Tag: Mahaghatbandhan

  • ಮಹಾಘಟಬಂಧನ್ ಸಭೆಗೆ IAS ಅಧಿಕಾರಿಗಳ ಬಳಕೆ ಅತ್ಯಂತ ಕೆಟ್ಟ ಸಂಪ್ರದಾಯ: ಹೆಚ್‍ಡಿಕೆ

    ಮಹಾಘಟಬಂಧನ್ ಸಭೆಗೆ IAS ಅಧಿಕಾರಿಗಳ ಬಳಕೆ ಅತ್ಯಂತ ಕೆಟ್ಟ ಸಂಪ್ರದಾಯ: ಹೆಚ್‍ಡಿಕೆ

    ರಾಮನಗರ: ಮಹಾಘಟಬಂಧನ್ ಸಭೆಗೆ ಐಎಎಸ್ ಅಧಿಕಾರಿಗಳ ಬಳಕೆ ವಿಚಾರ ಸಂಬಂಧ ಚನ್ನಪಟ್ಟಣದಲ್ಲಿ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ. ಇದೊಂದು ಅತ್ಯಂತ ಕೆಟ್ಟ ಸಂಪ್ರದಾಯ. ಒಂದು ಪಕ್ಷದ ರಾಜಕೀಯ ಕಾರ್ಯಕ್ರಮಕ್ಕೆ ಹಿರಿಯ ಅಧಿಕಾರಿಗಳ ಬಳಕೆ ಸರಿಯಲ್ಲ. ಸರ್ಕಾರ ಪ್ರೋಟೋಕಾಲ್ ದುರ್ಬಳಕೆ ಮಾಡಿಕೊಂಡಿದೆ ಎಂದು ಕಿಡಿಕಾರಿದ್ದಾರೆ.

    ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕುಮಾರಸ್ವಾಮಿ ಎಲ್ಲಾದ್ರಲ್ಲೂ ರಾಜಕೀಯ ಮಾಡ್ತಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಗುಡುಗಿದ ಅವರು, ಈವಾಗ ಏನು ಮಾಡ್ತಿದ್ದಾರೆ.? ಈಗ ಮಾಡ್ತಿರೋದು ರಾಜಕೀಯವೋ, ಅಥವಾ ರಾಜ್ಯದ ಅಭಿವೃದ್ಧಿಯೋ ಎಂದು ಟಾಂಗ್ ನೀಡಿದ್ರು. ಅವರ ರಾಜಕೀಯ ಸಂಘಟನೆಗೆ ಹಿರಿಯ ಅಧಿಕಾರಿಗಳ ಬಳಕೆ ಮಾಡಿದ್ದಾರೆ. ಕಳೆದ 40ವರ್ಷಗಳ ರಾಜಕೀಯ ಇತಿಹಾಸದಲ್ಲೇ ಇದು ಪ್ರಥಮ. ಬೇರೆ ಪಕ್ಷದ ನಾಯಕರ ಸ್ವಾಗತ ಕೋರಕು ಬೇಕಿದ್ರೆ ಸಚಿವರು, ಸಂಸದರು ಹೋಗಲಿ. ಆದರೆ ಅಧಿಕಾರಿಗಳ ಕಳಿಸುವ ಮೂಲಕ ಕೆಟ್ಟ ಸಂಪ್ರದಾಯ ಹುಟ್ಟುಹಾಕಿದ್ದಾರೆ. ಅಧಿಕಾರಿಗಳ ಪಕ್ಷದ ಕಾರ್ಯಕರ್ತರ ರೀತಿ ಬಳಕೆ ಮಾಡಿರೋದಕ್ಕೆ ಸರ್ಕಾರ ಉತ್ತರ ಕೊಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

    ವಿಪಕ್ಷ ನಾಯಕನಾಗಲು ಹೆಚ್‍ಡಿಕೆ ಹೀಗೆ ಅರೋಪ ಮಾಡ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನಿರೋದೇ ವಿರೋಧ ಪಕ್ಷದಲ್ಲಿ. ನಮ್ಮತ್ರ ಇರೋದು ಕೇವಲ 19 ಸದಸ್ಯರು. ಬಿಜೆಪಿಯವರು 65 ಸ್ಥಾನ ಗೆದ್ದಿದ್ದಾರೆ. ನನಗೂ ವಿರೋಧ ಪಕ್ಷದ ಸ್ಥಾನಕ್ಕೂ ಸಂಬಂಧ ಇಲ್ಲ ಎಂದರು. ಇದನ್ನೂ ಓದಿ: ಟೊಮೆಟೋ ಬೆಳೆದು ಒಂದೇ ತಿಂಗಳಲ್ಲಿ ಕೋಟಿ-ಕೋಟಿ ಬಾಚಿದ ರೈತ – ದಂಪತಿ ಫುಲ್‌ ಖುಷ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಹಾರದಲ್ಲೂ ಮಹಾಘಟಬಂಧನ್- ಆರ್‌ಜೆಡಿ 144, ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ

    ಬಿಹಾರದಲ್ಲೂ ಮಹಾಘಟಬಂಧನ್- ಆರ್‌ಜೆಡಿ 144, ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ

    ಪಾಟ್ನಾ: ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್ ಸಮಸ್ಯೆ ಬಗೆಹರಿದಿದ್ದು, ಸೀಟ್ ಹಂಚಿಕೆ ಸಹ ಇತ್ಯರ್ಥವಾಗಿದೆ. ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ನೇತೃತ್ವದಲ್ಲಿ ವಿವಿಧ ಪಕ್ಷಗಳು ಸ್ಪರ್ಧೆಗಿಳಿಯುತ್ತಿದ್ದು, ಆರ್‌ಜೆಡಿ 144, ಕಾಂಗ್ರೆಸ್ 70 ಕ್ಷೇತ್ರಗಳನ್ನು ಹಂಚಿಕೆ ಮಾಡಿಕೊಂಡಿವೆ. ಅಲ್ಲದೇ ಲಾಲೂಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ.

    ಪಾಟ್ನಾದಲ್ಲಿ ಸುದ್ದಿಗೋಷ್ಠಿ ನಡೆಸಿ ಸೀಟ್ ಹಂಚಿಕೆ ಕುರಿತು ಮಾಹಿತಿ ನೀಡಿದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಆರ್‍ಜೆಡಿ, ಸಿಪಿಐ, ಸಿಪಿಎಂ ಹಾಗೂ ವಿಕಾಸ್‍ಶೀಲ್ ಇನ್ಸಾನ್ ಪಕ್ಷಗಳು ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ನಾಯಕತ್ವದಲ್ಲಿ ಆರ್‍ಜೆಡಿಗೆ ಬೆಂಬಲ ನೀಡಿದ್ದು, ಈ ಪಕ್ಷಗಳು ಒಟ್ಟು 144 ಸ್ಥಾನಗಳಲ್ಲಿ ಸ್ಪರ್ಧೆ ನಡೆಸಲಿವೆ. ಉಳಿದಂತೆ ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

    ಈ 144 ಸ್ಥಾನಗಳ ಪೈಕಿ ಸಿಪಿಐ(ಎಂ)4, ಸಿಪಿಐ 6 ಹಾಗೂ ಸಿಪಿಎಂ(ಎಂ-ಎಲ್) 19 ಸ್ಥಾನಗಳಲ್ಲಿ ಸ್ಪರ್ಧೆಗಿಳಿದರೆ, ಉಪಚುನಾವಣೆಯ ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರ ಹಾಗೂ 70 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಣಕ್ಕಿಳಿಯುತ್ತಿದೆ. 144 ಕ್ಷೇತ್ರಗಳಲ್ಲಿ ಆರ್‌ಜೆಡಿ ಸ್ಪರ್ಧೆಗೆ ಇಳಿಯುತ್ತಿದೆ.

    ಮೂಲಗಳ ಪ್ರಕಾರ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ದೂತ ಭೋಲಾ ಯಾದವ್ ಗುರುವಾರ ರಾಂಚಿಯಿಂದ ಪಾಟ್ನಾಕ್ಕೆ ಮರಳಿದ ಬಳಿಕ ಸೀಟ್ ಹಂಚಿಕೆ ಕಸರತ್ತು ವೇಗ ಪಡೆದುಕೊಂಡಿದೆ.

    ಈ ಮಧ್ಯೆ ವಿಕಾಸ್‍ಶೀಲ್ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಖೇಶ್ ಸಹಾನಿ ಮೈತ್ರಿ ಕುರಿತು ಅಸಮಾಧಾನ ವ್ಯಕ್ತಪಡಿಸಿ, ನಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಸುದ್ದಿಗೋಷ್ಠಿಯಿಂದ ಹೊರ ನಡೆದಿದ್ದಾರೆ. ನಮ್ಮನ್ನು ನಿರ್ಲಕ್ಷಿಸಲಾಗುತ್ತಿದ್ದು, ಮೈತ್ರಿಯಿಂದ ನಾವು ಹೊರ ನಡೆಯುತ್ತಿದ್ದೇವೆ. ಈ ಕುರಿತು ನಾಳೆ ಮಾಧ್ಯಮದವರೊಂದಿಗೆ ಮಾತನಾಡುತ್ತೇವೆ ಎಂದು ಮಹಾಘಟಬಂಧನ ನಾಯಕರ ಮುಂದೆಯೇ ಹೇಳಿ ಹೊರ ನಡೆದಿದ್ದಾರೆ.

    ಅಕ್ಟೋಬರ್ 28, ನವೆಂಬರ್ 3 ಮತ್ತು ನವೆಂಬರ್ 7ರಂದು ಮೂರು ಹಂತಗಳಲ್ಲಿ ಬಿಹಾರದ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ನೆವೆಂಬರ್ 10ರಂದು ಫಲಿತಾಂಶ ಪ್ರಕಟವಾಗಲಿದೆ.