Tag: Mahua Moitra

  • ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

    ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

    ನವದೆಹಲಿ: ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ (TMC) ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದಿಂದ ಉಚ್ಚಾಟಿಸಲಾಗಿದೆ.

    ನೀತಿ ಸಮಿತಿಯ ವರದಿಯನ್ನು ಇಂದು (ಶುಕ್ರವಾರ) ಲೋಕಸಭೆಯಲ್ಲಿ ಮಂಡಿಸಲಾಯಿತು. ವರದಿಯನ್ನು ಆಧರಿಸಿ ಲೋಕಸಭೆಯಿಂದ ಮಹುವಾ ಮೊಯಿತ್ರಾ (Mahua Moitra) ಅವರು ಉಚ್ಚಾಟನೆಗೊಂಡಿದ್ದಾರೆ. ಇದನ್ನೂ ಓದಿ: ಮಹುವಾ ಮೊಯಿತ್ರಾ ಲೋಕಸಭಾ ಸದಸ್ಯತ್ವ ರದ್ದು – ನೈತಿಕ ಸಮಿತಿ ವರದಿಯಲ್ಲಿ ಏನಿದೆ?

    ಮೊಯಿತ್ರಾ ಅವರು ಸಂಸತ್ತಿನಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳುವ ಸಲುವಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ 2 ಕೋಟಿ ರೂ. ನಗದು ಮತ್ತು ಐಷಾರಾಮಿ ಉಡುಗೊರೆ ವಸ್ತುಗಳು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದರು.

    ಮಹುವಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸುವಂತೆ ಶಿಫಾರಸು ಮಾಡಿರುವ ವರದಿಯನ್ನು ಬಿಜೆಪಿ ಸಂಸದ ವಿನೋದ್‌ ಕುಮಾರ್‌ ಸೋನಕರ್‌ ನೇತೃತ್ವದ ನೀತಿ ಸಮಿತಿಯು ನ.9 ರಂದು ಅಂಗೀಕರಿಸಿತ್ತು. ಮಹುವಾ ಅವರನ್ನು ಉಚ್ಚಾಟನೆ ಮಾಡಬೇಕಾದರೆ ಈ ಬಗ್ಗೆ ಸರ್ಕಾರ ನಿಲುವಳಿ ಮಂಡಿಸಿ, ಸದನದ ಅಂಗೀಕಾರ ಪಡೆಯಬೇಕಿತ್ತು. ಇದನ್ನೂ ಓದಿ: Cash for Query – ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ

    ಪ್ರಕರಣ ಸಂಬಂಧ ಶುಕ್ರವಾರ ಬಿರುಸಿನ ಚರ್ಚೆ ಮತ್ತು ಧ್ವನಿ ಮತದ ನಂತರ ಸ್ಪೀಕರ್‌ ಓಂ ಬಿರ್ಲಾ ಅವರು, ಈ ಸದನವು ಸಮಿತಿಯ ತೀರ್ಮಾನಗಳನ್ನು ಸ್ವೀಕರಿಸುತ್ತದೆ. ಮಹುವಾ ಮೊಯಿತ್ರಾ ಅವರು ಸಂಸದರಾಗಿ ಮುಂದುವರಿಯುವುದು ಸೂಕ್ತವಲ್ಲ ಎಂದು ತಿಳಿಸಿದರು.

    ಲೋಕಸಭೆ ಸ್ಪೀಕರ್‌ ಅವರು ಧ್ವನಿ ಮತದ ಮೂಲಕ ಸದಸ್ಯರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗುತ್ತಿದ್ದಂತೆ, ವಿರೋಧ ಪಕ್ಷಗಳ ಸದಸ್ಯರು ಸದನದಿಂದ ಹೊರ ನಡೆದರು.

  • ಮಹುವಾ ಮೊಯಿತ್ರಾ ಲೋಕಸಭಾ ಸದಸ್ಯತ್ವ ರದ್ದು – ನೈತಿಕ ಸಮಿತಿ ವರದಿಯಲ್ಲಿ ಏನಿದೆ?

    ಮಹುವಾ ಮೊಯಿತ್ರಾ ಲೋಕಸಭಾ ಸದಸ್ಯತ್ವ ರದ್ದು – ನೈತಿಕ ಸಮಿತಿ ವರದಿಯಲ್ಲಿ ಏನಿದೆ?

    ನವದೆಹಲಿ: ಪ್ರಶ್ನೆಗಾಗಿ ಲಂಚ ಪ್ರಕರಣದಲ್ಲಿ (Cash for Query Case) ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ (TMC MP Mahua Moitra) ಸಂಕಷ್ಟ ಎದುರಾಗಿದೆ. ಅವರ ಲೋಕಸಭೆ (Lok Sabha) ಸದಸ್ಯತ್ವ ರದ್ದಾಗುವ ಸಾಧ್ಯತೆಯಿದೆ.

    ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಸಭೆಯ ನೈತಿಕ ಸಮಿತಿ, ಮಹುವಾ ಲೋಕಸಭೆ ಸದಸ್ಯತ್ವ ರದ್ದು ಮಾಡುವಂತೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ನೇತೃತ್ವದ ಸಮಿತಿಯು ಸಭೆ ಸೇರಿ, ತನ್ನ ವರದಿಯನ್ನು ಅಂಗೀಕರಿಸಿ ಮಹುವಾರನ್ನು ಉಚ್ಚಾಟಿಸುವಂತೆ ಶಿಫಾರಸು ಮಾಡಿದೆ ಎಂದು ವರದಿಗಳು ತಿಳಿಸಿವೆ.

    ಮೊಯಿತ್ರಾ ನಡೆ ಅತ್ಯಂತ ಆಕ್ಷೇಪಾರ್ಹ, ಅನೈತಿಕ, ಹೇಯ, ದೋಷಪೂರಿತ ಎಂದು ವರದಿಯಲ್ಲಿ ಉಲ್ಲೇಖವಾಗಿದೆ ಎನ್ನಲಾಗಿದೆ. ನೈತಿಕ ಸಮಿತಿಯ ಒಟ್ಟು 10 ಮಂದಿಯಲ್ಲಿ ಆರು ಸದಸ್ಯರು ವರದಿಯನ್ನು ಅಂಗೀಕರಿಸುವುದನ್ನು ಬೆಂಬಲಿಸಿದ್ದಾರೆ ಮತ್ತು ಉಳಿದ ನಾಲ್ವರು ಅದನ್ನು ವಿರೋಧಿಸಿದ್ದಾರೆ.

    ಮುಂದಿನ ಕ್ರಮಕ್ಕಾಗಿ ವರದಿಯನ್ನು ಈಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರಿಗೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ಸಭೆಯ ನಂತರ ನಾಲ್ವರು ವಿರೋಧ ಪಕ್ಷದ ಸದಸ್ಯರು ಸಮಿತಿಯ ಶಿಫಾರಸು ‘ಪೂರ್ವಾಗ್ರಹ ಪೀಡಿತ’ ಮತ್ತು ‘ತಪ್ಪು’ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ

    ಮಹುವಾ ಮೊಯಿತ್ರಾ ಅವರು ಅನಧಿಕೃತ ವ್ಯಕ್ತಿಗಳೊಂದಿಗೆ ಯೂಸರ್ ಐಡಿಯನ್ನು ಹಂಚಿಕೊಂಡಿದ್ದಾರೆ. ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಸ್ವೀಕರಿಸಿದ್ದು ಗಂಭೀರವಾದ ದುಷ್ಕೃತ್ಯ ಎಂದು ಸಮಿತಿ ತೀರ್ಮಾನಿಸಿದೆ. ಮೊಯಿತ್ರಾ ಮತ್ತು ದರ್ಶನ್ ಹಿರಾನಂದನಿ ಮಧ್ಯೆ ನಡೆದ ನಗು ವಹಿವಾಟಿನ ಬಗ್ಗೆ ಭಾರತ ಸರ್ಕಾರ ತನಿಖೆ ನಡೆಸಬೇಕು  ಶಿಫಾರಸು ಮಾಡಿದೆ ಎನ್ನಲಾಗಿದೆ.

