Tag: magadi mla

  • ಮಾಗಡಿ ಜೆಡಿಎಸ್ ಶಾಸಕ ಎ.ಮಂಜುನಾಥ್‍ಗೂ ಕೊರೊನಾ ಭೀತಿ

    ಮಾಗಡಿ ಜೆಡಿಎಸ್ ಶಾಸಕ ಎ.ಮಂಜುನಾಥ್‍ಗೂ ಕೊರೊನಾ ಭೀತಿ

    – ಹೋಂ ಕ್ವಾರಂಟೈನ್ ಆದ ಶಾಸಕ

    ರಾಮನಗರ: ಮಾಗಡಿ ಜೆಡಿಎಸ್ ಶಾಸಕ ಎ.ಮಂಜುನಾಥ್‍ಗೂ ಕೊರೊನಾ ಭೀತಿ ಶುರುವಾಗಿದೆ.

    ಶಾಸಕ ಎ.ಮಂಜುನಾಥ್ ಅವರ ಆಪ್ತ ಕಾರ್ಯದರ್ಶಿ ಹಾಗೂ ಮತ್ತೋರ್ವ ಸ್ನೇಹಿತ ಒಕ್ಕಲಿಗರ ಸಂಘದ ನಿರ್ದೇಶಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸೋಂಕು ಪಾಸಿಟಿವ್ ಬಂದಿರುವ ಇಬ್ಬರು ಕೂಡ ಶಾಸಕರ ಜೊತೆಗಿದ್ದವರು, ಈ ಹಿನ್ನೆಲೆಯಲ್ಲಿ ಎ.ಮಂಜುನಾಥ್ ಅವರು ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

    ಶಾಸಕರ ಆಪ್ತ ಕಾರ್ಯದರ್ಶಿಗೆ ಬೆಂಗಳೂರಿನ ರಾಜರಾಜೇಶ್ವರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಈ ಬಗ್ಗೆ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿಕೊಳ್ಳುವ ಮೂಲಕ ತಾನು ಹೋಂ ಕ್ವಾರಂಟೈನ್ ಆಗಿರುವ ಬಗ್ಗೆ ತಿಳಿಸಿದ್ದಾರೆ. ಜೊತೆಗೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ನಾಳೆ ಶಾಸಕರ ಪರೀಕ್ಷಾ ವರದಿ ಬರುವ ಸಾಧ್ಯತೆಯಿದೆ. ಜೊತೆಗೆ ನಾನು ಕ್ವಾರಂಟೈನ್ ಆಗುತ್ತಿದ್ದು, ಜನರು ನನ್ನನ್ನು ದೂರವಾಣಿ ಮೂಲಕ ಸಂಪರ್ಕ ಮಾಡಬಹುದು ಎಂದು ಹೇಳಿದ್ದಾರೆ.

  • ಎಲೆಕ್ಷನ್ ಹೊತ್ತಲ್ಲೇ ಡೀಲ್‍ಗಿಳಿದ್ರಾ ಬಿಜೆಪಿ ಮುಖಂಡರು?

    ಎಲೆಕ್ಷನ್ ಹೊತ್ತಲ್ಲೇ ಡೀಲ್‍ಗಿಳಿದ್ರಾ ಬಿಜೆಪಿ ಮುಖಂಡರು?

    ರಾಮನಗರ: ಮಾಗಡಿ ಶಾಸಕ ಎ ಮಂಜುನಾಥ್ ರಿಂದ ತೆರವಾಗಿದ್ದ ಕುದೂರು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾಮಪತ್ರ ವಾಪಾಸ್ಸು ತೆಗೆದುಕೊಳ್ಳಲು ಡೀಲ್ ನಡೆದಿದೆ ಎನ್ನುವ ಆರೋಪವೊಂದು ಕೇಳಿ ಬಂದಿದೆ.

    ಕುದೂರು ಜಿ.ಪಂ ನ ಬಿಜೆಪಿ ಅಭ್ಯರ್ಥಿಯಾಗಿ ಹೇಮಂತ್ ನಾಮಪತ್ರ ಸಲ್ಲಿಸಿದ್ರು. ಆದ್ರೆ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್ ಹಾಗೂ ತಾಲೂಕು ಅಧ್ಯಕ್ಷ ರಂಗಧಾಮಯ್ಯ ಒತ್ತಡ ಹೇರಿ ನಾಮಪತ್ರ ವಾಪಾಸ್ಸು ತೆಗೆದುಕೊಳ್ಳುವಂತೆ ಮಾಡಿದ್ದಾರೆ ಎನ್ನುವ ಆರೋಪ ಬಂದಿದೆ.

    ನಾಮಪತ್ರ ಸಲ್ಲಿಸುವುದು ಬೇಡ ಎಂದು ಜೆಡಿಎಸ್ ಮುಖಂಡರು ಧಮ್ಕಿ ಕೂಡ ಹಾಕಿದ್ರು. ಆನಂತರ ರುದ್ರೇಶ್ ಹಾಗೂ ರಂಗಧಾಮಯ್ಯ ಕಾಂಗ್ರೆಸ್- ಜೆಡಿಎಸ್ ನಾಯಕರ ಜೊತೆ ಡೀಲ್ ಮಾಡಿಕೊಂಡಿದ್ದಾರೆ. ಹಣ ನೀಡುವುದು ಬೇಡ ನಾನು ಬರಿಗೈನಲ್ಲೆ ಮತಯಾಚನೆ ಮಾಡುತ್ತೇನೆ ಎಂದರೂ ಬಿಡಲಿಲ್ಲ. ಹೀಗಾದ್ರೆ ಯಾಕೆ ಬೇಕು ಬಿಜೆಪಿ ಸಹವಾಸ ಮುಂದಿನ ದಿನಗಳಲ್ಲಿ ಬಿಜೆಪಿಯಿಂದ ದೂರ ಉಳಿಯುವುದಾಗಿ ನಾಮಪತ್ರ ಸಲ್ಲಿಸಿದ್ದ ಹೇಮಂತ್ ಸ್ನೇಹಿತನೋರ್ವನ ಬಳಿ ಅಳಲು ತೋಡಿಕೊಂಡಿದ್ದಾರೆ.

    ಇದೀಗ ಇಬ್ಬರು ಡೀಲ್ ವಿಚಾರದ ಬಗ್ಗೆ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು ಬಿಜೆಪಿ ಮುಖಂಡರ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಕೇಳಿ ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv