Tag: madras high court

  • ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವನೆ – ಇದು ಪಿಕ್ನಿಕ್‌ ಸ್ಪಾಟ್‌ ಅಲ್ಲ ಎಂದು ಕೋರ್ಟ್‌ ಗರಂ

    ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವನೆ – ಇದು ಪಿಕ್ನಿಕ್‌ ಸ್ಪಾಟ್‌ ಅಲ್ಲ ಎಂದು ಕೋರ್ಟ್‌ ಗರಂ

    ಚೆನ್ನೈ: ಹಿಂದೂ ದೇವಾಲಯಗಳಿಗೆ (Hindu Temple) ಹಿಂದೂಯೇತರು ಪ್ರವೇಶಿಸಿ ಶಿಷ್ಟಾಚಾರ ಉಲ್ಲಂಘಿಸಿರುವ ಬಗ್ಗೆ ಮದ್ರಾಸ್‌ ಹೈಕೋರ್ಟ್‌ (Madras High Court) ಕಿಡಿಕಾರಿದೆ. ಇದು ಪಿಕ್ನಿಕ್‌ ಸ್ಪಾಟ್‌ ಅಲ್ಲ ಎಂದು ಎಚ್ಚರಿಸಿದೆ.

    ದೇಗುಲಗಳಲ್ಲಿರುವ ‘ಕೋಡಿಮರಂ’ (ಧ್ವಜಸ್ತಂಭ) ಪ್ರದೇಶದಿಂದ ಆಚೆಗೆ ಹಿಂದೂಯೇತರರಿಗೆ ಅನುಮತಿ ಇಲ್ಲ ಎಂಬ ಬೋರ್ಡ್‌ಗಳನ್ನು ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ ತಮಿಳುನಾಡು ಧಾರ್ಮಿಕ ದತ್ತಿ ಇಲಾಖೆಗೆ ನಿರ್ದೇಶನ ನೀಡಿದೆ. ಹಿಂದೂಗಳು ಕೂಡ ವೃತ್ತಿ ಮತ್ತು ಧಾರ್ಮಿಕ ಅಭ್ಯಾಸ ಮಾಡುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದೆ. ಇದನ್ನೂ ಓದಿ: ಬೆಂಗಳೂರಿನ ಪಿಜಿಗಳಿಗೆ ಪೊಲೀಸ್ ಇಲಾಖೆಯಿಂದ ಹೊಸ ಮಾರ್ಗಸೂಚಿ – ಐಡಿ ಕಾರ್ಡ್ ವಿತರಣೆಗೆ ಚಿಂತನೆ

    ಅರುಲ್ಮಿಗು ಪಳನಿ ದಂಡಾಯುತಪಾಣಿ ಸ್ವಾಮಿ ದೇವಸ್ಥಾನ ಮತ್ತು ಅದರ ಉಪ ದೇವಾಲಯಗಳಿಗೆ ಹಿಂದೂಗಳಿಗೆ ಮಾತ್ರ ಅನುಮತಿ ನೀಡುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಡಿ ಸೆಂಥಿಲ್‌ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಎಸ್ ಶ್ರೀಮತಿ ಈ ತೀರ್ಪು ನೀಡಿದ್ದಾರೆ. ಎಲ್ಲಾ ಪ್ರವೇಶ ದ್ವಾರಗಳಲ್ಲಿ ಆ ನಿಟ್ಟಿನಲ್ಲಿ ಡಿಸ್‌ಪ್ಲೇ ಬೋರ್ಡ್‌ಗಳನ್ನು ಸ್ಥಾಪಿಸಬೇಕು ಎಂದು ಅವರು ಸೂಚಿಸಿದ್ದಾರೆ.

    ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ಪ್ರಸಿದ್ಧ ಮುರುಗನ್ ದೇವಾಲಯವಿದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯು ತಮಿಳುನಾಡಿನಲ್ಲಿ ಹಿಂದೂ ದೇವಾಲಯಗಳನ್ನು ನಿರ್ವಹಿಸುತ್ತದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ – ರಾಜ್ಯದ ಹಲವೆಡೆ ಮನೆ, ಕಚೇರಿಗಳ ಮೇಲೆ ದಾಳಿ

    ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ದೇವಸ್ಥಾನಗಳ ಪ್ರವೇಶ ದ್ವಾರ, ಧ್ವಜಸ್ತಂಭದ ಬಳಿ ಮತ್ತು ದೇಗುಲದ ಪ್ರಮುಖ ಸ್ಥಳಗಳಲ್ಲಿ ‘ಕೋಡಿಮಾರಂ ನಂತರ ದೇವಸ್ಥಾನದೊಳಗೆ ಹಿಂದೂಯೇತರರಿಗೆ ಪ್ರವೇಶವಿಲ್ಲ’ ಎಂಬ ಫಲಕಗಳನ್ನು ಅಳವಡಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.

    ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲದ ಹಿಂದೂಯೇತರರಿಗೆ ಅವಕಾಶ ನೀಡಬಾರದು. ಯಾವುದೇ ಹಿಂದೂ ಅಲ್ಲದವರು ದೇವಸ್ಥಾನಗಳಿಗೆ ಭೇಟಿ ನೀಡುವುದಾದರೆ, ಒಂದಷ್ಟು ಒಪ್ಪಂದಗಳನ್ನು ಮಾಡಿಕೊಳ್ಳಬೇಕು. ದೇವರಲ್ಲಿ ನಂಬಿಕೆ ಮತ್ತು ಹಿಂದೂ ಧರ್ಮದ ಪದ್ಧತಿಗಳು ಮತ್ತು ಆಚರಣೆಗಳನ್ನು ಅನುಸರಿಸುತ್ತಾರೆಯೇ? ದೇವಾಲಯದ ಪದ್ಧತಿಗಳಿಗೆ ಬದ್ಧರಾಗುತ್ತಾರೆಯೇ? ಅಂತಹ ಕಾರ್ಯದಲ್ಲಿ ಹಿಂದೂಯೇತರರು ದೇವಾಲಯಕ್ಕೆ ಭೇಟಿ ನೀಡುವುದಾದರೆ ಅನುಮತಿ ಕೊಡಬಹುದು ಎಂದು ಕೋರ್ಟ್‌ ಹೇಳಿದೆ. ಇದನ್ನೂ ಓದಿ: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿ

    ಅರುಳ್ಮಿಘು ಬ್ರಹದೀಶ್ವರ ದೇವಸ್ಥಾನವನ್ನು ಅನ್ಯ ಧರ್ಮದ ವ್ಯಕ್ತಿಗಳ ಗುಂಪೊಂದು ಪಿಕ್ನಿಕ್ ಸ್ಪಾಟ್ ಎಂದು ಪರಿಗಣಿಸಿದೆ. ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವಿಸಿದೆ ಎಂದು ವರದಿಯಾಗಿದೆ. ಅಲ್ಲದೇ ಇತರ ಧರ್ಮದ ವ್ಯಕ್ತಿಗಳು ಮಧುರೈನ ಅರುಲ್ಮಿಘು ಮೀನಾಕ್ಷಿ ಸುಂದರೇಶ್ವರ ದೇವಸ್ಥಾನ ಗರ್ಭಗುಡಿ ಮತ್ತು ಗರ್ಭಗುಡಿಯ ಬಳಿ “ತಮ್ಮ ಪವಿತ್ರ ಪುಸ್ತಕ” ದೊಂದಿಗೆ ಪ್ರವೇಶಿಸಿದ್ದರು. ಅಲ್ಲಿ ತಮ್ಮ ಪ್ರಾರ್ಥನೆಗಳನ್ನು ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಕೂಡ ವರದಿಯಾಗಿದೆ ಎಂದು ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

