Tag: Mahesh Manjrekar

  • ದರ್ಶನ್ ಸಿನಿಮಾದಲ್ಲಿ ಬಾಲಿವುಡ್ ನಟ ಮಹೇಶ್ ಮಂಜ್ರೇಕರ್

    ದರ್ಶನ್ ಸಿನಿಮಾದಲ್ಲಿ ಬಾಲಿವುಡ್ ನಟ ಮಹೇಶ್ ಮಂಜ್ರೇಕರ್

    ಬಾಲಿವುಡ್ ನ ಹೆಸರಾಂತ ಹಿರಿಯ ನಟ ಮಹೇಶ್ ಮಂಜ್ರೇಕರ್ (Mahesh Manjrekar) ಬರೋಬ್ಬರಿ 19 ವರ್ಷಗಳ ನಂತರ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡುತ್ತಿದ್ದಾರೆ. ಈ ಹಿಂದೆ ಅವರು ಎನ್ ಕೌಂಟರ್ ದಯಾನಾಯಕ ಸಿನಿಮಾದಲ್ಲಿ ಪಾತ್ರ ಮಾಡಿದ್ದರು. ಈಗ ದರ್ಶನ್ ನಟನೆಯ ಡೆವಿಲ್ ಚಿತ್ರದಲ್ಲಿ ವಿಶೇಷ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆ.

    ಡೆವಿಲ್ ಈಗಾಗಲೇ ಮೊದಲನೇ ಹಂತದ ಚಿತ್ರೀಕರಣ ಮುಗಿಸಿದೆ. ಈ ಸಮಯದಲ್ಲೇ ನಟ ದರ್ಶನ್ (Darshan) ಅವರ ಕೈಗೆ ಏಟಾಗಿತ್ತು. ಈಗ ಶಸ್ತ್ರ ಚಿಕಿತ್ಸೆ ಪಡೆದಿರುವ ದರ್ಶನ್, ಒಂದು ತಿಂಗಳ ವಿಶ್ರಾಂತಿ ಪಡೆದುಕೊಳ್ಳಬೇಕಿದೆ. ಹಾಗಾಗಿ ದರ್ಶನ್ ಇಲ್ಲದ ದೃಶ್ಯಗಳನ್ನು ಚಿತ್ರೀಕರಿಸಲು ನಿರ್ದೇಶಕರು ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.

    ಈಗಾಗಲೇ ‘ಡೆವಿಲ್’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿ ಭರ್ಜರಿ ಸೌಂಡ್ ಮಾಡ್ತಿದೆ. ದಚ್ಚು ಹುಟ್ಟುಹಬ್ಬದ ದಿನ ಫ್ಯಾನ್ಸ್‌ಗೆ ಇದೊಂದು ಸರ್ಪ್ರೈಸ್ ಗಿಫ್ಟ್ ಆಗಿತ್ತು. ದರ್ಶನ್ ‘ಡೆವಿಲ್’ನಲ್ಲಿ (Devil Film) ವಿಭಿನ್ನ ಲುಕ್‌ನಲ್ಲಿ ಕಾಣಿಸ್ಕೊಂಡಿದ್ದಾರೆ.

    ದರ್ಶನ್ ಹುಟ್ಟುಹಬ್ಬದ ದಿನವೇ ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ರಿವೀಲ್ ಆಯ್ತು. ಅಬ್ಬರಿಸುವ ಡೈಲಾಗ್ ಮೂಲಕ ದಚ್ಚು ಎಂಟ್ರಿ ಬಹಳ ಕುತೂಹಲಕಾರಿಯಾಗಿತ್ತು. ‘ನಮ್ಮ ಮನೆಯಲೊಂದು ಪುಟ್ಟ ಪಾಪು ಇರುವುದು’ ಎಂಬ ವಿಭಿನ್ನ ಡೈಲಾಗ್ ಹೇಳುವ ಮೂಲಕ ದರ್ಶನ್ ಉಗ್ರವಾಗಿ ಕಾಣಿಸಿಕೊಂಡಿದ್ದಾರೆ.

     

    ಮಿಲನ ಪ್ರಕಾಶ್ (Milana Prakash) ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕೆ ಇರಲಿದೆ, ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ.

