Tag: Mahalakshmi

  • ಮಹಾಲಕ್ಷ್ಮಿ ಪ್ರಕರಣದಲ್ಲಿ ಟ್ವಿಸ್ಟ್‌ – ಶಂಕಿತ ಕೊಲೆ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

    ಮಹಾಲಕ್ಷ್ಮಿ ಪ್ರಕರಣದಲ್ಲಿ ಟ್ವಿಸ್ಟ್‌ – ಶಂಕಿತ ಕೊಲೆ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

    ಬೆಂಗಳೂರು: ದೆಹಲಿಯ ಶ್ರದ್ಧಾವಾಕರ್‌ ಮಾದರಿಯಲ್ಲಿ ಹತ್ಯೆಗೀಡಾಗಿದ್ದ ಮಹಾಲಕ್ಷ್ಮಿ ಕೊಲೆ ಪ್ರಕರಣದ (Mahalakshmi Case) ತನಿಖೆ ಚುರುಕು ಪಡೆದಿದೆ. ಈ ನಡುವೆಯೇ ಪ್ರಕರಣ ಶಂಕಿತ ಆರೋಪಿ ಒಡಿಶಾದಲ್ಲಿ (Odisha) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ದೇಹವನ್ನ ಪೀಸ್‌ ಪೀಸ್‌ ಮಾಡಿ ತರಕಾರಿ ಜೋಡಿಸಿದಂತೆ ಫ್ರಿಡ್ಜ್‌ನಲ್ಲಿ ತುಂಬಿಟ್ಟಿದ್ದ ಹಂತಕ; ಕ್ರೂರತೆಗೆ ಕೊನೆ ಇಲ್ವಾ?

    ಮುಕ್ತಿರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡ ಶಂಕಿತ ಕೊಲೆ ಆರೋಪಿ. ಈತ ಮಹಾಲಕ್ಷ್ಮಿ ಕೊಲೆ ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದ. ಈ ಸಂಬಂಧ ವಿಚಾರಣೆಗೆ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸರು ಒಡಿಶಾಗೆ ತೆರಳಲು ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಹಿಳೆ ಭೀಕರ ಹತ್ಯೆ; ಅಶ್ರಫ್‌ ಸೇರಿ ನಾಲ್ವರ ಮೇಲೆ ಕುಟುಂಬಸ್ಥರ ಅನುಮಾನ

    ತನಿಖೆ ಚುರುಕು:
    ಸೆಪ್ಟೆಂಬರ್ 1ರ ತನಕ ಮಹಾಲಕ್ಷ್ಮಿ ಕೆಲಸಕ್ಕೆ ಹೋಗಿದ್ದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ಅಥವಾ 3 ರಂದು ಕೊಲೆ ಆಗಿರಬಹುದು ಎಂದು ಪೊಲೀಸರು ಸದ್ಯಕ್ಕೆ ಅಂದಾಜಿಸಿದ್ದಾರೆ. ಇನ್ನೂ ಆಕೆ ಕೆಲಸ ಮಾಡ್ತಿದ್ದ ಶಾಪ್‌ನ ಟೀಂ ಲೀಡರ್ ಮುಕ್ತಿರಂಜನ್ ಕೂಡ ಸೆಪ್ಟೆಂಬರ್ 1ರ ನಂತರ ಕೆಲಸಕ್ಕೆ ಬಾರದೇ ಇರೋದು ಹಲವು ಅನುಮಾಗಳಿಗೆ ಕಾರಣವಾಗಿತ್ತು. ಒಡಿಶಾದಲ್ಲಿ ಹಂತಕ ಇರುವ ಶಂಕೆ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿದ್ದರು. ಕೊಲೆ ಪ್ರಕರಣದ ಬಗ್ಗೆ ಒಡಿಶಾ ಪೊಲೀಸರಿಗೂ ಸಹ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಮಹಾಲಕ್ಷ್ಮಿ ಮರ್ಡರ್‌ ಕೇಸ್‌ಗೆ ಟ್ವಿಸ್ಟ್‌ – ಫ್ರಿಡ್ಜ್‌ ಮೇಲೆ ಹಲವು ಕಡೆ ಹಲವು ಬೆರಳಚ್ಚು ಗುರುತು ಪತ್ತೆ!

    ಈ ಮಧ್ಯೆ, ಮಹಾಲಕ್ಷ್ಮಿ ಶವವನ್ನು 59 ತುಂಡು ಮಾಡಿರುವ ಹಂತಕ ತುಂಬಾನೆ ಅಪಾಯಕಾರಿ ಎಂದು ಮನೋವೈದ್ಯರು ವಿಶ್ಲೇಷಣೆ ಮಾಡಿದ್ದರು. ಸುಡೋ ಮ್ಯಾಚೋಯಿಸಂ ಎಂಬ ಅಪರಾಧ ಸ್ವಭಾವ ಇರಬಹುದು. ಆತನನ್ನು ತಕ್ಷಣವೇ ಬಂಧಿಸದಿದ್ರೆ ಇನ್ನಷ್ಟು ಮಂದಿ ಇದೇ ರೀತಿ ಬಲಿಯಾಗಬಹುದು ಎಂದು ಎಚ್ಚರಿಕೆ ಸಹ ನೀಡಿದ್ದರು. ಇದನ್ನೂ ಓದಿ: ಬೆಂಗಳೂರಲ್ಲಿ ಮಹಿಳೆಯ ಬರ್ಬರ ಹತ್ಯೆ- ಪಶ್ಚಿಮ ಬಂಗಾಳದಲ್ಲಿ ಹಂತಕ ತಲೆಮರೆಸಿಕೊಂಡಿರೋ ಶಂಕೆ

  • ವಾರದ ರಜೆ ದಿನ ಮಹಾಲಕ್ಷ್ಮಿ ಕೊಲೆ? – ಸೆಪ್ಟೆಂಬರ್ 1, 2, 3ರ ಮರ್ಡರ್ ಮಿಸ್ಟ್ರಿಯ ಎಕ್ಸ್‌ಕ್ಲೂಸಿವ್‌ ಮಾಹಿತಿ

    ವಾರದ ರಜೆ ದಿನ ಮಹಾಲಕ್ಷ್ಮಿ ಕೊಲೆ? – ಸೆಪ್ಟೆಂಬರ್ 1, 2, 3ರ ಮರ್ಡರ್ ಮಿಸ್ಟ್ರಿಯ ಎಕ್ಸ್‌ಕ್ಲೂಸಿವ್‌ ಮಾಹಿತಿ

    ಬೆಂಗಳೂರು: ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿ (Mahalakshmi) ಭೀಕರ ಹತ್ಯೆ ಪ್ರಕರಣದ ತನಿಖೆಯನ್ನ ಪೊಲೀಸರು ತೀವ್ರಗೊಳಿಸಿದ್ದಾರೆ. ಸೆಪ್ಟೆಂಬರ್ ಮೂರು ಅಥವಾ ನಾಲ್ಕರಂದು ಮಹಾಲಕ್ಷ್ಮಿಯನ್ನ ಹಂತಕ ಹತ್ಯೆ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

    ಸೆಪ್ಟೆಂಬರ್ ಮೂರು ಅಥವಾ ನಾಲ್ಕುರಂದು ಹತ್ಯೆ ಮಾಡಿರುವ ಬಗ್ಗೆ ಪೊಲೀಸರು ತೀರ್ಮಾನಕ್ಕೆ ಬರಲು ಕೆಲವೊಂದು ಸಾಕ್ಷ್ಯಗಳು ಕಾರಣವಾಗಿದೆ. ಸೆ.1ರ ಭಾನುವಾರ ಹಂತಕನ ಕೃತ್ಯಕ್ಕೆ ಬಲಿಯಾಗಿರುವ ಮಹಾಲಕ್ಷ್ಮಿ ಮಲ್ಲೇಶ್ವರನಲ್ಲಿರುವ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿರುತ್ತಾರೆ. ಬಟ್ಟೆ ಅಂಗಡಿಯ ಹಾಜರಾತಿಯಲ್ಲಿ ದಾಖಲೆ ಇದೆ. ಸೆ.2 ಅಂದರೆ ಸೋಮವಾರ ವಾರದ ರಜೆ ಪಡೆದುಕೊಂಡಿದ್ದಾರೆ. ಇದು ಮಲ್ಲೇಶ್ವರಂನಲ್ಲಿರುವ ಫ್ಯಾಷನ್ ಪ್ಯಾಕ್ಟ್ರಿಯ ಹಾಜರಾತಿಯಲ್ಲಿದೆ. ಇದನ್ನೂ ಓದಿ: ಮಹಾಲಕ್ಷ್ಮಿ ಮರ್ಡರ್‌ ಕೇಸ್‌ಗೆ ಟ್ವಿಸ್ಟ್‌ – ಫ್ರಿಡ್ಜ್‌ ಮೇಲೆ ಹಲವು ಕಡೆ ಹಲವು ಬೆರಳಚ್ಚು ಗುರುತು ಪತ್ತೆ!

