Tag: maharashtra political

  • ಬಾಳಾಸಾಹೇಬ್‌ ಮೇಲಿನ ಗೌರವಕ್ಕೆ ಆದಿತ್ಯ ಠಾಕ್ರೆ ವಿರುದ್ಧ ಕೈಮಕೈಗೊಂಡಿಲ್ಲ: ಶಿಂಧೆ ಬಣ

    ಬಾಳಾಸಾಹೇಬ್‌ ಮೇಲಿನ ಗೌರವಕ್ಕೆ ಆದಿತ್ಯ ಠಾಕ್ರೆ ವಿರುದ್ಧ ಕೈಮಕೈಗೊಂಡಿಲ್ಲ: ಶಿಂಧೆ ಬಣ

    ಮುಂಬೈ: ಶಿವಸೇನಾ ಸ್ಥಾಪಕ ಬಾಳಾಸಾಹೇಬ್‌ ಅವರ ಮೇಲಿನ ಗೌರವದಿಂದಾಗಿ ಆದಿತ್ಯ ಠಾಕ್ರೆ ಅವರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಶಿವಸೇನಾದ ಏಕನಾಥ್‌ ಶಿಂಧೆ ಬಣ ತಿಳಿಸಿದೆ.

    ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಪರೀಕ್ಷೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣ ಗೆಲುವು ಸಾಧಿಸಿದ್ದು, ಸರ್ಕಾರವನ್ನು ಬೆಂಬಲಿಸಲು ವಿಪ್ ಧಿಕ್ಕರಿಸಿದ ಉದ್ಧವ್ ಠಾಕ್ರೆ ಬಣದ 16 ಶಾಸಕರನ್ನು ಅಮಾನತುಗೊಳಿಸುವಂತೆ ನೂತನವಾಗಿ ಆಯ್ಕೆಯಾದ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಮನವಿ ಸಲ್ಲಿಸಿದೆ. ಇದನ್ನೂ ಓದಿ: ಮಹಾ ಹೈಡ್ರಾಮಾ ಅಂತ್ಯ – ವಿಶ್ವಾಸ ಪರೀಕ್ಷೆ ಗೆದ್ದ ಏಕನಾಥ್‌ ಶಿಂಧೆ

    ಆದಿತ್ಯ ಠಾಕ್ರೆ ಹೊರತುಪಡಿಸಿ ನಮ್ಮ ವಿಪ್ ಧಿಕ್ಕರಿಸಿದಸಿದವರನ್ನು ಅನರ್ಹಗೊಳಿಸುವಂತೆ ನಾವು ನೋಟಿಸ್ ನೀಡಿದ್ದೇವೆ. ಬಾಳಾಸಾಹೇಬ್ ಠಾಕ್ರೆ ಅವರ ಮೇಲಿನ ಗೌರವದ ಕಾರಣದಿಂದ ನಾವು ಆದಿತ್ಯ ಠಾಕ್ರೆ ಹೆಸರನ್ನು ನೀಡಿಲ್ಲ ಎಂದು ಶಿಂಧೆ ಬಣದ ಶಾಸಕ ಭರತ್‌ ಗೊಗವಾಲೆ ತಿಳಿಸಿದ್ದಾರೆ.

    ಪಕ್ಷದ ಮೂರನೇ ಎರಡರಷ್ಟು ಶಾಸಕರ ಬೆಂಬಲದ ಆಧಾರದ ಮೇಲೆ ಶಿಂಧೆ ಬಣ ನಮ್ಮದು ನಿಜವಾದ ಶಿವಸೇನಾ ಎಂದು ಹೇಳಿಕೊಂಡಿದೆ. ಶಿವಸೇನಾದ 40 ಶಾಸಕರು ಬಂಡಾಯವೆದ್ದಿದ್ದ ಶಿಂಧೆ ಬಣವನ್ನು ಸೇರಿದ್ದಾರೆ. ಸೇನಾ ಬಂಡಾಯ ಶಾಸಕರೂ ಸೇರಿ ಶಿಂಧೆ ಬಣವನ್ನು ಒಟ್ಟು 55 ಶಾಸಕರು ಸೇರಿದ್ದರು. ಇದನ್ನೂ ಓದಿ: ಪಾಪುವಿನಂತೆ ರಾಹುಲ್ ಗಾಂಧಿಯನ್ನು ಮುದ್ದು ಮಾಡಿದ ಅಜ್ಜಿ

    ನಮ್ಮ ನಿಲುವು ಬಾಳಾಸಾಹೇಬ್ ಠಾಕ್ರೆಯವರ ಪರಂಪರೆಗೆ ಗೌರವ ಸಲ್ಲಿಸಿದೆ. ಉದ್ಧವ್ ಠಾಕ್ರೆ ಅವರು ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ಎನ್‌ಸಿಪಿಯೊಂದಿಗೆ ಮೈತ್ರಿ ಮಾಡಿಕೊಂಡು ಪಕ್ಷವನ್ನು ದುರ್ಬಲಗೊಳಿಸಿದ್ದಾರೆ ಎಂದು ಶಿಂಧೆ ಬಣದವರು ವಾದಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 5 ಸ್ಟಾರ್‌ ಹೋಟೆಲ್‌ನಲ್ಲಿ ಬಂಡಾಯ ಶಾಸಕರು ಫುಲ್‌ ಬಿಂದಾಸ್ – ದಿನದ ಖರ್ಚು ಎಷ್ಟು ಗೊತ್ತಾ?‌

    5 ಸ್ಟಾರ್‌ ಹೋಟೆಲ್‌ನಲ್ಲಿ ಬಂಡಾಯ ಶಾಸಕರು ಫುಲ್‌ ಬಿಂದಾಸ್ – ದಿನದ ಖರ್ಚು ಎಷ್ಟು ಗೊತ್ತಾ?‌

    ದಿಸ್ಪುರ: ಇತ್ತ ಮಹಾರಾಷ್ಟ್ರ ಸರ್ಕಾರಕ್ಕೆ ಬಿಕ್ಕಟ್ಟು ಎದುರಾಗಿ ʼಮಹಾವಿಕಾಸ್‌ ಅಘಡಿʼ ಮೈತ್ರಿಕೂಟದ ನಾಯಕರು ತಲೆಕೆಡಿಸಿಕೊಂಡಿದ್ದರೆ, ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕಿಸಿ ಅತ್ತ ಬಂಡಾಯ ಶಾಸಕರು 5 ಸ್ಟಾರ್‌ ಹೋಟೆಲ್‌ನಲ್ಲಿ ಎಂಜಾಯ್‌ ಮಾಡುತ್ತಿದ್ದಾರೆ.

    ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯ ಎದ್ದಿರುವ ಶಿವಸೇನಾ ಶಾಸಕರಿಗೆ ಅಸ್ಸಾಂನ 5 ಸ್ಟಾರ್‌ ಹೋಟೆಲ್‌ನಲ್ಲಿ ರಾಜಾತಿಥ್ಯವೇ ನಡೆಯುತ್ತಿದೆ. ದುಬಾರಿ ಹೋಟೆಲ್‌ನಲ್ಲಿ ಶಾಸಕರನ್ನು ಇರಿಸಿ ವಿಶೇಷ ಆತಿಥ್ಯ ನೀಡಲಾಗುತ್ತಿದೆ. ಈ ಹೋಟೆಲ್‌ನಲ್ಲಿ ಎಲ್ಲವೂ ದುಬಾರಿ. ರೂಂ ವೆಚ್ಚ ಹಾಗೂ ಇತರೆ ಸೌಲಭ್ಯಗಳ ಬೆಲೆ ಕೇಳಿದರೆ ಅಚ್ಚರಿ ಪಡುವಂತಿದೆ. ಇದನ್ನೂ ಓದಿ: ಅಸ್ಸಾಂನಲ್ಲಿರುವ ಶಿವಸೇನೆ ರೆಬಲ್ ಶಾಸಕರನ್ನು ಆತಿಥ್ಯಕ್ಕೆ ಕರೆದ ಮಮತಾ ಬ್ಯಾನರ್ಜಿ

    ಬಂಡಾಯ ಶಾಸಕರು ತಂಗಿರುವ ಗುವಾಹಟಿಯ ಪಂಚತಾರಾ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ. 7 ದಿನಗಳ ಮಟ್ಟಿಗೆ 70 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಏಕನಾಥ್ ಶಿಂಧೆ ನೇತೃತ್ವದ ಶಾಸಕರು ಸೋಮವಾರ ಬಿಜೆಪಿ ಆಡಳಿತವಿರುವ ಗುಜರಾತ್‌ನ ಸೂರತ್‌ನಲ್ಲಿರುವ ಹೊಟೇಲ್‌ನಲ್ಲಿದ್ದರು. ಅವರು ಬುಧವಾರ ಮತ್ತೊಂದು ಬಿಜೆಪಿ ಆಡಳಿತದ ರಾಜ್ಯವಾದ ಅಸ್ಸಾಂನ ಗುವಾಹಟಿಗೆ ಹಾರಿದರು. ಈಗ ಅಲ್ಲಿನ ಅತಿ ದುಬಾರಿ ಪಂಚತಾರಾ ಹೋಟೆಲ್‌ನಲ್ಲಿ ಹಾಯಾಗಿದ್ದಾರೆ.

    ತಂಗಲು ವೆಚ್ಚ ಎಷ್ಟು?
    ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿನ ಕೊಠಡಿಗಳಿಗೆ ಏಳು ದಿನಗಳ ಸುಂಕ 56 ಲಕ್ಷ ರೂ. ಎಂದು ಹೋಟೆಲ್ ಮತ್ತು ಸ್ಥಳೀಯ ರಾಜಕಾರಣಿಗಳ ಮೂಲಗಳು ತಿಳಿಸಿವೆ. ಆಹಾರ ಮತ್ತು ಇತರ ಸೇವೆಗಳ ದೈನಂದಿನ ಅಂದಾಜು ವೆಚ್ಚ ದಿನಕ್ಕೆ 8 ಲಕ್ಷ ರೂ. ಇದೆ.

    ಹೋಟೆಲ್‌ನಲ್ಲಿ ಒಟ್ಟು 196 ಕೊಠಡಿಗಳಿವೆ. ಶಾಸಕರು ಮತ್ತು ಅವರ ತಂಡಗಳಿಗಾಗಿ ಕಾಯ್ದಿರಿಸಿದ 70 ಕೊಠಡಿಗಳನ್ನು ಹೊರತುಪಡಿಸಿ, ಈಗಾಗಲೇ ಕಾರ್ಪೊರೇಟ್ ಡೀಲ್‌ಗಳಲ್ಲಿ ಕಾಯ್ದಿರಿಸಿದವರನ್ನು ಬಿಟ್ಟು ಹೊಸ ಬುಕಿಂಗ್‌ಗಳನ್ನು ಆಡಳಿತ ಮಂಡಳಿ ಸ್ವೀಕರಿಸುತ್ತಿಲ್ಲ. ಅಲ್ಲದೆ ಔತಣಕೂಟವನ್ನು ಸಹ ಮುಚ್ಚಲಾಗಿದೆ. ಆದ್ದರಿಂದ ಹೋಟೆಲ್‌ನಲ್ಲಿ ಉಳಿದುಕೊಂಡಿರುವವರನ್ನು ಹೊರತುಪಡಿಸಿ ರೆಸ್ಟೋರೆಂಟ್ ಕೂಡ ಮುಚ್ಚಲ್ಪಟ್ಟಿದೆ. ಇದನ್ನೂ ಓದಿ: 24 ಗಂಟೆಯೊಗಳಗೆ ವಾಪಸ್‌ ಬಂದ್ರೆ, ಶಿವಸೇನೆ ಮೈತ್ರಿ ಬಿಡಲು ಸಿದ್ಧ: ಸಂಜಯ್‌ ರಾವತ್

    ಕಾಂಗ್ರೆಸ್‌ ಹಾಗೂ ಎನ್‌ಸಿಪಿಯೊಂದಿಗೆ ಮೈತ್ರಿಕೂಟವನ್ನು ಶಿವಸೇನಾ ತ್ಯಜಿಸಬೇಕು ಎಂದು ಒತ್ತಾಯಿಸಿ ಏಕನಾಥ್‌ ಶಿಂಧೆ ನೇತೃತ್ವದಲ್ಲಿ 40 ಶಾಸಕರು ಪಂಚತಾರಾ ಹೋಟೆಲ್‌ನಲ್ಲಿ ಬೀಡುಬಿಟ್ಟಿದ್ದಾರೆ. ಅವರಿಗೆ ಬಿಜೆಪಿ ನಾಯಕರು ಎಲ್ಲಾ ರೀತಿಯ ಸೌಕರ್ಯ ಕಲ್ಪಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಶಿವಸೇನಾ ಶಾಸಕರು ನೇರವಾಗಿ ಕೇಳಿದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದಿದ್ದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಈಗಾಗಲೇ ಸಿಎಂ ಅಧಿಕೃತ ನಿವಾಸವನ್ನು ತೊರೆದಿದ್ದಾರೆ. ಇದರ ಬೆನ್ನಲ್ಲೇ, ಬಂಡಾಯ ಶಾಸಕರು 24 ಗಂಟೆಯೊಳಗೆ ವಾಪಸಾದರೆ ಮೈತ್ರಿಕೂಟವನ್ನು ಬಿಡಲಾಗುವುದು ಎಂದು ಸಂಜಯ್‌ ರಾವತ್‌ ಭರವಸೆ ನೀಡಿದ್ದಾರೆ. ರಾವತ್‌ ಹೇಳಿಕೆಯನ್ನು ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ತೀವ್ರವಾಗಿ ಖಂಡಿಸಿವೆ.

    Live Tv

  • 2.5 ವರ್ಷಗಳಿಂದ ನಿಮ್ಮ ಮನೆಗೆ ನಮಗೆ ಪ್ರವೇಶವೇ ಇರಲಿಲ್ಲ, ಗೇಟ್‌ ಬಳಿ ಕಾಯಬೇಕಿತ್ತು: ಠಾಕ್ರೆಗೆ ಬಂಡಾಯ ಶಾಸಕನ ಪತ್ರ

    2.5 ವರ್ಷಗಳಿಂದ ನಿಮ್ಮ ಮನೆಗೆ ನಮಗೆ ಪ್ರವೇಶವೇ ಇರಲಿಲ್ಲ, ಗೇಟ್‌ ಬಳಿ ಕಾಯಬೇಕಿತ್ತು: ಠಾಕ್ರೆಗೆ ಬಂಡಾಯ ಶಾಸಕನ ಪತ್ರ

    ಮುಂಬೈ: ಕಳೆದ ಎರಡೂವರೆ ವರ್ಷಗಳಿಂದ ನಿಮ್ಮ ಮನೆಗೆ ನಮಗೆ ಪ್ರವೇಶವೇ ಇರಲಿಲ್ಲ ಎಂದು ಉದ್ಧವ್‌ ಠಾಕ್ರೆಗೆ ಬಂಡಾಯ ಶಾಸಕರೊಬ್ಬರು ಪತ್ರ ಬರೆದು ಕಿಡಿಕಾರಿದ್ದಾರೆ.

    ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದ ನಂತರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಪಕ್ಷದ ಶಾಸಕರನ್ನುದ್ದೇಶಿಸಿ ಭಾವನಾತ್ಮಕವಾಗಿ ಮಾತನಾಡಿದ್ದರು. ನಮ್ಮ ಶಾಸಕರು ಬಯಸಿದರೆ ರಾಜೀನಾಮೆ ಕೊಡಲು ಸಿದ್ಧ. ಏನೇ ಇದ್ದರೂ ನನ್ನ ಎದುರಿಗೆ ಬಂದು ಹೇಳಲಿ ಕೇಳುತ್ತೇನೆ ಠಾಕ್ರೆ ಮಾತನಾಡಿದ್ದರು. ಇದನ್ನೂ ಓದಿ: ಶಾಸಕರು ಆಯ್ತು ಈಗ ಶಿವಸೇನೆ ಸಂಸದರಿಂದಲೂ ಬಂಡಾಯ

    ಇದಕ್ಕೆ ಬಂಡಾಯ ಶಾಸಕ ಸಂಜಯ್‌ ಶಿರ್ಸಾತ್‌, ನಿನ್ನೆ ʻವರ್ಷಾʼದಲ್ಲಿ (ಸಿಎಂ ಅಧಿಕೃತ ನಿವಾಸ) ಜನರನ್ನು ನೋಡಿ ಸಂತೋಷಪಟ್ಟೆವು. ಎರಡೂವರೆ ವರ್ಷಗಳಿಂದ ನಮಗೆ ಮುಖ್ಯಮಂತ್ರಿ ಮನೆಗೆ ಪ್ರವೇಶ ನಿರಾಕರಿಸಲಾಗಿತ್ತು. ನಾವು ಅವರ ಗೇಟ್‌ಗಳ ಹೊರಗೆ ಗಂಟೆಗಟ್ಟಲೆ ಕಾಯುವಂತೆ ಮಾಡಲಾಗಿತ್ತು ಎಂದು ಪತ್ರದಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

    ಏಕನಾಥ್‌ ಶಿಂಧೆ ಅವರ ಮನೆ ಬಾಗಿಲು ನಮಗಾಗಿ ಯಾವಾಗಲೂ ತೆರೆದಿರುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಕೇಸ್ ದಾಖಲು

    ಕಷ್ಟದ ಸಂದರ್ಭದಲ್ಲೂ ಸದಾ ತೆರೆದಿರುವ ಶಿಂಧೆಯ ಮನೆ ಹಾಗೆಯೇ ಇರುತ್ತದೆ ಎಂಬ ನಂಬಿಕೆಯೊಂದಿಗೆ ಇಂದು ನಾವಿದ್ದೇವೆ. ನಿನ್ನೆ ನೀವು ಹೇಳಿದ ಮಾತುಗಳು ನಮ್ಮನ್ನು ಭಾವುಕರನ್ನಾಗಿಸಿದೆ. ಆದರೆ ಮೂಲಭೂತ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ. ನನ್ನ ಭಾವನೆಗಳನ್ನು ನಿಮಗೆ ತಿಳಿಸಲು ನಾನು ಈ ಭಾವನಾತ್ಮಕ ಪತ್ರವನ್ನು ಬರೆಯಬೇಕಾಯಿತು ಎಂದು ಶಿರ್ಸಾತ್‌ ಹೇಳಿದ್ದಾರೆ.

    Live Tv