  • ತ್ರಿಷಾ ಪ್ರಕರಣ: ಮನ್ಸೂರ್ ಅಲಿಖಾನ್ ಗೆ ದಂಡ ವಿಧಿಸಿದ ಹೈಕೋರ್ಟ್

    ತ್ರಿಷಾ ಪ್ರಕರಣ: ಮನ್ಸೂರ್ ಅಲಿಖಾನ್ ಗೆ ದಂಡ ವಿಧಿಸಿದ ಹೈಕೋರ್ಟ್

    ಹೆಸರಾಂತ ನಟಿ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಲ್ಲದೇ, ತಿಶ್ರಾ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಿದ್ದ ನಟ ಮನ್ಸೂರ್ ಅಲಿಖಾನ್ (Mansoor Alikhan) ಗೆ ಮದ್ರಾಸ್ ಹೈಕೋರ್ಟ್ (Madras High Court) ಒಂದು ಲಕ್ಷ ರೂಪಾಯಿ ದಂಡವಿಧಿಸಿದೆ. ಜೊತೆಗೆ ತ್ರಿಶಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಅನುಮತಿಯನ್ನೂ ನಿರಾಕರಿಸಿದೆ.

    ಈ ಹಿಂದೆ ತ್ರಿಷಾಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದ ಮನ್ಸೂರ್ ಅಲಿ ಖಾನ್ ಮೇಲೆ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು. ಚೆನ್ನೈನ ಥೌ‍ಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಗೆ ಬಂದು ಹಾಜರಾಗುವಂತೆ ನಟನಿಗೆ ನೋಟಿಸ್ ನೀಡಲಾಗಿತ್ತು. ಅನಾರೋಗ್ಯದ ನೆಪವೊಡ್ಡಿ ಬರಲು ಆಗುವುದಿಲ್ಲ ಎಂದು ಮನ್ಸೂರ್ ಅಲಿ ಖಾನ್ ಹೇಳಿದ್ದ. ಜೊತೆಗೆ ಜಾಮೀನು ಅರ್ಜಿಯನ್ನೂ (Court) ಸಲ್ಲಿಸಿದ್ದ. ಆದರೆ, ಡಿಢೀರ್ ಅಂತ ಮನಸ್ಸು ಬದಲಾಯಿಸಿ ಪೊಲೀಸ್ ಠಾಣೆಗೆ ಹಾಜರಾಗಿದ್ದ.

    ಇತ್ತ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ನಿರೀಕ್ಷೆ ಜಾಮೀನು (Bail) ಸ್ವೀಕೃತವಾಗಿರಲಿಲ್ಲ. ಹಾಗಾಗಿ ನ್ಯಾಯಾಧೀಶರು ಛೀಮಾರಿ ಹಾಕಿದ್ದರು. ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಸೆಷನ್ಸ್ ನ್ಯಾಯಾಲಯ ಗರಂ ಕೂಡ ಆಗಿತ್ತು.

     

    ತ್ರಿಷಾ ಬಗೆಗಿನ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ನಟನ ವ್ಯಕ್ತಿತ್ವವನ್ನು ಅವನ ಮಾತು ತೋರಿಸುತ್ತಿದೆ ಎಂದು ರಿಯ್ಯಾಕ್ಟ್ ಮಾಡಿದ್ದರು. ಜೊತೆಗೆ ಲಿಯೋ ಸಿನಿಮಾದ ನಿರ್ದೇಶಕರು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಮತ್ತೆ ಆತನೊಂದಿಗೆ ನಾನು ನಟಿಸುವುದಿಲ್ಲ ಎಂದು ತ್ರಿಷಾ ಹೇಳಿಕೊಂಡಿದ್ದರು. ಈಗ ಕೋರ್ಟ್ ಕೂಡ ದಂಡವಿಧಿಸಿದೆ.

  • ವೀಲಿಂಗ್‌ ಮಾಡಿದ  ಬೈಕ್‌ ಸುಟ್ಟು ಹಾಕಿ, 45 ಲಕ್ಷ ಸಬ್‌ಸ್ಕ್ರೈಬ್‌ ಇರೋ ಯೂಟ್ಯೂಬ್‌ ಚಾನೆಲನ್ನು ಕಿತ್ತಾಕಿ: ಹೈಕೋರ್ಟ್‌ ಚಾಟಿ

    ವೀಲಿಂಗ್‌ ಮಾಡಿದ ಬೈಕ್‌ ಸುಟ್ಟು ಹಾಕಿ, 45 ಲಕ್ಷ ಸಬ್‌ಸ್ಕ್ರೈಬ್‌ ಇರೋ ಯೂಟ್ಯೂಬ್‌ ಚಾನೆಲನ್ನು ಕಿತ್ತಾಕಿ: ಹೈಕೋರ್ಟ್‌ ಚಾಟಿ

    ಚೆನ್ನೈ: ರಸ್ತೆಗಳಲ್ಲಿ ಬೈಕ್‌ನಲ್ಲಿ ವೀಲಿಂಗ್‌ ಮಾಡುವವರ ಬೈಕ್‌ಗಳನ್ನು (Bike) ಸುಟ್ಟು ಹಾಕಬೇಕು ಎಂದು ಮದ್ರಾಸ್ ಹೈಕೋರ್ಟ್ (Madras High Court) ಖಾರವಾಗಿ ಅಭಿಪ್ರಾಯಪಟ್ಟಿದೆ.

    ವೀಲಿಂಗ್ ಮಾಡಿ ಬಂಧಿತನಾಗಿರುವ ವ್ಯಕ್ತಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಜಾ ಮಾಡಿದ ಕೋರ್ಟ್‌ ಬಂಧಿತ ವ್ಯಕ್ತಿಯ ಚಾನೆಲನ್ನು ಯೂಟ್ಯೂಬ್‌ನಿಂದಲೇ ತೆಗೆದು ಹಾಕಬೇಕು ಎಂದು ಚಾಟಿ ಬೀಸಿದೆ.

    ಬೈಕಿಂಗ್‌ ವಿಡಿಯೋಗಳಿಗೆ ಹೆಸರುವಾಸಿಯಾಗಿರುವ ಯೂಟ್ಯೂಬರ್ ಟಿಟಿಎಫ್ ವಾಸನ್ (TTF Vasan) ಚೆನ್ನೈ-ವೆಲ್ಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್ (Bike Wheeling) ಮಾಡುತ್ತಾ ಚಿತ್ರೀಕರಣ ಮಾಡುವಾಗ ಬಿದ್ದು ಗಾಯಗೊಂಡಿದ್ದರು. ಅಪಾಯಕಾರಿ ಚಾಲನೆಯಡಿ ಪ್ರಕರಣ ದಾಖಲಿಸಿದ ಪೊಲೀಸರು ವಾಸನ್ ಅವರನ್ನು ಬಂಧಿಸಿದ್ದರು. ಬಳಿಕ ವಾಸನ್ ಜಾಮೀನು ಅರ್ಜಿ ಸಲ್ಲಿಸಿದ್ದರು.

    ವಿಚಾರಣೆ ಸಂದರ್ಭದಲ್ಲಿ ವಾಸನ್‌ 20 ಲಕ್ಷ ರೂ. ಮೌಲ್ಯದ ಬೈಕನ್ನು ಹೊಂದಿದ್ದಾರೆ. ಅಪಾಯಕಾರಿ ಸ್ಟಂಟ್‌ ಮಾಡುವ ವೇಳೆ 3 ಲಕ್ಷ ರೂ. ಮೌಲ್ಯದ ಜಾಕೆಟ್‌ ಧರಿಸಿದ್ದರಿಂದ ಅವರು ಪಾರಾಗಿದ್ದಾರೆ. ಅವರ Twin Throttlers ಚಾನೆಲನ್ನು 45 ಲಕ್ಷ ಮಂದಿ ಫಾಲೋ ಮಾಡುತ್ತಿದ್ದಾರೆ. ಈ ವಿಡಿಯೋದಿಂದ ಯುವಕರು ಪ್ರಭಾವಿತರಾಗಿ ಮಿತಿಮೀರಿದ ವೇಗದಲ್ಲಿ ಸಂಚರಿಸಿ ಅಪಘಾತಕ್ಕೆ ಕಾರಣರಾಗುತ್ತಾರೆ. ಹೀಗಾಗಿ ಯಾವುದೇ ಕಾರಣಕ್ಕೆ ಜಾಮೀನು ಮಂಜೂರು ಮಾಡಬೇಡಿ ಎಂದು ಪೊಲೀಸರು ಪರ ವಕೀಲರು ಮನವಿ ಮಾಡಿದರು.  ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಯೂಟ್ಯೂಬರ್‌ ಹುಚ್ಚಾಟ – ಮೂರ್ಛೆ ಬಂದವನಂತೆ ಪ್ರ್ಯಾಂಕ್‌ ಮಾಡಿ ಪ್ರಯಾಣಿಕರಿಗೆ ಶಾಕ್‌

    ಪೊಲೀಸರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶ ಸಿವಿ ಕಾರ್ತಿಕೇಯನ್‌ ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿ ವಾಸನ್‌ಗೆ ಇದೊಂದು ಪಾಠವಾಗಬೇಕು. ಕಸ್ಟಡಿಯಲ್ಲಿ ಇರಲಿ ಎಂದು ಅಭಿಪ್ರಾಯಪಟ್ಟರು. ಅಷ್ಟೇ ಅಲ್ಲದೇ ವಾಸನ್‌ ಸ್ಟಂಟ್‌ ಮಾಡಿದ ಬೈಕನ್ನು ಸುಟ್ಟು ಹಾಕಬೇಕು. ಯೂಟ್ಯೂಬ್‌ ಚಾನೆಲನ್ನು ಡಿಲೀಟ್‌ ಮಾಡಬೇಕು ಎಂದು ಖಾರವಾಗಿ ಹೇಳಿದರು. ಈ ಸಂದರ್ಭದಲ್ಲಿ ವಾಸನ್ ಅವರ ಕೋರಿಕೆಯಂತೆ ವೈದ್ಯಕೀಯ ಸಹಾಯವನ್ನು ಒದಗಿಸುವಂತೆ ನ್ಯಾಯಾಲಯವು ಆದೇಶಿಸಿತು. ಕೋರ್ಟ್‌ ಈ ಹಿಂದೆ ಎರಡು ಬಾರಿ ವಾಸನ್‌ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

    ಟಿಟಿಎಫ್ ವಾಸನ್ ಅವರು ತಮ್ಮ ಟ್ವಿನ್ ಥ್ರಾಟ್ಲರ್‌ ಚಾನೆಲ್‌ನಲ್ಲಿ ಬೈಕಿಂಗ್ ವೀಡಿಯೊಗಳಿಗೆ ಪ್ರಸಿದ್ಧರಾಗಿದ್ದಾರೆ. ಶೀಘ್ರದಲ್ಲೇ ಅವರು ಕಾಲಿವುಡ್‌ಗೆ ಎಂಟ್ರಿಯಾಗಬೇಕಿತ್ತು. ಸೆಲ್ ಆಮ್ ನಿರ್ದೇಶನದ ‘ಮಂಜಲ್ ವೀರನ್’ ಚಿತ್ರದ ಮೂಲಕ ಪಾದಾರ್ಪಣೆ ಮಾಡಲು ಸಿದ್ಧತೆ ನಡೆಸುತ್ತಿದ್ದರು. ಕಳೆದ ತಿಂಗಳು ವಾಸನ್ ಅವರು ತಮ್ಮ ಐಷಾರಾಮಿ ಬೈಕ್‌ನಲ್ಲಿ ವ್ಹೀಲಿಂಗ್ ಮಾಡಲು ಪ್ರಯತ್ನಿಸಿದಾಗ ರಸ್ತೆ ಅಪಘಾತಕ್ಕೀಡಾಗಿದ್ದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ವಿಜಯಲಕ್ಷ್ಮಿಗೆ ಶಾಕ್ ಕೊಟ್ಟ ಮದ್ರಾಸ್ ಹೈಕೋರ್ಟ್: ರಾಜಕಾರಣಿ ವಿರುದ್ಧದ ಆರೋಪಕ್ಕೆ ಸಮನ್ಸ್

    ನಟಿ ವಿಜಯಲಕ್ಷ್ಮಿಗೆ ಶಾಕ್ ಕೊಟ್ಟ ಮದ್ರಾಸ್ ಹೈಕೋರ್ಟ್: ರಾಜಕಾರಣಿ ವಿರುದ್ಧದ ಆರೋಪಕ್ಕೆ ಸಮನ್ಸ್

    ಮಿಳು ನಾಡಿನ ಪ್ರಸಿದ್ಧ ರಾಜಕಾರಣಿ ಸೀಮನ್ ವಿರುದ್ಧ ಗರ್ಭಪಾತ ಮತ್ತು ಲೈಂಗಿಕ ಆರೋಪಗಳನ್ನು ಮಾಡಿದ್ದ ನಟಿ ವಿಜಯಲಕ್ಷ್ಮಿ, ಇದೀಗ ತಾವೇ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. 2011ರಲ್ಲಿ ಸೀಮನ್ ತಮ್ಮನ್ನು ಮದುವೆಯಾಗಿ, ಹಲವಾರು ರೀತಿಯ ಹಿಂಸೆಗಳನ್ನು ಕೊಟ್ಟಿದ್ದಾರೆ ಎಂದು ಪೊಲೀಸರಿಗೆ ದೂರು ಕೊಟ್ಟಿದ್ದರು. ಆನಂತರ 2012ರಲ್ಲಿ ವಿಜಯಲಕ್ಷ್ಮಿ ದೂರು ಹಿಂಪಡೆದಿದ್ದರು. ಆದರೂ, ಇತ್ತೀಚೆಗಷ್ಟೇ ಹಳೆಯ ದೂರನ್ನು ಮರುಪರೀಶಿಲಿಸಬೇಕು ಎಂದು ಮನವಿ ಮಾಡಿದ್ದರು. ಹಾಗಾಗಿ ಕೇಸ್ ಮತ್ತೆ ಕೋರ್ಟ್ ಮೆಟ್ಟಿಲು ಏರಿತ್ತು. ಸೀಮನ್‍ ಗೆ ನೋಟಿಸ್ ಕೂಡ ಜಾರಿಯಾಗಿತ್ತು.

    ಇತ್ತೀಚೆಗಷ್ಟೇ ನಟಿ ವಿಜಯಲಕ್ಷ್ಮಿ ಮತ್ತೆ ದೂರನ್ನು ವಾಪಸ್ಸು ಪಡೆದು, ಸೀಮನ್ ವಿರುದ್ಧ ನನಗೆ ಸೋಲಾಗಿದೆ. ನಾನು ಸೋಲು ಒಪ್ಪಿಕೊಂಡು ಕೇಸ್ ವಾಪಸ್ಸು ಪಡೆಯುತ್ತಿದ್ದೇನೆ. ಅವರ ರಾಜಕೀಯ ಭವಿಷ್ಯ ಉಜ್ವಲವಾಗಲಿ. ನಾನು ತಮಿಳು ನಾಡಿನಲ್ಲಿ ಇರಲಾರೆ ಎಂದು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದರು. ಕೇಸ್ ಹಿಂಪಡೆದ ವಿಚಾರವನ್ನು ಪೊಲೀಸರು ಕೋರ್ಟ್ ಗೆ ಸಲ್ಲಿಸಿದ್ದರು. ಹೀಗಾಗಿ ಕೋರ್ಟ್ ವಿಜಯಲಕ್ಷ್ಮಿಗೆ ಸೆಪ್ಟೆಂಬರ್ 29ಕ್ಕೆ ಕೋರ್ಟಿಗೆ ಹಾಜರಾಗುವಂತೆ  ಮದ್ರಾಸ್ ಹೈಕೋರ್ಟ್ (Madras High Court) ಸಮನ್ಸ್ ನೀಡಿದೆ.

    ಏನಿದು ಪ್ರಕರಣ?

    ನಾಗಮಂಡಲ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟಿ ವಿಜಯಲಕ್ಷ್ಮಿ(Vijayalakshmi), ತಮಿಳುನಾಡಿನ ಹೆಸರಾಂತ ರಾಜಕಾರಣಿ ಸೀಮನ್ (Seaman) ವಿರುದ್ಧ ಮತ್ತೆ ಗಂಭೀರ ಆರೋಪ ಮಾಡಿದ್ದರು. ಈ ಕುರಿತು ಅವರು ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿದ್ದರು. ತಮ್ಮನ್ನು ಸೀಮನ್ ಮದುವೆಯಾಗಿ ಏಳು ಬಾರಿ ಗರ್ಭಪಾತ ಮಾಡಿಸಿದ್ದಾನೆ ಎಂದು ಅವರು ದೂರಿನಲ್ಲಿ ಬರೆದಿದ್ದರು.

    ತಿರುವಳ್ಳೂರಿನ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆಯನ್ನೂ ನೀಡಿರುವ ನಟಿ ವಿಜಯಲಕ್ಷ್ಮಿ, ‘200ರಲ್ಲಿ ತಾವು  ನಾಮ್‍ ತಮಿಳರ್ ಕಟ್ಚಿ (ಎನ್.ಟಿಕೆ) ನಾಯಕರೂ ಆಗಿರುವ ಸೀಮನ್ ಜೊತೆ ಮದುವೆಯಾಗಿದ್ದೇನೆ.  ಆನಂತರ ಅವರು ನನಗೆ ಮೋಸ ಮಾಡುತ್ತಲೇ ಹೋದರು. ನನ್ನ ಚಿನ್ನಾಭರಣ ದೋಚಿದರು. ಏಳು ಬಾರಿ ಗರ್ಭಪಾತ ಮಾಡಿಸಿದ್ದಾರೆ. ಅವರಿಂದ ನನಗೆ ಲೈಂಗಿಕ ದೌರ್ಜನ್ಯ ಕೂಡ ಆಗಿದೆ’ ಎಂದು ಹೇಳಿಕೆ ದಾಖಲಿಸಿದ್ದರು.

    ಚೆನ್ನೈನ ಪೊಲೀಸ್ (Police) ಆಯುಕ್ತರ ಸಹಾಯ ಪಡೆದುಕೊಂಡು ದೂರು ದಾಖಲಿಸಿದ್ದ ವಿಜಯಲಕ್ಷ್ಮಿ ತಮಗೆ ನ್ಯಾಯ ದೊರಕಿಸಿ ಕೊಡುವಂತೆ ಮನವಿ ಮಾಡಿದ್ದರು. ಅಲ್ಲದೇ, ಫೇಸ್ ಬುಕ್ ಲೈವ್ ಗೆ ಬಂದು, ಈ ವಿಚಾರವನ್ನೂ ಮಾತನಾಡಿದ್ದರು. ದೂರು ಸ್ವೀಕರಿಸಿರುವ ಪೊಲೀಸ್ ಅಧಿಕಾರಿಗಳು ಸೀಮನ್ ಅವರಿಗೆ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಿದ್ದರು. ಅಷ್ಟರಲ್ಲಿ ವಿಜಯಲಕ್ಷ್ಮಿ ದೂರು ವಾಪಸ್ಸು ಪಡೆದರು.

     

    ಈ ಘಟನೆಯ ಕುರಿತು ವಿಜಯಲಕ್ಷ್ಮಿ ಪರ ಹೋರಾಟ ಮಾಡುತ್ತಿರುವ ತಮಿಳರ್ ಮುನ್ನೆಟ್ರ ಪಡೈಯ ಅಧ್ಯಕ್ಷೆ ವೀರಲಕ್ಷ್ಮಿ ಕೂಡ ಪ್ರತಿಕ್ರಿಯೆ ನೀಡಿದ್ದು, ಹಲವಾರು ವರ್ಷಗಳಿಂದ ಈ ಕುರಿತು ಹೋರಾಟ ಮಾಡುತ್ತಿದ್ದೇವೆ. ಅವರು ಪ್ರಭಾವಿ ರಾಜಕಾರಣಿ ಆಗಿರುವುದರಿಂದ ನ್ಯಾಯ ಸಿಗುತ್ತಿಲ್ಲ. ಈ ಬಾರಿ ನಮಗೆ ಶಿಕ್ಷೆ ಕೊಡಿಸುತ್ತೇವೆ ಎಂಬ ನಂಬಿಕೆ ಬಂದಿದೆ ಎಂದಿದ್ದರು. ಈ ಎಲ್ಲ ಬೆಳವಣಿಗೆ ನಂತರ ವಿಜಯಲಕ್ಷ್ಮಿ ಕೇಸ್ ನಿಂದ ದೂರ ಉಳಿಯುವುದಾಗಿ ಘೋಷಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಾಕ್ ಸ್ವಾತಂತ್ರ್ಯ ಧರ್ಮದ ವಿರುದ್ಧ ದ್ವೇಷ ಭಾಷಣ ಆಗಬಾರದು: ಮದ್ರಾಸ್ ಹೈಕೋರ್ಟ್

    ವಾಕ್ ಸ್ವಾತಂತ್ರ್ಯ ಧರ್ಮದ ವಿರುದ್ಧ ದ್ವೇಷ ಭಾಷಣ ಆಗಬಾರದು: ಮದ್ರಾಸ್ ಹೈಕೋರ್ಟ್

    ಚೆನೈ: ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಡಿಎಂಕೆ ನಾಯಕರ ವಿರುದ್ಧ ಮದ್ರಾಸ್ ಹೈಕೋರ್ಟ್ (Madras High Court) ಅಸಮಾಧಾನ ವ್ಯಕ್ತಪಡಿಸಿದೆ. ವಾಕ್ ಸ್ವಾತಂತ್ರ್ಯವು (Freedom Of Speech) ಮೂಲಭೂತ ಹಕ್ಕು ಆದರೆ ಅದು ದ್ವೇಷದ ಭಾಷಣವಾಗಿ ಬದಲಾಗಬಾರದು. ವಿಶೇಷವಾಗಿ ಧರ್ಮದ ವಿಷಯಗಳಿಗೆ ಸಂಬಂಧಿಸಿದಂತೆ ದ್ವೇಷ ಭಾಷಣವಾಗಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

    ಸನಾತನ ಧರ್ಮದ ವಿರುದ್ಧ ಹೇಳಿಕೆ ಖಂಡಿಸಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಎನ್ ಶೇಷಸಾಯಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಬಳಿಕ ಸನಾತನ ಧರ್ಮವೂ ಅಸ್ಪೃಶ್ಯತೆ, ಜಾತೀಯತೆಯನ್ನು ಮಾತ್ರ ಉತ್ತೇಜಿಸುತ್ತದೆ ಎನ್ನುವುದು ತಪ್ಪು. ಸಮಾನ ನಾಗರೀಕರ ದೇಶದಲ್ಲಿ ಅಸ್ಪೃಶ್ಯತೆ ಸಹಿಸಲಾಗುವುದಿಲ್ಲ. ಸಂವಿಧಾನದ 17ನೇ ವಿಧಿ ಮೂಲಕ ಅಸ್ಪೃಶ್ಯತೆಯನ್ನು ತೊಡೆದು ಹಾಕಲಾಗಿದೆ. ಹೀಗಾಗಿ ಇದ್ಯಾವುದು ಪ್ರಸುತ್ತದಲ್ಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಚಿವ ಡಿ.ಸುಧಾಕರ್‌ಗೆ ರಿಲೀಫ್ – ಜಾತಿ ನಿಂದನೆ ಆರೋಪ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ತಡೆ

    ಇಂತಹ ಭಾಷಣದಿಂದ ಯಾರ ಮನಸ್ಸಿಗೂ ಗಾಯವಾಗದಂತೆ ನೋಡಿಕೊಳ್ಳುವ ಅಗತ್ಯವಿದೆ. ಪ್ರತಿಯೊಂದು ಧರ್ಮವೂ ನಂಬಿಕೆಯ ಮೇಲೆ ಸ್ಥಾಪಿತವಾಗಿದೆ. ಭಾಷಣಗಳಿಂದ ನಂಬಿಕೆಗಳಿಗೆ ಘಾಸಿಯಾಗಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಇತ್ತೀಚೆಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದರು. ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳಿಗೆ ಹೋಲಿಸಿ, ಸಂಪೂರ್ಣ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಇದಾದ ಬಳಿಕ ದೇಶದೆಲ್ಲೆಡೆ ಈ ಹೇಳಿಕೆಗೆ ಖಂಡನೆ ವ್ಯಕ್ತವಾಗಿತ್ತು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ- ತಾತ್ಕಾಲಿಕ ರಿಲೀಫ್ ಕೇಳಿದ್ದ ಅರ್ಜಿ ವಜಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆನ್‌ಲೈನ್ ಗೇಮಿಂಗ್ ಆ್ಯಪ್‌ಗಳ ನಿಷೇಧ – ಮಧ್ಯಂತರ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

    ಆನ್‌ಲೈನ್ ಗೇಮಿಂಗ್ ಆ್ಯಪ್‌ಗಳ ನಿಷೇಧ – ಮಧ್ಯಂತರ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಣೆ

    ಚೆನೈ: ಆನ್‌ಲೈನ್ ಗೇಮಿಂಗ್ ಆ್ಯಪ್‌ಗಳನ್ನು (Online Gambling) ನಿಷೇಧಿಸಿ ತಮಿಳುನಾಡು ಸರ್ಕಾರ (Tamil Nadu Govt) ಜಾರಿಗೆ ತಂದಿರುವ ಹೊಸ ಕಾನೂನು ಪ್ರಶ್ನಿಸಿ ಗೇಮಿಂಗ್ ಕಂಪನಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ (Madras High Court) ಮಧ್ಯಂತರ ತಡೆ ನೀಡಲು ನಿರಾಕರಿಸಿದೆ.

    ಮುಖ್ಯ ನ್ಯಾಯಮೂರ್ತಿ ಎಸ್‌.ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಪಿ.ಡಿ ಆದಿಕೇಶವಲು ಅವರ ಪೀಠವು ಅರ್ಜಿ ವಿಚಾರಣೆ ನಡೆಸಿತು. ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ ಪರವಾಗಿ ಹಾಜರಿದ್ದ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲು ಆರಂಭಿಸಿದರು. ಇದನ್ನೂ ಓದಿ: ಹಂತ ಹಂತವಾಗಿ ಮೀಸಲಾತಿ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ – 25,000 ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್

    ಇದಕ್ಕೆ ಪ್ರತಿಕ್ರಿಯೆ ನೀಡಿದ ಪೀಠ, ಮಧ್ಯಂತರ ತಡೆಗೆ ಮಾಡುವ ವಾದ ಮತ್ತು ಅಂತಿಮ ವಿಚಾರಣೆಗೆ ಮಾಡುವ ವಾದ ಒಂದೇಯಾಗಿರುತ್ತದೆ. ಈ ಹಿನ್ನಲೆ ಮಧ್ಯಂತರ ತಡೆ ಬದಲು ನಾವು ಅಂತಿಮ ವಾದಕ್ಕೆ ಪ್ರಕರಣವನ್ನು ಪೋಸ್ಟ್ ಮಾಡುತ್ತಿದ್ದೇವೆ. ಜುಲೈ 13 ರಂದು ಅಂತಿಮ ವಾದವನ್ನು ಆಲಿಸುವುದಾಗಿ ಕೋರ್ಟ್ ಹೇಳಿತು.

    ರಮ್ಮಿ ಮತ್ತು ಪೋಕರ್‌ನಂತಹ ಆಟಗಳು ಕೌಶಲ್ಯದ ಆಟಗಳಲ್ಲ ಮತ್ತು ಅವಕಾಶದ ಆಟಗಳಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದ್ದರೂ, ಅರ್ಜಿದಾರ ಕಂಪನಿಗಳು ಬಲವಂತದ ಕ್ರಿಮಿನಲ್ ಕ್ರಮದ ಬೆದರಿಕೆಯನ್ನು ಎದುರಿಸುತ್ತಿವೆ ಎಂದು ಇದೇ ವೇಳೆ ಹಿರಿಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಇದನ್ನೂ ಓದಿ: ಕರ್ನಾಟಕ, ಮಹಾರಾಷ್ಟ್ರದಂತೆ ಬಿಜೆಪಿ ವಿರೋಧ ಪಕ್ಷಗಳ ಸರ್ಕಾರ ಉರುಳಿಸುತ್ತಿದೆ: ಕಪಿಲ್‌ ಸಿಬಲ್‌ ಆರೋಪ

    ತಮಿಳುನಾಡು ಸರ್ಕಾರವು ಆನ್‌ಲೈನ್ ಗೇಮಿಂಗ್‌ ವ್ಯಸನವು “ಕುಟುಂಬಗಳನ್ನು ನಾಶಪಡಿಸುತ್ತಿದೆ” ಎಂದು ಅಭಿಪ್ರಾಯಪಟ್ಟಿದೆ. ರಾಜ್ಯದ ನಾಗರಿಕರನ್ನು ರಕ್ಷಿಸಲು “ತಮಿಳುನಾಡು ಆನ್‌ಲೈನ್ ಜೂಜಿನ ನಿಷೇಧ ಮತ್ತು ಆನ್‌ಲೈನ್ ಗೇಮ್ಸ್ ಆಕ್ಟ್, 2022 ರ ನಿಯಂತ್ರಣ” ಕಾಯಿದೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • DMK ಸರ್ಕಾರಕ್ಕೆ ಹಿನ್ನಡೆ – ತಮಿಳುನಾಡಿನಲ್ಲಿ RSSಗೆ ರ‍್ಯಾಲಿ ಅನುಮತಿ

    DMK ಸರ್ಕಾರಕ್ಕೆ ಹಿನ್ನಡೆ – ತಮಿಳುನಾಡಿನಲ್ಲಿ RSSಗೆ ರ‍್ಯಾಲಿ ಅನುಮತಿ

    ನವದೆಹಲಿ: ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ಮನವಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್ (Supreme Court) ಮಂಗಳವಾರ ತಮಿಳುನಾಡಿನಲ್ಲಿ ರ‍್ಯಾಲಿಗಳನ್ನು (March) ನಡೆಸಲು ಆರ್‌ಎಸ್‍ಎಸ್‍ಗೆ (RSS) ಅನುಮತಿ ನೀಡಿದೆ.

    ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು (Tamil Nadu) ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ವಿ.ರಾಮಸುಬ್ರಮಣಿಯನ್ ಮತ್ತು ಪಂಕಜ್ ಮಿತ್ತಲ್ ಅವರಿದ್ದ ಪೀಠ ವಜಾ ಮಾಡಿದೆ. ಆರ್‌ಎಸ್‍ಎಸ್ ತಮಿಳುನಾಡಿನಲ್ಲಿ ನಿರ್ಬಂಧಗಳಿಲ್ಲದೆ ಮರುನಿಗದಿಪಡಿಸಿದ ದಿನದಂದು ಪಥ ಸಂಚಲನ ನಡೆಸಲು ಮದ್ರಾಸ್ ಹೈಕೋರ್ಟ್ (Madras High Court) ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಯ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ.

    MK Stalin (1)

    ಆಜಾದಿ ಕಾ ಅಮೃತ್ ಮಹೋತ್ಸವ (Azadi Ka Amrit Mahotsav) ಮತ್ತು ಗಾಂಧಿ ಜಯಂತಿಯಂದು (Gandhi Jayanti) ಮೆರವಣಿಗೆ ನಡೆಸಲು ಅಕ್ಟೋಬರ್‌ನಲ್ಲಿ ಆರ್‌ಎಸ್‍ಎಸ್ ತಮಿಳುನಾಡು ಸರ್ಕಾರದ ಅನುಮತಿ ಕೋರಿತ್ತು. ಆದರೆ ರಾಜ್ಯ ಸರ್ಕಾರ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಆರ್‌ಎಸ್‍ಎಸ್ ಹೈಕೋರ್ಟ್ ಮೆಟ್ಟಿಲೇರಿತ್ತು.

    ನವೆಂಬರ್‌ನಲ್ಲಿ ಏಕ ನ್ಯಾಯಾಧೀಶ ಪೀಠವು ಆರ್‌ಎಸ್‍ಎಸ್ ಮೆರವಣಿಗೆಯನ್ನು ಒಳಾಂಗಣದಲ್ಲಿ ಅಥವಾ ಸುತ್ತುವರಿದ ಸ್ಥಳಗಳಲ್ಲಿ ನಿಬರ್ಂಧಿಸುವಂತಹ ಷರತ್ತುಗಳೊಂದಿಗೆ ಅನುಮತಿ ನೀಡಿತ್ತು. ಫೆಬ್ರವರಿಯಲ್ಲಿ ಈ ನಿರ್ಬಂಧಗಳನ್ನು ವಿಭಾಗೀಯ ಪೀಠವು ತೆಗೆದುಹಾಕಿತ್ತು. ಇದನ್ನೂ ಓದಿ: ಪಕ್ಷೇತರನಿಗೆ ಬಿದ್ದ ಅನಿರೀಕ್ಷಿತ ಮತ ಸಿದ್ದು ಪಾಲಿಗೆ ವರವಾಯ್ತು!

    ರಾಜ್ಯದಲ್ಲಿ ಮೆರವಣಿಗೆ ನಡೆಸಲು ಆರ್‌ಎಸ್‍ಎಸ್‍ಗೆ ಅನುಮತಿ ನೀಡಿರುವ ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ಡಿಎಂಕೆ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ರಾಜ್ಯ ಸರ್ಕಾರದ ಈ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದನ್ನೂ ಓದಿ: ಚುನಾವಣಾ ರಾಜಕಾರಣಕ್ಕೆ ಈಶ್ವರಪ್ಪ ಗುಡ್‍ಬೈ

  • ದೇವಸ್ಥಾನದ ಆವರಣದ ಒಳಗಡೆ ಮೊಬೈಲ್‌, ಕ್ಯಾಮೆರಾಕ್ಕೆ ನಿರ್ಬಂಧ ವಿಧಿಸಿ: ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

    ದೇವಸ್ಥಾನದ ಆವರಣದ ಒಳಗಡೆ ಮೊಬೈಲ್‌, ಕ್ಯಾಮೆರಾಕ್ಕೆ ನಿರ್ಬಂಧ ವಿಧಿಸಿ: ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

    ಚೆನ್ನೈ: ಶುದ್ಧತೆ ಮತ್ತು ಪಾವಿತ್ರ್ಯತೆ ಕಾಪಾಡಲು ರಾಜ್ಯದ ಎಲ್ಲ ದೇವಸ್ಥಾನದ(Temple) ಆವರಣದ ಒಳಗಡೆ ಮೊಬೈಲ್‌ ಫೋನ್‌(Mobile Phone) ಮತ್ತು ಕ್ಯಾಮೆರಾವನ್ನು(Camera) ನಿಷೇಧಿಸುವಂತೆ ಮದ್ರಾಸ್‌ ಹೈಕೋರ್ಟ್‌(Madras High Court) ತಮಿಳುನಾಡು ಸರ್ಕಾರಕ್ಕೆ(Tamilnadu Government) ನಿರ್ದೇಶನ ನೀಡಿದೆ.

    ಮಧುರೈ ಪೀಠದ ನ್ಯಾಯಮೂರ್ತಿಗಳಾದ ಆರ್ ಮಹದೇವನ್ ಮತ್ತು ಜೆ ಸತ್ಯನಾರಾಯಣ ಅವರಿದ್ದ ದ್ವಿಸದಸ್ಯ ಪೀಠವು ಭಕ್ತರು ಮತ್ತು ದೇವಾಲಯಗಳಿಗೆ ಭೇಟಿ ನೀಡುವವರು ಯೋಗ್ಯವಾದ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ಸೂಚಿಸಿ ಎಂದು ರಾಜ್ಯಕ್ಕೆ ನಿರ್ದೇಶನ ನೀಡಿದೆ.

    ತೂತುಕುಡಿ ಜಿಲ್ಲೆಯ ಪುರಾತನ ಅರುಲ್ಮಿಗು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ವೇಳೆ ಕೋರ್ಟ್‌ ಈ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: HDK ಪ್ರಧಾನಿಯಾದ್ರೆ ಜೆಡಿಎಸ್‍ನಲ್ಲಿ ದಲಿತ, ಮುಸ್ಲಿಂ CM: ಸಿಎಂ ಇಬ್ರಾಹಿಂ

    ದೇವಾಲಯಗಳ ಒಳಗೆ ಇರುವ ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳು ಭಕ್ತರ ಗಮನವನ್ನು ಬೇರೆಡೆಗೆ ತಿರುಗಿಸುತ್ತವೆ. ಆದ್ದರಿಂದ ದೇವಾಲಯದ ಆವರಣದಲ್ಲಿ ಅವುಗಳ ಬಳಕೆಯನ್ನು ದೇವಾಲಯದ ಅಧಿಕಾರಿಗಳು ನಿಯಂತ್ರಿಸಬೇಕು ಎಂದು ಪೀಠ ಹೇಳಿದೆ.

    ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಎಲ್ಲಾ ವ್ಯಕ್ತಿಗಳು ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸಲು, ಆಚರಿಸಲು ಮತ್ತು ಪ್ರಚಾರ ಮಾಡಲು ಅರ್ಹರಾಗಿದ್ದಾರೆ ಎಂಬುದಕ್ಕೆ ಯಾವುದೇ ಆಕ್ಷೇಪವಿಲ್ಲ. ಆದರೆ ದೇವಾಲಯದ ಆವರಣದೊಳಗೆ ಕಾರ್ಯನಿರ್ವಹಿಸಲು ಮತ್ತು ಆಚರಣೆಗೆ ಅಂತಹ ಸ್ವಾತಂತ್ರ್ಯವು ನಿಯಮಗಳಿಗೆ ಒಳಪಟ್ಟಿರುತ್ತದೆ. ದೇವಸ್ಥಾನದಲ್ಲಿ ನಡೆಯುವ ಪೂಜಾ ವಿಧಿವಿಧಾನಗಳ ನಿಯಮಾವಳಿಗಳನ್ನು ಸೂಚಿಸಿ  ಅಧಿಕಾರಿಗಳು ದೇವಾಲಯದ ಪಾವಿತ್ರ್ಯತೆ ಕಾಪಾಡುವಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

    court order law

    ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆದ್ದರಿಂದ ದೇವಾಲಯದ ಅಧಿಕಾರಿಗಳು ಸಾಕಷ್ಟು ಸುರಕ್ಷತಾ ವ್ಯವಸ್ಥೆಗಳನ್ನು ಮಾಡಬೇಕಾಗುತ್ತದೆ. ಹೆಚ್ಚಿನ ಭಕ್ತರು ದೇವಾಲಯದ ಆವರಣದ ಒಳಗಿನಿಂದ ಚಿತ್ರಗಳನ್ನು ತೆಗೆಯುತ್ತಾರೆ ಮತ್ತು ವೀಡಿಯೊಗಳನ್ನು ಮಾಡುತ್ತಾರೆ. ದೇವಾಲಯದಲ್ಲಿ ಇರಿಸಲಾಗಿರುವ ವಿಗ್ರಹಗಳು ಮತ್ತು ಇತರ ಬೆಲೆಬಾಳುವ ವಸ್ತುಗಳ ಫೋಟೋಗಳನ್ನು ತೆಗೆಯುತ್ತಾರೆ. ಭದ್ರತಾ ದೃಷ್ಟಿಯಿಂದ ಇವುಗಳಿಗೆ ನಿರ್ಬಂಧ ಹೇರಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

    ಮಧುರೈನ ಪ್ರಸಿದ್ಧ ಮೀನಾಕ್ಷಿ ದೇವಸ್ಥಾನ ಸೇರಿದಂತೆ ರಾಜ್ಯದ ಇತರ ಹಲವಾರು ದೇವಾಲಯಗಳ ಒಳಗಡೆ ಭಕ್ತರು ತಮ್ಮ ಫೋನ್ ಅಥವಾ ಕ್ಯಾಮೆರಾಗಳನ್ನು ದೇವಾಲಯದ ಆವರಣದೊಳಗೆ ಕೊಂಡೊಯ್ಯಲು ಅನುಮತಿ ನೀಡುವುದಿಲ್ಲ ಎಂಬ ವಿಚಾರವನ್ನು ಅರ್ಜಿದಾರರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

    ಮೀನಾಕ್ಷಿ ದೇವಸ್ಥಾನದಲ್ಲಿ ಭಕ್ತರು ದೇವಸ್ಥಾನಕ್ಕೆ ಪ್ರವೇಶಿಸುವ ಮೊದಲು ತಮ್ಮ ಫೋನ್‌ಗಳನ್ನು ಲಾಕರ್‌ನಲ್ಲಿ ಇಡಬೇಕಾಗುತ್ತದೆ. ಭಕ್ತರು ಹೊರಗೆ ಬಂದ ನಂತರ ಫೋನ್‌ಗಳನ್ನು ಹಿಂಪಡೆಯಲು ಅವಕಾಶ ನೀಡಲಾಗುತ್ತದೆ ಎಂದು ಅರ್ಜಿದಾರರು ತಿಳಿಸಿದ್ದರು.

    ತೂತುಕುಡಿಯ ದೇವಸ್ಥಾನದ ಒಳಗೆ ಫೋನ್ ಮತ್ತು ಕ್ಯಾಮೆರಾಗಳನ್ನು ಬಳಸುವುದನ್ನು ನಿಷೇಧಿಸುವ ಅಧಿಸೂಚನೆಯನ್ನು ಈಗಾಗಲೇ ಹೊರಡಿಸಲಾಗಿದೆ. ಭಕ್ತರು ಮತ್ತು ದೇವಾಲಯಕ್ಕೆ ಭೇಟಿ ನೀಡುವವರು ಸಭ್ಯ ಡ್ರೆಸ್ ಕೋಡ್ ಅನುಸರಿಸಬೇಕು ಎಂದು ಸೂಚಿಸಲಾಗಿದೆ ಎಂಬುದನ್ನು ತೂತುಕುಡಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೋರ್ಟ್‌ ಗಮನಕ್ಕೆ ತಂದಿದ್ದರು.

    Live Tv
    [brid partner=56869869 player=32851 video=960834 autoplay=true]

  • ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬಳಸುವಂತಿಲ್ಲ – ಮದ್ರಾಸ್ ಹೈಕೋರ್ಟ್ ಆದೇಶ

    ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬಳಸುವಂತಿಲ್ಲ – ಮದ್ರಾಸ್ ಹೈಕೋರ್ಟ್ ಆದೇಶ

    ಚೆನ್ನೈ: ತಮಿಳುನಾಡಿನಾದ್ಯಂತ (Tamil Nadu) ದೇವಸ್ಥಾನಗಳ (Temples) ಒಳಭಾಗದಲ್ಲಿ ಮೊಬೈಲ್ ಫೋನ್ (Mobile Phones) ಬಳಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ (Madras High Court) ಆದೇಶಿಸಿದೆ.

    ದೇವಾಲಯಗಳಿಗೆ ಬರುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತ್ತು ಪೂಜಾ ಸ್ಥಳಗಳ ಶುದ್ಧತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವ ಸಲುವಾಗಿ ಮೊಬೈಲ್ ಫೋನ್ ನಿಷೇಧಿಸಲು ಮುಂದಾಗಿದ್ದೇವೆ ಎಂದು ಕೋರ್ಟ್ ತಿಳಿಸಿದೆ. ಇದನ್ನೂ ಓದಿ: ಅಫ್ಘಾನ್‌ ಮಾಜಿ ಪ್ರಧಾನಿ ಕಟ್ಟಡದ ಮೇಲೆ ದಾಳಿ – ಗುಲ್ಬುದ್ದೀನ್‌ ಗ್ರೇಟ್‌ ಎಸ್ಕೇಟ್‌, ಒಬ್ಬ ಸಾವು

     

    ನ್ಯಾಯಮೂರ್ತಿಗಳಾದ ಆರ್.ಮಹದೇವನ್ ಮತ್ತು ಜೆ ಸತ್ಯನಾರಾಯಣ ಪ್ರಸಾದ್ ಅವರ ವಿಭಾಗೀಯ ಪೀಠ ದೇವಸ್ಥಾನಗಳ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಮೊಬೈಲ್ ನಿಷೇಧಿಸುವ ಮಹತ್ವದ ಆದೇಶ ನೀಡಿದೆ. ದೇವಸ್ಥಾನಗಳಿಗೆ ಭಕ್ತರು ಭಕ್ತಿಪೂರ್ವಕವಾಗಿ ಭೇಟಿ ನೀಡುವ ವೇಳೆ ಮೊಬೈಲ್ ಬಳಕೆಯಿಂದಾಗಿ ಹಲವು ಸಮಸ್ಯೆಗಳು ಉಂಟಾಗುತ್ತಿದೆ. ಹಾಗಾಗಿ ತಮಿಳುನಾಡಿನ ಅನೇಕ ಪ್ರಸಿದ್ಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಿಗೆ ನ್ಯಾಯಾಧೀಶರು ದೇವಾಲಯದ ಒಳಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವಂತೆ ಸೂಚಿಸಿದರು.

    ಭಕ್ತಾಧಿಗಳಿಗೆ ಮೊಬೈಲ್ ಫೋನ್ ಬಳಕೆಯಿಂದಾಗಿ ಹಲವು ತೊಂದರೆಗಳು ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಮೊಬೈಲ್‍ಗಳನ್ನು ಸಮರ್ಪಕವಾಗಿ ಹೊರಗಿಟ್ಟು ಬರಲು ಭದ್ರತಾ ಲಾಕರ್ ವ್ಯವಸ್ಥೆ ಮಾಡುವಂತೆ ಸೂಚಿಸಿದೆ. ಇದನ್ನೂ ಓದಿ: ನನ್ನ ಹತ್ಯೆಗೆ ಸ್ಕೆಚ್ – ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಮುಖಂಡ ಗಂಭೀರ ಆರೋಪ

    ದೇಗುಲಗಳಲ್ಲಿ ಫೋನ್‌ ಲಾಕರ್:
    ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಜನರಿಗೆ ತೊಂದರೆಯಾಗದಂತೆ ಫೋನ್ ಠೇವಣಿ ಲಾಕರ್‌ಗಳನ್ನು ಅಳವಡಿಸಬೇಕು. ಈ ಆದೇಶವನ್ನು ಸಮರ್ಪಕವಾಗಿ ಜಾರಿಗೆ ತರಲು ದೇವಾಲಯಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ಸಹ ನೇಮಿಸಬೇಕು ಎಂದು ಆದೇಶಿಸಿದೆ.

    ಈಗಾಗಲೇ ಕೇರಳದ ಗುರುವಾಯೂರಿನ ಶ್ರೀಕೃಷ್ಣ ದೇವಸ್ಥಾನ, ತಮಿಳುನಾಡಿನ ಮಧುರೈ ಮೀನಾಕ್ಷಿ ಸುಂದರೇಶ್ವರ ದೇವಸ್ಥಾನ ಮತ್ತು ಆಂಧ್ರಪ್ರದೇಶದ ತಿರುಪತಿ ಶ್ರೀವೆಂಕಟೇಶ್ವರ ದೇವಸ್ಥಾನ ಸೇರಿದಂತೆ ಪ್ರಸಿದ್ಧ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ನಿಷೇಧವನ್ನು ಜಾರಿಗೊಳಿಸಲಾಗಿದೆ. ಇದಲ್ಲದೇ ಮೊಬೈಲ್ ಡೆಪಾಸಿಟ್ ಮಾಡಲು ಭದ್ರತಾ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿಯ ಕ್ರಮವನ್ನು ಅಳವಡಿಸಿಕೊಳ್ಳಿ. ದೇವಸ್ಥಾನದ ಆವರಣವನ್ನು ಪ್ರವೇಶಿಸುವ ಮೊದಲು ಫೋನ್‍ಗಳನ್ನು ಡೆಪಾಸಿಟ್ ಮಾಡುವಂತಹ ವ್ಯವಸ್ಥೆ ಮಾಡಿ ಎಂದು ಕೋರ್ಟ್ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ʻಜೈಭೀಮ್‌ʼಗೆ ಬಿಗ್‌ ರಿಲೀಫ್‌ – ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್‌ ದಾಖಲಾದ ವಿರುದ್ಧ FIR ರದ್ದು

    ʻಜೈಭೀಮ್‌ʼಗೆ ಬಿಗ್‌ ರಿಲೀಫ್‌ – ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್‌ ದಾಖಲಾದ ವಿರುದ್ಧ FIR ರದ್ದು

    ಚೆನ್ನೈ: ತಮಿಳಿನ ಜೈಭೀಮ್ ಸಿನಿಮಾದಲ್ಲಿ ವಣ್ಣಿಯಾರ್ ಸಮುದಾಯವನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಟ ಸೂರ್ಯ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಮದ್ರಾಸ್ ಹೈಕೋರ್ಟ್ ಇಂದು ರದ್ದುಪಡಿಸಿದೆ.

    ಇವರಿಬ್ಬರೂ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್. ಸಂತೋಷ್ ಕುಮಾರ್ ಈ ತೀರ್ಪು ಪ್ರಕಟಿಸಿದ್ದು, ಪ್ರಕರಣವನ್ನು ರದ್ದುಪಡಿಸಿದ್ದಾರೆ. ಚಿತ್ರದಲ್ಲಿ ವಣ್ಣಿಯಾರ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ನಗರದ ಚೆನ್ನೈ ಮೂಲದ ವಕೀಲ ಕೆ. ಸಂತೋಷ್ ಮೆಟ್ರೋಪಾಲಿಯನ್ ಮ್ಯಾಜಿಸ್ಟ್ರೇಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ‘ಜೈ ಭೀಮ್’ ನಟ ಸೂರ್ಯಗೆ ಜೀವ ಬೆದರಿಕೆ- ನಟನ ಮನೆಗೆ ಪೊಲೀಸ್ ಭದ್ರತೆ

    ನಟ ಸೂರ್ಯ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ನ್ಯಾಯಾಲಯ ಮೇ 6 ರಂದು ಆದೇಶ ಹೊರಡಿಸಿತ್ತು. ನಂತರ ವೆಲಾಚೇರಿ ಪೊಲೀಸರು ಮೇ 17 ರಂದು ಸೂರ್ಯ ಮತ್ತು ಜ್ಞಾನವೇಲ್ ರಾಜ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು. ಇದನ್ನೂ ಓದಿ: ನಾನು ಯಾವಾಗಲೂ ಮೂಡ್‌ನಲ್ಲಿರುತ್ತೇನೆ ಎಂದ ಸೋನು ಶ್ರೀನಿವಾಸ್ ಗೌಡ

    ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಕೆ. ಚಂದ್ರು ಅವರು ವಕೀಲರಾಗಿದ್ದಾಗ ನಡೆಸಿದ ಕೇಸ್ ವೊಂದರ ಆಧಾರದ ಮೇಲೆ ಈ ಸಿನಿಮಾ ಮಾಡಲಾಗಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಕೆ ಚಂದ್ರು, ಮಾಜಿ ಐಪಿಪಿ ಪೆರುಮಾಳ ಸ್ವಾಮಿ ಹೆಸರು ಹೊರತುಪಡಿಸಿದರೆ ಉಳಿದ ಎಲ್ಲಾ ಪಾತ್ರಗಳ ಹೆಸರುಗಳನ್ನು ಬದಲಾಯಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]