Tag: mahesh

  • ‘ಕುರಿ ಕಾಯೋನು’ ಚಿತ್ರಕ್ಕೆ ಶಾಸಕ ಭೈರತಿ ಬಸವರಾಜ್ ಚಾಲನೆ

    ‘ಕುರಿ ಕಾಯೋನು’ ಚಿತ್ರಕ್ಕೆ ಶಾಸಕ ಭೈರತಿ ಬಸವರಾಜ್ ಚಾಲನೆ

    ಳೆದ ಎರಡು ದಶಕಗಳಿಂದಲೂ ಚಿತ್ರರಂಗದಲ್ಲಿ ಕಲಾವಿದ, ಸಹಾಯಕ ನಿರ್ದೇಶಕನಾಗಿ ತೊಡಗಿಕೊಂಡಿರುವ ಮಹೇಶ್(ಓಂ) ಈಗ ಸ್ವತಂತ್ರ ನಿರ್ದೇಶಕನಾಗುತ್ತಿದ್ದಾರೆ. ಜೊತೆಗೆ ಹೀರೋ ಕೂಡ  ಆಗುತ್ತಿದ್ದಾರೆ. ಅವರ ನಟನೆ ಹಾಗೂ ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ನಡೆಯಿತು. ಅನಿವಾಸಿ ಕನ್ನಡಿಗರಾದ ರಾಜೇಶ್, ಪ್ರಿಯಾ (Priya) ಅವರು  ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

    ಸಮಾರಂಭದಲ್ಲಿ  ಶಾಸಕ ಭೈರತಿ ಬಸವರಾಜ್ ಅವರು ‘ಕುರಿ ಕಾಯೋನು’ ಚಿತ್ರದ  ಟೈಟಲ್ ಲಾಂಚ್ ಮಾಡುವ ಮೂಲಕ ಚಿತ್ರಕ್ಕೆ  ಚಾಲನೆ ನೀಡಿದರು. ಇದಕ್ಕೂ ಮೊದಲು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಎಂಟು ಜನ ಮುತ್ತೈದೆಯರಿಗೆ ಶಾಸಕರಿಂದ ಭಾಗಿನ ವಿತರಿಸಲಾಯಿತು. ನಂತರ ಮಾತನಾಡಿದ ಶಾಸಕರು, ಸ್ನೇಹಿತ ಮಹೇಶ್ (Mahesh) ಬಹಳ ವರ್ಷಗಳಿಂದ ಚಿತ್ರರಂಗದಲ್ಲಿದ್ದಾನೆ. ಈಗ ನಿರ್ದೇಶಕನಾಗಬೇಕೆಂದು ಹೊರಟಿದ್ದಾನೆ. ರಾಜ್ಯದ ಜನತೆ ಅವನಿಗೆ ಸಹಕಾರ ನೀಡಬೇಕು. ನನಗೆ ಆರೋಗ್ಯ ಸರಿ ಇಲ್ಲದಿದ್ರೂ ಈ ಯುವಕರಿಗೆ ಸ್ಪೂರ್ತಿ ನೀಡಲೆಂದು ಇಲ್ಲಿಗೆ ಬಂದಿದ್ದೇನೆ ಎಂದರು.

    ವಿದೇಶದಲ್ಲಿ ಹಲವಾರು ವಿದ್ಯಾಸಂಸ್ಥೆಗಳನ್ನು ನಡೆಸುತ್ತಿರುವ ನಿರ್ಮಾಪಕಿ, ಮಿಸಸ್ ಇಂಡಿಯಾ ಯೂನಿವರ್ಸ್ ವಿನ್ನರ್  ಆಗಿರುವ ಪ್ರಿಯಾ ರಾಜೇಶ್ ಮಾತನಾಡಿ ನಾವು  ಮಹೇಶ್ ರನ್ನು 29 ವರ್ಷಗಳಿಂದ ನೋಡುತ್ತಿದ್ದೇವೆ. ತುಂಬಾ ಸ್ಟ್ರಗಲ್ ಮಾಡಿದ್ದಾರೆ. ಶ್ರೀಕೃಷ್ಣ, ಏಸು ಇವರೆಲ್ಲ ಕುರಿಗಾಹಿಗಳೇ ಆಗಿದ್ದರು. ಅದೇ ಕುರಿ ಕಾಯೋನ ಚಿತ್ರವನ್ನು ಮಹೇಶ್ ಮಾಡುತ್ತಿದ್ದಾರೆ. ಅವರಿಗೆ ನನ್ನ ಹಾಗೂ ರಾಜೇಶ್ ಇಬ್ಬರದೂ ಪೂರ್ತಿ  ಸಪೋರ್ಟ್ ಅವರಿಗಿದೆ ಎಂದರು. ಕೋ-ಪ್ರೊಡ್ಯೂಸರ್ ದೀಪು ಮಾತನಾಡಿ ಇದು ಎರಡನೇ ಚಿತ್ರ. 4 ತಿಂಗಳ ಹಿಂದೆ ಮಹೇಶ್ ಈ ಸಬ್ಜೆಕ್ಟ್ ಹೇಳಿದ್ದರು. ಯಾವುದೇ ಜಾತಿ ಧರ್ಮಕ್ಕೆ ಸೀಮಿತವಾದ್ದಲ್ಲ. ಚಿತ್ರ ನೋಡೋವಾಗ ಅದು ಅರ್ಥವಾಗುತ್ತೆ ಎಂದರು.

    ‌ನಿರ್ದೇಶಕ, ನಾಯಕ ಮಹೇಶ್(ಓಂ) ಮಾತನಾಡುತ್ತ ಚಿಕ್ಕವನಿದ್ದಾಗ ಅಪ್ಪನ ಜೇಬಿನಿಂದ ಹಣ ಕದ್ದು ಸಿನಿಮಾ ನೋಡ್ತಿದ್ದೆ. ಓಂ ಸಿನಿಮಾದಿಂದ ಶಿವಣ್ಣ, ಸುದೀಪ್, ಪುನೀತ್, ವಿಜಯ್, ಇವರ ಜೊತೆಗೆಲ್ಲ ಕೆಲಸ ಮಾಡಿದ್ದೇನೆ.  ನಡುವೆ ಲೋನ್ ರಿಕವರಿ ಏಜೆಂಟಾಗಿಯೂ ಕೆಲಸ ಮಾಡಿದ್ದೇನೆ. ಮರಳು, ಜಲ್ಲಿ ಎತ್ತಿದ್ದೇನೆ. ಈಗ ಮೇಸ್ತ್ರಿ ಆಗಬೇಕೆಂದು ಹೊರಟಿದ್ದೇನೆ. ನಾನು ನಾಯಕನಾಗುತ್ತೇನೆ ಅಂದಾಗ ಕೆಲವರು ಹಾಸ್ಯ ಮಾಡಿದರು. ಸ್ನೇಹಿತರೆಲ್ಲ ನನಗೆ ಸಹಕಾರ ನೀಡಿದರು. ಈಗ ನಿಮ್ಮೆಲ್ಲರ ಆಶೀರ್ವಾದ ನಂಗೆ ಬೇಕಿದೆ. ‘ಕುರಿ ಕಾಯೋನು’ ಕಥೆಯ ಬಗ್ಗೆ ಹೇಳಬೇಕೆಂದರೆ,  ನಾಯಕ ಮುಗ್ಧ, ಆತನಿಗೆ ತನ್ನ ಕುರಿಗಳನ್ನು ಬಿಟ್ಟರೆ ಹೊರಗಿನ ಪ್ರಪಂಚವೇ ಗೊತ್ತಿರಲ್ಲ , ಕುರಿಯನ್ನು ಜೀವದಂತೆ ಪ್ರೀತಿಸುತ್ತಾನೆ. ಆ ಕುರಿಯನ್ನು ಯಾರೋ ಕೆಣಕಿದಾಗ ಆತ ಕೆರಳುತ್ತಾನೆ. ತನ್ನ ಕುರಿ ಕಳೆದುಹೋದಾಗ ವಿಚಲಿತನಾಗುತ್ತಾನೆ. ಗಣೇಶ ಹಬ್ಬಕ್ಕೆ ಮುಹೂರ್ತ ಮಾಡಿ, ಕೋಲಾರ, ಅಂತರಗಂಗೆ, ಮಲೆ ಮಾದೇಶ್ವರ ಬೆಟ್ಟ ಇತರೆಡೆ ಚಿತ್ರೀಕರಿಸುವ ಯೋಜನೆಯಿದೆ. ಚಿತ್ರದಲ್ಲಿ ಕೆ.ಆರ್.ಪುರ ಕ್ಷೇತ್ರದ ಸಾಕಷ್ಟು ಕಲಾವಿದರಿಗೆ ಅವಕಾಶ ನೀಡುತ್ತಿದ್ದೇವೆ. ಮುಖ್ಯವಾಗಿ ಚಿತ್ರದ ಕಥೆಗೆ ಟ್ವಿಸ್ಟ್  ನೀಡುವ ಸಿಎಂ ಪಾತ್ರವಿದ್ದು, ಅದನ್ನು ನಮ್ಮ ಶಾಸಕರಾದ ಭೈರತಿ ಬಸವರಾಜಣ್ಣ  ಅವರಿಂದಲೇ ಮಾಡಿಸುವ ಯೋಜನೆಯಿದೆ ಎಂದು ಹೇಳಿದರು. ನಿರ್ಮಾಪಕರಾದ ರಾಜೇಶ್, ಹಿರಿಯ ನಟ ಕೋಟೆ ಪ್ರಭಾಕರ್, ವೀಣಾ ಮಹೇಶ್ ಚಿತ್ರದ ಕುರಿತು ಮಾತನಾಡಿದರು. ಕುರಿ ಕಾಯೋನು ಚಿತ್ರದಲ್ಲಿ 4 ಹಾಡುಗಳಿದ್ದು ರಾಘವೇಂದ್ರ ಪ್ರಸಾದ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