     

    ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಗ್ರೂಪ್ ವಿರುದ್ಧ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಆರೋಪಿಸಿದ್ದರು. ಈ ಆರೋಪಕ್ಕೆ ಪೂರಕ ಎಂಬಂತೆ ಉದ್ಯಮಿ ದರ್ಶನ್ ಹಿರಾನಂದಾನಿ (Darshan Hiranandani) ಅವರು ಸಂಸತ್ತಿನ ನೀತಿ ಸಮಿತಿಗೆ ಅಫಿಡವಿಟ್‌ ಸಲ್ಲಿಸಿ ಮಹುವಾ ಮೊಯಿತ್ರಾ ಅವರು ಸಂಸತ್ತಿನ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಹಂಚಿಕೊಂಡಿದ್ದರು ಎಂದು ತಿಳಿಸಿದ್ದರು.

  • ಯಾರ ಪ್ರಭಾವಕ್ಕೂ ಒಳಗಾಗದಿದ್ರೆ ಫೋನ್‌ ಹ್ಯಾಕಿಂಗ್‌ ಪ್ರಯತ್ನ ಯಾಕೆ? – ಯಾವುದಕ್ಕೂ ಹೆದರಲ್ಲ: ರಾಗಾ ತಿರುಗೇಟು

    ಯಾರ ಪ್ರಭಾವಕ್ಕೂ ಒಳಗಾಗದಿದ್ರೆ ಫೋನ್‌ ಹ್ಯಾಕಿಂಗ್‌ ಪ್ರಯತ್ನ ಯಾಕೆ? – ಯಾವುದಕ್ಕೂ ಹೆದರಲ್ಲ: ರಾಗಾ ತಿರುಗೇಟು

    ನವದೆಹಲಿ: ಸರ್ಕಾರ ಯಾರ ಪ್ರಭಾವಕ್ಕೂ ಒಳಗಾಗದಿದ್ರೆ ಫೋನ್‌ ಹ್ಯಾಕಿಂಗ್‌ ಪ್ರಯತ್ನ ಯಾಕೆ? ನಮ್ಮ ಫೋನ್‌ಗಳನ್ನು ಎಷ್ಟು ಬೇಕಾದರೂ ಟ್ಯಾಪ್ (Phone Tapping) ಮಾಡಬಹುದು, ಸರ್ಕಾರದ ಪ್ರಯತ್ನಗಳಿಗೆ ನಾವು ಹೆದರುವುದಿಲ್ಲ ಎಂದು ಸಂಸದ ರಾಹುಲ್ ಗಾಂಧಿ (Rahul Gandhi) ತಿರುಗೇಟು ನೀಡಿದರು.

    ಕೇಂದ್ರ ಸರ್ಕಾರದಿಂದ ವಿಪಕ್ಷ ನಾಯಕರ ಫೋನ್‌ ಕದ್ದಾಲಿಕೆ ಆರೋಪದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ (Union Government) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಇಂತಹ ನಡೆ ವಿರುದ್ಧ ಬಹಳ ಕಡಿಮೆ ಜನರು ಹೋರಾಡುತ್ತಿದ್ದಾರೆ. ನೀವು ಎಷ್ಟು ಬೇಕಾದರೂ ಟ್ಯಾಪಿಂಗ್ ಮಾಡಬಹುದು, ನಾನು ಹೆದರುವುದಿಲ್ಲ, ಬೇಕಿದ್ದರೆ ನಾನೇ ನಿಮಗೆ ನನ್ನ ಫೋನ್‌ ಕೊಡುತ್ತೇನೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಆಪಲ್‌ನಿಂದ 150 ದೇಶಗಳ ಜನರಿಗೆ ಎಚ್ಚರಿಕೆ ಸಂದೇಶ – ಕದ್ದಾಲಿಕೆ ಆರೋಪಕ್ಕೆ ಕೇಂದ್ರ ಸ್ಪಷ್ಟನೆ

    ಸರ್ಕಾರವು ವಿಚಲಿತ ರಾಜಕೀಯದಲ್ಲಿ ತೊಡಗಿದೆ, ಈಗಿನ ಸರ್ಕಾರದ ಮುಖ್ಯಸ್ಥರು ಮರೆಮಾಚುತ್ತಿದ್ದ ಸತ್ಯ ಪ್ರತಿಪಕ್ಷಗಳಿಗೆ ಗೊತ್ತಾಗಿದೆ. ದೇಶದ ಜನತೆಗೆ ಪ್ರತಿಯೊಂದು ಸತ್ಯವೂ ಅರ್ಥವಾಗುತ್ತಿದೆ. ಸರ್ಕಾರದ ಟ್ಯಾಪಿಂಗ್ ಸಹ ಯಾವುದೇ ವ್ಯತ್ಯಾಸ ತೋರಿಸುತ್ತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ದೇಶ ಅನುಭವಿಸುತ್ತಿರುವ ನಷ್ಟವನ್ನು ಊಹಿಸಲೂ ಸಾಧ್ಯವಿಲ್ಲ. ಏಕೆಂದರೆ ಸುಳ್ಳು ಕನಸುಗಳೇ ಮಾರಾಟವಾಗುತ್ತಿವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮತೀಯ ದ್ವೇಷಕ್ಕೆ ಪ್ರಚೋದನೆ ಆರೋಪ – ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇಸ್‌

    ನಾವು ವಿರೋಧ ಪಕ್ಷದಲ್ಲಿದ್ದು ನಮ್ಮ ಕರ್ತವ್ಯ ಸರಿಯಾಗಿ ನಿರ್ವಹಿಸುತ್ತಿದ್ದೇವೆ. ಅಲ್ಲದೇ ಪ್ರಧಾನಿ ಮೋದಿಯವರ ಆತ್ಮ ಅದಾನಿಯಲ್ಲಿದೆ, ಅಧಿಕಾರ ಬೇರೆಯವರ ಕೈಯಲ್ಲಿದೆ, ಕೃಷಿ ಕ್ಷೇತ್ರ ಅದಾನಿ (Gautam Adani) ಕೈಯಲ್ಲಿದೆ, ಮೂಲಸೌಕರ್ಯ ಅವರ ಕೈಯಲ್ಲಿದೆ. ದೇಶದ ಆಸ್ತಿ ಮಾರಾಟವಾಗುತ್ತಿದೆ. ಇದರಿಂದ ದೇಶದ ಯುವಕರಿಗೆ ತೊಂದರೆಯಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕೇಂದ್ರದಿಂದ ಐಫೋನ್‌ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ

    ಈ ಹಿಂದೆ ಪ್ರಧಾನಿ ಮೋದಿ ಸರ್ಕಾರದಲ್ಲಿ ನಂ.1 ಮತ್ತು ಅಮಿತ್ ಶಾ (Amit Shah) 2ನೇ ಸ್ಥಾನದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಈಗ ಚಿತ್ರಣ ಬದಲಾಗಿದೆ, ಸರ್ಕಾರದಲ್ಲಿ ಅದಾನಿ ನಂಬರ್ 1, ಪಿಎಂ ಮೋದಿ 2 ಮತ್ತು ಅಮಿತ್ ಶಾ 3ನೇ ಸ್ಥಾನದಲ್ಲಿದ್ದಾರೆ. ಪ್ರಧಾನಿ ಮೋದಿಯವರಿಗೆ ಯಾರು ಕೆಲಸ ಕೊಡಲು ಹೊರಟಿದ್ದಾರೆ ಎಂಬ ಸತ್ಯ ಸಾರ್ವಜನಿಕರಿಗೆ ಅರ್ಥವಾಗುತ್ತದೆ. ಕೃಷಿ ಕ್ಷೇತ್ರ ಮತ್ತು ಮೂಲಸೌಕರ್ಯಗಳನ್ನು ಸಂಪೂರ್ಣವಾಗಿ ಮಾರಾಟ ಮಾಡಲಾಗಿದೆ, ಸರ್ಕಾರವು ಯಾವುದೇ ಪ್ರಭಾವಕ್ಕೆ ಒಳಗಾಗುವುದಿಲ್ಲ ಎಂದಾದರೆ ಹ್ಯಾಕಿಂಗ್ ಪ್ರಯತ್ನ ಯಾಕೆ ಎಂದು ಪ್ರಶ್ನಿಸಿದರು.

    ಈಗಿನ ಕೇಂದ್ರ ಸರ್ಕಾರ ಸಾಮಾನ್ಯ ಜನರ ಸರ್ಕಾರವಲ್ಲ, ಈ ಸರ್ಕಾರದಲ್ಲಿ ಶ್ರೀಸಾಮಾನ್ಯರ ಕಡೆಗಣನೆ ಮತ್ತು ಶ್ರೀಮಂತರ ಗಣನೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ಸರ್ಕಾರವು ಕೆಲವು ಕೈಗಾರಿಕದ್ಯೊಮಿಗಳ ಮನೆಗಳಿಗೆ ಕೆಲಸ ಮಾಡುತ್ತದೆ. ಈ ಸರ್ಕಾರದ ಅಡಿಯಲ್ಲಿ ಹಣದುಬ್ಬರ ಉತ್ತುಂಗದಲ್ಲಿದೆ, ಜನರ ದೈನಂದಿನ ಅಗತ್ಯಗಳನ್ನು ಪೂರೈಸಲು ಅವರ ಜೇಬಿನಲ್ಲಿ ಹಣವಿಲ್ಲ. ತರಕಾರಿಗಳ ಬೆಲೆ ಗಗನಕ್ಕೇರಿದೆ. ಅಷ್ಟೇ ಅಲ್ಲದೇ ದೇಶೀಯ ರಂಗದಲ್ಲಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ಹೊರಹಾಕಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇಂದ್ರದಿಂದ ಐಫೋನ್‌ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ

    ಕೇಂದ್ರದಿಂದ ಐಫೋನ್‌ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ

    ನವದೆಹಲಿ: ತಮ್ಮ ಫೋನ್‌ಗಳ ಮೇಲೆ ಸರ್ಕಾರಿ ಪ್ರಾಯೋಜಕತ್ವದ ದಾಳಿ ನಡೆಯುತ್ತಿದೆ, ಕೇಂದ್ರದಿಂದ ಫೋನ್‌ ಕದ್ದಾಲಿಕೆ ನಡೆಯುತ್ತಿದೆ ಎಂದು ಪ್ರತಿಪಕ್ಷಗಳ ವಿವಿಧ ನಾಯಕರು ಕೇಂದ್ರ ಸರ್ಕಾರದ (Union Government) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

    ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra), ಕಾಂಗ್ರೆಸ್ ನಾಯಕ ಶಶಿ ತರೂರ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಶಿವಸೇನಾದ (ಉದ್ಧವ್ ಬಣ) ಪ್ರಿಯಾಂಕಾ ಚತುರ್ವೇದಿ (Priyanka Chaturvedi) ಅವರು ತಮ್ಮ ಐ-ಫೋನ್‌ಗಳ (iPhone) ಮೇಲೆ ಸರ್ಕಾರಿ ಪ್ರಾಯೋಜಿತ ದಾಳಿಕೋರರು ಟಾರ್ಗೆಟ್ ಮಾಡುತ್ತಿರಬಹುದು ಎಂದು ಆಪಲ್ ಕಂಪನಿಯಿಂದ ಫೋನ್ ಹಾಗೂ ಇ-ಮೇಲ್‌ಗಳಿಗೆ (E-mail) ಎಚ್ಚರಿಕೆ ಸಂದೇಶ ಬಂದಿರುವುದಾಗಿ ಹೇಳಿದ್ದಾರೆ.

    ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರ ಕಚೇರಿಯಲ್ಲಿನ ಕೆಲವರಿಗೂ ಈ ಸಂದೇಶ ಬಂದಿದೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸರ್ಕಾರ, ಈ ಸಂದೇಶಗಳ ಬಗ್ಗೆ ಅರಿವಿದೆ. ಐಫೋನ್‌ಗಳಲ್ಲಿ ಬೆದರಿಕೆ ಪತ್ತೆ ಮಾಡುವ ತಂತ್ರಜ್ಞಾನವು ಕೆಲವೊಮ್ಮೆ ಅಸಮಗ್ರ ಹಾಗೂ ಅಪೂರ್ಣವಾಗಿರುತ್ತದೆ ಎಂದು ಹೇಳಿದೆ.

    ಆಪಲ್‌ನಿಂದ ಬಂದ ಸಂದೇಶದಲ್ಲಿ ಏನಿದೆ?
    ನೀವು ಸರ್ಕಾರಿ ಪ್ರಾಯೋಜಿತ ದಾಳಿಕೋರರಿಂದ ಗುರಿಯಾಗುತ್ತಿದ್ದೀರಿ. ಅವರು ನಿಮ್ಮ ಆಪಲ್ ಐಡಿಗೆ (Apple ID) ಸಂಬಂಧಿಸಿದ ಐಫೋನ್‌ಗೆ ದೂರದಿಂದ ಕದ್ದಾಲಿಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಪಲ್‌ನ ಸಂದೇಶ ಹೇಳಿದೆ.

    ಈ ದಾಳಿಕೋರರು ನೀವು ಯಾರು ಅಥವಾ ನೀವು ಏನು ಮಾಡುತ್ತೀರಿ ಎಂಬ ಆಧಾರದಲ್ಲಿ ನಿಮ್ಮನ್ನು ವ್ಯಕ್ತಿಗತವಾಗಿ ಟಾರ್ಗೆಟ್ ಮಾಡುತ್ತಿರುವ ಸಾಧ್ಯತೆ ಇದೆ. ಇದರಿಂದ ನಿಮ್ಮ ಸೂಕ್ಷ್ಮ ಡೇಟಾ, ಸಂಹವನಗಳು ಅಥವಾ ಕ್ಯಾಮೆರಾ ಮತ್ತು ಮೈಕ್ರೋಫೋನ್‌ಗಳನ್ನು ಕದಿಯಲು ಅವರಿಗೆ ಸಾಧ್ಯವಾಗಲಿದೆ. ಇದು ಸುಳ್ಳು ಎಚ್ಚರಿಕೆಯಾಗುವ ಸಾಧ್ಯತೆ ಇದ್ದರೂ, ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಸಂದೇಶದಲ್ಲಿದೆ.

    ಬಿಜೆಪಿ ಪ್ರತಿಕ್ರಿಯೆ ಏನು?
    ತಮ್ಮ ಫೋನ್‌ಗಳನ್ನು ಹ್ಯಾಕ್ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕರ ವಿರುದ್ಧ ಹರಿಹಾಯ್ದಿರುವ ಬಿಜೆಪಿ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ, ಆಪಲ್‌ನ ಸ್ಪಷ್ಟೀಕರಣ ಬರುವವರೆಗೂ ಕಾಯುವಂತೆ ಮನವಿ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Cash for Query – ಪಾಸ್‌ವರ್ಡ್‌ ಶೇರ್‌ ಆಗಿತ್ತು: ಸಂಸದೆ ಮೊಯಿತ್ರಾ ಜೊತೆ ನಂಟು ಒಪ್ಪಿಕೊಂಡ ಉದ್ಯಮಿ

    Cash for Query – ಪಾಸ್‌ವರ್ಡ್‌ ಶೇರ್‌ ಆಗಿತ್ತು: ಸಂಸದೆ ಮೊಯಿತ್ರಾ ಜೊತೆ ನಂಟು ಒಪ್ಪಿಕೊಂಡ ಉದ್ಯಮಿ

    ನವದೆಹಲಿ: ಪ್ರಶ್ನೆಗಾಗಿ ಕಾಸು (Cash for Query) ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ದರ್ಶನ್ ಹಿರಾನಂದಾನಿ (Darshan Hiranandani) ಅವರು ಸಂಸತ್ತಿನ ನೈತಿಕ ಸಮಿತಿಗೆ ಅಫಿಡವಿಟ್‌ ಸಲ್ಲಿಸಿದ್ದು, ಟಿಎಂಸಿ ಲೋಕಸಭೆ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರು ಸಂಸತ್ತಿನ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಹಂಚಿಕೊಂಡಿದ್ದರು ಎಂದು ಹೇಳಿದ್ದಾರೆ.

    ಗುರುವಾರ ಸಂಸತ್ತಿನ ನೈತಿಕ ಸಮಿತಿಯ ಮುಂದೆ ಅಫಿಡವಿಟ್ ಸಲ್ಲಿಸಿರುವ ಅವರು ಮಹುವಾ ಮೊಯಿತ್ರಾ ಪರವಾಗಿ ಪ್ರಶ್ನೆ ಪೋಸ್ಟ್‌ ಮಾಡಲು ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ನೀಡಿದ್ದರು ಎಂದು ಉಲ್ಲೇಖಿಸಿದ್ದಾರೆ.

    ಬಿಜೆಪಿ ಸಂಸದ ನಿಶಿಕಾಂತ್ ದುಬೆ

    ಟಿಎಂಸಿಯ ಮಹುವಾ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪ ಮಾಡಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

    ಸ್ನೇಹಿತರ ಸಲಹೆಯ ಮೇರೆಗೆ ರಾಷ್ಟ್ರಮಟ್ಟದಲ್ಲಿ ಬಹಳ ಬೇಗ ಹೆಸರು ಗಳಿಸಲು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವೈಯಕ್ತಿಕ ದಾಳಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ.  ಇದನ್ನೂ ಓದಿ: ಬಿಜೆಪಿಯಿಂದ ಕಾಂಗ್ರೆಸ್ ಕಲೆಕ್ಷನ್ ವಂಶಾವಳಿ, ನಿಗಮ ಮಂಡಳಿಗಳ ರೇಟ್ ಕಾರ್ಡ್ ರಿಲೀಸ್

    ದುಬಾರಿ ಐಷಾರಾಮಿ ವಸ್ತುಗಳನ್ನು ಉಡುಗೊರೆ, ಬಂಗಲೆಯ ನವೀಕರಣಕ್ಕೆ ಸಹಾಯ, ರಜಾ ದಿನಗಳ ಪ್ರಯಾಣ ವೆಚ್ಚ ಸೇರಿದಂತೆ ಮಹುವಾ ಮೊಯಿತ್ರಾ ನನಗೆ ಪದೇ ಪದೇ ಈಡೇರಿಸುವಂತೆ ಬೇಡಿಕೆ ಸಲ್ಲಿಸುತ್ತಿದ್ದರು ಮತ್ತು ಹಲವಾರು ಅನುಕೂಲಗಳನ್ನು ಕೇಳುತ್ತಿದ್ದರು. ಅಷ್ಟೇ ಅಲ್ಲದೇ ತನ್ನ ಪರವಾಗಿ ಕೆಲಸ ಮಾಡುವಂತೆ ಒತ್ತಡ ಹೇರುತ್ತಿದ್ದರು ಎಂದು ಎಂದು ಉಲ್ಲೇಖಿಸಿದ್ದಾರೆ.

    ದರ್ಶನ್ ಹಿರಾನಂದಾನಿ ಅಫಿಡವಿಟ್‌ ಸಲ್ಲಿಸಿದ ಬೆನ್ನಲ್ಲೇ ಮಹುವಾ ಮೊಯಿತ್ರಾ ಪ್ರತಿಕ್ರಿಯಿಸಿದ್ದಾರೆ. ಸಿಬಿಐ ಮತ್ತು ನೈತಿಕ ಸಮಿತಿಯ (ಇದು ಬಿಜೆಪಿ ಸದಸ್ಯರ ಸಂಪೂರ್ಣ ಬಹುಮತವನ್ನು ಹೊಂದಿರುವ) ಸದಸ್ಯರು ನನ್ನನ್ನು ಕರೆದರೆ ಮತ್ತು ಕೇಳಿದಾಗ ಉತ್ತರಿಸಲು ನಾನು ಸಿದ್ದನಿದ್ದೇನೆ. ಅದಾನಿ ನಿರ್ದೇಶನದ ಮಾಧ್ಯಮ ಸರ್ಕಸ್ ವಿಚಾರಣೆಗೆ ಅಥವಾ ಬಿಜೆಪಿ ಟ್ರೋಲ್‌ಗಳಿಗೆ ಉತ್ತರಿಸಲು ನನಗೆ ಸಮಯ ,ಆಸಕ್ತಿ ಇಲ್ಲ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅತ್ಯಾಚಾರಿಗಳಿಗೆ ಲಡ್ಡು ತಿನ್ನಿಸುತ್ತೀರಿ: ಗೂಂಡಾಗಳನ್ನ ತಲೆಕೆಳಗೆ ನೇತಾಕ್ತೀವಿ ಎಂದಿದ್ದ ಶಾಗೆ ಮಹುವಾ ತಿರುಗೇಟು

    ಅತ್ಯಾಚಾರಿಗಳಿಗೆ ಲಡ್ಡು ತಿನ್ನಿಸುತ್ತೀರಿ: ಗೂಂಡಾಗಳನ್ನ ತಲೆಕೆಳಗೆ ನೇತಾಕ್ತೀವಿ ಎಂದಿದ್ದ ಶಾಗೆ ಮಹುವಾ ತಿರುಗೇಟು

    ಕೋಲ್ಕತ್ತಾ: ಬಿಜೆಪಿ (BJP) ಆಡಳಿತದಲ್ಲಿ ಗೂಂಡಾಗಳು, ಗಲಭೆಕೋರರನ್ನ ತಲೆಕೆಳಗೆ ಮಾಡಿ ನೇತು ಹಾಕ್ತೀವಿ ಎಂದಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ವಿರುದ್ಧ ತೃಣಮೂಲ ಕಾಂಗ್ರೆಸ್‌ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ತಿರುಗೇಟು ನೀಡಿದ್ದಾರೆ.

    ಗುಜರಾತ್‌ ಪ್ರಕರಣವನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಮಹುವಾ ಅವರು, ಬಿಹಾರದಲ್ಲಿ ಗಲಭೆಕೋರರನ್ನು ತಲೆಕೆಳಗಾಗಿ ಗಲ್ಲಿಗೇರಿಸುವುದಾಗಿ ಗೃಹ ಸಚಿವರು ಹೇಳಿದ್ದಾರೆ. ಕೊಲೆಗಾರರು ಮತ್ತು ಅತ್ಯಾಚಾರಿಗಳನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತಾರೆ. ಅವರಿಗೆ ಲಡ್ಡು ತಿನ್ನಿಸುತ್ತಾರೆ ಎಂದು ಅಮಿತ್‌ ಶಾಗೆ ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದ್ರೆ ಗಲಭೆಕೋರರನ್ನ ತಲೆಕೆಳಗಾಗಿ ನೇತು ಹಾಕ್ತೀವಿ – ಅಮಿತ್ ಶಾ ಗುಡುಗು

    ಗುಜರಾತ್‌ನ ಬಿಲ್ಕಿಸ್‌ ಬಾನೋ ಅತ್ಯಾಚಾರ (Bilkis Bano Rape Case) ಅಪರಾಧಿಗಳ ಬಿಡುಗಡೆ ಪ್ರಕರಣ ಉಲ್ಲೇಖಿಸಿ ಬಿಜೆಪಿ ವಿರುದ್ಧ ಮಹುವಾ ಕಿಡಿಕಾರಿದ್ದಾರೆ. “ಕಳೆದ ವರ್ಷ ಗುಜರಾತ್ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮುಂಚೆ ರಾಜ್ಯ ಸರ್ಕಾರ ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಮಾಡಿತು. ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಹೌರಾದಲ್ಲಿ ನಡೆದ ಶಿವಪುರ ಭಯೋತ್ಪಾದಕ ಘಟನೆಯ ವಿಚಾರವಾಗಿ ಕೇಂದ್ರ ಗೃಹ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಹೌರಾದಲ್ಲಿ ನಡೆದ ಹಿಂಸಾಚಾರದ ಹಿಂದೆ ಶಾ ಇದ್ದಾರೆಂದು ಹೇಳಿದ್ದರು” ಎಂದು ಮಹುವಾ ತಿಳಿಸಿದ್ದಾರೆ.

    ಅಮಿತ್‌ ಶಾ ಅವರು ಶನಿವಾರ ಬಿಹಾರದಲ್ಲಿ ನಡೆದ ರ‍್ಯಾಲಿಯಲ್ಲಿ, ರಾಮನವಮಿ ಆಚರಣೆಯ ಸಂದರ್ಭದಲ್ಲಿ ರಾಜ್ಯದ ಹಲವಾರು ಪ್ರದೇಶಗಳಲ್ಲಿ ಭುಗಿಲೆದ್ದ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ನಿತೀಶ್‌ ಕುಮಾರ್‌ ಸರ್ಕಾರ ವಿಫಲವಾಗಿದೆ. 2025ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರ ನಡೆಸುತ್ತಿರುವ ಗಲಭೆಕೋರರನ್ನು ತಲೆಕೆಳಗಾಗಿ ನೇತುಹಾಕಿ ಗಲ್ಲಿಗೇರಿಸುತ್ತೇವೆ ಎಂದಿದ್ದರು. ಇದನ್ನೂ ಓದಿ: ಮಾನಹಾನಿ ಪ್ರಕರಣ – ಏಪ್ರಿಲ್ 13 ರವರೆಗೂ ರಾಗಾಗೆ ರಿಲೀಫ್

    ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಕಿಡಿಕಾರಿದ್ದ ಅಮಿತ್‌ ಶಾ, ರಾಜ್ಯದಲ್ಲಿ ಭಯೋತ್ಪಾದನೆಯನ್ನು ಹರಡಲು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಕಾರಣ. ಲಾಲು ಪ್ರಸಾದ್ ಯಾದವ್ ಅವರ ಆರ್‌ಜೆಡಿ ಎಂದಿಗೂ ಬಿಹಾರದಲ್ಲಿ ಶಾಂತಿಯನ್ನು ತರಲು ಸಾಧ್ಯವಿಲ್ಲ. ಬಿಹಾರವನ್ನು ಶಾಂತಿಯುತ ರಾಜ್ಯವನ್ನಾಗಿ ಮಾಡಲು “ಮಹಾಘಟಬಂಧನ್” ಕಿತ್ತುಹಾಕಬೇಕು ಎಂದು ಜನತೆಗೆ ಕರೆ ನೀಡಿದ್ದರು.

  • ಬಿಜೆಪಿ ಸಂಸದ, ಶಾಸಕನೊಂದಿಗೆ ವೇದಿಕೆ ಹಂಚಿಕೊಂಡ ಅತ್ಯಾಚಾರ ಅಪರಾಧಿ!

    ಬಿಜೆಪಿ ಸಂಸದ, ಶಾಸಕನೊಂದಿಗೆ ವೇದಿಕೆ ಹಂಚಿಕೊಂಡ ಅತ್ಯಾಚಾರ ಅಪರಾಧಿ!

    ಗಾಂಧಿನಗರ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ (Bilkis Bano Case) 11 ಅಪರಾಧಿಗಳಲ್ಲಿ ಒಬ್ಬನಾದ ಶೈಲೇಶ್ ಭಟ್ ಜೊತೆ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ (BJP MP) ಮತ್ತು ಸ್ಥಳೀಯ ಶಾಸಕ ವೇದಿಕೆ ಹಂಚಿಕೊಂಡಿರುವುದು ಸಾರ್ವಜನಿಕವಾಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

    ದಾಹೋದ್ ಜಿಲ್ಲೆಯ ಲಿಮ್ಖೇಡಾ, ಸಿಂಗ್ವಾಡ್ ಮತ್ತು ಝಲೋದ್ ತಾಲೂಕಿನ 64 ಹಳ್ಳಿಗಳಿಗೆ ಗುಜರಾತ್‌ನ (Gujarat) ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಯೋಜನೆಯಡಿ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ 101.88 ಕೋಟಿ ರೂ. ವೆಚ್ಚದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ಸಮಾರಂಭದಲ್ಲಿ ಬಿಜೆಪಿ ಸಂಸದ ಜಸ್ವಂತ್ ಸಿಂಗ್ ಭಾಭೋರ್, ಬಿಜೆಪಿ ಶಾಸಕ ಶೈಲೇಶ್ ಭಾಭೋರ್ ಅವರೊಂದಿಗೆ ಅಪರಾಧಿ ಶೈಲೇಶ್ ಭಟ್ ಮೊದಲ ಸಾಲಿನಲ್ಲೇ ಕುಳಿತಿದ್ದ ವೀಡಿಯೊ ಮತ್ತು ಚಿತ್ರಗಳು ಚರ್ಚೆಯನ್ನು ಹುಟ್ಟುಹಾಕಿವೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಜಾಲತಾಣದಲ್ಲಿ (Social Media) ಹರಿದಾಡುತ್ತಿದ್ದು, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

    ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ (Mahua Moitra) ಟ್ವೀಟ್ ಮಾಡಿ, ಬಿಜೆಪಿಗರನ್ನು ರಾಕ್ಷಸರು ಎಂದು ಟೀಕಿಸಿದ್ದಾರೆ. ನಾನು ಈ ರಾಕ್ಷಸರನ್ನ ಮತ್ತೆ ಜೈಲಿನಲ್ಲಿ ನೋಡಬಯಸುತ್ತೇನೆ ಎಂದಿದ್ದಾರೆ. ಇದನ್ನೂಓದಿ: ತಿಂಗಳೊಳಗೆ ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿಗೆ ನೋಟಿಸ್

    ಬಿಆರ್‌ಎಸ್ ಪಕ್ಷದ ಕೆಟಿಆರ್ ಅವರೂ ಕಿಡಿ ಕಾರಿದ್ದು, ಬಿಜೆಪಿಯನ್ನು ಬಲತ್ಕಾರ್ ಜಸ್ಟಿಫಿಕೇಷನ್ ಪಾರ್ಟಿ ಎಂದು ಜರೆದಿದ್ದಾರೆ. ಬಿಲ್ಕಿಸ್ ಬಾನೋ ರೇಪ್ ಪ್ರಕರಣದ ದೋಷಿಗಳ ಜೊತೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡಿರೋದು ಆ ಪಕ್ಷದವರ ಮನಸ್ಥಿತಿ ಪ್ರತಿಬಿಂಬಿಸುತ್ತಿದೆ ಎಂದು ಟೀಕಿಸಿದ್ದಾರೆ. ಆದ್ರೆ, ವೇದಿಕೆ ಮೇಲೆ ಯಾರಿದ್ರೂ ಅನ್ನೋದು ನನಗೆ ಗೊತ್ತೇ ಇಲ್ಲ ಎಂದು ಹೇಳಿ ಬಿಜೆಪಿ ಶಾಸಕ ಶೈಲೇಶ್ ಜಾರಿಕೊಂಡಿದ್ದಾರೆ. ಇದನ್ನೂಓದಿ: ಗಾಂಧಿ ಕುಟುಂಬವನ್ನು ರಾಮನ ವಂಶಕ್ಕೆ ಹೋಲಿಸಿರುವುದು ಅಹಂಕಾರ : ಅನುರಾಗ್ ಠಾಕೂರ್

    ಅತ್ಯಾಚಾರ ದೋಷಿಯನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ಯಾರು ಅಂತಾ ಗೊತ್ತಿಲ್ಲ ಎಂದು ದಾಹೋದ್ ಜಿಲ್ಲಾಡಳಿತ ತಪ್ಪಿಸಿಕೊಳ್ಳಲು ನೋಡಿದೆ. ಈ ಬೆಳವಣಿಗೆ ನಡೆದಿರುವ ಹೊತ್ತಲ್ಲೇ, ಬಿಲ್ಕಿಸ್ ಬಾನೋ ಅತ್ಯಾಚಾರ ಅಪರಾಧಿಗಳನ್ನು ಯಾವ ಅಂಶಗಳ ಆಧಾರದ ಮೇಲೆ ಬಿಡುಗಡೆ ಮಾಡಿದ್ದೀರಿ ಎಂಬ ಬಗ್ಗೆ ದಾಖಲೆಗಳನ್ನು ಒದಗಿಸಲು ಸಜ್ಜಾಗಿ ಎಂದು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

    2002ರ ಗುಜರಾತ್ ಗಲಭೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ, ಗುಜರಾತ್ ರಾಜ್ಯ ಮತ್ತು 11 ಅಪರಾಧಿಗಳಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು ನೋಟಿಸ್ ಜಾರಿಗೊಳಿಸಿದ್ದು, ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿದೆ.

  • ಸೀರೆಯುಟ್ಟು ಸಂಸದೆ ಮಹುವಾ ಮೊಯಿತ್ರಾ ಫುಟ್‍ಬಾಲ್ ಆಟ – ನೆಟ್ಟಿಗರು ಫುಲ್ ಫಿದಾ

    ಸೀರೆಯುಟ್ಟು ಸಂಸದೆ ಮಹುವಾ ಮೊಯಿತ್ರಾ ಫುಟ್‍ಬಾಲ್ ಆಟ – ನೆಟ್ಟಿಗರು ಫುಲ್ ಫಿದಾ

    ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್(Trinamool Congress) ಸಂಸದೆ ಮಹುವಾ ಮೊಯಿತ್ರಾ (MP Mahua Moitra) ಅವರು ಕೃಷ್ಣಾನಗರ ಎಂಪಿ ಕಪ್ ಟೂರ್ನಿಯಲ್ಲಿ(Krishnanagar MP Cup Tournament) ಸೀರೆಯಲ್ಲೇ ಫುಟ್‍ಬಾಲ್ (Foot Ball) ಆಟ ಆಡಿದ್ದು, ಇದೀಗ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಈ ಫೋಟೋವನ್ನು ಮಹುವಾ ಮೊಯಿತ್ರಾ ಅವರೇ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಕೆಂಪು-ಕಿತ್ತಳೆ ಬಣ್ಣದ ಸೀರೆಯನ್ನುಟ್ಟು, ಕಾಲಿಗೆ ಸ್ಪೋರ್ಟ್ಸ್ ಶೂ ತೊಟ್ಟು, ಕಣ್ಣಿಗೆ ಸನ್‍ಗ್ಲಾಸ್ ಧರಿಸಿಕೊಂಡು, ಫುಟ್‌ಬಾಲ್ ಆಡುತ್ತಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ. ಅಲ್ಲದೆ ಮತ್ತೊಂದು ಫೋಟೋದಲ್ಲಿ ಗೋಲ್ ಕೀಪರ್(Goal Keeper) ಆಗಿ ನಿಂತಿರುವುದನ್ನು ಕೂಡ ನೋಡಬಹುದಾಗಿದೆ. ಇದನ್ನೂ ಓದಿ: ಮದರಸಾಗಳನ್ನು ಧ್ವಂಸಗೊಳಿಸುವಂತೆ ಕರೆ ನೀಡಿದ್ದ ಯತಿ ನರಸಿಂಹಾನಂದ ವಿರುದ್ಧ FIR

    ಫೋಟೋ ಜೊತೆಗೆ ಕೃಷ್ಣನಗರ ಎಂಪಿ ಕಪ್ ಟೂರ್ನಮೆಂಟ್ 2022 ರ ಫೈನಲ್‍ನ ಮೋಜಿನ ಕ್ಷಣಗಳು ಮತ್ತು ನಾನು ಸೀರೆಯಲ್ಲಿ ಆಟ ಆಡಿದ್ದೇನೆ ಎಂದು ಕ್ಯಾಪ್ಷನ್‌ನಲ್ಲಿ ಬರೆದುಕೊಂಡಿದ್ದಾರೆ. ಒಟ್ಟಾರೆ ಸಂಸದೆ ಸೀರೆ ಉಟ್ಟುಕೊಂಡು ಆಟವಾಡುತ್ತಿರುವುದನ್ನು ನೋಡಿ ನೆಟ್ಟಿಗರು ಫುಲ್ ಫಿದಾ ಆಗಿದ್ದು, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ಡಿಸ್ಕೌಂಟ್‌ ಬೆಲೆಯಲ್ಲಿ ತೈಲ – 35 ಸಾವಿರ ಕೋಟಿ ಗಳಿಸಿದ ಭಾರತ

    Live Tv
    [brid partner=56869869 player=32851 video=960834 autoplay=true]

  • ಸಂಸತ್ ಕಲಾಪದಲ್ಲಿ ಅಸಂಸದೀಯ ಪದಗಳಿಗೆ ಕತ್ತರಿ – ಈ ಪದಗಳು ಬ್ಯಾನ್

    ಸಂಸತ್ ಕಲಾಪದಲ್ಲಿ ಅಸಂಸದೀಯ ಪದಗಳಿಗೆ ಕತ್ತರಿ – ಈ ಪದಗಳು ಬ್ಯಾನ್

    – ಸರ್ಕಾರಕ್ಕೆ ಪ್ರತಿಪಕ್ಷಗಳಿಂದ ಸವಾಲು

    ನವದೆಹಲಿ: ಇನ್ನುಮುಂದೆ ಲೋಕಸಭೆ, ರಾಜ್ಯಸಭೆ ಅಧಿವೇಶನಗಳಲ್ಲಿ ಜುಮ್ಲಾಜೀವಿ, ಬಾಲ ಬುದ್ಧಿ, ಕೋವಿಡ್ ಸ್ಪ್ರೆಡರ್‌, ನಾಚಿಕೆಗೇಡು, ದ್ರೋಹ, ಭ್ರಷ್ಟ, ಅಸಮರ್ಥ, ಸರ್ವಾಧಿಕಾರಿ ಅಂತಹ ಅಸಂಸದೀಯ ಪದಗಳನ್ನು ಬಳಸುವಂತಿಲ್ಲ ಎಂದು ಲೋಕಸಭೆಯ ಸೆಕ್ರಟೇರಿಯಟ್ ಬಿಡುಗಡೆಗೊಳಿಸಿದ ಕಿರು ಪುಸ್ತಕದಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.

    ಇದೇ ಜುಲೈ 18ರಿಂದ ಪ್ರಾರಂಭವಾಗಲಿರುವ ಮುಂಗಾರು ಅಧಿವೇಶನಕ್ಕೂ ಮುಂಚಿತವಾಗಿ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಲಾಗಿದೆ. ಇದನ್ನೂ ಓದಿ: ಉತ್ತರ ಕೊರಿಯಾದೊಂದಿಗಿನ ಸಂಬಂಧವನ್ನು ಕಡಿತಗೊಳಿಸಿದ ಉಕ್ರೇನ್

    ಲೋಕಸಭೆಯಲ್ಲಿನ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 380ರ ಪ್ರಕಾರ, ಕಲಾಪದ ಸಂದರ್ಭದಲ್ಲಿ ಅಸಂಸದೀಯ ಪದಗಳನ್ನು ಬಳಸಿದರೆ ಸ್ಪೀಕರ್, ಅವರನ್ನು ಕಲಾಪದಿಂದ ಹೊರ ಹಾಕುತ್ತಾರೆ. ಈ ಬಗ್ಗೆ ಬಿಡುಗಡೆಯಾಗಿರುವ ಟಿಪ್ಪಣಿಯಲ್ಲಿ ಸೇರಿಸಲಾಗಿದೆ. ರಾಜ್ಯಸಭಾ ಅಧ್ಯಕ್ಷರು ಅಥವಾ ಲೋಕಸಭಾ ಸ್ಪೀಕರ್ ಅಧಿವೇಶನದ ವೇಳೆ ಸದನದಲ್ಲಿ ಮಾತನಾಡುವ ಮಾತುಗಳನ್ನು ಗಮನಿಸುತ್ತಾರೆ. ಕೆಲವೊಮ್ಮೆ ಸಭಾಪತಿಯವರು ಅಸಂಸದೀಯ ಪದಗಳನ್ನು ಕಡತದಿಂದ ತೆಗೆದು ಹಾಕುತ್ತಾರೆ. ಆದರೆ ಸಭಾಪತಿಗೆ ಯಾವುದೇ ಪದಗಳ ನಿರ್ಬಂಧ ಇರುವುದಿಲ್ಲ ಎಂದು ತಿಳಿಸಲಾಗಿದೆ.

    ಸರ್ವಾಧಿಕಾರಿ, ಶಕುನಿ, ತಾನಾಶಾಹಿ, ಜೈಚಂದ್, ವಿನಾಶ್ ಪುರುಷ್, ಖಲಿಸ್ತಾನಿ, ಖೂನ್ ಸೆ ಖೇತಿ, ದೋಹ್ರಾ ಚರಿತ್ರ, ನಿಕಮ್ಮ, ನೌಟಂಕಿ, ಢಿಂಢೋರ ಪೀಟ್ನಾ, ಬೆಹ್ರಿ ಸರ್ಕಾರ್ ಮುಂತಾದ ಪದಗಳನ್ನೂ ಅಸಂಸದೀಯ ಎಂದು ಗುರುತಿಸಲಾಗಿದ್ದು, ಇಂತಹ ಪದಗಳನ್ನು ಬಳಸಿದರೂ ಕಡತದಿಂದ ತೆಗೆದುಹಾಕಲಾಗುತ್ತದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ವಿಷಮ ಸ್ಥಿತಿ – ಓರ್ವ ನಾಗರಿಕ ಸಾವು, 35 ಮಂದಿಗೆ ಗಾಯ

    ಪುಸ್ತಕದಲ್ಲಿ ಅಸಂಸದೀಯ ಎಂದು ಗುರುತಿಸಲಾದ ಪದಗಳಲ್ಲಿ ರಕ್ತಪಾತ, ರಕ್ತಸಿಕ್ತ, ದ್ರೋಹ, ವಂಚನೆ, ಚಮ್ಚಾ, ಚಮ್ಚಾಗಿರಿ, ಚೇಲಾಸ್, ಬಾಲಿಶ, ಹೇಡಿ, ಕ್ರಿಮಿನಲ್, ಮೊಸಳೆ ಕಣ್ಣೀರು ಸೇರಿದೆ. ಇವುಗಳ ಹೊರತಾಗಿ ಅವಮಾನ, ಕತ್ತೆ, ನಾಟಕ, ಕಣ್ಣೊರೆಸುವ ತಂತ್ರ, ಗೂಂಡಾಗಿರಿ, ಅಸಮರ್ಥ, ಸುಳ್ಳು, ಗದ್ದಾರ್, ಗಿರ್ಗಿಟ್, ಗಢಿಯಾಲಿ ಆಂಸು, ಅಪಮಾನ್, ಅಸತ್ಯ, ಅಹಂಕಾರ್, ಕಾಲಾ ದಿನ್, ಕಾಲಾ ಬಜಾರ್, ದಂಗ, ದಲಾಲ್, ದಾದಾಗಿರಿ, ಬೆಚಾರ, ಬಾಯ್‌ಕಟ್. ಲಾಲಿಪಾಪ್, ಸಂವೇದನಾಹೀನ್, ಲೈಂಗಿಕ ಕಿರುಕುಳ ಪದಗಳನ್ನೂ ಅಸಂಸದೀಯ ಎಂದು ಪರಿಗಣಿಸಲಾಗುವುದು ಎಂದು ಲೋಕಸಭಾ ಸೆಕ್ರಟೇರಿಯನ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.

    ಈ ಕ್ರಮಕ್ಕೆ ಕಾಂಗ್ರೆಸ್ ಹಾಗೂ ಟಿಎಂಸಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಸಂಸದೆ ಮೆಹುವಾ ಮೊಯಿತ್ರಾ ಹಾಗೂ ಸಂಸದ ಡೆರಕ್ ನಾವು ಈ ಪದಗಳನ್ನು ಬಳಸುತ್ತೇವೆ, ಬೇಕಿದ್ದರೆ ಅಮಾನತು ಮಾಡಿ ಎಂದು ತಿರುಗೇಟು ನೀಡಿದ್ದಾರೆ.

    ಈ ಕುರಿತಂತೆ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಟ್ವೀಟ್ ಮಾಡಿದ್ದು, ನಿಮ್ಮ ಟೀಕೆಗಳು ಸೃಜನಶೀಲವಾಗಿರಬೇಕು. ಇಲ್ಲದಿದ್ದರೆ ಸಂಸತ್ತಿನ ಅಧಿವೇಶನ ಪ್ರಯೋಜನವಾಗದು. ಜುಮ್ಲಾಜೀವಿ ಅನ್ನು ಜುಮ್ಲಾಜೀವಿ ಅನ್ನದೇ ಮತ್ತೆ ಇನ್ನೇನು ಹೇಳಬೇಕು? ಇಂತಹ ಪದಗಳನ್ನು ನಿಷೇಧಿಸುವುದು ಅನಿವಾರ್ಯವೇ ಎಂದು ಪ್ರಶ್ನಿಸಿದ್ದಾರೆ.

