Tag: Maharashtra government

  • ಶಿವಸೇನಾ ಅಲ್ಲ ಸೋನಿಯಾ ಸೇನಾ – ಮಹಾ ಸರ್ಕಾರದ ಮೇಲೆ ಮತ್ತೆ ಕಂಗನಾ ಕಿಡಿ

    ಶಿವಸೇನಾ ಅಲ್ಲ ಸೋನಿಯಾ ಸೇನಾ – ಮಹಾ ಸರ್ಕಾರದ ಮೇಲೆ ಮತ್ತೆ ಕಂಗನಾ ಕಿಡಿ

    – ಅಧಿಕಾರಕ್ಕಾಗಿ ಬಾಳಾಸಾಹೇಬರ ಸಿದ್ಧಾಂತವನ್ನೇ ಮಾರಿದ್ದಾರೆ

    ಮುಂಬೈ: ಮಹಾರಾಷ್ಟ್ರ ಸರ್ಕಾರ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಜಟಾಪಟಿ ಮುಂದುವರೆದಿದ್ದು, ಇಂದು ಕೂಡ ಬಾಲಿವುಡ್ ಕ್ವೀನ್ ಕಂಗನಾ ಶಿವಸೇನಾದ ಮೇಲೆ ಕಿಡಿಕಾರಿದ್ದಾರೆ.

    ಬುಧವಾರ ಬಿಎಂಸಿ (ಬೃಹತ್ ಮುಂಬೈ ಮುನಿಸಿಪಲ್ ಕಾರ್ಪೋರೇಶನ್) ಕಂಗನಾ ಅವರ ಮನೆ ಮತ್ತು ಕಚೇರಿಯನ್ನು ಒಡೆದು ಹಾಕಿತ್ತು. ಈಗ ಈ ಪ್ರಕರಣ ಕೋರ್ಟಿನಲ್ಲಿದ್ದು, ಇಂದು ಇದರ ಪ್ರಕರಣ ವಿಚಾರಣೆ ನಡೆಯಲಿದೆ. ಇದಕ್ಕೂ ಮುನ್ನಾ ಕಂಗನಾ ಅವರು, ಶಿವಸೇನಾವನ್ನು ಸೋನಿಯಾ ಸೇನೆ ಎಂದು ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಂಗನಾ, ಯಾವ ಸಿದ್ಧಾಂತವನ್ನು ಇಟ್ಟುಕೊಂಡು ಬಾಳಾ ಸಾಹೇಬ್ ಠಾಕ್ರೆ ಅವರು ಶಿವಸೇನಾವನ್ನು ಕಟ್ಟಿದರೋ, ಇಂದು ಅಧಿಕಾರಕ್ಕಾಗಿ ಅದೇ ಸಿದ್ಧಾಂತವನ್ನು ಮಾರಾಟ ಮಾಡುವ ಮೂಲಕ ಶಿವಸೇನಾ ಈಗ ಸೋನಿಯಾ ಸೇನೆ ಆಗಿದೆ. ಗೂಂಡಾಗಳು ನನ್ನ ಮನೆಯನ್ನು ಒಡೆದು ಹಾಕಿದ್ದಾರೆ. ಅವರನ್ನು ನಾಗರಿಕ ಅಧಿಕಾರಿಗಳು ಎಂದು ಕರೆಯಬೇಡಿ, ಅದು ಸಂವಿಧಾನದಕ್ಕೆ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಿನ್ನೆಯಿಂದ ಸರಣಿ ಟ್ವೀಟ್ ಮಾಡುತ್ತಿರುವ ಕಂಗನಾ, ಇಂದು ನನ್ನ ಧ್ವನಿಯನ್ನು ಮುಚ್ಚಿಸಲು ಪ್ರಯತ್ನ ಮಾಡಿದರೆ ಅದು ನಾಳೆ ಕೋಟಿ ಜನರ ಪ್ರತಿಧ್ವನಿಯಾಗಿ ಬದಲಾಗುತ್ತೆ. ಉದ್ಧವ್ ಠಾಕ್ರೆ ಗ್ಯಾಂಗ್ ಮತ್ತು ಕರಣ್ ಜೋಹರ್ ಗ್ಯಾಂಗ್ ನನ್ನ ಮನೆ ಆಫೀಸ್ ಅನ್ನು ಒಡೆದು ಹಾಕಿದೆ. ನನ್ನ ಬಾಯಿ ಮುಚ್ಚಿಸಲು ಪ್ರಯತ್ನಿಸುತ್ತದೆ. ಆದರೆ ನಾನು ಸತ್ತರೂ ನಿಮ್ಮ ಬಂಡವಾಳವನ್ನು ಬಹಿರಂಗ ಮಾಡುತ್ತೇನೆ ಎಂದು ಕಂಗನಾ ಸವಾಲ್ ಎಸೆದಿದ್ದಾರೆ.

    ಬುಧವಾರ ಟ್ವೀಟ್ ಮಾಡಿದ್ದ ಕಂಗನಾ, ನಾನು ಯಾವತ್ತೂ ತಪ್ಪು ಮಾಡುವುದಿಲ್ಲ ಎಂದು ನನ್ನ ಶತ್ರುಗಳು ಮತ್ತೆ ಮತ್ತೆ ಸಾಬೀತು ಮಾಡುತ್ತಿದ್ದಾರೆ. ಹೀಗಾಗಿಯೇ ನಾನು ಹೇಳಿದ್ದು, ನನ್ನ ಮುಂಬೈ ಈಗ ಪಿಓಕೆ ಆಗಿದೆ ಎಂದು ಟ್ವೀಟ್ ಮಾಡಿ, ಅಧಿಕಾರಿಗಳು ಮನೆಯನ್ನು ಒಡೆದು ಹಾಕುತ್ತಿರುವ ಫೋಟೋವನ್ನು ಹಾಕಿದ್ದರು. ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಪಾಕಿಸ್ತಾನ ಪ್ರಜಾಪ್ರಭುತ್ವದ ಕಗ್ಗೋಲೆ ಬಾಬರ್ ಮತ್ತು ಅವನ ಸೈನಿಕರು ಎಂದು ವ್ಯಂಗ್ಯವಾಡಿದ್ದರು.

    ನಾನು ಮುಂಬೈಗೆ ಬರಲು ವಿಮಾನ ನಿಲ್ದಾಣದಲ್ಲಿದ್ದಾಗ, ಮಹಾರಾಷ್ಟ್ರ ಸರ್ಕಾರ ಮತ್ತು ಅವರ ಗೂಂಡಾಗಳು ನನ್ನ ಮನೆ ಮತ್ತು ಕಚೇರಿಯನ್ನು ಅಕ್ರಮವಾಗಿ ಕಟ್ಟಲಾಗಿದೆ ಎಂದು ಆರೋಪಿಸಿ ಒಡೆದು ಹಾಕಿದ್ದಾರೆ. ಅವರು ಒಡೆದು ಹಾಕಲಿ. ನಾನು ಮುಂಬೈಗಾಗಿ ನನ್ನ ರಕ್ತವನ್ನು ಬೇಕಾದರೂ ಕೊಡಲು ಸಿದ್ಧವಿದ್ದೇನೆ. ಅವರು ಏನೇ ಕಿತ್ತುಕೊಂಡರೂ ನನ್ನ ಹೋರಾಟದ ಗುಣವನ್ನು ಕಿತ್ತುಕೊಳ್ಳಲು ಆಗುವುದಿಲ್ಲ ಎಂದು ಕಂಗನಾ ಟ್ವೀಟ್ ಮಾಡಿದ್ದರು.

  • ನನ್ನ ಮನೆಯಂತೆ ನಾಳೆ ನಿನ್ನ ಅಹಂಕಾರ ನೆಲಸಮ ಆಗುತ್ತೆ: ಸಿಎಂ ಠಾಕ್ರೆ ವಿರುದ್ಧ ಕಂಗನಾ ಪ್ರಹಾರ

    ನನ್ನ ಮನೆಯಂತೆ ನಾಳೆ ನಿನ್ನ ಅಹಂಕಾರ ನೆಲಸಮ ಆಗುತ್ತೆ: ಸಿಎಂ ಠಾಕ್ರೆ ವಿರುದ್ಧ ಕಂಗನಾ ಪ್ರಹಾರ

    -ಸಿಎಂ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ
    -ವಿಮಾನ ನಿಲ್ದಾಣದ ಮುಂಭಾಗ ಕಪ್ಪು ಬಾವುಟ ಪ್ರದರ್ಶನ

    ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ತಮ್ಮ ಮನೆ ಮತ್ತು ಕಚೇರಿ ನೆಲಸಮ ಮಾಡಿರುವ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಏಕವಚನದಲ್ಲಿ ಪ್ರಹಾರ ನಡೆಸಿದ್ದಾರೆ.

    ಶಿವಸೇನೆಯ ಬೆದರಿಕೆ ನಡುವೆಯೂ ಇಂದು ಮಧ್ಯಾಹ್ನ ಮುಂಬೈಗೆ ಬಂದಿಳಿದ ಕಂಗನಾ, ಟ್ವಿಟ್ಟರ್ ನಲ್ಲಿ ನೆಲಸಮವಾಗಿರುವ ಕಟ್ಟಡದ ವಿಡಿಯೋ ಹಾಕಿ ಪ್ರಜಾಪ್ರಭುತ್ವದ ಕೊಲೆ ಆಗುತ್ತಿದೆ ಎಂಬ ಹ್ಯಾಶ್ ಟ್ಯಾಗ್ ಬಳಸಿದ್ದಾರೆ. ಜೊತೆ ವಿಡಿಯೋ ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತು ಫಿಲಂ ಮಾಫಿಯಾ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ.

    ಕಂಗನಾ ಹೇಳಿದ್ದೇನು?: ಉದ್ಧವ್ ಠಾಕ್ರೆ ಫಿಲಂ ಮಾಫಿಯಾ ಜೊತೆ ಶಾಮೀಲಾಗಿ ಮನೆ ನಾಶ ಮಾಡಿ ನನ್ನ ವಿರುದ್ಧ ಸೇಡು ತೀರಿಸಿಕೊಂಡೆ ಎಂದು ತಿಳಿದುಕೊಂಡಿದ್ದೀಯಾ?. ಇಂದು ನನ್ನ ಮನೆ ನೆಲಸಮ ಆಗಿರಬಹುದು, ನಾಳೆ ನಿನ್ನ ಅಹಂಕಾರ ನೆಲಸಮ ಆಗುತ್ತೆ. ಇದು ಸಮಯದಾಟ, ಪ್ರತಿ ಬಾರಿ ಒಂದೇ ಆಗಿರಲ್ಲ. ಕಾಶ್ಮೀರಿ ಪಂಡಿತರ ಮೇಲೆ ಏನಾಗುತ್ತಿತ್ತು ಎಂಬುವುದು ಇಂದು ನನಗೆ ಅರ್ಥವಾಗಿದೆ. ನಾನು ಕೇವಲ ಅಯೋಧ್ಯೆ ಮಾತ್ರವಲ್ಲ, ಕಾಶ್ಮೀರದ ಕುರಿತು ಸಿನಿಮಾ ನಿರ್ಮಾಣ ಮಾಡುತ್ತೇನೆ ಎಂದು ಮಾತು ನೀಡುತ್ತಾನೆ. ಸಿನಿಮಾಗಳ ಮೂಲಕ ದೇಶದ ಜನರನ್ನ ಎಚ್ಚರಿಸುವ ಕೆಲಸ ಮಾಡುತ್ತೇನೆ. ಈ ರೀತಿ ಕೆಲಸಗಳ ನಡೆಯುತ್ತಿರುವ ಬಗ್ಗೆ ಕೇಳಿದ್ದೆ. ಆದ್ರೆ ಇಂದು ನನ್ನೊಂದಿಗೆ ನಡೆದಿದೆ. ಉದ್ಧವ್ ಠಾಕ್ರೆಯ ಕ್ರೂರತ್ವದ ಭಯೋತ್ಪಾದನೆ ನನ್ನೊಂದಿಗೆ ನಡೆದಿರೋದು ಒಳ್ಳೆಯದು ಆಯ್ತು. ಕಾರಣ ಇದಕ್ಕೆ ಕೆಲ ಮಹತ್ವದ ಕಾರಣವಿದೆ. ಜೈ ಹಿಂದ್, ಜೈ ಮಹಾರಾಷ್ಟ್ರ. ಇದನ್ನೂ ಓದಿ: ಕಂಗನಾ V/s ಮಹಾರಾಷ್ಟ್ರ ಸರ್ಕಾರ- ಮನೆ, ಕಚೇರಿ ನೆಲಸಮಕ್ಕೆ ಹೈಕೋರ್ಟ್ ತಡೆ-ಮಹಾರಾಷ್ಟ್ರ ಸರ್ಕಾರಕ್ಕೆ ಮುಖಭಂಗ

    ಮುಂಬೈನ ಪಾಲಿ ಹಿಲ್ಸ್ ನಲ್ಲಿರುವ ಕಂಗನಾ ರಣಾವತ್ ಕಚೇರಿ ಕಟ್ಟಡವನ್ನ ಬಿಎಂಸಿ ಇಂದು ಬೆಳಗ್ಗೆ ನೆಲಸಮ ಮಾಡಲು ಮುಂದಾಗಿತ್ತು. ಮಧ್ಯಾಹ್ನ ಹೈಕೋರ್ಟ್ ನೆಲಸಮ ಕಾರ್ಯಕ್ಕೆ ತಡೆ ನೀಡಿದ ಹಿನ್ನೆಲೆ ಬಿಎಂಸಿ ಅಧಿಕಾರಿಗಳು ಹಿಂದಿರುಗಿದ್ದಾರೆ. ಆದ್ರೆ ಕಟ್ಟಡದ ಒಳಭಾಗ ಭಾಗಶಃ ಕೆಡವಲಾಗಿದ್ದು, ಸದ್ಯದ ಒಳ ಭಾಗದ ವಿಡಿಯೋಗಳನ್ನ ಕಂಗನಾ ಶೇರ್ ಮಾಡಿಕೊಂಡಿದ್ದಾರೆ.

    https://twitter.com/KanganaTeam/status/1303634456658366464

    ಬಿಎಂಸಿಗೆ ಹೈಕೋರ್ಟ್ ಚಾಟಿ: ಹೈಕೋರ್ಟ್ ನೀಡಿದ ಆದೇಶವನ್ನ ಬಿಎಂಸಿ ಪಾಲನೆ ಮಾಡೋದರಲ್ಲಿ ವಿಫಲವಾದಂತೆ ಕಾಣಿಸುತ್ತಿದೆ. ನೋಟಿಸ್ ನೀಡಿದ 24 ಗಂಟೆಯೊಳಗೆ ಕಚೇರಿ ಮತ್ತು ಮನೆ ನೆಲಸಮ ಮಾಡುವ ಆತುರವೇನಿತ್ತು? ಇಂದು ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುವ ವಿಷಯ ತಿಳಿಸಿದಿದ್ದರೂ ಬಿಎಂಸಿ ಈ ನಿರ್ಧಾರ ತೆಗೆದುಕೊಂಡಿದ್ದು ಯಾಕೆ ಎಂದು ಹೈಕೋರ್ಟ್ ಬಿಎಂಸಿಗೆ ಚಾಟಿ ಬೀಸಿದೆ. ಇದನ್ನೂ ಓದಿ: ಕಂಗನಾ ಮನೆ, ಆಫೀಸ್ ಕೆಡವಿದ ಬಿಎಂಸಿ – ನನ್ನ ಮುಂಬೈ ಪಿಓಕೆ ಆಗಿದೆಯೆಂದ ನಟಿ

    ಬಾಂಬೆ ಹೈಕೋರ್ಟ್ 26 ಮಾರ್ಚ್ 2020ರಂದು ರಾಜ್ಯ ಸರ್ಕಾರ, ಬಿಎಂಸಿ ಮತ್ತು ಸಂಬಂಧಿತ ವಿಭಾಗಗಳು ಯಾರ ವಿರುದ್ಧವೂ ಆತುರದ ನಿರ್ಧಾರಗಳನ್ನ ತೆಗೆದುಕೊಳ್ಳುವಂತಿಲ್ಲ ಎಂದು ಆದೇಶ ನೀಡಿತ್ತು. ಮಾರ್ಚ್ 26ರ ಆದೇಶಕ್ಕೆ ಸಂಬಂಧಿಸಿದಂತೆ ಆಗಸ್ಟ್ 31ಕ್ಕೆ ಹೈಕೋರ್ಟ್ ವಿಚಾರಣೆ ನಡೆಸಿ, ಆದೇಶದ ಅವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿತ್ತು. ಈ ಕಾಲಾವಧಿಯಲ್ಲಿ ಯಾರೇ ಸಮಸ್ಯೆ ಅನುಭವಿಸಿದ್ರೂ ಹೈಕೋರ್ಟ್ ಬಾಗಿಲು ತಟ್ಟಬಹುದು ಎಂದು ನ್ಯಾಯಾಲಯ ಹೇಳಿತ್ತು.

    ಮಧ್ಯಾಹ್ನ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗ ಭಾರತೀಯ ಕಮ್ಗರ್ ಸೇನಾ ಮತ್ತು ಶಿವಸೇನಾ ಕಾರ್ಯಕರ್ತರು ಕಂಗಾನ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಶಿವಸೇನಾ ಬೆದರಿಕೆ ಹಿನ್ನೆಲೆ ಕೇಂದ್ರ ಸರ್ಕಾರ ಕಂಗನಾ ರಣಾವತ್‍ಗೆ ಕೇಂದ್ರ ಸರ್ಕಾರ ವೈ ದರ್ಜೆಯ ಭದ್ರತೆ ನೀಡಿದೆ.

    ಮುಂಬೈಗೆ ಆಗಮಿಸಿರುವ ಕಂಗನಾ ರಣಾವತ್ ಏಳು ದಿನಗಳಲ್ಲಿ ಹಿಂದಿರುಗಲಿದ್ದಾರೆ. ಏಳು ದಿನಗಳಲ್ಲಿ ಹಿಂದಿರುಗುವ ದಾಖಲೆಗಳನ್ನ ಬಿಎಂಸಿ ಮುಂದೆ ಹಾಜರುಪಡಿಸದಿದ್ದಲ್ಲಿ 14 ದಿನ ಹೋಂ ಕ್ವಾರಂಟೈನ್ ನಲ್ಲಿ ಕಂಗನಾ ಅವರನ್ನ ಇರಿಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ಶಿವಸೇನೆ ಧಮ್ಕಿ -ನಟಿ ಕಂಗನಾ ರಣಾವತ್‍ಗೆ ವೈ ದರ್ಜೆಯ ಭದ್ರತೆ

    ನಾನು ಯಾವತ್ತೂ ತಪ್ಪು ಮಾಡುವುದಿಲ್ಲ ಎಂದು ನನ್ನ ಶತ್ರುಗಳು ಮತ್ತೆ ಮತ್ತೆ ಸಾಬೀತು ಮಾಡುತ್ತಿದ್ದಾರೆ. ಹೀಗಾಗಿಯೇ ನಾನು ಹೇಳಿದ್ದು, ನನ್ನ ಮುಂಬೈ ಈಗ ಪಿಓಕೆ ಆಗಿದೆ ಎಂದು ಟ್ವೀಟ್ ಮಾಡಿ, ಅಧಿಕಾರಿಗಳು ಮನೆಯನ್ನು ಒಡೆದು ಹಾಕುತ್ತಿರುವ ಫೋಟೋವನ್ನು ಹಾಕಿದ್ದಾರೆ. ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಪಾಕಿಸ್ತಾನ ಪ್ರಜಾಪ್ರಭುತ್ವದ ಕಗ್ಗೊಲೆ ಬಾಬರ್ ಮತ್ತು ಅವನ ಸೈನಿಕರು ಎಂದು ವ್ಯಂಗ್ಯವಾಡಿದ್ದರು.

  • 5,000 ಕೋಟಿ ಮೌಲ್ಯದ ಯೋಜನೆ- ಚೀನಿ ಕಂಪನಿಗಳ ಜೊತೆಗಿನ ಒಪ್ಪಂದಕ್ಕೆ ‘ಮಹಾ’ ಸರ್ಕಾರದ ಬ್ರೇಕ್

    5,000 ಕೋಟಿ ಮೌಲ್ಯದ ಯೋಜನೆ- ಚೀನಿ ಕಂಪನಿಗಳ ಜೊತೆಗಿನ ಒಪ್ಪಂದಕ್ಕೆ ‘ಮಹಾ’ ಸರ್ಕಾರದ ಬ್ರೇಕ್

    ಮುಂಬೈ: ಲಡಾಖ್‍ನ ಗಾಲ್ವಾನ್ ಕಣಿವೆಯಲ್ಲಿ ಚೀನಾ-ಭಾರತದ ಸಂಘರ್ಷದ ಬಳಿಕ ದೇಶದಲ್ಲಿ ಚೀನಾ ವಸ್ತುಗಳು ಹಾಗೂ ಸೇವೆಗಳನ್ನು ಕೈಬಿಡುವಂತೆ ಕೂಗು ಕೇಳಿ ಬರುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

    ಮಹಾರಾಷ್ಟ್ರ ಸರ್ಕಾರವು ಇತ್ತೀಚೆಗೆ ಮಹಾ ವಿಕಾಸ್ ಅಘಾಡಿ ನಡೆದ ಮ್ಯಾಗ್ನೆಟಿಕ್ ಮಹಾರಾಷ್ಟ್ರ 2.0 ಹೂಡಿಕೆದಾರರ ಸಭೆಯಲ್ಲಿ ಚೀನಾದ ಕಂಪನಿಗಳೊಂದಿಗೆ ಸಹಿ ಮಾಡಿತ್ತು. ಆದರೆ ಈಗ ಆ ಮೂರೂ ಒಪ್ಪಂದಗಳನ್ನು ತಡೆಹಿಡಿಯಲಾಗಿದೆ. ಈ ಮೂಲಕ 5,000 ಕೋಟಿ ರೂ. ಮೌಲ್ಯದ ಯೋಜನೆಗೆ ಬ್ರೇಕ್ ಹಾಕಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರದ ಕೈಗಾರಿಕಾ ಸಚಿವ ಸುಭಾಷ್ ದೇಸಾಯಿ, “ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿಯೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೂರು ಯೋಜನೆಗೆ ಈ ಮೊದಲು ಸಹಿ ಹಾಕಲಾಗಿತ್ತು. ಇಂಡೋ-ಚೀನಾ ಗಡಿಯ ಸಂಘರ್ಷದಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾದ ಹಿನ್ನೆಲೆಯಲ್ಲಿ ಚೀನಾದ ಕಂಪನಿಗಳೊಂದಿಗೆ ಯಾವುದೇ ಒಪ್ಪಂದಗಳಿಗೆ ಸಹಿ ಹಾಕದಂತೆ ವಿದೇಶಾಂಗ ಸಚಿವಾಲಯವು ಸೂಚಿಸಿದೆ” ಎಂದು ಹೇಳಿದರು.

    ಮಹಾರಾಷ್ಟ್ರ ಸರ್ಕಾರವು ಕೋವಿಡ್-19 ನಂತರದ ಆರ್ಥಿಕತೆಯನ್ನು ಉತ್ತಮಗೊಳಿಸಲು ‘ಮ್ಯಾಗ್ನೆಟಿಕ್ ಮಹಾರಾಷ್ಟ್ರ 2.0’ ಪ್ಲಾನ್ ರೂಪಿಸಿತ್ತು. ಇದರ ಅಡಿ ಎಲ್ಲಾ 12 ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು. ಈ ಒಪ್ಪಂದದಲ್ಲಿ ಸಿಂಗಾಪುರ, ದಕ್ಷಿಣ ಕೊರಿಯಾ, ಅಮೆರಿಕದಿಂದ ಹಲವಾರು ಭಾರತೀಯ ಕಂಪನಿಗಳು ಸೇರಿವೆ. ರಾಜ್ಯ ಸರ್ಕಾರವು ಇತರ ಒಂಬತ್ತು ಒಪ್ಪಂದಗಳನ್ನು ಮುಂದುವರಿಸಲಿದೆ ಎಂದು ಸುಭಾಷ್ ದೇಸಾಯಿ ದೇಸಾಯಿ ಹೇಳಿದರು.

    ಯಾವ ಯಾವ ಒಪ್ಪಂದ?:
    ಕಳೆದ ಸೋಮವಾರ ನಡೆದ ಆನ್‍ಲೈನ್ ಸಮ್ಮೇಳನದಲ್ಲಿ ಚೀನಾದ ರಾಯಭಾರಿ ಸನ್ ವೀಡಾಂಗ್ ಭಾಗವಹಿಸಿದ್ದರು. ಮೂರು ಒಪ್ಪಂದಗಳಲ್ಲಿ ಪುಣೆ ಬಳಿಯ ತಲೆಗಾಂವ್‍ನಲ್ಲಿ ಆಟೋಮೊಬೈಲ್ ಪ್ಲಾಂಟ್ ಸ್ಥಾಪಿಸಲು ಗ್ರೇಟ್ ವಾಲ್ ಮೋಟಾರ್ಸ್ (ಜಿಡಬ್ಲ್ಯೂಎಂ) ನೊಂದಿಗೆ 3,770 ಕೋಟಿ ರೂ. ಯೋಜನೆ, ಪಿಎಂಐ ಎಲೆಕ್ಟ್ರೋ ಮೊಬಿಲಿಟಿ ಫೋಟಾನ್ (ಚೀನಾ) ಹಾಗೂ ಜಂಟಿ ಸಹಭಾಗಿತ್ವದಲ್ಲಿ 1,000 ಕೋಟಿ ರೂ.ಗಳ ಘಟಕ ಸ್ಥಾಪನೆಯ ಒಪ್ಪಂದವಾಗಿತ್ತು. ಈ ಮೂಲಕ 1,500 ಉದ್ಯೋಗಗಳನ್ನು ಸೃಷ್ಟಿಸಲು ಸರ್ಕಾರ ನಿರ್ಧರಿಸಿತ್ತು. ಜೊತೆಗೆ 150 ಉದ್ಯೋಗಗಳನ್ನು ಸೃಷ್ಟಿಸುವ ಯೋಜನೆಯಾದ ತಲೇಗಾಂವ್‍ನಲ್ಲಿ ಎರಡನೇ ಹಂತದ ವಿಸ್ತರಣೆಯ ಭಾಗವಾಗಿ 250 ಕೋಟಿ ರೂ.ಗಳ ಹೂಡಿಕೆಗಾಗಿ ಹೆಂಗ್ಲಿ ಎಂಜಿನಿಯರಿಂಗ್ ಬದ್ಧವಾಗಿತ್ತು. ಆದರೆ ಈಗ ಯೋಜನೆಯನ್ನು ಅನಿರ್ದಿಷ್ಟಾವಧಿಗೆ ತಡೆ ಹಿಡಿಯಲಾಗಿದೆ.

    ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕರೆದ ಸರ್ವಪಕ್ಷ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕೂಡ ಭಾಗಿಯಾಗಿದ್ದರು. ಈ ವೇಳೆ ಪ್ರಧಾನಿ ಮೋದಿ, “ಭಾರತಕ್ಕೆ ಶಾಂತಿ ಬೇಕು. ಆದರೆ ಇದರರ್ಥ ನಾವು ದುರ್ಬಲರು ಎಂದಲ್ಲ. ಚೀನಾದ ಸ್ವಭಾವವು ದ್ರೋಹವನ್ನು ಹೊಂದಿದೆ. ಭಾರತವು ಪ್ರಬಲವಾಗಿದೆ, ಅಸಹಾಯಕರಲ್ಲ” ಎಂದು ಹೇಳಿದ್ದರು.

    ಪ್ರಧಾನಿ ಮೋದಿ ಅವರಿಗೆ ವಿಶ್ವಾಸ ವ್ಯಕ್ತಪಡಿಸಿದ ಠಾಕ್ರೆ, “ನಮ್ಮ ಸರ್ಕಾರವು ಸೂಕ್ತವಾದ ಉತ್ತರವನ್ನು ನೀಡುವ ಸಾಮಥ್ರ್ಯವನ್ನು ಹೊಂದಿದೆ. ನಾವೆಲ್ಲರೂ ಒಂದಾಗಬೇಕಿದೆ. ದೇಶದ ಪ್ರದೇಶ ರಕ್ಷಣೆ ನಮ್ಮ ಉದ್ದೇಶವಾಗಿರಬೇಕು. ಇದು ಭಾವನೆ ಕೂಡ ಹೌದು. ನಾವು ನಿಮ್ಮೊಂದಿಗೆ ಇದ್ದೇವೆ. ನಮ್ಮ ಸೈನಿಕರು ಹಾಗೂ ಅವರ ಕುಟುಂಬಗಳೊಂದಿಗೆ ನಾವಿದ್ದೇವೆ” ತಿಳಿಸಿದ್ದರು. ಸಭೆಯ ಬಳಿಕ ಮಹಾರಾಷ್ಟ್ರದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

  • ಕೋವಿಡ್-19 ವಿರುದ್ಧ ಹೋರಾಟಕ್ಕೆ ಕಿಂಗ್‍ಖಾನ್ ಸಾಥ್ – ಸಾಲು ಸಾಲು ನೆರವು ಘೋಷಿಸಿ ಟೀಕೆಗಳಿಗೆ ಬ್ರೇಕ್

    ಕೋವಿಡ್-19 ವಿರುದ್ಧ ಹೋರಾಟಕ್ಕೆ ಕಿಂಗ್‍ಖಾನ್ ಸಾಥ್ – ಸಾಲು ಸಾಲು ನೆರವು ಘೋಷಿಸಿ ಟೀಕೆಗಳಿಗೆ ಬ್ರೇಕ್

    ಮುಂಬೈ: ಭಾರತದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ದೇಶಾದ್ಯಂತ ಲಾಕ್‍ಡೌನ್ ಘೋಷಿಸಿದೆ. ಅಷ್ಟೇ ಅಲ್ಲದೇ ಮಹಾಮಾರಿ ವಿರುದ್ಧ ಹೋರಾಟ ನಡೆಸುತ್ತಿದೆ. ಲಾಕ್‍ಡೌನ್ ಹಿನ್ನೆಲೆ ದೇಶದ ಆರ್ಥಿಕತೆ ಕುಸಿದಿದ್ದು, ಎಲ್ಲರೂ ಕೊರೊನಾ ಹೋರಾಟಕ್ಕೆ ಸರ್ಕಾರದ ಜೊತೆ ಕೈ ಜೋಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಳಿಕೊಂಡಿದ್ದರು. ಹೀಗಾಗಿ ಅನೇಕ ಕ್ರೀಡಾಪಟುಗಳು, ಸಿನಿಮಾ ತಾರೆಯರು ಸರ್ಕಾರಕ್ಕೆ ದೇಣಿಗೆ ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದರು. ಆದರೆ ಬಾಲಿವುಡ್ ಬಾದ್‍ಷಾ ಶಾರೂಖ್ ಖಾನ್ ಸಂಕಷ್ಟದ ಪರಿಸ್ಥಿತಿಯಲ್ಲಿ ದೇಶದ ನೆರವಿಗೆ ಮುಂದೆ ಬಂದಿಲ್ಲ ಎಂಬ ಟೀಕೆಗಳು ಕೇಳಿಬಂದಿತ್ತು.

    ಈಗ ಈ ಟೀಕೆಗಳಿಗೆ ಶಾರೂಖ್ ಬ್ರೇಕ್ ಹಾಕಿದ್ದು, ಸಾಲು ಸಾಲು ನೆರವುಗಳನ್ನು ಘೋಷಿಸುವ ಮೂಲಕ ಟೀಕೆಗಾರರ ಬಾಯಿ ಮುಚ್ಚಿಸಿದ್ದಾರೆ. ತಮ್ಮ ವಿವಿಧ ಫೌಂಡೇಷನ್‍ಗಳು, ಫ್ರಾಂಚೈಸಿಗಳ ಮೂಲಕ ದೇಶಕ್ಕೆ ಸಹಾಯ ಮಾಡುವುದಾಗಿ ಕಿಂಗ್‍ಖಾನ್ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಧಾನಿ ಹಾಗೂ ಮಹಾರಾಷ್ಟ್ರ ಸಿಎಂ ಪರಿಹಾರ ನಿಧಿಗಳಿಗೂ ದೇಣಿಗೆ ನೀಡುವುದಾಗಿ ಹೇಳಿಕೊಂಡಿದ್ದಾರೆ.

    ಮಹಾರಾಷ್ಟ್ರದ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುವುದರ ಜೊತೆಗೆ ಮುಂಬೈ ನಗರದಲ್ಲಿನ ಬಡವರಿಗೆ ಸಹಾಯ ಮಾಡುವುದಾಗಿ ಕಿಂಗ್‍ಖಾನ್ ತಿಳಿಸಿದ್ದಾರೆ. ಶಾರೂಖ್ ಅವರ ಈ ನೆರವಿಗಾಗಿ ಮಹಾರಾಷ್ಟ್ರ ಸಿಎಂ, ಶಾರೂಖ್ ಖಾನ್ ಮತ್ತು ಗೌರಿ ಖಾನ್ ಅವರಿಗೆ ಧನ್ಯವಾದ ತಿಳಿಸಿದ್ದರು.

    ಪ್ರಧಾನ ಮಂತ್ರಿ, ಮಹಾರಾಷ್ಟ್ರ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಶಾರೂಖ್ ದೇಣಿಗೆ ನೀಡುವುದಾಗಿ ಘೋಷಿಸಿಕೊಂಡಿದ್ದಾರೆ. ಕೆಕೆಆರ್ ಮತ್ತು ಮೀರ್ ಫೌಂಡೇಷನ್ ವತಿಯಿಂದ 50,000 ಆರೋಗ್ಯ ಕಿಟ್, ರೋಟಿ ಫೌಂಡೇಷನ್, ಮೀರ್ ಫೌಂಡೇಷನ್ ಕಡೆಯಿಂದ 3 ಲಕ್ಷ ಊಟದ ಕಿಟ್ ನೀಡಲಾಗುತ್ತಿದೆ. ಅಷ್ಟೇ ಅಲ್ಲದೇ ಅರ್ಥ್ ಫೌಂಡೇಷನ್, ಮೀರ್ ಫೌಂಡೇಷನ್ ಮೂಲಕ ಮುಂಬೈ ಒಂದರಲ್ಲಿಯೇ 5,500 ಮಂದಿಗೆ ಒಂದು ತಿಂಗಳ ಆಹಾರ ಸಾಮಗ್ರಿಗಳನ್ನು ವಿತರಿಸಲಾಗಿದೆ. ಪ್ರತಿದಿನ 2000 ಜನರಿಗೆ ಆಹಾರ ಸರಬರಾಜು ಮಾಡಲಾಗುತ್ತಿದೆ ಎಂದು ಕಿಂಗ್‍ಖಾನ್ ಮಾಹಿತಿ ನೀಡಿದ್ದಾರೆ.

    ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ಕೈಜೋಡಿಸುವಂತೆ ಪ್ರಧಾನಿ ನೀಡಿದ ಕರೆಗೆ ನಟ ಅಕ್ಷಯ್ ಕುಮಾರ್, ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಸಚಿನ್, ರೋಹಿತ್ ಶರ್ಮಾ, ಅಜಿಂಕ್ಯ ರಹಾನೆ, ಕುಸ್ತಿಪಟು ಭಜರಂಗ್ ಪೂನಿಯಾ ಸೇರಿದಂತೆ ಅನೇಕರು ಭಾರೀ ಮೊತ್ತ ದೇಣಿಗೆ ನೀಡುವ ಮೂಲಕ ಕೈಜೋಡಿಸಿದ್ದಾರೆ. ಇತ್ತ ಸಲ್ಮಾನ್ ಖಾನ್ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೀಡಾದ 25 ಸಾವಿರ ಸಿನಿಮಾ ಕಾರ್ಮಿಕರ ನೆರವಿಗೆ ನಿಂತಿದ್ದಾರೆ.

  • ಮಹಾರಾಷ್ಟ್ರ ರಾಜಕೀಯ ಡ್ರಾಮಾ ನೋಡಿ ಅನಾರೋಗ್ಯಕ್ಕೀಡಾದ ಪ್ರೊಫೆಸರ್ – ರಜಾ ಅರ್ಜಿ ವೈರಲ್

    ಮಹಾರಾಷ್ಟ್ರ ರಾಜಕೀಯ ಡ್ರಾಮಾ ನೋಡಿ ಅನಾರೋಗ್ಯಕ್ಕೀಡಾದ ಪ್ರೊಫೆಸರ್ – ರಜಾ ಅರ್ಜಿ ವೈರಲ್

    ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಆದ ಹೈಡ್ರಾಮಾ ನೋಡಿ ಅನಾರೋಗ್ಯಕ್ಕೀಡಾಗಿದ್ದೇನೆ, ಶಾಕ್‍ಗೆ ಒಳಗಾಗಿದ್ದೇನೆ ಎಂದು ಪ್ರೊಫೆಸರ್‌ರೊಬ್ಬರು ಬರೆದ ರಜಾ ಅರ್ಜಿ ಈಗ ಎಲ್ಲೆಡೆ ಸಖತ್ ವೈರಲ್ ಆಗಿದೆ.

    ಚಂದ್ರಪುರದಿಂದ ಸುಮಾರು 43 ಕಿ.ಮೀ ದೂರವಿರುವ ಗಡ್ಚಂದೂರ್ ಕಾಲೇಜಿನ ಇಂಗ್ಲಿಷ್ ಪ್ರೊಫೆಸರ್ ಝಹೀರ್ ಸಯ್ಯದ್ ಅವರು ಈ ರೀತಿ ರಜಾ ಅರ್ಜಿ ಬರೆದಿದ್ದಾರೆ. ಶನಿವಾರ ಬೆಳಗ್ಗೆ ಟಿವಿ ನೋಡುತ್ತಿದ್ದಾಗ ಮಹಾರಾಷ್ಟ್ರ ರಾಜಕೀಯದಲ್ಲಿ ನಡೆದ ಹೈಡ್ರಾಮಾದ ಸುದ್ದಿ ಪ್ರಸಾರವಾಗಿತ್ತು. ಇದನ್ನು ನೋಡಿ ನನಗೆ ಶಾಕ್ ಆಯ್ತು. ಇದರಿಂದ ನಾನು ಅನಾರೋಗ್ಯಕ್ಕೀಡಾದೆ. ಹೀಗಾಗಿ ನನಗೆ ಕಾಲೇಜಿಗೆ ಬರಲು ಆಗುತ್ತಿಲ್ಲ ರಜಾ ನೀಡಿ ಎಂದು ಪ್ರಾಂಶುಪಾಲರಿಗೆ ಪ್ರೊಫೆಸರ್ ಅರ್ಜಿ ಬರೆದಿದ್ದರು. ಇದನ್ನೂ ಓದಿ:ಫಡ್ನವಿಸ್, ಅಜಿತ್ ಪವಾರ್ ಪದಗ್ರಹಣಕ್ಕೆ ಬಂದಿದ್ದ ಎನ್‍ಸಿಪಿ ಶಾಸಕ ನಾಪತ್ತೆ

    ಪ್ರೊಫೆಸರ್ ರಜಾ ಅರ್ಜಿ ನೋಡಿದ ಪ್ರಾಂಶುಪಾಲರು, ಅರ್ಜಿಯಲ್ಲಿದ್ದ ಕಾರಣವನ್ನು ಒಪ್ಪದೆ ರಜೆ ನೀಡಲು ತಿರಸ್ಕರಿಸಿದ್ದಾರೆ. ಆದರೆ ಈ ರಜಾ ಅರ್ಜಿ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಓರ್ವ ವ್ಯಕ್ತಿ ಅನಾರೋಗ್ಯಕ್ಕೀಡಾಗುವ ರೀತಿ ಮಹಾರಾಷ್ಟ್ರ ರಾಜಕೀಯದಲ್ಲಿ ಹೈಡ್ರಾಮಾ ನಡೆಯುತ್ತಿದೆ. ಇದ್ದಕ್ಕಿದ್ದ ಹಾಗೆ ಬಿಜೆಪಿ ಎನ್‍ಸಿಪಿ ಜೊತೆಗೂಡಿ ಸರ್ಕಾರ ರಚನೆ ಮಾಡುತ್ತಿರುವುದು ಅನೇಕರಿಗೆ ಅಚ್ಚರಿಗೊಳಿಸಿದೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಕಂಡು ಕೇಳರಿಯದ `ಮಹಾ’ ನಾಟಕದ ಸೂತ್ರಧಾರಿ ಯಾರು?

    ಶನಿವಾರ ಮಹಾರಾಷ್ಟ್ರ ಸಿಎಂ ಆಗಿ ಎರಡನೇ ಬಾರಿಗೆ ದೇವೆಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕರಿಸಿದ್ದರು. ಅವರ ಜೊತೆಗೆ ಎನ್‍ಸಿಪಿ ನಾಯಕ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ವಿಚಾರ ಕೇಳಿ ಸ್ವತಃ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೇ ಶಾಕ್ ಪಟ್ಟು, ವಿರೋಧಿಸಿದ್ದರು. ಅಲ್ಲದೆ ಶಿವಸೇನೆ ಜೊತೆಗೂಡಿ ಸುದ್ದಿಗೋಷ್ಠಿಯನ್ನೂ ನಡೆಸಿ, ಬಿಜೆಪಿ ಬೆಂಬಲ ನೀಡುತ್ತಿರುವುದು ಅಜಿತ್ ಪವಾರ್ ಅವರ ವೈಯಕ್ತಿಕ ವಿಚಾರವೇ ಹೊರೆತು ಎನ್‍ಸಿಪಿದಲ್ಲ ಎಂದು ಶರದ್ ಪವಾರ್ ಹೇಳಿದ್ದರು.

  • ಅಜಿತ್ ಪವಾರ್ ನಿರ್ಧಾರದೊಂದಿಗೆ ಎನ್‍ಸಿಪಿ ಇಲ್ಲ: ಶರದ್ ಪವಾರ್

    ಅಜಿತ್ ಪವಾರ್ ನಿರ್ಧಾರದೊಂದಿಗೆ ಎನ್‍ಸಿಪಿ ಇಲ್ಲ: ಶರದ್ ಪವಾರ್

    -ಸರ್ಕಾರ ರಚನೆ ಮಾಡೋರಿಗೆ ಕಾನೂನು ಗೊತ್ತಿರಬೇಕಿತ್ತು

    ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವುದು ಅಜಿತ್ ಪವಾರ್ ಅವರ ವೈಯಕ್ತಿಕ ನಿರ್ಧಾರವೇ ಹೊರೆತು ಎನ್‍ಸಿಪಿದಲ್ಲ ಎಂದು ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಟ್ವೀಟ್ ಮಾಡಿದ್ದಾರೆ.

    ಮಹಾರಾಷ್ಟ್ರದಲ್ಲಿ ಬಿಜೆಪಿ, ಎನ್‍ಸಿಪಿ ಜೊತೆಗೂಡಿ ಸರ್ಕಾರ ರಚಿಸಲಿದೆ. ಇಂದು ದೇವೇಂದ್ರ ಫಡ್ನಾವಿಸ್ ಅವರು ಎರಡನೇ ಬಾರಿ ಸಿಎಂ ಆಗಿ ಪದಗ್ರಹಣ ಮಾಡಿದ್ದು, ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಶರದ್ ಪವಾರ್ ಅವರು, ಅಜಿತ್ ಪವಾರ್ ಅವರ ರಾಜಕೀಯ ನಿರ್ಧಾರವನ್ನು ಎನ್‍ಸಿಪಿ ಬೆಂಬಲಿಸುವುದಿಲ್ಲ. ಬಿಜೆಪಿಗೆ ಬೆಂಬಲಿಸುವುದು ಅಜಿತ್ ಪವಾರ್ ಅವರ ವೈಯಕ್ತಿಕ ನಿರ್ಧಾರ. ಇದು ಎನ್‍ಸಿಪಿ ಪಕ್ಷದ ನಿರ್ಧಾರವಲ್ಲ ಎಂದು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ:ಒಡೆದ ಕುಟುಂಬ, ಪಕ್ಷ- ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಲೆ

    ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗೆ ಸಂಬಂಧಿಸಿದಂತೆ ಇಂದು ಶಿವಸೇನೆ ಮತ್ತು ಎನ್‍ಸಿಪಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್, ನಾನು ಏನು ಆ್ಯಕ್ಷನ್ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳಬೇಕಾಗುತ್ತದೆ. ಅಜಿತ್ ಪವಾರ್ ನಿರ್ಧಾರದೊಂದಿಗೆ ಎನ್‍ಸಿಪಿ ಇಲ್ಲ. ಸರ್ಕಾರ ರಚನೆ ಮಾಡಿದರವರಿಗೆ ಕಾನೂನುಗಳ ಬಗ್ಗೆ ಗೊತ್ತಿರಬೇಕಿತ್ತು. ಎನ್‍ಸಿಪಿಯಿಂದ ಆಯ್ಕೆಯಾದ ಶಾಸಕರು ಬಿಜೆಪಿಯೊಂದಿಗೆ ಸೇರುವ ಮೂಲಕ ಪಕ್ಷಾಂತರ ಕಾಯ್ದೆ ಉಲ್ಲಂಘಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿದ ಎನ್‍ಸಿಪಿ ಶಾಸಕ, ಅಜಿತ್ ಪವಾರ್ ಅವರ ಫೋನ್ ಬಂದಿದ್ದರಿಂದ ರಾಜಭವನಕ್ಕೆ ಹೋಗಿದ್ದೆ. ಒಂದು ಕ್ಷಣ ಅಲ್ಲಿ ಏನು ನಡೆದಿತ್ತು ಎಂಬುವುದು ನಮಗೆ ಗೊತ್ತಾಗಲಿಲ್ಲ. ನೋಡನೋಡುತ್ತಿದ್ದಂತೆ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ನಾವು ಶರದ್ ಪವಾರ್ ಅವರ ಜೊತೆಗಿದ್ದು, ಬಿಜೆಪಿ ಸರ್ಕಾರಕ್ಕೆ ಬೆಂಬಲ ಸೂಚಿಸಲ್ಲ ಎಂದರು. ಇದನ್ನೂ ಓದಿ:ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ

    ಅಜಿತ್ ಪವಾರ್ ಮತ್ತು ಅವರಿಗೆ ಬೆಂಬಲ ಸೂಚಿಸಿರುವ ಶಾಸಕರ ಏನು ಕ್ರಮಕೈಗೊಳ್ಳಬೇಕು ಎಂಬುದನ್ನು ಪಕ್ಷದಲ್ಲಿ ನಿರ್ಧರಿಸಲಾಗುತ್ತದೆ. ಏಕಪಕ್ಷೀಯವಾಗಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ನಾವು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಸರ್ಕಾರ ರಚಿಸಲು ಮುಂದಾಗಿದ್ದೆವು. ಆದರೆ ಅಜಿತ್ ಪವಾರ್ ನಡೆ ಬೇಸರ ತರಿಸಿದೆ. ಈ ರೀತಿ ಮೋಸ ನನ್ನೊಂದಿಗೆ ಆಗಿದ್ದು, ತಡೆದುಕೊಳ್ಳುವ ಶಕ್ತಿ ನನಗಿದೆ ಎಂದು ಅಜಿತ್ ಪವಾರ್ ಗೆ ತಿರುಗೇಟು ನೀಡಿದರು.

    ಸರ್ಕಾರ ರಚನೆಗೆ ಸಂಬಂಧಿಸಿದಂತೆ ಎನ್‍ಸಿಪಿಯ ಎಲ್ಲಾ ಶಾಸಕರ ಸಹಿ ಪಡೆದುಕೊಳ್ಳಲಾಗಿತ್ತು. ಶಾಸಕಾಂಗದ ನಾಯಕರಾಗಿದ್ದ ಅಜಿತ್ ಪವಾರ್ ಎಲ್ಲಾ ಶಾಸಕರ ಹಸ್ತಾಕ್ಷರವುಳ್ಳ ಪತ್ರಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ರಾತ್ರೋರಾತ್ರಿ ಶಾಸಕರಿಗೆ ಫೋನ್ ಮಾಡಿ ರಾಜಭವನಕ್ಕೆ ಬರುವಂತೆ ಸೂಚಿಸಲಾಗಿತ್ತು. ನಮ್ಮ ಶಾಸಕರಿಗೆ ಮಾಹಿತಿ ನೀಡದೇ ಕರೆಸಿಕೊಳ್ಳಲಾಗಿತ್ತು. ದೇವೇಂದ್ರ ಫಡ್ನವೀಸ್ ಸರ್ಕಾರ ಬಹುಮತ ಹೇಗೆ ಸಾಬೀತು ಮಾಡುತ್ತೆ ಎಂದು ಎಲ್ಲರೂ ಕಾದುನೋಡೋಣ.

    ಪಕ್ಷಾಂತರ ಕಾಯ್ದೆ ಏನು ಹೇಳುತ್ತೆ?
    ಪಕ್ಷಾಂತರ ನಿಷೇಧ ಕಾಯ್ದೆಯಡಿ ಪಕ್ಷದ ಆದೇಶ ಉಲ್ಲಂಘಿಸಿದರೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದು ಹಾಕಬಹುದು. ಆಗ ಸಹಜವಾಗಿಯೇ ಶಾಸಕರು ಅನರ್ಹರಾಗುತ್ತಾರೆ. ಅನರ್ಹ ಶಾಸಕರು ವಿಧಾನಸಭೆ ಅವಧಿ ಮುಗಿಯುವವರೆಗೆ ಬೇರೆ ಪಕ್ಷಕ್ಕೆ ಸೇರುವಂತಿಲ್ಲ. ಹಾಲಿ ವಿಧಾನಸಭೆ ಅವಧಿ ಮುಗಿಯುವವರೆಗೂ ಉಪ ಚುನಾವಣೆಯಲ್ಲೂ ಸ್ಪರ್ಧಿಸುವಂತಿಲ್ಲ. ಅನರ್ಹಗೊಂಡ ಶಾಸಕರು ಮಂತ್ರಿ ಸ್ಥಾನ ಸೇರಿದಂತೆ ಯಾವುದೇ ಸರ್ಕಾರಿ ಹುದ್ದೆಯನ್ನು ಹೊಂದುವಂತಿಲ್ಲ.

    ಅನರ್ಹಗೊಂಡ ದಿನದಿಂದ ಅವರ ಶಾಸಕತ್ವ ಅವಧಿ ಯಾವಾಗ ಮುಗಿಯುತ್ತೋ ಅಲ್ಲಿವರೆಗೆ ಹುದ್ದೆಗಳನ್ನ ಹೊಂದುವಂತಿಲ್ಲ. ಪಕ್ಷದ ಒಟ್ಟು ಶಾಸಕರಲ್ಲಿ 2/3ರಷ್ಟು ಶಾಸಕರು ಗುಂಪಾಗಿ ಪಕ್ಷಾಂತರ ಮಾಡಿದರಷ್ಟೇ ಅನರ್ಹತೆ ಅನ್ವಯಿಸಲ್ಲ. ಶಾಸಕರನ್ನು ಅನರ್ಹಗೊಳಿಸುವ ಅಧಿಕಾರ ವಿಧಾನಸಭೆ ಸ್ಪೀಕರ್ ಕೈಯಲ್ಲಿದ್ದು, ಅನರ್ಹತೆ ಪ್ರಶ್ನಿಸಿ ಸ್ಪೀಕರ್ ಅವರಿಗೂ ಮನವಿ, ಕಾನೂನು ಹೋರಾಟವನ್ನೂ ಮಾಡಬಹುದು.

  • ಬಡ್ಡಿರಹಿತವಾಗಿ ಮಹಾರಾಷ್ಟ್ರ ಸರ್ಕಾರಕ್ಕೆ 500 ಕೋಟಿ ರೂ. ಸಾಲಕೊಟ್ಟ ಶಿರಡಿ ದೇವಾಲಯ

    ಬಡ್ಡಿರಹಿತವಾಗಿ ಮಹಾರಾಷ್ಟ್ರ ಸರ್ಕಾರಕ್ಕೆ 500 ಕೋಟಿ ರೂ. ಸಾಲಕೊಟ್ಟ ಶಿರಡಿ ದೇವಾಲಯ

    ಮುಂಬೈ: ಕುಡಿಯುವ ನೀರು ಯೋಜನೆಗಾಗಿ ಶಿರಡಿ ದೇವಾಲಯ ಸಮಿತಿ ಮಹಾರಾಷ್ಟ್ರ ಸರ್ಕಾರಕ್ಕೆ ಬಡ್ಡಿ ರಹಿತವಾಗಿ 500 ಕೋಟಿ ರೂಪಾಯಿ ಸಾಲವನ್ನು ನೀಡಿದೆ.

    ಮಹಾರಾಷ್ಟ್ರದ ಅಹಮದ್‍ನಗರ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗಾಗಿ ನೀರಾವರಿ ಯೋಜನೆಯನ್ನು ಮಹಾರಾಷ್ಟ್ರ ಸರ್ಕಾರ ಕೈಗೆತ್ತಿಕೊಂಡಿತ್ತು. ಆದರೆ ಹಣದ ಕೊರತೆಯಿಂದಾಗಿ ಯೋಜನೆಯನ್ನು ಅರ್ಧಕ್ಕೆ ಕೈ ಬಿಟ್ಟಿತ್ತು. ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ ಬಿಜೆಪಿ ಶಿರಡಿ ದೇವಾಲಯದಿಂದ ಆರ್ಥಿಕ ಸಹಾಯ ಕೇಳಲು ನಿರ್ಧರಿಸುತ್ತು.

    ಸರ್ಕಾರದ ಪ್ರತಿನಿಧಿಗಳು ಶಿರಡಿ ದೇವಾಲಯದ ಸಮಿತಿಯ ಅಧ್ಯಕ್ಷರಾಗಿರುವ ಬಿಜೆಪಿಯ ಸುರೇಶ್ ಹವಾರೆಯನ್ನು ಭೇಟಿ ಮಾಡಿ ಚರ್ಚಿಸಿದ್ದರು. ಸರ್ಕಾರದ ಕೋರಿಕೆಯನ್ನು ಈಡೇರಿಸಿದ ಶಿರಡಿ ದೇವಾಲಯ ಸರ್ಕಾರಕ್ಕೆ ಬಡ್ಡಿರಹಿತವಾಗಿ 500 ಕೋಟಿ ರೂಪಾಯಿಯನ್ನು ನೀಡಲು ಒಪ್ಪಿಗೆ ಸೂಚಿಸಿದೆ.

    ಈ ಕುರಿತು ಸರ್ಕಾರದ ಅಧಿಕಾರಿಗಳು ಮಾತನಾಡಿ, ಶಿರಡಿ ಸಾಯಿಬಾಬಾ ದೇವಾಲಯ ಗೋದಾವರಿ ಹಾಗೂ ಮರಾಠವಾಡದ ನೀರಾವರಿ ಅಭಿವೃದ್ಧಿ ಕಾರ್ಪೋರೇಷನ್ ಯೋಜನೆಗೆ ಆರ್ಥಿಕ ನೆರವನ್ನು ನೀಡುವ ಬಗ್ಗೆ ಒಪ್ಪಿಕೊಂಡಿದೆ. ದೇವಾಲಯದ ಇತಿಹಾಸದಲ್ಲೇ ಇದೊಂದು ಮಹತ್ವದ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ.

    ಗೋದಾವರಿ ಹಾಗೂ ಮರಾಠವಾಡದ ನೀರಾವರಿ ಯೋಜನೆಗೆ ಒಟ್ಟು 1,200 ಕೋಟಿ ರೂಪಾಯಿಗಳ ಅವಶ್ಯಕತೆಯಿದೆ. ಇದರಲ್ಲಿ 500 ಕೋಟಿ ರೂಪಾಯಿಯನ್ನು ಶಿರಡಿ ದೇವಾಲಯ ಸಮಿತಿ ನೀಡಿದರೆ ಉಳಿದ 700 ಕೋಟಿ ರೂಪಾಯಿಯನ್ನು ಸರ್ಕಾರ ನೀಡಲಿದೆ. ಅಲ್ಲದೇ ಸಾಲ ಮರುಪಾವತಿಗೆ ಶಿರಡಿ ದೇವಾಲಯ ಯಾವುದೇ ವಾಯಿದೆಯನ್ನು ಸಹ ನೀಡಿಲ್ಲ.

    ಮಾಹಿತಿಗಳ ಪ್ರಕಾರ ಶಿರಡಿ ದೇವಾಲಯ ಒಟ್ಟು 2,100 ಕೋಟಿ ರೂ ಹಣವನ್ನು ಠೇವಣಿಯಾಗಿ ಇಟ್ಟಿದೆ. ದೇವಾಲಯಕ್ಕೆ ಪ್ರತಿನಿತ್ಯ 2 ಕೋಟಿ ರೂಪಾಯಿ ಆದಾಯ ಬರುತ್ತದೆ. ವಾರ್ಷಿಕವಾಗಿ 700 ಕೋಟಿ ಆದಾಯ ಗಳಿಸುತ್ತದೆ. ಪ್ರತಿನಿತ್ಯ 70,000 ಭಕ್ತರು ಸಾಯಿಬಾಬಾರ ದರ್ಶನವನ್ನು ಪಡೆದುಕೊಳ್ಳುತ್ತಾರೆ. ವಿಶೇಷ ದಿನಗಳಂದು 3.5 ಲಕ್ಷಕ್ಕೂ ಹೆಚ್ಚಿನ ಭಕ್ತರು ದೇವಾಲಯಕ್ಕೆ ಬರುತ್ತಾರೆ. ದೇಶದಲ್ಲಿಯೇ ಅತ್ಯಂತ ಶ್ರೀಮಂತ ದೇಗುಲಗಳಲ್ಲಿ ಶಿರಡಿ ದೇವಾಲಯವು ಸಹ ಒಂದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯುಪಿಯಲ್ಲಿ ಇಂದಿನಿಂದ ಪಾಲಿಥಿನ್, ಆಗಸ್ಟ್ 1ರಿಂದ ಪ್ಲಾಸ್ಟಿಕ್ ನಿಷೇಧ

    ಯುಪಿಯಲ್ಲಿ ಇಂದಿನಿಂದ ಪಾಲಿಥಿನ್, ಆಗಸ್ಟ್ 1ರಿಂದ ಪ್ಲಾಸ್ಟಿಕ್ ನಿಷೇಧ

    – ಕಾನೂನು ಉಲ್ಲಂಘಿಸಿದವ್ರಿಗೆ 1 ಲಕ್ಷದವರೆಗೆ ದಂಡ!

    ಲಕ್ನೋ: ನಗರಗಳ ದೈನಂದಿನ ಚಟುವಟಿಕೆಗಳಲ್ಲಿ ಹೊಸ ಬದಲಾವಣೆಯನ್ನು ಉತ್ತರ ಪ್ರದೇಶ ಸರ್ಕಾರ ತರಲಿದೆ. ಯೋಗಿ ಆದಿತ್ಯಾನಾಥ್ ಸರ್ಕಾರ ರಾಜ್ಯದಲ್ಲಿ ಪ್ಲಾಸ್ಟಿಕ್ ಹಾಗೂ ಪಾಲಿಥಿನ್ ಬ್ಯಾಗ್‍ಗಳ ಬಳಕೆ ಮೇಲೆ ನಿಷೇಧಾಜ್ಞೆಯನ್ನು ಇಂದಿನಿಂದ ಜಾರಿಗೆ ತರಲಿದೆ.

    ಮಹಾರಾಷ್ಟ್ರದ ಬಿಜೆಪಿ ಸರ್ಕಾರವೂ ಕೂಡ ಪ್ಲಾಸ್ಟಿಕ್ ನಿಷೇಧ ಕಾನೂನನ್ನು ಜಾರಿಗೆ ತರಲು ಯೋಜನೆ ನಡೆಸಿದೆ. ಈ ಕಾನೂನು ಇಂದಿನಿಂದ ಕಾರ್ಯರೂಪಕ್ಕೆ ಬರುವುದಾಗಿ ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ ಡಾ. ಅನೂಪ್ ಚಂದ್ರ ಪಾಂಡೆ ಸ್ಪಷ್ಟಪಡಿಸಿದ್ದಾರೆ.

    ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಪ್ಲಾಸ್ಟಿಕ್ ನಿಷೇಧ ಮಾಡುವ ಕುರಿತು ಮೊದಲೇ ರಾಜ್ಯದ ಜನರಿಗೆ ತಿಳಿಸಿ, ತಮ್ಮ ಸರ್ಕಾರಕ್ಕೆ ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದರು. ಪರಿಸರವನ್ನು ಕಾಪಾಡಲು, ಪ್ಲಾಸ್ಟಿಕ್ ಮುಕ್ತ ರಾಜ್ಯವನ್ನಾಗಿಸಲು ಈ ದೊಡ್ಡ ನಿರ್ಧಾರವನ್ನು ಕೈಗೊಳ್ಳುತ್ತಿದ್ದೇವೆ ಎಂದು ಜುಲೈ 6ರಂದು ನಿಷೇಧಾಜ್ಞೆ ಕುರಿತು ಘೋಷಿಸುವ ಸಂದರ್ಭದಲ್ಲಿ ತಿಳಿಸಿದ್ದರು. ಇದನ್ನೂ ಓದಿ: ಜುಲೈ 15 ರಿಂದ ಉತ್ತರ ಪ್ರದೇಶದಲ್ಲಿ ಪ್ಲಾಸ್ಟಿಕ್ ಬ್ಯಾನ್ : ಯೋಗಿ ಆದಿತ್ಯನಾಥ್

    ರಾಜ್ಯ ಸರ್ಕಾರವು ಪ್ಲಾಸ್ಟಿಕ್ ನಿಷೇಧಾಜ್ಞೆ ಕಾನೂನು ಬಾಹಿರವಾಗಿಸಲು ಶಾಸನವನ್ನು ರೂಪಿಸಲಿದೆ. ಈ ಕಾನೂನನ್ನು ಉಲ್ಲಂಘಿಸಿದವರ ಮೇಲೆ 10,000 ರೂ.ಗಳಿಂದ ಸುಮಾರು 1 ಲಕ್ಷ ರೂ.ಗಳಷ್ಟು ದಂಡವನ್ನು ವಿಧಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

    ಸರ್ಕಾರವು ನಿಷೇಧಾಜ್ಞೆಯನ್ನು ಹಂತ ಹಂತವಾಗಿ ಕಾರ್ಯರೂಪಕ್ಕೆ ತರಲು ಯೋಚಿಸಿದೆ. ಇಂದಿನಿಂದ ಪಾಲಿಥಿನ್ ಚೀಲಗಳ ಬಳಕೆ ನಿಷೇಧಿಸಲಿದೆ. ನಂತರ ಆಗಸ್ಟ್ 1 ರಿಂದ ಪ್ಲಾಸ್ಟಿಕ್ ಹಾಗೂ ಥರ್ಮಾಕೋಲ್ ಕಪ್ಪುಗಳು, ಲೋಟ, ಪ್ಲೇಟ್ ಇತ್ಯಾದಿಗಳನ್ನು ನಿಷೇಧಿಸಲು ಮುಂದಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದರು.