  • ಅಶ್ವಥ ಎಲೆಯಲ್ಲಿ ಮೂಡಿದ ಮಾಸ್ಟರ್ ಬ್ಲಾಸ್ಟರ್ –  ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಪುಟ ಸೇರಿದ ಉಡುಪಿಯ ಮಹೇಶ್

    ಅಶ್ವಥ ಎಲೆಯಲ್ಲಿ ಮೂಡಿದ ಮಾಸ್ಟರ್ ಬ್ಲಾಸ್ಟರ್ – ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಪುಟ ಸೇರಿದ ಉಡುಪಿಯ ಮಹೇಶ್

    ಉಡುಪಿ: ಮರ್ಣೆ ಗ್ರಾಮದ ಯುವ ಕಲಾವಿದ ಮಹೇಶ್ ಮರ್ಣೆ ಮತ್ತೊಂದು ರೆಕಾರ್ಡ್ ಆರ್ಟ್ ಮಾಡಿದ್ದಾರೆ. ಅಶ್ವಥ ಎಲೆಯಲ್ಲಿ ಅತ್ಯಂತ ಸೂಕ್ಷ್ಮವಾಗಿ ಬ್ಲೇಡ್ ಸಹಾಯದಿಂದ ಕ್ರಿಕೆಟ್‍ನ ದಂತಕತೆ ಸಚಿನ್ ತೆಂಡೂಲ್ಕರ್ ಅವರ ಭಾವಚಿತ್ರವನ್ನು ರಚಿಸಿದ್ದಾರೆ. ಕೇವಲ 7 ನಿಮಿಷದಲ್ಲಿ ಲೀಫ್ ಆರ್ಟ್ ರಚಿಸಿ ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಪುಟ ಸೇರಿದ್ದಾರೆ.

    ಸಚಿನ್ ಅಪರೂಪದ ಫೋಟೋಗಳು ಮತ್ತು ಸಹಿ ಇರುವ ಸರ್ಟಿಫಿಕೇಟ್‍ಗಳು ಮಹೇಶ್ ಕೈ ಸೇರಿದೆ. 2015ರಲ್ಲಿ 3,500 ಐಸ್ ಕ್ರೀಮ್ ಕಡ್ಡಿ ಮತ್ತು 750 ಬೆಂಕಿಕಡ್ಡಿಯಿಂದ ರಚಿಸಿದ ಗಣಪತಿಯ ಕಲಾಕೃತಿಯ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರ್ಪಡೆಯಾಗಿ ಸಾಧನೆ ಮಾಡಿದ್ದರು. ಇದನ್ನೂ ಓದಿ:  ಮೈಸೂರು ಅಭಿವೃದ್ಧಿ ಬಗ್ಗೆ ಸಿದ್ದರಾಮಯ್ಯರೊಂದಿಗೆ ಬಹಿರಂಗ ಚರ್ಚೆಗೆ ಸಿದ್ಧ: ಪ್ರತಾಪ್ ಸಿಂಹ ಆಹ್ವಾನ 

    ವೀಡಿಯೋ ರೆಕಾರ್ಡ್
    ಅಶ್ವಥ ಎಲೆಯಲ್ಲಿ ಬ್ಲೇಡ್ ಮೂಲಕ ಸಚಿನ್ ತೆಂಡೂಲ್ಕರ್ ಅವರ ಭಾವಚಿತ್ರವನ್ನು 7 ನಿಮಿಷದಲ್ಲಿ ರಚಿಸಿದ ವೀಡಿಯೋವನ್ನು ಉತ್ತರಪ್ರದೇಶದ ಬರೇಲಿಯ ಲಾಟಾ ಪ್ರತಿಷ್ಠಾನಕ್ಕೆ ಪಟ್ಲ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕಾಂತ್ ಪ್ರಭು, ವಕೀಲರಾದ ಸಂತೋಷ್ ಕುಮಾರ್ ಮೂಡುಬೆಳ್ಳೆ, ಅರೂರು ಸುಕೇಶ್ ಶೆಟ್ಟಿ ಇವರ ಸಾಕ್ಷಿಗಳೊಂದಿಗೆ ಕಳುಹಿಸಲಾಗಿತ್ತು. ವೀಡಿಯೋ ವೀಕ್ಷಿಸಿದ ಸಂಸ್ಥೆಯು ಸೂಕ್ಷ್ಮ ಕಲಾಕೃತಿಯ ಬಗ್ಗೆ ಮೆಚ್ಚುಗೆವ್ಯಕ್ತಪಡಿಸಿ ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಮಹೇಶ್ ಅವರ ಹೆಸರನ್ನು ಸೇರ್ಪಡೆಗೊಳಿಸಿದ್ದಾರೆ.

    ಮಹೇಶ್ ಹಿನ್ನೆಲೆ
    ಮರ್ಣೆ ಶ್ರೀಧರ್ ಆಚಾರ್ಯ ಮತ್ತು ಲಲಿತಾ ದಂಪತಿ ಪುತ್ರರಾಗಿರುವ ಮಹೇಶ್ ಆಚಾರ್ಯ ಅವರು ಪ್ರಸ್ತುತ ಮಣಿಪಾಲದ ಭಾರಧ್ವಜ್ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಿಯಾಗಿರುತ್ತಾರೆ. ನಟರು, ರಾಜಕಾರಣಿಗಳು, ಸ್ವಾಮೀಜಿಗಳ ಫೋಟೋಗಳನ್ನು ಮಹೇಶ್ ಕಾಲಕಾಲಕ್ಕೆ ರಚಿಸಿ ಅವರಿಗೆ ನೀಡುತ್ತಾರೆ. ಇದನ್ನೂ ಓದಿ: ಹರಿತವಾದ ಕಥೆಯ ಸುಳಿವಿನೊಂದಿಗೆ ಬಂತು ‘ಹರಿಕಥೆ ಅಲ್ಲ ಗಿರಿಕಥೆ’ ಟ್ರೈಲರ್! 

  • ಮದಗಜ ಚಿತ್ರ ಖ್ಯಾತಿಯ ನಿರ್ದೇಶಕ ಮಹೇಶ್ ಕಂಡಂತೆ ‘ಜೇಮ್ಸ್’ ಸಿನಿಮಾ: ಸೆಲೆಬ್ರಿಟಿ ಫಸ್ಟ್ ರಿವ್ಯೂ

    ಮದಗಜ ಚಿತ್ರ ಖ್ಯಾತಿಯ ನಿರ್ದೇಶಕ ಮಹೇಶ್ ಕಂಡಂತೆ ‘ಜೇಮ್ಸ್’ ಸಿನಿಮಾ: ಸೆಲೆಬ್ರಿಟಿ ಫಸ್ಟ್ ರಿವ್ಯೂ

    ಸಿನಿಮಾ ನೋಡೋಕೆ ಹೋದಾಗ ಯಾವತ್ತೂ ನಾನು ಸಂಕಟದಿಂದ ಚಿತ್ರಮಂದಿರಕ್ಕೆ ಹೆಜ್ಜೆ ಇಟ್ಟವನು ಅಲ್ಲ. ಪುನೀತ್ ರಾಜ್ ಕುಮಾರ್ ಅವರ ‘ಜೇಮ್ಸ್’ ಚಿತ್ರಕ್ಕೆ ಹೋಗುವಾಗ ಅಂಥದ್ದೊಂದು ಸಂಕಟವಿತ್ತು. ಸಿನಿಮಾ ನೋಡುವ ಕುತೂಹಲದ ಜತೆಗೆ ನಾನು ತೆರೆಯ ಮೇಲೆ ಅಪ್ಪು ಸರ್ ನ ನೋಡೋಕೆ ಸಾಧ್ಯವಾ? ಅದು ನನ್ನಿಂದ ಆಗತ್ತಾ ಅನ್ನುವ ನೋವಿತ್ತು. ಆ ಒದ್ದಾಟದಲ್ಲೇ ಥಿಯೇಟರ್ ಗೆ ಹೋದೆ.