  • ಮರಾಠಿ ಸಿನಿಮಾ ರಂಗಕ್ಕೆ ಹಾರಿದ ಅಕ್ಷಯ್ ಕುಮಾರ್ : ಛತ್ರಪತಿ ಶಿವಾಜಿ ಪಾತ್ರದಲ್ಲಿ ಅಕ್ಕಿ

    ಮರಾಠಿ ಸಿನಿಮಾ ರಂಗಕ್ಕೆ ಹಾರಿದ ಅಕ್ಷಯ್ ಕುಮಾರ್ : ಛತ್ರಪತಿ ಶಿವಾಜಿ ಪಾತ್ರದಲ್ಲಿ ಅಕ್ಕಿ

    ತತ ಸೋಲಿನಿಂದ ಕಂಗೆಟ್ಟಿರುವ ಬಾಲಿವುಡ್ ಖ್ಯಾತ ನಟ  ಅಕ್ಷಯ್ ಕುಮಾರ್, ಇದೀಗ ಮತ್ತೊಂದು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ಮರಾಠಿ ಸಿನಿಮಾ ರಂಗಕ್ಕೆ ಹಾರಿದ್ದು, ಅಲ್ಲಿ ಛತ್ರಿಪತಿ ಶಿವಾಜಿ ಮಹಾರಾಜ್ ಸಿನಿಮಾದಲ್ಲಿ ನಟಿಸಲಿದ್ದಾರೆ. ಶಿವಾಜಿ ಮಹಾರಾಜ್ ಪಾತ್ರವನ್ನು ಅವರು ನಿರ್ವಹಿಸಲಿದ್ದಾರೆ. ಶಿವಾಜಿ ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಈ ಚಿತ್ರಕ್ಕೆ ‘ವೇಡಾತ್ ಮರಾಠೆ ವೀರ್ ದೌಡಲೆ ಸಾತ್’ ಎಂದು ಹೆಸರು ಇಡಲಾಗಿದೆ.

     

    ಇತ್ತೀಚೆಗಷ್ಟೇ ರಿಲೀಸ್ ಆದ, ಅಕ್ಷಯ್ ಕುಮಾರ್ ನಟನೆಯ ‘ರಾಮ್ ಸೇತು’ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ತಂದುಕೊಡಲಿಲ್ಲ. ಈ ಹಿಂದಿನ ಸಿನಿಮಾಗಳು ಕೂಡ ಬಾಕ್ಸ್ ಆಫೀಸ್ ಗೆಲ್ಲುವಲ್ಲಿ ವಿಫಲವಾದವು. ಈ ಕಾರಣದಿಂದಾಗಿಯೇ ಅವರು ಮರಾಠಿ ಸಿನಿಮಾ ರಂಗದತ್ತ ಹೊರಳಿದ್ದಾರೆ ಎಂದು ಹೇಳಲಾಗುತ್ತಿದೆ. ಮೊದಲ ಪ್ರಯತ್ನದಲ್ಲೇ ಅವರು ಮರಾಠ ಸಾಮ್ರಾಜ್ಯದ ದೊರೆ ಆಗಿದ್ದ ಛತ್ರಪತಿ ಶಿವಾಜಿ ಅವರ ಜೀವನವನ್ನು ಆಧರಿಸಿದ ಸಿನಿಮಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನುತ್ತವೆ ಮೂಲಗಳು

     

    ಈ ಸಿನಿಮಾವನ್ನು ಮಹೇಶ್ ಮಂಜರೇಕರ್ ನಿರ್ದೇಶನ ಮಾಡುತ್ತಿದ್ದು, ವಸೀಮ್ ಖುರೇಷಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತಿಚೆಗಷ್ಟೇ ಸಿನಿಮಾದ ಮುಹೂರ್ತ ಕೂಡ ಆಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮತ್ತೊಂದು ವಿಶೇಷ ಅಂದರೆ, ಇದೇ ಕಾರ್ಯಕ್ರಮದಲ್ಲಿ ಎಂ.ಎನ್.ಸಿ ಮುಖ್ಯಸ್ಥ ರಾಜ್ ಠಾಕ್ರೆ ಕೂಡ ಭಾಗಿಯಾಗಿ, ಏಕನಾಥ್ ಶಿಂಧೆಗೆ ಮುಖಾಮುಖಿ ಆಗಿದ್ದಾರೆ.

     

    ಸಿನಿಮಾ ಕುರಿತು ಮಾತನಾಡಿರುವ ಅಕ್ಷಯ್ ಕುಮಾರ್, ‘ಇಂತಹ ದೊಡ್ಡ ಪಾತ್ರ ನನಗೆ ಸಿಕ್ಕಿದ್ದು ಖುಷಿಯಾಗಿದೆ. ಇದು ನನ್ನ ಕನಸಿನ ಪಾತ್ರ ಕೂಡ ಆಗಿತ್ತು. ಇದೇ ಮೊದಲ ಬಾರಿಗೆ ನಿರ್ದೇಶಕ ಮಹೇಶ್ ಅವರ ಜೊತೆ ಕೆಲಸ ಮಾಡುತ್ತಿದ್ದೇನೆ. ತೆರೆಯ ಮೇಲೆ ನನ್ನನ್ನು ನಾನು ನೋಡಲು ಉತ್ಸುಕನಾಗಿದ್ದೇನೆ; ಎಂದು ಅವರು ಹೇಳಿದ್ದಾರೆ. ನಿರ್ದೇಶಕರು ಈ ಚಿತ್ರಕ್ಕಾಗಿ ಸತತ ಏಳು ವರ್ಷಗಳಿಂದ ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಥೇಟ್ ಸಾವರ್ಕರ್ ರೀತಿಯಲ್ಲೇ ಕಾಣುವ ರಣ್ ದೀಪ್ : ಸಾವರ್ಕರ್ ಸಿನಿಮಾದ ಫಸ್ಟ್ ಲುಕ್

    ಥೇಟ್ ಸಾವರ್ಕರ್ ರೀತಿಯಲ್ಲೇ ಕಾಣುವ ರಣ್ ದೀಪ್ : ಸಾವರ್ಕರ್ ಸಿನಿಮಾದ ಫಸ್ಟ್ ಲುಕ್

    ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಜೀವನವನ್ನು ಆಧರಿಸಿದ ಸಿನಿಮಾವೊಂದು ಬಾಲಿವುಡ್ ನಲ್ಲಿ ಬರುತ್ತಿದೆ. ಸಾವರ್ಕರ್ ಜೀವನ ಸಾಧನೆಯನ್ನು ಬಿಂಬಿಸುವಂತಹ ಈ ಸಿನಿಮಾವನ್ನು ಮಹೇಶ್ ಮಂಜ್ರೇಕರ್ ನಿರ್ದೇಶನ ಮಾಡುತ್ತಿದ್ದು, ಸಾವರ್ಕರ್ ಪಾತ್ರದಲ್ಲಿ ರಣ್ ದೀಪ್ ಹೂಡ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ : ಶಾರುಖ್ ಖಾನ್ ಮನೆ ‘ಮನ್ನತ್’ ನೇಮ್ ಪ್ಲೇಟ್ ನಾಪತ್ತೆ: ಇದರ ಹಿಂದಿದೆ ಭಾರೀ ರಹಸ್ಯ

    ಶನಿವಾರ ವೀರ ಸಾವರ್ಕರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ರಣ್ ದೀಪ್ ಹೂಡ ಥೇಟ್ ಸಾವರ್ಕರ್ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟರ ಮಟ್ಟಿಗೆ ಫಸ್ಟ್ ಲುಕ್ ಜನರ ಮನಸ್ಸು ಗೆದ್ದಿದೆ. ಮೊದಲ ಲುಕ್ ಹೀಗೆಯೇ ಬರಬೇಕು ಎಂದು ಶ್ರಮವಹಿಸಿ ಫಸ್ಟ್ ಲುಕ್ ತಯಾರಿಸಿದ್ದು, ಥೇಟ್ ಸಾವರ್ಕರ್ ಅವರ ಮುಖಭಾವವನ್ನೇ ಹೂಡ ಹೋಲುತ್ತಿದ್ದಾರೆ. ಇದನ್ನೂ ಓದಿ : ನಯನತಾರಾ ಮದುವೆ ದಿನಾಂಕ ಬದಲು, ರೆಸಾರ್ಟ್ ನಲ್ಲಿ ಸಪ್ತಪದಿ ತುಳಿಯಲಿದೆ ಜೋಡಿ

    ಫಸ್ಟ್ ಲುಕ್ ರಿಲೀಸ್ ಆಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಅದು ವೈರಲ್ ಆಗಿದೆ, ಭಾರೀ ಮೆಚ್ಚುಗೆಗೂ ಪಾತ್ರವಾಗಿದೆ. ತಲೆಯ ಮೇಲಿನ ಟೋಪಿ, ಅವರು ಧರಿಸಿರುವ ಕನ್ನಡಕ, ಸುಮ್ಮಾ, ಮೀಸೆ ಮುಖಭಾವ ಹೀಗೆ ಎಲ್ಲವೂ ಸಾವರ್ಕರ್ ರೀತಿಯಲ್ಲಿ ತಯಾರಿಸಲಾಗಿದೆ. ಇದನ್ನೂ ಓದಿ : ರಜನಿಕಾಂತ್ ನನ್ನ ವೈರಿಯಲ್ಲ ಎಂದ ಕಮಲ್ ಹಾಸನ್

    ಸದ್ಯ ಫಸ್ಟ್ ಲುಕ್ ಮಾತ್ರ ತಯಾರಾಗಿದ್ದು, ಇನ್ನೂ ಶೂಟಿಂಗ್ ಶುರುವಾಗಿಲ್ಲ. ಸದ್ಯದಲ್ಲೇ ಚಿತ್ರೀಕರಣವನ್ನೂ ಪ್ರಾರಂಭಿಸುವುದಾಗಿ ಮಹೇಶ್ ಮಂಜ್ರೆಕರ್ ತಿಳಿಸಿದ್ದಾರೆ. ಈಗ ಅದಕ್ಕಾಗಿ ಸಕಲ ಸಿದ್ಧತೆಯನ್ನೂ ಮಾಡಿಕೊಳ್ಳಲಾಗುತ್ತಿದೆ.

  • ಬಾಲಿವುಡ್ ನಲ್ಲಿ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ

    ಬಾಲಿವುಡ್ ನಲ್ಲಿ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ

    ವೀರ ಸಾವರ್ಕರ್ ನಿಲುವಿನ ಬಗ್ಗೆ ದೇಶಾದ್ಯಂತ ಬಿಸಿ ಬಿಸಿ ಚರ್ಚೆ ಆಗುತ್ತಿದೆ. ಈ ಸಂದರ್ಭದಲ್ಲಿ ಅವರ ಬಯೋಪಿಕ್ ಸಿನಿಮಾವಾಗಿ ಮೂಡಿ ಬರುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಗೆಲುವು ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ ಸೇರಿದಂತೆ ಹಲವು ಚಿತ್ರಗಳ ನಿರ್ಮಾಣಕ್ಕೆ ಮುನ್ನುಡಿ ಬರೆದಿದೆ. ಇದನ್ನೂ ಓದಿ : ಕದ್ದುಮುಚ್ಚಿ ಮದುವೆ ಆಗಿಲ್ಲ, ಬಾಡಿಗೆ ತಾಯಿ ಸುಳ್ಳು : ನಯನತಾರಾ

    ಭಾರತೀಯ ಸಿನಿಮಾ ರಂಗದಲ್ಲಿ ಸದ್ಯ ಬಯೋಪಿಕ್ ಟ್ರೆಂಡ್ ಭರ್ಜರಿಯಾಗಿದೆ. ಅದರಲ್ಲೂ ವಿವಾದಿತ ವ್ಯಕ್ತಿಗಳ ಮೇಲಿನ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲೂ ಸಖತ್ ಸದ್ದು ಮಾಡುತ್ತಿವೆ. ಹೀಗಾಗಿ ಇಂದು ಬಾಲಿವುಡ್ ನಲ್ಲಿ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಅನೌನ್ಸ್ ಆಗಿದೆ. ಇದನ್ನೂ ಓದಿ:  ಕಾದಂಬರಿ ಆಧರಿತ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ

    ಮಹೇಶ್ ಮಾಂಜ್ರೇಕರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಸಾವರ್ಕರ್ ಪಾತ್ರವನ್ನು ಬಾಲಿವುಡ್ ಖ್ಯಾತ ನಟ ರಣದೀಪ್ ಹೂಡ ಮಾಡಲಿದ್ದಾರೆ. ಆನಂದ್ ಪಂಡಿತ್ ಮತ್ತು ಸಂದೀಪ್ ಸಿಂಗ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವುದು ವಿಶೇಷ. ಇದನ್ನೂ ಓದಿ : ಅನಿಲ್ ಕಪೂರ್ ಈ ಫೋಟೋ ಹಾಕಬಾರದಿತ್ತು: ಕಿವಿ ಹಿಂಡಿದ ಅಭಿಮಾನಿಗಳು

    ಈ ಕುರಿತು ಮಾತನಾಡಿರುವ ರಣದೀಪ್ ಹೂಡ “ಇಂಥದ್ದೊಂದು ಪಾತ್ರ ನನಗೆ ಸಿಕ್ಕಿದ್ದು ಮತ್ತು ವೀರ ಸಾವರ್ಕರ್ ಪಾತ್ರವನ್ನು ನಾನೂ ಮಾಡುತ್ತಿರುವುದು ನನಗೆ ಸಿಕ್ಕಿರುವ ದೊಡ್ಡ ಗೌರವವಿದು’ ಎಂದಿದ್ದಾರೆ.ಮುಂದುವರೆದು ಮಾತನಾಡಿರುವ ಅವರು, “ವಿನಾಯಕ ದಾಮೋದರ ಸಾವರ್ಕರ್ ಕುರಿತಾಗಿ ಈಗಾಗಲೇ ಸಾಕಷ್ಟು ತಪ್ಪು ಕಲ್ಪನೆಗಳನ್ನು ಬಿತ್ತಲಾಗಿದೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಷ್ಟೋ ಮಹಾತ್ಮರ ಚರಿತ್ರೆಗಳು ಜನರಿಗೆ ತಲುಪಿಲ್ಲ. ಹಾಗೂ ಸಾವರ್ಕರ್ ಸಾಧನೆಯ ಬಗ್ಗೆ ಈ ಹೊತ್ತಿನಲ್ಲಿ ಜನರಿಗೆ ತಿಳಿಸಬೇಕಾಗಿದ್ದು ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸಿನಿಮಾ ಸಹಾಯವಾಗಲಿದೆ’ ಎಂದಿದ್ದಾರೆ ಹೂಡ. ಇದನ್ನೂ ಓದಿ : ರಾಜಕೀಯ ದಾಳವಾದ ಪುನೀತ್ ನಟನೆಯ ‘ಜೇಮ್ಸ್’ ಚಿತ್ರ

    ಸಾವರ್ಕರ್ ಕುರಿತಾಗಿ ಈಗಲೂ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಅವರ ಹೋರಾಟಗಳ ಬಗ್ಗೆ ಅನುಮಾನ ವ್ಯಕ್ತ ಪಡಿಸಲಾಗುತ್ತಿದೆ. ಸಾವರ್ಕರ್ ಸಾಧನೆಯನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂಬ ಆರೋಪ ಕೂಡ ಇದೆ. ಹಾಗಾಗಿ ಈ ಸಿನಿಮಾ ಮಹತ್ವ ಪಡೆದುಕೊಳ್ಳಲಿದೆ.

  • ನನಗೆ ಸಲ್ಮಾನ್ ಜೊತೆ ನಟಿಸಲು ಇಷ್ಟವಿರಲಿಲ್ಲ ಎಂದ ಆಯುಷ್ ಶರ್ಮಾ

    ನನಗೆ ಸಲ್ಮಾನ್ ಜೊತೆ ನಟಿಸಲು ಇಷ್ಟವಿರಲಿಲ್ಲ ಎಂದ ಆಯುಷ್ ಶರ್ಮಾ

    ಮುಂಬೈ: ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಜೊತೆ ನಟಿಸಲು ನನಗೆ ಇಷ್ಟವಿರಲಿಲ್ಲ ಎಂದು ಸಲ್ಲು ಸೋದರ ಮಾವ ಆಯುಷ್ ಶರ್ಮಾ ಮಾಧ್ಯಮಗಳ ಮುಂದೆ ಹೇಳಿಕೊಂಡರು.

    ಸಲ್ಮಾನ್ ಖಾನ್ ಮತ್ತು ಆಯುಷ್ ಶರ್ಮಾ ಅವರು ‘ಅಂತಿಮ್’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದು, ಈ ಚಿತ್ರದ ಪ್ರಮೋಷನ್ ಗೆ ಬಂದಾಗ ಶರ್ಮಾ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಅವರೊಂದಿಗೆ ಕೆಲಸ ಮಾಡಲು ನಾನು ಆರಂಭದಲ್ಲಿ ಹಿಂಜರಿದಿದ್ದೆ. ನನಗೆ ಮೊದಲು ಆತಂಕವಿತ್ತು. ಏಕೆಂದರೆ ಸಲ್ಮಾನ್ ಅವರಿಗೆ ಚಿತ್ರದಲ್ಲಿ ನಾನು ಹೊಡೆಯುವ ಸನ್ನಿವೇಶವೆಲ್ಲವಿತ್ತು. ಇದನ್ನು ನಾನು ತೀವ್ರವಾಗಿ ವಿರೋಧಿಸಿದ್ದೆ ಎಂದು ತಿಳಿಸಿದರು. ಇದನ್ನೂ ಓದಿ: ಸ್ವಂತ ಮಕ್ಕಳನ್ನು 50,000 ರೂ.ಗೆ ಮಾರಾಟ ಮಾಡಿದ ಪೊಲೀಸ್ – ವೀಡಿಯೋ ವೈರಲ್

    ಸಲ್ಮಾನ್ ಭಾಯ್‍ಯನ್ನು ಹೊಡೆಯಲು ನಾನು ಕಲ್ಪನೆಯನ್ನು ಸಹ ಮಾಡಿಕೊಂಡಿರಲಿಲ್ಲ. ಆದರೆ ವೃತ್ತಿಜೀವನದಲ್ಲಿ ಅದು ಸರಿಯಿಲ್ಲ ಎಂದು ನನಗೆ ಅನಿಸಿತು. ಅದರಲ್ಲಿಯೂ ನನಗೆ ‘ಸ್ವಜನಪಕ್ಷಪಾತ’ ದ ಬಗ್ಗೆ ತುಂಬಾ ಭಯವಿತ್ತು ಎಂದು ತಮ್ಮ ಆತಂಕದ ಬಗ್ಗೆ ಹೇಳಿಕೊಂಡರು.

    ‘ಆರಂಭದಲ್ಲಿ, ಸಲ್ಮಾನ್ ಭಾಯ್ ‘ಅಂತಿಮ್’ ನಲ್ಲಿ ಇರುವುದನ್ನು ನಾನು ವಿರೋಧಿಸಿದ್ದೆ. ಈ ಚಿತ್ರ ಮಾಡದಂತೆ ನನ್ನ ಕುಟುಂಬವು ಮನವೊಲಿಸಿತ್ತು. ಇದಕ್ಕೆ ಮುಖ್ಯ ಕಾರಣ ನನ್ನ ‘ಲವ್‍ಯಾತ್ರಿ’ ಚಿತ್ರಕ್ಕಿಂತ ಈ ಚಿತ್ರದಲ್ಲಿ ನನ್ನ ಪಾತ್ರ ಭಿನ್ನವಾಗಿದ್ದು, ಸಲ್ಲಾನ್ ಅವರ ಉಪಸ್ಥಿತಿಯಲ್ಲಿ ನಾನು ಆ ಪಾತ್ರಕ್ಕೆ ನ್ಯಾಯ ಒದಗಿಸುತ್ತೇನೆ ಎಂಬ ಧೈರ್ಯ ನನಗೆ ಇರಲಿಲ್ಲ’ ಎಂದು ಹೇಳಿದರು.

    ‘ಅಂತಿಮ್’ ಒಂದು ಹೈ-ಆಕ್ಟೇನ್ ಆಕ್ಷನ್ ಚಿತ್ರವಾಗಿದೆ. ಈ ಸಿನಿಮಾಗೆ ಮಹೇಶ್ ಮಂಜ್ರೇಕರ್ ಆಕ್ಷನ್ ಕಟ್ ಹೇಳುತ್ತಿದ್ದು, ನವೆಂಬರ್ 26 ರಂದು ಚಿತ್ರ ತೆರೆಗೆ ಬರಲಿದೆ. ಈ ಚಿತ್ರಕ್ಕಾಗಿ ಸಲ್ಲು ಅಭಿಮಾನಿಗಳು ಕಾಯುತ್ತಿದ್ದು, ಬಹುನಿರೀಕ್ಷಿತ ಚಿತ್ರಗಳಲ್ಲಿ ಇದು ಒಂದಾಗಿದೆ. ಇದನ್ನೂ ಓದಿ: ಉಗ್ರಗಾಮಿ ಕಮಾಂಡರ್ ಸೇರಿದಂತೆ ಐವರು ಉಗ್ರರು ಗುಂಡಿಗೆ ಬಲಿ

    ಆಯುಷ್ ಶರ್ಮಾ 2018 ರ ‘ಲವ್‍ಯಾತ್ರಿ’ ಚಿತ್ರದ ಮೂಲಕ ಬಾಲಿವುಡ್‍ಗೆ ಕಾಲಿಟ್ಟಿದ್ದು, ಸಲ್ಮಾನ್ ತಂಗಿ ಅರ್ಪಿತಾ ಖಾನ್ ಅವರ ಪತಿಯಾಗಿದ್ದಾರೆ. ಪ್ರಸ್ತುತ ಸಲ್ಲು ನಿರ್ಮಿಸುತ್ತಿರುವ ‘ಅಂತಿಮ್’ ಸಿನಿಮಾದಲ್ಲಿ ನಟಿಸುತ್ತಿರುವ ಇವರು, ಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.