Tag: Mahakaleshwar Temple

  • ಹಿಂದೂ ದೇವಾಲಯಕ್ಕೆ ಸಾರಾ ಪೂಜೆ : ಟ್ರೋಲಿಗೆ ಕೇರ್ ಮಾಡಲ್ಲ ಎಂದ ನಟಿ

    ಹಿಂದೂ ದೇವಾಲಯಕ್ಕೆ ಸಾರಾ ಪೂಜೆ : ಟ್ರೋಲಿಗೆ ಕೇರ್ ಮಾಡಲ್ಲ ಎಂದ ನಟಿ

    ಮುಸ್ಲಿಂ ಅನ್ನುವ ಕಾರಣಕ್ಕಾಗಿ ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಪುತ್ರಿ ಸಾರಾ ಅಲಿ ಖಾನ್ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದು ಸಖತ್ ಟ್ರೋಲ್ (Troll) ಆಗಿತ್ತು. ಮುಸ್ಲಿಂ ನಟಿಯು ಹಿಂದೂ ದೇವಾಲಯಕ್ಕೆ ಹೋಗುವುದು, ಪೂಜೆ ಸಲ್ಲಿಸುವುದು, ಹಿಂದೂ ಸಂಪ್ರದಾಯ ಆಚರಿಸುವುದು ಎಲ್ಲವೂ ಗಿಮಿಕ್ ಎಂದು ಕೆಲವರು ಕಾಮೆಂಟ್ ಕೂಡ ಮಾಡಿದ್ದರು. ಇದಕ್ಕೆ ನಟಿ ಸಾರಾ ಅಲಿ ಖಾನ್ ಉತ್ತರ ನೀಡಿದ್ದಾರೆ.

    ಯಾರು, ಏನೇ ಹೇಳಿದರೂ ದೇವರ ಮೇಲಿನ ನನ್ನ ನಂಬಿಕೆ ಕಡಿಮೆ ಆಗದು. ಇಂತಹ ಅನೇಕ ಟ್ರೋಲ್ ಗಳನ್ನು ನಾನು ಕಂಡಿದ್ದೇನೆ. ಅವೆಕ್ಕೆಲ್ಲ ಹೆದರುವುದಿಲ್ಲ. ನಾನು ದೇವಸ್ಥಾನಕ್ಕೆ ಹೋಗುವುದು, ಪೂಜೆ ಸಲ್ಲಿಸುವುದು ಅದು ನನ್ನ ನಂಬಿಕೆ. ಅದನ್ನು ಯಾರಿಂದಲೂ ತಡೆಯುವುದಕ್ಕೆ ಆಗುವುದಿಲ್ಲ ಎಂದಿದ್ದಾರೆ ಸಾರಾ ಅಲಿ ಖಾನ್.

    ಸಾರಾ ಅಲಿ ಖಾನ್ (Sara Ali Khan) ನಿನ್ನೆಯಷ್ಟೇ ಉಜ್ಜಯಿನಿಯಲ್ಲಿನ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ವಿಕ್ಕಿ ಕೌಶಲ್, ಸಾರಾ ನಟನೆಯ ‘ಝರಾ ಹಟ್ಕೆ ಝರಾ ಬಚ್ಕೆ’ ರಿಲೀಸ್ ಆದ ಬೆನ್ನಲ್ಲೇ ನಟಿ ದೇವರ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಈ ಫೋಟೋಗಳು ಸಖತ್ ವೈರಲ್ ಆಗಿದ್ದವು. ಇದನ್ನೂ ಓದಿ:ಪಿಎಚ್‌ಡಿ ಪ್ರವೇಶ ಪರೀಕ್ಷೆ ಬರೆದ ನಟಿ ಪವಿತ್ರಾ ಲೋಕೇಶ್

    ಸೈಫ್ ಪುತ್ರಿ ಸಾರಾ ಅವರು ಆಗಾಗ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ ಸುದ್ದಿ ಆಗುತ್ತಾರೆ. ಕೆಲವೇ ದಿನಗಳ ಹಿಂದೆ ಅವರು ಕೇದಾರನಾಥಕ್ಕೆ ಹೋಗಿದ್ದರು. ಈಗ ಅವರು ಉಜ್ಜಯಿನಿಯಲ್ಲಿನ ಮಹಾಕಾಳೇಶ್ವರ ದೇವಸ್ಥಾನಕ್ಕೆ (Mahakaleshwara Temple) ಭೇಟಿ ಕೊಟ್ಟಿದ್ದಾರೆ. ಗುಲಾಬಿ ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿ ಕಾಣಿಸಿಕೊಂಡ ಅವರು ಅಲ್ಲಿನ ಪುರೋಹಿತರ ಜೊತೆ ಮಾತನಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸಾರಾ, ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿರುವುದಕ್ಕೆ ಕೆಲವರು ತಕರಾರು ತೆಗೆದಿದ್ದಾರೆ. ಇದೆಲ್ಲ ಪ್ರಚಾರದ ಗಿಮಿಕ್ ಎಂದು ವ್ಯಂಗ್ಯವಾಡಿದ್ದಾರೆ. ಸಾರಾ ಅಲಿ ಖಾನ್ ಹಿಂದೂ ಧರ್ಮಕ್ಕೆ ಬಂದ್ರಾ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

    ಸಾರಾ, ವಿಕ್ಕಿ ಕೌಶಲ್ ನಟನೆಯ ‘ಝರಾ ಹಟ್ಕೆ ಝರಾ ಬಚ್ಕೆ’ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಗಮನ ಸೆಳೆದಿದೆ. ಈ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರ ಜೊತೆಯಾಗಿ ಸಾರಾ ನಟಿಸಿದ್ದಾರೆ. ಜೂನ್ 2ರಂದು ಈ ಚಿತ್ರ ಬಿಡುಗಡೆ ಆಗಲಿದೆ.

     

    ಇತ್ತೀಚೆಗೆ ಸಾರಾ ಅಲಿ ಖಾನ್ ಅವರು ಕಾನ್ ಚಿತ್ರೋತ್ಸವಕ್ಕೆ (Cannes Festival) ಹಾಜರಿ ಹಾಕಿದ್ದರು. ಅಲ್ಲಿ ಅವರು ಟಸ್ಸೆಲ್ ಗೌನ್ ತೊಟ್ಟು ಮಿರಿ-ಮಿರಿ ಮಿಂಚಿದ್ದರು. ಟಸ್ಸೆಲ್ ಗೌನ್ ಪುರಾತನ ಈಜಿಪ್ಟ್ ಕಾಲದ ಉಡುಗೆಯಾಗಿದೆ. ನಟಿ ಸಾರಾ ಅವರು ಕಾನ್ ಚಿತ್ರೋತ್ಸವದಲ್ಲಿ ಮೊದಲ ಬಾರಿಗೆ ಭಾಗಿಯಾಗಿದ್ದು, ಅಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದರು.

  • ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಾರಾ ಅಲಿ ಖಾನ್ ವಿರುದ್ಧ ಕಿಡಿಕಾರಿದ ನೆಟ್ಟಿಗರು

    ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಾರಾ ಅಲಿ ಖಾನ್ ವಿರುದ್ಧ ಕಿಡಿಕಾರಿದ ನೆಟ್ಟಿಗರು

    ಬಾಲಿವುಡ್ (Bollywood) ನಟ ಸೈಫ್ ಅಲಿ ಖಾನ್ (Saif Ali Khan) ಪುತ್ರಿ ಸಾರಾ ಅಲಿ ಖಾನ್ (Sara Ali Khan) ಅವರು ಉಜ್ಜಯಿನಿಯಲ್ಲಿನ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ವಿಕ್ಕಿ ಕೌಶಲ್, ಸಾರಾ ನಟನೆಯ ‘ಝರಾ ಹಟ್ಕೆ ಝರಾ ಬಚ್ಕೆ’ ರಿಲೀಸ್ ಬೆನ್ನಲ್ಲೇ ನಟಿ ದೇವರ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಸೈಫ್ ಪುತ್ರಿ ಸಾರಾ ಅವರು ಆಗಾಗ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ ಸುದ್ದಿ ಆಗುತ್ತಾರೆ. ಕೆಲವೇ ದಿನಗಳ ಹಿಂದೆ ಅವರು ಕೇದಾರನಾಥಕ್ಕೆ ಹೋಗಿದ್ದರು. ಈಗ ಅವರು ಉಜ್ಜಯಿನಿಯಲ್ಲಿನ ಮಹಾಕಾಳೇಶ್ವರ ದೇವಸ್ಥಾನಕ್ಕೆ (Mahakaleshwara Temple) ಭೇಟಿ ಕೊಟ್ಟಿದ್ದಾರೆ. ಗುಲಾಬಿ ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿ ಕಾಣಿಸಿಕೊಂಡ ಅವರು ಅಲ್ಲಿನ ಪುರೋಹಿತರ ಜೊತೆ ಮಾತನಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸಾರಾ, ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿರೋದ್ದಕ್ಕೆ ಕೆಲವರು ತಕರಾರು ತೆಗೆದಿದ್ದಾರೆ. ಇದೆಲ್ಲ ಪ್ರಚಾರದ ಗಿಮಿಕ್ ಎಂದು ವ್ಯಂಗ್ಯವಾಡಿದ್ದಾರೆ. ಸಾರಾ ಅಲಿ ಖಾನ್ ಹಿಂದೂ ಧರ್ಮಕ್ಕೆ ಬಂದ್ರಾ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

    ಸಾರಾ, ವಿಕ್ಕಿ ಕೌಶಲ್ ನಟನೆಯ ‘ಝರಾ ಹಟ್ಕೆ ಝರಾ ಬಚ್ಕೆ’ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಗಮನ ಸೆಳೆದಿದೆ. ಈ ಸಿನಿಮಾದಲ್ಲಿ ಸಾರಾ- ವಿಕ್ಕಿ ಕೌಶಲ್ ಅವರು ಜೋಡಿಯಾಗಿ ನಟಿಸಿದ್ದಾರೆ. ಜೂನ್ 2ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಇದನ್ನೂ ಓದಿ:ಸಮಂತಾ ನಟನೆಯ ಹಾಲಿವುಡ್ ಸಿನಿಮಾಗೆ ಟೈಟಲ್ ಫಿಕ್ಸ್

    ಇತ್ತೀಚೆಗೆ ಸಾರಾ ಅಲಿ ಖಾನ್ ಅವರು ಕಾನ್ ಚಿತ್ರೋತ್ಸವಕ್ಕೆ (Cannes Festival) ಹಾಜರಿ ಹಾಕಿದ್ದರು. ಅಲ್ಲಿ ಅವರು ಟಸ್ಸೆಲ್ ಗೌನ್ ತೊಟ್ಟು ಮಿರಿ-ಮಿರಿ ಮಿಂಚಿದ್ದರು. ಟಸ್ಸೆಲ್ ಗೌನ್ ಪುರಾತನ ಈಜಿಪ್ಟ್ ಕಾಲದ ಉಡುಗೆಯಾಗಿದೆ. ನಟಿ ಸಾರಾ ಅವರು ಕಾನ್ ಚಿತ್ರೋತ್ಸವದಲ್ಲಿ ಮೊದಲ ಬಾರಿಗೆ ಭಾಗಿಯಾಗಿದ್ದು, ಅಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದರು.

  • 856 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಉಜ್ಜಯಿನಿ ದೇಗುಲ ಇಂದು ಲೋಕಾರ್ಪಣೆ

    856 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಉಜ್ಜಯಿನಿ ದೇಗುಲ ಇಂದು ಲೋಕಾರ್ಪಣೆ

    ಭೋಪಾಲ್: ಮಧ್ಯಪ್ರದೇಶದಲ್ಲಿ (Madhya Pradesh) 856 ಕೋಟಿ ರೂ. ವೆಚ್ಚದಲ್ಲಿ ನವೀಕೃತಗೊಂಡಿರುವ ಉಜ್ಜಯಿನಿಯ `ಮಹಾಕಾಲೇಶ್ವರ ದೇವಾಲಯ’ (Mahakaleshwar Temple) ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಲೋಕಾರ್ಪಣೆಗೊಳಿಸಲಿದ್ದಾರೆ.

    ಕಾರಿಡಾರ್‌ಗೆ `ಮಹಾಕಾಲ ಲೋಕ’ (MahakalLok) ಎಂದು ಹೆಸರಿಡಲಾಗಿದೆ. ಇದು ದ್ವಾದಶ, ಜೋತಿರ್ಲಿಂಗಳಲ್ಲಿ ಒಂದಾದ ಉಜ್ಜಯಿನಿಯ (Ujjaini) ಮಹಾಕಾಲೇಶ್ವರ ದೇಗುಲ ನವೀಕೃತ ರೂಪದಲ್ಲಿ ಕಂಗೊಳಿಸಲಿದೆ. ಹಾಗಾಗಿ ಪ್ರವಾಸೋದ್ಯಮ ಗಮನಾರ್ಹವಾಗಿ ಹೆಚ್ಚಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಫುಟ್‌ಪಾತ್‌ ಮೇಲೆ ಚಲಾಯಿಸಿದ ಚಾಲಕ – ಅಪಘಾತಕ್ಕೆ ನಿವೃತ್ತ ಯೋಧ ಬಲಿ

    ಇದಕ್ಕೂ ಮುನ್ನ ದೇಗುಲದ ಸುತ್ತಲಿನ ಜಾಗ ಇಕ್ಕಟ್ಟಾಗಿತ್ತು. ನಂತರ ತೆರವು ಕಾರ್ಯಾಚರಣೆ ನಡೆಸಿ ಕಾಶಿ ಮಾದರಿಯಲ್ಲಿ ವಿಶಾಲ ಕಾರಿಡಾರ್ ನಿರ್ಮಿಸಲಾಗಿದೆ. ಇದರಿಂದ ಕಣ್ಮನ ಸೆಳೆಯುವ ವಾಸ್ತುಶಿಲ್ಪಗಳು ಚಿತ್ತಾಕರ್ಷಕ ನೋಟವನ್ನು ಬೀರುತ್ತವೆ. ಪ್ರಧಾನಿ ಮೋದಿ ಮಂಗಳವಾರ (ಅ.11) ಸಂಜೆ 5:30ಕ್ಕೆ ಉಜ್ಜಯಿನಿಗೆ ಬಂದಿಳಿಯಲಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಕಾರಿಡಾರ್ ಉದ್ಘಾಟನೆ ಬಳಿಕ `ನಂದಿದ್ವಾರದ ಕೆಳಗೆ ಪವಿತ್ರ ಮೋಲಿ (ದಾರ)ಯಿಂದ ಸುತ್ತಿ ಮುಚ್ಚಿಡಲಾದ ಶಿವಲಿಂಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಇದನ್ನೂ ಓದಿ: ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಿ- ಉಕ್ರೇನ್‌ನಲ್ಲಿನ ನಾಗರಿಕರಿಗೆ ಭಾರತ ಸಲಹೆ

    ಏನಿದೆ ವಿಶೇಷತೆ?
    12 ಜೋತಿರ್ಲಿಂಗ ಕ್ಷೇತ್ರಗಳಲ್ಲಿ ಉಜ್ಜಯಿನಿ ಮಹಾಕಾಲೇಶ್ವರ ದೇಗುಲವೂ ಒಂದು. ಇದನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿ 2017ರಲ್ಲಿ ಕಾಮಗಾರಿ ಆರಂಭಿಸಲಾಯಿತು. 856 ಕೋಟಿ ವೆಚ್ಚದ 1ನೇ ಹಂತದ ಕಾಮಗಾರಿ ಇದೀಗ ಪೂರ್ಣಗೊಂಡಿದೆ. ಅಭಿವೃದ್ಧಿ ಯೋಜನೆಯಿಂದಾಗಿ ದೇಗುಲದ ವಿಸ್ತೀರ್ಣ 2.87 ರಿಂದ 47 ಹೆಕ್ಟೆರ್‌ಗೆ ವಿಸ್ತರಣೆಗೊಂಡಿದೆ. ದೇಶದಲ್ಲೇ ಅತಿ ಉದ್ದವಾದ 900 ಮೀಟರ್ ಕಾರಿಡಾರ್ ಇದಾಗಿದೆ.

    ಅಂಬುಲೆನ್ಸ್ (Ambulance), ಅಗ್ನಿಶಾಮಕ ವಾಹನಗಳ ಸಂಚಾರಕ್ಕೂ ಅವಕಾಶ ಕಲ್ಪಿಸಲಾಗಿದೆ. ಶಿವಪುರಾಣ ಆಧರಿಸಿ ಕಾರಿಡಾರ್ ಪ್ರಾರಂಭದಲ್ಲಿ 2 ಬೃಹತ್ ಹೆಬ್ಬಾಗಿಲು ಇದೆ. ರಾಜಸ್ಥಾನ ಮರಳುಗಲ್ಲುಗಳನ್ನು ಬಳಸಿ, 3 ರಾಜ್ಯಗಳ ಕಲಾವಿದರಿಂದ ಕೆತ್ತನೆ ಕೆಲಸ ಮಾಡಿಸಲಾಗಿದೆ. ಪ್ರವಾಸಿ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಮೂಲ ಸೌಕರ್ಯಗಳನ್ನೂ ಕಲ್ಪಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಣ್ಬೀರ್ ಬೀಫ್ ತಿಂದ ಹೇಳಿಕೆ: ಮಹಾಕಾಳೇಶ್ವರ ದೇವಸ್ಥಾನ ಪ್ರವೇಶಿಸದಂತೆ ತಡೆದ ಭಜರಂಗದಳ ಕಾರ್ಯಕರ್ತರು

    ರಣ್ಬೀರ್ ಬೀಫ್ ತಿಂದ ಹೇಳಿಕೆ: ಮಹಾಕಾಳೇಶ್ವರ ದೇವಸ್ಥಾನ ಪ್ರವೇಶಿಸದಂತೆ ತಡೆದ ಭಜರಂಗದಳ ಕಾರ್ಯಕರ್ತರು

    ಣ್ಬೀರ್ ಕಪೂರ್ ಮತ್ತು ಆಲಿಯಾ ಭಟ್ ಜೋಡಿಯ ಬ್ರಹ್ಮಾಸ್ತ್ರ ಸಿನಿಮಾ ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಹಾಗಾಗಿ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ಊರೂರು ತಿರುಗುತ್ತಿದ್ದಾರೆ. ಪ್ರಚಾರದಲ್ಲಿ ತೊಡಗಿದ್ದಾರೆ. ಸದ್ಯ ಮಧ್ಯ ಪ್ರದೇಶದಲ್ಲಿರುವ  ಈ ಜೋಡಿ ಅಲ್ಲಿನ ಸುಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಬಂದ ಸಂದರ್ಭದಲ್ಲಿ ದೇವಸ್ಥಾನ ಪ್ರವೇಶಿಸದಂತೆ ಅಲ್ಲಿನ ಭಜರಂಗ ದಳದ ಕಾರ್ಯಕರ್ತರು ತಡೆದಿದ್ದಾರೆ.

    ranbir alia

    ರಣ್ಬೀರ್ ಕಪೂರ್ ಮತ್ತು ಆಲಿಯಾ ಭಟ್ ಸಾಂಪ್ರದಾಯಿಕ ಬಟ್ಟೆಯಲ್ಲೇ ದೇವಸ್ಥಾನಕ್ಕೆ ಬಂದಿದ್ದಾರೆ. ದೇವಸ್ಥಾನದ ಶಿಷ್ಟಾಚಾರಗಳನ್ನೂ ಪಾಲಿಸಿದ್ದಾರೆ. ತಮಗೆ ಮತ್ತು ಸಿನಿಮಾಗೆ ಒಳ್ಳೆದಾಗಲಿ ಎಂದು ಪ್ರಾರ್ಥಿಸಲು ಬಂದ ಜೋಡಿಯನ್ನು ಭಜರಂಗ ದಳದ ಕಾರ್ಯಕರ್ತರು ತಡೆದಿರುವುದಕ್ಕೆ ಕಾರಣ, ರಣ್ಬೀರ್ ಕಪೂರ್ ಈ ಹಿಂದೆ ಹೇಳಿದ್ದ ಹೇಳಿಕೆ. ಹಲವು ವರ್ಷಗಳ ಹಿಂದೆ ಹೇಳಿದ್ದ ಆ ಹೇಳಿಕೆ ಇವತ್ತು ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇದನ್ನೂ ಓದಿ:ನಟ ಧನಂಜಯ್ ಮತ್ತು ಅದಿತಿ ಪ್ರಭುದೇವ್ ರಿಯಲ್ ಆಗಿ ಮದುವೆ ಆಗ್ಬೇಕಿತ್ತು: ಆದರೆ ತಪ್ಪಿಸಿದವರು ಯಾರು?

    ರಣ್ಬೀರ್ ಕಪೂರ್ ಈ ಹಿಂದೆ ಸಂದರ್ಶನವೊಂದರಲ್ಲಿ ನಾನ್ ವೆಜ್ ಕುರಿತು ಮಾತನಾಡುತ್ತಾ, ತಮ್ಮದು ಮಾಂಸದೂಟ ಮಾಡುವ ಕುಟುಂಬ. ಅದರಲ್ಲೂ ನಾನಾ ರೀತಿಯ ಮಾಂಸದಡಿಗೆ ತಮ್ಮ ಮನೆಯಲ್ಲಿ ತಯಾರಾಗುತ್ತದೆ. ನನಗೆ ಬೀಫ್ ಅಂದರೆ ತುಂಬಾ ಇಷ್ಟ ಎಂದು ಹೇಳಿದ್ದರು. ಈ ಮಾತಿಗೆ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದೂಗಳು ದೇವರು ಎಂದು ಪೂಜಿಸುವ ಗೋವಿನ ಮಾಂಸವನ್ನು ತಿನ್ನುವ ರಣ್ಬೀರ್ ನಮ್ಮ ದೇವಸ್ಥಾನಗಳಿಗೆ ಬರುವುದು ಬೇಡವೆಂದು ಭಜರಂಗ ದಳದ ಕಾರ್ಯಕರ್ತರು ತಡೆದಿದ್ದಾರೆ.

    ಸಡನ್ನಾಗಿ ನಡೆದ ಬೆಳವಣಿಗೆಯಿಂದ ಗಲಿಬಿಲಿಗೊಂಡ ರಣ್ಬೀರ್ ಮತ್ತು ಆಲಿಯಾ ಭಟ್, ಅದೆಷ್ಟೇ ಸಮಾಧಾನ ಹೇಳಿದರೂ ಕೇಳದ ಕಾರಣದಿಂದಾಗಿ ದೇವಸ್ಥಾನದಿಂದ ಅವರು ಹೊರಗುಳಿದಿದ್ದಾರೆ. ಕೇವಲ ನಿರ್ದೇಶಕ ಅಯಾನ್ ಮುಖರ್ಜಿ ಒಬ್ಬರೇ ದೇವಸ್ಥಾನದ  ಒಳಗೆ ಪ್ರವೇಶಿಸಿ ದೇವರ ದರ್ಶನ ಪಡೆದಿದ್ದಾರೆ. ಮತ್ತು ಆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅವರು ಶೇರ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಿಂದೂ ದೇವರಿಗೆ ಜಾಹೀರಾತಿನಲ್ಲಿ ಅಪಮಾನ – Zomato ಬಾಯ್ಕಟ್‍ಗೆ ಕರೆ

