Tag: mahesh tenginakai

  • ಮೋದಿ ಸರ್ಕಾರ GST ಸರಳೀಕರಣ ಮಾಡಿ ದಸರಾ, ದೀಪಾವಳಿ ಉಡುಗೊರೆ ಕೊಟ್ಟಿದೆ – ಮಹೇಶ್ ತೆಂಗಿನಕಾಯಿ

    ಮೋದಿ ಸರ್ಕಾರ GST ಸರಳೀಕರಣ ಮಾಡಿ ದಸರಾ, ದೀಪಾವಳಿ ಉಡುಗೊರೆ ಕೊಟ್ಟಿದೆ – ಮಹೇಶ್ ತೆಂಗಿನಕಾಯಿ

    -ಮಿಲಾದ್ ಉನ್ ನಬಿ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ಕೊಡಬಾರದು ಎಂದ ಶಾಸಕ

    ಬೆಂಗಳೂರು: ಜಿಎಸ್‌ಟಿ (GST) ಸರಳೀಕರಣ ಮಾಡಿ ಮೋದಿ ಸರ್ಕಾರ (Modi Government) ದೇಶದ ಜನರಿಗೆ ಮೋದಿ ಸರ್ಕಾರ ದಸರಾ, ದೀಪಾವಳಿ ಉಡುಗೊರೆ ಕೊಟ್ಟಿದೆ ಎಂದು ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ (Mahesh Tenginakai) ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೋದಿ ಅವರು ಬಡವರು, ಮಧ್ಯಮವರ್ಗದ ಪರ ಇರುವವರು. ಹೀಗಾಗಿ ದಸರಾ, ದೀಪಾವಳಿಗೆ ದೇಶದ ಜನರಿಗೆ ಕಾಣಿಕೆ ಕೊಟ್ಟಿದ್ದಾರೆ. ಜಿಎಸ್‌ಟಿಯಲ್ಲಿ ಬದಲಾವಣೆ ತರುವ ಮೂಲಕ ಜನರಿಗೆ ಸಹಕಾರ ಮಾಡಿದ್ದಾರೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಜಿಎಸ್‌ಟಿ ಸುಧಾರಣೆ; ಮೋದಿ ಸರ್ಕಾರದಿಂದ ರಾಷ್ಟ್ರದ ಜನತೆಗೆ ದೀಪಾವಳಿ ಕೊಡುಗೆ – ಹೆಚ್‌ಡಿಕೆ ಹರ್ಷ

    ಕ್ಯಾನ್ಸರ್ ಔಷಧಿಗಳ ಮೇಲೆ ಟ್ಯಾಕ್ಸ್ ರದ್ದು ಮಾಡಿದ್ದಾರೆ. ಕೃಷಿ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಜಿಎಸ್‌ಟಿ ಇಳಿಸುವ ಕೆಲಸ ಮಾಡಿ, ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್, ಮೋದಿ ಅವರಿಗೆ ಧನ್ಯವಾದ ಹೇಳ್ತೀನಿ. ಜನರ ಪರವಾಗಿ ಸರ್ಕಾರ ಕ್ರಮ ತೆಗೆದುಕೊಂಡಿದೆ ಎಂದಿದ್ದಾರೆ.

    ಇದೇ ವೇಳೆ ಅರಮನೆ ಮೈದಾನದಲ್ಲಿ ಆಯೋಜನೆ ಆಗಿರುವ ಮಿಲಾದ್ ಉನ್ ನಬಿ ಕಾರ್ಯಕ್ರಮಕ್ಕೆ ಸರ್ಕಾರ ಅವಕಾಶ ಕೊಡಬಾರದು. ಕಾಂಗ್ರೆಸ್ ಸರ್ಕಾರ (Congress) ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರ ಪುಷ್ಟೀಕರಣ ಮಾಡುತ್ತಿದೆ. ಬೆಂಗಳೂರಿಗೆ ಟೂರಿಸಂ ವೀಸಾ ಪಡೆದು ಧರ್ಮ ಪ್ರಚಾರ ಮಾಡುವ ಕೆಲಸ ಆಗ್ತಿದೆ. ಸರ್ಕಾರ ಇದಕ್ಕೆ ಅವಕಾಶ ಕೊಡಬಾರದು. ಬಿಜೆಪಿ ಇದನ್ನು ಪ್ರಬಲವಾಗಿ ಖಂಡಿಸುತ್ತದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ಧರ್ಮಸ್ಥಳ ಕೇಸ್ ಸೇರಿ ಅನೇಕ ಕೇಸ್‌ಗಳು ನಡೆಯುತ್ತಿರುವ ಸಮಯದಲ್ಲಿ ಈ ಕಾರ್ಯಕ್ರಮಕ್ಕೆ ಅವಕಾಶ ಕೊಡೋದು ಸರಿಯಲ್ಲ. ವಿದೇಶದಿಂದ ಬರೋರಿಗೆ ಧರ್ಮ ಭಾಷಣಕ್ಕೆ ಅನುಮತಿ ಕೊಡಬಾರದು. ಸಿಎಂ ಅವರು ಆಯೋಜಕರಿಗೆ ಹೇಳಿದ್ದೇನೆ ಎಂದಿದ್ದಾರೆ. ಆದರೆ ನಾಳೆ ನಿಮ್ಮ ಇಂಟಲಿಜೆನ್ಸ್ ಅಲ್ಲೇ ಇರುತ್ತದೆ. ಒಂದು ವೇಳೆ ಏನಾದರೂ ಅವರು ಧರ್ಮ ಪ್ರಚಾರ ಮಾಡಿ ಮಾತಾಡಿದರೆ, ಅವರ ಮೇಲೆ ಕೂಡಲೇ ಎಫ್‌ಐಆರ್ ದಾಖಲು ಮಾಡ್ತಾರಾ ಎಂದು ಸಿಎಂ ಹೇಳಬೇಕು ಎಂದು ಆಕ್ರೋಶ ಹೊರಹಾಕಿದರು.ಇದನ್ನೂ ಓದಿ: ದಸರಾ ಬಳಿಕ ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ನಿಗದಿ – ಚುನಾವಣಾ ಆಯೋಗದ ಮೂಲಗಳ ಹೇಳಿಕೆ

  • ಹುಬ್ಬಳ್ಳಿ ಮಸೀದಿಗಳಲ್ಲಿ ಅಪರಿಚಿತ ವ್ಯಕ್ತಿಗಳು – ಮುಸ್ಲಿಮರೇ ಆತಂಕ ವ್ಯಕ್ತಪಡಿಸಿದ್ದಾರೆ ಎಂದ  ಟೆಂಗಿನಕಾಯಿ

    ಹುಬ್ಬಳ್ಳಿ ಮಸೀದಿಗಳಲ್ಲಿ ಅಪರಿಚಿತ ವ್ಯಕ್ತಿಗಳು – ಮುಸ್ಲಿಮರೇ ಆತಂಕ ವ್ಯಕ್ತಪಡಿಸಿದ್ದಾರೆ ಎಂದ ಟೆಂಗಿನಕಾಯಿ

    ಧಾರವಾಡ: ಹುಬ್ಬಳ್ಳಿಯ (Hubballi) ವಿವಿಧ ಮಸೀದಿಗಳಲ್ಲಿ ಅಪರಿಚಿತ ವ್ಯಕ್ತಿಗಳು ಕಾಣಿಸಿಕೊಂಡಿದ್ದಾರೆ ಎಂದು ಶಾಸಕ ಮಹೇಶ್‌ ಟೆಂಗಿನಕಾಯಿ (Mahesh Tenginakai) ಹೇಳಿದ್ದಾರೆ.

    ಹುಬ್ಬಳ್ಳಿಯ ವಿವಿಧ ಮಸೀದಿಗಳಲ್ಲಿ (Mosque) ಇರುವವರು ನಮ್ಮ ದೇಶದ ವ್ಯಕ್ತಿಗಳಂತೆ ಕಾಣುತ್ತಿಲ್ಲ. ಇದನ್ನು ನಾನು ಹೇಳುತ್ತಿಲ್ಲ. ಮುಸ್ಲಿಂ ಮುಖಂಡರೇ ನನ್ನ ಬಳಿ ಹೇಳಿ ಏನಾದರೂ ಆಗಬಹುದು ಎಂಬ ಅಂತಂಕವನ್ನು ಹೊರಹಾಕಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮ್ಯಾನೇಜರ್‌ ಕಿರುಕುಳ – ಕೆರೆಗೆ ಹಾರಿ ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ

     

    ಈ ಬಗ್ಗೆ ಗೃಹ ಇಲಾಖೆಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹುಬ್ಬಳ್ಳಿ ಬಹಳಷ್ಟು ಸೂಕ್ಷ್ಮ ಪ್ರದೇಶದ ಮುಂದೆ ಏನಾದರೂ ಅನಾಹುತ ಆದರೆ ಅದಕ್ಕೆ ಗೃಹ ಇಲಾಖೆಯೇ ಕಾರಣ ಎಂದರು.