    ಅದೇ ಶಾಪ್‌ನಲ್ಲಿ ಹಂತಕ ಮುಕ್ತಿ ರಂಜನ್ ರಾಯ್ ಕೂಡ ಟೀಂ ಲೀಡರ್ ಆಗಿ ಕೆಲಸ ಮಾಡಿಕೊಂಡಿದ್ದಾನೆ. ಕಳೆದ ಎರಡು ವರ್ಷದಿಂದ ಆದೇ ಶಾಪ್‌ನಲ್ಲಿ ಹಂತಕ ಕೆಲಸ ಮಾಡಿಕೊಂಡಿದ್ದ. ಕಳೆದ 9 ತಿಂಗಳಿಂದ ಕೊಲೆಯಾಗಿರುವ ಮಹಾಲಕ್ಷ್ಮಿ ಕೆಲಸ ಮಾಡಿಕೊಂಡಿದ್ದರು.

    ಸೆಪ್ಟೆಂಬರ್ ಮೂರರಿಂದ ಇಬ್ಬರು ಕೂಡ ಕೆಲಸಕ್ಕೆ ಬಂದಿಲ್ಲ. ಹಾಗಾಗಿ ಸೆಪ್ಟೆಂಬರ್ ಮೂರು ಅಥವಾ ನಾಲ್ಕರಂದು ಹತ್ಯೆ ಮಾಡಿರುವ ಸಾಧ್ಯತೆ ಹೆಚ್ಚಾಗಿದೆ ಎನ್ನುತ್ತಿದೆ ಪೊಲೀಸ್ ಮೂಲಗಳು. ಇದನ್ನೂ ಓದಿ: ಮಹಾಲಕ್ಷ್ಮಿ ಕೊಲೆ ಪ್ರಕರಣ – ವೈದ್ಯರಿಂದ ಇಂದು ಮರಣೋತ್ತರ ಪರೀಕ್ಷಾ ವರದಿ ಸಲ್ಲಿಕೆ

  • ಆತಂಕ ಮೂಡಿಸಿದ ನಟಿ ಮಹಾಲಕ್ಷ್ಮಿ ಪತಿಯ ಪೋಸ್ಟ್

    ಆತಂಕ ಮೂಡಿಸಿದ ನಟಿ ಮಹಾಲಕ್ಷ್ಮಿ ಪತಿಯ ಪೋಸ್ಟ್

    ಮಿಸ್ ಮ್ಯಾಚ್ ಜೋಡಿ ಎಂದು ಟ್ರೋಲ್ ಆಗಿದ್ದ ನಟಿ ಮಹಾಲಕ್ಷ್ಮಿ ಮತ್ತು ಪತಿ ರವೀಂದರ್ ಚಂದ್ರಶೇಖರ್, ಇದೀಗ ಮತ್ತೊಂದು ವಿಚಾರಕ್ಕಾಗಿ ಸುದ್ದಿಯಾಗಿದ್ದಾರೆ. ರವೀಂದರ್ ಇನ್ಸ್ಟಾದಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದು, ನನ್ನ ದಿನಗಳು ಹತ್ತಿರವಾಗಿವೆ ಎನ್ನುವ ಅರ್ಥದಲ್ಲಿ ಅವರು ಬರೆದುಕೊಂಡಿದ್ದಾರೆ. ಕೆಟ್ಟ ದಿನಗಳು ತನ್ನನ್ನು ಆವರಿಸಿಕೊಂಡಿವೆ ಎಂದಿದ್ದಾರೆ.

    ಈ ನಡುವೆ ಮಹಾಲಕ್ಷ್ಮಿ ಮತ್ತು ರವೀಂದರ್ ದೂರವಾಗುತ್ತಿದ್ದಾರೆ ಎನ್ನುವ ಮಾತೂ ಹರಿದಾಡುತ್ತಿದೆ. ಮೊನ್ನೆಯಷ್ಟೇ ಮಹಾಲಕ್ಷ್ಮಿ ಸ್ವತಃ ಗಂಡನಿಗೆ ವಾರ್ನ್ ಮಾಡಿದ್ದರು. ನಿರ್ಮಾಪಕ ರವೀಂದರ್ ಚಂದ್ರಶೇಖರ್ (Ravinder Chandrasekaran) ಜೊತೆ ಮದುವೆಯಾದ ದಿನದಿಂದ ಈವರೆಗೂ ಈ ಜೋಡಿ ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇದೆ. ಈ ಬಾರಿ ರವೀಂದರ್ ತಮ್ಮದಷ್ಟೇ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಕಾರಣಕ್ಕಾಗಿ ಮಹಾಲಕ್ಷ್ಮಿ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಸದಾ ಮಹಾಲಕ್ಷ್ಮಿ ಜೊತೆ ಇರುವಂಥ ಫೋಟೋಗಳನ್ನೇ  ರವೀಂದರ್ ಶೇರ್ ಮಾಡುತ್ತಿದ್ದರು. ಆದರೆ ಈ ಬಾರಿ ತಮ್ಮದಷ್ಟೇ ಫೋಟೋ ಹಾಕಿಕೊಂಡಿದ್ದಾರೆ. ಹಾಗಾಗಿ ಮಹಾಲಕ್ಷ್ಮಿಯಿಂದ ರವೀಂದರ್ ದೂರವಾಗಿದ್ದಾರೆ ಎನ್ನುವ ಸುದ್ದಿ ಹರಡಿಕೊಂಡಿದೆ. ರವೀಂದರ್ ಜೈಲಿಗೆ ಹೋಗಿ ಬಂದಾಗಿಂದ ಮಹಾಲಕ್ಷ್ಮಿ ದೂರವಾಗಿದ್ದಾರೆ ಎಂದೇ ಹೇಳಲಾಗಿತ್ತು. ಈ ಫೋಟೋ ಅದಕ್ಕೆ ಪುಷ್ಠಿ ನೀಡಿತ್ತು. ಹಾಗಾಗಿ ಮಹಾಲಕ್ಷ್ಮಿ ಗಂಡನಿಗೆ ವಾರ್ನ್ ಮಾಡಿ, ಇನ್ನೆಂದೂ ನಿಮ್ಮದಷ್ಟೇ ಫೋಟೋ ಹಾಕುವಂತಿಲ್ಲವೆಂದು ಹೇಳಿದ್ದಾರಂತೆ.

     

    ನಟಿ ಮಹಾಲಕ್ಷ್ಮಿ (Mahalakshmi) ಮತ್ತು ನಿರ್ಮಾಪಕ ರವೀಂದರ್ ಚಂದ್ರಶೇಖರ್ ಸೆಪ್ಟಂಬರ್ 1ರಂದು ಮದುವೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದರು. ಸುಂದರಿ ಮಹಾಲಕ್ಷ್ಮಿಯು ಹಣಕ್ಕಾಗಿ ಮದುವೆಯಾಗಿದ್ದಾರೆ ಎಂದು ಟ್ರೋಲ್ ಮಾಡಲಾಗಿತ್ತು. ರವೀಂದರ್ ದಪ್ಪ ಅನ್ನುವ ಕಾರಣಕ್ಕಾಗಿ ಈ ಜೋಡಿ ಅಪಹಾಸ್ಯಕ್ಕೆ ಗುರಿಯಾಗಿತ್ತು. ಏನೇ ಹಾಸ್ಯ ಮಾಡಿದರೂ, ಮೊನ್ನೆಯಷ್ಟೇ ಈ ಜೋಡಿ ಒಂದು ವರ್ಷ ದಾಂಪತ್ಯ ಮುಗಿಸಿ ತಣ್ಣಗೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿತ್ತು.

  • ಗಂಡನಿಗೆ ವಾರ್ನ್ ಮಾಡಿದ ನಟಿ ಮಹಾಲಕ್ಷ್ಮಿ

    ಗಂಡನಿಗೆ ವಾರ್ನ್ ಮಾಡಿದ ನಟಿ ಮಹಾಲಕ್ಷ್ಮಿ

    ಮಿಸ್ ಮ್ಯಾಚ್ ಜೋಡಿ ಎಂದೇ ಸಖತ್ ವೈರಲ್ ಆಗಿದ್ದ ನಟಿ ಮಹಾಲಕ್ಷ್ಮಿ ಸ್ವತಃ ಗಂಡನಿಗೆ ವಾರ್ನ್ ಮಾಡಿದ್ದಾರೆ. ನಿರ್ಮಾಪಕ ರವೀಂದರ್ ಚಂದ್ರಶೇಖರ್ (Ravinder Chandrasekaran) ಜೊತೆ ಮದುವೆಯಾದ ದಿನದಿಂದ ಈವರೆಗೂ ಈ ಜೋಡಿ ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇದೆ. ಈ ಬಾರಿ ರವೀಂದರ್ ತಮ್ಮದಷ್ಟೇ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಕಾರಣಕ್ಕಾಗಿ ಮಹಾಲಕ್ಷ್ಮಿ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಸದಾ ಮಹಾಲಕ್ಷ್ಮಿ ಜೊತೆ ಇರುವಂಥ ಫೋಟೋಗಳನ್ನೇ  ರವೀಂದರ್ ಶೇರ್ ಮಾಡುತ್ತಿದ್ದರು. ಆದರೆ ಈ ಬಾರಿ ತಮ್ಮದಷ್ಟೇ ಫೋಟೋ ಹಾಕಿಕೊಂಡಿದ್ದಾರೆ. ಹಾಗಾಗಿ ಮಹಾಲಕ್ಷ್ಮಿಯಿಂದ ರವೀಂದರ್ ದೂರವಾಗಿದ್ದಾರೆ ಎನ್ನುವ ಸುದ್ದಿ ಹರಡಿಕೊಂಡಿದೆ. ರವೀಂದರ್ ಜೈಲಿಗೆ ಹೋಗಿ ಬಂದಾಗಿಂದ ಮಹಾಲಕ್ಷ್ಮಿ ದೂರವಾಗಿದ್ದಾರೆ ಎಂದೇ ಹೇಳಲಾಗಿತ್ತು. ಈ ಫೋಟೋ ಅದಕ್ಕೆ ಪುಷ್ಠಿ ನೀಡಿತ್ತು. ಹಾಗಾಗಿ ಮಹಾಲಕ್ಷ್ಮಿ ಗಂಡನಿಗೆ ವಾರ್ನ್ ಮಾಡಿ, ಇನ್ನೆಂದೂ ನಿಮ್ಮದಷ್ಟೇ ಫೋಟೋ ಹಾಕುವಂತಿಲ್ಲವೆಂದು ಹೇಳಿದ್ದಾರಂತೆ.

    ನಟಿ ಮಹಾಲಕ್ಷ್ಮಿ (Mahalakshmi) ಮತ್ತು ನಿರ್ಮಾಪಕ ರವೀಂದರ್ ಚಂದ್ರಶೇಖರ್ ಸೆಪ್ಟಂಬರ್ 1ರಂದು ಮದುವೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದರು. ಸುಂದರಿ ಮಹಾಲಕ್ಷ್ಮಿಯು ಹಣಕ್ಕಾಗಿ ಮದುವೆಯಾಗಿದ್ದಾರೆ ಎಂದು ಟ್ರೋಲ್ ಮಾಡಲಾಗಿತ್ತು. ರವೀಂದರ್ ದಪ್ಪ ಅನ್ನುವ ಕಾರಣಕ್ಕಾಗಿ ಈ ಜೋಡಿ ಅಪಹಾಸ್ಯಕ್ಕೆ ಗುರಿಯಾಗಿತ್ತು. ಏನೇ ಹಾಸ್ಯ ಮಾಡಿದರೂ, ಮೊನ್ನೆಯಷ್ಟೇ ಈ ಜೋಡಿ ಒಂದು ವರ್ಷ ದಾಂಪತ್ಯ ಮುಗಿಸಿ ತಣ್ಣಗೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿತ್ತು.

    ಈ ಕುರಿತು ರವೀಂದರ್ ಫೋಟೋವೊಂದನ್ನು ಹಂಚಿಕೊಂಡಿದ್ದು, ಹೆಂಡತಿಯ ಗುಣಗಾನ ಮಾಡಿದ್ದರು. ‘ಮಹಾಲಕ್ಷ್ಮಿ ತನ್ನ ಬಾಳಿಗೆ ಬಂದ ನಂತರ ತಮ್ಮ ಬದುಕು ಸುಂದರವಾಗಿ ಎಂದಿದ್ದರು. ಆಕೆ ಕೊಡುವ ಪ್ರೀತಿಗೆ ನಾನು ಅರ್ಹನಲ್ಲ. ಆದರೂ, ಸುಂದರ ಜೀವನ ನಡೆಸುತ್ತಿದ್ದೇವೆ’ ಎಂದು ಅವರು ಪತ್ರದಲ್ಲಿ ಬರೆದಿದ್ದರು.

    ಹಾಗಂತ ಪತ್ನಿಯನ್ನು ಕೇವಲ ಹೊಗಳಿಲ್ಲ. ‘ಅವಳು ದುರಂಹಕಾರಿ, ಆಕೆಯ ಪ್ರೀತಿ ಒರಟು. ಆದರೂ, ಕೋಪ ಬಂದಾಗ ಅಡುಗೆ ಮನೆಗೆ ಸೀದಾ ಹೋಗಿ ನನಗಾಗಿ ತಿಂಡಿಯನ್ನು ಮಾಡಿಕೊಂಡು ಬರುತ್ತಾಳೆ. ಒಂದೊಂದು ಸಲ ಕೆಟ್ಟದ್ದಾಗಿಯೂ ಅಡುಗೆ ಮಾಡಿದ್ದಾಳೆ. ಆಗ ಹೋಟೆಲ್ ನಮಗೆ ಅನಿವಾರ್ಯವಾಗುತ್ತದೆ’ ಎಂದು ಕಾಲೆಳೆದಿದ್ದರು.

     

    ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಈ ದಂಪತಿ ಸಿಂಪಲ್ ಆಗಿ ಆಚರಿಸಿಕೊಂಡಿತ್ತು. ಆದರೆ, ಪ್ರೀತಿಯನ್ನು ಮಾತ್ರ ಅಗಾಧವಾಗಿ ಹಂಚಿಕೊಂಡಿತ್ತು. ರವೀಂದ್ರನ್ ಪತ್ನಿಗಾಗಿ ಉದ್ದದ ಪತ್ರವನ್ನೇ ಬರೆದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು. ನಂತರ ದಿನದಲ್ಲಿ ಈ ಜೋಡಿ ದೂರವಾಗಿದೆ ಎನ್ನುವ ಗಾಸಿಪ್ ಹರಡಿತ್ತು.

  • ನಟಿ ಮಹಾಲಕ್ಷ್ಮಿ ಪತಿಗೆ ಐಸಿಯುನಲ್ಲಿ ಚಿಕಿತ್ಸೆ: ಆಸ್ಪತ್ರೆಯಲ್ಲಿ ರವೀಂದರ್

    ನಟಿ ಮಹಾಲಕ್ಷ್ಮಿ ಪತಿಗೆ ಐಸಿಯುನಲ್ಲಿ ಚಿಕಿತ್ಸೆ: ಆಸ್ಪತ್ರೆಯಲ್ಲಿ ರವೀಂದರ್

    ಮಿಸ್ ಮ್ಯಾಚ್ ಜೋಡಿ ಎಂದು ಟ್ರೋಲ್ ಆಗಿದ್ದ ನಟಿ ಮಹಾಲಕ್ಷ್ಮಿ (Mahalakshmi) ಅವರ ಪತಿ ರವೀಂದರ್ (Ravindran Chandrasekhar) ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ.  ಎರಡು ದಿನಗಳಿಂದ ಈ ಸುದ್ದಿ ಸಖತ್ ಸದ್ದು ಮಾಡುತ್ತಿದೆ.

    ರವೀಂದರ್, ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಎದೆನೋವು ಕೂಡ ಇರುವುದರಿಂದ ಉಸಿರಾಡೋಕೆ ಕಷ್ಟವಾಗುತ್ತಿದೆ ಎನ್ನುವುದು ಅವರ ಆಪ್ತರು ನೀಡಿದ ಮಾಹಿತಿ. ಉಸಿರಾದ ತೊಂದರೆ ಇರುವ ಕಾರಣಕ್ಕಾಗಿಯೇ ಆಕ್ಸಿಜನ್ ಮಾಸ್ಕ್ ಸಮೇತ ಇರುವ ಫೋಟೋ ಹರಿದಾಡುತ್ತಿದೆ.

     

    ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ರವೀಂದರ್ ಇತ್ತೀಚೆಗಷ್ಟೇ ಜೈಲಿಗೂ ಹೋಗಿ ಬಂದಿದ್ದರು. ಜೊತೆಗೆ ಬಿಗ್ ಬಾಸ್ ಶೋ ಕುರಿತಂತೆ ಅವರು ಯೂಟ್ಯೂಬ್ ವೊಂದರಲ್ಲಿ ವಿಮರ್ಶೆ ಮಾಡುತ್ತಿದ್ದರು. ಈ ಯೂಟ್ಯೂಬ್ ಮೂಲಕವೇ ಅವರ ಅನಾರೋಗ್ಯದ ಗುಟ್ಟು ಬಯಲಾಗಿದೆ.

  • ಮಕ್ಕಳ ಮಾರಾಟ ಪ್ರಕರಣ- ತರಕಾರಿ ಮಾರುತ್ತಲೇ ಡೀಲ್ ಮಾಡುತ್ತಿದ್ದ ಮಹಾಲಕ್ಷ್ಮಿ

    ಮಕ್ಕಳ ಮಾರಾಟ ಪ್ರಕರಣ- ತರಕಾರಿ ಮಾರುತ್ತಲೇ ಡೀಲ್ ಮಾಡುತ್ತಿದ್ದ ಮಹಾಲಕ್ಷ್ಮಿ

    ಬೆಂಗಳೂರು: ಹಸುಗೂಸುಗಳ ಮಾರಾಟ (Child Trafficking) ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು (CCB Police) 10 ಆರೋಪಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಆರೋಪಿಗಳ ಪೈಕಿ ಮಹಾಲಕ್ಷ್ಮಿ (Mahalakshmi) ಎಂಬಾಕೆ ತರಕಾರಿ ಮಾರಾಟ (Vegetable Selling) ಮಾಡುತ್ತಲೇ ಮಕ್ಕಳ ಡೀಲ್ ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

    ಆರೋಪಿ ಮಹಾಲಕ್ಷ್ಮಿ ಹಸುಗೂಸುಗಳನ್ನು ಮಾರಾಟ ಮಾಡಿ ಲಕ್ಷಲಕ್ಷ ದುಡ್ಡು ಮಾಡಿದ್ದರೂ ಬಡವರು ಎನ್ನುವಂತಿದ್ದಳು. ಯಾರಿಗೂ ಅನುಮಾನ ಬರಬಾರದು ಎಂದು ತರಕಾರಿ ಮಾರುತ್ತಿದ್ದ ಈಕೆ, ತರಕಾರಿ ಮಾರಾಟ ಮಾಡುತ್ತಲೇ ಹಲವರನ್ನು ಪರಿಚಯ ಮಾಡಿಕೊಳ್ಳುತ್ತಿದ್ದಳು. ನಂತರ ಯಾವುದಾದರೂ ಗ್ರಾಹಕರಿಗೆ ಮಕ್ಕಳಿಲ್ಲ ಎಂಬ ವಿಚಾರ ಗೊತ್ತಾದರೇ ಅವರ ಜೊತೆ ಇನ್ನೂ ಹೆಚ್ಚು ಸಲುಗೆ ಬೆಳೆಸುತ್ತಿದ್ದಳು. ಇದನ್ನೂ ಓದಿ: ಬೈಕ್ ಡಿಕ್ಕಿ- ವೃದ್ಧನ ತಲೆಯಲ್ಲಿದ್ದ ದಿನಸಿ ಚೀಲಕ್ಕೆ ಕೈತಾಗಿ ಬಿದ್ದಾಕೆಯ ಮೇಲೆ ಹರಿದ ಬಸ್!

    ಬಳಿಕ ಅವರ ನಂಬರ್ ಪಡೆದು ಪ್ರತಿನಿತ್ಯ ಮಾತನಾಡಲು ಶುರುಮಾಡುತ್ತಿದ್ದಳು. ನಂತರ ಮಕ್ಕಳು ಬೇಕು ಎಂದವರಿಗೆ ನನಗೆ ಪರಿಚಯ ಇರುವವರ ಬಳಿ ಸಿಗುತ್ತದೆ ಎಂದು ಹೇಳಿ ಅವರು ಓಕೆ ಅಂದರೆ ಆರೋಪಿಗಳ ಪೈಕಿ ತಮಿಳುನಾಡಿನ (Tamil Nadu) ರಾಧಾಳಿಗೆ ಕರೆ ಮಾಡುತ್ತಿದ್ದಳು. ಅಲ್ಲಿಂದ ಮಕ್ಕಳ ಫೋಟೋಗಳನ್ನು ಕಳುಹಿಸಿಕೊಂಡು ಮಹಾಲಕ್ಷ್ಮಿ ಡೀಲ್ ಮಾಡುತ್ತಿದ್ದು, ತರಕಾರಿ ಮಾರುತ್ತಲೇ ಗಾಳ ಹಾಕುತ್ತಿದ್ದಳು. ಇದನ್ನೂ ಓದಿ: ಮದುವೆ ಒಪ್ಪಂದಕ್ಕೆ ಒಪ್ಪದ ಶಿಕ್ಷಕಿಯ ಅಪಹರಣ

    ಇದೀಗ ಮಕ್ಕಳ ಮಾರಾಟ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದು, ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ 6 ವರ್ಷಗಳಲ್ಲಿ 250ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿರುವ ಬಗ್ಗೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಅದರಲ್ಲಿ ಕರ್ನಾಟಕದ 50-60 ಮಕ್ಕಳನ್ನು ಮಾರಾಟ ಮಾಡಿದ್ದು, ಉಳಿದ ಮಕ್ಕಳನ್ನು ತಮಿಳುನಾಡಿನಲ್ಲಿ ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸದ್ಯ ಸಿಸಿಬಿ ಪೊಲೀಸರು ಕರ್ನಾಟಕದಲ್ಲಿ ಮಾರಾಟ ಆಗಿರುವ ಮಕ್ಕಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದುವರೆಗೆ 10 ಮಕ್ಕಳ ಬಗ್ಗೆ ಮಾತ್ರ ಸಿಸಿಬಿಗೆ ಮಾಹಿತಿ ಸಿಕ್ಕಿದ್ದು, ಉಳಿದ ಮಕ್ಕಳನ್ನು ಯಾರಿಗೆ ಕೊಟ್ಟಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪೊಲೀಸರ ಕಣ್ತಪ್ಪಿಸಲು ಸಿಗರೇಟ್‌ಗೆ ಸೀಕ್ರೆಟ್ ರೂಮ್‌ – ಬ್ರ‍್ಯಾಂಡೆಡ್ ಹೆಸರಿನ ನಕಲಿ ಸಿಗರೇಟ್ ಸೀಜ್..!

    ಭ್ರೂಣ ಹತ್ಯೆ (Foeticide) ಮತ್ತು ಮಕ್ಕಳ ಮಾರಾಟ ಜಾಲ ಪ್ರಕರಣ ಹೆಚ್ಚಿದ ಹಿನ್ನೆಲೆ ಮಕ್ಕಳ ಆಯೋಗ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮತ್ತು ಗೃಹ ಇಲಾಖೆಯನ್ನು ವರದಿ ಕೇಳಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ವರದಿ ನೀಡುವಂತೆ ಸರ್ಕಾರವನ್ನು ಕೇಳಿದೆ. ಪಿಸಿ ಮತ್ತು ಪಿನ್ ಡಿಟಿ ಕಾಯ್ದೆ ಅಡಿ ಮೇಲ್ವಿಚಾರಣೆ ಮಂಡಳಿ, ರಾಜ್ಯ ಸಕ್ಷಮ ಪ್ರಾಧಿಕಾರ, ರಾಜ್ಯ ಸಲಹಾ ಸಮಿತಿ, ರಾಜ್ಯ ತಪಾಸಣಾ, ಮೇಲ್ವಿಚಾರಣಾ ಸಮಿತಿ ಇದ್ದರೂ ಭ್ರೂಣ ಹತ್ಯೆ ಆಗುತ್ತಿರುವುದು ನಾಚಿಕೆಗೇಡಿನ ಸಂಗತಿ. ಎಷ್ಟು ತಪಾಸಣೆ ಮಾಡಿದ್ದೀರಾ? ಎಷ್ಟು ಕ್ರಮ ಆಗಿದೆ ಎಂದು ಮಕ್ಕಳ ಆಯೋಗ ವರದಿ ಕೇಳಿದೆ. ಅಲ್ಲದೇ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಭೇಟಿ ಕೊಟ್ಟು ಕ್ರಮ ವಹಿಸಲು ಆಗ್ರಹಿಸಿದೆ. ಮಕ್ಕಳ ಮಾರಾಟ ಜಾಲದ ವಿರುದ್ಧ ಇದುವರೆಗೂ ಏನು ಕ್ರಮ ಆಗಿದೆ ಎಂಬುದರ ಬಗ್ಗೆಯೂ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ವರದಿ ಕೇಳಿದೆ. ಇದನ್ನೂ ಓದಿ: ಕೆಳಗೆ ನಿಂತು ಟ್ರ್ಯಾಕ್ಟರ್ ಆನ್ ಮಾಡಿದ ರೈತ – ಮೈಮೇಲೆ ಟ್ರ್ಯಾಕ್ಟರ್ ಹರಿದು ಸಾವು

