Tag: Mahatma Gandhi

  • ಬೆಂಗ್ಳೂರಲ್ಲಿ ಗಾಂಧೀಜಿ ಪ್ರತಿಮೆ ಮುಂದೆಯೇ ಬಾರ್ ಓಪನ್‍ಗೆ ಸಿದ್ಧತೆ

    ಬೆಂಗ್ಳೂರಲ್ಲಿ ಗಾಂಧೀಜಿ ಪ್ರತಿಮೆ ಮುಂದೆಯೇ ಬಾರ್ ಓಪನ್‍ಗೆ ಸಿದ್ಧತೆ

    ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಕನಸು ಮದ್ಯಪಾನ ಮುಕ್ತ ಭಾರತ. ಮದ್ಯಪಾನ ವಿರೋಧಿ ಚಳುವಳಿ ಮಾಡಿ ಜಾಗೃತಿ ಮೂಡಿಸಿದಂತಹ ಮಹಾನಾಯಕ. ಆದರೆ ಈಗ ರಾಜಧಾನಿ ಬೆಂಗಳೂರಿನಲ್ಲಿ ಗಾಂಧೀಜಿಯ ಬೃಹತ್ ಪ್ರತಿಮೆ ಮತ್ತು ಚರ್ಚ್ ಮುಂದೆಯೇ ಅತಿ ದೊಡ್ಡ ಬಾರ್ ಓಪನ್ ಆಗಲು ಸಿದ್ಧತೆ ನಡೆದಿದೆ.

    ಬೆಂಗಳೂರಿನ ಎಂಜಿ ರಸ್ತೆಯ ಜಂಕ್ಷನ್ ಬಳಿಯ ಮಹಾತ್ಮ ಗಾಂಧಿ ಉದ್ಯಾನವನದಲ್ಲಿ ಬೃಹತ್ ಗಾಂಧೀಜಿಯವರ ಪ್ರತಿಮೆ ಇದ್ದು ಅದರ ಮುಂದೆಯೇ ಟಾನಿಕ್ ಹೆಸರಿನಲ್ಲಿ ಬೃಹತ್ ಬಾರ್ ಶಾಪ್ ಓಪನ್ ಆಗಲಿದೆ.

    ಅಬಕಾರಿ ನಿಯಮದ ಪ್ರಕಾರ 100 ಮೀ. ಅಂತರದಲ್ಲಿ ಧಾರ್ಮಿಕ ಸ್ಥಳ, ಶಾಲೆಗಳು ಇದ್ದರೆ ಬಾರ್ ತೆರೆಯಲು ಅನುಮತಿ ಇಲ್ಲ. ಈ ನಿಯಮಗಳು ಇದ್ದರೂ ಬಾರ್ ತೆರೆಯಲು ಅನುಮತಿಯನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಎದ್ದಿದೆ.

    ಏಷ್ಯಾದ ದೊಡ್ಡ ಬಾರ್ ಎಂದು ಹೇಳಲಾಗ್ತಿದ್ದು ಈ ಬಾರಿನ ಸಮೀಪವೇ ಚರ್ಚ್ ಮತ್ತು ಪೊಲೀಸ್ ಸ್ಟೇಷನ್ ಇದ್ದರೂ ಕೂಡ ಅನುಮತಿ ನೀಡಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಅನಿತಾ ರಾಜ್ ನೇತೃತ್ವದ ಬಾರ್ ಎನ್ನುವ ಮಾಹಿತಿ ಲಭ್ಯವಾಗಿದ್ದು, ಗಾಂಧೀಜಿ ಪ್ರತಿಮೆ ಮುಂದೆಯೇ ಬಾರ್ ಓಪನ್ ಬಗ್ಗೆ ಪ್ರತಿಕ್ರಿಯಿಸಿಲ್ಲ. 120 ಮೀಟರ್ ಅಂತರದಲ್ಲಿದೆ ಚರ್ಚ್ ಬಿಲ್ಡಿಂಗ್ ಇಲ್ಲಿದೆ ಎಂದು ಸಿಬ್ಬಂದಿಯಿಂದ ಹೇಳಿ ಕಳುಹಿಸುತ್ತಿದ್ದಾರೆ.

    ಬಾರ್ ನಿರ್ಮಾಣ ಅಬಕಾರಿ ಇಲಾಖೆಗೆ ವಿರುದ್ಧವಾಗಿದ್ದು ಬೇರೆ ಕಡೆ ಬಾರ್ ಓಪನ್ ಮಾಡಿಕೊಳ್ಳಲಿ. ಆದರೆ ಗಾಂಧೀಜಿ ಪ್ರತಿಮೆ ಮುಂದೆ ಮಾತ್ರ ಬೇಡ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

  • ಸ್ವಚ್ಛ ಭಾರತ್ ಶೌಚಾಲಯದ ಟೈಲ್ಸ್ ಮೇಲೆ ಮಹಾತ್ಮ ಗಾಂಧಿ, ಅಶೋಕ ಚಕ್ರ

    ಸ್ವಚ್ಛ ಭಾರತ್ ಶೌಚಾಲಯದ ಟೈಲ್ಸ್ ಮೇಲೆ ಮಹಾತ್ಮ ಗಾಂಧಿ, ಅಶೋಕ ಚಕ್ರ

    ನವದೆಹಲಿ: ಗಾಂಧಿ ಜಯಂತಿಯಂದು ಆರಂಭಗೊಂಡಿದ್ದ ಸ್ವಚ್ಛಭಾರತ ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಶೌಚಾಲಯದಲ್ಲಿ ಗಾಂಧೀಜಿ ಮತ್ತು ಅಶೋಕ ಚಕ್ರದ ಚಿತ್ರಗಳುಳ್ಳ ಟೈಲ್ಸ್ ಗಳನ್ನು ಬಳಸಿ ಅವಮಾನ ಮಾಡಲಾಗಿದೆ.

    ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ಸ್ವಚ್ಛ ಭಾರತ ಯೋಜನೆಯ ಅಭಿಯಾನದ ಅಡಿ ನಿರ್ಮಿಸಲಾದ ಶೌಚಾಲಯದ ಬಗ್ಗೆ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದು, ಪೂಜ್ಯ ಗಾಂಧೀಜಿ ಅವರ ಭಾವಚಿತ್ರವುಳ್ಳ ಟೈಲ್ಸ್ ಗಳನ್ನು ಬಳಸಿ ಶೌಚಾಲಯ ನಿರ್ಮಿಸಿರುವುದು ತಪ್ಪು. ಈ ರೀತಿ ಮಾಡಿ ರಾಷ್ಟ್ರಪಿತ ಹಾಗೂ ಆಶೋಕ ಚಕ್ರಕ್ಕೆ ಅವಮಾನ ಮಾಡಲಾಗಿದೆ ಎಂದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಸಿಡಿದೆದ್ದಿದ್ದಾರೆ.

    ಸದ್ಯ ಈ ಶೌಚಾಲಯದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೆ ಈ ಬಗ್ಗೆ ಎಲ್ಲೆಡೆ ಬಾರೀ ವಿರೋಧ ವ್ಯಕ್ತವಾಗುತ್ತಿದೆ.

    ದಿಬಾಯ್ ತಹಸೀಲ್‍ನ ಇಚ್ಚವರಿ ಗ್ರಾಮದಲ್ಲಿ `ಸ್ವಚ್ಛ ಭಾರತ’ ಅಭಿಯಾನದಡಿ ಸುಮಾರು 508 ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇವುಗಳಲ್ಲಿ 13 ಶೌಚಾಲಯಗಳಲ್ಲಿ ಗಾಂಧೀಜಿ ಹಾಗೂ ಅಶೋಕ ಚಕ್ರ ಚಿತ್ರವಿರುವ ಟೈಲ್ಸ್ ಗಳನ್ನು ನಿರ್ಮಾಣಕ್ಕೆ ಬಳಸಲಾಗಿದೆ. ಈಗಾಗಲೇ ಇದಕ್ಕೆ ಕಾರಣರಾದ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಗ್ರಾಮದ ಸರಪಂಚ್ ವಿರುದ್ಧವೂ ಕ್ರಮಕೈಗೊಂಡಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಅಧಿಕಾರಿ ಅಮರ್ಜಿತ್ ಸಿಂಗ್ ಹೇಳಿದ್ದಾರೆ.

    ವಾರದ ಹಿಂದೆಯೇ ಶೌಚಾಲಯಗಳನ್ನು ನಿರ್ಮಿಸಲು ಈ ಟೈಲ್ಸ್ ಗಳನ್ನು ಬಳಸಲಾಗಿದೆ. ಹಾಗೆಯೇ ಇದನ್ನು ಸ್ಥಳೀಯ ಮಾರುಕಟ್ಟೆಯಿಂದ ಖರೀದಿಸಲಾಗಿತ್ತು. ಆದರೆ ಈ ಬಗ್ಗೆ ನಮಗೆ ತಿಳಿಯುತ್ತಿದ್ದಂತೆ ನಾವು ಕ್ರಮ ಕೈಗೊಂಡಿದ್ದೇವೆ ಎಂದು ಜಿಲ್ಲಾಡಳಿತ ತಿಳಿಸಿದೆ.

    ಏಪ್ರಿಲ್‍ನಲ್ಲಿ ಜಟ್ವಾಡ ಗ್ರಾಮದಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ನಿರ್ಮಿಸಲಾಗಿದ್ದ ಶೌಚಾಲಯಗಳಲ್ಲಿ ನೀರಿನ ವ್ಯವಸ್ಥೆ ಇಲ್ಲದೆ ಜನರು ಪರದಾಡುವಂತಾಗಿತ್ತು. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಜನರು ಮತ್ತೆ ಶೌಚಕ್ಕಾಗಿ ಬಯಲುಗಳಿಗೆ ಹೋಗಲು ಶುರುಮಾಡಿದ್ದಾರೆ.

    ಈ ಪ್ರದೇಶಗಳಲ್ಲಿ ವಾಸಿಸುವವರು ದಿನ ಕೂಲಿ ಕಾರ್ಮಿಕರು. ಹೀಗಾಗಿ ಪ್ರತಿನಿತ್ಯ ಈ ಶೌಚಾಲಯಗಳಿಗೆ ಹಣ ನೀಡಿ ಹೋಗಲು ನಮಗೆ ಸಾಧ್ಯವಿಲ್ಲ, ಅದಕ್ಕೆ ಬಯಲುಗಳಿಗೆ ಹೋಗುತ್ತೇವೆ ಎಂದು ಜನರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

  • ಗೋಡ್ಸೆಯಿಂದ ಗಾಂಧೀಜಿ ದೇಹ ಹತ್ಯೆ, ಪ್ರಜ್ಞಾಸಿಂಗ್‍ರಿಂದ ಆತ್ಮದ ಕೊಲೆ: ಕೈಲಾಶ್ ಸತ್ಯಾರ್ಥಿ

    ಗೋಡ್ಸೆಯಿಂದ ಗಾಂಧೀಜಿ ದೇಹ ಹತ್ಯೆ, ಪ್ರಜ್ಞಾಸಿಂಗ್‍ರಿಂದ ಆತ್ಮದ ಕೊಲೆ: ಕೈಲಾಶ್ ಸತ್ಯಾರ್ಥಿ

    ನವದೆಹಲಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ  ಕೈಲಾಶ್ ಸತ್ಯಾರ್ಥಿ ಅವರು ಕೂಡ ಅಸಮಾಧಾನ ಹೊರ ಹಾಕಿದ್ದಾರೆ.

