Tag: Madhuswamy

  • SC-ST ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಮುಂದಾದ ಸರ್ಕಾರ

    SC-ST ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಮುಂದಾದ ಸರ್ಕಾರ

    ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ(SC-ST Reservation) ಹೆಚ್ಚಳಕ್ಕೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಇಂದು ನಡೆದ ಕ್ಯಾಬಿನೆಟ್(Cabinet) ನಲ್ಲಿ ಸುಗ್ರೀವಾಜ್ಞೆ(Ordinance) ಹೊರಡಿಸಲು ಒಪ್ಪಿಗೆ ನೀಡಿದೆ.

    ಸಭೆ ಬಳಿಕ ಮಾತನಾಡಿದ ಮಾಧುಸ್ವಾಮಿ(Madhuswamy), ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧಾರ ಮಾಡಿದೆ. ಇನ್ನೆರಡು ದಿನಗಳಲ್ಲಿ ರಾಜ್ಯಪಾಲರ ಸಹಿಗೆ ಕಳಿಹಿಸುತ್ತೇವೆ. ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ದೀಪಾವಳಿಗೆ ಪ್ರಧಾನಿಯಿಂದ ಸಿಕ್ತು ಬಂಪರ್ ಆಫರ್- 75,000 ಯುವಕರಿಗೆ ಉದ್ಯೋಗ

    ಮೀಸಲಾತಿ ಹೆಚ್ಚಳಕ್ಕೆ ಸುಗ್ರಿವಾಜ್ಞೆ ಹೊರಡಿಸಲು ಸರ್ಕಾರ ನಿರ್ಧಾರ ಮಾಡಿದೆ. ಆದರೆ ಹೆಚ್ಚುವರಿ ಮೀಸಲಾತಿ ಎಲ್ಲಿಂದ ಕೊಡಲಾಗುತ್ತದೆ ಎಂಬುದಕ್ಕೆ ಸರ್ಕಾರ ಸ್ಪಷ್ಟವಾಗಿ ಹೇಳಿಲ್ಲ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಧುಸ್ವಾಮಿ ಮೀಸಲಾತಿಗೆ ಅರ್ಹವಾಗಿರುವ ಜಾತಿಗಳ ಸಂಖ್ಯೆ ಏರಿಕೆಯಾಗಿದೆ. ಪರಿಶಿಷ್ಟ ಜಾತಿಯಲ್ಲಿ 103 ಜಾತಿಗಳು ಆಗಿವೆ. ಪರಿಶಿಷ್ಟ ಪಂಗಡದಲ್ಲಿ 57 ಜಾತಿಗಳು ಆಗಿವೆ.ಮೀಸಲಾತಿ ಹೆಚ್ಚಳದ ಫಲ EWS (Economically weaker Section) ಮಾದರಿಯಲ್ಲಿ ಇರಲಿದೆ. ಆದರೆ ಅದಕ್ಕೆ ಸಂವಿಧಾನಾತ್ಮಕ ಇರಲಿದೆ. ನಾವು ಸುಗ್ರೀವಾಜ್ಞೆ ತರುವಾಗ ಸಂವಿಧಾನದ ಪ್ರಕಾರವೇ ಕ್ರಮ ಜರುಗಿಸುತ್ತೇವೆ. ಕೋರ್ಟ್ ನಲ್ಲೂ ನಮಗೆ ರಕ್ಷಣೆ ಸಿಗುವ ವಿಶ್ವಾಸವಿದೆ. ಸಮುದಾಯಗಳ ಹೆಚ್ಚಳವೇ ನಮ್ಮ ಪ್ರಯತ್ನಕ್ಕೆ ಪೂರಕ ಆಗಲಿದೆ ಎಂದರು. ಇದನ್ನೂ ಓದಿ: SC-ST ಮೀಸಲಾತಿ ಹೆಚ್ಚಳಕ್ಕೆ – ಹಾಲಿ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    ಚುನಾವಣೆ ಹಿನ್ನೆಲೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಲು ಮುಂದಾಗಿದೆ. ಆದರೆ 9ನೇ ಶೆಡ್ಯೂಲ್ಡ್‌ಗೆ ತಿದ್ದುಪಡಿ ತರದೇ ಮೀಸಲಾತಿ ಹೆಚ್ಚಳ ಸಾಧ್ಯವೇ ಎಂಬ ಪ್ರಶ್ನೆ ಶುರುವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬಿಕೆ ಹರಿಪ್ರಸಾದ್‌ ಕ್ರಿಶ್ಚಿಯನ್‌ ಆದ್ರೆ ನಮ್ಮದೇನೂ ತಕರಾರಿಲ್ಲ: ಮಾಧುಸ್ವಾಮಿ

    ಬಿಕೆ ಹರಿಪ್ರಸಾದ್‌ ಕ್ರಿಶ್ಚಿಯನ್‌ ಆದ್ರೆ ನಮ್ಮದೇನೂ ತಕರಾರಿಲ್ಲ: ಮಾಧುಸ್ವಾಮಿ

    ಬೆಂಗಳೂರು: ಮತಾಂತರ ನಿಷೇಧ ಮಸೂದೆಯ(Anti Conversion Bill) ಬಗ್ಗೆ ವಿಧಾನ ಪರಿಷತ್‌ನಲ್ಲಿ (Vidhan Parishad) ಇಂದು ಸ್ವಾರಸ್ಯಕರ ಚರ್ಚೆ ನಡೆಯಿತು. ಈ ವೇಳೆ ಕಾನೂನು ಸಚಿವ ಮಾಧುಸ್ವಾಮಿ ಅವರು ಬಿಕೆ ಹರಿಪ್ರಸಾದ್‌ ಅವರ ಕಾಲೆಳೆದ ಪ್ರಸಂಗವೂ ನಡೆಯಿತು.

    ಮಸೂದೆಯ ಬಗ್ಗೆ ವಿರೋಧ ಮಾಡಿ ಮಾತನಾಡಿದ ಕಾಂಗ್ರೆಸ್‌ನ ಮೇಲ್ಮನೆಯ ನಾಯಕ  ಬಿ.ಕೆ. ಹರಿಪ್ರಸಾದ್‌(BK Hariprasad) ಹಿಂದೂ ಧರ್ಮದ ರಕ್ಷಣೆಗೆ ಮಸೂದೆಯನ್ನು ತರಲಾಗಿದೆ ಎಂದು ಹೇಳಿದರು. ಈ ವೇಳೆ ಎದ್ದು ನಿಂತ ಮಾಧುಸ್ವಾಮಿ(Madhuswamy), ಇದು ಹಿಂದೂ ಧರ್ಮ ಮಾತ್ರ ಅಲ್ಲ ಎಲ್ಲಾ ಧರ್ಮದವರ ರಕ್ಷಣೆ ತರಲಾಗಿದೆ ಎಂದು ಉತ್ತರಿಸಿದರು.

    ಮಸೂದೆಯಲ್ಲಿ ಬಲವಂತದ ಮತಾಂತರವನ್ನು ಮಾತ್ರ ನಿಷೇಧಿಸಲಾಗಿದೆ. ಪ್ರೀತಿ, ಹಣ, ಶಿಕ್ಷಣ, ಉದ್ಯೋಗ ಈ ರೀತಿ ಆಮಿಷ ಒಡ್ಡಿ ಅಶಕ್ತರನ್ನು ಮತಾಂತರ ಮಾಡುವಂತಿಲ್ಲ. ಮುಸ್ಲಿಮ್‌ ವ್ಯಕ್ತಿಯನ್ನು ಬಲವಂತವಾಗಿ ಹಿಂದೂ ಧರ್ಮಕ್ಕೆ ಮತಾಂತರ ಮಾಡಿದರೆ ಕೇಸ್‌ ದಾಖಲಿಸಬಹುದು. ಈ ಎಲ್ಲ ಅಂಶಗಳು ಮಸೂದೆಯಲ್ಲಿದೆ ಎಂದರು. ಇದನ್ನೂ ಓದಿ: ನೈಋತ್ಯ ರೈಲ್ವೆ ಸಾಧನೆ- ಪ್ಯಾಸೆಂಜರ್ ರೈಲಿನಿಂದ ದಾಖಲೆ ಆದಾಯ ಗಳಿಕೆ

    ಮಾತನ್ನು ಮುಂದುವರಿಸಿದ ಅವರು, ಸ್ವಂತ ಇಚ್ಛೆಯಿಂದ ಯಾರು ಬೇಕಾದರೂ ಮತಾಂತರ ಆಗಬಹುದು. ಬೇಕಾದರೆ ಬಿಕೆ ಹರಿಪ್ರಸಾದ್‌ ಅವರು ಕ್ರಿಶ್ಚಿಯನ್‌ ಆದರೆ ನಮ್ಮದೇನೂ ತಕರಾರಿಲ್ಲ ಏನು ಇಲ್ಲ. ಆದರೆ ಒಂದು ಅರ್ಜಿ ಕೊಟ್ಟರೆ ಆಯ್ತು ಎಂದು ಹೇಳಿ ಕಾಲೆಳೆದರು.

    ಇದಕ್ಕೆ ಅರ್ಜಿ ಯಾಕೆ ಕೊಡಬೇಕು ಎಂದು ಹರಿಪ್ರಸಾದ್‌ ಕೇಳಿದಾಗ, ಆ ವಿಚಾರವೇ ಈ ಮಸೂದೆಯಲ್ಲಿದೆ. ಅದೇ ಪಾಯಿಂಟ್‌. ಯಾರಿಗೆ ಅರ್ಜಿ ಕೊಡಬೇಕು? ಯಾರು ತನಿಖೆ ನಡೆಸಬೇಕು ಈ ಎಲ್ಲ ಅಂಶಗಳು ಇದರಲ್ಲಿ ಇದೆ ಎಂದು ಹೇಳಿ ತಿರುಗೇಟು ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ನಾವು ಕತ್ತೆ ಕಾಯೋಕೆ ಇಲ್ಲಿ ಬಂದಿಲ್ಲ- ಸದನದಲ್ಲಿ ಮಾಧುಸ್ವಾಮಿ ಗರಂ

    ನಾವು ಕತ್ತೆ ಕಾಯೋಕೆ ಇಲ್ಲಿ ಬಂದಿಲ್ಲ- ಸದನದಲ್ಲಿ ಮಾಧುಸ್ವಾಮಿ ಗರಂ

    ಬೆಂಗಳೂರು: ಇಂದಿನ ಕಲಾಪದಲ್ಲಿ ಪಿಎಸ್‍ಐ (PSI) ಅಕ್ರಮ ನೇಮಕಾತಿಯ ಚರ್ಚೆಗೆ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಈ ವೇಳೆ ಸದನದಲ್ಲಿ ಗದ್ದಲ, ಕೋಲಾಹಲ ಹಾಗೂ ವಾಕ್ಸಮರವೇ ನಡೆದು ಹೋಯಿತು. ಈ ವೇಳೆ ಸಚಿವ ಮಾಧುಸ್ವಾಮಿ, ನಾವು ಕತ್ತೆ ಕಾಯೋಕೆ ಇಲ್ಲಿ ಬಂದಿಲ್ಲ ಎಂದು ಗರಂ ಆದರು.

    ಇತ್ತೀಚೆಗೆ ನಡೆದ ಘಟನೆ ಬಗ್ಗೆ ಚರ್ಚೆ ಮಾಡಬೇಕು ಅಂತ ನಿಯಮ ಹೇಳುತ್ತೆ. ಪಿಎಸ್‍ಐ ಪ್ರಕರಣ ನಡೆದು ಏಳು ತಿಂಗಳಾಗಿದೆ. ಈ ವಿಷಯದ ಚರ್ಚೆಗೆ ನನ್ನ ತಕರಾರಿದೆ ಅಂತ ಮಧುಸ್ವಾಮಿ (Madhuswamy) ಹೇಳಿದರು. ಈ ವೇಳೆ ಕಾಂಗ್ರೆಸ್ (Congress) ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ವಿರುದ್ಧ ಸಚಿವರು ಸಿಟ್ಟಾದರು. ನಮಗೆ ಮಾತಾಡಲು ಬಿಡಿ, ಸರ್ಕಾರ ನಡೆಸ್ತಿರೋರು ನಾವು. ನಾವು ಕತ್ತೆ ಕಾಯೋಕೆ ಇಲ್ಲಿ ಬಂದಿಲ್ಲ ಅಂತ ಗರಂ ಆದರು. ಆಗ ಕಾಂಗ್ರೆಸ್ ಸದಸ್ಯರು, ಕತ್ತೆ ಕಾಯೋಕೇ ಇರೋದು ಇನ್ನೇನಕ್ಕೆ ಇದ್ದೀರಿ ಅಂತ ಮಾಧುಸ್ವಾಮಿಗೆ ತಿರುಗೇಟು ಕೊಟ್ಟರು. ಪರಿಣಾಮ ಸದನದಲ್ಲಿ ಮತ್ತೆ ಕೋಲಾಹಲ ಎದ್ದಿದೆ.

    ನಿಯಮ 60 ರ ಬದಲು ಬೇರೆ ನಿಯಮದಲ್ಲಿ ಚರ್ಚೆ ಮಾಡಿ. ನಾವೂ ಚರ್ಚೆಗೆ ಸಿದ್ಧ, ಯಾರ್ಯಾರ ಕಾಲದಲ್ಲಿ ಏನೇನು ಅಕ್ರಮ ಆಗಿದೆ ಅಂತ ಹೇಳ್ತೀವಿ. ಪ್ರಕರಣ ತನಿಖೆಗೆ ಕೊಟ್ಟವರು ನಾವು, ಎಡಿಜಿಪಿ (ADGP) ಬಂಧಿಸಿದ್ದು ನಾವು, ನಾವೂ ಚರ್ಚೆಗೆ ಸಿದ್ಧ, ಬೇರೆ ನಿಯಮದಲ್ಲಿ ಚರ್ಚಿಸೋಣ ಎಂದು ಮಧುಸ್ವಾಮಿ ಹೇಳಿದರು. ಮಾಧುಸ್ವಾಮಿಯ ಸ್ಪಷ್ಟನೆಗೆ ಸಿದ್ದರಾಮಯ್ಯ (Siddaramaiah) ಸಿಟ್ಟಾಗಿದ್ದು, ಇದೊಂದು ರಾಜಕೀಯ ಭಾಷಣ ಅಂತ ಆರೋಪಿಸಿದರು. ರಾಜಕೀಯ ಭಾಷಣ ನಮಗೂ ಬರುತ್ತೆ ಅಂದ್ರು. ಈ ವೇಳೆ ಮಧ್ಯಪ್ರವೇಶಿಸಿ ಆಕ್ಷೇಪಿಸಿದ ಸಚಿವ ಅಶ್ವಥ್ ನಾರಾಯಣ (Ashwath Narayan) ಗೆ, ನೀವು ಸಂಬಂಧಿಸಿದ ಸಚಿವರಲ್ಲ, ಮಾಧುಸ್ವಾಮಿ ಮಾತಾಡಿದ್ದಾರೆ ನೀವು ಕುಳಿತುಕೊಳ್ಳಿ ಅಂತ ಸಿದ್ದರಾಮಯ್ಯ ಕಿಡಿಕಾರಿದರು. ಇದನ್ನೂ ಓದಿ: ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ! ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು

    ಡಿಕೆ ರವಿ (D K Ravi), ಗಣಪತಿ (Ganapathi) ಕೇಸ್ ಕೋರ್ಟ್ ನಲ್ಲಿ ಇದ್ಸಾಗ, ಇಲ್ಲಿ ಚರ್ಚೆ ಆಗಿಲ್ವಾ..?, ಹಿಂದೆ ನಮ್ಮ ಸರ್ಕಾರ ಇದ್ದಾಗ ನೀವು ಇಲ್ಲಿ ಚರ್ಚೆ ಮಾಡಿಲ್ವಾ..?, ಪ್ರಭು ಚೌಹಾನ್ (Prabhu Chauhan) ಅವ್ರು ಸಿಎಂ ಗೆ ಪತ್ರ ಬರೆದಿಲ್ವಾ..?. ಹೀಗಾಗಿ ಇದರ ಚರ್ಚೆಗೆ ಅವಕಾಶ ಕೊಡಿ ಎಂದು ಸಿದ್ದರಾಮಯ್ಯ ಪಟ್ಟು ಹಿಡಿದರು. ಆಗ ಮಾಧುಸ್ವಾಮಿ, ಪ್ರಕರಣದ ಚರ್ಚೆಯೇ ಬೇಡ ಅಂತ ಸರ್ಕಾರ ಹೇಳ್ತಿಲ್ಲ. ಈ ನಿಯಮ ಬೇಡ, ಬೇರೆ ನಿಯಮದಲ್ಲಿ ಚರ್ಚೆ ಮಾಡೋಣ. ಪಿಎಸ್‍ಐ ನೇಮಕಾತಿಯ ಹಾಗೆ ಆಗಿರುವ ಬೇರೆ ಪ್ರಕರಣಗಳ ಬಗ್ಗೆಯೂ ಚರ್ಚೆ ಆಗಬೇಕು ಅಂತ ಹೇಳಿದರು. ಇದಕ್ಕೆ ಸಿದ್ದರಾಮಯ್ಯ ಆಗ್ರಹ, ಎಲ್ಲ ತನಿಖೆ ಆಗಲಿ, ,2006 ರಿಂದಲೇ ತನಿಖೆ ಮಾಡಿ ಅಂತ ಆಗ್ರಹಿಸಿದರು. ತನಿಖಾ ಆಯೋಗ ರಚಿಸಿ ತನಿಖೆ ಮಾಡಿ ಅಂತ ಸಿದ್ದರಾಮಯ್ಯ ಆಗ್ರಹಿಸಿದರು.

    ಈ ವೇಳೆ ಮಧ್ಯಪ್ರವೇಶಸಿದ ಸ್ಪೀಕರ್, ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದ ಚರ್ಚೆ ನಿಯಮ 60 ರಡಿ ಕೊಡಲ್ಲ. ನಿಯಮ 69 ಕ್ಕೆ ಪರಿವರ್ತಿಸಿ ಚರ್ಚೆಗೆ ಕೊಡುತ್ತೇನೆ. ಸದ್ಯ ಅತಿವೃಷ್ಟಿ ಚರ್ಚೆ ನಡೀತಿದೆ, ಅತಿವೃಷ್ಟಿ ಚರ್ಚೆ ಬಳಿಕ ಪಿಎಸ್‍ಐ ನೇಮಕಾತಿ ಪ್ರಕರಣದ ಚರ್ಚೆಗೆ ಅವಕಾಶ ಕೊಡುತ್ತೇನೆ. ಸ್ಪೀಕರ್ ರೂಲಿಂಗ್ ಗೆ ಕಾಂಗ್ರೆಸ್ ಸದಸ್ಯರು ಒಪ್ಪಿಕೊಂಡರು. ಇದನ್ನೂ ಓದಿ: ಬೆಟ್ಟ ಕುರುಬ ಸೇರಿದಂತೆ ಒಟ್ಟು 12 ಜಾತಿಗಳು ಎಸ್‌ಟಿ ವರ್ಗಕ್ಕೆ ಸೇರ್ಪಡೆ: ಮೋದಿಗೆ ಬಿಎಸ್‌ವೈ ಅಭಿನಂದನೆ

    Live Tv
    [brid partner=56869869 player=32851 video=960834 autoplay=true]

  • ಅತಿಯಾದ ಬುದ್ಧಿವಂತಿಕೆ ಒಳ್ಳೆಯದಲ್ಲ: ಮಾಧುಸ್ವಾಮಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

    ಅತಿಯಾದ ಬುದ್ಧಿವಂತಿಕೆ ಒಳ್ಳೆಯದಲ್ಲ: ಮಾಧುಸ್ವಾಮಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

    ಬೆಂಗಳೂರು: ನಾನೇ ಮೇಧಾವಿ, ನಾನೇ ಬುದ್ಧಿವಂತ ಅಂದುಕೊಂಡಿದ್ದಾರೆ. ಅತಿಯಾದ ಬುದ್ಧಿವಂತಿಕೆ ಒಳ್ಳೆಯದಲ್ಲ. ಸಚಿವರು ಇನ್ನೂ ಮುಂದಾದರೂ ಚೆನ್ನಾಗಿ ಕೆಲಸ ಮಾಡಿ. ಏನೇನೋ ಹೇಳಿಕೆ ನೀಡಿ ಸರ್ಕಾರಕ್ಕೆ ಮುಜುಗರ ತರಬೇಡಿ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ವಿರುದ್ಧ ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಮಾಧುಸ್ವಾಮಿ ಸದನದ ಒಳಗೆ ವಿಪಕ್ಷಗಳನ್ನ ಸಮರ್ಥವಾಗಿ ಹಣಿಯುತ್ತಾರೆ. ಆದರೆ ಹೊರಗಡೆ ಯಾಕೆ ಈ ರೀತಿ ಹೇಳಿಕೆ ಕೊಡುತ್ತಾರೋ ಗೊತ್ತಿಲ್ಲ. ಯಾವ ಯಾವ ಕಾರಣಕ್ಕೋ ಸಚಿವರಾಗಿದ್ದಾರೆ. ಈ ಬಗ್ಗೆ ಶಾಸಕಾಂಗ ಸಭೆಯಲ್ಲಿ ಚರ್ಚೆ ಮಾಡ್ತೀವಿ. ಹಾದಿ ಬೀದಿಯಲ್ಲಿ ಚರ್ಚೆ ಮಾಡಲ್ಲ ಎಂದು ಗರಂ ಆದರು. ಇದನ್ನೂ ಓದಿ: ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿಎಸ್‌ವೈ ಈಗ ಟಾಪ್‌ 5 ನಾಯಕ

    ನಮ್ಮ ಸರ್ಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಕೇವಲ ಘೋಷಣೆ ಮಾಡಿಲ್ಲ, ಅನುಷ್ಠಾನಕ್ಕೆ ತಂದಿದ್ದೇವೆ. ಸಿಎಂ ಬೊಮ್ಮಾಯಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದಾರೆ. ನೋ ಅಡ್ಜಸ್ಟ್‍ಮೆಂಟ್ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದರು. ಸಿದ್ದರಾಮಯ್ಯ ಅಂತಾ ನಿಮ್ಮ ತಂದೆ-ತಾಯಿ ದೇವರ ಹೆಸರು ಇಟ್ಟಿದ್ದಾರೆ. ಸಿದ್ದರಾಮಯ್ಯಗೆ ಅಧಿಕಾರದ ಹುಚ್ಚು. ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಿದ್ದರಾಮಯ್ಯ ಭ್ರಮೆಯಲ್ಲಿ ಇದ್ದಾರೆ ಎಂದರು.