    ಇಲ್ಲಿನ ಅಧಿಕಾರಿಗಳು ಅತ್ಯುತ್ತಮ ಕಾರ್ಯ ಮಾಡತ್ತಾರೆ.ಆದರೆ ಸರ್ಕಾರ ಅವರ ಕೈ ಕಟ್ಟಿಹಾಕಿದ್ದಾರೆ ಅಂತ ಶಾಸಕ ಮಹೇಶ್ ಟೆಂಗಿನಕಾಯಿ ಸಹ ಬೆಲ್ಲದ ಆರೋಪಕ್ಕೆ ಧ್ವನಿಗೂಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ನಿಂದ ದಾಳಿ – ಅಮೃತಸರದ ಗೋಲ್ಡನ್ ಟೆಂಪಲ್ ರಕ್ಷಿಸಿದ್ದ ಆಕಾಶ್ ಮಿಸೈಲ್!

  • ಹಾಲಿನ ದರ ಏರಿಕೆ ಸರ್ಕಾರದ ಆರನೇ ಭಾಗ್ಯ: ಮಹೇಶ್ ಟೆಂಗಿನಕಾಯಿ

    ಹಾಲಿನ ದರ ಏರಿಕೆ ಸರ್ಕಾರದ ಆರನೇ ಭಾಗ್ಯ: ಮಹೇಶ್ ಟೆಂಗಿನಕಾಯಿ

    ಹುಬ್ಬಳ್ಳಿ: ಸರ್ಕಾರ ಬಂದಾಗ 5 ಗ್ಯಾರಂಟಿಗಳನ್ನು ಕೊಟ್ಟಿತ್ತು. ನಂತರ ದರ ಏರಿಕೆಯ ಐದು ಬರೆ ಗ್ಯಾರಂಟಿ ಕೊಡುತ್ತಿದೆ. ಇದೀಗ ಹಾಲಿನ ದರ ಏರಿಕೆಯ ಮೂಲಕ ಸರ್ಕಾರ ಆರನೇ ಭಾಗ್ಯ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginakai) ವ್ಯಂಗ್ಯವಾಡಿದರು.

    ಹುಬ್ಬಳ್ಳಿಯಲ್ಲಿ (Hubballi) ಹಾಲಿನ ದರ ಏರಿಕೆ ಬಗ್ಗೆ ಮಾತನಾಡಿದ ಅವರು, ಸರ್ಕಾರ ಒಂದು ಕಡೆ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂ. ಏರಿಸಲು ನಿರ್ಧರಿಸಿದೆ. ಮತ್ತೊಂದು ಕಡೆ ವಿದ್ಯುತ್ ದರ ಏರಿಕೆಗೂ ಮುಂದಾಗಿದೆ. ಇದರ ನಡುವೆ ನೋಂದಣಿ ಸೇರಿ ಹಲವಾರು ಶುಲ್ಕಗಳ ಏರಿಕೆ ಮಾಡಿದೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: Milk Price Hike | ಗ್ಯಾರಂಟಿ ಸರ್ಕಾರದ ಬಂದ ಮೇಲೆ ಯಾವುದು ಎಷ್ಟು ಏರಿಕೆ? ಮುಂದೆ ಏನೇನು ಶಾಕ್ ಸಿಗುತ್ತೆ?

