Tag: Mahalaxmi Layout

  • ಸ್ಲಂ ಬೋರ್ಡ್‍ನಿಂದ ಕೈಗೆತ್ತಿಕೊಂಡಿರುವ 50 ಮನೆಗಳನ್ನು ಜ.30 ರೊಳಗೆ ಪೂರ್ಣಗೊಳಿಸಬೇಕು: ಗೋಪಾಲಯ್ಯ

    ಸ್ಲಂ ಬೋರ್ಡ್‍ನಿಂದ ಕೈಗೆತ್ತಿಕೊಂಡಿರುವ 50 ಮನೆಗಳನ್ನು ಜ.30 ರೊಳಗೆ ಪೂರ್ಣಗೊಳಿಸಬೇಕು: ಗೋಪಾಲಯ್ಯ

    ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರವ್ಯಾಪ್ತಿಯ ವಾರ್ಡ್ ನಂಬರ್ 44 ರ ಮಾರಪ್ಪನ ಪಾಳ್ಯದ ಗಜಾನನ ಸ್ಲಂ.2 ರಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಆಶ್ರಯ ಯೋಜನೆಯಡಿ ಮೊದಲ ಹಂತದಲ್ಲಿ ಆರಂಭಿಸಿರುವ 50 ಮನೆಗಳ ಕಾಮಗಾರಿಯನ್ನು ಇದೇ ಜನವರಿ 30 ರೊಳಗೆ ಮುಗಿಸಬೇಕೆಂದು ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಬಿಬಿಎಂಪಿ ಎಂಜಿನಿಯರ್‍ಗಳಿಗೆ ಸೂಚಿಸಿದರು.

    ಇಂದು ಬೆಳಿಗ್ಗೆ ಗಜಾನನ ಸ್ಲಂ.2 ರಲ್ಲಿ ಸಾರ್ವಜನಿಕ ಸೌಲಭ್ಯ ಕುರಿತು ಪರಿವೀಕ್ಷಣೆ ನಡೆಸಿ ಈ ಸೂಚನೆ ನೀಡಿದ ಸಚಿವರು, ಮನೆಗಳ ನಿರ್ಮಾಣ ಕಾರ್ಯ ವಿಳಂಬವಾಗಿರುದುವುದಕ್ಕೆ ಇಂಜಿನಿಯರ್ ಗಳ ವಿರುದ್ದ ಕಿಡಿಕಾರಿದರು. ಇದನ್ನೂ ಓದಿ: ಆರತಿ ತಟ್ಟೆ ಹಿಡಿದು ಪೂಜೆಗಾಗಿ ಎರಡು ಕುಟುಂಬಗಳ ನಡುವೆ ಕಿತ್ತಾಟ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಮನೆಗಳ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಒಂದು ವೇಳೆ ಕಾಮಗಾರಿಯಲ್ಲಿ ಲೋಪ ಅಥವಾ ಕಳಪೆ ಕಾಮಗಾರಿ ಕಂಡುಬಂದರೆ ನಿಮ್ಮನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಇದೇ ವೇಳೆ ಶಂಕರ ಮಠ ಪಾರ್ಕ್ ನಿರ್ವಹಣೆ ಸರಿ ಇಲ್ಲದಿರುವುದನ್ನು ಗಮನಿಸಿದ ಸಚಿವರು, ಹಾಳಾಗಿರುವ ಗಿಡಗಳನ್ನು ತೆಗೆದು ಹೊಸ ಗಿಡಗಳನ್ನು ನೆಡಬೇಕು. ಅವುಗಳನ್ನು ಸರಿಯಾಗಿ ಪೋಷಣೆ ಮಾಡಬೇಕ ಎಂದು ಸೂಚಿಸಿದರು. ಇದನ್ನೂ ಓದಿ: ಕಾಳಿ ದೇವಿ ಪಾದದ ಕೆಳಗೆ ವ್ಯಕ್ತಿಯ ತಲೆ ಬುರುಡೆ!

    ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯ ಎಂ.ಮಹದೇವ್, ಪುಟ್ಟಣ್ಣ, ವೆಂಕಟೇಶಮೂರ್ತಿ, ರೈಲ್ವೇ ನಾರಾಯಣ್ ವೆಂಕಟೇಶ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

  • ನಮಗೆ ನಷ್ಟ ಮಾಡಿಕೊಂಡು, ಇನ್ನೊಬ್ಬರ ಮೇಲೆ ಪ್ರತಿಭಟನೆ ಮಾಡಬಾರದು: ಯಶ್

    ನಮಗೆ ನಷ್ಟ ಮಾಡಿಕೊಂಡು, ಇನ್ನೊಬ್ಬರ ಮೇಲೆ ಪ್ರತಿಭಟನೆ ಮಾಡಬಾರದು: ಯಶ್

    – ಪಾನಿಪುರಿ ಕಿಟ್ಟಿ ಹೊಸ ಪ್ರಯತ್ನಕ್ಕೆ ಶುಭ ಹಾರೈಸಿದ ರಾಕಿಂಗ್ ಸ್ಟಾರ್
    – ‘ರಾಕಿ’ ಸಿನಿಮಾ ಆದಾಗಿನಿಂದ ಜೊತೆಲಿದ್ದಾರೆ

    ಬೆಂಗಳೂರು: ನಮಗೆ ನಷ್ಟ ಮಾಡಿಕೊಂಡು, ಇನ್ನೊಬ್ಬರ ಮೇಲೆ ಪ್ರತಿಭಟನೆ ಮಾಡಬಾರದು ಎಂಬುದು ನನ್ನ ಅಭಿಪ್ರಾಯ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದರು.

    ಯಶ್ ಸಿನಿಜರ್ನಿಯ ಆರಂಭದಿಂದ ಜೊತೆ ಇರೋ ಸ್ನೇಹಿತ ಮತ್ತು ಜಿಮ್‍ಟ್ರೈನರ್ ಪಾನಿಪುರಿ ಅವರು ಇಂದು ಮಹಾಲಕ್ಷ್ಮಿ ಲೇಔಟ್ ನಲ್ಲಿ ‘ರಿಚ್ಚಿ ಗ್ರಿಲ್ಸ್ ರೆಸ್ಟೋರೆಂಟ್’ ಪ್ರಾರಂಭಿಸಿದ್ದು, ಈ ಪ್ರಯತ್ನಕ್ಕೆ ಯಶ್ ಆಗಮಿಸಿ ಶುಭ ಹಾರೈಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಡಿ.31 ಬಂದ್ ಕುರಿತು ಮಾತನಾಡಿದರು. ಇದನ್ನೂ ಓದಿ: ನಮ್ಮ ಭೂಮಿ ಹೋದರೂ ಪರವಾಗಿಲ್ಲ, ಮೇಕೆದಾಟು ಯೋಜನೆ ಬೇಗ ಆರಂಭವಾಗಬೇಕು: ಡಿಕೆಶಿ

    ಎಂಇಎಸ್ ಪುಂಡಾಟ ವಿಚಾರ ಕುರಿತು ಮಾತನಾಡಿದ ಅವರು, ಕನ್ನಡಿಗರಾಗಿ ಎಲ್ಲರ ಅಭಿಪ್ರಾಯ ಒಂದೇ ರೀತಿ ಇರುತ್ತೆ. ನೋವಾಗುತ್ತೆ, ಕೋಪ ಬರುತ್ತೆ. ಇನ್ನೊಂದು ಸಾಂಸ್ಕøತಿಗೆ ನೋವು ಮಾಡಬಾರದು. ಇಂತಹ ಘಟನೆ ನಡೆಯಬಾರದು. ತಪ್ಪು, ಇದು ಖಂಡನೀಯ. ನಮ್ಮ ವೃತ್ತಿಯಲ್ಲಿ ನಾಡು, ನುಡಿ ರಕ್ಷಣೆ ಮಾಡುತ್ತೇವೆ. ಬಂದ್ ವಿಚಾರವಾಗಿ ದೊಡ್ಡವರು ಏನ್ ನಿರ್ಧಾರ ಮಾಡ್ತಾರೆ ಮಾಡಲಿ. ನಮಗೆ ನಷ್ಟ ಮಾಡಿಕೊಂಡು, ಇನ್ನೊಬ್ಬರ ಮೇಲೆ ಪ್ರತಿಭಟನೆ ಮಾಡಬಾರದು ಅನ್ನೋದು ನನ್ನ ಅಭಿಪ್ರಾಯ ಎಂದರು.

    ಗೆಳೆಯನ ಬಗ್ಗೆ ಮಾತನಾಡಿದ ಅವರು, ನಮ್ಮ ಈ ಲುಕ್‍ಗೆಲ್ಲಾ ಪಾನಿಪುರಿ ಕಿಟ್ಟಿನೇ ಕಾರಣ. ಪಾನಿಪುರಿ ಬ್ಯುಸಿನೆಸ್ ನಿಂದ ಕಿಟ್ಟಿ ಅವರ ಕೆರಿಯರ್ ಶುರುವಾಗಿತ್ತು. ಇವತ್ತು ಸಾಧನೆ ಮಾಡಿ ಒಂದು ರೆಸ್ಟೋರೆಂಟ್ ಮಾಡಿದ್ದಾರೆ. ಕಿಟ್ಟಿ ‘ರಾಕಿ’ ಸಿನಿಮಾ ಆದಾಗಿನಿಂದ ಜೊತೆಯಲ್ಲಿದ್ದಾರೆ ಎಂದು ಹಿಂದಿನ ದಿನಗಳನ್ನು ಮೆಲುಕು ಹಾಕಿದರು.

    ಈ ವರ್ಷನೂ ಕೊರೊನಾದಿಂದ ಗ್ರ್ಯಾಂಡ್ ಬರ್ತ್ ಡೇ ಬೇಡ ಎಂದ ಯಶ್, ಕೆಜಿಎಫ್ 2 ಟ್ರೇಲರ್ ನನ್ನ ಹುಟ್ಟುಹಬ್ಬಕ್ಕೆ ಬರಲ್ಲ. ಇನ್ನೂ ತಡವಾಗಿ ಬರುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ನಾಮಫಲಕದಲ್ಲಿ ಪುನೀತ್ ರಾಜ್‍ಕುಮಾರ್ ಹೆಸರು ಅಳಿಸಿ ವಿಕೃತಿ ಮೆರೆದ ಕಿಡಿಗೇಡಿಗಳು

    ಕಿಟ್ಟಿ ಅವರು ಸ್ಯಾಂಡಲ್‍ವುಡ್ ಹಲವು ಸೆಲೆಬ್ರೆಟಿಗಳಿಗೆ ಜಿಮ್ ಟ್ರೈನರ್ ಆಗಿದ್ದು, ಈ ಕಾರ್ಯಕ್ರಮಕ್ಕೆ ಅಜಯ್ ರಾವ್ ಹಾಗು ನೆನಪಿರಲಿ ಪ್ರೇಮ್ ಸಹ ಭಾಗವಹಿಸಿದ್ದರು.

  • ಮಹಾಲಕ್ಷ್ಮಿ ಲೇಔಟ್‍ನಲ್ಲಿ ಅರಳಿದ ಕಮಲ – ನೆಲಕಚ್ಚಿದ ಕೈ-ತೆನೆ

    ಮಹಾಲಕ್ಷ್ಮಿ ಲೇಔಟ್‍ನಲ್ಲಿ ಅರಳಿದ ಕಮಲ – ನೆಲಕಚ್ಚಿದ ಕೈ-ತೆನೆ

    ಬೆಂಗಳೂರು: ಜೆಡಿಎಸ್‍ನ ಭದ್ರಕೋಟೆಯಾಗಿರುವ ಮಹಾಲಕ್ಷ್ಮಿ ಲೇಔಟ್‍ನಲ್ಲಿ ಈ ಬಾರಿ ಉಪಸಮರದಲ್ಲಿ ಕಮಲ ಅರಳಿದ್ದು, ಕೈ- ತೆನೆ ನೆಲಕಚ್ಚಿದೆ. ಬಿಜೆಪಿ ಗೆಲುವಿನೊಂದಿಗೆ ಕಾರ್ಯಕರ್ತರಲ್ಲಿ ಹೊಸ ಮಂದಹಾಸ, ಚೈತನ್ಯ ಮೂಡಿದೆ.

