Tag: Madras Highcourt

  • ಲಾವಣ್ಯ ಆತ್ಮಹತ್ಯೆ ಕೇಸ್ ತನಿಖೆ ಸಿಬಿಐ ಹೆಗಲಿಗೆ: ಹೈಕೋರ್ಟ್ ಆದೇಶ

    ಲಾವಣ್ಯ ಆತ್ಮಹತ್ಯೆ ಕೇಸ್ ತನಿಖೆ ಸಿಬಿಐ ಹೆಗಲಿಗೆ: ಹೈಕೋರ್ಟ್ ಆದೇಶ

    ಚೆನ್ನೈ: ದ್ವಿತೀಯ ಪಿಯುಸಿ ಓದುತ್ತಿದ್ದ ತಾಂಜವೂರಿನ ವಿದ್ಯಾರ್ಥಿನಿ ಲಾವಣ್ಯ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿ ಮದ್ರಾಸ್ ಹೈಕೋರ್ಟ್‍ನ ಮಧುರೈ ಪೀಠ ಮಹತ್ವದ ಆದೇಶ ಪ್ರಕಟಿಸಿದೆ.

    ಲಾವಣ್ಯ (17) ತಂಜಾವೂರು ಜಿಲ್ಲೆಯ ಕ್ರಿಶ್ಚಿಯನ್ ಸಂಸ್ಥೆಯಾದ ಇಮ್ಯಾಕ್ಯುಲೇಟ್ ಹಾರ್ಟ್ ಆಫ್ ಮೇರಿ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಅವಳಿಗೆ ಹಾಸ್ಟೆಲ್ ವಾರ್ಡನ್ ಸಗಯಾ ಮೇರಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಹಿಂಸೆ ಹಾಗೂ ಶೋಷಣೆಗೆ ನೀಡುತ್ತಿದ್ದಾರೆ ಎಂದು ವೀಡಿಯೋವೊಂದರಲ್ಲಿ ಹೇಳಿದ್ದಳು. ಈ ವೀಡಿಯೋ ಭಾರೀ ವೈರಲ್ ಆಗಿತ್ತು.

    ಈ ಹಿನ್ನೆಲೆಯಲ್ಲಿ ಲಾವಣ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದರು. ತಮಿಳುನಾಡು ಪೊಲೀಸರ ತನಿಖೆಯ ಮೇಲೆ ನಮಗೆ ನಂಬಿಕೆ ಇಲ್ಲ ಮತ್ತು ಈ ಬಗ್ಗೆ ಸಿಬಿಐ ತನಿಖೆಯಾಗಬೇಕೆಂದು ಲಾವಣ್ಯ ಅವರ ಪೋಷಕರು ಹೇಳಿದ್ದರು. ಪೊಲೀಸರು ಧಾರ್ಮಿಕ ಮತಾಂತರದ ಭಾಗವನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಕುಟುಂಬ ಆರೋಪಿಸಿತ್ತು. ಇದನ್ನೂ ಓದಿ: ಹಾಸ್ಟೆಲ್ ವಾರ್ಡನ್‍ನಿಂದ ಮತಾಂತರ ಕಿರುಕುಳ – ವಿದ್ಯಾರ್ಥಿನಿ ಆತ್ಮಹತ್ಯೆ

    ಜೊತೆಗೆ ಲಾವಣ್ಯ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ನಿರಾಕರಿಸಿದ್ದರಿಂದ ಸದಾ ಕಿರುಕುಳ ನೀಡುತ್ತಿದ್ದರು. ಇದನ್ನು ತಡೆಯಲಾರದೇ ಲಾವಣ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಮಿಳುನಾಡು ಬಿಜೆಪಿ ಆರೋಪಿಸಿತ್ತು. ಈ ವಿಚಾರ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದನ್ನೂ ಓದಿ: ಕುಡಿತ ಬಿಟ್ಟರೆ ಮಾತ್ರ ಮನೆಗೆ ಬರುತ್ತೇನೆ ಎಂದಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ

  • ಒಂದೇ ವರ್ಷದಲ್ಲಿ ನ್ಯಾಯಾಧೀಶೆಯಿಂದ 5 ಸಾವಿರ ಪ್ರಕರಣ ಇತ್ಯರ್ಥ

    ಒಂದೇ ವರ್ಷದಲ್ಲಿ ನ್ಯಾಯಾಧೀಶೆಯಿಂದ 5 ಸಾವಿರ ಪ್ರಕರಣ ಇತ್ಯರ್ಥ

    ಚೆನ್ನೈ: ವರ್ಷಾನು ವರ್ಷಗಳೇ ಕಳೆದರೂ ಬೆಟ್ಟದಷ್ಟು ಪ್ರಕರಣಗಳು ಕೋರ್ಟಿನಲ್ಲಿಯೇ ಒದ್ದಾಡುತ್ತಿರುತ್ತದೆ. ಹೀಗಿರುವಾಗ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಾಧೀಶೆಯಾಗಿದ್ದ ವಿಜಯ ತಹಿಲ್‍ರಮಣಿ ಅವರು ಕೇವಲ ಒಂದು ವರ್ಷದಲ್ಲಿ ಸುಮಾರು 5 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದಾರೆ.

    ವಿಜಯ ತಹಿಲ್‍ರಮಣಿ ಅವರು ತಮ್ಮ ಸೇವಾವಧಿ ವೇಳೆ 5 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದಾರೆ ಎಂದು ತಿಳಿದು ಬಂದಿದ್ದು, ನ್ಯಾಯಾಧೀಶೆಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ದೇಶದಲ್ಲಿನ 25 ಹೈ ಕೋರ್ಟ್‌ಗಳಲ್ಲಿ ಇನ್ನೂ 43 ಲಕ್ಷ ಪ್ರಕರಣಗಳು ಹಾಗೇ ಇತ್ಯರ್ಥಗೊಳ್ಳದೆ ಬಾಕಿ ಉಳಿದಿದೆ. 8 ಲಕ್ಷಕ್ಕಿಂತ ಹೆಚ್ಚು ಪ್ರಕರಣಗಳು ದಶಕಕ್ಕೂ ಹೆಚ್ಚು ಕಾಲದಿಂದ ಕೋರ್ಟಿನಲ್ಲಿಯೇ ನಡೆಯುತ್ತಿದೆ. ಹಾಗೆಯೇ ಜೂನ್ 1ರ ಮಾಹಿತಿ ಪ್ರಕಾರ, ಸುಪ್ರೀಂ ಕೋರ್ಟಿನಲ್ಲೇ ಬರೋಬ್ಬರಿ 1,58,669 ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿದೆ. ಹೀಗಿರುವಾಗ ವಿಜಯ ತಹಿಲ್‍ರಮಣಿ ಅವರು 1 ವರ್ಷದಲ್ಲಿ 5 ಸಾವಿರ ಪ್ರಕರಣಕ್ಕೆ ತೀರ್ಪು ಕೊಟ್ಟು ಭೇಷ್ ಎನಿಸಿಕೊಂಡಿದ್ದಾರೆ.

    ಮೇಘಾಲಯಕ್ಕೆ ವರ್ಗಾವಣೆಯಾದ ಬಳಿಕ ವಿಜಯ ತಹಿಲ್‍ರಮಣಿ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಮಹಾರಾಷ್ಟ್ರ ಮೂಲದವರಾದ ವಿಜಯ ಅವರು ಸದ್ಯ ಚೆನ್ನೈ ವಾತಾವರಣ ಚೆನ್ನಾಗಿದೆ. ಇಲ್ಲಿಯೇ ನಾನು ಇರುತ್ತೇನೆ. ಇಲ್ಲಿನ ವಾತಾವರಣ ನನಗೆ ತುಂಬಾ ಹಿಡಿಸಿದೆ. ನನ್ನ ಕುಟುಂಬಕ್ಕೂ ಚೆನ್ನೈ ಇಷ್ಟವಾಗಿದೆ. ಆದ್ದರಿಂದ ಮುಂಬೈಗೆ ಹಿಂತಿರುಗಿ ಹೋಗುವ ಬದಲು ಇಲ್ಲಿಯೇ ಇರುತ್ತೇವೆ ಎಂದಿದ್ದಾರೆ.

  • ಟಿಕ್ ಟಾಕ್ ನಿಷೇಧಿಸುವಂತೆ ಕೇಂದ್ರಕ್ಕೆ ಹೈಕೋರ್ಟ್ ಆದೇಶ

    ಟಿಕ್ ಟಾಕ್ ನಿಷೇಧಿಸುವಂತೆ ಕೇಂದ್ರಕ್ಕೆ ಹೈಕೋರ್ಟ್ ಆದೇಶ

    ಚೆನ್ನೈ: ಸದ್ಯ ಎಲ್ಲೆಡೆ ಹೆಸರುವಾಸಿಯಾಗಿರುವ ಶಾರ್ಟ್ ವಿಡಿಯೋ ಫ್ಲ್ಯಾಟ್‍ಫಾರ್ಮ್ ಟಿಕ್ ಟಾಕ್ ಅಪ್ಲಿಕೇಶನ್ ನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.

    ಟಿಕ್ ಟಾಕ್‍ನಂತಹ ಆ್ಯಪ್ ಯುವಕರ ಭವಿಷ್ಯ ಹಾಗೂ ಮಕ್ಕಳ ಮನಸ್ಥಿತಿಯನ್ನು ಹಾಳು ಮಾಡುತ್ತಿದೆ. ಈ ಕುರಿತು ನ್ಯಾ. ಎನ್ ಕಿರುಬಕರನ್ ಹಾಗೂ ನ್ಯಾ. ಎಸ್ ಸುಂದರ್ ಅವರಿದ್ದ ದ್ವಿಸದಸ್ಯ ಪೀಠ ಟಿಕ್ ಟಾಕ್ ವಿಡಿಯೋಗಳನ್ನು ಪ್ರಸಾರ ಮಾಡುವ ಮಾಧ್ಯಮಗಳನ್ನು ನಿಷೇಧಿಸುವಂತೆ ಆದೇಶಿಸಿದೆ. ಇದನ್ನೂ ಓದಿ:ದೇಶದಲ್ಲಿ ಬ್ಯಾನ್ ಆಗುತ್ತಾ ಟಿಕ್ ಟಾಕ್?

