಿಟ್ಟು ಮತ್ತೆ ಕೇಳಿಸಿದ್ದು ಜೆಸಿಬಿಯ ಘರ್ಜನೆ ಮಾತ್ರ. ಮಧುಕರ್ ಶೆಟ್ಟಿಯವರ ಅಂತ್ಯಸಂಸ್ಕಾರಕ್ಕೆ ಮನೆಯ ಅಡಿಕೆ ತೋಟದಲ್ಲಿ ಸಿದ್ಧತೆ ನಡೆಯುತ್ತಿದೆ. ತಂದೆ-ತಾಯಿಗಳ ಸಮಾಧಿ ಪಕ್ಕದಲ್ಲೇ ಮಧುಕರ್ ಶೆಟ್ಟಿಯವರ ಚಿತೆಯನ್ನು ಸಿದ್ಧ ಮಾಡಲಾಗುತ್ತದೆ. ಕುಟುಂಬಸ್ಥರು- ವಡ್ಡರ್ಸೆ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಸದ್ಯ ಈ ಎಲ್ಲಾ ವಿಧಿವಿಧಾನದಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಖಾಕಿಯೊಳಗಿನ ಮಿನುಗುತಾರೆ ನೆನಪು ಮಾತ್ರ- ಮಧುಕರ್ ದಕ್ಷತೆ ಹಾದಿಯ ಬಗ್ಗೆ ಓದಿ

    ಕುಟುಂಬಸ್ಥರಾದ ಸಂದೇಶ್ ಮತ್ತು ಮೋಹನದಾಸ್ ಮಾತನಾಡಿ, ವಡ್ಡರ್ಸೆ ಕುಟುಂಬದ ಕುಡಿಯನ್ನು ಕಳೆದುಕೊಂಡ ದುಃಖದಲ್ಲಿದ್ದೇವೆ. ಕಳೆದ ನವರಾತ್ರಿಗೆ ಬಂದಿದ್ದ ಶೆಟ್ಟರನ್ನು ಕಳೆದುಕೊಂಡಿದ್ದೇವೆ ಎಂದರೆ ನಂಬಲಾಗುತ್ತಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.

    ಸಮಾಜದಲ್ಲಿ ನೊಂದವರು, ದಲಿತರ ಬಗ್ಗೆ ಅತೀವ ಕಾಳಜಿಯಿದ್ದ ಮಧುಕರ್ ಶೆಟ್ಟಿಯವರ ಪಾರ್ಥಿವ ಶರೀರ ಮಂಗಳೂರು ಮೂಲಕ ರಾತ್ರಿ 12 ಗಂಟೆ ಸುಮಾರಿಗೆ ಹುಟ್ಟೂರು ತಲುಪುತ್ತದೆ. ಬೆಳಗ್ಗೆ 7 ಗಂಟೆಯಿಂದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ದಕ್ಷ ಅಧಿಕಾರಿಗೆ ಅಂತಿಮ ನಮನ ಸಲ್ಲಿಸಲು ಡಿಜಿಪಿ ನೀಲಮಣಿ ರಾಜು, ಹಿರಿಯ ಪೊಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ಬಳಿಕ ಭಾನುವಾರ ಬೆಳಗ್ಗೆ 10 ಗಂಟೆಗೆ ಮಧುಕರ ಶೆಟ್ಟಿ ಅವರ ಮೃತದೇಹ ಪಂಚಭೂತಗಳಲ್ಲಿ ಲೀನವಾಗಿ ಅವರ ನೆನಪು ಅಜರಾಮರವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿಂಗಂ ಸಾವಿನ ಬಗ್ಗೆ ಅನುಮಾನಕ್ಕೆ ಕಾರಣಗಳು ಇಲ್ಲಿವೆ

    ಸಿಂಗಂ ಸಾವಿನ ಬಗ್ಗೆ ಅನುಮಾನಕ್ಕೆ ಕಾರಣಗಳು ಇಲ್ಲಿವೆ

    ಬೆಂಗಳೂರು: ಕರ್ನಾಟಕದ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಸಾವಿನ ಬಗ್ಗೆ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತನಿಖೆ ನಡೆಸಬೇಕೆಂದು ರಾಜ್ಯ ಸರ್ಕಾರದಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ. ಹೆಚ್1 ಎನ್1 ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿದ್ದ ಮಧುಕರ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ ಎಂದು ಹೇಳಲಾಗಿದೆ.

    ಸಿಂಗಂ ಸಾವಿನ ಬಗ್ಗೆ ಅನುಮಾನವ್ಯಾಕೆ?
    ಪ್ರಮುಖ ಪ್ರಕರಣಗಳಲ್ಲಿ ಮಧುಕರ್ ಶೆಟ್ಟಿ ಸಾಕ್ಷ್ಯವಾಗಿದ್ದರು. ಖಡಕ್ ಅಧಿಕಾರಿಯಾಗಿದ್ದರಿಂದ ಹಲವು ರಾಜಕಾರಣಿಗಳ ವಿರೋಧವನ್ನು ಕಟ್ಟಿಕೊಂಡಿದ್ದರು. ಸರ್ಕಾರದ ವರ್ತನೆಯಿಂದ ಸಾಕಷ್ಟು ಬೇಸರಗೊಂಡಿದ್ದರು ಎಂಬ ಮಾಹಿತಿಗಳು ಸದ್ಯಕ್ಕೆ ಲಭ್ಯವಾಗಿವೆ. ದಕ್ಷ ಹಾಗು ಪ್ರಾಮಾಣಿಕ ಅಧಿಕಾರಿಯಾಗಿದ್ದರಿಂದ ರಾಜಕೀಯೇತರ ವಿರೋಧಿಗಳಿದ್ದರು ಎಂಬ ಮಾತುಗಳು ಕೇಳಿ ಬರುತ್ತಿವೆ.

     

    ಡಿಕೆಶಿ ಹೇಳಿದ್ದೇನು..?
    ಮಧುಕರ್ ಶೆಟ್ಟಿ ನನಗೆ ಹತ್ತಿರದಿಂದ ಪರಿಚಯ. ನಮ್ಮಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಅವರ ನಿಧನ ಸುದ್ದಿ ಕೇಳಿ ಆಶ್ಚರ್ಯವಾಯ್ತು. ಅವರ ನಿಧನ ಸ್ವಾಭಾವಿಕವಾನಾ ಅಂತ ತನಿಖೆ ಮಾಡಬೇಕಾಗಿದೆ. ಪೊಲೀಸ್ ಇಲಾಖೆಗೆ ಅವರೊಂದು ದೊಡ್ಡ ಆಸ್ತಿ ಆಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ರಾಜ್ಯದ ಒಬ್ಬ ಅಧಿಕಾರಿ ಹೊರ ರಾಜ್ಯದಲ್ಲಿ ನಿಧನ ಹೊಂದಿದ್ರೆ ಆ ಬಗ್ಗೆ ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಮಧುಕರ್ ಶೆಟ್ಟಿಯವರ ಪಾರ್ಥಿವ ಶರೀರ ಬೆಂಗಳೂರಿನ ಯಲಹಂಕ ಪೊಲೀಸ್ ತರಬೇತಿ ಕೇಂದ್ರದಲ್ಲಿ ಇರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೊಂಬೆನಾಡಿನಿಂದ ವೃತ್ತಿ ಆರಂಭಿಸಿದ್ದರು ಮಧುಕರ್ ಶೆಟ್ಟಿ

    ಬೊಂಬೆನಾಡಿನಿಂದ ವೃತ್ತಿ ಆರಂಭಿಸಿದ್ದರು ಮಧುಕರ್ ಶೆಟ್ಟಿ

    – ಪರೋಪಕಾರಿ, ಜನಸ್ನೇಹಿಯಾಗಿದ್ದ ಅಧಿಕಾರಿ ಅಗಲಿಕೆಗೆ ಕಣ್ಣೀರಿಟ್ಟ ಜನತೆ

    ರಾನಮನಗರ: ಎಚ್1 ಎನ್1 ಸೋಂಕಿನಿಂದ ಅಕಾಲಿಕ ಮರಣಹೊಂದಿದ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರು ಬೊಂಬೆನಾಡು ಚನ್ನಪಟ್ಟಣದಿಂದ ವೃತ್ತಿ ಆರಂಭಿಸಿದ್ದರು. ಮಧುಕರ್ ಶೆಟ್ಟಿ ಅವರ ಅಗಲಿಕೆಯಿಂದ ಜಿಲ್ಲೆಯ ಜನತೆ ಕಣ್ಣೀರಿಟ್ಟಿದ್ದಾರೆ.

    ಚನ್ನಪಟ್ಟಣ ಉಪವಿಭಾಗದಲ್ಲಿ ಎಎಸ್‍ಪಿಯಾಗಿ 18 ತಿಂಗಳುಗಳ ಕಾಲ 2001ರ ಸೆಪ್ಟೆಂಬರ್ 17ರಿಂದ 20013ರ ಏಪ್ರಿಲ್ 18ರವರೆಗೆ ಕರ್ತವ್ಯ ನಿರ್ವಹಿಸಿದ್ದರು. ಪ್ರೊಬೆಷನರಿ ಅವಧಿಯಲ್ಲಿಯೇ ದಕ್ಷ ಹಾಗೂ ಉತ್ತಮ ಆಡಳಿತ ನೀಡಿ ಸಾರ್ವಜನಿಕವಾಗಿ ಮಧುಕರ್ ಶೆಟ್ಟಿ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದರು. ರಾತ್ರಿ ಪಾಳಿಯನ್ನು ಪೊಲೀಸರಿಗೆ ನೀಡಿ ಅವರಿಗೆ ಸೈಕಲ್ ಕೊಡಿಸಿ ಗಸ್ತು ತಿರುಗುವಂತೆ ಮಾಡಿದ್ದರು. ಇದನ್ನೂ ಓದಿ: ಖಾಕಿಯೊಳಗಿನ ಮಿನುಗುತಾರೆ ನೆನಪು ಮಾತ್ರ- ಮಧುಕರ್ ದಕ್ಷತೆ ಹಾದಿಯ ಬಗ್ಗೆ ಓದಿ

    ತಾಲೂಕಿನ ಆಟೋ ಹಾಗೂ ಕ್ಯಾಬ್ ಚಾಲಕರಿಗೆ ಉಚಿತವಾಗಿ ಡ್ರೈವಿಂಗ್ ಲೈಸೆನ್ಸ್ ಕೂಡ ಮಾಡಿಸಿಕೊಟ್ಟಿದ್ದರು. ಇದಲ್ಲದೇ ರಾಜ್ಯವೇ ಬೆಚ್ಚಿಬಿದ್ದಿದ್ದ ನೀರಾ ಚಳುವಳಿಯ ವೇಳೆ ಚನ್ನಪಟ್ಟಣ ತಾಲೂಕಿನ ವಿಠ್ಠೇನಹಳ್ಳಿ ಗ್ರಾಮದ ಗೋಲಿಬಾರ್ ನಿಂದ ಪೊಲೀಸರು ಗ್ರಾಮಕ್ಕೆ ಕಾಲಿಡಲು ಹೆದರುತ್ತಿದ್ದರು. ಈ ವೇಳೆ ಸ್ವತಃ ಮುಂದಾಳಾಗಿ ನಿಂತಿದ್ದ ಮಧುಕರ್ ಶೆಟ್ಟಿ ಗ್ರಾಮಸ್ಥರ ಜೊತೆ ಸಭೆ ನಡೆಸಿದ್ದರು. ಈ ಮೂಲಕ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಸೌಹಾರ್ದತೆ ಬೆಳೆಯುವಂತೆ ಮಾಡಿದ್ದರು. ಇದನ್ನೂ ಓದಿ: ಕರುನಾಡ ಸಿಂಗಂ ಸಾವಿನ ಬಗ್ಗೆ ಸಚಿವ ಡಿಕೆಶಿಗೆ ಸಂಶಯ..! 

    ಕನಕಪುರ ತಾಲೂಕಿನ ದೊಡ್ಡಆಲಹಳ್ಳಿ ಗ್ರಾಮದ ಸಮೀಪದ ಕಲ್ಲು ಕ್ವಾರಿಯೊಂದರಲ್ಲಿ ಜೀತದಾಳುಗಳಾಗಿದ್ದ 42 ಜನ ಕಾರ್ಮಿಕರಿಗೆ ಮುಕ್ತಿ ಕೊಡಿಸಿ ಅವರಿಗೆ ಸ್ವಂತ ಹಣದಿಂದ ರೈಲ್ವೇ ಟಿಕೆಟ್, ಖರ್ಚಿಗೂ ಸಹ ಹಣ ನೀಡಿ ಗ್ರಾಮಗಳಿಗೆ ಕಳುಹಿಸಿದ್ದರು. ಠಾಣಾ ಸಿಬ್ಬಂದಿಯನ್ನು ಹುರಿದುಂಬಿಸುವ ನಿಟ್ಟಿನಲ್ಲಿ ತಮ್ಮ ವೇತನದ ಹಣದಿಂದ ಬಹುಮಾನ ನೀಡುತ್ತಿದ್ದರು. ಹೀಗೆ ಅನೇಕ ಪರೋಪಕಾರಿ ಜೀವನದ ಜೊತೆಗೆ ಜನಸ್ನೇಹಿಯಾಗಿದ್ದ ಮಧುಕರ್ ಶೆಟ್ಟಿ ಅವರ ಅಕಾಲಿಕ ಸಾವಿನಿಂದ ಇದೀಗ ಚನ್ನಪಟ್ಟಣದ ಜನತೆ ಹಾಗೂ ಅವರ ಜೊತೆ ಕೆಲಸ ಮಾಡಿದ್ದವರು ಸಹ ದುಃಖವನ್ನು ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಷ್ಟದ ಹಾಡು ಹಾಡಿ ಕಣ್ಣೀರ ವಿದಾಯ ತಿಳಿಸಿದ್ರು ಮಧುಕರ್ ಸಹೋದ್ಯೋಗಿ

    ಇಷ್ಟದ ಹಾಡು ಹಾಡಿ ಕಣ್ಣೀರ ವಿದಾಯ ತಿಳಿಸಿದ್ರು ಮಧುಕರ್ ಸಹೋದ್ಯೋಗಿ

    ಹೈದರಾಬಾದ್: ಕರ್ನಾಟಕದ ರಿಯಲ್ ಸಿಂಗಂ, ಭ್ರಷ್ಟ ರಾಜಕಾರಣಿಗಳನ್ನೇ ಜೈಲಿಗಟ್ಟಿ ಅಬ್ಬರಿಸಿ ಲೋಕಾಯುಕ್ತಕ್ಕೆ ಹೊಸ ಖದರ್ ತಂದು ಕೊಟ್ಟಿದ್ದ ಯುವ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರಿಗೆ ಇಷ್ಟದ ಹಾಡು ಹಾಡುವ ಮೂಲಕ ಸಹೋದ್ಯೋಗಿಗಳು ಗೀತ ನಮನ ಸಲ್ಲಿಸಿದ್ದಾರೆ.

    ಹೈದರಾಬಾದ್ ನಲ್ಲಿ ಇಂದು ಅವರ ಮೃತದೇಹವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಹೀಗಾಗಿ ಅಂತಿಮ ದರ್ಶನ ಪಡೆಯುತ್ತಿದ್ದ ಸಂದರ್ಭದಲ್ಲಿ ಸಹೋದ್ಯೋಗಿ ಪವನ್ ಕುಮಾರ್ ಅವರು ಮಧುಕರ್ ಅವರ ಇಷ್ಟವಾದ ಹಿಂದಿ ಹಾಡೊಂದನ್ನು ಹಾಡಿ ಕಣ್ಣೀರಿನ ವಿದಾಯ ತಿಳಿಸಿದ್ದಾರೆ. ಬಿಕ್ಕಿ ಬಿಕ್ಕಿ ಅಳುತ್ತಾ ಹೇಳುತ್ತಿದ್ದ ಪವನ್ ಹಾಡಿಗೆ ಅಂತಿಮ ದರ್ಶನ ಪಡೆಯಲು ಬಂದಿದ್ದ ಜನಸಾಗರವೇ ದುಃಖದ ಕಡಲಲ್ಲಿ ಮುಳುಗಿತ್ತು. ಪವನ್ ಕುಮಾರ್ ಅವರು 2009ರ ಬ್ಯಾಚ್ ಮೇಟ್ ಆಗಿದ್ದಾರೆ.

    ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಐಪಿಎಸ್ ಮಧುಕರ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ 8.15ರ ಸುಮಾರಿಗೆ ಹೈದರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ರಾತ್ರಿ 8 ಗಂಟೆಯವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಪಾರ್ಥಿವ ಶರೀರವನ್ನ ಅಂತಿಮ ದರ್ಶನಕ್ಕೆ ಇಡಲಾಗುವುದು. ನಂತರ ನಾಳೆ ಅವರ ಹುಟ್ಟೂರು ಉಡುಪಿ ಜಿಲ್ಲೆಯ ಯಡಾಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಖಾಕಿಯೊಳಗಿನ ಮಿನುಗುತಾರೆ ನೆನಪು ಮಾತ್ರ- ಮಧುಕರ್ ದಕ್ಷತೆ ಹಾದಿಯ ಬಗ್ಗೆ ಓದಿ

    ಖ್ಯಾತ ಪತ್ರಕರ್ತರಾಗಿದ್ದ ಉಡುಪಿ ಜಿಲ್ಲೆಯ ವಡ್ಡರ್ಸೆ ರಘುರಾಮ್ ಶೆಟ್ಟಿಯವರ ಪುತ್ರ ಮಧುಕರ್‍ಗೆ ಕೇವಲ 47 ವರ್ಷ ವಯಸ್ಸಾಗಿತ್ತು. ಇವರು 1999ರ ಕರ್ನಾಟಕ ಕೇಡರ್‍ನ ಐಪಿಎಸ್ ಅಧಿಕಾರಿಯಾಗಿದ್ದರು. ಭಾರತೀಯ ಕಂದಾಯ ಸೇವೆ ಅಧಿಕಾರಿಯಾಗೋ ಅವಕಾಶ ಸಿಕ್ಕರೂ ತಾನು ಪೊಲೀಸ್ ಅಧಿಕಾರಿಯೇ ಆಗಬೇಕೆಂದು ಹಠಹಿಡಿದು ಖಾಕಿ ಧರಿಸಿ ಆ ಸೇವೆಗಾಗಿಯೇ ತಮ್ಮ ಜೀವನವನ್ನ ಮುಡಿಪಾಗಿಟ್ಟಿದ್ದರು. ಮಧುಕರ್ ಶೆಟ್ಟಿ ಒಬ್ಬಳು ಪುತ್ರಿ ಮತ್ತು ಪತ್ನಿಯನ್ನ ಅಗಲಿದ್ದಾರೆ. ಕರ್ನಾಟಕದಿಂದ ಕೇಂದ್ರ ಸೇವೆಗೆ ಮರಳಿದ್ದ ಅವರನ್ನ ಸರ್ದಾರ್ ವಲ್ಲಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಉಪ ನಿರ್ದೇಶಕರಾಗಿ ನಿಯೋಜನೆಗೊಂಡಿದ್ದರು. ಇದನ್ನೂ ಓದಿ: ಕರುನಾಡ ಸಿಂಗಂ ಸಾವಿನ ಬಗ್ಗೆ ಸಚಿವ ಡಿಕೆಶಿಗೆ ಸಂಶಯ..!

    https://www.youtube.com/watch?v=umjUL4BMlBc

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv