Tag: madhyapradesha

  • ಕಾಂಗ್ರೆಸ್ ಮುಕ್ತ ಭಾರತ ಮಾಡುವಲ್ಲಿ ಬಿಜೆಪಿ ವಿಫಲ – ಆತ್ಮವಿಶ್ವಾಸದಲ್ಲಿ ಸೋಲು ಕಂಡ ಕಮಲ

    ಕಾಂಗ್ರೆಸ್ ಮುಕ್ತ ಭಾರತ ಮಾಡುವಲ್ಲಿ ಬಿಜೆಪಿ ವಿಫಲ – ಆತ್ಮವಿಶ್ವಾಸದಲ್ಲಿ ಸೋಲು ಕಂಡ ಕಮಲ

    ಬೆಂಗಳೂರು: ಬಹಳ ನಿರೀಕ್ಷೆ ಹಾಗೂ ಹಲವಾರು ಕಾರಣಗಳಿಗೆ ಕುತೂಹಲ ಮೂಡಿಸಿದ್ದ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಮೋದಿ ಸರ್ಕಾರಕ್ಕೆ ಮತದಾರ ಸ್ಪಷ್ಟ ಸಂದೇಶ ರವಾನಿಸಿದ್ದಾನೆ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿತವಾಗಿ ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠೆಯಾಗಿ ಮಾರ್ಪಟ್ಟಿದ್ದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಕಾಂಗ್ರೆಸ್‍ಗೆ ಸಿಹಿ ನೀಡಿದ್ದರೆ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ. ಬಿಜೆಪಿ ತಾನು ಅಧಿಕಾರದಲ್ಲಿದ್ದ ಪ್ರಮುಖ ಮೂರು ರಾಜ್ಯಗಳಾದ ರಾಜಸ್ಥಾನ, ಛತ್ತೀಸ್‍ಗಡ ಹಾಗೂ ಮಧ್ಯಪ್ರದೇಶವನ್ನು ಕೈ ಚೆಲ್ಲಿ ಸೋಲನುಭವಿಸಿದೆ.

    ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ಬಿಜೆಪಿ ಸೋಲಲು ಮುಖ್ಯ ಕಾರಣ ಇಲ್ಲಿನ ಬಂಡಾಯ ಎಂದೇ ಹೇಳಲಾಗುತ್ತಿದೆ. ಯುವ ನಾಯಕ ಸಚಿನ್ ಪೈಲಟ್ ಮೇಲಿನ ಮತದಾರರ ಒಲವು ರಾಜಸ್ಥಾನದಲ್ಲಿ ಕಾಂಗ್ರೆಸ್‍ಗೆ ವರ್ಕೌಟ್ ಆಗಿದೆ. ಜೊತೆಗೆ ಈ ರಾಜ್ಯಗಳಲ್ಲಿ ಬಿಎಸ್ ಪಿ ಸಹ ಪ್ರಬಲವಾಗಿದ್ದು ಬಿಜೆಪಿಗೆ ಹೊಡೆತ ನೀಡಿದೆ. ಇನ್ನು ತೆಲಂಗಾಣ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ಬಿಜೆಪಿ ಗೆಲುವಿನ ನಿರೀಕ್ಷೆ ಹೊಂದಿರದಿದ್ದರೂ ಒಂದಷ್ಟು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳುವ ಇರಾದೆ ಹೊಂದಿತ್ತು. ಆದರೆ ಆಯಾ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ಪ್ರಬಲ ಪೈಪೋಟಿ ಬಿಜೆಪಿಯನ್ನು ಶೋಚನೀಯ ಸೋಲಿಗೆ ತಳ್ಳಿದೆ.

    ಬಿಜೆಪಿ ಅತಿಯಾದ ಆತ್ಮವಿಶ್ವಾಸವೂ ಈ ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಬೇರೆ ರಾಜ್ಯಗಳ ಮತದಾರರನ್ನು ಬಿಜೆಪಿಯತ್ತ ಸೆಳೆಯುವುದು ಫಲ ಕೊಟ್ಟಿಲ್ಲ.

    ಬಿಜೆಪಿ ಸೋಲಿಗೆ ಕಾರಣ..?
    * ರಫೇಲ್ ಡೀಲ್‍ನ ಕಾಂಗ್ರೆಸ್ ಆರೋಪಕ್ಕೆ ಸರಿಯಾದ ಉತ್ತರ ಕೊಡದಿರುವುದು
    * ರಾಹುಲ್ ಆಕ್ರಮಣಕಾರಿ ಪ್ರಚಾರ ಶೈಲಿ ಎದುರಿಸಲು ಮೋದಿ ವಿಫಲ
    * ಕಾಂಗ್ರೆಸ್‍ನ ಮೃದು ಹಿಂದುತ್ವಕ್ಕೆ ಪೆಟ್ಟು ಕೊಡಲು ಹೋಗಿ ಕೈ ಸುಟ್ಟುಕೊಂಡ್ರಾ..?
    * ನೋಟ್ ಬ್ಯಾನ್ ವೈಫಲ್ಯ, ನಿರಂತರ ಏರಿಕೆಯಾದ ಪೆಟ್ರೋಲ್ ಡೀಸೆಲ್ ದರ
    * ಸಿಬಿಐ-ಆರ್‍ಬಿಐ ವಿವಾದ, ರೂಪಾಯಿ ಮೌಲ್ಯದಲ್ಲಾದ ನಿರಂತರ ಇಳಿಕೆ
    * ರಾಹುಲ್ ಗಾಂಧಿ ಅವರನ್ನ ನಿರ್ಲಕ್ಷ್ಯ ಮಾಡಿದ್ದು