  • ಪತಿಗೆ ಜಾಮೀನು: ತಬ್ಬಿ ಮುದ್ದಾಡಿದ ನಟಿ ಮಹಾಲಕ್ಷ್ಮಿ

    ಪತಿಗೆ ಜಾಮೀನು: ತಬ್ಬಿ ಮುದ್ದಾಡಿದ ನಟಿ ಮಹಾಲಕ್ಷ್ಮಿ

    ಖ್ಯಾತ ಕಿರುತೆರೆ ನಟಿ ಮಹಾಲಕ್ಷ್ಮಿ ಅವರ ಪತಿ, ನಿರ್ಮಾಪಕ ರವೀಂದರ್ ಚಂದ್ರಶೇಖರ್ ಕೊನೆಗೂ ಜೈಲಿನಿಂದ ಹೊರ ಬಂದಿದ್ದಾರೆ. ಮದ್ರಾಸ್ ಹೈಕೋರ್ಟ್ ಐದು ಕೋಟಿ ರೂಪಾಯಿ ಶ್ಯೂರಿಟಿಯೊಂದಿಗೆ ಷರತ್ತುಬದ್ಧ ಜಾಮೀನು (Bail) ಮಂಜೂರು ಮಾಡಿದೆ. ಪತಿಯು ಜೈಲಿನಲ್ಲಿದ್ದಾಗ ತನಗೆ ಮೋಸವಾಗಿದೆ, ರವೀಂದರ್ ತನಗೆ ಮೋಸ ಮಾಡಿದ್ದಾರೆ ಎಂದು ಬಡಬಡಿಸಿದ್ದ ಮಹಾಲಕ್ಷ್ಮಿ, ಪತಿಯು ಜೈಲಿನಿಂದ ಆಚೆ ಬರುತ್ತಿದ್ದಂತೆ ಅಪ್ಪಿ ಮುದ್ದಾಡಿದ್ದಾರೆ.

    ಪತಿ ಜೈಲಿಗೆ ಹೋಗಿದ್ದಾಗ ಮಹಾಲಕ್ಷ್ಮಿ ಮಾಡಿದ್ದೇನು?

    ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆಗಿದ್ದ ನಟಿ ಮಹಾಲಕ್ಷ್ಮೀ ಅವರು ತಮ್ಮ ಪತಿ, ನಿರ್ಮಾಪಕ ರವೀಂದ್ರ ಬಗ್ಗೆ ಗುರುತರ ಆರೋಪ ಮಾಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿತ್ತು. ಹಣದ ವಂಚನೆ ಪ್ರಕರಣದಲ್ಲಿ ಜೈಲು (Jail) ಪಾಲಾಗಿರುವ ರವೀಂದ್ರ ಅವರಿಗೆ ಜಾಮೀನು ಸಿಗುವುದು ಕಷ್ಟವಾಗಿತ್ತು. ಹಾಗಂತ ಮಹಾಲಕ್ಷ್ಮಿ ಬೇಸರದಲ್ಲೂ ಇಲ್ಲ. ದಿನಕ್ಕೊಂದು ಫೋಟೋಶೂಟ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಾ, ಟ್ರೋಲ್ ಆಗುತ್ತಿದ್ದರು.

    ಈ ನಡುವೆ ಮಹಾಲಕ್ಷ್ಮಿ ಅವರೇ ಆಡಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದ್ದವು. ಮದುವೆ ಆಗುವಾಗ ತನ್ನ ಗಂಡ ಸಾಲ ಮಾಡಿರುವ ಮತ್ತು ಅವರಿಗೆ ಮೋಸ ಮಾಡಿರುವ ಯಾವುದೇ ವಿಚಾರವನ್ನು ನನ್ನ ಜೊತೆ ಹಂಚಿಕೊಂಡಿಲ್ಲ. ಅವರು ನನಗೆ ಮೋಸ ಮಾಡಿ ಮದುವೆ ಆಗಿದ್ದಾರೆ ಎಂದು ಹೇಳಿದ್ದಾರೆ ಎನ್ನಲಾದ ಮಾತುಗಳು ಹರಿದಾಡಿದವು. ಈ ಮಾತುಗಳು ಸಖತ್ ಸುದ್ದಿ ಆಗಿದ್ದರೂ, ಮಹಾಲಕ್ಷ್ಮಿ ಮಾತ್ರ ಇದು ನಿಜನಾ ಅಥವಾ ಸುಳ್ಳಾ ಎಂದು ಸ್ಪಷ್ಟ ಪಡಿಸಲಿಲ್ಲ.

    ಇತ್ತೀಚೆಗಷ್ಟೇ ರವೀಂದ್ರ (Ravindar Chandrasekaran), ಮಹಾಲಕ್ಷ್ಮಿ (Mahalakshmi) ಜೋಡಿಯು ಮೊದಲ ಮದುವೆ ವಾರ್ಷಿಕೋತ್ಸವ ಪೂರೈಸಿದ್ದರು. ಈ ಬೆನ್ನಲ್ಲೇ ವಂಚನೆ ಪ್ರಕರಣವೊಂದರಲ್ಲಿ ರವೀಂದ್ರ ಜೈಲು ಪಾಲಾದ್ರು. ಗಂಡ ಜೈಲು ಸೇರಿದ್ರೆ, ಹೆಂಡತಿ ಮಹಾಲಕ್ಷ್ಮಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದರು. ನಟಿಯ ನಡೆಗೆ ನೆಟ್ಟಿಗರು ಕಾಲೆಳೆದಿದ್ದರು.

    ಲೈಟ್ ಬಣ್ಣ ಸೀರೆಯಲ್ಲಿ ಮತ್ತೊಂದು ಹಳದಿ ಬಣ್ಣದ ಸೀರೆಯಲ್ಲಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿ ಮಿಂಚಿದ್ದರು. ಬಗೆ ಬಗೆಯ ಭಂಗಿಯಲ್ಲಿ ನಟಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದರು. ಗಂಡ ಜೈಲಿನಲ್ಲಿದ್ರೆ ನೀವು ಫೋಟೋ ತೆಗೆಸಿ ಮೋಜು ಮಾಡ್ತೀರಾ ಅಂತಾ ಬಗೆ ಬಗೆಯ ಕಾಮೆಂಟ್ಸ್ ಸೋಶಿಯಲ್ ಮೀಡಿಯಾದಲ್ಲಿ ಹರಿದು ಬಂದಿದ್ದವು.

    ರವೀಂದ್ರ ಚಂದ್ರಶೇಖರ್ ಅವರನ್ನು ವಂಚನೆ ಆರೋಪದ ಮೇಲೆ ತಮಿಳುನಾಡು ಪೊಲೀಸರು ಸೆ.8ರಂದು ಬಂಧಿಸಿದ್ದರು. 16 ಕೋಟಿ ರೂ. ವಂಚಿಸಿದ ಆರೋಪದಲ್ಲಿ ನಿರ್ಮಾಪಕ ರವೀಂದ್ರ ಅವರನ್ನು ಅರೆಸ್ಟ್ ಮಾಡಿದ್ದರು.