    ಮಕ್ಕಳು ಸೈಬರ್ ಸಂತ್ರಸ್ತ್ರರಾಗುವುದನ್ನು ತಪ್ಪಿಸಲು ಅಮೆರಿಕ ಸರ್ಕಾರ ಮಕ್ಕಳ ಆನ್‍ಲೈನ್ ಗೌಪ್ಯತೆ ರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿದೆ. ಇದೇ ರೀತಿಯಲ್ಲಿ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು ಎಂದು ಪೀಠ ಅಭಿಪ್ರಾಯಪಟ್ಟಿದೆ.

    ಫೆಬ್ರವರಿಯಲ್ಲಿ ತಮಿಳುನಾಡು ವಿಧಾನಸಭಾ ಅಧಿವೇಶನದಲ್ಲಿ ನಾಗಪಟ್ಟಣದ ಶಾಸಕ ತಮೀಮ್ ಅನ್ಸಾರಿ ಈ ಅಪ್ಲಿಕೇಶನ್ ಅನ್ನು ನಿಷೇಧ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಅಪ್ಲಿಕೇಶನ್ ನಿಂದಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುತ್ತಿದೆ ಎಂದು ಸದನಕ್ಕೆ ತಿಳಿಸಿದ್ದರು. ಇದನ್ನೂ ಓದಿ:ಟಿಕ್ ಟಾಕ್ ವಿಡಿಯೋ ಮಾಡಿ ಅಪ್ಲೋಡ್ ಮಾಡುವವರೇ ಎಚ್ಚರ

    ಈ ಮನವಿ ಸಂಬಂಧ ಮಾಹಿತಿ ತಂತ್ರಜ್ಞಾನ ಸಚಿವ ಎಂ. ಮಣಿಕಂಠನ್ ಟಿಕ್ ಟಾಕ್ ಬ್ಯಾನ್ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ. ಹೇಗೆ ಬ್ಲೂ ವೇಲ್ ಮಕ್ಕಳನ್ನು ಹಾಳು ಮಾಡುತ್ತಿದೆಯೋ ಅದೇ ರೀತಿ ಟಿಕ್ ಟಾಕ್‍ನಿಂದ ಯುವ ಜನತೆ ಹಾಳಾಗುತ್ತಿದ್ದಾರೆ. ತಮಿಳುನಾಡಿನ ಸಂಸ್ಕೃತಿ ಇದರಿಂದಾಗಿ ಹಾಳಾಗುತ್ತಿದೆ ಎಂದು ಅವರು ತಿಳಿಸಿದ್ದರು.

    ಟಿಕ್ ಟಾಕ್ ಆ್ಯಪ್ ಭಾರತದಲ್ಲಿ 16ರಿಂದ 24 ವಯಸ್ಸಿನವರು ಹೆಚ್ಚಾಗಿ ಬಳಸುತ್ತಾರೆ. ಜನವರಿ ತಿಂಗಳಿನಲ್ಲಿ ತಮಿಳುನಾಡಿನ ವಿರುದುನಗರದ ಜಿಲ್ಲೆಯಲ್ಲಿ ನಾಲ್ಕು ಜನರು ತಮಾಷೆಗಾಗಿ ಪೊಲೀಸ್ ಠಾಣೆಯಲ್ಲೇ ಪೊಲೀಸರ ಟಿಕ್ ಟಾಕ್ ವಿಡಿಯೋವನ್ನು ಮಾಡಿದ್ದರು. ಆಗ ಪೊಲೀಸರು ನಾಲ್ವರನ್ನು ಬಂಧಿಸಿದ್ದರು. ಹುಡುಗಿಯರ ಟಿಕ್ ಟಾಕ್ ವಿಡಿಯೋವನ್ನು ಡೌನ್ ಲೋಡ್ ಮಾಡಿ ಅದನ್ನು ತಿರುಚಿ ವೇಶ್ಯಾವಾಟಿಕೆ ದಂಧೆಗೆ ಗ್ರಾಹಕರನ್ನು ಸೆಳೆಯುತ್ತಿದ್ದ ಜಾಲವನ್ನು ತಮಿಳುನಾಡು ಪೊಲೀಸರು ಬೇಧಿಸಿದ್ದರು.

  • ’94’ ಕರುಣಾ ಕಥೆ

    ’94’ ಕರುಣಾ ಕಥೆ

    https://www.youtube.com/watch?v=GY-peQGWAK8

  • ಬಿಗ್ ಬುಲೆಟಿನ್ | 08-08-2018

    ಬಿಗ್ ಬುಲೆಟಿನ್ | 08-08-2018

    https://www.youtube.com/watch?v=v95r9qsPqko