    ಈ ದೇಶದ ಒಂದೊಂದು ಇಂಚು ಭೂಮಿ ನಮಗೆ ಸೇರಿದ್ದು. ವಕ್ಫ್ ಬೋರ್ಡ್ ಸುಪ್ರೀಂ ಆಗಿದ್ಯಾ? ಸರ್ಕಾರಕ್ಕಿಂತ ಇವರು ಕೆಲಸ ಮಾಡಿದ್ದಾರಾ? ಸಾವರ್ಕರ್ ಫೋಟೋ ಎಲ್ಲಿ ಬೇಕಾದರೂ ಇಡಬಹುದು. ಇವರು ಯಾರು ಹೇಳೋದಕ್ಕೆ?, ಯಾರನ್ನು ಕೇಳಿ ಟಿಪ್ಪು ಜಯಂತಿ ಘೋಷಣೆ ಮಾಡಿದ್ರಿ ಎಂದು ಪ್ರಶ್ನೆಗಳ ಸುರಿಮಳೆಗೈದರು. ಇದನ್ನೂ ಓದಿ: ಫಸ್ಟ್‌ ಟೈಂ ಬೆಂಗಳೂರಿನಲ್ಲಿ ಲ್ಯಾಂಡ್‌ ಆಗಲಿದೆ ವಿಶ್ವದ ಅತಿ ದೊಡ್ಡ ಸೂಪರ್‌ಜಂಬೋ ವಿಮಾನ

    ತಾಕತ್ ಇದ್ರೆ ನಾನೊಬ್ಬ ಹಿಂದೂ ಅಂತ ಹೇಳಿ ಸಿದ್ದರಾಮಯ್ಯಗೆ ರೇಣುಕಾಚಾರ್ಯ ಸವಾಲೆಸೆದರು. ನಾಚಿಕೆ ಆಗಬೇಕು, ವೋಟ್ ಬ್ಯಾಂಕ್ ರಾಜಕಾರಣ ಬಿಡಿ. ಹಿಂದೂ, ಮುಸ್ಲಿಂ ಭಾರತ ಮಾತೆಯ ಮಕ್ಕಳು. ಯಡಿಯೂರಪ್ಪ, ಬೊಮ್ಮಾಯಿ ಸಾಧನೆ ಜನರಿಗೆ ತಲುಪಬಾರದು. ಅಂತಾ ಈ ರೀತಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಪಪ್ರಚಾರ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ನೀವು ರಾಮನ ಜಪ ಮಾಡಿ. ಪ್ರವೀಣ್, ಹರ್ಷ ಸೇರಿ ಹಲವರ ಹತ್ಯೆಗೆ ನೀವು ಕಾರಣ. ರಾಜ್ಯದ ಜನರ ಕ್ಷಮೆ ಕೇಳಿ ಎಂದು ಇದೇ ವೇಳೆ ಎಂಪಿಆರ್ ಆಗ್ರಹಿಸಿದರು.

    Live Tv
    [brid partner=56869869 player=32851 video=960834 autoplay=true]

  • ಸಿಎಂ ಹೇಳಿದರೆ ರಾಜೀನಾಮೆ ನೀಡುತ್ತೇನೆ: ಮಾಧುಸ್ವಾಮಿ

    ಸಿಎಂ ಹೇಳಿದರೆ ರಾಜೀನಾಮೆ ನೀಡುತ್ತೇನೆ: ಮಾಧುಸ್ವಾಮಿ

    ತುಮಕೂರು: ಸರ್ಕಾರ ನಡೆಯುತ್ತಿಲ್ಲ, ಮ್ಯಾನೇಜ್‍ಮೆಂಟ್ ಮಾಡುತ್ತಿದ್ದೇವೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಆಡಿಯೋ ಲೀಕ್ ವಿಚಾರವಾಗಿ ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಸಿಎಂ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಿಯೋ ತುಂಬಾ ಹಳೇಯದು. ಯಾವಾಗ ಮಾತನಾಡಿದ್ದೀನಿ ಅನ್ನೋದು ನನಗೆ ನೆನಪಿಲ್ಲ. ಆಡಿಯೋದಲ್ಲಿ ಇರುವ ಧ್ವನಿ ನನ್ನದೆ. ಆಡಿಯೋ ರೆಕಾರ್ಡಿಂಗ್ ಮಾಡಿದ ವ್ಯಕ್ತಿ ವಿರುದ್ಧ ದೂರು ನೀಡುತ್ತೇನೆ. ಗೊತ್ತಿಲ್ಲದೇ ಕಾಲ್ ರೆಕಾರ್ಡ್ ಮಾಡುವುದು ಕೂಡ ಅಪರಾಧವಾಗಿದೆ. ಹಾಗಾಗಿ ಪ್ರಸಾರ ಮಾಡಿದ ಮಾಧ್ಯಮದ ಮೇಲೂ ಕೇಸ್ ಹಾಕುತ್ತೇನೆ ಎಂದು ತಿಳಿಸಿದರು.

    bjP

    ಅಪರಿಚಿತ ವ್ಯಕ್ತಿಯ ದಾಖಲೆ ಮಾಧ್ಯಮದವರು ನೀಡಲಿ. ಯಾರೂ ನನ್ನ ವಿರುದ್ಧ ಷಡ್ಯಂತ್ರ ಮಾಡಿಲ್ಲ. ಯಾರನ್ನೂ ನಾನು ದೂಷಣೆ ಮಾಡುವುದಿಲ್ಲ. ಈಗಾಗಲೇ ಸಿಎಂಗೆ ಸ್ಪಷ್ಟನೆ ನೀಡಿದ್ದೇನೆ. ರಾಜೀನಾಮೆ ಕೊಡುವ ಪ್ರಮೇಯ ಇಲ್ಲ. ಸಿಎಂ ರಾಜೀನಾಮೆ ಕೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದರು. ಇದನ್ನೂ ಓದಿ: ದಲಿತ ವಿದ್ಯಾರ್ಥಿ ಸಾವಿನಿಂದ ಮನನೊಂದು ಕಾಂಗ್ರೆಸ್ ಶಾಸಕ ರಾಜೀನಾಮೆ

    ಅನಾಮಿಕ ವ್ಯಕ್ತಿ ನನಗೆ ಪ್ರಚೋದನೆ ನೀಡುತ್ತಿದ್ದ. ಹಾಗಾಗಿ ನಾನು ಮ್ಯಾನೇಜ್ ಮಾಡುತ್ತಿದ್ದೇವೆ ಎಂದು ಹೇಳಿದೆ. ಸಚಿವ ಸೋಮಶೇಖರ್ ಕುರಿತು ನಾನು ಗೌರವಯುತವಾಗಿ ಮಾತನಾಡಿದ್ದೇನೆ. ಸರ್ಕಾರ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಸರ್ಕಾರದ ಬಗ್ಗೆ ಎರಡು ಮಾತಿಲ್ಲ. ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕಾಶ್ಮೀರವನ್ನು ಬಿಟ್ಟು ಬನ್ನಿ: ಕಾಶ್ಮೀರಿ ಪಂಡಿತರ ಸಂಘರ್ಷ ಸಮಿತಿ ಒತ್ತಾಯ

    Live Tv
    [brid partner=56869869 player=32851 video=960834 autoplay=true]

  • ಮಂಗಳೂರಿನಲ್ಲಿ ರಾಜಕೀಯಕ್ಕಾಗಿ ಕೊಲೆ ನಡೆದಿವೆ: ಮಾಧುಸ್ವಾಮಿ

    ಮಂಗಳೂರಿನಲ್ಲಿ ರಾಜಕೀಯಕ್ಕಾಗಿ ಕೊಲೆ ನಡೆದಿವೆ: ಮಾಧುಸ್ವಾಮಿ

    ದಾವಣಗೆರೆ: ಮಂಗಳೂರಿನಲ್ಲಿ ನಡೆದಂತಹ ಕೊಲೆಗಳು ರಾಜಕೀಯಕ್ಕಾಗಿ ನಡೆದಂತಹ ಕೊಲೆಗಳಾಗಿವೆ. ಇದನ್ನು ಕೂಡಲೇ ಹತೋಟಿಗೆ ತೆಗೆದುಕೊಳ್ಳಬೇಕು ಎಂದು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಒತ್ತಾಯಿಸಿದರು.

    ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೋಸ್ಕರ ಕೊಲೆ ಮಾಡುತ್ತಿರುವುದು ತಪ್ಪು, ಅದು ದುರ್ದೈವ. ಮಂಗಳೂರಿನಲ್ಲಿ ನಡೆದಂತ ಕೊಲೆಗಳು ರಾಜಕೀಯಕ್ಕಾಗಿ ನಡೆದಂತಹ ಕೊಲೆಗಳಾಗಿವೆ. ಅದನ್ನು ಕೂಡಲೇ ಹತೋಟಿಗೆ ತೆಗೆದುಕೊಳ್ಳಬೇಕು. ಇದನ್ನು ಉಲ್ಬಣ ಆಗಲು ಬಿಡಬಾರದು ಎಂದರು.

    ಮಂಗಳೂರಿನಲ್ಲಿ ನಡೆದ ಘಟನೆ ಸರ್ಕಾರ ಸಹಿಸುವುದಿಲ್ಲ. ಪರಿಸ್ಥಿತಿ ತಿಳಿ ಮಾಡಲಿಲ್ಲ ಅಂದರೆ ತಪಾತ್ರೆಯ ಕಟ್ಟಿಟ್ಟ ಬುತ್ತಿ, ಹತ್ಯೆ ಮಾಡುವ ಹಂತಕ್ಕೆ ಯಾರು ಹೋಗಬಾರದು. ಆದರೆ ಪ್ರವೀಣ್ ಹತ್ಯೆ ಮಾಡಿದವರು, ಅವರ ಅಂಗಡಿಯಲ್ಲೇ ಕೆಲಸ ಮಾಡುವವರೆಂದು ಹೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಪಿಎಫ್‍ಐ ಸಂಘಟನೆ ನಿಷೇಧ: ಮಂಗಳೂರಿನಲ್ಲಿ ನಡೆದ ಹತ್ಯೆ ಬಗ್ಗೆ ಪಿಎಫ್‍ಐ ಕೈವಾಡ ಇದೆ ಎನ್ನುವುದರ ಬಗ್ಗೆ ಆಧಾರ ಇಲ್ಲದೆ ಮಾತನಾಡಲು ಬರುವುದಿಲ್ಲ. ಅವರು ಈ ಹತ್ಯೆಗಳ ಹಿಂದಿದ್ದರೆ ಅನುಭವಿಸುತ್ತಾರೆ. ಪಿಎಫ್‍ಐ ಅವರ ಬಗ್ಗೆ ಬಿಜೆಪಿ, ಕಾಂಗ್ರೆಸ್‍ನವರ ಬಳಿ ದಾಕ್ಷಿಣ್ಯ ಇಲ್ಲ. ಪಿಎಫ್‍ಐ ವಿರುದ್ಧ ತನಿಖೆ ಮಾಡಲು ಆಧಾರ ಸಾಕ್ಷಿಗಳು ಬೇಕಾಗುತ್ತದೆ ಎಂದು ಹೇಳಿದರು.

    ಏಕಾಏಕಿ ಮತ್ತೊಬ್ಬರ ಕಡೆ ಬೊಟ್ಟು ಮಾಡಿ ತೋರಿಸಲು ಬರುವುದಿಲ್ಲ. ಇದನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಒಂದು ಹಂತಕ್ಕೆ ತಂದೇ ತರುತ್ತೇವೆ. ಯಾರು ಹುಡುಗಾಟ ಆಡಲು ಬರುವುದಿಲ್ಲ, ಮಂಗಳೂರಲ್ಲಿ ನಡೆದಿರುವ ಹತ್ಯೆಗಳು ನಿರೀಕ್ಷೆ ಮಾಡಿದ್ದಲ್ಲ. ಸರ್ಕಾರದ ವಿರುದ್ಧ ಕಾರ್ಯಕರ್ತರು ಮುನಿಸುಕೊಳ್ಳಬಾರದು. ಇದಕ್ಕೆ ಕಾರಣೀಕರ್ತರನ್ನು ಹುಡುಕಿ ತಾಕೀತು ಮಾಡಿ ಶಿಕ್ಷೆಗೊಳಪಡಿಸುತ್ತೇವೆ ಎಂದು ಮನವಿ ಮಾಡಿದರು.

    ಪ್ರವೀಣ್, ಫಾಝಿಲ್ ಹತ್ಯೆ ವಿಚಾರ: ಪ್ರವೀಣ್ ನೆಟ್ಟಾರು ಹಾಗು ಫಾಝಿಲ್ ಹತ್ಯೆಗೆ ಲಿಂಕ್ ಆಗಿರುವುದು ತಪ್ಪು. ಕೆಲವರು ಮಾತನಾಡುತ್ತಿರುವುದು ಕೂಡ ತಪ್ಪು. ವಿರೋಧ ಪಕ್ಷದವರು ಪ್ರವೀಣ್ ಹಾಗೂ ಫಾಝಿಲ್ ಕೊಲೆಗೆ ಲಿಂಕ್ ಮಾಡ್ತಿದ್ದಾರೆ. ಇದು ಸತ್ಯಕ್ಕೆ ದೂರವಾಗಿರುವ ವಿಚಾರ ಎಂದರು. ಇದನ್ನೂ ಓದಿ: ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ – ಆರೋಗ್ಯ ಇಲಾಖೆಗೆ ಪತ್ರ ಬರೆದ ಡಿಹೆಚ್‍ಒ

    ಇನ್ನು ಫಾಝಿಲ್ ಹತ್ಯೆಯಾದಾಗ ಸಿಎಂ ಆಗಲಿ ಸಚಿವರಾಗಲಿ ಮನೆಯ ಹತ್ತಿರ ಹೋಗದೆ ಇರಲು ಕಾರಣ ಇದೆ. ಮೃತ ಪ್ರವೀಣ್ ಮನೆಗೆ ಭೇಟಿ ನೀಡಿದ ಬಳಿಕ ಸಿಎಂ ಬೊಮ್ಮಾಯಿ ಅವರು ಫಾಝಿಲ್ ಕೊಲೆಯಾದಾಗ ಅವರು ಏರ್ ಕ್ರಾಪ್ಟ್‌ನಲ್ಲಿದ್ದರು. ಅಲ್ಲಿಂದ ಅವರು ಬೆಂಗಳೂರು ಕಡೆಗೆ ತಮ್ಮ ಪ್ರಯಾಣ ಬೆಳೆಸಿದ್ದರು. ಆದ್ದರಿಂದ ಅವರು ಫಾಝಿಲ್ ಮನೆಗೆ ಹೋಗಲು ಆಗಲಿಲ್ಲ ಎಂದು ಸಮರ್ಥಿಕೊಂಡರು.