     

    ಮಾಧವ ಮೀಡಿಯಾ ಪ್ರೈ. ಲಿಮಿಟೆಡ್‌ನ ಬಾಲಾಜಿ ಕಾಪಾ (Balaji,) ಎಂಬ ಉದ್ಯಮಿಗೆ ನಿರ್ಮಾಪಕ ರವೀಂದ್ರ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ತಮ್ಮ ಲಿಬ್ರಾ ಪ್ರೋಡಕ್ಷನ್ಸ್ ಅಡಿ ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಹಣ ಹೂಡಿಕೆ ಮಾಡುವಂತೆ ಉದ್ಯಮಿ ಬಾಲಾಜಿ ಅವರನ್ನು ಕೇಳಿದ್ದರು. ಅದರಂತೆ ಉದ್ಯಮಿ ಬಾಲಾಜಿ ಅವರು ರವೀಂದ್ರಗೆ 2020ರ ಸೆಪ್ಟೆಂಬರ್‌ನಲ್ಲಿ 16 ಕೋಟಿ ರೂ. ಹಣ ವರ್ಗಾವಣೆ ಮಾಡಿದ್ದರು. ಉದ್ಯಮಿ ಬಳಿ ಹಣ ಪಡೆದು ಯೋಜನೆಗೆ ಚಾಲನೆ ನೀಡಿಲ್ಲ. ಪಡೆದ ಹಣವನ್ನು ಹಿಂತಿರುಗಿಸಿಲ್ಲ ಎಂದು ತಮಿಳುನಾಡು ಪೊಲೀಸರಿಗೆ ಉದ್ಯಮಿ ದೂರು ನೀಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತಿಯ ಮೇಲೆಯೇ ಗುರುತರ ಆರೋಪ ಮಾಡಿದ್ರಾ ನಟಿ ಮಹಾಲಕ್ಷ್ಮಿ

    ಪತಿಯ ಮೇಲೆಯೇ ಗುರುತರ ಆರೋಪ ಮಾಡಿದ್ರಾ ನಟಿ ಮಹಾಲಕ್ಷ್ಮಿ

    ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆಗಿದ್ದ ನಟಿ ಮಹಾಲಕ್ಷ್ಮೀ ಅವರು ತಮ್ಮ ಪತಿ, ನಿರ್ಮಾಪಕ ರವೀಂದ್ರ ಬಗ್ಗೆ ಗುರುತರ ಆರೋಪ ಮಾಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಹಣದ ವಂಚನೆ ಪ್ರಕರಣದಲ್ಲಿ ಜೈಲು (Jail) ಪಾಲಾಗಿರುವ ರವೀಂದ್ರ ಅವರಿಗೆ ಜಾಮೀನು ಸಿಗುತ್ತಿಲ್ಲ. ಹಾಗಂತ ಮಹಾಲಕ್ಷ್ಮಿ ಬೇಸರದಲ್ಲೂ ಇಲ್ಲ. ದಿನಕ್ಕೊಂದು ಫೋಟೋಶೂಟ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಾ, ಟ್ರೋಲ್ ಆಗುತ್ತಿದ್ದಾರೆ.

    ಈ ನಡುವೆ ಮಹಾಲಕ್ಷ್ಮಿ ಅವರೇ ಆಡಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬರುತ್ತಿವೆ. ಮದುವೆ ಆಗುವಾಗ ತನ್ನ ಗಂಡ ಸಾಲ ಮಾಡಿರುವ ಮತ್ತು ಅವರಿಗೆ ಮೋಸ ಮಾಡಿರುವ ಯಾವುದೇ ವಿಚಾರವನ್ನು ನನ್ನ ಜೊತೆ ಹಂಚಿಕೊಂಡಿಲ್ಲ. ಅವರು ನನಗೆ ಮೋಸ ಮಾಡಿ ಮದುವೆ ಆಗಿದ್ದಾರೆ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ. ಈ ಮಾತುಗಳು ಸಖತ್ ಸುದ್ದಿ ಆಗಿದ್ದರೂ, ಮಹಾಲಕ್ಷ್ಮಿ ಮಾತ್ರ ಇದು ನಿಜನಾ ಅಥವಾ ಸುಳ್ಳಾ ಎಂದು ಸ್ಪಷ್ಟ ಪಡಿಸಿಲ್ಲ.

    ಇತ್ತೀಚೆಗಷ್ಟೇ ರವೀಂದ್ರ (Ravindar Chandrasekaran), ಮಹಾಲಕ್ಷ್ಮಿ (Mahalakshmi) ಜೋಡಿಯು ಮೊದಲ ಮದುವೆ ವಾರ್ಷಿಕೋತ್ಸವ ಪೂರೈಸಿದ್ದರು. ಈ ಬೆನ್ನಲ್ಲೇ ವಂಚನೆ ಪ್ರಕರಣವೊಂದರಲ್ಲಿ ರವೀಂದ್ರ ಜೈಲು ಪಾಲಾದ್ರು. ಗಂಡ ಜೈಲು ಸೇರಿದ್ರೆ, ಹೆಂಡತಿ ಮಹಾಲಕ್ಷ್ಮಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ನಡೆಗೆ ನೆಟ್ಟಿಗರು ಕಾಲೆಳೆದಿದ್ದಾರೆ.

    ಲೈಟ್ ಬಣ್ಣ ಸೀರೆಯಲ್ಲಿ ಮತ್ತೊಂದು ಹಳದಿ ಬಣ್ಣದ ಸೀರೆಯಲ್ಲಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿ ಮಿಂಚಿದ್ದಾರೆ. ಬಗೆ ಬಗೆಯ ಭಂಗಿಯಲ್ಲಿ ನಟಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಗಂಡ ಜೈಲಿನಲ್ಲಿದ್ರೆ ನೀವು ಫೋಟೋ ತೆಗೆಸಿ ಮೋಜು ಮಾಡ್ತೀರಾ ಅಂತಾ ಬಗೆ ಬಗೆಯ ಕಾಮೆಂಟ್ಸ್ ಸೋಶಿಯಲ್ ಮೀಡಿಯಾದಲ್ಲಿ ಹರಿದು ಬರುತ್ತಿದೆ.

    ರವೀಂದ್ರ ಚಂದ್ರಶೇಖರ್ ಅವರನ್ನು ವಂಚನೆ ಆರೋಪದ ಮೇಲೆ ತಮಿಳುನಾಡು ಪೊಲೀಸರು ಸೆ.8ರಂದು ಬಂಧಿಸಿದ್ದರು. 16 ಕೋಟಿ ರೂ. ವಂಚಿಸಿದ ಆರೋಪದಲ್ಲಿ ನಿರ್ಮಾಪಕ ರವೀಂದ್ರ ಅವರನ್ನು ಅರೆಸ್ಟ್ ಮಾಡಿದ್ದರು.

     

    ಮಾಧವ ಮೀಡಿಯಾ ಪ್ರೈ. ಲಿಮಿಟೆಡ್‌ನ ಬಾಲಾಜಿ ಕಾಪಾ (Balaji,) ಎಂಬ ಉದ್ಯಮಿಗೆ ನಿರ್ಮಾಪಕ ರವೀಂದ್ರ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ತಮ್ಮ ಲಿಬ್ರಾ ಪ್ರೋಡಕ್ಷನ್ಸ್ ಅಡಿ ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಹಣ ಹೂಡಿಕೆ ಮಾಡುವಂತೆ ಉದ್ಯಮಿ ಬಾಲಾಜಿ ಅವರನ್ನು ಕೇಳಿದ್ದರು. ಅದರಂತೆ ಉದ್ಯಮಿ ಬಾಲಾಜಿ ಅವರು ರವೀಂದ್ರಗೆ 2020ರ ಸೆಪ್ಟೆಂಬರ್‌ನಲ್ಲಿ 16 ಕೋಟಿ ರೂ. ಹಣ ವರ್ಗಾವಣೆ ಮಾಡಿದ್ದರು. ಉದ್ಯಮಿ ಬಳಿ ಹಣ ಪಡೆದು ಯೋಜನೆಗೆ ಚಾಲನೆ ನೀಡಿಲ್ಲ. ಪಡೆದ ಹಣವನ್ನು ಹಿಂತಿರುಗಿಸಿಲ್ಲ ಎಂದು ತಮಿಳುನಾಡು ಪೊಲೀಸರಿಗೆ ಉದ್ಯಮಿ ದೂರು ನೀಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • TRP ರಾಮ  ಟ್ರೈಲರ್ ರಿಲೀಸ್ : ಮತ್ತೆ ಸಿನಿಮಾ ರಂಗಕ್ಕೆ ಹಿರಿಯ ನಟಿ ಮಹಾಲಕ್ಷ್ಮಿ

    TRP ರಾಮ ಟ್ರೈಲರ್ ರಿಲೀಸ್ : ಮತ್ತೆ ಸಿನಿಮಾ ರಂಗಕ್ಕೆ ಹಿರಿಯ ನಟಿ ಮಹಾಲಕ್ಷ್ಮಿ

    ಶಕಗಳ ಹಿಂದೆ ಜನಪ್ರಿಯ ನಟಿಯಾಗಿ ಗುರುತಿಸಿಕೊಂಡಿದ್ದ ಮಹಾಲಕ್ಷ್ಮಿ TRP ರಾಮ (TRP Rama) ಸಿನಿಮಾ ಮೂಲಕ ಮತ್ತೆ ಕಮ್‌ಬ್ಯಾಕ್‌ ಆಗುತ್ತಿರುವುದು ಗೊತ್ತೇ ಇದೆ. ರವಿಪ್ರಸಾದ್‌ (Raviprasad) ನಟಿಸಿ ಮತ್ತು ನಿರ್ದೇಶನದ ಈ ಚಿತ್ರದ ಟ್ರೈಲರ್ (Trailer) ಅನಾವರಣಗೊಂಡಿದೆ. ಹೆಣ್ಣಿನ ಶೋಷಣೆ, ಮಾಧ್ಯಮಗಳ ಮೌಲ್ಯವೇನು ಅನ್ನೋದನ್ನು ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಟ್ರೈಲರ್ ಬಿಡುಗಡೆ ಮಾಡಲಾಗಿದ್ದು, ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

    ಹಿರಿಯ ನಟಿ ಮಹಾಲಕ್ಷ್ಮಿ  (Mahalakshmi)ಮಾತನಾಡಿ, ನಾನು ಎಲ್ಲಾ ಭಾಷೆಯಲ್ಲಿ ಎಲ್ಲಾ ಹೀರೋಗಳ ಜೊತೆ ಸಿನಿಮಾ ಮಾಡಿದ್ದೇನೆ. ಎಲ್ಲವೂ ಟೀಂ ವರ್ಕ್. ನಮ್ಮ ಮನೆಯಲ್ಲಿ ಲಾಫಿಂಗ್ ಬುದ್ಧ ಇಟ್ಕೊಂಡು ನಗುತ್ತಾ ಇರುವುದು ಸಾಕಾಗಲ್ಲ. ಮೂರು ಕೋತಿ ನೆನಪು ಇದೆಯಲ್ಲಾ? ಕೆಟ್ಟದನ್ನು ಕೇಳಬಾರದು. ಕೆಟ್ಟದನ್ನು ನೋಡಬಾರದು. ಕೆಟ್ಟದನ್ನು ಮಾಡಬಾರದು. ಅದನ್ನು ನಿಮ್ಮ ಮಕ್ಕಳಿಗೆ ನೆನಪಿಸಿ. ಅವರ ಜೀವನ ಚೆನ್ನಾಗಿರುತ್ತದೆ. ಅದನ್ನೂ ಹೇಳಿಕೊಡುವುದೇ TRP ರಾಮ. ಎಂಟರ್ ಟೈನ್ಮೆಂಟ್ ಇದೆ. ಕ್ವಾಲಿಟಿ ಇದೆ. ನೀತಿ ಇದೆ. ಆ ನೀತಿ ನಮ್ಮ ಜನರೇಷನ್ ಗೆ ಸಿಗಬೇಕು. ನಮ್ಮ ಸರ್ಕಾರ ಎಲ್ಲಾ ನಿರ್ಧಾರ ತೆಗೆದುಕೊಳ್ಳುತ್ತಿದೆ. ಆದ್ರೆ ಅದನ್ನು ಫಾಲೋ ಮಾಡಲು ಆಗ್ತಿಲ್ಲ. TRP ರಾಮ ಬರೀ ಸಿನಿಮಾವಲ್ಲ. ಅದೊಂದು ಜೀವನ ಎಂದು ತಿಳಿಸಿದರು. ಇದನ್ನೂ ಓದಿ:ಪರಿಣಿತಿ ಚೋಪ್ರಾ – ರಾಘವ್ ಚಡ್ಡಾ ಅದ್ದೂರಿ ಮದುವೆ ಫೋಟೋಸ್

    ನಿರ್ದೇಶಕ ಕಂ ನಟ ರವಿ ಪ್ರಸಾದ್ ಮಾತನಾಡಿ, ಒಳ್ಳೆ ಬಜೆಟ್ ಗೆ ಸಿನಿಮಾ ಮಾಡಲು ತಯಾರಿ ನಡೆಸಿದಾಗ ಕಥೆ ಸಿಗುತ್ತಿರಲಿಲ್ಲ. ಅಂದರೆ ಬಜೆಟ್ ಗೆ ಹೊಂದಿಸಲು ಆಗುತ್ತಿರಲ್ಲ. ಆಗ ಹೊಳೆದಿದ್ದೇ TRP ರಾಮ ಕಥೆ. ರಾಮನ ನಾನೇ ಆ ಪಾತ್ರ ಮಾಡಬೇಕು ಎಂದು ಇರಲಿಲ್ಲ. ಈ ರೀತಿ ಕಂಟೆಂಟ್ ಇರುವ ಸಿನಿಮಾವನ್ನು ಯಾರ ಮೂಲಕ ಹೇಳಿಸಬೇಕು ಎಂದು ಹುಡುಕುತ್ತಿದ್ದೇವೆ. ಆಗ ತಲೆಗೆ ಬಂದಿದ್ದು ಮಹಾಲಕ್ಷ್ಮೀ ಮೇಡಂ. ಕಮರ್ಷಿಯಲ್ ಜೊತೆ ಒಂದೊಳ್ಳೆ ಸಂದೇಶ ಇಟ್ಟುಕೊಂಡು ಸಿನಿಮಾ ಮಾಡಿದ್ದೇವೆ. ಸೆನ್ಸಾರ್ ಆಗಬೇಕಿದೆ. ಅಕ್ಟೋಬರ್ ಮೊದಲ ವಾರ ತೆರೆಗೆ ತರುವ ಪ್ರಯತ್ನ ನಡೆಯುತ್ತದೆ ಎಂದು ತಿಳಿಸಿದರು.

    ಹಿರಿಯ ಕಲಾವಿದರಾದ ಓಂ ಸಾಯಿ ಪ್ರಕಾಶ್ ಮಾತನಾಡಿ, ನೈಜ ಘಟನೆಗಳನ್ನು ನಾವು ತೆಗೆದುಕೊಂಡಾಗ ಅದು ಅದು ಹೃದಯಕ್ಕೆ ಹತ್ತಿರವಾಗುತ್ತದೆ. ಟ್ರೇಲರ್ ನೋಡುವಾಗ ತುಂಬಾ ನೋವು ಅನಿಸಿತು. ಸಮಾಜದಲ್ಲಿ ಹೆಣ್ಣನ್ನು ಬೇರೆ ರೀತಿ ನೋಡುವ ಸನ್ನಿವೇಶವಿದೆ. ಸರ್ಕಾರ ಎಷ್ಟು ಕಾನೂನು ಮಾಡುತ್ತಿದ್ದೆ. ಆದರೂ ರಾಕ್ಷಸ ಮನಸ್ಸು ತಡೆಯುತ್ತಿಲ್ಲ. ದಿನದಿಂದಕ್ಕೆ ಈ ರೀತಿ ಹೆಚ್ಚಾಗುತ್ತಿವೆ. ನಾಯಕನೋ ಖಳನಾಯಕನೋ ಗೊತ್ತಿಲ್ಲ. ಕಲಾವಿದರು ಯಾವ ಪಾತ್ರವಾದರೂ ನ್ಯಾಯ ಒದಗಿಸುತ್ತಾರೆ. ಮಹಾಲಕ್ಷ್ಮೀ ತಂದೆ-ತಾಯಿ ಇಬ್ಬರು ಮಹಾನ್ ನಟರು. ಅವರ ತಾಯಿ ಜೊತೆ ತೆಲುಗು ಸಿನಿಮಾ ರಂಗದಲ್ಲಿ ಕೆಲಸ ಮಾಡಿದ್ದೇನೆ. ಮಹಾಲಕ್ಷ್ಮೀ ನೋಡಿದ ತಕ್ಷಣ ನಿಮ್ಮ ತಾಯಿ ನೆನಪಾಗ್ತಿದ್ದಾರೆ ಎಂದೆ. ಎಮೋಷನ್ ಸೀನ್ಸ್ ಅದ್ಭುತವಾಗಿ ಮಾಡುತ್ತಾರೆ. ನಾಯಕನ ಜೀವನದಲ್ಲಿ ಏನಾಯ್ತೋ ಗೊತ್ತಿಲ್ಲ. ನಾಯಕನ ಹೆಸರು ರಾಮ ನೋಡಲು ರಾವಣ ತರ ಕಾಣುತ್ತಾನೆ. ಚಿತ್ರ ನೋಡಿದರೇ ಎಲ್ಲವೂ ಗೊತ್ತಾಗಲಿದೆ. ಇಡೀ TRP ತಂಡಕ್ಕೆ ಒಳ್ಳೆಯದಾಗಲಿ ಎಂದು ತಿಳಿಸಿದರು.