    ಸಿನಿಮಾ ಶುರುವಾಗುತ್ತಿದ್ದಂತೆಯೇ ‘ಜೇಮ್ಸ್’ ಅಂತ ಟೈಟಲ್ ಬಂತು. ಎದೆ ಬಡಿತ ಜೋರಾಯಿತು. ಕಾರ್ ಚೇಸ್ ಮಾಡಿಕೊಂಡು ಅಪ್ಪು ಸರ್ ಬರುವಾಗ ಎದ್ದೇ ನಿಂತುಕೊಂಡು ಬಿಟ್ಟೆ. ಆ ರೀತಿಯಲ್ಲಿ ಅಪ್ಪು ಸರ್ ಪಾತ್ರವನ್ನು ಎಂಟ್ರಿ ಕೊಡಿಸಿದ್ದಾರೆ ನಿರ್ದೇಶಕ ಚೇತನ್ ಕುಮಾರ್. ಇದೊಂದು ದೇಶಾಭಿಮಾನ ಇಟ್ಟುಕೊಂಡ ನಾಯಕನ ಕುರಿತಾದ ಚಿತ್ರ. ಅಪ್ಪು ಈವರೆಗೂ ನಾನಾ ರೀತಿಯ ಚಿತ್ರಗಳನ್ನು ಮಾಡಿದ್ದಾರೆ. ಆದರೆ, ಈ ಜಾನರ್ ನ ಚಿತ್ರದಲ್ಲಿ ಅವರು ನಟಿಸಿರಲಿಲ್ಲ. ಆ ಕೊರತೆಯನ್ನು ನೀಗಿಸಿದಂತಹ ಚಿತ್ರ ಇದಾಗಿದೆ. ಇದನ್ನೂ ಓದಿ : ವಿಭಿನ್ನ, ವಿಶಿಷ್ಟ, ಭಾವನಾತ್ಮಕ ಡಿಪಿಗಳಲ್ಲಿ ಪುನೀತ್ ರಾಜ್ ಕುಮಾರ್

    ಸೆಕ್ಯುರಿಟಿ ಏಜೆನ್ಸ್, ಡ್ರಗ್ಸ್ ಮಾಫಿಯಾ, ದೇಶಪ್ರೇಮ, ಗೆಳೆತನ ಹೀಗೆ ಹಲವು ಕವಲುಗಳ ಕಥೆ ಸಿನಿಮಾದಲ್ಲಿದ್ದರೂ, ಅಷ್ಟಕ್ಕೂ ಗೆಲ್ಲುವುದು ಪುನೀತ್ ರಾಜ್ ಕುಮಾರ್ ಎಂಬ ಸಂತೋಷ್ ಪಾತ್ರ. ನಿರ್ದೇಶಕ ಚೇತನ್ ಕುಮಾರ್ ಅವರ ಕಥೆ ಹೇಳುವ ಶೈಲಿಯೇ ಚೆನ್ನಾಗಿದೆ. ಯಾವುದು ಎಷ್ಟಿರಬೇಕೋ, ಯಾವ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಕೊಡಬೇಕೋ ಅಷ್ಟನ್ನೂ ಈ ಚಿತ್ರದಲ್ಲಿ ಕೊಟ್ಟಿದ್ದಾರೆ. ಹಾಗಾಗಿ ಎಲ್ಲಿಯೂ ಬೋರ್ ಅನಿಸದೇ ತಾನಾಗಿಯೇ ಸಿನಿಮಾ ನೋಡಿಸಿಕೊಂಡು ಹೋಗುತ್ತದೆ. ಕಥೆ ಹೇಳುವ ರೀತಿ, ದೃಶ್ಯಗಳನ್ನು ಕಟ್ಟಿದ ರೀತಿ ಮತ್ತು ಹಾಡುಗಳನ್ನು ಜೋಡಿಸಿದ ಪರಿಯೇ ಸೊಗಸಾಗಿದೆ. ಸಿನಿಮಾದ ಮತ್ತೊಂದು ವಿಶೇಷ ಅಂದರೆ, ಗೆಳೆತನಕ್ಕೆ ಮತ್ತೊಂದು ವ್ಯಾಖ್ಯಾನ ಕೊಟ್ಟಿದೆ. ಈವರೆಗೂ ಪುನೀತ್ ರಾಜ್ ಕುಮಾರ್ ಅವರ ಚಿತ್ರಗಳಲ್ಲಿ ಭಾವನಾತ್ಮಕ ಸನ್ನಿವೇಶಗಳು ಬಂದಾಗ ಅಪ್ಪ, ಅಮ್ಮ, ತಂಗಿ ಈ ರೀತಿಯಲ್ಲಿ ದೃಶ್ಯಗಳಾಗಿವೆ. ಈ ಸಿನಿಮಾದಲ್ಲಿ ಗೆಳೆತನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ : ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ

    ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಜತೆ ಚೈಲ್ಡ್ ವುಡ್ ಎಪಿಸೋಡ್ ಬರುತ್ತದೆ. ಅದನ್ನು ಮನಮುಟ್ಟುವಂತೆ ಚಿತ್ರಿಸಲಾಗಿದೆ. ಈ ಮೂವರು ಸಹೋದರರು ಒಂದೇ ಸಿನಿಮಾದಲ್ಲಿ ತೋರಿಸಿದ ಹೆಗ್ಗಳಿಕೆ ಕೂಡ ಈ ಚಿತ್ರಕ್ಕೆ ಸಲ್ಲಬೇಕು. ಸಿನಿಮಾಟೋಗ್ರಫಿ, ಸಾಹಸ ಸನ್ನಿವೇಶಗಳು ಈ ಸಿನಿಮಾದ ಅಂದವನ್ನು ಮತ್ತಷ್ಟು ಹೆಚ್ಚಿಸಿವೆ. ಪಾತ್ರಗಳು ಮತ್ತು ಪಾತ್ರಗಳಿಗೆ ಹಾಕುವ ಕಾಸ್ಟ್ಯೂಮ್ ಕೂಡ ಅಷ್ಟೇ ಒಪ್ಪಿದೆ. ಹರಿಕೃಷ್ಣ ಅವರ ಹಿನ್ನೆಲೆ ಸಂಗೀತ ಮತ್ತು ಚರಣ್ ರಾಜ್ ಅವರ ಸಂಗೀತ ಸಂಯೋಜನೆ ಸೂಪರ್ಬ್. ಇದನ್ನೂ ಓದಿ : ಜಗ್ಗೇಶ್ ಹುಟ್ಟು ಹಬ್ಬಕ್ಕೆ ಮೂರು ಸಿನಿಮಾಗಳ ಪೋಸ್ಟರ್ ರಿಲೀಸ್

    ಸಿನಿಮಾದ ಬಗ್ಗೆ ಹೇಳಲೇಬೇಕಾದ ಮತ್ತೊಂದು ಅಂಶವೆಂದರೆ, ಕ್ಲೈಮ್ಯಾಕ್ಸ್ ಪಾರ್ಟ್. ಕ್ಲೈಮ್ಯಾಕ್ಸ್ ನೋಡುತ್ತಿದ್ದಂತೆಯೇ ಎಮೋಷನಲ್ ಆಗಿಸುತ್ತದೆ. ಅಪ್ಪು ಸರ್ ಸಾಧನೆಯ ಬಗ್ಗೆ ಕ್ಲೈಮಾಕ್ಸ್ ನಲ್ಲಿ ಅಚ್ಚುಕಟ್ಟಾಗಿ ತೋರಿಸಲಾಗಿದೆ. ‘ಅಪ್ಪ ಅಜರಾಮರ, ಅಪ್ಪುಗೆ ಸಾವಿಲ್ಲ’ ಎಂದು ತೆರೆಯ ಮೇಲೆ ಬಂದಾಗ ಕಣ್ಣೀರು ತಡೆದುಕೊಳ್ಳಲು ಆಗುವುದೇ ಇಲ್ಲ. ಈ ಅಕ್ಷರಗಳು ಬರುತ್ತಿದ್ದಂತೆಯೇ ಇಡೀ ಥಿಯೇಟರ್ ನಲ್ಲಿದ್ದ ಪ್ರೇಕ್ಷಕರು ಎದ್ದು ನಿಂತು ಚೆಪ್ಪಾಳೆ ತಟ್ಟಿ ಗೌರವ ಸೂಚಿಸಿದ್ದು ಇದಕ್ಕೆ ಸಾಕ್ಷಿ.