    ಜೆಡಿಎಸ್‍ನಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದ ಗೋಪಾಲಯ್ಯ, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಗೆಲುವಿನ ನಾಗಲೋಟವನ್ನ ಮುಂದುವರೆಸಿದ್ದಾರೆ. ಫಲಿತಾಂಶದ ಬಳಿಕ ಮಾತನಾಡಿದ ಗೋಪಾಲಯ್ಯ, ಕ್ಷೇತ್ರದ ಜನರ ಸಹಕಾರ, ಬೆಂಬಲದಿಂದ ಗೆಲುವು ಸಿಕ್ಕಿದೆ. ಈ ಚುನಾವಣೆಯಲ್ಲಿ ಮತದಾರರು ನನ್ನ ಕೈ ಹಿಡಿತಾರೆ ಎನ್ನುವ ವಿಶ್ವಾಸವಿತ್ತು. ವಿಶ್ವಾಸಕ್ಕೆ ತಕ್ಕಂತೆ ಗೆಲುವು ಸಿಕ್ಕಿದೆ. ಯಾವ ಮಂತ್ರಿ ಸ್ಥಾನವನ್ನ ಕೊಟ್ಟರು ನಿಭಾಯಿಸುತ್ತೇನೆ ಎಂದು ಖುಷಿ ಹಂಚಿಕೊಂಡರು.

    ತೆನೆ ಬಿಟ್ಟು ಕಮಲ ಹಿಡಿದು, ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದ ಗೋಪಾಲಯ್ಯಗೆ, ತಮ್ಮ ಪತ್ನಿ ಹೇಮಲತಾರಿಂದ ಹೆಚ್ಚಿನ ಬೆಂಬಲ ಸಿಕ್ಕಿತ್ತು. ಹೇಮಾಲತಾ ಜೆಡಿಎಸ್ ಪಕ್ಷದ ಪಾಲಿಕೆ ಸದಸ್ಯೆರಾಗಿದ್ದರೂ ಬಿಜೆಪಿ ಅಭ್ಯರ್ಥಿ ಹಾಗೂ ತಮ್ಮ ಪತಿಗೆ ಬೆಂಬಲವನ್ನ ಕೊಟ್ಟು, ಚುನಾವಣಾ ಕಾರ್ಯದಲ್ಲಿ ಭಾಗಿಯಾಗಿದ್ದರು. ಜೆಡಿಎಸ್ ಪಕ್ಷದ ನಾಯಕರ ಎಚ್ಚರಿಕೆಗೂ ಜಗ್ಗದೆ ಪ್ರಚಾರ ಸಮಾರಂಭಗಳಲ್ಲಿ ಭಾಗಿಯಾಗಿ ಹಗಲಿರುಳು ಶ್ರಮಿಸಿದ್ದರು. ಇದು ಜೆಡಿಎಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿ, ಪಕ್ಷ ವಿರೋಧಿ ಚಟುವಟಿಕೆ ಕಾರಣ ನೀಡಿ ಹೇಮಲತಾರನ್ನ ಜೆಡಿಎಸ್‍ನಿಂದ ಉಚ್ಛಾಟಿಸಲಾಯಿತು. ಆದರೂ ತಮ್ಮ ಪತಿಯ ಬೆನ್ನಿಗೆ ನಿಂತು ಚುನಾವಣೆಯಲ್ಲಿ ವಾರ್ಡ್ ಮಟ್ಟದಲ್ಲಿ ಸಂಚರಿಸಿ, ಪತಿಯ ಗೆಲುವಿಗೆ ಕಾರಣರಾದರು.

