Tag: Maha Vikas Aghadi

  • ಇವಿಎಂನಲ್ಲಿ ಅಡ್ಜಸ್ಟ್‌ಮೆಂಟ್‌, Give & Take Policy ಮಾಡ್ತಿದ್ದಾರೆ: ಸತೀಶ್‌ ಜಾರಕಿಹೊಳಿ

    ಇವಿಎಂನಲ್ಲಿ ಅಡ್ಜಸ್ಟ್‌ಮೆಂಟ್‌, Give & Take Policy ಮಾಡ್ತಿದ್ದಾರೆ: ಸತೀಶ್‌ ಜಾರಕಿಹೊಳಿ

    ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿಯವರು (Satish Jarkiholi) ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (Maha Vikas Aghadi) ಒಕ್ಕೂಟಕ್ಕೆ ಸೋಲಾದ ಬೆನ್ನಲ್ಲೇ ಇವಿಎಂ (EVM) ಮೇಲೆ ಸಂಶಯ ವ್ಯಕ್ತಪಡಿಸಿದ್ದಾರೆ.

    ಬೆಳಗಾವಿಯ ಕಾಂಗ್ರೆಸ್ (Congress) ಭವನದಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ಮಹಾ ವಿಕಾಸ್ ಅಘಾಡಿಗೆ ಸೋಲಾಗಿದೆ. ಇವಿಎಂ ಮಷೀನ್ ಇರುವವರೆಗೂ ಈ ರೀತಿ ಎಲ್ಲಾ ಆಗುತ್ತದೆ. ಇವಿಎಂ ಬಗ್ಗೆ ಸಾಕಷ್ಟು ಅನುಮಾನ ಇದೆ. ಸಾಕಷ್ಟು ಕಡೆಗಳಲ್ಲಿ ಇವಿಎಂ ಬಗ್ಗೆ ಚರ್ಚೆ ಆಗುತ್ತಿದೆ ಎಂದರು.

    ಒಂದು ಕಡೆ ಕೊಡ್ತಾರೆ, ಇನ್ನೊಂದು ಕಡೆ ಕಸಿದುಕೊಳ್ತಾರೆ. ಜಮ್ಮು ನಮಗೆ ಕೊಟ್ರೂ, ಹರಿಯಾಣವನ್ನು ಬಿಜೆಪಿಯವರು ತೆಗೆದುಕೊಂಡ್ರು. ಈ ರೀತಿ ಗೀವ್ & ಟೆಕ್ ಪಾಲಿಸಿ ಮಾಡ್ತಿದ್ದಾರೆ. ಅವರಿಗೆ ಬೇಕಾದದ್ದನ್ನು ತೆಗೆದುಕೊಳ್ತಾರೆ, ಬೇಡದ್ದನ್ನ ಬಿಡ್ತಾರೆ. ಇವಿಎಂನಲ್ಲೂ ಅಡ್ಜಸ್ಟ್ಮೆಂಟ್ ಇದೆ ಎಂದು ಅವರು ಗಂಭೀರ ಆರೋಪ ಮಾಡಿದರು.

    ಶಿಗ್ಗಾಂವಿಯಲ್ಲಿ ಐದು ಬಾರಿ ಸೋಲಲು ನಾಯಕತ್ವದ ಸಮಸ್ಯೆ ಇತ್ತು. ಹಿಂದೂ ಮುಸ್ಲಿಂ ಅನ್ನೋ ವಿಚಾರ ಅಲ್ಲಿ ಮುಖ್ಯ ಎನಿಸಿತ್ತು. ಶಿವಾನಂದ ಪಾಟೀಲ್, ಮಾನೆಯವರು ಮುನ್ನೆಲೆಗೆ ಬಂದಿದ್ದಕ್ಕೆ ಮುಸ್ಲಿಂ ಅನ್ನೋದನ್ನು ಬಿಟ್ಟು ಕಾಂಗ್ರೆಸ್ ಅಭ್ಯರ್ಥಿ ಎಂಬುದು ಮುಖ್ಯವಾಯ್ತು ಎಂದಿದ್ದಾರೆ.

    ಅಹಿಂದ ವರ್ಗಕ್ಕೆ ನ್ಯಾಯ ಕೊಡಬೇಕು ಎಂದು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದೆವು. ಅಹಿಂದ ವರ್ಗ ಒಂದಾಯಿತು ಇದರಿಂದ ಗೆಲುವಾಗಿದೆ. ಮಾಜಿ ಮುಖ್ಯಮಂತ್ರಿ, ಪ್ರಬಲ ರಾಜಕಾರಣಿ ವಿರುದ್ಧ ಚುನಾವಣೆ ಹೇಗೆ ಮಾಡ್ತಾರೆ ಎಂಬ ಪ್ರಶ್ನೆ ಇತ್ತು. ಕೆಲವು ತಂತ್ರಗಾರಿಕೆ ಮೂಲಕ ನಾವು ಹೇಗೆ ಚುನಾವಣೆ ಮಾಡುತ್ತೆವೆಯೋ ಅದೇ ಮಾದರಿಯಲ್ಲಿ ಚುನಾವಣೆ ಮಾಡಿದ್ದೇವೆ. ಈ ಸಾರಿ ಚುನಾವಣೆಯಿಂದ ಮುಸ್ಲಿಮರಿಗೆ ಟಿಕೆಟ್ ಕೊಟ್ಟರೆ ಗೆಲ್ತಾರೆ ಎಂಬ ಸಂದೇಶ ಹೋಗಿದೆ. ಶಿಗ್ಗಾಂವಿ ಗೆಲವು ನಮಗೆ ಡಬಲ್ ಪ್ರಮೋಷನ್ ಆಗಿದೆ. ಡಿಸಿಎಂ ಸ್ಥಾನ ಇಲ್ಲದೇ ನಾವು ಇಲ್ಲಿ ಗೆಲ್ಲಿಸಿಕೊಟ್ಟಿದ್ದೇವೆ ಎಂದಿದ್ದಾರೆ.

    ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ (By Election) ಕಾಂಗ್ರೆಸ್ ಗೆಲ್ಲಲು ಅಭಿವೃದ್ಧಿ, ಗ್ಯಾರಂಟಿ ಹಾಗೂ ಕಾರ್ಯಕರ್ತರು ಕಾರಣ. ಶಾಸಕರು, ಸಿಎಂ ಬೆಂಬಲದಿಂದ ಗೆಲ್ಲಲು ಸಾಧ್ಯವಾಗಿದೆ. ಗೆದ್ದ ಅಭ್ಯರ್ಥಿಗಳಿಗೆ, ನಮ್ಮ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

    ಸಿಎಂ ಬದಲಾವಣೆ ವಿಚಾರವಾಗಿ, ಐದು ವರ್ಷ ಅವರೇ ಇರ್ತಾರೆ. ಇನ್ನೂ ವಕ್ಫ್ ವಿಚಾರದಲ್ಲಿ ಜಾಸ್ತಿ ಪರಿಣಾಮ ಆಗಿದ್ದು ಮುಸ್ಲಿಮರಿಗೆ ಎಂದಿದ್ದಾರೆ.

  • ಅಭಿವೃದ್ಧಿಗೆ ಬ್ರೇಕ್ ಹಾಕುವಲ್ಲಿ ಕಾಂಗ್ರೆಸ್, ಮಿತ್ರಪಕ್ಷಗಳಿಂದ ಪಿಹೆಚ್‌ಡಿ: ಮೋದಿ ವಾಗ್ದಾಳಿ

    ಅಭಿವೃದ್ಧಿಗೆ ಬ್ರೇಕ್ ಹಾಕುವಲ್ಲಿ ಕಾಂಗ್ರೆಸ್, ಮಿತ್ರಪಕ್ಷಗಳಿಂದ ಪಿಹೆಚ್‌ಡಿ: ಮೋದಿ ವಾಗ್ದಾಳಿ

    ಮುಂಬೈ: ಭ್ರಷ್ಟಾಚಾರದ ಮೂಲಕ ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುವಲ್ಲಿ ಕಾಂಗ್ರೆಸ್ (Congress) ಹಾಗೂ ಮಿತ್ರಪಕ್ಷಗಳು ಪಿಹೆಚ್‌ಡಿ ಮಾಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ.

    ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಚಿಮೂರ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಅವರು ಮಾತನಾಡಿದರು. ಈ ವೇಳೆ, ಉದ್ಧವ್ ಠಾಕ್ರೆ ಅವರ ಶಿವಸೇನೆ, ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಾಂಗ್ರೆಸ್‌ನ ಮೈತ್ರಿಯ ಮಹಾ ವಿಕಾಸ್ ಅಘಾಡಿ (Maha Vikas Aghadi ) ಮಹಾರಾಷ್ಟ್ರದ ಬೆಳವಣಿಗೆಗೆ ಹಾನಿಕಾರಕವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಚಂದ್ರಾಪುರದ ಜನರು ರೈಲು ಸಂಪರ್ಕಕ್ಕೆ ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಮತ್ತು ಅಘಾಡಿ ಅದಕ್ಕೆ ಅವಕಾಶ ನೀಡಲಿಲ್ಲ. ಮಹಾರಾಷ್ಟ್ರದ ಕ್ಷಿಪ್ರ ಅಭಿವೃದ್ಧಿಯು ಅಘಾಡಿಗೆ ಸಾಧ್ಯವಿಲ್ಲ. ಅವರು ಅಭಿವೃದ್ಧಿ ಕಾರ್ಯಗಳಿಗೆ ಬ್ರೇಕ್ ಹಾಕುವಲ್ಲಿ ಪಿಹೆಚ್‌ಡಿ ಮಾಡಿದ್ದಾರೆ. ಕಾಂಗ್ರೆಸ್ ಅದರಲ್ಲಿ ಡಬಲ್ ಪಿಹೆಚ್‌ಡಿ ಮಾಡಿದೆ. ಅವರೆಲ್ಲ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬದ ವಿರುದ್ಧ, ದೇಶವನ್ನು ಆಳಲು ಹುಟ್ಟಿದೆ ಎಂಬುದು ಕಾಂಗ್ರೆಸ್‌ನ ಮನಸ್ಥಿತಿಯಾಗಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್‌ ಹಿಂದುಳಿದ ಸಮುದಾಯಗಳ ಪ್ರಗತಿಗೆ ಅದು ಅಡ್ಡಿಪಡಿಸಿದೆ. ದಲಿತರು, ಹಿಂದುಳಿದವರು ಮತ್ತು ಆದಿವಾಸಿಗಳು ಪ್ರಗತಿ ಸಾಧಿಸಲು ಕಾಂಗ್ರೆಸ್ ಎಂದಿಗೂ ಅವಕಾಶ ನೀಡಲಿಲ್ಲ ಎಂದು ಆರೋಪಿಸಿದರು.

    ಮಹಾರಾಷ್ಟ್ರದಲ್ಲಿ 288 ಸ್ಥಾನಗಳಿಗೆ ನ.20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ನ.23 ರಂದು ಫಲಿತಾಂಶ ಪ್ರಕಟವಾಗಲಿದೆ.

  • Maharashtra Polls | 28 ಬಂಡಾಯ ಅಭ್ಯರ್ಥಿಗಳನ್ನು ಅಮಾನತುಗೊಳಿಸಿದ ಕಾಂಗ್ರೆಸ್‌

    Maharashtra Polls | 28 ಬಂಡಾಯ ಅಭ್ಯರ್ಥಿಗಳನ್ನು ಅಮಾನತುಗೊಳಿಸಿದ ಕಾಂಗ್ರೆಸ್‌

    ಮುಂಬೈ: ವಿಧಾನಸಭಾ ಚುನಾವಣೆ (Maharashtra Polls) ಹೊಸ್ತಿಲಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ 7 ಬಂಡಾಯ ಅಭ್ಯರ್ಥಿಗಳನ್ನು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ (Congress) ಸಮಿತಿ (ಎಂಪಿಸಿಸಿ) ಭಾನುವಾರ ರಾತ್ರಿ ಅಮಾನತುಗೊಳಿಸಿದೆ.

    ಅಮಾನತುಗೊಂಡಿರುವ ನಾಯಕರಲ್ಲಿ ಶಾಮಕಾಂತ್ ಸನೇರ್, ರಾಜೇಂದ್ರ ಠಾಕೂರ್, ಅಬಾ ಬಾಗುಲ್, ಮನೀಶ್ ಆನಂದ್, ಸುರೇಶ್ ಕುಮಾರ್ ಜೇತ್ಲಿಯಾ, ಕಲ್ಯಾಣ್ ಬೋರಾಡೆ ಮತ್ತು ಚಂದ್ರಪಾಲ್ ಚೌಕ್ಸೆ ಸೇರಿದ್ದಾರೆ. ಶನಿವಾರ ಎಂಪಿಸಿಸಿ ಇತರ 21 ಬಂಡಾಯ ಅಭ್ಯರ್ಥಿಗಳನ್ನು ಅಮಾನತುಗೊಳಿಸಿತ್ತು. ಈ ಮೂಲಕ 22 ಕ್ಷೇತ್ರಗಳಲ್ಲಿ ಒಟ್ಟು ಅಮಾನತುಗೊಂಡವರ ಸಂಖ್ಯೆ 28 ಕ್ಕೆ ಏರಿದೆ.

    ಈ ಹಿಂದೆ ಅಮಾನತುಗೊಂಡಿರುವ ನಾಯಕರ ಪಟ್ಟಿಯಲ್ಲಿ ಆನಂದರಾವ್ ಗೆಡಂ, ಶಿಲು ಚಿಮುರ್ಕರ್, ಸೋನಾಲ್ ಕೋವೆ, ಭರತ್ ಯೆರೆಮೆ, ಅಭಿಲಾಶಾ ಗವಟೂರೆ, ಪ್ರೇಮಸಾಗರ್ ಗನ್ವೀರ್, ಅಜಯ್ ಲಾಂಜೇವರ್, ವಿಲಾಸ್ ಪಾಟೀಲ್, ಆಸ್ಮಾ ಜಾವದ್ ಚಿಖ್ಲೇಕರ್, ಹಂಸಕುಮಾರ್ ಪಾಂಡೆ, ಕಮಲ್ ವ್ಯಾವಹರೆ, ಮೋಹನ್ರಾವ್ ದಾಂಡೇಕರ್, ಮಂಗಲ್ ವಿಲಾಸ್, ಮಂಗಲ್ ವಿಲಾಸ್ ಮನೋಜ ಶಿಂಧೆ, ಸುರೇಶ ಪಾಟೀಲಖೇಡೆ, ವಿಜಯ ಖಡ್ಸೆ, ಶಬೀರ್ ಖಾನ್, ಅವಿನಾಶ್ ಲಾಡ್, ಯಗ್ವಾಲ್ಯ ಜಿಚ್ಕರ್, ರಾಜು ಜೋಡೆ ಮತ್ತು ರಾಜೇಂದ್ರ ಮುಕಾಹ್ ಸೇರಿದ್ದಾರೆ.

    ಅಮಾನತುಗೊಂಡ ಅಭ್ಯರ್ಥಿಗಳು ಮಹಾ ವಿಕಾಸ್ ಅಘಾಡಿ (MVA) ಅಧಿಕೃತ ನಾಮನಿರ್ದೇಶಿತರ ವಿರುದ್ಧ ಸ್ಪರ್ಧಿಸಲಿದ್ದಾರೆ. ಇದಕ್ಕೂ ಮೊದಲು, ಎಂವಿಎ (Maha Vikas Aghadi) ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸುವ ಪಕ್ಷದ ಬಂಡಾಯ ಅಭ್ಯರ್ಥಿಗಳು ಆರು ವರ್ಷಗಳ ಅಮಾನತು ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಎಚ್ಚರಿಸಿದ್ದರು.

    ನ.20 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ. ನ.23 ರಂದು ಮತ ಎಣಿಕೆ ನಡೆಯಲಿದೆ.

  • ಕೇಳಿದ್ದು 18 ಕ್ಷೇತ್ರ, ಸಿಕ್ಕಿದ್ದು 10 – ಮುಂಬೈ ಕಾಂಗ್ರೆಸ್‌ನಲ್ಲಿ ಬಿರುಕು

    ಕೇಳಿದ್ದು 18 ಕ್ಷೇತ್ರ, ಸಿಕ್ಕಿದ್ದು 10 – ಮುಂಬೈ ಕಾಂಗ್ರೆಸ್‌ನಲ್ಲಿ ಬಿರುಕು

    ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ (Maharashtra Assembly elections) ಸೀಟು ಹಂಚಿಕೆ ವಿಚಾರದಲ್ಲಿ ಮಹಾ ವಿಕಾಸ್ ಅಘಾಡಿ (Maha Vikas Aghadi) ಹೆಣಗಾಡುತ್ತಿದೆ. ಇದರ ನಡುವೆ ನಾಮಪತ್ರ ಸಲ್ಲಿಕೆಗೆ ಇನ್ನೆರಡು ದಿನ ಬಾಕಿ ಉಳಿದಿದ್ದು ಹಲವು ಕಾಂಗ್ರೆಸ್ (Congress ) ನಾಯಕರು ಸೀಟು ಹಂಚಿಕೆ ವಿಚಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಮುಂಬೈನಲ್ಲಿ (Mumbai) 36 ವಿಧಾನಸಭಾ ಕ್ಷೇತ್ರಗಳ ಪೈಕಿ 18 ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷವು ಆರಂಭದಲ್ಲಿ ಬೇಡಿಕೆ ಇಟ್ಟಿತ್ತು. ಈಗ ಕಾಂಗ್ರೆಸ್ ಕೇವಲ 10 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ. ಇದು ಕೆಲವು ನಾಯಕರಲ್ಲಿ ಅಸಮಾಧಾನವನ್ನು ಉಂಟುಮಾಡಿದೆ ಎಂದು ವರದಿಯಾಗಿದೆ.

    ಮುಂಬೈ ಕಾಂಗ್ರೆಸ್ ಅಧ್ಯಕ್ಷ ವರ್ಷಾ ಗಾಯಕ್‌ವಾಡ್ ಅವರು ಪಕ್ಷದ ಟಿಕೆಟ್‌ ಹಂಚಿಕೆಯಲ್ಲಿನ ಅಸಮಾಧಾನ ವದಂತಿಯನ್ನು ತಳ್ಳಿಹಾಕಿದ್ದಾರೆ. ವದಂತಿಗಳನ್ನು ಹರಡುವವರು ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಜನರು ಎಂದು ಆರೋಪಿಸಿದ್ದಾರೆ. ಅಲ್ಲದೇ ಅರ್ಹತೆ ಆಧರಿಸಿ ಟಿಕೆಟ್ ಹಂಚಿಕೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಬೇಸರಗೊಂಡವರು ಅಥವಾ ಟಿಕೆಟ್ ಸಿಗದವರು ಏನು ಬೇಕಾದರೂ ಹೇಳಬಹುದು ಆದರೆ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    ಈ ಚುನಾವಣೆಯಲ್ಲಿ ಹಾಲಿ ಶಾಸಕ ಅಸ್ಲಾಂ ಶೇಖ್ ಮತ್ತು ಅಮೀನ್ ಪಟೇಲ್ ಅವರು ಮಲಾಡ್ ಪಶ್ಚಿಮ ಮತ್ತು ಮುಂಬಾದೇವಿ ಕ್ಷೇತ್ರಗಳನ್ನು ಉಳಿಸಿಕೊಂಡಿದ್ದಾರೆ. ಆಂತರಿಕ ವಿರೋಧದ ನಡುವೆಯೂ ಗಾಯಕ್ವಾಡ್ ಸಹೋದರಿ ಜ್ಯೋತಿ ಧಾರಾವಿ ಟಿಕೆಟ್ ಪಡೆದುಕೊಂಡಿದ್ದು, ಮಾಜಿ ಸಚಿವ ನಸೀಮ್ ಖಾನ್ ಚಾಂಡಿವಿಲಿಯಿಂದ ಸ್ಪರ್ಧಿಸಲಿದ್ದಾರೆ.

    ಇಲ್ಲಿಯವರೆಗೂ ಮಹಾರಾಷ್ಟ್ರದಲ್ಲಿ ಎಂವಿಎ 255 ಸ್ಥಾನಗಳಿಗೆ ಸೀಟು ಹಂಚಿಕೆಯನ್ನು ಮಾಡಿದೆ. ಮೈತ್ರಿಯ ಪ್ರತಿ ಪಕ್ಷವೂ 85 ಸ್ಥಾನಗಳನ್ನು ಪಡೆಯಲಿವೆ. ಕಾಂಗ್ರೆಸ್ ಇದುವರೆಗೂ 71 ಅಭ್ಯರ್ಥಿಗಳನ್ನು ಘೋಷಿಸಿದೆ. ಪಕ್ಷವು ವಿದರ್ಭದಿಂದ ಗರಿಷ್ಠ 30 ಅಭ್ಯರ್ಥಿಗಳನ್ನು ಹೆಸರಿಸಿದೆ. ಪಕ್ಷವು ಮುಂಬೈ ಮೆಟ್ರೋಪಾಲಿಟನ್ ಪ್ರದೇಶ (ಎಂಎಂಆರ್) ಮತ್ತು ಕೊಂಕಣದಿಂದ 14 ಅಭ್ಯರ್ಥಿಗಳನ್ನು, ಪಶ್ಚಿಮ ಮಹಾರಾಷ್ಟ್ರದಿಂದ 13, ಮರಾಠವಾಡದಿಂದ 10 ಮತ್ತು ಉತ್ತರ ಮಹಾರಾಷ್ಟ್ರದಿಂದ 8 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಉದ್ಧವ್ ಠಾಕ್ರೆ ಅವರ ಶಿವ ಸೇನೆಯು 83 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

  • ಧರೆಗುರುಳಿದ ಶಿವಾಜಿ ಪ್ರತಿಮೆ; ಮಹಾರಾಷ್ಟ್ರ ಸರ್ಕಾರದ ವಿರುದ್ಧ `ಚಪ್ಪಲಿ ಸೇವೆ’ ಪ್ರತಿಭಟನೆ ನಡೆಸಿದ ವಿಪಕ್ಷಗಳು

    ಧರೆಗುರುಳಿದ ಶಿವಾಜಿ ಪ್ರತಿಮೆ; ಮಹಾರಾಷ್ಟ್ರ ಸರ್ಕಾರದ ವಿರುದ್ಧ `ಚಪ್ಪಲಿ ಸೇವೆ’ ಪ್ರತಿಭಟನೆ ನಡೆಸಿದ ವಿಪಕ್ಷಗಳು

    ಮುಂಬೈ: ಸಿಂಧುದುರ್ಗದ ಮಾಲ್ವಾನ್‍ನಲ್ಲಿ ಛತ್ರಪತಿ ಶಿವಾಜಿಯವರ 35 ಅಡಿಯ ಪ್ರತಿಮೆ (Shivaji Statue) ನೆಲಕ್ಕೆ ಉರುಳಿದ ವಿಚಾರಕ್ಕೆ ಸಂಬಂಧಿಸಿದಂತೆ ಮಹಾ ವಿಕಾಸ್ ಅಘಾಡಿಯ (Maha Vikas Aghadi) ಪ್ರಮುಖ ನಾಯಕರಾದ ಶರದ್ ಪವಾರ್, ಉದ್ಧವ್ ಠಾಕ್ರೆ ಮತ್ತು ನಾನಾ ಪಟೋಲೆ ಅವರ ನೇತೃತ್ವದಲ್ಲಿ ಮುಂಬೈನಲ್ಲಿ (Mumbai) ರಾಜ್ಯ ಸರ್ಕಾರದ ವಿರುದ್ಧ `ಜೋಡ್ ಮಾರೊ’ (Jode Maro) ಪ್ರತಿಭಟನೆ ನಡೆಯುತ್ತಿದೆ.

    ನಗರದ ಹುತಾತ್ಮ ಚೌಕ್‍ನಿಂದ ಗೇಟ್‍ವೇ ಆಫ್ ಇಂಡಿಯಾದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ವೇಳೆ ಏಕನಾಥ್ ಶಿಂಧೆ ಸರ್ಕಾರದಿಂದ ಭಾರಿ ಭದ್ರತೆಯನ್ನು ನಿಯೋಜಿಸಲಾಗಿತ್ತು. ಪ್ರತಿಭಟನೆ ಹಿನ್ನೆಲೆ ಗೇಟ್‍ವೇ ಆಫ್ ಇಂಡಿಯಾಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

    ಆಪ್ ಬಣವು ತನ್ನ ಆಂದೋಲನವನ್ನು `ಜೋಡ್ ಮಾರೋ’ (ಚಪ್ಪಲಿಯಿಂದ ಹೊಡೆಯಿರಿ) ಪ್ರತಿಭಟನೆ ಎಂದು ಕರೆದಿದೆ. ಇನ್ನೂ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಜನರಿಗೆ ಕರೆ ನೀಡಿರುವ ಶಿವಸೇನೆ (ಯುಬಿಟಿ) ‘ಮಹಾರಾಷ್ಟ್ರವನ್ನು ಜಾಗೃತಗೊಳಿಸಲು’ ಶಿವಾಜಿಯ ಪಾದಗಳಿಗೆ ನಮಸ್ಕರಿಸಲು ಬರುತ್ತಿದ್ದೇವೆ ಎಂದು ಟ್ವೀಟ್ ಮಾಡಿದೆ.

    ಭ್ರಷ್ಟ ಶಿವದ್ರೋಹಿಗಳಿಗೆ ಕ್ಷಮೆ ಇಲ್ಲ. ಕಳಪೆ ಕೆಲಸ ಮಾಡಿದ, ಭ್ರಷ್ಟಾಚಾರ ಎಸಗಿದ, ಶಿವಾಜಿಯನ್ನು ಅವಮಾನಿಸಿದ ಶಿವದ್ರೋಹಿಗಳಿಗೆ ತಕ್ಕ ಪಾಠ ಕಲಿಸುವ ಉದ್ದೇಶದಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ರಾಜ್ಯ ಘಟಕ ಹೇಳಿದೆ.

    ಕಳೆದ 8 ತಿಂಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಶಿವಾಜಿ ಪ್ರತಿಮೆ ಕುಸಿದ ಘಟನೆ ಮಹಾರಾಷ್ಟ್ರದಲ್ಲಿ ಭಾರಿ ರಾಜಕೀಯ ಸಂಚಲನ ಮೂಡಿಸಿದೆ. ಈ ಯೋಜನೆಯನ್ನು ನೌಕಾಪಡೆಯು ರಾಜ್ಯ ಸರ್ಕಾರದ ಸಮನ್ವಯದೊಂದಿಗೆ ನಿರ್ವಹಿಸಿತ್ತು.

    ಪೊಲೀಸರು ಯೋಜನೆಯ ರಚನಾತ್ಮಕ ಸಲಹೆಗಾರ ಮತ್ತು ಅದರ ಗುತ್ತಿಗೆದಾರನನ್ನು ಬಂಧಿಸಿದ್ದಾರೆ. ಬಂಧಿತನ ವಿರುದ್ಧ ಇತರರ ಜೀವ ಮತ್ತು ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕಾರ್ಯಕ್ಕೆ ಸಂಬಂಧಿಸಿದ ಸೆಕ್ಷನ್‍ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

    ಶುಕ್ರವಾರ ಪ್ರಧಾನಿ ಮೋದಿಯವರು ಪ್ರತಿಮೆ ಕುಸಿತಕ್ಕೆ ಜನರಲ್ಲಿ ಕ್ಷಮೆಯಾಚಿಸಿದ್ದರು. “ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಹೆಸರು ಅಥವಾ ರಾಜನಲ್ಲ. ನಮಗೆ ಅವರು ನಮ್ಮ ಆರಾಧ್ಯದೈವ. ಇಂದು ನಾನು ಅವರ ಪಾದಗಳಿಗೆ ತಲೆಬಾಗಿ ನನ್ನ ದೇವರನ್ನು ಕ್ಷಮೆಯಾಚಿಸುತ್ತೇನೆ. ಜನರಲ್ಲಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದರು.

  • ಬಿಲ್ಲು-ಬಾಣಕ್ಕೆ 2000 ಕೋಟಿ ಡೀಲ್ – ಸಂಜಯ್ ರಾವತ್ ಬಾಂಬ್

    ಬಿಲ್ಲು-ಬಾಣಕ್ಕೆ 2000 ಕೋಟಿ ಡೀಲ್ – ಸಂಜಯ್ ರಾವತ್ ಬಾಂಬ್

    ಮುಂಬೈ: ಏಕನಾಥ್ ಶಿಂಧೆ (Eknath Shinde) ಬಣಕ್ಕೆ ಶಿವಸೇನೆ (Shiv Sena) ಹೆಸರು ಮತ್ತು ಚಿಹ್ನೆಯನ್ನು ಚುನಾವಣಾ ಆಯೋಗ (Election Commission) ನೀಡಿದ ಬೆನ್ನಲ್ಲೇ 2000 ಕೋಟಿ ರೂ.ಗಳ ಡೀಲ್ ನಡೆದಿದೆ ಎಂದು ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ.

    ಹೆಸರು ಮತ್ತು ಚಿಹ್ನೆ ಖರೀದಿಸಲು 2000 ಕೋಟಿ ರೂ.ಗಳ ಒಳಒಪ್ಪಂದ ನಡೆದಿದೆ ಎಂದು ಸಂಜಯ್ ರಾವತ್ (Sanjay Raut) ಸರಣಿ ಟ್ವಿಟ್‍ಗಳ ಮೂಲಕ ಆರೋಪಿಸಿದ್ದಾರೆ. 2000 ಕೋಟಿ ರೂ. ಇದು ಪ್ರಾಥಮಿಕ ಅಂಕಿ ಅಂಶವಾಗಿದೆ. ಆರೋಪಕ್ಕೆ ಸೂಕ್ತ ದಾಖಲೆಗಳಿದ್ದು ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಟರ್ಕಿ, ಸಿರಿಯಾ ಭೂಕಂಪ- ಸಾವಿನ ಸಂಖ್ಯೆ 41 ಸಾವಿರಕ್ಕೆ ಏರಿಕೆ

    ಈ ಆರೋಪವನ್ನು ಶಿಂಧೆ ಬಣದ ಶಾಸಕ ಸದಾ ಸರ್ವಾಂಕರ್ ತಳ್ಳಿ ಹಾಕಿದ್ದು, ಸಂಜಯ್ ರಾವತ್ ಕ್ಯಾಶೀಯರ್ ಆಗಿದ್ದರೆ ಎಂದು ವ್ಯಂಗ್ಯ ಮಾಡಿದ್ದಾರೆ.

    ಇತ್ತೀಚೆಗೆ ಚುನಾವಣಾ ಆಯೋಗವು ಏಕ್‍ನಾಥ್ ಶಿಂಧೆ ಬಣವನ್ನು ಶಿವಸೇನೆ ಎಂದು ಗುರುತಿಸಿ ಅದಕ್ಕೆ ಬಿಲ್ಲು ಬಾಣವನ್ನು ಗುರುತಾಗಿ ಸೂಚಿಸಿ ಆದೇಶಿಸಿತ್ತು.

    2019ರಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳುವ ಭರವಸೆಯನ್ನು ತಳ್ಳಿಹಾಕಿ ಶಿವಸೇನೆ, ಬಿಜೆಪಿಯೊಂದಿಗಿನ ಮೈತ್ರಿಯನ್ನು ಕಡಿದುಕೊಂಡಿತ್ತು. ನಂತರ ನ್ಯಾಷಲಿಸ್ಟ್ ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಮಹಾ ವಿಕಾಸ್ ಅಘಾಡಿ (Maha Vikas Aghadi) ಸರ್ಕಾರ ಬಂದಿತ್ತು. ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ಏಕನಾಥ್ ಶಿಂಧೆ ಬಣದ ಬಂಡಾಯದಿಂದ ಎನ್‍ಡಿಎ ಸರ್ಕಾರದ ಅಧಿಕಾರ ಹಿಡಿದಿತ್ತು. ಇದನ್ನೂ ಓದಿ: ನನ್ನ ಮೇಲೆ ಹಬ್ಬಿಸ್ತಿರೊ ಸುಳ್ಳು ಆಪಾದನೆಗಳೆಲ್ಲ ವ್ಯವಸ್ಥಿತ ಪಿತೂರಿ: ರೂಪಾಗೆ ರೋಹಿಣಿ ತಿರುಗೇಟು

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮುಂದಿನ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಒಟ್ಟಾಗಿ ಸ್ಪರ್ಧೆ: ಶರದ್ ಪವಾರ್

    ಮುಂದಿನ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಒಟ್ಟಾಗಿ ಸ್ಪರ್ಧೆ: ಶರದ್ ಪವಾರ್

    ಮುಂಬೈ: ಮಹಾ ವಿಕಾಸ್ ಅಘಾಡಿ ಮಿತ್ರ ಪಕ್ಷಗಳಾದ ಶಿವಸೇನೆ, ಎನ್‍ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡುತ್ತೇವೆ ಎಂದು ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಭರವಸೆ ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಎಂವಿಎ ಘಟಕಗಳು ಒಟ್ಟಾಗಿ ಸ್ಪರ್ಧಿಸಬೇಕು ಎಂಬುದು ನನ್ನ ವೈಯಕ್ತಿಕ ಆಶಯವಾಗಿದೆ. ಈ ಬಗ್ಗೆ ಮೊದಲು ನನ್ನ ಪಕ್ಷದ ನಾಯಕರೊಂದಿಗೆ ಚರ್ಚಿಸುತ್ತೇನೆ. ನಂತರ ಮಿತ್ರ ಪಕ್ಷದೊಂದಿಗೆ ಮಾತುಕತೆ ನಡೆಸಿ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದರು.

    ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವು ಜೂನ್ 29 ರಂದು ಪತನಗೊಂಡಿತು. ಶಿವಸೇನೆಯು ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿತು. ಇದನ್ನೂ ಓದಿ:ಮೋದಿ ಈ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ: ಕೆಸಿಆರ್

    ಜೂನ್ 30ರಂದು ಶಿಂಧೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶಿಂಧೆ ಅವರು ಶಿವಸೇನೆಯ 40 ಬಂಡಾಯ ಶಾಸಕರ ಬೆಂಬಲವನ್ನು ಹೊಂದಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ – ಟಿಎಂಸಿ ನಡುವೆ `ಕಾಳಿ’ ಕದನ

    Live Tv
    [brid partner=56869869 player=32851 video=960834 autoplay=true]

  • 5,000 ಕೋಟಿ ಮೌಲ್ಯದ ಯೋಜನೆ- ಚೀನಿ ಕಂಪನಿಗಳ ಜೊತೆಗಿನ ಒಪ್ಪಂದಕ್ಕೆ ‘ಮಹಾ’ ಸರ್ಕಾರದ ಬ್ರೇಕ್

    5,000 ಕೋಟಿ ಮೌಲ್ಯದ ಯೋಜನೆ- ಚೀನಿ ಕಂಪನಿಗಳ ಜೊತೆಗಿನ ಒಪ್ಪಂದಕ್ಕೆ ‘ಮಹಾ’ ಸರ್ಕಾರದ ಬ್ರೇಕ್

    ಮುಂಬೈ: ಲಡಾಖ್‍ನ ಗಾಲ್ವಾನ್ ಕಣಿವೆಯಲ್ಲಿ ಚೀನಾ-ಭಾರತದ ಸಂಘರ್ಷದ ಬಳಿಕ ದೇಶದಲ್ಲಿ ಚೀನಾ ವಸ್ತುಗಳು ಹಾಗೂ ಸೇವೆಗಳನ್ನು ಕೈಬಿಡುವಂತೆ ಕೂಗು ಕೇಳಿ ಬರುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

    ಮಹಾರಾಷ್ಟ್ರ ಸರ್ಕಾರವು ಇತ್ತೀಚೆಗೆ ಮಹಾ ವಿಕಾಸ್ ಅಘಾಡಿ ನಡೆದ ಮ್ಯಾಗ್ನೆಟಿಕ್ ಮಹಾರಾಷ್ಟ್ರ 2.0 ಹೂಡಿಕೆದಾರರ ಸಭೆಯಲ್ಲಿ ಚೀನಾದ ಕಂಪನಿಗಳೊಂದಿಗೆ ಸಹಿ ಮಾಡಿತ್ತು. ಆದರೆ ಈಗ ಆ ಮೂರೂ ಒಪ್ಪಂದಗಳನ್ನು ತಡೆಹಿಡಿಯಲಾಗಿದೆ. ಈ ಮೂಲಕ 5,000 ಕೋಟಿ ರೂ. ಮೌಲ್ಯದ ಯೋಜನೆಗೆ ಬ್ರೇಕ್ ಹಾಕಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರದ ಕೈಗಾರಿಕಾ ಸಚಿವ ಸುಭಾಷ್ ದೇಸಾಯಿ, “ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿಯೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೂರು ಯೋಜನೆಗೆ ಈ ಮೊದಲು ಸಹಿ ಹಾಕಲಾಗಿತ್ತು. ಇಂಡೋ-ಚೀನಾ ಗಡಿಯ ಸಂಘರ್ಷದಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾದ ಹಿನ್ನೆಲೆಯಲ್ಲಿ ಚೀನಾದ ಕಂಪನಿಗಳೊಂದಿಗೆ ಯಾವುದೇ ಒಪ್ಪಂದಗಳಿಗೆ ಸಹಿ ಹಾಕದಂತೆ ವಿದೇಶಾಂಗ ಸಚಿವಾಲಯವು ಸೂಚಿಸಿದೆ” ಎಂದು ಹೇಳಿದರು.

    ಮಹಾರಾಷ್ಟ್ರ ಸರ್ಕಾರವು ಕೋವಿಡ್-19 ನಂತರದ ಆರ್ಥಿಕತೆಯನ್ನು ಉತ್ತಮಗೊಳಿಸಲು ‘ಮ್ಯಾಗ್ನೆಟಿಕ್ ಮಹಾರಾಷ್ಟ್ರ 2.0’ ಪ್ಲಾನ್ ರೂಪಿಸಿತ್ತು. ಇದರ ಅಡಿ ಎಲ್ಲಾ 12 ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು. ಈ ಒಪ್ಪಂದದಲ್ಲಿ ಸಿಂಗಾಪುರ, ದಕ್ಷಿಣ ಕೊರಿಯಾ, ಅಮೆರಿಕದಿಂದ ಹಲವಾರು ಭಾರತೀಯ ಕಂಪನಿಗಳು ಸೇರಿವೆ. ರಾಜ್ಯ ಸರ್ಕಾರವು ಇತರ ಒಂಬತ್ತು ಒಪ್ಪಂದಗಳನ್ನು ಮುಂದುವರಿಸಲಿದೆ ಎಂದು ಸುಭಾಷ್ ದೇಸಾಯಿ ದೇಸಾಯಿ ಹೇಳಿದರು.

    ಯಾವ ಯಾವ ಒಪ್ಪಂದ?:
    ಕಳೆದ ಸೋಮವಾರ ನಡೆದ ಆನ್‍ಲೈನ್ ಸಮ್ಮೇಳನದಲ್ಲಿ ಚೀನಾದ ರಾಯಭಾರಿ ಸನ್ ವೀಡಾಂಗ್ ಭಾಗವಹಿಸಿದ್ದರು. ಮೂರು ಒಪ್ಪಂದಗಳಲ್ಲಿ ಪುಣೆ ಬಳಿಯ ತಲೆಗಾಂವ್‍ನಲ್ಲಿ ಆಟೋಮೊಬೈಲ್ ಪ್ಲಾಂಟ್ ಸ್ಥಾಪಿಸಲು ಗ್ರೇಟ್ ವಾಲ್ ಮೋಟಾರ್ಸ್ (ಜಿಡಬ್ಲ್ಯೂಎಂ) ನೊಂದಿಗೆ 3,770 ಕೋಟಿ ರೂ. ಯೋಜನೆ, ಪಿಎಂಐ ಎಲೆಕ್ಟ್ರೋ ಮೊಬಿಲಿಟಿ ಫೋಟಾನ್ (ಚೀನಾ) ಹಾಗೂ ಜಂಟಿ ಸಹಭಾಗಿತ್ವದಲ್ಲಿ 1,000 ಕೋಟಿ ರೂ.ಗಳ ಘಟಕ ಸ್ಥಾಪನೆಯ ಒಪ್ಪಂದವಾಗಿತ್ತು. ಈ ಮೂಲಕ 1,500 ಉದ್ಯೋಗಗಳನ್ನು ಸೃಷ್ಟಿಸಲು ಸರ್ಕಾರ ನಿರ್ಧರಿಸಿತ್ತು. ಜೊತೆಗೆ 150 ಉದ್ಯೋಗಗಳನ್ನು ಸೃಷ್ಟಿಸುವ ಯೋಜನೆಯಾದ ತಲೇಗಾಂವ್‍ನಲ್ಲಿ ಎರಡನೇ ಹಂತದ ವಿಸ್ತರಣೆಯ ಭಾಗವಾಗಿ 250 ಕೋಟಿ ರೂ.ಗಳ ಹೂಡಿಕೆಗಾಗಿ ಹೆಂಗ್ಲಿ ಎಂಜಿನಿಯರಿಂಗ್ ಬದ್ಧವಾಗಿತ್ತು. ಆದರೆ ಈಗ ಯೋಜನೆಯನ್ನು ಅನಿರ್ದಿಷ್ಟಾವಧಿಗೆ ತಡೆ ಹಿಡಿಯಲಾಗಿದೆ.

    ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕರೆದ ಸರ್ವಪಕ್ಷ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕೂಡ ಭಾಗಿಯಾಗಿದ್ದರು. ಈ ವೇಳೆ ಪ್ರಧಾನಿ ಮೋದಿ, “ಭಾರತಕ್ಕೆ ಶಾಂತಿ ಬೇಕು. ಆದರೆ ಇದರರ್ಥ ನಾವು ದುರ್ಬಲರು ಎಂದಲ್ಲ. ಚೀನಾದ ಸ್ವಭಾವವು ದ್ರೋಹವನ್ನು ಹೊಂದಿದೆ. ಭಾರತವು ಪ್ರಬಲವಾಗಿದೆ, ಅಸಹಾಯಕರಲ್ಲ” ಎಂದು ಹೇಳಿದ್ದರು.

    ಪ್ರಧಾನಿ ಮೋದಿ ಅವರಿಗೆ ವಿಶ್ವಾಸ ವ್ಯಕ್ತಪಡಿಸಿದ ಠಾಕ್ರೆ, “ನಮ್ಮ ಸರ್ಕಾರವು ಸೂಕ್ತವಾದ ಉತ್ತರವನ್ನು ನೀಡುವ ಸಾಮಥ್ರ್ಯವನ್ನು ಹೊಂದಿದೆ. ನಾವೆಲ್ಲರೂ ಒಂದಾಗಬೇಕಿದೆ. ದೇಶದ ಪ್ರದೇಶ ರಕ್ಷಣೆ ನಮ್ಮ ಉದ್ದೇಶವಾಗಿರಬೇಕು. ಇದು ಭಾವನೆ ಕೂಡ ಹೌದು. ನಾವು ನಿಮ್ಮೊಂದಿಗೆ ಇದ್ದೇವೆ. ನಮ್ಮ ಸೈನಿಕರು ಹಾಗೂ ಅವರ ಕುಟುಂಬಗಳೊಂದಿಗೆ ನಾವಿದ್ದೇವೆ” ತಿಳಿಸಿದ್ದರು. ಸಭೆಯ ಬಳಿಕ ಮಹಾರಾಷ್ಟ್ರದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.