    ತೃಣಮೂಲ ಕಾಂಗ್ರೆಸ್ ಸಂಸದೆ ಮೆಹುವಾ ಮೊಯಿತ್ರಾ ಸಹ ಟ್ವೀಟ್ ಮಾಡಿದ್ದು, ಬಿಜೆಪಿ ಭಾರತವನ್ನು ಹೇಗೆ ನಾಶಪಡಿಸುತ್ತದೆ ಎಂಬುದು ಗೊತ್ತಾಗುತ್ತಿದೆ. ಅದಕ್ಕಾಗಿ ಪ್ರತಿ ಪಕ್ಷಗಳು ಬಳಸುವ ಪದಗಳನ್ನು ಆಯ್ಕೆ ಮಾಡಿ ನಿಷೇಧಿಸಿದೆ. ಇದು ನಾಚಿಗೇಡಿನ ಸಂಗತಿ. ದುರ್ಬಳಕೆ, ದ್ರೋಹ, ಭ್ರಷ್ಟ, ಬೂಟಾಟಿಕೆ, ಅಸಮರ್ಥ ಎಂಬ ಪದಗಳನ್ನು ನಾನು ಬಳಸುತ್ತೇನೆ, ನನ್ನನ್ನೂ ಬೇಕಿದ್ದರೆ ಅಮಾನತು ಮಾಡಿ. ಆದರೆ ನಾನು ಪ್ರಜಾಪ್ರಭುತ್ವಕ್ಕಾಗಿ ಹೋರಾಟ ಮಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರಧಾನಿ ಮೋದಿ – ಟಿಎಂಸಿ ನಡುವೆ `ಕಾಳಿ’ ಕದನ

    ಪ್ರಧಾನಿ ಮೋದಿ – ಟಿಎಂಸಿ ನಡುವೆ `ಕಾಳಿ’ ಕದನ

    ಕೋಲ್ಕತ್ತ: ಹಿಂದೂ ದೇವತೆಗಳನ್ನು ಸತತವಾಗಿ ಅವಮಾನಿಸುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲೈ ಮೊದಲ ಪೋಸ್ಟರ್‌ನಲ್ಲೇ ಕಾಳಿ ದೇವಿ ಕೈಯಲ್ಲಿ ಸಿಗರೇಟು ನೀಡಿ ವಿವಾದಕ್ಕೀಡಾಗಿದ್ದರು. ಇದು ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಶಿವ-ಪಾರ್ವತಿ ಪಾತ್ರಧಾರಿಗಳು ಸಿಗರೇಟು ಸೇದುವ ದೃಶ್ಯದ ಫೋಟೋ ಹಾಕಿ ಮತ್ತೊಮ್ಮೆ ವಿವಾದಕ್ಕೆ ಕಾರಣರಾದರು. ಇದೀಗ ರಾಷ್ಟ್ರವ್ಯಾಪಿಯಾಗಿ ವಿವಾದ ಹರಡಿದೆ.

    ಕಾಳಿ ದೇವಿ ಕುರಿತು ಪ್ರಧಾನಿ ನರೇಂದ್ರ ಮೋದಿ ಇಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು, ಟಿಎಂಸಿ (ತೃಣಮೂಲ ಕಾಂಗ್ರೆಸ್) ಪ್ರಮುಖರಿಂದ ಆಕ್ಷೇಪಣೆಗಳೂ ವ್ಯಕ್ತವಾಗಿವೆ. ಇದನ್ನೂ ಓದಿ: ದೇವೇಗೌಡರನ್ನು ಭೇಟಿಯಾದ ದ್ರೌಪದಿ ಮುರ್ಮು- ಎನ್‍ಡಿಎ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ

    ರಾಮಕೃಷ್ಣ ಮಿಷನ್ ಹಮ್ಮಿಕೊಂಡಿದ್ದ ಸ್ವಾಮಿ ಆತ್ಮಸ್ಥಾನಾನಂದ ಅವರ ಜನ್ಮ ಶತಮಾನೋತ್ಸವ ವರ್ಚುವಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಂದು ಕಾಳಿ ದೇವಿ ಕುರಿತು ಮಾತನಾಡಿದ್ದಾರೆ.

    ಕಾಳಿ ಮಾತೆಯ ಆಶೀರ್ವಾದ ಈ ದೇಶದ ಮೇಲೆ ಸದಾಕಾಲವೂ ಇರಲಿದೆ. ದೇಶದಲ್ಲಿರುವ ಸಂತರು `ಏಕ ಭಾರತ, ಶ್ರೇಷ್ಠ ಭಾರತ’ ಆಶಯದ ಸಾಕಾರಕ್ಕೆ ಬೆಂಬಲವಾಗಿ ನಿಂತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಲು ರೋಹಿತ್ ಶರ್ಮಾಗೆ ಇನ್ನೊಂದೆ ಹೆಜ್ಜೆ

    ರಾಮಕೃಷ್ಣ ಪರಮಹಂಸರು ಕಾಳಿ ಮಾತೆಯ ಕುರಿತು ಸ್ಪಷ್ಟ ಕಲ್ಪನೆ ಹೊಂದಿದ್ದರು. ಅವರ ಶಿಷ್ಯ ಸ್ವಾಮಿ ವಿವೇಕಾನಂದರೂ ಆಧ್ಯಾತ್ಮಿಕ ದೃಷ್ಟಿಕೋನ ಹೊಂದಿದ್ದರು. ಇದು ಅವರಲ್ಲಿ ಅಸಾಧಾರಣ ಶಕ್ತಿ ತುಂಬಿತ್ತು. ನಂಬಿಕೆ ಪವಿತ್ರವಾಗಿದ್ದರೆ ಅಗೋಚರ ಶಕ್ತಿಯೊಂದು ನಮಗೆ ಅರಿವಿಲ್ಲದಂತೆಯೇ ನಮ್ಮನ್ನು ಸರಿ ದಾರಿಯಲ್ಲಿ ಕೊಂಡೊಯ್ಯುತ್ತದೆ. ಕಾಳಿ ಮಾತೆಯ ಕೃಪೆ ಭಾರತದ ಮೇಲೆ ಇದೆ. ಆಧ್ಯಾತ್ಮಿಕ ಶಕ್ತಿಯೊಂದಿಗೆ ದೇಶವು ಲೋಕ ಕಲ್ಯಾಣದ ಕಾಯಕದಲ್ಲಿ ಮುನ್ನಡೆಯುತ್ತಿದೆ ಎಂದು ಶ್ಲಾಘಿಸಿದ್ದಾರೆ.

    ಪ್ರಧಾನಿ ಮೋದಿ ಅವರ ಹೇಳಿಕೆಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದೇ ಸುಳಿವಿಲ್ಲದ ವಿಷಯಗಳ ಬಗ್ಗೆ ತಮ್ಮ ಯಜಮಾನರು ಕಾಮೆಂಟ್ ಮಾಡುವುದನ್ನು ನಿಲ್ಲಿಸಬೇಕೆಂದು ಸಲಹೆ ನೀಡುತ್ತೇನೆ ಎಂಬುದಾಗಿ ಬಂಗಾಳದ ಬಿಜೆಪಿ ಘಟಕದ ವಿರುದ್ಧ ಹರಿಹಾಯ್ದಿದ್ದಾರೆ.

    ಇದರಿಂದ ಮೊಯಿತ್ರಾ ಅವರನ್ನು ಟಿಎಂಸಿ ಸದಸ್ಯತ್ವದಿಂದ ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯಿಸಿದೆ.

    Live Tv
    [brid partner=56869869 player=32851 video=960834 autoplay=true]