  • ಹಳೆ ಕಲ್ಲು ಹೊಸ ಬಿಲ್ಲು – ಬಿಬಿಎಂಪಿ ಹಗರಣ ಬಯಲು

    ಹಳೆ ಕಲ್ಲು ಹೊಸ ಬಿಲ್ಲು – ಬಿಬಿಎಂಪಿ ಹಗರಣ ಬಯಲು

    ಬೆಂಗಳೂರು: ಹಳೆ ಕಲ್ಲು ಹೊಸ ಬಿಲ್ಲು ಬಿಬಿಎಂಪಿಗೆ ಹೊಸದೇನಲ್ಲ. ಇದೀಗ ಬಿಬಿಎಂಪಿ ಹಗರಣ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅದು ಮಾಜಿ ಉಪಮೇಯರ್ ವಾರ್ಡ್ ಸಂಬಂಧಿತವಾಗಿದ್ದು ಅನ್ನೋದು ಇದೀಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

    ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ನಾಗಪುರ ವಾರ್ಡ್ ನಲ್ಲಿ ಇರುವ ಉಷಾ ಪಾರ್ಕ್ ನಲ್ಲಿ ಜಿಮ್ ಉಪಕರಣಗಳ ಬದಲಾವಣೆಗೆ ಈಗ ಟೆಂಡರ್ ಕರೆಯಲಾಗಿದೆ. ವರ್ಷದ ಹಿಂದೆ ಹಾಕಿದ್ದ ಜಿಮ್ ಉಪಕರಣಗಳ ಬದಲಾವಣೆಗೆ ಟೆಂಡರ್ ಕರೆಯಲಾಗಿದೆ. ಆದರೆ ವರ್ಷದ ಹಿಂದೆ ಹಾಕಿರೋ ಉಪಕರಣಕ್ಕೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‍ಐಡಿಎಲ್) ದಿಂದ ಹಣ ಬಿಡುಗಡೆಯಾಗಿದೆ.

    ಪಾರ್ಕ್ ನಲ್ಲಿ ಜಿಮ್ ಉಪಕರಣ ಹಾಕಲು ಸ್ಥಳಾವಕಾಶವಿಲ್ಲ. ಈಗಾಗಲೇ ಹತ್ತಕ್ಕೂ ಹೆಚ್ಚು ಜಿಮ್ ಉಪಕರಣಗಳು ಉತ್ತಮ ಸ್ಥಿತಿಯಲ್ಲಿದೆ. ಹೀಗಿರುವಾಗ ಜಿಮ್ ಸಲಕರಣೆ ಬದಲಾವಣೆಗೆ 25 ಲಕ್ಷ ಟೆಂಡರ್ ಕರೆಯಲಾಗಿದ್ದು, ಜೊತೆಗೆ ಉಷಾ ಪಾರ್ಕ್ ಇತರ ಅಭಿವೃದ್ಧಿಗಾಗಿ 20 ಲಕ್ಷ ಟೆಂಡರ್ ಮೊತ್ತ ಸಹ ಸೇರ್ಪಡೆ ಮಾಡಲಾಗಿದೆ. ಈ ಉಷಾ ಪಾರ್ಕ್ ಗಾಗಿ 45 ಲಕ್ಷ ಸುರಿಯಲು ಸಿದ್ಧವಾಗಿದೆ ಎನ್ನಲಾಗಿದೆ.

    ಹೊಸ ಟೆಂಡರ್ ಅಗತ್ಯ ಈ ಪಾರ್ಕ್ ನಲ್ಲಿ ಕಾಣಿಸುತ್ತಿದೆಯಾ ಎಂದು ಈ ಹಗರಣ ಸಂಬಂಧ ದೂರು ನೀಡಲು ಮತ್ತೊಬ್ಬ ಮಾಜಿ ಉಪಮೇಯರ್ ಸಿದ್ಧವಾಗಿದ್ದಾರೆ. ಜೊತೆಗೆ 1 ಸಾವಿರ ಕೋಟಿ ಮಹಾಲಕ್ಷ್ಮೀ ಲೇಔಟ್ ಗೆ ಅನುದಾನ ಬಂದಿದೆ. ಈ ಎಲ್ಲ ಅನುದಾನದ ಬಗ್ಗೆ ತನಿಖೆಗೆ ಆಗ್ರಹಿಸಲು ಮಾಜಿ ಉಪಮೇಯರ್ ಹರೀಶ್ ಸಜ್ಜಾಗಿದ್ದಾರೆ.