    ಟ್ವೀಟ್ ಮೂಲಕ ಕಿಡಿಕಾರಿರುವ ಕೈಲಾಶ್ ಸತ್ಯಾರ್ಥಿ ಅವರು, ನಾಥೂರಾಮ್ ಗೋಡ್ಸೆ ಮಹಾತ್ಮ ಗಾಂಧಿಯವರ ದೇಹವನ್ನು ಹತ್ಯೆ ಮಾಡಿದ. ಆದರೆ ಸಾಧ್ವಿ ಪ್ರಜ್ಞಾಸಿಂಗ್ ಅವರಂತಹ ವ್ಯಕ್ತಿಗಳು ಗಾಂಧೀಜಿಯ ಆತ್ಮವಾದ ಅಹಿಂಸೆ, ಶಾಂತಿ ಹಾಗೂ ಸಹಿಷ್ಣುತೆಯನ್ನು ಕೊಲೆ ಮಾಡುತ್ತಿದ್ದಾರೆ. ಅವರಿಂದ ಸಿಗುವ ಸಣ್ಣ ಪ್ರಯೋಜನವನ್ನು ಬಿಜೆಪಿ ನಾಯಕರು ಪಕ್ಕಕ್ಕೆ ಸರಿಸಬೇಕು. ಈ ಮೂಲಕ ಅಂತಹ ನಾಯಕರನ್ನು ಪಕ್ಷದಿಂದ ವಜಾಗೊಳಿಸಿ ರಾಜಧರ್ಮವನ್ನು ಪಾಲಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಪ್ರಜ್ಞಾಸಿಂಗ್ ಹೇಳಿದ್ದೇನು?:
    ಭೋಪಾಲ್‍ನಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ. ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದರು.

    ಸಾಧ್ವಿ ಪ್ರಜ್ಞಾಸಿಂಗ್ ಅವರ ಬೆನ್ನಲ್ಲೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಗೂ ನಳಿನ್ ಕುಮಾರ್ ಕಟೀಲ್ ಗೋಡ್ಸೆ ದೇಶಭಕ್ತಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿ, ಡಿಲೀಟ್ ಮಾಡಿದ್ದರು.

    ಮಧು ಪೂರ್ಣಿಮಾ ಕಿಶ್ವರ್ ಎಂಬವರು, ಗೋಡ್ಸೆ ಗಾಂಧೀಜಿಯನ್ನು ಹತ್ಯೆ ಮಾಡಿದ್ದರೂ ಓಡಿ ಹೋಗಿರಲಿಲ್ಲ. ಶರಣಾಗಿ ವಿಚಾರಣೆ ಹಾಜರಾಗಿ ಧೈರ್ಯದಿಂದ ನಾನು ಗಾಂಧೀಜಿಯನ್ನು ಹತ್ಯೆ ಮಾಡಿದ್ದು ಯಾಕೆ ಎಂದು ಸಮರ್ಥಿಸಿಕೊಂಡಿದ್ದ. ಕೊಲೆ ಮಾಡಿದ್ದನ್ನು ನಾನು ಖಂಡಿಸುತ್ತೇನೆ. ಆದರೆ ಗೋಡ್ಸೆ ದೇಶಭಕ್ತಿಯನ್ನು ನಾನು ಮೆಚ್ಚುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

    ಈ ಟ್ವೀಟ್‍ಗೆ ಅನಂತ್ ಕುಮಾರ್ ಹೆಗ್ಡೆ, ಬದಲಾದ ಸನ್ನಿವೇಶದಲ್ಲಿ 7 ವರ್ಷದ ಬಳಿಕ ಇಂದಿನ ತಲೆಮಾರುಗಳು ಈ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿರುವುದು ಸಂತೋಷ ತಂದಿದೆ. ನಾಥುರಾಮ್ ಗೋಡ್ಸೆ ಈ ಚರ್ಚೆಯನ್ನು ನೋಡಿ ಸಂತೋಷ ಪಡಬಹುದು ಎಂದು ಅಭಿಪ್ರಾಯ ಬರೆದು ಟ್ವೀಟ್ ಮಾಡಿದ್ದರು.

    ಈ ಟ್ವೀಟ್ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಹೆಗ್ಡೆ, ನನ್ನ ಟ್ವಿಟ್ಟರ್ ಖಾತೆ ನಿನ್ನೆಯಿಂದ ಹ್ಯಾಕ್ ಆಗಿದೆ. ಗಾಂಧೀಜಿಯನ್ನು ಹತ್ಯೆಗೈದ ವಿಚಾರವನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ದೇಶಕ್ಕೆ ಗಾಂಧೀಜಿಯವರು ನೀಡಿದ ಕೊಡುಗೆಯ ಬಗ್ಗೆ ನನಗೆ ಗೌರವವಿದೆ ಎಂದು ಸ್ಪಷ್ಟನೆ ನೀಡಿದ್ದರು.

    ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಮಧ್ಯಪ್ರದೇಶದ ಬಿಜೆಪಿ ಮುಖಂಡ ಅನಿಲ್ ಸೌಮಿತ್ರ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದಾಗಿ ಬಿಜೆಪಿ ಹೈಕಮಾಂಡ್ ಅನಿಲ್ ಸೌಮಿತ್ರ ಅವರನ್ನು ಪಕ್ಷದಿಂದ ವಜಾಗೊಳಿಸಿದೆ. ಇತ್ತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಗುರುವಾರದಿಂದ 10 ದಿನಗಳ ಒಳಗೆ ಗೋಡ್ಸೆ ಪರವಾಗಿ ಮಾತನಾಡಿದ ನಾಯಕರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಪಕ್ಷದ ಅಂತರಿಕವಾಗಿ ಶಿಸ್ತು ಸಮಿತಿ ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಸೂಚಿಸಿದ್ದಾರೆ.

  • ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸಲ್ಲ: ಪ್ರಧಾನಿ ಮೋದಿ

    ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸಲ್ಲ: ಪ್ರಧಾನಿ ಮೋದಿ

    ನವದೆಹಲಿ: ಮಹಾತ್ಮ ಗಾಂಧಿ ಅವರನ್ನು ಅವಮಾನಿಸಿದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

    ನ್ಯೂಸ್ 24 ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೋದಿ, ಸಾಧ್ವಿ ಪ್ರಜ್ಞಾಸಿಂಗ್ ಅವರು ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದು ಹೇಳಿದ್ದಾರೆ. ಈ ಮೂಲಕ ಬಾಪು ಅವರನ್ನು ಅವಮಾನಿಸಿದ್ದಾರೆ. ಅವರ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಭೋಪಾಲ್‍ನಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಸಾಧ್ವಿ ಪ್ರಜ್ಞಾಸಿಂಗ್ ಅವರು, ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ. ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದರು.

    ಸಾಧ್ವಿ ಪ್ರಜ್ಞಾಸಿಂಗ್ ಅವರ ಬೆನ್ನಲ್ಲೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಗೂ ನಳಿನ್ ಕುಮಾರ್ ಕಟೀಲ್ ಗೋಡ್ಸೆ ದೇಶಭಕ್ತಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿ, ಡಿಲೀಟ್ ಮಾಡಿದ್ದರು. ಇತ್ತ ಮಧ್ಯಪ್ರದೇಶದ ಬಿಜೆಪಿ ವಕ್ತಾರ ಅನಿಲ್ ಸೌಮಿತ್ರ ಅವರು, ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಎಂದು ಹೇಳಿದ್ದಾರೆ. ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಈ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಭಾರತವು ಸನಾತನ ದೇಶವಾಗಿದೆ. ಭಾರತದಿಂದ ಪಾಕಿಸ್ತಾನ ನಿರ್ಮಾಣವಾಗಿದೆ. ಹೀಗಾಗಿ ಮಹಾತ್ಮ ಗಾಂಧಿ ಪಾಕಿಸ್ತಾನಕ್ಕೆ ಪಿತಾಮಹರೆ ಹೊರತು ಭಾರತಕ್ಕಲ್ಲ ಎಂದು ಹೇಳಿದ್ದಾರೆ.

    ತಮ್ಮ ಹೇಳಿಕೆಯ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅನಿಲ್ ಸೌಮಿತ್ರ ಅವರು, ಭಾರತದಿಂದ ಜವಾಹರಲಾಲ್ ನೆಹರು ಹಾಗೂ ಪಾಕಿಸ್ತಾನದಿಂದ ಮೊಹ್ಮದ್ ಅಲಿ ಜಿನ್ನಾ ಸೇರಿ ಎರಡು ರಾಷ್ಟ್ರಗಳನ್ನು ನಿರ್ಮಾಣ ಮಾಡಿದರು. ದೇಶ ವಿಭಜನೆ ಮಹಾತ್ಮ ಗಾಂಧಿ ಮುಂದೆಯೇ ಆಗಿದೆ. ಹೀಗಾಗಿ ಗಾಂಧೀಜಿ ಪಾಕಿಸ್ತಾನಕ್ಕೆ ಪಿತಾಮಹರು ಎಂದು ತಿಳಿಸಿದ್ದಾರೆ.

    ಬಿಜೆಪಿ ಪಕ್ಷದ ಲೋಕಸಭಾ ಚುನಾವಣಾ ಅಭ್ಯರ್ಥಿ ಪ್ರಜ್ಞಾಸಿಂಗ್ ಸಿಂಗ್ ಠಾಕೂರ್ ಹಾಗೂ ಸಂಸದರಾದ ಅನಂತ್ ಕುಮಾರ್ ಹೆಗ್ಡೆ, ನಳಿನ್ ಕುಮಾರ್ ಕಟೀಲ್ ಅವರು ಗೋಡ್ಸೆ ಕುರಿತ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರಮಟ್ಟದಲ್ಲಿ ಬಿಜೆಪಿ ಭಾರೀ ಟೀಕೆಗಳನ್ನು ಎದುರಿಸಿದೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರು ಪಕ್ಷದ ಮುಖಂಡರ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದಾರೆ.

    10 ದಿನಗಳ ಒಳಗೆ ನಾಯಕರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಪಕ್ಷದ ಅಂತರಿಕವಾಗಿ ಶಿಸ್ತು ಸಮಿತಿ ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಸೂಚಿಸಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪ್ರಮುಖವಾಗಿ ಟಾರ್ಗೆಟ್ ಮಾಡಿದ್ದ ರಾಜೀವ್ ಗಾಂಧಿ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್, ಗೋಡ್ಸೆಗೆ ಹೋಲಿಕೆ ಮಾಡಿ ಟ್ವೀಟ್ ಮಾಡಿದ್ದರು. ಇತ್ತ ಸಂಸದ ಅನಂತ್‍ಕುಮಾರ್ ಹೆಗ್ಡೆ ಅವರು ಟ್ವಿಟ್ಟರ್ ಖಾತೆಯಲ್ಲಿ 7 ವರ್ಷದ ಬಳಿಕ ಇಂದಿನ ತಲೆಮಾರಿನ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿರುವುದು ಸಂತೋಷ ತಂದಿದೆ. ನಾಥುರಾಂ ಗೋಡ್ಸೆ ಈ ಚರ್ಚೆ ನೋಡಿ ಸಂತೋಷ ಪಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

  • 10 ದಿನದೊಳಗೆ ಸ್ಪಷ್ಟನೆ ನೀಡಿ- ಗೋಡ್ಸೆ ಹೇಳಿಕೆ ನೀಡಿದ ನಾಯಕರಿಗೆ ಅಮಿತ್ ಶಾ ಸೂಚನೆ

    10 ದಿನದೊಳಗೆ ಸ್ಪಷ್ಟನೆ ನೀಡಿ- ಗೋಡ್ಸೆ ಹೇಳಿಕೆ ನೀಡಿದ ನಾಯಕರಿಗೆ ಅಮಿತ್ ಶಾ ಸೂಚನೆ

    ನವದೆಹಲಿ: ಬಿಜೆಪಿ ಪಕ್ಷದ ಲೋಕಸಭಾ ಚುನಾವಣಾ ಅಭ್ಯರ್ಥಿ ಪ್ರಜ್ಞಾಸಿಂಗ್ ಸಿಂಗ್ ಠಾಕೂರ್ ಹಾಗೂ ಸಂಸದರಾದ ಅನಂತ್ ಕುಮಾರ್ ಹೆಗ್ಡೆ, ನಳಿನ್ ಕುಮಾರ್ ಕಟೀಲ್ ಅವರು ಗೋಡ್ಸೆ ಕುರಿತ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರಮಟ್ಟದಲ್ಲಿ ಬಿಜೆಪಿ ಭಾರೀ ಟೀಕೆಗಳನ್ನು ಎದುರಿಸಿದೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರು ಪಕ್ಷದ ಮುಖಂಡರ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದಾರೆ.

    10 ದಿನಗಳ ಒಳಗೆ ನಾಯಕರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕು. ಪಕ್ಷದ ಅಂತರಿಕವಾಗಿ ಶಿಸ್ತು ಸಮಿತಿ ಎದುರಿಸಬೇಕಾಗುತ್ತದೆ ಎಂದು ಅಮಿತ್ ಶಾ ಸೂಚಿಸಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪ್ರಮುಖವಾಗಿ ಟಾರ್ಗೆಟ್ ಮಾಡಿದ್ದ ರಾಜೀವ್ ಗಾಂಧಿ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್, ಗೋಡ್ಸೆಗೆ ಹೋಲಿಕೆ ಮಾಡಿ ಟ್ವೀಟ್ ಮಾಡಿದ್ದರು. ಇತ್ತ ಸಂಸದ ಅನಂತ್‍ಕುಮಾರ್ ಹೆಗ್ಡೆ ಅವರು ಟ್ವಿಟ್ಟರ್ ಖಾತೆಯಲ್ಲಿ 7 ವರ್ಷದ ಬಳಿಕ ಇಂದಿನ ತಲೆಮಾರಿನ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿರುವುದು ಸಂತೋಷ ತಂದಿದೆ. ನಾಥುರಾಂ ಗೋಡ್ಸೆ ಈ ಚರ್ಚೆ ನೋಡಿ ಸಂತೋಷ ಪಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದನ್ನು ಓದಿ: ಗೋಡ್ಸೆ ಒಬ್ಬರನ್ನು ಕೊಂದ್ರೆ ರಾಜೀವ್ ಕೊಂದಿದ್ದು 17 ಸಾವಿರ – ಕ್ಷಮೆ ಕೇಳಿದ ಕಟೀಲ್

    ಸದ್ಯ ಚುನಾವಣಾ ಅಂತಿಮ ಹಂತದ ಮತದಾನದ ಸಮಯವಾಗಿರುವ ವೇಳೆಯಲ್ಲೇ ಸಂಸದರ ಈ ಹೇಳಿಕೆಗಳು ಸಾಕಷ್ಟು ವಿವಾದವನ್ನು ಸೃಷ್ಟಿಸಿದ್ದು, ಈ ಹೇಳಿಕೆಗಳನ್ನೆ ಕಾಂಗ್ರೆಸ್ ಅಂತಿಮ ದಿನದ ಪ್ರಚಾರದಲ್ಲಿ ಪ್ರಸ್ತಾಪ ಮಾಡಿ ವಾಗ್ದಾಳಿ ನಡೆಸಿದೆ.  ಇದನ್ನು ಓದಿ: ಇಂದು ನಡೆಯುತ್ತಿರುವ ಚರ್ಚೆಯಿಂದ ಗೋಡ್ಸೆ ಸಂತೋಷ ಪಡಬಹುದು: ಹೆಗ್ಡೆ

  • ಗೋಡ್ಸೆ ಒಬ್ಬರನ್ನು ಕೊಂದ್ರೆ ರಾಜೀವ್ ಕೊಂದಿದ್ದು 17 ಸಾವಿರ – ಕ್ಷಮೆ ಕೇಳಿದ ಕಟೀಲ್

    ಗೋಡ್ಸೆ ಒಬ್ಬರನ್ನು ಕೊಂದ್ರೆ ರಾಜೀವ್ ಕೊಂದಿದ್ದು 17 ಸಾವಿರ – ಕ್ಷಮೆ ಕೇಳಿದ ಕಟೀಲ್

    ಬೆಂಗಳೂರು: ನಾಥುರಾಂ ಗೋಡ್ಸೆ ಕುರಿತು ಮಾಡಿದ್ದ ಟ್ವೀಟ್ ಅನ್ನು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ.

    ನಾಥುರಾಂ ಗೋಡ್ಸೆ ಕೊಂದವರ ಸಂಖ್ಯೆ 1 ಆದರೆ ಉಗ್ರ ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72 ಹಾಗೂ ರಾಜೀವ್ ಗಾಂಧಿ ಕೊಂದವರ ಸಂಖ್ಯೆ 17 ಸಾವಿರ. ಈಗ ನೀವೇ ಹೇಳಿ. ಇವರಲ್ಲಿ ಯಾರು ಅತೀ ಕ್ರೂರ ಕೊಲೆಗಾರ ಎಂದು ಪ್ರಶ್ನೆ ಮಾಡಿ ಸಂಸದರು ಟ್ವೀಟ್ ಮಾಡಿದ್ದರು.

    ಈ ಟ್ವೀಟ್‍ಗೆ ಪ್ರತಿಕ್ರಿಯೆಗಳು ಬರತೊಡಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಸಂಸದರು, ‘ನನ್ನ ಕೊನೆಯ ಎರಡು ಟ್ವೀಟ್ ಗಳಿಗೆ ಟೀಕೆ ವ್ಯಕ್ತವಾಗಿದ್ದನ್ನು ಗಮನಿಸಿದ್ದೇನೆ. ಯಾರಿಗಾದರೂ ಅದರಿಂದ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಯಾರನ್ನೂ ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ. ನೋವಾಗಿದೆಯೆಂದು ತಿಳಿದ ತಕ್ಷಣ ಟ್ವೀಟ್ ಹಿಂಪಡೆದಿದ್ದೇನೆ. ಚರ್ಚೆ ಇಲ್ಲಿಗೆ ಮುಗಿಸೋಣ’ ಎಂದು ಬರೆದುಕೊಂಡಿದ್ದಾರೆ.

    ಕಲಬುರಗಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ರಾಜೀವ್ ಗಾಂಧಿ 17 ಸಾವಿರ ಜನರನ್ನ ಕೊಂದಿದ್ದಾರೆ ಎಂಬ ಕಟೀಲ್ ಅವರ ಟ್ವೀಟ್‍ಗೆ ಕಿಡಿಕಾರಿದ್ದರು. ಬಿಜೆಪಿ ನಾಯಕರ ಇಂತಹ ಮಾತುಗಳಿಂದ ಅವರ ಮನಸಿತ್ಥಿ ಹೇಗಿದೆ ಎಂಬುವುದು ತಿಳಿಯುತ್ತದೆ. ರಾಜೀವ್ ಗಾಂಧಿ ಅವರು ಈ ದೇಶದಲ್ಲಿ ಐಕ್ಯತೆಗಾಗಿ ತಮ್ಮ ಪ್ರಾಣ ಕೊಟ್ಟಿದ್ದಾರೆ. ನಳಿನ್ ಕುಮಾರ್ ಅವರಂತೆ ಹೇಳಿಕೆ ನೀಡುವ ಸಜ್ಜನರ ಸಂಖ್ಯೆ ಹಾಗೂ ವಿಚಾರಧಾರೆ ಹೆಚ್ಚಾಗುತ್ತಿರುವುದ್ದರಿಂದ ದೇಶಕ್ಕೆ ತೊಂದರೆ ಆಗುತ್ತಿದೆ. ಇನ್ನು ಮುಂದೆ ಆದರೂ ನಾಲಿಗೆ ಬಿಗಿ ಹಿಡಿದು ಮಾತನಾಡಲು ಕಲಿಯಬೇಕು ಎಂದು ವಾಗ್ದಾಳಿ ನಡೆಸಿದರು.

    ಗಾಂಧೀಜಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು. ಅಂತವರನ್ನ ಕೊಂದವರನ್ನ ಬಿಜೆಪಿಯವರು ದೇವರಂತೆ ಪೂಜೆ ಮಾಡುತ್ತಿದ್ದಾರೆ. ಗಾಂಧೀಜಿ ಅವರನ್ನ ರಾಷ್ಟ್ರಪಿತ ಮನ್ನಣೆ ಕೊಟ್ಟು ಪ್ರಧಾನಿ ಮೋದಿ ಅವರ ಸಮಾಧಿ ಮುಂದೆ ತಲೆ ಬಾಗುತ್ತದೆ. ಮತ್ತೊಂದೆಡೆ ಬಿಜೆಪಿಯವರು ಈ ರೀತಿ ಮಾತನಾಡುತ್ತಾರೆ ಎಂದು ಟೀಕಿಸಿದರು. ಇದನ್ನು ಓದಿ: ಇಂದು ನಡೆಯುತ್ತಿರುವ ಚರ್ಚೆಯಿಂದ ಗೋಡ್ಸೆ ಸಂತೋಷ ಪಡಬಹುದು: ಹೆಗ್ಡೆ

  • ಇಂದು ನಡೆಯುತ್ತಿರುವ ಚರ್ಚೆಯಿಂದ ಗೋಡ್ಸೆ ಸಂತೋಷ ಪಡಬಹುದು: ಹೆಗ್ಡೆ

    ಇಂದು ನಡೆಯುತ್ತಿರುವ ಚರ್ಚೆಯಿಂದ ಗೋಡ್ಸೆ ಸಂತೋಷ ಪಡಬಹುದು: ಹೆಗ್ಡೆ

    ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ನಾಥುರಾಮ್ ಗೋಡ್ಸೆಯ ದೇಶಭಕ್ತಿಗೆ ಸಂಬಂಧಿಸಿದಂತೆ ಮಾಡಿದ್ದ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.

    ಮಧು ಪೂರ್ಣಿಮಾ ಕಿಶ್ವರ್ ಎಂಬವರು, ಗೋಡ್ಸೆ ಗಾಂಧೀಜಿಯನ್ನು ಹತ್ಯೆ ಮಾಡಿದ್ದರೂ ಓಡಿ ಹೋಗಿರಲಿಲ್ಲ. ಶರಣಾಗಿ ವಿಚಾರಣೆ ಹಾಜರಾಗಿ ಧೈರ್ಯದಿಂದ ನಾನು ಗಾಂಧೀಜಿಯನ್ನು ಹತ್ಯೆ ಮಾಡಿದ್ದು ಯಾಕೆ ಎಂದು ಸಮರ್ಥಿಸಿಕೊಂಡಿದ್ದ. ಕೊಲೆ ಮಾಡಿದ್ದನ್ನು ನಾನು ಖಂಡಿಸುತ್ತೇನೆ. ಆದರೆ ಗೋಡ್ಸೆ ದೇಶಭಕ್ತಿಯನ್ನು ನಾನು ಮೆಚ್ಚುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

    ಈ ಟ್ವೀಟ್ ಗೆ ಅನಂತ್ ಕುಮಾರ್ ಹೆಗ್ಡೆ, ಬದಲಾದ ಸನ್ನಿವೇಶದಲ್ಲಿ 7 ವರ್ಷದ ಬಳಿಕ ಇಂದಿನ ತಲೆಮಾರುಗಳು ಈ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿರುವುದು ಸಂತೋಷ ತಂದಿದೆ. ನಾಥುರಾಮ್ ಗೋಡ್ಸೆ ಈ ಚರ್ಚೆಯನ್ನು ನೋಡಿ ಸಂತೋಷ ಪಡಬಹುದು ಎಂದು ಅಭಿಪ್ರಾಯ ಬರೆದು ಟ್ವೀಟ್ ಮಾಡಿದ್ದರು.

    ಈ ಟ್ವೀಟ್ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಹೆಗ್ಡೆ, ನನ್ನ ಟ್ವಿಟ್ಟರ್ ಖಾತೆ ನಿನ್ನೆಯಿಂದ ಹ್ಯಾಕ್ ಆಗಿದೆ. ಗಾಂಧೀಜಿಯನ್ನು ಹತ್ಯೆಗೈದ ವಿಚಾರವನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ದೇಶಕ್ಕೆ ಗಾಂಧೀಜಿಯವರು ನೀಡಿದ ಕೊಡುಗೆಯ ಬಗ್ಗೆ ನನಗೆ ಗೌರವವಿದೆ ಎಂದಿದ್ದಾರೆ.

    ಕಳೆದ ಒಂದು ವಾರದಲ್ಲಿ ಎರಡು ಬಾರಿ ನನ್ನ ಖಾತೆ ಹ್ಯಾಕ್ ಆಗಿದೆ. ನನ್ನ ಟೈಮ್ ಲೈನಿನಲ್ಲಿ ಪ್ರಕಟಗೊಂಡ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದೇನೆ ಎಂದು ಹೇಳಿದ್ದಾರೆ.

  • ಕಡಿಮೆ ಕೆಲಸ ಮಾಡಿ ಹೆಚ್ಚು ಪ್ರಚಾರ ತೆಗೆದುಕೊಳ್ಳುವ ನವವಧುವಿನಂತೆ ಮೋದಿ: ಸಿಧು

    ಕಡಿಮೆ ಕೆಲಸ ಮಾಡಿ ಹೆಚ್ಚು ಪ್ರಚಾರ ತೆಗೆದುಕೊಳ್ಳುವ ನವವಧುವಿನಂತೆ ಮೋದಿ: ಸಿಧು

    ಇಂಧೋರ್: ಪ್ರಧಾನಿ ಮೋದಿ ಕಡಿಮೆ ಕೆಲಸ ಮಾಡಿ ಹೆಚ್ಚು ಕೆಲಸ ಮಾಡಿದಂತೆ ನಟಿಸುವ ವಧುವಿನಂತೆ ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ವಿವಾದತ್ಮಾಕ ಹೇಳಿಕೆಯನ್ನು ನೀಡಿದ್ದಾರೆ.

    ಮದುವೆಯಾಗಿ ಪತಿ ಮನೆಗೆ ಬಂದ ವಧು ಕಡಿಮೆ ರೊಟ್ಟಿ ಮಾಡಿದರೂ, ನೆರೆಹೊರೆಯವರು ಹೆಚ್ಚು ಕೆಲಸ ಮಾಡುತ್ತಿದ್ದಾಳೆ ಎಂದುಕೊಳ್ಳಲಿ ಎಂದು ಬಳೆಗಳಿಂದ ಶಬ್ಧ ಮಾಡುತ್ತಾಳೆ. ಇದೇ ರೀತಿಯಲ್ಲಿ ಮೋದಿ ಸರ್ಕಾರವು ಏನೂ ಕೆಲಸ ಮಾಡದಿದ್ದರೂ, ಹೆಚ್ಚು ಪ್ರಚಾರ ಪಡೆದುಕೊಳ್ಳುತ್ತಿದೆ ಎಂದು ವ್ಯಂಗ್ಯ ಮಾಡಿದರು.

    ಪತ್ರಿಕೆಯೊಂದು ತನ್ನ ಮುಖಪುಟದಲ್ಲಿ ಮೋದಿ ಫೋಟೋ ಹಾಕಿ ‘ಭಾರತದ ವಿಭಜಕದ ಮುಖ್ಯಸ್ಥ’ ಎಂದು ಬರೆದುಕೊಂಡಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಸಿಧು, ಹೌದು ಮೋದಿ ಸುಳ್ಳು ಹೇಳುವುದರ ಮುಖ್ಯಸ್ಥ, ವಿಭಾಗ ಮಾಡುವುದರ ಮುಖ್ಯಸ್ಥ ಮತ್ತು ಅಂಬಾನಿ ಮತ್ತು ಅದಾನಿ ಸಂಸ್ಥೆಯ ಮುಖ್ಯಸ್ಥ ಎಂದು ಕಿಡಿಕಾರಿದರು.

    ಕಾಂಗ್ರೆಸ್ ಪಕ್ಷ ಬ್ರಿಟಿಷರ ವಿರುದ್ಧ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮೌಲಾನಾ ಅಜಾದ್ ಮತ್ತು ಮಹಾತ್ಮ ಗಾಂಧಿ ಅವರ ಪಕ್ಷ. ಕಾಂಗ್ರೆಸ್ ಪಕ್ಷ ಭಾರತಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟಿದೆ. ಪ್ರಧಾನಿ ಮೋದಿ ಅವರು ಮುಕ್ತವಾಗಿ ಚರ್ಚೆಗೆ ಬರಲಿ ನಾನು ಚರ್ಚೆ ಮಾಡಲು ಸಿದ್ಧನಿದ್ದೇನೆ. ಮೋದಿ ಅವರು ಜಿಎಸ್‍ಟಿ ಮತ್ತು ಕಪ್ಪು ಹಣ, ಪ್ರತಿ ವರ್ಷಕ್ಕೆ 2 ಕೋಟಿ ಉದ್ಯೋಗ ಈ ವಿಷಯಗಳ ಬಗ್ಗೆ ಅವರು ನನ್ನ ಬಳಿ ಚರ್ಚೆ ಮಾಡಲಿ. ನಾನು ಆ ಚರ್ಚೆಯಲ್ಲಿ ಸೋತರೆ ನಾನು ಶಾಶ್ವತ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.

  • ಗಾಂಧಿ ಹತ್ಯೆಗೈದವರು ದೆಹಲಿಯಲ್ಲಿ ಕುಳಿತು ಸರ್ಕಾರ ನಡೆಸುತ್ತಿದ್ದಾರೆ: ಫಾರೂಕ್ ಅಬ್ದುಲ್ಲಾ

    ಗಾಂಧಿ ಹತ್ಯೆಗೈದವರು ದೆಹಲಿಯಲ್ಲಿ ಕುಳಿತು ಸರ್ಕಾರ ನಡೆಸುತ್ತಿದ್ದಾರೆ: ಫಾರೂಕ್ ಅಬ್ದುಲ್ಲಾ

    ಶ್ರೀನಗರ: ಮಹಾತ್ಮ ಗಾಂಧೀಜಿ ಅವರನ್ನು ಕೊಲೆ ಮಾಡಿದವರು ದೆಹಲಿಯಲ್ಲಿ ಕುಳಿತು ಸರ್ಕಾರ ನಡೆಸುತ್ತಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ (ಎನ್‍ಸಿಪಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ನಡೆದಿದ್ದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿ ಅವರನ್ನು ಆರ್‌ಎಸ್‌ಎಸ್ ಬೆಂಬಲಿಗರು ಹತ್ಯೆ ಮಾಡಿದ್ದಾರೆ. ಆಗ ಕೇಂದ್ರ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಾಭ್‍ಭಾಯಿ ಅವರು, ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡಿದ್ದರು. ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಿದ್ದ ಆರ್‌ಎಸ್‌ಎಸ್ ಅನ್ನು ಅನೇಕ ನಾಯಕರು ಒಪ್ಪಿಕೊಳ್ಳಲಿಲ್ಲ ಎಂದು ಹೇಳಿದರು. ಇದನ್ನು ಓದಿ: ಗಾಂಧೀಜಿಯನ್ನು ಕೊಂದವರಿಂದ ನಮ್ಗೆ ಪಾಠ ಬೇಕಿಲ್ಲ: ಕೈ ಅಭ್ಯರ್ಥಿ ಬಿ.ವಿ.ನಾಯಕ್

    ಪ್ರಧಾನಿ ನರೇಂದ್ರ ಮೋದಿ ಅವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ಹೇಳಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಮ್ಮು-ಕಾಶ್ಮೀರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಅವರು ನಮಗೆ ಶಾಂತಿ, ನೆಮ್ಮದಿ ಕೊಟ್ಟಿದ್ದಾರಾ ಎಂದು ಸಮಾವೇಶದಲ್ಲಿ ಸೇರಿದ್ದ ಜನರನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು.

    ಶ್ರೀನಗರ-ಜಮ್ಮು ಹೆದ್ದಾರಿ ಬಂದ್ ಮಾಡಿದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಫಾರುಕ್ ಅಬ್ದುಲ್ಲಾ ಅವರು, ಬಿಜೆಪಿ ಸರ್ಕಾರ ರಸ್ತೆಯನ್ನು ಬಂದ್ ಮಾಡಿತು. ಕಾರ್ಗಿಲ್ ಯುದ್ಧ ಯಾವಾಗ ನಡೆಯಿತು ಸಮಾವೇಶದಲ್ಲಿ ಸೇರಿದ್ದ ಜನರನ್ನು ಪ್ರಶ್ನಿಸಿದ ಅವರು, ಯುದ್ಧದ ಬಳಿಕ ರಸ್ತೆ ಸಂಚಾರ ಬಂದ್ ಆಗಲಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ರಸ್ತೆ ತಡೆಯಲಿಲ್ಲ. ಈಗ ಯಾವ ಯುದ್ಧ ನಡೆಯುತ್ತದೆ? ಯಾವುದೇ ಯುದ್ಧ ನಡೆಯದಿದ್ದರೂ ರಸ್ತೆ ಸಂಚಾರ ಯಾಕೆ ಕಡಿತಗೊಳಿಸಲಾಗಿದೆ? ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ದೂರಿದರು.

  • ಗಾಂಧೀಜಿ ಪ್ರತಿಕೃತಿಗೆ ಗುಂಡಿಕ್ಕಿದ್ದ ಹಿಂದೂ ಮಹಾಸಭಾ ನಾಯಕಿ ಅರೆಸ್ಟ್

    ಗಾಂಧೀಜಿ ಪ್ರತಿಕೃತಿಗೆ ಗುಂಡಿಕ್ಕಿದ್ದ ಹಿಂದೂ ಮಹಾಸಭಾ ನಾಯಕಿ ಅರೆಸ್ಟ್

    ಅಲಿಘಡ: ಮಹಾತ್ಮ ಗಾಂಧೀಜಿಯವರ ಪ್ರತಿಕೃತಿಗೆ ಗುಂಡಿಟ್ಟು ಸಂಭ್ರಮಾಚರಣೆ ನಡೆಸಿದ್ದ ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆರನ್ನು ಪೊಲೀಸರು ಬಂಧಿಸಿದ್ದಾರೆ.

    ಘಟನೆ ನಡೆದ ದಿನದ ಬಳಿಕ ನಾಪತ್ತೆಯಾಗಿದ್ದ ಹಿಂದೂ ಮಹಾಸಭಾ ನಾಯಕಿ ಶಕುನ್ ಪಾಂಡೆಯನ್ನು ಪೊಲೀಸರು ಪತ್ತೆ ಮಾಡಿ ಬಂಧನ ಮಾಡಿದ್ದಾರೆ. ಅಲ್ಲದೇ ಆಕೆಯ ಪತಿ ಅಶೋಕ್ ಪಾಂಡ್ಯರನ್ನು ಕೂಡ ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಜನವರಿ 30 ರಂದು ನಾಥೂರಾವ್ ಗೋಡ್ಸೆ ಗಾಂಧೀಜಿ ಅವರನ್ನು ಹತ್ಯೆ ಮಾಡಿದ್ದ ಸನ್ನಿವೇಶವನ್ನು ಮರು ನಿರ್ಮಿಸಿದ್ದರು, ಅಲ್ಲದೇ ಆಟಿಕೆ ಗನ್ ಮೂಲಕ ಗಾಂಧೀಜಿ ಅವರ ಪ್ರತಿಕೃತಿಗೆ ಗುಂಡಿಟ್ಟು ಪೋಸ್ ಕೊಟ್ಟಿದ್ದರು. ಅಲ್ಲದೇ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದು, ದಸರಾ ದಿನದಂದು ರಾವಣನನ್ನು ಸುಟ್ಟು ಸಂಭ್ರಮ ಪಡುವಂತೆ ಇಂದು ಕೂಡ ನಡೆಸಲಾಯಿತು ಎಂದು ತಿಳಿಸಿದ್ದರು. ಈ ವೇಳೆ ಸಂಘಟನೆಯ ಕಾರ್ಯಕರ್ತರಿಗೆ ಗಾಂಧೀಜಿ ಅವರ ಸಾವನ್ನಪ್ಪಿದ ದಿನವನ್ನು ಶೌರ್ಯ ದಿನ ಎಂದು ಆಚರಣೆ ಮಾಡಿ ಸಿಹಿ ಕೂಡ ಹಂಚಿದ್ದರು.

    ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 12 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅಲ್ಲದೇ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಮೂವರನ್ನು ಕೂಡಲೇ ವಶಕ್ಕೆ ಪಡೆದಿದ್ದರು.

    ಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv