Tag: mahesh

  • ನನಗೆ ಸಚಿವ ಸ್ಥಾನ ಕೊಟ್ರು, ಕೊಡದೇ ಇದ್ದರು, ಕಾಂಗ್ರೆಸ್ಸಿನಲ್ಲೇ ಇರ್ತಿನಿ: ಬಿ.ಸಿ ಪಾಟೀಲ್

    ನನಗೆ ಸಚಿವ ಸ್ಥಾನ ಕೊಟ್ರು, ಕೊಡದೇ ಇದ್ದರು, ಕಾಂಗ್ರೆಸ್ಸಿನಲ್ಲೇ ಇರ್ತಿನಿ: ಬಿ.ಸಿ ಪಾಟೀಲ್

    ಬೆಂಗಳೂರು: ಈ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಅಂತ ಶಾಸಕ ಬಿಸಿ ಪಾಟೀಲ್ ಹೇಳಿದ್ದಾರೆ.

    ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನವೆಂಬರ್ 15 ನಂತರ ಉಪ ಚುನಾವಣೆ ಆದ ಮೇಲೆ ಸಂಪುಟ ವಿಸ್ತರಣೆ ಮಾಡುವುದಾಗಿ ವರಿಷ್ಠರು ಹೇಳಿದ್ದಾರೆ. ನನಗೆ ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ. ಟ್ವಿಟ್ಟರ್ ನಲ್ಲಿ ನನ್ನ ಮನಸಿನ ಭಾವನೆಗಳನ್ನು ವ್ಯಕ್ತಪಡಿಸಿದ್ದೆ ಅಷ್ಟೇ. ನನಗೆ ಸಚಿವ ಸ್ಥಾನ ಕೊಟ್ಟರೂ ಕೊಡದೇ ಇದ್ದರು ಕಾಂಗ್ರೆಸ್ಸಿನಲ್ಲೇ ಇರುತ್ತೇನೆ. ನಾನು ಪಕ್ಷ ಬಿಟ್ಟು ಎಲ್ಲು ಹೋಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಸಚಿವ ಮಹೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ದೊಡ್ಡವರ ವಿಚಾರವಾಗಿದೆ. ಇದರ ಬಗ್ಗೆ ನಾನು ಮಾತನಾಡುವಷ್ಟು ದೊಡ್ಡವನಲ್ಲ. ಗುರುವಾರ ಬೆಳಗ್ಗೆ ಕ್ಷೇತ್ರದ ಬಗ್ಗೆ ಮಾತನಾಡಲು ಅವರನ್ನು ಭೇಟಿ ಮಾಡಿ ಮಾತನಾಡಿದ್ದೆ. ಆದರೆ ಸಂಜೆ ಅವರು ರಾಜೀನಾಮೆ ನೀಡಿದ್ದಾರೆ. ಅದನ್ನ ಕೇಳಿ ನನಗೆ ಶಾಕ್ ಆಯಿತು. ಅದು ಅವರ ಪಕ್ಷದ ವಿಚಾರ, ದೊಡ್ಡವರು ಕುಳಿತು ಅದನ್ನ ಮಾತಾಡುತ್ತಾರೆ ಅಂತ ಹೇಳಿದರು.

    ವಿಧಾನಸೌಧಕ್ಕೆ ಮಾಧ್ಯಮ ನಿರ್ಬಂಧ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ವಿಧಾನ ಸೌಧದಲ್ಲಿ ಮೀಡಿಯಾ ಟಾರ್ಗೆಟ್ ವಿಷಯ ನನಗೆ ಗೊತ್ತಿಲ್ಲ. ಈ ಬಗ್ಗೆ ಸಿಎಂ ಕುಮಾರಸ್ವಾಮಿ ಅವರನ್ನು ಕೇಳಬೇಕು. ಆದರೂ ಮಾಧ್ಯಮ ಪ್ರಭುತ್ವದ ನಾಲ್ಕನೇ ಅಂಗವಾಗಿದೆ. ಮಾಧ್ಯಮವನ್ನು ಬಿಟ್ಟು ನಾವು ಇರುವುದಕ್ಕೆ ಸಾಧ್ಯವಿಲ್ಲ, ನಮ್ಮನ್ನ ಬಿಟ್ಟು ನೀವು ಇರಲು ಸಾಧ್ಯವಿಲ್ಲ. ಹಾಗಾಗಿ ಮಾಧ್ಯಮಗಳ ನಿರ್ಬಂಧ ಮಾಡಬಾರದು ಎಂದು ಶಾಸಕ ಬಿಸಿ ಪಾಟೀಲ್ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಚಿವ ಸ್ಥಾನಕ್ಕೆ ಎನ್.ಮಹೇಶ್ ರಾಜೀನಾಮೆಯಿಂದ ಬಿಜೆಪಿಗೇನು ಲಾಭ..?

    ಸಚಿವ ಸ್ಥಾನಕ್ಕೆ ಎನ್.ಮಹೇಶ್ ರಾಜೀನಾಮೆಯಿಂದ ಬಿಜೆಪಿಗೇನು ಲಾಭ..?

    ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸ್ಥಾನಕ್ಕೆ ಎನ್ ಮಹೇಶ್ ಅವರು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಗೆ ಲಾಭವಾಗಲಿದೆ ಅಂತ ಹೆಳಲಾಗುತ್ತಿದೆ.

    ಮಹೇಶ್ ರಾಜೀನಾಮೆಗೂ ಮುನ್ನ ಬಿಜೆಪಿ ನಾಯಕರ ಸರ್ಕಾರ ಬೀಳಿಸುವ ಮಾತನಾಡಿದ್ದು, ಆಪರೇಷನ್ ಕಮಲಕ್ಕೆ ಬಿಜೆಪಿ ಹೈಕಮಾಂಡ್ ರೆಡ್‍ಸಿಗ್ನಲ್ ಕೊಟ್ಟಿದ್ಯಾ ಅಥವಾ ಗ್ರೀನ್ ಸಿಗ್ನಲ್ ಕೊಟ್ಟಿದ್ಯಾ ಎಂಬ ಪ್ರಶ್ನೆಯೊಂದು ಇದೀಗ ಮೂಡಿದೆ.


    ನವೆಂಬರ್‍ನಲ್ಲಿ ಮತ್ತೊಂದು ಆಪರೇಷನ್ ಆಪರೇಟಿಂಗ್ ಗೆ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಮೂಲಕ ಬಿಜೆಪಿ ಬೈ ಎಲೆಕ್ಷನ್ ಫಲಿತಾಂಶದ ಬಳಿಕ ಅಖಾಡಕ್ಕೆ ಇಳಿಯುತ್ತಂತೆ. ಈ ವಿಚಾರವನ್ನು ರಾಜ್ಯ ಬಿಜೆಪಿ ನಾಯಕರು ಈಗಾಗಲೇ ಹೈಕಮಾಂಡ್‍ಗೂ ಮಾಹಿತಿ ರವಾನಿಸಿದ್ದಾರೆ. ರಾಜ್ಯ ನಾಯಕರ ಪ್ಲ್ಯಾನ್‍ನಂತೆ ನಾವು ಅಂತಾ ಹೈಕಮಾಂಡ್ ಗ್ರೀನ್‍ಸಿಗ್ನಲ್ ಕೊಟ್ಟಿದ್ದು, ಆಪರೇಷನ್ ಟೀಂ ಮೆಂಬರ್ಸ್ ನವೆಂಬರ್‍ನಲ್ಲಿ ಮತ್ತೆ ಕಾರ್ಯಾಚರಣೆ ನಡೆಸಲು ಬಿಎಸ್‍ವೈ ಸೂಚಿಸಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಹಾಗಾದ್ರೆ ಬಿಎಸ್‍ಪಿ ಮಹೇಶ್ ರಾಜೀನಾಮೆ ನಂತ್ರ ಬಿಜೆಪಿ ಲೆಕ್ಕಚಾರ ಏನು ಅಂತ ನೋಡೋದಾದ್ರೆ:
    > ಬೈ ಎಲೆಕ್ಷನ್ ಫಲಿತಾಂಶವನ್ನು ಕಾದುನೋಡಿ, ಬಳಿಕ ಆಪರೇಷನ್ ಶುರು ಮಾಡೋದು
    > ಸಂಪುಟ ವಿಸ್ತರಣೆಯ ವಿಳಂಬವನ್ನೇ ಮತ್ತೊಮ್ಮೆ ಬಳಸಿಕೊಂಡು ಕೈ ಶಾಸಕರಿಗೆ ಗಾಳ
    > ಕೇಂದ್ರ ಮಟ್ಟದಲ್ಲಿ ಮಾಯಾಜಾಲದೊಂದಿಗೆ ಬಿಎಸ್‍ಪಿ ಬೆಂಬಲ ಪಡೆಯುವ ತಂತ್ರ..?
    > ಶಿವಮೊಗ್ಗ, ಬಳ್ಳಾರಿ ಲೋಕಸಭಾ ಉಪಚುನಾವಣೆ ಗೆಲ್ಲುವ ಮೂಲಕ ಕೈ ವೀಕ್ ಮಾಡೋದು


    > ನವೆಂಬರ್ ಅಂತ್ಯದಲ್ಲಿ ಶಾಸಕರು ರಾಜೀನಾಮೆ ಕೊಟ್ಟರೆ ಲೋಕಸಭೆ ಜತೆಗೆ ಚುನಾವಣೆ ಲೆಕ್ಕಚಾರ
    > ಹಾಗಾಗಿ ನವೆಂಬರ್ ಎರಡನೇಯ ವಾರದಿಂದ ಆಪರೇಷನ್ ಸೆಕೆಂಡ್ ಛಾನ್ಸ್ ಆರಂಭಿಸುವುದು
    > ಈ ಬಾರಿ ಗಾಳಕ್ಕೆ ಸಿಕ್ಕ ಮೀನುಗಳನ್ನ ಒಟ್ಟುಗೂಡಿಸಲು ಪ್ರತ್ಯೇಕ ಮೂರು ಟೀಂ ರಚಿಸುವುದಾಗಿದೆ.

    ಒಟ್ಟಿನಲ್ಲಿ ಮಹೇಶ್ ರಾಜೀನಾಮೆ ನಂತರ ಇದೀಗ ರಾಜ್ಯ ಬಿಜೆಪಿ ಚುನಾವಣೆ ಗೆಲ್ಲಲು ಮತ್ತಷ್ಟು ಕಸರತ್ತು ನಡೆಸುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನೀವೇ ನನ್ನ ಹೆಂಡ್ತಿಯನ್ನ ಕಂಟ್ರೋಲ್ ಮಾಡ್ಬೇಕು ಸಾರ್ – ರೌಡಿಶೀಟರ್ ಯಶಸ್ವಿನಿ ಪತಿಯಿಂದ ಪೊಲೀಸ್ರಿಗೆ ಮನವಿ

    ನೀವೇ ನನ್ನ ಹೆಂಡ್ತಿಯನ್ನ ಕಂಟ್ರೋಲ್ ಮಾಡ್ಬೇಕು ಸಾರ್ – ರೌಡಿಶೀಟರ್ ಯಶಸ್ವಿನಿ ಪತಿಯಿಂದ ಪೊಲೀಸ್ರಿಗೆ ಮನವಿ

    ಬೆಂಗಳೂರು: ನನ್ನ ಹೆಂಡತಿ ನನ್ನ ಮಾತೇ ಕೇಳುವುದಿಲ್ಲ ಸಾರ್, ನೀವೇ ನನ್ನ ಹೆಂಡತಿಯನ್ನ ಕಂಟ್ರೋಲ್ ಮಾಡಬೇಕು ಸಾರ್ ಎಂದು ಕೈಮುಗಿದುಕೊಂಡು ರೌಡಿಶೀಟರ್ ಯಶಸ್ವಿನಿಯ ಎರಡನೇ ಪತಿ ದಡಿಯಾ ಮಹೇಶ್ ಪೊಲೀಸರ ಮುಂದೆ ತನ್ನ ಅಳಲನ್ನು ತೋಡಿಕೊಂಡಿದ್ದಾನೆ.

    ಇಂದು ಸಿಸಿಬಿ ಪೊಲೀಸರು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಆಗ ಸಿಸಿಬಿ ಪೊಲೀಸರು ದಡಿಯಾ ಮಹೇಶ್‍ಗೆ ನಿನ್ನ ಹೆಂಡತಿಯೂ ರೌಡಿಶೀಟರ್, ಆಕೆಯನ್ನು ಕಂಟ್ರೋಲ್‍ನಲ್ಲಿ ಇಡು ಅಂತ ಹೇಳಿದ್ದಾರೆ. ಆಗ ನಾನು ಎಲ್ಲಾ ತರದಲ್ಲೂ ಬುದ್ಧಿ ಹೇಳಿದ್ದೇನೆ. ಆದರೆ ಅವಳು ನನ್ನ ಮಾತೇ ಕೇಳುವುದಿಲ್ಲ ಸರ್. ನಿಮ್ಮಂಥವರೇ ಅವಳಿಗೆ ಬುದ್ಧಿ ಕಲಿಸಿದರೆ ಕಲಿತಾಳೆ ಸಾರ್ ಅಂತ ಸಿಸಿಬಿ ಡಿಸಿಪಿ ಗಿರೀಶ್ ಮುಂದೆ ದಡಿಯಾ ಮಹೇಶ್ ಮನವಿ ಮಾಡಿಕೊಂಡಿದ್ದಾನೆ.

    ರೌಡಿಶೀಟರ್ ಮಹೇಶ್ ಮನೆಯಲ್ಲಿ ಆಕೆಯ ಹೆಂಡತಿಯ ಫೋಟೋ ಮತ್ತು ಪಿಸ್ತೂಲ್ ಸಿಕ್ಕಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಳಿಕ ಈ ಬಗ್ಗೆ ಪ್ರತಿಕ್ರಿಸಿದ ಡಿಸಿಪಿ ಗಿರೀಶ್ ಅವರು, ನಿನ್ನ ಹೆಂಡತಿಗೆ ಸರಿಯಾಗಿ ಬುದ್ಧಿ ಕಲಿಸುತ್ತೇವೆ. ನಿಮ್ಮ ಮನೆಯಲ್ಲಿ ಸಿಕ್ಕ ಪಿಸ್ತೂಲ್ ಬಗ್ಗೆ ತನಿಖೆ ಮಾಡುತ್ತೇವೆ. ನಿನ್ನ ಮತ್ತು ನಿನ್ನ ಜೊತೆ ನಿನ್ನ ಹೆಂಡತಿಯನ್ನ ಕೂಡಲೇ ಸರಿ ಮಾಡುತ್ತೇವೆ ಎಂದು ಹೇಳಿರುವುದಾಗಿ ತಿಳಿದು ಬಂದಿದೆ.

    ಇತ್ತೀಚೆಗಷ್ಟೇ ಶಿಸ್ತು ಸಂಸ್ಕೃತಿ ಎನ್ನುವ ಶ್ರೀರಾಮಸೇನೆ ಬೆಂಗಳೂರು ಮಹಿಳಾ ಘಟಕ ಅಧ್ಯಕ್ಷ ಸ್ಥಾನಕ್ಕೆ ರೌಡಿ ಶೀಟರ್ ಯಶಸ್ವಿನಿ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿಯೇ ಹಾರ ಹಾಕಿಸಿಕೊಳ್ಳುವ ಮೂಲಕ ಯಶಸ್ವಿನಿ ಗೌಡಗೆ ಅಧ್ಯಕ್ಷ ಪಟ್ಟ ನೀಡಲಾಗಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುತಾಲಿಕ್ ಹಾಗೂ ಸಂಘಟನೆ ಮುಖಂಡರ ಸಮ್ಮುಖದಲ್ಲಿ ಯಶಸ್ವಿನಿ ಗೌಡ ಅವರಿಗೆ ಅಧಿಕಾರ ನೀಡಲಾಗಿದೆ.

    ಯಶಸ್ವಿನಿ ಗೌಡ ಪತಿಯನ್ನೇ ಹತ್ಯೆ ಮಾಡಿರುವ ಪ್ರಕರಣದಲ್ಲಿ ಆರೋಪಿಯಾಗಿದ್ದಾಳೆ. ಅಲ್ಲದೇ ನಗರದಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದಳು ಎಂಬ ಮಾಹಿತಿ ಕೂಡ ಲಭಿಸಿದೆ. ನಗರದ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಯಶಸ್ವಿನಿ ಗೌಡ ವಿರುದ್ಧ ರೌಡಿಶೀಟರ್ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಳ್ಳೇಗಾಲದ ಎಂಜಿಎಸ್‍ವಿ ಶಾಲೆಯನ್ನು ದತ್ತು ಪಡೆದ ಶಿಕ್ಷಣ ಸಚಿವ

    ಕೊಳ್ಳೇಗಾಲದ ಎಂಜಿಎಸ್‍ವಿ ಶಾಲೆಯನ್ನು ದತ್ತು ಪಡೆದ ಶಿಕ್ಷಣ ಸಚಿವ

    ಚಾಮರಾಜನಗರ: ತಾನು ವಿದ್ಯಾಭ್ಯಾಸ ಮಾಡಿದ ಶಾಲೆಯನ್ನು ದತ್ತು ಪಡೆದು ಶಾಲೆಯನ್ನು ಹೈಟೆಕ್ ಆಗಿ ನಿರ್ಮಾಣ ಮಾಡಲು ಶಿಕ್ಷಣ ಸಚಿವ ಎನ್.ಮಹೇಶ್ ಚಿಂತನೆ ನಡೆಸಿದ್ದಾರೆ.

    ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿರುವ ಎಂಜಿಎಸ್‍ವಿ ಶಾಲೆಯೂ ಸದ್ಯ ಶಿಥಿಲಾವಸ್ಥೆಯಲ್ಲಿದೆ. ಈ ಶಾಲೆಯ ವೀಕ್ಷಣೆಗೆಂದು ಆಗಮಿಸಿದ್ದ ಸಚಿವ ಎನ್.ಮಹೇಶ್ ಇದು ನಾನು ಓದಿದ ಶಾಲೆ ಈಗ ಸ್ಥಿತಿಯಲ್ಲಿರುವುದು ನಿಜಕ್ಕೂ ಬೇಸರ ತಂದಿದೆ. ಹೀಗಾಗಿ ಶಾಲೆಯನ್ನು ದತ್ತು ಪಡೆದು ಹೈಟೆಕ್ ಆಗಿ ಅಭಿವೃದ್ಧಿ ಮಾಡುತ್ತೇನೆ ಎಂದಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಚಿವರು, ನನು ನನ್ನ ಹೈಸ್ಕೂಲ್ ಓದನ್ನ ಇಲ್ಲೇ ಮುಗಿಸಿದ್ದೇನೆ. ಅಲ್ಲದೇ 2 ವರ್ಷ ಪಿಯುಸಿ ಕೂಡ ಇಲ್ಲೇ ಮಾಡಿದ್ದೇನೆ. ಮುಡುಗುಂಡದ ಗುರ್ಕಾರ್ ಸುಬ್ಬಪ್ಪ ವೀರಪ್ಪ ಹಾಗೂ ಕುಟುಂಬ ಕಟ್ಟಿದ ಅದ್ಭುತವಾದಂತಹ ಶಾಲೆಯಾಗಿದೆ. ದಾನಿಗಳು ಆ ಕಾಲದಲ್ಲೇ ಇಷ್ಟೊಂದು ದೊಡ್ಡ ಸಾಧನೆಯನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದಲ್ಲಿದ್ದುಕೊಂಡು ಇದನ್ನು ಅಭಿವೃದ್ಧಿ ಪಡಿಸಲು ಸಾಧ್ಯವಾಗಿಲ್ಲವೆಂದರೆ ನನ್ನಂತಹ ಹಳೇಯ ವಿದ್ಯಾರ್ಥಿಗಳಿಗೆ ಅವಮಾನ ಅಂತ ಅನಿಸಿದೆ. ಹೀಗಾಗಿ ಎಂಜಿಎಸ್‍ವಿ ಶಾಲೆ ಹಾಗೂ ಮೈದಾನ ಎಲ್ಲವನ್ನು ಹೈಟೆಕ್ ಮಾಡುವ ಜವಾಬ್ದಾರಿಯನ್ನು ಶಿಕ್ಷಣ ಸಚಿವನಾಗಿ ನಾನೇ ಹೊತ್ತುಕೊಂಡಿದ್ದೇನೆ ಅಂದ್ರು.

    ಶಾಲೆಯಲ್ಲಿ ಏನೇನು ಕೆಲಸಗಳಾಗಬೇಕು ಎಂಬುದನ್ನು ಪಿಡಬ್ಯುಡಿ ಎಂಜಿನಿಯರ್ ಗೆ ಬಂದು ಪರಿಶೀಲನೆ ನಡೆಸಲು ಹೇಳಿದ್ದೇನೆ. ಇಲ್ಲಿರುವ ಕಲೆಗೆ ಯಾವುದೇ ಹಾನಿಯಾಗದಂತೆ ಕಟ್ಟಡವನ್ನು ಸುಭದ್ರಪಡಿಸಬೇಕು. ಈ ವರ್ಷದಲ್ಲಿ ಇದನ್ನು ಮುಗಿಸಬೆಕು ಅಂತ ಯೋಜನೆ ಹಾಕಿಕೊಂಡಿರುವುದಾಗಿ ಸಚಿವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್

    ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್

    ಬೆಂಗಳೂರು: ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಫಿ ತೋಟದ ಮಾಲೀಕ ದೀಪಕ್ ಮಯೂರ್ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ವಾರಸ್ದಾರ ಧಾರಾವಾಹಿ ಕಾರ್ಯಕಾರಿ ನಿರ್ಮಾಪಕ ಮಹೇಶ್ ಪ್ರತ್ಯಾರೋಪ ಮಾಡಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಹೇಶ್, ಈ ಮೊದಲು ನನಗೆ ಅನ್ಯಾಯವಾಗಿದೆ ಎಂದು ದೀಪಕ್ ಚಿಕ್ಕಮಗಳೂರು ಎಸ್‍ಪಿ ಬಳಿ ಹೋಗಿದ್ದರು. ಅಲ್ಲಿ ನನಗೆ 88 ರಿಂದ 90 ಲಕ್ಷ ರೂ. ಆಗಿದೆ ಅಂತಾ ಆರೋಪಿಸಿದರು. ಆದರೆ ಎಸ್‍ಪಿ ತೋಟದ ಬೆಲೆಯೇ ಅಷ್ಟಿಲ್ಲ. ಹಾಗಾಗಿ ನೀವು ನ್ಯಾಯಾಲಯದ ಮೊರೆ ಹೋದರೆ ಒಳ್ಳೆಯದು ಎಂದು ಸಲಹೆ ನೀಡಿ ಕಳುಹಿಸಿದರು. ಎಸ್‍ಪಿ ಸಲಹೆಯಂತೆ ದೀಪಕ್ ಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ಆರೋಪಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸುವಂತೆ ಆದೇಶಿಸಿತ್ತು. ನಾವು ಅಲ್ಲಿಯೂ ನ್ಯಾಯಾಲಯಕ್ಕೆ ನಮ್ಮ ಬಳಿಯ ದಾಖಲೆಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

    ಏನಿದು ವಿವಾದ?:
    ಕೆಲ ಸಮಯಗಳ ಹಿಂದೆ ಖಾಸಗಿ ವಾಹಿನಿಯಲ್ಲಿ ನಟ ಕಿಚ್ಚ ಸುದೀಪ್ ಅವರ ಕಿಚ್ಚ ಕ್ರಿಯೇಷನ್ ನಿರ್ಮಾಣದ ಅಡಿಯಲ್ಲಿ ವಾರಸ್ದಾರ ಧಾರಾವಾಹಿ ಪ್ರಸಾರವಾಗುತ್ತಿತ್ತು. ಈಗ ಈ ಧಾರಾವಾಹಿ ಪ್ರಸಾರ ನಿಂತಿದ್ದು, ಇದರ ಚಿತ್ರೀಕರಣಕ್ಕಾಗಿ ಚಿಕ್ಕಮಗಳೂರಿನ ದೀಪಕ್ ಮಯೂರ್ ಪಟೇಲ್ ಎಂಬುವವರ ಮನೆ ಮತ್ತು ಕಾಫಿ ತೋಟವನ್ನು ಬಾಡಿಗೆಗೆ ತಂಡ ಪಡೆದಿತ್ತು.

    ಧಾರಾವಾಹಿ ಸಂದರ್ಭದಲ್ಲಿ ಕಾಫಿ ತೋಟಕ್ಕೆ ಸಾಕಷ್ಟು ಹಾನಿಯಾಗಿದೆ. ಹಾನಿಯಾದ ಹಿನ್ನೆಲೆಯಲ್ಲಿ ಒಟ್ಟು 1.50 ಕೋಟಿ ರೂ. ನಷ್ಟವಾಗಿದ್ದು ಈ ಹಣವನ್ನು ನೀಡಬೇಕೆಂದು ನಿರ್ಮಾಣ ತಂಡಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬೇಡಿಕೆಯನ್ನು ಸುದೀಪ್ ಕ್ರಿಯೇಶನ್ಸ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ದೀಪಕ್ ಮಯೂರ್ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ದೂರು ನೀಡಿದ್ದಾರೆ.

    ಮಹೇಶ್ ಹೇಳೋದು ಏನು?
    ವಾರಸ್ದಾರ ಧಾರಾವಾಹಿಯ ಚಿತ್ರೀಕರಣ ವೇಳೆ ನಮ್ಮೆಲ್ಲ ಕಲಾವಿದರಿಗೂ ಹೋಟೆಲ್‍ನಲ್ಲಿ ಉಳಿದುಕೊಳ್ಳುವ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಆದ್ರೆ ದೀಪಕ್, ನಿಮ್ಮ ತಂಡಕ್ಕೆ ವಸತಿ ವ್ಯವಸ್ಥೆಯನ್ನು ನಾನು ಕಲ್ಪಿಸಿಕೊಡುತ್ತೇನೆ. ಹೋಟೆಲ್‍ಗೆ ನೀಡುವ ಹಣವನ್ನೇ ನನಗೆ ನೀಡಿ ಅಂತಾ ಮನವಿ ಮಾಡಿಕೊಂಡಿದ್ದರು. ನಮ್ಮನ್ನು ನಂಬಿ ಹೋಮ್ ಸ್ಟೇ ಮಾಡಬೇಡಿ. ಇಲ್ಲಿ ನಾವು ಹೆಚ್ಚು ದಿನ ಇರಲ್ಲ ಎಂದು ಹೇಳಿದರೂ ನೀವು ಹೋದ ಮೇಲೆ ನಾನು ಅದನ್ನೇ ಹೋಮ್ ಸ್ಟೇ ಮಾಡಿಕೊಂಡು ಜೀವನ ಸಾಗಿಸುತ್ತೇನೆ ಎಂದು ತಿಳಿಸಿ ನಮ್ಮೆಲ್ಲರಿಗೂ ವಸತಿ ವ್ಯವಸ್ಥೆ ಮಾಡಿಕೊಟ್ಟಿದ್ದರು.

    ನಾವು ಮನೆಯಲ್ಲಿ ಮಾತ್ರ ಶೂಟಿಂಗ್ ಮಾಡಿದ್ದು, ಅದಕ್ಕೆ ಸಂಬಂಧಪಟ್ಟಂತೆ ಬಾಡಿಗೆಯನ್ನು ಕೊಟ್ಟಿದ್ದೇವೆ. 70 ಸಾವಿರ ಬಾಡಿಗೆ ಮಾತ್ರ ಬಾಕಿ ಉಳಿದುಕೊಂಡಿತ್ತು. ಬಾಡಿಗೆ ನೀಡಿಲ್ಲ ಎಂದು ಆರೋಪಿಸಿ ಚಿತ್ರೀಕರಣಕ್ಕಾಗಿ ತಂದಿದ್ದ ಉಪಕರಣಗಳನ್ನು ಅವರ ಬಳಿಯೇ ಇಟ್ಟುಕೊಂಡಿದ್ದಾರೆ. ನಾವು ಬಾಡಿಗೆ ಹಣ 70 ಸಾವಿರ ಕೊಡಲು ಸಿದ್ಧರಿದ್ದು, ನಮ್ಮ 7 ಲಕ್ಷ ಮೌಲ್ಯದ ಉಪಕರಣಗಳನ್ನು ಕೊಡಿ ಎಂದರು ಕೊಡುತ್ತಿಲ್ಲ

    ಸದ್ಯ ದೀಪಕ್ ಧಾರಾವಾಹಿ ತಂಡ ತೋಟದಲ್ಲಿ ಮನೆ ಕಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಸದ್ಯ ದೀಪಕ್ ಅವರಿಗೆ ಹಣ ಬೇಕಾಗಿದ್ದು, ಶೂಟಿಂಗ್ ಮುಗಿಸಿ ಬಂದಾಗಿನಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ತೋಟದಲ್ಲಿ ಯಾವುದೇ ಮನೆಯನ್ನು ಕಟ್ಟಿಲ್ಲ. ನಾವು ಬಾಡಿಗೆಯ 70 ಸಾವಿರ ಕೊಡಲು ಹೋದಾಗ ತೋಟ ಹಾಳು ಮಾಡಿದ್ದಕ್ಕೆ 1 ಕೋಟಿ 50 ಲಕ್ಷ ರೂ. ಡಿಮ್ಯಾಂಡ್ ಮಾಡುತ್ತಿದ್ದಾರೆ. ಈ ವಿಚಾರ ಸುದೀಪ್ ಅವರ ಗಮನಕ್ಕೆ ಬಂದಿತ್ತು. ಆದರೆ ದೀಪಕ್ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂಬುವುದು ಸುದೀಪ್ ಅವರಿಗೆ ಎಂದು ತಿಳಿದಿತ್ತು. ಈ ವಿಚಾರದಲ್ಲಿ ಸುದೀಪ್ ಅವರ ತಪ್ಪಿಲ್ಲ.

    ದೀಪಕ್ ವಿರುದ್ಧ ದೂರು ನೀಡಲು ನಮ್ಮ ಬಳಿಯೂ ದಾಖಲೆಗಳಿವೆ. ಚಿತ್ರೀಕರಣ ಆರಂಭಿಸಿದ ದಿನದಿಂದ ಕೊನೆಯ ದಿನವರೆಗೂ ಎಲ್ಲ ಹಣದ ವ್ಯವಹಾರಗಳನ್ನು ಬ್ಯಾಂಕ್ ಮುಖಾಂತರವೇ ನಡೆಸಲಾಗಿದೆ. ದೀಪಕ್ ಸಹೋದರ ಮತ್ತು ತಂದೆ ಯಾವುದೇ ಆರೋಪಗಳನ್ನು ಮಾಡುತ್ತಿಲ್ಲ. ನಾವು ಯಾವುದೇ ಮೋಸ ಮಾಡಿಲ್ಲ. ಫಿಲ್ಮ್ ಚೇಂಬರ್‍ಗೆ ದೂರು ನೀಡುವುದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಮಹೇಶ್ ಪ್ರತಿಕ್ರಿಯಿಸಿದ್ದಾರೆ.

  • ಹೆಚ್‍ಐವಿ ಬಾಧಿತ ಮಕ್ಕಳ ಪಾಲಿನ ಬೆಳಕು ಬೆಳಗಾವಿ ಮಹೇಶ್!

    ಹೆಚ್‍ಐವಿ ಬಾಧಿತ ಮಕ್ಕಳ ಪಾಲಿನ ಬೆಳಕು ಬೆಳಗಾವಿ ಮಹೇಶ್!

    ಬೆಳಗಾವಿ: ಹೆಚ್‍ಐವಿ ಎನ್ನುವ ಪದ ಕೇಳಿದರೆ ಸಾಕು ಜನ ದೂರ ಸರಿಯುತ್ತಾರೆ. ಇನ್ನು ಹೆಚ್‍ಐವಿ ಬಾಧಿತ ಮಕ್ಕಳು ಕಥೆ ಏನಾಗ್ಬೇಡಾ? ಆದರೆ, ಬೆಳಗಾವಿಯ ಪಬ್ಲಿಕ್ ಹೀರೋ ಒಬ್ಬರು ಇಂಥ ಮಕ್ಕಳ ಭವಿಷ್ಯಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ.

    ಕಣಬರ್ಗಿ ನಿವಾಸಿ ಮಹೇಶ್ ಜಾಧವ್ ವೃತ್ತಿಯಲ್ಲಿ ಡಿಪ್ಲೊಮಾ ಎಂಜಿನಿಯರ್. ಆದರೆ ಇವರು ಸಮಾಜ ಸೇವೆ ಮಾತ್ರ ವಿಭಿನ್ನ. ಎಚ್‍ಐವಿ ಪೀಡಿತ ಅನಾಥ ಮಕ್ಕಳ ವಸತಿ ನಿಲಯಕ್ಕಾಗಿ ತಮ್ಮ ಸ್ವಂತ ಮನೆಯನ್ನು ಬಿಟ್ಟುಕೊಟ್ಟು ಮಕ್ಕಳ ಶಾಲಾ ಶಿಕ್ಷಣ, ಆರೈಕೆ ಸಹಿತ ಉನ್ನತ ವಿದ್ಯಾಭ್ಯಾಸವನ್ನು ನೋಡಿಕೊಳ್ಳುತ್ತಿದ್ದಾರೆ.

    ಪ್ರೇರಣೆ ಏನು?
    ಗೆಳೆಯನ ಹುಟ್ಟುಹಬ್ಬದ ನಿಮಿತ್ತವಾಗಿ ಬೆಳಗಾವಿ ಜಿಲಾಸ್ಪತ್ರೆಗೆ ಹಣ್ಣು ವಿತರಿಸಲು ಹೋದಾಗ ಅಪಘಾತವಾದ ಪಾಸಿಟವ್ ಮಗುವೊಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿತ್ತು. ವೈದ್ಯರು ನೋಡದೇ ನಿರಾಕರಿಸಿದಾಗ ಮಹೇಶ್ ಅವರು ಮನನೊಂದು ಇಂಥ ಮಕ್ಕಳ ಬೆಂಬಲಕ್ಕೆ ನಿಂತು ಇಂದಿಗೆ ದೊಡ್ಡದಾದ ಸಂಸ್ಥೆ ಕಟ್ಟಿ 2,200 ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ. ಅದಲ್ಲದೆ ಸಂಸ್ಥೆಯಲ್ಲಿ 76 ಜನರಿಗೆ ಉದ್ಯೋಗಾವಕಾಶ ಕಲ್ಪಿಸಿದ್ದಾರೆ. ಅದರಲ್ಲಿ 16 ಜನ ಅನಾಥ ಮಹಿಳೆಯರು ಸೊಂಕಿನಿಂದ ಬಳಲುತ್ತಿದ್ದು ಎಲ್ಲರೂ ಆರೋಗ್ಯವಾಗಿದ್ದಾರೆ.

    ಸಮಾಜದಲ್ಲಿ ತಿರಸ್ಕೃತಗೊಂಡ ಇಂಥ ಮಕ್ಕಳಿಗೆ ಸೂರು ಕಲ್ಪಿಸಿ ದಿನನಿತ್ಯ ಅವರ ಆರೋಗ್ಯ ಜೊತೆಗೆ ವಿದ್ಯಾಭ್ಯಾಸವನ್ನು ಕಲ್ಪಸುವುದು ದೊಡ್ಡ ಕೆಲಸ. ಚಿಕ್ಕ ವಯಸ್ಸಿನಲ್ಲಿಯೇ ಮಹೇಶ ಇಂಥ ದೊಡ್ಡ ಕೆಲಸಕ್ಕಾಗಿ ಕೈ ಹಾಕಿದ್ದನ್ನು ಕಂಡ ಪಾಲಕರು ತಮ್ಮ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮನೆಯನ್ನು ಮಹೇಶ ಸಂಸ್ಥೆಗೆ ನೀಡಿ ತಾವು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ.

    2008 ರಲ್ಲಿ ಕೇವಲ 6 ಮಕ್ಕಳನ್ನು ಪಡೆದುಕೊಂಡು ಮಹೇಶ್ ಅವರು ಈ ಸಮಾಜ ಸೇವೆಯನ್ನು ಆರಂಭಿಸಿದರು. ತಮ್ಮ ಸಂತ ಮನೆಯನ್ನು ಕೆಡವಿ ಅಲ್ಲಿ ಈಗ ದೊಡ್ಡದಾದ ವಸತಿ ಶಾಲೆಯನ್ನು ಕಟ್ಟುತ್ತಿದ್ದಾರೆ. ಇವರ ಸಮಾಜ ಸೇವೆಯನ್ನು ಕಂಡು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು ಭೇಟಿ ನೀಡಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

    ಮಕ್ಕಳ ಪೋಷಣೆಗಾಗಿ ಆಯಾಗಳು, ಅಂಗನವಾಡಿ, ಆಸ್ಪತ್ರೆಗೆ, ಶಾಲೆಗೆ ಕಳುಹಿಸಲು ಪ್ರತ್ಯೇಕವಾಗಿ ವ್ಯವಸ್ಥೆ ಮಾಡಿ ಎಲ್ಲರನ್ನು ಒಂದೇ ಕುಟುಂಬದಂತೆ ಸಾಕುತ್ತಿರುವ ಮಹೇಶ್ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಯಾವುದೇ ಸಹಾಯಧನ ಪಡೆಯದೇ ಈ ಸೇವೆ ಮಾಡುತ್ತಿರುವುದು ವಿಶೇಷ.