    -ಮಹೇಶ್ ಕುಮಾರ್, ಮದಗಜ, ಅಯೋಗ್ಯ ಚಿತ್ರ ಖ್ಯಾತಿಯ ನಿರ್ದೇಶಕ

  • ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

    ರೋಹಿಣಿ ಸಿಂಧೂರಿಯಿಂದ 6 ಕೋಟಿ ಅಕ್ರಮ: ಸಾರಾ ಮಹೇಶ್ ಆರೋಪ

    ಮೈಸೂರು: ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ 6 ಕೋಟಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದಾರೆ.

    ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಟ್ಟೆ ಬ್ಯಾಗ್ ಖರೀದಿಯಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿದೆ. ಸುಮಾರು 6 ಕೋಟಿ ರೂ. ಅಕ್ರಮ ನಡೆದಿದೆ. ಸುಮಾರು 14,71,458 ಬಟ್ಟೆ ಬ್ಯಾಗ್ ಖರೀದಿ ಮಾಡಲಾಗಿದೆ. ಆದರೆ ಇದರ ವಾಸ್ತವ ಬೆಲೆ 1,47,15,000 ಆಗಿದೆ. ಅವರು ಖರೀದಿ ಮಾಡಿರುವುದು 7 ಕೋಟಿ ರೂ. ಕೊಟ್ಟು ಖರೀದಿ ಮಾಡಿದ್ದಾರೆ. ಅವರು ಬ್ಯಾಗ್‍ನಲ್ಲೇ 6 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದರು.ಇದನ್ನೂ ಓದಿ:ಸೆ.5ರಂದು ‘ಗೌರಿ ಲಂಕೇಶ್ ದಿನ’ವನ್ನಾಗಿ ಆಚರಿಸಲಿದೆ ಕೆನಡಾದ ಬರ್ನಾಬಿ ನಗರ

    ಈಜುಕೊಳ, ಜಿಮ್, ಕಟ್ಟಡ ನವೀಕರಣದ ಹಣವನ್ನು ಅವರಿಂದಲೇ ವಸೂಲಿ ಮಾಡಿ. ಸರ್ಕಾರದ ತನಿಖಾ ವರದಿಗಳ ಮೂಲಕ ಅವರ ತಪ್ಪು ಸಾಬೀತಾಗಿದೆ. ಅವರ 12 ವರ್ಷದ ಅವಧಿಯನ್ನು ಸೂಕ್ಷ್ಮವಾಗಿ ನಾನು ಗಮನಿಸಿದ್ದೇನೆ. ಅದಕ್ಕೆ ರೋಹಿಣಿ ಅವರು ಮೈಸೂರಿಗೆ ಬಂದಾಗ ವಿರೋಧಿಸಿದ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    8 ಆರೋಪಗಳನ್ನು ಮಾಡಿದ ಸಾ.ರಾ!

    ನನ್ನ 8 ಆರೋಪಗಳ ಬಗ್ಗೆ ಅಧಿಕಾರಿಗಳೇ ವರದಿ ಕೊಟ್ಟಿದ್ದಾರೆ. ನಾನು ಸಿಎಂ ಹಾಗೂ ಸಿಎಸ್‍ರನ್ನು ಭೇಟಿ ಮಾಡಿದ್ದೇನೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ. ಮುಂದೆ ದಕ್ಷತೆ ಇಲ್ಲದ ಅಪ್ರಾಮಾಣಿಕ ಅಧಿಕಾರಿ ನೇಮಕ ಮಾಡದಂತೆ ಮನವಿ ಮಾಡಿಕೊಂಡಿದ್ದೇನೆ. ಕಟ್ಟಡ ಕಾಮಗಾರಿಯಲ್ಲಿ ಸರ್ಕಾರಿ ಹಣ ದುರುಪಯೋಗ ಮಾಡಿಕೊಂಡಿರುವುದು. ಪಾರಂಪರಿಕ ಕಟ್ಟಡದ ಆದೇಶವನ್ನು ಗಾಳಿಗೆ ತೂರಿರುವುದು. ಈ ಬಗ್ಗೆ ಅಧಿಕಾರಿಗಳೇ ವರದಿ ಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ:ಸುಧಾಮೂರ್ತಿ, ನಾರಾಯಣಮೂರ್ತಿಯನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು: ಕಾರಜೋಳ

    ಇದು ಅಲ್ಲದೇ ಇನ್ನೂ ಮಹಾಮಸ್ತಕಾಭಿಷೇಕದಲ್ಲಿ ಎಷ್ಟು ಅಕ್ರಮ ಆಗಿರಬಹುದು. ರೋಹಿಣಿ ಸಿಂಧೂರಿ ಅವರ ಶಿಷ್ಯೆ ಎಂದು ಮನೀಷ್ ಅವರು ಹೇಳಿದ್ದರು. ಶಿಷ್ಯೆಗೆ ಇದೇ ಏನು ನೀವು ಹೇಳಿ ಕೊಟ್ಟಿರುವುದು? ಎಂದು ಮನೀಷ್ ಮುದ್ಗಲ್ ವಿರುದ್ದವೂ ವಾಗ್ದಾಳಿ ಮಾಡಿದರು.

    ಮುಖ್ಯ ಕಾರ್ಯದರ್ಶಿಗಳೇ ಏಕೆ ಸುಮ್ಮನಿದ್ದೀರಾ? ಎಲ್ಲಾ ದಾಖಲೆಗಳನ್ನು ನೀಡಿದರು ಸುಮ್ಮನೆ ಏಕೆ ಇದ್ದೀರಾ? ಕರ್ನಾಟಕ ರಾಜ್ಯದ ಜನರ ತೆರಿಗೆ ಹಣ ಆಂಧ್ರದಲ್ಲಿ ಆಸ್ತಿ ಮಾಡುವವರ ಪಾಲಾಗುತ್ತಿದೆ. ಇದಕ್ಕೆ ಸಿಎಂ ಮನೆಗೆ ಹೋಗಿದ್ದಿರಾ? ಈ ಕುರಿತು ಸಿಎಸ್ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ:ಚಿಂಕೆ ಭೇಟೆಯಾಡಿದ್ದವನ ಮೇಲೆ ಶೂಟೌಟ್

    ಈ ಬಗ್ಗೆ ಸಿಎಂ, ಸಿಎಸ್ ಭೇಟಿ ಮಾಡುತ್ತೇನೆ. ಅಮಾನತ್ತಿನಲ್ಲಿ ಇಟ್ಟು ತನಿಖೆ ಮಾಡಬೇಕು. ಇಲ್ಲ ಮುಖ್ಯ ಕಾರ್ಯದರ್ಶಿಗಳ ಕಚೇರಿ ಮುಂದೆ ಧರಣಿ ಮಾಡುತ್ತೇನೆ ಎಂದು ಹೇಳಿದರು.

    ಕೋವಿಡ್ ಸಂದರ್ಭದಲ್ಲಿ ತಾಯಿ ಹೃದಯ ಬೇಕು

    ಕೋವಿಡ್ ಸಂದರ್ಭದಲ್ಲಿ ತಾಯಿ ಹೃದಯ ಅಧಿಕಾರಿಗೆ ಇರಬೇಕಿತ್ತು. ಐಷಾರಾಮಿ ಜೀವನ ಮಾಡೋಕೆ ಸಾರ್ವಜನಿಕರ ಹಣ ಬಳಕೆ ಮಾಡಲಾಗಿದೆ. ಇದನ್ನು ಕೇಳಿದರೆ ನನ್ನ ಮೇಲೆ ಆರೋಪ ಮಾಡುತ್ತಾರೆ. ಗುತ್ತಿಗೆದಾರ ಕೊಡೋದೆಲ್ಲಾ ಅವರಿಗೆ ಕೊಟ್ಟಿದ್ದೇನೆ. ನಮಗೆ ಬಿಲ್ ಮಾಡಿಸಿ ಎಂದು ಗುತ್ತಿಗೆದಾರ ಕೇಳುತ್ತಿದ್ದಾರೆ. ಮೊದಲು ತನಿಖೆ ಆಗಬೇಕು. ಕ್ರಿಮಿನಲ್ ಕೇಸ್ ಬುಕ್ ಮಾಡಿ, ಕೆಲಸದಿಂದ ಅಮಾನತು ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರೋಹಿಣಿ ಸಿಂಧೂರಿ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅವರನ್ನು ಅಮಾನತು ಮಾಡಿ. ಇಲ್ಲ, ನಿಮ್ಮ ಕಚೇರಿ ಮುಂದೆ ಅಮರಾಣಾಂತ ಉಪವಾಸ ಮಾಡುತ್ತೇವೆ. ಒಳ್ಳೆಯ ಅಧಿಕಾರಿಗಳಿಗೆ ಕೈ ಮುಗಿಯುತ್ತೇವೆ. ಈ ರೀತಿಯ ಭ್ರಷ್ಟಾಚಾರ ಮಾಡುವ ಅಧಿಕಾರಿಗೆ ತಕ್ಕ ಶಿಕ್ಷೆಯಾಗಬೇಕು. ಬೇರೆ ಶಾಸಕರು ತಿರುಪತಿ ದೇವರಂತೆ ನಮಗೇಕೆ ಎಂದು ಸುಮ್ಮನಿದ್ದಾರೆ. ನಾನು ಶ್ರವಣ ಬೆಳಗೊಳದ ಗೊಮ್ಮಟೇಶ್ವರ ಇದ್ದಂತೆ ಎಂದು ಹೇಳಿದ್ದಾರೆ.

  • ಬಿಎಸ್‍ಪಿಯಿಂದ ನನಗೆ ಮೋಸವಾಗಿದೆ, ನನ್ನಿಂದ ಬಿಎಸ್‍ಪಿಗೆ ಮೋಸ ಆಗಿಲ್ಲ: ಎನ್. ಮಹೇಶ್

    ಬಿಎಸ್‍ಪಿಯಿಂದ ನನಗೆ ಮೋಸವಾಗಿದೆ, ನನ್ನಿಂದ ಬಿಎಸ್‍ಪಿಗೆ ಮೋಸ ಆಗಿಲ್ಲ: ಎನ್. ಮಹೇಶ್

    ಮೈಸೂರು: ಬಿಎಸ್‍ಪಿ ಪಕ್ಷದಿಂದ ನನಗೆ ಮೋಸವಾಗಿದೆ. ನನ್ನಿಂದ ಬಿಎಸ್‍ಪಿಗೆ ಮೋಸ ಆಗಿಲ್ಲ ಎಂದು ಗುರುವಾರ ಬಿಜೆಪಿ ಸೇರಿದ ಚಾಮರಾಜನಗರದ ಕೊಳ್ಳೆಗಾಲದ ಶಾಸಕ ಎನ್. ಮಹೇಶ್ ಹೇಳಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಎಸ್‍ಪಿ ನನ್ನ ತಾಯಿ ಪಕ್ಷ ಎಂದು ಹೇಳಿದ್ದೆ. ಆದರೆ ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಏನು ಮಾಡಬೇಕು. ಮಗ ಅನಾಥನಾಗಿದ್ದ. ಹೀಗಾಗಿ ರಾಜಕೀಯವಾಗಿ ದಾರಿ ಕಂಡುಕೊಂಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

    ನನ್ನನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿರುವವರು ಯಾರು ಎಂಬುದು ನನಗೆ ಗೊತ್ತಿದೆ. ಬಿಎಸ್‍ಪಿ ಗೆಳೆಯರಿಗೆ ನಾನು ಹೇಳುವುದಿಷ್ಟು. ನನ್ನನ್ನು ಟ್ರೋಲ್ ಮಾಡಿಕೊಂಡು ಸಮಯ ವ್ಯರ್ಥ ಮಾಡಬೇಡಿ. ಆ ಸಮಯವನ್ನು ಬಿಎಸ್‍ಪಿ ಪಕ್ಷ ಕಟ್ಟಲು ಬಳಸಿ. ನನ್ನನ್ನು ಟ್ರೋಲ್ ಮಾಡುತ್ತಿರುವವರಿಗೆ ಮಲೆ ಮಹದೇಶ್ವರ ಸ್ವಾಮಿ ಒಳೆಯದ್ದನ್ನು ಮಾಡಲಿ ಎಂದು ಹೇಳಿದ್ದಾರೆ.

    ಅವತ್ತಿನ ರಾಜಕೀಯ ಸಂದರ್ಭಕ್ಕೆ ಹೇಳಿದ ಮಾತನ್ನು ಇವತ್ತಿನ ನೆಲೆಯಲ್ಲಿ ನಿಂತು ನೋಡಬಾರದು. ಹೋರಾಟಗಳ ವೇಳೆ ಹೇಳಿದ ಮಾತೇ ಬೇರೆ. ಅಧಿಕಾರ ಸ್ಥಾನಗಳಿಗೆ ಬಂದಾಗಿನ ಮಾತೇ ಬೇರೆ ಎಂಬುದು ನನಗೆ ಅರ್ಥವಾಗಿದೆ. ನಮ್ಮ ಮತ ಬ್ಯಾಂಕ್ ಯಾವುದು ನಮ್ಮನ್ನು ಬಿಟ್ಟು ಹೋಗಿಲ್ಲ. ನನಗೆ ಬಿಜೆಪಿ ಸೇರುವುದು ಬಿಟ್ಟು ಬೇರೆ ದಾರಿಯೇ ಇರಲಿಲ್ಲ. ಕಾಂಗ್ರೆಸ್ ನಲ್ಲಿ ಸ್ಥಾನ ಖಾಲಿ ಇಲ್ಲ. ಇಲ್ಲದಿದ್ದರೆ ಚುನಾವಣಾ ರಾಜಕಾರಣ ಬಿಡಬೇಕಿತ್ತು. ಹೀಗಾಗಿ ಬಿಜೆಪಿ ಸೇರಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ:ಇಡಿ ಅಧಿಕಾರಿಗಳ ದಾಳಿಗೆ ಕಾರಣವಾಯ್ತಾ ಜಮೀರ್ ಮಗಳ ಮದುವೆ?

  • ಇನ್ನೂ ಎರಡು ತಿಂಗಳು ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದಿತ್ತು: ಶಾಸಕ ಎನ್.ಮಹೇಶ್

    ಇನ್ನೂ ಎರಡು ತಿಂಗಳು ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದಿತ್ತು: ಶಾಸಕ ಎನ್.ಮಹೇಶ್

    ಚಾಮರಾಜನಗರ: ರಾಜ್ಯದಲ್ಲಿ ಲಾಕ್‍ಡೌನ್ ಸಡಿಲಿಕೆ ಮಾಡಿರುವುದರಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದು, ಈ ಮಧ್ಯೆ ಕೊಳ್ಳೆಗಾಲ ಶಾಸಕ ಎನ್ ಮಹೇಶ್ ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಇನ್ನೂ ಎರಡು ತಿಂಗಳು ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದಿತ್ತು. ಹಳ್ಳಿಗಳಿಗೆ ಒಂದು ಬಾರಿ ಭೇಟಿ ಕೊಟ್ಟು ನೋಡಿ, ಎಷ್ಟೋ ಜನ ಆರೋಗ್ಯ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಎಣ್ಣೆ ಹಾಕುವುದಿಲ್ಲ ಎಂದರೆ ಸತ್ತು ಹೋಗುತ್ತಾರೆ, ನರ ದೌರ್ಬಲ್ಯ ಬರುತ್ತೆ ಅಂತಾ ಹೇಳ್ತಿದೋರು ಕೂಡ ಆರಾಮವಾಗಿದ್ದಾರೆ. ಮದ್ಯ ಪ್ರಿಯರ ಆರೋಗ್ಯ ದೃಷ್ಟಿಯಿಂದ ಮದ್ಯ ಮಾರಾಟವನ್ನು ಎರಡು ತಿಂಗಳು ಮುಂದೆ ಹಾಕಿ ಎಂದು ಅವರು ಇದೇ ವೇಳೆ ಮನವಿ ಮಾಡಿದ್ದಾರೆ.

    ಕಳ್ಳಭಟ್ಟಿ ದಂಧೆ ಹೆಚ್ಚಾಗಿದ್ದರೆ ಪೊಲೀಸರ ಮೂಲಕ ಬ್ರೇಕ್ ಹಾಕೋಣ. ಅದನ್ನು ಬಿಟ್ಟು ನೆಗಡಿ ಬಂತು ಎಂದು ಮೂಗು ಕತ್ತರಿಸಿಕೊಳ್ಳಲಾಗುವುದಿಲ್ಲ ಎಂದು ಸಲಹೆ ನೀಡಿದ್ದಾರೆ.

    ಲಾಕ್‍ಡೌನ್ ಹಿನ್ನೆಲೆಯಲ್ಲಿ ಕಳೆದ 40 ದಿನಗಳಿಂದ ಮದ್ಯ ಮಾರಾಟಕ್ಕೆ ನಿಷೇಧವಿತ್ತು. ಎಣ್ಣೆ ಪ್ರಿಯರು, ರಾಜಕಾರಣಿಗಳು ಸಹ ಮದ್ಯದಂಗಡಿ ತೆರೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಇದೀಗ ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿದೆ. ಸೋಮವಾರದಿಂದ ಮದ್ಯ ಮಾರಾಟ ಕೂಡ ನಡೆಯಲಿದೆ. ಹೀಗಿರುವಾಗ ಶಾಸಕ ಎನ್ ಮಹೇಶ್ ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

  • ಪ್ರೇಮಿಗಳ ದಿನದಂದು ಥ್ರಿಲ್ ನೀಡೋಕೆ ಬರ್ತಿದೆ ‘ಸಾಗುತ ದೂರ ದೂರ’ ಸಿನಿಮಾ!

    ಪ್ರೇಮಿಗಳ ದಿನದಂದು ಥ್ರಿಲ್ ನೀಡೋಕೆ ಬರ್ತಿದೆ ‘ಸಾಗುತ ದೂರ ದೂರ’ ಸಿನಿಮಾ!

    ‘ಸಾಗುತ ದೂರ ದೂರ’ ಸ್ಯಾಂಡಲ್‍ವುಡ್ ಅಂಗಳದಲ್ಲಿ ಎಲ್ಲರ ಗಮನ ಸೆಳೆದಿರೋ ಚಿತ್ರ. ಟೈಟಲ್? ಹೇಳುವಂತೆ ಚಿತ್ರವೂ ಜರ್ನಿಯಲ್ಲೇ ಕಥೆಯನ್ನು ಪ್ರೇಕ್ಷಕರಿಗೆ ಹೇಳಲಿದೆ. ಆದ್ರೆ ಇದು ಯಾರ ಜರ್ನಿ ಯಾಕೆ ಸಾಗುತ್ತಾರೆ ಅನ್ನೋದನ್ನ ನೀವು ಚಿತ್ರದಲ್ಲೇ ನೋಡಬೇಕು. ಫೆಬ್ರವರಿ 14 ವ್ಯಾಲೆಂಟೈನ್ಸ್ ಡೇಯಂದು `ಸಾಗುತ ದೂರ ದೂರ’ ಚಿತ್ರ ಬಿಡುಗಡೆಯಾಗುತ್ತಿದೆ.

    ಭಾವನಾತ್ಮಕ ಜರ್ನಿ ಒಳಗೊಂಡಿರೋ ಈ ಚಿತ್ರದಲ್ಲಿ ಕಥೆಯೇ ಜೀವಾಳವಾಗಿದ್ದು, ಪ್ರತಿ ಪಾತ್ರವೂ ಇಲ್ಲಿ ಎಲ್ಲರ ಗಮನ ಸೆಳೆಯಲಿದೆ. ಗುರಿಯನ್ನು ಅರಸಿ ಹೊರಟವರ ಕಥೆ ಚಿತ್ರದಲ್ಲಿದ್ದು, ತಾಯಿ ಮಗನ ಸೆಂಟಿಮೆಂಟ್ ಕಥೆಯ ಜೀವಾಳವಾಗಿದೆ. ಇಡೀ ಚಿತ್ರದ ನಿರೂಪಣೆ ಜರ್ನಿ ರೂಪದಲ್ಲೇ ಸಾಗಿರೋದು ಚಿತ್ರದ ವಿಶೇಷ ಸಂಗತಿ. ಜೊತೆಗೆ ಇನ್ನೂರು ವಿಭಿನ್ನ ಲೊಕೇಷನ್ ಗಳಲ್ಲಿ ಚಿತ್ರವನ್ನು ಸೆರೆ ಹಿಡಿದಿರೋದು ಈ ಚಿತ್ರದ ಇನ್ನೊಂದು ಇಂಟ್ರಸ್ಟಿಂಗ್ ಸಂಗತಿ. ಇಲ್ಲಿವರೆಗೂ ಚಿತ್ರದ ಎಳೆ ಬಗ್ಗೆ ಎಲ್ಲಿಯೂ ಚಿತ್ರತಂಡ ಗುಟ್ಟು ಬಿಟ್ಟು ಕೊಟ್ಟಿಲ್ಲ. ಆದ್ರಿಂದ ಚಿತ್ರದಲ್ಲಿ ಏನಿರಬಹುದು ಎನ್ನುವ ಕುತೂಹಲ ಎಲ್ಲರಲ್ಲಿಯೂ ಇದ್ದು ಚಿತ್ರ ಬಿಡುಗಡೆಯಾಗೋದನ್ನೇ ಕಾಯುತ್ತಿದ್ದಾರೆ.

    ಹೊಸತನ ತುಂಬಿರೋ ಈ ಚಿತ್ರದ ಟ್ರೈಲರ್ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಮಣಿಕಾಂತ್ ಕದ್ರಿ ಸಂಗೀತ ಸ್ಪರ್ಶವಿರೊ ಹಾಡುಗಳು ಕೂಡ ಗಮನ ಸೆಳೆದಿವೆ. ಅಪೇಕ್ಷಾ ಪುರೋಹಿತ್, ಜಾನ್ವಿ ಜ್ಯೋತಿ, ಮಹೇಶ್, ಮಾಸ್ಟರ್ ಆಶಿಕ್, ಉಷಾ ಬಂಡಾರಿ, ನವೀನ್, ವಿಜಯ್ ಸೇರಿದಂತೆ ಹಲವು ಕಲಾವಿದರು ಸಾಗುತ ದೂರ ದೂರ ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ. ಖುಷಿ ಕನಸು ಕ್ರಿಯೇಷನ್ಸ್ ಬ್ಯಾನರ್?ನಡಿ ನಿರ್ಮಾಣ ಆಗಿರೋ ಈ ಚಿತ್ರಕ್ಕೆ ಅಮಿತ್ ಪೂಜಾರಿ ಬಂಡವಾಳ ಹಾಕಿದ್ದಾರೆ.

  • ಈ ವಾರ ಸಿನಿರಸಿಕರನ್ನು ರಂಜಿಸಲು ತೆರೆಗೆ ಬರ್ತಿದೆ ‘ಸಾಗುತ ದೂರ ದೂರ’ ಚಿತ್ರ!

    ಈ ವಾರ ಸಿನಿರಸಿಕರನ್ನು ರಂಜಿಸಲು ತೆರೆಗೆ ಬರ್ತಿದೆ ‘ಸಾಗುತ ದೂರ ದೂರ’ ಚಿತ್ರ!

    ಸಿನಿ ಶುಕ್ರವಾರ ಸಿನಿರಸಿಕರ ಫೇವರೇಟ್ ದಿನ. ತಮ್ಮ ನೆಚ್ಚಿನ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿ ಎಂಜಾಯ್ ಮಾಡಲು ಕಾತುರದಿಂದ ಕಾಯುತ್ತಿರುತ್ತಾರೆ. ಈ ವಾರ ಪ್ರೇಕ್ಷಕ ಪ್ರಭುಗಳನ್ನು ರಂಜಿಸಲು ಬಹು ನಿರೀಕ್ಷಿತ `ಸಾಗುತ ದೂರ ದೂರ’ ಚಿತ್ರ ಚಿತ್ರಮಂದಿರಕ್ಕೆ ಬರ್ತಿದೆ.

    ಇಂಟ್ರಸ್ಟಿಂಗ್ ಕಥಾಹಂದರ, ಕಲರ್ ಫುಲ್ ಲೋಕೇಷನ್, ಕದ್ರಿ ಮಣಿಕಾಂತ್ ಮ್ಯೂಸಿಕ್ ಸಾಗುತ ದೂರ ದೂರ ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ. ಜರ್ನಿಯಲ್ಲೇ ಸಾಗೋ ಚಿತ್ರದ ಕಥೆಯು ಪ್ರೇಕ್ಷಕರಿಗೆ ಥ್ರಿಲ್ ನೀಡಲಿದ್ದು ಹೊಸ ಅನುಭವ ನೀಡಲಿದೆ. ರವಿತೇಜ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ತುಂಬಾ ಪ್ಯಾಶನೇಟ್ ಆಗಿ ಸಿನಿಮಾವನ್ನು ನಿರ್ದೇಶನ ಮಾಡಿ ಬಿಡುಗಡೆ ಹಂತಕ್ಕೆ ತಂದಿದ್ದಾರೆ. ಅಮಿತ್ ಪೂಜಾರಿ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಖುಷಿ ಕನಸು ಬ್ಯಾನರ್ ನಡಿ ‘ಸಾಗುತ ದೂರ ದೂರ’ ಚಿತ್ರ ನಿರ್ಮಾಣವಾಗಿದೆ.

