Tag: mahabharatha

  • ರಾಜಮೌಳಿ ‘ಮಹಾಭಾರತ’ ಮಾಡ್ತಾರೆ- ವಿಜಯೇಂದ್ರ ಪ್ರಸಾದ್ ಗುಡ್ ನ್ಯೂಸ್

    ರಾಜಮೌಳಿ ‘ಮಹಾಭಾರತ’ ಮಾಡ್ತಾರೆ- ವಿಜಯೇಂದ್ರ ಪ್ರಸಾದ್ ಗುಡ್ ನ್ಯೂಸ್

    ಪ್ರಭಾಸ್, ಕೃತಿ ಸನೋನ್ ನಟನೆಯ ‘ಆದಿಪುರುಷ್’ (Adipurush) ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಮಕಾಡೆ ಮಲಗಿದೆ. ಚಿತ್ರದ ಬಗ್ಗೆ ಅಭಿಮಾನಿಗಳಿಂದ ಆಕ್ರೋಶ್ ವ್ಯಕ್ತವಾಗಿದೆ. ಆದಿಪುರುಷ್ ಬ್ಯಾನ್ ಮಾಡಿ ಅಂತಾ ಆಗ್ರಹ ಕೂಡ ಕೇಳಿ ಬರುತ್ತಿದೆ. ಇದರ ಬೆನ್ನಲ್ಲೇ ಬಾಹುಬಲಿ, ಆರ್‌ಆರ್‌ಆರ್ ಖ್ಯಾತಿಯ ರಾಜಮೌಳಿ ಮಹಾಭಾರತವನ್ನ ಸಿನಿಮಾ ಮಾಡುವುದಾಗಿ ಖ್ಯಾತ ಬರಹಗಾರ ವಿಜಯೇಂದ್ರ ಪ್ರಸಾದ್ ಸಿಹಿಸುದ್ದಿ ನೀಡಿದ್ದಾರೆ. ಇದನ್ನೂ ಓದಿ:ತಮಿಳಿನ ಕ್ಯಾಪ್ಟನ್ ಮಿಲ್ಲರ್ ಶೂಟಿಂಗ್ ಮುಗಿಸಿದ ಶಿವಣ್ಣ

    ಬಾಹುಬಲಿಯಿಂದಾನೇ (Bahubali) ಪ್ಯಾನ್ ಇಂಡಿಯಾ ಸಿನಿಮಾಗಳಿಗೆ ಬೇಡಿಕೆ ಹೆಚ್ಚಾಗಿದೆ. ಹಾಗೇ ದಕ್ಷಿಣ ಭಾರತದ ಸೂಪರ್‌ಸ್ಟಾರ್‌ಗಳಿಗೂ ಪ್ಯಾನ್ ಇಂಡಿಯಾ ಇಮೇಜ್ ಸಿಕ್ಕಿದೆ. ಸಿನಿಮಾದಿಂದ ಸಿನಿಮಾಗೆ ರಾಜಮೌಳಿ (Rajamouli) ರೇಂಜ್ ಬದಲಾಗುತ್ತಲೇ ಇದೆ. ಈ ಮಧ್ಯೆ ರಾಜಮೌಳಿ ಮಹಾಭಾರತ ಸಿನಿಮಾ ಮಾಡುವ ಬಗ್ಗೆನೂ ಚರ್ಚೆ ಆರಂಭ ಆಗಿದೆ. ಇತ್ತೀಚೆಗಷ್ಟೇ ತೆರೆಕಂಡಿರೋ ಪೌರಾಣಿಕ ಸಿನಿಮಾ ಆದಿಪುರುಷ್ ಫ್ಲಾಪ್ ಆಗಿದೆ. ಇದೇ ಬೆನ್ನಲ್ಲೇ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಮಹಾಭಾರತದ ಬಗ್ಗೆ ಕೆಲವು ಆಸಕ್ತಿಕರ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ವಿಜಯೇಂದ್ರ ಪ್ರಸಾದ್ (Vijendra Prasad) ‘ಮಹಾಭಾರತ’ದ ಬಗ್ಗೆ ಹೇಳಿದ್ದೇನು?

    ರಾಜಮೌಳಿಗೆ ಸಿನಿಮಾಗಳಲ್ಲಿ ಸಾಹಸ ದೃಶ್ಯಗಳನ್ನು ಹೆಚ್ಚು ಇಷ್ಟ. ಹಾಗಾಗಿ ಕಥೆಯಲ್ಲಿ ಹೆಚ್ಚೆಚ್ಚು ಸಾಹಸ ದೃಶ್ಯಗಳನ್ನೇ ಸೃಷ್ಟಿ ಮಾಡುತ್ತೇನೆಂದು ವಿಜಯೇಂದ್ರ ಪ್ರಸಾದ್ ಹೇಳಿದ್ದಾರೆ. ಹಾಗೇ ರಾಜಮೌಳಿ ಬಯಸಿದಂತೆ ಮಹಾಭಾರತ (Mahabharatha) ಸ್ಕ್ರಿಪ್ಟ್ ರೆಡಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಇದೇ ವೇಳೆ ಬಾಹುಬಲಿ ಸ್ಕ್ರಿಪ್ಟ್ ಮಾಡುವಾಗ ರಾಜಮೌಳಿ ತಂದೆ ಬಳಿ ಹೇಳಿಕೊಂಡ ಮಾತನ್ನು ನೆನಪಿಸಿಕೊಂಡಿದ್ದಾರೆ. ಬಾಹುಬಲಿ ಸ್ಕ್ರಿಪ್ಟ್ ಬರೆಯುತ್ತಿದ್ದಾಗ, ಒಂದು ರಾಜಮೌಳಿ ಬಂದು ನನ್ನ ಬಳಿ ಕೇಳಿದ್ದರು. ಅಪ್ಪ ನಾವ್ಯಾಕೆ ಈ ಸಿನಿಮಾ ಮಾಡುತ್ತಿದ್ದೇವೆ ಅಂತ ಗೊತ್ತಾ? ಅಂತ ಕೇಳಿದ್ದರು. ಆಗ ನಾನು ಯಾಕೆ ಎಂದು ಕೇಳಿದೆ. ಈ ಸಿನಿಮಾದಲ್ಲಿ ರಾಜರು, ಅರಮನೆಗಳು, ರಾಣಿಯರು, ಎದುರಾಳಿಗಳು ಹಾಗೆಯೇ ಅದ್ದೂರಿತನ ಎಲ್ಲವೂ ಇದೆ. ಈ ಸಿನಿಮಾ ಮೂಲಕ ಮುಂದಿನ ದಿನಗಳಲ್ಲಿ ನಾನು ಮಹಾಭಾರತವನ್ನು ಮಾಡಲು ಎಷ್ಟು ರೆಡಿಯಿದ್ದೇನೆ ಎಂದು ಪರೀಕ್ಷೆ ಮಾಡಿಕೊಳ್ಳಲು ಮಾಡುತ್ತಿದ್ದೇನೆ ಎಂದು ರಾಜಮೌಳಿ ಹೇಳಿದ್ದನ್ನು ನೆನಪಿಸಿಕೊಂಡಿದ್ದಾರೆ.

    ‘ಬಾಹುಬಲಿ’ ಸಿನಿಮಾ ಮಾಡುವಾಗ ಈ ಸಿನಿಮಾ ಗೆದ್ದರೆ, ಮಹಾಭಾರತ ಸಿನಿಮಾ ಮಾಡುತ್ತೇನೆ ರಾಜಮೌಳಿ ಎಂದಿದ್ದರು ಎಂದು ವಿಜಯೇಂದ್ರ ಪ್ರಸಾದ್ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ. ದೇವರ ದಯೆಯಿಂದ ಆ ಸಿನಿಮಾ ಸಿನಿಮಾ ಆಗುತ್ತೆ. ರಾಜಮೌಳಿ ಸಿನಿಮಾ ಮಾಡುತ್ತಾರೆ ಎಂದು ರಾಜಮೌಳಿ ತಂದೆ ಅಪ್‌ಡೇಟ್ ನೀಡಿದ್ದಾರೆ.

    ಬಾಹುಬಲಿ, ಬಾಹುಬಲಿ 2, ಆರ್‌ಆರ್‌ಆರ್ ಸಿನಿಮಾಗಳನ್ನ ಕೊಟ್ಟಿರೋ ರಾಜಮೌಳಿ ಅವರ ಮಹಾಭಾರತ ಮಾಡುವ ಬಗ್ಗೆ ಸಿಹಿಸುದ್ದಿ ನೀಡಿರೋದು ಫ್ಯಾನ್ಸ್ಗೆ ಖುಷಿ ಕೊಟ್ಟಿದೆ. ಒಂದು ಸಿನಿಮಾಗೆ 3-4 ವರ್ಷ ಸಮಯ ಮೀಸಲಿಡುವ ರಾಜಮೌಳಿ ಅವರ ಸಿನಿಮಾ ಮೇಲಿನ ಪ್ರೀತಿ ಅಭಿಮಾನಿಗಳಿಗೆ ತಿಳಿದಿದೆ ಹಾಗಾಗಿ ‘ಮಹಾಭಾರತ’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನ ಇಟ್ಟುಕೊಂಡಿದ್ದಾರೆ.

  • `ಮಹಾಭಾರತ’ ಖ್ಯಾತಿಯ ನಟ ರಸಿಕ್ ದವೆ ವಿಧಿವಶ

    `ಮಹಾಭಾರತ’ ಖ್ಯಾತಿಯ ನಟ ರಸಿಕ್ ದವೆ ವಿಧಿವಶ

    `ಮಹಾಭಾರತ’ ಸೀರಿಯಲ್ ಖ್ಯಾತಿಯ ನಟ ರಸಿಕ್ ದವೆ ವಿಧಿವಶರಾಗಿದ್ದಾರೆ. ನಿನ್ನೆ(ಜು.29) ಮುಂಬೈನ ನಿವಾಸದಲ್ಲಿ ನಟ ರಸಿಕ್ ನಿಧನ ಹೊಂದಿದ್ದಾರೆ. ಹಿಂದಿ ಮತ್ತು ಗುಜರಾತಿ ಸೇರಿದಂತೆ ಸಾಕಷ್ಟು ಸೀರಿಯಲ್ ಮೂಲಕ ಗುರುತಿಸಿಕೊಂಡಿದ್ದ ನಟ ರಸಿಕ್ ಇನ್ನಿಲ್ಲ.

    ಸೀರಿಯಲ್ ಮತ್ತು ಧಾರಾವಾಹಿ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದ ನಟ ರಸಿಕ್ ದವೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. 65 ವರ್ಷ ರಸಿಕ್‌ಗೆ ವಯಸ್ಸಾಗಿತ್ತು. ಸೂಕ್ತ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಸಿಕ್ ನಿಧನರಾಗಿದ್ದಾರೆ. ರಸಿಕ್ ಅವರ ಪತ್ನಿ ನಟಿ ಕೇತಕಿ ದೇವಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇಂದು ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ:ಮುದ್ದು ಮಗನನ್ನ ಪರಿಚಯಿಸಿದ ಸಂಜನಾ ಗಲ್ರಾನಿ

    ಗುಜರಾತಿಯ ಸೀರಿಯಲ್ `ಪುತ್ರವಧು’, `ನಚ್ ಬಲಿಯೇ’ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಮಹಾಭಾರತ ಸೀರಿಯಲ್ ರಸಿಕ್‌ಗೆ ಸಾಕಷ್ಟು ಖ್ಯಾತಿಯನ್ನ ತಂದುಕೊಟ್ಟಿತ್ತು. ಈಗ ನಟನ ನಿಧನಕ್ಕೆ ಚಿತ್ರರಂಗ ಸಂತಾಪ ಸೂಚಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಮಹಾಭಾರತ ಸೀರಿಯಲ್‍ನ ಭೀಮ್ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ಇನ್ನಿಲ್ಲ

    ಮಹಾಭಾರತ ಸೀರಿಯಲ್‍ನ ಭೀಮ್ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ಇನ್ನಿಲ್ಲ

    ಮುಂಬೈ: ಮಹಾಭಾರತ ಟಿವಿ ಸೀರಿಯಲ್‍ನ ಭೀಮ್‍ನ ಪಾತ್ರದಲ್ಲಿ ನಟಿಸಿದ್ದ ಪ್ರವೀಣ್ ಕುಮಾರ್ ಸೋಬ್ತಿ ಅವರು ಸೋಮವಾರ ಫೆಬ್ರವರಿ 7ರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಅವರಿಗೆ ದೀರ್ಘಕಾಲದ ಎದೆಯ ಸೋಂಕಿನ ಸಮಸ್ಯೆ ಇತ್ತು. ಹೀಗಾಗಿ ನಿನ್ನೆ ರಾತ್ರಿ ಅವರ ಎದೆಯಲ್ಲಿ ಗಂಭೀರ ನೋವು ಕಾಣಿಸಿಕೊಂಡಿದ್ದು, ಈ ವೇಳೆ ನಾವು ವೈದ್ಯರನ್ನು ಮನೆಗೆ ಕರೆದಿದ್ದೇವೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 10.30 ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಪ್ರವೀಣ್ ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಅವರ ಮುಖದಲ್ಲಿ ನಗು ಇತ್ತು – ರೋಗಿಗಳನ್ನು ಸಮಾನವಾಗಿ ನೋಡಿಕೊಳ್ಳಿ ಎಂದಿದ್ದ ಗಾನ ಕೋಗಿಲೆ

    ಪ್ರವೀಣ್ ಹ್ಯಾಮರ್ ಮತ್ತು ಡಿಸ್ಕಸ್ ಥ್ರೋನಲ್ಲಿ ವಿವಿಧ ಅಥ್ಲೆಟಿಕ್ ಈವೆಂಟ್‍ಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. 1966 ಮತ್ತು 1970ರಲ್ಲಿ 2 ಚಿನ್ನದ ಪದಕಗಳನ್ನು ಒಳಗೊಂಡಂತೆ ಏಷ್ಯನ್ ಗೇಮ್ಸ್‌ನಲ್ಲಿ 4 ಪದಕಗಳನ್ನು ಗೆದ್ದಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರನ್ನು ಸಚಿನ್ ತೆಂಡೂಲ್ಕರ್ ಏನೆಂದು ಕರೆಯುತ್ತಿದ್ದರು ಗೊತ್ತಾ?

    ಪ್ರವೀಣ್ ಕುಮಾರ್ ಸೋಬ್ತಿ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಪ್ರಸಿದ್ಧರಾಗಿದ್ದರು. ನಟನೆ ಅಲ್ಲದೇ ಕ್ರೀಡಾಕ್ಷೇತ್ರದಲ್ಲೂ ಸೈ ಎನಿಸಿಕೊಂಡಿದ್ದ ಅವರು, 1966ರ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಹ್ಯಾಮರ್ ಥ್ರೋನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.

    ಅಥ್ಲೀಟ್ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ ನಂತರ ಮತ್ತಷ್ಟು ಜನಪ್ರಿಯತೆಯನ್ನು ಗಳಿಸಿದ್ದರು. 1988 ರಲ್ಲಿ ಬಿಆರ್ ಚೋಪ್ರಾ ಅವರ ಟಿವಿ ಸಿರಿಯಲ್ ಮಹಾಭಾರತದಲ್ಲಿ ಭೀಮ್‍ನ ಪಾತ್ರದಲ್ಲಿ ನಟಿಸಿದ್ದರು. ಅವರು ಪತ್ನಿ, ಪುತ್ರಿ, ಇಬ್ಬರು ಕಿರಿಯ ಸಹೋದರರು ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ.

  • ತೆರೆಗೆ ಬರಲಿದೆ `ಮಹಾಭಾರತ’: ಹಣ ಹೂಡಲಿರೋ ಕನ್ನಡಿಗ ಬಿಆರ್ ಶೆಟ್ಟಿ

    ತೆರೆಗೆ ಬರಲಿದೆ `ಮಹಾಭಾರತ’: ಹಣ ಹೂಡಲಿರೋ ಕನ್ನಡಿಗ ಬಿಆರ್ ಶೆಟ್ಟಿ

    – ನೂರು ಭಾಷೆಗಳಿಗೆ ಆಗಲಿದ್ಯಂತೆ ಡಬ್

    ಬೆಂಗಳೂರು: ಕನ್ನಡ ಸಿನಿಮಾರಂಗ ಭಾರತದ ಉಳಿದ ಯಾವುದೇ ಸಿನಿಮಾ ರಂಗಕ್ಕೂ ಕಡಿಮೆ ಇಲ್ಲ. ಇತ್ತೀಚಿಗಷ್ಟೇ ನಿರ್ಮಾಪಕ ಮುನಿರತ್ನ, ಬಾಹುಬಲಿ ಮೀರಿಸುವಂತೆ `ಕುರುಕ್ಷೇತ್ರ’ ಸಿನಿಮಾ ಮಾಡುತ್ತೇನೆ ಅಂದಿದ್ರು. ಇದೀಗ ವಿಶ್ವವೇ ತಿರುಗಿ ನೋಡುವಂತೆ ಕನ್ನಡಿಗರೊಬ್ಬರು ಆ ಸಿನಿಮಾ ಮಾಡಲು ರೆಡಿಯಾಗಿದ್ದಾರೆ.

    ಹೌದು. ಕರ್ನಾಟಕ ವಿಶ್ವ ಸಿನಿಮಾ ಭೂಪಟದಲ್ಲಿ ತನ್ನ ಗುರುತು ಮೂಡಿಸುತ್ತಿದೆ. ಕರ್ನಾಟಕದ ಕರಾವಳಿ ಮೂಲದ ದುಬೈ ಉದ್ಯಮಿ ಬಿಆರ್ ಶೆಟ್ಟಿ ಅಂಥಹದ್ದೊಂದು ಪರಾಕ್ರಮಕ್ಕೆ ಕೈಹಾಕಿದ್ದಾರೆ. ಅಂದ್ರೆ ಮಹಾಭಾರತವನ್ನು ಸಿನಿಮಾ ರೂಪಕ್ಕೆ ತರಲು ನಿರ್ಧಾರ ಮಾಡಿದ್ದಾರೆ. ಬರೋಬ್ಬರಿ 1 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ಈ ಸಿನಿಮಾ 2018ರಲ್ಲಿ ಚಿತ್ರೀಕರಣ ಆರಂಭವಾಗಿ 2020ಕ್ಕೆ ತೆರಕಾಣಲಿದೆ.

    ಸಾವಿರ ಕೋಟಿಯ ಚಿತ್ರದಲ್ಲಿ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಪುರಸ್ಕೃತ ತಂತ್ರಜ್ಞರು ಇರಲಿದ್ದಾರೆ. ಬಾಹುಬಲಿ ಸಿನಿಮಾ ರೀತಿಯಲ್ಲೇ ಎರಡು ಭಾಗಗಲ್ಲಿ ಚಿತ್ರ ಬರುವುದು ಪಕ್ಕಾ ಆಗಿದೆ. 2020ರಲ್ಲಿ ಚಿತ್ರ ಬಿಡುಗಡೆಯಾದ ಬಳಿಕ 90 ದಿನಗಳಲ್ಲಿ ಮಹಾಭಾರತ ಪಾರ್ಟ್-2 ಸಿನಿಮಾ ತೆರೆಗೆ ಬರಲಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ, ಇಂಗ್ಲಿಷ್ ಭಾಷೆಯಲ್ಲಿ ಚಿತ್ರೀಕರಣವಾಗಲಿದ್ದು, ಭಾರತದ ಪ್ರಮುಖ ಭಾಷೆಗಳೂ ಸೇರಿದಂತೆ 100 ಭಾಷೆಗಳಲ್ಲಿ ಡಬ್ ಆಗಲಿದೆ. ವಿಶ್ವಾದ್ಯಂತ ಮೂರು ಬಿಲಿಯನ್ ಜನರನ್ನು ತಲುಪುವ ನಿರೀಕ್ಷೆಯಿದೆ.

    ಅದ್ಧೂರಿ ಬಜೆಟ್‍ನ ಈ ಸಿನಿಮಾವನ್ನು ಮಲೆಯಾಳಂನ ಖ್ಯಾತ ನಿರ್ದೇಶಕ ಶ್ರೀಕುಮಾರ್ ಮೆನನ್ ನಿರ್ದೇಶನ ಮಾಡಲಿದ್ದು, ಮಲಯಾಳಂನ ಲೆಜೆಂಡರಿ ನಟ ಮೋಹನ್ ಲಾಲ್, ಬಿಟೌನ್ ಕಿಂಗ್ ಖಾನ್ ಶಾರೂಖ್ ಪ್ರಮುಖ ಪಾತ್ರಗಳಿಗೆ ಫಿಕ್ಸ್ ಆಗಿದ್ದಾರೆ. ಇಡೀ ಚಿತ್ರಕಥೆ ಭೀಮನ ಸುತ್ತವೇ ತಿರುಗಲಿದೆ. ಇನ್ನುಳಿದ ವಿಚಾರಗಳು ಇನ್ನಷ್ಟೇ ತಿಳಿದುಬರಬೇಕಿದೆ.