Tag: Mahadeshwara Hill

  • ಚಾಮರಾಜನಗರದಲ್ಲಿ ಭೀಕರ ಅಪಘಾತ – ಐವರು ಮಾದಪ್ಪ ಭಕ್ತರ ದುರ್ಮರಣ

    ಚಾಮರಾಜನಗರದಲ್ಲಿ ಭೀಕರ ಅಪಘಾತ – ಐವರು ಮಾದಪ್ಪ ಭಕ್ತರ ದುರ್ಮರಣ

    ಚಾಮರಾಜನಗರ: ಟಿಪ್ಪರ್‌ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಮಾದಪ್ಪ ಭಕ್ತರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ಚಾಮರಾಜನಗರದಲ್ಲಿ (Chamarajanagara) ನಡೆದಿದೆ.

    ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಉರುಳಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ಐವರೂ ಸಹ ಮಂಡ್ಯ (Mandya) ಮೂಲದವರು ಎಂದು ತಿಳಿದುಬಂದಿದೆ.

    ಮಾದಪ್ಪನ ಭಕ್ತರು ಕೊಳ್ಳೇಗಾಲ ಕಡೆಯಿಂದ ಮಹದೇಶ್ವರ ಬೆಟ್ಟದ ಕಡೆಗೆ ಹೋರಟಿದ್ದರು ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ; ದ್ವಿಚಕ್ರ ವಾಹನಗಳ ಪ್ರವೇಶಕ್ಕೆ ನಿರ್ಬಂಧ

    ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ; ದ್ವಿಚಕ್ರ ವಾಹನಗಳ ಪ್ರವೇಶಕ್ಕೆ ನಿರ್ಬಂಧ

    ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hill) ನಾಲ್ಕು ದಿನಗಳ ಕಾಲ ನಡೆಯುವ ದೀಪಾವಳಿ ಜಾತ್ರೆಗೆ ಲಕ್ಷಾಂತರ ಮಂದಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

    ಈ ಹಿನ್ನಲೆಯಲ್ಲಿ ಟ್ರಾಫಿಕ್ ಜಾಮ್ ತಡೆಗಟ್ಟಲು ಇಂದಿನಿಂದ ನ.2 ರ ಸಂಜೆ 6 ಗಂಟೆಯವರೆಗೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ: ಕೋಲಾರ ಜಿಲ್ಲಾಡಳಿತದಿಂದಲೂ ವಕ್ಫ್‌ಗೆ ಸರ್ಕಾರಿ ಜಮೀನು ಮಂಜೂರು ಆರೋಪ

    ದ್ವಿಚಕ್ರ ವಾಹನದಲ್ಲಿ ಬರುವ ಭಕ್ತರಿಗೆ ಕೌದಳ್ಳಿಯಲ್ಲಿ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿಂದ ಕೆಎಸ್‌ಆರ್‌ಟಿಸಿ ಬಸ್ ಮುಖಾಂತರ ಮಹದೇಶ್ವರ ಬೆಟ್ಟಕ್ಕೆ ತೆರಳಲು ವ್ಯವಸ್ಥೆ ಕಲ್ಪಿಸಲಾಗಿದೆ.

    ಅ.31 ರಿಂದ ನ.2ರ ವರೆಗೆ ದೀಪಾವಳಿ ಹಬ್ಬ ನಡೆಯಲಿದೆ. ದೇಶಾದ್ಯಂತ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಬ್ಬದ ಸಂದರ್ಭದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: ದೀಪಾವಳಿ ಹಿನ್ನೆಲೆ ಇಂದು 250ಕ್ಕೂ ಅಧಿಕ ವಿಶೇಷ ರೈಲುಗಳ ಸಂಚಾರ- ರೈಲ್ವೆ ಇಲಾಖೆ

  • ಚಾಮರಾಜನಗರದಲ್ಲಿ ಗ್ರಾಮಸ್ಥರಿಂದ ದಾಂಧಲೆ, ಇವಿಎಂ ಧ್ವಂಸ

    ಚಾಮರಾಜನಗರದಲ್ಲಿ ಗ್ರಾಮಸ್ಥರಿಂದ ದಾಂಧಲೆ, ಇವಿಎಂ ಧ್ವಂಸ

    ಚಾಮರಾಜನಗರ: ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರನ್ನು ಮನವೊಲಿಸಲು ತೆರಳಿದ್ದ ಅಧಿಕಾರಿಗಳ ವಿರುದ್ಧ ಜನ ಪ್ರತಿಭಟನೆ ನಡೆಸಿ ಕಲ್ಲು ತೂರಾಟ ನಡೆಸಿದ ಘಟನೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.

    ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ ಎಂದು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರು. ಈ ವೇಳೆ ಅಧಿಕಾರಿಗಳು ಕೆಲವರ ಮನವೊಲಿಸಿ ಮತದಾನಕ್ಕೆ ಕರೆತಂದಿದ್ದಾರೆ. ಈ ವೇಳೆ ಇಡೀ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದೇವೆ ಎಂದು ಗ್ರಾಮದ ಒಂದು ಗುಂಪು ಗಲಾಟೆ ಆರಂಭಿಸಿದೆ. ಎರಡು ಗುಂಪುಗಳ ಮಧ್ಯೆ ನಡೆದ ಜಗಳ ಕೊನೆಗೆ ವಿಕೋಪಕ್ಕೆ ತಿರುಗಿ ಇವಿಎಂ (EVM) ಹಾಗೂ ಮತಗಟ್ಟೆಯ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಗಲಾಟೆಯಲ್ಲಿ ಕೆಲವು ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ:ಮೂಲಭೂತ ಸೌಕರ್ಯ ಕೊರತೆ ಆರೋಪ – ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

    ಮೂಲಭೂತ ಸೌಕರ್ಯ ಕೊರತೆಯಿಂದ ಮಹದೇಶ್ವರ ಬೆಟ್ಟ (Mahadeshwara Hill) ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದರು. ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಿದ್ದಾರೆ. ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಕೆಲ ದಿನಗಳ ಹಿಂದೆಯೇ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದರು. ಅಧಿಕಾರಿಗಳು ಮನವೊಲಿಸುವ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಾರಿ ಮತದಾನ ಮಾಡಲೇಬಾರದು ಎಂದು ಗ್ರಾಮಸ್ಥರು ದೃಢ ಸಂಕಲ್ಪ ಮಾಡಿದ್ದರು. ಇದನ್ನೂ ಓದಿ: ತಾಳಿ ಕಟ್ಟುವ ಮುನ್ನ ಓಡೋಡಿ ಬಂದು ಮತದಾನ ಮಾಡಿದ ವರ

  • ಮೂಲಭೂತ ಸೌಕರ್ಯ ಕೊರತೆ ಆರೋಪ – ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

    ಮೂಲಭೂತ ಸೌಕರ್ಯ ಕೊರತೆ ಆರೋಪ – ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

    ಚಾಮರಾಜನಗರ: ಮೂಲಭೂತ ಸೌಕರ್ಯ ಕೊರತೆ ಆರೋಪಿಸಿ ಮಹದೇಶ್ವರ ಬೆಟ್ಟ (Mahadeshwara Hill) ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ (Voting) ದೂರ ಉಳಿದಿದ್ದಾರೆ.

    ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಿದ್ದು (Election Boycott), ಪಡಸಲನತ್ತ ಗ್ರಾಮದಲ್ಲಿ 85 ಮತದಾರರ ಪೈಕಿ ಇಬ್ಬರು ಮಾತ್ರ ಮತದಾನ ಮಾಡಿದ್ದಾರೆ. ಉಳಿದಂತೆ ಯಾವುದೇ ಮತದಾರರು ಇದುವರೆಗೂ ಮತಗಟ್ಟೆಯತ್ತ ಸುಳಿದಿಲ್ಲ. ಕನಿಷ್ಠ ಮೂಲಭೂತ ಸೌಕರ್ಯದಿಂದ ಗ್ರಾಮಸ್ಥರು ವಂಚಿತರಾಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್‍ಗೆ ಉತ್ತಮವಾದ ವಾತಾವರಣ ಇದೆ: ಸಿದ್ದರಾಮಯ್ಯ

    ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ ಹಾಗೂ ಶಿಕ್ಷಣ ಮರಿಚೀಕೆಯಾಗಿದೆ ಎಂದು ಆರೋಪ ಹೊರಿಸಲಾಗಿದೆ. ಕೆಲ ದಿನಗಳ ಹಿಂದೆಯೇ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದರು. ಅಧಿಕಾರಿಗಳು ಮನವೊಲಿಸುವ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಾರಿ ಮತದಾನ ಮಾಡಲೇಬಾರದು ಎಂದು ಗ್ರಾಮಸ್ಥರು ದೃಢ ಸಂಕಲ್ಪ ಮಾಡಿದ್ದಾರೆ. ಇದನ್ನೂ ಓದಿ: Lok Sabha Elections 2024: ಒಂದೇ ಕುಟುಂಬದ 85 ಮಂದಿಯಿಂದ ಏಕಕಾಲದಲ್ಲಿ ಮತದಾನ!

  • ಮಹದೇಶ್ವರ ಬೆಟ್ಟದಲ್ಲಿ ವೃದ್ಧೆಗೆ ಚಿತ್ರಾನ್ನ ತಿನ್ನಿಸಿ 10,000 ನಗದು, ಮೊಬೈಲ್ ದೋಚಿ ಪರಾರಿ!

    ಮಹದೇಶ್ವರ ಬೆಟ್ಟದಲ್ಲಿ ವೃದ್ಧೆಗೆ ಚಿತ್ರಾನ್ನ ತಿನ್ನಿಸಿ 10,000 ನಗದು, ಮೊಬೈಲ್ ದೋಚಿ ಪರಾರಿ!

    ಚಾಮರಾಜನಗರ: ವೃದ್ಧೆ ಒಬ್ಬರಿಗೆ ಚಿತ್ರಾನ್ನ ತಿನ್ನಿಸಿ 10 ಸಾವಿರ ರೂ. ಹಾಗೂ ಮೊಬೈಲ್ ದೋಚಿ ಪರಾರಿಯಾದ ಘಟನೆ ಮಲೆ ಮಹದೇಶ್ವರ ಬೆಟ್ಟದಲ್ಲಿ (Mahadeshwara Hill) ನಡೆದಿದೆ.

    ಬೆಂಗಳೂರು (Bengaluru) ಮೂಲದ ರತ್ಮಮ್ಮ (70) ವಂಚನೆಗೊಳಗಾದ ವೃದ್ಧೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ರತ್ನಮ್ಮ ದೇವರ ದರ್ಶನ ಮುಗಿಸಿ ರಂಗಮಂದಿರದಲ್ಲಿ ಮಲಗಿದ್ದರು. ಈ ವೇಳೆ ಮೂವರು ಪುರುಷರು ಹಾಗೂ ಓರ್ವ ಮಹಿಳೆ ಬಂದು ಮಾತಾಡಿಸಿದ್ದಾರೆ. ಬಳಿಕ ಪರಿಚಯ ಮಾಡಿಕೊಂಡು ಜೊತೆಗೆ ಮಲಗಿದ್ದಾರೆ. ಬಳಿಕ ತಿಂಡಿಯಲ್ಲಿ ಮತ್ತು ಬರಿಸುವ ಔಷಧಿ ಬೆರಸಿ ಕೊಟ್ಟು ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಹಣ ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ವಿಜಯನಗರ ಜಿಲ್ಲೆಯ ದಂಪತಿಗೆ ಪ್ರಧಾನಿ ಆಹ್ವಾನ

    ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ವೃದ್ಧೆ ಮಾತಾಡಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: NCERT ಪಠ್ಯಕ್ರಮ ನಿರ್ಧಾರ ಮಂಡಳಿಯಲ್ಲಿ ಸುಧಾಮೂರ್ತಿಗೆ ಸ್ಥಾನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂಭ್ರಮದಿಂದ ನಡೆದ ಮಲೆ ಮಹದೇಶ್ವರ ದೀಪಾವಳಿ ರಥೋತ್ಸವ

    ಸಂಭ್ರಮದಿಂದ ನಡೆದ ಮಲೆ ಮಹದೇಶ್ವರ ದೀಪಾವಳಿ ರಥೋತ್ಸವ

    ಚಾಮರಾಜನಗರ: ಎಲ್ಲಿ ನೋಡಿದರಲ್ಲಿ ಜನಸಾಗರ, ಉಘೇ, ಉಘೇ ಮಾದಪ್ಪ ಎನ್ನುವ ಜಯಕಾರ, ಕುಣಿದು ಕುಪ್ಪಳಿಸಿ ಭಕ್ತಿಯ ಪರಾಕಾಷ್ಟೆ ಮೆರೆದ ಮಹಿಳೆಯರು, ಈ ಎಲ್ಲ ಸಂಭ್ರಮ ಮಲೆ ಮಹದೇಶ್ವರನ (Male Mahadeshwara) ದೀಪಾವಳಿ (Deepavali) ರಥೋತ್ಸವದಲ್ಲಿ ಕಂಡುಬಂದಿದೆ.

    Mahadeshwara Hills

    ಚಾಮರಾಜನಗರ (Chamarajanagara) ಜಿಲ್ಲೆಯಲ್ಲಿರುವ ಮಲೆ ಮಹದೇಶ್ವರ ಬೆಟ್ಟ (Mahadeshwara Hill) ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ. ಬೆಟ್ಟದಲ್ಲಿ ನೆಲಸಿರುವ ಮಲೆಮಾದಪ್ಪ ಲಕ್ಷಾಂತರ ಭಕ್ತರ ಆರಾಧ್ಯ ದೈವ. ಈ ಬೆಟ್ಟದಲ್ಲಿ ವರ್ಷಕ್ಕೆ ಒಂದಲ್ಲ, ಎರಡಲ್ಲ, ಮೂರು ಬಾರಿ ಅಂದರೆ ಶಿವರಾತ್ರಿ, ಯುಗಾದಿ ಹಾಗೂ ದೀಪಾವಳಿಯಂದು ರಥೋತ್ಸವ ನಡೆಯುತ್ತದೆ. ಇದೇ ರೀತಿ ಈ ಬಾರಿಯು ಬೆಟ್ಟದಲ್ಲಿಂದು ಮಾದಪ್ಪನ ದೀಪಾವಳಿ ರಥೋತ್ಸವ ಲಕ್ಷಾಂತರ ಭಕ್ತರ ಜಯಘೋಷಗಳ ನಡುವೆ ಸಂಭ್ರಮ ಸಡಗರಗಳೊಂದಿಗೆ ನಡೆಯಿತು.  ಇದನ್ನೂ ಓದಿ: ಗ್ರಾಮದ ಯುವಕನೊಂದಿಗೆ ಪ್ರೀತಿ – ಮಗಳನ್ನೇ ಕೊಚ್ಚಿ ಕೊಂದ ತಂದೆ

    ಉಘೇ, ಉಘೇ, ಮಾದಪ್ಪ ಎನ್ನುತ್ತಾ, ಅಸಂಖ್ಯಾತ ಮಂದಿ ಭಕ್ತರು ಮಾದಪ್ಪನ ತೇರು ಎಳೆದು ತಮ್ಮ ಭಕ್ತಿ ಸಮರ್ಪಿಸಿದರು. ಮಹಿಳೆಯರಂತು ಕುಣಿದು ಕುಪ್ಪಳಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು. ಹುಲಿವಾಹನ, ಬಸವವಾಹನ, ರುದ್ರಾಕ್ಷಿ ಮಂಟಪಗಳು ಮಾದಪ್ಪನ ರಥದೊಂದಿಗೆ ಸಾಗಿ ರಥೋತ್ಸವಕ್ಕೆ ಮೆರಗು ತಂದವು. ಮಾದಪ್ಪನ ಭಕ್ತರು ಉರುಳುಸೇವೆ, ಪಂಜಿನಸೇವೆ, ಮುಡಿಸೇವೆ ಮೂಲಕ ಹರಕೆ ತೀರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

    ರಾಜ್ಯದ ಮೂಲೆ, ಮೂಲೆಗಳಿಂದ ಭಕ್ತ ಸಾಗರ ಹರಿದುಬಂದಿತ್ತು. ಕಳೆದ ಮೂರು ದಿನಗಳಿಂದ ಸಾಗರೋಪಾದಿಯಲ್ಲಿ ಹರಿದು ಬಂದ ಭಕ್ತರಿಗೆ ವಿಶೇಷ ಅನ್ನದಾಸೋಹ ಮಾಡಲಾಗಿತ್ತು. ಮೂರು ದಿನಗಳಿಂದ ಮೂರು ಲಕ್ಷಕ್ಕೂ ಅಧಿಕ ಲಾಡು ಪ್ರಸಾದ ಮಾರಾಟವಾಗಿದೆ. ಇದನ್ನೂ ಓದಿ: ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ಟ್ವಿಸ್ಟ್- ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್

    ಮಾದಪ್ಪನ ಸನ್ನಿದಿಯಲ್ಲಿ ದೀಪಾವಳಿಯ ಮೊದಲನೇ ದಿನ ಎಣ್ಣೆಮಜ್ಜನ ಸೇವೆ ನಡೆದರೆ, ಎರಡನೇ ದಿನ ಹಾಲರುವ ಉತ್ಸವ ನಡೆದಿತ್ತು. ಮೂರನೇ ದಿನವಾದ ಇಂದು ರಥೋತ್ಸವ ನಡೆಯುವುದರೊಂದಿಗೆ ಮೂರು ದಿನಗಳ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿತು.

    Live Tv
    [brid partner=56869869 player=32851 video=960834 autoplay=true]

  • ಮಹದೇಶ್ವರ ಬೆಟ್ಟದ ಅರಣ್ಯ ವ್ಯಾಪ್ತಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆ: ಎಸ್‍ಪಿ ಆನಂದ್ ಕುಮಾರ್

    ಮಹದೇಶ್ವರ ಬೆಟ್ಟದ ಅರಣ್ಯ ವ್ಯಾಪ್ತಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆ: ಎಸ್‍ಪಿ ಆನಂದ್ ಕುಮಾರ್

    ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಸ್ಯಾಟ್‍ಲೈಟ್ ಫೋನ್ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ.

    ಸ್ಯಾಡ್‍ಲೈಟ್ ಫೋನನ್ನು ನಕ್ಸಲೀಯರು ಬಳಸಿದ್ದಾರಾ ಅಥವಾ ಸಮಾಜಘಾತುಕ ಶಕ್ತಿಗಳು ಬಳಸಿವೆಯಾ ಎಂಬುದರ ಬಗ್ಗೆ ಕೇಂದ್ರ ಆಂತರಿಕ ಭದ್ರತಾ ಪಡೆ, ನಕ್ಸಲ್ ನಿಗ್ರಹ ದಳ, ಕೇಂದ್ರ ಹಾಗೂ ರಾಜ್ಯ ಗುಪ್ತಚರ ಇಲಾಖೆಗಳಿಂದ ತೀವ್ರ ನಿಗಾವಹಿಸಲಾಗಿದೆ.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ ಕುಮಾರ್ ಮಹದೇಶ್ವರ ಬೆಟ್ಟ ಅರಣ್ಯ ವ್ಯಾಪ್ತಿಯಲ್ಲಿ ಸ್ಯಾಟ್‍ಲೈಟ್ ಫೋನ್ ಬಳಕೆಯಾಗಿರುವ ಬಗ್ಗೆ ಖಚಿತಪಡಿಸಿದ್ದಾರೆ. ಕೆಲವು ಕಡೆ ಸ್ಯಾಟ್‍ಲೈಟ್ ಫೋನ್ ಬಳಸಿರುವ ಬಗ್ಗೆ ತನ್ನ ಗಮನಕ್ಕೆ ಬಂದಿದೆ. ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

    ಒಮ್ಮೊಮ್ಮೆ ವಿದೇಶಿ ಪ್ರಯಾಣಿಕರು ಬಳಸಿರುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಯಾರು ಬಳಕೆ ಮಾಡಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ತನಿಖೆ ಪೂರ್ಣಗೊಂಡ ನಂತರ ಮುಂದಿನ ಕ್ರಮ ವಹಿಸಿವುದಾಗಿ ಎಸ್‍ಪಿ ತಿಳಿಸಿದ್ದಾರೆ

  • ಚಾಮರಾಜನಗರಕ್ಕೆ ವೀರಪ್ಪನ್ ಕಾರ್ಯಕ್ಷೇತ್ರದಿಂದ ನುಸುಳಿ ಬರ್ತಿರೋ ತಮಿಳರು

    ಚಾಮರಾಜನಗರಕ್ಕೆ ವೀರಪ್ಪನ್ ಕಾರ್ಯಕ್ಷೇತ್ರದಿಂದ ನುಸುಳಿ ಬರ್ತಿರೋ ತಮಿಳರು

    ಚಾಮರಾಜನಗರ: ಕೊರೊನಾ ಪ್ರಕರಣಗಳ ಹೈ ರಿಸ್ಕ್ ರಾಜ್ಯಗಳಲ್ಲಿ ಒಂದಾದ ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಪ್ರವೇಶ ನಿಷೇಧ ಹೇರಿರುವುದರಿಂದ ತಮಿಳರು ಗಡಿಭಾಗದಲ್ಲಿ ಕಾಡಿನ ಅಡ್ಡದಾರಿಗಳ ಮೂಲಕ ನುಸುಳುತ್ತಿದ್ದಾರೆ.

    ಕಾಡುಗಳ್ಳ ವೀರಪ್ಪನ್ ಕಾರ್ಯಕ್ಷೇತ್ರವಾದ ಮಹದೇಶ್ವರಬೆಟ್ಟ ಅರಣ್ಯದಲ್ಲಿ ಪಾಲಾರ್ ಹಳ್ಳ ದಾಟಿ ಬರತೊಡಗಿದ್ದಾರೆ. ಹಾಗೆಯೇ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ನಿವಾಸಿಗಳು ಸಹ ಕಾಡುದಾರಿಗಳ ಮೂಲಕ ತಮಿಳುನಾಡಿಗೆ ಹೋಗಿ ಬರುತ್ತಿದ್ದಾರೆ. ಪಾಲಾರ್ ನದಿಯ ಪಕ್ಕದಲ್ಲೇ ಚೆಕ್‍ಪೋಸ್ಟ್ ಇದ್ದರೂ ಪೊಲೀಸರ ಕಣ್ಣು ತಪ್ಪಿಸಿ ಓಡಾಟ ನಡೆಸಲಾಗುತ್ತಿದೆ. ವ್ಯಾಪಾರ, ವಹಿವಾಟು, ಆಸ್ಪತ್ರೆ ಮೊದಲಾದ ಕೆಲಸಗಳಿಗೆ ಕಾಡುದಾರಿಗಳ ಮೂಲಕ ನುಸುಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಅಕ್ರಮ ನುಸುವಳಿಕೆ ತಡೆಗಟ್ಟಲು ನಿರಂತರವಾಗಿ ಗಸ್ತು ನಡೆಸಲು ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಅಡ್ಡದಾರಿಗಳ ಮೂಲಕ ಬರುವುದನ್ನು ತಡೆಗಟ್ಟಲು ಪೊಲೀಸ್, ಕಂದಾಯ ಹಾಗೂ ಅರಣ್ಯ ಇಲಾಖೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಯಾರೇ ಹೊಸಬರು ಬಂದರೂ ತಕ್ಷಣ ಮಾಹಿತಿ ನೀಡುವಂತೆ ಗ್ರಾಮ ಕಾರ್ಯಪಡೆಗಳಿಗೂ ಸೂಚಿಸಲಾಗಿದ್ದು, ಅಂತರಾಜ್ಯಗಳಿಂದ ಬರುವವರನ್ನು ಕಡ್ಡಾಯವಾಗಿ ಕ್ವಾರಂಟೈನ್‍ಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.

    ಇದೇ ವಿಷಯಕ್ಕೆ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್ ತಮಿಳುನಾಡಿನಿಂದ ಬರಲು ಅನುಮತಿ ನೀಡದ ಹಿನ್ನೆಲೆಯಲ್ಲಿ ಕೆಲವರು ಕಾಡುದಾರಿಗಳ ಮೂಲಕ ಬರುತ್ತಿರುವ ಬಗ್ಗೆ ಮಾಹಿತಿ ಇದೆ. ಹೀಗೆ ಅನುಮತಿ ಇಲ್ಲದೆ ಅಡ್ಡದಾರಿಗಳ ಮೂಲಕ ಬಂದಿರುವವರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

  • ಮಹದೇಶ್ವರ ಬೆಟ್ಟದಲ್ಲಿ ಲಾಡು ಮಾರಾಟದಿಂದ 1.50 ಕೋಟಿ ಆದಾಯ

    ಮಹದೇಶ್ವರ ಬೆಟ್ಟದಲ್ಲಿ ಲಾಡು ಮಾರಾಟದಿಂದ 1.50 ಕೋಟಿ ಆದಾಯ

    ಚಾಮರಾಜನಗರ: ಪ್ರತಿ ತಿಂಗಳು ಹುಂಡಿಯಲ್ಲಿ ಕೋಟಿ ಕೋಟಿ ಆದಾಯ ಗಳಿಸುತ್ತಿರುವ ಮಲೆ ಮಹದೇಶ್ವರನಿಗೆ ಈ ಬಾರಿಯ ಶಿವರಾತ್ರಿಯ ಜಾತ್ರೆಯಲ್ಲಿ ಲಾಡು ಮಾರಾಟದಿಂದಲೂ ಒಂದು ಕೋಟಿ ರೂಪಾಯಿಗೂ ಹೆಚ್ಚು ಆದಾಯ ಬಂದಿದೆ.

    ಈ ಬಾರಿಯ ಶಿವರಾತ್ರಿ ಜಾತ್ರೆಯಲ್ಲಿ ವಿವಿಧ ಸೇವೆಗಳು ಸೇರಿದಂತೆ 6 ಲಕ್ಷದ 20 ಸಾವಿರದ ಐದುನೂರು (6,20,500) ಲಾಡುಗಳು ಖರ್ಚಾಗಿವೆ. ಕೌಂಟರ್‌ಗಳಲ್ಲೇ ಐದು ಲಕ್ಷದ ಎರಡೂವರೆ ಸಾವಿರ ಲಾಡು ಮಾರಾಟವಾಗಿದೆ.

    ಇದರಿಂದ ಈ ಬಾರಿ ಲಾಡು ಮಾರಾಟದಿಂದ ಒಂದು ಕೋಟಿ ಐವತ್ತು ಸಾವಿರ ರೂಪಾಯಿ (1.50 ಕೋಟಿ) ಆದಾಯ ಬಂದಿದೆ ಎಂದು ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಮಾಹಿತಿ ನೀಡಿದ್ದಾರೆ.

    ಜಾತ್ರೆಯ ವಿಶೇಷವಾಗಿ ಈ ಬಾರಿ ತಯಾರಿಸಿದ್ದ ಲಾಡುಗಳಲ್ಲಿ ವಿವಿಧ ಸೇವೆಗಳನ್ನು ಮಾಡಿಸಿದವರಿಗೆ 23,000 ಸಾವಿರ ಲಾಡುಗಳನ್ನು ಹಾಗೂ ಉತ್ಸವ ಮಾಡಿಸಿದವರಿಗೆ 65 ಸಾವಿರ ಲಾಡುಗಳನ್ನು ಪ್ರಸಾದವಾಗಿ ನೀಡಲಾಗಿದೆ.

  • ಇದು ಸಹಜ ಬರಗಾಲವಲ್ಲ, ರಾಜ್ಯ ಸರ್ಕಾರ ಸೃಷ್ಟಿಸಿರುವ ಕೃತಕ ಬರಗಾಲ: ರಾಘವೇಶ್ವರ ಶ್ರೀ

    ಇದು ಸಹಜ ಬರಗಾಲವಲ್ಲ, ರಾಜ್ಯ ಸರ್ಕಾರ ಸೃಷ್ಟಿಸಿರುವ ಕೃತಕ ಬರಗಾಲ: ರಾಘವೇಶ್ವರ ಶ್ರೀ

    – ರಾಮಚಂದ್ರಾಪುರ ಮಠದಿಂದ 24 ಲೋಡ್ ಮೇವು ಸರಬರಾಜು

    ಬೆಂಗಳೂರು: ಇದು ಸಹಜ ಬರಗಾಲವಲ್ಲ, ರಾಜ್ಯ ಸರ್ಕಾರ ಸೃಷ್ಟಿಸಿರುವ ಕೃತಕ ಬರಗಾಲ. ರಾಜ್ಯದ ಜನುವಾರುಗಳಿಗೆ ಮೇವಿಲ್ಲ, ಅದ್ರೇ ಸರ್ಕಾರ ಮಾತ್ರ ಕಸಾಯಿಖಾನೆಗಳ ಅಭಿವೃದ್ಧಿಗೆ ಸಹಾಯ ಮಾಡುತ್ತಿದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಗಿರಿನಗರದಲ್ಲಿರುವ ಶ್ರೀ ರಾಮಚಂದ್ರಾಪುರದ ಮಠದಲ್ಲಿ ಆಯೋಜನೆಗೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಮಲೆ ಮಹದೇಶ್ವರ ಬೆಟ್ಟದ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಗೋವುಗಳಿಗೆ ಮೇವಿನ ಸಮಸ್ಯೆ ಉಂಟಾಗಿದೆ. ಅಲ್ಲಿನ ಗೋಪಾಲಕರು ಯಾವುದೇ ವ್ಯಾಪಾರದ ದೃಷ್ಟಿ ಇಲ್ಲದೇ ಗೋವುಗಳನ್ನು ಸಾಕುತ್ತಿದ್ದಾರೆ. ಗೋವುಗಳ ಆಹಾರದ ಮೂಲ ಬೆಟ್ಟದ ಸಸ್ಯರಾಶಿಯಾಗಿದೆ. ಅದರೆ ಸರ್ಕಾರ ಬೆಟ್ಟಕ್ಕೆ ಬೇಲಿ ಹಾಕಿ ಗೋವುಗಳಿಗೆ ಮೇವಿಲ್ಲದಂತೆ ಮಾಡಿದೆ ಎಂದು ಆರೋಪಿಸಿದರು.

    ಮಲೆ ಮಹಾದೇಶ್ವರ ಬೆಟ್ಟದಲ್ಲಿ ದೇಶಿ ತಳಿಯ 4 ರಿಂದ 5 ಲಕ್ಷಕ್ಕೂ ಅಧಿಕ ಗೋವುಗಳಿದ್ದು ಇವುಗಳ ನಾಶಕ್ಕೆ ಸರ್ಕಾರ ಕಾರಣವಾಗುತ್ತಿದೆ. ಮೇವಿಲ್ಲದೆ ಗೋವುಗಳು ಕಸಾಯಿಖಾನೆಗೆ ಸೇರುವ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ. ಆ ಕಾರಣದಿಂದ ಗೋವುಗಳ ರಕ್ಷಣೆಗೆ ಮಠ ಮುಂದಾಗಿದ್ದು 24ನೇ ಯೋಗ ಪಟ್ಟಾಭಿಷೇಕದ ಪ್ರಯುಕ್ತ 24 ಲಾರಿ ಲೋಡ್ ಮೇವನ್ನ ಸರಬರಾಜು ಮಾಡಲು ಮುಂದಾಗಿದ್ದು ಮಠದ ಭಕ್ತರು ಮತ್ತು ಶಿಷ್ಯರ ಸಹಕರದಿಂದ ಅಡಿಕೆ ಹಾಳೆಗಳನ್ನ ಪುಡಿ ಮಾಡಿ ಮೇವನ್ನ ಒದಗಿಸುವ ಕಾರ್ಯಕ್ಕೆ ಏಪ್ರಿಲ್ 2 ರಿಂದ ಚಾಲನೆ ನೀಡುತ್ತೇವೆ. ಜನರು ಇನ್ನೂ ಮೂರು ತಿಂಗಳು ಸರಳ ಜೀವನವನ್ನು ಅನುಸರಿಸಿ, ಉಳಿಸಿದ ಹಣವನ್ನ ಗೋವಿನ ರಕ್ಷಣೆಗೆ ನೀಡಿ ಎಂದು ರಾಘವೇಂದ್ರ ಶ್ರೀಗಳು ಕರೆಕೊಟ್ಟರು.