    ರಫೇಲ್ ಡೀಲ್‍ನ ಕಾಂಗ್ರೆಸ್ ಆರೋಪಕ್ಕೆ ಸರಿಯಾದ ಉತ್ತರ ಕೊಡದಿರುವುದು. ರಾಹುಲ್ ಗಾಂಧಿ ಆಕ್ರಮಣಾಕಾರಿ ಪ್ರಚಾರ ಶೈಲಿಯನ್ನ ಎದುರಿಸಲು ಮೋದಿ ವಿಫಲರಾದ್ರಾ ಎನ್ನುವ ಚರ್ಚೆಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‍ನ ಮೃದು ಹಿಂದುತ್ವಕ್ಕೆ ಪೆಟ್ಟು ಕೊಡಲು ಹೋಗಿ ಈ ರೀತಿ ಆಯ್ತಾ ಅನ್ನೋ ಅನುಮಾನಗಳು ಹುಟ್ಟಿಕೊಂಡಿವೆ. ಅತಿಯಾದ ಆತ್ಮವಿಶ್ವಾಸ, ನೋಟ್‍ಬ್ಯಾನ್ ವೈಫಲ್ಯ, ನಿರಂತರ ಏರಿಕೆಯಾದ ಪೆಟ್ರೋಲ್ ಡೀಸೆಲ್ ದರ, ಸಿಬಿಐ – ಆರ್ ಬಿಐ ವಿವಾದ, ರೂಪಾಯಿ ಮೌಲ್ಯದಲ್ಲಿ ಆದ ನಿರಂತರ ಇಳಿಕೆ ಇವೆಲ್ಲ ಕೇಂದ್ರ ಸರ್ಕಾರಕ್ಕೆ ಹೊಡೆತ ನೀಡಿರುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ರಾಹುಲ್ ಗಾಂಧಿ ಅವರನ್ನ ಅಂಡರ್ ಎಸ್ಟಿಮೇಟ್ ಮಾಡಿದ್ದು, ಅವರ ಸವಾಲುಗಳಿಗೆ ಸರಿಯಾದ ಪ್ರತಿ ಸವಾಲು ಕೊಡದೇ ಇದ್ದದ್ದು, ದೇಶದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ಬಿಜೆಪಿಗೆ ಮುಳುವಾದವು ಎಂಬ ಮಾತುಗಳು ಕೇಳಿ ಬರುತ್ತಿವೆ.

    ಒಟ್ಟಿನಲ್ಲಿ ಲೋಕಸಭಾ ಚುನಾವಣೆಯ ಸಮಿಫೈನಲ್ ಎಂತಲೇ ಬಿಂಬಿತವಾಗಿದ್ದ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ಮೋದಿಗೆ ದೊಡ್ಡ ಆಘಾತ ನೀಡಿದೆ. ಯಾರೊಬ್ಬರನ್ನ ಕಡೆಗಣಿಸಬೇಕಾದರೆ ಯೋಚಿಸಬೇಕಾದ ಅನಿವಾರ್ಯತೆಯನ್ನ ಪಂಚ ರಾಜ್ಯಗಳ ಚುನಾವಣೆ ಕಲಿಸಿದೆ. ದೇಶಾದ್ಯಂತ ಹೆಚ್ಚುತ್ತಿರುವ ಜನರ ಅಸಹನೆಯನ್ನ ಮೋದಿ ಪರಿಗಣಿಸಬೇಕಿದೆ. ಚಾಣಕ್ಯನ ನೀತಿ ಕೈಕೊಡುತ್ತಿರುವುದು ಮೋದಿ ಅವರನ್ನ ಚಿಂತೆಗೆ ಹಚ್ಚಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬಹುತೇಕ ಖಚಿತ

    ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬಹುತೇಕ ಖಚಿತ

    – ಸ್ವಂತ ಬಲದ ರಚನೆಗೆ ಬೇಕಿದೆ 1 ಕ್ಷೇತ್ರ
    – ಬಿಎಸ್‍ಪಿ ಬೆಂಬಲ ಸಾಧ್ಯತೆ

    ಭೋಪಾಲ್: ಮಧ್ಯಪ್ರದೇಶದಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಕಾಂಗ್ರೆಸ್ ಸರ್ಕಾರ ರಚನೆ ಬಹುತೇಕ ಖಚಿತವಾಗಿದೆ.

    ಕಳೆದ 23 ಗಂಟೆಗಳಿಂದ ನಡೆಯುತ್ತಿರುವ ಹಾವು-ಏಣಿ ಆಟದಲ್ಲಿ ಕಾಂಗ್ರೆಸ್ 115 ಸ್ಥಾನಗಳನ್ನು ಪಡೆದಿದ್ದು, ಸ್ವಂತ ಬಲದ ಮೇಲೆ ಸರ್ಕಾರ ರಚಿಸಲು 1 ಸ್ಥಾನದ ಕೊರತೆ ಇದೆ. ಬಿಜೆಪಿ 108 ಸ್ಥಾನ ಗಳಿಸಿ ಕಾಂಗ್ರೆಸ್ ಬಿಗ್ ಫೈಟ್ ನೀಡಿದೆ. ಬಿಎಸ್‍ಪಿ ಬೆಂಬಲ ನೀಡಿದರೆ ಕಾಂಗ್ರೆಸ್ ಅಧಿಕಾರ ರಚನೆ ಮಾಡುವದರಲ್ಲಿ ಸಂಶಯವಿಲ್ಲ. ಮಂಗಳವಾರ ರಾತ್ರಿಯೇ ರಾಜ್ಯಪಾಲರ ಭೇಟಿಗೆ ಕಾಂಗ್ರೆಸ್ ಅವಕಾಶ ಕೇಳಿತ್ತು. ಆದ್ರೆ ಮತ ಎಣಿಕೆ ಮುಗಿಯೋವರೆಗೂ ಯಾರಿಗೂ ಅವಕಾಶವಿಲ್ಲ ಎಂದು ರಾಜ್ಯಪಾಲರು ಸ್ಪಷ್ಟನೆ ನೀಡಿದ್ರು.

    ಒಟ್ಟಿನಲ್ಲಿ ಕ್ಷಣಕ್ಷಣಕ್ಕೂ ಬದಲಾದ ಫಲಿತಾಂಶ, ದೇಶದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಕಾಣದ ಪೈಪೋಟಿ, ನಿರೀಕ್ಷಿಸದ ಅಚ್ಚರಿ ಬೆಳವಣಿಗೆಗೆ ಮಧ್ಯಪ್ರದೇಶ ಮತ ಎಣಿಕೆ ಸಾಕ್ಷಿಯಾಗಿದೆ. ಸದ್ಯ ಆಪರೇಷನ್ ಕಮಲ ಸದ್ದು ಕೇಳಿಬಂದಿದ್ದು, ಕೇಂದ್ರ ಸಚಿವ ತೋಮರ್ ಭೋಪಾಲ್‍ನಲ್ಲಿ ಬಿಡಾರ ಹೂಡಿದ್ದಾರೆ. ಸರ್ಕಾರ ರಚನೆಗೆ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

    ಇದೇ ಮೊದಲ ಬಾರಿಗೆ ಮಧ್ಯಪ್ರದೇಶದಲ್ಲಿ ಎಲ್ಲ 230 ಕ್ಷೇತ್ರಗಳಲ್ಲಿ ಇವಿಎಂನಲ್ಲಿ ಬಿದ್ದ ಮತವನ್ನು ಖಾತರಿಗೊಳಿಸಲು ಬಳಸಲಾಗಿದ್ದ ವಿವಿಪ್ಯಾಟ್(ವೋಟರ್ ವೆರಿಫೈಡ್ ವೋಟರ್ ಟ್ರಯಲ್) ಬಳಕೆ ಮಾಡಲಾಗಿದೆ. ಹೀಗಾಗಿ ಪ್ರತಿ ಸುತ್ತಿನ ಎಣಿಕೆ ಮಾಡಿದ ಬಳಿಕ ವಿವಿಪ್ಯಾಟ್ ಪರಿಶೀಲನೆ ಮಾಡಲಾಗುತ್ತದೆ. ಪ್ರತಿ ಸುತ್ತಿನ ಎಣಿಕೆಯಾದ ಬಳಿಕ ಏಜೆಂಟರ ಸಹಿಯನ್ನು ಪಡೆದು ಮುಂದಿನ ಸುತ್ತಿನ ಎಣಿಕೆ ಮಾಡಲಾಗುತ್ತದೆ. ಈ ಸಮಯದಲ್ಲಿ ಆಕ್ಷೇಪಣೆಗಳು ಬಂದರೆ ಮತ್ತೊಮ್ಮೆ ಮತ ಎಣಿಕೆ ಮಾಡಲಾಗುತ್ತದೆ. ಹೀಗಾಗಿ ಫಲಿತಾಂಶ ಮಧ್ಯರಾತ್ರಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು.

    ಮತ ಎಣಿಕೆ ವಿಳಂಬಕ್ಕೆ ಕಾರಣ:
    ಆಯಾ ಸುತ್ತಿನ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಪ್ರತಿ ಅಭ್ಯರ್ಥಿಯಿಂದ ಮತಗಳ ಪ್ರಮಾಣವನ್ನು ಲಿಖಿತವಾಗಿ ದೃಢೀಕರಿಸುವ ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಿದ್ದರಿಂದ ಮಧ್ಯಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ವಿಳಂಬವಾಯಿತು. ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆದಿರುವ ಮತ ಎಣಿಕೆ ಪ್ರಕ್ರಿಯೆಯಲ್ಲಿ ಪ್ರತಿ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು, ಪ್ರತಿ ಸುತ್ತಿನಲ್ಲಿ ತಾವು ಪಡೆದ ಮತಗಳನ್ನು ದೃಢೀಕರಿಸುವ ಸಂಬಂಧ ಅರ್ಜಿ ನಮೂನೆ ಭರ್ತಿ ಮಾಡಿ, ಸಹಿ ಮಾಡಿ ಕೊಡಬೇಕಿತ್ತು. ಈ ಪ್ರಕ್ರಿಯೆಯಿಂದ ಫಲಿತಾಂಶ ವಿಳಂಭವಾಯ್ತು. ಅಲ್ಲದೆ, ಮಧ್ಯಪ್ರದೇಶದ 230 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆ ಪೈಕಿ ಶೇ.15 ರಷ್ಟು ಮತಗಟ್ಟೆಗಳಲ್ಲಿ ಬಳಸಿರುವ ಇವಿಎಂ ಯಂತ್ರಗಳೊಂದಿಗೆ ಅಳವಡಿಸಿದ್ದ ವಿವಿ ಪ್ಯಾಟ್‍ಗಳ ಮತಗಳನ್ನು ತಾಳೆ ಹಾಕುವುದನ್ನು ಕಡ್ಡಾಯಗೊಳಿಸಿದ್ದು ಮತ ಎಣಿಕೆಯ ವಿಳಂಬಕ್ಕೆ ಮತ್ತೊಂದು ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಉತ್ತರಾಖಂಡ್ ರಕ್ಷಣಾ ಕಾರ್ಯಚರಣೆ ಸ್ಫೂರ್ತಿ -ಚಹಾ ಮಾರುವವನ ಪುತ್ರಿ ಭಾರತೀಯ ವಾಯುಸೇನೆಗೆ ಆಯ್ಕೆ!

    ಉತ್ತರಾಖಂಡ್ ರಕ್ಷಣಾ ಕಾರ್ಯಚರಣೆ ಸ್ಫೂರ್ತಿ -ಚಹಾ ಮಾರುವವನ ಪುತ್ರಿ ಭಾರತೀಯ ವಾಯುಸೇನೆಗೆ ಆಯ್ಕೆ!

    ಭೋಪಾಲ್: ಭಾರತೀಯ ವಾಯುಸೇನೆ ನಡೆಸುವ ಹಾರಾಟ ವಿಭಾಗಕ್ಕೆ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಮಧ್ಯಪ್ರದೇಶದ ಮಿಮುಚ್ ಜಿಲ್ಲೆಯಿಂದ ಚಹಾ ಮಾರಾಟ ಮಾಡುವವನ ಪುತ್ರಿ ನೇಮಕಗೊಂಡು ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.

    ಅಂಚಲ್ ಗಂಗ್ವಾಲ್(24) ಆಯ್ಕೆಗೊಂಡ ಯುವತಿ. ಮೂಲತಃ ಮಿಮುಚ್ ಜಿಲ್ಲೆಯವರಾದ ಅಂಚಲ್ ವಾಯುಸೇನೆ ನೇಮಕಾತಿ ಪ್ರವೇಶ ಪರೀಕ್ಷೆಯಲ್ಲಿ ಮಧ್ಯಪ್ರದೇಶ ರಾಜ್ಯದಿಂದ ಆಯ್ಕೆಯಾದ ಒಬ್ಬಳೆ ಒಬ್ಬ ಯುವತಿ. ಇವರ ತಂದೆ ಸುರೇಶ್ ಗಂಗ್ವಾಲ್ ಮಿಮುಚ್‍ನ ಬಸ್ ನಿಲ್ದಾಣದ ಬಳಿ ಚಹಾ ಅಂಗಡಿ ನಡೆಸುತ್ತಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಂಚಲ್, ನಾನು 12ನೇ ತರಗತಿಯಲ್ಲಿ ಓದುತ್ತಿರುವಾಗ 2013ರ ಉತ್ತರಾಖಂಡ್‍ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಭಾರತೀಯ ರಕ್ಷಣಾ ಪಡೆಗಳು ನಡೆಸಿದ ರಕ್ಷಣಾ ಕಾರ್ಯಚರಣೆಯಿಂದ ಪ್ರೇರೇಪಣೆಗೊಂಡು ಅಂದೇ ಭಾರತೀಯ ಸೇನೆಗೆ ಸೇರಬೇಕೆಂದು ನಿರ್ಧಾರ ಮಾಡಿಕೊಂಡಿದ್ದೆ. ಆದರೆ ನನ್ನ ಕುಟುಂಬ ನನ್ನನ್ನು ಓದಿಸುವಷ್ಟು ಆರ್ಥಿಕ ಸ್ಥಿತಿಯಲ್ಲಿರಲಿಲ್ಲ. ಹೀಗಾಗಿ ನಾನು ಭಾರತೀಯ ವಾಯುಸೇನೆಯ ಪ್ರವೇಶ ಪರೀಕ್ಷೆಯನ್ನು ತೆಗೆದುಕೊಂಡು ಆಯ್ಕೆಯಾಗಿದ್ದೇನೆ ಎಂದು ತಿಳಿಸಿದರು.

    ಭಾರತೀಯ ವಾಯುಸೇನಾ ಪರೀಕ್ಷೆಯು ಅಷ್ಟು ಸುಲಭವಾಗಿರಲಿಲ್ಲ. ನಾನು ಹಲವು ವರ್ಷಗಳಿಂದ 5 ಭಾರೀ ಪರೀಕ್ಷೆ ಬರೆದಿದ್ದರೂ ಆಯ್ಕೆಗೊಂಡಿರಲಿಲ್ಲ. ಈ ವರ್ಷ ಬರೆದ ಪರೀಕ್ಷೆಯಲ್ಲಿ ಜೂನ್ 6ರ ಫಲಿತಾಂಶದಲ್ಲಿ ತೇರ್ಗಡೆಯಾಗಿದ್ದೇನೆ ಎಂದು ಸಂತಸ ಹಂಚಿಕೊಂಡಿದ್ದಾರೆ.

    ಮಗಳ ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿದ ತಂದೆ, ನಾನು ಬಸ್ ನಿಲ್ದಾಣದ ಹತ್ತಿರ ಚಹಾ ವ್ಯಾಪಾರ ಮಾಡುತ್ತಿದ್ದು, ಎಲ್ಲರೂ ನಾಮದೇವ್ ಟೀ ಸ್ಟಾಲ್ ಎಂದೇ ಗುರುತಿಸುತ್ತಾರೆ. ಮಗಳ ಈ ಸಾಧನೆಗೆ ಬರುವ ಗ್ರಾಹಕರು ಅಭಿನಂದನೆ ಸಲ್ಲಿಸಿ ಹೋಗುತ್ತಿದ್ದಾರೆ ಎಂದು ಹೇಳಿದ್ದಾರೆ.

    ನನ್ನ ಆರ್ಥಿಕ ಸಂಕಷ್ಟದ ನಡುವೆಯೂ ಮೂರು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿದ್ದೇನೆ. ಮಗ ಎಂಜಿನಿಯರಿಂಗ್ ಮಾಡುತ್ತಿದ್ದು, ಮಗಳು 12 ನೇ ತರಗತಿ ಓದುತ್ತಿದ್ದಾಳೆ. ಇಬ್ಬರಿಗೂ ಕೋಚಿಂಗ್ ನೀಡಲು ಸಾಲ ಮಾಡಿ ಸೇರಿಸಿದ್ದೆ ಎಂದು ಈ ವೇಳೆ ಹೇಳಿಕೊಂಡರು.

    ದೇಶಾದ್ಯಂತ ಒಟ್ಟು 6 ಲಕ್ಷ ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದು,  ಕೇವಲ 22 ಮಂದಿ ಆಯ್ಕೆಗೊಂಡಿದ್ದಾರೆ ಇದರಲ್ಲಿ ಅಂಚಲ್‍ ಕೂಡ ಒಬ್ಬರಾಗಿದ್ದಾರೆ. ವಾಯುಸೇನಾ ಪಡೆಯು ಅಂಚಲ್‍ಗೆ ಜೂನ್ 30ರೊಳಗಾಗಿ ಹೈದರಾಬಾದ್‍ನ ದುಂಡಿಗಲ್ ಬಳಿ ಇರುವ ಭಾರತೀಯ ವಾಯುಸೇನಾ ಅಕಾಡೆಮಿಗೆ ಸೇರುವಂತೆ ಸೂಚಿಸಿದೆ.

  • ಭಾನುವಾರ ಅಣ್ಣ, ತಮ್ಮನಿಂದ ಗ್ಯಾಂಗ್ ರೇಪ್- ಸೋಮವಾರ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡ ಸಂತ್ರಸ್ತೆ

    ಭಾನುವಾರ ಅಣ್ಣ, ತಮ್ಮನಿಂದ ಗ್ಯಾಂಗ್ ರೇಪ್- ಸೋಮವಾರ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡ ಸಂತ್ರಸ್ತೆ

    ಭೋಪಾಲ್: ಮಕರ ಸಂಕ್ರಾಂತಿ ದಿನವೇ 16 ವರ್ಷದ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಮಧ್ಯಪ್ರದೇಶದ ಮಜ್ಗಾವಾ ಪ್ರದೇಶದ ಕಾಥಾ ಗ್ರಾಮದಲ್ಲಿ ಸೋಮವಾರ ನಡೆದಿದ್ದು, ಈಕೆಯ ಮೇಲೇ ಅದೇ ಪ್ರದೇಶದ ಅಣ್ಣ-ತಮ್ಮಂದಿರಿಂದ ಭಾನುವಾರ ಅತ್ಯಾಚಾರ ನಡೆದಿತ್ತು ಎಂಬುದಾಗಿ ವರದಿಯಾಗಿದೆ.

    ಮಕರ ಸಂಕ್ರಾಂತಿ ಹಬ್ಬ ಆಚರಿಸಲು ಬಾಲಕಿಯ ತಾಯಿ ಸಂಬಂಧಿಕರ ಮನೆಗೆ ತೆರಳಿದ್ದರು. ತಂದೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದುದರಿಂದ ಅವರೂ ಕೆಲಸಕ್ಕೆ ಹೋಗಿದ್ದಾರೆ. ಈ ಸಮಯದಲ್ಲಿ ಬಾಲಕಿ ಮೈ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಈ ಘಟನೆ ನಡೆಯುತ್ತಿದ್ದಂತೆಯೇ ಆಕೆಯ ಸಹೋದರ ಕಾಪಾಡಲು ಬಂದರೂ ಪ್ರಯೋಜನವಾಗಿರಲಿಲ್ಲ ಅಂತ ಅಲ್ಲಿನ ಎಸ್ ಪಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

    ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ತನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾಗ ಆಕೆಯನ್ನು ರಕ್ಷಿಸಲು ಮಗ ಹೋಗಿದ್ದಾನೆ. ಆದ್ರೆ ಮಗಳು ಸಾವನ್ನಪ್ಪಿದ್ದು, ಮಗನಿಗೆ ಗಾಯಗಳಾಗಿವೆ ಅಂತ ಹೇಳಿದ್ದಾರೆ.

    ಇನ್ನು ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದ್ದು, ಇನ್ನೋರ್ವ ತಲೆಮರೆಸಿಕೊಂಡಿದ್ದು, ಆತನ ಹುಡುಕಾಟಕ್ಕಾಗಿ ಪೊಲಿಸರು ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆ, ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಅಡಿ ಪ್ರಕರಣ ದಾಖಲಿಸಲಾಗಿದೆ.

  • ಶೌಚಾಲಯವನ್ನೇ ಅಡುಗೆ ಕೋಣೆಯನ್ನಾಗಿ ಮಾಡಿದ್ರು!

    ಶೌಚಾಲಯವನ್ನೇ ಅಡುಗೆ ಕೋಣೆಯನ್ನಾಗಿ ಮಾಡಿದ್ರು!

    ಭೋಪಾಲ್: ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಕುಟುಂಬವೊಂದು ಶೌಚಾಲಯವನ್ನೇ ಅಡುಗೆ ಕೋಣೆಯನ್ನಾಗಿ ಮಾಡಿರುವ ಘಟನೆಯೊಂದು ನಡೆದಿದೆ.

    ಸ್ವಚ್ಛ ಭಾರತ ಅಭಿಯಾನ ನಡೆಸುತ್ತಿದ್ದ ತನಿಖಾಧಿಕಾರಿಗಳ ತಂಡವೊಂದು ಶುಕ್ರವಾರ ಶಿವಪುರ ಜಿಲ್ಲೆಯ ಬಮೊರ್ಖಾದ್ ಪಂಚಾಯತ್ ವ್ಯಾಪ್ತಿಯಲ್ಲಿ ಯೋಜನೆ ಅನುಷ್ಠಾನ ಮಾಡಲು ಬಂದಿದ್ದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.

    ಜನಪದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಂದ್ರ ಜೈನ್ ಹಾಗೂ ಇತರ ಅಧಿಕಾರಿಗಳು ಕುಂಡೈ ಗ್ರಾಮದ ಜನರು ಶೌಚಾಲಯ ಬಳಸುತ್ತಾರೋ ಇಲ್ಲವೋ ಎಂಬುವುದನ್ನು ತಪಾಸಣೆ ನಡೆಸಲೆಂದು ಮನೆಮನೆಗೆ ತೆರಳಿದ್ದರು. ಈ ವೇಳೆ ಮನೆಯೊಂದರ ಶೌಚಾಲಯದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಅಧಿಕಾರಿಗಳು ಆ ಅಲ್ಲಿಗೆ ಭೇಟಿಯಿತ್ತಾಗ ಆ ಕುಟುಂಬ ಶೌಚಾಲಯವನ್ನು ಅಡುಗೆ ಕೋಣೆಯನ್ನಾಗಿ ಪರಿವರ್ತಿಸಿರುವುದು ಕಂಡುಬಂದಿದೆ.

    ಶೌಚಾಲಯದ ಒಳಗಿನಿಂದ ಮಹಿಳೆಯೊಬ್ಬರು ಅಡುಗೆ ಮಾಡುತ್ತಿರುವ ದೃಶ್ಯ ಕಂಡು ಅಧಿಕಾರಿಗಳೇ ದಂಗಾಗಿದ್ದಾರೆ. ಟಾಯ್ಲೆಟ್ ಬೇಸಿನ್ ನನ್ನು ಕಾರ್ಡ್ ಬೋರ್ಡನ್ನಾಗಿ ಮಾಡಿ ಅದರಲ್ಲಿ ಗ್ಯಾಸ್ ಸ್ಟೌವ್ ಇಟ್ಟಿದ್ದರು. ಕೆಲ ಮಹಿಳೆಯರು ಚಪಾತಿ ಮಾಡುತ್ತಿದ್ದರು. ಈ ವೇಳೆ ಅಧಿಕಾರಿಗಳು ಯಾಕೆ ಶೌಚಾಲಯದೊಳಗೆ ಅಡುಗೆ ಮಾಡುತ್ತೀರಾ ಎಂಬುವುದಾಗಿ ಪ್ರಶ್ನಿಸಿದ್ದಾರೆ. ಈ ವೇಳೆ ಮಹಿಳೆ, ಜೋರಾಗಿ ಮಳೆ ಬರುತ್ತಿರುವುದರಿಂದ ಹೊರಗಡೆ ಅಡುಗೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಟಾಯ್ಲೆಟ್ ನೊಳಗೆ ಮಾಡಲು ನಿರ್ಧರಿಸಿದೆ ಅಂತ ಉತ್ತರಿಸಿದ್ದಾರೆ.

    ಶೌಚಾಲಯ ನಿರ್ಮಾಣಕ್ಕೆಂದು ಸ್ವಚ್ಛ ಭಾರತ್ ಅಭಿಯಾನದಡಿ ಗ್ರಾಮದ ಪ್ರತಿ ಕುಟುಂಬ 12,000ರೂ. ಸಬ್ಸಿಡಿ ನೀಡಲಾಗಿತ್ತು ಅಂತ ಅಧಿಕಾರಿಗಳು ಹೇಳಿದ್ದಾರೆ. ಈ ಕುಟುಂಬದ ಮನೆಯನ್ನು ಪರಿಶೀಲಿಸಿದಾಗ ಮನೆ ಸೂರುತ್ತಿರುವುದು ಕಂಡುಬಂದಿಲ್ಲ. ಹೀಗಾಗಿ ಇದು ಅವರಿಗೆ ಅಭ್ಯಾಸವಾಗಿದೆ. ಇವರ ಈ ಅಭ್ಯಾಸ ಮುಂದುವರೆಸಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿ ತೆರಳಿದ್ದಾರೆ.

    ಕಳೆದ 7 ತಿಂಗಳ ಹಿಂದೆಯಷ್ಟೇ ಇದೇ ಜಿಲ್ಲೆಯ ಗ್ರಾಮವೊಂದರಲ್ಲಿ ಮಹಿಳೆಯೊಬ್ಬರು ಶೌಚಾಲಯದಲ್ಲಿ ಪುಟ್ಟ ಅಂಗಡಿಯೊಂದನ್ನು ನಡೆಸುತ್ತಿರುವುದು ಕೂಡ ಬೆಳಕಿಗೆ ಬಂದಿತ್ತು.

  • ರೈಲ್ವೆ ಹಳಿಯ ಬಳಿ ಮನಕಲಕುವ ಘಟನೆ: ಮೃತಪಟ್ಟ ಅಮ್ಮನ ಎದೆಹಾಲು ಕುಡಿಯಲು ಯತ್ನಿಸಿತು ಕಂದಮ್ಮ

    ರೈಲ್ವೆ ಹಳಿಯ ಬಳಿ ಮನಕಲಕುವ ಘಟನೆ: ಮೃತಪಟ್ಟ ಅಮ್ಮನ ಎದೆಹಾಲು ಕುಡಿಯಲು ಯತ್ನಿಸಿತು ಕಂದಮ್ಮ

    ಭೋಪಾಲ್: ತನ್ನ ಅಮ್ಮ ಮೃತಪಟ್ಟಿದ್ದಾಳೆ ಅಂತಾ ತಿಳಿಯದ ಪುಟ್ಟ ಮಗುವೊಂದು ತಾಯಿಯ ಎದೆ ಹಾಲು ಕುಡಿಯಲು ಯತ್ನಿಸುತ್ತಿದ್ದ ಮನಕುಲಕುವ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.

    ಘಟನೆಯ ಫೋಟೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಫೋಟೋ ನೋಡಿದರೆ ಎಂಥವರ ಕಣ್ಣಲ್ಲೂ ನೀರು ತರಿಸುವಂತಿದೆ.

    ಏನಿದು ಘಟನೆ?: ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಿಂದ ಸುಮಾರು 250 ಕಿ.ಮೀ ದೂರದ ದಮೋಹ್ ಎಂಬಲ್ಲಿ ರೈಲ್ವೇ ಹಳಿ ಬಳಿ ಮಹಿಳೆಯ ಶವ ಪತ್ತೆಯಾಗಿದೆ. ಶವದ ಪಕ್ಕದಲ್ಲೇ ಒಂದು ವರ್ಷದ ಪಟ್ಟ ಮಗುವೊಂದು ಕುಳಿತು ತನ್ನ ಅಮ್ಮನ ಎದೆ ಹಾಲು ಕುಡಿಯಲು ಪ್ರಯತ್ನಿಸುತ್ತಿತ್ತು. ತನ್ನ ತಾಯಿ ಕೊಟ್ಟಿರಬಹುದಾದ ಬಿಸ್ಕೆಟ್‍ವೊಂದನ್ನ ಕೂಡ ಮಗು ತಿನ್ನುತ್ತಿತ್ತು. ಇದನ್ನ ನೋಡಿದ ಕೆಲ ಪ್ರತ್ಯಕ್ಷದರ್ಶಿಗಳು ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

    ರೈಲಿನಿಂದ ಕೆಳಗೆ ಬಿದ್ದು ಅಥವಾ ರೈಲು ಡಿಕ್ಕಿಯಾಗಿ ಮಹಿಳೆ ಸಾವನಪ್ಪಿರಬಹುದು ಅಂತಾ ಪೊಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಹಿಳೆಯ ತಲೆಯಲ್ಲಿ ಗಾಯದ ಗುರುತುಗಳು ಪತ್ತೆಯಾಗಿದೆ. ತಾಯಿ ಮಗುವನ್ನು ಹಿಡಿದುಕೊಂಡಿದ್ದರಿಂದ ಮಗು ಬಚಾವಾಗಿರಬಹುದು ಎಂದು ಊಹಿಸಲಾಗಿದೆ. ಅಧಿಕಾರಿಗಳು ಹೇಳೋ ಪ್ರಕಾರ ರೈಲು ಡಿಕ್ಕಿಯಾದ ನಂತರ ತಾಯಿಗೆ ಕೆಲ ಕಾಲ ಪ್ರಜ್ಞೆ ಇದ್ದು, ತನ್ನ ಮಗುವಿಗೆ ಹಾಲುಣಿಸುವ ಪ್ರಯತ್ನ ಮಾಡಿರಬೇಕು ಎನ್ನಲಾಗಿದೆ.

    ಪೊಲೀಸರು ಹಾಗೂ ಅಧಿಕಾರಿಗಳು ತಾಯಿಯ ಶವವನ್ನ ಅಲ್ಲಿಂದ ತೆಗೆದುಕೊಂಡು ಹೋದಾಗ ಮಗುವಿನ ಅಳು ಕಂಡು ಮಮ್ಮಲ ಮರುಗಿದ್ದಾರೆ.

    ಮತ್ತೊಂದು ದುರಂತ ಅಂದ್ರೆ ಮಗು ಮತ್ತು ಮೃತ ತಾಯಿಯನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೆ ಅಲ್ಲಿ ಮಗುವನ್ನು ಸೇರಿಸಿಕೊಳ್ಳಲು ಕೇವಲ 10 ರೂ. ಕೊಟ್ಟು ಅಡ್ಮಿಶನ್ ಮಾಡಿಕೊಳ್ಳಲು ಯಾರೊಬ್ಬರೂ ಮುಂದೆ ಬಂದಿಲ್ಲ. ನಂತರ ವಾರ್ಡ್ ಬಾಯ್ ಹಣ ಕೊಟ್ಟಿದ್ದರಿಂದ ಮಗುವನ್ನ ಆಸ್ಪತ್ರೆಗೆ ಸೇರಿಸಿಕೊಳ್ಳಲಾಗಿದೆ. ಸದ್ಯ ಮಗು ಮಕ್ಕಳ ರಕ್ಷಣಾ ಕೇಂದ್ರದಲ್ಲಿದ್ದು, ಮಗುವಿನ ಕುಟುಂಬಸ್ಥರು ಅಥವಾ ಸಂಬಂಧಿಕರಾದ ಯಾರಾದ್ರೂ ಬರಬಹುದು ಎಂದು ಅಧಿಕಾರಿಗಳು ಎದುರುನೋಡುತ್ತಿದ್ದಾರೆ.

    ಮಹಿಳೆಯನ್ನ ಗುರುತಿಸಲು ನಡೆಸಿದ ಪ್ರಯತ್ನದಲ್ಲಿ ಪೊಲೀಸರಿಗೆ ಮಹಿಳೆಯ ಪಕ್ಕದಲ್ಲಿ ಬಿದ್ದಿದ್ದ ಪರ್ಸ್‍ವೊಂದು ಸಿಕ್ಕಿದೆ.