Tag: madhurai

  • ಡಿಎಂಕೆ, ಬಿಜೆಪಿ ಯಾವುದೇ ಪಕ್ಷದ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ – ಟಿವಿಕೆ ವಿಜಯ್ ಘೋಷಣೆ

    ಡಿಎಂಕೆ, ಬಿಜೆಪಿ ಯಾವುದೇ ಪಕ್ಷದ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ – ಟಿವಿಕೆ ವಿಜಯ್ ಘೋಷಣೆ

    ಚೆನ್ನೈ; ಟಿವಿಕೆ (TVK) ಪಕ್ಷ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳಲ್ಲ, ಡಿಎಂಕೆ (DMK) ಹಾಗೂ ಬಿಜೆಪಿ (DMK) ಯಾವ ಪಕ್ಷದ ಜೊತೆಗೂ ಕೈಜೋಡಿಸಲ್ಲ ಎಂದು ನಟ, ರಾಜಕಾರಣಿ ತಮಿಳಿಗ ವೆಟ್ರಿ ಕಳಗಂ (Tamilaga Vettri Kazhagam) ಪಕ್ಷದ ಮುಖ್ಯಸ್ಥ ವಿಜಯ್ (Vijay) ಘೋಷಣೆ ಮಾಡಿದ್ದಾರೆ.

    ಮಧುರೈ (Madhurai) ಜಿಲ್ಲೆಯ ಪರಪತಿಯಲ್ಲಿ ತಮಿಳಗ ವೆಟ್ರಿ ಕಳಗಂ ಪಕ್ಷದ ಎರಡನೇ ರಾಜ್ಯಮಟ್ಟದ ಸಮ್ಮೇಳನದಲ್ಲಿ ಮಾತನಾಡಿದರು. 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಪಕ್ಷ ಡಿಎಂಕೆ ಹಾಗೂ ಬಿಜೆಪಿ ನಡುವೆ ಹೋರಾಡಲಿದೆ. ಡಿಎಂಕೆ ನಮಗೆ ರಾಜಕೀಯ ಬದ್ದ ವೈರಿ, ಬಿಜೆಪಿಯ ಜೊತೆಗೂ ಕೈಜೋಡಿಸಲ್ಲ. ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳಲ್ಲ ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ದೆಹಲಿ ಸಿಎಂಗೆ ಕಪಾಳಮೋಕ್ಷ ಕೇಸ್ – ಆರೋಪಿಯನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

    ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ತಮಿಳುನಾಡಿನಲ್ಲಿರುವ 234 ಕ್ಷೇತ್ರಗಳಲ್ಲಿಯೂ ಟಿವಿಕೆ ಪಕ್ಷ ಸ್ಪರ್ಧಿಸಲಿದೆ. ನಾನು ಪೂರ್ವ ಮಧುರೈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದಿದ್ದಾರೆ.

    ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಡಿಎಂಕೆ ಸರ್ಕಾರವು ಚುನಾವಣೆ ಪೂರ್ವದಲ್ಲಿ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಬುಧವಾರದಿಂದ (ಆ.20) ನಡೆಯುತ್ತಿರುವ ಈ ಸಮಾವೇಶದಲ್ಲಿ ಮೊದಲ ದಿನವೇ ಕಾಲ್ತುಳಿತ ಉಂಟಾಗಿ, ಓರ್ವ ಸಾವನ್ನಪ್ಪಿದ್ದಾನೆ. ಜೊತೆಗೆ ಕ್ರೇನ್ ಕಟ್ಟಾಗಿ ಧ್ವಜಸ್ತಂಭ ಬಿದ್ದು, ಕಾರೊಂದು ಜಖಂ ಆಗಿದೆ.ಇದನ್ನೂ ಓದಿ: ಜಿಎಸ್‌ಟಿ ಪರಿಷ್ಕರಣೆ – 12%, 28% ಸ್ಲ್ಯಾಬ್‌ ತೆಗೆಯಲು ಸಚಿವರ ಸಮಿತಿ ಒಪ್ಪಿಗೆ