  • ಮಹಾರಾಷ್ಟ್ರ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡೋರಿಗೆ ಗುಡ್ ನ್ಯೂಸ್ – ಕರ್ನಾಟಕದಲ್ಲೂ ಈ ನಿಯಮ ಜಾರಿಯಾಗುತ್ತಾ?

    ಮಹಾರಾಷ್ಟ್ರ ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡೋರಿಗೆ ಗುಡ್ ನ್ಯೂಸ್ – ಕರ್ನಾಟಕದಲ್ಲೂ ಈ ನಿಯಮ ಜಾರಿಯಾಗುತ್ತಾ?

    ಮುಂಬೈ: ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡುವವರು ಹೊರಗಿನ ಆಹಾರವನ್ನು ಕೊಂಡೊಯ್ಯುವಂತಿಲ್ಲ ಎನ್ನುವ ನಿಯಮಕ್ಕೆ ಮಹಾರಾಷ್ಟ್ರ ಸರ್ಕಾರ ಅಂತ್ಯ ಹಾಡಿದೆ.

    ಮಹಾರಾಷ್ಟ್ರದ ಸಿನಿಮಾ ಹಾಲ್, ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಗಳಲ್ಲಿ ಜನರು ಹೊರಗಿನ ಆಹಾರವನ್ನು ಕೊಂಡೊಯ್ಯಬಹುದು ಎಂದು ಸರ್ಕಾರ ಆದೇಶ ಹೊರಡಿಸಿದೆ. ಸದ್ಯ ಈ ಕುರಿತ ನಿಯಮಗಳನ್ನು ಶೀಘ್ರ ರಚಿಸುವುದಾಗಿ ತಿಳಿಸಿರುವ ಸರ್ಕಾರ ಈ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.

    ಸದ್ಯ ಸರ್ಕಾರದ ನಿರ್ಧಾರ ಕುರಿತು ಮಾಧ್ಯಮವೊಂದು ವರದಿ ಮಾಡಿದ್ದು, ವರದಿ ಅನ್ವಯ ಮಹಾರಾಷ್ಟ್ರದಲ್ಲಿ ನಡೆಯುತ್ತಿದ್ದ ಮೇಲ್ಮನೆ ಶಾಸಕಾಂಗ ಅಧಿವೇಶನದ ಸಭೆಯಲ್ಲಿ ಎನ್‍ಸಿಪಿ ವಿರೋಧ ಪಕ್ಷದ ನಾಯಕ ಧನಂಜಯ್ ಮುಂಡೆ ಪ್ರಶ್ನೆಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ರವಿಂದ್ರ ಚೌಹಾಣ್ ಶುಕ್ರವಾರದಂದು ಘೋಷಿಸಿದ್ದಾರೆ. ಅಲ್ಲದೇ ಒಂದೇ ತರಹದ ಆಹಾರಗಳಿಗೆ ಬೇರೆ ಬೇರೆ ಬೆಲೆಯನ್ನು ಮಲ್ಟಿಪ್ಲೆಕ್ಸ್ ಅಥವಾ ಹೊರಗಡೆ ಮಾರಾಟ ಮಾಡುವಂತಿಲ್ಲ ಎಂದು ಸಚಿವರು ತಿಳಿಸಿದ್ದಾಗಿ ವರದಿಯಲ್ಲಿ ಉಲ್ಲೇಖಿಸಿದೆ.

    ಕಳೆದ ತಿಂಗಳು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‍ಎಸ್) ಕಾರ್ಯಕರ್ತರು ಪುಣೆಯ ಚಿತ್ರಮಂದಿರದಲ್ಲಿ ಆಹಾರಗಳನ್ನು ದುಬಾರಿ ದರದಲ್ಲಿ ಮಾರಾಟ ನಡೆಸಲಾಗುತ್ತಿದೆ ಎಂದು ಚಿತ್ರಮಂದಿರದ ಮ್ಯಾನೇಜರ್‍ನನ್ನು ಥಳಿಸಿದ್ದರು. ಘಟನೆ ಕುರಿತು ಅಂದು ವಿವರಣೆ ನೀಡಿದ್ದ ಎಂಎನ್‍ಎಸ್ ಕಾರ್ಯಕರ್ತ ಕಿಶೋರ್ ಶಿಂಧೆ, ನಾವು ಚಿತ್ರಮಂದಿರದ ಮ್ಯಾನೇಜರ್ ಗೆ ಪತ್ರಿಕಾ ವರದಿಗಳನ್ನು ಓದಲು ಹೇಳಿದ್ದೆವು, ಆದರೆ ಆತ ತನಗೆ ಮರಾಠಿ ಓದಲು ಬರುವುದಿಲ್ಲ ಎಂದು ಹೇಳಿದ್ದ. ಅದ್ದರಿಂದ ಆತನೊಂದಿಗೆ ಎಂಎನ್‍ಎಸ್ ಸ್ಟೈಲ್ ನಲ್ಲಿ ವ್ಯವಹರಿಸಬೇಕಾಯ್ತು ಎಂದು ತಿಳಿಸಿದ್ದರು.

    ಈ ಘಟನೆಯ ಬಳಿಕ ಮಹಾರಾಷ್ಟ್ರ ಮಲ್ಟಿಪ್ಲೆಕ್ಸ್ ಮಾಲೀಕ ಸಂಘ ರಾಜಕೀಯ ಪಕ್ಷದ ಕಾರ್ಯಕರ್ತರು ಮಾಲೀಕರ ವಿರುದ್ಧ ನಡೆಸುತ್ತಿರುವ ದಾಳಿ ವಿರುದ್ಧ ತುರ್ತು ವಿಚಾರಣೆ ನಡೆಸಲು ಬಾಂಬೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ ಈ ಅರ್ಜಿಯನ್ನು ವಿಚಾರಣೆ ನಡೆಸಲು ನ್ಯಾಯಾಲಯ ನಿರಾಕರಿಸಿತ್ತು. ನ್ಯಾಯಾಲಯದ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ರಂಜಿತ್ ಮೋರೆ ಹಾಗೂ ಅನುಜಾ ಪ್ರಭುದೇಸಾಯಿ ಕೂಡ ಈ ವಿಷಯದ ಕುರಿತು ಯಾವುದೇ ನಿರ್ದೇಶನಗಳನ್ನು ನೀಡಲು ನಿರಾಕರಿಸಿದ್ದರು. ಅಲ್ಲದೇ ಯಾವುದೇ ದುಷ್ಕರ್ಮಿಗಳು ರೀತಿಯ ಹಿಂಸಾಚಾರ ನಡೆಸಿದರೆ ಮಾಲೀಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಬಹುದು ಎಂದು ಸೂಚಿಸಿದ್ದರು.

    ಈ ಘಟನೆಯ ಬೆನ್ನಲ್ಲೇ ಸದ್ಯ ಮಹಾರಾಷ್ಟ್ರ ಸರ್ಕಾರ ಮಲ್ಟಿಪ್ಲೆಕ್ಸ್ ಗಳಲ್ಲಿ ಹೊರಗಿನ ಆಹಾರ ತೆಗೆದುಕೊಂಡು ಹೋಗಲು ಅನುಮತಿ ನೀಡಿದೆ. ಅಲ್ಲದೇ ಈ ಕುರಿತು ನಿಯಮಾವಳಿ ರೂಪಿಸಲು ಸಿದ್ಧತೆ ನಡೆಸಿದೆ. ಸದ್ಯ ಮಹಾರಾಷ್ಟ್ರ ಸರ್ಕಾರದಂತೆ ಕರ್ನಾಟಕದಲ್ಲೂ ಸಿನಿಮಾ ಮಂದಿರ ಹಾಗೂ ಮಲ್ಟಿಪ್ಲೆಕ್ಸ್ ಗಳಲ್ಲಿ ಹೊರಗಿನ ಆಹಾರ ತೆಗೆದುಕೊಂಡು ಹೋಗಲು ಅನುಮತಿ ಲಭ್ಯವಾಗುತ್ತಾ ಎಂಬುವುದನ್ನು ಕಾದು ನೋಡಬೇಕಿದೆ.