    ಕಾಂಗ್ರೆಸ್ (Congress) ಸರ್ಕಾರ ದರ ಏರಿಕೆಯ ಗ್ಯಾರಂಟಿಗಳನ್ನು ಕೊಡುತ್ತಲೇ ಸಾಗಿದೆ. ಕೂಡಲೇ ಹಾಲಿನ ದರ ಏರಿಕೆ ವಾಪಸ್ ಪಡೆಯಬೇಕು. ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಹೋರಾಟ ಮಾಡುವ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ನಂದಿನಿ ಹಾಲಿನ ದರ 4 ರೂ. ಹೆಚ್ಚಳ – ರೈತರಿಗೆ ಪೂರ್ಣ ಹಣ ವರ್ಗಾವಣೆಗೆ ಕ್ಯಾಬಿನೆಟ್ ತೀರ್ಮಾನ

  • ಚೋಟಾ ಮುಂಬೈಯಲ್ಲಿ ಬೆಲೆ ನಿಯಂತ್ರಿಸಲು ಅಖಾಡಕ್ಕಿಳಿದ ಕೇಂದ್ರ; ಹುಬ್ಬಳ್ಳಿ- ಧಾರವಾಡದಲ್ಲಿ ಭಾರತ್ ಬ್ರ‍್ಯಾಂಡ್ ಆಹಾರ ಧಾನ್ಯ ಪೂರೈಕೆಗೆ ಚಾಲನೆ

    ಚೋಟಾ ಮುಂಬೈಯಲ್ಲಿ ಬೆಲೆ ನಿಯಂತ್ರಿಸಲು ಅಖಾಡಕ್ಕಿಳಿದ ಕೇಂದ್ರ; ಹುಬ್ಬಳ್ಳಿ- ಧಾರವಾಡದಲ್ಲಿ ಭಾರತ್ ಬ್ರ‍್ಯಾಂಡ್ ಆಹಾರ ಧಾನ್ಯ ಪೂರೈಕೆಗೆ ಚಾಲನೆ

    -ಸ್ವಾತಂತ್ರ್ಯ ನಂತರ ದೇಶದಲ್ಲಿ ಪ್ರಧಾನಿ ಮೋದಿ ಅವರಿಂದ ಐತಿಹಾಸಿಕ ಕ್ರಮ: ಸಚಿವ ಪ್ರಹ್ಲಾದ್ ಜೋಶಿ ಬಣ್ಣನೆ

    -ಹುಬ್ಬಳ್ಳಿಯಿಂದ ಭಾರತ್ ಬ್ರ‍್ಯಾಂಡ್ ಆಹಾರ ಧಾನ್ಯ ಹೊತ್ತು ಸಾಗಿದ 50ಕ್ಕೂ ಹೆಚ್ಚು ಮೊಬೈಲ್ ವಾಹನ

    ಹುಬ್ಬಳ್ಳಿ: ಬೆಲೆ ಏರಿಕೆ ನಿಯಂತ್ರಣ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೈಗೊಂಡ ‘ಗ್ರಾಹಕರಿಗೆ ನೇರ ಆಹಾರ ಧಾನ್ಯ ವಿತರಣೆ’ಗೆ ಕೇಂದ್ರ ಆಹಾರ ಸಚಿವರ ತವರು ಕ್ಷೇತ್ರದಲ್ಲಿ ಇಂದು ಚಾಲನೆ ನೀಡಲಾಯಿತು. ಹುಬ್ಬಳ್ಳಿ (Hubballi) 3,000 ಮಠದ ಮೈದಾನದಲ್ಲಿ ಸೋಮವಾರ ಬೆಳಗ್ಗೆ ಕೇಂದ್ರ ಆಹಾರ ಪೂರೈಕೆ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆಹಾರ ಧಾನ್ಯ ದಾಸ್ತಾನು ಹೊತ್ತ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿದರು. ಇದನ್ನೂ ಓದಿ: ಮನೆ ಮನೆಗಳಿಂದ ಕಸ ಸಂಗ್ರಹಕ್ಕೆ ಶುಲ್ಕ ವಸೂಲಿ – ರಾಜ್ಯ ಸರ್ಕಾರಕ್ಕೆ ಬಿಬಿಎಂಪಿಯಿಂದ ಪ್ರಸ್ತಾವನೆ

    ಇದೇ ವೇಳೆ ಜನಸಾಮಾನ್ಯರಿಗೆ ಆಹಾರ ಧಾನ್ಯ ಕಿಟ್ ವಿತರಿಸಿ ಮಾತನಾಡಿ, ಕೇಂದ್ರ ಸರ್ಕಾರ ಯಾವತ್ತೂ ರೈತರ ಮತ್ತು ಕಡುಬಡವರ ಹಿತ ಕಾಯಲು ಬದ್ಧವಾಗಿದೆ ಎಂದು ಹೇಳಿದರು. ಸ್ವಾತಂತ್ರ‍್ಯ ನಂತರ ದೇಶದಲ್ಲಿ ಬೆಲೆ ಏರಿಕೆ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತರಲು ಕೇಂದ್ರ ಸರ್ಕಾರ ಇದೇ ಪ್ರಥಮ ಬಾರಿಗೆ ಇಂತಹ ಐತಿಹಾಸಿಕ ಕ್ರಮ ಕೈಗೊಂಡಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಅನ್ನಭಾಗ್ಯ ಫಲಾನುಭವಿಗಳಿಗೆ ಸರ್ಕಾರ ಶಾಕ್ – ಕಳೆದೆರಡು ತಿಂಗಳಿಂದ ಸಿಕ್ಕಿಲ್ಲ ಅಕ್ಕಿ ದುಡ್ಡು

    ಬೆಲೆ ಏರಿಕೆಯಿಂದ ಜನಸಾಮಾನ್ಯರು ಹೈರಾಣುಗುವುದನ್ನು ತಪ್ಪಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ದೇಶಾದ್ಯಂತ ಗ್ರಾಹಕರಿಗೆ ನೇರ ಆಹಾರ ಧಾನ್ಯ ವಿತರಣೆಗೆ ಮುಂದಾಗಿದೆ. ಈಗಾಗಲೇ ದೆಹಲಿ, ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳಲ್ಲಿ ಭಾರತ್ ಬ್ರ‍್ಯಾಂಡ್ ಅಡಿ ಆಹಾರ ಧಾನ್ಯ ವಿತರಣೆ ಕೈಗೊಂಡಿದ್ದು, ಈಗ ವಾಣಿಜ್ಯ ನಗರಿ ಹುಬ್ಬಳ್ಳಿ – ಧಾರವಾಡ ಅವಳಿ ನಗರಗಳಲ್ಲಿ ವಿತರಣೆ ನಡೆದಿದೆ ಎಂದರು. ಇದನ್ನೂ ಓದಿ: ಭದ್ರತಾ ಪಡೆ, ಉಗ್ರರ ನಡುವೆ ಗುಂಡಿನ ಚಕಮಕಿ – 100ಕ್ಕೆ ಕರೆ ಮಾಡಿ ಬಚಾವ್‌ ಆದ ಚಾರಣಿಗರು

    50ಕ್ಕೂ ಹೆಚ್ಚು ಸಂಚಾರಿ ವಾಹನಗಳಲ್ಲಿ ಪೂರೈಕೆ:
    ಹುಬ್ಬಳ್ಳಿ-ಧಾರವಾಡ ಅವಳಿ ನಗರ ಮತ್ತು ಧಾರವಾಡ (Dharawada) ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 50ಕ್ಕೂ ಹೆಚ್ಚು ವಾಹನಗಳಲ್ಲಿ ಕಡಿಮೆ ಬೆಲೆಯಲ್ಲಿ ಭಾರತ್ ಬ್ರ‍್ಯಾಂಡ್ (Bharat Brand) ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರು | ಬಿಎಂಟಿಸಿ ಚಾಲಕನ ಮೇಲೆ ಬೈಕ್ ಸವಾರನಿಂದ ಹಲ್ಲೆ

    ಯಾವುದಕ್ಕೆ ಎಷ್ಟು ಬೆಲೆ:
    ಭಾರತ್ ಅಕ್ಕಿ 34 ರೂ., ಭಾರತ್ ಗೋಧಿ ಹಿಟ್ಟು 30 ರೂ., ಭಾರತ್ ಕಡಲೆ ಬೇಳೆ 70 ರೂ. ಮತ್ತು ಭಾರತ್ ಹೆಸರು ಬೇಳೆಯನ್ನು 107 ರೂ. ರಿಯಾಯಿತಿ ದರದಲ್ಲಿ ಜನಸಾಮಾನ್ಯರಿಗೆ ಮೊಬೈಲ್ ವಾಹನಗಳ ಮೂಲಕ ನೇರವಾಗಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

