Tag: Mainpuri

  • ನವಜೋಡಿ ಸೇರಿ ಐವರು ಸಂಬಂಧಿಗಳನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ

    ನವಜೋಡಿ ಸೇರಿ ಐವರು ಸಂಬಂಧಿಗಳನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ

    ಲಕ್ನೋ: ಕೊಡಲಿ (Axe) ಬಳಸಿ ವ್ಯಕ್ತಿಯೋರ್ವ ತನ್ನ ಐವರು ಸಂಬಂಧಿಗಳನ್ನು ಕೊಂದು ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ (Uttar Prdesh) ಮೈನ್‌ಪುರಿ (Mainpuri) ಜಿಲ್ಲೆಯಲ್ಲಿ ನಡೆದಿದೆ.

    ಗೋಕುಲಪುರ (Gokulpur) ಅರ್ಸರಾ ಹಳ್ಳಿಯಲ್ಲಿ ಮುಂಜಾನೆ ಸುಮಾರು 4:30ಯಿಂದ 5 ಗಂಟೆಯ ಒಳಗಾಗಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಶಿವವೀರ್ ಯಾದವ್ (30) ಎಂಬಾತ ತನ್ನ ಇಬ್ಬರು ತಮ್ಮಂದಿರಾದ ಬುಲ್ಲನ್ ಯಾದವ್ (25) ಮತ್ತು ಸೋನು ಯಾದವ್ (21) ಎಂಬವರನ್ನು ಕೊಡಲಿಯಿಂದ ಹತ್ಯೆ ಮಾಡಿದ್ದಾನೆ. ಅಲ್ಲದೇ ಸೋನು ಯಾದವ್‌ನ ಹೆಂಡತಿ ಸೋನಿಯನ್ನೂ (20) ಕೊಲೆ ಮಾಡಿದ್ದು, ಬಳಿಕ ಬಾಮೈದುನ ಸೌರಭ್ (23) ಮತ್ತು ಆತನ ಸ್ನೇಹಿತ ದೀಪಕ್ (20) ಎಂಬವರನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ವೈದ್ಯ ಲೋಕಕ್ಕೇ ಶಾಕ್ – 36 ವರ್ಷಗಳ ಕಾಲ ಪ್ರೆಗ್ನೆಂಟ್ ಆಗಿದ್ದ ಈ ವ್ಯಕ್ತಿ!

    ಇಷ್ಟು ಮಾತ್ರವಲ್ಲದೇ ಆರೋಪಿ ತನ್ನ ಹೆಂಡತಿ ಡಾಲಿ (24) ಮತ್ತು ಭರ್ತನ ಜಿಲ್ಲೆಯ ನಾಗ್ಲ ರಾಮ್‌ಲಾಲ್ ಪೊಲೀಸ್ ಠಾಣೆಯ ಇಟವಾದಲ್ಲಿ ವಾಸಿಸುತ್ತಿದ್ದ ತಾಯಿಯ ಸಂಬಂಧಿಯಾದ ಸುಷ್ಮಾ (35) ಎಂಬವರನ್ನು ಗಾಯಗೊಳಿಸಿದ್ದಾನೆ. ಬಳಿಕ ದೇಶೀಯವಾಗಿ ತಯಾರಿಸಿದ ಪಿಸ್ತೂಲ್ (Pistol) ಒಂದರ ಸಹಾಯದಿಂದ ತನ್ನನ್ನು ತಾನು ಶೂಟ್ (Shoot) ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಕೋವಿನ್ ಪೋರ್ಟಲ್ ಡೇಟಾ ಲೀಕ್ ಪ್ರಕರಣ – ಅಪ್ರಾಪ್ತ ಸೇರಿ ಇಬ್ಬರ ಬಂಧನ

    ಗೋಕುಲಪುರ ಹಳ್ಳಿಯಲ್ಲಿ ಘಟನೆ ನಡೆದಿದ್ದು, ಆರೋಪಿಯ ಸಹೋದರ ಸೋನು ಯಾದವ್ ಮತ್ತು ಆತನ ಹೆಂಡತಿ ಸೋನಿ ಘಟನೆಯ ಹಿಂದಿನ ದಿನವಷ್ಟೇ ಮದುವೆಯಾಗಿದ್ದರು. ವಿವಾಹದ (Marriage) ನಂತರ ನವಜೋಡಿ ತಮ್ಮ ಮನೆಗೆ ಬಂದ ಬಳಿಕ ಹತ್ಯೆ ಮಾಡಲಾಗಿದೆ. ನವಜೋಡಿಗಳ ಕೊಲೆಯ ಬಳಿಕ ಬಾಮೈದುನ ಮತ್ತು ಆತನ ಸ್ನೇಹಿತನನ್ನು ಹತ್ಯೆ ಮಾಡಲಾಗಿದೆ ಎಂದು ಮೈನ್‌ಪುರಿ ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಲಿಂಗ ಬದಲಾವಣೆ ನೆಪದಲ್ಲಿ ತಂತ್ರಿಯಿಂದ ಸಲಿಂಗಕಾಮಿ ಮಹಿಳೆ ಹತ್ಯೆ

    ಆರೋಪಿಯ ಈ ಕೃತ್ಯಕ್ಕೆ ಯಾವುದೇ ನಿಖರ ಕಾರಣಗಳು ತಿಳಿದುಬಂದಿಲ್ಲ. ಘಟನೆಯಲ್ಲಿ ಹತ್ಯೆಯಾದ ಸಂಬಂಧಿಗಳ ಮೃತದೇಹವನ್ನು ಮೈನ್‌ಪುರಿ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆಂದು ಕಳುಹಿಸಲಾಗಿದೆ. ಅಲ್ಲದೇ ಘಟನೆಯಲ್ಲಿ ಗಾಯಗೊಂಡ ಆರೋಪಿಯ ಹೆಂಡತಿ ಡಾಲಿ ಮತ್ತು ಸಂಬಂಧಿ ಸುಷ್ಮಾ ಅವರು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅನಾಥ ಬಾಲಕಿ ಮೇಲೆ ಆಶ್ರಮದಲ್ಲೇ ತಿಂಗಳುಗಳಿಂದ ಅತ್ಯಾಚಾರ – ಆಂಧ್ರದ ಸ್ವಾಮೀಜಿ ಅರೆಸ್ಟ್

  • ಮಾವ ಮುಲಾಯಂ ಸಿಂಗ್ ನಿಧನ ನಂತ್ರ ಮೈನ್‍ಪುರಿಯಿಂದ ಡಿಂಪಲ್ ಯಾದವ್ ಕಣಕ್ಕೆ

    ಮಾವ ಮುಲಾಯಂ ಸಿಂಗ್ ನಿಧನ ನಂತ್ರ ಮೈನ್‍ಪುರಿಯಿಂದ ಡಿಂಪಲ್ ಯಾದವ್ ಕಣಕ್ಕೆ

    ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಅವರ ಪತ್ನಿ ಡಿಂಪಲ್ ಯಾದವ್ (Dimple Yadav) ತಮ್ಮ ಮಾವ ಮುಲಾಯಂ ಸಿಂಗ್ ಯಾದವ್ (Mulayam Singh Yadav) ಅವರ ನಿಧನದ ನಂತರ ತೆರವಾದ ಮೈನ್‍ಪುರಿ (Mainpuri) ಲೋಕಸಭಾ (Lok Sabha) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

    ಡಿಸೆಂಬರ್ 5 ರಂದು ಹಲವು ರಾಜ್ಯಗಳಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಚುನಾವಣೆ ಜೊತೆಗ ಸಂಸದೀಯ ಸ್ಥಾನಕ್ಕೆ ಸ್ಪರ್ಧೆ ನಡೆಯಲಿದೆ. ಡಿಸೆಂಬರ್ 8 ರಂದು ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಫಲಿತಾಂಶದ ಜೊತೆಗೆ ಈ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಮಾಲ್ಡೀವ್ಸ್‌ನಲ್ಲಿ ಭೀಕರ ಅಗ್ನಿ ದುರಂತ – 9 ಮಂದಿ ಭಾರತೀಯರು ಸಾವು

    ಎರಡು ಬಾರಿ ಲೋಕಸಭಾ ಸದಸ್ಯರಾಗಿ ಕನೌಜ್‍ನಿಂದ ಡಿಂಪಲ್ ಯಾದವ್ ಸ್ಪರ್ಧಿಸಿದ್ದರು. ಆದರೆ 2019ರಲ್ಲಿ ಸೋತಿದ್ದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮುಲಾಯಂ ಸಿಂಗ್ ಯಾದವ್ ಅವರು ಕಳೆದ ತಿಂಗಳು ನಿಧನರಾದರು. ಆದರೆ 2019ರಲ್ಲಿ ಮಣಿಪುರಿ ಕ್ಷೇತ್ರವನ್ನು ಕೇವಲ 94,000 ಮತಗಳ ಅಂತರದಿಂದ ಮುಲಾಯಂ ಸಿಂಗ್ ಯಾದವ್ ಅವರು ಗೆದ್ದಿದ್ದರು.

    ಮೈನ್‍ಪುರಿ ಯಾವಾಗಲೂ ಸಮಾಜವಾದಿ ಪಕ್ಷದ ಭದ್ರಕೋಟೆಯಾಗಿದ್ದು, ಇಲ್ಲಿಂದ 1996ರಲ್ಲಿ ಮುಲಾಯಂ ಸಿಂಗ್ ಅವರು ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದರು. ಅವರು 2004, 2009 ಮತ್ತು 2019 ಮೂರು ಬಾರಿ ಸ್ಪರ್ಧಿಸಿ ಯಶಸ್ವಿಯಾಗಿ ಜಯ ಸಾಧಿಸಿದ್ದರು. 2014ರ ಉಪಚುನಾವಣೆಯಲ್ಲಿ ತೇಜ್ ಪ್ರತಾಪ್ ಯಾದವ್ ಈ ಕ್ಷೇತ್ರದಿಂದ ಗೆದಿದ್ದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ- ವಿವಾದಿತ ವಸ್ತುವಿನ ರಕ್ಷಣೆ ವಿಸ್ತರಣೆಗೆ ಮನವಿ

    Live Tv
    [brid partner=56869869 player=32851 video=960834 autoplay=true]

  • ವಿದ್ಯಾರ್ಥಿನಿಯನ್ನು ಹಲ್ಲೆಗೈದು ಮರಕ್ಕೆ ನೇಣು ಹಾಕಿದ್ರು: ಮೂವರು ಅಪ್ರಾಪ್ತರು ಅರೆಸ್ಟ್

    ವಿದ್ಯಾರ್ಥಿನಿಯನ್ನು ಹಲ್ಲೆಗೈದು ಮರಕ್ಕೆ ನೇಣು ಹಾಕಿದ್ರು: ಮೂವರು ಅಪ್ರಾಪ್ತರು ಅರೆಸ್ಟ್

    ಲಕ್ನೋ: ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯನ್ನು ತಡೆದು ಆಕೆಯ ಪ್ರಿಯಕರ ಸೇರಿ ಮೂವರು ಥಳಿಸಿ, ಮರಕ್ಕೆ ನೇಣು ಹಾಕಿದ ಘಟನೆ ಉತ್ತರ ಪ್ರದೇಶದ ಮೇನ್ಪುರಿ ಜಿಲ್ಲೆಯಲ್ಲಿ ನಡೆದಿದೆ.

    ಮೇನ್ಪುರಿ ಜಿಲ್ಲೆಯ ಹವಿಲಿಯಾ ಗ್ರಾಮದ ಸಮಿತಾ ಯಾದವ್ ಕೊಲೆಯಾದ ವಿದ್ಯಾರ್ಥಿನಿ. ಸವಿತಾ 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಾಪರಾಧಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ನಡೆದದ್ದು ಏನು?:
    ಸವಿತಾ ಮಂಗಳವಾರ ಕಾಲೇಜಿನ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಮುಗಿಸಿಕೊಂಡು ಮರಳುತ್ತಿದ್ದಳು. ಆಕೆಯನ್ನು ಗ್ರಾಮದ ಹೊರವಲಯದಲ್ಲಿ ತಡೆದ ಮೂವರು ಹಲ್ಲೆ ಎಸಗಿ ಮರಕ್ಕೆ ನೇಣು ಹಾಕಿ ಪರಾರಿಯಾಗಿದ್ದಾರೆ. ಈ ವೇಳೆ ಸವಿತಾ ಕಿರುಚಿದ ಧ್ವನಿ ಕೇಳಿದ ವಿದ್ಯಾರ್ಥಿನಿಯ ಸಹೋದರ ಅಲ್ಲಿಗೆ ಬಂದಿದ್ದಾನೆ. ಆಗ ಸವಿತಾ ಮೃತ ದೇಹ ಪತ್ತೆಯಾಗಿದೆ.

    ಯಾರೋ ಕಾಪಾಡಿ, ಕಾಪಾಡಿ ಅಂತಾ ಕಿರುಚಿದ ಧ್ವನಿ ಕೇಳಿತು. ತಕ್ಷಣವೇ ಅಲ್ಲಿಗೆ ಹೋಗುತ್ತಿದ್ದಂತೆ ಸವಿತಾ ಮೃತದೇಹ ನೇಣು ಬೀಗಿದ ಸ್ಥಿತಿಯಲ್ಲಿ ಕಂಡಿದೆ ಎಂದು ಅವಿನಾಶ್, ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

    ಕೊಲೆ ಮಾಡಿದ ಮೂವರಲ್ಲಿ ಒಬ್ಬನ ಜೊತೆಗೆ ಸವಿತಾ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಳು. ಆತನು ಸವಿತಾ ಕಾಲೇಜಿನಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ಕೆಲವು ತಿಂಗಳಿನಿಂದ ಇಬ್ಬರ ಮಧ್ಯೆ ಸಂಬಂಧವಿತ್ತು ಎನ್ನಲಾಗಿದ್ದು, ಸವಿತಾ ಯುವಕನ ಜೊತೆ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಾಗ ಮನೆಯವರ ಕೈಗೆ ಸಿಕ್ಕಿಬಿದ್ದಿದ್ದಳು ಅಂತಾ ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೂವರು ಬಾಲಕರನ್ನು ಬಂಧಿಸಿ, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಅಂತಾ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲೆ ಮಾಡಿದ ನಂತರ ಮರಕ್ಕೆ ನೇಣು ಹಾಕಿದ್ದು ಯಾಕೆ ಎನ್ನುವ ಪ್ರಶ್ನೆ ಈಗ ಮೂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಕ್ಷಣೆಗೆಂದು ಪೊಲೀಸ್ ಠಾಣೆಯೊಳಗೆ ಓಡಿದ ಮಹಿಳೆಯನ್ನ ಗುಂಡಿಟ್ಟು ಕೊಂದ

    ರಕ್ಷಣೆಗೆಂದು ಪೊಲೀಸ್ ಠಾಣೆಯೊಳಗೆ ಓಡಿದ ಮಹಿಳೆಯನ್ನ ಗುಂಡಿಟ್ಟು ಕೊಂದ

    ಲಕ್ನೋ: ಮಹಿಳೆಯೊಬ್ಬರನ್ನ ಅಟ್ಟಾಡಿಸಿಕೊಂಡು ಹೋಗಿ ಪೊಲೀಸ್ ಠಾಣೆಯೊಳಗೆ ಗುಂಡಿಟ್ಟು ಕೊಲೆಗೈದಿರುವ ಘಟನೆ ಸೋಮವಾರ ರಾತ್ರಿ ಉತ್ತರಪ್ರದೇಶದ ಮೈನ್‍ಪುರಿಯಲ್ಲಿ ನಡೆದಿದೆ.

    ಭೂ ವಿವಾದಕ್ಕೆ ಸಂಭಂದಿಸಿದಂತೆ ಈ ಹತ್ಯೆ ನಡೆದಿದೆ ಎಂದು ವರದಿಯಾಗಿದೆ. ಮಹಿಳೆಯನ್ನ ಗುಂಡಿಟ್ಟು ಕೊಂದ ವ್ಯಕ್ತಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ಪೊಲೀಸ್ ಠಾಣೆ ಬಳಿ ನೆರೆದಿದ್ದ ಜನ ಆತನನ್ನು ಹಿಡಿದು ಥಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

    ಇಲ್ಲಿನ ಮಾರುಕಟ್ಟೆ ಪ್ರದೇಶದಲ್ಲಿ, ಪೊಲೀಸ್ ಠಾಣೆಯ ಹತ್ತಿರವೇ ಈ ವಿವಾದಿತ ಜಮೀನು ಇದೆ. ಸೋಮವಾರ ರಾತ್ರಿ ವಿವಾದಕ್ಕೆ ಸಂಬಂಧಿಸಿದಂತೆಯೇ ಎರಡು ಕುಟುಂಬಗಳ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ವಿರೋಧಿ ಕುಟುಂಬದ ಸದಸ್ಯನೊಬ್ಬ ಗನ್ ಹಿಡಿದು ಮಹಿಳೆಯ ಬಳಿ ಬಂದಿದ್ದು, ಆಕೆ ರಕ್ಷಣೆಗಾಗಿ ಪೊಲೀಸ್ ಠಾಣೆಯೊಳಗೆ ಓಡಿದ್ದಾರೆ. ಪೊಲೀಸ್ ಠಾಣೆಯೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಮಹಿಳೆ ಮೇಲೆ ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ತಡೆಯುವಲ್ಲಿ ಪೊಲೀಸರು ವಿಫಲರಾಗಿದ್ರು ಎಂದು ವರದಿಯಾಗಿದೆ.

    https://www.youtube.com/watch?v=qC4AYX0KSK0