Tag: mahindra group

  • ಭಾರತೀಯ ಸೇನೆಗಾಗಿ ಮಹಿಂದ್ರಾ ಗ್ರೂಪ್‍ನಿಂದ ನೂತನ ಶಸ್ತ್ರಸಜ್ಜಿತ ವಾಹನ ನಿರ್ಮಾಣ

    ಭಾರತೀಯ ಸೇನೆಗಾಗಿ ಮಹಿಂದ್ರಾ ಗ್ರೂಪ್‍ನಿಂದ ನೂತನ ಶಸ್ತ್ರಸಜ್ಜಿತ ವಾಹನ ನಿರ್ಮಾಣ

    ನವದೆಹಲಿ: ಭಾರತೀಯ ಸಶಸ್ತ್ರ ಪಡೆಗಾಗಿ ವಿಶೇಷವಾಗಿ ತಯಾರಿಸಲಾದ ಆರ್ಮರ್ಡ್ ಲೈಟ್ ಸ್ಪೆಷಲಿಸ್ಟ್ ವೆಹಿಕಲ್‍ನ್ನು ಸೇನೆಗೆ ನೀಡಲಾಗುತ್ತಿದೆ ಎಂದು ಮಹೀಂದ್ರಾ ಗ್ರೂಪ್‍ನ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

    ಈ ನೂತನ ವಾಹನವನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದೆ. ಇದು ಲಘು ಶಸ್ತ್ರಸಜ್ಜಿತ ವಿಶೇಷ ವಾಹನವಾಗಿದೆ. ಅಲ್ಲದೇ ಇದು ಹೆಚ್ಚುವರಿ ಬಾರವನ್ನು ಹೊರುವ ಸಾಮರ್ಥ್ಯ ಹೊಂದಿದೆ. ನಮ್ಮ ದೇಶದ ಎಲ್ಲಾ ಭೂ ಭಾಗಗಳಲ್ಲಿ ಹಾಗೂ ಮರುಭೂಮಿಯಲ್ಲಿ ಕಾರ್ಯ ನಿರ್ವಹಿಸಲು ಈ ವಾಹನ ಸೂಕ್ತವಾಗಿದೆ. ಗುಡ್ಡಗಾಡು ಹಾಗೂ ಅರಣ್ಯ ಪ್ರದೇಶಗಳಲ್ಲಿ ಗಸ್ತು ತಿರುಗಲು, ವಿಶೇಷ ಪಡೆಗಳ ಕ್ಷಿಪ್ರ ಕಾರ್ಯಾಚರಣೆಗಳಿಗೆ ಇದು ಸೂಕ್ತವಾಗಿದೆ ಎಂದು ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ಕ್ಕೆ ಕರ್ನಾಟಕ ಬಂದ್‌ಗೆ ಕರೆ

    ಶಸ್ತ್ರಸಜ್ಜಿತ ವಾಹನಗಳ ವೀಡಿಯೊವನ್ನು ಹಂಚಿಕೊಂಡಿರುವ ಆನಂದ್ ಮಹಿಂದ್ರಾ ಅವರು, ವಾಹನದ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಎಲ್ಲಾ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೇ ನಮ್ಮ ಸೇನೆಗಾಗಿ ಹೆಮ್ಮೆಯಿಂದ ನಿರ್ಮಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

    ಸುಖವಿಂದರ್ ಹೇಯರ್ ಅವರ ತಂಡ ಈ ವಾಹನವನ್ನು ಯಶಸ್ವಿಯಾಗಿ ಸಿದ್ಧಪಡಿಸಿದೆ. ಈ ಮೂಲಕ ದೇಶದ ಭದ್ರತಾ ವ್ಯವಸ್ಥೆಗೆ ಸಂಸ್ಥೆ ಅಮೂಲ್ಯ ಕೊಡುಗೆ ನೀಡಿದೆ ಎಂದು ಅವರು ಟ್ವೀಟ್‍ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಮೀನು ಹಿಡಿಯಲು ತೆರಳಿದ್ದ ಮೂವರು ಬಾಲಕರು ನೀರುಪಾಲು

  • ಮಹೀಂದ್ರಾ ಶೂಟ್‍ನಲ್ಲಿ ತಾಳ್ಮೆ ಕಳೆದುಕೊಂಡ ಅಜಯ್ ದೇವಗನ್!

    ಮಹೀಂದ್ರಾ ಶೂಟ್‍ನಲ್ಲಿ ತಾಳ್ಮೆ ಕಳೆದುಕೊಂಡ ಅಜಯ್ ದೇವಗನ್!

    ಮುಂಬೈ: ಬಾಲಿವುಡ್ ಸ್ಟಾರ್ ನಟ ಮತ್ತು ಮಹೀಂದ್ರಾ ಗ್ರೂಪ್‍ನ ರಾಯಭಾರಿ ಅಜಯ್ ದೇವಗನ್ ಶೂಟಿಂಗ್ ಸಮಯದಲ್ಲಿ ತಾಳ್ಮೆಯನ್ನು ಕಳೆದುಕೊಂಡಿದ್ದಾರೆ.

    ಮಹೀಂದ್ರಾ ಟ್ರಕ್ ಮತ್ತು ಬಸ್ ತಯಾರಿಕಾ ವಿಭಾಗದ ರಾಯಭಾರಿ ಅಜಯ್ ದೇವಗನ್ ಅವರನ್ನು ಒಳಗೊಂಡ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಈ ವೀಡಿಯೋದಲ್ಲಿ, ಜಾಹೀರಾತನ್ನು ಚಿತ್ರೀಕರಿಸುವಾಗ ಅಜಯ್ ದೇವಗನ್ ಸಿಟ್ಟು ಮಾಡಿಕೊಳ್ಳುವ ರೀತಿಯಲ್ಲಿಯೇ ಸ್ಕ್ರಿಪ್ಟ್ ಮಾಡಲಾಗಿತ್ತು. ಇದನ್ನೂ ಓದಿ:  1.35 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಶ್ರೀಮಂತ ಪಾಟೀಲ್

    ವೀಡಿಯೋದಲ್ಲಿ ಏನಿದೆ?
    ಆನಂದ್ ಮಹೀಂದ್ರಾ ಅವರು ಟ್ವಿಟ್ಟರ್ ನಲ್ಲಿ, ಅಜಯ್ ‘ಯೆ ಬಾರ್ ಬಾರ್ ಸ್ಕ್ರಿಪ್ಟ್ ಕ್ಯೂನ್ ಬದಲ್ ರಹೇ ಹೋ?(ಸ್ಕ್ರಿಪ್ಟ್ ಏಕೆ ನಿರಂತರವಾಗಿ ಬದಲಾಯಿಸಲಾಗುತ್ತಿದೆ?) ಎಂದು ಸಿಟ್ಟಾಗಿ ಶೂಟಿಂಗ್ ವೇಳೆ ಗರಂ ಆಗಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಆಗ ಶೂಟಿಂಗ್‍ನಲ್ಲಿದ್ದ ಒಬ್ಬರು ಸ್ಕ್ರಿಪ್ಟ್ ಕೇವಲ ನಾಲ್ಕು ಬಾರಿ ಬದಲಾಯಿಸಲಾಗಿದೆ ಎಂದು ಪ್ರತಿಕ್ರಿಯಿಸುತ್ತಾರೆ. ಆಗ ಅಜಯ್ ನಿಟ್ಟುಸಿರು ಬಿಡುತ್ತಾರೆ. ವೀಡಿಯೋ ನಂತರ ‘ವೀಕ್ಷಿಸುತ್ತಿರಿ’ ಇನ್ನೂ ಹೆಚ್ಚು ಬರಲಿದೆ ಎಂದು ಬರೆದುಕೊಳ್ಳಲಾಗಿದೆ.

    ಈ ಮೂಲಕ ಮಹೀಂದ್ರ ಗ್ರೂಪ್ ಅಜಯ್ ಸಿಟ್ಟಾಗುವ ರೀತಿಯಲ್ಲಿಯೇ ಸ್ಕ್ರಿಪ್ಟ್ ಮಾಡಿದ್ದು, ಇದನ್ನು ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂಬುದು ಈ ಮೂಲಕ ತಿಳಿಯುತ್ತೆ. ಈ ವೀಡಿಯೋ ಶೇರ್ ಮಾಡಿದ ಅವರು, ಮಹೀಂದ್ರಾ ಟ್ರಕ್ ಬಸ್ ಚಿತ್ರೀಕರಣದಲ್ಲಿ ಅಜಯ್ ದೇವಗನ್ ಅವರು ತಮ್ಮ ಶಾಂತತೆಯನ್ನು ಕಳೆದುಕೊಂಡಿದ್ದಾರೆ ಎಂದು ನನಗೆ ತಿಳಿಸಲಾಯಿತು. ಕೊನೆಗೆ ಇದು ತಮಾಷೆಗಾಗಿ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

    ಈ ಹೊಸ ರೀತಿಯ ಪ್ರಚಾರದ ವೀಡಿಯೋ ನೋಡಿದ ನೆಟ್ಟಿಗರು ಒಂದು ನಿಮಿಷ ಶಾಕ್ ಆಗಿದ್ದು, ಪೂರ್ತಿ ವೀಡಿಯೋ ನೋಡಿದ ಮೇಲೆ ಇದನ್ನು ಪ್ರಚಾರಕ್ಕೆ ಮಾಡಿದ್ದಾರೆ ಎಂಬುದು ತಿಳಿದುಬರುತ್ತೆ. ನೆಟ್ಟಿಗರು, ‘ಜಾಹೀರಾತು ಮಾಡಲು ಉತ್ತಮ ಮಾರ್ಗ’ ಎಂದು ಕಾಮೆಂಟ್ ಮಾಡಿದರೆ, ಮತ್ತೊಬ್ಬರು ಇಂದಿರಾನಗರ ಕಾ ಗುಂಡಾ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಜ್ಯೂ.ಎನ್‍ಟಿಆರ್ ಜೊತೆ ನಟಿಸಲು ಇಷ್ಟ ಎಂದ ಪದ್ಮಾವತಿ

    ಈ ಟ್ವೀಟ್ ರೀ-ಟ್ವೀಟ್ ಮಾಡಿ ಅಜಯ್, ಈ ಶೂಟ್ ಅದ್ಭುತವಾಗಿತ್ತು ಎಂದು ಬರೆದುಕೊಂಡಿದ್ದಾರೆ.

  • ಆನಂದ್ ಮಹೀಂದ್ರಾ ಥ್ರೋಬ್ಯಾಕ್ ಫೋಟೋ ವೈರಲ್

    ಆನಂದ್ ಮಹೀಂದ್ರಾ ಥ್ರೋಬ್ಯಾಕ್ ಫೋಟೋ ವೈರಲ್

    ಮುಂಬೈ: ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರ ಥ್ರೋಬ್ಯಾಕ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿದೆ.

    ಇಂದು ಬಿಸ್ಸನೆಸ್ ಫೀಲ್ಡ್ ನಲ್ಲಿ ಆನಂದ್ ಮಹೀಂದ್ರಾ ಪ್ರಸಿದ್ಧಿಯನ್ನು ಹೊಂದಿದ್ದಾರೆ. ಆದರೆ ಹಿಂದೆ ಆನಂದ್ ಅವರು ಸಿನಿಮಾ ನಿರ್ಮಾಪಕರಾಗಲು ಬಯಸಿದ್ದರು ಎಂಬುದು ಅನೇಕರಿಗೆ ತಿಳಿದಿಲ್ಲ. ಈಗ ಆನಂದ್ ಮಹೀಂದ್ರಾ ಅವರಿಗೆ 66 ವರ್ಷವಾಗಿದ್ದು, ಇಂದು ಮಧ್ಯಾಹ್ನ ಟ್ವಿಟ್ಟರ್ ನಲ್ಲಿ ಅಪರೂಪದ ಥ್ರೋಬ್ಯಾಕ್ ಫೋಟೋವನ್ನು ಹಂಚಿಕೊಂಡು ತಮ್ಮ ಹಿಂದಿನ ಕನಸಿನ ಬಗ್ಗೆ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಅಮೆರಿಕದಿಂದಲೇ ಕಾನ್ಪುರದಲ್ಲಿ ನಡೆಯುತ್ತಿದ್ದ ಕಳ್ಳತನವನ್ನು ತಡೆದ ಮನೆಯವರು

    ಆನಂದ್ ಅವರು ಯುವಕರಾಗಿದ್ದಾಗ ತೆಗೆದ ಬ್ಲಾಕ್ ಅಂಡ್ ವೈಟ್ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗಿದ್ದು, ಆ ಫೋಟೋವನ್ನು ನೋಡಿದ ಆನಂದ್ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

    ಫೋಟೋ ಬಗ್ಗೆ ಟ್ವಿಟ್ಟರ್ ನಲ್ಲಿ ಹಂಚಿಕೊಂಡ ಆನಂದ್ ಅವರು, ಈ ಫೋಟೋವನ್ನು ಹಲವು ವರ್ಷಗಳ ಹಿಂದೆ ಮಧ್ಯಪ್ರದೇಶದ ಇಂದೋರ್ ಬಳಿಯ ದೂರದ ಹಳ್ಳಿಯಲ್ಲಿ 16 ಎಂಎಂ ಕ್ಯಾಮರಾದಲ್ಲಿ ತೆಗೆಯಾಲಾಗಿತ್ತು. ನಾನು ಆಗ ಕಾಲೇಜಿನಲ್ಲಿ ಸಿನಿಮಾ ನಿರ್ಮಾಣದ ತರಬೇತಿಯನ್ನು ಪಡೆಯುತ್ತಿದ್ದೆ. ಈ ಫೋಟೋವನ್ನು ಇಂಧೋರ್ ಬಳಿಯ ದೂರದ ಹಳ್ಳಿಯಲ್ಲಿ ಸಾಕ್ಷ್ಯಚಿತ್ರವನ್ನು ಚಿತ್ರೀಕರಿಸುವಾಗ ತೆಗೆಯಲಾಗಿದೆ ಎಂದು ಬಹಿರಂಗಪಡಿಸಿದ್ದಾರೆ.

    ಟ್ವಿಟರ್ ಬಳಕೆದಾರರು ಆನಂದ್ ಅವರಿಗೆ, ‘ಶಾಲೆ/ಕಾಲೇಜು ದಿನಗಳಲ್ಲಿ ನಿಮ್ಮ ಮಹತ್ವಾಕಾಂಕ್ಷೆ’ ಏನೆಂದು ಕೇಳಿದಾಗ ಅವರು ಉತ್ತರಿಸಿದ್ದು, ಇದಕ್ಕೆ ಉತ್ತರಿಸುವುದು ಸುಲಭ. ನಾನು ಚಲನಚಿತ್ರ ನಿರ್ಮಾಪಕನಾಗಲು ಬಯಸಿದ್ದೆ ಮತ್ತು ಕಾಲೇಜಿನಲ್ಲಿ ಸಿನಿಮಾ ಕುರಿತು ಅಧ್ಯಯನವನ್ನು ಸಹ ಮಾಡಿದ್ದೇನೆ. ನಾನು ನನ್ನ ಪ್ರಬಂಧವನ್ನು ’77 ಕುಂಭಮೇಳ’ ಸಿನಿಮಾ ಬಗ್ಗೆ ಮಾಡಿದ್ದೆ ಎಂದು ಉತ್ತರಿಸಿದ್ದಾರೆ.

    ಆನಂದ್ ಅವರು ಆಗಾಗ್ಗೆ ತಮ್ಮ ಸಿನಿಮಾ ಮೇಲಿನ ಪ್ರೀತಿಯ ಬಗ್ಗೆ ಮಾತನಾಡುತ್ತಾರೆ. 2017 ರಲ್ಲಿ, ಟ್ವಿಟ್ಟರ್ ನಲ್ಲಿ ಅವರು, ತಮ್ಮ ಪ್ರಬಂಧದ ಸಿನಿಮಾವಾದ ‘ಕುಂಭಮೇಳ’ ಚಿತ್ರೀಕರಣದ ಬಗ್ಗೆ ಹಂಚಿಕೊಂಡಿದ್ದರು. ಇದನ್ನೂ ಓದಿ: ಜಾರ್ಖಂಡ್ ಮೂಲದ ಮೂವರು ಸೋಂಕಿತರು ಮಡಿಕೇರಿಯಿಂದ ಪರಾರಿ

    2014 ರ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಾನು ಚಲನಚಿತ್ರ ನಿರ್ಮಾಣವನ್ನು ಏಕೆ ಆರಿಸಿಕೊಂಡೆ ಎಂದು ಜನರು ನನ್ನನ್ನು ಆಗಾಗ್ಗೆ ಕೇಳುತ್ತಾರೆ. ಅದಕ್ಕೆ ಉತ್ತರ ಇಂದು ಕೊಡುತ್ತೇನೆ. ನನ್ನ ಸ್ವಂತ ಜಾಗವನ್ನು ನಾನು ಕೆತ್ತಬಲ್ಲೆ ಎಂದು ಸಾಬೀತುಪಡಿಸಲು ಚಲನಚಿತ್ರವು ನನಗೆ ಒಂದು ಅದ್ಭುತ ವೇದಿಕೆಯಾಗಿದೆ. ಸಿನಿಮಾ ನನ್ನ ಸಾಮಥ್ರ್ಯವನ್ನು ಹೆಚ್ಚಿಸಲು ವಿಶ್ವಾಸವನ್ನು ನೀಡಿದೆ. ನನ್ನ ಜೀವನದುದ್ದಕ್ಕೂ ನನ್ನನ್ನು ಉತ್ತಮ ಸ್ಥಾನದಲ್ಲಿ ನಿಲ್ಲಿಸಿದೆ ಎಂದು ಹೇಳಿಕೊಂಡಿದ್ದರು.

  • 30 ವರ್ಷ, 3 ಕಿ.ಮೀ ಕಾಲುವೆ ಅಗೆದು ಗ್ರಾಮಕ್ಕೆ ನೀರು ಹರಿಸಿದ ರೈತನಿಗೆ ಆನಂದ್ ಮಹೀಂದ್ರಾ ಗಿಫ್ಟ್

    30 ವರ್ಷ, 3 ಕಿ.ಮೀ ಕಾಲುವೆ ಅಗೆದು ಗ್ರಾಮಕ್ಕೆ ನೀರು ಹರಿಸಿದ ರೈತನಿಗೆ ಆನಂದ್ ಮಹೀಂದ್ರಾ ಗಿಫ್ಟ್

    ನವದೆಹಲಿ: ಇತ್ತೀಚೆಗಷ್ಟೇ ಬಜಾಜ್ ಸ್ಕೂಟರಿನಲ್ಲಿ ತನ್ನ ತಾಯಿಯನ್ನು ದೇಶ ಸುತ್ತಿಸಿದ ಮೈಸೂರಿನ ವ್ಯಕ್ತಿಗೆ ಮಹೀಂದ್ರಾ ಗ್ರೂಪ್ ಮುಖ್ಯಸ್ಥ ಆನಂದ್ ಮಹೀಂದ್ರಾ ಕಾರನ್ನು ಬಹುಮಾನವಾಗಿ ನೀಡಿದ್ದರು. ಈ ಬೆನ್ನಲ್ಲೇ ಇದೀಗ ಬಿಹಾರದ ರೈತನಿಗೆ ಗೌರವಾರ್ಥವಾಗಿ ಗಿಫ್ಟ್ ನೀಡಿದ್ದಾರೆ.

    ತಮ್ಮ ಉದಾರ ಮನೋಭಾವದಿಂದಲೇ ಜನರ ಮನ ಗೆದ್ದಿರುವ ಆನಂದ್ ಮಹೀಂದ್ರಾ ಅವರಿಗೆ ಟ್ವಟ್ಟರ್ ಬಳೆದಾರರೊಬ್ಬರು ರೈತನ ಫೋಟೋ ಹಾಕಿ, ಮಹೀಂದ್ರಾ ಕಂಪನಿಯವರು ಈ ವ್ಯಕ್ತಿಯನ್ನು ಗೌರವಿಸಲು ಹೆಮ್ಮೆಪಡುತ್ತಾರೆ ಎಂದು ನಾನು ಭಾವಿಸುವುದಾಗಿ ಬರೆದುಕೊಂಡು ಟ್ಯಾಗ್ ಮಾಡಿದ್ದಾರೆ.

    https://twitter.com/rohinverma2410/status/1306857678317129730

    ಈಗಾಗಲೇ ರೈತನ ಕಥೆಯನ್ನು ಕೇಳಿರುವ 65 ವರ್ಷದ ಬಿಲಿಯನೇರ್ ಉದ್ಯಮಿ, ಅವರು ನಿರ್ಮಿಸಿದ ಕಾಲುವೆ ತಾಜ್ ಅಥವಾ ಪಿರಮಿಡ್ ಗಳಂತೆಯೇ ಒಂದು ಸ್ಮಾರಕವಾಗಿದೆ ಎಂದು ನಾನು ಭಾವಿಸುತ್ತೇನೆ. ಮಹೀಂದ್ರಾ ಕಂಪನಿಯ ಮೂಲಕ ಅವರಿಗೆ ಟ್ರ್ಯಾಕ್ಟರ್ ಕೊಡುತ್ತಿರುವುದು ನನ್ನ ಸೌಭಾಗ್ಯ ಎಂದು ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಆ ವ್ಯಕ್ತಿಯನ್ನು ನಮ್ಮ ತಂಡ ಹೇಗೆ ಸಂಪರ್ಕಿಸಬಹುದು ಎಂದು ಪ್ರಶ್ನಿಸಿದ್ದರು.

    ಸದ್ಯ ಕಂಪನಿ ರೈತನನ್ನು ಸಂಪರ್ಕಿಸಿದ್ದು, ಸಂಸ್ಥೆಯ ಪ್ರಾದೇಶಿಕ ವ್ಯಾಪಾರಿ ಸಿದ್ಧಿನಾಥ್ ವಿಶ್ವಕರ್ಮ, ಲಾಂಗಿ ಭುಯಾನ್‍ಗೆ ಕಳೆದ ಶನಿವಾರ ಮಹೀಂದ್ರಾ ಟ್ರ್ಯಾಕ್ಟರನ್ನು ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ಆಧುನಿಕ ಶ್ರವಣಕುಮಾರನಿಗೆ ಕಾರ್ ಗಿಫ್ಟ್ ಕೊಟ್ಟ ಆನಂದ್ ಮಹೀಂದ್ರಾ

    30 ವರ್ಷ, 3 ಕಿ.ಮಿ ಕಾಲುವೆ:
    ಮಳೆ ನೀರನ್ನು ಶೇಖರಣೆ ಮಾಡಲು ಲೌಂಗಿ 3 ಕಿ.ಮೀ ಉದ್ದದ ಕಾಲುವೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ ಅವರು ಆಧುನಿಕ ಭಗೀರಥ ಎಂದೆನಿಸಿಕೊಂಡಿದ್ದರು. ಇವರು ಬರೋಬ್ಬರಿ 30 ವರ್ಷಗಳಿಂದ ತನ್ನ ಗ್ರಾಮದ ಜಮೀನಿಗಳಿಗೆ ನೆರವಾಗಲು ಕಾಲುವೆ ನಿರ್ಮಿಸಿದ್ದಾರೆ. ಗಯಾದ ಲಥುವಾ ಏರಿಯಾದಲ್ಲಿ ಬರುವ ಕೊಥಿಲವಾ ಗ್ರಾಮ ನಿವಾಸಿಯಾಗಿರುವ ಲೌಂಗಿ, ಗ್ರಾಮದ ಜನ ನೀರಿನ ಅಭಾವ ಎದುರಿಸುತ್ತಿದ್ದರು. ಇದನ್ನು ತಪ್ಪಿಸಲೆಂದು ಸಮೀಪದ ಬೆಟ್ಟದ ಇಳಿಜಾರಿಗೆ ಅನುಗುಣವಾಗಿ ಕಾಲುವೆ ಮಾಡಿ ಮಳೆ ನೀರು ಹರಿದು ಕೆರೆಗೆ ಸೇರುವಂತೆ ಮಾಡಿ ಸೈ ಎನಿಸಿಕೊಂಡಿದ್ದಾರೆ.

    ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದ ಲೌಂಗಿ, ಈ ಕಾಲುವೆಯನ್ನು ಅಗೆಯಲು ನನಗೆ ಬರೋಬ್ಬರಿ 30 ವರ್ಷಗಳು ಬೇಕಾಯಿತು. ಈ ಕಾಲುವೆ ನೀರು ಹಳ್ಳಿಯ ಕೊಳಕ್ಕೆ ಸೇರಿ ಅಲ್ಲಿ ಶೇಖರಣೆಯಾಗುತ್ತದೆ ಎಂದು ತಿಳಿಸಿದ್ದರು. ಕಳೆದ 30 ವರ್ಷಗಳಿಂದ ನಾನು ನನ್ನ ದನಗಳನ್ನು ಮೇಯಲು ಕರೆದುಕೊಂಡು ಹೋಗುತ್ತಿದ್ದೆ. ಹೀಗೆ ಹೋದವನು ದಿನಾ ಸ್ವಲ್ಪ ಸ್ವಲ್ಪ ಕಾಲುವೆಯನ್ನು ಅಗೆಯುತ್ತಿದ್ದೆ. ಈ ವೇಳೆ ನನಗೆ ಯಾರೂ ಸಹಾಯ ಮಾಡಲಿಲ್ಲ. ಗ್ರಾಮದ ಜನ ತಮ್ಮ ಜೀವನೋಪಾಯಕ್ಕಾಗಿ ಹಳ್ಳಿ ತೊರೆದು ನಗರದ ಕಡೆ ಮುಖ ಮಾಡುತ್ತಿದ್ದಾರೆ. ಆದರೆ ನಾನು ಆ ರೀತಿ ಮಾಡದೇ ಹಳ್ಳಿಯಲ್ಲೇ ಉಳಿದುಕೊಳ್ಳಲು ನಿರ್ಧರಿಸಿರುವುದಾಗಿ ಲೌಂಗಿ ಹೇಳಿದ್ದರು.

    ಕೋತಿಲ್ವಾ ಗ್ರಾಮವು ಗಯಾ ಜಿಲ್ಲೆಯಿಂದ 80 ಕಿ.ಮೀ ದೂರದಲ್ಲಿರುವ ದಟ್ಟವಾದ ಕಾಡು ಹಾಗೂ ಪರ್ವತಗಳಿಂದ ಆವೃತವಾಗಿದೆ. ಗಯಾದಲ್ಲಿನ ಜನರ ಜೀವನೋಪಾಯದ ಮುಖ್ಯ ಸಾಧನವೆಂದರೆ ಕೃಷಿ ಮತ್ತು ಪಶುಸಂಗೋಪನೆ ಆಗಿದೆ. ಮಳೆಗಾಲದಲ್ಲಿ ಪರ್ವತಗಳಿಂದ ಬೀಳುವ ನೀರು ನದಿಗೆ ಹರಿಯುತ್ತಿತ್ತು. ಇದು ಲೌಂಗಿ ಅವರನ್ನು ಸಾಕಷ್ಟು ಕಾಡುತ್ತಿದ್ದು, ಹೀಗಾಗಿ ಅವರು ಕಾಲುವೆ ತೋಡಲು ನಿರ್ಧಾರ ಮಾಡಿ, ಯಶಸ್ಸು ಕಂಡಿದ್ದರು.