    ರೈತರ ಜತೆ ಸಾಮಾನ್ಯ ಜನರ ಹಿತರಕ್ಷಣೆ:
    ಪ್ರಧಾನಿ ಮೋದಿ ಅವರು ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಿ ರೈತರ ಹಿತ ರಕ್ಷಣೆ ಜತೆಗೆ ದೇಶಾದ್ಯಂತ ಕಡಿಮೆ ಬೆಲೆಗೆ ಆಹಾರ ಧಾನ್ಯ ಪೂರೈಸಿ ಜನಸಾಮಾನ್ಯರ ಹಿತವನ್ನೂ ಕಾಯುತ್ತಿದೆ ಎಂದರು. ಇದನ್ನೂ ಓದಿ: ಮೈಸೂರಿನ ಸರ್ಕಾರಿ ಶಾಲೆ ಜಾಗ ವಕ್ಫ್ ಆಸ್ತಿ – ಅಭಿನಂದನೆಗಳು ಸರ್ ಎಂದು ಸಿಎಂಗೆ ಪ್ರತಾಪ್ ಸಿಂಹ ಟಾಂಗ್

    ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginakai), ಮಹಾನಗರ ಪಾಲಿಕೆ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು. ಇದನ್ನೂ ಓದಿ: ಪ್ರೇಯಸಿ ತಾಯಿಗಾಗಿ ಚೈನ್ ಕಳ್ಳತನ – ಡ್ಯಾನ್ಸ್ ಮಾಸ್ಟರ್ ಅರೆಸ್ಟ್

  • ತಂದೆಯ ಸಲಹೆಯನ್ನು ಪಾಲಿಸಿದ ಪುತ್ರ – ಅಂತರ ಕಾಯ್ದುಕೊಂಡ ವಿಜಯೇಂದ್ರ

    ತಂದೆಯ ಸಲಹೆಯನ್ನು ಪಾಲಿಸಿದ ಪುತ್ರ – ಅಂತರ ಕಾಯ್ದುಕೊಂಡ ವಿಜಯೇಂದ್ರ

    ಬೆಂಗಳೂರು: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪುತ್ರನ ಹಸ್ತಕ್ಷೇಪ ಸರ್ಕಾರ ಮತ್ತು ಪಕ್ಷದಲ್ಲಿ ಜಾಸ್ತಿಯಾಗುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ಈಗ ವಿಜಯೇಂದ್ರ ಈ ವಿಚಾರದಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾರೆ.

    ಮಾಜಿ ಸಿಎಂ ಕುಮಾರಸ್ವಾಮಿ ಅವರು ನೇರವಾಗಿಯೇ ವಿಜಯೇಂದ್ರ ಬಗ್ಗೆ ಗಂಭೀರ ಆರೋಪ ಮಾಡಿ ಬಿಎಸ್‍ವೈ ಪುತ್ರ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದರು. ಇಷ್ಟೇ ಅಲ್ಲದೇ ಹಲವು ಬಾರಿ ಯಡಿಯೂರಪ್ಪನವರ ಜೊತೆಗೆ ವಿಜಯೇಂದ್ರ ಕಾಣಿಸಿಕೊಳ್ಳುತ್ತಿದ್ದರು. ಈ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ವಿಜಯೇಂದ್ರ ಯಡಿಯೂರಪ್ಪನವರಿಂದ ಅಂತರ ಕಾಯ್ದುಕೊಂಡಿದ್ದಾರೆ.

    ಸ್ವಲ್ಪ ದಿನ ಸೈಲೆಂಟಾಗಿ ದೂರ ಇರುವಂತೆ ಮಗನಿಗೆ ಯಡಿಯೂರಪ್ಪ ಸಲಹೆ ನೀಡಿದ್ದು, ಪಕ್ಷ, ಸರ್ಕಾರ ಎರಡರಲ್ಲೂ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ. ಹಾಗಾಗಿ ಕಳೆದ ನಾಲ್ಕೈದು ದಿನಗಳಿಂದ ಬಿಎಸ್‍ವೈ ಅವರಿಂದ ವಿಜಯೇಂದ್ರ ಅಂತರ ಕಾಯ್ದುಕೊಂಡಿದ್ದಾರೆ. ಪುತ್ರನ ಮಧ್ಯಪ್ರವೇಶ ನಡೆಯುತ್ತಿಲ್ಲ. ತಮಗೆ ಆಗದವರು ಹರಡಿಸಿದ ಸುದ್ದಿ ಇದು ಹೈಕಮಾಂಡ್ ನಾಯಕರಿಗೆ ಸಂದೇಶ ರವಾನಿಸಲು ತಂದೆಯ ಸಲಹೆಯ ಮೇರೆಗೆ ವಿಜಯೇಂದ್ರ ಹೊರಗೆ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ.

    ವಿಜಯೇಂದ್ರ ಮೇಲೆ ಸಂತೋಷ್ ಕಣ್ಣು?
    ರಾಜ್ಯ ಬಿಜೆಪಿಯ ಪ್ರಧಾನಕಾರ್ಯದರ್ಶಿ ಹುದ್ದೆಯ ಮೇಲೆ ವಿಜಯೇಂದ್ರ ಕಣ್ಣಿಟ್ಟಿದ್ದರು. ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೇರುವ ಮೂಲಕ ಪಕ್ಷದಲ್ಲಿ ಉನ್ನತ ಸ್ಥಾನ ಅಲಂಕರಿಸಲು ವಿಜಯೇಂದ್ರ ಲಾಬಿ ನಡೆಸಿದ್ದರು ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಹೇಶ್ ಟೆಂಗಿನಕಾಯಿ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡುವ ಮೂಲಕ ಪಕ್ಷದ ಮಂದಿಗೆ ಶಾಕ್ ನೀಡಿದ್ದರು.

    ಯಡಿಯೂರಪ್ಪನವರ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬಿಎಸ್‍ವೈ ಆಪ್ತರಿಗೆ ಸಿಗಲಿದೆ ಎನ್ನುವ ವಿಚಾರ ಚರ್ಚೆ ಆಗುತಿತ್ತು. ಆದರೆ ಬಿಜೆಪಿ ಹೈಕಮಾಂಡ್ ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನವನ್ನು ನೀಡುವ ಮೂಲಕ ರಾಜ್ಯದ ಹಿರಿಯ ನಾಯಕರಿಗೆ ಶಾಕ್ ನೀಡಿತ್ತು. ಈ ಎರಡು ಹುದ್ದೆಗೆ ಆಯ್ಕೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಅಣತಿಯಂತೆ ನಡೆದಿದ್ದು ಎನ್ನುವ ಮಾತು ಈಗ ಬಿಜೆಪಿ ವಲಯದಲ್ಲಿ ಚರ್ಚೆ ಆಗುತ್ತಿದೆ.

    ವಿಜಯೇಂದ್ರ ಅವರಿಗೆ ಪ್ರಧಾನಕಾರ್ಯದರ್ಶಿ ಹುದ್ದೆ ನೀಡಿದರೆ ಮತ್ತೆ ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಬರುತ್ತದೆ. ದೆಹಲಿ ಮಟ್ಟದ ಸಂಸ್ಕೃತಿ ತರಲು ಈ ಎಲ್ಲ ಆಯ್ಕೆ ನಡೆದಿದೆ ಎಂದು ಬಿಜೆಪಿಯ ಕೆಲವರು ಈ ನಿರ್ಧಾರ ಪರ ಮಾತನಾಡುತ್ತಿದ್ದಾರೆ. ಇನ್ನು ಕೆಲ ನಾಯಕರು ಬಿಎಸ್‍ವೈ ಬೆಂಬಲಿಗರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲು ನಳಿನ್ ಕುಮಾರ್ ಮೂಲಕ ಸಂತೋಷ್ ತಮ್ಮ ದಾಳವನ್ನು ಪ್ರಯೋಗಿಸುತ್ತಿದ್ದಾರೆ. ಮತ್ತೊಬ್ಬ ಲಿಂಗಾಯತ ನಾಯಕನ್ನು ಬೆಳೆಸಲು ಮಹೇಶ್ ಟೆಂಗಿನಕಾಯಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾತನ್ನಾಡುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಒಂದೊಂದು ಆಯ್ಕೆಯ ವಿಚಾರದ ಬಗ್ಗೆ ನಾಯಕರ ನಡುವೆ ಭಾರೀ ಚರ್ಚೆ ಆಗುತ್ತಿದೆ.