    ಹಿಂದೂ ದೇವರಿಗೆ ಜಾಹೀರಾತಿನಲ್ಲಿ ಅಪಮಾನ – Zomato ಬಾಯ್ಕಟ್‍ಗೆ ಕರೆ

    ನವದೆಹಲಿ: ಫುಡ್ ಡೆಲಿವರಿ ಆ್ಯಪ್ ಝೊಮ್ಯಾಟೋ ಜಾಹೀರಾತಿನಲ್ಲಿ ಬಾಲಿವುಡ್ ನಟ ಹೃತಿಕ್ ರೋಷನ್ ಹಿಂದೂ ದೇವರಿಗೆ ಅಪಮಾನ ಮಾಡಿದ್ದಾರೆ ಎಂದು ಹಿಂದೂ ಸಂಘಟನೆಗಳು ಝೊಮ್ಯಾಟೋ ಬಾಯ್ಕಟ್‍ಗೆ ಕರೆ ನೀಡಿವೆ.

    ಝೊಮ್ಯಾಟೋ ತನ್ನ ಜಾಹೀರಾತಿನಲ್ಲಿ ಹೃತಿಕ್ ರೋಷನ್, ಉಜ್ಜೈನಿಯಲ್ಲಿನ ಭಗವಾನ್ ಮಹಾಕಾಲೇಶ್ವರನ ಉಲ್ಲೇಖ ಮಾಡಿ, ‘ಪ್ಲೇಟ್ ಇಷ್ಟವಾಯಿತೇ, ನೀವು ಉಜ್ಜೈನಿಯಲ್ಲಿದ್ದರೆ, ಮಹಾಕಾಳೇಶ್ವರನಿಂದ ತರಿಸಿದರೆ ಆಯಿತುʼ ಎಂದು ಹೇಳಿದ್ದಾರೆ. ಇದು ಹಿಂದೂ ದೇವರು ಮಹಾಕಾಳೇಶ್ವರನಿಗೆ ಅಪಮಾನ ಎಂದು ಹಿಂದೂ ಸಂಘಟನೆಗಳ ಆರೋಪವಾಗಿದೆ. ಇದನ್ನೂ ಓದಿ: 100 ಲೋನ್ ಆ್ಯಪ್‍ಗಳಿಂದ 500 ಕೋಟಿ ರೂ. ವ್ಯವಹಾರ – ಗ್ರಾಹಕರ ಮಾಹಿತಿ ಚೀನಾಗೆ ರವಾನಿಸಿದ ಗ್ಯಾಂಗ್ ಅರೆಸ್ಟ್

    ಯಾವ ಸಂಸ್ಥೆಯು ಮಾಂಸಹಾರಿ ಭೋಜನವನ್ನು ಸಹ ವಿತರಿಸುವುದೋ, ಅವರು ಮಹಾಕಾಳೇಶ್ವರನ ಹೆಸರಿನಲ್ಲಿ ಜಾಹೀರಾತು ತಯಾರಿಸಿ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಾರೆ. ಆದ್ದರಿಂದ ಈ ಜಾಹೀರಾತನ್ನು ತಯಾರಿಸಿದ ಝೊಮ್ಯಾಟೋ ಹಿಂದೂಗಳಲ್ಲಿ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಅಲ್ಲದೇ ಝೊಮ್ಯಾಟೋ ಬಹಿಷ್ಕಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕರೆ ಕೊಡಲಾಗಿದೆ. ಇದನ್ನೂ ಓದಿ: ಮದುವೆ ಮನೆಯಲ್ಲಿ ವಿಷಪೂರಿತ ಆಹಾರ ಸೇವಿಸಿ 17 ಮಂದಿ ಅಸ್ವಸ್ಥ

    Live Tv
    [brid partner=56869869 player=32851 video=960834 autoplay=true]