    ತಾಯಿ ಮಗನ ಸೆಂಟಿಮೆಂಟ್ ಚಿತ್ರದಲ್ಲಿದ್ದು, ಕಥೆಯೇ ಚಿತ್ರದ ಜೀವಾಳವಾಗಿರೋ ಈ ಚಿತ್ರದಲ್ಲಿ ಅಪೇಕ್ಷಾ ಪುರೋಹಿತ್, ಜಾನ್ವಿ ಜ್ಯೋತಿ, ಮಹೇಶ್, ಮಾಸ್ಟರ್ ಆಶಿಕ್, ಉಷಾ ಬಂಡಾರಿ, ನವೀನ್, ವಿಜಯ್ ತಾರಾಬಳಗದಲ್ಲಿ ಮಿಂಚಿದ್ದಾರೆ. ಇನ್ನೂರು ಸುಂದರ ಲೊಕೇಷನ್ ಗಳಲ್ಲಿ ಈ ಚಿತ್ರವನ್ನು ಸೆರೆ ಹಿಡಿಯಲಾಗಿದ್ದು, ಅಭಿ ಕ್ಯಾಮೆರಾ ಕೈಚಳಕ ಚಿತ್ರದಲ್ಲಿದೆ. ಚಿತ್ರದ ಬಗ್ಗೆ ಎಲ್ಲಾ ಕಡೆಗಳಲ್ಲೂ ಒಳ್ಳೆಯ ಟಾಕ್ ಕ್ರಿಯೇಟ್ ಆಗಿದ್ದು ಈ ಶುಕ್ರವಾರ ಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಬಿಡುಗಡೆಯಾಗಲಿದೆ.

  • ಸದನಕ್ಕೆ ಬಂದು ಕಳಂಕರಹಿತವೆಂದು ಬಹಿರಂಗಪಡಿಸಿ- ಸಾರಾ ಮಹೇಶ್

    ಸದನಕ್ಕೆ ಬಂದು ಕಳಂಕರಹಿತವೆಂದು ಬಹಿರಂಗಪಡಿಸಿ- ಸಾರಾ ಮಹೇಶ್

    – ನಾವೂ ನೊಂದಿದ್ದೇವೆ ಆದ್ರೆ ಮುಂಬೈಗೆ ಹೋಗಿಲ್ಲ
    – ನನ್ನದು ತಪ್ಪಿದ್ದರೆ ಜನತೆಯ ಕ್ಷಮೆಯಾಚಿಸ್ತೇನೆ
    – ಪಕ್ಷಕ್ಕೆ ಕರೆತಂದು ತಪ್ಪು ಮಾಡಿದ್ದೇನೆ

    ಮೈಸೂರು: ಸೋಮವಾರ ಸದನಕ್ಕೆ ಬಂದು ನೀವು ಕಳಂಕರಹಿತ ಎಂದು ಬಹಿರಂಗ ಪಡಿಸಿ, ಆಗ ನಾನು ರಾಜ್ಯದ ಮುಂದೆ ಕ್ಷಮೆ ಕೇಳುತ್ತೇನೆ ಎಂದು ಸಚಿವ ಸಾ.ರಾ.ಮಹೇಶ್ ಅವರು ಶಾಸಕ ಎಚ್.ವಿಶ್ವನಾಥ್ ಅವರಿಗೆ ಬಹಿರಂಗವಾಗಿ ಸವಾಲು ಹಾಕಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾ.ರಾ.ಮಹೇಶ್, ಎಚ್ ವಿಶ್ವನಾಥ್ ಅವರು ಸದನದಿಂದ ಹೊರತುಪಡಿಸಿರುವ ವ್ಯಕ್ತಿಯಲ್ಲ. ಅವರು ಸದನದ ಸದಸ್ಯರಾಗಿದ್ದಾರೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ, ಮನಸಾಕ್ಷಿ ಇದ್ದರೆ ಸೋಮವಾರ ಸದನಕ್ಕೆ ಬನ್ನಿ. ನಾನು ಹೇಳಿರುವ ಮಾತಿನಲ್ಲಿ ತಪ್ಪಿದ್ದರೆ ರಾಜ್ಯದ ಜನತೆಯ ಮುಂದೆ ಕ್ಷಮೆ ಕೇಳುತ್ತೇನೆ. ಈಗಾಗಲೇ ನಾನು ಇನ್ಮುಂದೆ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದೇನೆ. ಅದೇ ಮಾತಿಗೆ ಬದ್ಧನಿದ್ದೇನೆ ಎಂದು ಹೇಳಿದರು.

    ನೀವು ಸದನಕ್ಕೆ ಬರುವ ಅಧಿಕಾರವನ್ನು ಕಳೆದುಕೊಂಡಿದ್ದೀರಿ. ನೀವು ಕಳಂಕರಹಿತ ಎಂದು ಹೇಳಲು ಇರುವ ಕೊನೆಯ ದಿನಾಂಕ ಸೋಮವಾರ. ಹೀಗಾಗಿ ಅಂದು ಬನ್ನಿ ಬಹಿರಂಗವಾಗಿ ಹೇಳಿ ನಾನು ಒಪ್ಪಿಕೊಳ್ಳುತ್ತೇನೆ. ಜೊತೆಗೆ ಎಲ್ಲ ಷರತ್ತುಗಳನ್ನು ನಾನು ಪಾಲಿಸುತ್ತೇನೆ. ಅಲ್ಲೇ ನಾನು ಸ್ಪೀಕರ್‍ಗೆ ರಾಜೀನಾಮೆ ಕೊಟ್ಟು ನನ್ನ ಜೀವಿತಾವಧಿಯಲ್ಲಿ ಯಾವುದೇ ರಾಜಕೀಯ ಹುದ್ದೆ, ಚುನಾವಣೆಯನ್ನು ಸಾರ್ವಜನಿಕ ಜೀವನದಲ್ಲಿ ಬಯಸಲ್ಲ. ಅಷ್ಟೇ ಅಲ್ಲದೆ ಸಾರ್ವಜನಿಕ ಜೀವನದಿಂದ ನಿವೃತ್ತಿ ಆಗುತ್ತೇನೆ ಎಂದು ವಿಶ್ವನಾಥ್‍ಗೆ ಸವಾಲು ಹಾಕಿದರು.

    ನಾವು ನೊಂದಿದ್ದೇವೆ. ಆದರೆ ಮುಂಬೈಗೆ ಹೋಗಿಲ್ಲ, ನೀವು ಮುಂಬೈನಿಂದ ಬನ್ನಿ. ನಮ್ಮ ಕರ್ನಾಟಕದಲ್ಲಿ ಪೊಲೀಸ್, ವೈದ್ಯರು ಇಲ್ವಾ? ನಮ್ಮ ಜನರು ನಿಮಗೆ ಪ್ರೀತಿ ಗೌರವವನ್ನು ಕೊಟ್ಟಿದ್ದಾರೆ. ಆದರೆ ನೀವು ಮುಂಬೈನಲ್ಲಿ ಕುಳಿತಿದ್ದೀರಿ. ಮುಂಬೈನಲ್ಲಿ ನಿಮಗೆ ಏನ್ ಸ್ವಾಮಿ ಕೆಲಸ ಎಂದು ಪ್ರಶ್ನೆ ಮಾಡಿದರು.

    ರಾಜಕಾರಣದಲ್ಲಿ ಪ್ರಯಾಣಿಕವಾಗಿದ್ದವನು ನೇರವಾಗಿ ಮಾತನಾಡುತ್ತಾನೆ, ಅದು ದುರಂಕಾರವಲ್ಲ. ಒಬ್ಬ ಮನಷ್ಯ ವ್ಯವಹಾರ ಮಾಡುವುದು ತಪ್ಪಲ್ಲ. ಆದರೆ ರಾಜಕಾರಣವನ್ನು ವ್ಯವಹಾರ ಮಾಡುವುದು ತಪ್ಪು ಎಂದು ಮಹೇಶ್ ಗರಂ ಆದರು.