  • ತಾಯಿಯ ಅನೈತಿಕ ಸಂಬಂಧದ ಬಗ್ಗೆ ತಂದೆಗೆ ವಿವರಿಸಿದ 4ರ ಬಾಲಕ

    ತಾಯಿಯ ಅನೈತಿಕ ಸಂಬಂಧದ ಬಗ್ಗೆ ತಂದೆಗೆ ವಿವರಿಸಿದ 4ರ ಬಾಲಕ

    – ಅಪ್ರಾಪ್ತನ ಹೊಡೆದು ಕೊಂದ ತಾಯಿಯ ಪ್ರಿಯತಮ
    – ತಾಯಿ ಅರೆಸ್ಟ್, ಪ್ರಿಯತಮ ಎಸ್ಕೇಪ್

    ಮಧುರೈ: ತನ್ನ ತಾಯಿಯ ಅಕ್ರಮ ಸಂಬಂಧದ ಕುರಿತು ತಂದೆಗೆ ಹೇಳಿದ ಅಪ್ರಾಪ್ತ ಬಾಲಕನನ್ನು ಕೊಲೆಗೈದ ಘಟನೆಯೊಂದು ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.

    ಬಾಲಕ ಲೋಕೇಶ್(4)ನನ್ನು ಸೂರಿಮುತ್ತು ಎಂಬ ತಾಯಿಯ ಪ್ರಿಯತಮ ಕೊಲೆಗೈದು ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ಸೂರಿಮುತ್ತುಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸೂರಿಮುತ್ತು ಹಾಗೂ ಬಾಲಕನ ತಾಯಿ ದೀಪಾಳ ಮಧ್ಯೆ ಅಕ್ರಮ ಸಂಬಂಧವಿತ್ತು. ಈ ವಿಚಾರವನ್ನು ಬಾಲಕ ತನ್ನ ತಂದೆಯ ಬಳಿ ಹೇಳಿದ್ದೇ ಈ ಘಟನೆಗೆ ಕಾರಣವಾಗಿದೆ.

    ಕೊಯಂಬತ್ತೂರಿನ ಪೊಲ್ಲಾಚಿ ನಿವಾಸಿಯಾಗಿರೋ ದೀಪಾಳಿಗೆ 2005ರಲ್ಲಿ ಆಂಟೋನಿ ಪ್ರಕಾಶ್ ಎಂಬಾತನ ಜೊತೆ ವಿವಾಹವಾಗಿತ್ತು. ಆ ಬಳಿಕ ದಂಪತಿ ಆಂಟೋನಿ ಗ್ರಾಮದಲ್ಲೇ ವಾಸವಾಗಿದ್ದು, ದಂಪತಿಗೆ ಗಂಡು ಮಗುವೂ ಜನಿಸಿತ್ತು.

    ನಡೆದಿದ್ದೇನು?
    ಒಂದು ದಿನ ದೀಪಾ ಹಾಗೂ ಸೂರಿಮುತ್ತು ಮಧ್ಯೆ ಸಂಬಂಧ ಬೆಳೆದಿದೆ. ಅಂತೆಯೇ ಪತಿ ಆಂಟೋನಿ ಕೆಲಸಕ್ಕೆಂದು ಹೊರಗಡೆ ಹೋದ ಬಳಿಕ ದೀಪಾ ಹಾಗೂ ಸೂರಿಮುತ್ತು ಖಾಸಗಿ ಲಾಡ್ಜ್ ಗೆ ತೆರಳಿದ್ದಾರೆ. ಈ ವೇಳೆ ದೀಪಾ ತನ್ನ ಮಗನನ್ನೂ ಕರೆದುಕೊಂಡು ಹೋಗಿದ್ದಾಳೆ.

    ಇತ್ತ ಕೆಲಸದ ನಿಮಿತ್ತ ಹೊರಗಡೆ ತೆರಳಿದ್ದ ಪತಿ ವಾಪಸ್ ಬಂದಾಗ ದೀಪಾ ಮನೆಯಲ್ಲಿ ಇಲ್ಲದ್ದನ್ನು ಮನಗಂಡು ವಾಟ್ಸಾಪ್‍ನಲ್ಲಿ ವಿಡಿಯೋ ಕಾಲ್ ಮಾಡಿದ್ದಾರೆ. ಯಾಕೆಂದರೆ ಪತ್ನಿ ಎಲ್ಲಿದ್ದಾಳೆ ಎಂಬ ಸಂಶಯವೂ ಕಾಡಿದ್ದು, ಅದಕ್ಕೆ ತಕ್ಕಂತೆ ಆಕೆ ಫೋನ್ ಕೂಡ ರಿಸೀವ್ ಮಾಡಿಲ್ಲ. ಇದರಿಂದ ಆಂಟೋನಿ ತನ್ನ ಪತ್ನಿಯ ಬಗ್ಗೆ ಮತ್ತಷ್ಟು ಸಂಶಯಗೊಂಡರು. ಪತಿಯ ಕರೆಯನ್ನು ಲೆಕ್ಕಿಸದೆ ದೀಪಾ ತನ್ನ ಮಗನನ್ನು ತಾವಿದ್ದ ರೂಮಿನಿಂದ ಹೊರಗಡೆ ಕಳುಹಿಸಿದ್ದಾಳೆ. ಅಲ್ಲದೆ ಇದೇ ವೇಳೆ ಸೂರಿಮುತ್ತು ಅಪ್ರಾಪ್ತ ಬಾಲಕನಿಗೆ ಥಳಿಸಿದ್ದಾನೆ ಎಂಬ ಆರೋಪವೂ ಕೇಳಿ ಬಂದಿದೆ.

    ಕೆಲ ವರದಿಗಳ ಪ್ರಕಾರ, ಬಾಲಕ ಲೊಕೇಶ್ ತನ್ನ ತಾಯಿಯ ಮೊಬೈಲ್ ಹಿಡಿದುಕೊಂಡು ರೂಮಿನ ಹೊರಗಡೆ ನಿಂತುಕೊಂಡಿದ್ದನು. ಇದೇ ಸಂದರ್ಭದಲ್ಲಿ ಆಂಟೋನಿ ಮತ್ತೆ ಕಾಲ್ ಮಾಡಿದ್ದಾರೆ. ಈ ವೇಳೆ ಬಾಲಕ ಕರೆ ಸ್ವೀಕರಿಸಿ ಸೂರಿಮುತ್ತು ಬಗ್ಗೆ ತಿಳಿಸಿದ್ದಾನೆ. ಅಲ್ಲದೆ ತನಗೆ ಸೂರಿಮುತ್ತು ಹೊಡೆದಿರುವ ಬಗ್ಗೆಯೂ ವಿವರಿಸಿದ್ದಾನೆ. ಇತ್ತ ಬಾಲಕ ತನ್ನ ತಂದೆಯ ಬಳಿ ಹೇಳಿದ್ದೆಲ್ಲವನ್ನೂ ಕೇಳಿಸಿಕೊಂಡ ಸೂರಿಮುತ್ತು, ಆತನಿಗೆ ಚೆನ್ನಾಗಿ ಥಳಿಸಿದ್ದಾನೆ. ಪರಿಣಾಮ ಬಾಲಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಕೂಡಲೇ ಆತನನ್ನು ತಿರುನೆಲ್ವೆಲ್ಲಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆಯೇ ಇತ್ತ ಆರೋಪಿ ಸೂರಿಮುತ್ತು ಸ್ಥಳದಿಂದ ಕಾಲ್ಕಿತ್ತಿದ್ದಾನೆ.

    ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮರುದಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬಳಿಕ ಪೊಲೀಸರು ಬಾಲಕನ ತಾಯಿ ದೀಪಾಳನ್ನು ಬಂಧಿಸಿದ್ದಾರೆ. ಆದರೆ ಇದೂವರೆಗೂ ಎಫ್‍ಐಆರ್ ದಾಖಲಿಸಿಕೊಂಡಿಲ್ಲ.

  • ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕೊಲೆ ಆರೋಪಿಯೇ ಬರ್ಬರವಾಗಿ ಹತ್ಯೆಯಾದ!

    ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕೊಲೆ ಆರೋಪಿಯೇ ಬರ್ಬರವಾಗಿ ಹತ್ಯೆಯಾದ!

    ಚೆನ್ನೈ: ಇಲ್ಲಿನ ವಾಡಿಪಟ್ಟಿ ಬಳಿಯ ತನಿಚಿಯಂನಲ್ಲಿ ದಿಂಡಿಗುಲ್- ಮಧುರೈ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ಸಿನೊಳಗೆಯೇ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.

    ಈ ಘಟನೆ ಶುಕ್ರವಾರ ಮಧ್ಯಾಹ್ನ ಸುಮಾರು 2.15ರ ಸುಮಾರಿಗೆ ನಡೆದಿದೆ. ಮೃತನನ್ನು ಆರ್ ಅಮರ್ ಸೇನ್(22) ಎಂದು ಗರುತಿಸಲಾಗಿದೆ. 6 ವರ್ಷಗಳ ಹಿಂದೆ ನಡೆದ ಕೊಲೆಯೊಂದರ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ ಕೃತ್ಯ ಎಸಗಲಾಗಿದೆ ಅಂತ ವಿರುದುವಾಘ್‍ನಗರ್ ಎಸ್‍ಪಿ ಎಂ ರಾಜರಾಜನ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

    ಕರಿಮೆದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2011ರಲ್ಲಿ ನಡೆದ ರಾಮ್ ಪ್ರಸಾದ್ ಕೊಲೆ ಪ್ರಕರಣದಲ್ಲಿ ಅಮರ್ ಮೂರನೇ ಆರೋಪಿಯಾಗಿದ್ದ. ಅಮರ್ ಕೊಲೆಯ ಹಿಂದೆ ರಾಮ್ ಪ್ರಸಾದ್ ಸಂಬಂಧಿಕರು ಹಾಗೂ ಗೆಳೆಯರ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

     

    ದಿಂಡಿಗುಲ್ ಜಿಲ್ಲೆಯ ಬಟ್ಲಗುಂಡುವಿನಿಂದ ಅರಪಾಳಯಂ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದ ಸಾರಿಗೆ ಬಸ್ ನಲ್ಲಿ ಅಮರ್ ಸಂಚರಿಸುತ್ತಿದ್ದ. ಈ ವೇಳೆ ಬಸ್ ತನಿಚಿಯಂ ಬಳಿ ಹೋಗುತ್ತಿದ್ದಾಗ, ಚತುಷ್ಪಥ ಹೆದ್ದಾರಿಯಲ್ಲಿ ಕಾರ್ ಮತ್ತು 2 ಬೈಕ್ ನಲ್ಲಿ ಬಂದ 10 ಜನರ ತಂಡ ಬಸ್ಸನ್ನು ಅಡ್ಡಹಾಕಿತ್ತು. ನೋಡನೋಡುತ್ತಿದ್ದಂತೆಯೇ 10 ಮಂದಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಸ್ಸಿನೊಳಗೆ ನುಗ್ಗಿ ಮುಂಬದಿ ಸೀಟಲ್ಲಿ ಕುಳಿತಿದ್ದ ಅಮರ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡ ಅಮರ್ ರಕ್ತದ ಮಡುವಿನಲ್ಲಿ ಬೀಳುತ್ತಿದ್ದಂತೆಯೇ ದುಷ್ಕರ್ಮಿಗಳು ಬಸ್ ನಿಂದ ಇಳಿದು ತಮ್ಮ ವಾಹನದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ.

    ಸದ್ಯ ಘಟನೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ 3 ವಿಶೇಷ ತನಿಖಾ ತಂಡಗಳನ್ನ ರಚಿಸಲಾಗಿದೆ ಎಂದು ಎಸ್‍ಪಿ ಹೇಳಿದ್ದಾರೆ.

  • ಕೊತ ಕೊತ ಕುದಿಯುವ ಬಿಸಿ ಬಿಸಿ ಎಣ್ಣೆ ಗಂಡನ ‘ಅದಕ್ಕೇ’ ಸುರಿದ್ಳು ಪತ್ನಿ!

    ಕೊತ ಕೊತ ಕುದಿಯುವ ಬಿಸಿ ಬಿಸಿ ಎಣ್ಣೆ ಗಂಡನ ‘ಅದಕ್ಕೇ’ ಸುರಿದ್ಳು ಪತ್ನಿ!

    ಮದುರೈ: ತಾಳಿ ಕಟ್ಟಿದ ನಾನಿರಬೇಕಾದ್ರೆ ಇನ್ನೊಬ್ಳ ಜೊತೆ ಅಕ್ರಮ ಸಂಬಂಧವಿಟ್ಟುಕೊಳ್ಳಬೇಡ ಎಂದು ಹೇಳಿದರೂ ಕೇಳದ ಪತಿ ಮಹಾಶಯನಿಗೆ ಹೆಂಡತಿಯೊಬ್ಬಳು ತಕ್ಕ ಶಾಸ್ತಿ ಮಾಡಿದ್ದಾಳೆ. ಪತಿಯ ಲವ್ವಿ ಡವ್ವಿಯಿಂದ ಕೆರಳಿದ್ದ ಪತ್ನಿ ಕೊತ ಕೊತ ಕುದಿಯುತ್ತಿದ್ದ ಬಿಸಿ ಎಣ್ಣೆಯನ್ನು ಗಂಡನ ಗುಪ್ತಾಂಗದ ಮೇಲೆ ಸುರಿದಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದುರೈ ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ

    ಆಗಿದ್ದೇನು?: ಇಲ್ಲಿನ ನೆಹರೂ ನಗರದ ಎಂ.ಪರಮೇಶ್ವರನ್(37)ಗೆ ಶಶಿಕಲಾ ಎಂಬಾಕೆಯ ಜೊತೆ ಮದುವೆಯಾಗಿತ್ತು. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಪರಮೇಶ್ವರನ್ ಗೆ, ವಿರಟ್ಟಿಪತ್ತು ಎಂಬಲ್ಲಿನ ಮಹಿಳೆಯ ಜೊತೆ ಪರಿಚಯವಾಗಿದೆ. ಈ ಸಂಬಂಧವನ್ನು ಮತ್ತೂ ಒಂದು ಹೆಜ್ಜೆ ಮುಂದಕ್ಕೆ ಕೊಂಡೊಯ್ದ ಇಬ್ಬರೂ ಅಕ್ರಮ ಸಂಬಂಧವಿಟ್ಟುಕೊಂಡಿದ್ದರು. ಈ ವಿಚಾರ ಪತ್ನಿ ಶಶಿಕಲಾ ಗಮನಕ್ಕೆ ಬಂದು ಪರಮೇಶ್ವರನ್ ಜೊತೆ ಆಗಾಗ ಗಲಾಟೆ ಮಾಡುತ್ತಿದ್ದಳು. ಪತ್ನಿಯ ವಿಚಾರಣೆಯಿಂದ ಬೇಸತ್ತ ಪತಿ ಪರಮೇಶ್ವರ್ ಮನೆಗೆ ಬರುವುದನ್ನು ಬಿಟ್ಟುಬಿಟ್ಟಿದ್ದ. ಈ ವಿಚಾರ ಎಸ್.ಎಸ್.ಕಾಲೋನಿ ಠಾಣೆಯ ಮೆಟ್ಟಿಲೇರಿತ್ತು. ನಂತರ ಪೊಲೀಸರು ಪರಮೇಶ್ವರ್ ನನ್ನು ಕರೆದು ಎಚ್ಚರಿಕೆ ನೀಡಿ ಮನೆಗೆ ವಾಪಸ್ ಕಳಿಸಿದ್ದರು. ಆದರೆ ಕೆಲ ದಿನಗಳ ಬಳಿಕ ಪರಮೇಶ್ವರನ್ ಮತ್ತೆ ಅಕ್ರಮ ಸಂಬಂಧ ಶುರು ಮಾಡ್ಕೊಂಡ. ಆಕೆಯ ಜೊತೆಯೇ ವಾಸ್ತವ್ಯವನ್ನೂ ಆರಂಭಿಸಿದ.

    ಇದನ್ನೂ ಓದಿ: ಫಸ್ಟ್ ನೈಟ್‍ನಲ್ಲೇ ರಾಕ್ಷಸನಾದ ಪತಿ- ಚೂರಿಯಿಂದ ಇರಿದು, ಅಂಗಾಂಗ ಕಚ್ಚಿ ಹಲ್ಲೆ

    ಪ್ಲ್ಯಾನ್ ಮಾಡಿ ಕರೆಸಿಕೊಂಡ್ಳು!: ಕಳೆದ ವಾರ ಪರಮೇಶ್ವರನ್ ಗೆ ಫೋನ್ ಮಾಡಿದ ಪತ್ನಿ ಶಶಿಕಲಾ ಆತನ ಬಳಿ ನಯವಾಗಿಯೇ ಮಾತನಾಡಿದ್ದಾಳೆ. ಮನೆಗೆ ಬಂದು ನನ್ನ ಜೊತೆಯೇ ಸಂಸಾರ ಮಾಡು ಎಂದು ಕೇಳಿಕೊಂಡಿದ್ದಾಳೆ. ಹೀಗಾಗಿ ಕಳೆದ ಶನಿವಾರ ಪರಮೇಶ್ವರನ್ ಮನೆಗೆ ಬಂದು ಊಟ ಮಾಡಿ ಮಲಗಿದ್ದ. ಇದಕ್ಕಾಗಿಯೇ ಕಾಯುತ್ತಿದ್ದ ಶಶಿಕಲಾ ಬಾಣಲೆಯಲ್ಲಿ ಎಣ್ಣೆ ಕಾಯಿಸಲು ಇಟ್ಟಿದ್ದಾಳೆ. ಈತ ನಿದ್ರಾದೇವಿಗೆ ಸಂಪೂರ್ಣವಾಗಿ ಶರಣಾಗಿದ್ದಾನೆ ಎಂದು ಖಚಿತಪಡಿಸಿಕೊಂಡು ಬಾಣಲೆ ಎತ್ತಿಕೊಂಡು ಬಂದು ಅದರಲ್ಲಿದ್ದ ಬಿಸಿ ಬಿಸಿಯಾಗಿ ಕುದಿಯುತ್ತಿದ್ದ ಎಣ್ಣೆಯನ್ನು ಆತನ ಗುಪ್ತಾಂಗಕ್ಕೆ ಸುರಿದಿದ್ದಾಳೆ. ಎಣ್ಣೆ ಬೀಳುತ್ತಿದ್ದಂತೆಯೇ ಎಚ್ಚೆತ್ತ ಪರಮೇಶ್ವರನ್ ಕಿರುಚಾಡಲು ಶುರುಮಾಡಿದ್ದಾನೆ. ತಕ್ಷಣ ಸ್ಥಳೀಯರು ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಇದನ್ನೂ ಓದಿ: ಲವ್ ಮಾಡಿ ಗರ್ಭಿಣಿ ಮಾಡ್ದ, ಮದುವೆಯಾಗು ಎಂದಿದ್ದಕ್ಕೆ ಕೊಲೆಯೇ ಮಾಡ್ಬಿಟ್ಟ ಪಾಪಿ!

    ಬಿಸಿ ಬಿಸಿ ಎಣ್ಣೆ ಬಿದ್ದಿದ್ದರಿಂದ ಗುಪ್ತಾಂಗಕ್ಕೆ ಸುಟ್ಟಗಾಯಗಳಾಗಿದ್ದು ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದುರೈ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಆದರೆ ಮಹಿಳೆಯನ್ನು ಇನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ.

  • ಮಧುರೈನಲ್ಲಿ ಇಂದು ಜಲ್ಲಿಕಟ್ಟು: 38 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

    ಚೆನ್ನೈ: ಮಧುರೈ ಜಿಲ್ಲೆಯ ಅವನಿಪುರಂನಲ್ಲಿ ಇಂದು ಜಲ್ಲಿಕಟ್ಟು ಸ್ಪರ್ಧೆ ನಡೆದಿದ್ದು, 36 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

    ಸ್ಪರ್ಧೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇಂದಿನ ಸ್ಪರ್ಧೆಯನ್ನು ಕಂದಾಯ ಸಚಿವ ಆರ್‍ಬಿ ಉದಯ ಕುಮಾರ್ ಮತ್ತು ಜಿಲ್ಲಾಧಿಕಾರಿ ವೀರರಾಘವ ರಾವ್ ಉದ್ಘಾಟಿಸಿದ್ದರು. ಇನ್ನು ಈ ಸ್ಫರ್ಧೆಯಲ್ಲಿ ಸುಮಾರು 600 ಗೂಳಿಗಳು ಭಾಗವಹಿಸಿದ್ದವು. ಹಾಗೆಯೇ ಈ ಆಚರಣೆಯನ್ನು ನೋಡಲೆಂದು ಸಾವಿರಾರು ಮಂದಿ ಜಮಾಯಿಸಿದ್ದರು.

    ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯಕೀಯ ತಂಡ, ಆಂಬ್ಯುಲೆನ್ಸ್‍ಗಳನ್ನು ನಿಯೋಜಿಸಲಾಗಿತ್ತು. ಸಾಮಾನ್ಯವಾಗಿ ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಜಲ್ಲಿಕಟ್ಟು ಕ್ರೀಡೆಯನ್ನು ಆಚರಿಸಲಾಗುತ್ತಿತ್ತು. ಆದ್ರೆ ಸುಪ್ರೀಂ ಕೋರ್ಟ್ ಆಚರಣೆಗೆ ತಡೆ ನೀಡಿದ್ದ ಹಿನ್ನೆಲೆಯಲ್ಲಿ ಈ ಬಾರಿ ಕ್ರೀಡೆ ಆಚರಿಸಲು ಸಾಧ್ಯವಾಗಿರಲಿಲ್ಲ.

    ಸಾವಿರಾರು ಜನರ ಪ್ರತಿಭಟನೆಯ ನಂತರ ತಮಿಳುನಾಡು ಸರ್ಕಾರ ಜಲ್ಲಿಕಟ್ಟು ಆಚರಣೆಗೆ ಸುಗ್ರೀವಾಗ್ಞೆ ತಂದಿತ್ತು.