    ನಟಿ ಸ್ಪರ್ಶ ಮಾತನಾಡಿ, ಈ ಸಿನಿಮಾ ಒಪ್ಪಿಕೊಳ್ಳಲು ಮಹಾಲಕ್ಷ್ಮೀ ಮೇಡಂ ಕಾರಣ. ಅವರ ಕಂಬ್ಯಾಕ್ ಚಿತ್ರ. ಅಂತಹ ಲೆಜೆಂಡ್ ಜೊತೆ ಕೆಲಸ ಮಾಡಲು ಎಲ್ಲರಿಗೂ ಅವಕಾಶ ಸಿಗಲ್ಲ. ಪ್ರವೀಣ್ ಸೂಡಾ ಇದಕ್ಕೆ ಸಂಭಾಷಣೆ ಬರೆದಿದ್ದಾರೆ. ಅವರು ಕಥೆ ಹೇಳಿದಾಗ ತುಂಬಾ ಚೆನ್ನಾಗಿದೆ ಅನಿಸಿತು. ತುಂಬಾ ಫಾಸ್ಟ್ ಯುಗದಲ್ಲಿ ಚಿಕ್ಕಪುಟ್ಟ ತಪ್ಪುಗಳಿಂದ ಎಷ್ಟು ದೊಡ್ಡ ಪ್ರಮಾದವಾಗುತ್ತದೆ ಅನ್ನೋದು ಚಿತ್ರದ ಒಂದು ಎಳೆ. ಅದನ್ನು ತುಂಬಾ ಅದ್ಭುತವಾಗಿ ಚಿತ್ರೀಕರಿಸಿದ್ದಾರೆ ಎಂದರು.  ಅಶುತೋಶ್ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ TRP ರಾಮ ಸಿನಿಮಾದಲ್ಲಿ ರವಿಪ್ರಸಾದ್‌ ನಟಿಸಿ, ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಪ್ರಯತ್ನ. ಮಹಾಲಕ್ಷ್ಮೀ ತಾಯಿ ಪಾತ್ರದಲ್ಲಿ, ಪತ್ರಕರ್ತೆಯಾಗಿ ಸ್ಪರ್ಶಯಾಗಿ ನಟಿಸಿದ್ದಾರೆ. ರಾಜ್ ಗುರು ಹೊಸಕೋಟೆ ಸಂಗೀತ, ಸುನಿಲ್ ಕಶ್ಯಪ್ ಸಂಕಲನ, ಗುರುಪ್ರಸಾದ್ ಛಾಯಾಗ್ರಹಣ, ರಾಕೇಶ್ ಆಚಾರ್ಯ ಬಿಜಿಎಂ ಸಿನಿಮಾಕ್ಕಿದೆ. ಸೆನ್ಸಾರ್ ಗಾಗಿ ಕಾಯ್ತಿರುವ TRP ರಾಮ ಆದಷ್ಟು ಬೇಗ ನಿಮ್ಮ ಮುಂದೆ ಬರಲಿದ್ದಾನೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಂಚನೆ ಪ್ರಕರಣದಲ್ಲಿ ಗಂಡ ಜೈಲು ಪಾಲಾಗಿದ್ರೆ, ಮಹಾಲಕ್ಷ್ಮಿ ಮಸ್ತ್ ಫೋಟೋಶೂಟ್

    ವಂಚನೆ ಪ್ರಕರಣದಲ್ಲಿ ಗಂಡ ಜೈಲು ಪಾಲಾಗಿದ್ರೆ, ಮಹಾಲಕ್ಷ್ಮಿ ಮಸ್ತ್ ಫೋಟೋಶೂಟ್

    ಸೋಶಿಯಲ್ ಮೀಡಿಯಾದಲ್ಲಿ ಅತೀ ಹೆಚ್ಚು ಟ್ರೋಲ್ ಆಗಿರುವ ತಮಿಳಿನ ಖ್ಯಾತ ನಿರ್ಮಾಪಕ ರವೀಂದ್ರ (Ravindar Chandrasekaran), ಮಹಾಲಕ್ಷ್ಮಿ (Mahalakshmi) ಜೋಡಿ ಇತ್ತೀಚೆಗೆ ಮೊದಲ ಮದುವೆ ವಾರ್ಷಿಕೋತ್ಸವ ಪೂರೈಸಿದ್ದರು. ಈ ಬೆನ್ನಲ್ಲೇ ವಂಚನೆ ಪ್ರಕರಣವೊಂದರಲ್ಲಿ ರವೀಂದ್ರ ಜೈಲು ಪಾಲಾದ್ರು. ಗಂಡ ಜೈಲು ಸೇರಿದ್ರೆ, ಹೆಂಡತಿ ಮಹಾಲಕ್ಷ್ಮಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ನಡೆಗೆ ನೆಟ್ಟಿಗರು ಕಾಲೆಳೆದಿದ್ದಾರೆ.

    ಲೈಟ್ ಬಣ್ಣ ಸೀರೆಯಲ್ಲಿ ಮತ್ತೊಂದು ಹಳದಿ ಬಣ್ಣದ ಸೀರೆಯಲ್ಲಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿ ಮಿಂಚಿದ್ದಾರೆ. ಬಗೆ ಬಗೆಯ ಭಂಗಿಯಲ್ಲಿ ನಟಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಗಂಡ ಜೈಲಿನಲ್ಲಿದ್ರೆ ನೀವು ಫೋಟೋ ತೆಗೆಸಿ ಮೋಜು ಮಾಡ್ತೀರಾ ಅಂತಾ ಬಗೆ ಬಗೆಯ ಕಾಮೆಂಟ್ಸ್ ಸೋಶಿಯಲ್ ಮೀಡಿಯಾದಲ್ಲಿ ಹರಿದು ಬರುತ್ತಿದೆ. ಇದನ್ನೂ ಓದಿ:ಕಣ್ಮುಂದೆಯೇ ರಶ್ಮಿಕಾ ಇದ್ದರೂ ಮುಖ ತಿರುಗಿಸಿಕೊಂಡು ಹೋದ ಶ್ರದ್ಧಾ ಕಪೂರ್

    ರವೀಂದ್ರ ಚಂದ್ರಶೇಖರ್ ಅವರನ್ನು ವಂಚನೆ ಆರೋಪದ ಮೇಲೆ ತಮಿಳುನಾಡು ಪೊಲೀಸರು ಸೆ.8ರಂದು ಬಂಧಿಸಿದ್ದರು. 16 ಕೋಟಿ ರೂ. ವಂಚಿಸಿದ ಆರೋಪದಲ್ಲಿ ನಿರ್ಮಾಪಕ ರವೀಂದ್ರ ಅವರನ್ನು ಅರೆಸ್ಟ್ ಮಾಡಿದ್ದರು.

    ಮಾಧವ ಮೀಡಿಯಾ ಪ್ರೈ. ಲಿಮಿಟೆಡ್‌ನ ಬಾಲಾಜಿ ಕಾಪಾ ಎಂಬ ಉದ್ಯಮಿಗೆ ನಿರ್ಮಾಪಕ ರವೀಂದ್ರ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ತಮ್ಮ ಲಿಬ್ರಾ ಪ್ರೋಡಕ್ಷನ್ಸ್ ಅಡಿ ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಹಣ ಹೂಡಿಕೆ ಮಾಡುವಂತೆ ಉದ್ಯಮಿ ಬಾಲಾಜಿ ಅವರನ್ನು ಕೇಳಿದ್ದರು. ಅದರಂತೆ ಉದ್ಯಮಿ ಬಾಲಾಜಿ ಅವರು ರವೀಂದ್ರಗೆ 2020ರ ಸೆಪ್ಟೆಂಬರ್‌ನಲ್ಲಿ 16 ಕೋಟಿ ರೂ. ಹಣ ವರ್ಗಾವಣೆ ಮಾಡಿದ್ದರು. ಉದ್ಯಮಿ ಬಳಿ ಹಣ ಪಡೆದು ಯೋಜನೆಗೆ ಚಾಲನೆ ನೀಡಿಲ್ಲ. ಪಡೆದ ಹಣವನ್ನು ಹಿಂತಿರುಗಿಸಿಲ್ಲ ಎಂದು ತಮಿಳುನಾಡು ಪೊಲೀಸರಿಗೆ ಉದ್ಯಮಿ ದೂರು ನೀಡಿದ್ದರು.

    ಉದ್ಯಮಿ ಬಾಲಾಜಿ ಅವರ ದೂರಿನ ಮೇರೆಗೆ ನಿರ್ಮಾಪಕ ರವೀಂದ್ರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]