    ಉತ್ತರ ಪ್ರದೇಶ ಮಾದರಿ ಅಳವಡಿಸಲು ಚಿಂತನೆ ಇಲ್ಲ: ರಾಜ್ಯದಲ್ಲಿ ಯುಪಿ ಮಾದರಿ ತರಲು ಮಾಧ್ಯಮದವರು ಒತ್ತಾಯಿಸಿದ್ದಕ್ಕಾಗಿ ಸಿಎಂ ಬೊಮ್ಮಾಯಿರವರು ಯುಪಿನೇ ಬೇರೆ, ಕರ್ನಾಟಕ ರಾಜ್ಯನೇ ಬೇರೆ. ಅಲ್ಲಿನ ಸಮಸ್ಯೆಗೂ ಇಲ್ಲಿ ಸಮಸ್ಯೆಗೂ ವ್ಯತ್ಯಾಸ ಇದೆ ಎಂದು ಈಗಾಗಲೇ ತಿಳಿಸಿದ್ದಾರೆ. ಆದರೆ ಮಾಧ್ಯಮದವರು ಕೆಲ ದಿನಗಳ ಹಿಂದೆ ಒತ್ತಿ ಒತ್ತಿ ಕೇಳಿದಕ್ಕಾಗಿ ಸಿಎಂ ಬೊಮ್ಮಾಯಿರವರು ಕರ್ನಾಟಕದಲ್ಲೂ ಯುಪಿ ಮಾದರಿ ಆಗಬಹುದು ಎಂದಿದ್ದರು, ಆದರೆ ಅದು ಸತ್ಯಕ್ಕೆ ದೂರವಾದ ವಿಚಾರ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಿದ್ದಾಗ ಅಧಿಕಾರದಲ್ಲಿದ್ದು ಏನು ಸಾರ್ಥಕ: ರೇಣುಕಾಚಾರ್ಯ

    ಯಡಿಯೂರಪ್ಪನವರೇ ನಮ್ಮ ಲೀಡರ್: ಯಡಿಯೂರಪ್ಪನವರೇ ನಮ್ಮ ಲೀಡರ್. ಅದರಲ್ಲಿ ಎರಡು ಮಾತಿಲ್ಲ, ಅವರನ್ನು ಮೂಲೆ ಗುಂಪು ಮಾಡಬೇಕೆಂಬುದು ಇಡೀ ಬಿಜೆಪಿಯಲ್ಲಿ ಯಾರೊಬ್ಬರ ತಲೆಯಲ್ಲಿಲ್ಲ, ಒಂದು ಪಕ್ಷ ಅಂದರೆ ಕಾರ್ಯಕರ್ತರು ಸಂಘಟನೆ ಮಾಡಿಕೊಂಡು ಪ್ರವಾಸ ಮಾಡಬೇಕಾಗುತ್ತದೆ. ಯಡಿಯೂರಪ್ಪನವರು ಒಬ್ಬರೇ ಮಾಡಲು ಆಗುತ್ತಾ ಆಗಲ್ಲ, ಇನ್ನು ಬೇರೆ ಬೇರೆ ಘಟನೆ ಜರುಗಿದ್ದರಿಂದ ವಿಜಯೋತ್ಸವವನ್ನು ರದ್ದು ಮಾಡಿದ್ದೇವೆ. ಆದರೆ ಯಡಿಯೂರಪ್ಪನವರನ್ನು ಸಂಘಟನೆ ಮಾಡುವ ವಿಚಾರದಲ್ಲಿ ಯಾರು ತಡಿಯಲ್ಲ, ಯಾರು ತಡಿಯಲು ಆಗುವುದಿಲ್ಲ ಎಂದು ತಿಳಿಸಿದರು.

    ರನ್ನಿಂಗ್ ರೇಸ್‍ನಲ್ಲಿ ಗೆಲಲ್ಲುತ್ತೇವೆ ಎಂದು ಓಡ್ತಾರೆ, ಓಡ್ಲಿ ಬಿಡಿ ಜನ ಅಲ್ವಾ ತೀರ್ಮಾನ ಮಾಡೋದು ಎಂದು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಬಗ್ಗೆ ವ್ಯಂಗ್ಯ ಮಾಡಿದರು. ಇನ್ನು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಮಾಡಿದ್ರೇ ರಾಜ್ಯದಲ್ಲಿ ಗೆದ್ದು ಬಿಡ್ತಾರ ಎಂದು ಪ್ರಶ್ನಿಸಿದರು.

    Live Tv
    [brid partner=56869869 player=32851 video=960834 autoplay=true]

  • ಒಬ್ಬ ಹೆಂಡ್ತಿಗೆ ಒಬ್ಬನೇ ತಾಳಿ ಕಟ್ಟಬಹುದು, ಇಲ್ಲಿ ಒಬ್ಬ ಹೆಂಡ್ತಿಗೆ ಇಬ್ಬಿಬ್ರು ತಾಳಿ ಕಟ್ಟಿದ್ದಾರೆ: ಸಿ.ಎಂ.ಇಬ್ರಾಹಿಂ

    ಒಬ್ಬ ಹೆಂಡ್ತಿಗೆ ಒಬ್ಬನೇ ತಾಳಿ ಕಟ್ಟಬಹುದು, ಇಲ್ಲಿ ಒಬ್ಬ ಹೆಂಡ್ತಿಗೆ ಇಬ್ಬಿಬ್ರು ತಾಳಿ ಕಟ್ಟಿದ್ದಾರೆ: ಸಿ.ಎಂ.ಇಬ್ರಾಹಿಂ

    ತುಮಕೂರು: ಮಾಧುಸ್ವಾಮಿ ಮಾತು ಕೇಳಿ ಎಸ್.ಆರ್. ಶ್ರೀನಿವಾಸ್ ರಾಜ್ಯ ಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಹಾಕಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಆರೋಪಿಸಿದ್ದಾರೆ.

    ಗುಬ್ಬಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸಭೆ ಚುನಾವಣೆಯಲ್ಲಿ ಎಸ್.ಆರ್ ಶ್ರೀನಿವಾಸ್ ಬಿಜೆಪಿ ಮತ್ತು ಕಾಂಗ್ರೆಸ್‍ಗೆ ಮತ ಹಾಕಿದ್ದಾರೆ. ಒಬ್ಬ ಹೆಂಡತಿಗೆ ಒಬ್ಬನೇ ತಾಳಿ ಕಟ್ಟಬಹುದು. ಆದರೆ ಇಲ್ಲಿ ಒಬ್ಬ ಹೆಂಡತಿಗೆ ಇಬ್ಬಿಬ್ಬರು ತಾಳಿ ಕಟ್ಟಿದ್ದಾರೆ. ಇದರಲ್ಲಿ ಮಾಧುಸ್ವಾಮಿ ಕೈವಾಡ ಇದೆ. ಜೆಡಿಎಸ್, ಬಿಜೆಪಿ ಬಿ ಟೀಮ್ ಎನ್ನುವ ಕಾಂಗ್ರೆಸ್‍ನವರೇ ಬಿಜೆಪಿಗೆ ಸಹಕಾರ ನೀಡಿದ್ದಾರೆ. ಎರಡನೇ ಮತ ಕಾಂಗ್ರೆಸ್‍ಗೆ ಹಾಕಿಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: MVA ಸರ್ಕಾರವನ್ನು ಅಲುಗಾಡಿಸುತ್ತಿರುವ ಏಕನಾಥ್ ಶಿಂಧೆ ಯಾರು?

    ಕಾಂಗ್ರೆಸ್‍ನ ಈ ನೀತಿಯನ್ನು ನಾನು ಖಂಡಿಸಿ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದೇನೆ. ನಿಮ್ಮ ನಾಯಕರು ಮೊದಲ ವೋಟು ಮೋದಿಗೆ ಹಾಕಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದೇನೆ. ಆದರೆ ಸೋನಿಯಾಗಾಂಧಿಯಿಂದ ರಿಪ್ಲೈ ಬಂದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ MVA ಸರ್ಕಾರ ಪತನ? – ಶೀಘ್ರವೇ ಬಿಜೆಪಿ ಅಧಿಕಾರಕ್ಕೆ

  • ರಾಜ್ಯದಲ್ಲಿ ನಡೀತಿರೋ ಬೆಳವಣಿಗೆಗಳು ಆಡಳಿತ ಪಕ್ಷಕ್ಕೆ ಗೌರವ ತರುವುದಿಲ್ಲ: ಮಾಧುಸ್ವಾಮಿ ಅಸಮಾಧಾನ

    ರಾಜ್ಯದಲ್ಲಿ ನಡೀತಿರೋ ಬೆಳವಣಿಗೆಗಳು ಆಡಳಿತ ಪಕ್ಷಕ್ಕೆ ಗೌರವ ತರುವುದಿಲ್ಲ: ಮಾಧುಸ್ವಾಮಿ ಅಸಮಾಧಾನ

    ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಆಡಳಿತ ಪಕ್ಷಕ್ಕೆ ಗೌರವ ತರುವುದಿಲ್ಲ ಎಂದು ಹೇಳುವ ಮೂಲಕ ಸರ್ಕಾರದ ವಿರುದ್ಧ ಸಚಿವ ಮಾಧುಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ.

    ಬೆಳಗಾವಿಯ ನಿಪ್ಪಾಣಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಯಾರಿಗಾದ್ರೂ ತೊಂದರೆ ಕೊಡುವುದು, ಶಾಂತಿ ಕದಡುವುದು ಯಾರು ಮಾಡಿದರೂ ಗೌರವ ಬರುವುದಿಲ್ಲ. ಅದರಲ್ಲೂ ಆಡಳಿತ ಪಕ್ಷಕ್ಕಂತೂ ಗೌರವ ಬರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸೇಡು ತೀರಿಸಿಕೊಳ್ಳಲ್ಲ, ಕಾನೂನು ತನ್ನ ಮಾರ್ಗವನ್ನು ತೆಗೆದುಕೊಳ್ಳುತ್ತೆ: ಶೆಹಬಾಜ್ ಷರೀಫ್

    ಆಡಳಿತ ಮಾಡಬೇಕಾದರೆ ಎಲ್ಲರು ಈ ದೇಶದ ಪ್ರಜೆಗಳೇ ಎಂದು ಭಾವಿಸಬೇಕು. ಆಕಸ್ಮಿಕವಾಗಿ ನಡೆಯುವದು ಬೇರೆ ಹುಡುಕಿಕೊಂಡು ಹೋಗುವುದನ್ನ ಯಾರೂ ಒಪ್ಪಿಕೊಳ್ಳಲು ಆಗುವುದಿಲ್ಲ. ಚಂದ್ರು ಹತ್ಯೆ ಪ್ರಕರಣದ ಮಾಹಿತಿಯನ್ನ ಗೃಹ ಮಂತ್ರಿಗಳಿಗೆ ಸರಿಯಾಗಿ ನೀಡಿಲ್ಲ. ಗೃಹ ಸಚಿವ ಅರಗ ಜ್ಞಾನೇಂದ್ರ ತಕ್ಷಣ ರಿಯಾಕ್ಟ್ ಮಾಡಿದ್ದು ಗೊಂದಲಕ್ಕೆ ಕಾರಣವಾಗಿದೆ. ಸಮಾಧಾನವಾಗಿ ವರ್ತಿಸಬೇಕು ಎಲ್ಲರೂ ಸಮಾನತೆಯಿಂದ ಬದುಕಬೇಕು ಎಂದರು.

    ಶಾಂತಿ ಇರುವ ಕಡೆಗೆ ಅಭಿವೃದ್ಧಿಗೆ ಬೆಲೆ ಜಾಸ್ತಿ. ಶಾಂತಿ ಕದಡಿದರೇ ಅನಿವಾರ್ಯವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದ ಅವರು, ಸದ್ಯಕ್ಕೆ ಸಂಪುಟ ಪುನರಾರಚನೆ ಇಲ್ಲ ಎಲ್ಲವೂ ಊಹಾಪೋಹ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಚಂದ್ರು ಕೊಲೆ ಪ್ರಕರಣ- ಜಮೀರ್ ಹೇಳಿಕೆ ಬೆನ್ನಲ್ಲೇ ಸೈಮನ್ ರಾಜ್ ಕಣ್ಮರೆ

  • ಹಿಂದೂಯೇತರರಿಗೆ ವ್ಯಾಪಾರ ನಿರ್ಬಂಧಿಸುವವರ ವಿರುದ್ಧ ಕ್ರಮ ಇಲ್ಲ: ಮಾಧುಸ್ವಾಮಿ

    ಹಿಂದೂಯೇತರರಿಗೆ ವ್ಯಾಪಾರ ನಿರ್ಬಂಧಿಸುವವರ ವಿರುದ್ಧ ಕ್ರಮ ಇಲ್ಲ: ಮಾಧುಸ್ವಾಮಿ

    ಬೆಂಗಳೂರು: ದೇವಾಲಯದ ವ್ಯಾಪ್ತಿಯಲ್ಲಿ ಹಿಂದೂಯೇತರರ ವ್ಯಾಪಾರ ನಿರ್ಬಂಧಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ‌ಸಿ ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.‌

    ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ಕಾಪು ಸೇರಿ ಹಲವೆಡೆ ಹಿಂದೂ ಜಾತ್ರೆಗಳಲ್ಲಿ ಹಿಂದೂಯೇತರರ ವರ್ತಕರಿಗೆ ಅಂಗಡಿ ತೆರೆಯಲು ಗುತ್ತಿಗೆ ನೀಡದಿರುವ ನಿರ್ಬಂಧ ಹಾಕುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಸದಸ್ಯ ಸಿಎಂ ಇಬ್ರಾಹಿಂ ಒತ್ತಾಯ ಮಾಡಿದರು.‌ ಇದನ್ನೂ ಓದಿ: ನಿಯಮವನ್ನು ಅಧಿಕಾರಿಗಳು ಸೇರಿಸಿರಬಹುದು: ಮಾಜಿ ಮುಜರಾಯಿ ಸಚಿವೆ ಸುಮಾ ವಸಂತ್

    ಇದಕ್ಕೆ ಉತ್ತರ ನೀಡಿದ ಸಚಿವ ಮಾಧುಸ್ವಾಮಿ ರೂಲ್ ಆಫ್ ಲಾ ಮೇಲೆ ಸರ್ಕಾರ ನಡೆಯಲಿದೆ. 2002 ರಲ್ಲಿಯೇ ನಿಮ್ಮ ಸರ್ಕಾರ ಈ ಬಗ್ಗೆ ನಿಯಮ ಮಾಡಿದೆ. ದೇವಾಲಯ ಆಡಳಿತ ಮಂಡಳಿಯವರು ಈ ನಿಯಮ  ಉಲ್ಲೇಖಿಸಿ ಹಿಂದೂಯೇತರರಿಗೆ ಮಳಿಗೆ ತೆರೆಯುವ ಗುತ್ತಿಗೆ ತಡೆದಿದ್ದಾರೆ.‌ ಇದರಲ್ಲಿ ಸರ್ಕಾರದ ಯಾವುದೇ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದರು.

    ನೀವೇ ಮಾಡಿರುವ ಕಾಯ್ದೆಯಂತೆ ನಾವು ದೇವಾಲಯ ಆವರಣದಲ್ಲಿ ಹಿಂದೂಯೇತರರು ಮಳಿಗೆ ಗುತ್ತಿಗೆ ಪಡೆಯುವುದನ್ನು ತಡೆಯುತ್ತಿದ್ದರೆ ನೀವು ಹೇಗೆ ತಡೆಯುತ್ತೀರಿ ಎಂದು ಅಲ್ಲಿನ ಆಡಳಿಯ ಮಂಡಳಿಯವರು ಪ್ರಶ್ನೆ ಮಾಡುತ್ತಿದ್ದಾರೆ. ಆ ಜಾಗ ಬಿಟ್ಟು ಬೇರೆ ಕಡೆ ನಿರ್ಬಂಧ ಮಾಡಿದರೆ ಮಾತ್ರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

  • ಮಾಧುಸ್ವಾಮಿ ನನಗೆ ದೊಡ್ಡ ಭೂತದ ತರ ಕಾಣಿಸಿಬಿಟ್ರು: ಶಾಸಕ ರಂಗನಾಥ್

    ಮಾಧುಸ್ವಾಮಿ ನನಗೆ ದೊಡ್ಡ ಭೂತದ ತರ ಕಾಣಿಸಿಬಿಟ್ರು: ಶಾಸಕ ರಂಗನಾಥ್

    ಬೆಂಗಳೂರು: ತಮ್ಮ ಕ್ಷೇತ್ರದ ಬೇಡಿಕೆ ವಿಚಾರವಾಗಿ ಮಾತನಾಡುತ್ತಿದ್ದ ಕುಣಿಗಲ್ ಶಾಸಕ ರಂಗನಾಥ್, ನಾನು ನಮ್ಮ ಕ್ಷೇತ್ರಕ್ಕೆ ನೀರಿನ ಯೋಜನೆ ಆರಂಭಿಸಬೇಕೆಂದಿದ್ದಾಗ ಸಚಿವ ಮಾಧುಸ್ವಾಮಿ ಅಡ್ಡಗಾಲು ಹಾಕಿದ್ರು, ಹಾಗಾಗಿ ಮಾಧುಸ್ವಾಮಿ ನನಗೆ ಭೂತದ ರೀತಿ ಕಾಣಿಸಿದರು ಎಂದು ವ್ಯಂಗ್ಯವಾಡಿದರು.

    ಸದನದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ನಾನು ಮೂರು ಟಿಎಂಸಿ ನೀರು ತೆಗೆದುಕೊಂಡಿದ್ದೆ. ಮತ್ತೆ ಮೂರು ಟಿಎಂಸಿ ನೀರಿನ ಯೋಜನೆ ಆರಂಭವಾಗಬೇಕಿತ್ತು ಆದ್ರೆ ಸಮ್ಮಿಶ್ರ ಸರ್ಕಾರ ಬಿದ್ದು ಹೋಯ್ತು. ಬಳಿಕ ಬಿಜೆಪಿ ಸರ್ಕಾರ ಬಂತು ಆಗ ಈ ಹಿಂದಿನ ಯೋಜನೆಗೆ ಸಚಿವ ಮಾಧುಸ್ವಾಮಿ ಅಡ್ಡಗಾಲು ಹಾಕಿದ್ರು ಹಾಗಾಗಿ ನನಗೆ ಮಾಧುಸ್ವಾಮಿ ಭೂತದ ತರಹ ಕಂಡ್ರು ಎಂದರು. ಇದನ್ನು ಕೇಳಿಸಿಕೊಂಡ ಮಾಧುಸ್ವಾಮಿ ನಕ್ಕು ಸಮ್ಮನಾದರು. ಇದನ್ನೂ ಓದಿ: ತವರಿಗೆ ನವೀನ್ ಮೃತದೇಹ- ಪ್ರಧಾನಿಗೆ ಕರೆಮಾಡಿ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ

    ಗೂರುರು ಡ್ಯಾಮ್‍ನಿಂದ ಕುಣಿಗಲ್ ನಮ್ಮ ತಾಲೂಕಿಗೆ 200 ಕಿಮೀ. ಇದೆ. 3,000 ಎಮ್‌ಸಿಎಫ್‌ಟಿ ನೀರಿಗಾಗಿ ನಾನು ಬೇಡಿಕೆ ಇಟ್ಟಿದ್ದೇನೆ. ಆದರೆ ಅದನ್ನು ಕೊಡೋಕೆ ಈವರೆಗೂ ಆಗಿಲ್ಲ. ಆದರೆ ಈ ಬಾರಿ 32 ಕೆರೆಗಳನ್ನು ತುಂಬಿಸುವ ಕೆಲಸ ಆಗಿದೆ. ಈ ಹಿಂದಿನ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ ಶಿವಕುಮಾರ್ ಅವರು ಕೊಟ್ಟ ಸಹಕಾರದಿಂದ ಡ್ಯಾಮ್‍ನ್ನು ಪುನರ್‌ಶ್ಚೇತನ ಮಾಡಿದ್ದೇವು. ಈ ಹಿಂದಿನ ಸರ್ಕಾರದ 6ನೇ ಕ್ಯಾಬಿನೆಟ್ ಸಭೆಯಲ್ಲಿ ಈ ಯೋಜನೆಗೆ ಅನುಮತಿ ಸಿಕ್ಕಿತು. ಆ ಬಳಿಕ ದುರದೃಷ್ಟ ಎಂಬಂತೆ ಸರ್ಕಾರ ಬದಲಾವಣೆಯಾಯಿತು. ನಂತರ ಬಂದ ಸರ್ಕಾರದಲ್ಲಿ ಮಾಧುಸ್ವಾಮಿ ಈ ಯೋಜನೆ ಅಡ್ಡಗಾಲು ಹಾಕಿದ್ರು. ನಾನು ನೀರಿಗಾಗಿ ಹೋರಾಟ ಮಾಡುತ್ತ ಬರುತ್ತಿದ್ದೇನೆ ನನಗೆ ಈ ಯೋಜನೆಯನ್ನು ಪಾಸ್ ಮಾಡಿಕೋಡಿ. ಇದರಿಂದ ಬರುವ ಕ್ರೆಡಿಟ್ ಬಿಜೆಪಿ ಸರ್ಕಾರಕ್ಕೆ ಇರಲಿ. ಇದರಿಂದ 2 ಲಕ್ಷ ರೈತರಿಗೆ ಸಹಾಯ ಮಾಡಿದಂತಾಗುತ್ತದೆ ಎಂದರು.