    ಒಮ್ಮೆ ನಾನು ಬಿಜೆಪಿ ಮುಖಂಡರನ್ನು ಆಕಸ್ಮಿಕವಾಗಿ ಭೇಟಿಯಾಗಿದ್ದೆ. ಆಗ ಅವರು ಅವನು ಬಿಜೆಪಿಯ ಹಳೆ ಗಿರಾಕಿ ಎಂದು ಟೀಕಿಸಿದ್ದರು. ಆಗಲೂ ಸುಮ್ಮನೆ ಇದ್ದೆ. ನನ್ನ ಮೇಲೆ ಹಲವು ಬಾರಿ ಟೀಕಿಸಿದ್ದರೂ ಸುಮ್ನೆ ಇದ್ದೆ. ನನಗೂ ಸ್ವಾಭಿಮಾನವಿದೆ, ಹಾಗಾಗಿ ನಾನು ವಿಧಾನಸಭೆಯಲ್ಲಿ ಮಾತನಾಡಿದೆ. ಆದರೆ ಈ ಬಗ್ಗೆ ನೀವು(ವಿಶ್ವನಾಥ್) ಮಾಧ್ಯಮಗಳಲ್ಲಿ ಮಾತನಾಡಿ, ನಾನು ಪ್ರಾಮಾಣಿಕನಾಗಿದ್ದರೂ ಭ್ರಷ್ಟಾಚಾರಿ ಅಲ್ಲ, ನನ್ನನ್ನು ಮಂತ್ರಿ ಮಾಡಲು ಅವರ‍್ಯಾರು ಎಂದು ಪ್ರಶ್ನೆ ಮಾಡಿದ್ದೀರಿ ಎಂದು ವಿಶ್ವನಾಥ್ ಹೇಳಿಕೆಯನ್ನು ಸಾರಾ ಮಹೇಶ್ ಇಂದು ಪ್ರಸ್ತಾಪ ಮಾಡಿದರು.

    ನಮ್ಮ ನಾಯಕರಿಗೆ ಇವತ್ತು ಈ ಸ್ಥಿತಿಗೆ ಬರಲು ಪರೋಕ್ಷವಾಗಿ ನಾನೇ ಕಾರಣ. ವಿಶ್ವನಾಥ್‍ರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಜಿ.ಟಿ ದೇವೇಗೌಡ ಸೇರಿದಂತೆ ಹಲವರ ವಿರೋಧ ಇತ್ತು. ಆದರೂ ನಾನು ಪಕ್ಷಕ್ಕೆ ಒಳ್ಳೆಯಾದಾಗಲಿ ಎಂದು ಅವರನ್ನು ಕರೆ ತಂದೆ. ಆವತ್ತು ನಾನು ನಮ್ಮ ಪಕ್ಷಕ್ಕೆ ಅವರನ್ನು ಬೇಡ ಅಂದಿದ್ದರೆ, ಇವತ್ತು ನಮ್ಮ ಪಕ್ಷಕ್ಕೆ ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಕೋಪದಿಂದ ಹೇಳಿದರು.

    ನಾನು ಜಾತಿ ವಿರೋಧಿನಾ, ನಾನು ವೃತ್ತಿಯಲ್ಲಿ ಡೆವಲಪರ್ ಆಗಿದ್ದೆ. ನನಗೆ ವ್ಯವಹಾರ ಇದೆ. ನಾನು ನಾಲ್ಕು ಚುನಾವಣೆಯನ್ನು ಎದುರಿಸಿದ್ದೇನೆ. ಜನರು ನನ್ನನ್ನು ಮೂರು ಬಾರಿ ಆಯ್ಕೆ ಮಾಡಿದ್ದಾರೆ. ನೀವು ಒಂಬತ್ತು ಚುನಾವಣೆಯಲ್ಲಿ ನಿಂತಿದ್ದೀರಿ. ಆದರೆ ನಾಲ್ಕು ಬಾರಿ ಸೋತಿದ್ದೀರಿ, ನಾನು ಜಾತಿ ವಿರೋಧಿ ಮಾಡುತ್ತೀನಾ. ನಿಮಗೆ ಯಾವ ವ್ಯವಹಾರ ಇದೆ, ಹಣ ಎಲ್ಲಿಂದ ಬಂತು ಎಂದು ಮಹೇಶ್ ವ್ಯಂಗ್ಯವಾಡಿದರು.

    ನಾನು ಮಾನನಷ್ಟ ಮೊಕದ್ದಮೆ ಹಾಕುತ್ತೀನಿ ಎಂದು ಹೇಳಿದ್ದೀರಲ್ಲ. ಬನ್ನಿ ನಾಳೆ ಅಧಿವೇಶನಕ್ಕೆ ನನ್ನ ವಿರುದ್ಧ ಹಕ್ಕು ಚ್ಯುತಿ ತನ್ನಿ. ಇನ್ನೂ ಅನೇಕ ವಿಷಯಗಳಿವೆ, ಅವುಗಳನ್ನು ಬಹಿರಂಗ ಪಡಿಸುತ್ತೇನೆ. ಯಾವ ದೇವಸ್ಥಾನಕ್ಕೆ ಕರೆಯುತ್ತೀರಾ ಕರೆಯಿರಿ ಬರುತ್ತೇನೆ. ನಾನು ನನ್ನ ವ್ಯವಹಾರದಲ್ಲಿ ಬಿಟ್ಟು, ಬೇರೆ ಯಾರಿಂದಲೂ ಹಣ ಪಡೆದಿಲ್ಲ. ಇದನ್ನು ಎಲ್ಲಿ ಬೇಕಾದರೂ ಹೇಳುತ್ತೇನೆ ಎಂದು ಮಹೇಶ್ ಸವಾಲು ಹಾಕಿದರು.

  • ಭರಾಟೆಯೊಂದಿಗೇ ಮದಗಜ ಘೀಳಿಟ್ಟ ಸದ್ದು!

    ಭರಾಟೆಯೊಂದಿಗೇ ಮದಗಜ ಘೀಳಿಟ್ಟ ಸದ್ದು!

    ಶ್ರೀಮುರಳಿ ಇದೀಗ ಭರಾಟೆ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಭರ್ಜರಿ ಚೇತನ್ ನಿರ್ದೇಶನದ ಭರಾಟೆ ಚಿತ್ರದ ಬಹು ಭಾಗದ ಚಿತ್ರೀಕರಣ ರಾಜಸ್ಥಾನದಲ್ಲಿ ನಡೆದಿತ್ತು. ಇದೀಗ ಮಂಡ್ಯ ಸುತ್ತಮುತ್ತ ಇದರ ಚಿತ್ರೀಕರಣ ನಡೆಯುತ್ತಿದೆ. ಹೀಗೆ ಬಿಡುವಿರದೆ ಚಿತ್ರೀಕರಣ ನಡೆಯುತ್ತಿರೋ ಭರಾಟೆಯ ನಡುವೆಯೇ ಮದಗಜ ಘೀಳಿಟ್ಟ ಸದ್ದು ಕೇಳಿಸಿದೆ!

    ಶ್ರೀಮುರುಳಿ ಭರಾಟೆ ಚಿತ್ರದ ಚಿತ್ರೀಕರಣದ ನಡುವಲ್ಲಿಯೇ ಮತ್ತೊಂದು ಚಿತ್ರಕ್ಕೂ ತಯಾರಿ ಆರಂಭಿಸಿದ್ದಾರೆ. ಅದು ಮದಗಜ!

     

    ಯೋಗರಾಜ್ ಭಟ್ ಶಿಷ್ಯ ಮಹೇಶ್ ಅಯೋಗ್ಯ ಚಿತ್ರದ ಮೂಲಕ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಮಹೇಶ್ ಶ್ರೀಮುರಳಿಯವರಿಗೆ ಚಿತ್ರವೊಂದನ್ನು ನಿರ್ದೇಶನ ಮಾಡಲಿರೋ ಬಗ್ಗೆ ಸುದ್ದಿಯಾಗಿತ್ತು. ನಂತರ ಅದಕ್ಕೆ ಮದಗಜ ಅಂತ ಟೈಟಲ್ ಫಿಕ್ಸಾಗಿದ್ದರೂ ಇದು ಮುಂದಿನ ವರ್ಷ ಶುರುವಾಗಲಿರೋ ಪ್ರಾಜೆಕ್ಟ್ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ಮದಗಜ ಚಿತ್ರದ ಸ್ಕ್ರಿಪ್ಟ್ ಸೇರಿದಂತೆ ಎಲ್ಲ ಕೆಲಸ ಕಾರ್ಯಗಳೂ ಅಂತಿಮ ಹಂತ ತಲುಪಿವೆ.

    ಮದಗಜ ಚಿತ್ರಕ್ಕೂ ಮಂಜು ಮಾಸ್ತಿ ಅವರೇ ಸಂಭಾಷಣೆ ಬರೆಯಲಿದ್ದಾರಂತೆ. ಇನ್ನೇನು ಭರಾಟೆ ಮುಗಿಯೋ ಮುನ್ನವೇ ಈ ಕೆಲಸ ಪೂರ್ಣಗೊಳ್ಳುತ್ತದೆ. ಆ ಬಳಿಕ ಶ್ರೀ ಮುರಳಿ ಚಿತ್ರೀಕರಣದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv