Tag: Mahadevi

  • ಮಗಳ ಮುದ್ದಾದ ಫೋಟೋ ಹಂಚಿಕೊಂಡ ನಟಿ ಮಾನಸ ಜೋಶಿ

    ಮಗಳ ಮುದ್ದಾದ ಫೋಟೋ ಹಂಚಿಕೊಂಡ ನಟಿ ಮಾನಸ ಜೋಶಿ

    ಕಿರುತೆರೆಯಲ್ಲಿ ಮಹಾದೇವಿ (Mahadevi), ಮಂಗಳಗೌರಿ ಮದುವೆ, ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ನಟಿಸಿರುವ ಮಾನಸ ಜೋಶಿ (Manasa Joshi) ಇದೀಗ ಮೊದಲ ಬಾರಿಗೆ ಮಗಳ ಮುಖ ರಿವೀಲ್ ಮಾಡಿದ್ದಾರೆ. ಪುಟ್ಟ ಮಗಳ ಮುದ್ದಾದ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಪಾತ್ರಕ್ಕಾಗಿ ಅವನು ಸಹಕರಿಸು ಅಂದ: ಕರಾಳ ಘಟನೆ ಬಿಚ್ಚಿಟ್ಟ ನಟಿ ಮಾಳವಿಕಾ

    2015ರಲ್ಲಿ ಸಂಕರ್ಷಣ ಪ್ರಸಾದ್ ಎಂಬುವವರ ಜೊತೆ ನಟಿ ಬೆಂಗಳೂರಿನಲ್ಲಿ ಹಸೆಮಣೆ (Wedding) ಏರಿದ್ದರು. ಸಂಪ್ರದಾಯ ಬದ್ಧವಾಗಿ ಮಾನಸ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಕಳೆದ ನವೆಂಬರ್‌ನಲ್ಲಿ ಹೆಣ್ಣು ಮಗುವಿಗೆ ಪೋಷಕರಾದರು. ಇದೀಗ ನಟನೆಯಿಂದ ದೂರ ಸರಿದು ಮಗಳ ಪಾಲನೆಯಲ್ಲಿ ನಟಿ ಬ್ಯುಸಿಯಾಗಿದ್ದಾರೆ.

     

    View this post on Instagram

     

    A post shared by Manasa Joshi (@manasajoshi)

    ಹಸಿರು ಬಣ್ಣದ ಮುದ್ದಾದ ಫೋಟೋ ಶೇರ್ ಮಾಡಿ, ಮಗಳಿಗೆ (Paarthavi Kashyap) ಮುದ್ದಾದ ಹೆಸರನ್ನ ಇಟ್ಟಿದ್ದಾರೆ. ಈ ಫೋಟೋ ನೋಡಿ, ಅಭಿಮಾನಿಗಳು ಮಗುವಿಗೆ ಶುಭಹಾರೈಸಿದ್ದಾರೆ.

    ಮಾನಸ ಜೋಶಿ ಅವರು ಕಿರುತೆರೆ ಮಾತ್ರವಲ್ಲ ಹಿರಿತೆರೆಯಲ್ಲೂ ನಟಿಸಿದ್ದಾರೆ. ಲಾಸ್ಟ್ ಬಸ್, ಅಮೃತಾ ಅಪಾರ್ಟ್‌ಮೆಂಟ್ಸ್‌, ಯಶೋಗಾಥೆ, ಕಿರಗೂರಿನ ಗಯ್ಯಾಳಿಗಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

  • ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಮಾನಸ ಜೋಶಿ

    ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಮಾನಸ ಜೋಶಿ

    `ಹಾದೇವಿ'(Mahadevi) ಸೇರಿದಂತೆ ಸಾಕಷ್ಟು ಸೀರಿಯಲ್ ಮತ್ತು ಸಿನಿಮಾಗಳಲ್ಲಿ ನಟಿಸಿರುವ ಮಾನಸ ಜೋಶಿ(Manasa Joshi) ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಟಿಯ ಕುಟುಂಬದಲ್ಲಿ ಇದೀಗ ಸಂತಸ ಮನೆ ಮಾಡಿದೆ. ಈ ಕುರಿತ ಸಿಹಿ ಸುದ್ದಿಯನ್ನು ಸ್ವತಃ ಸೋಷಿಯಲ್ ಮೀಡಿಯಾ ಮೂಲಕ ನಟಿಯೇ ತಿಳಿಸಿದ್ದಾರೆ.

     

    View this post on Instagram

     

    A post shared by Manasa Joshi (@manasajoshi)

    ಕಿರುತೆರೆಯಲ್ಲಿ(Television ದೇವಿಯಾಗಿ ಮತ್ತು ಬಗೆ ಬಗೆಯ ಪಾತ್ರಗಳಲ್ಲಿ ಮಿಂಚಿದ್ದ ನಟಿ ಮಾನಸ ಜೋಶಿ ಅವರು ಹೆಣ್ಣು ಮಗುವಿಗೆ ತಾಯಿಯಾಗಿದ್ದಾರೆ. ಈ ಕುರಿತು ಕೆಲ ತಿಂಗಳುಗಳ ಹಿಂದೆ ಬೇಬಿ ಬಂಪ್ ಫೋಟೋಶೂಟ್ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ತಿಳಿಸಿದ್ದರು. ಇದೀಗ ಮನೆಗೆ ಮಹಾಲಕ್ಷ್ಮಿಯ ಆಗಮನವಾಗಿದೆ. ಇದನ್ನೂ ಓದಿ:ಅಥರ್ವ್-ಆಧವ್ ಎಂದು ಅವಳಿ ಮಕ್ಕಳಿಗೆ ಮುದ್ದಾದ ಹೆಸರಿಟ್ಟ ನಟಿ ಅಮೂಲ್ಯ

     

    View this post on Instagram

     

    A post shared by Manasa Joshi (@manasajoshi)

    ಮಗಳ ಆಗಮನದ ಖುಷಿಯಲ್ಲಿರುವ ನಟಿ, ಬಣ್ಣದ ಲೋಕದಿಂದ ಸದ್ಯಕ್ಕೆ ಅಂತರ ಕಾಯ್ದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶೃಂಗೇರಿ ಶ್ರೀಗಳಿಂದ ಆಶೀರ್ವಾದ ಪಡೆದ ಬಿಎಸ್‍ವೈ

    ಶೃಂಗೇರಿ ಶ್ರೀಗಳಿಂದ ಆಶೀರ್ವಾದ ಪಡೆದ ಬಿಎಸ್‍ವೈ

    ಚಿಕ್ಕಮಗಳೂರು: ಶೃಂಗೇರಿ ಜಗದ್ಗುರು ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಯವರಿಂದ ಬಿಎಸ್ ಯಡಿಯೂರಪ್ಪ ಆಶೀರ್ವಾದ ಪಡೆದಿದ್ದಾರೆ.

    ಶೃಂಗೇರಿಯ ಗುರುನಿವಾಸದಲ್ಲಿ ಭಾರತೀ ತೀರ್ಥ ಸ್ವಾಮೀಜಿಯವರಿಂದ ಬಿಎಸ್‍ವೈ ಆಶೀರ್ವಾದ ಪಡೆದರು. ನಿಮ್ಮ ಆಶಯ ನೆರವೇರಲಿ ಎಂದು ಭಾರತೀ ತೀರ್ಥ ಸ್ವಾಮೀಜಿ ಹಾರೈಸಿದ್ರು. ಈ ವೇಳೆ ಬಿಎಸ್‍ವೈ ಗೆ ಶಾಸಕ ಡಿ.ಎನ್. ಜೀವರಾಜ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಸಾಥ್ ನೀಡಿದ್ರು.

    ಮಹದಾಯಿ ಸಮಸ್ಯೆ ಬಗೆಹರಿಯೋದಕ್ಕೆ ಕಲ್ಲು ಹಾಕಿರೋದು ಈ ರಾಜ್ಯದ ಮುಖ್ಯಮಂತ್ರಿ, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಎಂದು ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ವೇಳೆ ಮಾತನಾಡಿದ ಅವರು, ಸೋನಿಯಾಗಾಂಧಿ ಗೋವಾದಲ್ಲೇ ಇದ್ದಾರೆ. ಗೋವಾ ಕಾಂಗ್ರೆಸ್ ನಾಯಕರ ಮನವೊಲಿಸಬಹದು. ಆದ್ರೆ ಅವರು ಆ ಕೆಲಸ ಮಾಡ್ತಿಲ್ಲ. ನೀರು ಬಿಡದಿರೋದಕ್ಕೆ ಹಾಗೂ ಎಲ್ಲಾ ಗೊಂದಲಗಳಿಗೆ ಕಾಂಗ್ರೆಸ್ ನಾಯಕತ್ವ ಹಾಗೂ ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದ್ರು. ಇದೊಂದು ಭ್ರಷ್ಟಾಚಾರದ ಸರ್ಕಾರ, ಈ ಸರ್ಕಾರ ದಿವಾಳಿಯಾಗಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ರು.

    143 ತಾಲೂಕು ಮುಗಿಸಿಕೊಂಡು 144ನೇ ಕ್ಷೇತ್ರಕ್ಕೆ ಬಂದಿದ್ದೇನೆ. ಎಲ್ಲ ಕಡೆಯೂ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ನಮ್ಮ ಟಾರ್ಗೆಟ್ ಇರೋದು 150 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬುದು. ನಮ್ಮ ಐದು ವರ್ಷದ ಕಾರ್ಯಕ್ರಮ ಹಾಗೂ ಪ್ರಧಾನಿ ಮೋದಿಯವರ ಮೂರುವರೆ ವರ್ಷದ ಆಡಳಿತದ ಆಧಾರದ ಮೇಲೆ ನಾವು 150 ಸ್ಥಾನ ಗೆಲ್ಲಲ್ಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

    ಶೃಂಗೇರಿ ಶಾರದಾಂಬೆಯ ದರ್ಶನ ಮಾಡಿ, ಶ್ರೀಗಳ ಆಶೀರ್ವಾದ ಪಡೆದಿದ್ದೇವೆ, ನಾವು 150 ಸ್ಥಾನ ಗೆಲ್ಲೋದು ಖಚಿತ ಅಂತ ಹೇಳಿದ್ರು.